Tag: ಎಚ್ ಡಿ ಕುಮಾರಸ್ವಾಮಿ

  • ಸರ್ಕಾರ ನಡೆಸುವುದಂದ್ರೆ ಹೂವಿನ ಹಾಸಿಗೆಯಲ್ಲ, ಅದೊಂದು ಮುಳ್ಳಿನ ಹಾಸಿಗೆ- ಸಿಎಂ ಕಣ್ಣೀರಿಗೆ ಜಾರ್ಜ್ ಸಮರ್ಥನೆ

    ಸರ್ಕಾರ ನಡೆಸುವುದಂದ್ರೆ ಹೂವಿನ ಹಾಸಿಗೆಯಲ್ಲ, ಅದೊಂದು ಮುಳ್ಳಿನ ಹಾಸಿಗೆ- ಸಿಎಂ ಕಣ್ಣೀರಿಗೆ ಜಾರ್ಜ್ ಸಮರ್ಥನೆ

    – ಅರುಣ್ ಜೇಟ್ಲಿ ಟ್ವೀಟ್ ಗೆ ಜಾರ್ಜ್ ಟಾಂಗ್

    ಬೆಳಗಾವಿ: ಕಾಂಗ್ರೆಸ್ಸಿನವರಿಂದ ಯಾವುದೇ ಒತ್ತಡವಿಲ್ಲ ಎಂದು ಕುಮಾರಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಮಸ್ಯೆಗಳಿಗೆ ಸ್ಪಂದಿಸುವ ವಿಚಾರದಲ್ಲಿ ಕಣ್ಣೀರು ಹಾಕಿದ್ದಾರೆ. ಕುಮಾರಸ್ವಾಮಿ ವೀಕ್ ಅಲ್ಲಾ ಅವರು ಸ್ಟ್ರಾಂಗ್ ಇದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ, ಐಟಿ ಬಿಟಿ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ ಕಣ್ಣೀರು ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರ ನಡೆಸುವುದಂದ್ರೆ ಹೂವಿನ ಹಾಸಿಗೆಯಲ್ಲ ಅದೊಂದು ಮುಳ್ಳಿನ ಹಾಸಿಗೆ. ಯಾರೇ ಮುಖ್ಯಮಂತ್ರಿಯಾದ್ರೂ ಸರ್ಕಾರ ನಡೆಸುವುದು ಸುಲಭವಲ್ಲ. ಸಿಎಂ ಹುದ್ದೆ ಎನ್ನುವುದು ಎಂಜಾಯ್ ಮಾಡುವ ಹುದ್ದೆಯಲ್ಲ. ಎಲ್ಲಾ ಸಿಎಂಗಳಿಗೂ ಸರ್ಕಾರ ನಡೆಸುವಾಗ ಕಷ್ಟ ಇದ್ದೇ ಇರುತ್ತೆ. ಕೆಲವೊಬ್ಬರು ನೋವು ಒಳಗಡೆ ಇಟ್ಟುಕೊಳ್ಳುತ್ತಾರೆ ಇವರು ಕಣ್ಣೀರಿನ ಮೂಲಕ ಹೊರ ಹಾಕಿದ್ದಾರೆ ಅಷ್ಟೇ ಅಂತ ಹೇಳಿದ್ರು. ಇದನ್ನೂ ಓದಿ: ದೇವೇಗೌಡರಿಗೆ ಆದ ಸ್ಥಿತಿಯೇ ಕುಮಾರಸ್ವಾಮಿಗೂ ಆಗಲಿದೆ : ಸಮ್ಮಿಶ್ರ ಸರ್ಕಾರದ ವಿರುದ್ಧ ಅರುಣ್ ಜೇಟ್ಲಿ ವ್ಯಂಗ್ಯ

    ಮಾಧ್ಯಮ ಮಿತ್ರರು ಸಿಎಂ ಅವರ ಒಂದೊಂದು ವಿಷಯ ತೆಗೆದು ಹೈಲೆಟ್ ಮಾಡುವ ಬದಲು ಮನಸ್ಸು ಮಾಡಿದ್ರೆ ಒಳ್ಳೆ ರೀತಿಯಿಂದ ತೋರಿಸಬಹುದು. ಸಿಎಂ ಜನಪರ ಇದ್ದಾರೆ. ಜನರ ನೋವು ಒಳಗಡೆ ತೆಗೆದುಕೊಂಡಿದ್ದಾರೆ ಅಂತಾ ಹೇಳಬಹುದು. ಆದ್ರೇ ನೀವು ಸಿಎಂ ಅಳ್ತಾರೆ ಅಳ್ತಾರೆ ಅಂತಾ ಹೇಳಿದ್ರೇ ಹೇಗ್ ಆಗುತ್ತೆ. ಅಳು ಅವರ ಹೃದಯದಿಂದ ಬಂದಿದ್ದು, ಅವರೇನು ಅಶಕ್ತರೇನಲ್ಲ ಶಕ್ತರೆ ಅಂತ ಅವರು ತಿಳಿಸಿದ್ರು.

    ಇದೇ ವೇಳೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಟ್ವೀಟ್ ಗೆ ಟಾಂಗ್ ಕೊಟ್ಟ ಜಾರ್ಜ್, ಜೇಟ್ಲಿಯವರು ಬಿಜೆಪಿಯವರು. ಕುಮಾರಸ್ವಾಮಿ ಸ್ಟ್ರಾಂಗ್ ಇದ್ದಾರೆ ಸಮ್ಮಿಶ್ರ ಸರ್ಕಾರ ಸ್ಟ್ರಾಂಗ್ ಆಗಿದೆ ಅಂತಾ ಬಿಜೆಪಿಯವರು ಹೇಳ್ತಾರಾ ಹೇಳಲ್ಲ. ಅವರು ರಾಜಕೀಯ ಉದ್ದೇಶ ಇಟ್ಟುಕೊಂಡೇ ಮಾತನಾಡುತ್ತಾರೆ. ಅವರ ಅಭಿಪ್ರಾಯ ಹೇಳಿದ್ದಾರೆ ಅದಕ್ಕೆಲ್ಲಾ ನಾವು ಉತ್ತರ ಕೊಡಲು ಆಗಲ್ಲ ಅಂದ್ರು. ಇದನ್ನೂ ಓದಿ: ನೀವು ಅತ್ತರೆ ನಮಗೂ ಅಳು ಬರುತ್ತೆ – ಹೆಚ್‍ಡಿಕೆಗೆ ಧೈರ್ಯ ತುಂಬಿದ ಹಾಸನ ಬಾಲಕಿ

    ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಚಳುವಳಿ ಸಮರ್ಥಿಸಿಕೊಂಡ ಜಾರ್ಜ್, ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಿದ್ದಾರೆ. ಪತ್ರದ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಸಮಸ್ಯೆಗಳನ್ನ ಪತ್ರದ ಮೂಲಕ ಹೇಳುತ್ತಿದ್ದಾರೆ ಎಂದರು.

  • ಕಾಂಗ್ರೆಸ್ಸಿನವರನ್ನು ಕೆಟ್ಟವರನ್ನಾಗಿ ಬಿಂಬಿಸಿ ಸಿಂಪತಿಗಿಟ್ಟಿಸಲು ಅಪ್ಪ-ಮಗ ಕಣ್ಣೀರು: ಆಯನೂರು ಮಂಜುನಾಥ್

    ಕಾಂಗ್ರೆಸ್ಸಿನವರನ್ನು ಕೆಟ್ಟವರನ್ನಾಗಿ ಬಿಂಬಿಸಿ ಸಿಂಪತಿಗಿಟ್ಟಿಸಲು ಅಪ್ಪ-ಮಗ ಕಣ್ಣೀರು: ಆಯನೂರು ಮಂಜುನಾಥ್

    ಶಿವಮೊಗ್ಗ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅವರ ಪಕ್ಷದ ಸಭೆಯಲ್ಲಿ ಕಣ್ಣೀರು ಹಾಕುತ್ತಾರೆ. ಬಯಸಿದ ಕೂಡಲೇ ಕಣ್ಣೀರು ಹಾಕುವವರು ದೇವೇಗೌಡರು ಹಾಗೂ ಕುಮಾರಸ್ವಾಮಿ ಅಂತ ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ್ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ನಲ್ಲಿ ಕುಮಾರಸ್ವಾಮಿಯವರು ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳನ್ನ ಮುಂದುವರಿಸುತ್ತೆನೆ ಎಂದು ಹೇಳಿದ್ದರು. ದಿನಬೆಳಗಾದರೆ ಹಿಂದಿನ ಸರ್ಕಾರದ ಯೋಜನೆ ಬಗ್ಗೆ ಏನೆಲ್ಲಾ ಆಗುತ್ತಿದೆ ಅನ್ನೋದನ ನೋಡಲಾಗುತ್ತಿದೆ. ಕುಮಾರಸ್ವಾಮಿ ಆಡಳಿತದಲ್ಲಿ ವಿಫಲಗೊಂಡರೆ ತಮ್ಮ ವಿಫಲತೆಗೆ ಕಾಂಗ್ರೆಸ್ ಪಕ್ಷ ಕಾರಣ ಅಂತ ಹೇಳಬಹುದು ಅಂದ್ರು.  ಇದನ್ನೂ ಓದಿ: ಕುಮಾರಸ್ವಾಮಿಗೆ ಕಾಂಗ್ರೆಸ್ ವಿಷ ಕೊಟ್ಟಿಲ್ಲ, ಅಮೃತವನ್ನೇ ಕೊಟ್ಟಿದೆ: ಕೈ ಶಾಸಕ

    ಪಾಲುದಾರ ರಾಜಕಿಯ ಪಕ್ಷದ ನಾಯಕರ ವಿರುದ್ಧ ದೇವೇಗೌಡರು ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿಯವರು ನೂತನ ಬಜೆಟ್ ಮಂಡಿಸುವುದರ ಬದಲಿಗೆ ಪೂರಕ ಬಂಜೆಟ್ ಮಂಡಿಸಿದ್ದಾರೆ. ಅವರ ಸಹೋದರ ಎಚ್.ಡಿ ರೇವಣ್ಣನವರ ಖಾತೆಗೆ ಬಜೆಟ್ ನಲ್ಲಿ ಹೊಸ ಯೋಜನೆಗಳಿಗೆ ಕೋಟಿಗಟ್ಟಲೆ ಹಣವನ್ನ ನೀಡಲಾಗಿದೆ. ಈ ಬಾರಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ನಲ್ಲಿ ಹೊಸತನ ಇಲ್ಲ, ಇದು ಅಣ್ಣ- ತಮ್ಮರ ಬಜೆಟ್ ಅಂತ ಟಾಂಗ್ ನೀಡಿದ್ರು.  ಇದನ್ನೂ ಓದಿ: ನಾನು ವಿಷಕಂಠ ಎಂಬ ಸಿಎಂ ಮಾತಿಗೆ ಮಾಜಿ ಸಚಿವ ಎ.ಮಂಜು ತಿರುಗೇಟು

    ಕಾಂಗ್ರೆಸ್ ಹೆಗಲ ಮೇಲೆ ಬಂದೂಕು ಇಟ್ಟುಕೊಂಡು ಕುಮಾರಸ್ವಾಮಿ, ದೇವೇಗೌಡರು ಜನರಿಗೆ ಹೊಡೆಯುತ್ತಿದ್ದಾರೆ. ಅಪ್ಪ-ಮಕ್ಕಳು ಕಣ್ಣೀರು ಹಾಕಿ ಜನರ ಮನಸ್ಸಿನಲ್ಲಿ ಕಾಂಗ್ರೆಸ್ ನವರನ್ನು ಕೆಟ್ಟವರನ್ನಾಗಿ ಮಾಡಿ ಸಿಂಪತಿ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿಯವರ ಪ್ರತಿಷ್ಠೆಗೆ ಈ ಬಜೆಟ್ ಮಂಡನೆಯಾಗಿದೆ. ರಾಜ್ಯದಲ್ಲಿ ಅತಿವೃಷ್ಠಿಯಾಗಿದೆ, ಅದಕ್ಕೆ ಯಾವುದೇ ಯೋಜನೆ ಕೈಗೊಂಡಿಲ್ಲ. ಮೊದಲನೇ ಅಧಿವೇಶನ ವ್ಯರ್ಥವಾಗಿದೆ. ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಕುಮಾರಸ್ವಾಮಿ ತಾವು ಕೊಟ್ಟ ಭರವಸೆಯನ್ನ ಈಡೇರಿಸಿಲ್ಲ. ಸ್ತ್ರೀ ಶಕ್ತಿ ಸಂಘ, ನೇಕಾರರು, ಮೀನುಗಾರ ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿಲ್ಲ ಅಂತ ಅವರು ಹೇಳಿದ್ರು. ಇದನ್ನೂ ಓದಿ: ಸಿಎಂ ನಟ ಭಯಂಕರ, ತಮ್ಮ ನಟನೆಯಿಂದ ಜನರನ್ನು ಮೂರ್ಖರನ್ನಾಗಿಸ್ತಿದ್ದಾರೆ: ಬಿಜೆಪಿ

  • ಮಾನವೀಯತೆ ಇದ್ದವ್ರಿಗೆ ಸಹಜವಾಗಿ ಕಣ್ಣೀರು ಬರುತ್ತೆ- ಎಚ್‍ಡಿಕೆ ಬೆನ್ನಿಗೆ ನಿಂತ ವೆಂಕಟರಾವ್ ನಾಡಗೌಡ

    ಮಾನವೀಯತೆ ಇದ್ದವ್ರಿಗೆ ಸಹಜವಾಗಿ ಕಣ್ಣೀರು ಬರುತ್ತೆ- ಎಚ್‍ಡಿಕೆ ಬೆನ್ನಿಗೆ ನಿಂತ ವೆಂಕಟರಾವ್ ನಾಡಗೌಡ

    ಕೊಪ್ಪಳ: ಮಾನವೀಯತೆ ಇದ್ದವರಿಗೆ ಸಹಜವಾಗಿ ಕಣ್ಣೀರು ಬರುತ್ತದೆ. ಕಲ್ಲು ಹೃದಯಿಗಳಿಗೆ ಬರೋದಿಲ್ಲ. ಸಾಕಷ್ಟು ಕೆಲಸ ಮಾಡಿದ್ರೂ ಟೀಕೆ ಬಂದಾಗ ಮನೋಸಹಜವಾಗಿ ಕಣ್ಣೀರು ಬರುತ್ತೆ ಎಂದು ಪಶುಸಂಗೋಪನಾ ಇಲಾಖೆಯ ಸಚಿವ ವೆಂಕಟರಾವ್ ನಾಡಗೌಡ ಅವರು ಕಾಂಗ್ರೆಸ್ ಶಾಸಕ ಸುಧಾಕರ್ ಗೆ ಟಾಂಗ್ ಕೊಟ್ಟಿದ್ದಾರೆ.

    ಜೆಡಿಎಸ್ ಶಾಸಕರಿಗೆ ಅನುದಾನ ನೀಡಬಾರದು ಎಂಬ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿಕೆ ವಿಚಾರದ ಕುರಿತು ಗಂಗಾವತಿಯಲ್ಲಿ ಮಾತನಾಡಿದ ಅವರು, ಅನ್ಸಾರಿ ಬೇಕಾದ್ದನ್ನು ಹೇಳಬಹುದು. ಎಲ್ಲ ಪಕ್ಷದ ಶಾಸಕರಿಗೂ ಅಗತ್ಯ ಅನುದಾನ ನೀಡುವುದು ಜವಾಬ್ದಾರಿಯುತ ಸರ್ಕಾರದ ಕೆಲಸವಾಗಿದೆ. ಅನುದಾನ ತರುವ ಧಮ್ ನಮಗಿದೆ ಅಂತ ಹೇಳಿದ್ರು. ಇದನ್ನೂ ಓದಿ: ಕುಮಾರಸ್ವಾಮಿಗೆ ಕಾಂಗ್ರೆಸ್ ವಿಷ ಕೊಟ್ಟಿಲ್ಲ, ಅಮೃತವನ್ನೇ ಕೊಟ್ಟಿದೆ: ಕೈ ಶಾಸಕ

    ಎಲ್ಲ ಭಾಗದಲ್ಲಿ ಪಶು ಆಸ್ಪತ್ರೆ ಮೇಲ್ದರ್ಜೆಗೆ ಏರಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ರಾಯಚೂರಿನಲ್ಲಿ ಪಶು ಸಂಗೋಪನೆ ಇಲಾಖೆ ಡಿವಿಜನಲ್ ಆಫೀಸ್ ಆತಂಭಿಸಲಾಗುವುದು. ನಮ್ಮ ಭಾಗದಲ್ಲಿ ಪಶು ವೈದ್ಯರ ಕೊರತೆ ಇರುವ ಬಗ್ಗೆ ಮಾಹಿತಿ ಇದೆ. 150 ಖಾಲಿ ಹುದ್ದೆಗೆ ಅರ್ಜಿ ಕರೆದಿದ್ದು, ಕೇವಲ 60 ವೈದ್ಯರು ದಾಖಲಾತಿ ಪರಿಶೀಲನೆಗೆ ಬಂದಿದ್ದಾರೆ. ರೈತರಿಗೆ ತೊಂದರೆ ಆಗದಂತೆ ಎರಡು ಬೆಳೆಗೆ ನೀರು ಬಿಡುವ ಬಗ್ಗೆ ಸಭೆಯಲ್ಲಿ ಚಿಂತನೆ ನಡೆಸಲಾಗಿದೆ ಅಂದ್ರು.   ಇದನ್ನೂ ಓದಿ: ನಾನು ವಿಷಕಂಠ ಎಂಬ ಸಿಎಂ ಮಾತಿಗೆ ಮಾಜಿ ಸಚಿವ ಎ.ಮಂಜು ತಿರುಗೇಟು

    ಸಾಲ ಮನ್ನಾದ ಹೊರೆ ಭರಿಸಲು ತೆರಿಗೆ ಏರಿಕೆ ಅನಿವಾರ್ಯವಾಗಿದೆ. ಎಲ್ಲ ಸರ್ಕಾರಗಳು ಇದನ್ನೇ ಮಾಡಬೇಕು. ಹಣ ಪ್ರಿಂಟ್ ಮಾಡಿ ತರೋದಕ್ಕೆ ಆಗಲ್ಲ ಅಂತ ಅವರು ಹೇಳಿದ್ರು.  ಇದನ್ನೂ ಓದಿ: ಸಿಎಂ ನಟ ಭಯಂಕರ, ತಮ್ಮ ನಟನೆಯಿಂದ ಜನರನ್ನು ಮೂರ್ಖರನ್ನಾಗಿಸ್ತಿದ್ದಾರೆ: ಬಿಜೆಪಿ

  • ಕಾಂಗ್ರೆಸ್ ಜೆಡಿಎಸ್‍ಗೆ, ಜೆಡಿಎಸ್ ಕಾಂಗ್ರೆಸ್‍ಗೆ ಸರೆಂಡರ್: ಹೆಚ್‍ಡಿಡಿಗೆ ಈಶ್ವರಪ್ಪ ಟಾಂಗ್

    ಕಾಂಗ್ರೆಸ್ ಜೆಡಿಎಸ್‍ಗೆ, ಜೆಡಿಎಸ್ ಕಾಂಗ್ರೆಸ್‍ಗೆ ಸರೆಂಡರ್: ಹೆಚ್‍ಡಿಡಿಗೆ ಈಶ್ವರಪ್ಪ ಟಾಂಗ್

    ಕಲುಬುರಗಿ: ಕಾಂಗ್ರೆಸ್ ಜೆಡಿಎಸ್‍ಗೆ ಸರೆಂಡರ್ ಆಗಿದೆ, ಹಾಗೇ ಜೆಡಿಎಸ್ ಕಾಂಗ್ರೆಸ್‍ಗೆ ಸರೆಂಡರ್ ಆಗಿದೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವಕ್ಕೆ ಅಭ್ಯಂತರವಿಲ್ಲ ಎಂದು ಹೇಳಿಕೆ ನೀಡಿದ್ದ ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿದರು. ದೇವೇಗೌಡರ ಹೇಳಿಕೆಯಲ್ಲಿ ಏನೂ ಹೊಸತಿಲ್ಲ. ಕಾಂಗ್ರೆಸ್-ಜೆಡಿಎಸ್ ಒಂದಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರು ಸ್ಪರ್ಧಿಸಲಿವೆ. ಇದಕ್ಕೆ ನಾವು ಸಿದ್ಧವಾಗಿದ್ದೇವೆ. ರಾಜ್ಯದಲ್ಲಿ 25 ಮತಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುತ್ತದೆ ವಿಶ್ವಾಸ ವ್ಯಕ್ತಪಡಿಸಿದರು.

    ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಹುಲ್ ಗಾಂಧಿ ಅವರಿಗೆ ಪುಣ್ಯಾತ್ಮ ಎಂದಿದ್ದರು. ಈಗ ಪುಣ್ಯಾತ್ಮನ ಋಣ ತಿರಿಸಲು ಮುಂದಾಗಿದ್ದಾರೆ. ರಾಹುಲ್ ಗಾಂಧಿ ಪುಣ್ಯಾತ್ಮ ಹೌದೋ, ಪಾಪಾತ್ಮ ಹೌದೋ ಎನ್ನುವುದನ್ನು ರಾಜ್ಯದ ಜನ ತೀರ್ಮಾನ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

  • ಈಗಷ್ಟೇ ಅಧಿಕಾರಕ್ಕೆ ಬಂದ ಹೆಚ್‍ಡಿಕೆ ಮೇಲೆ ಆರೋಪ ಮಾಡಿದ್ರೆ ಹೇಗೆ: ಹೆಚ್‍ಡಿಡಿ

    ಈಗಷ್ಟೇ ಅಧಿಕಾರಕ್ಕೆ ಬಂದ ಹೆಚ್‍ಡಿಕೆ ಮೇಲೆ ಆರೋಪ ಮಾಡಿದ್ರೆ ಹೇಗೆ: ಹೆಚ್‍ಡಿಡಿ

    ಧಾರವಾಡ: ರಾಜ್ಯ ಕಂಡ ಎಲ್ಲಾ ಮುಖ್ಯಮಂತ್ರಿಗಳ ಕಾಲದಲ್ಲಿ ಏನು ಆಗಿದೆ ಎನ್ನುವುದು ಚರ್ಚೆಯಾಗಬೇಕು. ಎರಡು ತಿಂಗಳಿಂದ ಹಿಂದಷ್ಟೇ ಅಧಿಕಾರಕ್ಕೆ ಬಂದ ದೇವೇಗೌಡ್ರ ಮಗನ ಮೇಲೆ ಆರೋಪ ಮಾಡಿದರೆ ಹೇಗೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

    ನಗರದ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ನಿವಾಸಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭೇಟಿ ನೀಡಿ, ಬಳಿಕ ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ಹೇಳಿಕೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

    ಯಾರ ಯಾರ ಕಾಲದಲ್ಲಿ ಸಮಗ್ರ ಕರ್ನಾಟಕ ಅಭಿವೃದ್ಧಿಯಾಗಿದೆ. ಮೈಸೂರು ಅಭಿವೃದ್ಧಿ ಎಷ್ಟು ಆಗಿದೆ ಎನ್ನುವುದರ ಬಗ್ಗೆ ವಿಧಾನಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಲಹೆ ಕೊಟ್ಟಿದ್ದೇನೆ. ಹೀಗಾಗಿ ಉತ್ತರ ಕರ್ನಾಟಕ ಭಾಗಕ್ಕೆ ಏನು ಕೊಡುಗೆ ನೀಡಿಲ್ಲ ಎನ್ನುವ ಚರ್ಚೆ ಬೇಡ ಎಂದು ಅವರು ಹೇಳಿದರು.

    ಸದನದಲ್ಲಿ ಮೈಸೂರು ಭಾಗಕ್ಕೆ ಯಾರ ಕಾಲದಲ್ಲಿ ಹೆಚ್ಚು ಕೊಡುಗೆ ನೀಡಲಾಗಿದೆ. ರಸ್ತೆ, ಸಕ್ಕರೆ ಕಾರ್ಖಾನೆ ಸೇರಿದಂತೆ ಅನೇಕ ಯೋಜನೆ, ಕೊಡುಗೆ ಹಾಗೂ ನಂಜುಡಪ್ಪ ವರದಿಯನ್ನು ಸುದೀರ್ಘವಾಗಿ ಎರಡ್ಮೂರು ದಿನ ಚರ್ಚೆ ನಡೆಸಬೇಕು. ಆಗ ಮಾತ್ರ ಈ ರೀತಿ ಆರೋಪ ಮಾಡುವುದು ನಿಲ್ಲುತ್ತದೆ. ಈಗಿರುವ ಅಸಮಾಧಾನ ತಿಳಿಯಾಗಲು ಅಂಕಿ ಸಂಖ್ಯೆಗಳ ಮೇಲೆ ಚರ್ಚೆ ನಡೆಸಲಿ ಎಂದು ವಾಗ್ದಾಳಿ ನಡೆಸಿದರು.

    ಇಲ್ಲಿಯವರೆಗೆ 26 ವರ್ಷ ಲಿಂಗಾಯತರು ರಾಜ್ಯವನ್ನು ಆಳಿದ್ದಾರೆ. ರಾಮಕೃಷ್ಣ ಹೆಗಡೆ ಮತ್ತು ದೇವರಾಜ್ ಅರಸು ಕೆಲ ವರ್ಷ ಆಳ್ವಿಕೆ ನಡೆಸಿದ್ದರು. ದೇವೇಗೌಡ್ರ ಮಗ ಈಗಷ್ಟೇ ಸಿಎಂ ಆಗಿದ್ದಾರೆ. ಹೀಗಾಗಿ ಎಲ್ಲ ನಿರ್ಧಾರ ಕೈಗೊಂಡರೆ ಹೇಗೆ ಎಂದು ಪ್ರಶ್ನಿಸಿದರು.

  • ಕುಮಾರಸ್ವಾಮಿಯವರೇ ಕೊಡಗಿಗೆ ಭೇಟಿ ನೀಡೋವಾಗ ಮಾಧ್ಯಮದವರನ್ನೂ ಕರೆದುಕೊಂಡು ಹೋಗಿ- ಡಿವಿಎಸ್

    ಕುಮಾರಸ್ವಾಮಿಯವರೇ ಕೊಡಗಿಗೆ ಭೇಟಿ ನೀಡೋವಾಗ ಮಾಧ್ಯಮದವರನ್ನೂ ಕರೆದುಕೊಂಡು ಹೋಗಿ- ಡಿವಿಎಸ್

    ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೀವು ಕೊಡಗಿಗೆ ಭೇಟಿ ನೀಡುವಾಗ ಎಲ್ಲಾ ಮಾಧ್ಯಮದವರನ್ನು ಕರೆದುಕೊಂಡು ಹೋಗಿ. ಆ ಎರಡು ದಿನ ನೀವು ಏನೆಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೀರಿ ಅದನ್ನು ಇಡೀ ರಾಜ್ಯದ ಜನರಿಗೆ ತಿಳಿಸುವಂತಹ ಕೆಲಸ ಮಾಡಿದ್ರೆ ಮಾತ್ರ ನೀವು ಹೇಳಿದಂತಹ ಮಾತಿಗೆ ಗೌರವ ಬರುತ್ತದೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗತ್ತಿಗೇ ಗೊತ್ತಿರುವಂತಹ ಸತ್ಯ ಸಣ್ಣ ಮಗುವಿಗೂ ಗೊತ್ತಾಗಿದೆ. ಎರಡು ದಿನ ಕೊಡಗಿಗೆ ಹೋಗಿ ಇರುತ್ತೇನೆ ಅಂತ ಸಿಎಂ ಅವರು ಹೇಳಿದ್ದಾರಂತೆ. ಅಲ್ಲಿ ಬೇಕಾದಷ್ಟು ರೆಸಾರ್ಟ್ ಗಳಿವೆ. ಹೀಗಾಗಿ ಬಹುಶಃ ಅವರು ಎರಡು ದಿನ ಹೋಗುವುದು ಕೊಡಗಿನ ಅಧ್ಯಯನ ಮಾಡಲು ಅಲ್ಲ. ಬದಲಾಗಿ ಅಲ್ಲಿ ಹೋಗಿ ಎರಡು ದಿನ ವಿಶ್ರಾಂತಿ ತೆಗೆದುಕೊಳ್ಳಲು ಹೋಗುತ್ತಿದ್ದಾರೆ ಅಂತ ಡಿವಿಎಸ್ ಟೀಕೆ ಮಾಡಿದ್ದಾರೆ.

    ಯಾರೇ ಮುಖ್ಯಮಂತ್ರಿ ಸ್ಥಾನದಲ್ಲಿ ಕೂತಿರಲಿ. ಅವನು ಕೊಡಗಿನಿಂದ ಬರುವಂತಹ ನೀರನ್ನೇ ಅವನು ಕುಡಿಯುತ್ತಾನೆ. ಹೀಗಾಗಿ ಕುಡಿಯುವ ನೀರಿಗೆ ಅಗೌರವ ತೋರುವ ಒಬ್ಬ ಯಾರಾದ್ರೂ ಮುಖ್ಯಮಂತ್ರಿ ಮಾಡಿದ್ರೆ, ನಾವು ಬಿಡಿ ಆ ದೇವರು ಕೂಡ ಮೆಚ್ಚಲ್ಲ ಅಂದ್ರು.  ಇದನ್ನೂ ಓದಿ: ಎಚ್‍ಡಿಕೆಯ ವಿಷಕಂಠ ಹೇಳಿಕೆಗೂ ಕಾಂಗ್ರೆಸ್‍ಗೂ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್

    ಕೊಡಗು ಅತ್ಯಂತ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದೆ. ಅತ್ಯಂತ ಹೆಚ್ಚು ಪ್ರವಾಸಿಗರನ್ನು ಆಕರ್ಷಣೆ ಮಾಡುವ ಪ್ರವಾಸಿ ಕೇಂದ್ರವೂ ಹೌದು. ಇಷ್ಟು ಮಾತ್ರವಲ್ಲದೇ ಅತೀ ಹೆಚ್ಚು ಆದಾಯ ತರುವಂತಹ ಕಾಫಿ ಬೆಳೆಯುವ ನಾಡು ಇದಾಗಿದೆ. ವೀರಯೋಧರನ್ನೂ, ಹಾಕಿ ಆಟಗಾರರನ್ನು ದೇಶಕ್ಕೆ ಕೊಟ್ಟ ಜಿಲ್ಲೆಯಾಗಿದೆ. ಇಂತಹ ಪುಣ್ಯದ ನಾಡು ಕೊಡಗನ್ನೇ ಇಂದು ನಿರ್ಲಕ್ಷ್ಯಿಸಲಾಗಿದೆ ಅಂತ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ರು.

    ಗಟ್ಸ್  ಪ್ರದರ್ಶಿಸಲಿ:
    ಕೊಡಗಿನ ಬಾಲಕ ವಿಡಿಯೋದಲ್ಲಿ ಬಿಜೆಪಿಯ ಕೈವಾಡ ಇದೆ ಅನ್ನೋ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರಲ್ಲೇ ಗುಪ್ತಚರ ಇಲಾಖೆ ಇದೆ. ಒಬ್ಬ ಮುಖ್ಯಮಂತ್ರಿಯಾಗಿದ್ದವ ಯಾರ್ಯಾರೋ ಏನೇನೋ ಮಾಡಿದ್ದಾರೆ ಅಂತ ಹೇಳೋ ಬದಲು, ಈ ಬಗ್ಗೆ ನಾನು ತನಿಖೆ ಮಾಡಿಸುತ್ತೇನೆ. ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಸಾರ್ವಜನಿಕರಿಗೆ ನಾನು ತೋರಿಸಿಕೊಡುತ್ತೇನೆ ಅಂತ ಗಟ್ಸ್ ಪ್ರದರ್ಶನ ಮಾಡಬೇಕು. ಅದು ಬಿಟ್ಟು ಒಂದು ಗಂಟೆ ಅಳೋದಲ್ಲ. ಮುಖ್ಯಮಂತ್ರಿಯಾಗಿದ್ದವ ಉದ್ವೇಗದಲ್ಲಿ ಒಂದು ನಿಮಿಷ ಕಣ್ಣೀರು ಹಾಕುವುದು ಸರಿ. ಅದು ಬಿಟ್ಟು ಎರಡೆರಡು ಕರ್ಚಿಫ್ ಒದ್ದೆ ಮಾಡಿಕೊಂಡು ಜನರನ್ನು ಮರುಳು ಮಾಡುವಂತವ್ರಿಗೆ ತನಿಖೆ ಮಾಡಲು ನನಗೆ ಹಕ್ಕಿದೆ ಎಂಬುದು ಗೊತ್ತಾಗಲ್ವ ಅಂತ ವ್ಯಂಗ್ಯವಾಡಿದ್ರು. ಇದನ್ನೂ ಓದಿ: ಸಿಎಂ ಎಚ್‍ಡಿಕೆ ಖುಷಿಯಾಗಿಯೇ ಇದ್ದಾರೆ- ಡಿಸಿಎಂ ಪರಮೇಶ್ವರ್

  • ಸಿಎಂ ಎಚ್‍ಡಿಕೆ ಖುಷಿಯಾಗಿಯೇ ಇದ್ದಾರೆ- ಡಿಸಿಎಂ ಪರಮೇಶ್ವರ್

    ಸಿಎಂ ಎಚ್‍ಡಿಕೆ ಖುಷಿಯಾಗಿಯೇ ಇದ್ದಾರೆ- ಡಿಸಿಎಂ ಪರಮೇಶ್ವರ್

    ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಖುಷಿಯಾಗಿಯೇ ಇದ್ದಾರೆ. ಅವರು ಸಂತೋಷದಿಂದಿಲ್ಲ ಅಂತ ನೀವು ಹೇಗೆ ಹೇಳುತ್ತೀರಾ ಅಂತ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಪ್ರಶ್ನಿಸಿದ್ದಾರೆ.

    ಸಿಎಂ ಆಗಿ ಖುಷಿಯಾಗಿಲ್ಲ ಅನ್ನೋ ವಿಚಾರದ ಕುರಿತು ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಓರ್ವ ಮುಖ್ಯಮಂತ್ರಿಯಾಗಿರೋ ಅವರು ಯಾವತ್ತೂ ಖುಷಿಯಾಗಿರುತ್ತಾರೆ. ಅವರು ಸಂತೋಷದಿಂದಿದ್ದರೆ ನಾವೆಲ್ಲರೂ ಖುಷಿಯಾಗಿ ಇರಲು ಸಾಧ್ಯ ಅಂತ ಹೇಳಿದ್ರು.

    ಇದೇ ವೇಳೆ ಅನ್ನಭಾಗ್ಯದ ಅಕ್ಕಿ ಪ್ರಮಾಣ ಇಳಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಿಲುವೇನು ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರದ ಎಲ್ಲ ಯೋಜನೆಗಳು ಮುಂದುವರಿಯುತ್ತದೆ. ಅದ್ರಲ್ಲಿ ಯಾವುದೇ ಅನುಮಾನವಿಲ್ಲ. ಅಕ್ಕಿ ಪ್ರಮಾಣವನ್ನ ಏಳು ಕೆಜಿಗೆ ಏರಿಸುವ ಬಗ್ಗೆ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ ಅಂದ್ರು. ಇದನ್ನೂ ಓದಿ: ಎಲ್ಲ ನೋವುಗಳನ್ನು ವಿಷಕಂಠನಾಗಿ ನುಂಗಿದ್ದೇನೆ: ಕಾರ್ಯಕರ್ತರ ಮುಂದೆ ಸಿಎಂ ಕಣ್ಣೀರು

    ಸಿಎಂ ಮೇಲೆ ಒತ್ತಡ ಹೇರುವುದು ಸರಿಯಲ್ಲ ಅನ್ನೋ ಸಚಿವ ಡಿಕೆ ಶಿವಕುಮಾರ್ ಹೇಳಿಕೆ ವಿಚಾರದ ಕುರಿತು ಮಾತನಾಡಿದ ಡಿಸಿಎಂ, ಸಿಎಂ ಮೇಲೆ ಯಾವುದೇ ಒತ್ತಡ ಇಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಜೊತೆಗೆ ಹಿಂದಿನ ಸರ್ಕಾರದ ಎಲ್ಲ ಕಾರ್ಯಕ್ರಮಗಳು ಮುಂದುವರೆಯಲಿವೆ ಅಂತ ತಿಳಿಸಿದ್ರು.

    ಸಂಪುಟ ವಿಸ್ತರಣೆ ಹಾಗೂ ನಡುವೆ ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಜುಲೈ 18 ಕ್ಕೆ ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ಭೇಟಿ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಜೆಡಿಎಸ್, ಕಾಂಗ್ರೆಸ್ ಗೆ ನಿಗಮ ಹಂಚಿಕೆ ಮಾಡಿಕೊಂಡಿದ್ದೇವೆ. ಆದ್ರೆ, ಯಾರಿಗೆ ನೀಡಬೇಕು ಅನ್ನೋದರ ಬಗ್ಗೆ ತೀರ್ಮಾನವಾಗಬೇಕಿದೆ. ಹೈಕಮಾಂಡ್ ಚರ್ಚೆ ಬಳಿಕ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಅಂದ್ರು. ಇದನ್ನೂ ಓದಿ: ಕೇಳಿದ್ದು ಇಂಧನ, ಸಿಕ್ಕಿದ್ದು ವೈದ್ಯಕೀಯ ಶಿಕ್ಷಣ – ಕೊನೆಗೂ ರಹಸ್ಯ ಬಿಚ್ಚಿಟ್ರು ಡಿಕೆಶಿ

    ಬೀದರ್ ನಲ್ಲಿ ನಡೆದ ಹೆಣ್ಣುಮಕ್ಕಳ ಹಾಗು ಮಕ್ಕಳ ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಇದು ಬಹಳ ಗಂಭೀರವಾದ ವಿಚಾರವಾಗಿದೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಅವರು ಹೇಳಿದ್ರು.

  • ಸಿಎಂ ನಿವಾಸದೊಳಗೆ ಬಿತ್ತು ಗಾಲ್ಫ್ ಚೆಂಡು: ಪೊಲೀಸ್ ವಾಹನದ ಗಾಜು ಜಖಂ

    ಸಿಎಂ ನಿವಾಸದೊಳಗೆ ಬಿತ್ತು ಗಾಲ್ಫ್ ಚೆಂಡು: ಪೊಲೀಸ್ ವಾಹನದ ಗಾಜು ಜಖಂ

    ಬೆಂಗಳೂರು: ಗಾಲ್ಫ್ ಚೆಂಡು ಗೃಹಕಚೇರಿ ಕೃಷ್ಣಾ ನಿವಾಸದ ಒಳಗೆ ಬಿದ್ದಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ವಾಹನದ ಗಾಜು ಜಖಂ ಗೊಂಡಿದೆ.

    ಕೃಷ್ಣಾ ನಿವಾಸದ ಪಕ್ಕದಲ್ಲಿಯೇ ಇರುವ ಗಾಲ್ಫ್ ಮೈದಾನದಿಂದ ಚೆಂಡು ಹಾರಿ ಬಂದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕಾಕತಾಳೀಯ ಅಂದರೆ ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗಲೂ ಗಾಲ್ಫ್ ಚೆಂಡುಗಳು ಕೃಷ್ಣಾ ನಿವಾಸದೊಳಗೆ ಬಂದು ಬೀಳುತ್ತಿದ್ದವು. ಹೀಗಾಗಿ ಕುಮಾರಸ್ವಾಮಿ ಮೈದಾನದ ಸುತ್ತಲೂ 100 ಅಡಿ ಎತ್ತರದ ಬಲೆ ಹಾಕಿಸಿದ್ದರು. ಆದರೆ ಈಗ ಗಾಲ್ಫ್ ಚೆಂಡು ಅಷ್ಟು ಎತ್ತರದ ಬಲೆ ದಾಟಿ ಮತ್ತೆ ಕೃಷ್ಣಾ ನಿವಾಸದ ಒಳಗೆ ಬಂದು ಬಿದ್ದಿದೆ.

    ಗಾಲ್ಫ್ ಚೆಂಡು ವಶಕ್ಕೆ ಪಡೆದಿರುವ ಪೊಲೀಸರು, ಯಾರು ಹೊಡೆದಿದ್ದು ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

  • ದಿನಕ್ಕೆ 18 ಗಂಟೆ ಕೆಲ್ಸ: ಮಗನ ಆರೋಗ್ಯದ ಬಗ್ಗೆ ಎಚ್‍ಡಿಡಿ ಆತಂಕ

    ದಿನಕ್ಕೆ 18 ಗಂಟೆ ಕೆಲ್ಸ: ಮಗನ ಆರೋಗ್ಯದ ಬಗ್ಗೆ ಎಚ್‍ಡಿಡಿ ಆತಂಕ

    ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

    ನಗರದ ಜೆಡಿಎಸ್ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕುಮಾರಣ್ಣ ಬೆಳಗ್ಗೆಯಿಂದ ರಾತ್ರಿವರೆಗೆ ಕೆಲಸ ಮಾಡುತ್ತಿರುವ ಕಾರಣ ಗ್ರಾಮವಾಸ್ತವ್ಯ ಮಾಡಲು ಸಮಯ ಸಿಗುತ್ತಿಲ್ಲ. 18 ಗಂಟೆ ಗಂಟೆಗಳ ಕಾಲ ಕೆಲಸ ಮಾಡುವ ಕಾರಣ ಆರೋಗ್ಯದ ಬಗ್ಗೆ ನನಗೆ ಆತಂಕವಾಗುತ್ತಿದೆ ಎಂದು ಮಗನ ಬಗ್ಗೆ ದೇವೇಗೌಡರು ಕಾಳಜಿ ವ್ಯಕ್ತಪಡಿಸಿದ್ದಾರೆ.

    ನಮ್ಮನ್ನು ಜನ ಕೈಬಿಟ್ಟರೂ, ನಾವು ಕೊಟ್ಟ ಮಾತು ಬಿಡೊಲ್ಲ ಎಂದು ಭಾವಿಸಿ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದಾರೆ. ಒಂದು ಕಡೆಗೆ ಮಾಜಿ ಸ್ನೇಹಿತರ ಅಸಹಕಾರ, ಮತ್ತೊಂದು ಕಡೆ ವಿಧಾನಸಭೆಯಲ್ಲಿ ಹೋರಾಟ ಮಾಡುವ ಸ್ಥಿತಿ ಇದೆ. ಈ ಬೆಳವಣಿಗೆಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿರುವೆ ಎಂದು ದೇವೇಗೌಡರು ಅಸಮಾಧಾನ ಹೊರ ಹಾಕಿದರು.

    ನಾನು ವಿಶ್ರಾಂತಿ ಪಡೆಯಲ್ಲ, ಹೋರಾಟಕ್ಕೆ ಸಿದ್ಧವಾಗಿರುವೆ. ಮತ್ತೆ ನಾವೆಲ್ಲರೂ ಹೋರಾಟ ಮಾಡೋಣ. ಆದರೆ ಮೈತ್ರಿ ಸರ್ಕಾರಕ್ಕೆ ಕುಂದು ಬಾರದಂತೆ ನಡೆದುಕೊಳ್ಳಬೇಕು ಎಂದು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆಕೊಟ್ಟರು.

    ಸಮ್ಮಿಶ್ರ ಸರ್ಕಾರದ ಜವಾಬ್ದಾರಿಯನ್ನು ಕುಮಾರಸ್ವಾಮಿ ಹೊತ್ತಿದ್ದಾರೆ. ಆದರೆ ರಾಜ್ಯದ ಜನರು ಅವರನ್ನು ಗುರುತಿಸಿಲ್ಲ. ಕುಮಾರಸ್ವಾಮಿ ಕಳೆದ 3 ವರ್ಷಗಳಿಂದ ರಾಜ್ಯಾದಂತ ಪ್ರವಾಸ ಮಾಡಿದ್ದಾರೆ. ನಮ್ಮ ಪಕ್ಷ 100 ಕ್ಕೂ ಹೆಚ್ಚು ಮತಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎನ್ನುವ ಭರವಸೆ ಇತ್ತು. ಆದರೆ ಅದು ಆಗಲಿಲ್ಲ. ಈಗ ಜನರ ತೀರ್ಪನ್ನು ತಲೆಬಾಗಿ ಒಪ್ಪಿಕೊಂಡಿದ್ದೇವೆ. ಸೋಲಿಗೆ ಕಾರ್ಯಕರ್ತರಲ್ಲಿ ದೋಷಗಳು ಕಾರಣವಾಗಿದ್ದರೆ ಅದನ್ನು ತಿದ್ದಿಕೊಳ್ಳಬೇಕು ಎಂದು ಸಲಹೆ ನೀಡಿದರು.

    2018ರ ವಿಧಾನಸಭೆ ಚುನಾವಣೆಯಲ್ಲಿ 20 ತಿಂಗಳ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವಲ್ಲಿ ನಮ್ಮ ಕಾರ್ಯಕರ್ತರು ವಿಫಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಿಕೊಳ್ಳಬೇಕು. ನಾವು ಕಾಂಗ್ರೆಸ್ ಪಕ್ಷವನ್ನು ದೂರಲು ಸಾಧ್ಯವಿಲ್ಲ. ಮೈತ್ರಿ ಸರ್ಕಾರ ನಡೆಸಿಕೊಂಡು ಹೋಗುವುದು ತುಂಬ ಕಷ್ಟ. ವಿರೋಧ ಪಕ್ಷದಲ್ಲಿ 104 ಜನ ಇರುವುದು ಕರ್ನಾಟಕ ಇತಿಹಾಸದಲ್ಲೆ ಇದೇ ಮೊದಲು. ಬಿಜೆಪಿಯವರನ್ನು ಎದುರಿಸುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

  • ಆಷಾಢ ಮಾಸ ನಿಮಗೆ ಮಾತ್ರ, ನಮಗೆ ಏನು ಇಲ್ಲ: ಸಿದ್ದರಾಮಯ್ಯ ಪಟ್ಟಿಗೆ ದೇವೇಗೌಡರು ಗ್ರೀನ್ ಸಿಗ್ನಲ್ ಕೊಡ್ತಾರಾ?

    ಆಷಾಢ ಮಾಸ ನಿಮಗೆ ಮಾತ್ರ, ನಮಗೆ ಏನು ಇಲ್ಲ: ಸಿದ್ದರಾಮಯ್ಯ ಪಟ್ಟಿಗೆ ದೇವೇಗೌಡರು ಗ್ರೀನ್ ಸಿಗ್ನಲ್ ಕೊಡ್ತಾರಾ?

    ಬೆಂಗಳೂರು: ಆಷಾಢ ಮಾಸ ನಿಮಗೆ ಮಾತ್ರ, ನಮಗೆ ಏನು ಇಲ್ಲ. ಈಗಲೇ ನಿಗಮ ಮಂಡಳಿ ನೇಮಕಾತಿ ಆಗಬೇಕು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪಟ್ಟು ಹಿಡಿದಿದ್ದಾರೆ.

    ಶಾಸಕರಿಗೆ ಸಬೂಬು ಹೇಳಲು ನಮ್ಮಿಂದ ಆಗುತ್ತಿಲ್ಲ. ಹೀಗಾಗಿ ಈ ಮೊದಲೇ ನಿರ್ಧರಿಸಿದಂತೆ ನಿಗಮ ಮಂಡಳಿಯ ಒಟ್ಟು 30 ಸ್ಥಾನಗಳಲ್ಲಿ ಕಾಂಗ್ರೆಸ್ಸಿಗೆ 20 ಹಾಗೂ ಜೆಡಿಎಸ್‍ಗೆ 10 ಸ್ಥಾನ ಹಂಚಿಕೆಯಾಗಬೇಕು. ನೇಮಕ ಪ್ರಕ್ರಿಯೆ ಈಗಲೇ ಆಗಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ನಿಗಮ ಮಂಡಳಿ ನೇಮಕದಿಂದ ಮುನಿಸಿಕೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನ ಪಡಿಸಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ. ಹೀಗಾಗಿ ಆಷಾಢದಲ್ಲಿಯೇ ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.

    ಆಷಾಢ ಮುಗಿಯುವವರೆಗೆ ಯಾವುದೇ ನೇಮಕಾತಿ ಬೇಡ ಎಂದು ದೇವೇಗೌಡ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಹೇಳಿದ್ದರು. ಆದರೆ ಈಗ ಸಿದ್ದರಾಮಯ್ಯ ಅವರು ಪಟ್ಟು ಹಿಡಿದಿದ್ದರಿಂದ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ.