Tag: ಎಚ್.ಸಿ. ಮಹದೇವಪ್ಪ

  • ಬಿಜೆಪಿಯವರಿಗೆ ಹಸುಗಳ ಮೇಲೆ ಪ್ರೀತಿ ಇದ್ದರೆ ಗೋಮಾಂಸ ರಫ್ತು ನಿಲ್ಲಿಸಲಿ: ಎಚ್.ಸಿ.ಮಹದೇವಪ್ಪ

    ಬಿಜೆಪಿಯವರಿಗೆ ಹಸುಗಳ ಮೇಲೆ ಪ್ರೀತಿ ಇದ್ದರೆ ಗೋಮಾಂಸ ರಫ್ತು ನಿಲ್ಲಿಸಲಿ: ಎಚ್.ಸಿ.ಮಹದೇವಪ್ಪ

    ಮೈಸೂರು: ಬಿಜೆಪಿಯವರಿಗೆ ನಿಜವಾಗಿಯೂ ಹಸುಗಳ ಬಗ್ಗೆ ಪ್ರೀತಿ ಇದ್ದರೆ ಮೊದಲು ಇವರು ಮಾಡುತ್ತಿರುವ ಗೋಮಾಂಸ ರಫ್ತನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸವಾಲು ಹಾಕಿದ್ದಾರೆ.

    GOVU POOJA

    ಬಲಿಪಾಡ್ಯಮಿ ದಿನದಂದು ಕಡ್ಡಾಯವಾಗಿ ಗೋಪೂಜೆ ಮಾಡಬೇಕೆಂಬ ರಾಜ್ಯ ಸರ್ಕಾರದ ಆದೇಶ ನಾಟಕೀಯವಾದದ್ದು ಎಂದು ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ ಮಾಡಬೇಕೆಂದು ಆದೇಶ ಹೊರಡಿಸಿರುವ ರಾಜ್ಯ ಬಿಜೆಪಿ ಸರ್ಕಾರವು ದೀಪಾವಳಿಯ ಪೂಜೆ ವೇಳೆ ಸಹಜವಾಗಿ ನಡೆಯುವ ಗೋಪೂಜೆ ಆಚರಣೆಗಳಿಗೂ ತನ್ನ ರಾಜಕೀಯ ಬಣ್ಣ ಬಳಿದಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಗ್ರಾಮೀಣ ಭಾರತದಲ್ಲಿ ಕೃಷಿಯ ಮೂಲಕ ಬದುಕು ಕಂಡುಕೊಂಡಿರುವ ಎಲ್ಲಾ ರೈತರೂ ದೀಪಾವಳಿ ಮತ್ತು ಸಂಕ್ರಾಂತಿ ಹಬ್ಬದ ವೇಳೆ ಹಸುಗಳ ಮೈತೊಳೆದು, ಅಲಂಕಾರ ಮಾಡಿ ನಂತರ ಕಿಚ್ಚು ಹಾಕಿಸುವಂತಹ ಆಚರಣೆಯು ಅನಾದಿ ಕಾಲದಿಂದಲೂ ಇದೆ. ಈ ಆಚರಣೆಯನ್ನು ನಮ್ಮ ರೈತರು ಬಿಜೆಪಿಗರಿಂದ ಕಲಿಯಬೇಕೇನು ಎಂದು ಪ್ರಶ್ನಿಸಿದ್ದಾರೆ.

    ಬೆಲೆ ಏರಿಕೆಯ ನಡುವೆ ದೀಪಾವಳಿಯೂ ಬೇಡ ಎಂಬ ಪರಿಸ್ಥಿತಿಗೆ ಜನಸಮಾನ್ಯರನ್ನು ನೂಕಿರುವ ಬಿಜೆಪಿಗರು ಗೋವಿನ ಹೆಸರಲ್ಲಿ ರಾಜಕೀಯ ಮಾಡುತ್ತಿರುವುದು ಅತ್ಯಂತ ಹಾಸ್ಯಸ್ಪದ ಬೆಳವಣಿಗೆ ಎಂದು ಲೇವಡಿ ಮಾಡಿದ್ದಾರೆ.

    BEEF

    ಹೈನುಗಾರಿಕೆಯನ್ನೇ ಉಪ ಕಸುಬಾಗಿಸಿಕೊಂಡಿರುವ ನಮ್ಮೆಲ್ಲಾ ರೈತರ ಕುಟುಂಬಗಳಿಗೆ ತಲಾ 2 ಹಸುಗಳನ್ನು ನೀಡುವ ಮೂಲಕ ಹಸುವಿನ ಮತ್ತು ರೈತರ ಬದುಕಿಗೆ ನೆರವಾಗಲಿ. ಗಗನಕ್ಕೆ ಏರಿರುವ ರಸಗೊಬ್ಬರದ ಬೆಲೆ ಇಳಿಸಲಿ. ಕೃಷಿ ಉಪಕರಣಗಳ ಬೆಲೆಯನ್ನು ತಗ್ಗಿಸಿ ಕೃಷಿ ಉತ್ಪಾದನೆಯನ್ನು ಉತ್ತೇಜಿಸಲಿ. ಸುಮ್ಮನೇ ಗೋವಿನ ಹೆಸರಲ್ಲಿ ನಾಟಕವೇಕೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಸುವರ್ಣಸೌಧ ಮುಂದೆ ಮಾತಾಡ್ ಮಾತಾಡ್ ‘ಕನ್ನಡ’ ಗೀತೆಗಳ ಕಲರವ

    ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರವು ಜನಸಮಾನ್ಯರಿಗೆ ಬೆಲೆ ಏರಿಕೆಯ ಕೊಡುಗೆಯನ್ನು ನೀಡಿದ್ದು ದೇಶಪ್ರೇಮದ ಹೆಸರನ್ನು ಹೇಳಿಕೊಂಡು ದೇಶ ನಿವಾಸಿಗಳಿಗೆ ಮೋಸ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಜನಸಾಮಾನ್ಯರು ದಂಗೆ ಏಳುವುದು ಅನಿವಾರ್ಯವಾಗಿ ಕಾಣುತ್ತಿದೆ. ಜನಸಾಮಾನ್ಯರ ನೇರ ಆಕ್ರೋಶವೇ ಇದಕ್ಕೆ ಅಂತಿಮ ಎಂದು ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

  • ನಮ್ಮ ಪಕ್ಷದವರೇ ನಾನು ಮಾಡಿದ ಕೆಲಸವನ್ನ ಪ್ರಚಾರ ಮಾಡಲಿಲ್ಲ: ಮಹದೇವಪ್ಪ ಬೇಸರ

    ನಮ್ಮ ಪಕ್ಷದವರೇ ನಾನು ಮಾಡಿದ ಕೆಲಸವನ್ನ ಪ್ರಚಾರ ಮಾಡಲಿಲ್ಲ: ಮಹದೇವಪ್ಪ ಬೇಸರ

    ಮೈಸೂರು: ಕಾಂಗ್ರೆಸ್ ಸರ್ಕಾರ ಅವಧಿಯ ರಸ್ತೆ ಕಾಮಗಾರಿ ಬಗ್ಗೆ ಬಿಜೆಪಿ ಸಚಿವರು ಪ್ರಶಂಸಿಸಿದ್ದಕ್ಕೆ ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಎಚ್.ಸಿ. ಮಹದೇವಪ್ಪ, ಇಂತಹ ಬೆಳವಣಿಗೆ ರಾಜಕೀಯ ವ್ಯವಸ್ಥೆಯಲ್ಲಿ ಆಗಬೇಕು. ಒಂದು ಸರ್ಕಾರದ ಯೋಜನೆಗಳನ್ನ ಮತ್ತೊಂದು ಸರ್ಕಾರ ಪ್ರಶಂಸೆ ಮಾಡುವಂತಿರಬೇಕು. ನನ್ನ ಕೆಲಸದ ಬಗ್ಗೆ ಇವತ್ತಿನ ಸರ್ಕಾರ ಮೆಚ್ಚುಗೆ ವ್ಯಕ್ತ ಮಾಡಿದ್ದು ಸಂತಸ ತಂದಿದೆ ಎಂದರು. ಇದನ್ನೂ ಓದಿ: ಬಿಜೆಪಿಯಲ್ಲೂ ಪೌರತ್ವ ಕಾಯ್ದೆ ವಿರೋಧಿಸೋರು ಇದ್ದಾರೆ: ಡಾ.ಎಚ್.ಸಿ. ಮಹದೇವಪ್ಪ

    ನನ್ನ ಅವಧಿಯ ಕೆಲಸಗಳ ಬಗ್ಗೆ ಸಿಎಂ ಹಾಗೂ ಸಚಿವ ಜಗದೀಶ್ ಶೆಟ್ಟರ್ ಮೆಚ್ಚುಗೆ ಮಾತನಾಡಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆ ಆದರೆ, ನನ್ನ ಕೆಲಸವನ್ನ ನಮ್ಮ ಪಕ್ಷದವರೇ ಬಳಸಿಕೊಳ್ಳಲಿಲ್ಲ. ಅದ್ಯಾಕೋ ಏನೋ ನಮ್ಮವರು ಅದನ್ನ ಉಪಯೋಗಿಕೊಳ್ಳಲೇ ಇಲ್ಲ. ಎಲ್ಲಿ ಕಾಂಗ್ರೆಸ್‍ನಲ್ಲಿ ನಾನು ದೊಡ್ಡಮಟ್ಟದ ನಾಯಕನಾಗುತ್ತೇನೋ ಅಂತಾನೋ ಗೊತ್ತಿಲ್ಲ ಇದು ವಿಪರ್ಯಾಸ ಎಂದು ಸ್ವಪಕ್ಷಿಯರ ಬಗ್ಗೆ ಬೇಸರ ವ್ಯಕ್ತಪಡಿಸಿದರು.