Tag: ಎತ್ತು

  • ಭಾರೀ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ- 4 ಎತ್ತು, 1 ಆಕಳು ಸಾವು

    ಭಾರೀ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ- 4 ಎತ್ತು, 1 ಆಕಳು ಸಾವು

    ಹುಬ್ಬಳ್ಳಿ: ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಜಾನುವಾರಗಳು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಗಣೇಶ ಪೇಟೆಯ ಬಡಾವಣೆಯಲ್ಲಿ ನಡೆದಿದೆ.

    ನಗರದ ಗಣೇಶ ಪೇಟೆ ಶೆಟ್ಟರ್ ಓಣಿಯಲ್ಲಿ ಮಲ್ಲಿಕಾರ್ಜುನ್ ಕೊರವಿ ಅವರ ಶಿಥಿಲಾವಸ್ಥೆಯಲ್ಲಿದ್ದ, ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದಿದೆ. ಈ ಪರಿಣಾಮ ನಾಲ್ಕು ಎತ್ತು ಮತ್ತು ಒಂದು ಆಕಳು ಸಾವನ್ನಪ್ಪಿವೆ.

    ಎತ್ತುಗಳನ್ನು ಕಳೆದುಕೊಂಡಿದ್ದರಿಂದ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಈ ವೇಳೆ ಮಲ್ಲಿಕಾರ್ಜುನ್ ಅವರ ಮಗಳು ವನಜಾ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಜೆಸಿಬಿ ಯಂತ್ರ ಬಳಸಿ ಎತ್ತುಗಳನ್ನು ಹೊರ ತೆಗೆಯಲು ಗ್ರಾಮಸ್ಥರ ಸಹಾಯದಿಂದ ಪೊಲೀಸ್ ಸಿಬ್ಬಂದಿ ಹೊರ ತೆಗೆದಿದ್ದಾರೆ.

  • ಕುಟುಂಬದ ಕಣ್ಮಣಿಗೆ ಕೊಂಬು ಕ್ಯಾನ್ಸರ್-ಕಸಾಯಿಖಾನೆಗೆ ಮಾರದೇ ಚಿಕ್ಕೋಡಿ ರೈತನಿಂದ ಆರೈಕೆ

    ಕುಟುಂಬದ ಕಣ್ಮಣಿಗೆ ಕೊಂಬು ಕ್ಯಾನ್ಸರ್-ಕಸಾಯಿಖಾನೆಗೆ ಮಾರದೇ ಚಿಕ್ಕೋಡಿ ರೈತನಿಂದ ಆರೈಕೆ

    ಬೆಳಗಾವಿ: ಇಂದಿನ ಕಾಲದಲ್ಲಿ ರೈತರು ತಾವು ಸಾಕಿದ, ತಮ್ಮ ಗದ್ದೆಗಳಲ್ಲಿ ಉಳುಮೆ ಮಾಡಿದ ಹಸು, ಎತ್ತು, ಹೋರಿಗಳು ಅನಾರೋಗ್ಯಕ್ಕೆ ಒಳಗಾದಾಗ ಕಸಾಯಿಖಾನೆಗೆ ಒಪ್ಪಿಸಿ ಕೈ ತೊಳೆದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬರು ರೈತ ತಮ್ಮ ಎತ್ತಿಗೆ ಕ್ಯಾನ್ಸರ್ ಕಾಯಿಲೆ ಬಂದ್ರೂ ಸಹ ಅದನ್ನ ತನ್ನ ಮಗುವಿನಂತೆ ಜೋಪಾನ ಮಾಡುತ್ತಿದ್ದಾರೆ.

    ಹೌದು. ಎಲ್ಲ ದನಕರುಗಳ ಹಾಗೆ ಕೊಟ್ಟಿಗೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿರೋ ಈ ಎತ್ತುವಿನ ಹೆಸರು ರಾಜ. ಕಳೆದ 18 ವರ್ಷಗಳ ಹಿಂದೆ ಯಾವುದೋ ಒಂದು ಬೇರೆ ಸ್ಥಳದಿಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮಕ್ಕೆ ಖರೀದಿಸಿದ ಬಳಿಕ ಮಾಲೀಕ ದುಂಡಪ್ಪನ 3 ಎಕರೆ ಗದ್ದೆಯನ್ನು ಉತ್ತಿ ಬಿತ್ತಲು ಸಹಕಾರಿಯಾಗಿದೆ.

    ಕೇವಲ ಕೃಷಿ ಕಾರ್ಯವನ್ನೆ ಮೆಚ್ಚಿಕೊಂಡಿದ್ದ ಮಾಲೀಕನ ಬಡತನದ ಮತ್ತು ಕಷ್ಟದ ಕಾಲದಲ್ಲಿ ಕೂಡ ದುಡಿದು ಸಹಕಾರಿಯಾಗಿದೆ. ಆದ್ರೆ ಕಳೆದ 6 ತಿಂಗಳಿನಿಂದ ಈ ಎತ್ತು ಕೊಂಬು ಕ್ಯಾನ್ಸರ್‍ನಿಂದ ಬಳಲುತ್ತಿದೆ. ಆದ್ರೆ ಮಾಲೀಕ ಬೇರೆ ರೈತರ ಹಾಗೆ ಕಟುಕರಿಗೆ ಕೊಟ್ಚು ಕೈ ತೊಳೆದುಕೊಂಡಿಲ್ಲ. ಹೊರತಾಗಿ ತಮ್ಮ ಮಗನ ಹಾಗೆ ಆರೈಕೆ ಮಾಡುತ್ತಿದ್ದಾರೆ.

    ಸದ್ಯ ರೈತ ಎತ್ತುವಿಗೆ ಆಪರೇಷನ್ ಕೂಡ ಮಾಡಿಸಿದ್ದಾರೆ. ಬಾಯಿ ನೋವಾಗಿ ಮೇವು ತಿನ್ನಲು ಸಾಧ್ಯವಾಗದಂತಹ ಸಂದರ್ಭದಲ್ಲಿ ಸ್ವತಃ ಬಾಯಿಗೆ ಮೇವಿಟ್ಟು ಸಲಹುತ್ತಿದ್ದಾರೆ. ನಿತ್ಯ 2 ಬಾರಿ ಸ್ನಾನ ಮಾಡಿಸಿ ಗಾಯಕ್ಕೆ ಔಷಧಿ ಹಚ್ಚುತ್ತಿದ್ದಾರೆ. ಕ್ಯಾನ್ಸರ್ ಬಂದ ಬಳಿಕ ಬೇರೆ ಎರಡು ಎತ್ತುಗಳನ್ನು ಸಹ ತಂದಿದ್ದರು. ಆದ್ರೆ ಈ ಎತ್ತುವಿನ ಆರೈಕೆಗೆ ತೊಂದರೆ ಆಗಬಾರದು ಅಂತ ಆ ಎತ್ತುಗಳನ್ನು ಸಹ ಮಾರಿದ್ರೂ. ಒಟ್ಟಿನಲ್ಲಿ ಮಾಲೀಕನ ಈ ಮಹಾನ್ ಕಾರ್ಯವನ್ನು ಸಮಾಜದ ಪ್ರತಿಯೊಬ್ಬರು ಶ್ಲಾಘಿಸುತ್ತಿದ್ದಾರೆ.

  • ಯುಜಿಡಿ ಕಾಮಗಾರಿ ಗುಂಡಿಗೆ ಬಿದ್ದು ನರಳಿ ನರಳಿ ಪ್ರಾಣ ಬಿಟ್ಟ ಬಸವ

    ಯುಜಿಡಿ ಕಾಮಗಾರಿ ಗುಂಡಿಗೆ ಬಿದ್ದು ನರಳಿ ನರಳಿ ಪ್ರಾಣ ಬಿಟ್ಟ ಬಸವ

    ಮೈಸೂರು: ಯುಜಿಡಿ ಕಾಮಗಾರಿಯ ಗುಂಡಿಗೆ ಬಿದ್ದು ಬೀದಿ ಎತ್ತು ನರಳಿ ನರಳಿ ಪ್ರಾಣ ಬಿಟ್ಟಿರುವ ಮನಕಲಕುವ ಘಟನೆ ಜಿಲ್ಲೆಯ ಟಿ.ನರಸೀಪುರ ವಿನಾಯಕ ಕಾಲೋನಿಯಲ್ಲಿ ನಡೆದಿದೆ.

    ಯುಜಿಡಿ ಕಾಮಗಾರಿ ನಡೆಸಲು ಪುರಸಭೆಯಿಂದ ಮಧ್ಯ ರಸ್ತೆಯಲ್ಲಿ ಗುಂಡಿ ತೆರೆಯಲಾಗಿತ್ತು. ಮಧ್ಯ ರಸ್ತೆಯಲ್ಲಿದ್ದ ಗುಂಡಿಗೆ ಅರಿವಿಲ್ಲದೇ ಬೀದಿ ಬಸವ ಬಿದ್ದಿದ್ದಾನೆ. ಗುಂಡಿಯಿಂದ ಮೇಲಕ್ಕೆ ಬರಲಾರದೇ ನರಳಿ ನರಳಿ ಪ್ರಾಣ ಬಿಟ್ಟಿದ್ದಾನೆ.

    ಕಾಮಗಾರಿ ನಡೆಸುತ್ತಿರುವ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಸವ ಪ್ರಾಣ ಕಳೆದುಕೊಂಡಿದ್ದಾನೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಪುರಸಭೆ ಯಾವುದೇ ತಾತ್ಕಲಿಕ ತಡೆಗೋಡೆಯನ್ನು ನಿರ್ಮಿಸಿರಲಿಲ್ಲ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಕೊನೆಗೆ ಸ್ಥಳೀಯರೇ ಸಾವನ್ನಪ್ಪಿದ ಬಸವನನ್ನು ಹೊರ ತೆಗೆದಿದ್ದಾರೆ.

  • ಎತ್ತುಗಳ ಬಾಡಿಗೆಗೆ ಹಣವಿಲ್ದೆ ಹೆಗಲ ಮೇಲೆ ನೊಗ ಹೊತ್ತು ಉಳುಮೆ ಮಾಡಿದ ರೈತರು

    ಎತ್ತುಗಳ ಬಾಡಿಗೆಗೆ ಹಣವಿಲ್ದೆ ಹೆಗಲ ಮೇಲೆ ನೊಗ ಹೊತ್ತು ಉಳುಮೆ ಮಾಡಿದ ರೈತರು

    ರಾಯಚೂರು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕಾಡಿದ ಬರಗಾಲದ ಪರಿಣಾಮ ಎಷ್ಟು ಘೋರವಾಗಿದೆ ಅಂದ್ರೆ ಈಗ ಮಳೆ ಬಂದರೂ ಹೊಲದಲ್ಲಿ ಬಿತ್ತನೆ ಮಾಡಲು ರೈತರಲ್ಲಿ ಹಣವಿಲ್ಲ. ಸಿಂಧನೂರು ತಾಲೂಕಿನ 4ನೇ ಮೈಲ್ ಕ್ಯಾಂಪ್‍ನಲ್ಲಿ ರೈತರು ಎತ್ತುಗಳ ಬಾಡಿಗೆ ಕೊಡಲು ಹಣವಿಲ್ಲದೆ ಸ್ವತಃ ತಾವೇ ಎತ್ತುಗಳಾಗಿ ನೋಗ ಹೊತ್ತು ಉಳುಮೆ ಮಾಡಿದ್ದಾರೆ.

    ಮೂರು ಜನ ರೈತರು ಎರಡು ಎಕರೆ ಜಮೀನನ್ನ ಹರಗಿ, ಹತ್ತಿ ಕಾಳು ಬಿತ್ತನೆ ಮಾಡಿದ್ದಾರೆ. ಗ್ರಾಮದ ರಾಮಲಿಂಗಪ್ಪ, ಪ್ರದೀಪ್ ಹಾಗೂ ವಿರೇಶ್ ತಾವೇ ನೊಗ ಹೊತ್ತು ಜಮೀನನ್ನ ಉಳುಮೆ ಮಾಡಿದ್ದಾರೆ.

    ಸತ್ಯನಾರಾಯಣ ಸ್ವಾಮಿ ಎಂಬವರ ಜಮೀನನ್ನ ಗುತ್ತಿಗೆ ಪಡೆದಿದ್ದ ಇವರು ಎತ್ತುಗಳಿಂದ ಉಳುಮೆ ಮಾಡಿದ್ರೆ ಒಂದು ದಿನಕ್ಕೆ ಒಂದು ಸಾವಿರ ರೂಪಾಯಿ ಬಾಡಿಗೆ ಕೊಡಬೇಕಾಗುತ್ತದೆ ಅಂತ ಎರಡು ದಿನ ಕಾಲ ತಾವೇ ನೊಗ ಹೊತ್ತು ಉಳುಮೆ ಮಾಡಿದ್ದಾರೆ.

    ಕಳೆದ ವರ್ಷ ಜೋಡಿ ಎತ್ತುಗಳನ್ನ ಹೊಂದಿದ್ದ ಪ್ರದೀಪ್ ಬರಗಾಲ ಹೊಡೆತಕ್ಕೆ ಸಾಲ ತೀರಿಸಲು ಎತ್ತು ಮಾರಿದ್ದರು. ಈಗ ಸ್ವತಃ ತಾವೇ ಎತ್ತುಗಳಾಗಿ ದುಡಿಯುತ್ತಿರುವುದು ರೈತನ ನಿಕೃಷ್ಠ ಬದುಕಿಗೆ ಹಿಡಿದ ಕೈಗನ್ನಡಿಯಂತಿದೆ.

  • ರಾಯಚೂರಿನಲ್ಲಿ ಅದ್ಧೂರಿ ಮುಂಗಾರು ಹಬ್ಬ – ಆನೆ ಭಾರದ ಕಲ್ಲು ಎಳೆದು ಎತ್ತುಗಳ ಓಟ

    ರಾಯಚೂರಿನಲ್ಲಿ ಅದ್ಧೂರಿ ಮುಂಗಾರು ಹಬ್ಬ – ಆನೆ ಭಾರದ ಕಲ್ಲು ಎಳೆದು ಎತ್ತುಗಳ ಓಟ

    ರಾಯಚೂರು: ರಾಜ್ಯಕ್ಕೆ ಮುಂಗಾರು ಮಳೆ ಕಾಲಿಡುತ್ತಿದ್ದಂತೆ ರಾಯಚೂರು ರೈತರು ಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಕಾರಹುಣ್ಣಿಮೆಯನ್ನ ಮುಂಗಾರು ಸಾಂಸ್ಕೃತಿಕ ಹಬ್ಬವಾಗಿ ರೈತರು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.

    ವರುಣದೇವ ರೈತರ ಮೇಲೆ ಕರುಣೆ ತೋರಲಿ ಅನ್ನೋದು ಈ ಹಬ್ಬದ ಉದ್ದೇಶ. ಮೂರು ದಿನಗಳ ಕಾಲ ನಡೆಯಲಿರುವ ಈ ಸಂಭ್ರಮದಲ್ಲಿ ಮೊದಲ ದಿನವಾದ ಗುರುವಾರ ಎತ್ತುಗಳು ಭಾರದ ಕಲ್ಲನ್ನ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಈ ಬಾರಿ ಒಟ್ಟು 67 ಜೋಡಿ ಎತ್ತುಗಳು ಭಾಗವಹಿಸಿದ್ವು. ವಿಜೇತ ಎತ್ತುಗಳ ಜೋಡಿಗೆ 7.5 ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತೆ.

    ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಸ್ಪರ್ಧೆಯಲ್ಲಿ ರಾಜ್ಯ ಮಾತ್ರವಲ್ಲದೆ ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಜೋಡಿ ಎತ್ತುಗಳು ಭಾಗಿಯಾಗುತ್ತವೆ.

  • ವಿದ್ಯುತ್ ಸ್ಪರ್ಶದಿಂದ ಜಮೀನಿನಲ್ಲೇ ಎತ್ತುಗಳ ಸಾವು

    ವಿದ್ಯುತ್ ಸ್ಪರ್ಶದಿಂದ ಜಮೀನಿನಲ್ಲೇ ಎತ್ತುಗಳ ಸಾವು

    ಯಾದಗಿರಿ: ಮುಂಗಾರು ಮಳೆ ಪ್ರಾರಂಭದಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆ ಚುರಾಕಾಗಿ ಪ್ರಾರಂಭಿಸುವ ಮುನ್ನವೇ ವಿದ್ಯುತ್ ಸ್ಪರ್ಶದಿಂದ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ಗಣಾಪುರ ಗ್ರಾಮದಲ್ಲಿ ನಡೆದಿದೆ.

    ಗೂಡಸಾಬ್ ತನ್ನ ಜಮೀನಿನಲ್ಲಿ ಎತ್ತುಗಳ ನೇಗಿಲಿನಿಂದ ಭೂಮಿ ಹದ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಕಂಬದಿಂದ ಕಳಚಿದ ಹರಿಯುತ್ತಿರುವ ವಿದ್ಯುತ್ ತಂತಿ ತಗುಲಿ ಎತ್ತುಗಳು ಸಾವನಪ್ಪಿವೆ.

    ರೈತ ಗೂಡಸಾಬ್ ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಗುರಮಿಠಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಾಯಿಗಳಿಗೆ ಹೆದರಿ ನೇಗಿಲು ಸಹಿತ 30 ಅಡಿ ಪಾಳು ಬಾವಿಗೆ ಬಿದ್ದ ಎತ್ತುಗಳು

    ನಾಯಿಗಳಿಗೆ ಹೆದರಿ ನೇಗಿಲು ಸಹಿತ 30 ಅಡಿ ಪಾಳು ಬಾವಿಗೆ ಬಿದ್ದ ಎತ್ತುಗಳು

    ಕೋಲಾರ: ಉಳುಮೆ ಮಾಡುವ ವೇಳೆ ನಾಯಿಗಳಿಗೆ ಬೆದರಿದ ಎತ್ತುಗಳು ನೇಗಿಲು ಸಹಿತ 30 ಅಡಿ ಆಳದ ಪಾಳು ಬಾವಿಗೆ ಬಿದ್ದ ಘಟನೆ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ಜೀಡಮಾಕನಪಲ್ಲಿ ಗ್ರಾಮದ ನಿವಾಸಿ ರೈತ ಮುನಿಯಪ್ಪ ಎಂಬವರ ಎತ್ತುಗಳು ಪಾಳು ಬಾವಿಗೆ ಬಿದ್ದು ಗಾಯಗೊಂಡಿವೆ. ಕೆಲವು ದಿನಗಳಿಂದ ಗ್ರಾಮದಲ್ಲಿ ಮಳೆಯಾಗಿದ್ದು, ರೈತ ಮುನಿಯಪ್ಪ ಅವರು ಉಳುಮೆ ಮಾಡಲು ತಮ್ಮ ಎತ್ತುಗಳ ಜೊತೆಗೆ ಹೊಲಕ್ಕೆ ಆಗಮಿಸಿದ್ದರು.

    ಎತ್ತುಗಳಿಗೆ ನೇಗಿಲು ಕಟ್ಟಿ ಉಳುಮೆ ಮಾಡುವಷ್ಟರಲ್ಲಿ ನಾಯಿಗಳನ್ನು ಕಂಡು ಬೆದರಿದ ಎತ್ತುಗಳು ಓಡಿ ಹೋಗಿ ಹತ್ತಿರದ 30 ಅಡಿ ಪಾಳು ಬಾವಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿವೆ. ಬಾವಿಗೆ ಬಿದ್ದ ಎತ್ತುಗಳನ್ನು ಸ್ಥಳೀಯರ ನೆರವಿನಿಂದ ಮೇಲೆತ್ತಲು ಸಿದ್ಧತೆ ನಡೆಸಿದ್ದಾರೆ.