Tag: ಎಚ್ ವಿಶ್ವನಾಥ್

  • ಮೋದಿಯವ್ರೇ ನಿಮ್ಗೆ ಸೌಟ್‍ನಿಂದ ಹೊಡಿಬೇಕಾ? ಗ್ಯಾಸ್‍ನಿಂದ ಹೊಡಿಬೇಕಾ: ಎಚ್.ವಿಶ್ವನಾಥ್

    ಮೋದಿಯವ್ರೇ ನಿಮ್ಗೆ ಸೌಟ್‍ನಿಂದ ಹೊಡಿಬೇಕಾ? ಗ್ಯಾಸ್‍ನಿಂದ ಹೊಡಿಬೇಕಾ: ಎಚ್.ವಿಶ್ವನಾಥ್

    ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಪ್ರಧಾನಿ ಮೋದಿ ಅವರ ವೈಫಲ್ಯದ ಬಗ್ಗೆ ಮಾತನಾಡಿದವರು ದೇಶದ್ರೋಹಿಗಳಾಗುತ್ತಾರೆ. ಮೋದಿ ಅವರು 2014ರಲ್ಲಿ ದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದರು. ವಿದೇಶದಲ್ಲಿ ಇರುವ ಕಪ್ಪು ಹಣವನ್ನು ತರುವುದಾಗಿ ಹೇಳಿದ್ದರು. ಇಂತಹ ಅನೇಕ ಭರವಸೆಗಳನ್ನು ಮೋದಿ ಅವರು ಮರೆತಿದ್ದಾರೆ. ಚುನಾವಣೆ ಬಳಿಕ ಬಿಎಸ್‍ಎನ್‍ಎಲ್ ಸಂಪೂರ್ಣವಾಗಿ ಸ್ಥಗಿತವಾಗಲಿದೆ. ಇದರಿಂದ ಅನೇಕರು ನಿರುದ್ಯೋಗಿಗಳಾಗುತ್ತಾರೆ ಎಂದು ಹೇಳಿದರು.

    ನರೇಂದ್ರ ಮೋದಿ ಅವರು ಜಿಯೋ ಕಂಪನಿಯ ರಾಯಬಾರಿಯಾಗಿದ್ದಾರೆ. ನಾನೇ ಅಂತರ್ಜಾಲದಲ್ಲಿ ಕ್ರಾಂತಿ ಮಾಡಿದೆ ಎಂದು ಹೇಳುತ್ತಿದ್ದಾರೆ. ಇದಕ್ಕೂ ಮೊದಲೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು, ದೂರವಾಣಿ ಸಂಪರ್ಕದಲ್ಲಿ ಕ್ರಾಂತಿ ಮಾಡಿದ್ದರು. ಎಲ್ಲವನ್ನೂ ನಾನೇ ಮಾಡಿದೆ ಅಂತ ಹೇಳುವುದು ಸರಿಯಲ್ಲ ಎಂದರು.

    ಎಚ್.ಡಿ.ದೇವೇಗೌಡ ಅವರು ಮತ್ತೊಮ್ಮೆ ಪ್ರಧಾನಿಯಾಗುವ ನಿರೀಕ್ಷೆಯಲ್ಲಿದ್ದೇವೆ. ಹೀಗಾಗಿ ತುಮಕೂರು ಕ್ಷೇತ್ರದ ಜನತೆ ಮಹತ್ವದ ಬೆಳವಣಿಗೆಗೆ ಅವಕಾಶ ಮಾಡಿಕೊಡಬೇಕು. ಈ ಮೂಲಕ ಎಚ್.ಡಿ.ದೇವೇಗೌಡ ಅವರನ್ನು ಹೆಚ್ಚು ಮತಗಳ ಅಂತರದಲ್ಲಿ ಆಯ್ಕೆ ಮಾಡಬೇಕಿದೆ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

  • ನಾನ್ಯಾಕೆ ಕಾಂಗ್ರೆಸ್ ಬಿಟ್ಟೆ ಅಂತ ಸಿದ್ದರಾಮಯ್ಯನವರನ್ನೇ ಕೇಳಿ: ಎಚ್.ವಿಶ್ವನಾಥ್

    ನಾನ್ಯಾಕೆ ಕಾಂಗ್ರೆಸ್ ಬಿಟ್ಟೆ ಅಂತ ಸಿದ್ದರಾಮಯ್ಯನವರನ್ನೇ ಕೇಳಿ: ಎಚ್.ವಿಶ್ವನಾಥ್

    – ಸಿದ್ದರಾಮಯ್ಯ ನಾನು ಕಣ್ಣಿನಲ್ಲೇ ಮಾತನಾಡುತ್ತೇವೆ

    ಬೆಂಗಳೂರು: ನಾನ್ಯಾಕೆ ಕಾಂಗ್ರೆಸ್ ಬಿಟ್ಟೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯನವರನ್ನೇ ಕೇಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

    ನಗರದ ಪ್ರೆಸ್‍ಕ್ಲಬ್‍ನಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಗ್ರಹಚಾರಕ್ಕೆ ಅವತ್ತು ಕಾಂಗ್ರೆಸ್ ಹೈಕಮಾಂಡ್ ವೀಕ್ ಆಗಿತ್ತು. ಏನು ಮಾಡೋದು ಹೇಳಿ? ಆದರೆ ಈಗ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಪ್ರಬುದ್ಧ ನಾಯಕರಾಗಿದ್ದಾರೆ. ಹೀಗಾಗಿ ಅವರನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು.

    ಸಮನ್ವಯ ಸಮಿತಿಯಲ್ಲಿ ಸ್ಥಾನ ಪಡೆಯದ ವಿಚಾರವಾಗಿ ಮಾತನಾಡಿದ ಅವರು, ಸಮಿತಿಯಲ್ಲಿ ಎರಡು ಪಕ್ಷಗಳಿವೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ನಾನು ಹೊರಗೆ ಇದ್ದೇವೆ. ಬಾಗಿಲನ್ನು ತೆರೆದು ಕೈ ಮುಗಿದು ನಿಂತಿದ್ದೇವೆ. ಈ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ನಾನು ಕಣ್ಣಿನಲ್ಲೇ ಮಾತನಾಡುತ್ತೇವೆ. ಯಾವುದೇ ಭಿನ್ನಾಭಿಪ್ರಾಯ ನಮ್ಮಲ್ಲಿ ಇಲ್ಲ. ಮುಂದೆ ಇಬ್ಬರು ಕುಳಿತು ಮಾತನಾಡುತ್ತೇವೆ. ಅವರನ್ನ ಬೆಳೆಸಿದ್ದು ಒಕ್ಕಲಿಗರು. ಈ ಮೂಲಕ ಅಹಿಂದ ವರ್ಗಕ್ಕೆ ಬೆಂಬಲ ಸಿಕ್ಕಿದೆ. ಇದರಲ್ಲಿ ಅವಮಾನ ಎಲ್ಲಿಂದ ಬರುತ್ತೆ ಎಂದು ತಿಳಿಸಿದರು.

    ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಯು ಬಿಜೆಪಿಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ. ನಮಗೆ ಯಾವುದೇ ಪ್ರತಿಷ್ಠೆ ಇಲ್ಲ. ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಅಂತ ಹೇಳಿಕೊಂಡು ಪ್ರತಿಷ್ಠೆ ತೋರಲ್ಲ. ಜನರು ಎಲ್ಲವನ್ನೂ ನಿರ್ಧಾರ ಮಾಡುತ್ತಾರೆ ಎಂದರು.

    ಮಂಡ್ಯದಲ್ಲಿ ಕಾಂಗ್ರೆಸ್-ಬಿಜೆಪಿ ಬಾವುಟ ಒಟ್ಟಿಗೆ ಪ್ರಚಾರ ಮಾಡುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ವಿಶ್ವನಾಥ್ ಅವರು, ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಬಾವುಟ ಹಿಡಿದರೆ ವೋಟ್ ಬೀಳುತ್ತೆ ಅಂತ ಹೇಳುವುದಕ್ಕೆ ಆಗುತ್ತಾ? ಜನರು ಅದೆಲ್ಲನ್ನು ತೀರ್ಮಾನ ಮಾಡುತ್ತಾರೆ. ಸುಮಲತಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಬಿಜೆಪಿ ಅವರಿಗೆ ಬೆಂಬಲ ನೀಡಿದೆ ಎಂದರು.

    ಎಚ್.ಡಿ.ದೇವೇಗೌಡರು ಇಡೀ ಭಾರತವನ್ನ ಪ್ರತಿನಿಧಿಸಿದ್ದರು. ಅವರು ಹಾಸನ, ಮಂಡ್ಯ, ತುಮಕೂರು ಅಂತ ಸೀಮಿತ ಆಗಲ್ಲ. ಅವರಿಗೆ ಇಡೀ ಭಾರತವೇ ಕ್ಷೇತ್ರವಾಗಿದ್ದು, ಎಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ ಎಂದು ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದನ್ನು ಸಮರ್ಥಿಸಿಕೊಂಡರು.

    ದೋಸ್ತಿ ಸರ್ಕಾರದಲ್ಲಿ ಮಂಡ್ಯಕ್ಕೆ ಹೆಚ್ಚು ಅನುದಾನ ಕೊಟ್ಟರೆ ಏನು ತಪ್ಪು? ಬೇರೆ ಜಿಲ್ಲೆಗಳಿಗೂ ಅನುದಾನ ಕೊಟ್ಟಿದ್ದಾರೆ. ರಾಜ್ಯ ಯಾವ ಜಿಲ್ಲೆಗೂ ಅನ್ಯಾಯ ಮಾಡಿಲ್ಲ. ಆದರೆ ಹಾಸನ ಹಾಗೂ ಮಂಡ್ಯಗೆ ಸ್ವಲ್ಪ ಹೆಚ್ಚು ಅನುದಾನ ಕೊಟ್ಟಿರಬಹುದು ಎಂದರು.

    ಲೋಕಸಭೆ ಚುನಾವಣೆ ಬಳಿಕವೂ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇರುತ್ತದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. ನಾಳೆ ಏನಾಗುತ್ತೋ ನೋಡೋಣ. ಈಗ ಅದು ಬೇಡ ಎಂದು ತಿಳಿಸಿದರು.

    ರಾಜ್ಯದ ಜನರು ಮಂಡ್ಯದಿಂದ ಬೇಜಾರು ಆಗಿಲ್ಲ. ಆದರೆ ಮಂಡ್ಯ ಬಗ್ಗೆ ತೋರಿಸುತ್ತಿರುವವರ ಬಗ್ಗೆ ಬೇಸರವಾಗಿದ್ದಾರೆ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಬಿಜೆಪಿ ಸಂಸದ ಸದಾನಂದಗೌಡ, ಬಿ.ಎಸ್.ಯಡಿಯೂರಪ್ಪ ಬಗ್ಗೆಯೂ ಯಾರು ತೋರಿಸುತ್ತಿಲ್ಲ. ಕೇವಲ ಮಂಡ್ಯ, ಮಂಡ್ಯ ಅಂತ ತೋರಿಸುತ್ತಿದ್ದಾರೆ ಎಂದು ಮಾಧ್ಯಮಗಳ ವಿರುದ್ಧ ಅಸಮಾಧಾನ ಹೊರ ಹಾಕಿದರು.

    ನನ್ನ ಮೇಲೆ ಯಾಕೆ ಐಟಿ ದಾಳಿ ಮಾಡುತ್ತಾರೆ. ನನ್ನ ಬಳಿ ಏನಿದೆ? ನಾವು ತಿರುಗಾಡುವವರು. ನನ್ನ ಬಳಿಯೂ ಏನು ಇಲ್ಲ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಬಳಿಯೂ ಏನು ಇಲ್ಲ ಎಂದು ತಿಳಿಸಿದರು.

  • ಸ್ವಾತಂತ್ರ್ಯದ ಅಮಲಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು – ದೇಶಭಕ್ತಿಯ ಅಮಲಿನಲ್ಲಿ ಮೋದಿ ಅಧಿಕಾರಕ್ಕೇರಲು ಪ್ರಯತ್ನ: ವಿಶ್ವನಾಥ್

    ಸ್ವಾತಂತ್ರ್ಯದ ಅಮಲಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು – ದೇಶಭಕ್ತಿಯ ಅಮಲಿನಲ್ಲಿ ಮೋದಿ ಅಧಿಕಾರಕ್ಕೇರಲು ಪ್ರಯತ್ನ: ವಿಶ್ವನಾಥ್

    ತುಮಕೂರು: ದೇಶದಲ್ಲಿ ಸ್ವಾತಂತ್ರ್ಯದ ಅಮಲಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಈಗ ದೇಶ ಭಕ್ತಿಯ ಅಮಲಿನಲ್ಲಿ ಅಧಿಕಾರಕ್ಕೆ ಬರಲು ಮೋದಿ ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಮಹಾಘಟಬಂಧನ ಕೋಮುವಾದವನ್ನ ಮಣಿಸುವ ಅಮಲಿನಲ್ಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರ ಯುವಕರಿಗೆ ಹಲವು ಆಸೆಗಳನ್ನು ಒಡ್ಡಿ ಅಧಿಕಾರಕ್ಕೆ ಬಂದಿತ್ತು. ಆದರೆ ಅವರಿಗೆ ನೀಡಿದ್ದ ಯಾವುದೇ ಆಸೆ ಈಡೇರಿಲ್ಲ. ಅಲ್ಲದೇ ದೇಶಗಳಲ್ಲಿ ಸೈನ್ಯದ ದುರುಪಯೋಗ ಆಗಿದ್ದು, ಇದು ಎಷ್ಟರ ಮಟ್ಟಿಗೆ ಸರಿ ಎಂಬುವುದು ನನ್ನ ಪ್ರಶ್ನೆ ಆಗಿದೆ. ಈ ಹಿಂದೆ ಸ್ವಾತಂತ್ರ್ಯದ ಅಮಲಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೆ, ಈಗ ದೇಶ ಭಕ್ತಿಯ ಅಮಲಿನಲ್ಲಿ ಅಧಿಕಾರಕ್ಕೆ ಬರಲು ಮೋದಿ ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಮಹಾಘಟಬಂಧನ ಕೋಮುವಾದವನ್ನ ಮಣಿಸುವ ಅಮಲಿನಲ್ಲಿದೆ ಎಂದರು.

    ಜೆಡಿಎಸ್‍ಗೆ 12 ಲೋಕಸಭಾ ಕ್ಷೇತ್ರ ಬಿಟ್ಟುಕೊಡಬೇಕು ಎಂಬ ಬೇಡಿಕೆ ಇಟ್ಟಿದ್ದೇವೆ. 7 ಕ್ಷೇತ್ರಕ್ಕೆ ತೃಪ್ತಿಪಟ್ಟುಕೊಂಡಿದ್ದೇವೆ ಎಂಬ ವರದಿ ಸತ್ಯಕ್ಕೆ ದೂರವಾದದ್ದು ಎಂದು. ಈಗಲೂ ಜೆಡಿಎಸ್ 12 ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದ್ದು, ಅಂತಿಮವಾಗಿ ಅದು 9 ಆಗಬಹುದು, 8 ಆಗಬಹುದು. ಅಂತಿಮ ಚರ್ಚೆಯ ಬಳಿಕವೇ ಸ್ಪಷ್ಟನೆ ನೀಡಲಿದ್ದೇವೆ ಎಂದರು.

    ದುಡುಕಿನ ತೀರ್ಮಾನ ಬೇಡ: ಇದೇ ವೇಳೆ ನಟ ಅಂಬರೀಷ್ ಪತ್ನಿ ಸುಮಲತಾ ಮಂಡ್ಯದ ಸೊಸೆ, ಮಗಳಾಗಿದ್ದಾರೆ ಎಂದ ಅವರು, ಚುನಾವಣೆ ವಿಚಾರದಲ್ಲಿ ದುಡುಕಿನ ನಿರ್ಧಾರ ಮಾಡಬಾರದು. ಆದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು. ಸುಮಲತಾ ಸ್ಪರ್ಧೆ ಮಾಡುವುದರಿಂದ ಜೆಡಿಎಸ್‍ಗೆ ಯಾವುದೇ ರೀತಿಯ ತೊಂದರೆ ಆಗಲ್ಲ ಎಂದರು.

    ದೇಶದಲ್ಲಿ ಕುಟುಂಬ ರಾಜಕಾರಣ ಅನ್ನುವುದು ಅರ್ಥಹೀನವಾಗಿದೆ. ಯಡಿಯೂರಪ್ಪರ ಮನೆಯವರೂ ಕುಟುಂಬ ರಾಜಕಾರಣ ಮಾಡುತ್ತಾರೆ. ಸಿದ್ದರಾಮಯ್ಯ ನವರು ಕುಟುಂಬ ರಾಜಕಾರಣ ಮಾಡುತ್ತಾರೆ ಎಂದರು. ಅಲ್ಲದೇ ಚೌಕಿದಾರ್ ಚೋರ್ ಅನ್ನುವ ಪದಕ್ಕೆ ಹೇಗೆ ಅರ್ಥ ಇಲ್ಲವೋ ಹಾಗೆಯೇ ಮಹಾಘಟ ಬಂಧನ್ ಮಹಾ ಠಕ್ ಬಂಧನ್ ಅನ್ನುವ ಮಾತಿಗೂ ಬೆಲೆ ಇಲ್ಲ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಹೇಳಿರುವ ಚೌಕಿದಾರ್ ಚೋರ್ ಅನ್ನುವ ಮಾತಿಗೆ ಬೆಲೆ ಇಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ – ಎಚ್ ವಿಶ್ವನಾಥ್ ಹೇಳಿದ್ದು ಹೀಗೆ

    ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ – ಎಚ್ ವಿಶ್ವನಾಥ್ ಹೇಳಿದ್ದು ಹೀಗೆ

    ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರ ಚುಕ್ಕಾಣಿ ಪಡೆದಿದ್ದ ಎಚ್ ವಿಶ್ವನಾಥ್ ತಮ್ಮ ರಾಜೀನಾಮೆ ತೀರ್ಮಾನದಿಂದ ಹಿಂದೆ ಸರಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವೇಗೌಡರು ನನ್ನನ್ನ ನಂಬಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದರು. ಆದರೆ ನನ್ನ ಆರೋಗ್ಯ ಕ್ಷೀಣಿಸುತ್ತಿರುವ ಕಾರಣ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದೆ. ದೇವೇಗೌಡರು ನನ್ನ ಮನವಿ ತಿರಸ್ಕಾರ ಮಾಡಿದರು. ದೇವೇಗೌಡರ ವಿಶ್ವಾಸದ ಬೇಡಿಯ ಬಂಧನಕ್ಕೆ ಒಳಗಾದ ನಾನು, ನನ್ನ ನಿರ್ಧಾರ ವಾಪಸ್ ಪಡೆದಿದ್ದೇನೆ. ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡೋಣ ಎಂದು ತಿಳಿಸಿದರು.

    ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿದ್ದು, ಪಕ್ಷಕ್ಕಾಗಿ ಮರ ಹತ್ತಿ ಬಾವುಟ ಕಟ್ಟಿರುವ ಕಾರ್ಯಕರ್ತರು ಇದ್ದಾರೆ. ಅಂತಹ ಕಾರ್ಯಕರ್ತರಿಗೆ ಪಕ್ಷದಲ್ಲಿ ಅಧಿಕಾರ ಕೊಡಬೇಕು. ಶೀಘ್ರದಲ್ಲೇ ಸಿಎಂ ಹಾಗೂ ಪಕ್ಷದ ವರಿಷ್ಠರು ಕಾರ್ಯಕರ್ತರಿಗೆ ಸ್ಥಾನಮಾನ ಕೊಡುತ್ತಾರೆ. ದೇಶ್ಯಾದ್ಯಂತ ಪ್ರಾದೇಶಿಕ ಪಕ್ಷಗಳು ಪ್ರಬಲವಾಗುತ್ತಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಸ್ಥಾನವನ್ನು ಗಳಿಸಲಿವೆ. ಇಂದು ಹಿಂದಿನ ಜನತಾ ಪರಿವಾರ ಒಂದುಗೂಡಿಸುವ ಅನಿವಾರ್ಯತೆ ಇದೆ. ದೇವೇಗೌಡರು ಕೂಡ ಸಮ್ಮಿಶ್ರ ಸರ್ಕಾರದಲ್ಲೇ ಪ್ರಧಾನಿಯಾಗಿ 10 ತಿಂಗಳು ಅದ್ಭುತ ಕೆಲಸ ಮಾಡಿದರು. ರಾಜ್ಯದಲ್ಲೂ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

    ಅಂಬರೀಶ್ ಅಂತ್ಯ ಸಂಸ್ಕಾರದ ಕೆಲಸವನ್ನು ಸರ್ಕಾರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೆರವೇರಿಸಿದೆ. ಮಂಡ್ಯ ಬಸ್ ದುರಂತ, ವಿಷ ಪ್ರಾಷಾಣ ದುರಂತ ಘಟನೆಗಳನ್ನು ಸಮರ್ಥವಾಗಿ ಸರ್ಕಾರ ನಿಭಾಯಿಸಿತು. ಹಿಂದಿನ ಸರ್ಕಾರಗಳು ಸಾಲ ಮಾಡಿ ಹೋಗಿದ್ದರು, ರಾಜ್ಯದ ಆರ್ಥಿಕ ಪರಿಸ್ಥಿತಿ ಕಂಡ ಸಿಎಂ ಕುಮಾರಸ್ವಾಮಿ ಅವರು 43 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಧೈರ್ಯ ಮಾಡಿದ್ದಾರೆ. ಇದೆಲ್ಲವನ್ನ ಕಾರ್ಯಕರ್ತರು ಜನರಿಗೆ ತಿಳಿಸಬೇಕಿದ್ದು, ವಿಭಾಗದ ಮೂಲಕ ಪಕ್ಷ ಕಟ್ಟುವ ಕೆಲಸ ಮಾಡಬೇಕು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವರಾಗ್ತಾರಾ ಎಚ್. ವಿಶ್ವನಾಥ್? ಎಚ್.ಡಿ.ರೇವಣ್ಣ ಹೇಳಿದ್ದು ಹೀಗೆ

    ಸಚಿವರಾಗ್ತಾರಾ ಎಚ್. ವಿಶ್ವನಾಥ್? ಎಚ್.ಡಿ.ರೇವಣ್ಣ ಹೇಳಿದ್ದು ಹೀಗೆ

    ಮಡಿಕೇರಿ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ವಿಶ್ವನಾಥ್ ಮುಂದುವರೆಯುತ್ತಾರೆ. ಯಾವುದೇ ಗೊಂದಲ ಬೇಡ. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿ, ಎಚ್‍ಡಿಡಿಗೆ ಬಿಟ್ಟ ವಿಚಾರ ಅದರ ಬಗ್ಗೆ ನಾನು ಮಾತಾನಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಬೇರೆ ಇಲಾಖೆಯ ಅಧಿಕಾರಿಗಳನ್ನು ನಾನು ವರ್ಗಾವಣೆ ಮಾಡುವ ಕೆಲಸಕ್ಕೆ ಕೈ ಹಾಕಿಲ್ಲ. ಬೇರೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ. ರಾಜ್ಯ ಸರ್ಕಾರ ಸುಭದ್ರವಾಗಿದೆ, ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಕೊಡಗು, ಹಾಸನ, ಚಿಕ್ಕಮಗಳೂರು ಕಾಫಿ ಬೆಳೆಗಾರರಿಗೆ ಆದ ನಷ್ಟದ ಶೇ. 50ರಷ್ಟು ಪರಿಹಾರವನ್ನು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸ್ಪಂದಿಸುವ ಭರವಸೆ ಇದೆ. ಕೊಡಗಿನ ರಸ್ತೆಗೆ 44 ಕೋಟಿ ಹಣ ಬಿಡುಗಡೆಯಾಗಿದೆ. ಅಧಿಕಾರಿಗಳು ಕಾನೂನು ಬಿಟ್ಟು ಕೆಲಸ ಮಾಡಬಾರದು. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ರು.

    ರೈತರ ಸಾಲಮನ್ನಾ ಮಾಡುವ ಬಗ್ಗೆ ಮಾತಾನಾಡಿ ರೇವಣ್ಣ, ಬಿಜೆಪಿಯವರಿಗೆ ಮಾನಮರ್ಯಾದೆ ಇದ್ದರೆ ಸಾಲಮನ್ನಾದ ಬಗ್ಗೆ ಮಾತನಾಡಬಾರದು. ರೈತರು ಸಾಲದ ಬಗ್ಗೆ ಚಿಂತೆ ಮಾಡುವ ಅಗತ್ಯ ಇಲ್ಲ. ನಮ್ಮ ಸರ್ಕಾರದಲ್ಲಿಯೇ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ? ಹೆಚ್ಚಿನ ಅಧಿಕಾರ ಕೋಡೋಣ ಅಂದ್ರು ಎಚ್‍ಡಿಕೆ

    ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ? ಹೆಚ್ಚಿನ ಅಧಿಕಾರ ಕೋಡೋಣ ಅಂದ್ರು ಎಚ್‍ಡಿಕೆ

    ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು, ಆರೋಗ್ಯ ಸರಿಯಿಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ರಿಲೀವ್ ಮಾಡುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾಗಿ ಎನ್ನಲಾಗಿದೆ.

    ಈ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ಆರೋಗ್ಯ ಸರಿ ಇಲ್ಲದ ಕಾರಣ ಹೀಗೆ ಹೇಳಿರಬಹುದೇ ಹೊರತು ಅಧಿಕಾರಕ್ಕಾಗಿ ಅಲ್ಲ. ಅಧಿಕಾರಕ್ಕೆ ಅವರ ಬೇಡಿಕೆ ಇದ್ದಲ್ಲಿ ಹೆಚ್ಚಿನ ಅಧಿಕಾರ ನೀಡೋಣ ಅಂದಿದ್ದಾರೆ.

    ಕೇಂದ್ರ ಸಚಿವರ ಭೇಟಿ ಬಳಿಕ ಮಾತನಾಡಿದ ಸಿಎಂ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆಗಲು ನಾನು ಸಮಯ ಕೇಳಿಲ್ಲ. ರಾಜ್ಯದ ಕೆಲಸಗಳ ಬಗ್ಗೆ ಕೇಂದ್ರ ಚರ್ಚಿಸಲು ಬಂದಿದ್ದೆ. ಇದೇ ವೇಳೆ ಸಮ್ಮಿಶ್ರ ಸರ್ಕಾರ ಖಾತೆ ಹಂಚಿಕೆ ತಡವಾಗುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡರಿಗೆ ಕೇಳಿ. ಜೆಡಿಎಸ್ ಪಾಲಿನ ಎರಡು ಸ್ಥಾನಗಳನ್ನು ಸೂಕ್ತ ಸಮಯದಲ್ಲಿ ಭರ್ತಿ ಮಾಡುತ್ತೇವೆ. ಆದರೆ ಲೋಕಸಭೆ ಸ್ಥಾನಗಳ ಹಂಚಿಕೆ ಬಗ್ಗೆ ಇನ್ನು ಯಾವುದೇ ಮಾತುಕತೆ ನಡೆದಿಲ್ಲ. ಈ ಕುರಿತು ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಇತ್ತ ರಾಜ್ಯ ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ದೂರಗಳ ಪಟ್ಟಿ ಹೊತ್ತು ದೆಹಲಿಗೆ ತೆರಳಿದ್ದ ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗದೆ ವಾಪಾಸ್ ಆಗಿದ್ದು, ಬಿಕ್ಕಟ್ಟಿನ ವೇಳೆ ರಾಹುಲ್ ಭೇಟಿ ಸರಿಯಲ್ಲ ಎಂದು ಹಿಂದಿರುಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಮೂರು ರಾಜ್ಯಗಳ ಸಂಪುಟ ರಚನೆ ಹಾಗೂ ಸಂಸತ್ ಅಧಿವೇಶನದಲ್ಲಿ ಕಾರ್ಯದಲ್ಲಿ ನಿರತರಾಗಿರುವ ರಾಹುಲ್ ಗಾಂಧಿ ಕೂಡ ಕುಮಾರಸ್ವಾಮಿ ಭೇಟಿಯನ್ನ ನಿರ್ಲಕ್ಷ್ಯ ಮಾಡಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಭಾರತದ ಮತದಾರನಿಂದ ಬಿಜೆಪಿಗೆ ಒಂದು ದೊಡ್ಡ ವಿದಾಯ- ಎಚ್. ವಿಶ್ವನಾಥ್

    ಭಾರತದ ಮತದಾರನಿಂದ ಬಿಜೆಪಿಗೆ ಒಂದು ದೊಡ್ಡ ವಿದಾಯ- ಎಚ್. ವಿಶ್ವನಾಥ್

    – ಮಾತಿನ ಮಲ್ಲನಾಗಿ ಭವಿಷ್ಯ ರೂಪಿಸಲು ಆಗಲ್ಲ

    ಬೆಳಗಾವಿ: ಭಾರತದ ಮತದಾರ ಭಾರತೀಯ ಜನತಾ ಪಕ್ಷಕ್ಕೆ ಒಂದು ದೊಡ್ಡ ವಿದಾಯವನ್ನು ಹೇಳುತ್ತಿದ್ದಾನೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಹೇಳಿದ್ರು.

    5 ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೋದಿಯವರ ಮೇಲೆ ಭ್ರಮನಿರಸನವಾಗಿದೆ. ಅವರ ಮೇಲೆ ಇದ್ದಂತಹ ಅಪಾರ ನಿರೀಕ್ಷೆಗಳು ಕೂಡ ಹುಸಿಯಾಗಿವೆ ಅಂತ ಭಾರತೀಯ ಮತದಾರ ಈ ಪಂಚ ರಾಜ್ಯಗಳ ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾನೆ. ಇದು ಬಿಜೆಪಿಗೂ ಕೂಡ ಒಂದು ದೊಡ್ಡ ಪಾಠವಾಗಿದೆ. ಅಲ್ಲದೇ ಭಾರತದ ಮತದಾರನಿಗೂ ಕೂಡ ಹಿಂದಿನ ಚುನಾವಣೆಗಳನ್ನು ಗಮನಿಸಿದ್ರೆ ಒಂದು ಹೊಸ ಅನುಭವ ಅಂತಂದ್ರೆ ತಪ್ಪಾಗಲಾರದು ಅಂದ್ರು.

    ಕಳೆದ ಬಾರಿಗೂ ಈ ಬಾರಿ ಫಲಿತಾಂಶ ಹೊರಬೀಳುತ್ತಿರುವುದನ್ನು ಗಮನಿಸಿದ್ರೆ ಮಧ್ಯಪ್ರದೇಶ ಹಾಗೂ ರಾಜಸ್ಥಾನ ಹೆಚ್ಚು ಲೋಕಸಭಾ ಸ್ಥಾನಗಳು ಇರುವ ರಾಜ್ಯಗಳಾಗಿವೆ. ಆದ್ರೆ ಇಂದಿನ ಈ ಫಲಿತಾಂಶ ಅದಕ್ಕೆ ಬಹಳ ವಿರುದ್ಧವಾಗಿ ಹೋಗಿದ್ದು ಬಿಜೆಪಿ ಕುಸಿದಿದೆ. ಒಟ್ಟಾರೆ ಈ ಎರಡೂ ರಾಜ್ಯಗಳಲ್ಲಿ ಮತದಾರನ ತೀರ್ಪು ಬಹಳ ಮುಖ್ಯವಾಗಿದೆ. ಅಂತಹ ಒಂದು ದೊಡ್ಡ ತೀರ್ಪನ್ನು ದೊಡ್ಡ ದೇಶದ ಮತದಾರ ಬಹಳ ದೂರದೃಷ್ಟಿಯಿಂದ ಈ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾನೆ ಅಂತ ಹೇಳಿದ್ರು.

    ಇಂದು ಹೊರಬೀಳುವ ಚುನಾವಣಾ ಫಲಿತಾಂಶದಿಂದ ದೆಹಲಿಯ ಬಿಜೆಪಿ ಮುಖ್ಯ ಕಚೇರಿಗೆ ಇಂದು ಒಂದು ಅಲೆ ಅಪ್ಪಳಿಸಲಿದೆ. ಹೀಗಾಗಿ ಮೋದಿಯವರು ತರಗೆಲೆ ರೀತಿ ಆಗಿ ಹೋಗಿದ್ದಾರೆ. ಭಾರತದ ಮತದಾರ ಭಾರತೀಯ ಜನತಾ ಪಕ್ಷಕ್ಕೆ ಒಂದು ದೊಡ್ಡ ಸಂದೇಶವನ್ನು ರವಾನಿಸಿದ್ದಾನೆ. ಬರೀ ಮಾತಿನ ಮಂಟಪದಿಂದ ಭಾರತದ ಆಡಳಿತವನ್ನು ಮಾಡಲು ಸಾಧ್ಯವಿಲ್ಲ. ಮಾತಿನ ಮಲ್ಲನಾಗಿ ಭಾರತದ ಭವಿಷ್ಯವನ್ನು ರೂಪಿಸಲು ಆಗಲ್ಲ. ಭಾರತ ಬಹುವಿಧದ, ವಿವಿಧ ಜಾತಿ, ಜನಾಂಗ, ಧರ್ಮದ ಭಾಷಿಕರನ್ನು ಹೊಂದಿರುವಂತಹ ಮತ್ತು ಗಣರಾಜ್ಯ ಒಕ್ಕೂಟ ಇರುವಂತಹ ಭಾರತವನ್ನು ನಿಮ್ಮ ಮಾತುಗಳಿಂದಷ್ಟೇ ಬದಲಿಸಲು ಆಗಲ್ಲ ಅನ್ನುವಂತಹ ವಿಚಾರ ಈ 5 ರಾಜ್ಯಗಳ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಗೆ ತೋರಿಸಿದ್ದಾನೆ ಅಂತ ಅವರು ತಿಳಿಸಿದ್ರು.

    ಜೆಡಿಎಸ್ ಒಂದು ಪ್ರಾಂತೀಯ ಪಕ್ಷವಾಗಿದೆ. ಈ ಪ್ರಾಂತೀಯ ಪಕ್ಷಗಳು ಪಂಚರಾಜ್ಯ ಚುನಾವಣೆಯಲ್ಲಿ ಬಲ ಆಗುತ್ತಿವೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಮತದಾರ ಒಂದು ನಂಬಿಕೆಯನ್ನು ತೋರಿಸುತ್ತಿದ್ದಾನೆ. ಹೀಗಾಗಿ ಅಲ್ಲಲ್ಲಿ ಸಣ್ಣಪುಟ್ಟ ಪಾರ್ಟಿಗಳು ಒಂದು ಕಡೆ ಸೇರುತ್ತಿವೆ. ಇವುಗಳ ಏಕೀಕರಣದಿಂದ ದೊಡ್ಡದಾಗಿ ಮೆರೀತಿದ್ದ ಬಿಜೆಪಿಯನ್ನು ಮಣಿಸುವಲ್ಲಿ ಪ್ರಾಂತೀಯ ಪಕ್ಷಗಳ ಪಾತ್ರ ಬಹಳ ಹಿರಿದಾಗುತ್ತಿದ್ದು, ಇದಕ್ಕೆ ನಾನು ಹೆಮ್ಮೆ ಪಡುತ್ತೇನೆ ಅಂದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನಾವಿಬ್ಬರೂ ಮದ್ವೆಯಾಗಿದ್ದೇವೆ, ಸಂಸಾರ ಚೆನ್ನಾಗಿ ನಡೆಯುತ್ತಿದೆ: ಎಚ್.ವಿಶ್ವನಾಥ್

    ನಾವಿಬ್ಬರೂ ಮದ್ವೆಯಾಗಿದ್ದೇವೆ, ಸಂಸಾರ ಚೆನ್ನಾಗಿ ನಡೆಯುತ್ತಿದೆ: ಎಚ್.ವಿಶ್ವನಾಥ್

    ಮೈಸೂರು: ಇಂದಿಗೆ ಸಮ್ಮಿಶ್ರ ಸರ್ಕಾರ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ನಾವಿಬ್ಬರು ಮದುವೆಯಾಗಿದ್ದೇವೆ, ಸಂಸಾರ ಚೆನ್ನಾಗಿ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ವಿಶ್ವನಾಥ್, ಇಂದು ಸಮ್ಮಿಶ್ರ ಸರ್ಕಾರ ಆರು ತಿಂಗಳನ್ನು ಪೂರೈಸಿದೆ. ಮೈತ್ರಿ ಸರ್ಕಾರ ಚೆನ್ನಾಗಿ ಸಂಸಾರ ಮಾಡುತ್ತಿದೆ. ತೊಂದರೆ ಏನು ಇಲ್ಲ. ನಮ್ಮದೇನು ಬೇರೆ ಬೇರೆ ಕುಟುಂಬವಲ್ಲ, ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ಕುಟುಂಬವಾಗಿದೆ ಎಂದು ತನ್ನ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

    ನಾವು ಮದುವೆಯಾಗಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಒಂದೇ ಕುಟುಂಬ. ಹೀಗಾಗಿ ಸಂಸಾರ ಚೆನ್ನಾಗಿ ನಡೆಯುತ್ತಿದೆ. ಏನು ತೊಂದರೆ ಇಲ್ಲ ಎಂದು ಎಚ್.ವಿಶ್ವನಾಥ್ ಪ್ರತಿಕ್ರಿಯಿಸಿದರು.

    ಇಂದು ದೋಸ್ತಿ ಸರಕಾರಕ್ಕೆ ಅರ್ಧವಾರ್ಷಿಕ ಸಂಭ್ರಮ. ಯಾಕೆಂದರೆ ಮೈತ್ರಿ ಸರಕಾರ ರಚನೆಯಾಗಿ ಇಂದಿಗೆ ಆರು ತಿಂಗಳನ್ನು ಪೂರೈಸಿದೆ. 2018 ಮೇ 23 ರಂದು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಮ್ಮಿಶ್ರ ಸರ್ಕಾರ ಸೇಫ್ ಐತೆ, ಹಳ್ಳಿ ಮಾತ್ನಾಗ ಹೇಳೋದಾದ್ರೆ ಗುಂಡ್ರಗೂಳಿ ತರ ಇದೆ: ಎಚ್.ವಿಶ್ವನಾಥ್

    ಸಮ್ಮಿಶ್ರ ಸರ್ಕಾರ ಸೇಫ್ ಐತೆ, ಹಳ್ಳಿ ಮಾತ್ನಾಗ ಹೇಳೋದಾದ್ರೆ ಗುಂಡ್ರಗೂಳಿ ತರ ಇದೆ: ಎಚ್.ವಿಶ್ವನಾಥ್

    ಹಾಸನ: ಜೆಡಿಎಸ್ ಹಾಗೂ ಕಾಂಗ್ರಸ್ಸಿನ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದ್ದು, ಹಳ್ಳಿ ಮಾತಿನಲ್ಲಿ ಹೇಳೊದಾದರೆ ಗುಂಡ್ರಗೂಳಿ ತರ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

    ಹೊಳೆನರಸೀಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರು ಬಿಜೆಪಿಗೆ ಹೋಗುವುದು ಕೇವಲ ಊಹಾಪೋಹ. ಕೆಲ ಕೈ ಶಾಕಸರು ಬಿಜೆಪಿಗೆ ಹೋಗಲಿದ್ದಾರೆ, ಸರಕಾರ ಪತನವಾಗಲಿದೆ ಎಂಬುದು ಮಾಧ್ಯಮಗಳ ಸೃಷ್ಟಿ ಅಷ್ಟೇ. ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಒಂದೇ ಸಮುದಾಯದವರು. ಅವರ ಭೇಟಿಗೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಹೋಗಬೇಕು ಎನ್ನುವ ಅಭಿಪ್ರಾಯವಿದೆ. ಬಿಜೆಪಿಗೆ ವಿರುದ್ಧವಾಗಿ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂಬುದು ದೇವೇಗೌಡರ ಅಭಿಪ್ರಾಯವಾಗಿದೆ ಎಂದು ಹೇಳಿದರು.

    ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಪೂರ್ಣವಾಗಿದೆ. ಸಮನ್ವಯ ಸಮಿತಿ ಪುನರ್ ರಚನೆಯ ಅಗತ್ಯವಿದೆ. ಆದರೆ ಸಮನ್ವಯ ಸಮಿತಿ ಅಧ್ಯಕ್ಷರು ಸದ್ಯ ವಿದೇಶದಲ್ಲಿದ್ದಾರೆ. ಅವರು ರಾಜ್ಯಕ್ಕೆ ಮರಳಿದ ನಂತರ ಈ ಬಗ್ಗೆ ಚರ್ಚೆ ನಡೆಸುತ್ತೇನೆ. ಸಚಿವ ಡಿ.ಕೆ.ಶಿವಕುಮಾರ್ ಪ್ರಕರಣಕ್ಕೂ, ಸಮ್ಮಿಶ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಕೇಂದ್ರ ಸರ್ಕಾರ ಐಟಿ, ಇಡಿ ಹಾಗೂ ಸಿಬಿಐ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ಒತ್ತಡ ಹೇರುತ್ತಿದೆ. ಹೀಗೆ ಮಾಡುವುದು ತಪ್ಪು. ಕೇಂದ್ರ ಸರ್ಕಾರಕ್ಕೆ ಇದನ್ನು ಬಿಟ್ಟು ಮಾಡಲು ಬೇರೆ ಕೆಲಸಗಳು ಬಹಳ ಇವೆ ಎಂದು ತಿಳಿಸಿದರು.

    ಜೆಡಿಎಸ್ ರಾಜ್ಯ ಘಟಕ ಶೀಘ್ರವೇ ಪುನರ್ ರಚನೆಯಾಗಲಿದೆ. ಈಗಾಗಲೇ ಈ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದೇವೆ. ಎಲ್ಲಾ ಸಮುದಾಯಕ್ಕೆ ಆಧ್ಯತೆಯನ್ನು ನೀಡಿ, ಶೀಘ್ರವೇ ನೂತನ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ಮಾತನಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈತ್ರಿಯಲ್ಲಿ ಅಭಿವೃದ್ಧಿ ಕಷ್ಟ, ಸಮನ್ವಯ ಸಮಿತಿಗೆ ಬರಬೇಡಿ ಎನ್ನಲು ಯಾರಿಂದಲೂ ಸಾಧ್ಯವಿಲ್ಲ: ಎಚ್.ವಿಶ್ವನಾಥ್

    ಮೈತ್ರಿಯಲ್ಲಿ ಅಭಿವೃದ್ಧಿ ಕಷ್ಟ, ಸಮನ್ವಯ ಸಮಿತಿಗೆ ಬರಬೇಡಿ ಎನ್ನಲು ಯಾರಿಂದಲೂ ಸಾಧ್ಯವಿಲ್ಲ: ಎಚ್.ವಿಶ್ವನಾಥ್

    ಮೈಸೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಗೆ ಬರಬೇಡಿ ಎನ್ನಲು ಯಾರಿಂದಲೂ ಸಾಧ್ಯವಿಲ್ಲವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಇರುವುದು ಎರಡು ಪಕ್ಷಗಳು, ಒಂದು ಜೆಡಿಎಸ್ ಮತ್ತೊಂದು ಕಾಂಗ್ರೆಸ್. ಎರಡೂ ಪಕ್ಷಗಳ ಸಾಮಾನ್ಯ ಕಾರ್ಯಕ್ರಮಗಳನ್ನು ಸಮನ್ವಯಮಾಡುವ ಸಲುವಾಗಿಯೇ ಸಮಿತಿ ರಚನೆಯಾಗಿದೆ. ಈ ಸಭೆಗೆ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರು ಇರಲೇಬೇಕು. ಸಭೆಯಲ್ಲಿ ಪ್ರಮುಖವಾಗಿ ನಾನು ಹಾಗೂ ಗುಂಡುರಾವ್ ಇದ್ದರೆ ಮಾತ್ರ ಸಮನ್ವಯ ಸಮಿತಿ ಪೂರ್ಣವಾಗೋದು. ನನ್ನನ್ನು ಸಮಿತಿಗೆ ಬರಬೇಡಿ ಎನ್ನುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೃಷ್ಟಿಯಾಗಿರುವ ಕಾರಣ ಕೂಡಲೇ ಸಮನ್ವಯ ಸಮಿತಿ ಸಭೆಯನ್ನು ಕರೆಯಬೇಕು. ಸಭೆಯಲ್ಲಿ ಪ್ರಮುಖವಾಗಿ ಕೊಡಗು ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಬೇಕು. ಹೀಗಾಗಿ ಸಿದ್ದರಾಮಯ್ಯನವರಿಗೆ ಸಭೆ ಕರೆಯುವಂತೆ ಕೇಳುತ್ತಿದ್ದೇನೆ. ಆದರೆ ಅವರು ಬ್ಯುಸಿಯಾಗಿರುವ ಕಾರಣ ಸಮನ್ವಯ ಸಮಿತಿ ಸಭೆಯನ್ನು ಕರೆಯುತ್ತಿಲ್ಲ ಎಂದು ಹೇಳಿದರು.

    ಇದೇ ವೇಳೆ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡಿದ ಅವರು, ಸತ್ಯವಾಗಿ ಹೇಳಬೇಕೆಂದರೆ ಮೈತ್ರಿ ಸರ್ಕಾರಗಳಲ್ಲಿ ಅಭಿವೃದ್ಧಿ ಕಷ್ಟ. ಎಂದಿದ್ದರೂ ಮೈತ್ರಿ ಸರ್ಕಾರ ಮೈತ್ರಿ ಸರ್ಕಾರವೇ, ಸ್ವತಂತ್ರ ಸರ್ಕಾರ ಸ್ವತಂತ್ರ ಸರ್ಕಾರವೇ ಆಗಿದೆ. ಮೈತ್ರಿ ಸರ್ಕಾರದಲ್ಲಿ ಯಾವಾಗಲೂ ವ್ಯತ್ಯಾಸ ಇದ್ದೇ ಇರುತ್ತದೆ. ಹೀಗಾಗಿ ಅಭಿವೃದ್ಧಿ ಅಸಾಧ್ಯ ಎಂದು ಪ್ರತಿಕ್ರಿಯಿಸಿದರು.

    ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾತನಾಡಿದ ಅವರು, ನೋಡಿ ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಮದುವೆ ಆಗಿದೆ. ಹೀಗಾಗಿ ಅವರ ಹೇಳಿಕೆಗಳ ಬಗ್ಗೆ ಹೆಚ್ಚಾಗಿ ಮಾತನಾಡಲು ಆಗುವುದಿಲ್ಲ. ಈ ಮೊದಲು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಅಧಿಕಾರ ನಡೆಸಿದ್ದವು. ಆದರೆ ನಿರೀಕ್ಷೆಗೆ ಮೀರಿದ ಯಾವುದೇ ಕೆಲಸಗಳು ಮೈತ್ರಿ ಕೂಟದಿಂದ ನೆರವೇರಲಿಲ್ಲ. ಮುಂದಿನ ಚುನಾವಣೆಯಲ್ಲಿ ಮೈಸೂರಿನಲ್ಲಿ ಜೆಡಿಎಸ್ ಮಹಾನಗರದ ಚುಕ್ಕಾಣಿಯನ್ನು ಹಿಡಿದೇ ಹಿಡಿಯುತ್ತದೆ. ಆಗ ಮೈಸೂರಿನ ಅಭಿವೃದ್ಧಿಯನ್ನು ಮಾಡಿ ತೋರಿಸುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv