ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನದ ಅಂಗವಾಗಿ ‘ಎಡಗೈ ಅಪಘಾತಕ್ಕೆ ಕಾರಣ’ (Edgaiye Apghatakke Karana) ಸಿನಿಮಾ ತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಎಡಗೈ ಬಳಸುವವರನ್ನೇ ಗಮನದಲ್ಲಿಟ್ಟುಕೊಂಡು, ಅವರ ಜೀವನ ಶೈಲಿ ಕುರಿತು ಈ ಚಿತ್ರ ಕಟ್ಟಿಕೊಡಲಾಗಿದೆ. ಅದರಂತೆಯೇ ಪೋಸ್ಟರ್ ಕೂಡ ಆಕರ್ಷಕವಾಗಿದೆ. ಸೆಟ್ಟೇರಿದ ದಿನದಂದಲೂ ಚಿತ್ರತಂಡ ವಿಭಿನ್ನ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರೇಕ್ಷಕರ ಕುತೂಹಲವನ್ನು ಹೆಚ್ಚು ಮಾಡಿದೆ. ಇದನ್ನೂ ಓದಿ:ಪತ್ರಕರ್ತ ಹರೀಶ್ ನಟನೆಯ ‘ಕ್ರೆಡಿಟ್ ಕುಮಾರ’ ಚಿತ್ರಕ್ಕೆ ಸರ್ಜಾ ಚಾಲನೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆ್ಯಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ದೂದ್ ಪೇಡ ದಿಗಂತ್ (Diganth) ನಾಯಕನಾಗಿ ನಟಿಸಿದ್ದು, ಅವರಿಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸಿದ್ದಾರೆ. ನಿಧಿ ಸುಬ್ಬಯ್ಯ(Nidhi Subbaiah), ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.
ಎಡಗೈ ಬಳಸುವವರ ಕಥೆ ಆಧಾರಿತ ಸಿನಿಮಾ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghakke Karana) ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಚಿತ್ರದ ಟೀಸರ್ ಎಂಟ್ರಿಗೆ ದಿನಾಂಕ ನಿಗದಿಯಾಗಿದೆ. ನಾಳೆ (ಡಿ.28) ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್ ನ್ನು ಕಿಚ್ಚ ಸುದೀಪ್ (Sudeep) ಅನಾವರಣಗೊಳಿಸಲಿದ್ದಾರೆ. ಈ ಮೂಲಕ ದಿಗಂತ್ (Diganth Manchale) ಸಿನಿಮಾಗೆ ಸುದೀಪ್ ಸಾಥ್ ಕೊಡಲಿದ್ದಾರೆ.
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ನಿರ್ದೇಶನ ಮಾಡುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ಇದನ್ನೂ ಓದಿ:‘ಟೋಬಿ’ ಸುಂದರಿಯ ಮೈಮಾಟಕ್ಕೆ ಪಡ್ಡೆಹುಡುಗರು ಫಿದಾ
ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ದಿಗ್ಗಿಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.
ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್ ಎಂಬ ವಿಶೇಷ ಹೆಲ್ಮೆಟ್ ಲಾಂಚ್ ಮಾಡಿದೆ. ಇದು ಎಗಡೈ ಬಳಕೆದಾರರಿಗೆ ಬಹಳಷ್ಟು ಸುಲಭವಾಗಿದೆ. ಈ ಹೆಲ್ಮೆಟ್ ISI ಮತ್ತು ಸರ್ಟಿಫೈಡ್ ಹೊಂದಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಭಾಗಿಯಾಗಿ ಸಿನಿಮಾ ಬಗ್ಗೆ ಹಾಗೂ ವೇಗಾ ಹೆಲ್ಮೆಟ್ ತಮ್ಮ ಚಿತ್ರಕ್ಕೆ ಬೆಂಬಲವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ವೇಗಾ ಹೆಲ್ಮೆಟ್ ಕಂಪನಿ ಮನ್ಮತ್ ಶೆಟ್ಟಿ, ಒಂದು ದಿನಕ್ಕೆ 20 ಸಾವಿರ ಹೆಲ್ಮೆಟ್ ಕಂಪನಿ ಮಾರಾಟ ಮಾಡುತ್ತೇವೆ. ಎಡಗೈ ಬಳಸುವವರಿಗೆ ಸುಲಭವಾಗುವ ರೀತಿ ಹೊಸ ಹೆಲ್ಮೆಟ್ ತಯಾರಿಸಲಾಗಿದೆ. ನಾವು ದಿನನಿತ್ಯ ಹೊಸತನವನ್ನು ಕಲಿಯುತ್ತಿದ್ದೇನೆ. ಅದರಂತೆ ಇಂದು ವಿಶೇಷ ಹೆಲ್ಮೆಟ್ ಲಾಂಚ್ ಮಾಡಲಾಗಿದೆ. ಎಡಗೈ ಬಳಸುವ ಶೇಖಡ ಹತ್ತರಷ್ಟು ಮಂದಿಗೆ ಈ ಹೆಲ್ಮೆಟ್ ಉಪಯೋಗವಾಗಲಿದೆ ಎಂದರು.
ನಿರ್ಮಾಪಕ ಗುರುದತ್ ಗಣಿಗ ಮಾತನಾಡಿ, ಐಡಿಯಾ ಎಲ್ಲಾ ಶುರುವಾಗಿದ್ದು, ಸಮರ್ಥ್ ಅವರಿಂದ. ಇದೊಂದು ವಿಭಿನ್ನ ಕಥೆ. ಈ ರೀತಿ ಸಿನಿಮಾ ಬೇರೆ ಇಂಡಸ್ಟ್ರಿಯಲ್ಲಿ ಬಂದಾಗ ವಾವ್ ಎನ್ನುತ್ತಾರೆ. ಇಂತಹ ಕಥೆಗೆ ನಿರ್ಮಾಪಕರು ಸಿಗಲ್ಲ. ಸ್ನೇಹಿತರು , ಇಡೀ ತಂಡದ ಬೆಂಬಲದಿಂದ ಇಲ್ಲಿವರೆಗೂ ಬಂದಿದ್ದೇವೆ. ನಿರ್ದೇಶಕರು ತುಂಬಾ ಚೆನ್ನಾಗಿ ಕಥೆ ಮಾಡಿದ್ದಾರೆ ಎಂದರು. ನಿರ್ದೇಶಕ ಸಮರ್ಥ್ ಬಿ ಕಡಕೋಳ್, ಲಾಕ್ ಡೌನ್ ಟೈಮ್ ನಲ್ಲಿ ಬರೆದ ಕಥೆ ಇದು. ಈ ಕಥೆ ಇಟ್ಕೊಂಡು ಸುಮಾರು ನಿರ್ಮಾಪಕರ ಬಳಿ ಹೋದೆ. ಕೊನೆಗೆ ಗುರು ಭೇಟಿಯಾದೆ. ನನ್ನ ಸ್ನೇಹಿತರು, ಮಂಜು ಸರ್ ಬೆಂಬಲದಿಂದ ಸಿನಿಮಾ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ:ಸಮುದಾಯವೊಂದನ್ನು ನಿಂದಿಸಿದ್ದಕ್ಕೆ ಉಪೇಂದ್ರ ಮೇಲೆ ಎಫ್ಐಆರ್ ದಾಖಲು
ನಟ ದಿಗಂತ್ (Diganth) ಮಾತನಾಡಿ, ನಮ್ಮ ಸಿನಿಮಾಗೆ ಸಾಥ್ ಕೊಟ್ಟ ವೇಗಾದವರಿಗೆ ದೊಡ್ಡ ಧನ್ಯವಾದ. ದಿನಕ್ಕೆ 20 ಸಾವಿರ ಹೆಲ್ಮೆಟ್ ಮಾರಾಟವಾಗುತ್ತದೆ. ಅವರು ಹೆಲ್ಮೆಟ್ ಜೊತೆ ನಮ್ಮ ಸಿನಿಮಾ ಕಾರ್ಡ್ ಹಾಕಿ ಎಲ್ಲರಿಗೂ ಪ್ರಮೋಷನ್ ಮಾಡುತ್ತಿದ್ದಾರೆ. ಎಡಗೈ ಬಳಸುವವರಿಗೆ ವೇಗಾ ವಿಶೇಷ ಹೆಲ್ಮೆಟ್ ಲಾಂಚ್ ಮಾಡಿದೆ. ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಕಥೆ ಅದ್ಭುತವಾಗಿದೆ. ಒಂದೊಳ್ಳೆ ತಂಡದ ಜೊತೆ ಒಳ್ಳೆ ಪ್ರಯತ್ನ ಮಾಡಿದ್ದೇವೆ ಎಂಬ ಹಾರೈಕೆ ಇರಲಿ ಎಂದರು.
ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಟ್ ‘ವೇಗ’ (Vega) ಹೆಲ್ಮೆಟ್ ಕಂಪನಿಯವರಿಗೆ ಇಷ್ಟವಾಗಿದ್ದು, ಅವರು ಈ ವಿಶೇಷ ಹೆಲ್ಮೆಟ್ ಮೂಲಕ ಚಿತ್ರತಂಡದ ಜತೆ ಕೈಜೋಡಿಸಿದ್ದಾರೆ. ಅಂದಹಾಗೆ ಇಂಥದ್ದೊಂದು ಹೆಲ್ಮೆಟ್ ರೂಪಿಸಿ ಮಾರುಕಟ್ಟೆಗೆ ಬಿಡುಗಡೆ ಆಗುತ್ತಿರುವುದು ಇದೇ ಮೊದಲು. ಇದನ್ನೂ ಓದಿ:ಚಿತ್ರೀಕರಣಕ್ಕೆ ಬ್ರೇಕ್ – ಅಮೆರಿಕದಲ್ಲಿ ಪ್ರಭಾಸ್ಗೆ ಶಸ್ತ್ರಚಿಕಿತ್ಸೆ
ನಿರ್ದೇಶಕ ಸಮರ್ಥ್ ಬಿ ಕಡಕೋಳ್ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apagathakke Karana Film) ಸಿನಿಮಾಗೆ ನಿರ್ದೇಶನ ಮಾಡಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಈ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರ. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್ (Radhika Narayan), ನಿಧಿ ಸುಬ್ಬಯ್ಯ (Nidhi Subbaih) ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಹೈಫನ್ ಪಿಕ್ಚರ್ಸ್ ಬ್ಯಾನರ್ನಡಿ ಗುರುದತ್ ಗಾಣಿಗ- ನಿರ್ದೇಶಕ ಸಮರ್ಥ್ ಬಿ ಕಡಕೋಳ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಈ ಸಿನಿಮಾಗಿದೆ.