Tag: ಎಕ್ಸ್ ಪ್ರೆಸ್ ರೈಲು

  • ವಂದೇ ಭಾರತ್ ರೈಲ್ವೇ ಸೇವೆ ಆರಂಭ – 2 ವಾರದ ಟಿಕೆಟ್ ಬುಕ್

    ವಂದೇ ಭಾರತ್ ರೈಲ್ವೇ ಸೇವೆ ಆರಂಭ – 2 ವಾರದ ಟಿಕೆಟ್ ಬುಕ್

    ನವದೆಹಲಿ: ಭಾರತದ ಮೊದಲ ಸೆಮಿ ಹೈ ಸ್ಪೀಡ್ ರೈಲು ಎಂಬ ಹೆಗ್ಗಳಿಕೆ ಗಳಿಸಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ತನ್ನ ಮೊದಲ ಸಂಚಾರವನ್ನು ಆರಂಭಿಸಿದೆ.

    ನವದೆಹಲಿಯಿಂದ ವಾರಣಾಸಿಗೆ ಮೊದಲ ಪ್ರಯಾಣ ಬೆಳೆಸಿದ ರೈಲಿನ ಮೊದಲ 2 ವಾರದ ಎಲ್ಲಾ ಟಿಕೆಟ್ ಕೂಡ ಬುಕಿಂಗ್ ಪೂರ್ಣಗೊಂಡಿದೆ. ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಇಂದು ಬೆಳ್ಗಗೆ ತಮ್ಮ ಟ್ವಿಟ್ಟರ್ ನಲ್ಲಿ ರೈಲು ನಿಲ್ದಾಣದಿಂದ ಹೊರಟಿರುವ ವಿಡಿಯೋವನ್ನು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು 2 ದಿನಗಳ ಹಿಂದೆ ರೈಲಿಗೆ ಚಾಲನೆ ನೀಡಿದ್ದರು. ಇಂದಿನಿಂದ ರೈಲಿನ ವಾಣಿಜ್ಯ ಸಂಚಾರ ಆರಂಭವಾಗಿದೆ. ಮೋದಿ ಅವರು ಚಾಲನೆ ನೀಡಿದ ಬಳಿಕ ರೈಲಿನಲ್ಲಿ ಕಾಣಿಸಿಕೊಂಡಿದ್ದ ತಾಂತ್ರಿಕ ತೊಂದರೆ ದೇಶದ್ಯಾಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಆ ಬಳಿಕ ರೈಲಿನಲ್ಲಿ ಉಂಟಾದ ಸಮಸ್ಯೆಯನ್ನು ಪರಿಶೀಲಿಸಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

    ದೆಹಲಿಯಿಂದ ವಾರಣಾಸಿ ನಡುವೆ ಸಂಚರಿಸುವ ರೈಲಿಗೆ ಮೊದಲು ಟ್ರೈನ್ 18 ಎಂದು ಹೆಸರಿಸಲಾಗಿತ್ತು. ಆ ಬಳಿಕ ವಂದೇ ಭಾರತ್ ಎಂದು ಬದಲಿಸಲಾಯಿತು. ಗಂಟೆಗೆ 160 ಕಿಮೀ ವೇಗದಲ್ಲಿ ಚಲಿಸುವ ರೈಲು 16 ಬೋಗಿಗಳನ್ನು ಹೊಂದಿದ್ದು, 97 ಕೋಟಿ ರೂ. ವೆಚ್ಚದಲ್ಲಿ ತಯಾರಿಸಲಾಗಿದೆ. ರೈಲಿನಲ್ಲಿ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ವೈಪೈ ಸಂಪರ್ಕ, ಹವಾ ನಿಯಂತ್ರಣ, ಜಿಪಿಎಸ್, ಸ್ಪರ್ಶ ರಹಿತ ವ್ಯಾಕ್ಯುಮ್ ಶೌಚಾಲಯ ಸೌಲಭ್ಯಗಳನ್ನು ಹೊಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶೀಘ್ರದಲ್ಲೇ ಮಂಗ್ಳೂರು-ಬೆಂಗ್ಳೂರು ನಡುವೆ ಮತ್ತೊಂದು ರೈಲು ಓಡಾಟ

    ಶೀಘ್ರದಲ್ಲೇ ಮಂಗ್ಳೂರು-ಬೆಂಗ್ಳೂರು ನಡುವೆ ಮತ್ತೊಂದು ರೈಲು ಓಡಾಟ

    ಹಾಸನ: ಬಹುದಿನಗಳ ಬೇಡಿಕೆಯಾದ ಮಂಗಳೂರು-ಬೆಂಗಳೂರು ನಡುವೆ ಮತ್ತೊಂದು ರೈಲು ಓಡಾಟ ಶೀಘ್ರವಾಗಿ ಆರಂಭವಾಗಲಿದೆ. ಇದು ಬೆಂಗಳೂರು-ಮಂಗಳೂರು ನಡುವೆ ಹೊಸ ಎಕ್ಸ್ ಪ್ರೆಸ್ ರೈಲಾಗಿದ್ದು, ಕೇಂದ್ರ ಇದಕ್ಕೆ ಹಸಿರು ನಿಶಾನೆ ನೀಡಿದೆ.

    ನೈಋತ್ಯ ರೈಲ್ವೆ ವಲಯ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಇಲಾಖೆ ಒಪ್ಪಿಗೆ ನೀಡಿದ್ದು, ಇದೀಗ ಓಡಾಟ ಆರಂಭಿಸಲು ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರು-ಶ್ರವಣಬೆಳಗೊಳ-ಹಾಸನ-ಮಂಗಳೂರು ಸೆಂಟ್ರಲ್ ನಡುವೆ ಈ ಹೊಸ ಎಕ್ಸ್ ಪ್ರೆಸ್ ರೈಲು ಸಂಚಾರ ನಡೆಸಲಿದೆ. ವಾರದಲ್ಲಿ ಮೂರು ದಿನಗಳ ರೈಲು ಸಂಚರಿಸಲಿದ್ದು. ಈ ರೈಲು 22 ಬೋಗಿಗಳನ್ನು ಹೊಂದಿರಲಿದೆ. ಇದನ್ನು ಓದಿ: 21 ವರ್ಷಗಳ ಕನಸು ಇಂದು ನನಸು – ಹಾಸನ-ಬೆಂಗಳೂರು ರೈಲು ಮಾರ್ಗ ಉದ್ಘಾಟನೆ

    ವೇಳಾಪಟ್ಟಿ ಇಂತಿದೆ:
    ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಈ ರೈಲು ಹೊರಡುತ್ತದೆ. ನೂತನ ರೈಲಿನ ವೇಳಾಪಟ್ಟಿ ಪ್ರಕಾರ ಮಂಗಳವಾರ, ಶುಕ್ರವಾರ, ಭಾನುವಾರ ಮಧ್ಯಾಹ್ನ 4.30ಕ್ಕೆ ಬೆಂಗಳೂರಿನಿಂದ ಹೊರಡುವ ರೈಲು 8 ಗಂಟೆಗೆ ಹಾಸನಕ್ಕೆ ತಲುಪಲಿದೆ. ಮುಂಜಾನೆ 4.30ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ತಲುಪುತ್ತದೆ.

    ಮಂಗಳೂರಿನಿಂದ ಸೋಮವಾರ, ಬುಧವಾರ, ಶನಿವಾರ ಸಂಜೆ 7 ಗಂಟೆಗೆ ಹೊರಡಲಿರುವ ರೈಲು ತಡರಾತ್ರಿ 1.30ಕ್ಕೆ ಹಾಸನಕ್ಕೆ ತಲುಪಲಿದೆ. ಮುಂಜಾನೆ 4.30ಕ್ಕೆ ಯಶವಂತಪುರ ರೈಲು ನಿಲ್ದಾಣಕ್ಕೆ ಬಂದು ಸೇರಲಿದೆ. ಮಾರ್ಗದಲ್ಲಿರುವ ನಿಲ್ದಾಣಗಳಾದ ನೆಲಮಂಗಲ, ಕುಣಿಗಲ್, ಯಡಿಯೂರು, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ, ಪುತ್ತೂರು ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv