Tag: ಎಚ್ ಡಿ ರೇವಣ್ಣ

  • ಹಾಸನಕ್ಕೆ ಐಐಟಿ ಹೆಂಗೆ ತರಬೇಕು ಅಂತ ನಂಗೊತ್ತು: ರೇವಣ್ಣ

    ಹಾಸನಕ್ಕೆ ಐಐಟಿ ಹೆಂಗೆ ತರಬೇಕು ಅಂತ ನಂಗೊತ್ತು: ರೇವಣ್ಣ

    ಹಾಸನ: ಸ್ವಕ್ಷೇತ್ರಕ್ಕೆ ಬೆಳಗಾವಿಯಿಂದ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ(ಕೆಶಿಪ್) ಕಚೇರಿಯನ್ನು ಸ್ಥಳಾಂತರ ಮಾಡಿಸಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್‍ಡಿ ರೇವಣ್ಣ ಈಗ ಹಾಸನಕ್ಕೆ ಐಐಟಿ ಹೇಗೆ ತರಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.

    ನಗರದ ಕಲಾಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2019ರ ವೇಳೆಗೆ ಜಿಲ್ಲೆಯಲ್ಲಿ ಐಐಟಿ ಕಾಲೇಜು ಆರಂಭವಾಗುವುದು ನಿಶ್ಚಿತ. ಐಐಟಿಯನ್ನು ಹಾಸನ ಜಿಲ್ಲೆಗೆ ಹೇಗೆ ತರಬೇಕೆಂದು ನನಗೆ ಗೊತ್ತಿದೆ. ಈಗಾಗಲೇ ಅದರ ಬಗ್ಗೆ ಪ್ರಯತ್ನವನ್ನು ನಡೆಸುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: `ಮೇಡಂ ಎಣ್ಣೆಕಾಟ ತಪ್ಪಿಸಿ’-ಡಿಸಿ ರೋಹಿಣಿ ಸಿಂಧೂರಿಗೆ ರೇವಣ್ಣ ಮನವಿ+

    ಹಾಸನ ಜಿಲ್ಲೆಯಲ್ಲಿ ಮತ್ತೊಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡುವ ಗುರಿಯನ್ನು ಹೊಂದಿದ್ದೇನೆ. ಈಗಾಗಲೇ ಹೊಳೆನರಸೀಪುರ ಕ್ಷೇತ್ರದಲ್ಲಿ ಒಟ್ಟು ಏಳು ಪದವಿ ಕಾಲೇಜುಗಳನ್ನು ಹೊಂದುವ ಮೂಲಕ ದೇಶದಲ್ಲೇ ಅತಿ ಹೆಚ್ಚು ಪದವಿ ಕಾಲೇಜುಗಳನ್ನು ಹೊಂದಿರುವ ವಿಧಾನಸಭಾ ಕ್ಷೇತ್ರವೆಂದು ಹೆಸರುಗಳಿಸಿಕೊಂಡಿದೆ ಎಂದು ಹೇಳಿದರು. ಇದನ್ನೂ ಓದಿ:ರೇವಣ್ಣ ಸ್ವಕ್ಷೇತ್ರಕ್ಕೆ ಕೆಶಿಪ್ ಕಚೇರಿ ಸ್ಥಳಾಂತರ

    ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿನ ಶಿಕ್ಷಣದ ಮಟ್ಟ ಕುಸಿಯುತ್ತಿದೆ. ಇದರ ಬಗ್ಗೆ ಶಿಕ್ಷಕರು ಗಮನ ಹರಿಸಬೇಕು. ಇದೇ ರೀತಿ ಮುಂದುವರಿದರೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅಲ್ಲದೇ ಸರ್ಕಾರದಿಂದಲೇ ಇಂಗ್ಲೀಷ್ ಶಾಲೆಗಳನ್ನು ತೆರೆಯುವ ಉದ್ದೇಶ ಹೊಂದಿದ್ದೇವೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೇ ತಮ್ಮ ಮಕ್ಕಳನ್ನು ಇಂಗ್ಲೀಷ್ ಶಾಲೆಗಳಲ್ಲಿ ಓದಿಸುತ್ತಿದ್ದಾರೆ ಎಂದು ಹಾಸನದ ಕಸಾಪ ಅಧ್ಯಕ್ಷ ಮಂಜೇಗೌಡರ ಸಮ್ಮುಖದಲ್ಲೇ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೂರೇ ತಿಂಗಳಲ್ಲಿ ಬಿಜೆಪಿಯನ್ನು ನಗರದಿಂದ ಕಳುಹಿಸಿಲ್ಲವೇ: ರೇವಣ್ಣ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೆಣಸಿನಕಾಯಿ ಬಜ್ಜಿ ತಿಂದು ರೇವಣ್ಣ ಕಣ್ಣೀರು! – ವಿಡಿಯೋ ನೋಡಿ

    ಮೆಣಸಿನಕಾಯಿ ಬಜ್ಜಿ ತಿಂದು ರೇವಣ್ಣ ಕಣ್ಣೀರು! – ವಿಡಿಯೋ ನೋಡಿ

    ಹಾಸನ: ನೆರೆ ಸಂತ್ರಸ್ತರಿಗೆ ಬಿಸ್ಕೆಟ್ ಎಸೆದು ಭಾರೀ ಟೀಕೆಗೆ ಗುರಿಯಾಗಿದ್ದ ಲೋಕೋಪಯೋಗಿ ಸಚಿವ ಎಚ್‍.ಡಿ.ರೇವಣ್ಣ ಸೋಮವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಮೆಣಸಿನಕಾಯಿ ಬಜ್ಜಿಯನ್ನು ತಿಂದು ಕಣ್ಣೀರು ಹಾಕಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ರೇವಣ್ಣ, ಹೋಟೆಲ್‍ ನವರು ನೀಡಿದ್ದ ಮೆಣಸಿನಕಾಯಿ ಬಜ್ಜಿಯನ್ನು ತಿಂದಿದ್ದಾರೆ. ತಿಂದ ಬಳಿಕ ಮೆಣಸಿನಕಾಯಿ ಖಾರದ ರಭಸಕ್ಕೆ ಕಣ್ಣೀರು ಗಳಗಳನೆ ಬರತೊಡಗಿದೆ. ಇದನ್ನು ಮರೆಮಾಚಲು ತಮ್ಮ ಬಳಿಯಿದ್ದ ಕರವಸ್ತ್ರದಿಂದ ಕಣ್ಣೀರು ಒರೆಸಿಕೊಂಡಿದ್ದಾರೆ.

    ಅಲ್ಲದೇ ಹೋಟೆಲ್ ಸಿಬ್ಬಂದಿಗೆ “ಏನ್ರಪ್ಪ ಜೈಲಿನಲ್ಲಿ ಕೊಡುವ ರೀತಿ ಖಾರದ ಬಜ್ಜಿ ಕೊಡ್ತಿರಲ್ಲಪ್ಪ” ಎಂದು ತಮಾಷೆ ಮಾಡಿ, ನನಗೆ ಮೆಣಸಿನಕಾಯಿ ಬಜ್ಜಿ ಬೇಡ, ಬೇಕಾದರೇ ಆಲೂಗಡ್ಡೆ ಅಥವಾ ಹೀರೇಕಾಯಿ ಬಜ್ಜಿ ಇದ್ದರೇ ಕೊಡಿ ಎಂದು ಹೋಟೆಲ್ ಸಿಬ್ಬಂದಿ ಜೊತೆ ಕೇಳಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉತ್ತರ ಕರ್ನಾಟಕದ ಅನ್ಯಾಯದ ಬಗ್ಗೆ ಮತ್ತೆ ಧ್ವನಿ ಎತ್ತಿದ ಬಿ ಶ್ರೀರಾಮುಲು

    ಉತ್ತರ ಕರ್ನಾಟಕದ ಅನ್ಯಾಯದ ಬಗ್ಗೆ ಮತ್ತೆ ಧ್ವನಿ ಎತ್ತಿದ ಬಿ ಶ್ರೀರಾಮುಲು

    ಗದಗ: ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಬಂದಿದೆ. ಮುಂದೆಯೂ ಅನ್ಯಾಯ ಆಗಲಿದೆ. ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಮತ್ತೊಮ್ಮೆ ಆರೋಪಿಸಿದ್ದಾರೆ.

    ಕೊಡಗು ನೆರೆ ಹಾವಳಿ ಪ್ರಕರಣ ಹಿನ್ನಲೆ ಕುರಿತು ಮಾತನಾಡಿದ ಅವರು ಸರ್ಕಾರ ಮುಂಜಾಗ್ರತ ಕ್ರಮವನ್ನು ಕೈಗೊಳ್ಳಲಿಲ್ಲ. ಸರ್ಕಾರ ಎಚ್ಚೆತ್ತುಕೊಂಡಿದ್ದರೆ ಜನರ ಪ್ರಾಣಹಾನಿಯನ್ನು ತಡೆಯಬಹುದಿತ್ತು. ಆದರೆ ಸರ್ಕಾರದ ನಿರ್ಲಕ್ಷ್ಯ ದಿಂದ ಪ್ರಾಣ ಹಾನಿ, ಪ್ರಾಣಿಗಳ ಹಾನಿ, ಆಸ್ತಿ-ಪಾಸ್ತಿ ಹಾನಿ ಸಂಭವಿಸಿದೆ. ಇಷ್ಟೆಲ್ಲಾ ಘಟನೆ ನಡೆದರೂ ಸಿಎಂ ತಡವಾಗಿ ಭೇಟಿ ನೀಡಿರುವುದು ದುರದೃಷ್ಟಕರ ಎಂದು ವಾಗ್ದಾಳಿ ನಡೆಸಿದರು.

    ಸಚಿವ ಎಚ್.ಡಿ ರೇವಣ್ಣ ಬಿಸ್ಕೆಟ್ ಎಸೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಾಜಿ ಪ್ರಧಾನಿ ಮಕ್ಕಳಾದ ರೇವಣ್ಣಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಇರಬೇಕಿತ್ತು. ಸರ್ಕಾರ ಮತ್ತು ಸಚಿವ ಸ್ಥಾನ ಅಹಂಕಾರ ಅವರಲ್ಲಿ ತುಂಬಿಕೊಂಡಿದೆ. ಇದು ಅಧಿಕಾರ ಅಹಂ ಬಹಳ ದಿನ ಉಳಿಯುವುದಿಲ್ಲ. ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಸೂಕ್ತ ಅನುದಾನ ಸಿಗಲಿದ್ದು, ಪ್ರಧಾನಿಗಳು ಕೇರಳ ಹಾಗೂ ಕರ್ನಾಟಕಕ್ಕೆ ಸೂಕ್ತ ಪರಿಹಾರ ನೀಡುತ್ತಾರೆ ಎಂದರು.

    ಸರ್ಕಾರ ಮನಸ್ಸು ಮಾಡಿದರೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬಹುದು. ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲಮನ್ನಾ ಬಗ್ಗೆ ಕುಮಾರಸ್ವಾಮಿ ಅಧಿಕೃತ ಆದೇಶ ಹೊರಡಿಸಲಿ. ರೈತರ ಸಾಲಮನ್ನಾ ವಿಷಯದಲ್ಲಿ ನಾನು ರಾಜಕೀಯ ಮಾಡುವುದಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜನತೆ ಕ್ಷಮೆ ಕೇಳಬೇಕು ಅಂದ್ರೆ ಕೇಳ್ತೀನಿ- ಸಚಿವ ರೇವಣ್ಣ

    ಜನತೆ ಕ್ಷಮೆ ಕೇಳಬೇಕು ಅಂದ್ರೆ ಕೇಳ್ತೀನಿ- ಸಚಿವ ರೇವಣ್ಣ

    ಬೆಂಗಳೂರು: ಹಸಿವಿನಿಂದ ಮಕ್ಕಳು ಹಾಗೂ ಮಹಿಳೆಯರು ಬಿಸ್ಕೆಟ್ ಕೇಳುತ್ತಿದ್ದರು. ಹೀಗಾಗಿ ದೂರದಲ್ಲಿ ಕುಳಿತವರಿಗೆ ಬಿಸ್ಕೆಟ್ ಎಸೆದಿರುವೆ. ಈ ಕುರಿತಾಗಿ ಜನತೆ ಕ್ಷಮೆ ಕೇಳಬೇಕು ಎಂದರೆ ಕೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

    ರಾಮನಾಥಪುರದಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಬಿಸ್ಕೆಟ್ ಎಸೆದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ನಾನು ದೇವರನ್ನು ನಂಬುವ ವ್ಯಕ್ತಿ. ಘಟನೆಯಾದ ಮಾರನೇ ದಿನ ಸುದ್ದಿ ಮಾಡಲಾಗಿದೆ. ನನ್ನಿಂದ ತಪ್ಪಾಗಿದೆ ಬಿಡಿ ಎಂದರು.

    25 ವರ್ಷಗಳಿಂದ ಆಯ್ಕೆಯಾಗಿರುವ ನಾಯಕರು ಹಾಗೂ ಕೇಂದ್ರ ಸಚಿವರು ಸಂತ್ರಸ್ತರ ನೆರವಿಗೆ ಬರಲಿಲ್ಲ. ಇಂತಹ ಸಂದರ್ಭದಲ್ಲಿ ನಾನು ನೆರವಿಗೆ ನಿಂತಿದ್ದೆ. ಈಗ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ರೇವಣ್ಣ ದೂರಿದರು.

    ನಾನು ಬೇಕು ಅಂತಾ ಮಾಡಲಿಲ್ಲ. ಆ ರೀತಿಯ ಮನೋಭಾವನೆಯೂ ನನ್ನಲ್ಲಿ ಇಲ್ಲ. ಹಿಂದೆ ಕುಳಿತಿದ್ದ ಮಹಿಳೆಯರು ಒಂದೇ ಸಮನೇ ಬೇಕು ಅಂತಾ ಕೂಗುತ್ತಿದ್ದರು. ಹೀಗಾಗಿ ಅಲ್ಲಿಗೆ ಹೋಗಿ ಕೊಡುವುದಕ್ಕೆ ಆಗಲಿಲ್ಲ, ನಿಂತಲ್ಲಿಯೇ ಕೊಡಬೇಕಾದ ಪರಿಸ್ಥಿತಿ ಬಂದಿತ್ತು. ಅದನ್ನು ಎಸೆದಿದ್ದಾರೆ ಅಂತಾ ಹೇಳಿದರೆ ಹೇಗೆ? ಮಾಧ್ಯಮದವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ. ಎಲ್ಲಾ ಮಾಧ್ಯಮದವರು ಅಂದು ಅಲ್ಲಿಯೇ ಇದ್ದರು. ಆದರೆ ಅಂದೇ ಸುದ್ದಿ ಮಾಡಲಿಲ್ಲ ಎಂದರು.

    ನಿರಾಶ್ರಿತ ಕೇಂದ್ರದಲ್ಲಿ ಇದ್ದವರು ಶ್ರೀಮಂತರಲ್ಲ, ಎಲ್ಲರೂ ಬಡವರು. ನಾನು ಪ್ರವಾಹ ಪೀಡಿತ ಭಾಗಗಳಿಗೆ ರಾತ್ರಿ, ಹಗಲು ಹೋಗಿದ್ದೇನೆ. ಏನು ಗ್ರಹಚಾರಾನೋ ಏನೋ, ಸಾಮಾಜಿಕ ಜಾಲ ತಾಣಗಳಲ್ಲಿ ನನ್ನ ವಿರುದ್ಧ ಅಭಿಯಾನವೇ ಶುರುವಾಗಿದೆ ಎಂದು ಹೇಳಿದ ಸಚಿವರು, ಕೊಡಗು ಹಾಗೂ ಮಳೆಯಿಂದ ಹಾನಿಯಾಗಿರುವ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಂಪುಟ ಸಚಿವರು ಬಂದ ಪರಿಸ್ಥಿತಿಯನ್ನು ನೋಡಲಿ. ನಾನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವನಲ್ಲ, ಆದರೂ ನೆರವಿಗೆ ನಿಂತೆ. ಈಗ ನನ್ನ ಮೇಲೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಚುನಾವಣೆ ವೇಳೆ ರಾಜಕೀಯ ಮಾಡೋಣ, ಇಂತಹ ಸಂದರ್ಭದಲ್ಲಿ ಬೇಡ ಎಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೊಬೈಲ್‍ನಲ್ಲಿ ಟೈಂ ಚೆಕ್ ಮಾಡಿ, ವಾಸ್ತುಪ್ರಕಾರ ರೇವಣ್ಣ ಧ್ವಜಾರೋಹಣ!

    ಮೊಬೈಲ್‍ನಲ್ಲಿ ಟೈಂ ಚೆಕ್ ಮಾಡಿ, ವಾಸ್ತುಪ್ರಕಾರ ರೇವಣ್ಣ ಧ್ವಜಾರೋಹಣ!

    ಹಾಸನ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ರೇವಣ್ಣ ಎಂದಿನಂತೆ ತಮ್ಮ ವಾಸ್ತು ವಿಶೇಷತೆಯಿಂದ ಗಮನ ಸೆಳೆದಿದ್ದಾರೆ. ಖುದ್ದು ಎಸ್ಪಿಯವರ ಮೊಬೈಲ್‍ನಲ್ಲಿ ಟೈಂ ಚೆಕ್ ಮಾಡಿ, ಚಪ್ಪಲಿ ಬಿಟ್ಟು ಧ್ವಜಾರೋಹಣ ನಡೆಸಿದರು.

    ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ದಶಕದ ನಂತರ ಹಾಸನ ಜಿಲ್ಲೆಯಲ್ಲಿ ಧ್ಜಜಾರೋಹಣ ನೇರವೇರಿಸಿದರು. ಈ ಮೊದಲು 2007 ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಧ್ವಜಾರೋಹಣ ಮಾಡಿದ್ದರು. ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯ ನಿಗದಿಪಡಿಸಲಾಗಿತ್ತು.

    ಸಮಯಕ್ಕೆ ಮೊದಲೇ ಬಂದಿದ್ದ ರೇವಣ್ಣ ನಿರ್ದಿಷ್ಟ ಸಮಯಕ್ಕೆ ಕಾದು, ಒಂದು ಸೆಕೆಂಡ್ ಕೂಡ ಹೆಚ್ಚು ಕಡಿಮೆ ಆಗದಂತೆ ನಿಗಾವಹಿಸಿದ್ದರು. ಅಲ್ಲದೇ ಪಕ್ಕದಲ್ಲಿ ನಿಂತಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಬಳಿ ಸಮಯ ಸರಿಯಾಗಿದ್ದನ್ನು ಸ್ಪಷ್ಟಪಡಿಸಿಕೊಂಡು ಬಳಿಕ, ಚಪ್ಪಲಿ ಬಿಟ್ಟು ಧ್ವಜಾರೋಹಣ ಮಾಡಿದರು. ಸಾಮಾನ್ಯವಾಗಿ ಪಂಚೆ ಧರಿಸುವ ರೇವಣ್ಣನವರು ಇಂದು ಪ್ಯಾಂಟ್ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

    ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಬಿಜೆಪಿ ನಾಯಕ ಈಶ್ವರಪ್ಪ ಆರೋಪಕ್ಕೆ ತಿರುಗೇಟು ನೀಡಿ, ಈಶ್ವರಪ್ಪನವರು ಹೇಳಿದ್ದ ಅಧಿಕಾರಿಗಳನ್ನೂ ಸಹ ನಾನು ವರ್ಗ ಮಾಡಿಕೊಟ್ಟಿದ್ದೇನೆ. ಆ ಅಧಿಕಾರಿಗಳೇನಾದರೂ ನನಗೆ ಹಣ ಕೊಟ್ಟಿದ್ದಾರೆಯೇ ಎಂಬುದನ್ನು ಬಹಿರಂಗ ಪಡಿಸಲಿ. ಅವರೊಬ್ಬ ಪ್ರತಿಪಕ್ಷ ನಾಯಕರು, ಏನೇ ಮಾತನಾಡಿದರು ದಾಖಲೆ ಇಟ್ಟುಕೊಂಡು ಮಾತನಾಡಬೇಕು. ಇಲ್ಲವಾದರೆ ಅವರ ಹೇಳಿಕೆಗಳು ಪೊಳ್ಳಾಗಿ ಹೋಗುತ್ತದೆ ಎಂದು ಲೇವಡಿ ಮಾಡಿದರು.

    ಈ ವೇಳೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರುಗಳು ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್‍ನ ಒಂದು ನಿಯೋಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ದೂರು ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪರಮೇಶ್ವರ್ ಅವರೇ ಈ ಬಗ್ಗೆ ಖುದ್ದು ಪರಿಶೀಲಿಸಲಿ. ನಾನು ಯಾವುದೇ ದುರುದ್ದೇಶದಿಂದ ಯಾರ ಮೇಲೆಯೂ ಕೇಸು ದಾಖಲಿಸಿಲ್ಲ. ಅಲ್ಲದೇ ಯಾರನ್ನೂ ಸಹ ಜೈಲಿಗೆ ಕಳಿಸಿಲ್ಲ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಎಸ್‍ವೈ ತಿರುಗಾಡಿದಷ್ಟು ನಾವು ದೇವಸ್ಥಾನಕ್ಕೆ ಹೋಗಿಲ್ಲ: ಟೆಂಪಲ್ ರನ್ ಸಮರ್ಥಿಸಿಕೊಂಡ ರೇವಣ್ಣ

    ಬಿಎಸ್‍ವೈ ತಿರುಗಾಡಿದಷ್ಟು ನಾವು ದೇವಸ್ಥಾನಕ್ಕೆ ಹೋಗಿಲ್ಲ: ಟೆಂಪಲ್ ರನ್ ಸಮರ್ಥಿಸಿಕೊಂಡ ರೇವಣ್ಣ

    ಬೆಂಗಳೂರು: ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗಾಡಿದಷ್ಟು ನಾವು ದೇವಸ್ಥಾನಕ್ಕೆ ಹೋಗಿಲ್ಲ. ಕುಲದೇವರಿಗೆ ಹೋಗಿ ಪೂಜೆ ಮಾಡಬಾರದೇ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಪ್ರಶ್ನಿಸಿ ಬಿಎಸ್‍ವೈಗೆ ಟಾಂಗ್ ಕೊಟ್ಟಿದ್ದಾರೆ.

    ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೆಂಪಲ್ ರನ್ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ನಮ್ಮ ಮನೆ ದೇವರಿಗೆ ಪೂಜೆ ಮಾಡುವುದು ತಪ್ಪಾ? ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜಮ್ಮು-ಕಾಶ್ಮೀರದ ವೈಷ್ಣವಿ ದೇವಿ ದೇವಸ್ಥಾನಕ್ಕೆ ಹೋಗಿದ್ದರು. ನಾವು ಇನ್ನು ಅಲ್ಲಿಯವರೆಗೆ ಹೋಗಿಲ್ಲ, ಇಲ್ಲಿಯ ದೇವರನ್ನು ಅಷ್ಟೇ ನೋಡುತ್ತಿದ್ದೇವೆ. ಅವರಂತೆ ದೇಶದ ಹಾಗೂ ರಾಜ್ಯದ ವಿವಿಧ ದೇವಸ್ಥಾನಗಳಿಗೆ ಹೋಗಿಲ್ಲ ಎಂದು ಕಾಲೆಳೆದರು.

    ಕುಮಾರಸ್ವಾಮಿ 42 ದೇವಸ್ಥಾನಕ್ಕೆ ಹೋಗಿದ್ದರಿಂದಲೇ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ರೈತರ ಸಾಲ ಮನ್ನಾ ಆಗುತ್ತಿದೆ ಎಂದು ತಮ್ಮ ಟೆಂಪಲ್ ರನ್ ಸಮರ್ಥಿಸಿಕೊಂಡರು.

    ಚುನಾವಣೆ ಬಂದಾಗ ರಾಜಕಾರಣ ಮಾಡೋಣ. ಪ್ರಧಾನಿ ನರೇಂದ್ರ ಮೋದಿಗೆ ಮಧ್ಯಪ್ರವೇಶಿಸಿ ಮಹದಾಯಿ ಸಮಸ್ಯೆಯನ್ನು ಇತ್ಯರ್ಥ ಮಾಡುಬೇಕೆಂದು ರಾಜ್ಯದ 17 ಜನ ಬಿಜೆಪಿ ಸಂಸದರು ಹಾಗೂ ಬಿಎಸ್ ಯಡಿಯೂರಪ್ಪ ಕೇಳಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡ ಸಚಿವರು, ನಾವು 36.5 ಟಿಎಂಸಿ ನೀರು ಕೇಳಿದ್ದೇವು. ಆದರೆ ನಮಗೆ ಸೂಕ್ತ ನ್ಯಾಯ ಸಿಕ್ಕಿಲ್ಲ ಎಂದು ಪ್ರತಿಕ್ರಿಯಿಸಿದರು.

    ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಶೀಘ್ರ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಣಕ್ಕೆ ಯಾವುದೇ ಚಿಂತೆಬೇಡವೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ರಸ್ತೆಯ ಮೇಲೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು. ಶೀಘ್ರವೇ ರಸ್ತೆ ದುರಸ್ತಿಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವರ್ಗಾವಣೆ ವಿಚಾರದಲ್ಲಿ ಅವ್ಯವಹಾರ ಆಗಿದ್ರೆ ಪರಿಶೀಲಿಸಲಿ: ಸಚಿವ ಎಚ್‍ಡಿ ರೇವಣ್ಣ

    ವರ್ಗಾವಣೆ ವಿಚಾರದಲ್ಲಿ ಅವ್ಯವಹಾರ ಆಗಿದ್ರೆ ಪರಿಶೀಲಿಸಲಿ: ಸಚಿವ ಎಚ್‍ಡಿ ರೇವಣ್ಣ

    ಹಾಸನ: ವರ್ಗಾವಣೆ ವಿಚಾರಗಳಲ್ಲಿ ಅವ್ಯವಹಾರ ಆಗಿದ್ದರೆ ಖುದ್ದು ಪರಿಶೀಲಿಸಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಯಡಿಯೂರಪ್ಪನವರಿಗೆ ತಿರುಗೇಟು ನೀಡಿದ್ದಾರೆ.

    ಬಿಎಸ್‍ವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವರ್ಗಾವಣೆ ವಿಚಾರದಲ್ಲಿ ಅವ್ಯವಹಾರವಾಗಿದ್ದರೆ ಖುದ್ದು ಪರಿಶೀಲನೆ ನಡೆಸಲಿ, ಯಡಿಯೂರಪ್ಪನವರಿಗೆ ಬೇಕಾದರೆ ದಾಖಲೆಗಳನ್ನು ತೋರಿಸಲು ಸಿದ್ಧ. ನಾನು ಯಾವ ಇಲಾಖೆಗಳ ವರ್ಗಾವಣೆಯ ವಿಷಯದಲ್ಲಿ ಕೈ ಹಾಕಿಲ್ಲ. ನನ್ನ ಇಲಾಖೆ ಹೊರತುಪಡಿಸಿ ಬೇರೆ ಇಲಾಖೆಗಳ ವಿಚಾರಕ್ಕೆ ಕೈ ಹಾಕಿಲ್ಲವೆಂದು ತಿರುಗೇಟು ನೀಡಿದ್ದಾರೆ.

    ನನ್ನ ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗಾಗಿ ನಾನು ಕಳೆದ 6 ತಿಂಗಳಿನಿಂದಲೂ ಪ್ರಯತ್ನಿಸುತ್ತಿದ್ದೇನೆ. ನನಗೆ ಬೇರೆ ಇಲಾಖೆಯಿಂದ ಯಾವುದೇ ಕೆಲಸವನ್ನು ಮಾಡಿಸಿಕೊಳ್ಳಲು ಅಗತ್ಯವಿಲ್ಲ. ಈ ಕುರಿತು ಉಪಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಲಿ ಎಂದ ಅವರು ಇದೇ ವೇಳೆ, ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಯ ವಿಚಾರದಲ್ಲಿ ದೇವೇಗೌಡರ ತೀರ್ಮಾನವೇ ಅಂತಿಮ ಅಂದ್ರು.

    ಬಿಎಸ್‍ವೈ ಹೇಳಿದ್ದೇನು?
    ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣನವರು, ತಮ್ಮ ಇಲಾಖೆಯಲ್ಲದೇ ಇತರೆ ಇಲಾಖೆಗಳಲ್ಲೂ ಅಧಿಕಾರ ಚಲಾಯಿಸುತ್ತಿದ್ದಾರೆ. ವರ್ಗಾವಣೆಯಲ್ಲಿ ಅಪಾರ ಪ್ರಮಾಣದ ಅವ್ಯವಹಾರ ನಡೆದಿದೆ. ಅಲ್ಲದೇ ವರ್ಗಾವಣೆಗೆ ಸಹ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಪ್ರಜ್ವಲ್ ಸ್ಪರ್ಧೆ ಕುರಿತು ಹಿರಿಯರು ತೀರ್ಮಾನಿಸ್ತಾರೆ: ಎಚ್.ಡಿ. ರೇವಣ್ಣ

    ಪ್ರಜ್ವಲ್ ಸ್ಪರ್ಧೆ ಕುರಿತು ಹಿರಿಯರು ತೀರ್ಮಾನಿಸ್ತಾರೆ: ಎಚ್.ಡಿ. ರೇವಣ್ಣ

    ಹಾಸನ: ಪ್ರಜ್ವಲ್ ರೇವಣ್ಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಹಿರಿಯರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

    ಹೊಳೆನರಸೀಪುರದ ಕಾರ್ಯಕ್ರಮದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್‍ಗೆ ಇನ್ನೂ ವಯಸ್ಸಿದೆ. ರಾಜಕೀಯದಲ್ಲಿ ಪಕ್ಷ ಈಗಾಗಲೇ ಅವರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನೀಡಿದ್ದು, ಬಡವರಿಗೆ ಸಂಬಂಧಿಸಿದ ಕೆಲಸವನ್ನು ಮಾಡಲಿ, ಅವರ ಸ್ಪರ್ಧೆ ಕುರಿತು ಹಿರಿಯರು ತೀರ್ಮಾನಿಸುತ್ತಾರೆ. ನಾನು ಶಾಸಕನಾಗಿದ್ದು 32ನೇ ವಯಸ್ಸಿನಲ್ಲಿ. ಜನರ ಆಶೀರ್ವಾದ, ಸಾರ್ವಜನಿಕರ ಆಶೀರ್ವಾದ ನನಗಿದೆ. ಇಲ್ಲಿಯವರೆಗೂ ರಾಜಕೀಯದಲ್ಲಿಯೇ ನಾನೂ ಇಲ್ಲವೇ ಎಂದು ಪ್ರಶ್ನಿಸಿದರು.

    ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, ಈ ಕುರಿತು ಮುಖ್ಯಮಂತ್ರಿ ಕುಮಾರಣ್ಣ ಮತ್ತು ದೇವೇಗೌಡರು ತೀರ್ಮಾನವೇ ಅಂತಿಮ ಎಂದು ಉತ್ತರ ನೀಡಿ ಜಾರಿಕೊಂಡರು. ಹೆಚ್. ವಿಶ್ವನಾಥ್ ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷರಾದರೆ ಸಂತೋಷದ ವಿಚಾರ ಎಂದು ರೇವಣ್ಣ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • `ಪಬ್ಲಿಕ್’ ಇಂಪ್ಯಾಕ್ಟ್: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ಇಲ್ಲ- ಎಚ್‍ಡಿಕೆ ಸ್ಪಷ್ಟನೆ

    `ಪಬ್ಲಿಕ್’ ಇಂಪ್ಯಾಕ್ಟ್: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ಇಲ್ಲ- ಎಚ್‍ಡಿಕೆ ಸ್ಪಷ್ಟನೆ

    ಬೆಂಗಳೂರು: ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಮತ್ತು ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುವ ವಿಚಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.

    ಈ ಬಗ್ಗೆ ನಿಮ್ಮ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ವರದಿಗೆ ಸ್ಪಂದಿಸಿದ ಕುಮಾರಸ್ವಾಮಿ, ಬಂಡಿಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ತೆರವು ಮಾಡಬೇಕೆಂಬ ಕೋರಿಕೆಯ ಬಗ್ಗೆ ನಾನು ಪರಾಮರ್ಶಿಸಿದ್ದೇನೆ. ರಾತ್ರಿ ಸಂಚಾರವನ್ನು ತೆರವು ಮಾಡುವುದಿಲ್ಲ. ಈಗಿರುವ ನಿರ್ಬಂಧ ಮುಂದುವರಿಯಲಿದೆ ಅಂತ ಸ್ಪಷ್ಟಪಡಿಸಿದ್ದಾರೆ.  ಇದಲ್ಲದೆ ಎಲಿವೆಟೆಡ್ ರಸ್ತೆ ನಿರ್ಮಾಣ ಕಾರ್ಯಸಾಧುವಲ್ಲ ಎಂದೂ ತೀರ್ಮಾನಿಸಿದ್ದೇನೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ- ಕೇರಳದ ಲಾಬಿಗೆ ಮಣಿದ್ರಾ ಸಿಎಂ? ಏನಿದು ವಿವಾದ?

    ಈ ಬಗ್ಗೆ ಶುಕ್ರವಾರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಸುದ್ದಿಗಾರರ ಪ್ರಶ್ನೆಗೆ ಗರಂ ಆಗಿ ಉತ್ತರಿಸಿದ್ದರು. ಬಂಡೀಪುರ ಅರಣ್ಯ ಪ್ರದೇಶದ ಕುರಿತಾಗಿ ಸರ್ಕಾರದ ನಿರ್ಧಾರ ಏನು ಎಂದು ಪ್ರಶ್ನಿಸಿದಕ್ಕೆ ಸಿಡಿಮಿಡಿಗೊಂಡ ಅವರು, ಸುಪ್ರೀಂ ಕೋರ್ಟ್ ನಿಂದ ಆದೇಶ ಹೊರ ಬರದೇ ನಾನು ವೈಯಕ್ತಿಕವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಮ್ಮ ಹಿಂದಿನ ಹೇಳಿಯನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು. ಇದನ್ನೂ ಓದಿ:  ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶವಿಲ್ಲ: ಸಚಿವ ಆರ್ ಶಂಕರ್

    ಸುಪ್ರೀಂ ಕೋರ್ಟ್, ಅರಣ್ಯ ಹಾಗೂ ಪರಿಸರ ಇಲಾಖೆ ಸೇರಿ ಒಪ್ಪಿಗೆ ನೀಡದೇ ನಾನು ಒಪ್ಪಿಕೊಂಡರೆ ಸಮಸ್ಯೆ ಇತ್ಯರ್ಥ ಆಗುವುದಿಲ್ಲ. ನಾನು ಹೀಗೆ ತೀರ್ಪು ನೀಡಿ ಅಂತಾ ಸುಪ್ರೀಂ ಕೋರ್ಟ್ ಗೆ ಹೇಳಲು ಬರುವುದಿಲ್ಲ. ರಸ್ತೆ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಕೊಟ್ಟರೆ ಬೇಡ ಅಂತಾ ಹೇಳುವುದಕ್ಕೆ ನಾನು ಯಾರು? ಆದರೆ ಪತ್ರದ ಬಗ್ಗೆ ನನಗೆ ಕೇಳಬೇಡಿ, ಮುಖ್ಯ ಕಾರ್ಯದರ್ಶಿಗಳನ್ನು ವಿಚಾರಿಸಿ ಎಂದು ಹೇಳಿದ್ದರು. ಇದನ್ನೂ ಓದಿ: ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಬಂಡೀಪುರದಲ್ಲಿ ರಸ್ತೆ ನಿರ್ಮಾಣ ಮಾಡಿ ಅನ್ನೋದಕ್ಕೆ ನಾನ್ಯಾರು: ಸಚಿವ ರೇವಣ್ಣ ಪ್ರಶ್ನೆ

    ಬಂಡೀಪುರದಲ್ಲಿ ರಸ್ತೆ ನಿರ್ಮಾಣ ಮಾಡಿ ಅನ್ನೋದಕ್ಕೆ ನಾನ್ಯಾರು: ಸಚಿವ ರೇವಣ್ಣ ಪ್ರಶ್ನೆ

    ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನ ಸಂಚಾರಗೆ ಹೇರಿದ ನಿಷೇಧವನ್ನು ತೆರವುಗೊಳಿಸುವ ಬಗ್ಗೆ ಮುಖ್ಯ ಕಾರ್ಯದರ್ಶಿಯನ್ನೇ ಕೇಳಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಗರಂ ಆಗಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಬಂಡೀಪುರ ಅರಣ್ಯ ಪ್ರದೇಶದ ಕುರಿತಾಗಿ ಸರ್ಕಾರದ ನಿರ್ಧಾರ ಏನು ಎಂದು ಪ್ರಶ್ನಿಸಿದಕ್ಕೆ ಸಿಡಿಮಿಡಿಗೊಂಡ ಅವರು, ಸುಪ್ರೀಂ ಕೋರ್ಟ್ ನಿಂದ ಆದೇಶ ಹೊರ ಬರದೇ ನಾನು ವೈಯಕ್ತಿಕವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಮ್ಮ ಹಿಂದಿನ ಹೇಳಿಯನ್ನು ಮುಚ್ಚಿಹಾಕಲು ಪ್ರಯತ್ನಿಸಿದರು.

    ಸುಪ್ರೀಂ ಕೋರ್ಟ್, ಅರಣ್ಯ ಹಾಗೂ ಪರಿಸರ ಇಲಾಖೆ ಸೇರಿ ಒಪ್ಪಿಗೆ ನೀಡದೇ ನಾನು ಒಪ್ಪಿಕೊಂಡರೆ ಸಮಸ್ಯೆ ಇತ್ಯರ್ಥ ಆಗುವುದಿಲ್ಲ. ನಾನು ಹೀಗೆ ತೀರ್ಪು ನೀಡಿ ಅಂತಾ ಸುಪ್ರೀಂ ಕೋರ್ಟ್ ಗೆ ಹೇಳಲು ಬರುವುದಿಲ್ಲ. ರಸ್ತೆ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಕೊಟ್ಟರೆ ಬೇಡ ಅಂತಾ ಹೇಳುವುದಕ್ಕೆ ನಾನು ಯಾರು? ಆದರೆ ಪತ್ರದ ಬಗ್ಗೆ ನನಗೆ ಕೇಳಬೇಡಿ, ಮುಖ್ಯ ಕಾರ್ಯದರ್ಶಿಗಳನ್ನು ವಿಚಾರಿಸಿ ಎಂದು ಹೇಳಿದರು.

    ಸುದ್ದಿಗೋಷ್ಠಿ ಮುಕ್ತಾಯದವರೆಗೂ ಮಾಧ್ಯಮಗಳ ಪ್ರಶ್ನೆಗಳಿಗೆ, ನಾನ್ಯಾರು ಅದನ್ನು ಹೇಳುವುದಕ್ಕೆ? ನಾನು ಹೇಗೆ ಹೇಳೋದು ಎಂದು ಪ್ರಶ್ನಾರ್ಥಕ ಉತ್ತರಗಳನ್ನು ನೀಡುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews