Tag: ಎಐಎಂಐಎಂ

  • ಅಕ್ಬರುದ್ದೀನ್‌ ಓವೈಸಿಗೆ ಹಂಗಾಮಿ ಸ್ಪೀಕರ್‌ ಪಟ್ಟ – ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು

    ಅಕ್ಬರುದ್ದೀನ್‌ ಓವೈಸಿಗೆ ಹಂಗಾಮಿ ಸ್ಪೀಕರ್‌ ಪಟ್ಟ – ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು

    ಹೈದರಾಬಾದ್: ಎಐಎಂಐಎಂ‌ (AIMIM) ಪಕ್ಷದ ಅಕ್ಬರುದ್ದೀನ್ ಓವೈಸಿ ಅವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದನ್ನು ವಿರೋಧಿಸಿ ತೆಲಂಗಾಣ ಬಿಜೆಪಿ ಇಂದು (ಶುಕ್ರವಾರ) ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ. ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸುವ ಜವಾಬ್ದಾರಿಯನ್ನು ಹಂಗಾಮಿ ಸ್ಪೀಕರ್‌ಗೆ ವಹಿಸಲಾಗಿತ್ತು.

    ವಿಧಾನಸಭಾ ಚುನಾವಣೆಯಲ್ಲಿ ಗೋಶಾಮಹಲ್‌ನಿಂದ ಗೆದ್ದಿದ್ದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರು, ಎಐಎಂಐಎಂ ಮುಂದೆ ಜೀವಂತ ಇರುವವರೆಗೂ ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ವೀಡಿಯೋ ಸಂದೇಶದಲ್ಲಿ ಹೇಳಿದ್ದಾರೆ. ಪೂರ್ಣಾವಧಿ ಸ್ಪೀಕರ್ ನೇಮಕವಾದ ಬಳಿಕವಷ್ಟೇ ಪ್ರಮಾಣ ವಚನ ಸ್ವೀಕರಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ತೆಲಂಗಾಣ ಹಂಗಾಮಿ ಸ್ಪೀಕರ್‌ ಆಗಿ AIMIM ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ

    ಈ ಹಿಂದೆ ಹಿಂದೂ ವಿರೋಧಿ ಹೇಳಿಕೆ ನೀಡಿದ ವ್ಯಕ್ತಿಯ (ಅಕ್ಬರುದ್ದೀನ್ ಓವೈಸಿ) ಮುಂದೆ ನಾನು ಪ್ರಮಾಣ ವಚನ ಸ್ವೀಕರಿಸಬಹುದೇ ಎಂದು ರಾಜಾ ಸಿಂಗ್ ಕೇಳಿದ್ದಾರೆ. ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಎಂಟು ಸ್ಥಾನಗಳನ್ನು ಗೆದ್ದಿತ್ತು. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ಮಾತನಾಡಿ, ಹಿರಿಯ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ಸಂಪ್ರದಾಯ. ಅದಕ್ಕೆ ವಿರುದ್ಧವಾದ ಓವೈಸಿ ನೇಮಕವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ನಿಲುವು ವ್ಯಕ್ತಪಡಿಸಿದ್ದಾರೆ.

    ಒವೈಸಿ ಅವರು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಚುನಾಯಿತ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಬಿಜೆಪಿ ಶಾಸಕರು ಸಮಾರಂಭ ಬಹಿಷ್ಕರಿಸಿದ್ದಾರೆ. ಇದನ್ನೂ ಓದಿ: ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

    ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿರುವ ಕಾಂಗ್ರೆಸ್‌ನ ರೇವಂತ್ ರೆಡ್ಡಿ ಅವರು ತಮ್ಮ ಹಿಂದಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಂತೆ ಎಐಎಂಐಎಂಗೆ ಹೆದರುತ್ತಾರೆ. ಹೀಗಾಗಿ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ರಾಜಾ ಸಿಂಗ್ ಆರೋಪಿಸಿದ್ದಾರೆ.

    ಹಂಗಾಮಿ ಸ್ಪೀಕರ್ ಮಾಡಬಹುದಾದ ಅನೇಕ ಹಿರಿಯ ಶಾಸಕರಿದ್ದಾರೆ. ಆದರೆ ಹೊಸ ಮುಖ್ಯಮಂತ್ರಿ ಅಲ್ಪಸಂಖ್ಯಾತರು ಮತ್ತು ಎಐಎಂಐಎಂ ನಾಯಕರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

  • ತೆಲಂಗಾಣ ಹಂಗಾಮಿ ಸ್ಪೀಕರ್‌ ಆಗಿ AIMIM ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ

    ತೆಲಂಗಾಣ ಹಂಗಾಮಿ ಸ್ಪೀಕರ್‌ ಆಗಿ AIMIM ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ

    ಹೈದರಾಬಾದ್:‌ ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ರಾಜ್ಯ ವಿಧಾನಸಭೆಯ (Telangana Legislative Assembly) ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್‌ ಆಗಿ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ (Tamilisai Soundararajan) ಪ್ರಮಾಣ ವಚನ ಬೋಧಿಸಿದ್ದಾರೆ. ಇದನ್ನೂ ಓದಿ: ಶತ್ರು ಸೇನೆಗಳಿಂದ ರಕ್ಷಣೆಗೆ ಮಾಸ್ಟರ್‌ ಪ್ಲ್ಯಾನ್‌ – ಫೈಟರ್‌ ಜೆಟ್‌ಗಳಿಗೆ ಶೀಘ್ರವೇ ಬರಲಿದೆ ಡಿಜಿಟಲ್‌ ನಕ್ಷೆ

    ಭಾರತದ ಸಂವಿಧಾನದ 180ನೇ ವಿಧಿಯ ಷರತ್ತು (1) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ತೆಲಂಗಾಣ ರಾಜ್ಯಪಾಲರು ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ (Telangana Assembly Speaker), ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್‌ ಆಗಿ‌ ನೇಮಿಸುವವರೆಗೆ ಅಕ್ಬರುದ್ದೀನ್‌ ಸ್ಪೀಕರ್‌ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ. ಇದನ್ನೂ ಓದಿ: ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ತೆಲಂಗಾಣ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್‌ 64 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢವಾಗಿದ್ದ ಭಾರತ್‌ ರಾಷ್ಟ್ರ ಸಮಿತಿ 39 ಹಾಗೂ ಬಿಜೆಪಿ 8 ಸ್ಥಾನಗಳನ್ನ ಪಡೆದುಕೊಂಡಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಅಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ದೇಶದಲ್ಲಿ ಅತ್ಯಂತ ಕಿರಿಯ ವಯಸ್ಸಿಗೆ ಸಿಎಂ ಹುದ್ದೆ ಅಲಂಕರಿಸಿದ ಖ್ಯಾತಿ ಗಳಿಸಿದ್ದಾರೆ.

  • ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನೂ ತೆಗೆದುಹಾಕ್ತೀವಿ – ಅಮಿತ್‌ ಶಾ

    ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನೂ ತೆಗೆದುಹಾಕ್ತೀವಿ – ಅಮಿತ್‌ ಶಾ

    ಹೈದರಾಬಾದ್‌: ಭಾರತೀಯ ಜನತಾ ಪಕ್ಷವೂ (BJP) ಮುಸ್ಲಿಂ ಸಮುದಾಯಕ್ಕಿರುವ 4% ಮೀಸಲಾತಿಯನ್ನೂ (Muslim Reservation) ತೆಗೆದುಹಾಕುತ್ತೇವೆ. ಅದನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC-ST) ಹಾಗೂ ಇತರೇ ಹಿಂದುಳಿದ ವರ್ಗದ ಜನರಿಗೆ ಹಂಚುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

    ನವೆಂಬರ್‌ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ (Telangana Assembly Elections) ಹಿನ್ನೆಲೆಯಲ್ಲಿ ಜಗ್ತಿಯಾಲ್‌ನಲ್ಲಿ ಚುನಾವಣಾ ಪ್ರಚಾರಸಭೆ ನಡೆಯಿತು. ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾ, ಮುಸ್ಲಿಂ ಸಮುದಾಯಕ್ಕೆ ನೀಡಿರುವ 4% ಮೀಸಲಾತಿಯನ್ನೂ ತೆಗೆದುಹಾಕ್ತೇವೆ, ಎಂದರಲ್ಲದೇ ತೆಲಂಗಾಣದಲ್ಲಿರುವ ಮಾದಿಗ ಸಮುದಾಯಕ್ಕೆ ಎಸ್ಸಿ ವರ್ಗದ ಅಡಿಯಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಕಣ್ಣೀರಿಟ್ಟ ಕಿಂಗ್‌ ಕೊಹ್ಲಿ – ಪ್ರೀತಿಯ ಅಪ್ಪುಗೆ ನೀಡಿ ಸಾಂತ್ವನ ಹೇಳಿದ ಅನುಷ್ಕಾ

    ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಅವರು ಆಲ್‌ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಸಾದುದ್ದೀನ್‌ ಓವೈಸಿಗೆ ಹೆದರಿ ಹೈದರಾಬಾದ್‌ ವಿಮೋಚನಾ ದಿನವನ್ನು ಆಚರಿಸುತ್ತಿಲ್ಲ. ಆದ್ರೆ ನಾವು ಓವೈಸಿಗೆ ಹೆದರಲ್ಲ. ಮುಂದೆ ತೆಲಂಗಾಣದಲ್ಲಿ ಹೈದರಾಬಾದ್‌ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇದೇ ಕೊನೆಯಲ್ಲ, ನಾವು ಕಪ್‌ ಗೆಲ್ಲೋವರೆಗೂ ಇದು ಮುಗಿಯಲ್ಲ – ಗಿಲ್‌ ಭಾವುಕ

    ಅಲ್ಲದೇ ಭಾರತ್ ರಾಷ್ಟ್ರ ಸಮಿತಿ (BRS), ಎಐಎಂಐಎಂ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್‌ ಶಾ, ಈ ಎಲ್ಲಾ ಪಕ್ಷಗಳು 2G, 3G ಮತ್ತು 4G ಪಕ್ಷಗಳು. 2G ಎಂದರೆ ಕೆಸಿಆರ್ ಮತ್ತು ಕೆಟಿಆರ್, 3G ಅಂದ್ರೆ ಓವೈಸಿಯ ಅಜ್ಜ, ಅವರ ತಂದೆ ಮತ್ತು ಓವೈಸಿ, 4G ಅಂದ್ರೆ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ. ಅದರಲ್ಲಿ ನಿಮ್ಮಸ್ಥಾನ ಎಲ್ಲಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪೊಲೀಸರ ಮೇಲಿನ ಐನೂರು ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಿದ್ದೇನೆ: ಪರಮೇಶ್ವರ್‌

    ಇದೇ ವೇಳೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ತಿರಂಗವನ್ನು ಚಂದ್ರನ ಮೇಲೆ ಕೊಂಡೊಯ್ಯುವಂತೆ ಮಾಡಿದ್ದಾರೆ, ಹೊಸ ಸಂಸತ್‌ ಭವನ ಸ್ಥಾಪನೆಗೆ ಕಾರಣರಾಗಿದ್ದಾರೆ. ಜಿ20 ಶೃಂಗಸಭೆ ನೇತೃತ್ವ ವಹಿಸಿದ್ದಾರೆ. ಜೊತೆಗೆ ಭಾರತವನ್ನು ಆರ್ಥಿಕತೆಯಲ್ಲಿ 11ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಕೊಂಡೊಯ್ದು  ಸೃದೃಢ ರಾಷ್ಟ್ರವಾಗಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.

  • ಹೈದರಾಬಾದ್‌ನಲ್ಲಿ ಚುನಾವಣೆಗೆ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್‌ಗೆ ಓವೈಸಿ ಚಾಲೆಂಜ್

    ಹೈದರಾಬಾದ್‌ನಲ್ಲಿ ಚುನಾವಣೆಗೆ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್‌ಗೆ ಓವೈಸಿ ಚಾಲೆಂಜ್

    ಹೈದರಾಬಾದ್: ಈ ಬಾರಿ ವಯನಾಡ್ (Wayanad) ಅಲ್ಲ, ಈ ಬಾರಿ ಹೈದರಾಬಾದ್‌ನಿಂದ (Hyderabad) ಸ್ಪರ್ಧಿಸಿ ತೋರಿಸಿ ಎಂದು ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಸವಾಲೆಸೆದಿದ್ದಾರೆ.

    ಭಾನುವಾರ ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಓವೈಸಿ, ಅಬ್‌ಕಿ ಬಾರ್ ವಯನಾಡ್ ನಹಿ, ಅಬ್‌ಕಿ ಬಾದ್ ಹೈದರಾಬಾದ್ (ಈ ಬಾರಿ ವಯನಾಡ್ ಅಲ್ಲ, ಈ ಬಾರಿ ಹೈದರಾಬಾದ್). ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುತ್ತಲೇ ಇರುತ್ತೀರಿ. ಕಾಂಗ್ರೆಸ್‌ನವರು ಸಾಕಷ್ಟು ವಿಷಯಗಳನ್ನು ಹೇಳುತ್ತಾರೆ. ಈಗ ಮೈದಾನಕ್ಕೆ ಬಂದು ನನ್ನ ವಿರುದ್ಧ ಹೋರಾಡಿ. ನಾನು ಇದಕ್ಕೆ ಸಿದ್ಧನಿದ್ದೇನೆ ಎಂದು ರಾಹುಲ್ ಗಾಂಧಿಗೆ ಚಾಲೆಂಜ್ ನೀಡಿದ್ದಾರೆ.

    4 ಬಾರಿ ಹೈದರಾಬಾದ್‌ನ ಸಂಸದರಾಗಿರುವ ಅಸಾದುದ್ದೀನ್ ಓವೈಸಿ ವಿರುದ್ಧ ರಾಹುಲ್ ಗಾಂಧಿ ಕೆಲ ದಿನಗಳ ಹಿಂದೆ ವಾಗ್ದಾಳಿ ನಡೆಸಿದ್ದರು. ಕೇಂದ್ರ ತನಿಖಾ ಸಂಸ್ಥೆಗಳು ತನ್ನನ್ನು ತನಿಖೆ ಮಾಡುತ್ತಿಲ್ಲ ಎಂಬ ಅಂಶವನ್ನು ಎತ್ತಿ ತೋರಿಸುವ ಮೂಲಕ ಅವರು ಬಿಜೆಪಿಯ ಜೇಬಿನಲ್ಲಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ

    ಎಐಎಂಐಎಂ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಪ್ರತಿಪಕ್ಷಗಳ ಮೇಲೆ ಮಾತ್ರ ದಾಳಿ ಮಾಡಲಾಗುತ್ತಿದೆ. ಮೋದಿಯವರು ಎಂದಿಗೂ ತಮ್ಮ ಜನರ ಮೇಲೆ ದಾಳಿ ಮಾಡುವುದಿಲ್ಲ. ಅವರು ನಿಮ್ಮ ಸಿಎಂ ಮತ್ತು ಎಐಎಂಐಎಂ ನಾಯಕರನ್ನು ತಮ್ಮವರು ಎಂದು ಪರಿಗಣಿಸುತ್ತಾರೆ. ಆದ್ದರಿಂದ ಅವರ ವಿರುದ್ಧ ಯಾವುದೇ ಪ್ರಕರಣವಿಲ್ಲ ಎಂದು ತೆಲಂಗಾಣದಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.

    ತೆಲಂಗಾಣದಲ್ಲಿ ಕಾಂಗ್ರೆಸ್ ಕೇವಲ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ವಿರುದ್ಧ ಹೋರಾಡುತ್ತಿಲ್ಲ. ಬಿಜೆಪಿ ಮತ್ತು ಎಐಎಂಐಎಂ ವಿರುದ್ಧವೂ ಹೋರಾಡುತ್ತಿದೆ. ಅವರೆಲ್ಲರೂ ಪರಸ್ಪರ ಪ್ರತ್ಯೇಕ ಪಕ್ಷಗಳು ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ರಹಸ್ಯವಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Asian Games : ಶೂಟಿಂಗ್‌ನಲ್ಲಿ ವಿಶ್ವದಾಖಲೆ – ಚಿನ್ನ ಗೆದ್ದ ಭಾರತದ ಪುರುಷರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಗೆ ತಾಕತ್ತಿದ್ದರೆ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲಿ – ಓವೈಸಿ ಸವಾಲು

    ಬಿಜೆಪಿಗೆ ತಾಕತ್ತಿದ್ದರೆ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲಿ – ಓವೈಸಿ ಸವಾಲು

    ಹೈದರಾಬಾದ್: ಬಿಜೆಪಿಗೆ (BJP) ತಾಕತ್ತಿದ್ದರೆ ಚೀನಾದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸುವಂತೆ ಎಐಎಂಐಎಂ (AIMIM) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಸವಾಲು ಹಾಕಿದ್ದಾರೆ. ಬಿಜೆಪಿ ಮುಖಂಡ ಬಂಡಿ ಸಂಜಯ್ ಕುಮಾರ್ ಅವರ ಸರ್ಜಿಕಲ್ ಸ್ಟ್ರೈಕ್ (Surgical Strike) ಹೇಳಿಕೆಗೆ ಓವೈಸಿ ಟಾಂಗ್ ಕೊಟ್ಟಿದ್ದಾರೆ.

    ಸಂಗಾರೆಡ್ಡಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡನ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಮ್ಮದೇ ದೇಶದ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡುವುದಾಗಿ ಅವರು ಹೇಳುತ್ತಾರೆ. ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲಿ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!

    2020ರ ಹೈದರಾಬಾದ್ (Hyderabad) ಮುನ್ಸಿಪಲ್ ಚುನಾವಣೆಯ (Municipal Election) ವೇಳೆ ಬಂಡಿ ಸಂಜಯ್ ಕುಮಾರ್ ಅವರು, ಚುನಾವಣೆಯಲ್ಲಿ ಪಾಕಿಸ್ತಾನ (Pakistan), ಅಫ್ಘಾನಿಸ್ತಾನ ಅಥವಾ ರೋಹಿಂಗ್ಯಾ (Rohingya) ಸಮುದಾಯದ ಮತದಾರರನ್ನು ಒಳಗೊಂಡಿರಬಾರದು. ಒಮ್ಮೆ ನಾವು ಗೆದ್ದರೆ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ ಎಂದಿದ್ದರು. ಇದಕ್ಕೆ ಓವೈಸಿ ತಿರುಗೇಟು ನೀಡಿದ್ದಾರೆ.

    ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧವೂ ವಾಗ್ದಾಳಿ ನಡೆಸಿದ ಓವೈಸಿ, ರಾಜ್ಯದ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಮಂಜೂರಾಗಿದೆ. ಅದರ ಸ್ಟೇರಿಂಗ್ ನನ್ನ ಕೈಯಲ್ಲಿದೆ ಎಂದು ಅಮಿತ್ ಶಾ ಹೇಳುತ್ತಾರೆ. ಮತ್ಯಾಕೆ ಈ ಬಗ್ಗೆ ಅವರು ಚಿಂತಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ನಿರ್ಗತಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಬಂದು ಕೂಡಿಹಾಕಿದ್ದ ದುರುಳ ಅರೆಸ್ಟ್ – 18 ಕಾರ್ಮಿಕರ ರಕ್ಷಣೆ

  • ರಾಮ ಮಂದಿರದ ಹೊರಗೆ ಗಲಾಟೆ- ಉದ್ರಿಕ್ತರಿಂದ ಪೊಲೀಸ್ ವಾಹನಕ್ಕೆ ಬೆಂಕಿ

    ರಾಮ ಮಂದಿರದ ಹೊರಗೆ ಗಲಾಟೆ- ಉದ್ರಿಕ್ತರಿಂದ ಪೊಲೀಸ್ ವಾಹನಕ್ಕೆ ಬೆಂಕಿ

    ಮುಂಬೈ: ಇಬ್ಬರ ನಡುವೆ ಗಲಾಟೆ ನಡೆದು, ನೆರೆದಿದ್ದ ಜನ ಕಲ್ಲು ತೂರಾಟ ನಡೆಸಿ ಖಾಸಗಿ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಛತ್ರಪತಿ ಸಂಭಾಜಿನಗರದ (Chhatrapati Sambhajinagar) ಕಿರದಪುರದ (Kiradpura) ರಾಮಮಂದಿರದ ಹೊರಗೆ ಬುಧವಾರ ರಾತ್ರಿ ನಡೆದಿದೆ.

    ಪೊಲೀಸರು ಅಶ್ರವಾಯು ಸಿಡಿಸಿ ಉದ್ರಿಕ್ತ ಗುಂಪನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನಗಳಿಗೆ ತಗುಲಿದ್ದ ಬೆಂಕಿಯನ್ನು ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಿ ಆರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣ – ಜೆಡಿಎಸ್ ಶಾಸಕ ಗೌರಿಶಂಕರಗೆ ಅನರ್ಹತೆಯ ಭೀತಿ

     

    ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ನಿಖಿಲ್ ಗುಪ್ತಾ ತಿಳಿಸಿದ್ದಾರೆ.

    ಔರಂಗಾಬಾದ್ (Aurangabad) ಸಂಸದ ಇಮ್ತಿಯಾಜ್ ಜಲೀಲ್ ರಾಮ ಮಂದಿರಕ್ಕೆ (Ram temple) ತೆರಳಿದ್ದ ವೀಡಿಯೋ ಒಂದನ್ನು ಎಐಎಂಐಎಂನ (AIMIM) ರಾಷ್ಟ್ರೀಯ ಕಾರ್ಪೋರೇಟರ್ ಮೊಹಮ್ಮದ್ ನಾಸಿರುದ್ದೀನ್ ಹಂಚಿಕೊಂಡಿದ್ದರು. ಇದನ್ನು ಕೆಲವು ಕಿಡಿಗೇಡಿಗಳು ದೇವಾಲಯದ ಮೇಲೆ ದಾಳಿ ಎಂದು ಬಿಂಬಿಸಿ ಹಂಚಿಕೊಂಡಿದ್ದರು.

    ಸುಳ್ಳು ಸುದ್ದಿಗಳನ್ನು ಪೊಲೀಸರು ಸಾಮಾಜಿಕ ಜಾಲತಾಣಗಳಿಂದ ತೆಗೆಸಿದ್ದು. ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಳ್ಳನೆಂದು ಶಂಕಿಸಿ ಹತ್ಯೆ- ಇಬ್ಬರ ಬಂಧನ

  • ಓವೈಸಿ ಪಕ್ಷದ ನಾಯಕನ ಕಚೇರಿಯಲ್ಲೇ ವಿದ್ಯಾರ್ಥಿ ಕೊಲೆ

    ಓವೈಸಿ ಪಕ್ಷದ ನಾಯಕನ ಕಚೇರಿಯಲ್ಲೇ ವಿದ್ಯಾರ್ಥಿ ಕೊಲೆ

    ಹೈದರಾಬಾದ್: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷದ ಸ್ಥಳೀಯ ಕಾರ್ಪೋರೇಟರ್ ಕಚೇರಿಯಲ್ಲಿ ವಿದ್ಯಾರ್ಥಿಯೊಬ್ಬನ ಹತ್ಯೆಯಾಗಿದೆ (Murder).

    ಹೈದರಾಬಾದ್‌ನ ಲಲಿತಾಬಾಗ್ ಪ್ರದೇಶದಲ್ಲಿರುವ ಕಚೇರಿಯಲ್ಲಿ ಕೊಲೆ ನಡೆದಿದೆ. ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಕಾರ್ಪೊರೇಟರ್ ಸಂಬಂಧಿ 22 ವರ್ಷದ ವಿದ್ಯಾರ್ಥಿ (Student) ಮುರ್ತಾಜಾ ಅನಸ್ ಎಂದು ಗುರುತಿಸಿದ್ದಾರೆ. ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ.

    CRIME 2

    ಇತ್ತೀಚೆಗೆ ಅಸಾದುದ್ದೀನ್ ಓವೈಸಿ (Asaduddin Owaisi), 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ತಮ್ಮ ಪಕ್ಷ ಪ್ರತಿನಿಧಿಸುವುದಾಗಿ ಹೇಳಿದ್ದರು. ಕರ್ನಾಟದ 13 ಕ್ಷೇತ್ರಗಳಲ್ಲಿ ಎಐಎಂಐಎಂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಘೋಷಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ದೇಶದಲ್ಲೇ ಅಪಖ್ಯಾತಿ ಹೊಂದಿದ್ದ ನಿಮ್ಮಿಂದ ಪಾಠ ಕಲಿಯಬೇಕಿಲ್ಲ – ಅಮಿತ್ ಶಾ ವಿರುದ್ಧ ಓವೈಸಿ ಕಿಡಿ

    ದೇಶದಲ್ಲೇ ಅಪಖ್ಯಾತಿ ಹೊಂದಿದ್ದ ನಿಮ್ಮಿಂದ ಪಾಠ ಕಲಿಯಬೇಕಿಲ್ಲ – ಅಮಿತ್ ಶಾ ವಿರುದ್ಧ ಓವೈಸಿ ಕಿಡಿ

    ಗಾಂಧಿನಗರ: ದೇಶದಲ್ಲೇ ನೀವು ಅಪಖ್ಯಾತಿ ಹೊಂದಿದ್ದೀರಿ. ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ  (Amit Shah) ಕಾಂಗ್ರೆಸ್ (Congress) ವಿರುದ್ಧ ಸತತವಾಗಿ ಹರಿಹಾಯುತ್ತಿದ್ದಾರೆ. ಶುಕ್ರವಾರ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ `2002ರಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದ ಶಕ್ತಿಗಳಿಗೆ ಬಿಜೆಪಿ (BJP) ತಕ್ಕ ಪಾಠ ಕಲಿಸಿತು’ ಎಂದಿದ್ದ ಶಾ ಹೇಳಿಕೆ ವಿರುದ್ಧ ಓವೈಸಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್‌ನಲ್ಲಿ ಡೀಸೆಲ್‌ ಖಾಲಿ – ದಾರಿ ಮಧ್ಯೆ ಅಸುನೀಗಿದ ಬಡ ಜೀವ

    ಗುಜರಾತಿನ ಜುಹಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಅಮಿತ್ ಶಾ ಅವರೇ ನಮಗೆ ಏನು ಪಾಠ ಕಲಿಸಿದ್ದೀರಿ? ಬಿಲ್ಕಿಸ್‌ನ ಅತ್ಯಾಚಾರಿಗಳನ್ನು ಬಿಡುಗಡೆ ಮಾಡೋದು ಪಾಠವೇ? ಬಿಲ್ಕಿಸ್‌ನ 3 ವರ್ಷದ ಮಗಳನ್ನು ಕಣ್ಣೆದುರೇ ಹೊಡೆದು ಕೊಂದವರನ್ನು ಬಿಡುಗಡೆ ಮಾಡುವುದು ಪಾಠವೇ? ಎಹ್ಸಾನ್ ಜಾಫ್ರಿ ಕೊಲ್ಲುವಂತಹ ಪಾಠ ಕಲಿಸಿದ್ದೀರಿ, ಇವೆಲ್ಲವೂ ಪಾಠವೇ? ಇಡೀ ದೇಶದಲ್ಲಿ ನೀವು ಅಪಖ್ಯಾತಿ ಹೊಂದಿದ್ದೀರಿ. ದೆಹಲಿಯಲ್ಲಿ ಕೋಮುಗಲಭೆಗಳು ನಡೆಯುತ್ತಿವೆ. ನೀವು ಯಾವ ಪಾಠ ಕಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮುಗ್ಗರಿಸಿ ಬಿದ್ದ ದಿಗ್ವಿಜಯ್‌ ಸಿಂಗ್

    2022ರ ಕೋಮು ದ್ವೇಷದಿಂದ ಬೆಸ್ಟ್ ಬೇಕರಿಯನ್ನು ಸುಟ್ಟುಹಾಕಲಾಯಿತು. ಅದು ಸಾವಿರಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿತು. `ಮಿಸ್ಟರ್ ಅಮಿತ್ ಶಾ ಅವರೇ, ನಿಮ್ಮ ಇಂತಹ ಎಷ್ಟು ಪಾಠಗಳನ್ನು ನಾವು ನೆನಪಿನಲ್ಲಿಟ್ಟುಕೊಂಡಿದ್ದೇವೆ. ನಿಮ್ಮಿಂದ ಪಾಠ ಕಲಿಯೋದು ಏನೂ ಇಲ್ಲ. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಿದಾಗ ಮಾತ್ರ ನಿಜವಾದ ಶಾಂತಿ ಬಲಗೊಳ್ಳುತ್ತದೆ ಎಂದು ಸಲಹೆ ನೀಡಿದ್ದಾರೆ.

    ಅಧಿಕಾರದ ಅಮಲಿನಲ್ಲಿ ಇಂದು ಗೃಹ ಸಚಿವರು ನಾವು ತಕ್ಕ ಪಾಠ ಕಲಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಅಧಿಕಾರ ಯಾವತ್ತೋ ಒಬ್ಬರ ಬಳಿಯೇ ಇರಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕುಟುಕಿದ್ದಾರೆ. ಇದನ್ನೂ ಓದಿ: BJP ಸರ್ಕಾರ ಕರ್ನಾಟಕಕ್ಕೆ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ – ಡಿಕೆಶಿ

    ಗುಜರಾತ್ ವಿಧಾನಸಭಾ ಚುನಾವಣೆಯು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ ತನ್ನ 14 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಉಳಿದ 93 ವಿಧಾನಸಭಾ ಸ್ಥಾನಗಳಿಗೆ 2ನೇ ಹಂತದ ಮತದಾನ ನಡೆಯಲಿದೆ.

    ಅಮಿತ್ ಶಾ ಹೇಳಿದ್ದೇನು?
    ಗುಜರಾತ್ ಚುನಾವಣಾ ಪ್ರಚಾರದ ರ‍್ಯಾಲಿಯಲ್ಲಿದ್ದ ಅಮಿತ್ ಶಾ, 2002ರ ಹಿಂಸಾಚಾರದ ಕುರಿತು ಮಾತನಾಡಿದ್ದರು. ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದಾಗ ಆಗಾಗ ಕೋಮುಗಲಭೆಗಳು ನಡೆಯುತ್ತಿದ್ದವು. ಆಗಾಗ ಕರ್ಫ್ಯೂ ಹೇರಲಾಗುತ್ತಿತ್ತು, ಕಾನೂನು ಸುವ್ಯವಸ್ಥೆ ಸರಿ ಇರಲಿಲ್ಲ. ಕಾಂಗ್ರೆಸ್ ಆಳ್ವಿಕೆ ಇದ್ದಾಗ ಕೋಮು ಹಿಂಸೆ ನಡೆಯುತ್ತಿತ್ತೆ ಇಲ್ಲವೇ ಹೇಳಿ? 2002ರಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಹಿಂಸಾಚಾರದ ಪ್ರಯತ್ನ ನಡೆಯಿತು. ಆಗ ಅವರಿಗೆ ಸರಿಯಾದ ಪಾಠ ಕಲಿಸಲಾಯಿತು. ಅದಾದ ಬಳಿಕ ಒಂದೇ ಒಂದು ಕೋಮು ಹಿಂಸಾಚಾರ ನಡೆದಿಲ್ಲ. ಹಿಂಸೆಯಲ್ಲಿ ತೊಡಗಿದ್ದವರನ್ನು ಉಚ್ಚಾಟಿಸಲಾಯಿತು. ಕರ್ಫ್ಯೂರಹಿತ ಗುಜರಾತ್ ಅನ್ನು ಬಿಜೆಪಿ ಸ್ಥಾಪಿಸಿದೆ ಎಂದು ಶಾ ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ಓವೈಸಿ ಪಕ್ಷ ಸೇರಿ, ಬಿರಿಯಾನಿ ತಗೊಳ್ಳಿ: ಪೀರ್ಜಾದಾ ತೌಕೀರ್ ನಿಜಾಮಿ

    ಓವೈಸಿ ಪಕ್ಷ ಸೇರಿ, ಬಿರಿಯಾನಿ ತಗೊಳ್ಳಿ: ಪೀರ್ಜಾದಾ ತೌಕೀರ್ ನಿಜಾಮಿ

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಭೋಪಾಲ್‍ನ (Bhopal) ನರೇಲಾ ಅಸೆಂಬ್ಲಿ ಕ್ಷೇತ್ರದಲ್ಲಿ ಪಕ್ಷವನ್ನು ನೆಲೆಯೂರಿಸುವ ಸಲುವಾಗಿ ಅಖಿಲ ಭಾರತ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ)ನ ನಾಯಕರೊಬ್ಬರು ಜನರಿಗೆ ಬಿರಿಯಾನಿ (Biriyani) ಮತ್ತು ಉಪಹಾರವನ್ನು ನೀಡುತ್ತಿದ್ದಾರೆ.

    ಇತ್ತೀಚೆಗಷ್ಟೇ ನಡೆದ ನಗರ ಸಂಸ್ಥೆಗಳ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಅಸಾದುದ್ದೀನ್ ಓವೈಸಿ (Asaduddin Owaisi) ನೇತೃತ್ವದ ಪಕ್ಷವು ರಾಜ್ಯದಲ್ಲಿ ಪಕ್ಷದಿಂದ 7 ಕಾರ್ಪೊರೇಟರ್‌ಗಳು ಜಯಗಳಿಸಿದ್ದಾರೆ. ಇದನ್ನೂ ಓದಿ: ದಶಪಥ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಆರೋಪ – ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು

    ಬಿಜೆಪಿಯಾಗಲಿ (BJP) ಅಥವಾ ಕಾಂಗ್ರೆಸ್ (Congress) ಆಗಲಿ ಅವರ ಪಕ್ಷದಲ್ಲಿ ಗೌರವ ಸಿಗದಿದ್ದರೆ, ಅವರನ್ನು ನಮ್ಮ ಪಕ್ಷಕ್ಕೆ ಸ್ವಾಗತಿಸುತ್ತೇವೆ. ನಮ್ಮ ಪಕ್ಷಕ್ಕೆ ಸೇರಲು ಕಚೇರಿಗೆ ಬಂದಾಗ ಅವರಿಗೆ ಗೌರವದ ಸಂಕೇತವಾಗಿ ಬಿರಿಯಾನಿ ಅಥವಾ ಸಮೋಸಾ (Samosa) ಮತ್ತು ಚಹಾದಂತಹ ಉಪಹಾರವನ್ನು ನೀಡುತ್ತೇವೆ. ನಮ್ಮ ಮನೆಯಲ್ಲೂ ನಾವು ಅತಿಥಿಗಳಿಗೆ ಇದನ್ನೇ ನೀಡುತ್ತೇವೆ ಎಂದು ಎಐಎಂಐಎಂ ನಾಯಕ ಪೀರ್ಜಾದಾ ತೌಕೀರ್ ನಿಜಾಮಿ (Peerzada Tauqeer Nizami) ಹೇಳಿದ್ದಾರೆ.

    ಹೊಸದಾಗಿ ಪಕ್ಷ ಸೇರಿಕೊಳ್ಳುವವರಿಗೆ ಹಾರ ಹಾಕಿ ಸಂಪ್ರದಾಯಿಕವಾಗಿ ಬರಮಾಡಿಕೊಂಡು, ಉಪಹಾರವನ್ನು ನೀಡುತ್ತೇವೆ. ಅವರು ಸರಿಯಾದ ಜಾಗಕ್ಕೆ ಬಂದಿದ್ದೇವೆ ಅಂತ ಅಂದುಕೊಂಡರೆ, ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮೌನವೇಕೆ? – BJPಯಿಂದ ಸೇ-ಸಿದ್ದು ಪೋಸ್ಟರ್ ರಿಲೀಸ್

    ಇಲ್ಲಿಯವರೆಗೆ ಸುಮಾರು 20,000ಕ್ಕೂ ಹೆಚ್ಚು ಮಂದಿ ಪಕ್ಷ ಸೇರಿದ್ದಾರೆ. ಇದೇ ಕ್ರಮವನ್ನು ದೀಪಾವಳಿ ನಂತರ ಭೋಪಾಲ್‍ನ ಇತರ ಅಸೆಂಬ್ಲಿ ಕ್ಷೇತ್ರಗಳಲ್ಲಿಯೂ ಅನುಸರಿಸಲಾಗುತ್ತದೆ ಎಂದು ತಿಳಿದ್ದಾರೆ. ಇದನ್ನೂ ಓದಿ: ಬುದ್ಧಿವಂತರು ಯಾವಾಗಲು ಏಕಾಂಗಿಯಾಗಿಯೇ ಕೆಲಸ ಮಾಡ್ತಾರೆ.. ಯಾಕೆ ಗೊತ್ತಾ?

    Live Tv
    [brid partner=56869869 player=32851 video=960834 autoplay=true]

  • ನೀವು ಒಬ್ಬರನ್ನ ಮದ್ವೆಯಾಗಿ ಮೂವರನ್ನ ಇಟ್ಟುಕೊಳ್ತೀರಾ – ಹಿಂದೂಗಳ ಟೀಕಿಸಿದ್ದ ಶೌಕತ್ ಅಲಿ ವಿರುದ್ಧ ಕೇಸ್

    ನೀವು ಒಬ್ಬರನ್ನ ಮದ್ವೆಯಾಗಿ ಮೂವರನ್ನ ಇಟ್ಟುಕೊಳ್ತೀರಾ – ಹಿಂದೂಗಳ ಟೀಕಿಸಿದ್ದ ಶೌಕತ್ ಅಲಿ ವಿರುದ್ಧ ಕೇಸ್

    ಲಕ್ನೋ: ಉತ್ತರಪ್ರದೇಶದ (UttarPradesh) ಸಂಭಾಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹಿಂದೂಗಳ (Hindu Community) ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಎಐಎಂಐಎಂ (AIMIM) ಅಧ್ಯಕ್ಷ ಶೌಕತ್ ಅಲಿ (Shaukat Ali) ವಿರುದ್ಧ ಕೋಮು ಸೌಹಾರ್ದತೆಗೆ ಧಕ್ಕೆ ತಂದಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

    ಶೌಕತ್ ಅಲಿ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153-A (ಧರ್ಮ, ಜನಾಂಗ, ಜನ್ಮ ಸ್ಥಳ, ಭಾಷೆ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು) ಮತ್ತು 295-A (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 10ರ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

    ಶೌಕತ್ ಅಲಿ ಹೇಳಿದ್ದೇನು?: ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶೌಕತ್ ಅಲಿ (Shaukat Ali), 832 ವರ್ಷಗಳ ಕಾಲ ಮುಸ್ಲಿಮರು (Muslims) ಹಿಂದೂಗಳ ಮೇಲೆ ಆಳ್ವಿಕೆ ನಡೆಸಿದರು. ಆಗ ಹಿಂದೂಗಳು ಮುಸ್ಲಿಂ ದೊರೆಗಳ ಮುಂದೆ ಕೈ ಜೋಡಿಸಿ `ಜಿ, ಹುಜೂರ್’ ಎಂದು ತಲೆಬಾಗುತ್ತಿದ್ದರು. ಮುಸ್ಲಿಮರು ಎರಡು ಬಾರಿ ಮದುವೆಯಾಗುತ್ತಾರೆ (Marriage). ಇಬ್ಬರನ್ನೂ ಗೌರವದಿಂದ ನೋಡಿಕೊಳ್ಳುತ್ತಾರೆ. ಆದರೆ ಹಿಂದೂಗಳು ಒಬ್ಬರನ್ನು ಮದುವೆಯಾಗಿ, ಮೂವರು ಪ್ರೇಯಸಿಯರನ್ನ ಇಟ್ಟುಕೊಳ್ಳುತ್ತಾರೆ ಎಂದು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಶಾಲಾ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಬಾಲಕಿ ಸಾವು!

    ಮುಂದುವರಿದು ಮಾತನಾಡಿದ ಅಲಿ, ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ, ಎರಡು ಮದುವೆಯಾಗುತ್ತಾರೆ ಎಂದು ಹಿಂದೂಗಳು ಆರೋಪಿಸುತ್ತಾರೆ. ನಾವು ಎರಡು ಬಾರಿ ಮದುವೆಯಾಗುತ್ತೇವೆ ನಿಜ. ಆದರೆ ಇಬ್ಬರು ಹೆಂಡತಿಯರಿಗೂ ಗೌರವ ನೀಡುತ್ತೇವೆ. ಆದರೆ ನೀವು ಒಬ್ಬರನ್ನು ಮದುವೆಯಾಗಿ ಮೂವರು ಪ್ರೇಯಸಿಯರನ್ನು ಇಟ್ಟುಕೊಳ್ಳುವುದು ಯಾರಿಗೂ ತಿಳಿದಿಲ್ಲ. ಅವರಲ್ಲಿ ಯಾರಿಗೂ ನೀವು ಗೌರವ ಕೊಡುವುದಿಲ್ಲ ಎಂದು ಕಿಡಿಕಾರಿದರು. ಮುಂದೆ ಬಿಜೆಪಿ ದುರ್ಬಲವಾದಾಗ ಹಿಂದೂಗಳು ಮುಸ್ಲಿಮರ ಹಿಂದೆ ಬರುತ್ತಾರೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]