Tag: ಎಐಸಿಸಿ ಅಧ್ಯಕ್ಷ

  • ಮದುವೆ ಬಗ್ಗೆ ರಾಹುಲ್ ಗಾಂಧಿ ಕಲಬುರಗಿಯಲ್ಲಿ ಹೇಳಿದ್ದು ಹೀಗೆ

    ಮದುವೆ ಬಗ್ಗೆ ರಾಹುಲ್ ಗಾಂಧಿ ಕಲಬುರಗಿಯಲ್ಲಿ ಹೇಳಿದ್ದು ಹೀಗೆ

    ಕಲಬುರಗಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮದುವೆ ಕುರಿತು ಎಲ್ಲರಿಗೂ ಕುತೂಹಲ ಇದ್ದೇ ಇದೆ. ಅಂತೆಯೇ ಕರ್ನಾಟಕಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಯುವಕನೊಬ್ಬ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ.

    ಜಿಲ್ಲೆಯ ಎಚ್ ಕೆಇಎಸ್  ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಾದದ ಯವಕನೊಬ್ಬ ರಾಹುಲ್ ಜೀ ಯಾವಾಗ ಮದುವೆ ಆಗ್ತೀರಿ ಅಂತ ಕೇಳಿದ್ದಾನೆ. ಈ ವೇಳೆ ರಾಹುಲ್ ಗಾಂಧಿ ಅವರು, ಥ್ಯಾಂಕ್ಯೂ ವೆರೀ ಮಚ್ ಎಂದು ಪ್ರತಿಕ್ರಿಯಿಸಿ ಸುಮ್ಮನಾಗಿದ್ದಾರೆ. ಇದನ್ನೂ ಓದಿ: ಯಾವಾಗ ಮದುವೆಯಾಗ್ತೀರ ಎಂದು ಕೇಳೀದ್ದಕ್ಕೆ ರಾಹುಲ್ ಗಾಂಧಿ ಉತ್ತರಿಸಿದ್ದು ಹೀಗೆ

    ಇದೇ ವೇಳೆ ವೇದಿಕೆಯಲ್ಲಿದ್ದ ಸಂಸದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಅವರನ್ನು ನೋಡಿ ಮುಗುಳ್ನಗೆ ಬೀರಿದ್ರು.

    ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ ಅವರು ಕಲಬುರಗಿಯ ಎಚ್ ಕೆಇ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಾದ ಉದ್ದೇಶಿಸಿ ಮಾತನಾಡಿದ್ದರು. ಈ ಕಾರ್ಯಕ್ರಮದಲ್ಲಿ ಮೊದಲೇ ನಿಗದಿಯಾದಂತೆ 7 ಪ್ರಶ್ನೆಗಳನ್ನು ಮಾತ್ರ ಕೇಳಲಾಗಿತ್ತು. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ರಾಹುಲ್ ಮದುವೆ ಪ್ರಸ್ತಾಪ ಬಂದಾಗ ಉತ್ತರಿಸಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ರಾಹುಲ್‍ಗೆ ದಲಿತ ಹೆಣ್ಣನ್ನು ಕೊಡಲು ಸಿದ್ಧ ಎಂಬ ಕಾರಜೋಳ ಹೇಳಿಕೆಗೆ ಸಿಎಂ ತಿರುಗೇಟು ನೀಡಿದ್ದು ಹೀಗೆ

    ಈ ಹಿಂದೆ ದೆಹಲಿಯಲ್ಲಿ ನಡೆದ 112ನೇ ವಾರ್ಷಿಕ ಅಧಿವೇಶನ ಹಾಗೂ ಪಿಹೆಚ್ ಡಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಹುಲ್ ಗಾಂಧಿಗೆ ಬಾಕ್ಸರ್ ವಿಜೇಂದರ್ ಸಿಂಗ್ ಇದೇ ಪ್ರಶ್ನೆಯನ್ನು ಕೇಳಿದ್ದರು. ಈ ವೇಳೆಯೂ ರಾಹುಲ್ ಉತ್ತರಿಸಲು ನಿರಾಕರಿಸಿದ್ದರು. ಆದ್ರೆ ಸಿಂಗ್ ಅವರು ಉತ್ತರಿಸಲೇ ಬೇಕು ಅಂತ ಒತ್ತಾಯ ಮಾಡಿದ ಬಳಿಕ ರಾಹುಲ್ `ನಾನು ವಿಧಿಯ ಮೇಲೆ ನಂಬಿಕೆ ಇಟ್ಟವನು. ನನ್ನ ಮದುವೆ ಯಾವಾಗ ಆಗಬೇಕೆಂದಿದೆಯೋ ಅಂದೇ ಆಗುತ್ತೆ ಅಂತ ಉತ್ತರಿಸಿದ್ದರು.

  • ಪ್ರಧಾನಿ ಟೀಕಿಸೋ ಭರದಲ್ಲಿ ಎಡವಟ್ಟು- ಐಪಿಎಸ್ ಅಂದ್ರೆ ಇಂಡಿಯನ್ ಪಕೋಡಾ ಸರ್ವೀಸ್ ಎಂದ ರಾಹುಲ್ ಗಾಂಧಿ

    ಪ್ರಧಾನಿ ಟೀಕಿಸೋ ಭರದಲ್ಲಿ ಎಡವಟ್ಟು- ಐಪಿಎಸ್ ಅಂದ್ರೆ ಇಂಡಿಯನ್ ಪಕೋಡಾ ಸರ್ವೀಸ್ ಎಂದ ರಾಹುಲ್ ಗಾಂಧಿ

    ಯಾದಗಿರಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿದ್ದಾರೆ.

    ಕರ್ನಾಟಕದಲ್ಲಿ ಟೆಂಪಲ್ ರನ್ ಮಾಡುತ್ತಿರುವ ರಾಹುಲ್ ಗಾಂಧಿ ಯಾದಗಿರಿಯ ಶಹಾಪೂರದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಈ ಎಡವಟ್ಟು ಮಾಡಿದ್ದಾರೆ.

    ತಮ್ಮ ಭಾಷಣದಲ್ಲಿ ಪ್ರಧಾನಿ ಪಕೋಡಾ ಹೇಳಿಕೆ ಟೀಕಿಸಲು ಹೋಗಿ ಐಪಿಎಸ್‍ಗೆ ಹೊಸ ವ್ಯಾಖ್ಯಾನ ನೀಡಿದ್ದಾರೆ. ಐಪಿಎಸ್ ಅಂದ್ರೆ ಇಂಡಿಯನ್ ಪಕೋಡಾ ಸರ್ವೀಸ್ ಎಂಬುದಾಗಿ ರಾಗಾ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಹುಲ್ ಹೇಳಿಕೆಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರಧಾನಿ ಟೀಕಿಸೋ ಭರದಲ್ಲಿ ಐಪಿಎಸ್‍ಗಳಿಗೆ ರಾಗಾ ಅವಮಾನ ಮಾಡಿದ್ರಾ ಎಂಬ ಪ್ರಶ್ನೆ ಉದ್ಭವವಾಗಿದೆ.

    ಮೋದಿ ಜನರಿಗೆ ಉದ್ಯೋಗ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕೆಂದು ಬಯಸುತ್ತಾರೆ. ಆದ್ರೆ ಮೋದಿ ಅವರು ಬ್ಯಾಟಿಂಗ್ ಮಾಡುವಾಗ ವಿಕೆಟ್ ನೋಡುತ್ತಾರೆ, ಮುಂದೆ ನೋಡುವುದಿಲ್ಲ. ನೋಟು ಅಮಾನ್ಯಕರಣ ಹಾಗೂ ಗಬ್ಬರ್ ಸಿಂಗ್ ಟ್ಯಾಕ್ಸ್ ಜಾರಿಗೆ ತಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವುದೇ ಹಗರಣ ನಡೆಸಿಲ್ಲ. ಅಭಿವೃದ್ಧಿ ಮಾಡಿದೆ. ಇಂದಿರಾ ಕ್ಯಾಂಟಿನ್ ತೆರೆಯುವ ಮೂಲಕ ಜನರ ಹಸಿವು ನಿಗಿಸಿದೆ ಅಂತ ರಾಹುಲ್ ಹೇಳಿದ್ರು.

    ಇದೇ ವೇಳೆ ರಾಜ್ಯದಲ್ಲಿ ಟೆಂಪಲ್ ರನ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನನಗೆ ಯಾವ ದೇವಾಲಯ ಇಷ್ಟ ಅಲ್ಲಿಗೆ ನಾನು ಹೋಗುತ್ತೇನೆ. ದೇವಾಲಯಕ್ಕೂ ಹೋಗುತ್ತೇನೆ, ಮಸೀದಿಗೂ ಹೋಗುತ್ತೇನೆ. ಹೀಗಾಗಿ ದೇವಸ್ಥಾನಗಳಿಗೆ ನಾನು ಭೇಟಿ ನೀಡಿದ್ದೇನೆ. ಇದರಲ್ಲಿ ತಪ್ಪೇನಿದೆ ಅಂತ ಪ್ರಶ್ನಿಸಿದ್ರು.

  • ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ಪಕ್ಷ ಸುಟ್ಟು ಭಸ್ಮವಾಗಲಿದೆ: ಜನಾರ್ದನ ರೆಡ್ಡಿ

    ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ಪಕ್ಷ ಸುಟ್ಟು ಭಸ್ಮವಾಗಲಿದೆ: ಜನಾರ್ದನ ರೆಡ್ಡಿ

    ಕೊಪ್ಪಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ಪಕ್ಷ ಸುಟ್ಟು ಭಸ್ಮವಾಗಲಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.

    ಗಂಗಾವತಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಮಗನ ಮದುವೆಗೆ ಆಗಮಿಸಿದ ರೆಡ್ಡಿ, ನಾಳೆ ಕೊಪ್ಪಳಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಬಗ್ಗೆ ಭವಿಷ್ಯವನ್ನು ಹೇಳಿದ್ದಾರೆ. ಇದನ್ನೂ ಓದಿ: ನಾಳೆ ಬಳ್ಳಾರಿಗೆ ರಾಹುಲ್ ಗಾಂಧಿ ಎಂಟ್ರಿ- ಸಂಕಷ್ಟದಲ್ಲಿ ಕೈ ಹಿಡಿದ ಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕೆ ಕಹಳೆ

     

    ದೇಶದಲ್ಲಿ ಅಲ್ಪ ಸ್ವಲ್ಪ ಕಾಂಗ್ರೆಸ್ ಇದೆ. ಇದೀಗ ರಾಹುಲ್ ಪಾದಾರ್ಪಣೆಯಿಂದ ಅದು ಕೂಡ ಸುಟ್ಟು ಭಸ್ಮವಾಗಲಿದೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸದಲ್ಲಿ ದೇವಸ್ಥಾನಕ್ಕೆ ಹೆಚ್ಚು ಹೋಗ್ತಿದ್ದಾರೆ ಇದಕ್ಕೆ ಕಾರಣ ನಾವು ಅಂದ್ರೆ ಬಿಜೆಪಿಯವರು ಈ ಹಿಂದೆ ಎಂದು ರಾಹುಲ್ ಗಾಂಧಿ ದೇವಸ್ಥಾನಕ್ಕೆ ಕಾಲಿಟ್ಟಿರಲಿಲ್ಲಾ. ಆದ್ರೆ ಇದೀಗ ಅವರು ದೇವಸ್ಥಾನಕ್ಕೆ ಹೋಗ್ತಿದ್ದಾರೆ. ನಮ್ಮಿಂದ ಆದ್ರೂ ಒಂದು ಒಳ್ಳೆ ಸಂಸ್ಕೃತಿ ಕಲಿತಿದ್ದಾರಲ್ವಾ ಅಷ್ಟೇ ಸಾಕು ಎಂದರು.

    ಇತ್ತೀಚೆಗಷ್ಟೇ ರಾಮನ ಭಕ್ತರು ಕೊಲೆಗಡುಕರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಬಗ್ಗೆ ಪ್ರತಿಕ್ರಿಯಿಸಿದ ರೆಡ್ಡಿ, ನಾನು ಈವಾಗೇನೂ ಮಾತಾಡಲ್ಲ. ನಾಳೆ ಚುನಾವಣಾ ಸಂದರ್ಭದ ಸಮಾವೇಶದಲ್ಲಿ ಅವರಿಗೆ ತಕ್ಕ ಉತ್ತರ ನೀಡುತ್ತೇನೆ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿರೋ ಬೆನ್ನಲ್ಲೇ ಶಾಸಕ ಆನಂದ್ ಸಿಂಗ್ ಹೊಸ ಶಪಥ

    ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆಯನ್ನು ಸಿಎಂ ಅವರೇ ಇದಕ್ಕೆ ಉತ್ತರ ನೀಡಬೇಕು. ಸಿದ್ದರಾಮಯ್ಯ ಅವರು ಆನಂದ್ ಸಿಂಗ್ ಜೈಲು ಆಸಾಮಿ ಜೈಲಿಗೆ ಹೋಗಿ ಬಂದವರು ಅಂತಾ ಸಮಾವೇಶದಲ್ಲಿ ಹೇಳಿಕೊಂಡು ತಿರುಗಾಡಿದ್ದಾರೆ. ಈಗ ಅವರೇ ಆನಂದ್ ಸಿಂಗ್ ಅವರನ್ನು ಪಕ್ಷದಲ್ಲಿ ಸೇರಿಸಿಕೊಂಡಿದ್ದಾರೆ ಇದಕ್ಕೆ ತಕ್ಕ ಉತ್ತರ ಬಳ್ಳಾರಿ ಜನತೆ ನೀಡುತ್ತಾರೆ. ಈ ಸಾರಿ ಬಳ್ಳಾರಿಯಲ್ಲಿ 9 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಮತ್ತು ನೂರಕ್ಕೆ ನೂರರಷ್ಟು ಭಾರತೀಯ ಜನತಾ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಯಾರಿಂದಲೂ ತಡೆಯಲು ಸಾಧ್ಯವಿಲ್ಲಾ ಎಂದು ತಮಗೆ ಪಕ್ಷದ ಮೇಲಿರುವ ಆತ್ಮವಿಶ್ವಾಸ ವ್ಯಕ್ತಪಡಿಸಿದರು.