Tag: ಎಕ್ಯೂಐ

  • Delhi Air Pollution | ಮಾಲಿನ್ಯ ನಿಯಂತ್ರಣಕ್ಕೆ ಕೃತಕ ಮಳೆ ಸುರಿಸಲು ಪ್ಲ್ಯಾನ್‌

    Delhi Air Pollution | ಮಾಲಿನ್ಯ ನಿಯಂತ್ರಣಕ್ಕೆ ಕೃತಕ ಮಳೆ ಸುರಿಸಲು ಪ್ಲ್ಯಾನ್‌

    – ದೆಹಲಿ ದೇಶದ ರಾಜಧಾನಿಯಾಗಿ ಮುಂದುವರಿಯಬೇಕಾ?
    – ಚರ್ಚೆಗೆ ಗ್ರಾಸವಾಯ್ತು ಶಶಿ ತರೂರ್‌ ಟ್ವೀಟ್‌

    ನವದೆಹಲಿ: ದೆಹಲಿ ವಾಯುಮಾಲಿನ್ಯ (Delhi Air Pollution) ಸದ್ಯಕ್ಕೆ ನಿಯಂತ್ರಣಕ್ಕೆ ಬರುವಂತೆ ಕಾಣ್ತಿಲ್ಲ. ಕಳೆದ 24 ಗಂಟೆಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ 488 ತಲುಪಿದೆ. ಸತತ 7ನೇ ದಿನವೂ ದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೇ ಇದೆ. ಬಾಂಗ್ಲಾದೇಶದ ಢಾಕಾ, ಪಾಕಿಸ್ತಾನದ (Pakistan) ಲಾಹೋರ್‌ ಕ್ರಮವಾಗಿ 2, 3ನೇ ಸ್ಥಾನಗಳಲ್ಲಿವೆ.

    ಇಂತಹ ಪರಿಸ್ಥಿತಿಯಲಿ ದೆಹಲಿ ಇನ್ನೂ ದೇಶದ ರಾಜಧಾನಿಯಾಗಿ ಮುಂದುವರೆಯಬೇಕಾ? ಎಂದು ಸಂಸದ ಶಶಿ ತರೂರ್ (Shashi Tharoor) ಪ್ರಶ್ನೆ ಮಾಡಿದ್ದಾರೆ. ನವೆಂಬರ್‌ನಿಂದ ಜನವರಿವರೆಗೂ ಈ ನಗರ ವಾಸಕ್ಕೆ ಯೋಗ್ಯವಲ್ಲ.. ಉಳಿದ ಅವಧಿಯಲ್ಲೂ ಉತ್ತಮ ಜೀವನ ಸಾಧಿಸಲು ಸಾಧ್ಯವಾಗಲ್ಲ. ಕೇಂದ್ರ ಸರ್ಕಾರ ಈ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ.. ಇಂತಹ ಸನ್ನಿವೇಶದಲ್ಲಿ ದೆಹಲಿ ರಾಜಧಾನಿಯಾಗಿ ಉಳೀಬೇಕಾ? ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ.

    ಇತ್ತ ಮಾಲಿನ್ಯ ಹೆಚ್ಚಳದ ಬಗ್ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ವೇಳೆ ವರ್ಚುವಲ್‌ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಿಜೆಐ ಸಂಜೀವ್ ಖನ್ನಾ ಸೂಚಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಬಿಲ್ ಬಾಕಿ, ದೆಹಲಿಯ ಹಿಮಾಚಲ ಭವನ ಮುಟ್ಟುಗೋಲು ಹಾಕಲು ಹೈಕೋರ್ಟ್ ಆದೇಶ

    ಇನ್ನೂ, ವಾಯು ಮಾಲಿನ್ಯ ನಿಯಂತ್ರಣಕ್ಕೆ ಕೃತಕ ಮಳೆ ಸುರಿಸೋದೊಂದೇ ಮಾರ್ಗ.. ಅದಕ್ಕೆ ಅನುಮತಿ ಕೊಡಿ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ದೆಹಲಿ ಮಾತ್ರವಲ್ಲ.. ಉತ್ತರ ಭಾರತದಲ್ಲಿ ಮಂಜು ಆವರಿಸಿದೆ. ನೋಯ್ಡಾ ಬಳಿ ಸರಣಿ ಅಪಘಾತ ನಡೆದಿದೆ. ಹತ್ತಾರು ಕಾರು ಡಿಕ್ಕಿಯಾಗಿ, ಇಬ್ಬರು ಸಾವನ್ನಪ್ಪಿದ್ದಾರೆ. ಆಗ್ರಾದಲ್ಲಿ ತಾಜ್‌ಮಹಲ್ ಕೂಡ ಗೋಚರ ಆಗ್ತಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬುಧವಾರ ಮಹಾ ಚುನಾವಣೆ – ಎಂವಿಎ ವರ್ಸಸ್ ಮಹಾಯುತಿ ಭರ್ಜರಿ ಕದನ

  • ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ

    ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ

    ನವದೆಹಲಿ: ಇಡೀ ವಿಶ್ವದಲ್ಲೇ ಮಾಲಿನ್ಯಯುತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ದೆಹಲಿ (Delhi Air Pollution), ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಜನ ಉಸಿರಾಡುವುದಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ.

    ಈ ಹಿನ್ನೆಲೆಯಲ್ಲಿ ವಾಯು ಗುಣಮಟ್ಟ ನಿರ್ವಹಣೆಯ ಆಯೋಗವು (CAQM) ಮಾಲಿನ್ಯ ನಿಯಂತ್ರಣಕ್ಕೆ 3ನೇ ಹಂತದ ಕ್ರಮ (ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP-III) ಜಾರಿಗೆ ಮುಂದಾಗಿದೆ. ನವೆಂಬರ್‌ 15ರ ಶುಕ್ರವಾರದಿಂದಲೇ ಈ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬರಲಿವೆ.

    ಏನೇನು ಕ್ರಮ ?
    ಜಿಆರ್‌ಎಪಿ-3 (GRAP-III) ಜಾರಿಯಲ್ಲಿರುವವರೆಗೆ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗುತ್ತಿದ್ದು, ಆನ್‌ಲೈನ್ ಮೂಲಕ ತರಗತಿ ನಡೆಸಲು ಸೂಚನೆ ನೀಡಲಾಗಿದೆ. BS-3 ಪೆಟ್ರೋಲ್ ಡಿಸೇಲ್ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗುತ್ತದೆ. ಸಿಎನ್‌ಜಿ, ಇವಿ ಸೇರಿದಂತೆ ಅಂತರರಾಜ್ಯಗಳ BS4 ಡಿಸೇಲ್ ಬಸ್‌ಗಳಿಗೆ ಮಾತ್ರ ದೆಹಲಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ತುರ್ತು ಅಲ್ಲದ ನಿರ್ಮಾಣ ಮತ್ತು ಕಟ್ಟಡ ತೆರವು ಕಾರ್ಯಕ್ಕೆ ತಡೆ ನೀಡಲಾಗಿದ್ದು, ಸರ್ಕಾರಿ ಕಾಮಗಾರಿ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಟ್ಟಡಗಳ ಕಾಮಗಾರಿಗೆ ಮಾತ್ರ ಅನುಮತಿ ನೀಡಲಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ಚಿಮುಕಿಸುವುದನ್ನು ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ. ದೆಹಲಿ ಎನ್‌ಸಿಎಆರ್‌ನಲ್ಲಿ 5ನೇ ತರಗತಿವರೆಗಿನ ಶಾಲೆಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಮುಖ್ಯವಾಗಿ ದೆಹಲಿ ನಿವಾಸಿಗಳು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಕೆಗೆ ಆದ್ಯತೆ ನೀಡಬೇಕು ಎಂದು ಸರ್ಕಾರ ಕಟ್ಟುನಿಟ್ಟಾಗಿ ಹೇಳಿದೆ.

    ಅಪಾಯ ಮಟ್ಟ ಮೀರಿದ ಮಾಲಿನ್ಯ:
    ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, ರಾಜಧಾನಿ ಭಾಗದ ಹಲವು ಪ್ರದೇಶಗಳಲ್ಲಿ ಎಕ್ಯೂಐ ಪ್ರಮಾಣ 450 ದಾಟಿದೆ. ಆನಂದ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್‌ಪುರಿ, ಮುಂಡ್ಕ, ನಜಾಫ್‌ಗಡ, ಲಾಜ್‌ಪತ್ ನಗರ್, ಪತ್ಪರ್‌ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್ ಮತ್ತು ವಾಜಿರ್‌ಪುರ ಪ್ರದೇಶಗಳನ್ನು ಎಕ್ಯೂಐ ಸರಾಸರಿ ‘ತೀವ್ರ’ ಸ್ವರೂಪದ ವರ್ಗದಲ್ಲಿ ಗುರುತಿಸಲಾಗಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ 450ಕ್ಕಿಂತ ಅಧಿಕವಿತ್ತು.

    ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಎಕ್ಯೂಐ ಮಟ್ಟವು ಶೂನ್ಯದಿಂದ 50 ರಷ್ಟಿದ್ದರೆ ಉಸಿರಾಟಕ್ಕೆ ಯೋಗ್ಯ ಗಾಳಿ, 51 ರಿಂದ 100 ರಷ್ಟಿದ್ದರೆ ಸಮಾಧಾನಕರ, 101 ರಿಂದ 200 ರಷ್ಟಿದ್ದರೆ ಸಾಧಾರಣ, 201 ರಿಂದ 300 ರಷ್ಟಿದ್ದರೆ ಕಳಪೆ ಹಾಗೂ 301 ರಿಂದ 400 ರಷ್ಟಿದ್ದರೆ ಅತ್ಯಂತ ಕಳಪೆ, 401 ರಿಂದ 450ರಷ್ಟು ಕಂಡು ಬಂದರೆ ತೀವ್ರ ಕಳಪೆ ಹಾಗೂ 450ಕ್ಕಿಂತ ಹೆಚ್ಚಾದರೆ ಅತ್ಯಂತ ಅಪಾಯಕಾರಿ ಎಂದು ವರ್ಗೀಕರಿಸಲಾಗಿದೆ.

    300ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ:
    ಗುರುವಾರ (ನ.14) ಬೆಳಿಗ್ಗೆ ದಟ್ಟನೆಯ ಮಂಜು ಆವರಿಸಿದ್ದನ್ನು ಕಂಡು ದೆಹಲಿಯ ಜನ ಕಂಗಾಲಾಗಿದ್ದಾರೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AIQ) ಮಟ್ಟ ಅಪಾಯಕಾರಿ ಹಂತದತ್ತ ತಲುಪುತ್ತಿದೆ. ಮುಂಜಾನೆ AQI 452ರ ಗಡಿ ದಾಟಿದೆ. ಇದರಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಗೋಚರತೆ ಕಡಿಮೆಯಾಗಿದ್ದು, 300 ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಫ್ಲೈಟ್‌ರಾಡಾರ್ ತಿಳಿಸಿದೆ.

  • ದೆಹಲಿಯಲ್ಲಿ ತಗ್ಗಿದ ವಾಯು ಮಾಲಿನ್ಯ – ಶಾಲೆ, ಕಾಲೇಜುಗಳು ಪುನಾರಂಭ

    ದೆಹಲಿಯಲ್ಲಿ ತಗ್ಗಿದ ವಾಯು ಮಾಲಿನ್ಯ – ಶಾಲೆ, ಕಾಲೇಜುಗಳು ಪುನಾರಂಭ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Delhi Air Pollution) ತಗ್ಗಿದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿವೆ. ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳನ್ನು (Delhi Schools) ತೆರೆಯಲಾಗಿದ್ದು, ಇದರಲ್ಲಿ ನರ್ಸರಿಯಿಂದ 12ನೇ ತರಗತಿವರೆಗಿನ ಎಲ್ಲಾ ತರಗತಿಗಳನ್ನು ಭೌತಿಕ ಕ್ರಮದಲ್ಲಿ ನಡೆಸಲಾಗುತ್ತಿದೆ. ಆದರೆ, ಕೆಲವು ಖಾಸಗಿ ಶಾಲೆಗಳು ನರ್ಸರಿಯಿಂದ 5ನೇ ತರಗತಿವರೆಗಿನ ತರಗತಿಗಳನ್ನು ಮುಚ್ಚಲು ನಿರ್ಧರಿಸಿವೆ.

    ಮಾಲಿನ್ಯ ಇನ್ನೂ ಕೆಟ್ಟ ಪರಿಸ್ಥಿತಿಯಲ್ಲಿದ್ದು, ಸಣ್ಣ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದು ಖಾಸಗಿ ಶಾಲೆಗಳು ಹೇಳಿವೆ. ಈ ಸಂಬಂಧ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದ್ದು, ಒಂದು ವಾರದವರೆಗೆ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಹಾಗೂ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ

    ದೆಹಲಿ ವಿಶ್ವವಿದ್ಯಾನಿಲಯವು ವಾಯು ಮಾಲಿನ್ಯದ ದೃಷ್ಟಿಯಿಂದ ನವೆಂಬರ್ 13-19ರ ವರೆಗೆ ಚಳಿಗಾಲದ ರಜೆಯನ್ನು ಘೋಷಿಸಿತ್ತು. ಮಾಲಿನ್ಯ ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಎಲ್ಲ ಕಾಲೇಜುಗಳಲ್ಲಿ ತರಗತಿಗಳನ್ನು ಆರಂಭಿಸಿದೆ. ಕಾಲೇಜುಗಳು ಬಹಳ ದಿನಗಳಿಂದ ಮುಚ್ಚಲ್ಪಟ್ಟಿವೆ, ಹೀಗಾಗಿ ಶಿಕ್ಷಣಕ್ಕೆ ನಷ್ಟವಾಗದಂತೆ ಕಾಲೇಜುಗಳನ್ನು ತೆರೆಯುವುದು ಕಡ್ಡಾಯವಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಮಿಚೆಲ್ ಮಾರ್ಷ್- ಭಾರೀ ಟ್ರೋಲ್

    ಗಾಳಿಯ ದಿಕ್ಕು ಮತ್ತು ಗಾಳಿಯ ವೇಗದಲ್ಲಿನ ಬದಲಾವಣೆಯಿಂದಾಗಿ ಗಾಳಿಯ ಗುಣಮಟ್ಟವು ತೀವ್ರ ವರ್ಗದಿಂದ ಕಡಿಮೆಯಾಗಿದೆ ಆದರೆ ಗಾಳಿಯು ಇನ್ನೂ ಅತ್ಯಂತ ಕಳಪೆ ವಿಭಾಗದಲ್ಲಿದೆ. ರಾಜಧಾನಿಯಲ್ಲಿನ ಗಾಳಿಯ ಗುಣಮಟ್ಟವು ಒಟ್ಟಾರೆ AQI 398 ರೊಂದಿಗೆ ಅತ್ಯಂತ ಕಳಪೆ ವರ್ಗದಲ್ಲಿದೆ. ಬೆಳಗಿನ ಜಾವ ಗಾಳಿ ಬೀಸುತ್ತಿರುವುದರಿಂದ ಮಂಜು ಮತ್ತು ಹೊಗೆಯ ಪ್ರಮಾಣ ಕಡಿಮೆಯಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

  • ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

    ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

    ನವದೆಹಲಿ: ಪ್ರತಿ ವರ್ಷವೂ ದೆಹಲಿಯಲ್ಲಿ ವಾಯು ಮಾಲಿನ್ಯದ (Delhi Air Pollution) ಪ್ರಮಾಣ ಹೆಚ್ಚುತ್ತಿದೆ, ತೀವ್ರ ವಾಯು ಮಾಲಿನ್ಯ ಎದುರಿಸಲು ಸಾಧ್ಯವಿಲ್ಲ ಇದಕ್ಕೆ ಪರಿಹಾರವೇನು? ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನೆ ಮಾಡಿದೆ.

    ದೆಹಲಿ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಕೆ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ ದೆಹಲಿ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸರ್ಕಾರಕ್ಕೆ (Rajasthan Government)  ಚಾಟೀ ಬೀಸಿದೆ.

    ದೆಹಲಿಯಲ್ಲಿನ ವಾಯುಮಾಲಿನ್ಯ ಸಮಸ್ಯೆಯನ್ನು ರಾಜಕೀಯ ಚರ್ಚೆಯಾಗಿ ಪರಿವರ್ತಿಸಲು ಸಾಧ್ಯವಿಲ್ಲ, ಮಕ್ಕಳು ಮಾಲಿನ್ಯದಿಂದಾಗಿ ಆರೋಗ್ಯ ಸಮಸ್ಯೆ (Health Problem) ಎದುರಿಸುತ್ತಿದ್ದಾರೆ, ಕೂಡಲೇ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಸಭೆ ನಡೆಸಬೇಕು ಮತ್ತು ಶುಕ್ರವಾರದೊಳಗೆ ಪರಿಸ್ಥಿತಿ ಸುಧಾರಣೆಗೆ ಕ್ರಮವಹಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

    ಕೃಷಿ ತಾಜ್ಯ ಅಥವಾ ಹುಲ್ಲು ಸುಡುವಿಕೆ 20-50 ದಿನಗಳವರೆಗೆ ಮಾತ್ರ ಸಂಭವಿಸುತ್ತದೆ ಎಂದು ಪಂಜಾಬ್ ಎ‌ಜಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೀವು ಅದನ್ನು ಹೇಗೆ ಮಾಡುತ್ತೀರಿ ಎಂಬುದರ ಬಗ್ಗೆ ನಮಗೆ ಬೇಕಾಗಿಲ್ಲ, ಹುಲ್ಲು ಸುಡುವುದು ಕೂಡಲೇ ನಿಲ್ಲಬೇಕು, ಎಲ್ಲ ರಾಜ್ಯಗಳು ಬೆಂಕಿಯನ್ನು ನಿಲ್ಲಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ. ನಿಮ್ಮ ಸ್ಥಳೀಯ ಠಾಣೆಯ ಎಸ್‌ಎಚ್‌ಒ ಸಹ ಇದಕ್ಕೆ ಜವಾಬ್ದಾರಿಯಾಗಿರಬೇಕು. ಇಂದಿನಿಂದ ಅವರು ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ತಾಕೀತು ಮಾಡಿತು.

    ವಿಚಾರಣೆಯ ಸಂದರ್ಭದಲ್ಲಿ, ಅಮಿಕಸ್ ಕ್ಯೂರಿ ಅಪರಾಜಿತಾ ಸಿಂಗ್ ವಾದಿಸಿ, ದೆಹಲಿಯಲ್ಲಿ ಸ್ಥಾಪಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಹಿಂದಿನ ನಿರ್ದೇಶನಗಳ ನಂತರ ಅಳವಡಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ನಾವು ಟವರ್‌ಗಳು ಕಾರ್ಯನಿರ್ವವಂತೆ ಮಾಡಬೇಕು ಎಂದು ಕೋರ್ಟ್‌ ನಿರ್ದೇಶನ ನೀಡಿತು. ಇದನ್ನೂ ಓದಿ: ಇಸ್ರೇಲ್‌ ದಾಳಿ ನಿಲ್ಲಿಸಲು ನಿಮ್ಮ ಸಾಮರ್ಥ್ಯ ಬಳಸಿ: ಮೋದಿಗೆ ಕರೆ ಮಾಡಿ ಇರಾನ್‌ ಅಧ್ಯಕ್ಷ ಮನವಿ

    ಇನ್ನೂ ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಿದ ಪೀಠ, ದೆಹಲಿ ಸರ್ಕಾರದ ಮಾಲಿನ್ಯ ನಿಯಂತ್ರಣ ಕ್ರಮಗಳು, ಅದರಲ್ಲೂ ವಿಶೇಷವಾಗಿ ಬೆಸ-ಸಮ ಯೋಜನೆಗೆ ಎಂದಾದರೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆಯೇ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿತು. ದೀಪಾವಳಿಯ ನಂತರ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ. ಈ ಯೋಜನೆ ಎಂದಾದರೂ ಯಶಸ್ವಿಯಾಗಿದಿಯೇ? ಎಂದು ಪ್ರಶ್ನಿಸಿತು. ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್‌ ಮಿನಿಸ್ಟರ್‌ ಖರ್ಗೆ ಆಪ್ತ ಎಂದ ಬಿಜೆಪಿ

    ದೆಹಲಿ ಸರ್ಕಾರ ಪರ ವಾದ ಮಂಡಿಸಿದ ವಕೀಲರು, ಮೂರು‌ ಹಂತಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳೇನು? ಮತ್ತು 4ನೇ ಹಂತದಲ್ಲಿ‌ ಕೈಗೊಳ್ಳಲಿರುವ ಪ್ರಯತ್ನಗಳೇನು? ಎಂದು ಮನವರಿಕೆ ಮಾಡಿದರು‌. ವರ್ಕ್‌ಫ್ರಮ್‌ ಹೋಮ್‌ ವಾಹನಗಳ ನಿರ್ಬಂಧ ಮತ್ತು ಮರಗಳಿಗೆ ನೀರಿನ ಸಿಂಪಡಿಕೆ‌ ಬಗ್ಗೆ ವಿವರಿಸಿದರು. ಶುಕ್ರವಾರ ವಿಚಾರಣೆ ಮುಂದುವರಿಯಲಿದೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಸಿಎಂಗೆ ಮನವಿ: ಪರಮೇಶ್ವರ್  

  • ಒಂದೇ ವರ್ಷದಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಭಾರೀ ಏರಿಕೆ!

    ಒಂದೇ ವರ್ಷದಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಭಾರೀ ಏರಿಕೆ!

    ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿ (NewDelhi) ಪರಿಸ್ಥಿತಿ ಈಗ ರಾಜ್ಯ ರಾಜಧಾನಿಗೂ ಬರಲಿದೆಯಾ ಅನ್ನೋ ಆತಂಕ ಶುರುವಾಗಿದೆ. ಕಂಡು ಕೇಳರಿಯದಂತಹ ವಾಯುಮಾಲಿನ್ಯ (Air Pollution) ಬೆಂಗಳೂರಿನಲ್ಲಿ (Bengaluru) ಸೃಷ್ಟಿಯಾಗಿದೆ.

    ಬೆಂಗಳೂರಿನಲ್ಲಿ (Bengaluru) ಕಳೆದ ಒಂದೇ ವರ್ಷದಲ್ಲಿ ಶೇ.40ರಷ್ಟು ಮಾಲಿನ್ಯ ಹೆಚ್ಚಳವಾಗಿದೆ. 2022ರ ನವೆಂಬರ್ ತಿಂಗಳ 30 ದಿನಗಳ ಅಧ್ಯಯನದ ಪ್ರಕಾರ ವಾಯು ಗುಣಮಟ್ಟ ಸೂಚ್ಯಂಕ (AQI) 93 ಆಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಎಕ್ಯೂಐ 66 ಇತ್ತು. ಅಂದರೆ ಒಂದೇ ವರ್ಷಕ್ಕೆ ಶೇ.40ರಷ್ಟು ವಾಯುಮಾಲಿನ್ಯ (Air Pollution) ಏರಿಕೆ ಕಂಡಿದೆ. ಈ ಅಂಕಿ ಅಂಶ ನೋಡ್ತಿದ್ರೆ, ಮಾಲಿನ್ಯ ಎಫೆಕ್ಟ್ ನಿಂದ ದೆಹಲಿಯಲ್ಲಿ ಉಂಟಾದ ನಿರ್ಬಂಧಗಳು ರಾಜ್ಯ ರಾಜಧಾನಿಯಲ್ಲೂ ಶುರುವಾಗುವ ಭೀತಿ ಶುರುವಾಗಿದೆ. ಇದನ್ನೂ ಓದಿ: ಕೊರೊನಾ ವೈರಸ್‌ ವುಹಾನ್‌ ಲ್ಯಾಬ್‌ನಿಂದಲೇ ಸೋರಿಕೆ – ವಿಜ್ಞಾನಿಯಿಂದ ಸ್ಫೋಟಕ ಹೇಳಿಕೆ

    ದೀಪಾವಳಿ ನಂತರ ಮಾಲಿನ್ಯ ಹೆಚ್ಚಳ: ದೀಪಾವಳಿ (Diwali) ಬಳಿಕ ವಾಯು ಮಾಲಿನ್ಯ ಹೆಚ್ಚಳವಾಗಿದೆ. ಬೆಂಗಳೂರು ಸಿಟಿ ಜಂಕ್ಷನ್, ಹೆಬ್ಬಾಳ, ಮೈಸೂರು ರಸ್ತೆ, ಸಾಣೆಗುರುವನಹಳ್ಳಿ, ನಿಮ್ಹಾನ್ಸ್, ಜಯನಗರ ಹಾಗೂ ಸಿಲ್ಕ್ ಬೋರ್ಡ್‌ನಲ್ಲಿರುವ 7 ನಿರ್ವಹಣಾ ನಿಲ್ದಾಣಗಳ ಸಹಾಯದಿಂದ ಎಕ್ಯೂಐ ಪ್ರಮಾಣ ಅಳೆಯಲಾಗಿದೆ. ಈ ವೇಳೆ ಕಳಪೆ ಗಾಳಿಯ ಗುಣಮಟ್ಟ ಕಂಡು ಬಂದಿದೆ. ಇದನ್ನೂ ಓದಿ: ವಿವಾಹಪೂರ್ವ ಸೆಕ್ಸ್‌ ಮಾಡಿದ್ರೆ ಅಪರಾಧ – ಇಂಡೋನೇಷ್ಯಾ ಕಾನೂನಿಗೆ ಭಾರೀ ವಿರೋಧ

    ಅಕ್ಟೋಬರ್ ನಂತರ ಚಳಿಗಾಲ ಆರಂಭವಾಗುತ್ತಿದ್ದಂತೆ ನಗರದ ವಾಯು ಗುಣಮಟ್ಟ ಸೂಚ್ಯಂಕ ಮೇಲ್ವಿಚಾರಣೆ ಮಾಡಲಾಗಿದೆ. ಈ ಅಧ್ಯಯನದಲ್ಲಿ ಹೊರ ಬಿದ್ದ ಸ್ಫೋಟಕ ಸತ್ಯದಿಂದ, ನಗರದ ಜನ ಆರೋಗ್ಯ ಕಾಳಜಿ ವಹಿಸಬೇಕು ಎಂದು ಎಚ್ಚರಿಸಿದೆ. ನಗರದಲ್ಲಿ ಗಾಳಿ ಗುಣಮಟ್ಟ ಮಧ್ಯಮ ಮತ್ತು ಅತ್ಯಂತ ಕಳಪೆ ಮಧ್ಯದಲ್ಲಿ ಇದೆ. ಚಳಿಗಾಲಕ್ಕೆ ಸಂಬಂಧಿಸಿದ ನೈಸರ್ಗಿಕ ಪರಿಸ್ಥಿತಿಗಳ ಹೊರತಾಗಿ ಹೆಚ್ಚಾದ ವಾಹನಗಳ ಹೊಗೆಯಿಂದ ಉಸಿರಾಡಲು ಶುದ್ಧ ಗಾಳಿ ಕಡಿಮೆಯಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಭಿಪ್ರಾಯ ಪಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ನಿಷೇಧದ ನಡುವೆಯೂ ಪಟಾಕಿ ಸದ್ದು- ಅತಿಯಾದ ವಾಯುಮಾಲಿನ್ಯದಿಂದ ಉಸಿರಾಟಕ್ಕೂ ತೊಂದರೆ

    ನಿಷೇಧದ ನಡುವೆಯೂ ಪಟಾಕಿ ಸದ್ದು- ಅತಿಯಾದ ವಾಯುಮಾಲಿನ್ಯದಿಂದ ಉಸಿರಾಟಕ್ಕೂ ತೊಂದರೆ

    ನವದೆಹಲಿ: ದೀಪಾವಳಿಯಂದು ನಿಷೇಧ ಹೊರತಾಗಿಯೂ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ (Diwali Cracker) ಸಿಡಿಸಲಾಗಿದೆ. ಇದರಿಂದ ವಾಯು ಗುಣಮಟ್ಟ ತೀವ್ರ ಕುಸಿತವಾಗಿದ್ದು, ಜನರಿಗೆ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ.

    ದೆಹಲಿಯ (Delhi) ವಾಯು ಗುಣಮಟ್ಟ ಸೂಚ್ಯಂಕವು (AQI) ಇಂದು ಬೆಳಗ್ಗೆ 6 ಗಂಟೆಗೆ 323 ರಷ್ಟಿತ್ತು ಎಂದು ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ (SAFAR) ತೋರಿಸಿದೆ. ನೆರೆಯ ಗುರುಗ್ರಾಮ್, ನೋಯ್ಡಾ ಮತ್ತು ಫರಿದಾಬಾದ್‌ನಲ್ಲಿಯೂ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟಕ್ಕೆ ತಲುಪಿದೆ. ದೀಪಾವಳಿಯಿಂದಾಗಿ ಅನುಮತಿಸಿದ್ದ ಡೆಸಿಬಲ್ ಮಿತಿಗಳನ್ನು ಮೀರಿ ಪಟಾಕಿ ಸಿಡಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರ ಉಸಿರಾಟಕ್ಕೂ ತೊಂದರೆಯಾಗುತ್ತಿದೆ.

    ಆದಾಗ್ಯೂ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ವಾಯುಗುಣಮಟ್ಟ ಕಳಪೆಯಾಗಿರುವುದು ಕಡಿಮೆ. ಈ ಬಾರಿ ದೀಪಾವಳಿಯಲ್ಲಿ (Dewali) ಕಳೆದ 24 ಗಂಟೆಯಲ್ಲಿ ಎಕ್ಯೂಐ 312 ಮಾತ್ರ ಇದೆ. 2021ರಲ್ಲಿ 382 ಎಕ್ಯೂಐ, 2020ರಲ್ಲಿ 414 ಎಕ್ಯೂಐ, 2019ರಲ್ಲಿ 337 ಎಕ್ಯೂಐ ಇತ್ತು. ಆದರೆ ಈ ಬಾರಿ 312 ಎಕ್ಯೂಐ ಇದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹೇಳಿದೆ. ಇದನ್ನೂ ಓದಿ: ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

    ಸಾಮಾನ್ಯವಾಗಿ ವಾಯುಗುಣಮಟ್ಟ ಸೂಚ್ಯಂಕ 50ರ ನಡುವೆ ಇದ್ದರೆ ಉತ್ತಮ, 51 ರಿಂದ 100 ತೃಪ್ತಿದಾಯಕ, 101 ರಿಂದ 200 ಮಧ್ಯಮ, 201 ರಿಂದ 300 ಕಳಪೆ, 301 ರಿಂದ 400 ಅತ್ಯಂತ ಕಳಪೆ, 401 ರಿಂದ 500 ತೀವ್ರ ಕಳಪೆ ಎಂದು ಅಂದಾಜಿಸಲಾಗುತ್ತದೆ. ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ಖಾನ್ ಚುನಾವಣೆಗೆ ಕೋರ್ಟ್ ಗ್ರೀನ್ ಸಿಗ್ನಲ್

    ವಾಯು ಮಾಲಿನ್ಯದಿಂದಾಗಿ ದೆಹಲಿ ಸರ್ಕಾರ ಪಟಾಕಿ ನಿಷೇಧಿಸಿದೆ. ಆದೇಶ ಉಲ್ಲಂಘನೆ ಮಾಡಿದವರಿಗೆ ದಂಡ ಹಾಗೂ 6 ತಿಂಗಳ ಶಿಕ್ಷೆ ವಿಧಿಸಲು ಮುಂದಾಗಿದೆ. ಆದರೆ ಸುಪ್ರೀಂ ಕೋರ್ಟ್ ಪಟಾಕಿ ನಿಷೇಧವನ್ನು ತೆಗೆದುಹಾಕಿತ್ತು.

    Live Tv
    [brid partner=56869869 player=32851 video=960834 autoplay=true]