Tag: ಎಚ್ ಡಿ ಕುಮಾರಸ್ವಾಮಿ

  • ಲಾಬಿ ಮಾಡೋಕೆ ದೆಹಲಿಗೆ ಬರಬೇಡಿ – ಕೈ ನಾಯಕರಿಗೆ ಹೈಕಮಾಂಡ್ ಸೂಚನೆ!

    ಲಾಬಿ ಮಾಡೋಕೆ ದೆಹಲಿಗೆ ಬರಬೇಡಿ – ಕೈ ನಾಯಕರಿಗೆ ಹೈಕಮಾಂಡ್ ಸೂಚನೆ!

    ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ದೆಹಲಿಗೆ ಹೋಗಲು ಮುಂದಾಗಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಲಾಬಿ ಮಾಡುವುದಕ್ಕೆ ನೀವು ಯಾರೂ ದೆಹಲಿಗೆ ಬರುವುದೇ ಬೇಡ. ಮೊದಲು ವಿಶ್ವಾಸ ಮತ ಗೆಲ್ಲಿ. ಆ ಮೇಲೆ ದೆಹಲಿಗೆ ಬನ್ನಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ಸೋಮವಾರದ ದೆಹಲಿ ಭೇಟಿ ರದ್ದಾಗಿದೆ.

    ಎಚ್.ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮಾತ್ರ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ನಡೆಸಿ ವಾಪಸ್ ಆಗಲಿದ್ದಾರೆ. ಕುಮಾರಸ್ವಾಮಿ ಜೊತೆಗೆ ರಾಜ್ಯಸಭಾ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಜಿ.ಸಿ.ಚಂದ್ರಶೇಖರ್ ದೆಹಲಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಮೈತ್ರಿ ಮೂಲಕ ಅಧಿಕಾರ ಭಾಗ್ಯ ಕೊಟ್ಟ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಆಹ್ವಾನಿಸಲಿದ್ದಾರೆ.

    ಎಚ್.ಡಿ.ಕೆ. ಟೆಂಪಲ್ ರನ್: ಸೋಮವಾರ ದೆಹಲಿಗೂ ತೆರಳುವ ಮುನ್ನ ಕುಮಾರಸ್ವಾಮಿ ಅವರು, ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಿ, ಹುಟ್ಟೂರಿನ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಹೊಳೆನರಸೀಪುರದ ಶ್ರೀಲಕ್ಷಿನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಹರದನಹಳ್ಳಿ ಶ್ರೀ ಈಶ್ವರ ದೇವಾಲಯ ಮತ್ತು ಮಾವಿನಕೆರೆ ಶ್ರೀ ರಂಗನಾಥ ಸ್ವಾಮಿ ದೇವಾಲಯ, ನಂತರ ಚನ್ನರಾಯಪಟ್ಟಣ ತಾಲೂಕಿನ ಯಲಿಯೂರು ಗ್ರಾಮದ ಶ್ರೀ ದೇವಿರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ 11.15ಕ್ಕೆ ಬೆಂಗಳೂರಿಗೆ ವಾಪಾಸ್ ಆಗುವ ಎಚ್.ಡಿ.ಕೆ, 11.30ಕ್ಕೆ ದೆಹಲಿಗೆ ಪಯಣಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ದೆಹಲಿ ತಲುಪಿ, 3.30ಕ್ಕೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿರುವ ಎಚ್‍ಡಿಕೆ, 4.30ಕ್ಕೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಲಿದ್ದಾರೆ. ಸಂಜೆ 6 ಗಂಟೆಗೆ ದೆಹಲಿಯಿಂದ ಹೊರಡುವ ಎಚ್‍ಡಿಕೆ, ರಾತ್ರಿ 8.30ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

     

  • ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ರೆ ರಾಜಭವನಕ್ಕೆ ಮುತ್ತಿಗೆ ಎಚ್ಚರಿಕೆ

    ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ರೆ ರಾಜಭವನಕ್ಕೆ ಮುತ್ತಿಗೆ ಎಚ್ಚರಿಕೆ

    ಮಂಡ್ಯ: ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟರೆ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್.ಡಿ ಕುಮಾರಸ್ವಾಮಿ ಬೆಂಬಲಿಗರು ಎಚ್ಚರಿಸಿದ್ದಾರೆ.

    ಕಾನೂನು ಹೋರಾಟದ ಜೊತೆಗೆ ಪ್ರತಿಭಟನೆ ಮಾಡುವ ಬಗ್ಗೆಯೂ ಈಗಲ್‍ಟನ್ ರೆಸಾರ್ಟ್‍ನಲ್ಲಿ ಚರ್ಚೆ ನಡೆಸಲಾಗಿದೆ. ಅಲ್ಲದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಂದ ರಾಜಭವನಕ್ಕೆ ಮುತ್ತಿಗೆ ಹಾಕಿಸಲು ತೀರ್ಮಾನಿಸಲಾಗಿದೆ.

    ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಕೊಟ್ಟರೆ ರಾಜಭವನಕ್ಕೆ ಮುತ್ತಿಗೆ ಹಾಕ್ತೀವಿ ಎಂದು ಮಂಡ್ಯದಲ್ಲಿ ಹೆಚ್‍ಡಿಕೆ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ರಚನೆ ಸಂಬಂಧ ರಾಜ್ಯಪಾಲರು ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಬಹುಮತ ಸಾಬೀತುಪಡಿಸಲು ಅವಕಾಶ ನೀಡದೆ ಬಿಜೆಪಿಗೆ ಅವಕಾಶ ಕೊಟ್ಟರೆ ಹುಷಾರ್ ಎಂದು ಹೇಳಿದ್ದಾರೆ.

  • ಹೈಜಾಕ್ ಆಗಲಿ, ಏನೇ ಆಗಲಿ ಕುಮಾರಸ್ವಾಮಿಯೇ ಸಿಎಂ-  ಹೆಚ್.ಡಿ.ರೇವಣ್ಣ

    ಹೈಜಾಕ್ ಆಗಲಿ, ಏನೇ ಆಗಲಿ ಕುಮಾರಸ್ವಾಮಿಯೇ ಸಿಎಂ- ಹೆಚ್.ಡಿ.ರೇವಣ್ಣ

    ಬೆಂಗಳೂರು: ಯಾವುದೇ ಹೈಜಾಕ್ ಆಗಲಿ ಏನೇ ಆಗಲಿ, ಎಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಸರ್ಕಾರ ರಚನೆಯಾಗುತ್ತದೆ. ಅವರೇ ಸಿಎಂ ಆಗುವುದು ನಿಶ್ಚಿತ ಎಂದು ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

    ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈ ಬಾರಿ ನಮ್ಮ ಪಕ್ಷದಿಂದ ಆಯ್ಕೆಯಾದ 38 ಶಾಸಕರು ಎಲ್ಲಿಯೂ ಹೋಗುವುದಿಲ್ಲ. ನಿಷ್ಠೆಯಿಂದ ಪಕ್ಷದ ಜೊತೆಗಿರುತ್ತಾರೆ. ಕುಮಾರಸ್ವಾಮಿ ಸಿಎಂ ಆಗೋದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಕಡೆಗೆ ಎಲ್ಲರ ಚಿತ್ತ ಹರೆದಿದ್ದು, ಎಚ್.ಡಿ.ರೇವಣ್ಣ ಅವರು ದೇವರ ಪ್ರಸಾದ ಹಿಡಿದು ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ದಾಸರಹಳ್ಳಿ ಶಾಸಕ ಮಂಜುನಾಥ್, ಡಿ.ಸಿ.ತಮ್ಮಣ್ಣ, ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಹಾಜರಿದ್ದರು.

    ದೇವೇಗೌಡರು ಈಗಾಗಲೇ ಜೆಡಿಎಸ್ ಶಾಸಕರ ಜವಾಬ್ದಾರಿಯನ್ನು ಹೇಗೆ ನಿರ್ವಹಿಸಬೇಕು ಎಂದು ಶ್ರೀಕಂಠೇಗೌಡರಿಗೆ ನಿರ್ದೇಶನ ನೀಡಿದ್ದಾರೆ. ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕೇಳಿಬಂದಿದೆ.

    ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಂಶೆಂಪುರ್ ಮತ್ತು ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

  • ಕಿಚ್ಚ ಸುದೀಪ್ ಜೆಡಿಎಸ್ ನಿಂದ ಸ್ಪರ್ಧಿಸುತ್ತಾರಾ?

    ಕಿಚ್ಚ ಸುದೀಪ್ ಜೆಡಿಎಸ್ ನಿಂದ ಸ್ಪರ್ಧಿಸುತ್ತಾರಾ?

    ಬೆಂಗಳೂರು: ಇಡೀ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿಯೇರಿಸಿಕೊಂಡಿದೆ. ಇಂಥಾ ವಾತಾವರಣದಲ್ಲಿ ರಾಜಕೀಯ ವಲಯದಲ್ಲಿ ಬಿರುಸಿನ ವಾತಾವರಣ ಇರೋದು ಸಹಜವೇ. ಆದರೆ ಈ ಸಲ ಚಿತ್ರರಂಗದಲ್ಲಿಯೂ ಚುನಾವಣಾ ಪ್ರಭಾವ ಬಲು ಜೋರಾಗಿದೆ. ಆ ಸ್ಟಾರ್ ರಾಜಕೀಯಕ್ಕಿಳೀತಾರೆ, ಮತ್ಯಾರಿಗೋ ಟಿಕೆಟು ಪಕ್ಕಾ ಆಗಿದೆ ಎಂಬೆಲ್ಲ ರೂಮರ್ ಮಾಮೂಲಿ. ಆದರೆ ಈ ಸಲ ಈ ರೇಸಿನಲ್ಲಿ ಕಿಚ್ಚ ಸುದೀಪ್ ಅವರ ಹೆಸರೂ ಚಾಲ್ತಿಯಲ್ಲಿರೋದು ನಿಜವಾದ ವಿಶೇಷ!

    ಸುದೀಪ್ ರಾಜಕೀಯಕ್ಕೆ ಬರುತ್ತಾರೆಂಬ ಅಂತೆ ಕಂತೆಯಾಗಲಿ, ಅವರನ್ನು ಸೆಳೆದುಕೊಳ್ಳಲು ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಒಳಗೊಳಗೇ ಕಸರತ್ತು ನಡೆಸೋದಾಗಲಿ ಹೊಸದೇನೂ ಅಲ್ಲ. ಆದರೆ ಒಂದು ಮೂಲದ ಪ್ರಕಾರ ಈ ಸಲ ರಾಜಕೀಯಕ್ಕೆ ಅಡಿಯಿರಿಸಲು ತೀರ್ಮಾನ ಮಾಡಿಕೊಂಡಿರೋ ಸುದೀಪ್ ಅದಕ್ಕಾಗಿ ತಯಾರಾಗಲಾರಂಭಿಸಿದ್ದಾರಂತೆ!

    ಹಾಗಾದರೆ ಅವರು ಯಾವ ಪಕ್ಷದಿಂದ ಸ್ಪರ್ಧಿಸ್ತಾರೆ, ಕ್ಷೇತ್ರ ಯಾವುದು ಅಂತೆಲ್ಲ ಸಾಲು ಸಾಲು ಪ್ರಶ್ನೆಗಳೇಳೋದು ಸಹಜವೇ. ಈ ನಿಟ್ಟಿನಲ್ಲಿ ನೋಡ ಹೋದರೆ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಲು ಸ್ವತಃ ಸುದೀಪ್ ಇಚ್ಛೆ ಹೊಂದಿದ್ದಾರೆ ಎಂಬ ಮಾತೂ ಕೇಳಿಬಂದಿತ್ತು. ಸುದೀಪ್ ಅವರ ರಾಜಕೀಯ ಎಂಟ್ರಿ ಮತ್ತು ಅವರು ಬಯಸೋ ಕ್ಷೇತ್ರವನ್ನು ನೀಡಲು ರಾಹುಲ್ ಗಾಂಧಿಯನ್ನು ಒಪ್ಪಿಸೋ ಜವಾಬ್ದಾರಿಯನ್ನು ನಟಿ ರಮ್ಯಾ ವಹಿಸಿಕೊಂಡಿದ್ದಾರಂತೆ ಎಂಬೆಲ್ಲಾ ಅಂತೆಕಂತೆಗಳೂ ಹರಿದಾಡಿದ್ದವು.

    ಆದರೆ ದಿಢೀರ್ ಅಂತಾ ಇವತ್ತು ಬೆಳಬೆಳಿಗ್ಗೆಯೇ ಸುದೀಪ್ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರನ್ನು ಸ್ವತಃ ಕುಮಾರಣ್ಣನ ಮನೆಯಲ್ಲೇ ಭೇಟಿ ಮಾಡಿ ಸರಿಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿರೋದು ರಾಜಕೀಯ ಪಂಡಿತರ ತಲೆ ಕೆಡಿಸಿದೆ. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಶಾಸಕ ಸಾರಾ ಮಹೇಶ್ ಮುಂತಾದವರು ಹಾಜರಿದ್ದರು.

    ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ?: ಈ ಕ್ಷೇತ್ರದಲ್ಲಿ 90 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನಾಯಕ ಸಮಾಜದ ಮತದಾರರಿದ್ದಾರೆ. ಇದೂ ಕೂಡಾ ಸುದೀಪ್ ಗೆಲುವಿಗೆ ಸಹಕಾರಿಯಾಗುತ್ತದೆ ಎಂಬ ಲೆಕ್ಕಾಚಾರ ಜೆಡಿಎಸ್ ಪಾಳೆಯದಲ್ಲಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮೂಲದ ನೇರಳಗುಂಟೆ ತಿಪ್ಪೇಸ್ವಾಮಿ ಕಳೆದ ಬಾರಿ ಬಿಎಸ್‍ಆರ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಹಾಲಿ ಜಿಲ್ಲಾ ಪಂಚಾಯತ್ ಸದಸ್ಯರೋರ್ವರು ಈ ಬಾರಿ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಕ್ಷೇತ್ರಕ್ಕೆ ಅನೇಕರು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಅದರಲ್ಲಿ ಮಾಜಿ ಎಂಪಿ ನಟ ಶಶಿಕುಮಾರ್ ಕೂಡಾ ಒಬ್ಬರು. ಅವರೂ ಕೂಡಾ ಈ ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ ಟಿಕೆಟ್ ಪಡೆದು ಶಾಸಕನಾಗೋ ಹಂಬಲ ಹೊಂದಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಚಳ್ಳಕೆರೆ ಕ್ಷೇತ್ರದಿಂದ ಶಶಿಕುಮಾರ್ ಟಿಕೆಟ್ ಬಯಸಿದ್ದರಾದರೂ ಸಿಕ್ಕಿರಲಿಲ್ಲ. ಆಗ ಟಿಕೆಟ್ ರಘುಮೂರ್ತಿ ಪಾಲಾಗಿತ್ತು. ಹೀಗಾಗಿ ಕಿಚ್ಚ ಸುದೀಪ್ ಜೆಡಿಎಸ್ ನಿಂದ ಸ್ಪರ್ಧಿಸುತ್ತಾರಾ ಎಂಬ ಅನುಮಾನ ಮೂಡಿದೆ.

    ಇನ್ನು ಇದೇ ಚಿತ್ರದುರ್ಗದಿಂದ ಮೊಗವೀರ ಸಮುದಾಯದ ನಟಿ ಭಾವನಾ ಕೂಡಾ ಆಕಾಂಕ್ಷಿಯಾಗಿದ್ದಾರಂತೆ. ಆದರೆ ಬೇರೆಲ್ಲರ ಕಥೆ ಏನೋ ಹೇಳಲು ಬರೋದಿಲ್ಲ. ಕಿಚ್ಚ ಸುದೀಪ್ ಮನಸು ಬದಲಾವಣೆ ಮಾಡಿಕೊಳ್ಳದೆ ರಾಜಕೀಯಕ್ಕಿಳಿದರೆ ಅವರು ಮೊಳಕಾಲ್ಮೂರು ಕ್ಷೇತ್ರದಿಂದಲೇ ಕಣಕ್ಕಿಳಿಯೋದು ಖಚಿತ ಅನ್ನೋದು ಕೆಲವರ ಅಭಿಪ್ರಾಯವಾದರೆ ಇನ್ನು ಕೆಲವರು ಜೆಡಿಎಸ್ ಪ್ರಚಾರಕ್ಕಷ್ಟೇ ಕಿಚ್ಚ ಒಪ್ಪಿದ್ದಾರೆ ಅನ್ನೋ ಮಾತುಗಳೂ ವ್ಯಕ್ತವಾಗುತ್ತಿವೆ. ಒಟ್ಟಾರೆ ಕಿಚ್ಚ ಕುಮಾರಣ್ಣ ಭೇಟಿಯ ಅಂತಿಮ ಸೀಕ್ರೆಟ್ ಏನೆನ್ನುವುದು ಶೀಘ್ರದಲ್ಲೇ ಹೊರಬೀಳಲಿದೆ.

  • ಹೆಚ್‍ ಡಿಕೆಗೆ ಕ್ರೇನ್ ಮೂಲಕ 12 ಅಡಿ ಉದ್ದ, 250 ಕೆ.ಜಿ ತೂಕದ ರಾಗಿ ತೆನೆ ಹಾರ ಅರ್ಪಿಸಿದ ಅಭಿಮಾನಿ

    ಹೆಚ್‍ ಡಿಕೆಗೆ ಕ್ರೇನ್ ಮೂಲಕ 12 ಅಡಿ ಉದ್ದ, 250 ಕೆ.ಜಿ ತೂಕದ ರಾಗಿ ತೆನೆ ಹಾರ ಅರ್ಪಿಸಿದ ಅಭಿಮಾನಿ

    ಮೈಸೂರು: ನೆಚ್ಚಿನ ಜನನಾಯಕನನ್ನು ಮೆಚ್ಚಿಸೋಕ್ಕೆ ಅಭಿಮಾನಿಗಳು ಹೊಸ ಹೊಸ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸೇಬು ಹಣ್ಣುಗಳ ಹಾರ ಹಾಕಿ ಸ್ವಾಗತ ಮಾಡಲಾಗಿತ್ತು.

    ಈಗ ಅಭಿಮಾನಿಯೊಬ್ಬರು ಎಚ್‍ಡಿ ಕುಮಾರಸ್ವಾಮಿ ಅವರಿಗೆ ರಾಗಿ ತೆನೆ ಹಾರ ಅರ್ಪಿಸಿ ಅಭಿಮಾನ ಮೆರೆದಿದ್ದಾರೆ. ಜಿಲ್ಲೆಯ ಟಿ.ನರಸೀಪುರದಲ್ಲಿ ಇಂತಹದ್ದೊಂದು ಅಭಿಮಾನ ಕಂಡು ಬಂದಿದ್ದು, ಅಭಿಮಾನಿಯೊಬ್ಬ ತೆನೆ ಹೊತ್ತ ಮಹಿಳೆ ಪಕ್ಷದ ರಾಜ್ಯಾಧ್ಯಕ್ಷರಿಗೆ ಅಭಿಮಾನಿಯೊಬ್ಬ ಬೃಹತ್ ಆಕಾರದ ರಾಗಿ ತೆನೆ ಹಾರ ಅರ್ಪಿಸಿ ಖುಷಿ ಪಟ್ಟಿದ್ದಾರೆ. ಇದನ್ನು ಓದಿ: ಕ್ರೇನ್ ಮೂಲಕ ಸಚಿವ ಶಿವಕುಮಾರ್ ಗೆ 300 ಕೆ.ಜಿ ತೂಕದ ಸೇಬಿನ ಹಾರ ಹಾಕಿ ಸನ್ಮಾನ!

    ಇದು ಅಂತಿಂತಾ ಹಾರ ಅಲ್ಲ 12 ಅಡಿ ಉದ್ದ, 250 ಕೆ.ಜಿ. ತೂಕವಿದ್ದು, ಹಾರವನ್ನು ಅರ್ಪಿಸುವುದಕ್ಕೆ ಕ್ರೇನ್ ಬಳಸಿರುವುದು ವಿಶೇಷವಾಗಿದೆ. ಬುಧವಾರ ಟಿ.ನರಸೀಪುರದಲ್ಲಿ ರೋಡ್ ಶೋ ಇತ್ತು. ಇದಕ್ಕಾಗಿ ಕುಮಾರಸ್ವಾಮಿ ತೆರೆದ ಬಸ್ ನಲ್ಲಿ ಆಗಮಿಸಿದಾಗ ಕ್ರೇನ್ ಮೂಲಕ ಬೃಹತ್ ಆಕಾರದ ರಾಗಿ ತೆನೆ ಹಾರ ಅರ್ಪಿಸಲಾಗಿದೆ.

  • ಮೈಸೂರು ಜೆಡಿಎಸ್‍ನಲ್ಲಿ ಹೆಚ್ಚಿದ ಟಿಕೆಟ್ ಫೈಟ್- ರೇವಣ್ಣ ಬೆಂಬಲಿಗರಿಗೆ ಇಲ್ಲ ಟಿಕೆಟ್

    ಮೈಸೂರು ಜೆಡಿಎಸ್‍ನಲ್ಲಿ ಹೆಚ್ಚಿದ ಟಿಕೆಟ್ ಫೈಟ್- ರೇವಣ್ಣ ಬೆಂಬಲಿಗರಿಗೆ ಇಲ್ಲ ಟಿಕೆಟ್

    ಮೈಸೂರು: ಈ ಭಾಗದ ಜೆಡಿಎಸ್ ರಾಜಕಾರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಮತ್ತು ಎಚ್.ಡಿ. ರೇವಣ್ಣ ಗುಂಪು ಹುಟ್ಟಿಕೊಂಡಿದೆ ಎನ್ನಲಾಗಿದ್ದು, ಅಭ್ಯರ್ಥಿಗಳ ನಡುವೆ ಟಿಕೆಟ್ ಗಾಗಿ ಶೀತಲ ಸಮರ ನಡೆಯುತ್ತಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.

    ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಎಚ್‍ಡಿ ರೇವಣ್ಣ ಬೆಂಬಲಿಗರಿಗೆ ಟಿಕೆಟ್ ಕೈತಪ್ಪಿದೆ. ಇದ್ರಿಂದ ಮೈಸೂರು ಭಾಗದಲ್ಲಿ ಎಚ್.ಡಿ. ರೇವಣ್ಣ ಹಿಡಿತ ಕಡಿಮೆ ಮಾಡಲು ಎಚ್‍ಡಿ ಕುಮಾರಸ್ವಾಮಿ ಮುಂದಾಗಿದ್ದಾರಾ ಅನ್ನೋ ಪ್ರಶ್ನೆ ಎದುರಾಗಿದೆ.

    ಎಚ್.ಡಿ. ರೇವಣ್ಣ ಅಪ್ಪಟ ಬೆಂಬಲಿಗ ಹರೀಶ್ ಗೌಡ ಅವರಿಗೆ ಚಾಮರಾಜ ಕ್ಷೇತ್ರದ ಟಿಕೆಟ್ ನೀಡಲಾಗುತ್ತೆ ಎನ್ನಲಾಗಿತ್ತು. ಅದ್ರೆ ಕುಮಾರಸ್ವಾಮಿ ತಮ್ಮ ಕುಟುಂಬದ ಸದಸ್ಯರಾಗಿರೋ ನಿವೃತ್ತ ಕುಲಪತಿ ರಂಗಪ್ಪಗೆ ಚಾಮರಾಜ ಕ್ಷೇತ್ರದ ಟಿಕೆಟ್ ನೀಡಿದ್ದಾರೆ. ನರಸಿಂಹರಾಜ ಕ್ಷೇತ್ರದಲ್ಲಿ ಕಳೆದ ಬಾರಿ ಕಡಿಮೆ ಅಂತರದಿಂದ ಸೋತಿದ್ದ ಎಚ್.ಡಿ. ರೇವಣ್ಣ ಬೆಂಬಲಿಗ ಸಂದೇಶ್ ಸ್ವಾಮಿಗೆ ಬದಲಾಗಿ ಇತ್ತೀಚೆಗೆ ಜೆಡಿಎಸ್ ಸೇರಿದ್ದ ಮಹಮದ್ ಅಬ್ದುಲ್‍ಗೆ ಟಿಕೆಟ್ ನೀಡಲಾಗಿದೆ.

    ಟಿ. ನರಸೀಪುರ ಕ್ಷೇತ್ರದಲ್ಲಿ ಕಳೆದ ಬಾರಿ 250 ಮತಗಳಿಂದ ಸೋತು ಕಳೆದ ವರ್ಷ ನಿಧನರಾಗಿದ್ದ ಸುಂದರೇಶ್ ಅವರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿಲ್ಲ. ಚಾಮರಾಜ ಕ್ಷೇತ್ರ ಟಿಕೆಟ್ ವಂಚಿತ ಹರೀಶ್ ಗೌಡ ಈಗಾಗಲೇ ಬಂಡಾಯ ಬಾವುಟ ಹಾರಿಸಿದ್ದಾರೆ. ಇನ್ನು ನರಸಿಂಹರಾಜ ಕ್ಷೇತ್ರದ ಸಂದೇಶ್ ಸ್ವಾಮಿ ಮತ್ತು ಟಿ. ನರಸೀಪುರ ಕ್ಷೇತ್ರದಲ್ಲಿ ಸುಂದರೇಶ್ ಕುಟುಂಬಕ್ಕೆ ಬಿಜೆಪಿ ತಮ್ಮತ್ತ ಸೆಳೆಯುವ ಪ್ರಯತ್ನದಲ್ಲಿದೆ.

     

  • ಮೇಕ್ ಇನ್ ಇಂಡಿಯಾ ಅಂದ್ರೆ ವಡಾ ಪಾವ್, ಬೋಂಡಾ ಮಾರಾಟ: ಎಚ್‍ಡಿಕೆ ವ್ಯಂಗ್ಯ

    ಮೇಕ್ ಇನ್ ಇಂಡಿಯಾ ಅಂದ್ರೆ ವಡಾ ಪಾವ್, ಬೋಂಡಾ ಮಾರಾಟ: ಎಚ್‍ಡಿಕೆ ವ್ಯಂಗ್ಯ

    ವಿಜಯಪುರ: ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾ ಯೋಜನೆ ಬಗ್ಗೆ ವಿಜಯಪುರದಲ್ಲಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

    ಕುಮಾರಸ್ವಾಮಿ ಅವರು ಐದು ದಿನಗಳ ವಿಜಯಪುರ ಜಿಲ್ಲಾ ಪ್ರವಾಸದಲ್ಲಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದರು, ನಮ್ಮ ಯುವಕರು ಪಕೋಡಾ ಮಾರಾಟ ಮಾಡಿ ಬದುಕಬೇಕಿದೆ. ಇಲ್ಲವೇ ಸರಗಳ್ಳತನ ಅಥವಾ ಕಳ್ಳತನ ಮಾಡಿ ಬದುಕಬೇಕಿದೆ. ಇದು ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾ ಎಂದು ವ್ಯಂಗ್ಯಮಾಡಿದರು.

    ಮೋದಿ ಪ್ರಧಾನ ಮಂತ್ರಿ ಆದ ವೇಳೆ ಪ್ರತಿ ವರ್ಷದ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಆದರೆ ವಾಸ್ತವದಲ್ಲಿ ನಾವು ಅವರ ಹೇಳಿಕೆಯನ್ನು ತಪ್ಪಾಗಿ ತಿಳಿದಿದ್ದೇವೆ. ಮೋದಿ ಅವರ ಮೇಕ್ ಇಂಡಿಯಾ ಅಂದರೆ ಪಕೋಡಾ ಮಾರಾಟ ಮಾಡುವುದೂ ಸಹ ಒಂದಾಗಿದೆ. ಉಚಿತ ಸಲಹೆಗಳನ್ನು ನೀಡಲು ಮೋದಿ ಅವರೇ ಪ್ರಧಾನಿಗಳಾಗಬೇಕಾ? ಮೋದಿ ಅವರ ಮೇಕ್ ಇನ್ ಇಂಡಿಯಾ ಏನು ಎಂಬುವುದು ಪ್ರಸ್ತುತ ಜನರಿಗೆ ಗೊತ್ತಾಗಿದೆ ಎಂದರು.

    ಇದೇ ವೇಳೆ ಓವೈಸಿ ಜೊತೆ ಬಿಜೆಪಿ ಒಳ ಒಪ್ಪಂದದ ಬಗ್ಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಹೆಚ್‍ಡಿಕೆ, ಒಳ ಒಪ್ಪಂದ ಬಗ್ಗೆ ಸ್ಪಷ್ಟ ಮಾಹಿತಿ ಇದ್ದರೆ ಜನತೆ ಮುಂದೆ ಇಡಬೇಕು. ಕಾಂಗ್ರೆಸ್ ಗೆ ಮುಸ್ಲಿಂ ಮತಗಳು ಹಿನ್ನೆಡೆಯಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳೀಪಟ ಆಗುತ್ತದೆ ಎಂಬ ಭಯ ಅವರಿಗಿದೆ. ಹೀಗಾಗಿ ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

    ರಾಷ್ಟ್ರೀಯ ಪಕ್ಷಗಳ ಜೊತೆಗೆ ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ಯಾರೊಂದಿಗೂ ಮೈತ್ರಿ ಮಾಡಲ್ಲ. ಒಂದು ಬಾರಿ ಕಾಂಗ್ರೆಸ್ ಹಾಗೂ ಒಂದು ಬಿಜೆಪಿ ಮೈತ್ರಿ ಮಾಡಿ ನೋಡಲಾಗಿದೆ. ಈ ಬಾರಿ ಸ್ವತಂತ್ರವಾಗಿ 113 ಸಂಖ್ಯೆಯನ್ನು ಜನತೆ ಕೊಡುತ್ತಾರೆ. ಫೆಬ್ರವರಿ 17 ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಎಚ್.ಡಿ. ದೇವೇಗೌಡರ ಆಶೀರ್ವಾದ ಹಾಗೂ ಮಾರ್ಗದರ್ಶನದೊಂದಿಗೆ ಸುಮಾರು 5 ಲಕ್ಷ ಜೆಡಿಎಸ್ ಕಾರ್ಯಕರ್ತರ ಸಮಾವೇಶ ನಡೆಸಿ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮೊದಲನೆಯ ಹಂತವಾಗಿ 120 ರಿಂದ 130 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು. ಇದನ್ನೂ ಓದಿ:  ಮೋದಿ ವಿರುದ್ಧ ಉದ್ಯೋಗ ಸೃಷ್ಟಿಗಾಗಿ Msc, MA, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ `ಪಕೋಡ’ ಪ್ರತಿಭಟನೆ

     

  • ಈಗ ಕಿಂಗ್ ಮೇಕರ್, ಮುಂದೆ ನಾವೇ ಕಿಂಗ್ ಆಗ್ತೀವಿ: ಎಚ್‍ಡಿಕೆ

    ಈಗ ಕಿಂಗ್ ಮೇಕರ್, ಮುಂದೆ ನಾವೇ ಕಿಂಗ್ ಆಗ್ತೀವಿ: ಎಚ್‍ಡಿಕೆ

    ಬೆಂಗಳೂರು: ಇವತ್ತು ಜೆಡಿಎಸ್ ಗೆ ಕಿಂಗ್ ಮೇಕರ್ ಸ್ಥಾನ ತೋರಿಸಿದ್ದೀರಿ. ಮುಂದೆ ನಾವೇ ಕಿಂಗ್ ಆಗುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಸರ್ವೆ ಬಗ್ಗೆ ನನಗೆ ಆಕ್ಷೇಪ ಇಲ್ಲ. ನಿಮ್ಮ ವಿಧಾನದಲ್ಲಿ ನೀವು ಮಾಡಿದ್ದೀರಿ. ನಾನು ನಮ್ಮದೇ ವಿಧಾನದಲ್ಲಿ ಲೆಕ್ಕ ಹಾಕಿದ್ದೇನೆ ಎಂದು ತಿಳಿಸಿದರು.

    ಗುಜರಾತ್ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾದಾಗ ಬಿಜೆಪಿಗೆ 110ಕ್ಕೂ ಹೆಚ್ಚಿನ ಸ್ಥಾನ ಸಿಗಲಿದೆ ಎಂದು ಮಾಧ್ಯಮಗಳು ಹೇಳಿತ್ತು. ಆದರೆ ಫಲಿತಾಂಶ ಪ್ರಕಟವಾದಾಗ 99ಕ್ಕೆ ಬಿಜೆಪಿ ಸುಸ್ತು ಹೊಡೆಯಿತು ಎಂದರು. ಇದನ್ನೂ  ಓದಿ: ಯಾರಿಗೂ ಬಹುಮತವಿಲ್ಲ, ಮತ್ತೊಮ್ಮೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ!

    ಹಿರಿಯರ ಜೊತೆ ಸಂವಾದ: ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಿರಿಯ ನಾಗರಿಕರ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಸ್ಥಾನ ನನ್ನಪ್ಪನ ಆಸ್ತಿ ಅಲ್ಲ. ಅವಕಾಶ ಕೊಟ್ಟರೆ ದಿನದ 20 ಗಂಟೆ ನಿಮಗಾಗಿ ಚಾಕರಿ ಮಾಡುತ್ತೇನೆ. ಅವಕಾಶ ಕೊಡದಿದ್ದರೆ ಮನೆಯಲ್ಲಿ ಕುಳಿತುಕೊಳ್ಳುವೆ. ಇದರಲ್ಲಿ ನನ್ನ ಆಸ್ತಿ ಏನು ಹೋಗಲ್ಲ ಎಂದು ಹೇಳಿದರು.

    113 ಸ್ಥಾನವನ್ನು ಗೆಲ್ಲಲು ನಾನು ಹೊರಟಿದ್ದೇನೆ. ಸ್ವತಂತ್ರವಾಗಿ ಯಾರ ಹಂಗಿಲ್ಲದೇ ಅಧಿಕಾರ ನಡೆಸುವಂತಾಗಬೇಕು. ನಾನು ಅಧಿಕಾರಕ್ಕೆ ಬಂದರೆ 24 ತಾಸು ವಿಧಾನಸೌಧ ತೆರೆಯುತ್ತೇನೆ. ವಿಧಾನಸೌಧದ ಸುತ್ತ ಇರುವ ಬ್ಯಾರಿಕೇಡ್ ತಗೆಯುತ್ತೇನೆ. ನಾನು ಮುಖ್ಯಮಂತ್ರಿಯಾದ್ರೆ ಯಾರೂ ಬೇಕಾದ್ರೂ ಸಿಎಂ ಶರ್ಟ್ ಎಳೆದು ಪ್ರಶ್ನೆ ಮಾಡಬಹುದು ಎಂದು ಭರವಸೆ ನೀಡಿದರು.

    ಆಕಸ್ಮಿಕ ಪ್ರವೇಶ: ಸರ್ವಸಂಘ ಪರಿತ್ಯಾಗಿ ಆದವರು ಆಧಿಕಾರ ನಡೆಸಬೇಕು. ಆಗ ಮಾತ್ರ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಸಾಧ್ಯ. ನಾನು ರಾಜಕೀಯಕ್ಕೆ ಬಂದಿದ್ದೇ ಆಕಸ್ಮಿಕ. ದೇವೇಗೌಡರ ಮಗ ಅನ್ನೋದು ಬಿಟ್ಟರೆ ನನಗೆ ಬೇರೆ ಯಾವುದೇ ಅರ್ಹತೆ ಇರಲಿಲ್ಲ. ಐಎಎಸ್ ಅಧಿಕಾರಿಗಳನ್ನು ನಂಬಿ ಆಡಳಿತ ಸಾಧ್ಯವಿಲ್ಲ. ಜನರ ಬಳಿ ಹೋದಾಗಲೇ ಸಮಸ್ಯೆ ಅರಿವಾಗುತ್ತದೆ ಎಂದು ಹೇಳಿದರು.

    ಇಸ್ರೇಲ್ ಕೃಷಿಗೆ ಒತ್ತು: ಹಿರಿಯ ವ್ಯಕ್ತಿಯೊಬ್ಬರು ಕೃಷಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಸಾಲ ಮನ್ನಾ ಮಾಡಿದ ತಕ್ಷಣ ರೈತರು ಉದ್ಧಾರ ಆಗುವುದಿಲ್ಲ. ರೈತರಿಗೆ ಅನುಕೂಲ ಆಗುವಂತಹ ಕಾರ್ಯಕ್ರಮ ತಂದರೆ ಮಾತ್ರ ಅವರು ಉದ್ಧಾರ ಆಗುತ್ತಾರೆ. ಇಸ್ರೇಲಿನಲ್ಲಿ ಸಮುದ್ರದ ನೀರನ್ನು ಕೃಷಿಗೆ ಬಳಸಿಕೊಳ್ಳಲಾಗುತ್ತಿದೆ. ಅಲ್ಲಿ ರೈತ ಮಾರುಕಟ್ಟೆ ದರದಲ್ಲಿ ನೀರು ಖರೀದಿಸಿ ಉತ್ತಮ ಕೃಷಿ ಮಾಡುತ್ತಿದ್ದಾನೆ. ನಮ್ಮಲ್ಲಿ ಉಚಿತ ನೀರು ಉಚಿತ ವಿದ್ಯುತ್ ಕೊಟ್ಟರೂ ರೈತರು ಯಾಕೆ ಅಭಿವೃದ್ಧಿ ಹೊಂದುತ್ತಿಲ್ಲ? ಅನಾರೋಗ್ಯದ ನಡುವೆಯೂ ನಾನು ಇಸ್ರೇಲ್ ಕೃಷಿ ಪದ್ಧತಿ ಅಧ್ಯಯನ ಮಾಡಿದ್ದೇನೆ. ನಮ್ಮ ಸರ್ಕಾರ ಬಂದಲ್ಲಿ ಇಸ್ರೇಲ್ ಮಾದರಿಯ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಎಚ್‍ಡಿಕೆ ಉತ್ತರಿಸಿದರು.

    ನಾವು ಕೆಲ್ಸ ಮಾಡಿಲ್ಲವೇ: ಮಾದ್ಯಮಗಳ ಸಮೀಕ್ಷೆಗಳು ಏನಾದರೂ ಬರಲಿ. ಜ್ಯೋತಿಷಿಗಳು ಏನಾದರೂ ಹೇಳಿಕೊಳ್ಳಲಿ. ಆದರೆ ನನಗೆ ನಮ್ಮ ಸರ್ಕಾರ ಬಂದೇ ಬರುತ್ತದೆ ಎನ್ನುವ ವಿಶ್ವಾಸವಿದೆ. ಸಮೀಕ್ಷೆ ಗಳು ಎಲ್ಲೋ ಕೆಲವು ಸಲ ನಿಜವಾಗಿರಬಹುದು. ಮಾಧ್ಯಮಗಳ ಸಮೀಕ್ಷೆ ಬಗ್ಗೆ ನಾನು ಹೆಚ್ಚು ಮಾತನಾಡಲು ಬಯಸುವುದಿಲ್ಲ. ಪದೇ ಪದೇ ಕಾಂಗ್ರೆಸ್ 100 ಸ್ಥಾನ, ಬಿಜೆಪಿ 80 ಅಂತೆಲ್ಲಾ ಮಾಧ್ಯಮದವರು ತೋರಿಸುತ್ತಾರೆ. ಯಾಕೆ ನಾವು ಏನೂ ಕೆಲಸ ಮಾಡಿಲ್ಲವಾ ಎಂದು ಮಾಧ್ಯಮಗಳ ಸಮೀಕ್ಷೆ ಬಗ್ಗೆ ಪ್ರಶ್ನಿಸಿ ಪರೋಕ್ಷವಾಗಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

    ಉತ್ತರ ಭಾರತದ ಅಧಿಕಾರಿಗಳು ನಮ್ಮ ಸರ್ಕಾರಕ್ಕೆ ಬೇಕಿಲ್ಲ. ಕರ್ನಾಟಕವನ್ನು ದಿವಾಳಿ ಮಾಡಿ ತಮ್ಮ ರಾಜ್ಯಗಳಲ್ಲಿ ಬಹು ಅಂತಸ್ತಿನ ಮಹಡಿ ಮಾಲ್ ಕಟ್ಟಿದ್ದಾರೆ ಎಂದು ಎಚ್‍ಡಿಕೆ ಕಿಡಿಕಾರಿದರು.  ಇದನ್ನೂ  ಓದಿ: :ಹೊಸ ವರ್ಷಕ್ಕೆ ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆ-ಕರ್ನಾಟಕ ಮತದಾರರ ಮನದಾಳದ ಉತ್ತರ ಇಲ್ಲಿದ

  • ಅಪ್ಪ-ಮಕ್ಕಳಿಗೆ ಮಹದಾಯಿ ಸಮಸ್ಯೆ ಬಗೆಹರಿಸೋಕೆ ಇಷ್ಟ ಇಲ್ಲ- ಎಚ್‍ಡಿಕೆ, ದೇವೇಗೌಡರ ವಿರುದ್ಧ ಬಿಎಸ್‍ವೈ ಕಿಡಿ

    ಅಪ್ಪ-ಮಕ್ಕಳಿಗೆ ಮಹದಾಯಿ ಸಮಸ್ಯೆ ಬಗೆಹರಿಸೋಕೆ ಇಷ್ಟ ಇಲ್ಲ- ಎಚ್‍ಡಿಕೆ, ದೇವೇಗೌಡರ ವಿರುದ್ಧ ಬಿಎಸ್‍ವೈ ಕಿಡಿ

    ಹುಬ್ಬಳ್ಳಿ: ಮಹದಾಯಿ ವಿಷಯದಲ್ಲಿ ಕಾಂಗ್ರೆಸ್ ನಾಟಕ ಮಾಡುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಜವಾಬ್ದಾರಿ ಮನುಷ್ಯ. ಅಪ್ಪ-ಮಕ್ಕಳಿಗೆ ಮಹದಾಯಿ ಸಮಸ್ಯೆ ಬಗೆಹರಿಸೋಕೆ ಇಷ್ಟ ಇಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿಸ್ ಯಡಿಯೂರಪ್ಪ ಎಚ್‍ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಕಿಡಿ ಕಾರಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದಾಯಿ ನೀರಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೆ. 2008 ರಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಅನುಮತಿ ನೀಡಿದ್ದರು. ಕಾಂಗ್ರೆಸ್ ಸರ್ಕಾರ 2012 ರಲ್ಲಿ ಗೋವಾ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. ಆಗ ಯಾಕೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಮಧ್ಯಪ್ರವೇಶ ಮಾಡಲಿಲ್ಲ ಅಂತ ಕಿಡಿ ಕಾರಿದ್ರು.

    ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುವುದಾಗಿ ಗೋವಾ ಮುಖ್ಯಮಂತ್ರಿ ಹೇಳಿದ್ದಾರೆ. ಗೋವಾ ಸಿಎಂ ಅವರಿಗೆ ಯಾಕೆ ಪತ್ರ ಬರೆಯಬೇಕು ಎಂಬುದನ್ನು ನಾನು ಹೇಳುವುದು ಸರಿಯಲ್ಲ. ಅವರು ನೀರು ಕೊಡಲು ಒಲವು ತೋರಿದ್ದಾರೆ. ಹೀಗಿರುವಾಗ ಯಾರಿಗೆ ಪತ್ರ ಬರೆದಿದ್ದಾರೆ ಎಂಬುದು ಮುಖ್ಯವಲ್ಲ ಅಂತ ಹೇಳಿದ್ರು.

    ಈ ಹಿಂದೆ ನಮ್ಮ ಮುಖ್ಯಮಂತ್ರಿ ಹಲವು ಸಾರಿ ಹೇಳುತ್ತಾ ಬಂದಿದ್ದಾರೆ. ನೀವು ಗೋವಾ ಸಿಎಂ ಅವರನ್ನು ಒಪ್ಪಿಸಿ ಎಂದಿದ್ದರು. ನಾವು ಈಗ ಗೋವಾ ಸಿಎಂ ಅವರನ್ನು ಒಪ್ಪಿಸಿದ್ದೇವೆ. ಹೀಗಾಗಿ ಅವರು ಮಾತುಕತೆಗೆ ಒಪ್ಪಿ ನಮಗೆ ಲಿಖಿತವಾಗಿ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಸರ್ಕಾರ ನೀರಿನ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಅಂತ ಸಿಡಿಮಿಡಿಗೊಂಡ್ರು.

    2005-12 ರವರೆಗೆ ಗೋವಾ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಅವಾಗ ಯಾಕೆ ಕಾಂಗ್ರೆಸ್ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸಲಿಲ್ಲ. ಆವಾಗ್ಯಾಕೆ ಇವರು ರಾಜಕೀಯ ದೊಂಬರಾಟ ಮಾಡಿದ್ರು? ಆದ್ರೂ ನಮ್ಮ ಪ್ರಯತ್ನ ಮಾಡಿದ್ದೇವೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಗೋವಾ ಸಿಎಂ ಮನವೊಲಿಸಿದ್ದೇವೆ. ಗೋವಾ ಸಿಎಂ ನಮಗೆ ಒಪ್ಪಿಗೆ ನೀಡಿ ಪತ್ರ ನೀಡಿದ್ದಾರೆ. ಈ ಪತ್ರವನ್ನು ಟ್ರಿಬ್ಯುನಲ್ ಮುಂದೆ ತೆಗೆದುಕೊಂಡು ಹೋಗಿ ಸಮಸ್ಯೆ ಬಗೆಹರಿಯುತ್ತೆ. ನಿಮ್ಮಿಂದ 15 ವರ್ಷದಿಂದ ಆಗದೇ ಇರೋ ಕೆಲಸ ನಾವು ಮಾಡಿದ್ದೇವೆ. ಈಗಲಾದ್ರೂ ಸಮಸ್ಯೆ ಇತ್ಯರ್ಥ ಮಾಡೋಕೆ ಒಟ್ಟಾಗಿ ಪ್ರಯತ್ನ ಮಾಡೋಣ ಅಂತ ಕಾಂಗ್ರೆಸ್ಸಿಗರಿಗೆ ಬಿಎಸ್‍ವೈ ಸಲಹೆಯಿತ್ತರು.

  • ಎಚ್‍ಡಿಕೆಗೆ ಕೈಯಾರೆ ಅಡುಗೆ ಮಾಡಿ ಬಡಿಸಿದ ಕಿಚ್ಚ ಸುದೀಪ್

    ಎಚ್‍ಡಿಕೆಗೆ ಕೈಯಾರೆ ಅಡುಗೆ ಮಾಡಿ ಬಡಿಸಿದ ಕಿಚ್ಚ ಸುದೀಪ್

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಭಾನುವಾರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದಾರೆ.

    ಮಧ್ಯಾಹ್ನ 2 ಗಂಟೆಗಳ ಕಾಲ ಊಟ ಮಾಡುತ್ತಾ ಇಬ್ಬರು ಆತ್ಮೀಯವಾಗಿ ಮಾತುಕತೆ ನಡೆಸಿದರು. ಸ್ವತಃ ಕಿಚ್ಚ ಸುದೀಪ್ ಅವರೇ ಅಡುಗೆ ಮಾಡಿ ಕುಮಾರಸ್ವಾಮಿ ಅವರಿಗೆ ಉಣಬಡಿಸಿದ್ದು ವಿಶೇಷವಾಗಿತ್ತು.

    ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶನಿವಾರ ಶುಭ ಕೋರಿದ್ದ ಕಿಚ್ಚ, ತಮ್ಮ ಮನೆಗೆ ಬನ್ನಿ ಎಂದು ಕರೆದಿದ್ದರು. ಕಿಚ್ಚನ ಕರೆಗೆ ಓಗೊಟ್ಟು ಕುಮಾರಸ್ವಾಮಿ ಅವರು ಇಂದು ಸುದೀಪ್ ಅವರ ಮನೆಗೆ ಭೇಟಿ ನೀಡಿದರು.

    ಕುಮಾರಸ್ವಾಮಿ ಅವರನ್ನು ಬಹಳ ಸಂತಸದಿಂದ ಬರಮಾಡಿಕೊಂಡ ಕಿಚ್ಚ, ತನ್ನ ಕೈಯಾರೆ ಅಡುಗೆ ಮಾಡಿ ಕುಮಾರಸ್ವಾಮಿ ಅವರಿಗೆ ಬಡಿಸಿದರು. ಇಬ್ಬರೂ ಜೊತೆಗೂಡಿ 2 ಗಂಟೆಗಳ ಕಾಲ ಬಹಳ ಆತ್ಮೀಯತೆಯಿಂದ ಮಾತುಕತೆ ನಡೆಸಿದರು.  ಇದನ್ನೂ ಓದಿ: ಸಿಎಂರನ್ನು ದಿಢೀರ್ ಭೇಟಿ ಮಾಡಿದ ಕಿಚ್ಚ ಸುದೀಪ್