Tag: ಎಇಇ ಅಧಿಕಾರಿ

  • 2 ಜಿಲ್ಲೆಯಲ್ಲಿ 11 ಸೈಟ್ ಹೊಂದಿದ್ದ ಎಇಇ ಎಸಿಬಿ ಬಲೆಗೆ

    2 ಜಿಲ್ಲೆಯಲ್ಲಿ 11 ಸೈಟ್ ಹೊಂದಿದ್ದ ಎಇಇ ಎಸಿಬಿ ಬಲೆಗೆ

    ಗದಗ: ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿರುವ ಘಟನೆ ಗದಗನಲ್ಲಿ ನಡೆದಿದೆ.

    ಬಾಗಲಕೋಟೆ ಜಿಲ್ಲೆಯ ನೀರು ಸರಬರಾಜು ಮಂಡಳಿಯ ಎಇಇ ಹನುಮಂತ ಪ್ರಭಣ್ಣವರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ರಾಜೀವ್ ಗಾಂಧಿ ನಗರದಲ್ಲಿ ಇರುವ ಮನೆ ಮೇಲೆ ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಭ್ರಷ್ಟಾಚಾರ ದೂರಿನ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಮಹತ್ವದ ದಾಖಲೆ ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

    ಎಇಇ ಹನುಮಂತ ಮನೆ ಮೇಲಿನ ದಾಳಿ ವೇಳೆ ಸುಮಾರು ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನ, ಬೆಳ್ಳಿ ವಶಪಡಿಸಿಕೊಂಡಿದ್ದಾರೆ. ಗದಗ ಮತ್ತು ಧಾರವಾಡ ಜಿಲ್ಲೆಯಲ್ಲಿ ಇವರ ಹೆಸರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸುಮಾರು 11 ಸೈಟ್‍ಗಳು ಇರುವುದು ಅಧಿಕಾರಿಗಳ ದಾಳಿ ವೇಳೆ ಗೊತ್ತಾಗಿದೆ. ಕಡತಗಳ ಪರಿಶೀಲನೆ ಮುಂದುವರಿದಿದ್ದು, ಎಇಇ ಹನಮಪ್ಪ ಮತ್ತು ಮನೆಯವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.

  • ಎಲೆಕ್ಷನ್‍ನಲ್ಲಿ ಅಧಿಕಾರಿಯ ಸಹೋದರ ಸಹಾಯ ಮಾಡಿಲ್ಲಂತ ಸೇಡು -ಎಇಇಗೆ ಪರಮೇಶ್ವರ್ ನಾಯ್ಕ್ ಅವಮಾನ

    ಎಲೆಕ್ಷನ್‍ನಲ್ಲಿ ಅಧಿಕಾರಿಯ ಸಹೋದರ ಸಹಾಯ ಮಾಡಿಲ್ಲಂತ ಸೇಡು -ಎಇಇಗೆ ಪರಮೇಶ್ವರ್ ನಾಯ್ಕ್ ಅವಮಾನ

    ಬಳ್ಳಾರಿ: ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಮಾಜಿ ಸಚಿವರೊಬ್ಬರು ಫೋನ್ ರಿಸೀವ್ ಮಾಡಲಿಲ್ಲ ಅಂತಾ ಡಿವೈಎಸ್ ಪಿ ಅನುಪಮಾ ಶೆಣೈರನ್ನ ಎತ್ತಂಗಡಿ ಮಾಡಿದ ಪ್ರಕರಣ ಇನ್ನೂ ರಾಜ್ಯದ ಜನರ ಮನಸ್ಸಿನಿಂದ ಮಾಸಿಲ್ಲ. ನಾನು ಡಿವೈಎಸ್ಪಿ ಎತ್ತಂಗಡಿ ಮಾಡೇ ಇಲ್ಲಾ ಅಂತಾ ವಾದಿಸಿ ಕೊನೆಗೆ ಸಿಕ್ಕಿಕೊಂಡಿದ್ದ ಮಾಜಿ ಮಂತ್ರಿಗಳು ಇದೀಗ ಮತ್ತೊಂದು ಕಿತಾಪತಿ ಮಾಡಿದ್ದಾರೆ.

    ಮಾಜಿ ಮಂತ್ರಿ ಮತ್ತು ಹಾಲಿ ಶಾಸಕ ಪಿಟಿ ಪರಮೇಶ್ವರ ನಾಯ್ಕ್, ಚುನಾವಣೆಯಲ್ಲಿ ಅಧಿಕಾರಿಯೊಬ್ಬರ ಸಹೋದರ ತಮ್ಮ ಪರವಾಗಿ ಕೆಲಸ ಮಾಡಲಿಲ್ಲ ಅಂತಾ ಜೆಸ್ಕಾ ಇಲಾಖೆಯ ಎಇಇ (ಅಸಿಸ್ಟೆಂಟ್ ಎಜ್ಯೂಕ್ಯೂಟಿವ್ ಎಂಜಿನಿಯರ್) ಗೆ ತುಂಬಿದ ಸಭೆಯಲ್ಲಿ ಎಲ್ಲರೆದುರೆಗೆ ಅವಮಾನ ಮಾಡಿ ಮನೆಗೆ ಕಳುಹಿಸಿದ್ದಾರೆ.

    ಹೂವಿನಹಡಗಲಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಜೆಸ್ಕಾ ಎಇಇ ಆಗಿ ಸೇವೆ ಸಲ್ಲಿಸುತ್ತಿದ್ದ ಶ್ರೀನಿವಾಸ ಮಂತ್ರೋಂಡಿಯವರ ಸಹೋದರರೊಬ್ಬರು ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಓದು ಗಂಗಪ್ಪ ಪರ ಕೆಲಸ ಮಾಡಿದ್ದರು. ಇದನ್ನೆ ಅಸ್ತ್ರವಾಗಿ ಮಾಡಿಕೊಂಡ ಪರಮೇಶ್ವರ ನಾಯ್ಕ್ ಎಇಇ ಶ್ರೀನಿವಾಸರನ್ನ ನೀವೂ ಚುನಾವಣೆಯಲ್ಲಿ ನನ್ನ ಪರವಾಗಿ ಕೆಲಸ ಮಾಡಿಲ್ಲವೆಂದು ತುಂಬಿದ ಸಭೆಯಲ್ಲಿ ಅವಮಾನ ಮಾಡಿದ್ದಾರೆ. ಅಲ್ಲದೇ ನೀವೂ ಇಲ್ಲಿಂದ ಹೋಗಿಬಿಡಿ ಇಲ್ಲದಿದ್ದರೇ ನಿಮ್ಮ ಮೇಲೆ ನಾನೇ ಹಿರಿಯ ಅಧಿಕಾರಿಗಳಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮಾಡುವೆ ಅಂತಾ ಧಮ್ಕಿ ಹಾಕಿದ್ದಾರೆ.

    ಹೀಗಾಗಿ ಶಾಸಕರ ಸೇಡಿನ ರಾಜಕಾರಣಕ್ಕೆ ಮನನೊಂದ ಜೆಸ್ಕಾನ ಎಇಇ ಶ್ರೀನಿವಾಸರು ದೀರ್ಘ ರಜೆ ಹಾಕಿ ಮನೆಗೆ ಹೋಗಿದ್ದಾರೆ. ಅಲ್ಲದೇ ಈ ಅವಕಾಶವನ್ನೆ ಬಳಸಿಕೊಂಡ ಪರಮೇಶ್ವರ ನಾಯ್ಕ್ ಅದೇ ಜೆಸ್ಕಾಗೆ ತಮ್ಮ ಆಪ್ತರಾದ ಹಡಗಲಿ ಮೂಲದ ಮೋಟ್ಲಾ ನಾಯ್ಕ್ ಅವರನ್ನು ಪೋಸ್ಟಿಂಗ್ ಸಹ ಮಾಡಿಸಿಕೊಂಡು ಬಂದಿದ್ದಾರೆ. ತಮ್ಮ ವಿರುದ್ಧ ಕೆಲಸ ಮಾಡಿದವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿರುವ ಪರಮೇಶ್ವರ ನಾಯ್ಕ್ ರ ವರ್ತನೆಯಿಂದ ಮತ್ತೊಬ್ಬ ಪ್ರಾಮಾಣಿಕ ಅಧಿಕಾರಿ ಮನನೊಂದು ಮನೆಗೆ ಹೋಗಿದ್ದಾರೆ.

    ಅಷ್ಟೇ ಅಲ್ಲದೇ ತಮ್ಮಗಾದ ಅವಮಾನವನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದಿದ್ದಾರೆ. ಈಗಾಗಲೇ ಹಲವಾರು ಅಧಿಕಾರಿಗಳಿಗೆ ಕಿರುಕುಳ ನೀಡಿರುವ ಪರಮೇಶ್ವರ ನಾಯ್ಕ್ ಇದೀಗ ಸಿಎಂ ಕುಮಾರಸ್ವಾಮಿಯವರ ಇಲಾಖೆಯ ಅಧಿಕಾರಿಗೆ ಅವಮಾನ ಮಾಡಿ ಮನೆಗೆ ಕಳುಹಿಸಿರುವುದರಿಂದ ಸಿಎಂ ಕುಮಾರಸ್ವಾಮಿ ತಮ್ಮ ಇಲಾಖೆಯ ಅಧಿಕಾರಿಗಾದ ಅವಮಾನಕ್ಕೆ ನ್ಯಾಯ ಕೊಡಿಸುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ.