Tag: ಎಂ.ಪಿ.ರೇಣುಕಾಚಾರ್ಯ

  • ಮರಳು ದಂಧೆಗೆ ಅಂಕುಶ ಹಾಕಲು ಹೋದ ಎಸ್‍ಪಿಗೆ ರೇಣುಕಾಚಾರ್ಯ ಅವಾಜ್

    ಮರಳು ದಂಧೆಗೆ ಅಂಕುಶ ಹಾಕಲು ಹೋದ ಎಸ್‍ಪಿಗೆ ರೇಣುಕಾಚಾರ್ಯ ಅವಾಜ್

    ದಾವಣಗೆರೆ: ಕಾನೂನು ಸುವ್ಯವಸ್ಥೆ ಸರಿಪಡಿಸಲು ಮುಂದಾಗಿರುವ ನೂತನ ಎಸ್‍ಪಿ ರಿಷ್ಯಂತ್‍ಗೆ ಪ್ರಚಾರ ಪ್ರಿಯ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದಾರೆ.

    ಹೊನ್ನಾಳಿಯ ಅಕ್ರಮ ಮರಳು ಅಡ್ಡೆಗಳ ಮೇಲೆ ನಿನ್ನೆ ನಡೆದ ಪೊಲೀಸ್ ರೇಡ್‍ಗೆ ಸಿಟ್ಟಾಗಿರುವ ರೇಣುಕಾಚಾರ್ಯ, ಸಿಪಿಐ ದೇವರಾಜ್‍ಗೆ ಕರೆ ಮಾಡಿ ಎಸ್‍ಪಿ ರಿಷ್ಯಂತ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿಮ್ಮ ಎಸ್‍ಪಿ ದೊಡ್ಡ ಹೀರೋನೇನ್ರೀ.. ಬಂದ ತಕ್ಷಣ ರೇಡ್ ಮಾಡಿಸಿದ್ದಾರೆ.. ಇಲ್ಲಿ ಸ್ಟಂಟ್ ಮಾಡೋಕೆ ಬಂದ್ರೆ ನಡೆಯಲ್ಲ.. ಮರಳುಗಾರಿಕೆ ಮಾಡೋರೇನು ರೇಪ್ ಮಾಡಿದ್ದಾರಾ? ಕೊಲೆ ಮಾಡಿದ್ದಾರಾ..? ಅವ್ರ ತಂಟೆಗೆ ಹೋದ್ರೆ ನಾನು ಸುಮ್ನೆ ಇರಲ್ಲ. ತಾಕತ್ ಇದ್ರೆ ಸೀಜ್ ಮಾಡಿರೋ ಮರಳನ್ನು ತುಂಬಿ ನೋಡೋಣ ಎಂದೆಲ್ಲಾ ನಾಲಗೆ ಹರಿಬಿಟ್ಟಿದ್ದಾರೆ.

    ಎಸ್‍ಪಿ ರಿಷ್ಯಂತ್ ಸೂಚನೆ ಮೇರೆಗೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹರಳಹಳ್ಳಿ, ಹಿರೇಮಳಲಿಯ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಶಾಸಕ ರೇಣುಕಾಚಾರ್ಯ, ಸಿಪಿಐ ದೇವರಾಜ್ ಗೆ ಕರೆ ಮಾಡಿ ಎಸ್‍ಪಿಗೆ ಅವಾಜ್ ಹಾಕಿದ್ದಾರೆ. ಇನ್ನು ಈ ವೀಡಿಯೋವನ್ನು ರೇಣುಕಾಚಾರ್ಯ ಅವರೇ ಸೋಷಿಯಲ್ ಮೀಡಿಯಾಗೆ ಅಪ್ಲೋಡ್ ಮಾಡಿಕೊಂಡಿದ್ದಾರೆ.

  • ರೇಣುಕಾಚಾರ್ಯರನ್ನ ಪತಿಯಾಗಿ ಪಡೆದ ನಾನೇ ಅದೃಷ್ಟವಂತೆ: ಕೊಂಡಾಡಿದ ಪತ್ನಿ ಸುಮಿತ್ರಾ

    ರೇಣುಕಾಚಾರ್ಯರನ್ನ ಪತಿಯಾಗಿ ಪಡೆದ ನಾನೇ ಅದೃಷ್ಟವಂತೆ: ಕೊಂಡಾಡಿದ ಪತ್ನಿ ಸುಮಿತ್ರಾ

    ದಾವಣಗೆರೆ: ರೇಣುಕಾಚಾರ್ಯ ಅವರಂತಹ ಗಂಡ ಸಿಕ್ಕಿರುವುದು ನನ್ನ ಏಳೇಳು ಜನ್ಮದ ಪುಣ್ಯ. ಯಾವಾಗಲೂ ಜನರ ಯೋಗಕ್ಷೇಮಕ್ಕಾಗಿ ಓಡಾಡುತ್ತಿರುತ್ತಾರೆ. ನಾನು ಆರು ಜನ್ಮದಲ್ಲಿ ಪುಣ್ಯ ಮಾಡಿದ್ದಕ್ಕೆ ಈ ಜನ್ಮದಲ್ಲಿ ಇಂತಹ ಒಳ್ಳೆಯ ಗಂಡನನ್ನು ಪಡೆದಿದ್ದೇನೆ ಎಂದು ಪತಿಯನ್ನು ಸುಮಿತ್ರಾ ಹಾಡಿ ಹೊಗಳಿದ್ದಾರೆ.

    ದಾವಣಗೆರೆ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊರೊನಾ ಸೋಂಕು ನಿವಾರಣೆಗಾಗಿ ಧನ್ವಂತರಿ ಹಾಗೂ ಮೃತ್ಯುಂಜಯ ಹೋಮ ಆಯೋಜಿಸಲಾಗಿದೆ. ಈ ಪೂಜೆಯಲ್ಲಿ ಶಾಸಕರಾದ ರೇಣುಕಾಚಾರ್ಯ ಕುಟುಂಬ ಸಮೇತರಾಗಿ ಭಾಗಿಯಾಗಿದ್ದರು. ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸುಮಿತ್ರಾ ರೇಣುಕಾಚಾರ್ಯ, ಅವರ ಆರೋಗ್ಯ ಏನಾದ್ರು ಆಗಲಿ. ಜನರು ಚೆನ್ನಾಗಿರಲಿ ಅಂತ ಹೇಳ್ತಾರೆ. ಸೋಂಕಿತರಿಗೆ ಧೈರ್ಯ ಹೇಳಿ, ಇಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಅದ್ದರಿಂದ ನಾನು ಕೂಡ ಅವರ ಜೊತೆಯಲ್ಲಿದ್ದೇನೆ ಎಂದರು.

    ಬೆಳಗ್ಗೆಯಿಂದ ರಾತ್ರಿ ಮಲಗುವರೆಗೂ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದು ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಮಹಿಳೆಯರುದ್ದು, ತಮ್ಮ ಸಮಸ್ಯೆಗಳನ್ನು ನನ್ನೊಂದಿಗೆ ಹಂಚಿಕೊಳ್ಳುತ್ತಾರೆ. ಸೋಂಕಿತರನ್ನು ದೂರ ಮಾಡುವ ಬದಲು ಹತ್ತಿರ ಹೋಗಿ ಹೇಗಿದ್ದೀರಾ ಎಂದು ಮಾತನಾಡಿಸಿದರೆ ಏನೋ ಒಂದು ಧೈರ್ಯ ಅವರಲ್ಲಿ ಬರುತ್ತದೆ. ನಾನು ಏಕಾಂಗಿ ಅಲ್ಲ ಅನ್ನುವ ಮನೋಭಾವ ಅವರಲ್ಲಿ ಬೆಳೆಯುತ್ತದೆ. ಅಂತಹ ಕೆಲಸವನ್ನು ನಮ್ಮ ಯಜಮಾನರ ಜೊತೆ ಸೇರಿ ನಾನು ಮಾಡುತ್ತಿದ್ದೇನೆ. ಅಂತವರನ್ನು ಪಡೆದ ನಾನೇ ನಿಜಕ್ಕೂ ಅದೃಷ್ಟವಂತೆ ಎಂದು ಹೇಳಿದರು. ಇದನ್ನೂ ಓದಿ: ಕೊರೊನಾಗೆ ಗರ್ಭಿಣಿ ಕಾನ್‍ಸ್ಟೇಬಲ್ ನಿಧನ – ರೇಣುಕಾಚಾರ್ಯ ಸಂತಾಪ

  • ಕೊರೊನಾಗೆ ಗರ್ಭಿಣಿ ಕಾನ್‍ಸ್ಟೇಬಲ್ ನಿಧನ – ರೇಣುಕಾಚಾರ್ಯ ಸಂತಾಪ

    ಕೊರೊನಾಗೆ ಗರ್ಭಿಣಿ ಕಾನ್‍ಸ್ಟೇಬಲ್ ನಿಧನ – ರೇಣುಕಾಚಾರ್ಯ ಸಂತಾಪ

    – ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದ ಶಾಸಕರು

    ದಾವಣಗೆರೆ: ಹೊನ್ನಾಳಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಮಹಿಳಾ ಪೊಲೀಸ್ ಕಾನ್‍ಸ್ಟೇಬಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 34 ವರ್ಷದ ಚಂದ್ರಕಲಾ ಕೋವಿಡ್ ಸೋಂಕಿನಿಂದ ನಿಧನರಾಗಿದ್ದಾರೆ. ಚಂದ್ರಕಲಾ ಅವರ ನಿಧನಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸಂತಾಪ ಸೂಚಿಸಿದ್ದಾರೆ.

    ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಹೋದರಿ ಚಂದ್ರಕಲಾ ಕಳೆದ 20 ದಿನಗಳಿಂದ ಶಿವಮೊಗ್ಗ ನಗರದ ಮೆಗ್ಗನ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಹೋದರಿ ಚಂದ್ರಕಲಾ ಅವರು ಗರ್ಭಿಣಿಯಾಗಿದ್ದರು ಎನ್ನುವುದು ಇನ್ನೂ ದುಃಖದ ವಿಚಾರ.

    ಪತಿ ಬೋಜಪ್ಪ ನವರು ಸಹ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‍ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಇದೆ. ವೈಯಕ್ತಿಕ ಜೀವನವನ್ನು ಮರೆತು ಈ ದಂಪತಿ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಸಾವಿಗೆ ಪೊಲೀಸ್ ಇಲಾಖೆ ಸೇರಿದಂತೆ ಸಮಾಜವೇ ಕಂಬನಿ ಮಿಡಿಯುತ್ತಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

    ಸಹೋದರಿ ಚಂದ್ರಕಲಾ ಅವರ ಚಿಕಿತ್ಸೆ ಕೊಡಿಸುವ ಸಂಪೂರ್ಣ ಜವಾಬ್ದಾರಿಯನ್ನು ಡಿವೈಎಸ್‍ಪಿ ಪ್ರಶಾಂತ್ ಮುನ್ನೂರು ಹಾಗು ಸಿಪಿಐ ಟಿ.ವಿ ದೇವರಾಜ್ ಅವರು ತೆಗೆದುಕೊಂಡಿದ್ದು ಇಂದು ಬೆಳಗ್ಗೆ ಸಿಪಿಐ ದೇವರಾಜ್ ಅವರು ಚಂದ್ರಕಲಾ ಅವರ ಸಾವಿನ ಸುದ್ದಿ ತಿಳಿಸಿದಾಗ ನಾನು ಒಂದು ಕ್ಷಣ ದಿಗ್ಬ್ರಾಂತನಾದೆ. ಕೊರೊನಾ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿಗಳು ತಮ್ನ ಜೀವದ ಹಂಗನ್ನು ತೊರೆದು ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದು, ನನ್ನ ಜನಸೇವೆಯನ್ನು ದೇಶ ಹಾಗು ರಾಜ್ಯದ ಜನತೆ ಕೊಂಡಾಡುತ್ತಿದ್ದಾರೆ ಎಂದರೆ ಅದಕ್ಕೆ ಮೂಲ ಕಾರಣ ನನ್ನ ಮತ ಕ್ಷೇತ್ರದ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಪ್ರತಿಯೊಬ್ಬ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಎಂದು ಹೆಮ್ಮೆಯಿಂದ ಹೇಳುತ್ತೇನೆ.

    ಇಂದು ಬೆಳಗ್ಗೆ ದೈವಾಧೀನರಾದ ಹೊನ್ನಾಳಿ ಪೊಲೀಸ್ ಠಾಣೆಯ ಮಹಿಳಾ ಕಾನ್‍ಸ್ಟೇಬಲ್ ಸಹೋದರಿ ಶ್ರೀಮತಿ ಚಂದ್ರಕಲಾ ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಶಾಸಕರು ಅಂತಿಮ ನಮನ ಸಲ್ಲಿಸಿದರು.

  • 65 ಶಾಸಕರ ಸಹಿ ಪತ್ರ ನನ್ನಲ್ಲಿದೆ, ಅಖಾಡಕ್ಕೆ ಬಾ: ಸಿಪಿವೈಗೆ ರೇಣುಕಾಚಾರ್ಯ ಪಂಥಾಹ್ವಾನ

    65 ಶಾಸಕರ ಸಹಿ ಪತ್ರ ನನ್ನಲ್ಲಿದೆ, ಅಖಾಡಕ್ಕೆ ಬಾ: ಸಿಪಿವೈಗೆ ರೇಣುಕಾಚಾರ್ಯ ಪಂಥಾಹ್ವಾನ

    – ದೆಹಲಿಯಲ್ಲಿ ಯಾರನ್ನೂ ಭೇಟಿಯಾಗಿಲ್ಲ

    ದಾವಣಗೆರೆ: ಪಕ್ಷದಲ್ಲಿ ತಲೆ ಹರಟೆ ಮಾಡಿದವರನ್ನ ಉಚ್ಛಾಟಿಸಿ ಎಂದು 65 ಶಾಸಕರು ಸಹಿ ಮಾಡಿರುವ ನನ್ನ ಬಳಿಯಲ್ಲಿದೆ. ಯಾವುದೇ ಕಾರಣಕ್ಕೂ ಶಾಸಕಾಂಗ ಸಭೆ ಕರೆಯುವ ಅವಶ್ಯಕತೆ ಇಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಸಕಾಂಗ ಸಭೆ ಅಗತ್ಯ ಇಲ್ಲ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಶಾಸಕ ರೇಣುಕಾಚಾರ್ಯ, 65 ಶಾಸಕರ ಸಹಿ ಪತ್ರವನ್ನು ಅಗತ್ಯ ಬಿದ್ದಾಗ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರಿಗೆ ತಲುಪಿಸುತ್ತೇನೆ. ಬೇರೆ ಪಕ್ಷದಿಂದ ಬಂದು ಯಡಿಯೂರಪ್ಪನವರ ಆಶೀರ್ವಾದದಿಂದ ಶಾಸಕನಾಗಿ, ಸದಾನಂದಗೌಡರ ಅವಧಿಯಲ್ಲಿ ಅರಣ್ಯ ಸಚಿವರಾಗಿ ಲೂಟಿ ಹೊಡೆದಿದ್ದರು. ನಂತರ ನಮ್ಮ ಪಕ್ಷ ಬಿಟ್ಟು ಸೈಕಲ್ ಏರಿ ಮತ್ತೆ ಬಿಜೆಪಿ ಸೇರಿದರು. ಶಿವಾನಂದ ಸರ್ಕಲ್ ನಲ್ಲಿ ವಿಜಯೇಂದ್ರ, ಕಾವೇರಿ ಭವನದಲ್ಲಿ ಯಡಿಯೂರಪ್ಪನವರ ಕಾಲು ಹಿಡಿದಿದ್ದನ್ನು ನಾನೇ ನೋಡಿದ್ದೇನೆ. ನಮ್ಮಲ್ಲಿ ಸೋತವರು ಬಹಳಷ್ಟು ಜನ. ಸೋತವರಿದ್ದರೂ ಯಡಿಯೂರಪ್ಪನವರ ಕೃಪಕಟಾಕ್ಷದಿಂದ ಸಚಿವರಾದಿರಿ ಎಂದು ಸಿಪಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.

    ದೆಹಲಿಯಲ್ಲಿ ಯಾರನ್ನೂ ಭೇಟಿಯಾಗಿಲ್ಲ: ನೀವು ಶಾಸಕಾಂಗ ಸಭೆ ಕರೆಯಿರಿ ಎಂದು ಹೇಳಲು ಏನು ನೈತಿಕತೆ ಇದೆ? ಇದು ಮೂರು ಭಾಗವಾದ ಸರ್ಕಾರ ಎಂದು ಹೇಳ್ತೀರಿ, ಯಡಿಯೂರಪ್ಪನವರ ಆಡಳಿತ ಮೆಚ್ವಿ ನೀವೇ ಐದು ವರ್ಷ ಸಿಎಂ ಎಂದು ಹೇಳಿದ್ದಾರೆ. ವಿನಾಕಾರಣ ಪ್ರಹ್ಲಾದ್ ಜೋಶಿ ಅವರ ಹೆಸರು ತರುವ ಕೆಲಸ ಮಾಡುತ್ತಿದ್ದೀರಿ. ದೆಹಲಿಗೆ ಹೋಗಿ ಲಾಬಿ ಮಾಡಿದರೆ ಏನು ಪ್ರಯೋಜನ? ನೀವು ದೆಹಲಿಯಲ್ಲಿ ಯಾವ ನಾಯಕರನ್ನು ಭೇಟಿ ಮಾಡಿಲ್ಲ. ಅವರ ಗೇಟು ಮುಟ್ಟಿ ಬಂದು ಫೋಟೋ ತೆಗೆಸಿಕೊಂಡಿದ್ದೀರಿ ಎಂದು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ಬಿಎಸ್‍ವೈ ಬಿಟ್ಟರೆ ಬಿಜೆಪಿಯಲ್ಲಿ ಸ್ಟಾರ್ ಲೀಡರ್ ಯಾರಿದ್ದಾರೆ : ಎಂ.ಪಿ. ಕುಮಾರಸ್ವಾಮಿ

    ಸಿಪಿವೈಯನ್ನ ಬಂಧಿಸಿ: ಮೂರು ಭಾಗವಾದ ಬಿಜೆಪಿ ಎಂದು ಹೇಳ್ತಿರಲ್ಲಾ ನಿಮಗೇನಿದೆ ನೈತಿಕತೆ? ಇದರ ಬಗ್ಗೆ ನನಗೆ ಯಡಿಯೂರಪ್ಪ, ವಿಜಯೇಂದ್ರ ಹೇಳಿಲ್ಲ. ನನಗೆ ಸಿಕ್ಸರ್, ಬೌಂಡರಿ ಹೊಡೆಯುವುದು ಗೊತ್ತು. ತತಕ್ಷಣ ರಾಜೀನಾಮೆ ಕೊಡಬೇಕು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮೆಗಾಸಿಟಿ ಪ್ರಕರಣದಲ್ಲಿ ಯೋಗೇಶ್ವರ್ ಅವರನ್ನ ಬಂಧಿಸಬೇಕು. ಇಂತರಹವರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನಿಮ್ಮ ಸ್ವಾರ್ಥದ ಬಣ ಕಿತ್ತಾಟಕ್ಕೆ ಕಾಂಗ್ರೆಸ್ ಹೆಸ್ರು ಬಳಸಬೇಡಿ: ಸಿಪಿವೈ ಹೇಳಿಕೆಗೆ ತಿರುಗೇಟು

    ಪಂಥಾಹ್ವಾನ: ಅಖಾಡಕ್ಕೆ ಬಾ ನಮಗೆ ಹೇಗೆ ಪಟ್ಟು ಹಾಕಬೇಕು ಎಂದು ಗೊತ್ತಿದೆ. ನಾನು ನೇರಾನೇರ ಅಖಾಡಕ್ಕೆ ಬಾ. ಸಚಿವನಾಗಲು ಕಾಲು ಹಿಡಿದವನು ಈಗ ಅವರ ವಿರುದ್ಧ ಮಾತನಾಡ್ತೀಯಾ. ಯಡಿಯೂರಪ್ಪನವರು ಅವರನ್ನ ಸಚಿವರನ್ನಾಗಿ ಮಾಡಿದ್ದೇ ದೊಡ್ಡ ತಪ್ಪು. 2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸಿಪಿ ಯೋಗೇಶ್ವರ್ ಅವರಿಗೆ ಲೂಟಿ ಮಾಡುವ ಖಾತೆ ಬೇಕಂತೆ. ಖಾತೆ ಹಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡಲು ಬಂದ್ರೆ ನಾವು ಸುಮ್ಮನಿರಲ್ಲ. ಜನರ ರಕ್ಷಣೆ ಮಾಡುವ ಬದಲು ಈ ರೀತಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ನಾಯಕತ್ವ ಬದಲಾವಣೆಯನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಚಿವ ಯೋಗೇಶ್ವರ್

  • ಹರುಕು ಬಾಯಿಯಿಂದ ಹಗುರುವಾಗಿ ಮಾತಾಡಬೇಡಿ: ಯತ್ನಾಳ್‍ಗೆ ರೇಣುಕಾಚಾರ್ಯ ಎಚ್ಚರಿಕೆ

    ಹರುಕು ಬಾಯಿಯಿಂದ ಹಗುರುವಾಗಿ ಮಾತಾಡಬೇಡಿ: ಯತ್ನಾಳ್‍ಗೆ ರೇಣುಕಾಚಾರ್ಯ ಎಚ್ಚರಿಕೆ

    – ಯಡಿಯೂರಪ್ಪ ಕುಟುಂಬ ಮಾತ್ರ ನಿಮಗೆ ಕಾಣುತ್ತಾ?

    ಶಿವಮೊಗ್ಗ: ನಿಮ್ಮ ಹರುಕು ಬಾಯಿಯಿಂದ ಮುಖ್ಯಮಂತ್ರಿಗಳ ಬಗ್ಗೆ ಹಗುರುವಾಗಿ ಮಾತಾಡಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯತ್ನಾಳ್ ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ರೀತಿ ಉದ್ಧಟತನದಿಂದ ವರ್ತಿಸಿದ್ದರಿಂದಲೇ ಈ ಹಿಂದೆ ನಿಮ್ಮನ್ನು ಪಕ್ಷದಿಂದ ಉಚ್ಛಾಟಿಸಿದ್ದು, ಆಗ ಜೆಡಿಎಸ್ ಸೇರಿಕೊಂಡು ದೇವೇಗೌಡ ಅವರನ್ನು ಹಾಡಿ ಹೊಗಳಿದ್ರಿ. ಹಿಂದುತ್ವ ಎಲ್ಲಿದೆ ನಿಮಗೆ? ನಿಮ್ಮ ಹರುಕು ಬಾಯಿ, ಎಲುಬಿಲ್ಲದ ನಾಲಗೆಯಿಂದ ಹಗುರವಾಗಿ ಮಾತನಾಡ್ತೀರಾ. ಯಡಿಯೂರಪ್ಪ ಅವರ ಕುಟುಂಬ ಮಾತ್ರ ರಾಜಕಾರಣ ಮಾಡುತ್ತಿದೆಯಾ? ಬೇರೆ ಯಾರು ಕುಟುಂಬ ರಾಜಕಾರಣ ಮಾಡುತ್ತಿಲ್ಲವಾ? ಯಡಿಯೂರಪ್ಪ ಮಾತ್ರ ನಿಮ್ಮ ಕಣ್ಣಿಗೆ ಕಾಣುತ್ತಿದೆಯಾ. ನೀವು ನಿಜವಾಗಿಯೂ ಬಿಜೆಪಿ ತತ್ವ ಸಿದ್ಧಾಂತ ಒಪ್ಪಿಕೊಂಡಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು.

    ಮುಖ್ಯಮಂತ್ರಿ ಬದಲಾವಣೆ ಮಾಡಬೇಕು ಎಂದು ಹೇಳಲು ನೀವ್ಯಾರು? ರಾಜ್ಯದ ಜನ ಬಿಜೆಪಿಗೆ ಮತ ನೀಡಿದ್ದಾರೆ. 117 ಶಾಸಕರು ಬೆಂಬಲಿಸಿದ್ದಾರೆ. ಮೋದಿ, ಅಮಿತ್ ಶಾ ಅಪೇಕ್ಷೆಯಂತೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ದಿವಂಗತ ಅನಂತಕುಮಾರ್, ಈಶ್ವರಪ್ಪ ಅವರು. ಸಿಎಂ ಬದಲಾವಣೆ ಮಾಡಿ ಎನ್ನುವುದಕ್ಕೆ ನೀವು ಯಾರೀ. ಪಕ್ಷಕ್ಕೆ ನಿಮ್ಮ ಕೊಡುಗೆ ಏನು. ನೀವು ಕಾಂಗ್ರೆಸ್ ಏಜೆಂಟ್ ರೀತಿ ವರ್ತಿಸುವುದನ್ನು ಮೊದಲು ಬಿಡಿ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನ ಮಹಾನಾಯಕ, ಬಿಜೆಪಿಯ ಯುವರಾಜರದ್ದು ಎರಡು ಸಿಡಿ ಫ್ಯಾಕ್ಟರಿಗಳಿವೆ: ಯತ್ನಾಳ್

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೇ ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದಿದ್ದಾರೆ. ಹೀಗಿರುವಾಗ ಅವರ ಹೇಳಿಕೆಗೆ ಮಹತ್ವ ಕೊಡುವುದು ಬೇಡ. ಆದರೂ ಯತ್ನಾಳ್ ಪದೇ ಪದೇ ಇಂತಹ ಹೇಳಿಕೆ ನೀಡುತ್ತಿದ್ದರೆ ವಿಲನ್ ಆಗುತ್ತಾರೆ ಅಷ್ಟೇ ಎಂದರು. ಇದನ್ನೂ ಓದಿ: ಸಿಎಂ ವಿರುದ್ಧ ಗುಡುಗು- ಮಾರ್ಚ್ 25ರ ಸಭೆಯ ರಹಸ್ಯ ಬಿಚ್ಚಿಟ್ಟ ಯತ್ನಾಳ್

  • ಕಸದ ವಾಹನ ಚಲಾಯಿಸಿದ ರೇಣುಕಾಚಾರ್ಯ

    ಕಸದ ವಾಹನ ಚಲಾಯಿಸಿದ ರೇಣುಕಾಚಾರ್ಯ

    ದಾವಣಗೆರೆ: ಕಸದ ಗಾಡಿ ಚಲಾಯಿಸುವ ಮೂಲಕ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಹನಕ್ಕೆ ಚಾಲನೆ ನೀಡಿದರು.

    ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲೂರು ಗ್ರಾಮದಲ್ಲಿ ಹೊಸ ಕಸದ ಗಾಡಿಗೆ ಚಾಲನೆ ನೀಡಿದ್ದು, ಇದೇ ವೇಳೆ ಕಸದ ಆಟೋವನ್ನು ಚಲಾಯಿಸಿದ್ದಾರೆ. ಇದೇ ವೇಳೆ ‘ನಮ್ಮ ನಡಿಗೆ ತ್ಯಾಜ್ಯ ಮುಕ್ತದ ಕಡೆಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡದರು. ಶಾಸಕರು ವಾಹನ ಚಾಲನೆ ಮಾಡಿದ್ದಕ್ಕೆ ಗ್ರಾಮಸ್ಥರು ಫುಲ್ ಖುಷ್ ಆಗಿದ್ದಾರೆ. ನೆರೆದಿದ್ದ ಜನತೆ ಕೇಕೆ, ಹಾಕಿ ಶಿಳ್ಳೆ ಹೊಡೆದು ಖುಷಿ ಪಟ್ಟರು.

    ಹೊಸದಾಗಿ ಖರೀದಿಸಿದ್ದ ಕಸ ಸಂಗ್ರಹಿಸುವ ಆಟೋ ಚಲಾಯಿಸುವ ಮೂಲಕ ವಾಹನಗಳಿಗೆ ಚಾಲನೆ ನೀಡಿದರು. ನಂತರ ತ್ಯಾಜ್ಯ ವಿಲೇವಾರಿ ಘಟಕವನ್ನು ಸಹ ಲೋಕಾರ್ಪಣೆಗೊಳಿಸಿ, ವೀಕ್ಷಿಸಿದರು. ಇದೇ ವೇಳೆ ತ್ಯಾಜ್ಯ ವಿಲೇವಾರಿ ಘಟಕದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುರು.

  • ಸಂಘರ್ಷ ಒಳ್ಳೆಯದಲ್ಲ, ಒಟ್ಟಾಗಿರೋಣ ಎಂದು ಯತ್ನಾಳ್‍ಗೆ ಹೇಳಿದ್ದೆ: ರೇಣುಕಾಚಾರ್ಯ

    ಸಂಘರ್ಷ ಒಳ್ಳೆಯದಲ್ಲ, ಒಟ್ಟಾಗಿರೋಣ ಎಂದು ಯತ್ನಾಳ್‍ಗೆ ಹೇಳಿದ್ದೆ: ರೇಣುಕಾಚಾರ್ಯ

    ದಾವಣಗೆರೆ: ನಮ್ಮಲ್ಲೇ ಸಂಘರ್ಷ ಒಳ್ಳೆಯದಲ್ಲ, ಒಟ್ಟಾಗಿರೋಣ ಎಂದು ಹೇಳಿದ್ದೇನೆ. ಇದೀಗ ನೋಟೀಸ್ ನೀಡುವ ಕುರಿತು ರಾಜ್ಯಾಧ್ಯಕ್ಷರು ಏನು ಶಿಫಾರಸು ಮಾಡಿದ್ದಾರೆ ಎಂಬುದು ತಿಳಿದಿಲ್ಲ ಎಂದು ಶಾಸಕ ರೇಣುಕಾಚಾರ್ಯ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಮಾತನಾಡಿದ್ದಾರೆ.

    ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರು ನಮ್ಮ ಪಕ್ಷದ ಹಿರಿಯರು, ಕೇಂದ್ರದಲ್ಲಿ ಸಚಿವರಾಗಿದ್ದವರು. ಅಧಿವೇಶನದ ಸಂದರ್ಭದಲ್ಲಿ ನನ್ನ ಜೊತೆಗೆ ಇದ್ದರು. ನಮ್ಮಲ್ಲಿ ಸಂಘರ್ಷ ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ರಾಜ್ಯದ ಅಧ್ಯಕ್ಷರು ಏನು ಶಿಫಾರಸು ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ನೋಟಿಸ್ ನೀಡಿರುವುದು ಕೇಂದ್ರದ ವರಿಷ್ಠರಿಗೆ ಬಿಟ್ಟ ವಿಚಾರ ಎಂದರು.

    ಯತ್ನಾಳ್ ಅವರು ನೋಟಿಸ್‍ಗೆ ಸಮರ್ಪಕರವಾಗಿ ಉತ್ತರ ಕೊಡಬೇಕು. ಆಗಿರುವ ಲೋಪದೋಷ ಸರಿಪಡಿಸಿಕೊಳ್ಳಬೇಕು. ಈ ಬಗ್ಗೆ ರಾಜ್ಯಾಧ್ಯಕ್ಷರು, ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಯತ್ನಾಳ್ ಅವರು ಲೋಪದೋಷಗಳನ್ನು ಸರಿಪಡಿಸಿಕೊಂಡು ನಾವೆಲ್ಲರೂ ಒಟ್ಟಾಗಿ ಇರಬೇಕು ಎಂಬುದು ನಮ್ಮ ವಿನಂತಿ ಎಂದರು.

    ಮೀಸಲಾತಿ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಸಮಾಜದವರೂ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ. ಹಾಲುಮತ ಸಮಾಜ 2ಎ ಇಂದ ಎಸ್ಟಿಗೆ, ಪಂಚಮಸಾಲಿ ಸಮಾಜ 2ಎ ಮೀಸಲಾತಿ ದೇವಾಂಗ, ಉಪ್ಪಾರ ಸಮಾಜದವರು ಎಸ್ಟಿ ಸೇರ್ಪಡೆಗೆ ಆಗ್ರಹಿಸುತ್ತಿದ್ದಾರೆ. ಆಯಾ ಸಮಾಜದ ಶ್ರೀಗಳು ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಮೀಸಲಾತಿ ಕೇಳುವುದು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಪಂಚಮಸಾಲಿ ಸಮಾಜದ ಶ್ರೀಗಳು ಸಮಾವೇಶ ಮಾಡುವರಿದ್ದಾರೆ. ಅದರ ಬಗ್ಗೆಯೂ ಸಿಎಂ ಚರ್ಚೆ ಮಾಡುತ್ತಾರೆ.

    ಸಿಎಂ ಬಿ.ಎಸ್.ಯಡಿಯೂರಪ್ಪ ಸಮರ್ಥರಿದ್ದಾರೆ. ಪಕ್ಷದ ರಾಷ್ಟ್ರೀಯ ವರಿಷ್ಠರೊಂದಿಗೆ ಚರ್ಚಿಸಿ ಅದನ್ನು ಸಮರ್ಪಕವಾಗಿ ನಿಭಾಯಿಸುತ್ತಾರೆ. ಈ ಬಗ್ಗೆ ಈಗಾಗಲೇ ತಜ್ಞರ ಸಮಿತಿಯನ್ನು ಸಹ ರಚಿಸಲಾಗಿದೆ. ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದರು.

  • ನಾಳೆ ದೆಹಲಿಗೆ ತೆರಳುವ ಮುನ್ನ ರೇಣುಕಾಚಾರ್ಯ ಮೆಗಾ ಬಾಂಬ್!

    ನಾಳೆ ದೆಹಲಿಗೆ ತೆರಳುವ ಮುನ್ನ ರೇಣುಕಾಚಾರ್ಯ ಮೆಗಾ ಬಾಂಬ್!

    ಬೆಂಗಳೂರು: ಸಚಿವ ಸ್ಥಾನ ತಪ್ಪಿದ್ದಕ್ಕೆ ಶಾಸಕ ರೇಣುಕಾಚಾರ್ಯ ತೀವ್ರ ಬೇಸರಗೊಂಡಿದ್ದು, ವರಿಷ್ಠರ ಭೇಟಿ ಮಾಡಲು ನಾಳೆ ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದಾರೆ. ಇದಕ್ಕೂ ಮುನ್ನ ಮೆಗಾ ಬಾಂಬ್ ಸ್ಫೋಟಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ನಾಳೆ ಬೆಳಗ್ಗೆ 8.20ರ ಫ್ಲೈಟ್‍ನಲ್ಲಿ ರೇಣುಕಾಚಾರ್ಯ ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ನೂತನ ಸಚಿವರೊಬ್ಬರ ವಿರುದ್ಧ ಮೆಗಾ ಬಾಂಬ್ ಸಿಡಿಸಲಿದ್ದಾರೆ ಎನ್ನಲಾಗಿದೆ. ಹಲವರು ಬ್ಲ್ಯಾಕ್‍ಮೇಲ್ ಮಾಡಿ ಸಚಿವ ಸ್ಥಾನ ಪಡೆದಿದ್ದಾರೆ ಎಂದು ಆರೋಪಿಸಿರುವ ಅವರು, ಈ ಕುರಿತು ಹೈಕಮಾಂಡ್ ಗೆ ದೂರು ನೀಡಲು ದೆಹಲಿ ಯಾತ್ರೆ ನಡೆಸುತ್ತಿದ್ದಾರೆ. ರೇಣುಕಾಚಾರ್ಯ ಅವರ ಬಾಂಬ್ ಕುರಿತು ಭಾರೀ ಚರ್ಚೆ ನಡೆಯುತ್ತಿದ್ದು, ನಾಳೆ ಬಿಜೆಪಿಯಲ್ಲಿ ಆ ಬಾಂಬ್ ಅಲ್ಲೋಲ್ಲ ಕಲ್ಲೋಲ ಸೃಷ್ಟಿಸುತ್ತಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ಸೋತವರಿಗೆ ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಪಕ್ಷದ ವರಿಷ್ಠರ ಜೊತೆ ಮತ್ತೆ ಕೂಲಂಕುಷವಾಗಿ ಚಚಿ೯ಸುತ್ತೇನೆ.

    ಜಾತಿ…

    Posted by MP Renukacharya on Wednesday, January 13, 2021

    ಈ ಕುರಿತು ಫೇಸ್ಬುಕ್‍ನಲ್ಲಿ ಸಹ ಬರೆದುಕೊಂಡಿರುವ ಅವರು, ಸಚಿವ ಸ್ಥಾನ ಸಿಗಲಿಲ್ಲವೆಂದು ಸಹಜವಾಗಿ ಅಘಾತವಾಗಿದೆ. ನಾಯಕತ್ವ ಮತ್ತು ಪಕ್ಷದ ಮೇಲೆ ಹೆಚ್ಚು ವಿಶ್ವಾಸವಿಟ್ಟಿದ್ದೇನೆ. ಮುಂದೆಯೂ ಇಡುತ್ತೇನೆ. ನನ್ನ ಹೋರಾಟ ಪಕ್ಷ ಮತ್ತು ನಾಯಕತ್ವದ ವಿರುದ್ಧವಲ್ಲ. ಈಗ ಸರ್ಕಾರದಲ್ಲಾಗಿರುವ ತಪ್ಪು ವ್ಯವಸ್ಥೆಯ ವಿರುದ್ಧ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಗೆದ್ದ ಶಾಸಕರಿಗೆ ಮತ್ತು ಮತದಾನ ಮಾಡಿದ ಮತದಾರರಿಗೆ ಮಾಡಿದ ಅವಮಾನವಿದು. ಕರ್ನಾಟಕ ಸರ್ಕಾರ ಕೇವಲ 2 ಜಿಲ್ಲೆಗೆ ಮಾತ್ರ ಸೀಮಿತವಾಗಬಾರದು. ನಾಯಕತ್ವ ಮತ್ತು ಸಂಘಟನೆ ನನಗೆ ಎಲ್ಲಾ ಸ್ಥಾನ-ಮಾನ ನೀಡಿದೆ ಎಂದಿದ್ದಾರೆ.

    ಸಚಿವ ಸ್ಥಾನ ಸಿಗಲಿಲ್ಲವೆಂದು ಸಹಜವಾಗಿ ಅಘಾತವಾಗಿದೆ. ನಾಯಕತ್ವ ಮತ್ತು ಪಕ್ಷದ ಮೇಲೆ ಹೆಚ್ಚು ವಿಶ್ವಾಸವಿಟ್ಟಿದ್ದಿನಿ ಮುಂದೆಯು…

    Posted by MP Renukacharya on Wednesday, January 13, 2021

    ಸೋತವರಿಗೆ, ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಪಕ್ಷದ ವರಿಷ್ಠರ ಜೊತೆ ಮತ್ತೆ ಕೂಲಂಕುಷವಾಗಿ ಚರ್ಚಿಸುತ್ತೇನೆ. ಜಾತಿ ರಾಜಕೀಯ ಮಾಡಿ ನನಗೆ ಅಭ್ಯಾಸವಿಲ್ಲ. ಸೋತವರಿಗೆ ಸಚಿವ ಸ್ಥಾನ ನೀಡಿರುವುದು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಸರ್ವ ಜನಾಂಗದ ಮತದಾರರಿಗೆ ಮಾಡಿದ ಅಪಮಾನ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ಧಿಯೇ ನನ್ನ ಧ್ಯೇಯ ಎಂದು ಬರೆದುಕೊಂಡಿದ್ದಾರೆ.

  • ಶಾಸಕ ರೇಣುಕಾಚಾರ್ಯ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ಶಾಸಕ ರೇಣುಕಾಚಾರ್ಯ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಮಾನವೀಯತೆ ಮೆರೆದಿದ್ದಾರೆ.

    ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ರೇಣುಕಾಚಾರ್ಯ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಗೊಲ್ಲರಹಳ್ಳಿ ಸಮೀಪ ಬೈಕ್ ಅಪಘಾತವಾಗಿತ್ತು. ಘಟನೆಯಲ್ಲಿ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡು ಬಿದ್ದಿದ್ದನು.

    ಈ ವೇಳೆ ರೇಣುಕಾಚಾರ್ಯ ಅವರು ಅದೇ ದಾರಿಯಲ್ಲಿ ಕುಂದೂರು ಗ್ರಾಮಕ್ಕೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಅಪಘಾತದ ಮಾಹಿತಿ ಅರಿತ ಶಾಸಕರು ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಸ್ಥಳೀಯರ ಸಹಾಯದಿಂದ ಆರೈಕೆ ಮಾಡಿದರು. ನಂತರ ತನ್ನ ಬೆಂಬಲಿಗರ ಸಹಾಯದಿಂದ ದಾರಿಯಲ್ಲಿ ಹೋಗುತ್ತಿದ್ದ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.