Tag: ಎಡಗೈ ಅಪಘಾತಕ್ಕೆ ಕಾರಣ

  • ದಿಗಂತ್ ನಟನೆಯ ಸಿನಿಮಾದಲ್ಲಿ ನಿರೂಪ್ ಭಂಡಾರಿ ಸ್ಪೆಷಲ್ ಪಾತ್ರ

    ದಿಗಂತ್ ನಟನೆಯ ಸಿನಿಮಾದಲ್ಲಿ ನಿರೂಪ್ ಭಂಡಾರಿ ಸ್ಪೆಷಲ್ ಪಾತ್ರ

    ದಿಗಂತ್​ ಮಂಚಾಲೆ (Digant) ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಸಿನಿಮಾ ವಿಭಿನ್ನವಾದ ಕಾನ್ಸೆಪ್ಟ್​ ಮೂಲಕ ಈಗಾಗಲೇ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇತ್ತೀಚೆಗಷ್ಟೆ ಆಗಸ್ಟ್​ 13ರಂದು ‘ವಿಶ್ವ ಎಡಗೈ ದಿನ’ದಂದು ಎಗಡೈ ಬಳಸುವವರಿಗೆ ಅನುಕೂಲ ಆಗುವ ರೀತಿಯಲ್ಲಿ ಹೊಸ ಬಗೆಯ ಹೆಲ್ಮೆಟ್​ ಕೂಡ ಲಾಂಚ್​ ಮಾಡಲಾಗಿತ್ತು. ವಿನೂತನ ಸಬ್ಜೆಕ್ಟ್ ಮೂಲಕ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿರುವ ‘ಎಡಗೈ’ ತಂಡಕ್ಕೆ ಮತ್ತೋರ್ವ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ. ಅದು ಮತ್ತ್ಯಾರು ಅಲ್ಲ ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ (Nirup Bhandari). ಮೊದಲ ಬಾರಿಗೆ ನಿರೂಪ್ ಮತ್ತು  ದಿಗಂತ್  ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

    ಇತ್ತೀಚಿನ  ದಿನಗಳಲ್ಲಿ ಸ್ಟಾರ್ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರ ಅಪರೂಪವಾಗಿದೆ. ಮಲ್ಟಿಸ್ಟಾರರ್ ಸಿನಿಮಾಗಳಿಗೆ ಖ್ಯಾತ  ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿರುವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಹೀರೋ ಆಗಿ ಅಬ್ಬರಿಸುತ್ತಿದ್ದ ನಿರೂಪ್ ಭಂಡಾರಿ, ದಿಗಂತ್ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಕಾರಣ ಸಿನಿಮಾ ಕಥೆ ಮತ್ತು ಕಾನ್ಸೆಪ್ಟ್. ಇದನ್ನೂ ಓದಿ:ಕರ್ನಾಟಕದವರು ಸತ್ತಿಲ್ಲ, ಬದುಕಿದ್ದೇವೆ- ಕಾವೇರಿ ಪರ ಧ್ವನಿಯೆತ್ತಿದ ಸಾ ರಾ ಗೋವಿಂದು

    ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಇಂತದೊಂದು ವಿಭಿನ್ನ ರೀತಿಯ ಕಾನ್ಸೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್ ಇಂಪ್ರೆಸ್ ಆಗಿದ್ದಾರೆ. ಇನ್ನು ಯಂಗ್ ಅಂಡ್ ಎನರ್ಜಿಟಿಕ್ ಆಗಿರುವ ತಂಡ ನೋಡಿ ಈ ಸಿನಿಮಾದಲ್ಲಿ ತಾವು ಕೂಡ ಭಾಗಿ ಆದರೆ ಚೆನ್ನಾಗಿರುತ್ತೆ ಎಂದು ‘ಎಡಗೈ ಅಪಘಾತಕ್ಕೆ ಕಾರಣ’ಸಿನಿಮಾತಂಡದ ಜೊತೆ ಕೈಜೋಡಿಸಿದ್ದಾರೆ ನಿರೂಪ್.

    ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಸಮರ್ಥ್ ಬಿ. ಕಡಕೊಳ್ (Samarth Kadakol) ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಚಿತ್ರ. ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾವಾಗಿದೆ. ‘ಹೈಫನ್ ಪಿಕ್ಚರ್ಸ್ ಬ್ಯಾನರ್’ ಅಡಿಯಲ್ಲಿ ‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ (Gurdutt Ganiga) ಮತ್ತು ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರಿಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನು ಈ ಸಿನಿಮಾದಲ್ಲಿ ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಡಗೈ ಬಳಸುವವರ ಕೈ ಹಿಡಿಯಲಿದ್ದಾರೆ ದಿಗಂತ್

    ಎಡಗೈ ಬಳಸುವವರ ಕೈ ಹಿಡಿಯಲಿದ್ದಾರೆ ದಿಗಂತ್

    ಲಗೈಯವರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಪ್ರತಿ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈಯವರ ದಿನವನ್ನು ಆಚರಿಸಲಾಗುತ್ತದೆ. ಇದೇ ಎಡಗೈ ಬಳಸುವವರ ಸುತ್ತ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗುತ್ತಿರುವುದು ಗೊತ್ತೇ ಇದೆ. ಅದೇ ಎಡಗೈ ಅಪಘಾತಕ್ಕೆ ಕಾರಣ (Edagai Apaghatakke Karana). ದೂದ್ ಪೇಡಾ ದಿಗಂತ್ (Digant) ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಟ್  ವೇಗ ಹೆಲ್ಮೆಟ್ ಕಂಪನಿಯವರಿಗೆ ಬಹಳ ಇಷ್ಟವಾಗಿದೆ. ಹೀಗಾಗಿ ಸಿನಿಮಾಗೆ ‘ವೇಗ’ ಹೆಲ್ಮೆಟ್ ಕಂಪನಿ ಸಾಥ್ ಕೊಟ್ಟಿದೆ. ಅದೇಗೇ ಅಂತೀರಾ?  ಇದೇ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈ ದಿನದಂದು ವೇಗ ಹೆಲ್ಮೆಟ್ (Helmet) ಕಂಪನಿ ಎಗಡೈ ಬಳಸುವವರರಿಗಾಗಿ ಹೊಸ ಹೆಲ್ಮೆಟ್ ಲಾಂಚ್ ಮಾಡುತ್ತಿದೆ. ಇದೆ ಅಲ್ವಾ ಒಂದು ಸಿನಿಮಾದ ಸೋಷಿಯಲ್ ಇಂಪ್ಯಾಕ್ಟ್ ಅಂದರೆ.

    ಕನ್ನಡ ಸಿನಿಮಾಗಳ ಮಾರುಕಟ್ಟೆ ಈಗ ವಿಸ್ತರಿಸಿದೆ. ವಿಭಿನ್ನ ಬಗೆಯ ಕಥಾಹಂದರದ ಕನ್ನಡ ಚಿತ್ರಗಳು ಈಗ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಂತೆ ಎಡಗೈ ಅಪಘಾತ ಕಾರಣಕ್ಕೆ ಸಿನಿಮಾದ ಐಡಿಯಾ, ಕಾನ್ಸೆಪ್ಟ್ ವೇಗ ಹೆಲ್ಮೆಟ್ ಕಂಪನಿಯರನ್ನು ತಲುಪಿದೆ. ಅಂದ್ರೆ ಇಡೀ ಚಿತ್ರತಂಡ ಮಾತ್ರವಲ್ಲ ಇಡೀ ಇಂಡಸ್ಟ್ರಿಯೇ ಖುಷಿ ಪಡಬೇಕಾದ ವಿಚಾರ. ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ತಂಡದ ಜೊತೆ ವೇಗ ಹೆಲ್ಮೆಟ್ ಕಂಪನಿ ಕೈ ಜೋಡಿಸಿದ್ದಾರೆ. ಎಡಗೈ ಬಳಸುವವರಿಗೆ ಹೊಸ ಹೆಲ್ಮೆಟ್ ಪರಿಚಯಿಸುತ್ತಿದೆ.

    ಅಂದಹಾಗೇ ಸಮರ್ಥ್ ಬಿ ಕಡಕೊಳ್ (Samarth B Kadakol) ಎಡಗೈ ಅಪಘಾತಕ್ಕೆ ಕಾರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೀರೋ ದಿಗಂತ್ ಮಿಸ್ಸಿಂಗ್ ಎಂದು ವಿಡಿಯೋ ಹಂಚಿಕೊಂಡ ಚಿತ್ರತಂಡ

    ಹೀರೋ ದಿಗಂತ್ ಮಿಸ್ಸಿಂಗ್ ಎಂದು ವಿಡಿಯೋ ಹಂಚಿಕೊಂಡ ಚಿತ್ರತಂಡ

    ದೂದ್ ಪೇಡ ದಿಗಂತ್ (Diganth) ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ (edagai Apaghatakke  Karana) ಸಿನಿಮಾದ ಡಬ್ಬಿಂಗ್ (Dubbing) ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ. ಆದರೆ ನಾಯಕ ದಿಗಂತ್ ಫೈಲ್ ಮಿಸ್ (Missing) ಆಗಿದೆ. ಹಾಗಿದ್ರೆ ದೂದ್ ಪೇಡೆ ಎಲ್ಲಿ? ಎಂಬ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ.

    ಸಸ್ಪೆನ್ಸ್ ಥ್ರಿಲ್ಲರ್ ಡ್ರಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ದಿಗಂತ್ ಗೆ ಜೋಡಿಯಾಗಿ ಯುವನಟಿ ಧನು ಹರ್ಷ ನಟಿಸಿದ್ದಾರೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ ಮಾಡಿದ್ದಾರೆ. ಇದನ್ನೂ ಓದಿ:‘ಸಲಾರ್’ ಅಡ್ಡಾಗೆ ಎಂಟ್ರಿ ಕೊಟ್ಟ ಕನ್ನಡದ ನಟ ಸೌರವ್ ಲೋಕಿ

    ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಚಿತ್ರಕ್ಕಿದೆ. ಈ ಸಿನಿಮಾದಲ್ಲಿ ಪ್ರತಿ ಕೆಲಸಕ್ಕೂ ಎಡಗೈ ಬಳಸುವವರ ಸಮಸ್ಯೆಗಳ ಬಗ್ಗೆಯೇ ತೋರಿಸಲಾಗಿದೆ. ಅವರು ದಿನನಿತ್ಯದ ಜೀವನದಲ್ಲಿ ಎದುರಿಸುವ ಸವಾಲುಗಳ ಕುರಿತಾಗಿಯೇ ಫೋಕಸ್ ಮಾಡಲಾಗಿದೆಯಂತೆ. ಸದ್ಯ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಡಬ್ಬಿಂಗ್ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲಿ ಚಿತ್ರ ತೆರೆಗೆ ಬರಲಿದೆ.