Tag: ಎಚ್.ಡಿ. ದೇವೇಗೌಡ

  • ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ

    ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ

    – ಮೈತ್ರಿ ವೇಳೆ ಸಿಎಂ ಹುದ್ದೆಯ ಮಾತುಕತೆ ಈಗ ಬಹಿರಂಗ
    – ಕೈ ನಾಯಕರ ವಿರುದ್ಧವೇ ಎಚ್‍ಡಿಡಿ ಆರೋಪ

    ಕಲಬುರಗಿ: ಮಲ್ಲಿಕಾರ್ಜುನ ಖರ್ಗೆಯವರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಸಿಎಂ ಪಟ್ಟ ತಪ್ಪಿಸಿದರು ಎನ್ನುವ ಸ್ಫೋಟಕ ವಿಚಾರವನ್ನು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಬಹಿರಂಗ ಪಡಿಸಿದ್ದಾರೆ.

    ನಾನು ಖರ್ಗೆಯವರನ್ನು ಸಿಎಂ ಮಾಡಲು ಹೇಳಿದೆ. ಆದರೆ ಸೋನಿಯಾ ಗಾಂಧಿ ಖರ್ಗೆ ಬೇಡ ಎಂದು ಹೇಳಿದರು. ಹೀಗಾಗಿ ಕುಮಾರಸ್ವಾಮಿ ಸಿಎಂ ಆಗಿ ಆಯ್ಕೆಯಾದರು ಎಂದು ಸಿಎಂ ಆಯ್ಕೆ ಗುಟ್ಟನ್ನು ಮಾಜಿ ಪ್ರಧಾನಿ ಎಚ್‍ಡಿಡಿ ಬಿಚ್ಚಿಟ್ಟಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ರಾಹುಲ್ ಗಾಂಧಿಯವರನ್ನು ಕಳುಹಿಸಿ ನಿಮ್ಮ ಮಗ ಮತ ತೆಗೆದುಕೊಳ್ಳಬೇಕು ಎಂದು ನಾವು ಹೇಳಿದ್ದೆವು. ಅಲ್ಲದೆ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡಿ ಎಂದು ಸಹ ಹೇಳಿದ್ದೆವು. ಆದರೆ ಕಾಂಗ್ರೆಸ್ ಹೈಕಮಾಂಡ್ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಹೇಳಿತು. ಹೈಕಮಾಂಡ್ ಒಪ್ಪಿದರೆ ಸಿಎಂ ಆಗುತ್ತೇನೆ ಎಂದು ಖರ್ಗೆ ಹೇಳಿದ್ದರು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ಟಿಕೆಟ್ ಹಂಚುವ ವಿಚಾರದಲ್ಲಿ ಕಾಂಗ್ರೆಸ್ ಅವರಲ್ಲೇ ಗೊಂದಲ ಇದೆ. ನನಗೆ ಈಗಲೂ ನಂಬಿಕೆ ಇದೆ ಬಿಜೆಪಿ ಸರ್ಕಾರಕ್ಕೆ ಅಪಾಯ ಇಲ್ಲ. ಏಕೆಂದರೆ ಕಾಂಗ್ರೆಸ್ ಜೆಡಿಎಸ್ ಒಂದಾಗುವುದಿಲ್ಲ. ಹೀಗಾಗಿ ಬಿಜೆಪಿ ಸರ್ಕಾರಕ್ಕೆ ಅಪಾಯವಿಲ್ಲ ಎಂದರು.

    ದತ್ತಾತ್ರೇಯ ದೇವಸ್ಥಾನಕ್ಕೆ ಹೋಗಬೇಕು ಎಂದು ಕಲಬುರಗಿಗೆ ಬಂದಿದ್ದೇನೆ. ಇಲ್ಲಿ ಒಂದು ಕಾಲದಲ್ಲಿ ನಮ್ಮ ಶಕ್ತಿ ಬಹಳ ಇತ್ತು. ದುರಂತ ಅಂದರೆ ಈಗ ನಮ್ಮ ಶಕ್ತಿ ಕುಂದಿದೆ. ಹೀಗಾಗಿ ಜನ ಶಕ್ತಿ ಕೊಟ್ಟರೆ ಮತ್ತೆ ಪಕ್ಷ ಕಟ್ಟುತ್ತೇನೆ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಅಸ್ತಿತ್ವ ಉಳಿಸಿಕೊಂಡಿದೆ. ನಾನು ಈಗ ಸೋತಿದ್ದೇನೆ, 13ನೇ ಪಾರ್ಲಿಮೆಂಟ್‍ಗೆ ನಿಲುವುದಿಲ್ಲ ಎಂದು ಹೇಳಿ ಹೊರಗಡೆ ಬಂದಿದ್ದೆ. ಆದರೆ ವಿಧಿ ಎಳೆದುಕೊಂಡು ತುಮಕೂರಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸುವಂತಾಯಿತು. ಈ ಮೂಲಕ ಮೂರನೇ ಸೋಲು ಕಂಡೆ, ಸೋತರೂ ಈ ವಯಸ್ಸಿನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿ ಭಾವುಕರಾದರು.

    ಹೋರಾಟದಿಂದ ಈ ಪಕ್ಷ ಉಳಿದಿದೆ ಮತ್ತು ಬೆಳೆದಿದೆ. ಹೀಗಾಗಿ ಹೋರಾಡಲು ಇನ್ನಷ್ಟು ಶಕ್ತಿ ಕೊಡು ಎಂದು ದತ್ತಾತ್ರೆಯನ ಪಾದದ ಮೊರೆ ಹೋಗಿದ್ದೇನೆ. ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳಿಗೂ ಅಭ್ಯರ್ಥಿ ಹಾಕುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಎಲ್ಲ ಕಡೆ ನಮಗೆ ಪ್ರಬಲ ಅಭ್ಯರ್ಥಿಗಳಿಲ್ಲ. ನಾಲ್ಕು-ಐದು ಕಡೆಗಳಲ್ಲಿ ನಮ್ಮ ಪಕ್ಷ ಹೋರಾಟ ಮಾಡಲಿದೆ. ಉಳಿದ ಕ್ಷೇತ್ರಗಳಲ್ಲಿ ಸಹ ನಮ್ಮ ಅಭ್ಯರ್ಥಿಗಳನ್ನು ಹಾಕುತ್ತೆವೆ. ಗೆಲುವು ಸೋಲು ನಮ್ಮ ಕೈಯಲ್ಲಿ ಇಲ್ಲ ಮತದಾರರು ಅದನ್ನು ನಿರ್ಧರಿಸುತ್ತಾರೆ. ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುತ್ತಿದೆ. ಹೀಗಾಗಿ ಎಲ್ಲ ಕಡೆ ಸಂಚರಿಸಿ ಇಲ್ಲಿಗೆ ಬಂದಿದ್ದೇನೆ. ಕಾಂಗ್ರೆಸ್, ಬಿಜೆಪಿ ಎರಡೂ ಸ್ಥಳೀಯ ಚುನಾವಣೆಯಲ್ಲಿ ನಮಗಿಂತ ಮುಂದಿದ್ದಾರೆ ಎಂದರು.

    ಮೈತ್ರಿ ಸರ್ಕಾರ ಹೋಗಲು ಕಾರಣ ಏನು ಎಂದು ವಿಶ್ಲೇಷಣೆ ಮಾಡುವುದಿಲ್ಲ. ಬಿಜೆಪಿ ಸಹ ಈಗ ವಾಮಮಾರ್ಗದಿಂದ ಅಧಿಕಾರ ಹಿಡಿದಿದೆ. 5-6 ತಿಂಗಳು ಅಧಿಕಾರಕ್ಕಾಗಿ ಇವರು ಬಂದಿದ್ದಾರೆ. ಸದ್ಯ ಬಿಜೆಪಿಯ 106 ಶಾಸಕರಿದ್ದಾರೆ. ನಾನು ಯಡಿಯೂರಪ್ಪ ಮನೆ ಬಾಗಿಲಿಗೂ ಹೋಗುವುದಿಲ್ಲ. ಸಿದ್ದರಾಮಯ್ಯ ಮನೆ ಬಾಗಿಲಿಗೂ ಹೋಗಲ್ಲ. ಈಗಲೇ ಚುನಾವಣೆ ನಡೆದರೆ ನಾವು ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ ನಡೆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯಗೆ ಆ ವರ್ಚಸ್ಸು ಇದೆ ಎಂದು ಹೇಳಿದರು.

  • ನಮ್ಮ ಬಂಡಾಯ ಬಹುತೇಕ ಶಮನವಾಗಿದೆ – ಬಸವರಾಜ್ ಹೊರಟ್ಟಿ

    ನಮ್ಮ ಬಂಡಾಯ ಬಹುತೇಕ ಶಮನವಾಗಿದೆ – ಬಸವರಾಜ್ ಹೊರಟ್ಟಿ

    ಹುಬ್ಬಳ್ಳಿ: ನಮ್ಮ ಬಂಡಾಯ ಬಹುತೇಕ ಶಮನವಾಗಿದೆ. ನಾವೆಲ್ಲ ದೇವೇಗೌಡರನ್ನು ಭೇಟಿ ಮಾಡಿದ್ದೇವೆ, ನಮ್ಮ ಅಸಮಾಧಾನದ ಕುರಿತು ತಿಳಿಸಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಂಡಾಯ ಬಹುತೇಕ ಶಮನವಾಗಿದೆ. ನಾವೆಲ್ಲ ದೇವೇಗೌಡರನ್ನು ಭೇಟಿ ಮಾಡಿದ್ದೇವೆ. ನಾವು ನಡೆಸಿದ ಸಭೆಯ ಬಗ್ಗೆ ತಿಳಿಸಿದ್ದೇವೆ. ದೇವೇಗೌಡರು ಸಹ ನವೆಂಬರ್ 6-7ಕ್ಕೆ ಮತ್ತೊಂದು ಸಭೆ ನಡೆಸುವುದಾಗಿ ಹೇಳಿದ್ದಾರೆ. ಈಗ ನಮ್ಮದು ಸರ್ಕಾರನೂ ಏನೂ ಇಲ್ಲ. ಮಂತ್ರಿ ಮಾಡಿ ಬೋರ್ಡ್ ಅಧ್ಯಕ್ಷರನ್ನು ಮಾಡಿ ಎಂದು ಕೇಳಲು ಸಾಧ್ಯವಿಲ್ಲ ಎಂದರು.

    ನಮ್ಮ ಬಗ್ಗೆ ಕಾಳಜಿ ಮಾಡಿದ್ದಾರೆ. ನಮ್ಮ ಬಂಡಾಯ ಸ್ವಲ್ಪ ಶಮನವಾಗಿದೆ. ನಮ್ಮ ಬೇಡಿಕೆಗಳು ಏನೂ ದೊಡ್ಡದಾಗಿಲ್ಲ. ರೇವಣ್ಣ-ಕುಮಾರಸ್ವಾಮಿ ಒಮ್ಮೊಮ್ಮೆ ಒಬ್ಬಬ್ಬರನ್ನು ಒಮ್ಮೆಲೆ ಮೇಲೆ ಎಬ್ಬಿಸಿ ಬಿಡುತ್ತಾರೆ. ಜೆಡಿಎಸ್‍ನಿಂದ ಏರ್ಪಡಿಸಿರುವ ವಿದೇಶ ಪ್ರವಾಸಕ್ಕೆ ನಾವು 11 ಜನ ಸಹ ಬರುವುದಿಲ್ಲ ಎಂದು ತಿಳಿಸಿದ್ದೇವೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಇರುವಾಗ ವಿದೇಶ ಪ್ರವಾಸ ಒಳ್ಳೆಯದಲ್ಲ ಎಂದು ತಿಳಿಸಿದ್ದೇವೆ ಎಂದು ಹೇಳಿದರು.

    ಸಚಿವ ಜಗದೀಶ್ ಶೆಟ್ಟರ್ ಆಗಲಿ ಬೇರೆ ಯಾರೇ ಆಗಲಿ ವಿದೇಶ ಪ್ರವಾಸಕ್ಕೆ ಹೋಗುವುದು ಸೂಕ್ತವಲ್ಲ. ಅಲ್ಲದೆ ಈ ಹಿಂದೆ ನಾನು ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ರಾಜ್ಯಕ್ಕೆ ಪ್ರತ್ಯೇಕ ಧ್ವಜ ವಿವಾದಕ್ಕೆ ಸಿಲುಕಬೇಡಿ ಎಂದು ಹೇಳಿದ್ದೆ. ಆದರೂ ಅವರು ಮಾಡಿದರು. ಕನ್ನಡದ ಧ್ವಜದ ಬಗ್ಗೆ ವಿನಾಕಾರಣ ಚರ್ಚೆ ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

  • ಬಿಎಸ್‍ವೈ ಬೇರೆ ಪಕ್ಷದಲ್ಲಿ ಲಿಂಗಾಯತ ನಾಯಕರನ್ನು ಬೆಳೆಯಲು ಬಿಡುತ್ತಿಲ್ಲ – ಎಚ್‍ಡಿಡಿ

    ಬಿಎಸ್‍ವೈ ಬೇರೆ ಪಕ್ಷದಲ್ಲಿ ಲಿಂಗಾಯತ ನಾಯಕರನ್ನು ಬೆಳೆಯಲು ಬಿಡುತ್ತಿಲ್ಲ – ಎಚ್‍ಡಿಡಿ

    ಯಾದಗಿರಿ: ಮುಖ್ಯಮಂತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ತಾವೊಬ್ಬರೆ ಲಿಂಗಾಯತ ನಾಯಕ ಎಂದುಕೊಂಡಿದ್ದಾರೆ. ಬೇರೆ ಪಕ್ಷದಲ್ಲಿ ಲಿಂಗಾಯತ ನಾಯಕರನ್ನು ಬೆಳೆಯಲು ಬಿಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಬಿಎಸ್‍ವೈ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಯಾದಗಿರಿ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗೊಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶರಣಗೌಡ ಕಂದಕೂರ ಲಿಂಗಾಯತ ನಾಯಕರಾಗಿ ಬೆಳೆಯುತ್ತಿದ್ದಾರೆ. ಅವರನ್ನು ತುಳಿಯಲು ಯಡಿಯೂರಪ್ಪ ಮುಂದಾಗಿದ್ದಾರೆ. ದೇವೇಗೌಡ ಬರೀ ಗಲಾಟೆ ಮಾಡಿಸಿ ರಾಜಕೀಯಕ್ಕೆ ಬಂದಿದ್ದಾನೆ ಅಂದುಕೊಂಡಿದ್ದಾರೆ. ಅದಕ್ಕೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ನನ್ನ 60 ವರ್ಷದ ರಾಜಕೀಯದಲ್ಲಿ ಇಂತಹ ಪರಿಸ್ಥಿತಿ ಎಂದೂ ಕಂಡಿಲ್ಲ. ಇದಕ್ಕಾಗಿ ಪೊಲೀಸರ ಮೇಲೆ ಅಸಮಾಧಾನ ಇದೆ ಎಂದರು.

    ಜೆಡಿಎಸ್ ಕಾರ್ಯಕರ್ತರೊಂದಿಗೆ ಯಾದಗಿರಿ ಜಿಲ್ಲಾಡಳಿತ ಭವನದ ಎದುರು ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ದೂರಿದರು.

    ಯಾದಗಿರಿ ಪೊಲೀಸ್ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ದೇವದುರ್ಗ ಆಡಿಯೋ ಪ್ರಕರಣದ ಹಿನ್ನೆಲೆ ನಮ್ಮ ಪಕ್ಷದ ಯುವ ಮುಖಂಡ ಶರಣಗೌಡ ಕಂದಕೂರ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆ. ನಮ್ಮ ಹೋರಾಟ ಇಷ್ಟಕ್ಕೆ ಕೊನೆಯಾಗದು. ನಮ್ಮ ಪಕ್ಷದ ಯಾವುದೇ ಕಾರ್ಯಕರ್ತರ ವಿರುದ್ಧ ಈ ರೀತಿ ಹಗೆತನ ನಡೆದರೆ ನಾನು ಸಹಿಸಲಾರೆ. ನಮ್ಮ ಕಾರ್ಯಕರ್ತರ ಮೇಲೆ ಹಾಕಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

    ರಾಜಕೀಯ ದ್ವೇಷದಿಂದ ಗುರುಮಿಠಕಲ್ ಕ್ಷೇತ್ರದ ಅನುದಾನ ರದ್ದು ಮಾಡಿದ್ದಾರೆ. ಇದಕ್ಕಾಗಿ ಸಿಎಂ ಬಿಎಸ್‍ವೈ ಆಗಮಿಸಿದಾಗ ಜೆಡಿಎಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಕಾರು ತಡೆದು ಮಾತನಾಡುವ ಪ್ರಯತ್ನ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ಹತ್ತಿರ ಯಾವುದೇ ಮಾರಕಾಸ್ತ್ರ ಇರಲಿಲ್ಲ. ಆದರೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಾನು ಕರೆ ಮಾಡಿದಾಗ ಡಿಜಿ ಅವರು ಪಿಎಸ್‍ಐ ಮೇಲೆ ಕ್ರಮಕೈಗೊಳ್ಳುತ್ತೇನೆಂದು ಹೇಳಿದರು. ನಂತರ ಕ್ರಮ ಕೈಗೊಳ್ಳುವುದು ಕಷ್ಟ ಎಂದರು. ಸರ್ಕಾರದಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಲು ಸಹ ಸ್ವಾತಂತ್ರ್ಯ ಇಲ್ಲವಾಗಿದೆ ಎಂದು ಹರಿಹಾಯ್ದರು.

    ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದಾರೆ. ಆದರೆ ಅದನ್ನೇ ಮಾಡುತ್ತಿದ್ದಾರೆ. ವಿರೋಧ ಪಕ್ಷದ ಶಾಸಕರುಗಳ ಕ್ಷೇತ್ರಗಳಿಗೆ ಕುಮಾರಸ್ವಾಮಿ ನೀಡಿದ್ದ ಅನುದಾನದಲ್ಲಿ ಕಡಿತ ಮಾಡಿದ್ದಾರೆ. ಇದನ್ನು ಕೇಳಲು ಹೋದ ಜೆಡಿಎಸ್ ಕಾರ್ಯಕರ್ತರ ಮೇಲೆ ಯಾದಗಿರಿಯಲ್ಲಿ ಲಾಠಿಚಾರ್ಜ್ ಮಾಡಲಾಗಿದೆ ಎಂದು ಆರೋಪಿಸಿದರು.

    ಉರಿ ಬಿಸಿಲಿನಲ್ಲೇ ಎಚ್‍ಡಿಡಿ ಧರಣಿ ಕುಳಿತಿದ್ದರು. ಇದೇ ವೇಳೆ ನಗರ ಪೊಲೀಸ್ ಠಾಣೆಯ ಪಿಎಸ್‍ಐ ಬಾಪುಗೌಡ ಅವರನ್ನು ಅಮಾನತು ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದರು. ಮಾಜಿ ಸಚಿವ ಬಂಡೆಪ್ಪ ಕಾಂಶಪೂರ, ಶಾಸಕ ನಾಗನಗೌಡ ಕಂದಕೂರ, ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಗೌಡ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

    2 ದಿನದಿಂದ ಕಾರ್ಯಕರ್ತರ ಪ್ರತಿಭಟನೆ
    ನಗರ ಪಿಎಸ್‍ಐ ಬಾಪುಗೌಡರನ್ನು ಅಮಾನತು ಮಾಡುವಂತೆ, ಕಳೆದ ಎರಡು ದಿನಗಳಿಂದ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾರ್ಯಕರ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೈ ಜೋಡಿಸಿದ್ದಾರೆ.

    ಭದ್ರತಾ ದೃಷ್ಟಿಯಿಂದ ದೇವೇಗೌಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಸೂಕ್ತವಲ್ಲ ಎಂದು ಜಿಲ್ಲಾಡಳಿತ ಹೇಳಿತ್ತು. ಜಿಲ್ಲಾಡಳಿತ ಮನವಿಗೆ ಸೊಪ್ಪು ಹಾಕದ ದೇವೇಗೌಡರು ಇಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಎಚ್‍ಡಿಡಿ ಆಗಮಿಸುತ್ತಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಿ 144 ಸೆಕ್ಷನ್ (ನಿಷೇಧಾಜ್ಞೆ) ಜಾರಿ ಮಾಡಲಾಗಿತ್ತು.

  • ಮೋದಿಗೆ ದೇಶದ ಆರ್ಥಿಕತೆಗಿಂತ 370ರ ಬಗ್ಗೆಯೇ ಹೆಚ್ಚು ನಂಬಿಕೆ: ಎಚ್‍ಡಿಡಿ ಟಾಂಗ್

    ಮೋದಿಗೆ ದೇಶದ ಆರ್ಥಿಕತೆಗಿಂತ 370ರ ಬಗ್ಗೆಯೇ ಹೆಚ್ಚು ನಂಬಿಕೆ: ಎಚ್‍ಡಿಡಿ ಟಾಂಗ್

    – ಐಟಿಗೆ ಪತ್ರ ಬರೆದ್ರೆ ನನ್ನ ವ್ಯಕ್ತಿತ್ವ ನನ್ನಿಂದಲೇ ಹಾಳಾಗುತ್ತೆ
    – ರಾಜಣ್ಣಗೆ ಎಚ್‍ಡಿಡಿ ತಿರುಗೇಟು
    – ನಾನು ಮಾಜಿ ಪ್ರಧಾನಿ ಅನ್ನೋದನ್ನ ಕೆಲವ್ರು ಮರೆತಿದ್ದಾರೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಆರ್ಥಿಕತೆಗಿಂತ ಸಂವಿಧಾನದ 370 ವಿಧಿ ಬಗ್ಗೆಯೇ ಹೆಚ್ಚು ನಂಬಿಕೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಲೇವಡಿ ಮಾಡಿದ್ದಾರೆ.

    ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ನಿರ್ಮಲಾ ಸೀತರಾಮನ್ ಪತಿ ಬಿಜೆಪಿ ಪಕ್ಷದವರಲ್ಲ. ಆದರೆ ಸದ್ಯ ದೇಶದ ಆರ್ಥಿಕ ಸ್ಥಿತಿ ಸರಿಯಿಲ್ಲ. ಹೀಗಾಗಿ ಅವರ ಹೇಳಿಕೆ ಸರಿಯಾಗಿದೆ. ವಿಶ್ಚ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೆಗಳು ಪರಿಸ್ಥಿತಿ ಸರಿ ಇಲ್ಲ ಅಂತ ಹೇಳಿದ್ದಾರೆ. ಪ್ರಧಾನಿ ಮೋದಿ ಅವರಿಗೂ ಇದರ ಬಗ್ಗೆ ಗೊತ್ತಿದೆ. ಆದರೆ ಮೋದಿ ಅವರಿಗೆ 370 ವಿಧಿಯನ್ನು ರದ್ದುಗೊಳಿಸಿದ್ದರ ಬಗ್ಗೆ ಹೆಚ್ಚಿನ ನಂಬಿಕೆ ಇದೆ. ಇದನ್ನೆ ಮುಂದಿಟ್ಟುಕೊಂಡು ಎರಡು ರಾಜ್ಯಗಳ ಚುನಾವಣೆ ಮೋದಿ ಮಾಡುತ್ತಿದ್ದಾರೆ ಎಂದು ಕುಟುಕಿದರು.

    ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರಕ್ಕೆ  ವಿಶೇಷ ಸ್ಥಾನಮಾನ ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಮಸೂದೆ ಪಾಸಾಗಿದೆ. ಈಗ ರದ್ದು ಗೊಳಿಸಿದ ವಿಧಿಯನ್ನು ಯಾರು ವಾಪಸ್ ತರುತ್ತೀರಾ ಅಂತ ಮೋದಿ ಸವಾಲು ಹಾಕುತ್ತಾರೆ. ಈಗ ಅದರ ಮೇಲೆ ಚುನಾವಣೆ ಆಗುತ್ತಿದೆ. ಸ್ಥಳೀಯ ವಿಷಯಗಳನ್ನು ಮುಖ್ಯವಾಗಿ ಪ್ರಚಾರಕ್ಕೆ ಬಳಸಬೇಕು. ಆದರೆ ಈಗ ಅದು ಆಗುತ್ತಿಲ್ಲ ಎಂದು ಪರೋಕ್ಷವಾಗಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ನನ್ನ ಮೇಲೆ ಐಟಿ ದಾಳಿಗೆ ಕಾರಣ ಅಂತ ಹೇಳಿದ್ದ ಮಾಜಿ ಶಾಸಕ ರಾಜಣ್ಣ ಅವರಿಗೆ ಎಚ್.ಡಿ.ದೇವೇಗೌಡ ತಿರುಗೇಟು ಕೊಟ್ಟಿದ್ದಾರೆ. ರಾಜಣ್ಣ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ದೇಶದ ಪ್ರಧಾನಿ ಆದವನು ನಾನು. ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆಯುವುದಕ್ಕೆ ಆಗುತ್ತಾ? ಪತ್ರ ಬರೆದರೆ ನನ್ನ ವ್ಯಕ್ತಿತ್ವಕ್ಕೆ ನಾನೇ ಕುಂದು ಮಾಡಿಕೊಂಡಂತೆ. ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

    ರೈತರ ಸಾಲಮನ್ನಾ ಸಂಪೂರ್ಣ ಮಾಡಲು ಆಗಲ್ಲ ಎನ್ನುವ ಸಿಎಂ ಯಡಿಯೂರಪ್ಪ ಹೇಳಿಕೆಗೆ ಎಚ್.ಡಿ. ದೇವೇಗೌಡ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಸಿಎಂ ಯಡಿಯೂರಪ್ಪ ಹಾಗೇ ಮಾಡುವುದಿಲ್ಲ ಅಂತ ನಂಬಿಕೆ ಇದೆ. ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ 24 ಗಂಟೆಯೊಳಗೆ ಸಾಲಮನ್ನಾ ಮಾಡಬೇಕು ಅಂತ ಯಡಿಯೂರಪ್ಪ ಒತ್ತಾಯ ಮಾಡಿದ್ದರು. ಕುಮಾರಸ್ವಾಮಿ ಸಿಎಂ ಆದಾಗ ಸಹಕಾರಿ ಬ್ಯಾಂಕುಗಳ ಸಾಲಮನ್ನಾಕ್ಕೆ ಹಣ ಎತ್ತಿಟ್ಟಿದರು. ಸಹಕಾರಿ ಬ್ಯಾಂಕ್‍ನ ಸಾಲ ಬಹುತೇಕ ಪೂರ್ಣವಾಗಿದೆ. ಶೆಡ್ಯುಲ್ಡ್ ಬ್ಯಾಂಕ್ ಸಾಲದ ಬಗ್ಗೆ ಸ್ವಲ್ಪ ಗೊಂದಲವಿದೆ. ನಾನು ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತಾಡಿದ್ದೇನೆ. ಸಹಕಾರ ಬ್ಯಾಂಕ್ ಸಾಲಮನ್ನಾಗೆ ಇಟ್ಟಿದ್ದ ಹಣದಲ್ಲಿ ಇನ್ನು ಸ್ವಲ್ಪ ಉಳಿದಿದೆ. ಉಳಿದ ಹಣ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಳಸಿಕೊಳ್ಳಲಾಗುತ್ತಿದೆ ಅನ್ನಿಸುತ್ತದೆ.

    ಕಾಂಗ್ರೆಸ್ ಅನರ್ಹ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ದೇವೇಗೌಡ ಅವರು, ಕಾಂಗ್ರೆಸ್ ತೀರ್ಮಾನದ ಬಗ್ಗೆ ನನಗೇನು ಗೊತ್ತಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ವಾಪಸ್ ಬಂದರೆ ಕರೆದುಕೊಳ್ಳುತ್ತೇವೆ ಅಂತ ಹೇಳಿದ್ದನ್ನು ಕೇಳಿದ್ದೇನೆ. ಆದರೆ ಅವ್ರ ಹೈಕಮಾಂಡ್ ಏನ್ ತೀರ್ಮಾನ ಮಾಡುತ್ತದೆ ಎನ್ನುವುದು ನನಗೇನು ಗೊತ್ತು. ಆ ಬಗ್ಗೆ ಅವರ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

    ನಮ್ಮ ಪಕ್ಷದಲ್ಲಿ ಮೂವರು ಮಾತ್ರ ಹೋಗಿದ್ದಾರೆ. ಯಾವುದೇ ಕಾರಣಕ್ಕೂ ಅನರ್ಹ ಶಾಸಕರನ್ನು ವಾಪಸ್ ಕರೆಯುವುದಿಲ್ಲ. ಈಗಾಗಲೇ ಅಭ್ಯರ್ಥಿ ಹಾಕುತ್ತೇವೆ ಅಂತ ಘೋಷಣೆ ಮಾಡಿದ್ದೇವೆ. ಅವರನ್ನು ಮತ್ತೆ ಯಾಕೆ ವಾಪಸ್ ಕರೆಯೋಣ? 15 ಕ್ಷೇತ್ರದಲ್ಲೂ ಅಭ್ಯರ್ಥಿ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಉಪ ಚುನಾವಣೆ ಬಳಿಕ ಬಿಜೆಪಿ ಸರ್ಕಾರ ಪತನ ಆಗುವ ವಿಷಯಕ್ಕೆ ನಾನು ಏನು ಮಾತನಾಡುವುದಿಲ್ಲ. ಪ್ರಧಾನಿ ಮೋದಿ ಹೆಸರು ಬಳಸಿಕೊಂಡು ಅವರು ಚುನಾವಣೆ ಎದುರಿಸುತ್ತಾರೆ. ಉಪ ಚುನಾವಣೆಯಲ್ಲೂ ಅದನ್ನೇ ಮಾಡುತ್ತಾರೆ. ಮೋದಿ ಅವರಿಗೆ ಪರ್ಯಾಯ ನಾಯಕರು ಬೇಕು. ಆದರೆ ನಮ್ಮದು ಪ್ರಾದೇಶಿಕ ಪಕ್ಷ, ರಾಷ್ಟ್ರೀಯ ಪಕ್ಷ ಅಲ್ಲ. ನಾವು ಪ್ರಾದೇಶಿಕ ನಾಯಕರು. ನಾನು ಮಾಜಿ ಪ್ರಧಾನಿ ಎನ್ನುವುದು ಕೆಲವರಿಗೆ ಮರೆತೇ ಹೋಗಿದೆ ಎಂದು ಪರೋಕ್ಷವಾಗಿ ಉಪ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಆಗುತ್ತದೆ ಅಂತ ಅಭಿಪ್ರಾಯ ವ್ಯಕ್ತಪಡಿಸಿದರು.

  • ಇವ್ರ ಕೆಟ್ಟ ರಾಜಕಾರಣಕ್ಕೆ ನಾನು ಭಾಗಿಯಾಗಲ್ಲ: ಎಚ್‍ಡಿಡಿ

    ಇವ್ರ ಕೆಟ್ಟ ರಾಜಕಾರಣಕ್ಕೆ ನಾನು ಭಾಗಿಯಾಗಲ್ಲ: ಎಚ್‍ಡಿಡಿ

    – ಜವರಾಯಿಗೌಡ ಕಾಂಗ್ರೆಸ್‍ಗೆ ಹೋಗಲ್ಲ

    ಬೆಂಗಳೂರು: ಮಾಜಿ ಸಚಿವ ಸಾರಾ ಮಹೇಶ್ ಹಾಗೂ ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರ ಕೆಟ್ಟ ರಾಜಕಾರಣಕ್ಕೆ ನಾನು ಭಾಗಿಯಾಗಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಸಮಾಧಾನ ಹೊರ ಹಾಕಿದ್ದಾರೆ.

    ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಚ್.ವಿಶ್ವನಾಥ್ ಮತ್ತು ಸಾರಾ ಮಹೇಶ್ ಮಾತುಗಳನ್ನು ರಾಜ್ಯದ ಜನ ಕೇಳಿದ್ದಾರೆ. ಸಾರಾ ಮಹೇಶ್ ರಾಜೀನಾಮೆ ನೀಡಿದ್ದು ಸತ್ಯ. ಅವರು ಸ್ಪೀಕರ್ ಸೆಕ್ರೆಟರಿಗೆ ರಾಜೀನಾಮೆ ಪತ್ರ ಕೊಟ್ಟಿದ್ದಾರೆ. ಆದರೆ ಸ್ಪೀಕರ್ ಈ ಪಂಥಾಹ್ವಾನ ಯಾಕೆ ಅಂತ ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ವಾಪಸ್ ಪಡೆಯುತ್ತೇನೆ ಅಂತ ಸಾರಾ ಮಹೇಶ್ ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ವಿಶ್ವನಾಥ್, ಮಹೇಶ್ ವಾರ್- ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣ

    ಒಬ್ಬರು ಚಾಮುಂಡಿಬೆಟ್ಟಕ್ಕೆ ಬನ್ನಿ ಅಂತ ಹೇಳುತ್ತಾರೆ. ಇನ್ನೊಬ್ಬರು ಅದರ ಅವಶ್ಯಕತೆ ಇಲ್ಲ ಎನ್ನುತ್ತಾರೆ. ನಾನು ಎಚ್.ವಿಶ್ವನಾಥ್ ಬಗ್ಗೆ ಮಾತನಾಡುವುದಿಲ್ಲ. ಆಣೆ-ಸತ್ಯ-ಪ್ರಮಾಣ ಇವೆಲ್ಲ ಯಾಕೆ ಬೇಕು? ಆವೇಶದಿಂದ ಎಲ್ಲರೂ ಮಾತನಾಡುತ್ತಾರೆ. ಇದರಿಂದ ಏನು ಪ್ರಯೋಜನವಾಗುತ್ತದೆ? ಸಾರಾ ಮಹೇಶ್ ಜೊತೆ ಮಾತನಾಡಿದ್ದೇನೆ. ಬುಧವಾರ ಅವರು ರಾಜೀನಾಮೆ ವಾಪಸ್ ಪಡೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.

    ವಿಧಾನ ಪರಿಷತ್‍ನ 4 ಪದವೀಧರ ಕ್ಷೇತ್ರಗಳ ಚುನಾವಣೆ ಜೂನ್‍ನಲ್ಲಿ ನಡೆಯುತ್ತದೆ. ನಮ್ಮ ಅಭ್ಯರ್ಥಿಗಳ ಸಭೆಯನ್ನು 18ರಂದು ಕರೆದಿದ್ದೇನೆ. ಅಭ್ಯರ್ಥಿಗಳು, ಮಾಜಿ, ಹಾಲಿ ಶಾಕರಿಗೆ ಪತ್ರ ಬರೆದು, ಸಭೆಗೆ ಆಹ್ವಾನ ನೀಡಿದ್ದೇನೆ. ಎಲ್ಲರ ಜೊತೆಗೆ ಸಮಾಲೋಚನೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.

    ಪಕ್ಷದ ಮುಖಂಡ ಜವರಾಯಿಗೌಡ ಕಾಂಗ್ರೆಸ್‍ಗೆ ಹೋಗುವುದಿಲ್ಲ. ಎಲ್ಲಾ ಕಡೆ ತಪ್ಪು ಸುದ್ದಿ ಹರಡಿಸಲಾಗುತ್ತದೆ. ಕ್ಷೇತ್ರದ ಪಟ್ಟಭದ್ರ ಹಿತಾಸಕ್ತಿಗಳು ಸುಮ್ಮನೆ ಈ ಸುದ್ದಿ ಹರಡಿಸುತ್ತಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದಾರೆ. ಈ ಬಾರಿ ಕಾರ್ಯಕರ್ತರು ಅವರಿಗಾಗಿಯೇ ದುಡಿಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.

    ಅನರ್ಹ ಶಾಸಕರ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ತೀರ್ಪು ಬಂದ ಮೇಲೆ 17 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿ ಹಾಕುತ್ತೇವೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ಮುಖಂಡರ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

    ಮೈಸೂರು ಭಾಗದಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆ ಮಾಡುತ್ತೆ ಅಂತ ಕೆಲವರು ಹೇಳುತ್ತಿದ್ದಾರೆ. ಆದರೆ ಎಲ್ಲಾ ಕ್ಷೇತ್ರದಲ್ಲಿ ನಾವು ಸ್ಪರ್ಧೆ ಮಾಡುತ್ತೇವೆ. ಯುವಕರು ನಾವು ಸ್ಪರ್ಧೆ ಮಾಡುತ್ತೇವೆ ಅಂತ ಮುಂದೆ ಬರುತ್ತಿದ್ದಾರೆ. ಹೀಗಾಗಿ 17 ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕುತ್ತೇವೆ ಎಂದು ಹೇಳಿದರು.

  • ಕೇಂದ್ರದ ಪರಿಹಾರ ಹೆಚ್‍ಡಿಕೆ ಅವಧಿಯಲ್ಲಾದ ನೆರೆ ನಷ್ಟಕ್ಕೆ ಹೊರತು ಈಗಿನ ನಷ್ಟಕ್ಕಲ್ಲ: ಹೆಚ್‍ಡಿಡಿ ಕಿಡಿ

    ಕೇಂದ್ರದ ಪರಿಹಾರ ಹೆಚ್‍ಡಿಕೆ ಅವಧಿಯಲ್ಲಾದ ನೆರೆ ನಷ್ಟಕ್ಕೆ ಹೊರತು ಈಗಿನ ನಷ್ಟಕ್ಕಲ್ಲ: ಹೆಚ್‍ಡಿಡಿ ಕಿಡಿ

    ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ನೆರೆ ಪರಿಹಾರ ಹೆಸರಿನಲ್ಲಿ ಬಿಡುಗಡೆ ಮಾಡಿರೋದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವಧಿಯಲ್ಲಾದ ನೆರಯ ನಷ್ಟದ ಪರಿಹಾರ. ಈಗಿನ ನೆರೆ ನಷ್ಟಕ್ಕೆ ಕೇಂದ್ರ ನಯಾಪೈಸೆ ಕೂಡ ಕೊಟ್ಟಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಕಿಡಿಕಾರಿದ್ದಾರೆ.

    ಜಿಲ್ಲೆಯ ಚಿಂತಾಮಣಿ ತಾಲೂಕು ಶ್ರೀ ಕ್ಷೇತ್ರ ಕೈವಾರದಲ್ಲಿ ಚಿಂತಾಮಣಿ ಜೆಡಿಎಸ್ ಶಾಸಕ ಹಾಗೂ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಜೆ.ಕೆ ಕೃಷ್ಣಾರೆಡ್ಡಿ ಅವರ 25ನೇ ವರ್ಷದ ವಾರ್ಷಿಕ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ದೇವೇಗೌಡರು ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಕರ ಪ್ರವಾಹದಿಂದ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತವಾಗಿ ಸುಮಾರು 38,000 ಸಾವಿರ ಕೋಟಿ ನಷ್ಟ ಉಂಟಾಗಿದ್ದದೆ. ಆದರೆ ಕೇಂದ್ರ ಸರ್ಕಾರ ಇದುವರೆಗೂ ನಯಾಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಕೇಂದ್ರ ಸರ್ಕಾರ ಈಗ ನೀಡಿರೋ 1,200 ಕೋಟಿ ರೂಪಾಯಿ ಪರಿಹಾರ ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಕೊಡಗು, ಶಿವಮೊಗ್ಗ ಮತ್ತಿತರ ಕಡೆ ಉಂಟಾಗಿದ್ದ ನೆರೆ ಪರಿಹಾರದ ನಷ್ಟದ ಪರಿಹಾರವೇ ಹೊರತು ಈಗಿನ 38,000 ಸಾವಿರ ಕೋಟಿ ನಷ್ಟದ ಪರಿಹಾರ ಅಲ್ಲ ಎಂದು ಕಿಡಿಕಾರಿದರು. ಹಾಗೆಯೇ ಕೇಂದ್ರದ ಸಮರ್ಪಕ ಅನುದಾನಕ್ಕಾಗಿ ಇದೇ ತಿಂಗಳ 10ರಂದು ಬೆಂಗಳೂರಿನ ಗಾಂಧಿ ಪ್ರತಿಮೆಯಿಂದ ಫ್ರೀಡಂ ಪಾರ್ಕಿನವರೆಗೆ ಸಾಂವಿಧಾನಿಕವಾಗಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

    ಇದೇ ವೇಳೆ ತಮ್ಮ ಗತಕಾಲದ ರಾಜಕೀಯ ಜೀವನವನ್ನ ಮೆಲುಕು ಹಾಕಿದ ದೇವೇಗೌಡರು, ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರು ಪಕ್ಷದಿಂದ ಹೊರಗೆ ಹಾಕಿದಾಗ, ಕೈವಾರ ಪುಣ್ಯಕ್ಷೇತ್ರದ ಅಭಿವೃದ್ಧಿಯ ಹರಿಕಾರ ಎಂ.ಎಸ್.ರಾಮಯ್ಯ ಅವರು ರಾಜಕೀಯ ಅಭಿವೃದ್ಧಿಗೆ ಮಾಡಿದ ಆರ್ಥಿಕ ನೆರವನ್ನು ನೆನಸಿಕೊಂಡರು.

  • ಸುಪ್ರೀಂ ದೇವೇಗೌಡರ ಅನುಕೂಲಕ್ಕೆ ತಕ್ಕಂತೆ ತೀರ್ಪು ಕೊಡಬೇಕಿತ್ತಾ?: ಬಿಎಸ್‍ವೈ ಕಿಡಿ

    ಸುಪ್ರೀಂ ದೇವೇಗೌಡರ ಅನುಕೂಲಕ್ಕೆ ತಕ್ಕಂತೆ ತೀರ್ಪು ಕೊಡಬೇಕಿತ್ತಾ?: ಬಿಎಸ್‍ವೈ ಕಿಡಿ

    ಬೆಂಗಳೂರು: ಸುಪ್ರೀಂಕೋರ್ಟ್ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಅನುಕೂಲಕ್ಕೆ ತಕ್ಕಂತೆ ತೀರ್ಪು ಕೊಡಬೇಕಿತ್ತಾ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿ ಕಿಡಿಕಾರಿದ್ದಾರೆ.

    ಎಚ್.ಡಿ.ದೇವೇಗೌಡ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ದೇವೇಗೌಡರ ಪ್ರತಿಯೊಂದ ಶಬ್ದಕ್ಕೂ ಗೌರವ ಇದೆ. ಸುಪ್ರೀಂಕೋರ್ಟ್ ಬಗ್ಗೆ ಹಗುರವಾಗಿ ಮಾತನಾಡುವುದು ಎಷ್ಟು ಸರಿ? ಅವರಿಂದ ಇಂತಹ ಹೇಳಿಕೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ದೇವೇಗೌಡರ ಹೇಳಿಕೆಯಿಂದ ನನಗೆ ತುಂಬ ನೋವಾಗಿದೆ. ಅವರು ತಮ್ಮ ಹೇಳಿಕೆ ವಾಪಸ್ ತೆಗೆದುಕೊಳ್ಳಲಿ ಎಂದು ಹೇಳಿದರು.

    ವಿಪಕ್ಷಗಳು ಅನಗತ್ಯವಾಗಿ ಸುಪ್ರೀಂಕೋರ್ಟ್ ತೀರ್ಮಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ. ತೀರ್ಪು ಬರುವವರೆಗೂ ಕಾದು ನೋಡಿ ಮಾತನಾಡಬೇಕು. ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕ ಎಂದು ಹೇಳಿದರು.

    ಉಪಚುನಾವಣೆಗೆ ತಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಸುಪ್ರೀಂಕೋರ್ಟ್ ಕೂಲಂಕುಶವಾಗಿ ಪರಿಶೀಲನೆ ಮಾಡಿ ಅನರ್ಹ ಶಾಸಕರ ಬಗ್ಗೆ ತೀರ್ಮಾನ ಕೈಗೊಂಡಿದೆ. ಚುನಾವಣೆಯನ್ನು ಮುಂದಿನ ತಿಂಗಳು 22 ರವರೆಗೆ ವಿಚಾರಣೆ ಮುಂದೂಡಿದೆ. ವಿರೋಧ ಪಕ್ಷಗಳು ಸುಪ್ರೀಂಕೋರ್ಟ್ ಮೇಲೆಯೇ ಅನುಮಾನ ವ್ಯಕ್ತಪಡಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಉಪ ಚುನಾವಣೆ ತಡೆಯಿಂದ ಅನರ್ಹ ಶಾಸಕರಿಗೆ ರಿಲೀಫ್ ಸಿಕ್ಕಿದೆ ಎಂದು ಹೇಳಿದರು.

    ಎಚ್‍ಡಿಡಿ ಹೇಳಿದ್ದೇನು?:
    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಎಚ್.ಡಿ.ದೇವೇಗೌಡ ಅವರು, ಸುಪ್ರೀಂಕೋರ್ಟಿನಲ್ಲಿ ಚುನಾವಣೆ ಆಯೋಗ ಈ ಚುನಾವಣೆಯನ್ನು ಮುಂದೂಡಬಹುದು ಎಂದು ಹೇಳಿದೆ. ಹೀಗಾಗಿ ಉಪಚುನಾವಣೆ ಮುಂದೂಡಿಕೆಯಾಗಿದೆ. ಆಯೋಗಕ್ಕೆ ಕೇಂದ್ರ ಸರ್ಕಾರ ಸೂಚಿಸಿರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಈ ಬೆಳವಣಿಗೆಯಿಂದಾಗಿ ಸ್ವಾಯತ್ತ ಸಂಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂಬ ಪ್ರಶ್ನೆ ಮೂಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪ್ರಭಾವ ಕೇಂದ್ರ ಸರ್ಕಾರದ ಮೇಲೆ ಇರಬಹುದು. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಮೂಲಕ ಹೀಗೆ ಮಾಡಿಸಿರಬಹುದು. ಹೀಗಾಗಿ ಚುನಾವಣಾ ಆಯೋಗ ಅನರ್ಹ ಶಾಸಕರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಸ್ಥಿಕೆವಹಿಸಿದೆ ಅನ್ನಿಸುತ್ತಿದೆ ಎಂದು ಎಚ್‍ಡಿಡಿ ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು.

  • ಸುಪ್ರೀಂ ಕೋರ್ಟ್ ತೀರ್ಪಿಗೆ ಕೇಂದ್ರ ಸರ್ಕಾರ ಕಾರಣ – ಎಚ್‍ಡಿಡಿ

    ಸುಪ್ರೀಂ ಕೋರ್ಟ್ ತೀರ್ಪಿಗೆ ಕೇಂದ್ರ ಸರ್ಕಾರ ಕಾರಣ – ಎಚ್‍ಡಿಡಿ

    ಬೆಂಗಳೂರು: ಸುಪ್ರೀಂ ಕೋರ್ಟಿನಲ್ಲಿ ಚುನಾವಣೆ ಆಯೋಗ ಈ ಚುನಾವಣೆಯನ್ನು ಮುಂದೂಡಬಹುದು ಎಂದು ಹೇಳಿದೆ. ಹೀಗಾಗಿ ಉಪಚುನಾವಣೆ ಮುಂದೂಡಿಕೆಯಾಗಿದೆ. ಆಯೋಗಕ್ಕೆ ಕೇಂದ್ರ ಸರ್ಕಾರ ಸೂಚಿಸಿರಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬೆಳವಣಿಗೆಯಿಂದಾಗಿ ಸ್ವಾಯತ್ತ ಸಂಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂಬ ಪ್ರಶ್ನೆ ಮೂಡುತ್ತದೆ. ಯಡಿಯೂರಪ್ಪನವರ ಪ್ರಭಾವ ಕೇಂದ್ರ ಸರ್ಕಾರದ ಮೇಲೆ ಇರಬಹುದು. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಮೂಲಕ ಹೀಗೆ ಮಾಡಿಸಿರಬಹುದು. ಹೀಗಾಗಿ ಚುನಾವಣಾ ಆಯೋಗ ಅನರ್ಹ ಶಾಸಕರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಸ್ಥಿಕೆವಹಿಸಿದೆ ಅನ್ನಿಸುತ್ತಿದೆ ಎಂದು ಎಚ್‍ಡಿಡಿ ಕೇಂದ್ರದ ವಿರುದ್ಧ ಹರಿಹಾಯ್ದರು.

    ಮೊನ್ನೆ ಕೂಡ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ನೋಟಿಸ್ ನೀಡದಿದ್ದರೂ ಬಂದು ವಾದ ಮಾಡಿತ್ತು. ಈ ವಿಚಾರದಲ್ಲಿ ಚುನಾವಣೆ ಆಯೋಗದ ನಡೆ ಸರಿಯಲ್ಲ. ಆಯೋಗ ಸ್ವತಂತ್ರವಾಗಿ ಕೆಲಸ ನಿರ್ವಹಣೆ ಮಾಡಬೇಕು. ಆದರೆ ಈ ಪ್ರಕರಣದಲ್ಲಿ ಆ ರೀತಿ ನಡೆದುಕೊಂಡಿಲ್ಲ. ಚುನಾವಣಾ ಆಯೋಗದ ಮಧ್ಯಸ್ಥಿಕೆಯಿಂದ ಉಪಚುನಾವಣೆ ಮುಂದೂಡಿಕೆಯಾಗಿದೆ ಎಂದು ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.

    ಇಂದು ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್‍ನಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆದಿತ್ತು. ಅದರ ಮಧ್ಯೆಯೇ ಕೋರ್ಟ್ ತೀರ್ಪು ಬಂತು. ಪ್ರಾದೇಶಿಕ ಪಕ್ಷವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೆವು. ಐಕ್ಯತೆಯಿಂದ ಚುನಾವಣೆ ಎದುರಿಸಲು ಚರ್ಚೆ ಆಗಿದೆ. ಮಹಾಲಯ ಅಮಾವಾಸ್ಯೆಯಾದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದುಕೊಂಡಿದ್ದೆವು. ಈ ಕುರಿತು ಕುಮಾರಸ್ವಾಮಿ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.

    ಆರು ತಂಡ ರಚನೆ ಮಾಡುತ್ತೇವೆ. ಒಂದು ತಂಡದಲ್ಲಿ ಹತ್ತು ಜನರ ಇರುತ್ತಾರೆ. ಇದರಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಸಹ ಇದರಲ್ಲಿ ಇರುತ್ತಾರೆ. ರಾಜ್ಯದ 30 ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ. ಸಮಸ್ತ ಜಾತಿಗೆ ಸಿಗುವ ರೀತಿ ಜಿಲ್ಲಾ, ತಾಲೂಕು ಪದಾಧಿಕಾರಿಗಳ ಆಯ್ಕೆ ಮಾಡುತ್ತೇವೆ ಎಂದು ಎಚ್‍ಡಿಡಿ ಈ ವೇಳೆ ತಿಳಿಸಿದರು.

  • ಜನತೆಯ ಕಷ್ಟದ ಬದಲಾಗಿ ಬಿಎಸ್‍ವೈಗೆ ಕುರ್ಚಿ ಚಿಂತೆ- ಎಚ್‍ಡಿಡಿ

    ಜನತೆಯ ಕಷ್ಟದ ಬದಲಾಗಿ ಬಿಎಸ್‍ವೈಗೆ ಕುರ್ಚಿ ಚಿಂತೆ- ಎಚ್‍ಡಿಡಿ

    -ತೇಜಸ್ವಿ ಸೂರ್ಯ ಉದಯೋನ್ಮುಖ ನಾಯಕ

    ಬೆಂಗಳೂರು: ಕುರ್ಚಿ ಮುಖ್ಯ ಆದಾಗ ರಾಜ್ಯದ ಜನತೆ ಮುಖ್ಯ ಆಗುವುದಿಲ್ಲ. ಈಗ ಸಿಎಂ ಯಡಿಯೂರಪ್ಪರಿಗೆ ಕುರ್ಚಿ ಅನಿವಾರ್ಯವಾಗಿದ್ದರಿಂದ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ ಇಂತಹ ಕೆಟ್ಟ ದುಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ಜನರು ನಿತ್ಯ ಕಣ್ಣೀರು ಹಾಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇದು ಏನ್ರೀ, ಯಡಿಯೂರಪ್ಪ ಹೇಗೆ ಕುರ್ಚಿ ಉಳಿಸಿಕೊಳ್ಳಬೇಕು ಎಂಬ ಹಿಂಸೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರು ದೆಹಲಿಗೆ ಹೋಗಿದ್ದಾರೆ ಎಂದು ಹರಿಹಾಯ್ದರು.

    ಸಂಸದ ತೇಜಸ್ವಿ ಸೂರ್ಯರನ್ನು ಹೊಗಳುವ ಮೂಲಕ ಯಡಿಯೂರಪ್ಪರನ್ನು ತೆಗಳಿದ ಅವರು, ತೇಜಸ್ವಿ ಸೂರ್ಯ ಅವರ ಬದ್ಧತೆ ನನಗೆ ಇಷ್ಟ ಆಯ್ತು. ರಾಜ್ಯದ ಜನರ ಬಗ್ಗೆ ಇರುವ ಅವರ ಕಾಳಜಿ ನನಗೆ ಇಷ್ಟ ಆಯಿತು. ನನ್ನಿಂದ ಅವರಿಗೆ ಪ್ರಮಾಣ ಪತ್ರ ಕೊಡುವ ಅಗತ್ಯತೆ ಇಲ್ಲ. ರಾಜ್ಯದ ಜನತೆ ನನಗೆ ಮುಖ್ಯ, ತೀವ್ರ ತರವಾದ ಆಕ್ರೋಶ ಅವರ ಮಾತಿನಲ್ಲಿತ್ತು. ಉದಯೋನ್ಮುಖ ನಾಯಕರಿಗೆ ಇಂತಹ ಭಾವನೆ ಇರಬೇಕಾಗಿರುವುದು ಅಗತ್ಯ. ಪಕ್ಷ ಯಾವುದಾದರೂ ಇರಲಿ. ಅವರ ಬದ್ಧತೆ ನನಗೆ ಇಷ್ಟ ಆಯಿತು. ಆದರೆ ಯಡಿಯೂರಪ್ಪನವರಿಗೆ ರಾಜ್ಯದ ಜನರ ಪರವಾಗಿ ಬದ್ಧತೆ ಇಲ್ಲ. ಕುರ್ಚಿ ಮೇಲೆ ಚಿಂತೆ ಇದೆ ಎಂದು ವಾಗ್ದಾಳಿ ನಡೆಸಿದರು.

    ಹೈ ಕೋರ್ಟ್ ಆದೇಶ ಇದ್ದರು ಕಾಂಗ್ರೆಸ್ ಸ್ನೇಹಿತರ ತೃಪ್ತಿಗೋಸ್ಕರ ಒಬ್ಬರನ್ನು ಘನ ಸರ್ಕಾರ ಅಮಾನತು ಮಾಡಿದೆ. ಬೆಳಗ್ಗೆ ಕಾಂಗ್ರೆಸ್, ಮಧ್ಯಾಹ್ನ ಬಿಜೆಪಿಗೆ ಹೋಗುವವರು ಮಂಡ್ಯದಲ್ಲಿ ತುಂಬಾ ಜನ ಇದ್ದಾರೆ. ಅವರಿಗೆ ತೃಪ್ತಿ ಮಾಡಲು ದೆಹಲಿಗೆ ಹೋಗುವ ಮುನ್ನ ಅಮಾನತು ಮಾಡಿ ಹೋಗಿದ್ದಾರೆ. ಯಡಿಯೂರಪ್ಪನವರಿಗೆ ಧನ್ಯವಾದ ಎಂದು ದೇವೇಗೌಡರು ಕಿಡಿಕಾರಿದರು. ಅಲ್ಲದೆ, ಹೆಸರು ಹೇಳದೆ ನಾರಾಯಣಗೌಡ ಮತ್ತು ಚೆಲುವರಾಯಸ್ವಾಮಿ ವಿರುದ್ಧ ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.

  • ಸಿದ್ದು ಸೋಲಿಸಿದರೆ, ಗೃಹ ಸಚಿವನನ್ನಾಗಿ ಮಾಡಿ, ಮೈಸೂರಿನ ಸಿಎಂ ಮಾಡ್ತೇನೆ ಎಂದಿದ್ರು- ಎಚ್‍ಡಿಕೆ ವಿರುದ್ಧ ಜಿಟಿಡಿ ವಾಗ್ದಾಳಿ

    ಸಿದ್ದು ಸೋಲಿಸಿದರೆ, ಗೃಹ ಸಚಿವನನ್ನಾಗಿ ಮಾಡಿ, ಮೈಸೂರಿನ ಸಿಎಂ ಮಾಡ್ತೇನೆ ಎಂದಿದ್ರು- ಎಚ್‍ಡಿಕೆ ವಿರುದ್ಧ ಜಿಟಿಡಿ ವಾಗ್ದಾಳಿ

    – ರೇವಣ್ಣನವರನ್ನು ಡಿಸಿಎಂ ಮಾಡಬಹುದಿತ್ತು, ಮಾಡಲಿಲ್ಲ

    ಮೈಸೂರು: ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಿದರೆ ಅದಕ್ಕೆ ಸಮನಾದ ಖಾತೆ ನೀಡಿ, ಮೈಸೂರಿನ ಸಿಎಂ ಮಾಡುತ್ತೇನೆ ಎಂದು ಕುಮಾರಸ್ವಾಮಿಯವರು ಭರವಸೆ ನೀಡಿದ್ದರು. ಆದರೆ ಸರ್ಕಾರ ರಚನೆಯಾದ ನಂತರ ಆ ರೀತಿ ನಡೆದುಕೊಳ್ಳಲಿಲ್ಲ ಎಂದು ಎಚ್‍ಡಿಕೆ ವಿರುದ್ಧ ಮಾಜಿ ಸಚಿವ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ಸೋಲಿಸಿದರೆ ಅಣ್ಣ ನಿನ್ನ ಗೃಹ ಸಚಿವರನ್ನಾಗಿ ಮಾಡುತ್ತೇನೆ. ಮೈಸೂರಿನ ಸಿಎಂ ಮಾಡುತ್ತೇನೆ ಎಂದು ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಆಗ ನಾನು ಬೇಡ ಅಣ್ಣ ನನಗೆ ಕಂದಾಯ ಖಾತೆ ಕೊಡಿ ಎಂದು ಕೇಳಿದ್ದೆ. ನಾನು ಸಿಎಂ ಮಾಡಿ ಅಂತಾನೂ ಕೇಳಿಲ್ಲ, ಏನನ್ನು ಕೇಳಿಲ್ಲ. ಆದರೂ ಕಂದಾಯ ಖಾತೆ ಕೊಡಲಿಲ್ಲ ಎಂದು ಜಿಟಿಡಿ ಹರಿಹಾಯ್ದಿದ್ದಾರೆ.

    ಈ ಕುರಿತು ಕಳೆದ ಚುನಾವಣಾ ಪ್ರಚಾರದಲ್ಲಿ ಕುಮಾರಸ್ವಾಮಿಯವರು ಭಾಷಣ ಮಾಡಿರುವುದು ನಿಮ್ಮ ಬಳಿ ಇದೆ. ನೀವೇ ಇನ್ನೊಮ್ಮೆ ಬೇಕಾದರೆ ನೋಡಿ. ಅಲ್ಲದೆ, ಹಿಂದಿನ ಜೆಡಿಎಸ್ ಬಿಜೆಪಿ 20-20 ಸರ್ಕಾರದಲ್ಲಿ ರೇವಣ್ಣನವರನ್ನು ಉಪಮುಖ್ಯಮಂತ್ರಿ ಮಾಡಿ, ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಲು ಅವಕಾಶವಿತ್ತು. ಆದರೆ ಕುಮಾರಸ್ವಾಮಿಯವರು ಅದನ್ನು ಮಾಡಿದರಾ? ಹೀಗೆ ಮಾಡಿದ್ದರೆ ದೇವೇಗೌಡರಿಗೂ ಪ್ರೀತಿಯಾಗುತಿತ್ತು. ಬಿಎಸ್‍ವೈಗೂ ಸಮಾಧಾನ ಆಗುತಿತ್ತು. ಆದರೆ ನೀವು ಅದನ್ನು ಮಾಡಲಿಲ್ಲ. ರೇವಣ್ಣನವರನ್ನೇ ಉಪಮುಖ್ಯಮಂತ್ರಿಯಾಗಲು ಬಿಡದವರು, ನನ್ನನ್ನು ಸಿಎಂ ಮಾಡುತ್ತೀರಾ ಎಂದು ಖಾರವಾಗಿ ಪ್ರಶ್ನಿಸಿದರು.

    ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ, ಕಾಂಗ್ರೆಸ್‍ನವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿ, ರೇವಣ್ಣನವರನ್ನು ಡಿಸಿಎಂ ಮಾಡಿದ್ದರೆ ಸರ್ಕಾರ ಉಳಿಯುತಿತ್ತು. ಎರಡು ಬಾರಿ ಸಿಎಂ ಆಗಿದ್ದವರು ನೀವು. ಏನಾದರೂ ಮಾತನಾಡುವಾಗ ಯೋಚನೆ ಮಾಡಿ ಮಾತನಾಡಿ. ಅಧಿಕಾರ ಇದ್ದಾಗ ಹೋಟೆಲ್ ಒಳಗೆ ಕೂತಿದ್ದೀರಿ, ನಾವು ಗೇಟ್ ಬಳಿ ಕಾಯುತ್ತಿದ್ದೆವು. ಈಗ ನಿಮಗೆ ಕಾರ್ಯಕರ್ತರು ನೆನಪಾಗಿದ್ದಾರಾ, ಸಾರಾ ಮಹೇಶ್ ಮಂತ್ರಿ ಮಾಡುವ ಅಗತ್ಯ ಇರಲಿಲ್ಲ. ಆದರೆ ನನಗೆ ಪರ್ಯಾಯವಾಗಿ ನಾಯಕತ್ವ ಬೆಳೆಸಲು ಸಾರಾ ಮಹೇಶ್‍ನನ್ನು ಮಂತ್ರಿ ಮಾಡಿದಿರಿ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

    ಉಪಚುನಾವಣೆಯಲ್ಲಿ ಹುಣಸೂರಿನಿಂದ ನಮ್ಮ ಕುಟುಂಬದವರು ಸ್ಪರ್ಧೆ ಮಾಡುವುದಿಲ್ಲ. ನನ್ನ ಮಗ ಹುಣಸೂರಿನಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಜಿಟಿಡಿ ಸ್ಪಷ್ಟಪಡಿಸಿದರು.