Tag: ಎಚ್ ಡಿ ರೇವಣ್ಣ

  • ಕಾಂಗ್ರೆಸ್ಸಿನ ಟ್ರಬಲ್ ಶೂಟರಿಗೆ ಶುರುವಾಯ್ತು ಈಗ ಟ್ರಬಲ್!

    ಕಾಂಗ್ರೆಸ್ಸಿನ ಟ್ರಬಲ್ ಶೂಟರಿಗೆ ಶುರುವಾಯ್ತು ಈಗ ಟ್ರಬಲ್!

    ಬೆಂಗಳೂರು: ಹಣಕಾಸು ಖಾತೆ ಹಂಚಿಕೆ ಸಮಸ್ಯೆಯ ಬೆನ್ನಲ್ಲೇ ಈಗ ಇಂಧನ ಖಾತೆಗಾಗಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಮಧ್ಯೆ ಪೈಪೋಟಿ ಆರಂಭವಾಗಿದೆ.

    ಲೋಕೋಪಯೋಗಿ ಹಾಗೂ ಇಂಧನ ಖಾತೆ ಎರಡು ತಮಗೆ ಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಹೋದರ ಎಚ್.ಡಿ.ರೇವಣ್ಣ ಅವರು ಪಟ್ಟುಹಿಡಿದರೆ, ಇಂಧನ ಖಾತೆಯನ್ನು ನನಗೆ ನೀಡಿ ಎಂದು ಡಿಕೆ ಶಿವಕುಮಾರ್ ಹಠ ಹಿಡಿದಿದ್ದಾರೆ.

    ಕಳೆದ 5 ವರ್ಷದಿಂದ ಇಂಧನ ಖಾತೆಯನ್ನು ನಾನು ನಿಭಾಯಿಸಿದ್ದೇನೆ. ಅಲ್ಲಿ ಇನ್ನಷ್ಟು ಕೆಲಸಗಳು ಉಳಿದಿದ್ದು, ನನಗೆ ಇಂಧನ ಖಾತೆ ಬೇಕೇ ಬೇಕು ಎಂದು ಡಿಕೆಶಿ ಹೈಕಮಾಂಡ್ ಮುಂದೆ ತಮ್ಮ ವಾದವನ್ನು ಮಂಡಿಸಿದ್ದಾರೆ. ಇಬ್ಬರು ಘಟಾನುಘಟಿ ನಾಯಕರಾದ ಕಾರಣ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಇಬ್ಬರನ್ನು ತೃಪ್ತಿ ಪಡಿಸಲು ಕೊನೆಗೆ ಸಂಧಾನ ಸೂತ್ರಕ್ಕೆ ಬಂದಿದ್ದಾರೆ.

    ಆರಂಭದಲ್ಲಿ ಇಬ್ಬರಿಗೂ ಈ ಖಾತೆಯನ್ನು ನೀಡದೇ ಇರುವ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಈಗ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಮಧ್ಯಸ್ಥಿಕೆ ವಹಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಇಂಧನ ಖಾತೆಯನ್ನು ನೀಡಲು ನಿರ್ಧಾರ ತೆಗೆದುಕೊಂಡಿದ್ದಾರೆ.

    ರೇವಣ್ಣ ಅವರಿಗೆ ಜಲಸಂಪನ್ಮೂಲ ಖಾತೆಯನ್ನು ನೀಡಲು ಒಪ್ಪಿಗೆ ನೀಡಿದ್ದು, ಅವರ ಮನವೊಲಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಮುಖಂಡರು ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕೈ ನಾಯಕರ ಈ ಸೂತ್ರಕ್ಕೆ ರೇವಣ್ಣ ಒಪ್ಪಿಗೆ ನೀಡಿದರೆ ಖಾತೆ ಬಿಕ್ಕಟ್ಟು ಇತ್ಯರ್ಥವಾಗಲಿದೆ.

  • ಬುಧವಾರ ಸಂಜೆ 4.30ಕ್ಕೆ ಎಚ್‍ಡಿಕೆ ಪ್ರಮಾಣವಚನ: ಈ ಸಮಯದಲ್ಲೇ ಯಾಕೆ?

    ಬುಧವಾರ ಸಂಜೆ 4.30ಕ್ಕೆ ಎಚ್‍ಡಿಕೆ ಪ್ರಮಾಣವಚನ: ಈ ಸಮಯದಲ್ಲೇ ಯಾಕೆ?

    ಬೆಂಗಳೂರು: ಕೈಯಲ್ಲಿ ನಿಂಬೆಹಣ್ಣು ಇಲ್ಲದೇ ಮನೆಯಿಂದ ಹೊರನಡೆಯದ ಹೆಚ್‍ಡಿ ರೇವಣ್ಣ, ಕೊಂಚ ಮೂಡ್ ಔಟ್ ಆದ್ರೂ ರಾಜ್ಯದ ಹೊರ ರಾಜ್ಯದ ಜ್ಯೋತಿಷಿಗಳ ಕೈಯಲ್ಲಿ ಜಾತಕ ಓದಿಸೋ ದೊಡ್ಡ ಗೌಡ್ರು. ಹೀಗಿರುವಾಗ ದೊಡ್ಡ ಗೌಡ್ರ ಮನೆ ಮಗ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುವ ಮುಹೂರ್ತ ಎಂತದ್ದು ಇರಬಹುದು ಅನ್ನೋ ಕುತೂಹಲ ಹಲವರಲ್ಲಿದೆ.

    ಹೆಚ್‍ಡಿಕೆ ಪ್ರಮಾಣ ವಚನ ಸಮಾರಂಭ ಬುಧವಾರ ಸಂಜೆ ನಾಲ್ಕು ಗಂಟೆಯ ಬಳಿಕ ನಡೆಯಲಿದ್ದು ಅದು ಅಮೃತ ಸಿದ್ಧಿ ಯೋಗದ ಮುಹೂರ್ತವಂತೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ 10 ಗಂಟೆಗೆ ಸಮಯ ಚೆನ್ನಾಗಿದ್ದರೂ ಸಂಜೆಯ ವೇಳೆ ನವಮಿ ಪೂರ್ವ ಫಲ್ಗುಣಿ ಅಮೃತ ಸಿದ್ಧಿ ಯೋಗದಲ್ಲಿಯೇ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಸಾಮಾನ್ಯವಾಗಿ ಅಮೃತ ಸಿದ್ಧಿ ಯೋಗ ಎಂದರೆ ಸ್ಥಿರ, ಚಂಚಲತೆ ಇರುವುದಿಲ್ಲ. ಇದಕ್ಕಾಗಿಯೇ ಈ ಸಮಯದಲ್ಲಿಯೇ ಋಷಿ ಮುನಿಗಳು ಯೋಗ ಸಿದ್ಧಿಗಾಗಿ ತಪಸ್ಸಿಗಾಗಿ ಕುಳಿತುಕೊಂಡ ಐತಿಹ್ಯ ಇದೆ. ಚಂಚಲತೆ ಇಲ್ಲದೇ, ಸ್ಥಿರತೆ ಇರಲಿ, ಮೈತ್ರಿ ಸರ್ಕಾರದಲ್ಲಿ ತೊಡಕಾಗದಿರಲಿ ಎಂದು ಈ ಸಮಯದಲ್ಲಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹಿರಿಯ ಜ್ಯೋತಿಷಿಗಳು ಅಭಿಪ್ರಾಯಪಟ್ಟಿದ್ದಾರೆ.

    ಆರಂಭದಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನುವ ಸುದ್ದಿ ಸಿಕ್ಕಿತ್ತು. ಆದರೆ ಈಗ ಸ್ಥಳ ಬದಲಾಗಿದ್ದು, ಬುಧವಾರ ಸಂಜೆ 4.30ಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: 11.30ಕ್ಕೆ ಸರಿಯಾಗಿ ಎಚ್‍ಡಿಕೆಯನ್ನು ಆಯ್ಕೆ ಮಾಡಿದ್ದು ಯಾಕೆ: ರೇವಣ್ಣ ಹೇಳ್ತಾರೆ ಓದಿ

    ಒಬ್ಬಂಟಿಯಾಗಿ ರೇವಣ್ಣ ಪ್ರಮಾಣವಚನ:
    ಗ್ರಹ, ಕಾಲ ನೋಡಿಯೇ ಮುಂದುವರಿಯುವ ಜೆಡಿಎಸ್‍ನ ಎಚ್.ಡಿ.ರೇವಣ್ಣ ಶನಿವಾರ ತಮಗೆ ಶುಭಕಾಲದಲ್ಲೇ ಪ್ರಮಾಣವಚನ ನೀಡಲು ಸ್ಪೀಕರ್ ಬೋಪಯ್ಯ ಅವರಿಗೆ ಚೀಟಿ ನೀಡಿದ್ದರು. ಈ ವೇಳೆ ಕುಳಿತುಕೊಳ್ಳಿ ಸಂಜೆ 4 ಗಂಟೆ ಯವರೆಗೆ ಸಮಯಾವಕಾಶವಿದೆ. ನಿಗದಿತ ಪಟ್ಟಿಯಂತೆ ಪ್ರಮಾಣವಚನ ನಡೆಯುತ್ತದೆ ಎಂದು ತಿಳಿಸಿದರು. ಈ ವೇಳೆ ರೇವಣ್ಣ ಪತ್ರಕರ್ತರ ಗ್ಯಾಲರಿಗೆ ಬಂದಾಗ ಮಾಧ್ಯಮದವರು ಉತ್ತಮ ಗಳಿಗೆಯನ್ನು ನೋಡಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರಾ ಎಂದು ಕೆಣಕಿದರು. ನನ್ನದು ಸ್ವಾತಿ ನಕ್ಷತ್ರ ಯಾವುದೇ ಗಳಿಗೆ ಇಲ್ಲ. ಯಾವಾಗ ಬೇಕಾದರೂ ಪ್ರಮಾಣವಚನ ಸ್ವೀಕರಿಸಬಹುದು ಎಂದು ಹೇಳಿ ರೇವಣ್ಣ ಹೊರ ನಡೆದಿದ್ದರು. ಆರಂಭದಲ್ಲಿ 5 ಮಂದಿ ನಂತರ 10 ಮಂದಿ ಬಳಿಕ ಇಬ್ಬರಂತೆ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ರೇವಣ್ಣ ಒಬ್ಬಂಟಿಯಾಗಿ ಮಧ್ಯಾಹ್ನ 12.50ಕ್ಕೆ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

  • 11.30ಕ್ಕೆ ಸರಿಯಾಗಿ ಎಚ್‍ಡಿಕೆಯನ್ನು ಆಯ್ಕೆ ಮಾಡಿದ್ದು ಯಾಕೆ: ರೇವಣ್ಣ ಹೇಳ್ತಾರೆ ಓದಿ

    11.30ಕ್ಕೆ ಸರಿಯಾಗಿ ಎಚ್‍ಡಿಕೆಯನ್ನು ಆಯ್ಕೆ ಮಾಡಿದ್ದು ಯಾಕೆ: ರೇವಣ್ಣ ಹೇಳ್ತಾರೆ ಓದಿ

    ಬೆಂಗಳೂರು: ಜೆಡಿಎಸ್‍ನ ಎಲ್ಲ ಸದಸ್ಯರು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ನಮ್ಮ ಪಕ್ಷದ ಶಾಸಕಾಂಗ ಸಭೆಯ ನಾಯಕರನ್ನಾಗಿ ಆಯ್ಕೆ ಮಾಡಿದ್ದೇವೆ ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ.

    ಶಾಂಗ್ರಿಲಾ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಸಭೆ ಬಳಿಕ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಎಚ್‍ಡಿ. ರೇವಣ್ಣ ಇಂದು “11.30ಕ್ಕೆ ಸರಿಯಾಗಿ” ಹೆಚ್ ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಅಂತ ಹೇಳಿದ್ರು. ಈ ವೇಳೆ ಅದ್ಯಾಕೆ 11.30ಕ್ಕೆ ಆಯ್ಕೆ ಮಾಡಿದ್ದು ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ರೇವಣ್ಣ, ಏಯ್.. ಅದೆಲ್ಲಾ ಗೊತ್ತಲ್ಲ ನಿಮಗೆ. ಈವಾಗ ಎಲ್ಲ ಟೈಂ ನೋಡಿಕೊಂಡು ಕುತ್ಕೊತ್ತಾರ ಎಂದು ಹಾಸ್ಯದ ಧಾಟಿಯಲ್ಲಿ ಉತ್ತರ ನೀಡಿದರು.

    ಇದಕ್ಕೂ ಮುನ್ನ, ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ನಿವಾಸಕ್ಕೆ ರೇವಣ್ಣ ಭೇಟಿ ನೀಡಿದ್ದರು. ಈ ವೇಳೆ ಅವರು, ಯಾವುದೇ ಹೈಜಾಕ್ ಆಗಲಿ ಏನೇ ಆಗಲಿ, ಹೆಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಸರ್ಕಾರ ರಚನೆಯಾಗುತ್ತದೆ. ಅವರೇ ಸಿಎಂ ಆಗುವುದು ನಿಶ್ಚಿತ ಎಂದರು.

    ಈ ಬಾರಿ ನಮ್ಮ ಪಕ್ಷದಿಂದ ಆಯ್ಕೆಯಾದ 38 ಶಾಸಕರು ಎಲ್ಲಿಯೂ ಹೋಗುವುದಿಲ್ಲ. ನಿಷ್ಠೆಯಿಂದ ಪಕ್ಷದ ಜೊತೆಗಿರುತ್ತಾರೆ. ಕುಮಾರಸ್ವಾಮಿ ಸಿಎಂ ಆಗೋದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ದೇವೇಗೌಡರು ಈಗಾಗಲೇ ಜೆಡಿಎಸ್ ಶಾಸಕರ ಜವಾಬ್ದಾರಿಯನ್ನು ಹೇಗೆ ನಿರ್ವಹಿಸಬೇಕು ಎಂದು ಶ್ರೀಕಂಠೇಗೌಡರಿಗೆ ನಿರ್ದೇಶನ ನೀಡಿದ್ದಾರೆ. ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕೇಳಿಬಂದಿದೆ.

    ಮೇ 18ರಂದು ಎಚ್‍ಡಿ ದೇವೇಗೌಡ 85ನೇ ವರ್ಷದ ಹುಟ್ಟುಹಬ್ಬವನ್ನು ಆಚಿರಿಸಕೊಳ್ಳಲಿದ್ದಾರೆ. ಹೀಗಾಗಿ ಚುನಾವಣೆಗೂ ಮುನ್ನ ನಡೆದ ಪ್ರಚಾರ ಕಾರ್ಯಕ್ರಮಗಳಲ್ಲಿ ಮೇ 18 ಶುಕ್ರವಾರದಂದು ನಾನು ಪ್ರಮಾಣವಚನ ಸ್ವೀಕರಿಸುತ್ತೇನೆ. ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿದ್ದರು.

    https://www.youtube.com/watch?v=YO0Wcn5mxCM

  • ಹೈಜಾಕ್ ಆಗಲಿ, ಏನೇ ಆಗಲಿ ಕುಮಾರಸ್ವಾಮಿಯೇ ಸಿಎಂ-  ಹೆಚ್.ಡಿ.ರೇವಣ್ಣ

    ಹೈಜಾಕ್ ಆಗಲಿ, ಏನೇ ಆಗಲಿ ಕುಮಾರಸ್ವಾಮಿಯೇ ಸಿಎಂ- ಹೆಚ್.ಡಿ.ರೇವಣ್ಣ

    ಬೆಂಗಳೂರು: ಯಾವುದೇ ಹೈಜಾಕ್ ಆಗಲಿ ಏನೇ ಆಗಲಿ, ಎಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಸರ್ಕಾರ ರಚನೆಯಾಗುತ್ತದೆ. ಅವರೇ ಸಿಎಂ ಆಗುವುದು ನಿಶ್ಚಿತ ಎಂದು ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

    ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈ ಬಾರಿ ನಮ್ಮ ಪಕ್ಷದಿಂದ ಆಯ್ಕೆಯಾದ 38 ಶಾಸಕರು ಎಲ್ಲಿಯೂ ಹೋಗುವುದಿಲ್ಲ. ನಿಷ್ಠೆಯಿಂದ ಪಕ್ಷದ ಜೊತೆಗಿರುತ್ತಾರೆ. ಕುಮಾರಸ್ವಾಮಿ ಸಿಎಂ ಆಗೋದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಕಡೆಗೆ ಎಲ್ಲರ ಚಿತ್ತ ಹರೆದಿದ್ದು, ಎಚ್.ಡಿ.ರೇವಣ್ಣ ಅವರು ದೇವರ ಪ್ರಸಾದ ಹಿಡಿದು ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ದಾಸರಹಳ್ಳಿ ಶಾಸಕ ಮಂಜುನಾಥ್, ಡಿ.ಸಿ.ತಮ್ಮಣ್ಣ, ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಹಾಜರಿದ್ದರು.

    ದೇವೇಗೌಡರು ಈಗಾಗಲೇ ಜೆಡಿಎಸ್ ಶಾಸಕರ ಜವಾಬ್ದಾರಿಯನ್ನು ಹೇಗೆ ನಿರ್ವಹಿಸಬೇಕು ಎಂದು ಶ್ರೀಕಂಠೇಗೌಡರಿಗೆ ನಿರ್ದೇಶನ ನೀಡಿದ್ದಾರೆ. ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕೇಳಿಬಂದಿದೆ.

    ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಂಶೆಂಪುರ್ ಮತ್ತು ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

  • ದೇವೇಗೌಡರ ಕುಟುಂಬವನ್ನು ಏನೂ ಮಾಡಕ್ಕಾಗಲ್ಲ- ಸಿಎಂ ವಿರುದ್ಧ ಸಿಡಿದೆದ್ದ ಹೆಚ್ ಡಿ ರೇವಣ್ಣ

    ದೇವೇಗೌಡರ ಕುಟುಂಬವನ್ನು ಏನೂ ಮಾಡಕ್ಕಾಗಲ್ಲ- ಸಿಎಂ ವಿರುದ್ಧ ಸಿಡಿದೆದ್ದ ಹೆಚ್ ಡಿ ರೇವಣ್ಣ

    ಹಾಸನ: ಸೋಲಿಸು ಎಂದು ರಾಜ್ಯ ಸರಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಬಾಗೂರು ಮಂಜೇಗೌಡ ಹಾಗೂ ಅವರ ಬೆಂಬಲಿಗನ ಸಿಎಂ ಸಿದ್ದರಾಮಯ್ಯ ದೂರವಾಣಿಯನ್ನು ಮಾತನಾಡಿರುವ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಅಂಥ ಸಣ್ಣತನಕ್ಕೆ ನಾನು ಇಳಿಯಲ್ಲ. ಕಾಲ ಬಂದಾಗ ಎಲ್ಲದಕ್ಕೂ ಉತ್ತರ ನೀಡುವೆ ಎಂದು ತಿರುಗೇಟು ನೀಡಿದ್ದಾರೆ.

    ಜಿಲ್ಲೆ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಸಿಎಂ ಹೇಳಿಕೆ ಬಗ್ಗೆ ಈಗ ಮಾತನಾಡುವುದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ಕೊಡಲಿದೆ. ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ದೇವರು ಮತ್ತು ಜನರನ್ನು ಹೊರತುಪಡಿಸಿ ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದರು.

    ಹಾಸನ ಜಿಲ್ಲೆಗೆ ಸುಮಾರು 40 ಕೋಟಿಯಷ್ಟು ಕುಡಿಯುವ ನೀರಿನ ಅನುದಾನ ಬಾಕಿ ಉಳಿಸಿಕೊಂಡಿದ್ದಾರೆ. ಕಾಚೇನಹಳ್ಳಿ ಏತನೀರಾವರಿ ಯೋಜನೆ ನಾನು ಮಾಡಿದ್ದು. ಅದನ್ನು ಉದ್ಘಾಟಿಸಿ ಹೋದ ಸಿಎಂ ಮುಂದೆ ಏನೂ ಮಾಡಿಲ್ಲ. ಅಂಥವರು ಹಾಸನ ಜಿಲ್ಲೆ ಹಾಗೂ ನನ್ನ ಕ್ಷೇತ್ರಕ್ಕೆ ಏನು ಅನುದಾನ ಕೊಟ್ಟಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.

    ಅಂತಿಮವಾಗಿ ನನ್ನ ಜಿಲ್ಲೆಯ ಜನರು ನನಗೆ ಮುಖ್ಯ, ನಮ್ಮನ್ನು ಉಳಿಸಿಕೊಡಿ ಎಂದು ಜನರನ್ನೇ ಕೇಳುತ್ತೇನೆ. ನಮ್ಮ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ. ಮೊದಲು ಈ ಸಮಸ್ಯೆ ಬಗೆಹರಿಸಿ ಆಮೇಲೆ ಮಾತನಾಡಲಿ ಎಂದು ಕುಟುಕಿದರು. ಸಿದ್ದರಾಮಯ್ಯ, ಬಾಗೂರು ಮಂಜೇಗೌಡ ಮತ್ತು ಕಲ್ಲೇನಹಳ್ಳಿ ಸೋಮಣ್ಣ ಎಂಬವರು 1.41 ನಿಮಿಷದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

  • ಮೈಸೂರು ಜೆಡಿಎಸ್‍ನಲ್ಲಿ ಹೆಚ್ಚಿದ ಟಿಕೆಟ್ ಫೈಟ್- ರೇವಣ್ಣ ಬೆಂಬಲಿಗರಿಗೆ ಇಲ್ಲ ಟಿಕೆಟ್

    ಮೈಸೂರು ಜೆಡಿಎಸ್‍ನಲ್ಲಿ ಹೆಚ್ಚಿದ ಟಿಕೆಟ್ ಫೈಟ್- ರೇವಣ್ಣ ಬೆಂಬಲಿಗರಿಗೆ ಇಲ್ಲ ಟಿಕೆಟ್

    ಮೈಸೂರು: ಈ ಭಾಗದ ಜೆಡಿಎಸ್ ರಾಜಕಾರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಮತ್ತು ಎಚ್.ಡಿ. ರೇವಣ್ಣ ಗುಂಪು ಹುಟ್ಟಿಕೊಂಡಿದೆ ಎನ್ನಲಾಗಿದ್ದು, ಅಭ್ಯರ್ಥಿಗಳ ನಡುವೆ ಟಿಕೆಟ್ ಗಾಗಿ ಶೀತಲ ಸಮರ ನಡೆಯುತ್ತಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.

    ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಎಚ್‍ಡಿ ರೇವಣ್ಣ ಬೆಂಬಲಿಗರಿಗೆ ಟಿಕೆಟ್ ಕೈತಪ್ಪಿದೆ. ಇದ್ರಿಂದ ಮೈಸೂರು ಭಾಗದಲ್ಲಿ ಎಚ್.ಡಿ. ರೇವಣ್ಣ ಹಿಡಿತ ಕಡಿಮೆ ಮಾಡಲು ಎಚ್‍ಡಿ ಕುಮಾರಸ್ವಾಮಿ ಮುಂದಾಗಿದ್ದಾರಾ ಅನ್ನೋ ಪ್ರಶ್ನೆ ಎದುರಾಗಿದೆ.

    ಎಚ್.ಡಿ. ರೇವಣ್ಣ ಅಪ್ಪಟ ಬೆಂಬಲಿಗ ಹರೀಶ್ ಗೌಡ ಅವರಿಗೆ ಚಾಮರಾಜ ಕ್ಷೇತ್ರದ ಟಿಕೆಟ್ ನೀಡಲಾಗುತ್ತೆ ಎನ್ನಲಾಗಿತ್ತು. ಅದ್ರೆ ಕುಮಾರಸ್ವಾಮಿ ತಮ್ಮ ಕುಟುಂಬದ ಸದಸ್ಯರಾಗಿರೋ ನಿವೃತ್ತ ಕುಲಪತಿ ರಂಗಪ್ಪಗೆ ಚಾಮರಾಜ ಕ್ಷೇತ್ರದ ಟಿಕೆಟ್ ನೀಡಿದ್ದಾರೆ. ನರಸಿಂಹರಾಜ ಕ್ಷೇತ್ರದಲ್ಲಿ ಕಳೆದ ಬಾರಿ ಕಡಿಮೆ ಅಂತರದಿಂದ ಸೋತಿದ್ದ ಎಚ್.ಡಿ. ರೇವಣ್ಣ ಬೆಂಬಲಿಗ ಸಂದೇಶ್ ಸ್ವಾಮಿಗೆ ಬದಲಾಗಿ ಇತ್ತೀಚೆಗೆ ಜೆಡಿಎಸ್ ಸೇರಿದ್ದ ಮಹಮದ್ ಅಬ್ದುಲ್‍ಗೆ ಟಿಕೆಟ್ ನೀಡಲಾಗಿದೆ.

    ಟಿ. ನರಸೀಪುರ ಕ್ಷೇತ್ರದಲ್ಲಿ ಕಳೆದ ಬಾರಿ 250 ಮತಗಳಿಂದ ಸೋತು ಕಳೆದ ವರ್ಷ ನಿಧನರಾಗಿದ್ದ ಸುಂದರೇಶ್ ಅವರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿಲ್ಲ. ಚಾಮರಾಜ ಕ್ಷೇತ್ರ ಟಿಕೆಟ್ ವಂಚಿತ ಹರೀಶ್ ಗೌಡ ಈಗಾಗಲೇ ಬಂಡಾಯ ಬಾವುಟ ಹಾರಿಸಿದ್ದಾರೆ. ಇನ್ನು ನರಸಿಂಹರಾಜ ಕ್ಷೇತ್ರದ ಸಂದೇಶ್ ಸ್ವಾಮಿ ಮತ್ತು ಟಿ. ನರಸೀಪುರ ಕ್ಷೇತ್ರದಲ್ಲಿ ಸುಂದರೇಶ್ ಕುಟುಂಬಕ್ಕೆ ಬಿಜೆಪಿ ತಮ್ಮತ್ತ ಸೆಳೆಯುವ ಪ್ರಯತ್ನದಲ್ಲಿದೆ.

     

  • ಸುದ್ದಿಗೋಷ್ಠಿಯಲ್ಲಿ ಅಧಿಕಾರಿಗೆ ಕರೆ ಮಾಡಿ ಸಚಿವ ಮಂಜು ಹೇಳಿಕೆ ಸುಳ್ಳೆಂದು ಸಾಬೀತು ಪಡಿಸಿದ ರೇವಣ್ಣ

    ಸುದ್ದಿಗೋಷ್ಠಿಯಲ್ಲಿ ಅಧಿಕಾರಿಗೆ ಕರೆ ಮಾಡಿ ಸಚಿವ ಮಂಜು ಹೇಳಿಕೆ ಸುಳ್ಳೆಂದು ಸಾಬೀತು ಪಡಿಸಿದ ರೇವಣ್ಣ

    ಬೆಂಗಳೂರು: ಪಶು ಆಹಾರದ ಬೆಲೆಯನ್ನು ಸರ್ಕಾರ ಕೂಡಲೇ ಕಡಿಮೆ ಮಾಡಬೇಕು ಅಂತ ಮಾಜಿ ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಎಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ.

    ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೆಎಂಎಫ್‍ನ 5 ಪಶು ಆಹಾರ ಘಟಕಗಳು ಲಾಭದಲ್ಲಿ ನಡೆಯುತ್ತಿವೆ. ಹೀಗಿದ್ದರೂ ಪಶು ಆಹಾರದ ಬೆಲೆಯನ್ನು ಕೆಎಂಎಫ್ ಹಾಗೂ ಸರ್ಕಾರ ಕಡಿಮೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಈ ವರ್ಷ ಪಶು ಆಹಾರ ಘಟಕಗಳು 65 ಕೋಟಿ ರೂ. ಲಾಭದಲ್ಲಿದ್ದು ಪಶು ಆಹಾರದ ಬೆಲೆಯನ್ನ ಟನ್ ಗೆ 2 ಸಾವಿರ ಕಡಿಮೆ ಮಾಡಬೇಕು. ಸಾಧ್ಯವಾದರೆ 5 ಸಾವಿರ ಕಡಿಮೆ ಮಾಡಿ. ಇಲ್ಲವಾದರೆ ಟನ್ ಗೆ 2 ಸಾವಿರ ಮಾಡಲೇಬೇಕು ಎಂದು ಒತ್ತಾಯಿಸಿದರು.

    ನನ್ನ ಅವಧಿಯಲ್ಲಿ ನೋ ಪ್ರಾಫಿಟ್, ನೋ ಲಾಸ್ ಇದ್ದರು ಕಡಿಮೆ ಬೆಲೆಗೆ ಪಶು ಆಹಾರ ನೀಡುತ್ತಿದ್ದೆ. ಆದರೆ ಪ್ರಸ್ತುತ ಸರ್ಕಾರ ಹಾಗೂ ಕೆಎಂಎಫ್, ಖಾಸಗಿ ಕಂಪನಿಗಳ ಜೊತೆ ಡೀಲ್ ಮಾಡಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಬಂದ ಲಾಭವನ್ನು ರೈತರಿಗೆ ನೀಡಿ ಪಶು ಆಹಾರ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.

    ಸಚಿವರ ಹೇಳಿಕೆಗೆ ತಿರುಗೇಟು: ಈ ಮುಂಚೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರೇಷ್ಮೆ ಮತ್ತು ಪಶುಸಂಗೋಪನಾ ಸಚಿವ ಎ.ಮಂಜು ಅವರು ಕೆಎಂಎಫ್ ನಷ್ಟದಲ್ಲಿ ನಡೆಯುತ್ತಿಲ್ಲ. ಕೆಎಂಎಫ್ 12 ಮಹಾಮಂಡಳಿಗಳು ಲಾಭದಲ್ಲಿವೆ. ಬೆಣ್ಣೆ ಸಂಗ್ರಹ ಇಲ್ಲ ಎಂದು ಹೇಳಿದ್ದರು. ಸಚಿವ ಎ.ಮಂಜು ಅವರಿಗೆ ಸವಾಲ್ ಹಾಕಿದ ಅವರು, 10 ಕೆಎಂಎಫ್ ಮಹಾಮಂಡಳಿಗಳು ನಷ್ಟದಲ್ಲಿ ನಡೆಯುತ್ತಿವೆ. ಪ್ರಸಕ್ತ ಸಾಲಿನಲ್ಲಿ 115 ಕೋಟಿ ರೂ. ಲಾಸ್ ನಲ್ಲಿ ನಡೆಯುತ್ತಿದೆ ಎಂದು ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದರು.

    ಆದರೆ ಸಚಿವರ ಹೇಳಿಕೆ ಕುರಿತು ಪತ್ರಕರ್ತರು ಮರು ಪ್ರಶ್ನೆ ಹಾಕಿದ ವೇಳೆ ಕೂಡಲೇ ಕೆಎಂಎಫ್ ನ ಮಾರುಕಟ್ಟೆ ನಿರ್ದೇಶಕರಿಗೆ ಪತ್ರಿಕಾಗೋಷ್ಠಿಯ ಮಧ್ಯೆ ರೇವಣ್ಣ ದೂರವಾಣಿ ಕರೆ ಮಾಡಿದರು. ಈ ವೇಳೆ ಮಾತನಾಡಿದ ಅಧಿಕಾರಿ, ಸದ್ಯ 7 ಸಾವಿರ ಮೆಟ್ರಿಕ್ ಟನ್ ಬೆಣ್ಣೆ ಸ್ಟಾಕ್ ಇದೆ. ಕೆನೆರಹಿತ ಹಾಲಿನ ಪುಡಿ 16,680 ಮೆಟ್ರಿಕ್ ಟನ್ ಸ್ಟಾಕ್ ಇದೆ ಎಂದು ಮಾಹಿತಿ ನೀಡಿದರು.

    https://www.youtube.com/watch?v=Sa-JwR02H4E

  • ಕಾಂಗ್ರೆಸ್‍ನಲ್ಲಿ ಬಸ್ ಓಡಿಸಲು ಡ್ರೈವರಿಲ್ಲ- ಜಮೀರ್‍ಗೆ ರೇವಣ್ಣ ಟಾಂಗ್

    ಕಾಂಗ್ರೆಸ್‍ನಲ್ಲಿ ಬಸ್ ಓಡಿಸಲು ಡ್ರೈವರಿಲ್ಲ- ಜಮೀರ್‍ಗೆ ರೇವಣ್ಣ ಟಾಂಗ್

    ಹಾಸನ: ಬಂಡಾಯ ಶಾಸಕ ಜಮೀರ್ ಅಹಮ್ಮದ್ ಸೇರಿದಂತೆ ಏಳು ಮಂದಿ ಬಂಡಾಯ ಶಾಸಕರ ವಿರುದ್ಧ ಜೆಡಿಎಸ್ ಮುಖಂಡ ಹೆಚ್ ಡಿ ರೇವಣ್ಣ
    ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಬಸ್ ಓಡಿಸಲು ಡ್ರೈವರ್ ಇಲ್ಲ ಅಂತ ಹೇಳಿದ್ರು ಅಲ್ಲಿ ವೇಕನ್ಸಿ ಇತ್ತು. ನಮಗೆ ನುರಿತ ಡ್ರೈವರ್ ಬೇಕಿತ್ತು ಆದ್ರೆ ಇಂಥ ಚಂಗ್ಲಾಟದವು ನಮಗೆ ಬೇಕಿಲ್ಲ. ಹಾಗೆಯೇ ಕಾಂಗ್ರೆಸ್ ನಲ್ಲಿ ಮಿಠಾಯಿ-ಗಿಠಾಯಿ ತಿಂದುಕೊಂಡಿರಲಿ ಅಂತ ಅಲ್ಲಿಗೆ ಕಳಿಸಿದ್ದೇವೆ ಎಂದು ಏಳು ಮಂದಿ ಜಡಿಎಸ್ ಶಾಸಕರಿಗೆ ಟಾಂಗ್ ನೀಡಿದ್ರು.

    ತಾಕತ್ತು ಹಾಗೂ ಮಾನಮರ್ಯಾದೆ ಇದ್ದರೆ ಆ ಶಾಸಕರು ನಾಳೆಯೇ ರಾಜೀನಾಮೆ ಕೊಟ್ಟು ಜನರ ಮುಂದೆ ಬರಲಿ. ಡಿಸೆಂಬರ್ ವರೆಗೂ ಏಕೆ ಕಾಯ್ತಾರೆ ಎಂದು ಹೆಚ್ ಡಿ ರೇವಣ್ಣ ಬಂಡಾಯ ಶಾಸಕರಿಗೆ ಸವಾಲ್ ಹಾಕಿದರು.

    ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿಡುತ್ತೇನೆ: ಜಮೀರ್ ಅಹ್ಮದ್

    ಶಾಸಕ ಜಮೀರ್ ಅಹಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, ಜಮೀರ್ ರುಂಡ ತಗೋಂಡು ನಾವೇನು ಮಾಡೋಣ ಎಂದು ಪ್ರಶ್ನಿಸಿದರು. ಕುರಿ ರುಂಡವನ್ನು ಕಡಿಯದಂತೆ ಕಾಗೋಡು ತಿಮ್ಮಪ್ಪ ಕಾಯ್ದೆ ತರ್ತಾರಂತೆ. ನಮಗೆ ಅವರ ರುಂಡ ಬೇಡ ಎಂದು ವ್ಯಂಗ್ಯವಾಡಿದ್ರು. ಮಾನಮಾರ್ಯಾದೆ ಇದ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಅಂತ ಜಮೀರ್ ಹಮದ್‍ಗೆ ನೇರವಾಗಿ ಸವಾಲ್ ಹಾಕಿದ್ರು.