Tag: ಎಚ್ ಡಿ ಕುಮಾರಸ್ವಾಮಿ

  • ಎಚ್‍ಡಿಕೆ ಬರೋವರೆಗೂ ಮದುವೆ ಆಗಲ್ಲ ಎಂದಿದ್ದ ಅಭಿಮಾನಿ ಮನೆಗೆ ಭೇಟಿ ಕೊಟ್ರು ಕುಮಾರಸ್ವಾಮಿ

    ಎಚ್‍ಡಿಕೆ ಬರೋವರೆಗೂ ಮದುವೆ ಆಗಲ್ಲ ಎಂದಿದ್ದ ಅಭಿಮಾನಿ ಮನೆಗೆ ಭೇಟಿ ಕೊಟ್ರು ಕುಮಾರಸ್ವಾಮಿ

    ಮಂಡ್ಯ: ಎಚ್‍ಡಿಕೆ ಬರೋವರೆಗೂ ಮದುವೆ ಆಗಲ್ಲ ಎಂದು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಅಭಿಮಾನಿ ಮನೆಗೆ ಭೇಟಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ನವ ದಂಪತಿಗಳಿಗೆ ಶುಭ ಹಾರೈಸಿದ್ದಾರೆ.

    ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಕ್ಕರೆಬೆಳ್ಳೂರಿ ಗ್ರಾಮದ ನಿವಾಸಿ ರವಿ ಎಚ್‍ಡಿಕೆ ಅವರ ಅಭಿಮಾನಿಯಾಗಿದ್ದು, ಡಿಸೆಂಬರ್ 1 ರಂದು ನಡೆಯುವ ತನ್ನ ಮದುವೆಗೆ ಎಚ್‍ಡಿಕೆ ಬರಬೇಕು ಎಂದು ಆಹ್ವಾನ ನೀಡಿದ್ದರು. ಆದರೆ ಕುಮಾರಸ್ವಾಮಿ ಮದುವೆಗೆ ಬರುವ ಭರವಸೆ ಕೊಡದ ಹಿನ್ನೆಲೆಯಲ್ಲಿ ಮದುವೆಯಾಗದೆ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದರು.

    ಪ್ರತಿಭಟನೆ ಮಾಹಿತಿ ತಿಳಿದು ರವಿ ಅವರೊಂದಿಗೆ ಮೊಬೈಲ್‍ನಲ್ಲಿ ಮಾತನಾಡಿದ್ದ ಎಚ್‍ಡಿಕೆ ಮದುವೆಯಾದ ನಂತರ ಬರುವುದಾಗಿ ಭರವಸೆ ನೀಡಿದ್ದರು. ಎಚ್‍ಡಿಕೆ ಭರವಸೆ ಹಿನ್ನಲೆಯಲ್ಲಿ ಉಪವಾಸ ಸತ್ಯಾಗ್ರಹ ಬಿಟ್ಟು ಮದುವೆಯಾಗಿದ್ದ ರವಿ ಅವರ ಮನೆಗೆ ಇಂದು ಕುಮಾರಸ್ವಾಮಿ ಭೇಟಿ ನೀಡಿದ್ದರು.

    ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರು ತಮ್ಮ ಕುಟುಂಬದ ಕಾರ್ಯಕ್ರಮಕ್ಕೆ ಬರಬೇಕೆಂದು ಹಠ ಮಾಡುತ್ತಾರೆ. ಅವರ ಅಭಿಮಾನ, ಪ್ರೀತಿಗೆ ಬೆಲೆಕಟ್ಟಲು ಸಾಧ್ಯವಿಲ್ಲ. ನನ್ನ ಇಕ್ಕಟ್ಟಿನ ಪರಿಸ್ಥಿತಿ. ಒತ್ತಡದ ನಡುವೆ ಕಾರ್ಯಕ್ರಮಕ್ಕೆ ಬರಬೇಕೆಂದು ಹೇಳಿದರೆ ನಾನು ಬೇರೆ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಬೆಳಗ್ಗೆಯಿಂದ ಸಂಜೆವರೆಗೂ ಕಾರ್ಯಕ್ರಮಕ್ಕೆ ಹೋಗಬೇಕಾಗುತ್ತದೆ. ಹಿಂದೊಮ್ಮೆ ದಿನಕ್ಕೆ 53 ಮದುವೆ ಹೋಗಿದ್ದೆ. ಆದರೆ ಈ ಒತ್ತಡದ ನಡುವೆ ನನಗೆ ಕಷ್ಟವಾದರೂ ಬಂದಿದ್ದೇನೆ. ಅದ್ದರಿಂದ ಅಭಿಮಾನಿಗಳು, ಕಾರ್ಯಕರ್ತರು ಒತ್ತಡ ಹಾಕಬೇಡಿ. ಯಾವುದಾದರೂ ಸಮಯ ಬಿಡುವಿದ್ದಾಗ ಮನೆಗೆ ಭೇಟಿ ನೀಡಿ ಶುಭ ಹಾರೈಸುತ್ತೇನೆ ಎಂದು ಅಭಿಮಾನಿಗಳಲ್ಲಿ ಎಚ್‍ಡಿಕೆ ಮನವಿ ಮಾಡಿದರು.

  • ಚುನಾವಣೆ ಬರುತ್ತಿದ್ದಂತೆ ರಾಜ್ಯದಲ್ಲಿ ಶುರುವಾಯ್ತಾ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್?

    ಚುನಾವಣೆ ಬರುತ್ತಿದ್ದಂತೆ ರಾಜ್ಯದಲ್ಲಿ ಶುರುವಾಯ್ತಾ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್?

    ರಾಮನಗರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಶುರುವಾಯ್ತಾ? ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೂಕ್ತವಾದ ಅಭ್ಯರ್ಥಿ ಇಲ್ವಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

    ಹೌದು. ಈ ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವಾಗಿದ್ದು ಭಾನುವಾರ ಚನ್ನಪಟ್ಟಣದಲ್ಲಿ ನಡೆದ ಕನಕನ ಹಬ್ಬ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ್ದ ಯೋಗೇಶ್ವರ್ ಅವರನ್ನು ತೆಗಳಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲದೇ ಅನಿತಾ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ, ಟೆಂಪರರಿ ನಾಯಕರು ಬರುತ್ತಾರೆ ಹೋಗುತ್ತಾರೆ. ಆದರೆ ನಿಮ್ಮ ಜೊತೆ ನಾವು ಶಾಶ್ವತವಾಗಿ ಇರುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಅನಿತಾ ಕುಮಾರಸ್ವಾಮಿಯವರು ನಿಮ್ಮಲ್ಲೆರನ್ನು ನಂಬಿ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನಿಮ್ಮ ಜೊತೆಯಲ್ಲಿ ಯಾರು ಇಲ್ಲದೇ ಇದ್ದರೂ ನಾವಿದ್ದೇವೆ. ನಿಮ್ಮ ಹೆಣವನ್ನು ಹೊರುವವರು ನಾವೇ. ನಿಮ್ಮ ಪಲ್ಲಕ್ಕಿಯನ್ನ ಹೊರುವವರು ನಾವೇ ಎಂದು ಹೇಳುವ ಮೂಲಕ ಶಾಸಕ ಯೋಗೇಶ್ವರ್ ಅವರಿಗೆ ವೇದಿಕೆಯಲ್ಲೇ ಡಿಕೆಶಿ ಟಾಂಗ್ ನೀಡಿದರು.

    ಕೆರೆ ಬಾಗಿನ ಕಾರ್ಯಕ್ರಮಗಳಲ್ಲಿ ಅವರ ಒಂದು ಫೋಟೋ ಕೂಡ ಹಾಕಿಲ್ಲ. ನಮಗೆ ಯಾರು ಸಹಾಯ ಮಾಡಿರುತ್ತಾರೆ ಅವರನ್ನು ನೆನೆಯಬೇಕು. ಸಹಾಯ ಮಾಡಿದವರನ್ನು ಸ್ಮರಿಸಬೇಕು. ನಾಲಿಗೆ ತಪ್ಪಬಾರದು ಆವಾಗ ಒಳ್ಳೆಯ ಮನುಷ್ಯ ಎನ್ನುತ್ತಾರೆ ಎಂದರು.

    ನಾನು ರಾಜಕೀಯವನ್ನು ಬಿಡುವುದಿಲ್ಲ, ಚನ್ನಪಟ್ಟಣವನ್ನು ಬಿಡುವುದಿಲ್ಲ. ಯಾಕೆಂದರೆ ಚನ್ನಪಟ್ಟಣವನ್ನು ರಾಜಕೀಯವಾಗಿ ಮದುವೆ ಮಾಡಿಕೊಂಡಿದ್ದೇನೆ. ‘ನಾನು’ ಎಂದ ಎಲ್ಲಾ ಚಕ್ರವರ್ತಿಗಳು ಬಿದ್ದು ಹೋಗಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿ ಮತ್ತೊಮ್ಮೆ ಯೋಗೇಶ್ವರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

    ಅನಿತಾ ಕುಮಾರಸ್ವಾಮಿ ಅಭ್ಯರ್ಥಿ?
    ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿರುವ ಯೋಗೇಶ್ವರ್ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನೀಡಲಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಹೀಗಾಗಿ ಈ ಚುನಾವಣೆಯಲ್ಲಿ ಯೋಗೇಶ್ವರ್ ಅವರನ್ನು ಸೋಲಿಸಲು ಡಿಕೆಶಿ ಸರ್ವಪ್ರಯತ್ನ ನಡೆಸುತ್ತಿದ್ದು, ಈ ತಂತ್ರದ ಭಾಗವಾಗಿ ಅನಿತಾ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಅನಿತಾರನ್ನೇ ಬೆಂಬಲಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬಂದಿದೆ. ಇದಕ್ಕೆ ಪುಷ್ಠಿ ಎನ್ನುವಂತೆ ಡಿಕೆಶಿ ಕಾರ್ಯಕ್ರಮದಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ ಎನ್ನುವ ಮಾತು ರಾಜಕೀಯ ವಲಯದಿಂದ ಕೇಳಿಬಂದಿದೆ.

    ಇದನ್ನೂ ಓದಿ: ದೇವೇಗೌಡ್ರ ಕುಟುಂಬದಲ್ಲಿ ಮತ್ತೊಬ್ರು ಕಣಕ್ಕಿಳಿಯಲು ಸಿದ್ಧತೆ- ತೆರೆಮರೆಯಲ್ಲಿ ಸಜ್ಜಾಗುತ್ತಿದ್ದಾರಾ ಅನಿತಾ ಕುಮಾರಸ್ವಾಮಿ?

    2013ರ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರು ಅನಿತಾ ಕುಮಾರ ಸ್ವಾಮಿ ವಿರುದ್ಧ 6,464 ಮತಗಳ ಅಂತರಿಂದ ಗೆದ್ದಿದ್ದರು. ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ 80,099 ಮತಗಳು ಬಿದ್ದಿದ್ದರೆ, ಅನಿತಾ ಕುಮಾರಸ್ವಾಮಿ ಅವರಿಗೆ 73,635 ಮತಗಳು ಬಿದ್ದಿತ್ತು. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸದತ್ ಅಲಿ ಖಾನ್ ಅವರಿಗೆ 8,134 ಮತಗಳು ಸಿಕ್ಕಿತ್ತು.

    2014ರ ಲೋಕಸಭಾ ಚುನಾವಣೆ ವೇಳೆ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೇ ಅಕ್ಟೋಬರ್ ನಲ್ಲಿ ಪಕ್ಷದ ವರಿಷ್ಠರ ನಿರ್ಧಾರದಿಂದ ಬೇಸತ್ತು ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಯೋಗೇಶ್ವರ್ ತಿಳಿಸಿದ್ದರು.

    ಕೆಲ ದಿನಗಳಿಂದ ಅನಿತಾ ಕುಮಾರಸ್ವಾಮಿ ಅವರು ಪದೇ ಪದೇ ಚನ್ನಪಟ್ಟಣಕ್ಕೆ ಭೇಟಿ ನೀಡುತ್ತಿದ್ದು, ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಚನ್ನಪಟ್ಟಣದಿಂದ ಕಣಕ್ಕೆ ಇಳಿಯುವ ಆಸೆ ಇದೆ ಎಂದು ತಿಳಿಸಿದ್ದರು.

  • ಕುಟುಂಬ ರಾಜಕಾರಣ ಎಂದು ಟೀಕಿಸೋ ಮಂದಿಗೆ ಉದಾಹರಣೆ ಕೊಟ್ಟು ತಿರುಗೇಟು ಕೊಟ್ಟ ಪ್ರಜ್ವಲ್ ರೇವಣ್ಣ

    ಕುಟುಂಬ ರಾಜಕಾರಣ ಎಂದು ಟೀಕಿಸೋ ಮಂದಿಗೆ ಉದಾಹರಣೆ ಕೊಟ್ಟು ತಿರುಗೇಟು ಕೊಟ್ಟ ಪ್ರಜ್ವಲ್ ರೇವಣ್ಣ

    ಮಂಡ್ಯ: ರೈತರ ಸಂಕಷ್ಟ ಓಡಿಸಬೇಕು ಅಂದರೆ ಕುಮಾರಣ್ಣ ಅಧಿಕಾರಕ್ಕೆ ಬರಬೇಕು. ಕುಮಾರಣ್ಣ ಮತ್ತು ದೇವೇಗೌಡರು ಚುನಾವಣೆಗೆ ನಿಲ್ಲು ಅಂದರೆ ನಿಲ್ಲುತ್ತೇನೆ, ಇಲ್ಲದಿದ್ರೆ ನಿಲ್ಲೋದಿಲ್ಲ ಎಂದು ಪ್ರಜ್ವಲ್ ರೇವಣ್ಣ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.

    ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಮಾತನಾಡಿದ ಅವರು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಮಂದಿಗೆ ತಿರುಗೇಟು ನೀಡಿದರು. ಇವತ್ತು ನನ್ನ ಬಗ್ಗೆ ಮಾಧ್ಯಮಗಳು ಒತ್ತು ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮಗ ಯತೀಂದ್ರ ಅವರನ್ನು ಚುನಾವಣೆಗೆ ನಿಲ್ಲಿಸುತ್ತಿದ್ದೇನೆ ಅಂತಿದ್ದಾರೆ. ಯಾರಾದರೂ ಈ ಕುರಿತು ಪ್ರಶ್ನಿಸಿದ್ದೀರ. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ರಾಘವೇಂದ್ರ ಅವರನ್ನು ಚುನಾವಣೆಯಲ್ಲಿ ನಿಲ್ಲಿಸಿದ್ದರು. ಅದು ಕುಟುಂಬ ರಾಜಕಾರಣ ಅಲ್ಲವೇ? ಯಾರೂ ಅದರ ಬಗ್ಗೆ ಮಾತನಾಡದೇ ನನ್ನ ಬಗ್ಗೆ ಮಾತ್ರ ಮಾತನಾಡುವುದು ಎಷ್ಟು ಸರಿ ಎಂದು ಹೇಳಿ ಬೇಸರ ವ್ಯಕ್ತಪಡಿಸಿದರು.

    ಕಾರ್ಯಕರ್ತರಲ್ಲಿ ಎಲ್ಲ ಕಡೆ ಮನವಿ ಮಾಡುತ್ತಿದ್ದೇವೆ. ನಮ್ಮ ನಡುವೆ ಬೇಧ ಭಾವ ಏನೂ ಇಲ್ಲ. ನನಗೆ ಹುಷಾರಿರಲಿಲ್ಲ. ಆದರೂ ನಾನು ಹೋರಾಟ ಮಾಡಲು ಸಿದ್ಧವಾಗಿದ್ದೇನೆ. ಯುವಕರು ಎಲ್ಲರೂ ಕುಮಾರಣ್ಣನಿಗೆ ಶಕ್ತಿ ಕೊಡಬೇಕು. ಕುಮಾರಣ್ಣ ನನ್ನ ಸ್ವಂತ ಚಿಕ್ಕಪ್ಪ. ಯಾರಿಗೆ ನೋವು ಮಾಡಿ ಗೆದ್ದರೂ ಚೆನ್ನಾಗಿರಲ್ಲ. ಕುಮಾರಣ್ಣ ಮತ್ತು ದೇವೇಗೌಡರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಈ ಕುರಿತು ಸುಮ್ಮನೆ ಕೆಟ್ಟದಾಗಿ ಹಬ್ಬಿಸೋದು ಬೇಡ ಎಂದು ಮನವಿ ಮಾಡಿದರು.

    ನಾನು ಸಹ ಚುನಾವಣೆಯಲ್ಲಿ ಟಿಕೆಟ್ ಅಕಾಂಕ್ಷಿಯಾಗಿದ್ದೇನೆ. ಪಕ್ಷದ ಕಾರ್ಯಕರ್ತರು ಯಾರು ಬೇಕಾದರು ಚುನಾವಣಾ ಆಕಾಂಕ್ಷಿಯಾಗಬಹುದು. ಆದರೆ ಟಿಕೆಟ್ ನೀಡುವ ಅಂತಿಮ ನಿರ್ಧಾರ ಎಚ್.ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.

     

  • ಇಂದು ಮಾಜಿ ಸಿಎಂ ಹೃದಯಕ್ಕೆ ಶಸ್ತ್ರ ಚಿಕಿತ್ಸೆ- ಜ್ಯೋತಿಷಿ ಮಾತು ನಂಬಿ ಸಮಯ ನಿಗದಿ

    ಇಂದು ಮಾಜಿ ಸಿಎಂ ಹೃದಯಕ್ಕೆ ಶಸ್ತ್ರ ಚಿಕಿತ್ಸೆ- ಜ್ಯೋತಿಷಿ ಮಾತು ನಂಬಿ ಸಮಯ ನಿಗದಿ

    ಬೆಂಗಳೂರು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಾಜಿ ಸಿಎಂ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿಗೆ ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ.

    ಆಪರೇಷನ್‍ಗೆ ದಿನಾಂಕ ಅಂತಿಮಗೊಳಿಸಿದ್ದು ವೈದ್ಯರಲ್ಲ ಬದಲಿಗೆ ಜ್ಯೋತಿಷಿಗಳಂತೆ. ದೇವರು, ಜ್ಯೋತಿಷ್ಯವನ್ನು ಅತಿಯಾಗಿ ನಂಬುವ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಹೆಚ್‍ಡಿಕೆ ಆಪರೇಷನ್‍ಗೂ ಒಳ್ಳೆಯ ದಿನಕ್ಕಾಗಿ ಜ್ಯೋತಿಷಿಗಳ ಮೊರೆ ಹೋಗಿತ್ತು. ಇದೇ ಮಾರ್ಚ್, ಆಗಸ್ಟ್‍ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರೂ ಹೃದಯದ ಐರೋಟಿಕ್ ವಾಲ್ವ್ ಶಸ್ತ್ರಚಿಕಿತ್ಸೆಗೆ ಸೆಪ್ಟೆಂಬರ್ 23ರಂದು ಸಮಯ ನಿಗದಿ ಮಾಡಿದ್ದರು.

    ಇಂದು ತದಿಗೆ ಜೊತೆಗೆ ಕಾವೇರಿ ಪುಷ್ಕರದ ಕೊನೆಯ ದಿನ. ಜ್ಯೋತಿಷ್ಯದ ಪ್ರಕಾರ ಒಳ್ಳೆಯ ದಿನ. ಈ ಹಿನ್ನೆಲೆಯಲ್ಲಿ ಜ್ಯೋತಿಷಿಗಳ ಸಲಹೆಯಂತೆ ಹೆಚ್‍ಡಿಕೆ ಇಂದಿನ ದಿನವನ್ನು ಆಪರೇಷನ್‍ಗಾಗಿ ಆಯ್ಕೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ 9.30ರೊಳಗೆ ರಾಹುಕಾಲ ಆರಂಭವಾಗಲಿದೆ. ಅದಕ್ಕೂ ಮೊದಲೇ ಹೆಚ್‍ಡಿಕೆ ಆಪರೇಷನ್ ಥಿಯೇಟರ್‍ಗೆ ಹೋಗಲಿದ್ದಾರೆ.

    ಬೆಂಗಳೂರಿನ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ ಸಿ.ಮಂಜುನಾಥ್ ಮಾರ್ಗದರ್ಶನದಲ್ಲಿ ಅಪೋಲೋ ಆಸ್ಪತ್ರೆಯ ಡಾ.ಸತ್ಯಕಿ ಮತ್ತವರ ವೈದ್ಯರ ತಂಡ ಆಪರೇಷನ್ ಮಾಡಲಿದೆ. 4 ಗಂಟೆ ಆಪರೇಷನ್ ನಡೆಯಲಿದೆ. ನಾಲ್ಕು ದಿನಗಳ ವಿಶ್ರಾಂತಿ ಬಳಿಕ ಸಿಂಗಾಪುರ್‍ಗೆ ಹೋಗಿ ಒಂದಷ್ಟು ದಿನ ವಿಶ್ರಾಂತಿ ಪಡೆಯಲು ಹೆಚ್‍ಡಿಕೆ ತೀರ್ಮಾನಿಸಿದ್ದಾರೆ. ತಮ್ಮ ನೆಚ್ಚಿನ ನಾಯಕ ಶೀಘ್ರ ಗುಣಮುಖರಾಗಲಿಯೆಂದು ಇತ್ತ ಕಾರ್ಯಕರ್ತರು ಹೋಮ ಹವನ ಮಾಡಿಸ್ತಿದ್ದಾರೆ.

    ಎಂಎಲ್‍ಸಿ ಶರವಣ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ, ಇತರೆ ದೇವಾಲಯಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿದ್ದಾರೆ. ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕುರುಕ್ಷೇತ್ರದ ಸೆಟ್‍ನಲ್ಲಿದ್ದ ಪುತ್ರ ನಟ ನಿಖಿಲ್ ಹೈದರಾಬಾದ್‍ನಿಂದ ಬಂದು ಆರೋಗ್ಯ ವಿಚಾರಿಸಿದ್ರು. ಆಸ್ಪತ್ರೆಗೆ ದಾಖಲಾಗೋ ಮುನ್ನ ಹೆಚ್‍ಡಿಕೆ ತಾಯಿ ಚನ್ನಮ್ಮರ ಆಶೀರ್ವಾದ ಪಡೆದ್ರು.

  • ನಡೆದಾಡುವ ದೇವರಲ್ಲಿ ಸಾರ್ವಜನಿಕವಾಗಿ ಎಂಬಿ ಪಾಟೀಲ್ ಕ್ಷಮೆ ಕೇಳಬೇಕು: ಎಚ್‍ಡಿಕೆ

    ನಡೆದಾಡುವ ದೇವರಲ್ಲಿ ಸಾರ್ವಜನಿಕವಾಗಿ ಎಂಬಿ ಪಾಟೀಲ್ ಕ್ಷಮೆ ಕೇಳಬೇಕು: ಎಚ್‍ಡಿಕೆ

    ಬೆಂಗಳೂರು: ನಡೆದಾಡುವ ದೇವರನ್ನ ಪ್ರತ್ಯೇಕ ಧರ್ಮದ ಈ ವಿಚಾರಕ್ಕೆ ಬಳಸಿಕೊಂಡಿದ್ದು ಅತ್ಯಂತ ಹೀನಾಯ ಕೃತ್ಯ ಎಂದು ಜೆಡಿಎಸ್ ನಾಯಕ ಎಚ್‍ಡಿ ಕುಮಾರಸ್ವಾಮಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ವಿರುದ್ಧ ಕಿಡಿಕಾರಿದ್ದಾರೆ.

    ಲಿಂಗಾಯತ ಧರ್ಮಕ್ಕೆ ಶ್ರೀಗಳ ಬೆಂಬಲ ಇದೆ ಎನ್ನುವ ಎಂ.ಬಿ.ಪಾಟೀಲ್ ಹೇಳಿಕೆಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಹೆಸರನ್ನ ಈ ವಿಚಾರದಲ್ಲಿ ಬಳಸಿಕೊಂಡಿದ್ದು ಅಕ್ಷಮ್ಯ. ಇವರನ್ನ ಅಪ್ರಭುದ್ದ ಅನ್ನಬೇಕಾ ಎಂದು ಪ್ರಶ್ನಿಸಿದರು. ಅಷ್ಟೇ ಅಲ್ಲದೇ ಈ ತಪ್ಪಿಗೆ ಸಾರ್ವಜನಿಕವಾಗಿ ಶ್ರೀಗಳಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

    ಬಿಬಿಎಂಪಿ ಮೈತ್ರಿ ವಿಚಾರದಲ್ಲಿ ಸಿಎಂ ಸೂಚನೆ ಮೇರೆಗೆ ಇಂದು ರಾಮಲಿಂಗಾರೆಡ್ಡಿ ಅವರು ದೇವೇಗೌಡರನ್ನ ಭೇಟಿಯಾಗಿದ್ದಾರೆ. ಅವರೇನು ಚರ್ಚಿಸಿದ್ದಾರೆ ಗೊತ್ತಿಲ್ಲ. ನಮ್ಮ ಸದಸ್ಯರೆಲ್ಲ ಜೆಡಿಎಸ್‍ಗೆ ಮೇಯರ್ ಸ್ಥಾನ ಬೇಕು ಎಂದಿದ್ದಾರೆ. ದೇವೇಗೌಡರ ಜೊತೆ ಏನು ಮಾತನಾಡಿದ್ದಾರೆ ಎಂದು ತಿಳಿದುಕೊಳ್ಳುತ್ತೇನೆ. ಬಳಿಕ ಸಂಸದ ಕುಪ್ಪೇಂದ್ರ ರೆಡ್ಡಿ ಸೇರಿದಂತೆ ಎಲ್ಲ ಪ್ರಮುಖರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಎಂದು ಹೇಳಿದರು.

  • ಸೋಶಿಯಲ್ ಮೀಡಿಯಾಗೆ ಎಚ್‍ಡಿಕೆ ಎಂಟ್ರಿ: ಏನ್ ಮಾಡ್ತಾರೆ? ಎಷ್ಟು ಜನ ಇದ್ದಾರೆ?

    ಸೋಶಿಯಲ್ ಮೀಡಿಯಾಗೆ ಎಚ್‍ಡಿಕೆ ಎಂಟ್ರಿ: ಏನ್ ಮಾಡ್ತಾರೆ? ಎಷ್ಟು ಜನ ಇದ್ದಾರೆ?

    ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಇಂದು ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.

    `ನಮ್ಮ ಕುಮಾರಣ್ಣ’ ಅನ್ನೋ ಶೀರ್ಷಿಕೆಯಲ್ಲಿ ಅಧಿಕೃತವಾಗಿ 5 ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟಿರುವ ಅವರು, ಇನ್ಮುಂದೆ ಫೇಸ್ ಬುಕ್, ಟ್ವೀಟರ್, ಗೂಗಲ್ ಪ್ಲಸ್, ಯೂಟ್ಯೂಬ್, ಸೌಂಡ್ ಕ್ಲೌಡ್‍ಗಳಲ್ಲಿ ಸಕ್ರಿಯನಾಗಿರುವುದಾಗಿ ತಿಳಿಸಿದ್ದಾರೆ.

    ಇಂದಿನಿಂದಲೇ ಜನರ ನಡುವೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕ, ಸಂವಹನ ಮಾಡುತ್ತೇನೆ. ಈ ಜಾಲತಾಣದಲ್ಲಿ ಹಿಂದೆ 20 ತಿಂಗಳು ಮುಖ್ಯಮಂತ್ರಿಯಾಗಿ ಮಾಡಿದ ಕೆಲಸ ಸೇರಿದಂತೆ ಅನೇಕ ವಿಚಾರಗಳನ್ನು ಹಂಚಿಕೊಳ್ತೇನೆ. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಗ್ರಾಮವಾಸ್ತವ್ಯಗಳನ್ನು ಮಾಡಿದ್ದೆ. ಈ ಬಗ್ಗೆಯೂ ಜನರ ಜತೆ ಹಂಚಿಕೊಳ್ತೇನೆ ಅಂತಾ ಹೇಳಿದ್ದಾರೆ.

    ಯುಪಿಯಂತೇ ಇಲ್ಲೂ ಪ್ರಚಾರ: ಯುಪಿ ಎಲೆಕ್ಷನ್ ನಲ್ಲಿ ಮೋದಿ ಬೆಂಬಲಿಗರು ವಾಟ್ಸಪ್ ಮೂಲಕ ಪ್ರಚಾರ ನಡೆಸಿದರು. ಅದೇ ರೀತಿ ರಾಜ್ಯದಲ್ಲೂ ನಾವು ಪ್ರಚಾರ ಮಾಡ್ತೇವೆ. ಆದ್ರೆ ಇದು ಮೋದಿ ಅನುಕರಣೆ ಅಲ್ಲ. ತಿಂಗಳಲ್ಲಿ ಒಂದು ದಿನ 3ರಿಂದ 4 ಗಂಟೆ ನಾನು ಫೇಸ್ ಬುಕ್, ಗೂಗಲ್ ಫ್ಲಸ್ ನಲ್ಲಿ ಜನ್ರ ಜೊತೆ ನಾನೇ ನೇರ ಸಂಪರ್ಕದಲ್ಲಿ ಇರುತ್ತೇನೆ. ನಾನು ಜನಪ್ರತಿನಿಧಿ ಆಗಿರೋವರೆಗೋ ನಾನು ಸೋಷಿಯಲ್ ಮೀಡಿಯಾದಲ್ಲಿ ಇರುತ್ತೇನೆ. ಸೋಷಿಯಲ್ ಮೀಡಿಯಾದ ಮಹತ್ವ ನನಗೆ ಅರ್ಥ ಆಗಿದೆ. ಈಗಾಗಲೇ ನನ್ನ ಜತೆ ಸಾಮಾಜಿಕ ಜಾಲತಾಣದ ಕಾರ್ಯನಿರ್ವಹಣೆಗೆ 35 ಮಂದಿ ಟೀಂ ಇದೆ ಅಂತಾ ನುಡಿದ್ರು.

    ಮೊದಲ ಟ್ವೀಟ್: ಎರಡು ದಾರಿಗಳು ಎದುರಾದವು, ಆ ದಟ್ಟನೆಯ ಕಾಡಿನಲ್ಲಿ ನಾನು ಆಯ್ದುಕೊಂಡೆ ಹೆಚ್ಚು ಜನರು ನಡೆಯದ ಹಾದಿಯನ್ನು ಅದೇ ಅದೇ ವ್ಯತ್ಯಾಸ ಎಲ್ಲದಕ್ಕೂ ಅಂತಾ ರಾಬರ್ಟ್ ಫ್ರಾಸ್ಟ್ ಅವರ ಕವಿತೆಯ ಉಲ್ಲೇಖೀಸಿ ಟ್ವೀಟ್‍ಗೆ ಮುಂದಡಿಯಿಟ್ಟರು.

    ಇದನ್ನೂ ಓದಿ: ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕೋದೇ ಜೆಡಿಎಸ್: ಎಚ್‍ಡಿಕೆ

  • ಎಚ್‍ಡಿಕೆಗೆ ಕಪ್ಪ ಪಡೆಯುವುದಷ್ಟೇ ಗೊತ್ತು, ಕೊಡುವುದು ಗೊತ್ತಿಲ್ಲ- ಆಯನೂರು ಮಂಜುನಾಥ್

    ಎಚ್‍ಡಿಕೆಗೆ ಕಪ್ಪ ಪಡೆಯುವುದಷ್ಟೇ ಗೊತ್ತು, ಕೊಡುವುದು ಗೊತ್ತಿಲ್ಲ- ಆಯನೂರು ಮಂಜುನಾಥ್

    ಶಿವಮೊಗ್ಗ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿಗೆ ಕಪ್ಪ ಪಡೆಯುವುದಷ್ಟೇ ಗೊತ್ತು, ಕೊಡುವುದು ಗೊತ್ತಿಲ್ಲ. ಕಾರಣ ಅವರ ಪಕ್ಷಕ್ಕೆ ಅವರೇ ಹೈಕಮಾಂಡ್ ಅಂತಾ ರಾಜ್ಯಸಭೆ ಮಾಜಿ ಸದಸ್ಯ ಆಯನೂರ್ ಮಂಜುನಾಥ್ ಹೇಳಿದ್ದಾರೆ.

    ಪಕ್ಷದ ಮಿಡಲ್ ಕಮಾಂಡ್ ಹಾಗೂ ಲೋ ಕಮಾಂಡ್ ಎಲ್ಲಾ ಎಚ್‍ಡಿಕೆ ನೇ ಆಗಿದ್ದಾರೆ. ಅವರ ತಂದೆ ಹೆಚ್‍ಡಿ ದೇವೇಗೌಡ ಅವರೇ ಖಜಾಂಚಿಯೂ ಆಗಿದ್ದಾರೆ. ಕುಮಾರಸ್ವಾಮಿ ಒಬ್ಬ ಬ್ಲಾಕ್ ಮೇಲ್ ರಾಜಕಾರಣಿ ಅಂತಾ ಹೇಳಿದ್ರು.

    ಡೈರಿ ಹೊರಬಂದಾಕ್ಷಣ ಮುಖ್ಯಮಂತ್ರಿ ನಾಪತ್ತೆಯಾಗಿದ್ದಾರೆ ಎಂದು ಹೇಳುವುದಿಲ್ಲ. ಅವರಿಗೆ ನಿದ್ರೆ ಖಾಯಿಲೆ ಇರುವುದರಿಂದ ಎಲ್ಲೋ ಮಲಗಿರಬೇಕು. ಎಚ್ಚರಾದ ಮೇಲೆ ಎದ್ದು ಬರುತ್ತಾರೆ. ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ಕಪ್ಪ ಕೊಟ್ಟಿದ್ದು ನಿಜ. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಮುಖ್ಯಮಂತ್ರಿ ಮೂಗಿನ ಕೆಳಗೆ ಅವರಿಗೆ ಗೊತ್ತಿರುವಂತೆಯೇ ಈ ಪ್ರಕರಣ ನಡೆದಿರುವುದರಿಂದ ತನಿಖೆ ಮುಗಿಯುವವರೆಗೂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ ಅಂತಾ ಆಯನೂರು ಮಂಜುನಾಥ್ ಗುಡುಗಿದ್ರು.