Tag: ಎತ್ತು

  • ಎತ್ತಿಗೆ ಸ್ನಾನ ಮಾಡಿಸಲು ಹೋದಾಗ ಮೊಸಳೆ ದಾಳಿ – ಮಾಲೀಕನ ಜೀವ ಉಳಿಸಿದ ಎತ್ತು

    ಎತ್ತಿಗೆ ಸ್ನಾನ ಮಾಡಿಸಲು ಹೋದಾಗ ಮೊಸಳೆ ದಾಳಿ – ಮಾಲೀಕನ ಜೀವ ಉಳಿಸಿದ ಎತ್ತು

    ಬಾಗಲಕೋಟೆ: ಎತ್ತಿನ ಮೈ ತೊಳೆಯಲು ಹೋಗಿದ್ದಾಗ ರೈತನ ಮೇಲೆ ಮೊಸಳೆ ದಾಳಿ ನಡೆಸಿದ್ದು, ಸಾಕಿದ ಎತ್ತು ರೈತನ ಜೀವ ಉಳಿಸಿರುವ ರೋಚಕ ಘಟನೆ ಜಿಲ್ಲೆಯ ಬೀಳಗಿ ( Bilagi) ತಾಲ್ಲೂಕಿನ ಹೊನ್ಯಾಳ ಗ್ರಾಮದ ಬಳಿ ಆಲಮಟ್ಟಿ (Almatti) ಜಲಾಶಯದ ಹಿನ್ನೀರಲ್ಲಿ ನಡೆದಿದೆ.

    ದಾಳಿಗೊಳಗಾದ ರೈತನನ್ನು ಹೊನ್ಯಾಳ (Honyal)  ಗ್ರಾಮದ ನಿವಾಸಿ ಧರಿಯಪ್ಪ ಮೇಟಿ(32) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ದೇವಾಲಯಗಳಲ್ಲಿ ವಿಶೇಷ ಆಯುಧಪೂಜೆ – ವಾಹನಗಳಿಗೆ ಪೂಜೆ ಮಾಡಿ ಸಂಭ್ರಮಿಸಿದ ಜನ

    ಹೊನ್ಯಾಳ ಗ್ರಾಮದ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ರೈತ ಎತ್ತಿನ ಮೈ ತೊಳೆಯಲು ಹೋಗಿದ್ದ. ಆ ವೇಳೆ ರೈತನ ಮೇಲೆ ಮೊಸಳೆ ದಾಳಿ ನಡೆಸಿದ್ದು, ಆತನ ಬಲಗೈಗೆ ಬಾಯಿಹಾಕಿದೆ. ಗಾಬರಿಯಲ್ಲಿ ಏನೂ ತೋಚದೇ ಪಕ್ಕದಲ್ಲಿದ್ದ ಎತ್ತಿನ ಹಗ್ಗವನ್ನು ತನ್ನ ಎಡಗೈಯಿಂದ ಹಿಡಿದುಕೊಂಡಿದ್ದಾನೆ. ಹಗ್ಗ ಹಿಡಿದಿದ್ದನ್ನು ಕಂಡ ಎತ್ತು ತನ್ನ ಮಾಲೀಕನನ್ನು ನೀರಿನಿಂದ ಹೊರಗೆ ಎಳೆದಿದೆ. ಆತನನ್ನು ಎತ್ತು ಹೊರಕ್ಕೆ ಎಳೆದಾಗ ಮೊಸಳೆ ಓಡಿಹೋಗಿದ್ದು, ರೈತನ ಬಲಗೈ ಕತ್ತರಿಸಿದೆ. ಆದರೆ ಸಾಕಿದ ಎತ್ತು ತನ್ನ ಮಾಲೀಕನನ್ನು ಪ್ರಾಣಾಪಾಯದಿಂದ ಪಾರು ಮಾಡಿದೆ.

    ಗಾಯಳು ಧರಿಯಪ್ಪನನ್ನು ಬಾಗಲಕೋಟೆ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಬೀಳಗಿ ಶಾಸಕ ಜೆಟಿ ಪಾಟೀಲ್ (JT Patil) ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳ ಜೊತೆ ದೂರವಾಣಿ ಕರೆಯ ಮೂಲಕ ಮಾತನಾಡಿ, ಸೂಕ್ತ ಪರಿಹಾರ ಕೊಡಬೇಕು ಹಾಗೂ ಎಲ್ಲ ದಾಖಲೆಗಳನ್ನು ಕಲೆ ಹಾಕಿ ಪರಿಹಾರಕ್ಕೆ ಪ್ರಕ್ರಿಯೆ ನಡೆಸಲು ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ಆಯುಧ ಪೂಜೆಯ ದಿನದಂದೇ ಸಿಹಿಸುದ್ದಿ ಕೊಟ್ಟ ಯುವ- ಚಿತ್ರದ ಪೋಸ್ಟರ್‌ ಔಟ್

  • ಬರೋಬ್ಬರಿ 18 ಲಕ್ಷಕ್ಕೆ ವಿಜಯಪುರದ ಎತ್ತು ಮಾರಾಟ

    ಬರೋಬ್ಬರಿ 18 ಲಕ್ಷಕ್ಕೆ ವಿಜಯಪುರದ ಎತ್ತು ಮಾರಾಟ

    ವಿಜಯಪುರ: ದಾಖಲೆ ಪ್ರಮಾಣದ ಮೊತ್ತಕ್ಕೆ ಎತ್ತು (Ox) ಮಾರಾಟವಾದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ. ಒಂದೇ ಎತ್ತು 18 ಲಕ್ಷ 1 ಸಾವಿರ ರೂ.ಗೆ ಮಾರಾಟವಾಗಿದೆ.

    ಜಾನುವಾರು ಮಾರಾಟದ ವಿಚಾರದಲ್ಲಿ ದಾಖಲೆ ಮೊತ್ತಕ್ಕೆ ಮಾರಾಟವಾದ ಎತ್ತು ಇದಾಗಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಗ್ರಾಮದ ರಾಮನಗೌಡ ಪಾಟೀಲ್ ಎಂಬವರ ಎತ್ತು ಈ ದಾಖಲೆ ಬರೆದಿದೆ. ಇದನ್ನೂ ಓದಿ: ಸಿದ್ದರಾಮಯ್ಯರನ್ನು ಸಿಎಂ ಮಾಡಿದ್ದು ಶಾಸಕರು: ನರೇಂದ್ರಸ್ವಾಮಿ

    ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಿಟ್ನಾಳ ಗ್ರಾಮದ ಸದಾಶಿವ ಎಂಬವರು ಎತ್ತನ್ನು ಖರೀದಿಸಿದ್ದಾರೆ. ಎಲ್ಲರೂ ಹುಬ್ಬೇರಿಸೋ ಮೊತ್ತಕ್ಕೆ ಎತ್ತು ಮಾರಾಟವಾಗಿದ್ದು, ತೆರ ಬಂಡಿ ಎಳೆಯುವುದರಲ್ಲಿ ಈ ಎತ್ತು ಪ್ರಸಿದ್ಧಿಯಾಗಿತ್ತು. ಇದನ್ನೂ ಓದಿ: ಹರಿಯಾಣದಲ್ಲಿ ಹಳಿತಪ್ಪಿದ ಗೂಡ್ಸ್‌ರೈಲು – ಕಂಟೈನರ್ ಮಗುಚಿ ರೈಲು ಸಂಚಾರಕ್ಕೆ ಅಡ್ಡಿ

    ಉತ್ತರ ಕರ್ನಾಟಕ ಭಾಗದಲ್ಲಿ ತೆರಬಂಡಿ ಸ್ಪರ್ಧೆಯಲ್ಲಿ ಅನೇಕ ಬಹುಮಾನಗಳನ್ನು ಈ ಎತ್ತು ತಂದುಕೊಟ್ಟಿದೆ. ಹಿಂದೂಸ್ಥಾನ ಹೆಚ್‌ಪಿ ಎಂಬ ಹೆಸರಿನಿಂದ ಮಾಲೀಕರು ಈ ಎತ್ತನ್ನು ಕರೆಯುತ್ತಿದ್ದರು. ಇಲ್ಲಿವರೆಗೆ ಈ ಎತ್ತು 40 ಗ್ರಾಂ ಚಿನ್ನ, ಎರಡು ಬೆಳ್ಳಿ ಗದೆ, 4 ಬೈಕ್ ಗೆದ್ದುಕೊಟ್ಟಿದೆ. ಇದನ್ನೂ ಓದಿ: ಓರ್ವ ಸಚಿವ, ಓರ್ವ ಶಾಸಕನಿಗೆ ಶೀಘ್ರವೇ ಶೋಕಾಸ್‌ ನೋಟಿಸ್‌

    ಐದೂವರೆ ಅಡಿ ಎತ್ತರವಿರೋ ಎತ್ತಿಗೆ ಮನೆಯವರು ನಿತ್ಯ ಪೌಷ್ಟಿಕಾಂಶ ಆಹಾರ ನೀಡುತ್ತಿದ್ದರು. ಹಾಲು, ದವಸ, ಧಾನ್ಯ ಆಹಾರವಾಗಿ ನೀಡುತ್ತಿದ್ದರು. ಈ ಎತ್ತು ದಾಖಲೆ ಮೊತ್ತಕ್ಕೆ ಮಾರಾಟವಾಗಿದ್ದು ವಿಜಯಪುರ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಬೀದರ್‌ | ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್‌ ಬಂದ್‌

  • 9.20 ಲಕ್ಷ ರೂ. ದಾಖಲೆ ಬೆಲೆಗೆ ʻಜಾಗ್ವಾರ್‌ʼ ಎತ್ತು ಮಾರಾಟ – ಮಂಡ್ಯದ ರೈತ ಫುಲ್‌ ಖುಷ್‌

    9.20 ಲಕ್ಷ ರೂ. ದಾಖಲೆ ಬೆಲೆಗೆ ʻಜಾಗ್ವಾರ್‌ʼ ಎತ್ತು ಮಾರಾಟ – ಮಂಡ್ಯದ ರೈತ ಫುಲ್‌ ಖುಷ್‌

    ಮಂಡ್ಯ: ಶ್ರೀರಂಗಪಟ್ಟಣ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ (Farmer) ನವೀನ್ ಸಾಕಿದ್ದ ಹಳ್ಳಿಕಾರ್ ತಳಿಯ ಒಂಟಿ ಎತ್ತು 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದ್ದು ರೈತ ನವೀನ್‌ ಹರ್ಷಗೊಂಡಿದ್ದಾರೆ.

    ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಒಂಟಿ ಎತ್ತನ್ನು (Ox) ತಮಿಳುನಾಡು (Tamilnadu) ಮೂಲದ ಸರವಣಪಟ್ಟಿ ಗ್ರಾಮದ ಸಿರವೈ ತಂಬಿ 9.20 ಲಕ್ಷ ರೂ.ಗಳಿಗೆ ಖರೀದಿಸಿದ್ದಾರೆ. ಇದನ್ನೂ ಓದಿ: ಇನ್‍ಸ್ಪೆಕ್ಟರ್, ಮೇಲಧಿಕಾರಿಗಳಷ್ಟೇ ಡ್ರಂಕ್ & ಡ್ರೈವ್ ತಪಾಸಣೆ ಮಾಡ್ಬೇಕು – ಸುಲಿಗೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕ್ರಮ

    ʻಜಾಗ್ವಾರ್‌ʼ ಹೆಸರಿನ ಈ ಎತ್ತು ಹೊರ ರಾಜ್ಯಗಳಲ್ಲೂ ಎತ್ತಿನಗಾಡಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಪ್ರಶಸ್ತಿಗಳನ್ನ ಬಾಚಿಕೊಂಡಿತ್ತು. ತಮಿಳುನಾಡಿನಲ್ಲೂ ಪ್ರಶಸ್ತಿ ಗೆದ್ದು ಅಭಿಮಾನಿಗಳ ಮೆಚ್ಚುಗೆ ಗಳಿಸಿತ್ತು. ರೇಸ್‌ನಲ್ಲಿ ಕಣಕ್ಕಿಳಿದರೆ ಅಬ್ಬರಿಸುತ್ತಿದ್ದ ಜಾಗ್ವಾರ್‌ ವೇಗಕ್ಕೆ ಮನಸೋತ ತಮಿಳುನಾಡಿನ ವ್ಯಕ್ತಿ 9.20 ಲಕ್ಷ ರೂ. ನೀಡಿ ಖರೀದಿಸಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ – ಒಂದು ವಾರದಲ್ಲಿ 70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

    ಈ ಹಿಂದೆ ಶ್ರೀರಂಗಪಟ್ಟಣದ ನವೀನ್‌ ಮಂಡ್ಯದ ಇಂಡವಾಳು ಗ್ರಾಮದ ಅಜಿತ್ ಅವರಿಂದ 1.20 ಲಕ್ಷ ರೂ.ಗೆ ಈ ಎತ್ತನ್ನು ಖರೀದಿಸಿದ್ದರು. ಸದ್ಯ 9.20 ಲಕ್ಷಕ್ಕೆ ಮಾರಾಟವಾಗಿದ್ದು, ಬರೋಬ್ಬರಿ 8 ಲಕ್ಷ ರೂ. ಲಾಭ ಗಳಿಸಿದ್ದಾರೆ. ಎತ್ತು ದಾಖಲೆ ಬೆಲೆಗೆ ಮಾರಾಟವಾದ ಬಳಿಕ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಬೀಳ್ಕೊಡಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ನರೇಗಾ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಾಂತ್ರಿಕ ಸಹಾಯಕ ವಜಾ

    ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ನರೇಗಾ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಾಂತ್ರಿಕ ಸಹಾಯಕ ವಜಾ

    ಬೀದರ್: ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಲಂಚಕ್ಕೆ (Bribery) ಬೇಡಿಕೆಯಿಟ್ಟ ತಾಂತ್ರಿಕ ಸಹಾಯಕನನ್ನು (Technical Assistant) ಕೆಲಸದಿಂದ ವಜಾ ಮಾಡಲಾಗಿದೆ.

    ಬಸವಕಲ್ಯಾಣ ತಾ.ಪಂ. ತಾಂತ್ರಿಕ ಸಹಾಯಕ ಸೂರ್ಯಕಾಂತ್ ಪಾಟೀಲ್‌ನನ್ನು ಕೆಲಸದಿಂದ ವಜಾಗೊಳಿಸಿ ಬೀದರ್ (Bidar) ಜಿಲ್ಲಾ ಪಂಚಾಯತ್ ಸಿಇಒ ಶಿಲ್ಪಾ ಎಂ ಆದೇಶ ನೀಡಿದ್ದಾರೆ.

    ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಎತ್ತುಗಳ ಸಮೇತ ತಾ.ಪಂ.ಗೆ ಬಂದು ರೈತರೊಬ್ಬರು ಆರೋಪ ಮಾಡಿದ್ದರು. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಬಿತ್ತರವಾಗಿರುವ ಹಿನ್ನೆಲೆ ಅಧಿಕಾರಿಗಳಿಂದ ವರದಿ ಪರಿಶೀಲನೆ ಮಾಡಲಾಗಿತ್ತು. ರೈತನ ಬಿಲ್ ಪಾವತಿ ಮಾಡದೆ ಮೇಲ್ನೋಟಕ್ಕೆ ಕರ್ತವ್ಯ ನಿರ್ಲಕ್ಷ್ಯ ತೊರಿದ್ದು ಕಂಡುಬಂದಿದೆ. ಹೀಗಾಗೀ ತಾಂತ್ರಿಕ ಸಹಾಯಕ ಸೂರ್ಯಕಾಂತ್ ಪಾಟೀಲ್‌ನನ್ನು ಸೇವೆಯಿಂದ ವಜಾ ಮಾಡಲಾಗದೆ ಎಂದು ಜಿ.ಪಂ. ಸಿಇಒ ಆದೇಶಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ – ಜಿಲ್ಲಾ ಪ್ರವಾಸ ಮೊಟಕುಗೊಳಿಸಿ ಸಿಎಂ ಬೆಂಗಳೂರಿಗೆ ವಾಪಸ್

     

    ನರೇಗಾ ಕಾಮಗಾರಿ ಬಿಲ್ ಪಾವತಿ ಮಾಡಲು ರೈತನ ಬಳಿ ಲಂಚ ಕೇಳಿದ್ದ ತಾಲೂಕು ಪಂಚಾಯತ್ ಅಧಿಕಾರಿಗೆ ಲಂಚ ಕೊಡಲು ಹಣವಿಲ್ಲದೆ ತನ್ನ 2 ಎತ್ತುಗಳನ್ನು ನೀಡಲು ರೈತ ಮುಂದಾಗಿದ್ದ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದ ರೈತ ಪ್ರಶಾಂತ್ ಬಿರಾದಾರ ಲಂಚ ರೂಪದಲ್ಲಿ ತನ್ನ 2 ಎತ್ತುಗಳನ್ನು ಕೊಡಲು ತಾ.ಪಂ. ಕಚೇರಿಗೆ ಬಂದಿದ್ದ. ಎತ್ತುಗಳ ಸಮೇತ ಬಂದಿದ್ದ ರೈತನನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದರು. ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

  • ನರೇಗಾ ಬಿಲ್ ಪಾವತಿಗೆ ಗ್ರಾ.ಪಂ ಅಧಿಕಾರಿಯಿಂದ ಲಂಚಕ್ಕೆ ಬೇಡಿಕೆ- ಹಣವಿಲ್ಲದೆ ಎತ್ತುಗಳನ್ನು ನೀಡಲು ಮುಂದಾದ ರೈತ

    ನರೇಗಾ ಬಿಲ್ ಪಾವತಿಗೆ ಗ್ರಾ.ಪಂ ಅಧಿಕಾರಿಯಿಂದ ಲಂಚಕ್ಕೆ ಬೇಡಿಕೆ- ಹಣವಿಲ್ಲದೆ ಎತ್ತುಗಳನ್ನು ನೀಡಲು ಮುಂದಾದ ರೈತ

    ಬೀದರ್: ನರೇಗಾ (NREGA) ಬಿಲ್ ಪಾವತಿಸಲು ಲಂಚಕ್ಕೆ (Bribe) ಬೇಡಿಕೆಯನ್ನಿಟ್ಟ ಗ್ರಾಮ ಪಂಚಾಯತಿ ಅಧಿಕಾರಿಗೆ ನೀಡಲು ಹಣವಿಲ್ಲದೆ ತನ್ನ ಎರಡು ಎತ್ತುಗಳನ್ನು (Ox) ಲಂಚದ ರೂಪದಲ್ಲಿ ನೀಡಲು ರೈತ ಮುಂದಾದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಬಳಿ ನಡೆದಿದೆ.

    ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದೂರಿ ಗ್ರಾಮದ ರೈತ ಪ್ರಶಾಂತ ಬಿರಾದಾರ ತನ್ನ ಎರಡು ಎತ್ತುಗಳನ್ನು ಲಂಚದ ರೂಪದಲ್ಲಿ ನೀಡಲು ಮುಂದಾಗಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಉದ್ಯೋಗ ಖಾತರಿ ಯೋಜನೆಯಲ್ಲಿ ರೈತನ ಜಮೀನಿಗೆ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು, ಈ ಕಾಮಗಾರಿಗೆ ಒಂದು 1 ಲಕ್ಷ ರೂ. ಅನುದಾನ ಮಂಜೂರಾಗಿತ್ತು. 1 ಲಕ್ಷ ರೂ. ಅನುದಾನದ ಪೈಕಿ 55 ಸಾವಿರ ಹಣ ಮಾತ್ರ ಅಧಿಕಾರಿಗಳು ನೀಡಿದ್ದು, ಉಳಿದ 45 ಸಾವಿರ ಹಣ ನೀಡಲು ಗ್ರಾ.ಪಂ ಅಧಿಕಾರಿ (Grampanchayat Officer) ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಬೇಸತ್ತ ರೈತ ತನ್ನ ಎರಡು ಎತ್ತುಗಳನ್ನು ಲಂಚದ ರೂಪದಲ್ಲಿ ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಡಿಸ್ನಿಯಲ್ಲೂ ಶುರುವಾಯ್ತು ಜಾಬ್ ಕಟ್ – ಮುಂದಿನ 4 ದಿನದಲ್ಲಿ 7,000 ಉದ್ಯೋಗಿಗಳು ವಜಾ 

    ರೈತ ತನ್ನ ಎರಡು ಎತ್ತುಗಳ ಸಮೇತ ತಾಲೂಕು ಪಂಚಾಯತ್‌ಗೆ ಆಗಮಿಸಿದ್ದು, ಲಂಚದ ರೂಪದಲ್ಲಿ ಈ ಎರಡು ಎತ್ತುಗಳನ್ನು ತೆಗೆದುಕೊಂಡು ಉಳಿದ 45 ಸಾವಿರ ಹಣ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಈ ಘಟನೆಯಿಂದಾಗಿ ಕೆಲ ಕಾಲ ತಾ.ಪಂ ಅಧಿಕಾರಿಗಳಿಗೆ ಮುಜುಗರ ಉಂಟಾಗಿದ್ದು, ಸುದ್ದಿ ತಿಳಿದು ತಾ.ಪಂ ಎಡಿ ಸಂತೋಷ್ ಚವ್ಹಾಣ್ ಸ್ಥಳಕ್ಕೆ ಬಂದು ರೈತನಿಗೆ ಬಿಲ್ ಪಾವತಿಸುವುದಾಗಿ ಭರವಸೆ ನೀಡಿ ರೈತನನ್ನು ಮನೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಪ್ರತಿಷ್ಠಿತ ಉದ್ಯಮಿ ಗಡಿಪಾರು!

  • ಕಾರಹುಣ್ಣಿಮೆ ಕರಿ ಹರಿಯುವ ವೇಳೆ ಭೀಮಾ ನದಿಗೆ ಹಾರಿ ಪ್ರಾಣಬಿಟ್ಟ ಎತ್ತು

    ಕಾರಹುಣ್ಣಿಮೆ ಕರಿ ಹರಿಯುವ ವೇಳೆ ಭೀಮಾ ನದಿಗೆ ಹಾರಿ ಪ್ರಾಣಬಿಟ್ಟ ಎತ್ತು

    ವಿಜಯಪುರ: ಕಾರಹುಣ್ಣಿಮೆ ಪ್ರಯುಕ್ತ ಕರಿ ಹರಿಯುವ ವೇಳೆ ಭೀಮಾ ನದಿಗೆ ಹಾರಿ ಎತ್ತು ಪ್ರಾಣಬಿಟ್ಟ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಕುಮಸಗಿ ಗ್ರಾಮದಲ್ಲಿ ನಡೆದಿದೆ.

    ಸಿಂದಗಿ ತಾಲೂಕಿನ ಕುಮಸಗಿ ಗ್ರಾಮದಲ್ಲಿ ಕಾರಹುಣ್ಣಿಮೆ ಪ್ರಯುಕ್ತ ನಡೆದಿದ್ದ ಕರಿ ಹರಿಯುವ ವೇಳೆ ಎತ್ತುಗಳ ಮೆರವಣಿಗೆ ವೇಳೆ ಈ ಅವಘಡ ನಡೆದಿದೆ. ಗ್ರಾಮದ ರೈತ ಸತೀಶ ಪಾಟೀಲ್ ಎಂಬುವವರಿಗೆ ಸೇರಿದ ಎತ್ತು ಇದಾಗಿದೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರಗಳಲ್ಲಿ ಮೈಕ್‌ ಸಕ್ರಮಕ್ಕೆ ನೀಡಿದ್ದ ಗಡುವು ಅಂತ್ಯ – ಇಂದಿನಿಂದ ಪೊಲೀಸ್‌ ಕಾರ್ಯಾಚರಣೆ

    ಕರಿ ಹರಿಯುವ ವೇಳೆ ಹಲಗೆ ಬಾರಿಸುವ ಶಬ್ದಕ್ಕೆ ಬೆದರಿದ ಎತ್ತು ಗ್ರಾಮದ ಹೊರಗೆ ಓಡಿದೆ. ಹೊರವಲಯದಲ್ಲಿರುವ ಭೀಮಾ ನದಿಗೆ ಬಿದ್ದ ಎತ್ತು ಮೀನುಗಾರರ ಬಲೆಗೆ ಸಿಲುಕಿ ಮೃತಪಟ್ಟಿದೆ. ಇದನ್ನೂ ಓದಿ: 2 ಶಿಕ್ಷಕ, 2 ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು- 3 ಪಕ್ಷಗಳ ಭವಿಷ್ಯ ನಿರ್ಧಾರ

  • 8 ಲಕ್ಷ ಕೊಟ್ಟು ಎತ್ತು ತಂದ ಕಾಫಿನಾಡ ರೈತ- ಏನಿದರ ವಿಶೇಷತೆ..?

    8 ಲಕ್ಷ ಕೊಟ್ಟು ಎತ್ತು ತಂದ ಕಾಫಿನಾಡ ರೈತ- ಏನಿದರ ವಿಶೇಷತೆ..?

    ಚಿಕ್ಕಮಗಳೂರು: ಎತ್ತಿನಗಾಡಿ ಸ್ಪರ್ಧೆಯಲ್ಲಿ ಭಾಗವಹಿಸಲೆಂದೇ ತಾಲೂಕಿನ ತೇಗೂರು ಗ್ರಾಮದ ರೈತ ಮಂಜುನಾಥ್ ಒಂದೇ ಒಂದು ಎತ್ತಿಗೆ 8 ಲಕ್ಷ ಹಣ ನೀಡಿ ತಂದು ಇದು ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆ ಎಂದಿದ್ದಾರೆ.

    ನಾನು ಎಲ್ಲಿಗೆ ಹೋಗಿ ಜೋಡಿ ಎತ್ತಿನಗಾಡಿ ಸ್ಪರ್ಧೆಯಲ್ಲಿ ಗೆದ್ದರೂ ಚಿಕ್ಕಮಗಳೂರು ಹೆಸರು ಬರುತ್ತೆ ಅದೇ ನಮ್ಮ ಹೆಮ್ಮೆ ಎಂದಿದ್ದಾರೆ. ಕಳೆದೊಂದು ವರ್ಷದ ಹಿಂದೆ ಈ ಎತ್ತು ಇದೇ ಮಂಜುನಾಥ್‍ಗೆ ಮಾರಾಟವಾಗಿತ್ತು. ಆದರೆ ಕೊಟ್ಟ ಅಡ್ವಾನ್ಸ್ ಕೂಡ ವಾಪಸ್ ಬರಲಿಲ್ಲ. ಮೋಸ ಮಾಡಿದರು. ಬಳಿಕ ಅದೇ ಎತ್ತನ್ನ ತರಬೇಕು ಎಂದು ಅಂದಿನಿಂದ ಹಠಕ್ಕೆ ಬಿದ್ದ ಮಂಜುನಾಥ್, 10 ಲಕ್ಷವಾದರೂ ಪರವಾಗಿಲ್ಲ ಅದೇ ಎತ್ತು ಬೇಕೆಂದು ಎಂಟು ಲಕ್ಷ ಕೊಟ್ಟು ತಂದಿದ್ದಾರೆ. ಮೈಸೂರು ಜಿಲ್ಲೆಯಲ್ಲಿದ್ದ ಈ ಎತ್ತನ್ನ ತರಲು ಹೋಗುವಾಗ 10 ಲಕ್ಷದೊಂದಿಗೆ ಹೋಗಿದ್ದರು. 10 ಲಕ್ಷವಾದರೂ ಎತ್ತನ್ನ ತಂದೇ ತರಬೇಕು ಅಂತ. ಆದರೆ ಮಾತಿಗೆ ಕೂತಾಗ 7 ಲಕ್ಷದ 78 ಸಾವಿರಕ್ಕೆ ಮಾತುಕಥೆ ಮಾಡಿ ತಂದಿದ್ದಾರೆ. ಎತ್ತನ್ನ ಚಿಕ್ಕಮಗಳೂರಿಗೆ ತರುವಷ್ಟರಲ್ಲಿ 8 ಲಕ್ಷ ಖರ್ಚಾಗಿದೆ.

    ಈ ಎತ್ತಿನ ವೇಗಕ್ಕೆ ಬೆಲೆಕಟ್ಟಲಾಗಲ್ಲ:
    ಈ ಎತ್ತು ಹಳ್ಳಿಕಾರ್ ತಳಿಯದ್ದು. ಭಾರತೀಯ ರಾಸುಗಳ ತಳಿಗಳಲ್ಲೇ ಈ ತಳಿ ಶ್ರೇಷ್ಠವಾದ ತಳಿ, ಕೆಲಸಕ್ಕೂ ಸೈ. ಓಟಕ್ಕೂ ಸೈ. ದಣಿವರಿಯದೆ ದುಡಿಯುವ ಈ ಜಾತಿಯ ರಾಸುಗಳಿಗೆ ಭಾರೀ ಡಿಮ್ಯಾಂಡ್. ಆದರೆ ಈ ತಳಿಯ ರಾಸು ಈ ರೀತಿ 8 ಲಕ್ಷಕ್ಕೆ ಮಾರಾಟವಾಗಿರುವುದು ಇದೇ ಮೊದಲು. ಮಂಜುನಾಥ್, ಈ ರಾಸುವನ್ನ ಎಂಟು ಲಕ್ಷ ನೀಡಿ ತಂದಿರೋದು ದುಡ್ಸೋದಕ್ಕಲ್ಲ. ಬದಲಾಗಿ ರೇಸ್‍ಗಳಲ್ಲಿ ಓಡಿಸೋದಕ್ಕೆ. ಮಂಜುನಾಥ್‍ಗೆ ಜೋಡಿ ಎತ್ತಿನಗಾಡಿ ಸ್ಪರ್ಧೆ ಅಂದ್ರೆ ತುಂಬಾ ಇಷ್ಟ. ರಾಜ್ಯದಲ್ಲಿ ಎಲ್ಲೇ ಸ್ಪರ್ಧೆ ನಡೆದರೂ ಬಿಡುವುದಿಲ್ಲ. ಹೋಗಿ ಬರುತ್ತಾರೆ. ಹಾಗಾಗಿ ಎತ್ತಿನಗಾಡಿ ಸ್ಪರ್ಧೆಗೆಂದೇ ಮಂಜುನಾಥ್ ಈಗ 8 ಲಕ್ಷ ನೀಡಿ ಈ ರಾಸುವನ್ನ ತಂದು ಗಗನ್ ಎಂದು ಹೆಸರಿಟ್ಟಿದ್ದಾರೆ. ಊರಿನ ಜನ ತಮ್ಮ ಊರಿಗೆ ಬಂದ ನೂತನ ಅತಿಥಿಯ ಪಾದಪೂಜೆ ಮಾಡುವ ಮೂಲಕ ಊರಿಗೆ ಸ್ವಾಗತ ಕೋರಿದ್ದಾರೆ.

    ಗಗನ್ ಬುದ್ಧಿವಂತ ಎತ್ತು:
    ಈ ಗಗನ್ ಓಡೋದಕ್ಕೆ ನಿಂತರೆ ಕುದುರೆ-ಚಿರತೆ ಇದ್ದಂತೆ. ಈಗಾಗಲೇ ರಾಜ್ಯಾದ್ಯಂತ ಹತ್ತಾರು ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಕೂಡ ಗೆದ್ದಿದೆ. ಅದಕ್ಕಾಗೇ ಮಂಜುನಾಥ್ ಈ ಎತ್ತಿಗೆ ಎಂಟು ಲಕ್ಷ ನೀಡಿ ತಂದಿದ್ದಾರೆ. ಈ ಎತ್ತು ಸ್ಪರ್ಧೆಗಳಲ್ಲಿ ನಂಬರ್ ಒನ್ ಹೋರಿ. ಎಡಕ್ಕೆ ಕಟ್ಟಿದರೂ ಸೈ. ಬಲಕ್ಕೆ ಕಟ್ಟಿದರೂ ಸೈ. ಓಡುವಾಗ ಬೇರೆ ಎತ್ತುಗಳ ಗಾಡಿ ಅಡ್ಡ ಬಂದರೂ ಕ್ಷಣಾರ್ಧದಲ್ಲಿ ಪಥ ಬದಲಿಸಿ ಗುರಿ ಮುಟ್ಟುತ್ತೆ. ಇದರ ಮುಂದೆ ಬೇರೆ ಯಾವ ಎತ್ತುಗಳು ಓಡಲಾರವು. ಓಡುವಾಗಲೂ ಅಡ್ಡದಿಡ್ಡಿ ಓಡಲ್ಲ. ಒಂದೇ ಲೈನಲ್ಲಿ ಚಿರತೆಯಂತೆ ಓಡುತ್ತೆ. ದೇಶದಲ್ಲೇ ಹಳ್ಳಿಕಾರ್ ತಳಿಯ ಎತ್ತು ಎಂಟು ಲಕ್ಷಕ್ಕೆ ಮಾರಾಟವಾಗಿದ್ದು ಇದೇ ಮೊದಲು. ಲಕ್ಷಾಂತರ ರೂಪಾಯಿ ಹಣ ನೀಡಿ ಕಾರು ತಂದು ಶೆಡ್‍ನಲ್ಲಿ ನಿಲ್ಲಿಸುತ್ತೇವೆ. ಈ ಎತ್ತನ್ನ ನೋಡಲು ಡೈಲಿ 50 ಜನ ಮನೆಬಾಗಿಲಿಗೆ ಬರುತ್ತಾರೆ. ಇದು ಚಿಕ್ಕಮಗಳೂರಿನ ಹೆಮ್ಮೆ ಅಂತಾರೆ ಊರಿನ ಯುವಕರು.

  • ಎತ್ತುಗಳ ಜೊತೆಗೆ ಬಂದ ಅಭಿಮಾನಿಗಳನ್ನು ಭೇಟಿ ಮಾಡಿದ ಶಿವಣ್ಣ, ರಾಘಣ್ಣ

    ಎತ್ತುಗಳ ಜೊತೆಗೆ ಬಂದ ಅಭಿಮಾನಿಗಳನ್ನು ಭೇಟಿ ಮಾಡಿದ ಶಿವಣ್ಣ, ರಾಘಣ್ಣ

    – ಶಿವಣ್ಣನ ಕಾಲು ಮುಟ್ಟಿ ನಮಸ್ಕರಿಸಿದ ಅಭಿಮಾನಿಗಳು
    – ಎತ್ತುಗಳಿಗೆ ಬಾಳೆಹಣ್ಣು ತಿನ್ನಿಸಿದ ರಾಘಣ್ಣ

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹೊಂದಿ ಇಂದಿಗೆ 6 ದಿನಗಳೇ ಕಳೆದು ಹೋಗಿವೆ. ಈಗಲೂ ಸ್ಟಾರ್ ನಟರು ಅಪ್ಪು ಕುಟುಂಬಸ್ಥರು ಭೇಟಿ ಮಾಡಿ ಸಾಂತ್ವನ ಹೇಳುತ್ತಿದ್ದರೆ, ಇತ್ತ ಅಭಿಮಾನಿಗಳು ಪುನೀತ್ ಸಮಾಧಿ ಬಳಿ ಜಮಾಯಿಸಿ ದರ್ಶನ ಪಡೆಯುತ್ತಿದ್ದಾರೆ. ಅಂತೆಯೇ ಇದೀಗ ಎತ್ತನ ಗಾಡಿಯಲ್ಲಿ ಬಂದ ಅಭಿಮಾನಿಗಳನ್ನು ಶಿವಣ್ಣ ಹಾಗೂ ರಾಘಣ್ಣ ಭೇಟಿ ಮಾಡಿದ್ದಾರೆ.

    ಪಾವಗಡದಿಂದ ಎತ್ತುಗಳ ಜೊತೆಗೆ ಬಂದ ಅಭಿಮಾನಿಗಳು ಅಪ್ಪು ಸಮಾಧಿ ಬಳಿ ಕುಳಿತಿದ್ದರು. ಇವತ್ತ ನಮ್ಮ ಜೊತೆ ಅಪ್ಪು ಇಲ್ಲ, ಆದರೆ ನಾವು ಅಪ್ಪುವನ್ನು ಶಿವಣ್ಣನಲ್ಲಿ ಕಾಣುತ್ತೇವೆ ಹೀಗಾಗಿ ಶಿವಣ್ಣನನ್ನು ಬೇಟಿಯಾಗದೆ ಇಲ್ಲಿಂದ ತೆರಳಲ್ಲ ಎಂದು ಹಠಕ್ಕೆ ಬಿದ್ದರು. ಈ ವಿಚಾರವನ್ನು ಮಾಧ್ಯಮಮಿತ್ರರು ಶಿವಣ್ಣ ಬಳೆ ಹೇಳಿದ್ದಾರೆ. ಆಗ ಶಿವಣ್ಣ ಭೇಟಿಯಾಗುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ನನಗೆ ಅರ್ಥ ಮಾಡಿಕೊಳ್ಳಲು, ಈ ಸತ್ಯವನ್ನ ಅರಗಿಸಿಕೊಳ್ಳಲು ಆಗ್ತಿಲ್ಲ: ರಾಮ್ ಚರಣ್ ತೇಜಾ

    ಇತ್ತ ಅಭಿಮಾನಿಗಳನ್ನು ಶಿವಣ್ಣ ಹಾಗೂ ರಾಘಣ್ಣ ಭೇಟಿ ಮಾಡಿದ್ದಾರೆ. ಈ ವೇಳೆ ಅಭಿಮಾನಿಗಳು ಶಿವಣ್ಣ ಕಾಲಿಗೆ ನಮಸ್ಕರಿಸಿದ್ದಾರೆ. ಇತ್ತ ಶಿವಣ್ಣ ಎತ್ತುಗಳನ್ನು ಮುಟ್ಟಿ ನಮಸ್ಕಾರ ಮಾಡಿದರೆ, ರಾಘಣ್ಣ ªಕೂಡ ಮನೆಯಿಂದ ಹೊರಬಂದು ಅಭಿಮಾನಿಗಳನ್ನು ಮಾತನಾಡಿಸಿದ್ದಾರೆ. ಅಲ್ಲದೆ ಎತ್ತುಗಳಿಗೆ ಬಾಳೆಹನ್ನು ತಿನ್ನಿಸಿದ್ದಾರೆ.

    ಒಟ್ಟಿನಲ್ಲಿ ದೂರದಿಂದ ಬಂದಿದ್ದ ಅಭಿಮಾನಿಗಳನ್ನು ಇಬ್ಬರೂ ಪ್ರೀತಿಯಿಂದಲೇ ಮಾತಾನಾಡಿಸಿ ಕಳುಹಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ, ಅಭಿಮಾನಿಗಳ ಪ್ರೀತಿಗೆ ಏನ್ ಕೊಟ್ರು ಕಮ್ಮಿ. ಅಭಿಮಾನಿಗಳ ಋಣವನ್ನು ತೀರಿಸಲು ಆಗಲ್ಲ. ಎಲ್ಲರಿಗೂ ನೋವಿದ್ದರು ಸಹ ಮನೆ ಬಳಿ ಬರುತ್ತಿದ್ದಾರೆ. ಅದು ನಮಗೆ ಬಂದಿರುವ ವರ ಎಂದಿದ್ದಾರೆ. ಇದನ್ನೂ ಓದಿ: ಅವನು ಇನ್ನೂ ನನ್ನ ಮಡಿಲಲ್ಲಿ, ಆಲೋಚನೆಗಳಲ್ಲಿ ಶಾಶ್ವತವಾಗಿದ್ದಾನೆ: ರಾಘವೇಂದ್ರ ರಾಜ್‍ಕುಮಾರ್

    ಅಪ್ಪು ಅಷ್ಟು ಪ್ರೀತಿ ಗಳಿಸಿದ್ದಾನೆ. ದೇವರು ಅಪ್ಪುವನ್ನು ನಮ್ಮಿಂದ ಕಿತ್ತುಕೊಂಡಿದ್ದಾನೆ. ಅಭಿಮಾನಿಗಳ ಜೊತೆ ನಾವು ಯಾವಾಗ್ಲೂ ಇರುತ್ತೇವೆ. ಇಷ್ಟು ಬೇಗ ಅವನನ್ನು ಕಳೆದುಕೊಳ್ಳಬಾರದಿತ್ತು ಎಂದು ಶಿವರಾಜ್ ಕುಮಾರ್ ಗದ್ಗದಿತರಾದರು.

  • ಸಿಡಿಲು ಬಡಿದು ಜೋಡಿ ಎತ್ತುಗಳು ಸಾವು

    ಸಿಡಿಲು ಬಡಿದು ಜೋಡಿ ಎತ್ತುಗಳು ಸಾವು

    ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಐದಬಾವಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡಿ ಎತ್ತುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

    ನಿನ್ನೆ ರಾತ್ರಿ ಸಿಡಿಲು ಬಡಿದ ಹಿನ್ನೆಲೆ ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳು ಸಾವಿಗೀಡಾಗಿವೆ. ಗ್ರಾಮದ ರೈತ ನಿಂಗಪ್ಪ ಎಂಬವವರಿಗೆ ಸೇರಿದ ಎತ್ತುಗಳು ಸಿಡಿಲಿಗೆ ಬಲಿಯಾಗಿವೆ.

    ಜಮೀನಿನಲ್ಲೇ ಗುಡಿಸಲು ಹಾಕಿಕೊಂಡಿದ್ದ ರೈತ ಕುಟುಂಬ, ಎತ್ತುಗಳಿಗೆ ಹೊಲದಲ್ಲಿ ಕೊಟ್ಟಿಗೆ ನಿರ್ಮಿಸಿದ್ದರು. ರಾತ್ರಿ ವೇಳೆ ಸಿಡಿಲು ಬಡಿದು ಎತ್ತುಗಳು ಸಾವನ್ನಪ್ಪಿದ್ದು, ರೈತ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರ Connecting People ಆಗಿದೆ: ಹೆಚ್. ವಿಶ್ವನಾಥ್

    ತಲಾ ಒಂದು ಲಕ್ಷ ಬೆಲೆ ಬಾಳುವ ಎರಡು ಎತ್ತುಗಳನ್ನ ಕಳೆದುಕೊಂಡು ರೈತ ನಿಂಗಪ್ಪ ಕಂಗಾಲಾಗಿದ್ದಾರೆ. ಕುಟುಂಬಕ್ಕೆ ಆಸರೆಯಾಗಿದ್ದ ಎತ್ತುಗಳು ಸಾವನ್ನಪ್ಪಿದ್ದರಿಂದ ಇಡೀ ಕುಟುಂಬ ಕಣ್ಣೀರಿಟ್ಟಿದೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಹುಟ್ಟುಹಬ್ಬ ಆಚರಿಸಿಕೊಂಡ ಎತ್ತು, ಸೋಲಿಲ್ಲದ ಸರದಾರ

    ಹುಟ್ಟುಹಬ್ಬ ಆಚರಿಸಿಕೊಂಡ ಎತ್ತು, ಸೋಲಿಲ್ಲದ ಸರದಾರ

    ಧಾರವಾಡ: ಖಾಲಿ ಬಂಡಿ ಓಡಿಸುವ ಸ್ಪರ್ಧೆಯಲ್ಲಿ ಸೋಲನ್ನೇ ಕಾಣದ ಎತ್ತು ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದೆ.

    ಧಾರವಾಡ ತಾಲೂಕಿನ ಬೆಳ್ಳಿಗಟ್ಟಿ ಗ್ರಾಮದ ಕಲ್ಲಪ್ಪ ತೇಗೂರು ಎಂಬುವವರಿಗೆ ಸೇರಿದ ಈ ಎತ್ತು, ಖಾಲಿ ಬಂಡಿ ಓಡಿಸುವ ಸ್ಪರ್ಧೆಯಲ್ಲಿ ಸೋಲನ್ನೇ ಕಂಡಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಖಾಲಿ ಬಂಡಿ ಓಡಿಸುವ ಸ್ಪರ್ಧೆಯಲ್ಲಿ ಪ್ರಥಮ, ಹಾನಗಲ್ ತಾಲೂಕಿನಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ, ಕಲಘಟಗಿ ತಾಲೂಕಿನ ದಾಸ್ತಿಕೊಪ್ಪದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ, ಹುಲಿಕಟ್ಟಿ ಗ್ರಾಮದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಈ ಎತ್ತು ಗಿಟ್ಟಿಸಿಕೊಂಡು ತನ್ನ ಮಾಲೀಕನಿಗೆ ನಗದು ಹಾಗೂ ಚಿನ್ನದ ಬಹುಮಾನ ತಂದುಕೊಟ್ಟಿದೆ. ಇದನ್ನೂ ಓದಿ:  ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬೈಕ್- ಓರ್ವ ಸಾವು, ಮತ್ತೋರ್ವ ಬಚಾವ್

    ಈ ಎತ್ತಿಗೆ ಸೋಲಿಲ್ಲದ ಸರದಾರ ಎಂದು ಹೆಸರಿಡಲಾಗಿದ್ದು, ಬೆಳ್ಳಿಗಟ್ಟಿ ಗ್ರಾಮದ ಜನರೆಲ್ಲ ಸೇರಿಕೊಂಡು ಆ ಎತ್ತನ್ನು ಸಿಂಗರಿಸಿ, ಕೇಕ್ ಕಟ್ ಮಾಡುವ ಮೂಲಕ ಜನ್ಮ ದಿನವನ್ನು ಆಚರಿಸಿದ್ದಾರೆ. ಈ ವೇಳೆ ಇಡಿ ಗ್ರಾಮವನ್ನೇ ಕರೆದು ಕೆಕ್ ಹಂಚಿದ ಮಾಲಿಕ ಕಲ್ಲಪ್ಪ, ಈ ಎತ್ತಿನ ಜನ್ಮದಿನ ಪ್ರತಿ ವರ್ಷ ಆಚರಣೆ ಮಾಡುತ್ತ ಬಂದಿದ್ದೆನೆ ಎಂದು ಹೇಳಿದರು.