Tag: ಎಚ್ ವಿಶ್ವನಾಥ್

  • ಭಾರತ್ ಮಾತಾಕಿ ಜೈ ಅಂದ್ರೆ ಕಾಂಗ್ರೆಸ್ಸಿನವರಿಗೆ ಆಗಲ್ಲ : ಸಿ.ಟಿ.ರವಿ

    ಭಾರತ್ ಮಾತಾಕಿ ಜೈ ಅಂದ್ರೆ ಕಾಂಗ್ರೆಸ್ಸಿನವರಿಗೆ ಆಗಲ್ಲ : ಸಿ.ಟಿ.ರವಿ

    ಚಿಕ್ಕಮಗಳೂರು: ದೇಶಕ್ಕೆ ಜೈಕಾರ ಕೂಗೋದು ಬಿಜೆಪಿಯವರು ಮಾತ್ರ ಎಂದು ಅಂದುಕೊಂಡಿದ್ದರಿಂದ ಇಂದು ಕಾಂಗ್ರೆಸ್ ಹೀನಾಯ ಸ್ಥಿತಿಗೆ ತಲುಪಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೈ ಪಕ್ಷದ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮಕ್ಕೂ ಮುನ್ನ ಮಾತಾನಾಡಿದ ಅವರು, ಕಾಂಗ್ರೆಸ್ಸಿಗರು ಸಿದ್ಧಾಂತದ ಬದ್ಧತೆಗೆ ಕೆಲಸ ಮಾಡಲ್ಲ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಕೂಗಬೇಡಿ. ನೀವು ಬಿಜೆಪಿಯವರ ಯಾಕೆ ಹಾಗೇ ಕೂಗುತ್ತೀರಾ ಎಂದು ಕಾರ್ಯಕರ್ತರಿಗೆ ಗದರಿಸುತ್ತಾರೆ ಎಂದರು.

    ದೇಶಕ್ಕೆ ಜೈಕಾರ ಹಾಕೋದು ಅವರ ದೃಷ್ಟಿಯಲ್ಲಿ ಬಿಜೆಪಿಯವರು ಮಾತ್ರ ಎಂದುಕೊಂಡರಿಂದ ಇಂದು ಕಾಂಗ್ರೆಸ್ ಹೀನಾಯ ಸ್ಥಿತಿಗೆ ತಲುಪಿದೆ. ಕಾಂಗ್ರೆಸ್ಸಿನವರು ಸೋತ ಕೂಡಲೇ ಇವಿಎಂ ಮೇಲೆ ಆರೋಪಿಸುತ್ತಾರೆ. ಆದರೆ ನಾವು ಜನರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳುತ್ತೇವೆ. ಪಕ್ಷದ ಚಟುವಟಿಕೆಯಲ್ಲಿ ನಿರಂತರವಾಗಿ ಭಾಗಿಯಾಗುತ್ತೇವೆ. ನಾವು ಸಂಘಟನೆ ಕಟ್ಟಿ, ಪಕ್ಷ ಬೆಳೆಸುವ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

    ಇದೇ ವೇಳೆ ಎಚ್. ವಿಶ್ವನಾಥ್‍ಗೆ ಸಚಿವ ಸ್ಥಾನ ನೀಡುವಂತಿಲ್ಲ ಎಂದು ಕೋರ್ಟ್ ತೀರ್ಪು ನೀಡಿರುವ ವಿಚಾರವಾಗಿ ಮಾತಾನಾಡಿದ ಅವರು, ನಾನು ತೀರ್ಪನ್ನು ಅಧ್ಯಯನ ಮಾಡಿಲ್ಲ. ಯಾವ ಹಿನ್ನೆಲೆ ತೀರ್ಪು ಬಂದಿದೆ ಎಂಬುದನ್ನು ನೋಡಿಲ್ಲ. ಕೋರ್ಟ್ ತೀರ್ಪಿನ ಅಧ್ಯಯನ ಬಳಿಕ ಪ್ರತಿಕ್ರಿಯೆ ನೀಡುವುದು ಸೂಕ್ತ. ಹೀಗಾಗಿ ತೀರ್ಪನ್ನು ಅಧ್ಯಯನ ಮಾಡದೆ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ತಿಳಿಸಿದರು.

  • ನಮ್ಮಿಂದಲೇ ಸರ್ಕಾರ ಬಂದ್ರೂ ನಮ್ಮ ಜೊತೆ ನಿಲ್ಲಲಿಲ್ಲ- ಬಿಜೆಪಿ ನಾಯಕರ ವಿರುದ್ಧ ವಿಶ್ವನಾಥ್ ಅಸಮಾಧಾನ

    ನಮ್ಮಿಂದಲೇ ಸರ್ಕಾರ ಬಂದ್ರೂ ನಮ್ಮ ಜೊತೆ ನಿಲ್ಲಲಿಲ್ಲ- ಬಿಜೆಪಿ ನಾಯಕರ ವಿರುದ್ಧ ವಿಶ್ವನಾಥ್ ಅಸಮಾಧಾನ

    ಬೆಂಗಳೂರು: ನಮ್ಮಿಂದಲೇ ಸರ್ಕಾರ ಬಂದರೂ ನಮ್ಮ ಜೊತೆ ನಿಲ್ಲಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಧಾನ ಹೊರ ಹಾಕಿದ್ದಾರೆ.

    ಹೈ ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮಿಂದ ಸರ್ಕಾರ ಬಂದರೂ, ನಮ್ ಜೊತೆ ನಿಲ್ಲಲಿಲ್ಲ. ಕಾನೂನಿನ ವಿಚಾರದಲ್ಲಿ ಯಾರೂ ಸಹಾಯ ಮಾಡಲಿಲ್ಲ. ವಿಧಾನ ಪರಿಷತ್ ಚುನಾವಣೆ ವೇಳೆ ಅಭ್ಯರ್ಥಿಗಳ ಪಟ್ಟಿಯಿಂದ ನನ್ನ ಹೆಸರು ತೆಗೆದರು. ನನ್ನ ಅನುಭವ ಬಳಸಿಕೊಳ್ಳಬಹುದಿತ್ತು. ಆದರೆ ಕಡೆಗಣಿಸಿದರು, ಎಲ್ಲವನ್ನೂ ನಾನು ಎದುರಿಸುತ್ತೇನೆ. ನನಗೂ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿದ್ದರೆ ಮಂತ್ರಿ ಆಗುತ್ತಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ಸಾರಾ ಮಹೇಶ್ ಕೊಚ್ಚೆ ಗುಂಡಿ, ಕಲ್ಲೆಸೆದು ಹೊಲಸು ಮಾಡಿಕೊಳ್ಳಲ್ಲ- ಎಚ್.ವಿಶ್ವನಾಥ್

    ಪರಿಷತ್ ಚುನಾವಣೆ ವೇಳೆ ನನ್ನ ಹೆಸರು ಯಾಕೆ ತೆಗೆದರು ಅಂತ ಗೊತ್ತಿಲ್ಲ. ನನ್ನ ಬಗ್ಗೆ ಎಜಿಗೆ ಅನಾದರ ಯಾಕೆ, ಅಡ್ವೊಕೇಟ್ ಜನರಲ್ ನನ್ನ ಜೊತೆ ಮಾತಾಡಲಿಲ್ಲ. ಸರಿಯಾಗಿ ಕೆಲಸ ಮಾಡಲಿಲ್ಲ. ನಾಮನಿರ್ದೇಶನದ ಬಗ್ಗೆ ಅವರು ಸ್ಪಷ್ಟವಾಗಿ ಹೇಳಲಿಲ್ಲ ಎಂದು ಎಜಿ ಮೇಲೆ ಸಹ ವಿಶ್ವನಾಥ್ ಆರೋಪ ಮಾಡಿದ್ದಾರೆ. ಬಿಜೆಪಿ ಕೋರ್ ಕಮಿಟಿಗೆ ಜೂನ್ ನಲ್ಲಿ ಪರಿಷತ್ ಗೆ ನನ್ನ ಹೆಸರೂ ಸೇರಿಸಿ ನಾಲ್ವರ ಹೆಸರು ಕಳುಹಿಸಲಾಗಿತ್ತು. ಅಲ್ಲಿಂದ ಪಟ್ಟಿ ಬರುವಾಗ ನನ್ನ ಹೆಸರು ಇರಲಿಲ್ಲ. ದೆಹಲಿಯಲ್ಲಿ ನನ್ನ ಹೆಸರು ತೆಗೆಸಿದ್ದು ಯಾಕೆ ಎಂದು ಬಿಜೆಪಿ ನಾಯಕರಲ್ಲಿ ಕೇಳಿದೆ. ನಿಮ್ಮನ್ನು ನಾಮನಿರ್ದೇಶನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಆಣೆ ಪ್ರಮಾಣವಾದ 1 ವರ್ಷಕ್ಕೆ ನ್ಯಾಯದೇವತೆಯಿಂದ ವಿಶ್ವನಾಥ್‌ಗೆ ಶಿಕ್ಷೆ – ಸಾರಾ ಮಹೇಶ್‌

    ಇಂದು ಸಿಎಂ ಜೊತೆ ಮಾತನಾಡುತ್ತೇನೆ. ನನ್ನ ಬಗ್ಗೆ ಕಾಳಜಿ ತೋರಿ ಮಾತನಾಡಿದವರಿಗೆ ಧನ್ಯವಾದಗಳು. ನನಗೆ ತೀರ್ಪಿನ ಪ್ರತಿ ಸಿಕ್ಕ ಮೇಲೆ ವಕೀಲರ ಜೊತೆ ಚರ್ಚೆ ಮಾಡುತ್ತೇನೆ. ಬಳಿಕ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದರು.

    ನಿನ್ನೆ ಹೈಕೋರ್ಟ್ ನಲ್ಲಿ ಸಚಿವ ಸ್ಥಾನದ ಅನರ್ಹತೆ ಬಗ್ಗೆ ತೀರ್ಪು ಬಂದಿದೆ. ನೆಲದ ಕಾನೂನನ್ನು, ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇವೆ. ತೀರ್ಪನ್ನು ಗೌರವದಿಂದ ಕಾಣ್ತೇನೆ. ಮುಂದೆ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ. ರಾಜಕಾರಣವನ್ನು ಲಾಭ, ನಷ್ಟ, ಸೋಲು, ವ್ಯವಹಾರವಾಗಿ ತಗೊಂಡಿಲ್ಲ. ರಾಜಕೀಯವನ್ನು ಸಾಂಸ್ಕ್ರತಿಕ ಚಟುವಟಿಕೆಯಾಗಿ ತೆಗೆದುಕೊಂಡಿದ್ದೇನೆ. ಏನೋ ದೊಡ್ಡ ದುರಂತ ಆಗಿದೆ ಎಂದು ಭಾವಿಸಿಲ್ಲ. ವಿಶ್ವನಾಥ್ ಗೆ ಏನೂ ಆಗಿಲ್ಲ ಎಂದು ತಿಳಿಸಿದರು.

    ರಾಜ್ಯದಲ್ಲಿದ್ದ ರಾಕ್ಷಸ ರಾಜಕಾರಣ, ಕುಟುಂಬ ರಾಜಕಾರಣ ಕೊನೆಗೊಳಿಸಲು ಬಿಜೆಪಿಗೆ ಬಂದೆವು. ಕ್ಷಿಪ್ರ ಕ್ರಾಂತಿ ನಡೆದು ಬಿಜೆಪಿ ಸರ್ಕಾರ ಬಂತು. ನಾವು ಮಂತ್ರಿ ಆಗಬೇಕು ಎಂದು ಬಯಸಿ ಸರ್ಕಾರ ಬೀಳಿಸಲಿಲ್ಲ. ಕೆಲವರು ಅನಾವಶ್ಯಕವಾಗಿ ಮಾತನಾಡುತ್ತಿದ್ದಾರೆ ಎಂದರು.

  • ಸಾರಾ ಮಹೇಶ್ ಕೊಚ್ಚೆ ಗುಂಡಿ, ಕಲ್ಲೆಸೆದು ಹೊಲಸು ಮಾಡಿಕೊಳ್ಳಲ್ಲ- ಎಚ್.ವಿಶ್ವನಾಥ್

    ಸಾರಾ ಮಹೇಶ್ ಕೊಚ್ಚೆ ಗುಂಡಿ, ಕಲ್ಲೆಸೆದು ಹೊಲಸು ಮಾಡಿಕೊಳ್ಳಲ್ಲ- ಎಚ್.ವಿಶ್ವನಾಥ್

    ಬೆಂಗಳೂರು: ಮಾಜಿ ಸಚಿವ ಸಾ.ರಾ.ಮಹೇಶ್ ಕೊಚ್ಚೆ ಗುಂಡಿ, ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

    ಹೈ ಕೋರ್ಟ್ ತೀರ್ಪಿನ ಕುರಿತು ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಎಚ್.ವಿಶ್ವನಾಥ್ ವಿರುದ್ಧ ಕಿಡಿಕಾರಿ, ನ್ಯಾಯದೇವತೆ ಶಿಕ್ಷೆ ನೀಡಿದ್ದಾಳೆ ಎಂದು ಹೇಳಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಾರಾ ಮಹೇಶ್ ಕೊಚ್ಚೆ ಗುಂಡಿ, ಅವರ ಬಗ್ಗೆ ನಾನು ಮಾತಾಡಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ. ಪದೇ ಪದೇ ಕಲ್ಲೆಸೆದು ಶುಭ್ರ ಬಟ್ಟೆ ಕೊಳೆ ಮಾಡಿಕೊಳ್ಳುವುದಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಆಣೆ ಪ್ರಮಾಣವಾದ 1 ವರ್ಷಕ್ಕೆ ನ್ಯಾಯದೇವತೆಯಿಂದ ವಿಶ್ವನಾಥ್‌ಗೆ ಶಿಕ್ಷೆ – ಸಾರಾ ಮಹೇಶ್‌

    ಸಾರಾ ಮಹೇಶನ ಕೊಚ್ಚೆ ಗುಂಡಿಗೆ ಕಲ್ಲು ಎಸೆದು ಪದೇ ಪದೇ ಕೊಳೆ ಮಾಡಿಕೊಳ್ಳಲು ನಾನು ಇಷ್ಟಪಡುವುದಿಲ್ಲ. ಇದರಿಂದ ನನ್ನ ಶುಭ್ರ ವಸ್ತ್ರವನ್ನು ಕೊಳೆ ಮಾಡಿಕೊಳ್ಳಲು ನಾನು ತಯಾರಿಲ್ಲ. ಯಾರ ಬಗ್ಗೆ ಏನು ಮಾತನಾಡಬೇಕು ಎಂಬ ಅರಿವಿಲ್ಲದೆ, ಬಾಯಿಗೆ ಬಂದಂತೆ ಮಾತನಾಡುವವರಿಗೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

    ಇದೇ ವೇಳೆ ಹೈ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ತೀರ್ಪಿನ ಪ್ರತಿ ಕೈ ಸೇರಿದ ಮೇಲೆ ವಕೀಲರೊಂದಿಗೆ ಚರ್ಚಿ ಮುಂದಿನ ಕ್ರಮ ಕೂಗೊಳ್ಳುತ್ತೇವೆ. ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವ ಕುರಿತು ಸಹ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

  • ವಿಶ್ವನಾಥ್ ಪರ ಕಾನೂನು ಹೋರಾಟ ಮಾಡ್ತೀವಿ: ಆರ್.ಅಶೋಕ್

    ವಿಶ್ವನಾಥ್ ಪರ ಕಾನೂನು ಹೋರಾಟ ಮಾಡ್ತೀವಿ: ಆರ್.ಅಶೋಕ್

    ಚಾಮರಾಜನಗರ: ಸಚಿವರಾಗಲು ಎಚ್.ವಿಶ್ವನಾಥ್ ಅನರ್ಹ ಎಂದು ಹೈಕೋರ್ಟ್ ತೀರ್ಪು ನೀಡಿರುವುದು ದುರದೃಷ್ಟಕರವಾಗಿದ್ದು, ಮುಂದೆ ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವನಾಥ್ ಪರ ಬ್ಯಾಟಿಂಗ್ ಮಾಡಿದರು.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಾತನಾಡಿದ ಅವರು, ಎಚ್.ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ. ಅವರ ಪರವಾಗಿ ಪಕ್ಷ ಕೂಡ ನಿಲ್ಲುತ್ತದೆ. ವಿಶ್ವನಾಥ್ ಪರ ತೀರ್ಪು ಬರುತ್ತೆದೆ ಎಂಬ ಭರವಸೆ ಇತ್ತು ಎಂದು ತಿಳಿಸಿದರು. ಇದನ್ನೂ ಓದಿ: ವಿಶ್ವನಾಥ್‌ಗೆ ಹೈಕೋರ್ಟ್‌ ಶಾಕ್‌ – ಎಂಟಿಬಿ, ಶಂಕರ್‌ಗೆ ಬಿಗ್‌ ರಿಲೀಫ್

    ಹೋರಾಟ ನಡೆಸಲು ಈಗಾಗಲೇ ಕಾನೂನು ತಜ್ಞರ ಜೊತೆ ಸಹ ಸಮಾಲೋಚನೆ ನಡೆಸಿದ್ದೇವೆ. ವಿಶ್ವನಾಥ್ ಪರ ತೀರ್ಪು ಬರುತ್ತದೆ ಎಂಬ ಖುಷಿ ಇತ್ತು. ಆದರೆ 2023ರ ವರೆಗೆ ಮಂತ್ರಿಯಾಗಲು ಬರುವುದಿಲ್ಲ ಎಂಬ ನ್ಯಾಯಾಲಯದ ತೀರ್ಪು ನಿಜವಾಗ್ಲೂ ಬೇಸರ ತರಿಸಿದೆ ಎಂದರು.

    ವಿಶ್ವನಾಥ್ ಅವರನ್ನು ಮಂತ್ರಿ ಮಾಡಲು ಸಿಎಂ ಯಡಿಯೂರಪ್ಪ ಸಹ ಮನಸ್ಸು ಮಾಡಿದ್ದರು. ಈ ಸರ್ಕಾರ ಬರಲು ವಿಶ್ವನಾಥ್ ಕೂಡ ಕಾರಣವಾಗಿದ್ದು, ಅವರ ಪರ ಕಾನೂನು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

  • ಹಾಲಿ ಸಚಿವರನ್ನಿಟ್ಟುಕೊಂಡು ಹೋದ್ರೆ ಸಾರ್ವತ್ರಿಕ ಚುನಾವಣೆ ಗೆಲ್ಲೋಕಾಗಲ್ಲ: ವಿಶ್ವನಾಥ್

    ಹಾಲಿ ಸಚಿವರನ್ನಿಟ್ಟುಕೊಂಡು ಹೋದ್ರೆ ಸಾರ್ವತ್ರಿಕ ಚುನಾವಣೆ ಗೆಲ್ಲೋಕಾಗಲ್ಲ: ವಿಶ್ವನಾಥ್

    ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಹೋಗಬೇಕೆಂದರೆ ಹೊಸ ಮುಖಗಳು ಬೇಕು. ಹೀಗಾಗಿ ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

    ಹಾಲಿ ಸಚಿವರನ್ನಿಟ್ಟುಕೊಂಡು ಹೋದರೆ ಮುಂದಿನ ಸಾರ್ವತ್ರಿಕ ಚುನಾವಣೆ ಗೆಲ್ಲುವುದು ಕಷ್ಟ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹಾಲಿ ಸಚಿವರಿಗೆ ಎಚ್.ವಿಶ್ವನಾಥ್ ಟಾಂಗ್ ನೀಡಿದ್ದಾರೆ. ಉಪಚುನಾವಣೆ ಸಹಜವಾಗಿ ಸರ್ಕಾರದ ಪರವಾಗಿ ಬರುತ್ತದೆ. ಉಪಚುನಾವಣೆಗಳನ್ನು ಸರ್ಕಾರಗಳು ನಡೆಸುತ್ತವೆ. ಆದರೆ ಸಾರ್ವತ್ರಿಕ ಚುನಾವಣೆ ಪಕ್ಷ ನಡೆಸುತ್ತದೆ. ಹೀಗಾಗಿ ಹೊಸ ಮುಖಗಳು ಸಂಪುಟದೊಂದಿಗೆ ಹೋಗಬೇಕು. ಸಾರ್ವತ್ರಿಕ ಚುನಾವಣೆ ಗೆಲ್ಲಬೇಕಾದರೆ ಸಂಪುಟ ಪುನರ್ ರಚನೆಯಾಗಬೇಕಾಗುತ್ತದೆ ಎಂದು ವಿಶ್ವನಾಥ್ ಹೇಳಿದ್ದಾರೆ.

    ದೆಹಲಿಗೆ ತೆರಳಿದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ದೆಹಲಿಗೆ ಹೋಗಿರಲಿಲ್ಲ, ಉಜ್ಜೈನಿಗೆ ಹೋಗಿದ್ದೆ. ದೆಹಲಿಯಿಂದ ಕೋಲ್ಕತ್ತಾಗೆ ಹೋಗಿದ್ದೆ. ದೆಹಲಿ ಮಾರ್ಗದಲ್ಲಿ ಮಹಾಕಾಳಿ ದರ್ಶನಕ್ಕೆ ಹೋಗಿದ್ದೆ. ಆರ್.ಶಂಕರ್ ದೆಹಲಿಗೆ ಹೋಗಿದ್ದು ಗೊತ್ತಿಲ್ಲ. ನಾನು ಅವರ ಜೊತೆ ಹೋಗಲಿಲ್ಲ. ಮಹಾಕಾಳಿಗೆ ನನಗೆ ಒಳ್ಳೆಯದು ಮಾಡುವಂತೆ ಕೇಳಿಕೊಂಡಿದ್ದೇನೆ. ದೇವರಲ್ಲಿ ಬೇಡಿಕೊಳ್ಳೋದು ದೇಶಕ್ಕೆ ಒಳ್ಳೆಯದು ಮಾಡಲಿ ಅಂತ. ನಾವು ರಾಜಕಾರಣಿಗಳು ನಮಗೂ ಒಳ್ಳೆಯದು ಮಾಡು ಎಂದು ಸ್ವಾರ್ಥಕ್ಕೂ ಬೇಡಿಕೊಳ್ಳುತ್ತೇವೆ. ನಾನು ಸಚಿವನಾಗುವ ವಿಶ್ವಾಸ ಇದೆ. ನನ್ನ ಹಿರಿತನ, ತ್ಯಾಗಕ್ಕೆ ಬೆಲೆ ಸಿಗುತ್ತೆ ಎಂದು ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಶಾಸಕ ರೇಣುಕಾಚಾರ್ಯ ಮಾತನಾಡಿ, ಸಚಿವ ಸ್ಥಾನ ನೀಡಿ ಎಂದು ಒತ್ತಡ ಹಾಕಲ್ಲ. ಸಚಿವ ಸ್ಥಾನ ನೀಡಿದರೆ ಸಂತೋಷ. ಇಲ್ಲದಿದ್ದರೆ ಪಕ್ಷದ ಕೆಲಸ ಮಾಡುತ್ತೇವೆ. ನಮ್ಮ ಆದ್ಯತೆ ಕ್ಷೇತ್ರದ ಅಭಿವೃದ್ಧಿ. ಕ್ಷೇತ್ರದ ಅಭಿವೃದ್ಧಿ ಸಂಬಂಧ ಚರ್ಚೆಗೆ ಇಲ್ಲಿ ಸೇರಿದ್ದೆವು. ಇಲ್ಲಿ ಕಾರ್ಯ ತಂತ್ರ, ಒತ್ತಡ ಯಾವ ತಂತ್ರವೂ ಮಾಡಿಲ್ಲ. ರಮೇಶ್ ಜಾರಕಿಹೊಳಿ ಬೃಹತ್ ನೀರಾವರಿ ಸಚಿವರು. ಹೀಗಾಗಿ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಿದ್ದೇವೆ. ಇಲ್ಲೇ ಸಂತೃಪ್ತಿ ಯಾಗಿ ಊಟ ಮಾಡಿದೆವು. ಎಲ್ಲವನ್ನೂ ಭಗವಂತನ ಮೇಲೆ ಹಾಕಿ ಹೊರಟಿದ್ದೇವೆ ಎಂದರು.

    ಈ ಕುರಿತು ಶಾಸಕ ರಾಜುಗೌಡ ಪ್ರತಿಕ್ರಿಯಿಸಿದ್ದು, ರೇಣುಕಾಚಾರ್ಯ, ನಿರಾಣಿ, ಶಿವರಾಜಪಾಟೀಲ್, ಬೆಳ್ಳಿಪ್ರಕಾಶ್ ಜತೆ ಸಿಎಂ ಭೇಟಿ ಮಾಡಿದ್ದೆವು. ಈಗ ಸಚಿವ ರಮೇಶ್ ಜಾರಕಿಹೊಳಿ ಮನೆಯಲ್ಲಿ ಊಟಕ್ಕೆ ಸೇರಿದ್ದೆವು. ಸಚಿವ ಸ್ಥಾನದ ಬೇಡಿಕೆಯಿಟ್ಟಿಲ್ಲ, ನಾಳೆ ಸಚಿವ ಸಂಪುಟ ಸಭೆ ಇದೆ. ಕೆಲ ಕೆಲಸಗಳ ಬಗ್ಗೆ ಮಾತನಾಡಲು ಬಂದಿದ್ದವು. ಸಚಿವ ಸಂಪುಟದ ಬಗ್ಗೆ ನಾವು ಹೆಚ್ಚು ಒತ್ತುಕೊಟ್ಟಿಲ್ಲ. ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಸಚಿವ ಸ್ಥಾನ ಕೊಟ್ಟರೆ ಬೇಡ ಎನ್ನುವ ದೊಡ್ಡ ಗುಣವಿಲ್ಲ, ಸಚಿವ ಸ್ಥಾನಕ್ಕೆ ಈಗಾಗಲೇ ಅಪ್ಲಿಕೇಶನ್ ಕೊಟ್ಟಿದ್ದು, ಸಿಎಂ ವಿವೇಚನೆಗೆ ಬಿಡಲಾಗಿದೆ. ಇಂದು ಬೆಳಗ್ಗೆ ನಾವು ಆರು ಶಾಸಕರು ಸಿಎಂ ಭೇಟಿ ಮಾಡಿದ್ದೆವು. ಈಗಾಗಲೇ ಸಚಿವ ಸ್ಥಾನಕ್ಕೆ ಅರ್ಜಿ ಹಾಕಿದ್ದೇವೆ. ಆದರೆ ಸಿಎಂ ಮತ್ತು ಸರ್ಕಾರದ ಮೇಲೆ ಸಚಿವ ಸ್ಥಾನಕ್ಕೆ ಒತ್ತಡ ಹಾಕುತ್ತಿಲ್ಲ. ನಾಳೆ ಕ್ಯಾಬಿನೆಟ್ ಸಭೆ ಇದೆ. ನೀರಾವರಿ ಯೋಜನೆಗಳ ಬಗ್ಗೆ ಕೆಲ ವಿಚಾರ ಚರ್ಚೆ ಮಾಡಿದ್ದೇವೆ. ಬೇರೆ ಉದ್ದೇಶ ಏನೂ ಇಲ್ಲ, ಕೊರೊನಾದಿಂದ ರಾಜ್ಯದ ಸ್ಥಿತಿ ಸರಿಯಿಲ್ಲ. ಇಂಥ ಸಂದರ್ಭದಲ್ಲಿ ನಾವು ಸಚಿವ ಸ್ಥಾನಕ್ಕೆ ಒತ್ತಡ ಹಾಕುತ್ತಿಲ್ಲ. ಕೊರೊನಾಗೂ ಮುಂಚೆ ಕೆಲ ಸಚಿವರನ್ನು ಕೈಬಿಡಿ ಎಂದು ಸಿಎಂಗೆ ಮನವಿ ಮಾಡಿದ್ದೆವು. ಆದರೆ ಈಗ ಪರಿಸ್ಥಿತಿ ಬೇರೆ ಇದೆ. ಸಿಎಂ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸಿಎಂ ಭೇಟಿ ಮಾಡಿದ್ದಾಗ ಬದಲಾವಣೆ ಮಾಡಿ ಅವಕಾಶ ಕೊಡುವುದಾಗಿ ಭರವಸೆ ನೀಡಿದ್ದಾರೆ.

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ರಾಜುಗೌಡ ತಿರುಗೇಟು ನೀಡಿದ್ದು, ಸಿಎಂ ಬದಲಾವಣೆ ಇಲ್ಲ. ಮುಂದಿನ ಅವಧಿಯವರೆಗೂ ಯಡಿಯೂರಪ್ಪ ಸಿಎಂ ಎಂದು ಪ್ರಧಾನಿ ಮೋದಿ, ಜೆ.ಪಿ.ನಡ್ಡಾ ಹೇಳಿದ್ದಾರೆ. ಯಡಿಯೂರಪ್ಪ ಅವರೇ ಮುಂದಿನ ಎರಡೂವರೆ ವರ್ಷ ಸಿಎಂ ಆಗಿರುತ್ತಾರೆ. ಕೆಲವು ಸಚಿವರನ್ನು ತೆಗೆಯುತ್ತೇವೆ ಎಂದು ಸಿಎಂ ಹೇಳಿಕೆ ನೀಡಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.

    ಈ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಉಪಚುನಾವಣೆ ಬಳಿಕ ಎಲ್ಲರೂ ಕೂಡಿ ಸಂತೋಷದಿಂದ ಊಟ ಮಾಡಿದೆವು. ನಮ್ಮನೆಗೆ ಎಲ್ಲರೂ ಬಂದಿದ್ದರು. ಇದರಲ್ಲಿ ವಿಶೇಷತೆ ಏನೂ ಇಲ್ಲ. ಸಂಪುಟ ವಿಸ್ತರಣೆ ಸಿಎಂ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು. ಅವರ ನಿರ್ಧಾರಕ್ಕೆ ನಾವು ಬದ್ಧ, ಉಳಿದ ವಲಸಿಗರಿಗೆ ಸಚಿವ ಸ್ಥಾನ ಸಿಗುವ ಕುರಿತು ನಾನು ಏನೂ ಹೇಳಕ್ಕಾಗಲ್ಲ. ಇದುವರೆಗೆ ನಾವು ಹೇಳಿದ್ದೆಲ್ಲ ಆಗಿದೆ. ನಾನೊಬ್ಬ ಸಾಮಾನ್ಯ ಮನುಷ್ಯ, ನಾನು ಮತ್ತೊಂದು ಪವರ್ ಸೆಂಟರ್ ಅಲ್ಲ. ನಾನಾಯ್ತು, ನನ್ನ ಇಲಾಖೆ ಕೆಲಸ ಆಯ್ತು ಎಂದು ಕೆಲಸ ಮಾಡುತ್ತಿದ್ದೇನೆ ಎಂದರು.

  • ಹೊಗಳುಭಟ್ಟರಿಂದ ಸಿದ್ದರಾಮಯ್ಯ ದೂರ ಇರಬೇಕು: ಎಚ್. ವಿಶ್ವನಾಥ್

    ಹೊಗಳುಭಟ್ಟರಿಂದ ಸಿದ್ದರಾಮಯ್ಯ ದೂರ ಇರಬೇಕು: ಎಚ್. ವಿಶ್ವನಾಥ್

    ಮೈಸೂರು: ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಅವರಿಗೆ ಗೌರವ ಸಿಗುತ್ತಿಲ್ಲ. ಮೊದಲು ಅವರು ಹೊಗಳುಭಟ್ಟರಿಂದ ದೂರ ಇರಬೇಕು ಎಂದು ಎಚ್ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.

    ಡಿಕೆಶಿ ಮತ್ತು ಈಶ್ವರಪ್ಪ ಭಯ ಸಿದ್ದರಾಮಯ್ಯಗೆ ಸಾಕಷ್ಟು ಕಾಡುತ್ತಿದೆ. ಅವರಿಂದಲೇ ಅಧಿಕಾರ ಕಳೆದುಕೊಂಡಿದ್ದಾರೆ. ರಾಜ ಮಹಾರಾಜರು ಹೊಗಳುಭಟ್ಟರ ನಂಬಿ ಉಳಿದಿಲ್ಲ. ನಿಮಗೆ ಈಗಲೂ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಬಿಹಾರದಲ್ಲಿ ಕೊರೊನಾ ಲಸಿಕೆ ವಿಚಾರದ ಪ್ರಣಾಳಿಕೆ ಬಿಡುಗಡೆ ವಿಚಾರವನ್ನು ರಾಜಕೀಯಕ್ಕೆ ತರಬೇಡಿ. ವೋಟ್ ಹಾಕಿ ಗೆಲ್ಲಿಸಿದರೆ ಮಾತ್ರ ಲಸಿಕೆ ಕೊಡ್ತೀರಾ? ಸೋಲಿಸಿಬಿಟ್ಟರೆ ಜನರನ್ನ ಸಾಯಿಸಿ ಬಿಡ್ತಿರಾ?. ಯಾವುದೇ ಪಕ್ಷವಾಗಲಿ ಕೊರೊನಾ ವಿಚಾರ ರಾಜಕೀಯ ಚರ್ಚೆಗೆ ಬಳಸಿಕೊಳ್ಳಬಾರದು. ಇದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರೇ ನಿಮ್ಮ ಖಾತೆ ಹ್ಯಾಕ್ ಆಗಿದ್ಯಾ- ಕಟೀಲ್ ಪ್ರಶ್ನೆ

    ಇದೇ ವೇಳೆ ನಳಿನ್ ಕುಮಾರ್ ಕಟೀಲ್‍ರನ್ನ ಕಾಡುಮನುಷ್ಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಶ್ವನಾಥ್, ಕಾಡು ಮನುಷ್ಯ ಅಂದ್ರೆ ಅರಣ್ಯ ಸಂರಕ್ಷಕರಿಗೆ ಮಾಡುವ ಅಪಮಾನವಾಗಿದೆ. ಈಗ ಎಷ್ಟೋ ಜನ ನಾವು ಕಾಡು ಜನ ಅಂತ ಸರ್ಟಿಫಿಕೇಟ್ ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ರಾಜ್ಯಧ್ಯಾಕ್ಷನನ್ನ ಕಾಡುಮನುಷ್ಯ ಅನ್ನೋದು ಸರಿಯೇ ಎಂದು ಪ್ರಶ್ನಿಸಿದರು.

    ನೀವು ನಮ್ಮ ಮೈಸೂರಿನವರು ಭಾಷೆಯ ಮೇಲೆ ಹಿಡಿತ ನಿಮಗೆ ಇರಲಿ. ರಾಜಕೀಯ ಮುತ್ಸುದ್ದಿಯಾಗಿ ಬಳಸಿರುವ ಮಾತುಗಳನ್ನು ವಾಪಸ್ ಪಡೆಯಿರಿ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಎಂಎಲ್‍ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ

  • ಡ್ರಗ್ಸ್ ಮಾಫಿಯಾ- ಕುಮಾರಸ್ವಾಮಿ ಹೊಸ ಬಾಂಬ್

    ಡ್ರಗ್ಸ್ ಮಾಫಿಯಾ- ಕುಮಾರಸ್ವಾಮಿ ಹೊಸ ಬಾಂಬ್

    – ಡ್ರಗ್ಸ್ ದಂಧೆಯಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಶಾಮೀಲು

    ಬೆಂಗಳೂರು: ಡ್ರಗ್ಸ್ ದಂಧೆಯಲ್ಲಿ ರಾಜಕಾರಣಿಗಳು ಮಾತ್ರವಲ್ಲ, ಅಧಿಕಾರಿಗಳೂ ಕೂಡ ಭಾಗಿಯಾಗಿದ್ದಾರೆ. ಆದ್ದರಿಂದ ಈ ಕುರಿತು ಸೂಕ್ತ ತನಿಖೆ ಆಗಬೇಕು ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‍ಡಿಕೆ, ತುರುವೇಕೆರೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್, ಡ್ಯಾನ್ಸ್ ಬಾರ್ ಗಳ ಹಣದಿಂದ ನಮ್ಮ ಸರ್ಕಾರ ತೆಗೆಯಲು ಬಳಸಿದ್ದರು ಎಂದು ನಾನು ಹೇಳಿದ್ದೆ. ನಾನು ಮೈತ್ರಿ ಸರ್ಕಾರದ ಸಿಎಂ ಆದ ಬಳಿಕ ಕ್ರಿಕೆಟ್ ಬೆಟ್ಟಿಂಗ್ ಹಾಗೂ ಡ್ರಾನ್ಸ್ ಬಾರ್ ಸೇರಿದಂತೆ ಅಕ್ರಮ ದಂಧೆಗಳನ್ನು ಮುಚ್ಚಬೇಕು, ಕ್ರಮ ಆಗಬೇಕು ಎಂದು ಸೂಚನೆ ಕೊಟ್ಟಿದೆ. ನನ್ನ ಆದೇಶದ ಮೇರೆಗೆ ಹಲವು ಪ್ರದೇಶಗಳಲ್ಲಿ ರೇಡ್ ಆಗಿತ್ತು. ಆ ವೇಳೆ ರೇಡ್ ಆದ ಕೂಡಲೇ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದ ವ್ಯಕ್ತಿ ಅಂದು ಶ್ರೀಲಂಕಾಗೆ ಓಡಿ ಹೋಗಿದ್ದ.

    ವಿಧಾನಸೌಧದಲ್ಲಿ ನಾನು ಆ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದ ವ್ಯಕ್ತಿಯ ಫೋಟೋವನ್ನು ತೋರಿಸಿದ್ದೇನೆ. ಆ ಬಳಿಕ ಆತ ಜಾಮೀನು ಪಡೆದು ವಾಪಸ್ ಆಗಿದ್ದ. ಆತನೇ ಮುಂಬೈಗೆ ಹಾರಿ ಹೋದ ಶಾಸಕರೊಂದಿಗೆ ಇದ್ದ, ಆ ವಿಡಿಯೋ ಎಲ್ಲರ ಬಳಿಯೂ ಇದೆ ಎಂದರು.

    ನನಗೆ ಮದ, ಅಧಿಕಾರದ ಮತ್ತು ಬಂದಿಲ್ಲ. ವಿಶ್ವನಾಥ್ ಬಗ್ಗೆ ಚರ್ಚೆ ಮಾಡಿದರೆ ನನ್ನ ಬಗ್ಗೆ ನಾನೇ ಡಿ ಗ್ರೇಡ್ ಮಾಡಿಕೊಂಡಂತೆ. ಆ ವ್ಯಕ್ತಿಯ ನಡವಳಿಕೆ, ಅಭಿರುಚಿ ನನಗೆ ಗೊತ್ತಿದೆ. ಅವತ್ತೇ ನಾನು ಹೇಳಿದ್ದೆ, ನಾನು ಅವತ್ತು ಮತ್ತಿನಲ್ಲಿ ಮಲಗಿರಲಿಲ್ಲ. 25 ಸಾವಿರ ಕೋಟಿ ರೂ. ಸಂಗ್ರಹಿಸಿ ರೈತರ ಸಾಲ ಮನ್ನಾ ಮಾಡಿದ್ದೆ. ಕೈಗಾರಿಕಾ ಕ್ಲಸ್ಟರ್ ಗೆ ಚಾಲನೆ ನೀಡಿದ್ದೆ. ಇಂದು ಮೋದಿ ಅವರು ಆತ್ಮ ನಿರ್ಭರ ಭಾರತ ಎಂದು ಮಾಡುತ್ತಿದ್ದಾರೆ. ನಾನು ಕಡಿಮೆ ಅವಧಿಗೆ ರಾಜ್ಯದ ಮುಖ್ಯಮಂತ್ರಿ ಆಗಿದ್ದರೂ, ಕಳ್ಳ ಭಟ್ಟಿ, ಲಾಟರಿ, ಸಾರಾಯಿ ನಿಲ್ಲಿಸಿದ್ದೇನೆ. ರಾಜ್ಯಕ್ಕೆ ನನ್ನ ಕೊಡುಗೆ ಅಪಾರವಿದೆ ಎಂದು ತಿಳಿಸಿದರು.

    ಡಾನ್ಸ್ ಬಾರ್, ನೈಟ್ ಬಾರ್ ಗಳಲ್ಲಿ ಡ್ರಗ್ ದಂಧೆಯ ಮೂಲವಿದೆ. ಲಿ ಮೆರಿಡಿಯನ್ ಹೋಟೆಲ್ ನಲ್ಲಿ ಬೆಳಗ್ಗೆ 4 ವರಗೆ ಪಾರ್ಟಿ ನಡೆಯುತ್ತಿತ್ತು. ವಿಠ್ಠಲ್ ಮಲ್ಯ ರೋಡ್ ನಲ್ಲಿ ಮೈಕ್ರೋ ಬ್ರೆವರೀಸ್ ಹೊಟೇಲ್ ಹಿಂದೆಯೂ ಪಾರ್ಟಿಗಳು ನಡೆಯುತ್ತಿತ್ತು. ಇಲ್ಲಿ ಬಂಡವಾಳ ಹೂಡಿಕೆ ಮಾಡಿರುವವರು ಯಾರು? ಈ ಬಗ್ಗೆ ಸರ್ಕಾರ ತನಿಖೆ ಮಾಡಲಿ. ಸರ್ಕಾರದಲ್ಲಿ ಇರುವವರು ಡ್ರಗ್ಸ್ ದಂಧೆಯಲ್ಲಿ ತುಂಬಾ ಜನರಿದ್ದಾರೆ. ಪ್ರಕರಣದ ತಾರ್ಕಿಕ ಅಂತ್ಯ ಕಾಣಬೇಕಾದರೆ ಸೂಕ್ತ ತನಿಖೆ ಆಗಬೇಕು. ಸರಿಯಾದ ತನಿಖೆ ಆಗದೇ ಹೋದರೆ ಈ ಪ್ರಕರಣವೂ ಕೋಲ್ಡ್ ಸ್ಟೋರೇಜ್‍ಗೆ ಹೋಗುತ್ತೆ ಎಂದು ಎಚ್ಚರಿಸಿದರು.

    ಸದ್ಯ ಕೇವಲ ಕೆಲ ನಟ-ನಟಿಯರ ಮೇಲೆ ದಾಳಿ ಆಗಿದೆ. ಅವರು ಮಾತ್ರ ಡ್ರಗ್ಸ್ ದಂಧೆಯಲ್ಲಿದ್ದಾರಾ? ಇನ್ನೂ ಅನೇಕ ಜನ ಇದ್ದಾರೆ. ಈ ಬಗ್ಗೆ ತನಿಖೆ ಆಗಬೇಕು. ರಾಜಕಾರಣಿಗಳು ಮಾತ್ರವಲ್ಲ ಅಧಿಕಾರಿಗಳು ದಂಧೆಯಲ್ಲಿದ್ದಾರೆ ಎಂದು ಆರೋಪಿಸಿದರು.

    ಡ್ರಗ್ಸ್ ಬಗ್ಗೆ ಸದನಲ್ಲಿ ಚರ್ಚೆ ಮಾಡುವುದಿಲ್ಲ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಜನರ ಪರವಾದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಡಿಜೆ ಹಳ್ಳಿ ಗಲಭೆ ಬಗ್ಗೆ ಚರ್ಚೆ ಮಾಡಿ ಪ್ರಯೋಜನವೂ ಇಲ್ಲ. ಶಾಸಕರೇ ಏಕೆ ಆಯ್ತು ಅಂತ ಹೇಳಿದ್ದಾರೆ. ಈ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖೆ ಅಂತ ಹೇಳಿದ್ದಾರೆ, ಆದರೆ ತನಿಖೆ ಎಲ್ಲಿಗೆ ಬಂತು. ಕಾಂಗ್ರೆಸ್ ಪಕ್ಷದವರೇ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜಗತ್ ಜಾಹೀರಾಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಏನು ಹೇಳುತ್ತಾರೆ. ಆದ್ದರಿಂದ ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡಿ ಏನು ಪ್ರಯೋಜನ. ಸರ್ಕಾರ ಹೋಗುತ್ತಿರುವ ಮಾರ್ಗ ನೋಡಿದ್ರೆ ದೇವರೆ ಸರ್ಕಾರವನ್ನು ಕಾಪಾಬೇಕು. ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ ದೇವರೆ ಕಾಪಾಡಬೇಕು ಅಷ್ಟೇ ಎಂದರು.

  • ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ: ವಿಶ್ವನಾಥ್

    ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ: ವಿಶ್ವನಾಥ್

    -ಇಂದ್ರಜಿತ್ ಲಂಕೇಶ್‍ರನ್ನು ಗೇಲಿ ಮಾಡುತ್ತಿದ್ದೇವೆ

    ಬೆಂಗಳೂರು: ವಿಧಾನಸಭಾ ಅಧಿವೇಶನ ಆರಂಭಕ್ಕೆ ಮುನ್ನವೇ ಸಂಪುಟ ಪುನಾರಚನೆ ಆಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಇದೇ ವೇಳೆ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವನಾಥ್ ಅವರು, ನಾನು ಪರಿಷತ್ ಸದಸ್ಯ, ಆದ್ದರಿಂದ ನಾನು ಕೂಡ ಸಚಿವ ಸ್ಥಾನದ ಆಂಕಾಕ್ಷಿ ಎಂದು ತಿಳಿಸಿದರು.

    ಇದೇ ವೇಳೆ ಡ್ರಗ್ಸ್ ಮಾಫಿಯಾ ಕೊರೊನಾದಂತೆ ಇಡೀ ಜಗತ್ತನ್ನು ಆವರಿಸಿಕೊಂಡಿದೆ. ಪಾಕಿಸ್ತಾನ ಭಾರತವನ್ನು ಹಾಳು ಮಾಡಲು ಅಮೃತಸರಕ್ಕೆ ಡ್ರಗ್ಸ್ ಸಪ್ಲೈ ಮಾಡಿ ಹೇಗೆ ಯುವಕರನ್ನು ಹಾಳುಮಾಡುತ್ತಿದೆ ಎಂಬುವುದು ಗೊತ್ತಿದೆ. ಪಂಜಾಬ್ ರಾಜ್ಯ ಡ್ರಗ್ಸ್ ನಿಂದ ಏನಾಗುತ್ತಿದೆ ಎಂಬುವುದು ಗೊತ್ತಿದೆ. ನಮ್ಮಲ್ಲಿ ಡ್ರಗ್ಸ್ ಎಲ್ಲಿಂದ ಬರುತ್ತದೆ, ಯಾರು ಇದನ್ನು ಉಪಯೋಗಿಸುತ್ತಿದ್ದಾರೆ ಎಂಬುದು ಪೊಲೀಸರಿಗೆ ಗೊತ್ತಿದೆ. ಆದರೆ ಸೆಲೆಬ್ರಿಟಿಗಳು ಇದನ್ನು ಬಳಕೆ ಮಾಡುವ ಮಟ್ಟಕ್ಕೆ ಬಂದಿದ್ದಾರೆ. ಈ ಬಗ್ಗೆ ಸೆಲೆಬ್ರಿಟಿ ಅವರೇ ರಿವೀಲ್ ಮಾಡಿದ್ದರು. ಆದರೆ ನಾವು ಅವರನ್ನು ಗೇಲಿ ಮಾಡುತ್ತಿದ್ದೇವೆ. ಯಾರೋ ಒಬ್ಬರನ್ನು ಬಂಧನ ಮಾಡುವುದರಿಂದ ಏನು ಆಗಲ್ಲ. ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಿದರೇ ಮಾತ್ರ ಇದಕ್ಕೆ ಬ್ರೇಕ್ ಹಾಕಲು ಸಾಧ್ಯ ಎಂದರು.

    ಇತ್ತ ಸಂಪುಟ ಪುನರ್ ರಚನೆ ಸಂಬಂಧ ಚಟುವಟಿಕೆಗಳು ಚುರುಕು ಪಡೆದಿದೆ. ಸಿಎಂ ಯಡಿಯೂರಪ್ಪ ಅವರು ನಿನ್ನೆಯೇ ಹಿರಿಯ ಸಚಿವರೊಂದಿಗೆ ಸಭೆ ಕೂಡ ನಡೆಸಿದ್ದರೆ. ಸಭೆಯಲ್ಲಿ ಯಾರನ್ನು ಕೈಬಿಡಬೇಕು, ಅವರನ್ನು ಹೇಗೆ ಒಪ್ಪಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

  • ಡ್ರಗ್ಸ್ ಜಾಲ ಬೆಳೆಸಿಕೊಂಡು ಬಂದಿರುವುದು ನಾವೇ: ಎಚ್.ವಿಶ್ವನಾಥ್

    ಡ್ರಗ್ಸ್ ಜಾಲ ಬೆಳೆಸಿಕೊಂಡು ಬಂದಿರುವುದು ನಾವೇ: ಎಚ್.ವಿಶ್ವನಾಥ್

    – ಹ್ಯಾರಿಸ್ ಮಗನ ಮೇಲೆ ವಿಶ್ವನಾಥ್ ಗುಮಾನಿ
    – ಪೊಲೀಸರಿಗೆ ಎಲ್ಲಾ ಗೊತ್ತಿದ್ದರೂ ಹೇಳುವ ಸ್ಥಿತಿಯಲಿಲ್ಲ

    ಮೈಸೂರು: ಡ್ರಗ್ಸ್ ಮಾಫಿಯಾಗೆ ಪೊಲೀಸ್, ಚಿತ್ರರಂಗ, ರಾಜಕಾರಣ ಥಳಕು ಹಾಕಿಕೊಂಡಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳ ಡ್ರಗ್ಸ್ ನಂಟಿನ ಬಗ್ಗೆ ಮಾಜಿ ಸಚಿವ ಎಚ್ ವಿಶ್ವನಾಥ್ ಮಾತನಾಡಿ, ಶಾಸಕ ಹ್ಯಾರಿಸ್ ಹಾಗೂ ಕಳಕಪ್ಪಬಂಡಿ ಪುತ್ರರ ಹೆಸರನ್ನು ಉದಾಹರಣೆಯಾಗಿ ನೀಡಿದ್ದಾರೆ.

    ಈ ಕುರಿತು ಮೈಸೂರಲ್ಲಿ ಮಾತನಾಡಿದ ಎಚ್.ವಿಶ್ವನಾಥ್, ಡ್ರಗ್ಸ್ ಜಾಲ ಬೆಳೆಸಿಕೊಂಡು ಬಂದಿರುವುದು ನಾವೇ. ರಾಜಕಾರಣಿಗಳ ಶ್ರೀಮಂತಿಕೆ, ಅಧಿಕಾರಿಗಳ ಶ್ರೀಮಂತಿಕೆ, ಚಿತ್ರರಂಗದ ಶ್ರೀಮಂತಿಕೆಯಿಂದ ಇದು ಹೆಚ್ಚಾಗಿದೆ. ಶಾಸಕ ಹ್ಯಾರೀಸ್ ಪುತ್ರ, ಶಾಸಕ ಕಳಕಪ್ಪ ಬಂಡಿ ಪುತ್ರರ ಹೆಸರು ಈ ವಿಚಾರದಲ್ಲಿ ಬಹಿರಂಗಗೊಂಡಿದೆ ಎಂದು ಹೇಳಿದರು.

    ಡ್ರಗ್ಸ್ ದಂಧೆ ಮಾಡುವವರು ಪ್ರಭಾವಿಯಾಗಿಲ್ಲ. ಅದಕ್ಕೆ ರಕ್ಷಣೆ ಕೊಡುವವರು ಪ್ರಭಾವಿಯಾಗಿದ್ದಾರೆ. ಇದು ಸರಿಯಲ್ಲ ಅದು ಯಾರೇ ಆಗಿದ್ದರೂ ದಂಡನೆ ಆಗಲೇಬೇಕು. ನಮ್ಮ ಮನೆಯ ಮಕ್ಕಳಾಗಿದ್ದರೂ ಸರಿಯೇ ಬಹಿರಂಗವಾಗಲೇಬೇಕು ಎಂದು ಆಗ್ರಹಿಸಿದ್ದರು.

    ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಬಹಳ ವರ್ಷದಿಂದ ನಡೆದು ಬರುತ್ತಿದೆ. ಯಾವುದೇ ಸರ್ಕಾರವನ್ನು ನಾವು ಬೊಟ್ಟು ಮಾಡಬಾರದು. ಇದು ನಿನ್ನೆ ಮೊನ್ನೆ ಪ್ರಕರಣ ಅಲ್ಲ, ನಮಗೆ ಅರಿವು ಇಲ್ಲದೆ ನಾವೇ ಬೆಳೆಸುಕೊಂಡು ಬಂದಿದ್ದೇವೆ. ಸೆಲೆಬ್ರಿಟಿಗಳ ಒಳಗೆ ಹರಡಿರೋ ದಂಧೆಯನ್ನು ಒಬ್ಬ ಸೆಲೆಬ್ರಿಟಿಯೇ ಬಹಿರಂಗ ಮಾಡಿದ್ದು ವಿಶೇಷ ಹಾಗೂ ಸೋಜಿಗ. ಪೊಲೀಸ್ ಇಲಾಖೆ ಮಾಡಬೇಕಿದ್ದ ಕೆಲಸವನ್ನು ಆ ಸೆಲೆಬ್ರಿಟಿ ಮಾಡಿದ್ದಾನೆ. ಪೊಲೀಸರು ಈಗ ತಲೆಬಾಗಿ ಸಮಾಜದ ಮುಂದೆ ನಿಲ್ಲುವ ಪರಿಸ್ಥಿತಿಗೆ ಬಂದಿದ್ದಾರೆ. ಆದರೆ ಇಂತಹ ಗಂಭೀರ ಸಮಸ್ಯೆಯನ್ನು ನಾವು ಎಂಜಾಯ್ ಮಾಡುತ್ತಿದ್ದೇವೆ. ಇಂತಹ ದಂಧೆಗಳ ಬಗ್ಗೆ ಪೊಲೀಸರಿಗೆ ಗೊತ್ತಿದ್ದರೂ ಸಹ ಅವರು ಹೇಳುವ ಸ್ಥಿತಿಯಲ್ಲಿ ಇಲ್ಲ. ಏಕೆಂದರೆ ಸ್ಥಳದ ರಾಜಕಾರಣ ಆ ರೀತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

    ಇದೇ ವೇಳೆ ಸೆಪ್ಟೆಂಬರ್ 8 ರಂದು ದಸರಾ ಉನ್ನತ ಮಟ್ಟದ ಮೊದಲ ಸಭೆ ನಡೆಯಲಿದೆ. ಬೆಂಗಳೂರಿನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಮೈಸೂರಿನ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ಈ ಬಾರಿಯ ದಸರಾ ಹೇಗೆ ನಡೆಸಬೇಕು ಹಾಗೂ ಜಂಬೂಸವಾರಿ ನಡೆಸಬೇಕೋ ಬೇಡವೋ ಎಂಬುದರ ಕುರಿತು ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

    ಆರ್‍ಎಸ್‍ಎಸ್ ಕಚೇರಿಗೆ ಭೇಟಿ: ಇಂದು ಮೊದಲ ಬಾರಿಗೆ ಮೈಸೂರಿನ ಆರ್‍ಎಸ್‍ಎಸ್ ಕಚೇರಿಗೆ ಹಳ್ಳಿಹಕ್ಕಿ ವಿಶ್ವನಾಥ್ ಭೇಟಿ ನೀಡಿ ಕುತೂಹಲ ಮೂಡಿಸಿದರು. ನಗರದ ಬಲ್ಲಾಳ್ ವೃತ್ತದ ಬಳಿ ಇರುವ ಮಾಧವ ಕೃಪ ಕಚೇರಿಯಲ್ಲಿ ಆರ್‍ಎಸ್‍ಎಸ್ ಹಿರಿಯರ ಜೊತೆ ಮಾತುಕತೆ ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದರು.

  • ‘ಬಾಂಬೆ ಡೇಸ್’ನಲ್ಲಿ ಹಲವು ಸತ್ಯ ಸ್ಫೋಟ- ಎಚ್.ವಿಶ್ವನಾಥ್

    ‘ಬಾಂಬೆ ಡೇಸ್’ನಲ್ಲಿ ಹಲವು ಸತ್ಯ ಸ್ಫೋಟ- ಎಚ್.ವಿಶ್ವನಾಥ್

    – ಯಾರೇ ವಿರೋಧಿಸಿದ್ರೂ ಪುಸ್ತಕ ಬಿಡುಗಡೆ ನಿಲ್ಲಲ್ಲ

    ಮೈಸೂರು: ಮಾಜಿ ಸಚಿವ ಎಚ್.ವಿಶ್ವನಾಥ್ ‘ಬಾಂಬೆ ಡೇಸ್’ ಎಂಬ ಪುಸ್ತಕ ಬರೆಯುತ್ತಿದ್ದಾರೆ. ಮೈತ್ರಿ ಸರ್ಕಾರ ಪತನದ ಕುರಿತು ಪುಸ್ತಕ ಇದ್ದಾಗಿದೆ. ಹೀಗಾಗಿ ಅನೇಕ ಸತ್ಯಗಳು ಸ್ಫೋಟಗೊಳ್ಳಲಿವೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಇದಕ್ಕೆ ಯಾರ ಪಾತ್ರವೇನು. ಏನೆಲ್ಲಾ ಘಟನೆಗಳು ನಡೆದವು ಎಂಬ ವಿಚಾರವನ್ನು ಬಾಂಬೆ ಡೇಸ್ ಪುಸ್ತಕದಲ್ಲಿ ಬರೆಯುತ್ತೇನೆ ಎಂದರು.

    2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರು ಸೇರಿ ಮಾಜಿ ಮುಖ್ಯಮಂತ್ರಿ ಧರಮ್ ಸಿಂಗ್ ಅವರ ಸರ್ಕಾರವನ್ನು ಪತನಗೊಳಿಸಿದ್ದರು. ಅಂದು ಮತ್ತೊಂದು ಸರ್ಕಾರ ರಚನೆ ಮಾಡಿದರು. ಅದರಂತೆ ಈಗ ನಡೆದ ರಾಜಕೀಯ ಕ್ರಾಂತಿಯನ್ನು ಸಾಹಿತಿಯಾಗಿ ಜನರಿಗೆ ತಿಳಿಸುವ ಕೆಲಸ ಮಾಡುತ್ತೇನೆ. 17 ಜನ ಶಾಸಕರು ಬಿಜೆಪಿಗೆ ಸೇರಿದರು ಎನ್ನುವುದನ್ನು ತೆರೆದಿಡುತ್ತೇನೆ ಎಂದು ತಿಳಿಸುತ್ತೇನೆ.

    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಶ್ರಮಿಸಿದ ಎಲ್ಲರ ಹೆಸರನ್ನು ಯಥಾವತ್ತಾಗಿ ಬರೆಯುತ್ತೇನೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಪಾರದರ್ಶಕವಾಗಿ ರಾಜಕಾರಣ ಮಾಡಿದ್ದೇನೆ. ಹೀಗಾಗಿ ಯಾವುದೇ ಹೆಸರು, ವಿಚಾರವನ್ನು ಮುಚ್ಚಿಡುವ ಮಾತೇ ಇಲ್ಲ ಎಂದು ತಿಳಿಸಿದರು.

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನದ ಮುಹೂರ್ತ ನಿಗದಿ ಮಾಡಿದ್ದು ಯಾರು? ಎಲ್ಲೆಲ್ಲಿ ಸಭೆ ನಡೆದವು, ಸಭೆಯಲ್ಲಿ ಇದ್ದವರು ಯಾರು ಎಂಬದನ್ನು ಹೆಸರು ಸಮೇತ ಬರೆಯುತ್ತೇನೆ. ಕೆಲವೇ ವಾರಗಳಲ್ಲಿ ಅದರ ಕೆಲವು ಅಧ್ಯಾಯಗಳನ್ನು ಮಾಧ್ಯಮದವರ ಜೊತೆ ಹಂಚಿಕೊಳ್ಳುತ್ತೇನಿ. ಈ ಪುಸ್ತಕ ವಿವಾದವಾದರೆ ಅದಕ್ಕೆ ನಾನು ಹೊಣೆಯಲ್ಲ. ಸತ್ಯ ಹೇಳುವುದಷ್ಟೆ ನನ್ನ ಕೆಲಸ. ಯಾರೇ ವಿರೋಧ ಮಾಡಿದರು ಈ ಪುಸ್ತಕ ಬಿಡುಗಡೆ ನಿಲ್ಲುವುದಿಲ್ಲ. ಈ ಪುಸ್ತಕದಿಂದ ಸರ್ಕಾರಕ್ಕೆ ಸಮಸ್ಯೆ ಆಗಲ್ಲ ಎಂದು ವಿಶ್ವನಾಥ್ ಹೇಳಿದರು.