Tag: ಎಐಎಂಡಿಕೆ

  • ಶಿವಸೇನೆ ಬಳಿಕ ಎನ್‍ಡಿಎ ಒಕ್ಕೂಟ ಸೇರಿದ ಎಐಡಿಎಂಕೆ – ಲೋಕಸಮರಕ್ಕೆ ಬಿಜೆಪಿ ಮಾಸ್ಟರ್ ಪ್ಲಾನ್

    ಶಿವಸೇನೆ ಬಳಿಕ ಎನ್‍ಡಿಎ ಒಕ್ಕೂಟ ಸೇರಿದ ಎಐಡಿಎಂಕೆ – ಲೋಕಸಮರಕ್ಕೆ ಬಿಜೆಪಿ ಮಾಸ್ಟರ್ ಪ್ಲಾನ್

    ಚೆನ್ನೈ: 2019 ಲೋಕಸಮರ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಈಗ ತನ್ನ ಎನ್‍ಡಿಎ ಮಿತ್ರಕೂಟವನ್ನು ವಿಸ್ತರಣೆಗೆ ವೇಗ ನೀಡಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಖಚಿತ ಪಡಿಸಿದ ಬೆನ್ನಲ್ಲೇ ಈಗ ದಕ್ಷಿಣದಲ್ಲೂ ಕ್ಷೇತ್ರ ಹಂಚಿಕೆ ಸೂತ್ರ ಜಾರಿಗೊಳಿಸಿದೆ. ಇದರ ಭಾಗವಾಗಿ ತಮಿಳುನಾಡಿನಲ್ಲಿ ಆಡಳಿತರೂಢ ಅಣ್ಣಾಡಿಎಂಕೆ ಜೊತೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎರಡು ಪಕ್ಷ ನಾಯಕರು ಮೈತ್ರಿಯಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳಲಿದೆ. ತಮಿಳುನಾಡಿನಲ್ಲಿ ಓ. ಪನ್ನೀರ್ ಸೆಲ್ವಂ ಹಾಗೂ ಪಳನಿಸ್ವಾಮಿ ನಾಯಕತ್ವಕ್ಕೆ ನಾವು ಬೆಂಬಲ ನೀಡಲಿದ್ದೆವೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವಕ್ಕೆ ಎಐಎಡಿಎಂಕೆ ಬೆಂಬಲಿಸಲಿದೆ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ತಿಳಿಸಿದರು.

    ಮೈತ್ರಿಯ ಅನ್ವಯ 39 ಕ್ಷೇತ್ರಗಳಲ್ಲಿ ಎಐಎಡಿಎಂಕೆ ಪಕ್ಷ 25, ಬಿಜೆಪಿ 5 ಹಾಗೂ ಪಿಎಂಕೆ 7 ಕ್ಷೇತ್ರಗಳಲ್ಲಿ ಹೊಂದಾಣಿಕೆ ಮಾಡಿಕೊಂಡಿವೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಸುದ್ದಿಗೋಷ್ಠಿಯಲ್ಲಿ ತಮಿಳುನಾಡು ಸಿಎಂ ಪಳನಿಸ್ವಾಮಿ, ಉಪಮುಖ್ಯಮಂತ್ರಿ ಓ. ಪನ್ನೀರಸೆಲ್ವಂ ಹಾಗೂ ಕೇಂದ್ರ ಸಚಿವ ಪಿಯೂಶ್ ಗೋಯಲ್ ಭಾಗಿಯಾಗಿದ್ದರು.

    ಅಂದಹಾಗೇ ತಮಿಳುನಾಡಿನಲ್ಲಿ ಪುದುಚೇರಿ ಸೇರಿದಂತೆ 40 ಲೋಕಸಭೆ ಕ್ಷೇತ್ರಗಳಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಎರಡೂ ಪಕ್ಷಗಳ ನಡುವೆ ಮೈತ್ರಿ ಏರ್ಪಾಡಾಗಿದೆ. 2014 ಲೋಕಸಭಾ ಚುನಾವಣೆಯಲ್ಲಿ ಎಡಿಎಂಕೆ 37 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ 1 ಹಾಗೂ ಪಿಎಂಕೆ ಪಕ್ಷ 1 ಸ್ಥಾನ ಪಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೆರೋಲ್ ಅವಧಿಗೂ ಮುನ್ನವೇ ಪರಪ್ಪನ ಅಗ್ರಹಾರಕ್ಕೆ ಮರಳಿದ ಶಶಿಕಲಾ

    ಪೆರೋಲ್ ಅವಧಿಗೂ ಮುನ್ನವೇ ಪರಪ್ಪನ ಅಗ್ರಹಾರಕ್ಕೆ ಮರಳಿದ ಶಶಿಕಲಾ

    ಬೆಂಗಳೂರು: ಪತಿಯ ನಿಧನದ ಹಿನ್ನೆಲೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುವ ಸಲುವಾಗಿ 15 ದಿನಗಳ ಪೆರೋಲ್ ಪಡೆದಿದ್ದ ಎಐಎಂಡಿಕೆ ನಾಯಕಿ ಶಶಿಕಲಾ ಮೂರು ದಿನಗಳ ಮುಂಚೆಯೇ ಜೈಲಿಗೆ ವಾಪಸ್ ಆಗಿದ್ದಾರೆ.

    ಇದೇ ಮಾರ್ಚ್ 20 ರ ಮಧ್ಯರಾತ್ರಿ ಶಶಿಕಲಾ ಪತಿ ನಟರಾಜನ್ ಅನಾರೋಗ್ಯದ ಹಿನ್ನೆಲೆ ಮೃತಪಟ್ಟಿದ್ದರು. ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುವ ಹಿನ್ನೆಲೆ 15 ದಿನಗಳ ತುರ್ತು ಪೆರೋಲ್ ಪಡೆದು ಮಾರ್ಚ್ 21 ರಂದು ತಂಜಾವೂರಿಗೆ ತೆರಳಿದ್ದರು. ಆದರೆ ಇನ್ನೂ 5 ದಿನಗಳ ಪೆರೋಲ್ ಅವಧಿ ಇರುವಂತೆಯೇ ಶಶಿಕಲಾ ಪರಪ್ಪನ ಆಗ್ರಹಾರಕ್ಕೆ ಅಗಮಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

    ಮೂಲಗಳ ಪ್ರಕಾರ ಶಶಿಕಲಾ ಕುಟುಂಬದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವೈಮಸ್ಸು ಮೂಡಿದ್ದು, ಈ ಹಿನ್ನೆಲೆಯಲ್ಲಿ ಅವಧಿಗೂ ಮುನ್ನವೇ ಶಶಿಕಲಾ ಜೈಲಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನು ಶಶಿಕಲಾ ಜೈಲಿಗೆ ವಾಪಸ್ಸಾಗುವ ವೇಳೆ ತಂಜಾವೂರಿನಿಂದ ನೂರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗು ಬೆಂಬಲಿಗರು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್, ಶಶಿಕಲಾ ಅವರಿಗೆ ಕಳೆದ ಹತ್ತು ದಿನಗಳಿಂದಲೂ ಡೆಂಗ್ಯು ಜ್ವರ ಬಾಧಿಸಿದ್ದು, ಮನೆಯಲ್ಲೆ ವೈದ್ಯರಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಯಿತು ಎಂದು ತಿಳಿಸಿದರು. ಶಶಿಕಲಾರ ಪತಿಯ ಎಲ್ಲಾ ಅಂತಿಮ ಕಾರ್ಯಗಳು ಶುಕ್ರವಾರವೇ ಮುಗಿದ ಕಾರಣ ಇಂದು ಪರಪ್ಪನ ಅಗ್ರಹಾರಕ್ಕೆ ಮರಳಿದರು ಎಂದರು.