Tag: ಎಎಪಿ

  • Delhi Election 2025 Results | ಅರವಿಂದ್‌ ಕೇಜ್ರಿವಾಲ್‌ಗೆ ಸೋಲು

    Delhi Election 2025 Results | ಅರವಿಂದ್‌ ಕೇಜ್ರಿವಾಲ್‌ಗೆ ಸೋಲು

    ನವದೆಹಲಿ: ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಬಿಜೆಪಿ ಅಭ್ಯರ್ಥಿ ಪರ್ವೇಶ್‌ ಸಾಹಿಬ್‌ ಸಿಂಗ್‌ ವಿರುದ್ಧ ಸೋಲು ಕಂಡಿದ್ದಾರೆ. ಈ ಮೂಲಕ ಸತತ 3ನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗುವ ಕನಸು ನುಚ್ಚುನೂರಾಗಿದೆ.

    ಕಳೆದ 2 ಚುನಾವಣೆಗಳಲ್ಲೂ ನವದೆಹಲಿ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದ ಕೇಜ್ರಿವಾಲ್‌ ಸತತ 2 ಬಾರಿ ಸಿಎಂ ಆಗಿದ್ದರು. 3ನೇ ಬಾರಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಪರ್ವೇಶ್‌ ವಿರುದ್ಧ 3,000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಇದನ್ನೂ ಓದಿ: ನಮ್ಮನ್ನು ಸೋಲಿಸಲು ಮೋದಿಗೆ ಇನ್ನೊಂದು ಜನ್ಮ ಬೇಕು ಎಂದಿದ್ದ ಕೇಜ್ರಿವಾಲ್‌ಗೆ ಸೋಲು

    ಸತತ 3ನೇ ಬಾರಿಗೆ ನವದೆಹಲಿ ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿದ ಕೇಜ್ರಿವಾಲ್‌ ಒಟ್ಟು 25,999 ಮತಗಳನ್ನು ಪಡೆದಿದ್ದರೆ, ಸಂದೀಪ್‌ ದೀಕ್ಷಿತ್‌ 4,568 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್‌ ಒಟ್ಟು 30,088 ಮತಗಳನ್ನು ಪಡೆದುಕೊಂಡಿದ್ದು 4,089 ಮತಗಳಿಂದ ಗೆದ್ದು ಬೀಗಿದ್ದಾರೆ. ಕೇಜ್ರಿವಾಲ್‌, ಬಿಜೆಪಿ ಅಭ್ಯರ್ಥಿ ಪರ್ವೇಶ್‌ ಸಾಹಿಬ್‌ ಸಿಂಗ್‌ ವಿರುದ್ಧ 4,089 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

    ಮದ್ಯ ನೀತಿ ಹಗರಣದಲ್ಲಿ ಭ್ರಷ್ಟಾಚಾರಾ ಆರೋಪದ ಮೇಲೆ ಜೈಲು ಸೇರಿದ ಕೇಜ್ರಿವಾಲ್‌ ರಾಜೀನಾಮೆ ಕೊಡಲು ಹಿಂದೇಟು ಹಾಕಿದರು. ಈ ವೇಳೆ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ಜೈಲುಪಾಲಾದರು. ಇನ್ನೇನು ಆಪ್‌ ಬಹುತೇಕ ನಾಮಾವಶೇಷವಾಯ್ತು ಅನ್ನೋ ಹೊತ್ತಿಗೆ ಜೈಲಿನಿಂದ ಕೇಜ್ರಿವಾಲ್‌ ಬಿಡುಗಡೆಯಾದರು. ಜೈಲಿನಿಂದ ಹೊರ ಬಂದ ಬಳಿಕ ಮತ್ತೆ ಜನಾದೇಶ ಪಡೆದು ಆಯ್ಕೆಯಾದ ಬಳಿಕವೇ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ಶಪಥಗೈದಿದ್ದರು.

    ಈ ನಡುವೆ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ದೌರ್ಜನ್ಯ ಪ್ರಕರಣ ಸಹ ಸಂಕಷ್ಟ ತಂದೊಡ್ಡಿತು. ಪ್ರತಿ ಹಂತದಲ್ಲೂ ಲೆಪ್ಟಿನೆಂಟ್ ಗರ್ವನರ್ ಜೊತೆಗೆ ಸಂಘರ್ಷ ನಡೆಯುತ್ತಲೇ ಇತ್ತು. ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಶೀಷ್ ಮಹಲ್ ಆರೋಪ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು. ಖುದ್ದು ಪ್ರಧಾನಿ ಮೋದಿ ಅವರೇ ಶೀಷ್‌ಮಹಲ್‌ ನವೀಕರಣಕ್ಕೆ ಕೋಟ್ಯಂತರ ರೂಪಾಯಿ ಅಕ್ರಮ ಮಾಡಿರುವುದಾಗಿ ಆರೋಪಿಸಿದ್ದರು. ಇದನ್ನೂ ಓದಿ: ದೆಹಲಿ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾಗೆ ಹೀನಾಯ ಸೋಲು

    ಹೀಗೆ ಆಪ್ ಸಂಚಾಲಕ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸಾಲು ಸಾಲು ಸವಾಲು ಎದುರಿಸಬೇಕಾಯ್ತು. ಕೊನೆಗೆ ಜನರಿಂದ ಮಾನ್ಯತೆ ಪಡೆಯದೇ ಮತ್ತೆ ಸಿಎಂ ಕುರ್ಚಿ ಮೇಲೆ ಕೂರಲ್ಲ ಎಂದು ಶಪಥ ಮಾಡಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಇದೀಗ ಈ ಹೋರಾಟದಲ್ಲಿ ಕೇಜ್ರಿವಾಲ್‌ ಸೋಲು ಕಂಡಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್‌ ಸೋಲಿಗೆ ಕಾರಣ: ಆರ್‌. ಅಶೋಕ್‌

  • ಕೇಜ್ರಿವಾಲ್‌ ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್‌ ಸೋಲಿಗೆ ಕಾರಣ: ಆರ್‌. ಅಶೋಕ್‌

    ಕೇಜ್ರಿವಾಲ್‌ ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್‌ ಸೋಲಿಗೆ ಕಾರಣ: ಆರ್‌. ಅಶೋಕ್‌

    – ರಾಜನ ರೀತಿಯ ಆಡಳಿತ ನೋಡಿ ಜನ ಬೇಸತ್ತಿದ್ದಾರೆ ಎಂದ ವಿಪಕ್ಷ ನಾಯಕ

    ಬೆಂಗಳೂರು: ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯುಮುನಾ ನದಿ ಮೇಲೆ ಕಳಂಕ ಹಾಕಿಬಿಟ್ರು. ಅಲ್ಲದೇ ಜೈಲಿನಲ್ಲಿದ್ದುಕೊಂಡು 2 ತಿಂಗಳು ಆಡಳಿತ ಸ್ಥಗಿತಗೊಳಿಸಿದ್ರು. ಇದರ ಶಾಪ ತಟ್ಟಿದೆ. ಹಾಗಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ (R Ashoka ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್‌, ಕಾರು, ಮಫ್ಲರ್‌, ನಿಮಿಷ ನಿಮಿಷಕ್ಕೂ ಕೆಮ್ಮೋದು, 2 ಬೆಡ್‌ರೂಮ್‌ ಫ್ಲ್ಯಾಟ್‌, ಈಗ ಶೀಷ್‌ ಮಹಲ್‌ ಅದರಲ್ಲಿ 25 ರೂಮ್‌ಗಳಿವೆ. ಕಾರು, ಎಸ್ಕಾರ್ಟ್‌ ಹೀಗೆ ರಾಜನ ರೀತಿಯ ಆಡಳಿತ ನೋಡಿ ಜನ ಬೇಸತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Delhi Election Results | ಒಂದು ಕ್ಷೇತ್ರದಲ್ಲೂ ಖಾತೆ ತೆರೆಯದ ಕಾಂಗ್ರೆಸ್‌ – `ಕೈʼ ನಾಯಕರಿಗೆ ಮುಖಭಂಗ

    ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯುಮುನಾ ನದಿ (Yamuna River) ಮೇಲೆ ಕೇಜ್ರಿವಾಲ್ ಕಳಂಕ ಹಾಕಿಬಿಟ್ರು. ಯಮುನಾ ನದಿ ಒಂದು ದಿನಕ್ಕೆ ಮಲಿನ ಆಗಿಲ್ಲ. ದೆಹಲಿ ಜನ ಪ್ರತಿದಿನ ಕುಡಿಯುತ್ತಿದ್ದ, ಗಂಗೆ ಅಂತ ಪೂಜೆ ಮಾಡ್ತಿದ್ದ ನೀರಿನ ಮೇಲೆಯೇ ಕಳಂಕ ತಂದರು. ಸ್ವಚ್ಛತೆ ಮಾಡುವ ಕೆಲಸ ನದಿಯದ್ದಲ್ಲ. ಕೇಜ್ರಿವಾಲ್‌ ಸರಿಯಾಗಿ ನಿರ್ವಹಣೆ ಮಾಡದೇ ನದಿ ಮೇಲೆ ಆಪಾದನೆ ಮಾಡಿಬಿಟ್ಟರು. ಇದೇ ಅವರ ಸೋಲಿಗೆ ಕಾರಣ ಎಂದು ನುಡಿದಿದ್ದಾರೆ.

    ಯಾರೇ ಸಿಎಂ ಜೈಲಿಗೆ ಹೋದಾಗ ರಾಜೀನಾಮೆ ಕೊಟ್ಟು ಅವರದ್ದೇ ಪಕ್ಷದ ಮತ್ತೊಬ್ಬರಿಗೆ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕಿತ್ತು. ಆದ್ರೆ ಇವರು 2 ತಿಂಗಳು ಜೈಲಿನಲ್ಲಿದ್ದುಕೊಂಡು ಆಡಳಿತ ಸ್ಥಗಿತಗೊಳಿಸಿದ್ರು, ಅದರ ಶಾಪ ತಟ್ಟಿದೆ. ಜೊತೆಗೆ ಕಾಂಗ್ರೆಸ್‌ ನೇತೃತ್ವದ ಇಂಡಿ ಒಕ್ಕೂಟವೇ ಕೇಜ್ರಿವಾಲ್‌ ದೊಡ್ಡ ಕಳ್ಳ, ಭ್ರಷ್ಟಾಚಾರಿ ಎಂದು ಹೇಳಿದಾಗ ಜನರಿಗೆ ಅರ್ಥವಾಯ್ತು. ಮಳ್ಳಿತರ ಬಂದು ಕಳ್ಳತನ ತರ ಆಗಿದ್ದಾನೆ ಎಂದು ಕಾಂಗ್ರೆಸ್‌ ಆಪಾದನೆ ಮಾಡಿತು. ಜೊತೆಗೆ ಪ್ರಧಾನಿ ಮೋದಿ ಅವರ ಆಡಳಿತ ಬಿಜೆಪಿ ಗೆಲುವಿಗೆ ಕಾರಣ ಎಂದು ಅಶೋಕ್‌ ಹೇಳಿದ್ದಾರೆ.  ಇದನ್ನೂ ಓದಿ: ಆರೋಗ್ಯ ಸಮಸ್ಯೆ ಇದೆ, ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ: ಸೆಲೆಬ್ರಿಟಿಗಳಿಗೆ ದರ್ಶನ್‌ ಮನವಿ

    ಇಂಡಿಯಾ ಒಕ್ಕೂಟ ಒಡೆದು ಛಿದ್ರವಾಗಿದೆ. ಅಖಿಲೇಶ್‌ ಯಾದವ್‌, ಒಮರ್‌ ಅಬ್ದುಲ್ಲಾ ಎಲ್ಲರೂ ಕಾಂಗ್ರೆಸ್ಸನ್ನ ಟೀಕೆ ಮಾಡ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಸಹ ಈಗ ಪಾರ್ಟಿಮೆಂಟ್‌ ಪ್ರವೇಶಿಸಿದ್ದು, ವಂಶಪಾರಂಪರ್ಯ ರಾಜಕಾರಣ ಮುಂದುವರಿಸಿದ್ದಾರೆ. ಮೋದಿ ಜನಕ್ಕೋಸ್ಕರ ಕೆಲಸ ಮಾಡಿದ್ರೆ ಸೋನಿಯಾ, ರಾಹುಲ್‌, ಪ್ರಿಯಾಂಕ ತಮ್ಮ ಕುಟುಂಬಕ್ಕಾಗಿ ಮಾಡ್ತಿದ್ದಾರೆ ಎನ್ನೋದು ಜಗಜ್ಜಾಹೀರಾಗಿದೆ. ಆದ್ದರಿಂದ ಜನ ಮೋದಿ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ದೆಹಲಿಯಲ್ಲಿ ಅಧಿಕಾರ ಕೊಟ್ಟಿದ್ದಾರೆ. ದೆಹಲಿ ಜನಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: 2020 ರಲ್ಲಿ 14-1, 2025 ರಲ್ಲಿ 4-11: ರಾಜಧಾನಿ ಹೋರಾಟದಲ್ಲಿ ಎಎಪಿಗೆ ದಕ್ಷಿಣ ದೆಹಲಿ ದೊಡ್ಡ ಹಿನ್ನಡೆ

  • Delhi Election Results | ಒಂದು ಕ್ಷೇತ್ರದಲ್ಲೂ ಖಾತೆ ತೆರೆಯದ ಕಾಂಗ್ರೆಸ್‌ – `ಕೈʼ ನಾಯಕರಿಗೆ ಮುಖಭಂಗ

    Delhi Election Results | ಒಂದು ಕ್ಷೇತ್ರದಲ್ಲೂ ಖಾತೆ ತೆರೆಯದ ಕಾಂಗ್ರೆಸ್‌ – `ಕೈʼ ನಾಯಕರಿಗೆ ಮುಖಭಂಗ

    ನವದೆಹಲಿ: ಬಿಜೆಪಿ-ಎಎಪಿ (BJP vs AAP) ನಡುವಿನ ಪೈಪೋಟಿ ಚುನಾವಣಾ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿಸುತ್ತಲೇ ಇದೆ. ಅದ್ರೆ ಉಚಿತ ಗ್ಯಾರಂಟಿ ಘೋಷಿಸಿ ಸೀಮಿತ ಹೋರಾಟ ನಡೆಸಿದ ಕಾಂಗ್ರೆಸ್‌ (Congress) ಒಂದೇ ಒಂದು ಕ್ಷೇತ್ರದಲ್ಲಿಯೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಇದು ಕೇಂದ್ರದ ನಾಯಕರಿಗೂ ಮುಖಭಂಗತರಿಸಿದೆ.

    ಆರಂಭದಿಂದಲೂ ಬಿಜೆಪಿ-ಆಪ್‌ ನಡುವೆ ಪೈಪೋಟಿ ಮುಂದುವರಿದಿದೆ. 11:30 ಗಂಟೆ ವೇಳೆಗೆ ಬಿಜೆಪಿ 44 ಸ್ಥಾನಗಳಲ್ಲಿ ಹಾಗೂ ಆಪ್‌ 26 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈಗಾಗಲೇ ಮ್ಯಾಜಿಕ್‌ ನಂಬರ್‌ ತಲುಪಿರುವ ಬಿಜೆಪಿ 27‌ ವರ್ಷಗಳ ಬಳಿಕ ದೆಹಲಿಯಲ್ಲಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದೆ. ಇದನ್ನೂ ಓದಿ: Delhi Election Results | 16 ಕ್ಷೇತ್ರಗಳಲ್ಲಿ ಬಿಜೆಪಿ-ಆಪ್‌ ನಡುವೆ ನೇರಾನೇರ ಫೈಟ್‌ – 7 ಕ್ಷೇತ್ರಗಳಲ್ಲಿ ಬಿಜೆಪಿಗೆ 2,000 ಮತಗಳ ಲೀಡ್‌

    ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ:
    ಮೊದಲ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದ ಕೇಜ್ರಿವಾಲ್‌ 2 ರಿಂದ 5 ಸುತ್ತುಗಳ ವರೆಗೂ‌ 300ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಪರ್ವೇಶ್‌ ವಿರುದ್ಧ 6ನೇ ಸುತ್ತಿನಲ್ಲಿ 225 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಇದನ್ನೂ ಓದಿ: ಮೈತ್ರಿ ಎಲ್ಲ ಕಾಲದಲ್ಲೂ ಒಂದೇ ರೀತಿ ಇರಲ್ಲ; ದೆಹಲಿ ಫಲಿತಾಂಶದ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ

    ಮ್ಯಾಜಿಕ್‌ ನಂಬರ್‌ ತಲುಪಿದ ಬಿಜೆಪಿ:
    ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, 11 ಗಂಟೆ ವೇಳೆಗೆ ಬಿಜೆಪಿ 44 ಸ್ಥಾನಗಳೊಂದಿಗೆ ಭರ್ಜರಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಆಪ್‌ 28 ಸ್ಥಾನಗಳನ್ನು ಪಡೆದು ಹಿನ್ನಡೆಯಲ್ಲಿದ್ದರೆ. ಕಾಂಗ್ರೆಸ್‌ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ನಡೆದ ಚುನಾವಣೆಯಲ್ಲಿ 60.42% ರಷ್ಟು ಮತದಾನ ನಡೆದಿತ್ತು. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.

    2013ರ ಚುನಾವಣೆಯಲ್ಲಿ ಬಿಜೆಪಿ 31, ಆಪ್‌ 28, ಕಾಂಗ್ರೆಸ್‌ 08 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಇತರರು ಮೂರು ಸ್ಥಾನ ಗೆದ್ದಿದ್ದರು. ಆಪ್‌ಗೆ ಕಾಂಗ್ರೆಸ್‌ ಬೆಂಬಲ ನೀಡಿದ್ದರಿಂದ ಕೇಜ್ರಿವಾಲ್‌ (Arvind Kejriwal) ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು. ಇದನ್ನೂ ಓದಿ: ಈ ಬಾರಿಯೂ ಗೆಲುವು ನಮ್ಮದೇ – ಆಪ್‌ ಕಾರ್ಯಕರ್ತರ ಸಂಭ್ರಮಾಚರಣೆ ಆರಂಭ

    ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ (AAP) ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ (Congress) ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ.

  • ಉಚಿತ ಭರವಸೆಗಳಿಂದಲೇ ಸದ್ದು ಮಾಡಿದ ದೆಹಲಿ ರಣಾಂಗಣ – ಯಾರ ಕೈ ಹಿಡಿಯುತ್ತೆ ʻಗ್ಯಾರಂಟಿʼ?

    ಉಚಿತ ಭರವಸೆಗಳಿಂದಲೇ ಸದ್ದು ಮಾಡಿದ ದೆಹಲಿ ರಣಾಂಗಣ – ಯಾರ ಕೈ ಹಿಡಿಯುತ್ತೆ ʻಗ್ಯಾರಂಟಿʼ?

    ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶ (Delhi Election Results) ಇಂದು ಪ್ರಕಟವಾಗಲಿದೆ. ರಾಷ್ಟ್ರ ರಾಜಧಾನಿಯ ಚುನಾವಣಾ ಕಣದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡಿವೆ. ನೀರು ಕರೆಂಟ್ ಫ್ರೀ ಕೊಟ್ಟಿದ್ದ ಆಪ್ (AAP) ಇನ್ನೊಂದು ಹೆಜ್ಜೆ ಮುಂದೆ ಹೋದರೆ, ಕಾಂಗ್ರೆಸ್ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನೇ ಚೂರು ಬದಲಿಸಿ ಪ್ರಕಟಿಸಿದೆ. ಇನ್ನೂ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ ಬಂದಿದ್ದ ಬಿಜೆಪಿ (BJP) ಕೂಡ ಈ ಬಾರಿ ಗ್ಯಾರಂಟಿ ಅಸ್ತ್ರದೊಂದಿಗೆ ಚುನಾವಣಾ ಅಖಾಡಕ್ಕೆ ಇಳಿದಿದೆ. ಒಟ್ಟಿನಲ್ಲಿ ಈ ಬಾರಿ ದೆಹಲಿ ಚುನಾವಣಾ ಕಣ ಗ್ಯಾರಂಟಿಗಳಿಂದಲೇ ಸದ್ದು ಮಾಡುತ್ತಿದೆ ಅನ್ನೋದಂತೂ ಸುಳ್ಳಲ್ಲ.

    ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಅದನ್ನೆ ಚುನಾವಣಾ ಬಂಡವಾಳ ಮಾಡಿಕೊಂಡಿದೆ. ಮಧ್ಯಪ್ರದೇಶ, ಮಹರಾಷ್ಟ್ರದಲ್ಲಿ ಗ್ಯಾರಂಟಿ ರೀತಿಯ ಯೋಜನೆಗಳಿಂದ ಗೆಲುವಿನ ರುಚಿ ನೋಡಿದ್ದ ಬಿಜೆಪಿ ಅದನ್ನು ವಿರೋಧಿಸುತ್ತಲೇ ದೆಹಲಿಯಲ್ಲಿ ಹತ್ತಾರು ಭರವಸೆ ನೀಡಿದೆ. ಇನ್ನೂ ಗ್ಯಾರಂಟಿ ಜನಕ ಅಂತಲೇ ಕರೆಸಿಕೊಳ್ಳುವ ಆಪ್ ನೀರು ವಿದ್ಯುತ್ ಜೊತೆಗೆ ಈಗ ಹಲವು ಹೆಚ್ಚುವರಿ ಭರವಸೆ ಘೋಷಿಸಿದೆ.

    ಈಗ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ಪರಸ್ಪರ ಜಿದ್ದಿಗೆ ಬಿದ್ದಿದ್ದು ಜನರಿಗೆ ಭರಪೂರ ಕೊಡುಗೆಗಳನ್ನು ಘೋಷಿಸಿದೆ. ಆ ಪೈಕಿ ಯಾರ್ಯಾರ ಭರವಸೆ ಏನು..? ಕಾಂಗ್ರೆಸ್ (Congress), ಬಿಜೆಪಿ, ಆಪ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಅಂತಾ ಏನು ಅನ್ನೋದನ್ನ ತಿಳಿಯಬೇಕಿದ್ದರೆ ಮುಂದೆ ಓದಿ…

    ಆಪ್‌ ಗ್ಯಾರಂಟಿಗಳು ಯಾವುವು?

    * ಮಹಿಳಾ ಸಮ್ಮಾನ್ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2100
    * ಹಿರಿಯರಿಗೆ ಉಚಿತ ಚಿಕಿತ್ಸೆಯ ‘ಸಂಜೀವಿನಿ’ ಯೋಜನೆ ಜಾರಿ
    * ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಸ್ಕಾಲರ್‌ಶಿಪ್
    * ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಉಚಿತ ಪ್ರಯಾಣ
    * ಮೆಟ್ರೋ ಪ್ರಯಾಣ ದರದಲ್ಲಿ ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿ
    * ಅರ್ಚಕರು ಮತ್ತು ಗುರುದ್ವಾರದ ಗ್ರಂಥಿಗಳ ಮಾಸಿಕ 18,000 ರೂ.
    * ಪ್ರತಿ ಮನೆಗೂ 24*7 ಶುದ್ಧ ಮತ್ತು ಸ್ವಚ್ಛ ನೀರಿನ ಪೂರೈಕೆ
    * ವಿಶ್ವದರ್ಜೆಯ ರೋಡ್‌ಗಳ ನಿರ್ಮಾಣ
    * ಯಮುನಾ ನದಿ ಸ್ವಚ್ಛತೆ ಮುಂದುವರಿಕೆ

    ಬಿಜೆಪಿ ಗ್ಯಾರಂಟಿಗಳೇನು?

    * ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ 2,500 ರೂ.
    * ಬಡ ಮಹಿಳೆಯರಿಗೆ 500 ರೂ.ಗೆ ಎಲ್‌ಪಿಜಿ, ವರ್ಷಕ್ಕೆರೆಡು ಉಚಿತ ಸಿಲಿಂಡರ್
    * ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿಯರಿಗೆ 21,000
    * ಮೊದಲ ಸಂಪುಟದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನ
    * 60-70 ವರ್ಷದ ಹಿರಿಯ ನಾಗರಿಕರಿಗೆ 2,000-2,500 ರೂ. ಪಿಂಚಣಿ
    * 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3,000 ರೂ. ಪಿಂಚಣಿ ಯೋಜನೆ
    * ದೆಹಲಿ ನಾಗರಿಕರಿಗೆರ 25 ಲಕ್ಷದ ಆರೋಗ್ಯ ವಿಮೆ

    ಕಾಂಗ್ರೆಸ್‌ ಭರವಸೆಗಳೇನು?

    * ಪ್ಯಾರಿದೀದಿ ಯೋಜನೆ – ಮಹಿಳೆಯರಿಗೆ ಮಾಸಿಕ 2,500 ರೂ.
    * ನಿರುದ್ಯೋಗ ಯುವಕರಿಗೆ ತಿಂಗಳಿಗೆ 8,500 ರೂ. ಭತ್ಯೆ
    * ಅರ್ಹ ಮನೆಗಳಿಗೆ 300 ಯೂನಿಟ್ ಉಚಿತ ವಿದ್ಯುತ್
    * 500 ರೂ.ಗೆ ಒಂದು ಎಲ್‌ಪಿಜಿ ಸಿಲಿಂಡರ್
    * ಉಚಿತ ಪಡಿತರ ಕಿಟ್‌ನೊಂದಿಗೆ 1 ವರ್ಷದ ತರಬೇತಿ ಕಾರ್ಯಕ್ರಮ
    * 15 ಸಾವಿರ ನಾಗರಿಕ ರಕ್ಷಣಾ ಸ್ವಯಂ ಸೇವಕರನ್ನು ಪುನಸ್ಥಾಪನೆ
    * ಮಹಿಳೆಯರಿಗೆ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಶೇ.33ರಷ್ಟು ಮೀಸಲು
    * ಹಿರಿಯ ನಾಗರಿಕರು, ವಿಧವೆಯರು, ದಿವ್ಯಾಂಗರಿಗೆ 5,000 ಪಿಂಚಣಿ

    ಹೀಗೆ ಆಡಳಿತರೂಢ ಆಪ್ ಅನ್ನು ಕಟ್ಟಿಹಾಕಲು ಬಿಜೆಪಿ ಕಾಂಗ್ರೆಸ್ ಭಾರೀ ಕೊಡುಗೆಗಳನ್ನೇ ನೀಡಿದೆ. ಈ ಮೂರು ಪಕ್ಷಗಳ ಭರವಸೆಗಳಲ್ಲಿ ಯಾರ ಭರವಸೆಯನ್ನು ಜನರು ನಂಬಿದ್ದಾರೆ ಅನ್ನೋದು ಇಂದಿನ ಫಲಿತಾಂಶದಲ್ಲಿ ತಿಳಿಯಲಿದೆ.

  • ದೆಹಲಿ ಚುನಾವಣೆ ಹೊತ್ತಲ್ಲೇ ಎಎಪಿಗೆ ಶಾಕ್‌ – ಟಿಕೆಟ್‌ ಸಿಗದಿದ್ದಕ್ಕೆ ಸಿಟ್ಟಿಗೆದ್ದು 7 ಮಂದಿ ಶಾಸಕರು ರಾಜೀನಾಮೆ

    ದೆಹಲಿ ಚುನಾವಣೆ ಹೊತ್ತಲ್ಲೇ ಎಎಪಿಗೆ ಶಾಕ್‌ – ಟಿಕೆಟ್‌ ಸಿಗದಿದ್ದಕ್ಕೆ ಸಿಟ್ಟಿಗೆದ್ದು 7 ಮಂದಿ ಶಾಸಕರು ರಾಜೀನಾಮೆ

    ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್‌ ಸಿಗದಿದ್ದಕ್ಕೆ ಕೋಪಗೊಂಡು 7 ಮಂದಿ ಎಎಪಿ ಶಾಸಕರು ರಾಜೀನಾಮೆ ನೀಡಿದ್ದಾರೆ.

    ನರೇಶ್ ಯಾದವ್ (ಮೆಹ್ರೌಲಿ), ರೋಹಿತ್ ಕುಮಾರ್ (ತ್ರಿಲೋಕಪುರಿ), ರಾಜೇಶ್ ರಿಷಿ (ಜನಕಪುರಿ), ಮದನ್ ಲಾಲ್ (ಕಸ್ತೂರ್ಬಾ ನಗರ), ಪವನ್ ಶರ್ಮಾ (ಆದರ್ಶ ನಗರ), ಮತ್ತು ಭಾವನಾ ಗೌಡ್ (ಪಾಲಂ). ಬಿಎಸ್ ಜೂನ್ (ಬಿಜ್ವಾಸನ್) ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

    ಪಾಲಂ ಶಾಸಕಿ ಭಾವನಾ ಗೌರ್ ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ‌’ಕೇಜ್ರಿವಾಲ್ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಕಳೆದುಕೊಂಡ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ’ ತಿಳಿಸಿದ್ದಾರೆ.

  • ದೆಹಲಿ ಸಿಎಂ ಅತಿಶಿಗೆ ರಿಲೀಫ್ – ಬಿಜೆಪಿಯ ಮಾನನಷ್ಟ ಕೇಸ್ ವಜಾಗೊಳಿಸಿದ ಕೋರ್ಟ್

    ದೆಹಲಿ ಸಿಎಂ ಅತಿಶಿಗೆ ರಿಲೀಫ್ – ಬಿಜೆಪಿಯ ಮಾನನಷ್ಟ ಕೇಸ್ ವಜಾಗೊಳಿಸಿದ ಕೋರ್ಟ್

    ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅತಿಶಿ ಮರ್ಲೇನಾ (Atishi) ಅವರಿಗೆ ಜಾರಿ ಮಾಡಲಾದ ಸಮನ್ಸ್ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ರೌಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಪುರಸ್ಕರಿಸಿದೆ.

    ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹೊರಡಿಸಿದ ಸಮನ್ಸ್ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಾಧೀಶ ವಿಶಾಲ್ ಗೋಗ್ನೆ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಖರ್ಗೆ ಕೂಡ ಗಂಗಾ ಸ್ನಾನ ಮಾಡಬೇಕಾಗುತ್ತೆ – ಯೋಗಿ ಆದಿತ್ಯನಾಥ್‌

    ಎಎಪಿ ನಾಯಕರ ಹೇಳಿಕೆಯು ಸಂಘಟನೆಯ ಯಾವುದೇ ಒಬ್ಬ ಸದಸ್ಯರ ವಿರುದ್ಧ ಇಲ್ಲ. ಒಟ್ಟಾರೆಯಾಗಿ ವಿರೋಧ ಪಕ್ಷದ ವಿರುದ್ಧವಾಗಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

    ರಾಜಕೀಯ ಮಾನನಷ್ಟ ಮೊಕದ್ದಮೆಯಲ್ಲಿ ಸಾಕ್ಷ್ಯಾಧಾರದ ಮಿತಿ ಯಾವಾಗಲೂ ಹೆಚ್ಚಾಗಿರುತ್ತದೆ. ಏಕೆಂದರೆ ಅದು ವಾಕ್ ಸ್ವಾತಂತ್ರ್ಯವನ್ನು ಒಳಗೊಂಡಿರುತ್ತದೆ. ಆದ್ದರಿಂದ, ಸಮನ್ಸ್‌ನಲ್ಲಿ ಗಣನೀಯ ದೋಷ ಮತ್ತು ದೌರ್ಬಲ್ಯ ಇರುವುದರಿಂದ ಅದನ್ನು ರದ್ದುಗೊಳಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ. ಇದನ್ನೂ ಓದಿ: Maha Kumbhamela | ಜ.29 ರಂದು 10 ಕೋಟಿ ಜನರಿಂದ ಅಮೃತ ಸ್ನಾನ – ಭಕ್ತರ ಅನುಕೂಲಕ್ಕಾಗಿ 60 ವಿಶೇಷ ರೈಲುಗಳ ಓಡಾಟ

    ಕಳೆದ ವರ್ಷ ಏಪ್ರಿಲ್‌ನಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದಾಗ ಅತಿಶಿ, ‘ಬಿಜೆಪಿಗೆ ಸಂಬಂಧಿಸಿದ ನಾಯಕರು ನನ್ನ ಮತ್ತು ಇತರ ಎಎಪಿ ನಾಯಕರನ್ನು ಸಂಪರ್ಕಿಸಿ, ಪಕ್ಷಕ್ಕೆ ಸೇರಬೇಕೆಂದು ಒತ್ತಾಯಿಸಿದ್ದರು. ಇಲ್ಲದಿದ್ದರೆ ಒಂದು ತಿಂಗಳೊಳಗೆ ಜಾರಿ ನಿರ್ದೇಶನಾಲಯದಿಂದ ಬಂಧನ ಎದುರಿಸಬೇಕಾಗುತ್ತದೆ ಎಂದಿದ್ದರೆಂದು ಆರೋಪಿಸಿದ್ದರು.

  • ದೆಹಲಿ ಮಾಜಿ ಸಿಎಂ ಕೇಜ್ರಿವಾಲ್‌ ಬಳಿ ಸ್ವಂತ ಮನೆ, ಕಾರು ಇಲ್ಲ

    ದೆಹಲಿ ಮಾಜಿ ಸಿಎಂ ಕೇಜ್ರಿವಾಲ್‌ ಬಳಿ ಸ್ವಂತ ಮನೆ, ಕಾರು ಇಲ್ಲ

    * 1.7 ಕೋಟಿ ಆಸ್ತಿ ಘೋಷಿಸಿಕೊಂಡ ಕೇಜ್ರಿವಾಲ್‌ – ಯಾರಿಂದಲೂ ಸಾಲ ಪಡೆದಿಲ್ಲ

    ನವದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಆಸ್ತಿ ವಿವರ ಘೋಷಿಸಿಕೊಂಡಿದ್ದಾರೆ.

    ಕೇಜ್ರಿವಾಲ್‌ ಅವರು ನವದೆಹಲಿ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆಸ್ತಿ ವಿವರ ಘೋಷಿಸಿದ್ದಾರೆ. ಮಾಜಿ ಸಿಎಂ ಬಳಿ 40,000 ರೂ. ನಗದು ಹಾಗೂ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಬಳಿ 32,000 ನಗದು ಇದೆ ಎಂದು ವರದಿ ಮಾಡಿದ್ದಾರೆ. ಅವರ ಚರ ಆಸ್ತಿ 3.46 ಲಕ್ಷ ರೂ., ಸುನೀತಾ ಅವರ ಚರ ಆಸ್ತಿ 1 ಕೋಟಿ ರೂ. ಇದೆ.

    ಮಾಜಿ ಸಿಎಂ ಕೇಜ್ರಿವಾಲ್ ಕೂಡ 1.7 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿ ಹೊಂದಿದ್ದಾರೆ. ಸುನೀತಾ 1.5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಅರವಿಂದ್ ಕೇಜ್ರಿವಾಲ್ ಬಳಿ ಸ್ವಂತ ಕಾರು ಅಥವಾ ಮನೆ ಇಲ್ಲ. ಆದರೆ, ಸುನೀತಾ 2017 ರ ಮಾಡೆಲ್ ಮಾರುತಿ ಬಲೆನೊ ಕಾರು ಹೊಂದಿದ್ದಾರೆ.

    ಸುನೀತಾ ಬಳಿ 320 ಗ್ರಾಂ ಚಿನ್ನ ಸೇರಿದಂತೆ 25.9 ಲಕ್ಷ ರೂ. ಮೌಲ್ಯದ ಆಭರಣಗಳಿವೆ ಎಂದು ಅಫಿಡವಿಟ್ ಬಹಿರಂಗಪಡಿಸಿದೆ. ದಂಪತಿ ಯಾವುದೇ ರೀತಿಯ ಸಾಲ ಮಾಡಿಲ್ಲ.

    2023-24ರ ಆದಾಯಕ್ಕೆ ಸಂಬಂಧಿಸಿದಂತೆ, ಕೇಜ್ರಿವಾಲ್‌ಗೆ ಶಾಸಕಾಂಗ ವೇತನದಿಂದ 7,21,530 ರೂ. ಬರುತ್ತದೆ. ಸುನೀತಾ ಅವರ ಪಿಂಚಣಿಯಿಂದ 14,10,740 ರೂ. ಗಳಿಸಿದ್ದಾರೆ. ಸುನೀತಾ ಗುರುಗ್ರಾಮದಲ್ಲಿ ಒಂದು ಮನೆಯನ್ನು ಹೊಂದಿದ್ದಾರೆ ಎಂದು ಅಫಿಡವಿಟ್ ಬಹಿರಂಗಪಡಿಸುತ್ತದೆ.

    ಕೇಜ್ರಿವಾಲ್‌ 14 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ 2014 ರ ಅಮೇಥಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಒಂದು ಪ್ರಕರಣ ಮತ್ತು ದೆಹಲಿ ಅಬಕಾರಿ ನೀತಿಯ ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಇತರ ಪ್ರಕರಣಗಳು ಸೇರಿವೆ.

    ಫೆ.5 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಬುಧವಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಬಾಕಿ ಇರುವ ಪ್ರಕರಣಗಳನ್ನು ಬಹಿರಂಗಪಡಿಸಲಾಗಿದೆ. 2020 ರ ಚುನಾವಣಾ ಅಫಿಡವಿಟ್‌ನಲ್ಲಿ, ಕೇಜ್ರಿವಾಲ್ 13 ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಉಲ್ಲೇಖಿಸಿದ್ದರು.

  • ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ – ಸರ್ಕಾರದ ಬೊಕ್ಕಸಕ್ಕೆ 2,026 ಕೋಟಿ ನಷ್ಟ: ಸಿಎಜಿ ವರದಿ

    ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ – ಸರ್ಕಾರದ ಬೊಕ್ಕಸಕ್ಕೆ 2,026 ಕೋಟಿ ನಷ್ಟ: ಸಿಎಜಿ ವರದಿ

    ನವದೆಹಲಿ: ದೆಹಲಿ ಮದ್ಯ ನೀತಿ (Delhi Liquor Policy) ಅಕ್ರಮದಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 2,026 ಕೋಟಿ ರೂ. ಆದಾಯ ನಷ್ಟವಾಗಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ವರದಿ ಬಹಿರಂಗಪಡಿಸಿದೆ.

    ಮದ್ಯ ನೀತಿಯಲ್ಲಿ ಬಹಳಷ್ಟು ಲೋಪದೋಷಗಳು ಕಂಡುಬಂದಿದ್ದು, ಪರವಾನಗಿ ನೀಡುವಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ವರದಿಯಲ್ಲಿ ಕಂಡುಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ – ಕರಾಳ ಅನುಭವ ಬಿಚ್ಚಿಟ್ಟ ದಲಿತ ಬಾಲಕಿ

    ಈ ಹಿಂದೆ ಕೇಜ್ರಿವಾಲ್‌ ನೇತೃತ್ವದ ಸರ್ಕಾರ (Kejriwal’s Government) ಜಾರಿಗೊಳಿಸಿದ್ದ ಮದ್ಯ ನೀತಿಯು ಉದ್ದೇಶಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ. ಮುಖ್ಯವಾಗಿ ಆಪ್‌ ನಾಯಕರು ಕಿಕ್‌ಬ್ಯಾಕ್‌ ಲಾಭ ಪಡೆದಿದ್ದಾರೆ. ಮದ್ಯ ನೀತಿ ಅನುಷ್ಠಾನಗೊಳಿಸುವಲ್ಲಿ ಅಂದಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದ ಸಚಿವರ ಗುಂಪು ತಜ್ಞರ ಸಮಿತಿಯ ಶಿಫಾರಸುಗಳನ್ನು ಕಡೆಗಣಿಸಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮದ್ವೆಯಾಗುವಂತೆ ಒತ್ತಡ – ಲಿವ್‌ ಇನ್‌ ಗೆಳತಿ ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಸೈಕೋ

    ಹೊಸ ಮದ್ಯ ನೀತಿ ದೆಹಲಿಯ ವಿಧಾನಸಭೆಯಲ್ಲಿ ಮಂಡನೆಯಾಗದೆಯೇ ಜಾರಿಗೆ ತರಲಾಗಿದೆ. ನೀತಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕ್ಯಾಬಿನೆಟ್ ಅಥವಾ ರಾಜ್ಯಪಾಲರ ಅನುಮೋದನೆಯಿಲ್ಲದೆ ತೆಗೆದುಕೊಳ್ಳಲಾಗಿದೆ. ಎಲ್ಲಾ ಘಟಕಗಳಿಗೆ ಬಿಡ್‌ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೇ ಬಿಡ್‌ ದಾರರ ಆರ್ಥಿಕ ಪರಿಸ್ಥಿತಿಯನ್ನೂ ಪರಿಶೀಲಿಸಿರಲಿಲ್ಲ. ಇದರೊಂದಿಗೆ ಹೆಚ್ಚುವರಿಯಾಗಿ ನಿಯಮ ವಿಧಿಸುವವರಿಗೆ ಉದ್ದೇಶಪೂರ್ವಕವಾಗಿ ದಂಡ ವಿಧಿಸುವುದನ್ನು ಕೈಬಿಡಲಾಗಿದೆ ಎಂದು ಸಿಎಜಿ ವರದಿ ಹೇಳಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂವು

    ಏನಿದು ಹಗರಣ?
    ಕೋವಿಡ್‌ 2ನೇ ಅಲೆ ಉತ್ತುಂಗದಲ್ಲಿದ್ದಾಗ ಮನೀಶ್ ಸಿಸೋಡಿಯಾ 2021ರ ಏಪ್ರಿಲ್‌ನಲ್ಲಿ ಕ್ಯಾಬಿನೆಟ್‌ ಅನುಮೋದನೆ ಇಲ್ಲದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ಪರವಾನಗಿ ಶುಲ್ಕವನ್ನು ಮನ್ನಾ ಮಾಡಲು ಆದೇಶ ಹೊರಡಿಸುತ್ತಾರೆ. ಈ ಮಹತ್ವದ ನಿರ್ಧಾರದ ಬಳಿಕ ಮೇ ತಿಂಗಳಿನಲ್ಲಿ ಕೇಜ್ರಿವಾಲ್‌ ನೇತೃತ್ವದ ಕ್ಯಾಬಿನೆಟ್‌ ಸಭೆ ಕರೆದು ಅಬಕಾರಿ ನೀತಿಯಲ್ಲಿ ಬದಲಾವಣೆ ಮಾಡುತ್ತದೆ. ಮದ್ಯವನ್ನು ಮನೆಗ ಹೋಮ್‌ ಡೆಲಿವರಿ ಮಾಡಬಹುದು ಅಷ್ಟೇ ಅಲ್ಲದೇ ಮದ್ಯದ ಅಂಗಡಿಗಳನ್ನು ಬೆಳಗಿನ ಜಾವ 3 ಗಂಟೆಯವರೆಗೆ ತೆರೆಯಬಹುದು. ಪರವಾನಗಿದಾರರು ಅನಿಯಮಿತ ರಿಯಾಯಿತಿಗಳನ್ನು ನೀಡಲು ನೀತಿ ಅನುಮತಿ ಕಲ್ಪಿಸಿತ್ತು.

    ಲೆಫ್ಟಿನೆಂಟ್‌ ಗವರ್ನರ್‌ ಅವರು ಕ್ಯಾಬಿನೆಟ್‌ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ದೆಹಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯುತ್ತದೆ. ಆದರೆ ಸಿಸೋಡಿಯಾ ಕೈಗೊಂಡ ನಿರ್ಧಾರ ಮುಂದುವರಿಯುತ್ತದೆ. ಸರ್ಕಾರದ ನಿರ್ಧಾರ ಬಗ್ಗೆ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ಲೆಫ್ಟಿನೆಂಟ್‌ ಗವರ್ನರ್‌ ಬಳಿ ದೂರು ನೀಡುತ್ತಾರೆ. ಸಿಸೋಡಿಯಾ ನಿರ್ಧಾರದಿಂದ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ. ವಿಸ್ಕಿ ಮತ್ತು ವೈನ್‌ ಮಾರಾಟ ಅನುಕ್ರಮವಾಗಿ 60% ಮತ್ತು 87%ರಷ್ಟು ಭಾರೀ ಏರಿಕೆಯಾಗಿದ್ದರೂ ಆದಾಯ 80% ರಷ್ಟು ಇಳಿಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸುತ್ತಾರೆ.

    ಕೇಜ್ರಿವಾಲ್‌- ಸಿಸೋಡಿಯಾ ಅವರು ಲೆಫ್ಟಿನೆಂಟ್‌ ಗವರ್ನರ್‌ ಗಮನಕ್ಕೆ ತಾರದೇ ತುರ್ತು ಕ್ಯಾಬಿನೆಟ್‌ ಸಭೆಯನ್ನು ಕರೆಯುತ್ತಾರೆ. ಸಿಸೋಡಿಯಾ ಅಕ್ರಮವಾಗಿ ಹೊರಡಿಸಿದ ಆದೇಶವನ್ನು ಸಕ್ರಮ ಮಾಡಲು ಕ್ಯಾಬಿನೆಟ್‌ನಲ್ಲಿ ಪ್ರಯತ್ನ ಮಾಡಲಾಗುತ್ತದೆ. ಈ ನಿರ್ಧಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಭಾರೀ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸುತ್ತದೆ. ವಿರೋಧ ವ್ಯಕ್ತವಾಗುತ್ತಿದ್ದಂತೆ 2022ರ ಜುಲೈನಲ್ಲಿ ಮದ್ಯ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್‌ ಗವರ್ನರ್‌ ಅವರು ಆದೇಶ ಹೊರಡಿಸುತ್ತಾರೆ. 2022ರ ಜುಲೈನಲ್ಲಿ ಕೇಜ್ರಿವಾಲ್‌ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಬಕಾರಿ ನೀತಿಯನ್ನು ಹಿಂದಕ್ಕೆ ಪಡೆಯುತ್ತದೆ.

  • ಜನ ಕೋವಿಡ್‌ ವಿರುದ್ಧ ಹೋರಾಡುತ್ತಿರುವಾಗ ʻಶೀಷ್‌ ಮಹಲ್‌ʼ ನವೀಕರಣ – ಮೋದಿ ಮತ್ತೆ ಕಿಡಿ

    ಜನ ಕೋವಿಡ್‌ ವಿರುದ್ಧ ಹೋರಾಡುತ್ತಿರುವಾಗ ʻಶೀಷ್‌ ಮಹಲ್‌ʼ ನವೀಕರಣ – ಮೋದಿ ಮತ್ತೆ ಕಿಡಿ

    – ಶೀಷ್‌ ಮಹಲ್‌ಗೆ ಒಟ್ಟು 33 ಕೋಟಿ ರೂ. ಖರ್ಚು – ವರದಿ ಸ್ಫೋಟ

    ನವದೆಹಲಿ: ದೆಹಲಿ ಚುನಾವಣೆಗೆ ದಿನಗಳು ಸಮೀಪವಾಗುತ್ತಿರುವಾಗಲೇ ʻಶೀಷ್‌ ಮಹಲ್‌ʼ ಜಟಾಪಟಿ ತೀವ್ರಗೊಂಡಿದೆ. ಭಾನುವಾರ ದೆಹಲಿಯ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುವ ವೇಳೆ ಪ್ರಧಾನಿ ಮೋದಿ ಮತ್ತೆ ಶೀಷ್‌ ಮಹಲ್‌ ಉಲ್ಲೇಖಿಸಿ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಮಾತನಾಡಿದ ಅವರು, ದೆಹಲಿ ಸಿಎಂ ನಿವಾಸದ ನವೀಕರಣ ವೆಚ್ಚವು ಮೂರು ಪಟ್ಟು ಹೆಚ್ಚಾಗಿದೆ. ಅದರಲ್ಲೂ ದೆಹಲಿ ಕೋವಿಡ್‌ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಶೀಷ್‌ಮಹಲ್‌ ನವೀಕರಣ ಕಾರ್ಯ ನಡೆದಿದೆ ಎಂದು ಹೇಳಿದ್ದಾರೆ.

    ಮುಂದುವರಿದು, ಎಎಪಿ ಸರ್ಕಾರ ರಾಜಧಾನಿಯಲ್ಲಿ ಕೇಂದ್ರದ ಜೊತೆಗೆ ಸಂಘರ್ಷ ಮಾಡುತ್ತಲೇ 1 ದಶಕ ಪೋಲು ಮಾಡಿತು. ಇಲ್ಲಿ ಅಭಿವೃದ್ಧಿ ಯೋಜನೆಗಳ ಸಾಕಾರಕ್ಕಾಗಿ ಬಿಜೆಪಿಗೆ ಒಂದು ಅವಕಾಶ ಕಲ್ಪಿಸಬೇಕು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಯಾವುದೇ ಜನಕಲ್ಯಾಣ ಯೋಜನೆ ಸ್ಥಗಿತಗೊಳಿಸುವುದಿಲ್ಲ. ಜೊತೆಗೆ ಜನಕಲ್ಯಾಣ ಯೋಜನೆ ಹೆಸರಿನಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನೂ ನಿರ್ಮೂಲನೆಗೊಳಿಸಲಿದೆ. ಎಎಪಿ ಸರ್ಕಾರ ದೆಹಲಿಯ ಪಾಲಿಗೆ ವಿಪತ್ತು. ದೆಹಲಿಯು ಈ ವಿಪತ್ತಿನಿಂದ ಪಾರಾದ ನಂತರವೇ ಅಭಿವೃದ್ಧಿಯ ಡಬಲ್ ಎಂಜಿನ್ ಇಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಭರವಸೆ ನೀಡಿದರು.

    ಈ ನಡುವೆ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಸಹ ಶೀಷ್‌ ಮಹಲ್‌ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಕಳೆದ ವರ್ಷ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಲೆಕ್ಕಪರಿಶೋಧನಾ ಸಂಸ್ಥೆಯಿಂದ ಅಂತಿಮಗೊಳಿಸಲಾದ ರಾಜ್ಯಗಳಿಗೆ ಸಂಬಂಧಿಸಿದ ಅನೇಕ ವರದಿಗಳನ್ನ ಆಪ್‌ ವಿಧಾನ ಸಭೆಯಲ್ಲಿ ಮಂಡಿಸಿಲ್ಲ. ಏಕೆಂದರೆ ಆಪ್‌ ಅದನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ತಡೆಯುತ್ತಿದೆ ಎಂದು ಕಿಡಿ ಕಾರಿದರು.

    ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಹರಿಯಾಣ, ಒಡಿಶಾ, ಕರ್ನಾಟಕ ಮತ್ತು ಮಧ್ಯಪ್ರದೇಶಗಳಿಗೆ ಸಂಬಂಧಿಸಿದ ಇತ್ತೀಚಿನ ವರದಿಗಳು C&AG ವೆಬ್‌ಸೈಟ್‌ನಲ್ಲಿ ಲಭ್ಯವಿವೆ. C&AG ತನ್ನ ವರದಿಗಳನ್ನು ರಾಜ್ಯಗಳಿಗೆ ಕಳುಹಿಸುತ್ತದೆ. ಆದರೆ ಅವುಗಳನ್ನು ವಿಧಾನಸಭೆಯಲ್ಲಿ ಮಂಡಿಸಿದ ನಂತರವೇ ಸಾರ್ವಜನಿಕಗೊಳಿಸುತ್ತದೆ ಎಂದು ಹೇಳಿದ್ದಾರೆ.

    33 ಕೋಟಿ ರೂ. ಖರ್ಚು:
    ಈ ನಡುವೆ ಶೀಷ್‌ ಮಹಲ್‌ಗೆ ಬಳಕೆ ಮಾಡಲಾದ ಅಂದಾಜು ವೆಚ್ಚದ ವರದಿಗಳು ಸ್ಫೋಟಗೊಂಡಿವೆ. ಅರವಿಂದ್‌ ಕೇಜ್ರಿವಾಲ್‌ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಶೀಷ್‌ ಮಹಲ್‌ ಅನ್ನು ಮೂರು ಬಾರಿ ನವೀಕರಣಗೊಳಿಸಿದ್ದಾರೆ. ಇದರಿಂದ ಒಟ್ಟು 33.66 ಕೋಟಿ ರೂ. ಖರ್ಚಾಗಿದೆ ಎನ್ನಲಾಗಿದೆ.

    ಶೀಷ್‌ಮಹಲ್‌ ಆವರಣದ 6 ಫ್ಲಾಗ್ ಸ್ಟಾಫ್ ರಸ್ತೆ, ಕಚೇರಿ ಮತ್ತು ಆವರಣದ ನವೀಕರಣದಿಂದ ಒಟ್ಟು ವೆಚ್ಚ ದುಬಾರಿಯಾಗಿದೆ. ಶೀಷ್‌ಮಹಲ್‌ ಪ್ರಾಥಮಿಕ ವೆಚ್ಚ 7.91 ಕೋಟಿ ರೂ. ಅಂತ ಅಂದಾಜಿಸಲಾಗಿತ್ತು, ಅದ್ರೆ 2020ರಲ್ಲಿ 8.62 ಕೋಟಿ ರೂ.ಗಳನ್ನು ನೀಡಲಾಯಿತು. 2022ರಲ್ಲಿ ಲೋಕೋಪಯೋಗಿ ಇಲಾಖೆ ಕಾಮಗಾರಿಯನ್ನು ಪೂರ್ಣಗೊಳಿಸಿದಾಗ ಒಟ್ಟು ವೆಚ್ಚ 33.66 ಕೋಟಿ ರೂ. ತಲುಪಿದೆ. ಅಂದಿನ ಕಂಟ್ರೋಲರ್‌ ಮತ್ತು ಆಡಿಟರ್‌ ಜನರಲ್‌ ಗಿರೀಶ್‌ ಚಂದ್ರ ಮುರ್ಮು ಅವರ ವರದಿಯಲ್ಲಿ ಈ ಅಂಶಗಳನ್ನು ದಾಖಲಿಸಿದ್ದಾರೆ. ಮುರ್ಮು ಅವರು 2024ರ ನವೆಂಬರ್‌ 20ರಂದು ಅಧಿಕಾರ ತ್ಯಜಿಸುವ ಒಂದು ವಾರದ ಮೊದಲು ಈ ವರದಿಗೆ ಸಹಿ ಹಾಕಿದ್ದರು ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

  • Delhi Assembly Election | 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

    Delhi Assembly Election | 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

    ನವದೆಹಲಿ: ವಿಧಾನಸಭೆ ಚುನಾವಣೆ (Delhi Assembly Elections) ಹಿನ್ನೆಲೆ ಕಾಂಗ್ರೆಸ್‌, ಆಪ್ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ (BJP Candidate First List) ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 29 ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾಲ್ಕಾಜಿಯಲ್ಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ಹಿರಿಯ ನಾಯಕ ರಮೇಶ್ ಬಿಧುರಿ, ನವದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಮಾಜಿ ಸಂಸದ ಪರ್ವೇಶ ವರ್ಮಾ ಅವರನ್ನು ಕಣಕ್ಕಿಳಿಸಿದೆ.

    ಬಿಜೆಪಿ ತನ್ನ ಗಾಂಧಿನಗರ ಶಾಸಕ ಅನಿಲ್ ಬಾಜ್‌ಪೇಯ್ ಅವರನ್ನು ಕೈಬಿಟ್ಟು ದೆಹಲಿಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿಗೆ ಟಿಕೆಟ್ ನೀಡಿದೆ. ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ (Congress Government) 2003 ರಿಂದ 2013ರ ವರೆಗೆ ಸಚಿವರಾಗಿದ್ದ ಲವ್ಲಿ ಕಳೆದ ವರ್ಷ ಬಿಜೆಪಿ ಸೇರಿದ್ದರು. ಮತ್ತೋರ್ವ ದೆಹಲಿಯ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕರಾಗಿದ್ದ ರಾಜ್‌ಕುಮಾರ್ ಚೌಹಾಣ್ ಅವರಿಗೆ ಬಿಜೆಪಿ ಮಂಗೋಲ್‌ಪುರಿಯಿಂದ ಟಿಕೆಟ್ ನೀಡಲಾಗಿದೆ.

    ಎಎಪಿ ಮಾಜಿ ಸಚಿವ, ಕೇಜ್ರಿವಾಲ್ ಆಪ್ತರಾಗಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಯಿಂದ ನಜಾಫ್‌ಗಢ್ ಬದಲಿಗೆ ಬಿಜ್ವಾಸನ್‌ನಿಂದ ಕಣಕ್ಕಿಳಿದಿದ್ದರೆ, ರಾಜ್ ಕುಮಾರ್ ಆನಂದ್ ಪಟೇಲ್ ನಗರದಿಂದ ಟಿಕೆಟ್ ಪಡೆದಿದ್ದಾರೆ. ಎಎಪಿಯಿಂದ ಬಿಜೆಪಿಗೆ ತೆರಳಿದ್ದ ಶಾಸಕ ಕರ್ತಾರ್ ಸಿಂಗ್ ತನ್ವಾರ್ ಅವರ ಛತ್ತರ್‌ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

    ವಿಪಕ್ಷದ ನಾಯಕ ವಿಜೇಂದರ್ ಗುಪ್ತಾ, ಓಂ ಪ್ರಕಾಶ್ ಶರ್ಮಾ, ಅಜಯ್ ಮಹಾವರ್ ಮತ್ತು ಜಿತೇಂದರ್ ಮಹಾಜನ್ ಸೇರಿದಂತೆ ಬಿಜೆಪಿಯ ಹಾಲಿ ಶಾಸಕರು ಕ್ರಮವಾಗಿ ರೋಹಿಣಿ, ವಿಶ್ವಾಸ್ ನಗರ, ಘೋಂಡಾ ಮತ್ತು ರೋಹ್ತಾಸ್ ನಗರದಿಂದ ಸ್ಪರ್ಧಿಸಲಿದ್ದಾರೆ. ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಮಾಳವೀಯಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಮನೋಜ್ ಶೋಕೀನ್ ನಂಗ್ಲೋಯ್ ಜಾಟ್‌ನಿಂದ ಕಣಕ್ಕಿಳಿದಿದ್ದಾರೆ.

    ಎಎಪಿ ಈಗಾಗಲೇ ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಇದುವರೆಗೆ 47 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ‌.