Tag: ಎಂ.ಟಿ.ಬಿ.ನಾಗರಾಜ್

  • ಸಿದ್ದರಾಮಯ್ಯ ಮನೆಯಲ್ಲಿ ಕೂತು ಗೆದ್ರೆ, ನಾವು ಮಲಗಿಕೊಂಡೇ ಗೆದ್ದುಬಿಡ್ತೀವಿ – MTB ಟಾಂಗ್

    ಸಿದ್ದರಾಮಯ್ಯ ಮನೆಯಲ್ಲಿ ಕೂತು ಗೆದ್ರೆ, ನಾವು ಮಲಗಿಕೊಂಡೇ ಗೆದ್ದುಬಿಡ್ತೀವಿ – MTB ಟಾಂಗ್

    ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ (Siddaramaiah) ಅವರು ಮನೆಯಲ್ಲಿ ಕೂತು ಗೆಲ್ಲೋದಾದ್ರೆ, ನಾವು ಮಲಗಿಕೊಂಡೇ ಚುನಾವಣೆ (Election) ಗೆದ್ದುಬಿಡ್ತೀವಿ ಎಂದು ಸಚಿವ ಎಂಟಿಬಿ ನಾಗರಾಜ್ (MTB Nagaraj) ತಿರುಗೇಟು ನೀಡಿದ್ದಾರೆ.

    ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು `ನಾವ್ ಮನೆಯಲ್ಲಿ ಕೂತಿದ್ರೂ ಗೆದ್ದುಬಿಡ್ತೀವಿ’ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮನೆಯಲ್ಲಿ ಕೂತು ಗೆಲ್ಲೋದಾದ್ರೆ, ನಾವ್ ಮನೆಯಲ್ಲಿ ಮಲಗಿಕೊಂಡೆ, ನಿದ್ದೆ ಮಾಡಿಕೊಂಡೇ ಗೆದ್ದುಬಿಡ್ತೀವಿ ಅಂತಾ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನ ಸೋಲಿಸಿಬಿಟ್ರು: ಎಂಟಿಬಿ ನಾಗರಾಜ್

    2023ರ ಚುನಾವಣೆಯ (Karnataka Elections 2023) ಬಳಿಕ ರಾಜ್ಯದಲ್ಲಿ ಮತ್ತೆ ನಮ್ಮದೇ ಬಿಜೆಪಿ (BJP) ಸರ್ಕಾರ ಸ್ಥಾಪನೆಯಾಗಲಿದೆ. ಮತ್ತೊಮ್ಮೆ ನಮ್ಮವರೇ ಸಿಎಂ ಆಗ್ತಾರೆ. ಮುಂದಿನ ಸಿಎಂ ಯಾರು ಅನ್ನೋದನ್ನ ರಾಜ್ಯ ಹಾಗೂ ಕೇಂದ್ರದ ನಾಯಕರು ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಕನಸಿನಲ್ಲೂ ಯೋಚನೆ ಮಾಡಿರಲಿಲ್ಲ: ನಿಖಿಲ್‌ ಕುಮಾರಸ್ವಾಮಿ

    ಇನ್ನೂ ಹೊಸಕೋಟೆ (Hosakote) ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ನನ್ನ ಮಗನ ಸ್ಪರ್ಧೆ ಮಾಡಿಸಬೇಕು ಎಂಬ ಆಸೆ ಇದೆ. ನನಗೂ 72 ವರ್ಷ ವಯಸ್ಸಾಗಿದೆ, ಆದ್ರೆ ನನ್ನ ಮಗನಿಗೆ ಈಗ 36 ವರ್ಷ. ಆದ್ದರಿಂದ ಈಗಲೇ ನನ್ನ ಜೊತೆ ರಾಜಕೀಯ ಪ್ರವೇಶ ಮಾಡಿ, ದೇವರ ಅನುಗ್ರಹ ಹಾಗೂ ಜನಾಶೀರ್ವಾದ ಪಡೆಯಲಿ ಎಂಬುದು ನನ್ನ ಆಸೆ. ಈ ಬಗ್ಗೆ ಇನ್ನೂ ಹೈಕಮಾಂಡ್ ಜೊತೆಗೆ ಮಾತನಾಡಿಲ್ಲ. ಮಾತನಾಡಿದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 7 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 705 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ

    7 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 705 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ

    ಬೆಂಗಳೂರು: ಮೈಸೂರು, ಉಡುಪಿ, ರಾಮನಗರ, ಕೊಡಗು, ಬಳ್ಳಾರಿ, ದಾವಣಗೆರೆ ಮತ್ತು ಬೆಳಗಾವಿ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 2022-23ನೇ ಸಾಲಿನಿಂದ 2024-25ನೇ ಸಾಲಿನ ವರೆಗಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯ ಕ್ರಿಯಾ ಯೋಜನೆಗಳಿಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜ್‌ ಅವರ ಅಧ್ಯಕ್ಷತೆಯ ರಾಜ್ಯಮಟ್ಟದ ಸಮಿತಿ ಅನುಮೋದನೆ ನೀಡಿದೆ.

    ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ-4ನೇ ಹಂತದ 3ನೇ ಸಮಿತಿ ಮತ್ತು ನಗರೋತ್ಥಾನ-3ನೇ ಹಂತದ ಯೋಜನೆಗಳ 18ನೇ ರಾಜ್ಯಮಟ್ಟದ ಸಮಿತಿಯ ಸಭೆ ವಿಧಾನಸೌಧದಲ್ಲಿ ಇಂದು ಸಚಿವ ಎಂ.ಟಿ.ಬಿ. ನಾಗರಾಜ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಇದರಿಂದಾಗಿ 2022-23ನೇ ಸಾಲಿನಿಂದ 2024-25ನೇ ಸಾಲಿನವರೆಗಿನ 4ನೇ ಹಂತದ ಯೋಜನೆಯ ಈ ಕ್ರಿಯಾ ಯೋಜನೆಗಳಿಂದ ಮೈಸೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 75 ಕೋಟಿ ರೂಪಾಯಿ, ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ 55 ಕೋಟಿ ರೂಪಾಯಿ, ಬಳ್ಳಾರಿ- 80 ಕೋಟಿ ರೂಪಾಯಿ, ರಾಮನಗರ-125 ಕೋಟಿ ರೂಪಾಯಿ, ದಾವಣಗೆರೆ-70 ಕೋಟಿ ರೂಪಾಯಿ, ಬೆಳಗಾವಿ-260 ಕೋಟಿ ರೂಪಾಯಿ ಹಾಗು ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 40 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ.

    ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯಡಿ 3885 ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ ಕಳೆದ ಜನವರಿಯಲ್ಲಿ ಅನುಮೋದನೆ ನೀಡಿತ್ತು. ಅಲ್ಲದೆ, 3ನೇ ಹಂತದ ಯೋಜನೆಯಲ್ಲಿ ಉಳಿಕೆಯಾಗಿದ್ದ ಹಣದಲ್ಲಿ ಬೆಳಗಾವಿ, ರಾಮನಗರ, ಬಳ್ಳಾರಿ, ಚಿಕ್ಕಮಗಳೂರು, ಬಾಗಲಕೋಟೆ, ಉತ್ತರ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಬದಲಿ ಕಾಮಗಾರಿ ಕೈಗೊಳ್ಳಲು ಸಹ ಸಚಿವ ಎಂ.ಟಿ.ಬಿ. ನಾಗರಾಜು ಅವರ ಅಧ್ಯಕ್ಷತೆಯ ಸಭೆ ಅನುಮೋದನೆ ನೀಡಿತು. ಇದನ್ನೂ ಓದಿ: ಹಿಂದೂಗಳಂತೆ ಮುಸಲ್ಮಾನರೂ ಪೌರಕಾರ್ಮಿಕರಾಗಿ ದುಡಿಯಲಿ: ಸೊಗಡು ಶಿವಣ್ಣ

    ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕರಾದ ಅರ್ಚನಾ, ಮುಖ್ಯ ಎಂಜಿನಿಯರ್ ಸತ್ಯನಾರಾಯಣ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ಜನಕಲ್ಯಾಣ ಯೋಜನೆ ರೂಪಿಸುವಾಗ ಬಜೆಟ್ ಮಿತಿಯಿರಲಿ: ಸುಪ್ರೀಂಕೋರ್ಟ್

  • ರಾಜಕೀಯದಲ್ಲಿ ಯಾರೂ ಸತ್ಯಹರಿಶ್ಚಂದ್ರ, ಧರ್ಮರಾಯ ಇಲ್ಲ- ವಿರೋಧ ಪಕ್ಷದವರಿಗೆ ಎಂಟಿಬಿ ತಿರುಗೇಟು

    ರಾಜಕೀಯದಲ್ಲಿ ಯಾರೂ ಸತ್ಯಹರಿಶ್ಚಂದ್ರ, ಧರ್ಮರಾಯ ಇಲ್ಲ- ವಿರೋಧ ಪಕ್ಷದವರಿಗೆ ಎಂಟಿಬಿ ತಿರುಗೇಟು

    ಬೆಂಗಳೂರು: ನಲವತ್ತು ವರ್ಷಗಳ ರಾಜಕೀಯದಲ್ಲಿ ಎಲ್ಲರನ್ನು ನೋಡಿದ್ದೇನೆ. ಆದರೆ ಸತ್ಯಹರಿಶ್ಚಂದ್ರ, ಧರ್ಮರಾಯ ಮತ್ತು ನಳ ಮಹಾರಾಜ ಯಾರೂ ನನ್ನ ಕಣ್ಣಿಗೆ ಬಿದ್ದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ.ನಾಗರಾಜ್ ವಿರೋಧ ಪಕ್ಷದವರ ಆರೋಪ, ಪ್ರತ್ಯಾರೋಪಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ನಂಗೇ ಪಾಠ ಹೇಳಿಕೊಡೋದಾ?, ಅಧಿಕಾರದ ಅಹಂನಿಂದ ಸುಧಾಕರ್ ಮಾತಾಡ್ತಿದ್ದಾರೆ: ಸಿದ್ದು

    ಇಂದು ಹೊಸಕೋಟೆ ತಾಲೂಕಿನ ತಾವರೆಕೆರೆಗೆ ಎಂ.ಟಿ.ಬಿ.ನಾಗರಾಜ್ ಬಾಗಿನ ಅರ್ಪಿಸಿದ್ದಾರೆ. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿರೋಧ ಪಕ್ಷದವರು ಆರೋಪಗಳು, ಪ್ರತ್ಯಾರೋಪಗಳನ್ನು ಮೀಡಿಯಾದಲ್ಲಿ ಮಾಡಿದ್ದಾರೆ. ಯಾವ ಯಾವ ಕಾಲದಲ್ಲಿ ಯಾರ‍್ಯಾರು ಮುಖ್ಯಮಂತ್ರಿಗಳಾಗಿದ್ದರು. ಯಾವ ಮುಖ್ಯಮಂತ್ರಿ ಕಾಲದಲ್ಲಿ ಎಷ್ಟೆಷ್ಟು ಹಗರಣ ಆಗಿದ್ದಾವೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ರಾಜಕೀಯದಲ್ಲಿ ಯಾರೂ ಸತ್ಯಹರಿಶ್ಚಂದ್ರ, ಧರ್ಮರಾಯ ಮತ್ತು ನಳ ಮಹಾರಾಜರು ಇಲ್ಲ ಎಂದು ಹೇಳಿದರು.

    ನಲವತ್ತು ವರ್ಷಗಳ ರಾಜಕೀಯದಲ್ಲಿ ಎಲ್ಲರನ್ನು ನೋಡಿದ್ದೇನೆ. ಆದರೆ ಸತ್ಯಹರಿಶ್ಚಂದ್ರ, ಧರ್ಮರಾಯ ಮತ್ತು ನಳ ಮಹಾರಾಜ ಯಾರೂ ನನ್ನ ಕಣ್ಣಿಗೆ ಬಿದ್ದಿಲ್ಲ. ಸದ್ಯಕ್ಕೆ ಆರೋಪ, ಪ್ರತ್ಯಾರೋಪಗಳನ್ನು ಬದಿಗೊತ್ತಿ. ಇಂದು ನಾವು ಸಾವು-ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದೇವೆ. ರಾಜಕೀಯ ಮಾಡಿ, ಆದರೆ ಈ ಸಮಯದಲ್ಲಿ ಬೇಡ. ಶಾಸಕರು, ಸಚಿವರು, ಜನಪ್ರತಿನಿಧಿಗಳಾಗಲಿ ಎಲ್ಲರೂ ಆಸ್ಪತ್ರೆಗೆ ಹೋಗಬೇಕು. ಅಲ್ಲಿ ಉಸ್ತುವಾರಿ ವಹಿಸಿಕೊಂಡು ಕೊರೊನಾ ನಿಯಂತ್ರಿಸಲು ಕೆಲಸ ಮಾಡಬೇಕು ಎಂದು ಹೇಳಿದರು.

    ವಿರೋಧ ಪಕ್ಷದವರು ಹೇಳುತ್ತಿರುವುದೆಲ್ಲ ಸತ್ಯಕ್ಕೆ ದೂರವಾದ ಮಾತು. ನಮ್ಮ ಬಳಿ ಎಲ್ಲದಕ್ಕೂ ದಾಖಲಾತಿ ಇದೆ. ಆದರೆ ಈಗ ರಾಜಕೀಯ ಮಾಡುವ ಸಮಯವಲ್ಲ. ಚುನಾವಣೆ ಬರುತ್ತದೆ ಅಂದು ರಾಜಕೀಯ ಮಾಡಿ. ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಅಬ್ಬರಿಸುತ್ತಿದೆ. ಆದರೆ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಎಂ.ಟಿ.ಬಿ.ನಾಗರಾಜ್ ಕಿಡಿಕಾರಿದರು.

  • ಬರೋಬ್ಬರಿ 1,224 ಕೋಟಿ ಆಸ್ತಿ ಘೋಷಿಸಿಕೊಂಡ ಎಂಟಿಬಿ- 2.48 ಕೋಟಿ ಮೌಲ್ಯದ 5 ಐಷಾರಾಮಿ ಕಾರು

    ಬರೋಬ್ಬರಿ 1,224 ಕೋಟಿ ಆಸ್ತಿ ಘೋಷಿಸಿಕೊಂಡ ಎಂಟಿಬಿ- 2.48 ಕೋಟಿ ಮೌಲ್ಯದ 5 ಐಷಾರಾಮಿ ಕಾರು

    – ಆದರೂ 52 ಕೋಟಿ ಸಾಲಗಾರ

    ಬೆಂಗಳೂರು: ವಿಧಾನ ಪರಿಷತ್‍ಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಬರೋಬ್ಬರಿ 1,224 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

    ಮೇಲ್ಮನೆ ಚುನಾವಣೆಗೆ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಭ್ಯರ್ಥಿಗಳಾದ ಸುನೀಲ್ ವಲ್ಯಾಪುರೆ, ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಪ್ರತಾಪ್ ಸಿಂಹ ನಾಯಕ್ ಅವರು ನಾಮಪತ್ರ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ತಮ್ಮ ಆಸ್ತಿಯನ್ನು ಫೋಷಿಸಿಕೊಂಡಿದ್ದಾರೆ. ಎಂಟಿಬಿ ವಿರುದ್ಧ ಒಂದು ಪೊಲೀಸ್ ದೂರು ಇದೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣ ವಿಚಾರಣೆ ಹಂತದಲ್ಲಿದೆ.

    ಎಂಟಿಬಿ ಹೆಸರಲ್ಲಿ ಒಟ್ಟು 884 ಕೋಟಿ ಆಸ್ತಿ, ಪತ್ನಿ ಹೆಸರಲ್ಲಿ 331 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಎಂಟಿಬಿ ಹೆಸರಲ್ಲಿ 461 ಕೋಟಿ ರೂ. ಚರಾಸ್ತಿ, 416 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಶಾಂತಕುಮಾರಿ ಹೆಸರಲ್ಲಿ 160 ಕೋಟಿ ರೂ. ಚರಾಸ್ತಿ, 179ಕೋಟಿ ರೂ. ಸ್ಥಿರಾಸ್ತಿ ಇದೆ. ಅಲ್ಲದೇ ಎಂಟಿಬಿ 2.23 ಕೋಟಿ ಮೌಲ್ಯದ ವಜ್ರ, ಪ್ಲಾಟಿನಂ, ಚಿನ್ನಾಭರಣ ಹೊಂದಿದ್ದಾರೆ.

    ಎಂಟಿಬಿ ಆಸ್ತಿ ವಿವರ:
    ಎಂಟಿಬಿ ನಾಗರಾಜ್ ಬಳಿ ನಗದು 32.60 ಲಕ್ಷ ರೂ. ಇದೆ. ಇನ್ನೂ ಎಂಟಿಬಿ ಪತ್ನಿ ಶಾಂತಕುಮಾರಿ ಬಳಿ ನಗದು 45.60 ಲಕ್ಷ ರೂ. ಇದೆ. ಅಲ್ಲದೇ ಎಂಟಿಬಿ ಬ್ಯಾಂಕ್ ಸೇವಿಂಗ್ಸ್ ಖಾತೆಯಲ್ಲಿ 20.26 ಕೋಟಿ ರೂ. ಇದೆ. ಬ್ಯಾಂಕ್ ಫಿಕ್ಸೆಡ್ ಡೆಪಾಸಿಟ್ ಮೊತ್ತ 144.41 ಕೋಟಿ ರೂ. ಪತ್ನಿ ಬ್ಯಾಂಕ್ ಸೇವಿಂಗ್ಸ್ 11.21 ಕೋಟಿ ರೂ., ಬ್ಯಾಂಕ್ ಫಿಕ್ಸೆಡ್ ಡೆಪಾಸಿಟ್ 34.08 ಕೋಟಿ ರೂ. ಇದೆ.

    ಎಂಟಿಬಿ ಬಾಂಡ್ ಮತ್ತು ಷೇರುಗಳ ಮೊತ್ತ 12 ಕೋಟಿ ರೂ. ಆಗಿದೆ. ಪತ್ನಿ ಹೆಸರಿನಲ್ಲಿರುವ ವಿವಿಧ ಬಾಂಡ್ ಮತ್ತು ಷೇರುಗಳ ಮೊತ್ತ 70 ಕೋಟಿ ರೂ. ಇದೆ. ಅಲ್ಲದೇ ಎಂಟಿಬಿ ಮಾಡಿರುವ ಸಾಲ, ಕೊಟ್ಟಿರುವ ಸಾಲ ಒಟ್ಟು ಸೇರಿ 285 ಕೋಟಿ ರೂ. ಇದೆ. ಪತ್ನಿ ಮಾಡಿದ ಸಾಲ, ಕೊಟ್ಟ ಸಾಲದ ಒಟ್ಟು ಮೊತ್ತ 41 ಕೋಟಿ ರೂ. ಆಗಿದೆ. ಇನ್ನೂ ಎಂಟಿಬಿ 2.48 ಕೋಟಿ ಮೌಲ್ಯದ ವಿವಿಧ ವಾಹನಗಳಿವೆ. ಪತ್ನಿಯು ಕೂಡ 1.72 ಕೋಟಿ ಮೌಲ್ಯದ ವಿವಿಧ ವಾಹನಗಳ ಒಡತಿಯಾಗಿದ್ದಾರೆ.

    ಎಂಟಿಬಿ ಹೊಂದಿರುವ ಕೃಷಿ, ವಿವಿಧ ಕಟ್ಟಡಗಳ ಒಟ್ಟು ಸ್ಥಿರಾಸ್ತಿ ಮೌಲ್ಯ 422.75 ಕೋಟಿ ರೂ. ಆಗಿದೆ. ಪತ್ನಿಯು ಒಟ್ಟು 179 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳ ಒಡತಿ ಆಗಿದ್ದಾರೆ. ಆದರೂ ಎಂಟಿಬಿ 52.75 ಕೋಟಿ ರೂ. ಸಾಲಗಾರ ಆಗಿದ್ದಾರೆ. ಪತ್ನಿ ಮಾಡಿರುವ ಸಾಲ 1.97 ಕೋಟಿ ರೂ. ಎಂದು ಆಸ್ತಿ ವಿವರದಲ್ಲಿ ಘೋಷಿಸಿಕೊಂಡಿದ್ದಾರೆ.

    ಎಂಟಿಬಿ ಪಿತ್ರಾರ್ಜಿತ ಆಸ್ತಿ ಕೇವಲ 6.21 ಕೋಟಿ ರೂ. ಆಗಿದೆ. ಎಂಟಿಬಿ ತಮ್ಮ ಪುತ್ರ ನಿತಿನ್ ಪುರುಷೊತ್ತಮ್‍ಗೆ 129 ಕೋಟಿ ರೂ. ಸಾಲ ನೀಡಿದ್ದಾರೆ. ಎಂಟಿಬಿ ಬಳಿ ಲ್ಯಾಂಡ್ ರೋವರ್, ಮರ್ಸಿಡೀಸ್, ಟೊಯೋಟಾ ಮತ್ತು ಹುಂಡೈ ಕಂಪೆನಿಗಳ ಐಷಾರಾಮಿ ಕಾರುಗಳಿವೆ. ಕಾರುಗಳ ಒಟ್ಟು ಮೌಲ್ಯ 2.48 ಕೋಟಿ ರೂ. ಪತ್ನಿ ಬಳಿ ಇರುವ ಏಕೈಕ ಐಷಾರಾಮಿ ಕಾರು ಪಾರ್ಶ್ (ಪೋರ್ಶೆ), ಬೆಲೆ 1.72 ಕೋಟಿ ರೂ. ಆಗಿದೆ.

    ಇದಲ್ಲದೇ ಎಂಟಿಬಿ ಬಳಿ 54 ಎಕರೆ ಕೃಷಿ ಭೂಮಿ ಇದೆ. ಇದರ ಮಾರುಕಟ್ಟೆ ಮೌಲ್ಯ 29.86 ಕೋಟಿ ರೂ. ಆಗಿದೆ. ಪತ್ನಿ ಹೆಸರಲ್ಲಿ 4 ಎಕರೆ ಕೃಷಿ ಭೂಮಿ, ಇದರ ಮೌಲ್ಯ 26 ಕೋಟಿ ರೂ. ಆಗಿದೆ. ಎಂಟಿಬಿ ಹೆಸರಲ್ಲಿ ಕೃಷಿಯೇತರ ಭೂಮಿ 64.66 ಲಕ್ಷ ಚದರಡಿ, ಮಾರುಕಟ್ಟೆ ಮೌಲ್ಯ 308 ಕೋಟಿ ರೂ. ಆಗಿದೆ. ಪತ್ನಿ ಹೆಸರಲ್ಲಿ 9.50 ಲಕ್ಷ ಚದರಡಿ ಕೃಷಿಯೇತರ ಭೂಮಿ ಇದೆ. ಇದರ ಮೌಲ್ಯ 94.47 ಕೋಟಿ ರೂ. ಎಂಟಿಬಿ ಬಳಿ 1.87 ಲಕ್ಷ ಚದರಡಿ ವಾಣಿಜ್ಯ ಕಟ್ಟಡಗಳು ಇವೆ. ಇದರ ಮೌಲ್ಯ 45 ಕೋಟಿ ರೂ. ಇದೆ. ಇದೆಲ್ಲವನ್ನು ಸೇರಿ ಒಟ್ಟು ಬರೋಬ್ಬರಿ 1,224 ಕೋಟಿ ಆಸ್ತಿ ಇದೆ ಎಂದು ಎಂಟಿಬಿ ಘೋಷಿಸಿಕೊಂಡಿದ್ದಾರೆ.

  • ಸ್ವಾಭಿಮಾನಿಗೆ ಹೊಸಕೋಟೆಯಲ್ಲಿ ಭರ್ಜರಿ ಸ್ವಾಗತ

    ಸ್ವಾಭಿಮಾನಿಗೆ ಹೊಸಕೋಟೆಯಲ್ಲಿ ಭರ್ಜರಿ ಸ್ವಾಗತ

    ಬೆಂಗಳೂರು: ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿ ತವರಿಗೆ ಬಂದ ಶರತ್ ಬಚ್ಚೇಗೌಡರಿಗೆ ಅಭಿಮಾನಿಗಳು ಅದ್ಧೂರಿ ರೀತಿಯಾಗಿ ಬರಮಾಡಿಕೊಂಡಿದ್ದಾರೆ.

    ಅರ್ಹರು, ಅನರ್ಹರು ಹೋರಾಟದ 15 ಕ್ಷೇತ್ರಗಳಿಗೆ ಚುನಾವಣೆ ನಡೆದರೆ, ಹೊಸಕೋಟೆಯಲ್ಲಿ ಮಾತ್ರ ಸ್ವಾಭಿಮಾನದ ಹೆಸರಲ್ಲಿ ಚುನಾವಣೆ ನಡೆದಿತ್ತು. ಸ್ವಾಭಿಮಾನಿ ಹೆಸರಿನಲ್ಲಿ ಚುನಾವಣೆ ಎದುರಿಸಿದ ಬಿಜೆಪಿ ಸಂಸದ ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ ತಮ್ಮ ಕುಟುಂಬದ ಎದುರಾಳಿ ಅನರ್ಹ ಶಾಸಕ ಬಿಜೆಪಿಯ ಎಂ.ಟಿ.ಬಿ.ನಾಗರಾಜ್ ವಿರುದ್ಧ ಭರ್ಜರಿಯಾಗಿ ಜಯಗಳಿಸಿದ್ದರು.

    ಹೊಸಕೋಟೆಯ ಅಯ್ಯಪ್ಪ ದೇವಾಲಯದ ಬಳಿಯಿಂದ ಆರಂಭವಾದ ಮೆರವಣಿಗೆ ಮುಖ್ಯರಸ್ತೆಗಳಲ್ಲಿ ಸಾಗಿತು. ಮೆರವಣಿಗೆಯಲ್ಲಿ ಶರತ್ ಅಭಿಮಾನಿಗಳು ಬೃಹತ್ ಸೇಬಿನ ಹಾರ ಕ್ರೇನ್ ಮೂಲಕ ಹಾಕಿ ಹಾಗೂ ಬೆಳ್ಳಿ ಗದೆಯನ್ನು ನೀಡಿ ತಮ್ಮ ಯುವನಾಯಕನನ್ನು ಕ್ಷೇತ್ರಕ್ಕೆ ಆಹ್ವಾನಿಸಿ ಭರ್ಜರಿ ಸ್ವಾಗತ ನೀಡಿದರು. ಮೆರವಣಿಗೆಯ ಮಾರ್ಗದುದ್ದಕ್ಕೂ ಶರತ್ ಮೇಲೆ ಹೂವಿನ ಮಳೆ ಸುರಿಸಿ ತಮ್ಮ ಅಭಿಮಾನ ಪ್ರದರ್ಶಿಸಿದರು. ಶರತ್ ಬಚ್ಚೇಗೌಡರ ಮೆರವಣಿಗೆಯುದ್ದಕ್ಕೂ ನೆರೆದಿದ್ದ ಮತದಾರರಿಗೆ ಮತ ನೀಡಿ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಅರ್ಪಿಸಿದರು.

  • ತಡವಾಗಿದ್ರೂ ಪರವಾಗಿಲ್ಲ, ಉತ್ತಮ ಗುಣಮಟ್ಟದ ಮನೆ ನೀಡ್ತೀವಿ: ಎಂಟಿಬಿ

    ತಡವಾಗಿದ್ರೂ ಪರವಾಗಿಲ್ಲ, ಉತ್ತಮ ಗುಣಮಟ್ಟದ ಮನೆ ನೀಡ್ತೀವಿ: ಎಂಟಿಬಿ

    – ಜುಲೈ ಅಂತ್ಯಗೊಳಗೆ ಕೊಡಗು ನಿರಾಶ್ರಿತರಿಗೆ ಮನೆ ಹಸ್ತಾಂತರ

    ಮಡಿಕೇರಿ: ಜುಲೈ ಅಂತ್ಯದ ಒಳಗಡೆ ಕೊಡಗು ನಿರಾಶ್ರಿತರಿಗೆ ಮನೆ ಹಸ್ತಾಂತರ ಮಾಡುತ್ತೇವೆ. ತಡವಾಗಿದ್ದರೂ ಪರವಾಗಿಲ್ಲ, ಉತ್ತಮ ಗುಣಮಟ್ಟದ ಮನೆ ನೀಡುತ್ತೇವೆ ಎಂದು ಮನೆ ಕಾಮಗಾರಿ ವಿಕ್ಷಣೆ ಬಳಿಕ ವಸತಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮಕ್ಕೆ ಇಂದು ಭೇಟಿ ನೀಡಿದ್ದರು. ಕಳೆದ ಬಾರಿ ಕೊಡಗು ಜಿಲ್ಲೆಯಲ್ಲಿ ಆದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರ ಮನೆಗಳನ್ನು ಕಟ್ಟುಕೊಡುತ್ತಿದ್ದು, ಈ ಮನೆಗಳ ಕಾಮಗಾರಿ ವಿಕ್ಷಣೆಯನ್ನು ಮಾಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಡವಾಗಿದ್ದರೂ ಪರವಾಗಿಲ್ಲ, ಉತ್ತಮ ಗುಣಮಟ್ಟದ ಮನೆ ನಿಡುತ್ತಿದ್ದೇವೆ. ಕಾಮಗಾರಿ ವಿಳಂಬ ಆಗಿದೆ. ಮೂಲಸೌಕರ್ಯ ಕಲ್ಪಿಸಿದ ಕೂಡಲೇ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

    ಕರ್ಣಂಗೇರಿ, ಮದೆನಾಡುವಿನ ಎರಡು ಕಡೆ ನಿರ್ಮಾಣವಾಗಿರುವ ಮನೆಗಳನ್ನು ಹಸ್ತಾಂತರವಾಗಲಿದೆ. ಮನೆ ನೋಡಿ ನನಗೆ ತುಂಬಾ ಖುಷಿಯಾಗಿದೆ. ನಮ್ಮ ಸಮ್ಮಿಶ್ರ ಸರ್ಕಾರದ ವತಿಯಿಂದ ನಿರಾಶ್ರಿತರಿಗೆ ಉತ್ತಮ ಮನೆ ನೀಡೋದು ನಮ್ಮ ಉದ್ದೇಶ ಅಷ್ಟೇ ಎಂದು ಎಂಟಿಬಿ ತಿಳಿಸಿದರು.

    ಸಿಎಂ ಗ್ರಾಮ ವಾಸ್ತವ್ಯಕ್ಕೆ ವಸತಿ ಸಚಿವರು ಫುಲ್ ಮಾರ್ಕ್ಸ್‌ ಕೊಟ್ಟಿದ್ದು, ಗ್ರಾಮದ ವಾಸ್ತವ ಸಮಸ್ಯೆ ಅರಿಯಲು ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಎಲ್ಲೋ ಕುಳಿತು ಆಡಳಿತ ಮಾಡಿದರೆ ಸಮಸ್ಯೆ ಗೊತ್ತಾಗಲ್ಲ ಎಂಬುದು ಸಿಎಂಗೆ ಗೊತ್ತಿದೆ. ಹೀಗಾಗಿ ಗ್ರಾಮಗಳಲ್ಲಿ ವಾಸ್ತವ್ಯ ಮಾಡಿ ಸಮಸ್ಯೆ ಅರಿಯುತ್ತಿದ್ದಾರೆ. ಈ ಹಿಂದೆ ಸಿಎಂ ಆಗಿದ್ದಾಗ ಕೂಡ ಅವರು ಗ್ರಾಮ ವಾಸ್ತವ್ಯ ಮಾಡಿದ್ದರು. ವಿರೋಧ ಪಕ್ಷಗಳಿಗೆ ವಿರೋಧ ಮಾಡೋದೆ ಕೆಲಸ. ಅವರ ವಿರೋಧ ಹೇಳಿಕೆ ಕಾಮನ್ ಎಂದ ಬಿಜೆಪಿಗೆ ಮಾತಿಗೆ ಚಾಟಿ ಬೀಸಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಕುಗ್ಗಿಲ್ಲ. ಅವರ ವ್ಯಾಪ್ತಿಯ ಕೆಲಸವನ್ನು ಅವರು ಚೆನ್ನಾಗಿ ಮಾಡುತ್ತಿದಾರೆ. ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಏನೇನು ಒಳ್ಳೆ ಕಾರ್ಯ ಮಾಡಿದ್ದಾರೆ ಎಂದು ಗೊತ್ತಿದೆ. ಜನರು ಅದನ್ನು ತಿಳಿದುಕೊಂಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆ ಸುಖಾ ಸುಮ್ಮನೆ. ಸಮ್ಮಿಶ್ರ ಸರ್ಕಾರದಲ್ಲಿ ಏನೂ ಸಮಸ್ಯೆ ಇಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಮ್ಮ ನಾಯಕರ ಪರ ಬ್ಯಾಟಿಂಗ್ ಮಾಡಿದ್ದಾರೆ.

  • ಬಿಜೆಪಿಗೆ ಹೋದ್ರೆ, ಹೋಗಲಿ ನಾನೇನು ಮಾಡೋಕಾಗಲ್ಲ – ಬೇಗ್ ವಿರುದ್ಧ ಎಂಟಿಬಿ ಕಿಡಿ

    ಬಿಜೆಪಿಗೆ ಹೋದ್ರೆ, ಹೋಗಲಿ ನಾನೇನು ಮಾಡೋಕಾಗಲ್ಲ – ಬೇಗ್ ವಿರುದ್ಧ ಎಂಟಿಬಿ ಕಿಡಿ

    ಬೆಂಗಳೂರು: ಕಾಂಗ್ರೆಸ್ ರೋಷನ್ ಬೇಗ್ ಬಿಜೆಪಿಗೆ ಹೋಗುವುದು ಅವರ ತೀರ್ಮಾನ, ಹೋದರೆ ಹೋಗಲಿ ಎಂದು ಸಚಿವ ಎಂ.ಟಿ.ಬಿ ನಾಗರಾಜ್ ಸವಾಲು ಎಸೆದಿದ್ದಾರೆ.

    ಚುನಾವಣೋತ್ತರ ಸಮೀಕ್ಷೆಯಂತೆ ಫಲಿತಾಂಶ ಬಂದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೇ ಕಾರಣ ಎಂದು ಶಾಸಕ ರೋಷನ್ ಬೇಗ್ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ನಾಗರಾಜ್ ಅವರು, ರೋಷನ್ ಬೇಗ ಸಿದ್ದರಾಮಯ್ಯ ಸರ್ಕಾರದಲ್ಲಿ ಐದು ವರ್ಷ ಅಧಿಕಾರ ಅನುಭವಿಸಿದ್ದಾರೆ. ಅಧಿಕಾರ ಅನುಭವಿಸಿಯೂ ಈ ರೀತಿ ಮಾತನಾಡುವುದು ಸರಿಯಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಅಹಂಕಾರ, ಒಡೆದು ಆಳಿದ್ದಕ್ಕೆ ಕಾಂಗ್ರೆಸ್ಸಿಗೆ ಈ ಸ್ಥಿತಿ ಬಂದಿದೆ – ರೋಷನ್ ಬೇಗ್ ಕಿಡಿ

    ಈಗಾಗಲೇ ರೋಷನ್ ಬೇಗ್ ಅವರು ಮೂರು-ನಾಲ್ಕು ಬಾರಿ ಸಚಿವರಾಗಿದ್ದಾರೆ. ಹೀಗಾಗಿ ಬೇರೆಯವರಿಗೂ ಅವಕಾಶ ಸಿಗಬೇಕು. ಇನ್ನೊಬ್ಬರಿಗೆ ಅವಕಾಶ ಸಿಕ್ಕಿತ್ತು ಎಂದು ಕೋಪ ಮಾಡಿಕೊಳ್ಳಬಾರದು. ಬಿಜೆಪಿಗೆ ಹೋಗುವುದು ಅವರ ತೀರ್ಮಾನ ನಾವೇನು ಮಾಡಲು ಸಾಧ್ಯವಿಲ್ಲ. ಈಗಾಗಲೇ ಬಿಜೆಪಿ ಹೋಗಿರುವವರು ಏನಾಗಿದ್ದಾರೆ ಎಂದು ಫಲಿತಾಂಶ ಬಂದ ಮೇಲೆ ಗೊತ್ತಾಗುತ್ತದೆ ಎಂದು ನಾಗರಾಜ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರೋಷನ್ ಬೇಗ್ ರಾಜ್ಯದ ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯ ಹಾಗೂ ನಮ್ಮ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ಲಾಪ್ ಶೋ, ದಿನೇಶ್ ಗುಂಡೂರಾವ್ ಅವರು ಸೇರಿ ಈ ಗತಿಗೆ ತಂದಿದ್ದಾರಲ್ಲ. ಎಕ್ಸಿಟ್ ಪೋಲ್ ನೋಡಿದರೆ ನನಗೆ ಬೇಸರವಾಗುತ್ತದೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು.

  • ಸ್ವಶಕ್ತಿಯಿಂದ ಮೂರು ಬಾರಿ ಶಾಸಕನಾಗಿದ್ದು, ಹೊರತು ಕಾಂಗ್ರೆಸ್ ಹೆಸರಿನಿಂದಲ್ಲ: ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್

    ಸ್ವಶಕ್ತಿಯಿಂದ ಮೂರು ಬಾರಿ ಶಾಸಕನಾಗಿದ್ದು, ಹೊರತು ಕಾಂಗ್ರೆಸ್ ಹೆಸರಿನಿಂದಲ್ಲ: ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್

    ಬೆಂಗಳೂರು: ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು ನನ್ನ ಸ್ವಂತ ಶಕ್ತಿಯಿಂದನೇ, ಹೊರತು ಕಾಂಗ್ರೆಸ್ ಹೆಸರಿನಿಂದಲ್ಲ ಅಂತಾ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಟಿ.ಬಿ ನಾಗರಾಜ್ ಸಚಿವ ಸ್ಥಾನಕ್ಕೆ ಸಿಗದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.

    ಸಂಪುಟ ರಚನೆಯ ಕಿಡಿ ಕಾಂಗ್ರೆಸ್ ಪಾಳಯದಲ್ಲಿ ಧಗಿ ಧಗಿಸುತ್ತಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಒಬ್ಬೊಬ್ಬರೇ ಶಾಸಕರು ಅಸಮಾಧಾನ ಹೊರ ಹಾಕುತ್ತಿದ್ದು, ರಾಜೀನಾಮೆ ನೀಡಲು ಮುಂದಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತ ಶಾಸಕ ಎಂ.ಟಿ.ಬಿ ನಾಗರಾಜ್ ಸಹ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ಇದನ್ನೂ ಓದಿ: ಅಧಿಕಾರ ಇಲ್ಲದಿದ್ದಾಗ ಒಂಥರ, ಅಧಿಕಾರ ಬಂದಾಗ ಒಂಥರ – ಹಣವಂತರಿಗೆ ಸಚಿವ ಸ್ಥಾನ : ಜೆಡಿಎಸ್ ಶಾಸಕ ಅಸಮಾಧಾನ

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, ಬೇರೆ ಪಕ್ಷದಿಂದ ಬಂದವರನ್ನು ಸಚಿವರನ್ನಾಗಿ ಮಾಡಲಾಗುತ್ತಿದೆ. ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದವರಿಗೆ ಎರಡೆರೆಡು ಸಲ ಸಚಿವರನ್ನಾಗಿ ಮಾಡಲಾಗುತ್ತಿದೆ. ನಾನು ಕಾರ್ಯಕರ್ತನಾಗಿ, ನಗರ ಸಭೆ ಸದಸ್ಯನಾಗಿ ಕಳೆದ 35 ವರ್ಷಗಳಿಂದ ಕಾಂಗ್ರೆಸ್‍ಗಾಗಿ ಕೆಲಸ ಮಾಡಿಕೊಂಡು ಬಂದರೂ, ಇಂದು ನನಗೆ ಅನ್ಯಾಯವಾಗಿದೆ ಎಂದು ಅಂತಾ ಆಕ್ರೋಶ ಹೊರಹಾಕಿದ್ರು. ಇದನ್ನೂ ಓದಿ: ಒಂದು ವೇಳೆ ಗೆದ್ದಿದ್ದರೆ, ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಹೆಚ್.ವೈ.ಮೇಟಿ

    ರಾಜೀನಾಮೆ ನೀಡಬಹುದು: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕ್ಷೇತ್ರದ ಜನರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಸ್ಥಳೀಯ ಪಂಚಾಯ್ತಿ ಸದಸ್ಯರು, ಕಾರ್ಯಕರ್ತರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅವರೆಲ್ಲ ಸಹ ನನಗೂ ರಾಜೀನಾಮೆ ನೀಡಬೇಕು ಎಂಬ ಒತ್ತಡ ಹಾಕುತ್ತಿದ್ದಾರೆ. ನನಗೆ ಪಕ್ಷ, ಸಚಿವ ಸ್ಥಾನಕ್ಕಿಂತ ಕಾರ್ಯಕರ್ತರು ಮುಖ್ಯ. ಕೊನೆಯ ಕ್ಷಣದಲ್ಲಿ ಒತ್ತಡಗಳು ಹೆಚ್ಚಾದ್ರೆ ನಾನು ರಾಜೀನಾಮೆ ನೀಡುತ್ತೇನೆ ಅಂತಾ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೈ ಶಾಸಕ ಎಂ.ಬಿ ಪಾಟೀಲ್ ರಾಜೀನಾಮೆ?

    ಒಟ್ಟು ನಾಲ್ಕು ಬಾರಿ ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದ್ದು, ಮೂರು ಬಾರಿ ಗೆಲುವನ್ನು ಕಂಡಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಎಂದು ಸ್ಪರ್ಧೆ ನಡೆದಿಲ್ಲ. ನಾಗರಾಜ್ ವರ್ಸಸ್ ಬಚ್ಚೇಗೌಡ ಅಂತಾನೇ ಸ್ಪರ್ಧೆ ನಡೆದಿರೋದು. ಒಟ್ಟಾರೆಯಾಗಿ ಬಿಜೆಪಿಯ ಪ್ರಬಲ ನಾಯಕ ಬಚ್ಚೇಗೌಡರನ್ನು ಮೂರು ಬಾರಿ ಸೋಲಿಸಿದ್ದೇನೆ. ಆದ್ರೂ ಇಂದು ನನಗೆ ಮೋಸವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹೋಗುತ್ತಿಲ್ಲ. ಕಾಂಗ್ರೆಸ್ ಶಾಸಕಾಂಗದ ನಾಯಕರಾಗಿರುವ ಸಿದ್ದರಾಮಯ್ಯರನ್ನು ಭೇಟಿ ಮಾಡಲು ಅವರ ಮನೆಯತ್ತ ತೆರಳುತ್ತಿದ್ದೇನೆ ಅಂತಾ ತಿಳಿಸಿದರು.ಇದನ್ನೂ ಓದಿ: ಯಾವ ಬಾಲ್ ಬಂದ್ರೂ ಬ್ಯಾಟ್ ಬೀಸುತ್ತೇನೆ- ಯು.ಟಿ ಖಾದರ್