Tag: ಎಚ್ ಡಿ ರೇವಣ್ಣ

  • ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

    ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

    ಹಾಸನ: ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ (H.D Revanna) ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ (A.T Ramaswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹೊಳೆನರಸೀಪುರ ತಾಲ್ಲೂಕಿನ ಜೋಗಿಕೊಪ್ಪಲು ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾವಣನಿಗೆ ಸಕಲ ಐಶ್ವರ್ಯ, ಈಶ್ವರನಿಂದ ಪಡೆದ ಶಕ್ತಿಶಾಲಿ ಅಸ್ತ್ರ ಇದ್ದು ಸಹ ನಾಶವಾದ. ಲಂಕೆ ಕೂಡ ಬೂದಿ ಆಯಿತು. ಯಾವುದಕ್ಕೆ ಆರಂಭ ಇರುತ್ತದೆಯೋ ಅದಕ್ಕೆ ಅಂತ್ಯ ಕೂಡ ಇರುತ್ತದೆ ಎಂದು ರೇವಣ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರಾಚಿಯಲ್ಲಿ ಪೊಲೀಸ್ ಮುಖ್ಯಸ್ಥರ ಕಚೇರಿಗೆ ನುಗ್ಗಿದ ಉಗ್ರರು – ಗುಂಡಿನ ದಾಳಿ

    ನನ್ನಂತಹವನಿಗೆ ಹೀಗೆ ಮಾಡಿದ್ದಾರೆ. ನಿಮ್ಮನ್ನು ಬಿಡುತ್ತಾರಾ? ಎಂದು ಕಾರ್ಯಕರ್ತರಿಗೆ ಕರೆಕೊಟ್ಟ ಅವರು, ನೀವೆಲ್ಲಾ ಸ್ವಾಭಿಮಾನಿಗಳಾಗಬೇಕು. ಆತ್ಮಗೌರವದಿಂದ ನಿಲ್ಲಬೇಕು. ಯಾರ ಮುಂದು ಕೈಕಟ್ಟಿ ನಿಲ್ಲಬಾರದು. ಎಲ್ಲಿ ಜೊತೆಗೆ ಕುಳಿತುಕೊಳ್ಳುವ ಸ್ಥಾನಮಾನ ಇರುತ್ತದೆಯೋ ಅಲ್ಲಿಗೆ ಹೋಗಿ ಎಂದಿದ್ದಾರೆ.

    ಅವರಿಗೆ ಒಳ್ಳೆಯವರು ಬೇಕಾಗಿಲ್ಲ. ಕೆಲವು ಜನ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಲು ತಯಾರಿದ್ದಾರೆ. ಸತ್ಯವನ್ನೇ ಸಾಯಿಸುತ್ತಾರೆ. ಅದನ್ನು ಎದುರಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ರಾಜಕೀಯವಾಗಿ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

    ದೇವೇಗೌಡರು (H.D. Deve Gowda) ಪ್ರಧಾನಿ ಆಗಿದ್ದವರು. ಈ ದೇಶದ ದೊಡ್ಡ ಹುದ್ದೆಗೆ ಏರಿದ್ದವರು. ಅಂತವರನ್ನೇ ಮನೆಯಿಂದ, ಜಿಲ್ಲೆಯಿಂದ ಹೊರಹಾಕಿದಂತವರು ನನ್ನನ್ನು ಬಿಡುತ್ತಾರಾ? ಅವರು ಎಂಪಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದರೆ ಸರಿ, ಬೇರೆಯವರು ನಿಂತುಕೊಳ್ಳಬಹುದಿತ್ತು. ಆದರೆ ಅವರನ್ನು ತುಮಕೂರಿನಿಂದ ನಿಲ್ಲಿಸಿ ಸೋಲಿಸಿದ್ದನ್ನು ಯಾರು ಮರೆಯುವಂತಿಲ್ಲ ಎಂದು ರೇವಣ್ಣ ವಿರುದ್ಧ ಹರಿಹಾಯ್ದಿದ್ದಾರೆ.

    ದೇವೇಗೌಡರನ್ನು ಕೇವಲ ಉತ್ಸವ ಮೂರ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಅಂತಹ ಮುತ್ಸದ್ಧಿ ರಾಜಕಾರಣಿಯನ್ನು ಮೂಲೆಗುಂಪು ಮಾಡಿ ಅವರ ಮಾತನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸರಿಯಾಗಿ ಆಸ್ತಿ ಘೋಷಣೆ ಮಾಡದೆ, ಕೋರ್ಟ್‍ನಲ್ಲಿ ವಿಚಾರಣೆ ನಡೆದು ಶಿಕ್ಷಯಾಗುವ ಸಂದರ್ಭ ಬಂದಾಗ ರಾಜಿ ಮಾಡಿಕೊಳ್ಳಲು ಸ್ವಾರ್ಥಕ್ಕಾಗಿ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರು ಎಂದಿದ್ದಾರೆ.

    ನನ್ನ ಪಕ್ಷದ ಕಾರ್ಯಕರ್ತರು ನನ್ನ ಕುಟುಂಬದವರಿಗಿಂತಲೂ ಹೆಚ್ಚು. ನನ್ನ ಮಕ್ಕಳು ಬೇರೆ ಅಲ್ಲ, ನನ್ನ ಕಾರ್ಯಕರ್ತರು ಬೇರೆ ಅಲ್ಲ ಎಂಬ ಭಾವನೆಯಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನ ಕುಟುಂಬ ಮನೆಗೆ ಮಾತ್ರ ಸೀಮಿತ. ಗಟ್ಟಿ ತಳಪಾಯ ಹಾಕಿಕೊಂಡು ಮುಂದಿನ ರಾಜಕೀಯ ನಿರ್ಧಾರ ತಿಳಿಸುತ್ತೇನೆ. ಮತ್ತೆ ವಿಧಾನಸೌಧಕ್ಕೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.

    ರೇವಣ್ಣ ಅಧಿವೇಶನದಲ್ಲಿ, ರಾಮಸ್ವಾಮಿ ಪ್ರಾಮಾಣಿಕರು ಅದರಲ್ಲಿ ಬೇರೆ ಮಾತಿಲ್ಲ ಎಂದಿದ್ದಾರೆ. ಅವರ ಒಳಗೊಂದು ಹೊರಗೊಂದು ಇದ್ದರೆ ನಾನೇನು ಮಾಡಲಿ ಎಂದು ಪ್ರತಿಕ್ರಿಸಿದ್ದಾರೆ.

    ರೈತರ ಪಕ್ಷ ಎಂದು ಕಟ್ಟಿರುವ ಪಕ್ಷ ಕ್ಷೀಣಿಸುತ್ತಿದೆ ಎಂದು ಮೂರು ವರ್ಷಗಳ ಹಿಂದೆ ಸದನದಲ್ಲಿ ಹೇಳಿದ್ದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಬಲಗೊಳ್ಳುತ್ತಿವೆ. ಹಿಂದಿನಿಂದ ಇದ್ದ ಪ್ರಾದೇಶಿಕ ಪಕ್ಷ ಯಾಕೆ ಕ್ಷೀಣಿಸುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

    ರೈತರ ಹೆಸರು ಹೇಳುತ್ತಾರೆ. ರೈತರಿಗೆ ಜಮೀನು ಮಂಜೂರು ಮಾಡಲು ಹೋದರೆ, ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಹೇಳುತ್ತಾರೆ ಇದು ರೈತರ ಪಕ್ಷನಾ? ರೈತರ ಪರವಾಗಿ ಕೆಲಸ ಮಾಡುತ್ತಿದೆಯಾ? ರೈತರ ಹಿತ ಕಾಪಾಡುವ ಕೆಲಸ ಆಗಿದೆಯೇ? ರೈತರು ತಿನ್ನುವ ಅನ್ನಕ್ಕೆ ಕಲ್ಲು ಹಾಕುವ ಜನ ಇದ್ದಾರೆ. ಅದನ್ನು ಎದುರಿಸುವ ಶಕ್ತಿ ನನಗಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.

    ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದುಕೊಂಡಿದ್ದಾರೆ ಅದು ಸಾಧ್ಯವಿಲ್ಲ. ನಾನು ಮತ್ತೆ ಶಾಸಕನಾಗುತ್ತೇನೆ. ನೆಲ ಹಾಗೂ ಜನರ ರಕ್ಷಣೆಗೆ ನನ್ನ ತಲೆ ಬೇಕಾದ್ರೂ ತೆಗೆಯಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಕಿಡ್ನಿ ಮಾರಿ ದುಡ್ಡು ಕೊಡ್ತೀನಿ.. ನಮ್ಮ ನಾಯಕರಿಗೆ ಟಿಕೆಟ್ ಕೊಡಿ – ಯುವಕನ ಹುಚ್ಚಾಟ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • PSI ಹಗರಣದಲ್ಲಿ ಜೆಡಿಎಸ್‌ನವರಿದ್ದರೂ ಬಲಿಹಾಕಿ – ಎಚ್.ಡಿ.ರೇವಣ್ಣ

    PSI ಹಗರಣದಲ್ಲಿ ಜೆಡಿಎಸ್‌ನವರಿದ್ದರೂ ಬಲಿಹಾಕಿ – ಎಚ್.ಡಿ.ರೇವಣ್ಣ

    ಹಾಸನ: ಪಿಎಸ್‌ಐ ಹಗರಣದಲ್ಲಿ ಜೆಡಿಎಸ್‌ನವರಿದ್ದರೂ ಬಲಿ ಹಾಕಿ. ಅದಕ್ಕೂ ಮುನ್ನ `ನನ್ನ ಮಕ್ಳು ಪೊಲೀಸ್ ಆಗ್ಲಿ’ ಅಂತ ಹೊಲ, ಮನೆ ಮಾರಿ ಬಡವರು ಕೊಟ್ಟಿರುವ ದುಡ್ಡನ್ನು ವಾಪಸ್ ಕೊಡಿಸಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ.

    ಹಾಸನಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪಿಎಸ್‌ಐ ಹಗರಣದಲ್ಲಿ ಜೆಡಿಎಸ್, ಕಾಂಗ್ರೆಸ್ ಯಾರೇ ಭಾಗಿಯಾಗಿದ್ದರೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಪಾರ್ಟಿಯವರಿದ್ದರೂ ಅವರನ್ನು ಬಲಿ ಹಾಕಬೇಕು. ಆದರೆ, ಯಾರೋ ಬಡವರು `ನಮ್ಮ ಮಕ್ಕಳು ಎಸ್‌ಐ ಆಗ್ತಾರೆ’ ಅಂತ ಹೊಲ, ಮನೆ ಮಾರಿ ದುಡ್ಡು ಕೊಟ್ಟಿರುತ್ತಾರೆ. ಆ ದುಡ್ಡನ್ನು ವಾಪಸ್ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಡಿಕೆಶಿಗೆ ನಟಿ ರಮ್ಯಾ ಪ್ರಶ್ನೆ

    PSI ಹಗರಣದಲ್ಲಿ ಮಂತ್ರಿಗಳಿದ್ದಾರೋ, ಯಾರಿದ್ದಾರೋ ನನಗೆ ಗೊತ್ತಿಲ್ಲ. ಕಿಂಗ್ ಪಿನ್ನು ಅನ್ನೋದು ಗೊತ್ತಿಲ್ಲ, ನಾವು ಹಳ್ಳಿ ರೈತರು, SSLC ಓದಿದ್ದೀನಿ ಅಷ್ಟೇ. ಯಾರೇ ತಪ್ಪು ಮಾಡಿದ್ರು ಶಿಕ್ಷೆಯಾಗಲಿ ಎಂದು ನನ್ನ ಒತ್ತಾಯವಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

    ಇದೇ ವೇಳೆ `ಸಮ್ಮಿಶ್ರ ಸರ್ಕಾರದಲ್ಲಿ ನಡೆದಿರುವ ಹಗರಣಗಳ ದಾಖಲೆ ಬಿಡುಗಡೆ ಮಾಡ್ತೇನೆ’ ಎಂಬ ಸಚಿವ ಅಶ್ವಥ್ ನಾರಾಯಣ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸಮ್ಮಿಶ್ರ ಸರ್ಕಾರದಲ್ಲಿ ಯಾವ್ಯಾವ ಹಗರಣಗಳು ನಡೆದಿವೆ? ಕೂಡಲೇ ದಾಖಲೆ ಬಿಡುಗಡೆ ಮಾಡಲಿ. ನನ್ನನ್ನೂ ಸೇರಿದಂತೆ ತನಿಖೆ ನಡೆಸಲಿ, ಯಾರು ತಪ್ಪಿತಸ್ಥರಿದ್ದಾರೆ ಅವರನ್ನು ಬಲಿ ಹಾಕಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಗೊಂದಲ ಇಲ್ಲ: ಕಮಲ್ ಪಂತ್

    Ashwath Narayan, HD Revanna,

    ನಾನು ಲೋಕೋಪಯೋಗಿ ಸಚಿವನಾಗಿದ್ದೆ ನನ್ನನ್ನೂ ಸೇರಿಸಿ ತನಿಖೆ ನಡೆಸಿ. ಇವರೇ ಮುಖ್ಯಮಂತ್ರಿಗಳಿಗೆ ಅರ್ಜಿ ಕೊಟ್ಟು ತನಿಖೆ ಒಳಪಡಿಸಿಕೊಳ್ಳಲಿ. ಮುಖ್ಯಮಂತ್ರಿಗಳು ಸ್ವಯಂಪ್ರೇರಿತವಾಗಿ ತನಿಖೆ ಮಾಡಲು ಆದೇಶ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಮ್ಮಿಶ್ರ ಸರ್ಕಾರದ್ದು, ಈಗಿನ ಸರ್ಕಾರದ ಹಗರಣಗಳನ್ನೂ ತನಿಖೆ ಮಾಡಲಿ. ಅವರದ್ದೇ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲೇ ಸಿಬಿಐ ಇದೆ. ಕೆಲವರಿಗೆ ಸಿಐಡಿ ಮೇಲೆ ನಂಬಿಕೆ ಇಲ್ಲ ಅಂತಾರೆ. ನಮ್ಮ ರಾಜ್ಯದ ಪೊಲೀಸ್ ಇಲಾಖೆ ಅಧಿಕಾರಿಗಳು ದಕ್ಷತೆಯಿಂದ ಇದ್ದಾರೆ. ಅವರು ಸಿಬಿಐಗಿಂತಲೂ ಚೆನ್ನಾಗಿ ತನಿಖೆ ಮಾಡ್ತಾರೆ. ನಾವು ರಾಜಕಾರಣಿಗಳು ಅವರಿಗೆ ಬೆಂಬಲ ಕೊಡಬೇಕು ಎಂದು ಸಲಹೆ ನೀಡಿದ್ದಾರೆ.

  • ಹಾಸನದಲ್ಲಿ ನಿಲ್ಲದ ಪ್ರೀತಂ ಗೌಡ Vs ಎಚ್‍.ಡಿ.ರೇವಣ್ಣ ಜಟಾಪಟಿ – ರಾತ್ರೋ ರಾತ್ರಿ ತಾಲೂಕು ಕಚೇರಿ ಡೆಮಾಲಿಶ್

    ಹಾಸನದಲ್ಲಿ ನಿಲ್ಲದ ಪ್ರೀತಂ ಗೌಡ Vs ಎಚ್‍.ಡಿ.ರೇವಣ್ಣ ಜಟಾಪಟಿ – ರಾತ್ರೋ ರಾತ್ರಿ ತಾಲೂಕು ಕಚೇರಿ ಡೆಮಾಲಿಶ್

    ಹಾಸನ: ಶಾಸಕ ಪ್ರೀತಂಗೌಡ ನೇತೃತ್ವದಲ್ಲಿ ಕೈಗೊಂಡ ಹಲವು ಕಾಮಗಾರಿಗಳಲ್ಲಿ ಹಾಸನದಲ್ಲಿ ಹಳೆತಾಲೂಕು ಕಚೇರಿ ಕೆಡವಿ ನೂತನವಾಗಿ ನಿರ್ಮಿಸುವುದು ಮತ್ತು ಟ್ರಕ್ ಟರ್ಮಿನಲ್ ಕೂಡ ಸೇರಿದ್ದವು. ಆದ್ರೆ ಇವೆರೆಡು ಕಾಮಗಾರಿಗಳನ್ನು ಮಾಜಿ ಸಚಿವ ಎಚ್‍.ಡಿ.ರೇವಣ್ಣ ವಿರೋಧಿಸುತ್ತಲೇ ಬಂದಿದ್ದರು. ಒಂದು ಕಡೆ ಟ್ರಕ್ ಟರ್ಮಿನಲ್ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ರೇವಣ್ಣ ಯಶಸ್ವಿಯಾಗಿದ್ರು. ಆದ್ರೆ ರೇವಣ್ಣ ಅವರನ್ನೇ ಯಾಮಾರಿಸಿ ಇದೀಗ ರಾತ್ರೋ ರಾತ್ರಿ ಹಾಸನ ತಾಲೂಕು ಕಚೇರಿ ಕೆಡವಿದ್ದು ಹಾಸನದಲ್ಲಿ ಮತ್ತೊಂದು ಜಿದ್ದಾಜಿದ್ದಿಗೆ ಕಾರಣವಾದಂತಾಗಿದೆ.

    ಟ್ರಕ್ ಟರ್ಮಿನಲ್ ವಿರೋಧಿಸಿ ಎಚ್‍ಡಿ.ರೇವಣ್ಣ & ಸನ್ಸ್ ಹೋರಾಟಕ್ಕಿಳಿದ ಪರಿಣಾಮ ಇದೀಗ ಕೆಲಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಾಸನದ ಕೆಂಚಟ್ಟಹಳ್ಳಿ ಬಳಿ ಇರುವ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಮುಂಭಾಗ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಮತ್ತು ವಿದ್ಯಾರ್ಥಿಗಳು ಹೋರಾಟ ನಡೆಸಿದ್ರು. ಅವರಿಗೆ ಎಚ್‍.ಡಿ.ರೇವಣ್ಣ ಬೆಂಬಲ ಸೂಚಿಸಿದ್ರು. ಆದ್ರೆ ಯಾವುದೇ ಕಾರಣಕ್ಕೂ ಟ್ರಕ್ ಟರ್ಮಿನಲ್ ನಿಲ್ಲಿಸಲ್ಲ ಎಂದು ಪ್ರೀತಂ ಗೌಡ ಸವಾಲು ಹಾಕಿದ್ರು. ಇದಾದ ನಂತರ ನಿನ್ನೆ ರೇವಣ್ಣ ಮತ್ತು ಅವರ ಪುತ್ರರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಮಗಾರಿ ತಡೆದು, ಕಾಂಪೌಂಡ್ ಗೋಡೆ ಕೆಡವಲಾಗಿತ್ತು. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕಾಮಗಾರಿ ಕೆಲಸ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ: ಪ್ರೀತಂ ಸವಾಲು

    ಕೇವಲ ಟ್ರಕ್ ಟರ್ಮಿನಲ್ ವಿಚಾರವಲ್ಲ. ಹಾಸನದಲ್ಲಿ ಈಗಿರುವ ತಾಲೂಕು ಕಚೇರಿ ಕೆಡವಿ, ನೂತನವಾಗಿ ತಾಲೂಕು ಕಚೇರಿ ನಿರ್ಮಿಸಲು ಪ್ರೀತಂ ಗೌಡ ಯೋಜನೆ ರೂಪಿಸಿದ್ರು. ಆದ್ರೆ ಅದಕ್ಕೂ ಯಾವುದೇ ಕಾರಣಕ್ಕೂ ಅವಕಾಶ ಕೊಡಲ್ಲ. ಈಗಿರುವ ಹಳೆಯ ಕಟ್ಟಡವೇ ಇರಬೇಕೆಂದು ರೇವಣ್ಣ ಪಟ್ಟುಹಿಡಿದಿದ್ರು. ಯಾವಾಗ ಟ್ರಕ್ ಟರ್ಮಿನಲ್ ಕೆಲಸವನ್ನು ರೇವಣ್ಣ & ಸನ್ಸ್ ತಡೆಹಿಡಿದ್ರೋ, ಇದೀಗ ರಾತ್ರೋ ರಾತ್ರಿ ಹಾಸನ ತಾಲೂಕು ಕಚೇರಿಯನ್ನು, ಕಿಟಕಿ ಬಾಗಿಲುಗಳ ಸಮೇತವೇ ನೆಲಕ್ಕುರುಳಿಸುವ ಕೆಲಸ ಮಾಡಿಸಿರುವ ಪ್ರೀತಂಗೌಡ, ಎಚ್‍ಡಿ.ರೇವಣ್ಣನಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ

    ಒಟ್ಟಾರೆ ಚುನಾವಣೆ ಇನ್ನೂ ಒಂದು ವರ್ಷವಿರುವಾಗಲೇ ಹಾಸನದಲ್ಲಿ ಅಭಿವೃದ್ಧಿ ಹೆಸರಲ್ಲಿ ಪ್ರೀತಂಗೌಡ ಮತ್ತು ಎಚ್‍ಡಿ.ರೇವಣ್ಣ ನಡುವಿನ ಜಟಾಪಟಿ ಜೋರಾಗಿಯೇ ನಡೆಯುತ್ತಿದೆ. ನನ್ನ ಅಭಿವೃದ್ಧಿ ಕೆಲಸಕ್ಕೆ ರೇವಣ್ಣ ಬೇಕಂತಲೇ ಸಮಸ್ಯೆ ಮಾಡ್ತಿದ್ದಾರೆ ಅನ್ನೋದು ಪ್ರೀತಂಗೌಡ ಆರೋಪವಾದ್ರೆ, ಇದೆಲ್ಲ ಕೇವಲ ಹಣ ಮಾಡುವ ಕಾಮಗಾರಿ ಅನ್ನೋದು ರೇವಣ್ಣ ಆರೋಪವಾಗಿದೆ.

  • ನೀನು ದನ ಕಾಯೋನು, EO ಕೆಲಸದಲ್ಲಿ ಇದ್ದೀಯ – ಅಧಿಕಾರಿ ವಿರುದ್ಧ ಎಚ್‍.ಡಿ.ರೇವಣ್ಣ ಗರಂ

    ನೀನು ದನ ಕಾಯೋನು, EO ಕೆಲಸದಲ್ಲಿ ಇದ್ದೀಯ – ಅಧಿಕಾರಿ ವಿರುದ್ಧ ಎಚ್‍.ಡಿ.ರೇವಣ್ಣ ಗರಂ

    ಹಾಸನ: ನೀನು ದನ ಕಾಯೋನು ಇಓ ಕೆಲಸದಲ್ಲಿ ಇದ್ದೀಯ. ದನಗೆ ಇಂಜೆಕ್ಷನ್ ಕೊಡೋಕೆ ಹೋಗು ಎಂದು ತಾ.ಪಂ ಇಓಗೆ ಏಕವಚನದಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ತರಾಟೆಗೆ ತೆಗೆದುಕೊಂಡ ಘಟನೆ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.

    ಹಾಸನದ ಕೆಂಚಟ್ಟಹಳ್ಳಿ ಬಳಿ ಇರುವ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಮುಂಭಾಗ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ವಿದ್ಯಾರ್ಥಿಗಳು, ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾಮಗಾರಿ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿಸಿ ಜಿಲ್ಲಾಧಿಕಾರಿ ಮತ್ತು ತಾಪಂ ಇಒ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಎಚ್.ಡಿ.ರೇವಣ್ಣ, ತಾಪಂ ಇಒ ಕುರಿತು ನೀನು ದನ ಕಾಯೋನು, ಇಓ ಕೆಲಸದಲ್ಲಿ ಇದ್ದೀಯ. ಹೆಣ್ಣುಮಕ್ಕಳನ್ನು ಹೆದರಿಸ್ತೀಯಾ, ದನ ಕಾಯಕೆ ಹೋಗು ಎಂದು ಗದರಿದ್ರು. ಅದಕ್ಕೆ ಇಒ ಕಾಮಗಾರಿ ನಡೆಸಲು ಡಿಸಿ ನಿರ್ದೇಶನ ನೀಡಿದ್ದರು ಹಾಗಾಗಿ ಕಾಮಗಾರಿ ನಡೆಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಭು ಚವ್ಹಾಣ್ ಬಳಿ ಸಾಕ್ಷ್ಯ ಕೇಳಲ್ಲ ಯಾಕೆ – ಆರಗಗೆ ಪ್ರಿಯಾಂಕ್‌ ಖರ್ಗೆ ಸವಾಲು

    ಈ ಉತ್ತರ ಕೇಳಿ ಮತ್ತಷ್ಟು ಕೆರಳಿದ ರೇವಣ್ಣ, ಡಿಸಿ ಮನೆಗೆ ನುಗ್ಗು ಅಂತಾನೆ ಹೋಗಿ ನುಗ್ಗು ನೀನು. ಏ ಪಿಎ ಕರೆಯೋ ಅವನ್ಯಾರು? ಡಿಸಿ. ಇವರಿಬ್ಬರು ಸೇರಿಕೊಂಡು ಅದೇನ್ ಮಾಡ್ತರೆ ಮಾಡ್ಲಿ. ಎಷ್ಟು ಹೆಣ ಉರುಳಿಸುತ್ತಾರೆ ಉರುಳಿಸಲಿ. ವರ್ಗಾವಣೆಗೋಸ್ಕರ ಈ ರೀತಿ ಮಾಡ್ತೀರ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತದ 10, ಪಾಕಿಸ್ತಾನದ 6 ಯೂಟ್ಯೂಬ್ ಚ್ಯಾನೆಲ್‌ಗಳು ಬ್ಯಾನ್

    ಈ ವೇಳೆ ಜಿಲ್ಲಾಧಿಕಾರಿ ಆರ್.ಗಿರೀಶ್, ಸ್ವಲ್ಪ ಸಮಾಧಾನವಾಗಿ ಕೇಳಿ ಸರ್ ಎಂದು ರೇವಣ್ಣ ಅವರಿಗೆ ತಿಳಿಸಿದ್ರು. ಆಗ ರೇವಣ್ಣ ಜನ ವಿರೋಧ ಮಾಡುತ್ತಿದ್ದಾರೆ. ಟ್ರಕ್ ಟರ್ಮಿನಲ್ ಕಾಮಗಾರಿ ನಿಲ್ಲಿಸಿ. ಟ್ರಕ್ ಟರ್ಮಿನಲ್‍ಗೆ ಬೇರೆ ಕಡೆ ಜಾಗ ಕೊಡಿ. ಮಿನಿಸ್ಟರ್ ಹೇಳ್ತಾರೆ ಡಿಸಿ ಕಚೇರಿ ಎಂಎಲ್‍ಎಗೆ ಬರೆದು ಕೊಡಿ ಅಂತ, ಬರೆದು ಕೊಡುತ್ತೀರಾ? ಹಾಸನನ ಏನ್ ಎಂಎಲ್‍ಎಗೆ ಬರೆದುಕೊಟ್ಟಿದ್ದಾರ ಎಂದು ಪ್ರಶ್ನಿಸಿದರು. ಈ ವೇಳೆ ರೇವಣ್ಣ ಅವರಲ್ಲಿ ಮನವಿ ಮಾಡಿದ ಜಿಲ್ಲಾಧಿಕಾರಿ ಆರ್.ಗಿರೀಶ್, ನಾಳೆ, ನಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ಕರೆಯುತ್ತೇನೆ ಎಂದು ತಿಳಿಸಿದರು.

  • ಎಚ್‍ಡಿಡಿ ಪತ್ನಿಗೆ ಐಟಿ ನೋಟಿಸ್

    ಎಚ್‍ಡಿಡಿ ಪತ್ನಿಗೆ ಐಟಿ ನೋಟಿಸ್

    ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಐಟಿಯಿಂದ ನೋಟೀಸ್ ನೀಡಲಾಗಿದೆ.

    ಈ ಕುರಿತು ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಜಮೀನನಲ್ಲಿ ಕಬ್ಬು ಬೆಳೆಯುತ್ತಿದ್ದೇವೆ. ಅದನ್ನು ನೋಡಬೇಕು ಅದನ್ನು ನೋಡದೆ ನಮ್ಮ ತಾಯಿಗೆ ನೋಟೀಸ್ ಕೊಟ್ಟಿದ್ದಾರೆ. ಆರ್‍ಟಿಓದಲ್ಲಿ ನೂರು ಕೋಟಿ ಇನ್ನೂರು ಕೋಟಿ ಲೂಟಿ ಹೊಡೆದಿದ್ದು, ಅವರಿಗೇಕೆ ನೀವು ನೋಟೀಸ್ ನೀಡಲ್ಲ. ಒಂದು ಏಕರೆಯಲ್ಲಿ ಎಷ್ಟು ಬೆಳೆ ಬೆಳೆಯುತ್ತೇವೆ ಬಂದು ನೋಡಲಿ ಎಂದು ಸಿಡಿದರು. ಇದನ್ನೂ ಓದಿ: 32 ವರ್ಷಗಳ ನಂತ್ರ ಕಾಶ್ಮೀರಿ ಪಂಡಿತರಿಗೆ ಸಿಕ್ಕಿದ್ದು ಸಿನಿಮಾ, ನ್ಯಾಯವಲ್ಲ: ಕೇಜ್ರಿವಾಲ್

    ನಾನು ಡಿಸಿಗೆ ಹೇಳಿದ್ದೇನೆ. ನಾನು ಸರ್ವೆ ಮಾಡಿ ಬಿಲ್ ಕೊಟ್ಟರೆ ಸರಿಯಾಗಲ್ಲ. ಆಪ್‍ನಲ್ಲಿ ಸರ್ವೆ ಮಾಡಿಸಿ ನಮ್ಮ ತಂದೆ, ತಾಯಿ ಏನಾದರು ಕೋಟ್ಯಂತರ ರೂ ಆಸ್ತಿ ಮಾಡಿಲ್ಲ. ಅವರು ನನ್ನ ತಾಯಿಗೆ ನೋಟಿಸ್ ಕೊಟ್ಟಿದ್ದಾರೆ. ಉತ್ತರ ಕೊಡುತ್ತೇವೆ ನಮಗೂ ಕಾಲ ಬರುತ್ತೆ. ಇದೇ ಏನು ಶಾಶ್ವತವಾಗಿ ಇರಲ್ಲ. ಏನಾದರೂ ಕದ್ದು ವ್ಯವಸಾಯ ಮಾಡುತ್ತಿದ್ದೇವಾ ಅಂತ ಡ್ರೋಣ್ ಸರ್ವೆ ಮಾಡಲಿ. ದೊಡ್ಡಪುರ, ಪಡುವಲ ಹಿಪ್ಪೆ ಹತ್ತಿರ ನಮ್ಮ ಗದ್ದೆ ಇದೆ ಎಂದರು. ಇದನ್ನೂ ಓದಿ:  ಬಾಗಲಕೋಟೆಯಲ್ಲಿ ಹಿಜಬ್‍ಗಾಗಿ ಪರೀಕ್ಷೆ ಕೈ ಬಿಟ್ಟ ವಿದ್ಯಾರ್ಥಿನಿ

    ನಾನೇನು ಹೊಸದಾಗಿ ಆಸ್ತಿ ಮಾಡಲು ಹೋಗಿದ್ದೇನಾ? ನಾನೇನಾದರು ಸೈಟ್ ಬ್ಯುಸಿನೆಸ್ ಮಾಡಲು ಹೋಗಿದ್ದೇನ. ನಗರಸಭೆಯಿಂದ ಸೈಟ್ ಮಾಡಲು ಹೋಗಿದ್ದೇಮಾ? ಒಂದು ಪಕ್ಷವನ್ನು ಗುರಿ ಇಟ್ಟುಕೊಂಡು ಈ ರೀತಿಯೆಲ್ಲಾ ಮಾಡಲು ಹೋಗಬೇಡಿ. ಕಾನೂನು ರೀತಿ ರೀವಾಜಗಳು ಏನಿದೆ ಆ ರೀತಿ ನೋಟಿಸ್ ಕೊಡಿ. ನನಗೂ ಕೊಡಿ ಕೆಲವರು ಆರ್‍ಟಿಓ ನಲ್ಲಿ ಲೂಟಿ ಮಾಡಿ ಕೆಲಸಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ. ಕೋಟಿಗಟ್ಟಲೆ ಹಣ ಖರ್ಚು ಮಾಡಿ ಎಲೆಕ್ಷನ್‍ಗೆ ನಿಲ್ಲುತ್ತಿದ್ದಾರೆ. ಅಂತಹವರಿಗೆ ನೋಟಿಸ್ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಕಾಂಗ್ರೆಸ್‍ಗೆ ಮಾನ-ಮರ್ಯಾದೆ ಇಲ್ಲ, ಸುಳ್ಳಿನಿಂದ ಜಾಸ್ತಿ ದಿನ ರಾಜಕೀಯ ನಡೆಯಲ್ಲ : ಎಚ್.ಡಿ.ರೇವಣ್ಣ

    ಕಾಂಗ್ರೆಸ್‍ಗೆ ಮಾನ-ಮರ್ಯಾದೆ ಇಲ್ಲ, ಸುಳ್ಳಿನಿಂದ ಜಾಸ್ತಿ ದಿನ ರಾಜಕೀಯ ನಡೆಯಲ್ಲ : ಎಚ್.ಡಿ.ರೇವಣ್ಣ

    ಹಾಸನ: ಕಾಂಗ್ರೆಸ್‍ಗೆ ಮಾನ-ಮರ್ಯಾದೆ ಇಲ್ಲ. ಅವರಿಗೆ ನಾಚಿಕೆಯಾಗಬೇಕು. ಇದು ದೊಂಬರಾಟ. ಸುಳ್ಳಿನಿಂದ ಜಾಸ್ತಿ ದಿನ ರಾಜಕೀಯ ನಡೆಯಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಕ್ರೋಶ ಹೊರಹಾಕಿದ್ದಾರೆ.

    ಮೇಕೆದಾಟು ಯೋಜನೆಗೆ ಜೆಡಿಎಸ್-ಬಿಜೆಪಿ ಎರಡು ಪಕ್ಷಗಳು ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರಾಜ್ಯದಲ್ಲಿ ದೇವೇಗೌಡರು ನೀರಾವರಿ ಮಂತ್ರಿಯಿಂದ ಇಳಿದ ಮೇಲೆ 30 ವರ್ಷಗಳು ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯವನ್ನು ಆಳಿವೆ. ರಾಜ್ಯದಲ್ಲಿ ಹತ್ತು ವರ್ಷ ಬಿಜೆಪಿ, ಹತ್ತು ವರ್ಷ ಕಾಂಗ್ರೆಸ್ ಸರ್ಕಾರವಿತ್ತು. ಕೇಂದ್ರದಲ್ಲಿ ಹತ್ತು ವರ್ಷ ಯುಪಿಎ, ಎಂಟು ವರ್ಷ ಎನ್‍ಡಿಎ. ಸರ್ಕಾರವಿತ್ತು. ಸಮ್ಮಿಶ್ರ ಸರ್ಕಾರದಲ್ಲೂ ನೀರಾವರಿ ಮಂತ್ರಿ ಯಾರಿಗೂ ಕೊಟ್ಟಿರಲಿಲ್ಲ, ಅವರೇ ಗುತ್ತಿಗೆ ತೆಗೆದುಕೊಂಡಿದ್ದರು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಮ್ಮಿಶ್ರ ಸರ್ಕಾರದಲ್ಲಿ ಈಗ ಮೆರವಣಿಗೆ ಹೊರಟಿರುವವರೇ ಜಲಸಂಪೂನ್ಮೂಲ ಸಚಿವರಾಗಿದ್ದರು. ಅದರಲ್ಲಿ ರುಚಿ ಕಂಡು ಆ ಹುದ್ದೆಯನ್ನು ಅವರೇ ಇಟ್ಟುಕೊಂಡಿದ್ದರು. ಬೂತಯ್ಯನ ಮಗ ಅಯ್ಯು ಸಿನಿಮಾದಲ್ಲಿ ಬರುವ ಲೋಕನಾಥ್ ಅವರ ಉಪ್ಪಿನಕಾಯಿ ಪಾತ್ರಕ್ಕೆ ಡಿಕೆಶಿಯನ್ನು ಹೋಲಿಸಿದ ವ್ಯಂಗ್ಯವಾಡಿದರು.

    ನಾಚಿಕೆಯಾಗಬೇಕು ಇವರಿಗೆ, ಇದು ದೊಂಬರಾಟ. ಈ ಹಿಂದೆ ನಮ್ಮನ್ನು ಕರೆದುಕೊಂಡು ಹೋಗಿ ದಸರಾ ನೋಡಿ, ಪ್ಯಾಲೇಸ್ ನೋಡಿ ಎನ್ನುತ್ತಿದ್ದರು. ಅದೇ ರೀತಿ ಇವರು ನಾವು ದುಡ್ಡು ಹೊಡೆಯುವುದು ನೋಡಿ, ಮೆರವಣಿಗೆ ನೋಡಿ ಎನ್ನುತ್ತಿದ್ದಾರೆ. ಸುಳ್ಳಿನಿಂದ ಜಾಸ್ತಿ ದಿನ ರಾಜಕೀಯ ನಡೆಯಲ್ಲ. ಈ ರಾಷ್ಟ್ರೀಯ ಪಕ್ಷದವರೇ ನೀರಾವರಿ ಮಂತ್ರಿಗಳಾಗಿದ್ದರು ಆಗ ಮಾಡಲಿಲ್ಲ. ಈಗ ನಮ್ಮ ಪಕ್ಷವನ್ನು ಎಳೆದು ತರುತ್ತಿದ್ದಾರೆ. ಈ ಕಾಂಗ್ರೆಸ್‍ಗೆ ಮಾನ-ಮರ್ಯಾದೆ ಇಲ್ಲ ಕಿಡಿಕಾರಿದರು. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ

    ಯಾರೋ ಒಬ್ಬರು ಜ್ಯೋತಿಷಿ ನೀರಿನಲ್ಲಿ ಮುಳುಗಿ ಎಂದು ಹೇಳಿದ್ದಾರೆ. ಪೂಜೆ ಮಾಡಲು ಹೋಗಿ ದುಬುಕ್ ಅಂಥಾ ಬಿದ್ದರು. ಇಡೀ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಗ್ರಹಣ ಹಿಡಿದಿದೆ. ಈ ಪೂಜೆಯಿಂದನಾದರೂ ಗ್ರಹಣ ಹೋಗುತ್ತದೆ ಅಂದುಕೊಂಡಿದ್ದೇನೆ. ಜೆಡಿಎಸ್ ನೀರಾವರಿ ಯೋಜನೆಗಳಿಗೆ ತಡೆ ಒಡ್ಡಲ್ಲ. ಇವರು ಕರೆದಾಗ ಪಾದಯಾತ್ರೆಗೆ ಹೋಗಲು ನಾವೇನು ಇದಲ್ಲ. ನೀವು ಮಾಡಿರುವ ಕರ್ಮಕಾಂಡ, ನೀವು ರಾಜ್ಯಕ್ಕೆ ದ್ರೋಹ ಬಗೆದಿದ್ದೀರಿ. ನಮಗೆ ಚುನಾವಣೆ, ಅಧಿಕಾರ ಮುಖ್ಯವಲ್ಲ. ರಾಜ್ಯದ ನೀರಾವರಿ ಯೋಜನೆಗಳು, ನೆಲ, ಜಲ ಎಲ್ಲಾ ಸಮಾಜವನ್ನು ಒಟ್ಟಿಗೆ ಕೊಂಡೊಯ್ಯುವುದೇ ನಮ್ಮ ಗುರಿ ಎಂದು ಹೇಳಿದರು.

    ಜನಕ್ಕೆ ಕಾಂಗ್ರೆಸ್ ಮೇಲೆ ಪ್ರೀತಿ ಇದ್ದರೆ ಸ್ವಯಂಪ್ರೇರಿತವಾಗಿ ಪಾದಯಾತ್ರೆಗೆ ಬರುತ್ತಿದ್ದರು. ಪಾದಯಾತ್ರೆಗೆ ಬಂದವರಿಗೆ 300 ರೂ. ಪೆಟ್ರೋಲ್ ಟೋಕನ್ ಏಕೆ ಕೊಡುತ್ತಿದ್ದಾರೆ. ಎಲ್ಲರಿಗೂ ಪೊಂಗಲ್, ಬಜ್ಜೆ, ಪಲಾವ್ ಏಕೆ ಮಾಡಿಸುತ್ತಿದ್ದಾರೆ. ಜೆಡಿಎಸ್ ಅಂದರೆ ಭಯವಿದೆ. ಜೆಡಿಎಸ್ ಮುಗಿಸಲು ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿವೆ. ಅದಕ್ಕಾಗಿ ಜೆಡಿಎಸ್ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ತೈಲ ಬೆಲೆ ಭಾರೀ ಏರಿಕೆ, ಕಜಕಿಸ್ತಾನದಲ್ಲಿ ಹಿಂಸಾಚಾರ – ಸರ್ಕಾರ ಪತನ

  • ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ಬೆಳಗಾವಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯ ಅವಶ್ಯಕತೆ ಏನಿದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ ಎಚ್‍.ಡಿ ರೇವಣ್ಣ ಪ್ರಶ್ನಿಸಿದ್ದಾರೆ.

    ಬೆಳಗಾವಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಯ ಉದ್ದೇಶ ಸಮುದಾಯದ ಟಾರ್ಗೆಟ್ ಅಲ್ಲ, ಇದು ವೋಟ್‍ಗಳು ಟಾರ್ಗೆಟ್ ಆಗಿದೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆಗೆ ನಮ್ಮ ಸಂಪೂರ್ಣ ವಿರೋಧ ಇದೆ. ಮಹಾತ್ಮಾ ಗಾಂಧಿಜೀಯವರು ಹೇಳಿದಂತೆ ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂಬುದು ನಮ್ಮ ಭಾವನೆ. ಇಚ್ಛೆ ಇದ್ದವರು ಮತಾಂತರ ಆಗುತ್ತಾರೆ, ಇಲ್ಲದವರು ಆಗಲ್ಲ. ನಾವು ಈ ಮಸೂದೆ ವಿರೋಧ ಮಾಡುತ್ತೇವೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ:  ಶಾಸಕರೊಬ್ಬರ ಸಂತೃಪ್ತಿಗೆ ಡಿಕೆಶಿ ಎಂಇಎಸ್ ಪರ ಬ್ಯಾಟಿಂಗ್: ಸಚಿವ ಈಶ್ವರಪ್ಪ

    ನಮ್ಮದು ಪ್ರಾದೇಶಿಕ ಪಕ್ಷ, ಉತ್ತರ ಕರ್ನಾಟಕದ ಅಭಿವೃದ್ಧಿ ಉದ್ದೇಶವಿಟ್ಟೇ ಎಚ್.ಡಿಕೆ ಬೆಳಗಾವಿಯಲ್ಲಿ ಅಧಿವೇಶನಕ್ಕೆ ನಾಂದಿ ಹಾಡಿದರು. ಉತ್ತರ ಕರ್ನಾಟಕಕಕ್ಕೆ ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ಬೆಳಗಾವಿಯಲ್ಲಿ ನಡೆದ ಘಟನೆ ಬಗ್ಗೆ ರಾಷ್ಟ್ರೀಯ ಪಕ್ಷಗಳ ನಾಯಕರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಪ್ರಚೋದನೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂಬುದು ನಮ್ಮ ನಿಲುವು ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ಡಿಕೆಶಿ

    BJP - CONGRESS

    ನಮ್ಮ ಪಕ್ಷದ ಶಾಸಕರು ಕಿಡಿಗೇಡಿಗಳ ಕೃತ್ಯವನ್ನು ಸದನದಲ್ಲಿ ಖಂಡಿಸಿದ್ದಾರೆ. ಆದರೆ ಬೆಳಗಾವಿಯ ನಾಯಕರು ಹಾಗೂ ಎರಡು ರಾಷ್ಟ್ರೀಯ ಪಕ್ಷಗಳು ವೋಟ್‍ಗಾಗಿ ಹಿಂದೆ ಬಿದ್ದಿವೆ. ಮತಕ್ಕಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಕರ್ನಾಟಕದ ಸಮಗ್ರ ಅಭಿವೃದ್ಧಿ, ನೀರಾವರಿ ಯೋಜನೆಗಳ ಚರ್ಚೆಗೆ ನಿಲುವಳಿ ಸೂಚನೆ ಮಂಡಿಸಲಿದ್ದೇವೆ. ಮಹದಾಯಿ ವಿವಾದ ಬಗೆಹರಿಸಲು ಇಷ್ಟು ವರ್ಷ ಬೇಕಾ? ಮಹದಾಯಿ, ಕೃಷ್ಣಾ, ಘಟಪ್ರಭಾ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆಗೆ ನಿಲುವಲಿ ಸೂಚನೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳ್ಳ ಸೇರುತ್ತಿದೆ ಉಮೇಶ್ ಕತ್ತಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ತ್ಯಾಜ್ಯ ನೀರು

  • ಮೊದಲನೇ ಬಾರಿಗೆ ನನ್ನ ಅಣ್ಣನಿಗೆ ವೋಟು ಹಾಕುತ್ತಿರೊದ್ರಿಂದ ಒಳ್ಳೆಯ ನಂಬರ್‌ನಲ್ಲಿ ವೋಟು ಹಾಕ್ದೆ ಅಷ್ಟೇ: ಪ್ರಜ್ವಲ್ ರೇವಣ್ಣ

    ಮೊದಲನೇ ಬಾರಿಗೆ ನನ್ನ ಅಣ್ಣನಿಗೆ ವೋಟು ಹಾಕುತ್ತಿರೊದ್ರಿಂದ ಒಳ್ಳೆಯ ನಂಬರ್‌ನಲ್ಲಿ ವೋಟು ಹಾಕ್ದೆ ಅಷ್ಟೇ: ಪ್ರಜ್ವಲ್ ರೇವಣ್ಣ

    ಹಾಸನ: ಮತದಾನ ಮಾಡಲು ಆಗಮಿಸಿದ ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಒಂಬತ್ತನೆಯವರಾಗಿ ಮತ ಚಲಾಯಿಸುವಂತೆ ರೇವಣ್ಣ ಸೂಚಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ, ಪುರಸಭೆಯಲ್ಲಿ ನಡೆದಿದೆ.

    ಎಂಎಲ್‍ಸಿ ಚುನಾವಣೆಗೆ ಪುರಸಭೆಯಲ್ಲಿ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ರೇವಣ್ಣ ಅದಾಗಲೇ ಬಂದು ಮತ ಚಲಾಯಿಸಿದ್ದಾರೆ. ಇದೇ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿದ್ದರು. ಆಗ ಹೆಚ್‍ಡಿ.ರೇವಣ್ಣ ಏಳು ಆಗಿದೆಯಾ, ಎಂಟು ಆಗಿದೆಯಾ, ಪ್ರಜ್ವಲ್‍ಗೆ ೯ನೇಯವರಾಗಿ ಮತ ಚಲಾಯಿಸಲು ಅವಕಾಶ ಕೊಡಿ ಎಂದು ಸೂಚಿಸಿದ್ದಾರೆ. ನಂತರ   ಪ್ರಜ್ವಲ್ ರೇವಣ್ಣ ಮತ ಚಲಾಯಿಸಿದರು. ಇದನ್ನೂ ಓದಿ: ಐರಾಗೆ ಹುಟ್ಟುಹಬ್ಬದ ಸಂಭ್ರಮ – ನಿನ್ನ ಕೈ ಹಿಡಿಯಲು ಯಾವಾಗಲೂ ಇರುತ್ತೇನೆ ಅಂದ ರಾಧಿಕಾ

    ಈ ಬಗ್ಗೆ ಪ್ರತಿಕ್ರಿಯಿಸಿದ ಹೆಚ್‍ಡಿ.ರೇವಣ್ಣ ಒಂಬತ್ತು ಲಕ್ಕಿ ನಂಬರೋ ಏನೋ ಗೊತ್ತಿಲ್ಲ. ಒಂಬತ್ತನೇ ಮತದಾರನಾಗಿ ವೋಟು ಹಾಕ್ತೀನಿ ಅಂದಿದ್ದರು, ಹಾಕಪ್ಪ ಅಂದೆ ಎಂದು ತಿಳಿಸಿದೆ. ಈ ಬಗ್ಗೆ ನಂತರ ಮಾತನಾಡಿದ ಪ್ರಜ್ವಲ್ ರೇವಣ್ಣ, ಮೊದಲಿನಿಂದಲೂ ಐದು, ಒಂಭತ್ತು ನಮಗೆ ಲಕ್ಕಿ ನಂಬರ್. ನಂಬರ್ ನಂಬೋದು ಪ್ರಶ್ನೆ ಅಲ್ಲಾ. ಆದರೆ ಎಲ್ಲರಿಗೂ ಒಂಭತ್ತು ಒಳ್ಳೆಯ ಸಂಖ್ಯೆ ಅಷ್ಟೇ. ಮೊದಲನೇ ಭಾರಿಗೆ ನನ್ನ ಅಣ್ಣನಿಗೆ ವೋಟು ಹಾಕುತ್ತಿರುವುದರಿಂದ ಒಳ್ಳೆಯ ನಂಬರ್‌ನಲ್ಲಿ ವೋಟು ಹಾಕಿದ್ದೇನೆ ಅಷ್ಟೇ. ಐದು ನನ್ನ ಹುಟ್ಟಿದಹಬ್ಬ, ನಾನು ಹುಟ್ಟಿದ ದಿನ ಒಳ್ಳೆಯ ದಿನ ಅಂಥಾ ನಾನು ಭಾವಿಸುತ್ತೇನೆ. ಅದರಲ್ಲಿ ಯಾವ ಮೂಢನಂಬಿಕೆ ಏನಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಫೋಟೋ ತೆಗೆಯುವಾಗ ಪುರುಷರು ಯಾಕೆ ತುಂಬಾ ಕಷ್ಟಪಡುತ್ತಾರೆ?: ರಾಧಿಕಾ ಪಂಡಿತ್

  • ನೀವು ನನಗೆ ವೋಟ್ ಹಾಕಲ್ಲ- ಹೆಚ್.ಡಿ.ರೇವಣ್ಣ ತಮಾಷೆ

    ನೀವು ನನಗೆ ವೋಟ್ ಹಾಕಲ್ಲ- ಹೆಚ್.ಡಿ.ರೇವಣ್ಣ ತಮಾಷೆ

    ಹಾಸನ: ಮಳೆ ಹಾನಿ ವೀಕ್ಷಣೆ ವೇಳೆ ಎಲ್ಲಿ ನೀವು ನನಗೆ ವೋಟ್ ಹಾಕಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಮಹಿಳೆಯೊಬ್ಬರಿಗೆ ತಮಾಷೆ ಮಾಡಿದ ಪ್ರಸಂಗ ಹಾಸನದಲ್ಲಿ ನಡೆದಿದೆ.

    ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಮಳೆಗೆ ಕುಸಿದ ಬಿದ್ದಿದ್ದ ಮನೆಯನ್ನು ನಿನ್ನೆ ರೇವಣ್ಣ ವೀಕ್ಷಣೆ ಮಾಡುತ್ತಿದ್ದರು. ಮನೆ ವೀಕ್ಷಣೆ ನಂತರ ಗ್ರಾಮದ ಸುಧಾ ಅವರಿಗೆ, ಎಲ್ಲಿ ನೀವು ನನಗೆ ವೋಟ್ ಹಾಕಲ್ಲ ಎಂದು ರೇವಣ್ಣ ತಮಾಷೆ ಮಾಡಿದ್ದಾರೆ.  ಇದನ್ನೂ ಓದಿ: ನಾನು ಅಧಿಕಾರ ಬಯಸಿಲ್ಲ, ಜನ ಸೇವೆಯೇ ಗುರಿ: ಮೋದಿ

    ಕೂಡಲೇ ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ, ನಾವು ನಿಮಗೆ ಯಾವಾಗಲೂ ವೋಟ್ ಹಾಕುವುದು ಎಂದು ನಗುತ್ತ ಉತ್ತರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಎಲ್ಲಿ ಪುಟ್ಟರಾಜಣ್ಣ ಇಲ್ಲಾ ಅಂಥಾ ಹೇಳ್ತಾವ್ನೆ ಎಂದ ರೇವಣ್ಣ ನಕ್ಕು ಸುಮ್ಮನಾಗಿದ್ದಾರೆ. ಈ ವೇಳೆ ಮಾತನಾಡಿದ ರೇವಣ್ಣ ಅವರು, ಯಾರೆಲ್ಲ ಮನೆ, ಬೆಳೆ ಕಳೆದುಕೊಂಡಿದ್ದೀರ ಅವರಿಗೆಲ್ಲ ಶೀಘ್ರವಾಗಿ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿದ್ದಾರೆ.

  • ಎರಡು ರಾಷ್ಟ್ರೀಯ ಪಕ್ಷಗಳು ನನ್ನ ಹೆಸರಿನ ವ್ಯಕ್ತಿಯಿಂದ ನಾಮಪತ್ರ ಹಾಕಿಸಿವೆ: ರೇವಣ್ಣ

    ಎರಡು ರಾಷ್ಟ್ರೀಯ ಪಕ್ಷಗಳು ನನ್ನ ಹೆಸರಿನ ವ್ಯಕ್ತಿಯಿಂದ ನಾಮಪತ್ರ ಹಾಕಿಸಿವೆ: ರೇವಣ್ಣ

    ಹಾಸನ: ಎರಡು ರಾಷ್ಟ್ರೀಯ ಪಕ್ಷಗಳು ನನ್ನ ಹೆಸರಿನ ವ್ಯಕ್ತಿಯಿಂದ ನಾಮಪತ್ರ ಹಾಕಿಸಿವೆ. ನಾವು ಅಷ್ಟೊಂದು ಫೇಮಸ್ ಆಗಿದ್ದೀವಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಗರಂ ಆಗಿದ್ದಾರೆ.

    bjp - congress

    ಎಂಎಲ್‍ಸಿ ಚುನಾವಣೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳನ್ನು ದೂರವಿಟ್ಟು ಜೆಡಿಎಸ್ ಗೆ ಅವಕಾಶ ಕೊಡಬೇಕು. ಕಳೆದ ಬಾರಿ ತಪ್ಪು ಮಾಡಿದ್ದೇವೆ, ಈ ಬಾರಿ ಸರಿಮಾಡಿಕೊಳ್ಳಬೇಕು ಎಂದು ಸದಸ್ಯರು ತೀರ್ಮಾನ ಮಾಡಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ನನ್ನ ಹೆಸರಿನ ವ್ಯಕ್ತಿಯಿಂದ ನಾಮಪತ್ರ ಹಾಕಿಸಿವೆ. ನಾವು ಅಷ್ಟೊಂದು ಫೇಮಸ್ ಆಗಿದ್ದೀವಿ. ಎರಡು ಪಕ್ಷಗಳಿಗೆ ಈ ಪರಿಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಇತಿಹಾಸದಲ್ಲಿಯೇ ಮೊದಲಬಾರಿಗೆ ಅಂಟಾರ್ಟಿಕಾದಲ್ಲಿ ಏರ್ಬಸ್ ವಿಮಾನ

    ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡುತ್ತೇನೆ. ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಪ್ರತಿಸ್ಪರ್ಧಿ ಎಂದು ಹೇಳುತ್ತಿದ್ದಾರೆ. ಜೆಡಿಎಸ್ ಏನು ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ನಮ್ಮ ಬಗ್ಗೆ ಮಾತನಾಡಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂದು ಗೊತ್ತಲ್ಲ. ನಾವೇನು ಅದರ ಬಗ್ಗೆ ಮಾತನಾಡಲ್ಲ ಎಂದು ಟೀಕಿಸಿದರು.

    ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿನ ಕೆಲವು ಲೀಡರ್ ಗಳಿಗಿಲ್ಲ. ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಐದು ವರ್ಷ ಸಿಎಂ ಆಗಿ ಅಂದಿದ್ದರು. ಕುಮಾರಸ್ವಾಮಿ ಅವರಿಗೆ ಒಳ್ಳೆಯ ಹೆಸರು ಬರುತ್ತೆ ಎಂದು ಸರ್ಕಾರವನ್ನು ಬೀಳಿಸಿದರು. ಇದೇ ರೀತಿ ದೇವೇಗೌಡರನ್ನು ಪ್ರಧಾನಿ ಮಾಡಿದ್ದರು. 10 ತಿಂಗಳಿಗೆ ಕೆಳಗೆ ಇಳಿಸಿದ್ರು. ಕುಮಾರಸ್ವಾಮಿ ಅವರ ವಿರುದ್ಧ ಯಾವುದೋ ಬುಡುಬುಡಿಕೆ ಕೈಯಲ್ಲಿ ಸ್ಟೇಟ್ ಮೆಂಟ್ ಕೊಡಿಸುತ್ತಿದ್ದಾರೆ ಎಂದು ಕಿಡಿಕಾಡಿದರು.  ಇದನ್ನೂ ಓದಿ: ಪುನೀತ್‍ರಂತೆಯೇ ಯಾವಾಗಲು ಒಳ್ಳೆಯ ಕೆಲಸ ಮಾಡೋಣ: ವಿಜಯ ರಾಘವೇಂದ್ರ

    ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾಮಕಾವಾಸ್ಥೆಗೆ ಮಾಡೋದು ಬೇಡ. ಚುನಾವಣೆ ಬಂದಿದೆ ಎಂದು ದಾಳಿ ಮಾಡೋದು ಬೇಡ. ಭ್ರಷ್ಟರ ಮೇಲೆ ದಾಳಿ ಮಾಡಲಿ ಎಂದು ಹೇಳಿದರು.