Tag: ಎಚ್ ವಿಶ್ವನಾಥ್

  • ತವರಿಗೆ ಮತ್ತೆ ಮರಳುತ್ತಾ ಹಳ್ಳಿಹಕ್ಕಿ- ವಿಶ್ವನಾಥ್‍ಗೆ ಈಗ ಖರ್ಗೆಯೇ ಆಸರೆ!

    ತವರಿಗೆ ಮತ್ತೆ ಮರಳುತ್ತಾ ಹಳ್ಳಿಹಕ್ಕಿ- ವಿಶ್ವನಾಥ್‍ಗೆ ಈಗ ಖರ್ಗೆಯೇ ಆಸರೆ!

    ಮೈಸೂರು: ಬಿಜೆಪಿ (BJP) ಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್ (Congress) ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ವಿಶ್ವನಾಥ್ ಭೇಟಿ ಮಾಡಿರೋ ಹಿನ್ನೆಲೆಯಲ್ಲಿ ಮತ್ತೆ ವಿಶ್ವನಾಥ್ ಪಕ್ಷಾಂತರ ಮಾಡ್ತಾರಾ ಎಂಬ ಸುದ್ದಿ ದಟ್ಟವಾಗಿದೆ.

    ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ (H. Vishwanath) , ಮೂರು ವರ್ಷದ ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿ ಕಾಂಗ್ರೆಸ್ – ಜೆಡಿಎಸ್ ಸರ್ಕಾರ ಪತನವಾಗಲು ಪ್ರಮುಖ ಕಾರಣರಾಗಿದ್ದರು. ಬಾಂಬೆ ಟೀಂಗೆ ಒಂದರ್ಥದಲ್ಲಿ ವಿಶ್ವನಾಥ್ ಅವರೇ ಕ್ಯಾಪ್ಟನ್. ಆದರೆ ಉಪಚುನಾವಣೆಯಲ್ಲಿ ಸೋತ ಬಳಿಕ ಅವರು ಕ್ಯಾಪ್ಟನ್‍ಶಿಪ್ ಕಳೆದುಕೊಂಡು ಇಡೀ ಬಾಂಬೆ ಟೀಂ ಪಾಲಿಗೆ ಅಪ್ರಸ್ತುತರೆನ್ನಿಸಿಕೊಂಡರು. ಆ ಹಿನ್ನೆಲೆಯಲ್ಲಿ ನಿಧಾನವಾಗಿ ವಿಶ್ವನಾಥ್ ಬಿಜೆಪಿ ವಿರುದ್ಧ ಬುಸುಗೊಡಲು ಆರಂಭಿಸಿದ್ದರು.

    ಎಚ್. ವಿಶ್ವನಾಥ್ ಟೀಕೆಗಳಿಂದ ಮುಜುಗರಕ್ಕೆ ಒಳಗಾಗಿದ್ದ ಬಿಜೆಪಿ ಅವರನ್ನು ಸಮಾಧಾನ ಮಾಡಲೆಂದೇ ಅವರಿಗೆ ಸಾಹಿತ್ಯ ಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯನಾಗಿ ಮಾಡಿತು. ಆಗ ಸ್ವಲ್ಪ ಕಾಲ ಮೌನವಾಗಿದ್ದ ವಿಶ್ವನಾಥ್, ನಂತರ ಏಕಾಏಕಿ ಮತ್ತೆ ಬಿಜೆಪಿ ವಿರುದ್ಧ ವಾಗ್ದಾಳಿ ಆರಂಭಿಸಿದರು. ಅದು ಎಷ್ಟರ ಮಟ್ಟಿಗೆ ಎಂದರೆ ವಿರೋಧ ಪಕ್ಷಗಳಿಗಿಂತಾ ಹೆಚ್ಚಾಗಿ ಬಿಜೆಪಿ ಆಡಳಿತವನ್ನು ಹೆಜ್ಜೆಹೆಜ್ಜೆಗೂ ಟೀಕಿಸಲು ಶುರು ಮಾಡಿದರು. ಎಚ್. ವಿಶ್ವನಾಥ್ ತಮ್ಮ ಪಕ್ಷದ ನಾಯಕ ಎಂಬುದನ್ನೇ ಬಿಜೆಪಿ ಮರೆತು ಬಿಟ್ಟಿದಿಯಾ ಎಂಬುಷ್ಟರ ಮಟ್ಟಿಗೆ ಪಕ್ಷದಲ್ಲಿ ಅವರನ್ನು ಬಿಜೆಪಿ ನಿರ್ಲಕ್ಷಿಸಿತು. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಜೆಪಿಗೆ ಭರ್ಜರಿ ಬಹುಮತ: ಟುಡೇಸ್‌ ಚಾಣಕ್ಯ

    ಈಗ ನೋಡಿದರೆ ಎಚ್. ವಿಶ್ವನಾಥ್ ದಿಢೀರನೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಕೈಗೆ ಒಂದು ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ. ಇದು ಬರೀ ಶುಭ ಹಾರೈಕೆಯ ಭೇಟಿಯಲ್ಲ. ಇದರ ಹಿಂದೆ ಬೇರೆಯದ್ದೇ ರಾಜಕೀಯ ಲೆಕ್ಕ ಇರೋದು ಸ್ಪಷ್ಟ. ಏಕೆಂದರೆ ಎಚ್. ವಿಶ್ವನಾಥ್ ಇಡುವ ಪ್ರತಿ ಹೆಜ್ಜೆ, ಹಾಗೂ ಹೇಳುವ ಪ್ರತಿ ಮಾತಿನ ಹಿಂದೆ ರಾಜಕೀಯ ಗುಣಕಾರ ಇದ್ದೆ ಇರುತ್ತೆ. ಈ ದೃಷ್ಟಿಯಿಂದ ಭೇಟಿ ಮಹತ್ವ ಪಡೆದುಕೊಂಡಿದೆ.

    ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿರೋ ಎಚ್. ವಿಶ್ವನಾಥ್‍ಗೆ ತಮ್ಮ ಹಳೆಯ ಹಿರಿಯ ಸ್ನೇಹಿತರಾದ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರೋ ಕಾರಣ ತಮಗೆ ತಮ್ಮ ಮೂಲ ಪಕ್ಷವೇ ಬೆಸ್ಟ್ ಎನ್ನಿಸಿದ್ದರೆ ಅದರಲ್ಲಿ ಅಚ್ಚರಿ ಇಲ್ಲ. ಜೊತೆಗೆ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ಆದರೆ ಅದು ಬಿಜೆಪಿ ಪಾಲಿಗೆ ಶಾಕ್ ಕೂಡ ಅಲ್ಲ. ಇದನ್ನೂ ಓದಿ: Himachal Pradesh Exit Poll Result: ಬಿಜೆಪಿ ಕಾಂಗ್ರೆಸ್‌ ಮಧ್ಯೆ ನೆಕ್‌ ಟು ನೆಕ್‌ ಫೈಟ್‌

    Live Tv
    [brid partner=56869869 player=32851 video=960834 autoplay=true]

  • ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ, ಶಕ್ತಿ ಪ್ರದರ್ಶನ ಸರಿಯಲ್ಲ: ವಿಶ್ವನಾಥ್

    ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ, ಶಕ್ತಿ ಪ್ರದರ್ಶನ ಸರಿಯಲ್ಲ: ವಿಶ್ವನಾಥ್

    ಮೈಸೂರು: ಮೊರಾರ್ಜಿ ಅವರಿಗೆ ನಾಗಪುರದಲ್ಲಿ ಚಪ್ಪಲಿ ಎಸೆದಿದ್ದರು. ಇಂದಿರಾಗಾಂಧಿ ಅವರಿಗೆ ಕಲ್ಲೇಟು ಬಿದ್ದಿತ್ತು. ಜಯಲಲಿತಾ ಸಿಎಂ ಆಗಿ ಇಳಿದಾಗ ಸದನದಲ್ಲಿ ಅವಮಾನ ಮಾಡಲಾಗಿತ್ತು. ಸಿದ್ದರಾಮಯ್ಯ ಇದನ್ನು ಮನಸಿಗೆ ಹಚ್ಚಿಕೊಂಡು ಪ್ರತಿ ತೀರಿಸಿಕೊಳ್ಳುವುದು ಸರಿಯಲ್ಲ ಎಂದು ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.

    ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ಜೀವನದಲ್ಲಿ ಇದೆಲ್ಲಾ ಸಹಜ. ಆದರೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಎಲ್ಲರೂ ಖಂಡಿಸಿದ್ದಾರೆ. ಇದನ್ನು ಹಾದಿರಂಪ ಬೀದಿರಂಪ ಮಾಡಬೇಡಿ. ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ. ಇಷ್ಟಾದ ಮೇಲೂ ಮಡಿಕೇರಿ ಶಕ್ತಿ ಪ್ರದರ್ಶನ ಸರಿಯಲ್ಲ. ನಾಳೆ ಅನಾಹುತ ಸಂಭವಿಸಬಹುದು ಎಂದಿದ್ದಾರೆ. ಇದನ್ನೂ ಓದಿ: ನಾಟಿ ಕೋಳಿ ಊಟ ಮಾಡಿ ಅಂಬಾರಿಗೆ ಪುಷ್ಪಾರ್ಚನೆ: ಸಿದ್ದು ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    ಮೊರಾರ್ಜಿ ಅವರಿಗೆ ನಾಗಪುರದಲ್ಲಿ ಚಪ್ಪಲಿ ಎಸೆದಿದ್ದರು. ಇಂದಿರಾಗಾಂಧಿ ಅವರಿಗೆ ಕಲ್ಲೇಟು ಬಿದ್ದಿತ್ತು. ಹಾಸನ ಸಮಾವೇಶದಲ್ಲಿ ಹಾವು ಬಿಡಲಾಗಿತ್ತು. ಜಯಲಲಿತಾ ಸಿಎಂ ಆಗಿ ಇಳಿದಾಗ ಸದನದಲ್ಲಿ ಅವಮಾನ ಮಾಡಲಾಗಿತ್ತು. ಸಿದ್ದರಾಮಯ್ಯ ಇದನ್ನು ಮನಸಿಗೆ ಹಚ್ಚಿಕೊಂಡು ಪ್ರತಿ ತೀರಿಸಿಕೊಳ್ಳುವುದು ಸರಿಯಲ್ಲ. ರಾಜೀವ್ ಗಾಂಧಿ, ಇಂದಿರಾಗಾಂಧಿಯನ್ನು ಕೊಂದರು. ಸಾರ್ವಜನಿಕ ಜೀವನದಲ್ಲಿ ಇದು ಸಹಜ. ಆದರೆ ಇದು ಖಂಡನೀಯ ಯಾರು ಒಪ್ಪಲ್ಲ. ಸಿದ್ದರಾಮಯ್ಯ ಅವರಿಗೆ ದಯಾ ಮಾಡಿ ವಿನಂತಿ ಮಾಡುತ್ತೇನೆ. ಚುನಾವಣಾ ವರ್ಷವಿದೆ ಏನೇನೋ ಅನಾಹುತವಾಗಬಹುದು. ಇದನ್ನು ಸದನದಲ್ಲಿ ಖಂಡಿಸಿ. ಬಿ.ಎಸ್. ಯಡಿಯೂರಪ್ಪ, ಎಸ್.ಎಂ. ಕೃಷ್ಣ ಮಧ್ಯಸ್ಥಿಕೆ ವಹಿಸಿ ಸಿದ್ದರಾಮಯ್ಯ ಜೊತೆ ಮಾತನಾಡಲಿ. ಇಲ್ಲಿ ಯಾರು ಯಾರಿಗೂ ದೊಡ್ಡವರಲ್ಲ. ಸಿದ್ದರಾಮಯ್ಯ ಹಿರಿಯರ ಮಾತನ್ನು ಕೇಳಬೇಕು. ನಾವು ಯಾರು ದೊಡ್ಡವರಲ್ಲ. ಸಿದ್ದರಾಮಯ್ಯ ಸಹಾ ಒಪ್ಪಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸ: ಯತೀಂದ್ರ ಸಿದ್ದರಾಮ್ಯಯ ಕಿಡಿ

    ಕೊಡಗಿನ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಕೊಡಗಿನವರಿಗೆ ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ. ಕಾಂಗ್ರೆಸ್‍ನವರು ಅದನ್ನು ಮಾಡಿಲ್ಲ. ಕೊಡಗಿನಲ್ಲಿ ಹಲವು ಸಮಸ್ಯೆಗಳಿವೆ. ಈ ನಡುವೆ ಯಾರು ಶಾಂತಿಯನ್ನು ಕದಡಬಾರದು. ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಪ್ರತ್ಯೇಕ ಪಾರ್ಲಿಮೆಂಟ್ ವ್ಯವಸ್ಥೆ ಮಾಡಬೇಕು. ಮೊಟ್ಟೆ, ಕೋಳಿ ಮಾಂಸ ದೇವರು ಆಮೇಲೆ ಮಾತನಾಡೋಣ. ಸಿದ್ದರಾಮಯ್ಯ ಮೊಟ್ಟೆ ಬಿಟ್ಟು ಈ ಬಗ್ಗೆ ಚರ್ಚೆ ಮಾಡಲಿ. ಎರಡು ಪಕ್ಷದ ನಾಯಕರು ಜೆಡಿಎಸ್‍ನವರು ಕುಳಿತು ಸಮಸ್ಯೆ ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದು ಪರ ನಿಂತ ಎಚ್. ವಿಶ್ವನಾಥ್ ಪುತ್ರ

    ಸಿದ್ದು ಪರ ನಿಂತ ಎಚ್. ವಿಶ್ವನಾಥ್ ಪುತ್ರ

    ಮೈಸೂರು: ಸಿದ್ದರಾಮೋತ್ಸವಕ್ಕೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಪುತ್ರ ಕೈ ಜೋಡಿಸಿದ್ದಾರೆ. ಸಿದ್ದರಾಮಯ್ಯ ಪರ ಮತ್ತು ವಿರುದ್ಧವಾಗಿ ಅಪ್ಪ -ಮಗ ನಿಂತಂತಾಗಿದೆ.

    ಸಿದ್ದರಾಮಯ್ಯ ವಿರುದ್ಧ ಹೆಚ್ ವಿಶ್ವನಾಥ್ ಸದಾ ಟೀಕೆ ಮಾಡುತ್ತಾರೆ. ಆದರೆ, ಇತ್ತ ಸಿದ್ದರಾಮಯ್ಯ ಪರ ಅವರ ಪುತ್ರ ಅಮಿತ್ ದೇವರಹಟ್ಟಿ ನಿಂತಿದ್ದು, ಭಾನುವಾರ ಮೈಸೂರಿನಲ್ಲಿ ನಡೆದ ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು.  ಇದನ್ನೂ ಓದಿ: ಗೂಗಲ್ ಕೋ-ಫೌಂಡರ್ ಪತ್ನಿ ಜೊತೆಗಿನ ಸಂಬಂಧದ ಬಗ್ಗೆ ಕೊನೆಗೂ ಮೌನ ಮುರಿದ ಮಸ್ಕ್

    H VISHWANATH

    ಕುರುಬ ಸಮುದಾಯದ ಪ್ರಮುಖ ಮುಖಂಡ ಪೂರ್ವಭಾವಿ ಸಭೆಯಲ್ಲಿ ವಿಶ್ವನಾಥ್ ಪುತ್ರ ಅಮಿತ್ ಭಾಗಿಯಾಗಿ ಸಿದ್ದರಾಮೋತ್ಸವಕ್ಕೆ ಜನರನ್ನು ಸೇರಿಸುವ ಹೊಣೆ ಹೊತ್ತರು. ನಾನು ಜಿಲ್ಲಾ ಪಂಚಾಯತ್‍ನಲ್ಲಿ ಗೆಲ್ಲಲು ಸಿದ್ದರಾಮಯ್ಯ ಕಾರಣ. ನನ್ನ ಪರ ಪ್ರಚಾರಕ್ಕೆ ಬಂದು ನನ್ನನ್ನು ಸಿದ್ದರಾಮಯ್ಯ ಗೆಲ್ಲಿಸಿದರು. ಇದನ್ನೂ ಓದಿ: ಬಸ್‍ಗಳ ನಡುವೆ ಭೀಕರ ಅಪಘಾತ – 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ. ನಾವು(ಕುರುಬ ಸಮಾಜದವರು) ಮತ್ತಷ್ಟು ಹೊಳಪು ನೀಡುವ ಕೆಲಸ ಮಾಡಬೇಕು. ಶಾಸಕ ಹೆಚ್.ಪಿ. ಮಂಜುನಾಥ್, ಮುಖಂಡ ರವಿಶಂಕರ್ ಜೊತೆಗೂಡಿ ಹೆಚ್ಚಿನ ಜನರನ್ನು ಸೇರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್‍ನ ಮತ ಬ್ಯಾಂಕ್, ಬಿಜೆಪಿ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಹಾಳು: ಹೆಚ್.ವಿಶ್ವನಾಥ್ ಕಿಡಿ

    ಕಾಂಗ್ರೆಸ್‍ನ ಮತ ಬ್ಯಾಂಕ್, ಬಿಜೆಪಿ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಹಾಳು: ಹೆಚ್.ವಿಶ್ವನಾಥ್ ಕಿಡಿ

    ಮೈಸೂರು: ಒಂದು ಕಡೆ ಕಾಂಗ್ರೆಸ್ ಮತ ಬ್ಯಾಂಕ್ ಲೆಕ್ಕ, ಇನ್ನೊಂದು ಕಡೆ ಬಿಜೆಪಿಯ ಕೆಲವರ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಕೆಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಒಬ್ಬ ವಿದ್ಯಾರ್ಥಿನಿ ಹೇಳುತ್ತಾಳೆ. ವಿದ್ಯಾರ್ಥಿನಿಯನ್ನು ಆ ರೀತಿ ಮಾತಾಡುವಂತೆ ಕಾಂಗ್ರೆಸ್ ಟ್ಯೂನ್ ಮಾಡುತ್ತಿದೆ. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್‍ಗಾಗಿ ಮನಸ್ಸು ಕೆಡಿಸುತ್ತಿದೆ. ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಕಾಂಗ್ರೆಸ್ ಮಕ್ಕಳಿಗೆ ಹೇಳಿ ಕೊಡುತ್ತಿದೆ. ಇದು ದುರಂತವಾಗಿದೆ. ಒಟ್ಟಿನಲ್ಲಿ ಹಿಜಾಬ್ ವಿಚಾರದಿಂದ ಇಡೀ ವ್ಯವಸ್ಥೆ ಹಾಳಾಗುತ್ತಿದೆ. ಇದು ತಿಳಿಯಾಗಬೇಕು. ಕೋರ್ಟ್ ಆದೇಶ ಪಾಲನೆ ಆಗಬೇಕು ಎಂದು ಒತ್ತಾಯಿಸಿದರು.

    ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ನೀಡಿರುವ ಹೇಳಿಕೆ ಬಗ್ಗೆ ಸ್ಪಷ್ಟತೆ ಇಲ್ಲ. ಅವರು ಯಾವ ಅರ್ಥದಲ್ಲಿ ಏನು ಹೇಳಿದ್ದಾರೆ ಎಂಬುದನ್ನು ಮೊದಲು ತೋರಿಸಲಿ. ಆಮೇಲೆ ಉಳಿದಿದ್ದು ಚರ್ಚೆ ಆಗಲಿ ಎಂದು ಹೇಳಿದರು. ಇದನ್ನೂ ಓದಿ: ಯುಪಿಯಲ್ಲಿ ಎಸ್‍ಪಿ ಅಧಿಕಾರಕ್ಕೆ ಬಂದ್ರೆ ದೇಶಾದ್ಯಂತ ಭಯೋತ್ಪಾದನೆ ಹರಡಿಸುತ್ತೆ: ಅಮಿತ್ ಶಾ

    ಒಂದು ಹೇಳಿಕೆ ಹಿಡಿದುಕೊಂಡು ಕಾಂಗ್ರೆಸ್ ಸದನದ ಸಮಯ ಹಾಳು ಮಾಡಿದ್ದು ತಪ್ಪು. ಸಿದ್ದರಾಮಯ್ಯನಂತಹ ಹಿರಿಯರು ಇಂತಹ ನಡುವಳಿಕೆ ಪ್ರದರ್ಶಿಸಬಾರದಿತ್ತು. ಸದನದ ಒಳಗಡೆ ತಪ್ಪುಗಳು ಆಗುತ್ತಿರುತ್ತವೆ. ಅದಕ್ಕೆ ಕ್ಷಮೆ ಕೇಳಿ ಮುಂದುವರೆದಿದ್ದು ಅನೇಕ ಉದಾಹರಣೆಗಳಿವೆ. ಈಗಲೂ ಅಂತಹ ನಡವಳಿಕೆಗಳು ಪ್ರದರ್ಶನವಾಗಬೇಕು. ಮುಖ್ಯಮಂತ್ರಿ, ಎರಡೂ ಸದನಗಳ ನಾಯಕರು, ಸ್ಪೀಕರ್‌ಗಳು ಮೊದಲು ಸಭೆ ಮಾಡಲಿ. ಈ ಮೂಲಕ ಜನರ ಸಮಸ್ಯೆಗಳ ಚರ್ಚೆಗೆ ಸದನದಲ್ಲಿ ಅವಕಾಶ ನೀಡಬೇಕು. ಇದನ್ನೂ ಓದಿ: ಹಿಜಬ್ ವಿವಾದ- ಮಡಿಕೇರಿ ಪ್ರಿನ್ಸಿಪಾಲರಿಗೆ ಜೀವ ಬೆದರಿಕೆ

  • ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ: ಎಚ್ ವಿಶ್ವನಾಥ್

    ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ: ಎಚ್ ವಿಶ್ವನಾಥ್

    ಮೈಸೂರು: ಕೋವಿಡ್ ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಗ್ರಹಿಸಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ 1 ರಿಂದ 9 ತರಗತಿಯ ವರೆಗೆ ಸಂಪೂರ್ಣ ರಜೆ ಮಾಡಿ. ಎಸ್‍ಎಸ್‍ಎಲ್‍ಸಿ ಮತ್ತು 2ನೇ ಪಿಯುಸಿ ಮಕ್ಕಳಿಗೆ ಮಾತ್ರ ಭೌತಿಕವಾಗಿ ಕ್ಲಾಸ್ ಮಾಡಿ. ಇಡೀ ರಾಜ್ಯಕ್ಕೆ ಲಾಕ್‍ಡೌನ್ ಬೇಡ. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾತ್ರ ಕಠಿಣ ಕ್ರಮ ಕೈಗೊಳ್ಳಬೇಕು. ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ ವೀಕೆಂಡ್ ಕರ್ಫ್ಯೂ  ನಿಂದ ಯಾವ ಪ್ರಯೋಜನಾವಾಗುತ್ತಿಲ್ಲ ಆದೇಶ ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5T ಸೂತ್ರ: ಪ್ರಧಾನಿ ಮೆಚ್ಚುಗೆ

    night curfew

    ನಾವು ಅಂತರ ಜಿಲ್ಲಾ ಓಡಾಟಕ್ಕೆ ಕಡಿವಾಣ ಹಾಕಿಲ್ಲ. ವೀಕೆಂಡ್ ಕರ್ಫ್ಯೂನಿಂದ ಉದ್ದೇಶ ಸಾಧನೆ ಆಗುತ್ತಿಲ್ಲ. ಜನ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಕರ್ಫ್ಯೂ  ಬಿಟ್ಟು ಜನರ ನಿಯಂತ್ರಣಕ್ಕೆ ಕಠಿಣ ಕ್ರಮ ಜರುಗಿಸಿ ಎಂದರು. ಇದನ್ನೂ ಓದಿ: ಕೊರೊನಾ ಸೋಂಕು ಏರಿಕೆ ಮಧ್ಯೆ ಸಿಹಿ ಸುದ್ದಿ – ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ

    ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ಪಾದಯಾತ್ರೆ ಸಮರ ಅಲ್ಲ ಕಾನೂನು ಸಮರ ಆಗಬೇಕು. ಕೋಟ್ಯಂತರ ರೂ. ಖರ್ಚು ಮಾಡಿ ಪಾದಯಾತ್ರೆ ಮಾಡಿದ್ದಾರೆ. ಇಂತಹ ಪಾದಯಾತ್ರೆ ಯಿಂದ ಏನೂ ಉಪಯೋಗವಿಲ್ಲ. ಬಳ್ಳಾರಿ ಜನಾರ್ದನ ರೆಡ್ಡಿಯವರಿಗೆ ಜೈಲು ಶಿಕ್ಷೆ ಆಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡೆಸಿದ ಪಾದಯಾತ್ರೆಯಿಂದಲ್ಲ. ಕಾನೂನು ಮೂಲಕ ರೆಡ್ಡಿಯವರಿಗೆ ಶಿಕ್ಷೆಯಾಗಿದೆ. ಹೀಗಾಗಿ ಮೇಕೆದಾಟು ವಿಚಾರ ಕೂಡ ಕಾನೂನಿನ ಮೂಲಕವೇ ಬಗೆಹರಿಯಬೇಕು ಎಂದರು.

  • ವೀರಶೈವ ಲಿಂಗಾಯತ ಧರ್ಮ ಹುಟ್ಟಿದ್ದೇ ಮತಾಂತರದಿಂದ:  ಮಸೂದೆ ವಿರುದ್ಧ ಎಚ್.ವಿಶ್ವನಾಥ್ ಕಿಡಿ

    ವೀರಶೈವ ಲಿಂಗಾಯತ ಧರ್ಮ ಹುಟ್ಟಿದ್ದೇ ಮತಾಂತರದಿಂದ: ಮಸೂದೆ ವಿರುದ್ಧ ಎಚ್.ವಿಶ್ವನಾಥ್ ಕಿಡಿ

    -ಮತಾಂತರ ನಿಷೇಧ ಮಸೂದೆಗೆ ವಿರೋಧ
    -ಬಸವಣ್ಣರ ಮಾನವ ಧರ್ಮ ಒಡೆಯುತ್ತಿದ್ದಾರೆ ಸಿಎಂ

    ಮೈಸೂರು: ವೀರಶೈವ ಲಿಂಗಾಯತ ಧರ್ಮ ರೂಪುಗೊಂಡಿದ್ದೇ ಮತಾಂತರದಿಂದ. ನೀವು ಬಸವಣ್ಣ ಅವರನ್ನು ಬಂಧಿಸುತ್ತೀರಾ ಎನ್ನುವ ಮೂಲಕ ರಾಜ್ಯ ಸರ್ಕಾರದ ಮತಾಂತರ ನಿಷೇಧ ಮಸೂದೆಯನ್ನು ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ವಿರೋಧಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದರು. ಬಸವೇಶ್ವರರು ಕಟ್ಟಿದ ಮಾನವ ಧರ್ಮವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದಲೇ ಒಡೆಸಲಾಗುತ್ತಿದೆ. ಇದು ನಿಜಕ್ಕೂ ವಿಪರ್ಯಾಸದ ಸಂಗತಿ. ಭಾರತ ಬಹುತ್ವದ ದೇಶ. ಸಂವಿಧಾನದಲ್ಲೇ ಧಾರ್ಮಿಕ ಸ್ವಾತಂತ್ರ್ಯ ಕೊಡಲಾಗಿದೆ. ಬಸವಣ್ಣನ ಕಾಲದಲ್ಲೇ ಮತಾಂತರ ನಡೆಯಿತು. ಬಸವಣ್ಣ 12ನೇ ಶತಮಾನದಲ್ಲೇ ಶೋಷಿತರು, ಅಸ್ಪೃಶ್ಯರಿಗೆ ಲಿಂಗ ದೀಕ್ಷೆ ಮಾಡಿ ಲಿಂಗಾಯತ ಮಾನವ ಧರ್ಮ ಕಟ್ಟಿದರು. ಮಾನವ ಧರ್ಮಕ್ಕೆ ಬಸವಣ್ಣ ಅವರು ಎಲ್ಲರನ್ನೂ ಸೇರಿಸಿಕೊಂಡರು ಎಂದರು.

    basavaraj bommai

    ಹಾಗಾದರೆ ಮತಾಂತರ ವಿಧೇಯಕದ ಮೂಲಕ ಗಾಂಧೀಜಿ, ಬಸವಣ್ಣ ಅವರನ್ನು ಬಂಧಿಸಬೇಕು. ಅಡ್ವಾಣಿ, ಬಾಳಾ ಠಾಕ್ರೆ, ಪ್ರವೀಣ್ ತೊಗಾಡಿಯಾ ಕುಟುಂಬದಲ್ಲಿ ಅನ್ಯ ಧರ್ಮದವರನ್ನು ಮದುವೆಯಾಗಿದ್ದಾರೆ. ಇವರನ್ನೆಲ್ಲಾ ಡಿಸಿಗಳ ಮೂಲಕ ಜೈಲಿಗೆ ಹಾಕುತ್ತೀರಾ ಎಂದು ಖಾರವಾಗಿ ಪ್ರಶ್ನಿಸಿದರು.

    ಕಾಂಗ್ರೆಸ್ ಮತಾಂತರ ಕಾಯ್ದೆ ವಿಚಾರದಲ್ಲಿ ಇಬ್ಬಂದಿತನ ಪ್ರದರ್ಶನ ಮಾಡುತ್ತಿದೆ. ಕಲಾಪದ ಬೆಲ್ ಬಾರಿಸಿದ ಮೇಲೂ ಸದನದ ಹೊರಗೆ ಹರಟೆ ಹೊಡೆಯುತ್ತಾ ಕೂತಿದ್ದರು. ಕಾಂಗ್ರೆಸ್‌ನವರು ಮತ ಬ್ಯಾಂಕ್‌ಗಾಗಿ ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯವನ್ನು ಕಾಪಾಡಲು ಸಾಧ್ಯವಿದೆಯಾ ಎಂದು ಪ್ರಶ್ನಿಸಿದ ಅವರು, ಸರ್ಕಾರದಿಂದ ಧಾರ್ಮಿಕ ದಿಗ್ಭಂಧನ ಹಾಕಲಾಗುತ್ತಿದೆ. ದಲಿತರಿಗೆ ಇದು ದೊಡ್ಡ ದಿಗ್ಭಂಧನ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿಚಾರಣೆಗೆ ಕೋರ್ಟ್‌ಗೆ ಬಂದವರ ಮೇಲೆ ತಹಶೀಲ್ದಾರ್‌ ಹಲ್ಲೆ!

    ಮತಾಂತರ ತಡೆ ವಿಧೇಯಕದ ವಿಷಯದಲ್ಲಿ ಬಸವೇಶ್ವರರ ಹೆಸರಿನ ಮಠಗಳು, ಅಹಿಂದ ಮಠಗಳು, ವೀರಶೈವ ಮಠಗಳು, ಚಿತ್ರದುರ್ಗದ ಪ್ರಗತಿಪರ ಮುರುಘ ಮಠದ ಸ್ವಾಮೀಜಿ ಯಾಕೆ ಮಾತಾಡುತ್ತಿಲ್ಲ. ಸರ್ಕಾರದ ಅನುದಾನ ಮಠಗಳ ಬಾಯಿ ಮುಚ್ಚಿಸಿದೆಯಾ ಎಂದು ಪ್ರಶ್ನಿಸಿದರು.

    ಸಾಹಿತಿಗಳು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮಾತ್ರ ಸಿಮೀತರಾಗಿದ್ದಾರೆ. ಕ್ರಿಶ್ಚಿಯನ್ ದೇಶಗಳಲ್ಲಿ ಕನ್ನಡಿಗರು ಬದುಕು ಕಟ್ಟಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ವಾಪಾಸ್ ಕರೆಸಿಕೊಳ್ಳಿ. ಕ್ರಿಶ್ಚಿಯನ್ನರಿಗೆ ಇಲ್ಲಿ ಯಾಕೆ ಕಿರುಕುಳ ನೀಡುತ್ತೀದ್ದಿರಾ? ಈ ವಿಧೇಯಕ ಜಾಗತಿಕವಾಗಿ ಪರಿಣಾಮ ಬೀರುತ್ತದೆ ಎಂದರು. ಇದನ್ನೂ ಓದಿ: ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

    ಶಾಸಕಾಂಗ ಸಮಿತಿ ರಚಿಸಿ ಮತ್ತೆ ಈ ವಿಧೇಯಕದ ಚರ್ಚೆ ಆಗಲಿ. ಈ ನಿಟ್ಟಿನಲ್ಲಿ ದಲಿತರ ಧಾರ್ಮಿಕ ಸ್ವಾತಂತ್ರ್ಯ ಹರಣ ತಡೆಯಬೇಕು. ಈ ವಿಧೇಯಕ ತರುವುದರಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ಅವರು ಈ ವಿಧೇಯಕ ತರಲು ಯಾಕೆ ಇಷ್ಟು ಅವಸರ ಮಾಡುತ್ತಿದ್ದಾರೆ? ಜನರಿಗೆ ಸರ್ಕಾರ ಉತ್ತರ ಕೊಡಲಿ. ವೀರಶೈವ ಲಿಂಗಾಯತ ಧರ್ಮ ಮತಾಂತರದಿಂದಲೇ ರೂಪಗೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: 2023ರ ಚುನಾವಣೆ ಬೊಮ್ಮಾಯಿ ನಾಯಕತ್ವದಲ್ಲೇ ನಡೆಯುತ್ತೆ: ವಿ. ಸೋಮಣ್ಣ

    ಬೆಳಗಾವಿಯಲ್ಲಿ ನಡೆದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮರಾಠಿ ಮತಕ್ಕಾಗಿ ಬೆಳಗಾವಿಯ ಮುಖಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನವಾದರೂ ಮಾತಾಡುತ್ತಿಲ್ಲ. ಸರ್ಕಾರ ಎಂಇಎಸ್ ಬ್ಯಾನ್ ಮಾಡಬೇಕು. ನಮ್ಮ ಅನ್ನ ತಿಂದು, ನೀರು ಕುಡಿದು ನಮ್ಮ ಬಾವುಟ ಸುಟ್ಟರೆ ಅಂಥವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಎಂಇಎಸ್ ಅನ್ನು ಮೊದಲು ಬ್ಯಾನ್ ಮಾಡಿ ಎಂದು ಒತ್ತಾಯಿಸಿದರು.

  • ಕುರುಬ ಸಮಾಜ ಹರಾಜು ಹಾಕೋ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ: ಎಚ್.ವಿಶ್ವನಾಥ್ ಕಿಡಿ

    ಕುರುಬ ಸಮಾಜ ಹರಾಜು ಹಾಕೋ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ: ಎಚ್.ವಿಶ್ವನಾಥ್ ಕಿಡಿ

    ಮೈಸೂರು: ಕುರುಬ ಸಮಾಜವನ್ನು ಹರಾಜು ಹಾಕುವ ಕೆಲಸವನ್ನು ಸಿದ್ದರಾಮಯ್ಯ ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ತರಾಟೆಗೆ ತೆಗೆದುಕೊಂಡರು.

    ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳಿ ಬಗ್ಗೆ ಉಪ ಚುನಾವಣೆಯಲ್ಲಿ ಅನವಶ್ಯಕವಾಗಿ ಚರ್ಚೆ ಆಗುತ್ತಿದೆ. ಕಂಬಳಿ ಒಂದೇ ಜಾತಿಯ ಗುತ್ತಿಗೆ ಅಲ್ಲ. ಸಿಎಂಗೆ ಕುರುಬ ಸಮುದಾಯದವರು ಕಂಬಳಿ ಹೊದ್ದಿಸಿ ಹರಸಿದ್ದಾರೆ. ಇದನ್ನೆ ದೊಡ್ಡ ಅಪರಾಧ ಅನ್ನೋ ರೀತಿ ಸಿದ್ದರಾಮಯ್ಯ ಬಿಂಬಿಸುತ್ತಿದ್ದಾರೆ. ‘ಕಂಬಳಿ ಹೊದ್ದುಕೊಳ್ಳಲು ಅವನೇನೂ ಕುರುಬನೇನ್ರಿ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದು ತಪ್ಪು. ಸಿಎಂ ಕಂಬಳಿ ಹೊದ್ದು ಕೊಂಡಿದ್ದನ್ನು ಪ್ರಶ್ನಿಸೋದು ಸಣ್ಣತನ. ಕಂಬಳಿಯ ಗೌರವ ಕಾಪಾಡುತ್ತೇನೆ ಎಂದು ಸಿಎಂ ಸೌಜನ್ಯದಿಂದ ಹೇಳಿದ್ದಾರೆ. ಇದನ್ನು ಸಿದ್ದರಾಮಯ್ಯ ಅನವಶ್ಯಕವಾಗಿ ಹಾದಿ ರಂಪ ಬೀದಿ ರಂಪ ಮಾಡುತ್ತಿದ್ದಾರೆ. ಏಕವಚನದಲ್ಲಿ ಸಿಎಂ ಹಾಗೂ ಪ್ರಧಾನ ಮಂತ್ರಿಯನ್ನು ಸಂಬೋಧಿಸೋದು ಸರಿಯಲ್ಲ. ಸಿದ್ದರಾಮಯ್ಯ, ರಾಹುಲ್ ಗಾಂಧಿಯನ್ನು ಏನ್ಲಾ ರಾಹುಲ್ ಗಾಂಧಿ ಅನ್ನಲಿ ನೋಡೋಣಾ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಎರಡೂ ಉಪಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ: ಜಮೀರ್

    H. Vishwanath

    ಸಿದ್ದರಾಮಯ್ಯ ಸಂಕುಚಿತ ಮನೋಭಾವ ತೋರಿ ಕುರುಬರನ್ನು ಏಕಾಂಗಿ ಮಾಡಿ ಬಿಡುತ್ತೀರಾ ನೀವು? ಯಾವ ಜಾತಿಯೂ ಏಕಾಂಗಿಯಾಗುವುದು ಒಳ್ಳೆಯದಲ್ಲ. ಸಿದ್ದರಾಮಯ್ಯಗೆ ಕೃತಜ್ಞತೆಯೇ ಇಲ್ಲ. ಕೃತಜ್ಞತೆಯೆ ಇಲ್ಲದ ರಾಜಕಾರಣಿ ಅಂದರೆ ಅದು ಸಿದ್ದರಾಮಯ್ಯ. ಸಿದ್ದರಾಮಯ್ಯ ಒಂಥರ ಇಂಗ್ಲೀಷ್‍ನವರು ಇದ್ದಾಂಗೆ. ಜನರನ್ನು ಬಳಸಿಕೊಂಡು ನಂತರ ಅವರನ್ನೆ ಹೊರಗಡೆ ಬಿಸಾಕುತ್ತಾರೆ. ನಿಮ್ಮ ಮನೋಭಾವದ ಪರಿಣಾಮ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿರಿ ಎಂದು ವಾಗ್ದಾಳಿ ನಡೆಸಿದರು.

    ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ ಕೊಡುಗೆ ಶೂನ್ಯ. ನಮ್ಮನ್ನೆ ಬಲಿ ಹಾಕಲಿಲ್ವಾ ನೀನು? ಸಮುದಾಯದ ನಾಯಕರನ್ನು ತುಳಿದು ಹಾಕಿದ್ದೀರಿ. ಅಹಿಂದ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ನೀನು ಏನ್ ಈ ಸಮಾಜದ ಉದ್ಧಾರಕ್ಕೆ ಮಾಡಿದ್ದೀಯಾ ಹೇಳು ಸಿದ್ದರಾಮಯ್ಯ? ಸಿಎಂ ಕುರುಬ ಸಮುದಾಯಕ್ಕೆ ಏನೂ ಮಾಡಿದ್ದಾರೆ ಎಂದು ಆಮೇಲೆ ಕೇಳಿ. ಮೊದಲು ನಿಮ್ಮ ಕೊಡುಗೆ ಏನೂ ಹೇಳಿ. ಸಿದ್ದರಾಮಯ್ಯ ನಡವಳಿಕೆಗಳು ಕುರುಬ ಸಮುದಾಯವನ್ನು ಏಕಾಂಗಿ ಮಾಡಬಾರದು ಎಂದು ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ಧ ಗರಂ ಆದರು.

    basavaraj bommai

    ನಮ್ಮ ಕುರುಬ ಹುಡುಗರಿಗೆ ಸಿದ್ದರಾಮಯ್ಯ ನೋಡಿದರೆ ಇಂಗ್ಲಿಷ್ ಸಿನಿಮಾ ಹೀರೋ ನೋಡಿದಂತೆ ಆಗುತ್ತೆ. ಹಿಂದೆ ನೋಡಲ್ಲ, ಮುಂದೆ ನೋಡಲ್ಲ ಶಿಳ್ಳೆ ಹೊಡೆಯುತ್ತಾರೆ ಅಷ್ಟೆ. ಸಿದ್ದರಾಮಯ್ಯ ನಮಗೇನು ಮಾಡಿದರು ಅನ್ನೋದನ್ನು ಹುಡುಗರು ಯೋಚಿಸೋದೆ ಇಲ್ಲ. ಸಿದ್ದರಾಮಯ್ಯ ನೋಡಿದರೆ ಸಾಕು ಸುಮ್ಮೆ ಶಿಳ್ಳೆ ಹೊಡೆಯುತ್ತಾರೆ ಎಂದು ಯುವಸಮುದಾಯಕ್ಕೆ ಚಾಟಿ ಬೀಸಿದರು.

    ಉಪ ಚುನಾವಣೆಗಳನ್ನೆ ಮಾಡಬೇಡಿ. ಚುನಾವಣೆಯಲ್ಲಿ ಗೆದ್ದವರು ಸತ್ತರೆ ಅವರ ಮುಂದೆ ಸೋತವರಿಗೆ ಗೆಲುವು ಘೋಷಿಸಿ. ಉಪ ಚುನಾವಣೆಯ ಗೊಡವೆಗಳೆ ಬೇಡ ಎಂದು ಆಶಯ ವ್ಯಕ್ತಪಡಿಸಿದರು.

    SIDDARAMAIAH

    ಕುರುಬ ಸಮುದಾಯದವರ ಸಮಾವೇಶವೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂಬಳಿ ಹೊದ್ದುಕೊಂಡು ಭರವಸೆಯ ನುಡಿಗಳನ್ನಾಡಿದ್ದರು. ‘ಕಂಬಳ ಹೊದ್ದುಕೊಳ್ಳಲು ಅವನೇನು ಕುರುಬನೇನ್ರಿ’ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದರು.

  • ರವಿಗೆ ನೆಹರು ಬಗ್ಗೆ ಏನು ಗೊತ್ತು, ಪ್ರಿಯಾಂಕ್ ಖರ್ಗೆಗೆ ವಾಜಪೇಯಿ ಆಡಳಿತ ಗೊತ್ತಾ : ವಿಶ್ವನಾಥ್ ಕಿಡಿ

    ರವಿಗೆ ನೆಹರು ಬಗ್ಗೆ ಏನು ಗೊತ್ತು, ಪ್ರಿಯಾಂಕ್ ಖರ್ಗೆಗೆ ವಾಜಪೇಯಿ ಆಡಳಿತ ಗೊತ್ತಾ : ವಿಶ್ವನಾಥ್ ಕಿಡಿ

    ಮೈಸೂರು: ಮಾಜಿ ಪ್ರಧಾನಿಗಳಾದ ನೆಹರು ಮತ್ತು ವಾಜಪೇಯಿ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ಕೊಟ್ಟ ಬಿಜೆಪಿ, ಕಾಂಗ್ರೆಸ್ ಮುಖಂಡರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹರಿಹಾಯ್ದಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನೆಹರು ಅಧಿಕಾರದ ಅವಧಿಗಿಂತ ಹೆಚ್ಚಿನ ಅವಧಿ ಜೈಲಿನಲ್ಲಿ ಕಳೆದರು. ಅವರ ಇಡೀ ಕುಟುಂಬವೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿತ್ತು. ಅವರ ಬಗ್ಗೆ ಸಿ.ಟಿ. ರವಿ ಅವರು ಅವಹೇಳನಕಾರಿ ಮಾತು ಯಾರು ಮೆಚ್ಚುವಂಥದಲ್ಲ. ಸಿ.ಟಿ. ರವಿಗೂ ಮತ್ತು ಬಿಜೆಪಿಗೂ ಈ ಮಾತು ಶೋಭೆ ತರುವುದಿಲ್ಲ ಎಂದಿದ್ದಾರೆ.

    ಸಿ.ಟಿ.ರವಿ ಅವರು ನೆಹರು ಬಗ್ಗೆ ಓದಿಕೊಳ್ಳಬೇಕು. ವಾಜಪೇಯಿ ಅವರು ನೆಹರು ನಿಧಾನರಾದಾಗ ಏನೂ ಭಾಷಣ ಮಾಡಿದ್ದರು ಎಂಬುದನ್ನು ಸಿ.ಟಿ. ರವಿ ಓದಿಕೊಳ್ಳಬೇಕು. ನೆಹರು ಅವರ ಬಗ್ಗೆ ವಾಜಪೇಯಿ ಅವರು ಚರಿತ್ರಾರ್ಹ ಭಾಷಣ ಮಾಡಿದ್ದಾರೆ. ನೆಹರು ಅವರ ಬಗ್ಗೆ ಇಷ್ಟು ಲಘುವಾಗಿ ಮಾತಾಡಬಾರದು. ನಿಮಗೆ ನೆಹರು ಬಗ್ಗೆ ಏನೂ ಗೊತ್ತಿದೆ? ಏನೂ ತಿಳಿದು ಕೊಂಡಿದ್ದೀರಿ? ಭಾರತದ ಆಸ್ಮಿತೆ ನೆಹರು. ಭಾರತದ ಗರ್ವದ ಸಂಕೇತ ನೆಹರು. ಇಂತಹ ನೆಹರು ಬಗ್ಗೆ ನೀವು ಕೀಳಾಗಿ ಮಾತಾಡುವುದು ತಪ್ಪು. ಪ್ರಚಾರಕ್ಕಾಗಿ, ಯಾರನ್ನೋ ಓಲೈಸಲು ನೀವು ರೀತಿ ಮಾತಾಡಬೇಡಿ ಎಂದು ತಿಳಿ ಹೇಳಿದ್ದಾರೆ.

    ವಾಜಪೇಯಿ ಅವರನ್ನು ಕಾಂಗ್ರೆಸ್ ನಾಯಕರು ಕುಡುಕ ಎಂದಿದ್ದಾರೆ. ಇದು ಖಂಡನೀಯ. ನೆಹರು, ವಾಜಪೇಯಿ ಇಬ್ಬರು ಈ ದೇಶದ ಶ್ರೇಷ್ಠ ಆಡಳಿಗಾರರು. ಪ್ರಿಯಾಂಕ್ ಖರ್ಗೆ ತಮ್ಮ ತಂದೆ ನೋಡಿ ಮಾತಾಡುವುದು ಕಲಿಯಲಿ ಎಂದಿದ್ದಾರೆ. ಕರ್ನಾಟಕದಲ್ಲಿ ಐದು ಜನ ಮಾಜಿ ಸಿಎಂಗಳಿದ್ದಾರೆ. ನೀವು ಯಾಕೆ ಇದನ್ನು ಖಂಡಿಸುತ್ತಿಲ್ಲ? ನಿಮ್ಮ ಪಕ್ಷದ ನಾಯಕರಿಗೆ ಬಾಯಿ ಮುಚ್ಚಿಕೊಂಡಿರಿ ಎಂದು ಹೇಳುವಷ್ಟು ನೈತಿಕತೆ ಕಳೆದು ಕೊಂಡಿದ್ದೀರಾ. ರಾಜಕಾರಣವನ್ನು ಎಲ್ಲಿಗೆ ತಂದು ನಿಲ್ಲಿಸುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:ಸಂವಿಧಾನದತ್ತ ಸಂಸದ ಸ್ಥಾನಕ್ಕೆ ಬೆಲೆ ಕೊಡದ ಶ್ರೀನಿವಾಸ್‍ರದ್ದು ವಿಕೃತ ಮನಸ್ಥಿತಿ: ಬಿಜೆಪಿ ಟೀಕೆ

    ನೆಹರು ಅವರ ತಂದೆ ತಮ್ಮ ಇಡೀ ಆಸ್ತಿಯನ್ನು ದೇಶಕ್ಕೆ ಬರೆದು ಕೊಟ್ಟರು. ಸಿ.ಟಿ. ರವಿ ಏನೂ ಕೊಟ್ಟಿದ್ದಾರೆ. ಐದು ಪೈಸೆಯನ್ನು ದೇಶಕ್ಕೆ ಕೊಟ್ಟಿದ್ದೀರಾ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

  • ಜಾರಕಿಹೊಳಿ, ಯೋಗೇಶ್ವರ್ ಪರ ಇಲ್ಲ, ಬೊಮ್ಮಾಯಿಗೆ ನನ್ನ ಬೆಂಬಲ: ವಿಶ್ವನಾಥ್

    ಜಾರಕಿಹೊಳಿ, ಯೋಗೇಶ್ವರ್ ಪರ ಇಲ್ಲ, ಬೊಮ್ಮಾಯಿಗೆ ನನ್ನ ಬೆಂಬಲ: ವಿಶ್ವನಾಥ್

    ನವದೆಹಲಿ: ನಾನು ಬಂಡಾಯ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಸಿ.ಪಿ.ಯೋಗೇಶ್ವರ್ ಪರವಾಗಿಲ್ಲ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ಒಳ್ಳೆಯ ಸರ್ಕಾರ ನೀಡಲಿ, 20 ತಿಂಗಳು ಉತ್ತಮ ಆಡಳಿತ ನೀಡುವ ನಿರೀಕ್ಷೆ ಇದೆ. ನಾನು ಬಂಡಾಯಗಾರಾದ ರಮೇಶ್ ಜಾರಕಿಹೋಳಿ, ಸಿ.ಪಿ.ಯೋಗೇಶ್ವರ್ ಜೊತೆಗಿಲ್ಲ. ಬೊಮ್ಮಾಯಿಯವರಿಗೆ ನನ್ನ ಬೆಂಬಲವಿದೆ. ಆನಂದ್ ಸಿಂಗ್ ಅವರು ವಾಪಸ್ ಕಾಂಗ್ರೆಸ್ ಸೇರುತ್ತಾರೆ ಎಂಬುದು ಗಾಳಿ ಮಾತು. ಯಾರೂ ಕಾಂಗ್ರೆಸ್ ಗೆ ವಾಪಸ್ ಆಗುವುದಿಲ್ಲ. ಬಿಜೆಪಿಯಿಂದಲೇ ಚುನಾವಣೆ ಸ್ಪರ್ಧೆ ಮಾಡಲಿದ್ದಾರೆ ಎಂದರು.

    ಮಂತ್ರಿಯಾಗಿರುವ ಸ್ನೇಹಿತರು ಅನಾವಶ್ಯಕ ಗೊಂದಲ ಮೂಡಿಸುವುದು ಸರಿಯಲ್ಲ, ಎಲ್ಲವೂ ಪ್ರಮುಖ ಖಾತೆ, ಅದನ್ನು ನಿಭಾಯಿಸುವುದು ಮುಖ್ಯ. ಸಿಕ್ಕಿರುವ ಖಾತೆಯ ಮೂಲಕ ಅಭಿವೃದ್ಧಿ ಮಾಡುವ ಬಗ್ಗೆ ಅಧ್ಯಯನ ಮಾಡಬೇಕು. ಅನಾವಶ್ಯಕ ಗೊಂದಲಗಳಿಂದ ಯಾರಿಗೂ ಲಾಭ ಇಲ್ಲ. ಆಡಳಿತದ ದೃಷ್ಟಿಯಿಂದ ಖಾತೆಗಳನ್ನು ವಹಿಸಿಕೊಂಡು, ಪ್ರಮಾಣಿಕವಾಗಿ ಕೆಲಸ ಮಾಡಬೇಕು. 20 ತಿಂಗಳಲ್ಲಿ ಚುನಾವಣೆ ಇದೆ, ಸಮಯ ಕಡಿಮೆ ಇದೆ, ವೇಗವಾಗಿ ಕೆಲಸ ಮಾಡಬೇಕಿದೆ. ಖಾತೆ ಗೊಂದಲ ಇಟ್ಟುಕೊಂಡು ಸಮಯ ವ್ಯರ್ಥ ಮಾಡಬಾರದು ಎಂದು ಸಲಹೆ ನೀಡಿದರು.

    ಎಲ್ಲರೂ ಸಂಪುಟ ದರ್ಜೆಯ ಸಚಿವರಿದ್ದಾರೆ. ಕ್ಯಾಬಿನೆಟ್ ನಲ್ಲಿ ಎಲ್ಲರೂ ಇರುತ್ತಾರೆ. ಪ್ರತಿ ಸಂಪುಟ ಸಚಿವರು ಸರ್ಕಾರದ ಭಾಗ, ಸರ್ಕಾರವಾಗಿ ಕೆಲಸ ಮಾಡಬೇಕು. ಇಲಾಖೆಯ ಮಂತ್ರಿಯಾಗಿ ಕೆಲಸ ಮಾಡುವುದಲ್ಲ, ಇಲಾಖೆಯ ಜವಬ್ದಾರಿ ಅರಿತು ಕೆಲಸ ಮಾಡಬೇಕು ಎಂದರು ತಿಳಿಸಿದರು.

    ಮೈತ್ರಿ ಸರ್ಕಾರ ಪತನಕ್ಕೆ ಅಗೌರವ ಕಾರಣ, ಜೆಡಿಎಸ್ ಕಾಂಗ್ರೆಸ್ ನಾಯಕರು ಗೌರವ ನೀಡಲಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಲ್ಲರಿಗೂ ಗೌರವ ನೀಡುತ್ತಿದ್ದಾರೆ. ಸಮಾಧಾನದಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

    ಶರ್ಫಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ ಒನ್ ಫ್ಲಾಗ್- ಒನ್ ನೇಮ್ ಅಡಿ ಇಡೀ ಕುರುಬ ಸಮುದಾಯ ಮುಂದುವರೆಯಲು ತೀರ್ಮಾನ ಮಾಡಲಾಗಿದೆ. ಗುಜರಾತ್ ನ ಅಹಮದಾಬಾದ್ ನಲ್ಲಿ ಸಮಾಜದ ಮುಂದಿನ ಸಮಾವೇಶ ನಡೆಯಲಿದೆ. ಕುರುಬ ಸಮುದಾಯ ಒಂದು ಜಾತಿ ಅಲ್ಲ ಅದೊಂದು ಸಮುದಾಯ, ಇಡೀ ದೇಶದಲ್ಲಿ ಕುರುಬ ಸಮುದಾಯವನ್ನು ಎಸ್‍ಟಿ ಗೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕುರುಬರನ್ನು ಎಸ್‍ಟಿ ಗೆ ಸೇರಿಸುವ ಕುರಿತು ಕುಲಶಾಸ್ತ್ರ ಅಧ್ಯಯನ ವರದಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

  • ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬಾರದು: ವಿಶ್ವನಾಥ್

    ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬಾರದು: ವಿಶ್ವನಾಥ್

    ಮೈಸೂರು: ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಬಹುತೇಕ ಮಠಾಧೀಶರು ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮುಂದುವರಿಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಇದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ದಾರಿ ತಪ್ಪಿದ ವೇಳೆ ಮಠಾಧೀಶರು ಎಚ್ಚರಿಸಬೇಕು. ನಾಡಿನ ಧರ್ಮಾಧಿಕಾರಿಗಳು ಒಂದು ಪಕ್ಷದ ಪರವಾಗಿ, ಒಂದು ನಾಯಕತ್ವದ ಪರವಾಗಿ ಧ್ವನಿ ಎತ್ತಿರುವುದು ಎಷ್ಟು ಸರಿ? ರಾಜಕಾರಣಿಗಳನ್ನು ಮೀರಿಸುವಂತೆ ರಾಜಕೀಯದಲ್ಲಿ ಪಾತ್ರ ಮಾಡುತ್ತಿರುವುದು ಎಷ್ಟು ಸರಿ? ವೀರಶೈವ ಧರ್ಮ ಮಾನವ ಧರ್ಮ. ಇದನ್ನು ಜಾತಿಗೆ ಸೀಮಿತ ಮಾಡಿ ಧರ್ಮದ ವ್ಯಾಪ್ತಿಯನ್ನು ಕುಬ್ಜ ಮಾಡುತ್ತಿದ್ದಾರೆ. ಮಠಗಳು ರಾಜಕೀಯ ಕೇಂದ್ರಗಳಂತಾಗಿದ್ದು, ಸಮಾಜದ ಭಾಗವಾಗಬೇಕೆ ಹೊರತು ಅಧಿಕಾರದ ಭಾಗವಾಗಬಾರದು. ಒಬ್ಬ ನಾಯಕನ ಪರವಾಗಿ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿ: ಸಿದ್ದಗಂಗಾ ಶ್ರೀ

    ನಮ್ಮ ಸಮುದಾಯದ ಸ್ವಾಮೀಜಿಗಳು ಸಹ ಸಮುದಾಯದ ನಾಯಕನ ಪರವಾಗಿ ಧ್ವನಿ ಎತ್ತಿದಾಗ ಅವರಿಗೂ ಈ ಮಾತು ಹೇಳಿದ್ದೇನೆ. ರಾಜಕೀಯಕ್ಕಾಗಿ ಧರ್ಮಾಧಿಕಾರಿಗಳು ಬೀದಿಗೆ ಬರಬಾರದು. ಧರ್ಮಾಧಿಕಾರಿಗಳು ಸಂವಿಧಾನಕ್ಕಿಂತ ದೊಡ್ಡವರು ಎನ್ನುವ ರೀತಿ ಹೋಗುತ್ತಿರುವುದು ಸರಿಯಲ್ಲ ಎಂದರು.

    ಸಿಎಂ ಅವರನ್ನು ಭ್ರಷ್ಟಾಚಾರದ ಕಾರಣಕ್ಕೆ ಬದಲಾಯಿಸಲಾಗುತ್ತಿದೆ. ಮಠಾಧಿಪತಿಗಳು ನಾಡಿಗೆ ಯಾವ ಸಂದೇಶ ರವಾನೆ ಮಾಡುತ್ತಿದ್ದಾರೆ? ಭ್ರಷ್ಟಾಚಾರದ ಪರವಾಗಿ ಸಂದೇಶ ಕೊಡುತ್ತೀದ್ದೀರಾ? ಧರ್ಮಾಧಿಕಾರಿಗಳನ್ನು ಬೀದಿಗೆ ತಂದು ನಿಲ್ಲಿಸಿ, ತಮ್ಮ ಪರವಾಗಿ ಧ್ವನಿ ಎತ್ತಿಸುವುದು ಯಾರಿಗೂ ಶೋಭೆ ತರುವುದಿಲ್ಲ. ಮುಖ್ಯಮಂತ್ರಿ ಜಾತಿವಂತನಾಗಬಾರದು ನೀತಿವಂತನಾಗ ಬೇಕು. ಮುರಾಘಾ ಶ್ರೀಗಳೇ ಬೀದಿಗೆ ಬಂದು ನಿಂತು ಜಾತಿಗೆ ಹೋರಾಡುತ್ತಿದ್ದಾರೆ. ಬಸವ ಶ್ರೀ ಪ್ರಶಸ್ತಿ ಕೊಡುವ ನೀವು ಇಂತಹ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಸರ್ಕಾರದ ಕೆಲಸ ದೇವರ ಕೆಲಸ ಎಂದು ಬರೆಸಲಾಗಿದೆ. ಆದರೆ, ಇದನ್ನು ಈಗ ಸರ್ಕಾರದ ಕೆಲಸ ಸ್ವಾಮೀಜಿಗಳ ಕೆಲಸವಾಗಿ ಬದಲಾಯಿಸಬೇಕಿದೆ. ಯಡಿಯೂರಪ್ಪ ಅವರು ಎರಡು ಬಾರಿ ಸಿಎಂ ಆಗಿದ್ದಾರೆ. ಎರಡು ಬಾರಿಯೂ ಪರಿಸ್ಥಿತಿಯ ಶಿಶುವಾದರು. ಮೊದಲ ಬಾರಿಯೂ ಗೌರವಯುತವಾಗಿ ಸಿಎಂ ಸ್ಥಾನದಿಂದ ಅವರು ನಿರ್ಗಮಿಸಲಿಲ್ಲ. 48 ಇದ್ದ ಸ್ಥಾನ 104 ಸ್ಥಾನ ಆಗಿದ್ದು ಮೋದಿ ಅವರಿಂದ. ಮೋದಿ ಅವರ ಕಾರ್ಯ ಸಿದ್ಧಾಂತಕ್ಕೆ ವಿರೋಧವಾಗಿ ಇಲ್ಲಿ ಆಡಳಿತ ನಡೆಯುತ್ತಿದೆ. ಯಡಿಯೂರಪ್ಪ ಹೋರಾಟಗಾರ ಎಂದು ಅವರ ಕೈಗೆ ಅಧಿಕಾರ ಕೊಡಲಾಯಿತು. ಆದರೆ ಕಥೆ ಏನಾಗಿದೆ ನೋಡಿ, ಸಿಎಂ ಆದ ಮೇಲೆ ಯಡಿಯೂರಪ್ಪ ಅವರ ತಮ್ಮ ನಾಲಿಗೆ, ಕೈಯನ್ನು ಮಗನ ಕೈಗೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

    ಬಿಜೆಪಿ ಕಟ್ಟಿದ್ದು ಯಡಿಯೂರಪ್ಪ ಅಲ್ಲ, ಎ.ಕೆ.ಸುಬ್ಬಯ್ಯ, ಬಿ.ಬಿ.ಶಿವಪ್ಪ, ಶಂಕರಮೂರ್ತಿಯಂತಹವರು ಕಟ್ಟಿದ್ದು. ನಂತರವೂ ಬಿಜೆಪಿ ಕಟ್ಟಿದ್ದು ಯಡಿಯೂರಪ್ಪ ಒಬ್ಬರೇ ಅಲ್ಲ. ಹಲವು ನಾಯಕರು ಬಿಜೆಪಿ ಕಟ್ಟಿದ್ದಾರೆ. ಯಡಿಯೂರಪ್ಪ ಅಧಿಕಾರ ಅನುಭವಿಸಿದ್ದಾರೆ ಅಷ್ಟೆ, ರಾಜ್ಯದ ಆಡಳಿತ, ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಗೆ ಮುಂದಾಗಿದೆ. ಎರಡು ಬಾರಿಯೂ ನಿಮ್ಮ ನಿರ್ಗಮನ ಸರಿ ಆಗಲಿಲ್ಲ, ಇಂದು ಗೌರವಯುತವಾಗಿ ನಿರ್ಗಮನವಾದರೆ ನಿಮಗೇ ಒಳ್ಳೆಯದು ಎಂದರು.

    ರಾಜಕಾರಣ ಸ್ವಾಮೀಜಿಗಳ ಕೈಗೆ ಹೋಗಬಾರದು. ಸ್ವಾಮೀಜಿಗಳು ನಡೆದಾಡುವ ದೇವರಾಗಬೇಕು, ನಡೆದಾಡುವ ರಾಜಕಾರಣಿಗಳಾಗಬಾರದು. ಯಡಿಯೂರಪ್ಪ ಬದಲಾದ ತಕ್ಷಣ ಶೂನ್ಯ ಸೃಷ್ಟಿಯಾಗಲ್ಲ, ಮಠಗಳ ಉತ್ತರಾಧಿಕಾರಿ ಮಾಡುವಾಗ ರಾಜಕಾರಣಿಗಳು ಮಧ್ಯ ಪ್ರವೇಶಿಸುತ್ತಾರಾ? ನಾಯಕತ್ವ ಬದಲಾವಣೆ ಶಾಸಕರ ಕೈಯಲ್ಲಿದೆ. ಮತ ಹಾಕುವವರು ಶಾಸಕರು, ನೀವು ಬಂದು ಮತ ಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

    ಸಿದ್ದರಾಮಯ್ಯ ಭ್ರಷ್ಟ ಸರ್ಕಾರ ಹೋಗಬೇಕು ಎನ್ನುತ್ತಾರೆ. ಅದೇ ಪಕ್ಷದ ಶಾಮನೂರು ಶಿವಶಂಕರಪ್ಪ ಸಿಎಂ ಮನೆಗೆ ಹೋಗಿ ಅವರಿಗೆ ಬೆಂಬಲ ಕೊಡುತ್ತಾರೆ. ಶಾಮನೂರು ಶಿವಶಂಕರಪ್ಪ, ಎಂ.ಬಿ.ಪಾಟೀಲ್ ಶಿಕ್ಷಣದ ದಲ್ಲಾಳಿಗಳು. ಕಾಂಗ್ರೆಸ್ ನ ನಿಜವಾದ ಸ್ಟ್ಯಾಂಡ್ ಏನು? ಶಾಮನೂರು, ಎಂ.ಬಿ.ಪಾಟೀಲ್ ಯಾವ ಪಕ್ಷದಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಾಂಬೆ ಟೀಂನವರನ್ನು ಮಂತ್ರಿ ಮಾಡಬೇಡಿ
    ಮುಂದೆ ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬೇಡಿ. ಬದಲಾವಣೆಗಾಗಿ ಬೆಂಬಲವನ್ನು ಎಲ್ಲರೂ ನೀಡಿದ್ದರು. ಆದರೆ ಅಧಿಕಾರ ಸಿಕ್ಕ ಮೇಲೆ ಬದಲಾದರು. ಎಲ್ಲರೂ ಯಡಿಯೂರಪ್ಪ ಪುತ್ರ ವಿಜಯೇಂದ್ರ ರೀತಿಯಾದರು. ಕೊಡಿ ಕೊಡಿ ಎನ್ನುವುದಕ್ಕೆ ಶುರು ಮಾಡಿದ್ದರು. ಅವರಿಗೆಲ್ಲ ಯಡಿಯೂರಪ್ಪ ಸಿಎಂ ಆಗಿರಲಿಲ್ಲ, ಬದಲಿಗೆ ವಿಜಯೇಂದ್ರ ಸಿಎಂ ಆಗಿದ್ದರು. 17 ಜನಕ್ಕೆ ಅಧಿಕಾರ ನೀಡದಿದ್ದರು ಪರವಾಗಿಲ್ಲ. ಆದರೆ ಇನ್ನು ಯಾವುದೇ ಅಧಿಕಾರ ನೀಡಬಾರದು. ಅವರು ಎಲ್ಲಿಗೂ ಹೋಗುವುದಿಲ್ಲ, ಹೋದರೆ ಹೋಗಲಿ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಲಿ ಎಂದು ತಿಳಿಸಿದರು.