Tag: ಎಚ್ ಡಿ ರೇವಣ್ಣ

  • ವಾಸ್ತು ಪ್ರಕಾರ ಮೀಟಿಂಗ್ ಹಾಲ್ ಟೇಬಲ್ ದಿಕ್ಕು ಬದಲಾಯಿಸಲು ರೇವಣ್ಣ ಸೂಚನೆ

    ವಾಸ್ತು ಪ್ರಕಾರ ಮೀಟಿಂಗ್ ಹಾಲ್ ಟೇಬಲ್ ದಿಕ್ಕು ಬದಲಾಯಿಸಲು ರೇವಣ್ಣ ಸೂಚನೆ

    ಹುಬ್ಬಳ್ಳಿ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ಪ್ರವಾಸಿ ಮಂದಿರ ಉದ್ಘಾಟನೆಗೆ ಹೋಗಿ ವಾಸ್ತು ಪ್ರಕಾರ ಮೀಟಿಂಗ್ ಹಾಲ್ ಟೇಬಲ್‍ನ ದಿಕ್ಕನ್ನೇ ಬದಲಾಯಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಪ್ರವಾಸಿ ಮಂದಿರ ಉದ್ಘಾಟನೆಗಾಗಿ ಸಚಿವ ರೇವಣ್ಣ ಅವರು ಆಗಮಿಸಿದ್ದರು. ಈ ವೇಳೆ ಮೀಟಿಂಗ್ ಹಾಲ್ ನ ಟೇಬಲ್ ನ ದಿಕ್ಕು ಬದಲಿಸುವಂತೆ ಲೋಕೋಪಯೋಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ರೇವಣ್ಣ ಬೆಳಿಗ್ಗೆ ಐಬಿ ಉದ್ಘಾಟನೆ ಮಾಡಿ ಅಧಿಕಾರಿಗಳ ಜೊತೆ ಮೀಟಿಂಗ್ ಮಾಡಿದ್ದರು. ಅಲ್ಲಿ ವಾಸ್ತು ಸರಿ ಬಾರದ ಕಾರಣ ಮೀಟಿಂಗ್ ಹಾಲಿನ ಟೇಬಲ್ ಗಳನ್ನು ಪಶ್ಚಿಮ ದಿಕ್ಕಿಗೆ ಮುಖ ಮಾಡಿ ಹಾಕಲು ಸೂಚಿಸಿದ್ದಾರೆ. ಹೀಗಾಗಿ ಸಚಿವ ರೇವಣ್ಣ ಅವರ ಸೂಚನೆ ಹಿನ್ನಲೆಯಲ್ಲಿ ಸಿಬ್ಬಂದಿ ಮತ್ತೆ ಕೆಲಸ ಶುರು ಮಾಡಿದ್ದಾರೆ. ಮೀಟಿಂಗ್ ಹಾಲಿನಲ್ಲಿ ಹಾಕಲಾಗಿದ್ದ ಉದ್ದ ಟೇಬಲ್ ಗಳನ್ನು ಈಗ ಬದಲಿಸುವ ಕಾರ್ಯ ನಡೆಯುತ್ತಿದೆ.

    ಕೆಲ ದಿನಗಳ ಹಿಂದೆ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(ಕೆಶಿಪ್) ವತಿಯಿಂದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಭಾಗವಹಿಸಲು ರೇವಣ್ಣ ಅವರು ಕಾರ್ಯಕ್ರಮದ ಸ್ಥಳಕ್ಕೆ ಬಂದಿದ್ದರೂ ಕಾರಿನಿಂದ ಇಳಿದಿರಲಿಲ್ಲ. ರಾಹುಕಾಲ ಮುಗಿದ ಬಳಿಕವೇ ರೇವಣ್ಣ ವಾಹನದಿಂದ ಇಳಿದಿದ್ದಾರೆ. ರೇವಣ್ಣ ಅವರು ಕಾರ್ಯಕ್ರಮಕ್ಕೆ 9.40ಕ್ಕೆ ಆಗಮಿಸಿದ್ದರೂ ರಾಹುಕಾಲ ಮುಗಿದ ಬಳಿಕ 9.54ಕ್ಕೆ ಕಾರಿನಿಂದ ಇಳಿದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಹುಕಾಲ ನೋಡಿ ವಾಹನದಿಂದಿಳಿದ ಸಚಿವ ರೇವಣ್ಣ

    ರಾಹುಕಾಲ ನೋಡಿ ವಾಹನದಿಂದಿಳಿದ ಸಚಿವ ರೇವಣ್ಣ

    ಬೆಳಗಾವಿ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಬೆಳಗಾವಿಯಲ್ಲೂ ಮತ್ತೆ ರಾಹುಕಾಲ ನೋಡಿ ವಾಹನದಿಂದ ಇಳಿದಿದ್ದಾರೆ.

    ಬೆಳಗಾವಿ ಕೆಶಿಪ್ ಅವತಿಯಿಂದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಭಾಗವಹಿಸಲು ರೇವಣ್ಣ ಅವರು ರಾಹುಕಾಲ ವೀಕ್ಷಿಸಿದ್ದಾರೆ. ಕಾರ್ಯಕ್ರಮ ಸ್ಥಳಕ್ಕೆ ರೇವಣ್ಣ ಬಂದರೂ ವಾಹನದಿಂದ ಇಳಿಯಲಿಲ್ಲ. ರಾಹುಕಾಲ ಮುಗಿದ ಬಳಿಕವೇ ರೇವಣ್ಣ ವಾಹನದಿಂದ ಇಳಿದಿದ್ದಾರೆ.

    ಸಚಿವ ರೇವಣ್ಣ ಅವರು ಕಾರ್ಯಕ್ರಮಕ್ಕೆ 9.40ಕ್ಕೆ ಆಗಮಿಸಿದ್ದರು. ಆದರೆ ರಾಹುಕಾಲ ಇದ್ದ ಕಾರಣ ಅವರು 9.54 ನಿಮಿಷಕ್ಕೆ ವಾಹನದಿಂದ ಇಳಿದಿದ್ದಾರೆ. ಬೆಳಗ್ಗೆ 10 ಗಂಟೆಗೆ ಕೆಶಿಪ್ ಅವತಿಯಿಂದ ರಸ್ತೆ ಸುರಕ್ಷತಾ ಅಭಿಯಾನ ಉದ್ಘಾಟನೆ ಆಗಬೇಕಿತ್ತು.

    ಸರಿಯಾದ ಸಮಯಕ್ಕೆ ಸಿಎಂ ಕುಮಾರಸ್ವಾಮಿ ಬಾರದ ಕಾರಣ ಸಚಿವ ಎಚ್.ಡಿ ರೇವಣ್ಣ ಅಭಿಯಾನ ಪ್ರಾತ್ಯಕ್ಷಿಕೆ ನೋಡಿ ಸದನಕ್ಕೆ ಮರಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕೋಪಯೋಗಿ ಇಲಾಖೆಯಿಂದ ಕಬ್ಬನ್ ಪಾರ್ಕ್ ಗೆ ಸ್ಕೆಚ್..!

    ಲೋಕೋಪಯೋಗಿ ಇಲಾಖೆಯಿಂದ ಕಬ್ಬನ್ ಪಾರ್ಕ್ ಗೆ ಸ್ಕೆಚ್..!

    ಬೆಂಗಳೂರು: ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಹೋಟೆಲ್ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಪಾರ್ಕ್‍ಗೆ ಲೋಕೋಪಯೋಗಿ ಇಲಾಖೆ ಸ್ಕೆಚ್ ಹಾಕಿರುವುದು ಇದೀಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

    ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಹೆಚ್ಚು ಬಿಲ್ಡಿಂಗ್  ಗಳ ನಿರ್ಮಾಣ ನಿಷಿದ್ಧವಾಗಿದೆ. ಆದರೂ, ಅಕ್ರಮ ಕಟ್ಟಡ, ಹೋಟೆಲ್‍ಗಳ ನಿರ್ಮಾಣಕ್ಕೆ ಇಲಾಖೆ ಅನುಮತಿ ನೀಡಿದೆ. ಇದ್ರಿಂದ ಕಬ್ಬನ್ ಪಾರ್ಕ್ ಗೆ ತೊಂದರೆಯಾಗ್ತಿದೆ ಎಂದು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ನಿಂದ ಲೋಕೋಪಯೋಗಿ ಇಲಾಖೆ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.

    ಬೆಂಗಳೂರಿನಲ್ಲಿ ಇದೀಗ ಉಳಿದಿರುವ ಪ್ರಮುಖ ಉದ್ಯಾನವನಗಳೆಂದರೆ ಲಾಲ್ ಬಗ್ ಮತ್ತು ಕಬ್ಬನ್ ಪಾರ್ಕ್. ಇತ್ತೀಚೆಗೆ ಕಬ್ಬನ್ ಪಾರ್ಕ್ ನಲ್ಲಿ ಕೆಲವೊಂದು ಸರ್ಕಾರಿ ಕಟ್ಟಡಗಳು ಹಾಗೂ ಅಂಗಡಿಗಳು ತಲೆ ಎತ್ತುತ್ತಿವೆ. ಅದರಲ್ಲೂ ಕೂಡ ಲೋಕೋಪಯೋಗಿ ಸಚಿವರಾಗಿರುವ ಎಚ್ ಡಿ ರೇವಣ್ಣ ಅವರು ಅಧಿಕಾರಿ ಸ್ವೀಕರಿಸಿದ ನಂತರ ಇನ್ನೂ ಹೆಚ್ಚಾಗಿದೆ ಅಂತ ಪರಿಸರವಾದಿ ಸಾಯಿದತ್ತ ಆರೋಪಿಸಿದ್ದಾರೆ.

    ನಗರದ ಹೃದಯಭಾಗದಲ್ಲಿರುವಂತದ್ದು ಕಬ್ಬನ್ ಪಾರ್ಕ್ ಒಂದೇ. ಹೀಗಾಗಿ ಇದೀಗ ಸರ್ಕಾರವೇ ಈ ಒಂದು ಉದ್ಯಾನವನವನ್ನು ನಾಶ ಮಾಡಲು ಹೊರಟಿರುವುದು ನಿಜಕ್ಕೂ ದುರದೃಷ್ಟಕರವಾಗಿದೆ. ಇನ್ನು ಮುಂದಾದರೂ ಕೂಡ ಕಬ್ಬನ್ ಪಾರ್ಕ್ ನಲ್ಲಿ ಯಾವುದೇ ರೀತಿಯ ಕಟ್ಟಡಗಳು ಆಗದೇ ಇರುವಂತೆ ನೋಡಿಕೊಳ್ಳಬೇಕು. ಇತ್ತೀಚೆಗೆ ನಗರದ ವಾತಾವರಣ ಕೂಡ ಹದಗೆಡುತ್ತಿದ್ದು, ಈ ಒಂದು ಉದ್ಯಾನವನವನ್ನು ಸಂರಕ್ಷಿಸುವ ಕಾರ್ಯ ಮಾಡಬೇಕು ಅಂತ ಅವರು ತಿಳಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮಾಟ ಮಂತ್ರ ಮಾಡಿದ್ರೆ ನಮಗೆ ತಟ್ಟಲ್ಲ, ಮಾಡಿದವರಿಗೆ ಅದು ರಿವರ್ಸ್ ಆಗುತ್ತೆ- ರೇವಣ್ಣ

    ಮಾಟ ಮಂತ್ರ ಮಾಡಿದ್ರೆ ನಮಗೆ ತಟ್ಟಲ್ಲ, ಮಾಡಿದವರಿಗೆ ಅದು ರಿವರ್ಸ್ ಆಗುತ್ತೆ- ರೇವಣ್ಣ

    ಹಾಸನ: ನಮ್ಮ ಸರ್ಕಾರಕ್ಕೆ ಯಾರೇ ಮಾಟ ಮಂತ್ರ ಮಾಡಿದರೂ ತಟ್ಟಲ್ಲ, ಯಾರು ಮಾಡಿಸುತ್ತಾರೋ ಅವರಿಗೆ ಅದು ರಿವರ್ಸ್ ಆಗುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.

    ಯಡಿಯೂರಪ್ಪ ಅವರು ಕೇರಳಕ್ಕೆ ಮಾಟ ಮಂತ್ರ ಮಾಡಿಸಿಕೊಂಡು ಬರಲು ಹೋಗಿದ್ದಾರೆ ಎನ್ನುವ ಸುದ್ದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾರೇ ಮಾಟ ಮಂತ್ರ ಮಾಡಿದರೂ ನಮಗೇನೂ ತಟ್ಟಲ್ಲ, ಯಾರು ಮಾಡಿಸುತ್ತಾರೋ ಅವರಿಗೆ ಅದು ರಿವರ್ಸ್ ಆಗುತ್ತದೆ ಎಂದು ಹೇಳಿದರು.

    ಹಾಸನ ಕ್ಷೇತ್ರಕ್ಕೆ ಸಿದ್ಧರಾಮಯ್ಯ ಅವರ ಅವಧಿಯಲ್ಲಿ ಮಂಜೂರಾಗಿರುವ ಕಾಮಗಾರಿಗಳ ಆದೇಶದ ಪ್ರತಿ ತೋರಿಸಲಿ. ನಾವು ಕೇಂದ್ರದ ಜೊತೆ ಸತತ ಪ್ರಯತ್ನ ಮಾಡಿ ರಾಜ್ಯದಲ್ಲಿ ಹೆದ್ದಾರಿ ಯೋಜನೆಗಳನ್ನು ತಂದಿದ್ದೇವೆ. ರಾಜ್ಯ ಸರ್ಕಾರ 10 ರೂಪಾಯಿ ಕೂಡ ಕೊಟ್ಟಿಲ್ಲ. ವಿಷಯ ಗೊತ್ತಿದ್ದರೆ ಮಾತಾಡಲಿ ಇಲ್ಲವಾದರೆ ಸುಮ್ಮನಿರಲಿ ಎಂದು ಮಾಜಿ ಸಚಿವ ಶಿವರಾಂ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಯಡಿಯೂರಪ್ಪ ತಮ್ಮ ಅವಧಿಯಲ್ಲಿ ಹಾಸನಕ್ಕೆ ಏನು ಕಡಿದು ಕಟ್ಟೆ ಹಾಕಿದ್ದಾರೆ. ಬಿಜೆಪಿ-ಕಾಂಗ್ರೆಸ್ ಸರ್ಕಾರ ಜಿಲ್ಲೆಗೆ ಏನು ಮಾಡಿದೆ ಎನ್ನುವುದನ್ನು ಹೇಳಲಿ ಎಂದು ಅವರು ಸವಾಲ್ ಹಾಕಿದ್ದಾರೆ.

    ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಇತ್ತೀಚೆಗೆ ಚಾಲನೆ ನೀಡಿದ ಯೋಜನೆಗಳು ನಮ್ಮ ಅವಧಿಯಲ್ಲಿ ಮಾಡಿದ್ದು ಎಂದು ಶಿವರಾಂ ಹೇಳಿಕೊಂಡಿದ್ದಾರೆ. ನನ್ನ ಕಡೆಯಿಂದ ಕಾಂಗ್ರೆಸ್ ಸದಸ್ಯರಿಗೆ ತೊಂದರೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಸೇರಿ ಯಾವುದೇ ನಾಯಕರು ನನ್ನನ್ನು ಪ್ರಶ್ನಿಸಿದರೇ ಉತ್ತರ ಕೊಡಲು ಸಿದ್ಧ. ನಾನು ಸಮ್ಮಿಶ್ರ ಸರ್ಕಾರದ ಆಶಯಕ್ಕೆ ಧಕ್ಕೆ ತಂದಿಲ್ಲ. ವರ್ಗಾವಣೆ ಸೇರಿ ಯಾವುದೇ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ. ಬೇಕಾದರೆ ಸಮನ್ವಯ ಸಮಿತಿ ಸಭೆಯಲ್ಲೇ ವಿವರಿಸಿ ಹೇಳುವೆ ಎಂದು ಹೇಳಿದ್ದಾರೆ.

    ಬದುಕಿರುವವರೆಗೂ ನಾನು, ಕುಮಾರಸ್ವಾಮಿ ಹೊಡೆದಾಡಲ್ಲ. ಸಹೋದರರು ಕಚ್ಚಾಡುತ್ತಾರೆ ಎಂದುಕೊಂಡಿದ್ದರೆ ಅದು ಭ್ರಮೆ. ನಾನು ಸಿಎಂ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು. ಹಾಗೆಯೆ ಸಮ್ಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿರಲಿದೆ ಎಂದು ವಿಶ್ವಾಸವಿದೆ.

    ಕುಲದೇವರು ಈಶ್ವರ, ಶೃಂಗೇರಿ ಶಾರದೆ ಆಶೀರ್ವಾದ ಇರೋವರೆಗೂ ಸರಕಾರಕ್ಕೆ ಏನೂ ಆಗಲ್ಲ. ಸಿದ್ದರಾಮಯ್ಯ ಹಾಗೂ ನನ್ನ ನಡುವೆ ರಾಜಕೀಯಕ್ಕೂ ಮೀರಿದ ಸಂಬಂಧವಿದೆ. ಮಲೆನಾಡು ಭಾಗದಲ್ಲಿ ಹೆಚ್ಚಾಗಿರುವ ಕಾಡಾನೆ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಆನೆ ಕಾರಿಡಾರ್ ನಿರ್ಮಾಣ ಮಾಡಲು ಅಧಿವೇಶನದ ನಂತರ ಸಿಎಂ ನೇತೃತ್ವದಲ್ಲಿ ದೆಹಲಿಗೆ ನಿಯೋಗ ಹೋಗಿ ಹಾಸನ ಸೇರಿ ರಾಜ್ಯದಲ್ಲಿರುವ ಆನೆ ಸಮಸ್ಯೆಯ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ರೇವಣ್ಣ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಂ ಎಚ್‍ಡಿಕೆ ಎದುರೇ ವಾಕ್ಸಮರ ನಡೆಸಿದ ರೇವಣ್ಣ-ಡಿಕೆಶಿ!

    ಸಿಎಂ ಎಚ್‍ಡಿಕೆ ಎದುರೇ ವಾಕ್ಸಮರ ನಡೆಸಿದ ರೇವಣ್ಣ-ಡಿಕೆಶಿ!

    ಬೆಂಗಳೂರು: ನೀರಾವರಿ ಯೋಜನೆಯ ವಿಚಾರವಾಗಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮುಖದಲ್ಲೇ ಜಟಾಪಟಿಗೆ ಬಿದ್ದಿದ್ದಾರೆ.

    ಕಾಂಗ್ರೆಸ್ ಹಾಗೂ ಜೆಡಿಎಸ್‍ನಲ್ಲಿ ಸದಾ ಸುದ್ದಿಯಲ್ಲಿರುವ ರೇವಣ್ಣ ಹಾಗೂ ಡಿಕೆ ಶಿವಕುಮಾರ್ ಪರಸ್ಪರ ವಾಕ್ಸಮರ ನಡೆಸಿದ್ದಾರೆ. ನೀರಾವರಿ ಯೋಜನೆ ವಿಚಾರವಾಗಿ ಇಬ್ಬರ ನಡುವೆ ಜಟಾಪಟಿ ಜೋರಾಗಿಯೇ ನಡೆದಿದೆ. ಇಂದು ವಿಧಾನಸಭೆಯ ಕಲಾಪದ ವೇಳೆ ರೇವಣ್ಣ ಹಾಸನ ಜಿಲ್ಲೆ ಜೆಡಿಎಸ್ ಶಾಸಕರ ಪರ ಬ್ಯಾಟಿಂಗ್ ಮಾಡುತ್ತಾ, ಹೆಚ್ಚುವರಿ ವಿಷಯವನ್ನಾಗಿ ನೀರಾವರಿ ಯೋಜನೆಯನ್ನು ಸದನದಲ್ಲಿ ಪ್ರಸ್ತಾಪಿಸಿದರು. ಈ ವೇಳೆ ರೇವಣ್ಣರ ನಿರ್ಧಾರಕ್ಕೆ ಡಿಕೆ ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲೇ, ಇವೆಲ್ಲಾ ನಡೆಯುವುದಿಲ್ಲವೆಂದು ಖಾರವಾಗಿ ಉತ್ತರಿಸಿದ್ದಾರೆ ಎನ್ನಲಾಗುತ್ತಿದೆ.

    ನಮ್ಮ ಶಾಸಕರದ್ದು ಸಾಕಷ್ಟು ನೀರಾವರಿ ಯೋಜನೆಗಳಿವೆ. ಎಲ್ಲವನ್ನು ಒಟ್ಟಿಗೆ ಮಾಡೋಣ. ಈಗ ನಿಮ್ಮ ಶಾಸಕರದ್ದು ಮಾತ್ರ ತಂದ್ರೆ ಒಪ್ಪಿಗೆ ಕೊಡುವುದಕ್ಕೆ ಆಗಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರಂತೆ. ಅದೇ ವೇಳೆ ಸಚಿವ ವೆಂಕರಮಣಪ್ಪ ಕೂಡ ಮಾತನಾಡಿ, ನಮ್ಮದೂ ಇದೇ, ಮೊದಲು ಅದನ್ನು ಮಾಡಿ ಎಂದು ಪಟ್ಟು ಹಿಡಿದರು ಎಂಬ ಮಾಹಿತಿಗಳು ಲಭ್ಯವಾಗಿವೆ.

    ಈ ವೇಳೆ ಸದನದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ರೇವಣ್ಣ ಹಾಗೂ ಡಿಕೆಶಿಯವರ ಜಟಾಪಟಿಯ ನಡುವೆ, ಅವರು ತಂದ ವಿಷಯವನ್ನು ಒಪ್ಪದೇ, ಸದನವನ್ನು ಮುಂದೂಡಿದರು. ಇಷ್ಟೆಲ್ಲಾ ಸನ್ನಿವೇಶ ನಡೆಯುತ್ತಿದ್ದರೂ ಸಿಎಂ ಕುಮಾರಸ್ವಾಮಿ ಮಾತ್ರ ಸುಮ್ಮನೆ ಕುಳಿತ್ತಿದ್ದರು ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅನುದಾನ ವಿಚಾರದಲ್ಲಿ ಸಚಿವ ರೇವಣ್ಣಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್

    ಅನುದಾನ ವಿಚಾರದಲ್ಲಿ ಸಚಿವ ರೇವಣ್ಣಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್

    -ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದ್ರೆ ಆಹಾರ ಇಲಾಖೆ ಆಯುಕ್ತರೇ ಸಸ್ಪೆಂಡ್

    ಬೆಂಗಳೂರು: ಲೋಕೋಪಯೋಗಿ ಸಚಿವ ರೇವಣ್ಣ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೇಲೆ ಒತ್ತಡ ಹಾಕಿ ಹೆಚ್ಚು ಅನುದಾನ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಸಚಿವರು ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಮೀರ್ ಅಹಮದ್ ಅವರು, ಮೂರು ಜಿಲ್ಲೆಗೆ ಮಾತ್ರ ಅನುದಾನ ಬಿಡುಗಡೆ ಎನ್ನುವುದು ಸರಿಯಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲಾ ಜಿಲ್ಲೆಗಳಿಗೂ ಸಮಾನ ಅನುದಾನ ಹಂಚಿಕೆ ಆಗುತ್ತಿದೆ. ಸಚಿವ ರೇವಣ್ಣ ಅವರಿಗೆ ಹಾಸನ ಜಿಲ್ಲೆಯ ಮೇಲೆ ಹೆಚ್ಚು ಪ್ರೀತಿ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ಒತ್ತಡ ಹೇರಿ ಹೆಚ್ಚಿನ ಅನುದಾನ ಪಡೆಯುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

    ನಾನು ಕೂಡಾ ಹಾವೇರಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಬೇಕು ಅಂತ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ಈ ಕುರಿತು ಮುಂದಿನ ಕ್ಯಾಬಿನೆಟ್‍ನಲ್ಲಿ ವಿಷಯ ಪ್ರಸ್ತಾಪ ಮಾಡುತ್ತೇನೆ. ರೇವಣ್ಣ ಅವರಿಗೆ ಮಾತ್ರ ಹೆಚ್ಚು ಅನುದಾನ ಕೊಡುತ್ತಾರೆ ಎನ್ನುವ ಆರೋಪ ಸುಳ್ಳು ಎಂದು ತಿಳಿಸಿದರು.

    ಎಲ್ಲಾ ಜಿಲ್ಲೆಗಳ ಸಭೆ ಮಾಡಿದ್ದು, ಅನಿಲ ಭಾಗ್ಯ ಯೋಜನೆಗೆ 30 ಲಕ್ಷ ಜನ ಫಲಾನುಭವಿಗಳನ್ನು ಗುರುತಿಸಲಾಗಿದೆ. ಅದರಲ್ಲಿ 1 ಲಕ್ಷ ಜನರಿಗೆ ಯೋಜನೆ ತಲುಪಿಸಲು ಸಿದ್ಧತೆ ನಡೆದಿದೆ. ಪ್ರಧಾನಮಂತ್ರಿ ಉಜ್ವಲ್ ಯೋಜನೆ ಅಡಿ ಬಂದಿದ್ದ 31 ಸಾವಿರ ಅರ್ಜಿಗಳನ್ನು ಕೈಬಿಡಲಾಗಿದೆ. ಈ ನಿಟ್ಟಿನಲ್ಲಿ ಡಿಸೆಂಬರ್ 15ರೊಳಗಾಗಿ 1 ಲಕ್ಷ ಜನ ಫಲಾನುಭವಿಗಳಿಗೆ ಅನಿಲ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

    ನ್ಯಾಯಬೆಲೆ ಅಂಗಡಿ ಬಯೋಮೆಟ್ರಿಕ್ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಲಿಖಿತ ದಾಖಲೆ ಕೊಡುವ ವ್ಯವಸ್ಥೆಯಿಂದ ಅಧಿಕಾರಿಗಳು ಸುಮ್ಮನೆ ಬಿಲ್ ಮಾಡುತ್ತಿದ್ದರು. ಬಯೋಮೆಟ್ರಿಕ್ ಅಳವಡಿಸುವುದರಿಂದ ಇಲಾಖೆಗೆ 580 ಕೋಟಿ ರೂ. ಉಳಿತಾಯವಾಗಲಿದೆ. ಈ ನಿಟ್ಟಿನಲ್ಲಿ ಬಿಎಸ್‍ಎನ್‍ಎಲ್ ಸೇರಿದಂತೆ ಹಲವು ಖಾಸಗಿ ಕಂಪನಿಗಳಿಂದ ಬಯೋಮೆಟ್ರಿಕ್ ಅಳವಡಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

    ಪ್ರಾಯೋಗಿಕವಾಗಿ ಶಿವಮೊಗ್ಗದ ಖಾಸಗಿ ಕಂಪನಿಗೆ ಬಯೋಮೆಟ್ರಿಕ್ ಅಳವಡಿಕೆ ಮಾಡಲು ಅವಕಾಶ ನೀಡಲಾಗಿದೆ. ಇಲ್ಲಿ ಯಶಸ್ವಿಯಾದರೆ ಹಂತ ಹಂತವಾಗಿ ರಾಜ್ಯದಲ್ಲಿ ಪ್ರತಿಯೊಂದು ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಬಿಪಿಎಲ್ ಕಾರ್ಡ್ ಗಾಗಿ 6.26 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಸುಮಾರು 1 ಕೋಟಿ ಬಿಪಿಎಲ್ ಕಾರ್ಡ್ ಚಾಲ್ತಿಯಲ್ಲಿವೆ. ನಿತ್ಯವೂ ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬಿಪಿಎಲ್ ಹೊಂದಿರುವ ಶೇ. 99 ಜನರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಕೊಂಡಿದ್ದಾರೆ. ಇದರಿಂದಾಗಿ ಆಧಾರ್ ಲಿಂಕ್ ಆಗಿರುವ 4.5 ಲಕ್ಷ ಕಾರ್ಡ್ ಗಳು ರದ್ದಾಗಲಿವೆ ಎಂದು ಸಚಿವರು ಹೇಳಿದರು.

    ನ್ಯಾಯಬೆಲೆ ಅಂಗಡಿಯಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆಯುವಂತಿಲ್ಲ. ಈ ಕುರಿತು ಅಧಿಕಾರಿಗಳಿಗೂ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಒಂದು ವೇಳೆ ಇಂತಹ ಪ್ರಕರಣಗಳು ಕಂಡುಬಂದರೆ ಆಹಾರ ಇಲಾಖೆ ಅಧಿಕಾರಿಯನ್ನೇ ಅಮಾನತು ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿರುವೆ. ನಾನು ಕೂಡ ಆಗಾಗ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶಿಕ್ಷಣ ಇಲಾಖೆಯಲ್ಲೂ ಸೂಪರ್ ಸಿಎಂ ಕಮಾಲ್

    ಶಿಕ್ಷಣ ಇಲಾಖೆಯಲ್ಲೂ ಸೂಪರ್ ಸಿಎಂ ಕಮಾಲ್

    ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಳಾಗಿ ಅಧಿಕಾರಕ್ಕೆ ಬಂದಾಯ್ತು. ಜೆಡಿಎಸ್‍ನಿಂದ ಕುಮಾರಸ್ವಾಮಿ ಸಿಎಂ ಆಗಿದ್ದೂ ಆಯ್ತು. ಆದರೆ ಮೈತ್ರಿ ಸರ್ಕಾರದ ಆಡಳಿತ ಶುರುವಾಗಿನಿಂದ ಈ ತನಕ ಸಿಎಂಗಿಂತಲೂ ಹೆಚ್ಚು ಸುದ್ದಿಯಲ್ಲಿದ್ದು ಸೂಪರ್ ಸಿಎಂ, ಸಚಿವ ಎಚ್.ಡಿ ರೇವಣ್ಣ. ಹೌದು ರಾಜ್ಯ ಸರ್ಕಾರದಲ್ಲಿ ಸಿಎಂ, ಡಿಸಿಎಂ ಹುದ್ದೆ ನಿರ್ವಹಿಸುವವರು ಇದ್ದರೂ ಸರ್ಕಾರಿ ಯೋಜನೆ, ಸಭೆ, ನಿರ್ಧಾರಗಳಲ್ಲಿ ಸಚಿವ ರೇವಣ್ಣ ಮೂಗು ತೂರಿಸುತ್ತಲೇ ಇದ್ದಾರೆ.

    ಲೋಕೋಪಯೋಗಿ ಸಚಿವ ಎಚ್. ಡಿ ರೇವಣ್ಣ ಸರ್ಕಾರದ ಸೂಪರ್ ಸಿಎಂ ಅನ್ನೋದು ಮತ್ತೊಮ್ಮೆ ಜಗಜ್ಜಾಹಿರಾಗಿದೆ. ಶಿಕ್ಷಣ ಇಲಾಖೆಯ ಮೇಲೆ ಹಿಡಿತ ಸಾಧಿಸಲು ಹೊರಟಿರುವ ಮಾನ್ಯ ರೇವಣ್ಣನವರು ಶಿಕ್ಷಣ ಇಲಾಖೆ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಗೆ ಸೇರ್ಪಡೆಗೊಳಿಸಿದ್ದಾರೆ.

    ಈ ಹಿಂದೆ ನೀಡಿದ್ದ 3 ವರ್ಷಗಳ 450 ಕೋಟಿ ವೆಚ್ಚದ 1,043 ಸರ್ಕಾರಿ ಶಾಲೆಗಳ 1,525 ಕೊಠಡಿಗಳು, 388 ಪ್ರೌಢಶಾಲೆಗಳ 878 ಕೊಠಡಿಗಳು, 91 ಕರ್ನಾಟಕ ಪಬ್ಲಿಕ್ ಶಾಲೆಗಳು, ಪದವಿ ಪೂರ್ವ ಕಾಲೇಜುಗಳ 299 ಕೊಠಡಿಗಳ ಮರುನಿರ್ಮಾಣ, 86 ಪ್ರಯೋಗಾಲಯಗಳು, 154 ಶೌಚಾಲಯಗಳ ನಿರ್ಮಾಣದ ಜೊತೆಗೆ ಇಡೀ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ತಂದಿದ್ದಾರೆ. ಈ ಬಗ್ಗೆ ಇದೇ 20 ರಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಆರ್.ಎಸ್ ನಾಧನ್ ಆದೇಶಿಸಿದ್ದಾರೆ.

    ಈ ಹಿಂದೆ ಶಾಲೆ ಮಟ್ಟದ ಎಸ್‍ಡಿಎಂಸಿ ಸದಸ್ಯರು, ಶಿಕ್ಷಣ ಇಲಾಖೆಯ ಸರ್ವ ಶಿಕ್ಷಣ ಅಭಿಯಾನ, ರಾಷ್ಟ್ರೀಯ ಮಾದ್ಯಮ ಶಿಕ್ಷಣ ಅಭಿಯಾನ ಹಾಗೂ ಜಿಲ್ಲಾ ಪಂಚಾಯತಿಯ ಬಿಇಆರ್‍ಡಿ ಇಲಾಖೆ ಇಂತಹ ಕಾಮಗಾರಿ ನಿರ್ವಹಿಸುತ್ತಿತ್ತು. ಆದರೆ ಈಗ ಇಡೀ ಶಿಕ್ಷಣ ಇಲಾಖೆಯನ್ನೇ ನಿಷ್ಕ್ರೀಯ ಮಾಡಲು ಸಚಿವ ರೇವಣ್ಣ ನಿಂತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಒಟ್ಟಿನಲ್ಲಿ ತಮ್ಮ ಇಲಾಖೆಯ ಕೆಲಸದ ಜೊತೆಗೆ ಇನ್ನಿತರ ಇಲಾಖೆಯಲ್ಲೂ ಮೂಗು ತೂರಿಸುತ್ತಿರುವುದು ಸಿಎಂ ಕುಮಾರಸ್ವಾಮಿಗೆ ಮುಜುಗರ ಉಂಟು ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪ್ರಧಾನಿಯನ್ನು ಹೊಗಳಲು ಹೋಗಿ ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ

    ಪ್ರಧಾನಿಯನ್ನು ಹೊಗಳಲು ಹೋಗಿ ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ

    ಹಾಸನ: 100 ಮಂದಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ರೇವಣ್ಣನಂತವರು ಬಂದರೂ, ಪ್ರಧಾನಿ ನರೇಂದ್ರ ಮೋದಿಯವರ ಕೂದಲು ಅಲ್ಲಾಡಿಸಲು ಸಾಧ್ಯವಿಲ್ಲವೆಂದು ಬಿಜೆಪಿ ಜಿಲ್ಲಾಧ್ಯಕ್ಷ ಯೋಗ ರಮೇಶ್ ಹೇಳಿಕೆಯನ್ನು ನೀಡುವ ಮೂಲಕ ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಲಘುವಾಗಿ ಮಾತನಾಡಿದ್ದ ಲೋಕೋಪಯೋಗಿ ಸಚಿವ ರೇವಣ್ಣನವರಿಗೆ ಮಾನ ಮರ್ಯಾದೆ ಇಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ, ಅವನ ಮನೆಯ ಹತ್ತಿರ ಫೈಲುಗಳನ್ನು ಹಿಡಿದಿಕೊಂಡು ಓಡಾಡುತ್ತಿದ್ದರು. ಈಗ ಅವರು ಹಿರಿಯರೆನ್ನದೆ ಲಘುವಾಗಿ ಮಾತನಾಡಿದ್ದಾರೆ. ಅಲ್ಲದೇ ಸಿದ್ದರಾಮಯನ್ನವರು ಮುಖ್ಯಮಂತ್ರಿಯಾಗಿದ್ದಾಗ, ದೇವೇಗೌಡರು ಹಾಗೂ ಕುಮಾರಸ್ವಾಮಿಗಳು ಅವರಿಗೆ ಬೈಯುತ್ತಿದ್ದರೇ, ಇವರು ಫೈಲ್ ಹಿಡಿದುಕೊಂಡು ಅವರ ಹತ್ತಿರ ಹೋಗುತ್ತಿದ್ದರು ಎಂದು ವ್ಯಂಗ್ಯವಾಡಿದರು.

    ಇದೇ ವೇಳೆ ತೃತಿಯ ರಂಗ ವಿಚಾರದ ಕುರಿತು ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಬೇರೆ ಬೇರೆ ರಾಜ್ಯದ ಮುಖ್ಯಮಂತ್ರಿಗಳನ್ನು ಕರೆಸಿ, ತೃತೀಯ ರಂಗದ ಕುರಿತು ಮಾತನಾಡುತ್ತಿದ್ದಾರೆ. ಅಲ್ಲದೇ ದೇವೇಗೌಡರು, ಸಿಎಂ ಕುಮಾರಸ್ವಾಮಿ ಹಾಗೂ ರೇವಣ್ಣನಂತವರ ನೂರು ಜನ ಬಂದರು, ಪ್ರಧಾನಿ ನರೇಂದ್ರ ಮೋದಿಯವರ ಕೂದಲನ್ನು ಅಲ್ಲಾಡಿಸಲು ಸಾಧ್ಯವಾಗಲ್ಲ ಎಂದು ಕಿಡಿಕಾರಿದ್ದಾರೆ.

    ಹಾಸನ ಜಿಲ್ಲೆಯಲ್ಲಿದ್ದ ಸಕ್ಕರೆ ಕಾರ್ಖಾನೆಯನ್ನು ಮುಚ್ಚಿದ ಕೀರ್ತಿ ರೇವಣ್ಣ ನವರಿಗೆ ಸಲ್ಲುತ್ತದೆ. ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಅವರು ಏನು ಮಾಡಿದ್ದಾರೆನ್ನುವುದನ್ನು ಮೊದಲು ತಿಳಿಸಲಿ. ಅದನ್ನು ಬಿಟ್ಟು ಉತ್ತರ ಕರ್ನಾಟಕದ ಕಬ್ಬು ಬೆಳಗಾರರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ನಿಮ್ಮ ಕೈಯಲ್ಲಿ ಅಧಿಕಾರವಿದ್ದಾಗ ಯಾವ ರೀತಿ ದಬ್ಬಾಳಿಕೆ ನಡೆಸಿದ್ದೀರಿ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಇದು ರೈತರ ಹೋರಾಟವಲ್ಲ, ಮೈತ್ರಿ ಸರ್ಕಾರವನ್ನು ಇಳಿಸಲು ರೂಪಿಸಿದ ಸಂಚು: ರೇವಣ್ಣ

    ಇದು ರೈತರ ಹೋರಾಟವಲ್ಲ, ಮೈತ್ರಿ ಸರ್ಕಾರವನ್ನು ಇಳಿಸಲು ರೂಪಿಸಿದ ಸಂಚು: ರೇವಣ್ಣ

    ಬೆಂಗಳೂರು: ಸಿಎಂ ಬಳಿ ನೋಟ್ ಮುದ್ರಣ ಮಾಡೋ ಯಂತ್ರ ಇದೆಯೇ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಇಂದು ರೈತರ ಹೋರಾಟವನ್ನು ಮೈತ್ರಿ ಸರ್ಕಾರ ಇಳಿಸಲು ನಡೆಸುತ್ತಿರುವ ಸಂಚು ಎಂದು ಆರೋಪಿಸಿದ್ದಾರೆ.

    ಕಬ್ಬು ಬೆಳೆಗಾರರ ಪ್ರತಿಭಟನೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಎಚ್.ಡಿ ರೇವಣ್ಣ, ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಇಳಿಸಲೇಬೇಕೆಂದು ಕೆಲ ನಾಯಕರು ಸಂಚು ಮಾಡುತ್ತಿದ್ದಾರೆ. ಯಾವುದಕ್ಕೂ ನಾವು ಹೆದರಲ್ಲ. ಈ ಪ್ರತಿಭಟನೆ ಹಿಂದೆ ಯಾರಿದ್ದಾರೆ ಎನ್ನುವುದು ನಮ್ಮ ಸರ್ಕಾರಕ್ಕೆ ಗೊತ್ತಿದೆ ಎಂದು ಹೇಳಿದರು.

    ಕಬ್ಬಿನ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಯಿಂದ ವಸೂಲಿ ಮಾಡಿಸಿ ಕೊಡುವ ಕೆಲಸ ಸಿಎಂ ನೋಡಿಕೊಳ್ಳುತ್ತಾರೆ. ಕೇಂದ್ರ ಸರ್ಕಾರವು ಕಬ್ಬು ಬೆಳಗಾರರಿಗೆ ನೆರವನ್ನು ನೀಡಬೇಕು. ಆದರೆ ಎಲ್ಲದಕ್ಕೂ ರಾಜ್ಯ ಸರ್ಕಾರವನ್ನೇ ಹೊಣೆ ಮಾಡುವುದು ಸರಿಯಲ್ಲ. ರಾಜ್ಯದ ಬರ ಪೀಡಿತ ಪ್ರದೇಶಗಳ ಬಗ್ಗೆ ಕೇಂದ್ರ ಸರ್ಕಾರ ಯೋಚಿಸುತ್ತಿಲ್ಲ. ರಾಜ್ಯದಲ್ಲಿರುವ 17 ಜನ ಸಂಸದರಿಗೆ ನಾಚಿಕೆಯಾಬೇಕು. ಯಾವುದಕ್ಕೆ ರಾಜಕಾರಣ ಮಾಡಬೇಕೋ ಅದರಲ್ಲಿ ರಾಜಕಾರಣ ಮಾಡಲಿ. ಈ ರೀತಿ ಸರ್ಕಾರ ವಿರುದ್ಧ ಜನರನ್ನು ಎತ್ತಿ ಕಟ್ಟುವ ಕೆಳ ಮಟ್ಟದ ರಾಜಕಾರಣ ಮಾಡಬಾರದು ಬಿಜೆಪಿ ವಿರುದ್ಧ ಕಿಡಿಕಾರಿದರು.

    ರೈತರ ಬಗ್ಗೆ ನಮಗೆ ಕಾಳಜಿ ಇದೆ ಅವರನ್ನು ನಾವು ಎಂದಿಗೂ ಕಡೆಗಣಿಸಲ್ಲ. ಅಷ್ಟೇ ಅಲ್ಲದೆ ಸಿಎಂ ರೈತರಿಗಾಗಿ 49 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಕಬ್ಬು ಬೆಳೆಗಾರರಿಗೆ ಸಿಎಂ ನ್ಯಾಯ ದೊರಕಿಸಿಕೊಡ್ತಾರೆ. ಆದರೆ ಕಬ್ಬು ಬೆಳೆಗಾರರು ಹೋರಾಟದ ನಡುವೆ ಸುವರ್ಣಸೌಧದ ಬಳಿ ಇದ್ದ ಗೇಟ್‍ಗೆ ಹಾನಿ ಮಾಡಿದ್ದಾರೆ. ಈ ತರಹದ ಕೆಲಸ ಮಾಡುವುದು ನಿಜವಾದ ರೈತರಿಗೆ ಅಗೌರವ ನೀಡಿದಂತೆ ಆಗುತ್ತದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಚಿವ ರೇವಣ್ಣರನ್ನ ಹೊಗಳಿ, ಸ್ವಪಕ್ಷೀಯರಿಗೆ ಸಚಿವೆ ಜಯಾಮಾಲಾ ಟಾಂಗ್

    ಸಚಿವ ರೇವಣ್ಣರನ್ನ ಹೊಗಳಿ, ಸ್ವಪಕ್ಷೀಯರಿಗೆ ಸಚಿವೆ ಜಯಾಮಾಲಾ ಟಾಂಗ್

    ಹಾಸನ: ಸಮ್ಮಿಶ್ರ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿರುವ ಎಚ್.ಡಿ.ರೇವಣ್ಣ ವಿವಿಧ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡುತ್ತಾರೆ. ವರ್ಗಾವಣೆ ಸೇರಿದಂತೆ ಆಡಳಿತದಲ್ಲಿ ಕೈಯಾಡಿಸುತ್ತಾರೆ. ಇವರೇ ಸೂಪರ್ ಸಿಎಂ ರೀತಿ ಆಗಿದ್ದಾರೆ ಎನ್ನೋದು ಕಾಂಗ್ರೆಸ್‍ನ ಕೆಲವು ಸಚಿವರು ಅಸಮಾಧಾನ. ಆದರೆ ಸಚಿವೆ ಹಾಗೂ ಖ್ಯಾತ ನಟಿ ಡಾ.ಜಯಮಾಲಾ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಹಾಡಿ ಹೊಗಳಿದ್ದಲ್ಲದೇ, ಇರೋವರೆಗೂ ನೀವು ಸೋಲುವುದೇ ಇಲ್ಲ. ಕೊನೆವರೆಗೂ ಶಾಸಕರಾಗಿರುತ್ತೀರಿ ಎಂದು ಗುಣಗಾನ ಮಾಡಿದ್ದಾರೆ.

    ಹಾಸನ ಜಿಲ್ಲೆ ಶ್ರವಣಬೆಳಗೊಳ ಜೈನಮಠದ ಪೀಠಾಧ್ಯಕ್ಷರಾದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಜಯಮಾಲಾ, ಸಭೆಯಲ್ಲಿ ರೇವಣ್ಣ ಅವರನ್ನು ಕೊಂಡಾಡಿದರು. ಹಾಸನದಲ್ಲಿ ಶುಚಿತ್ವಕ್ಕೆ ರೇವಣ್ಣ ಅವರು ನೀಡಿರುವ ಆದ್ಯತೆಯನ್ನು ಎಲ್ಲಾ ಕಡೆ ಜನರು ಮಾತನಾಡುತ್ತಿದ್ದಾರೆ. ಜನರು ಏನೂ ಕೇಳದೇ ಇದ್ದರೂ, ಅವರಿಗೆ ಬೇಕಾದುದನ್ನು ಅರ್ಥೈಸಿಕೊಂಡು ರೇವಣ್ಣ ಅವರೇ ಒಂದು ಸಾಮ್ರಾಜ್ಯ ನಿರ್ಮಾಣ ಮಾಡಿದ್ದಾರೆ.

    ಹಾಸನ ಜಿಲ್ಲೆ ನೋಡಿದಾಗ ಅವರ ಶ್ರಮದ ದರ್ಶನವಾಗಲಿದೆ. ಯಾವುದೇ ಸರ್ಕಾರವಿರಲಿ, ವಿಧಾನಸೌಧದಲ್ಲಿ ಇಂಥ ಕೆಲಸ ನಮ್ಮ ಜಿಲ್ಲೆಗೆ ಆಗಬೇಕು ಎಂದು ಏಕೆ ಪಟ್ಟು ಹಿಡಿಯುತ್ತಾರೆ ಎಂಬುದು ನನಗೀಗ ಅರ್ಥವಾಗಿದೆ. ಹೀಗಾಗಿ ರೇವಣ್ಣ ಅವರು ಬದುಕಿರುವವರೆಗೂ ಎಂಎಲ್ ಎ ಆಗಿರುತ್ತಾರೆ ಎಂದು ಭವಿಷ್ಯ ನುಡಿದ ಅವರು, ಜನಪ್ರತಿನಿಧಿಯಾದವರು ಜನರ ಭಾವನೆ ಅರ್ಥ ಮಾಡಿಕೊಂಡು, ಅವರ ಅಗತ್ಯತೆಗಳಿಗೆ ಸ್ಪಂದಿಸಬೇಕು. ಆ ಕೆಲಸವನ್ನು ರೇವಣ್ಣ ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ.

    ಮಹಿಳೆಯರು, ಮಕ್ಕಳ ಬಗ್ಗೆ ಸಚಿವರು ಹೊಂದಿರುವ ಸಹಾನುಭೂತಿ, ದೇವರ ಮೇಲಿನ ಅಪಾರ ನಂಬಿಕೆ ಅವರನ್ನು ಜೀವನದಲ್ಲಿ ಎಂದೂ ಸೋಲಿಸದು. ದೇವರು ನಿಮಗೆ ಇನ್ನಷ್ಟು ಶಕ್ತಿ ಕೊಡಲಿ. ಕೊನೆವರೆಗೂ ಹೀಗೇ ಇರಿ ಎಂದು ಶುಭಕೋರಿದರು. ತಮ್ಮ ಪಕ್ಷದ ಸಚಿವರು, ರೇವಣ್ಣ ಅವರನ್ನು ಒಂದೇ ಸಮನೆ ಗುಣಗಾನ ಮಾಡುವುದನ್ನು ಕಂಡ ಕಾಂಗ್ರೆಸ್‍ನ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಸುಮ್ಮನೆ ನೋಡುತ್ತಾ ಕುಳಿತಿದ್ದರು. ಜಯಮಾಲಾ ತಮ್ಮ ಕುರಿತಾಗಿ ಮಾತನಾಡುವುದನ್ನು ನಗುಮೊಗದಿಂದ ಆಲಿಸಿದ ಸಚಿವರು, ನಂತರ ಸ್ವಾಮೀಜಿ ಸೇರಿದಂತೆ ಬಹುತೇಕರು ಮಾತನಾಡುವಾಗ ವೇದಿಕೆಯಲ್ಲೇ ನಿದ್ರೆಗೆ ಜಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=LwzR1wGUpGU