Tag: ಎಥೆನಾಲ್

  • ನನ್ನ ಮಿದುಳು 200 ಕೋಟಿ ಬೆಲೆಬಾಳುತ್ತೆ, ಪ್ರಾಮಾಣಿಕವಾಗಿಯೇ ಹಣ ಗಳಿಸ್ತೀನಿ: ನಿತಿನ್ ಗಡ್ಕರಿ

    ನನ್ನ ಮಿದುಳು 200 ಕೋಟಿ ಬೆಲೆಬಾಳುತ್ತೆ, ಪ್ರಾಮಾಣಿಕವಾಗಿಯೇ ಹಣ ಗಳಿಸ್ತೀನಿ: ನಿತಿನ್ ಗಡ್ಕರಿ

    ನಾಗ್ಪುರ: ನನ್ನ ಮಿದುಳು ತಿಂಗಳಿಗೆ 200 ಕೋಟಿ ರೂ. ಬೆಲೆಬಾಳುತ್ತೆ. ನನಗೆ ಹಣದ ಕೊರತೆ ಇಲ್ಲ. ವಂಚನೆ ಮಾಡದೇ ಪ್ರಾಮಾಣಿಕವಾಗಿ ಹಣ ಗಳಿಸುವುದು ಹೇಗೆ ಎಂದು ನನಗೆ ತಿಳಿದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.

    ಸರ್ಕಾರವು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ (E20) ಒತ್ತು ನೀಡುವ ಕುರಿತಾದ ವಿವಾದ, ವೈಯಕ್ತಿಕ ಲಾಭದ ಆರೋಪ ಬೆನ್ನಲ್ಲೇ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿತಿನ್ ಗಡ್ಕರಿ ಈ ಮಾತುಗಳನ್ನಾಡಿದ್ದಾರೆ. ಇದರಲ್ಲಿ ನನಗೆ ಯಾವುದೇ ವೈಯಕ್ತಿಕ ಲಾಭವಿಲ್ಲ, ರೈತರಿಗೆ ಪ್ರಯೋಜನವನ್ನು ನೀಡುವ ಸಲುವಾಗಿ ಪ್ರಯೋಗ ಮಾಡುತ್ತಿದ್ದೇನೆ. ರೈತರು ಸಮೃದ್ಧಿಯನ್ನು ಸಾಧಿಸುವವರೆಗೆ ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಗಡ್ಕರಿ ಹೇಳಿದ್ದಾರೆ. ಇದನ್ನೂ ಓದಿ: ಜಾತಿಗಣತಿ ಕಾಲಂನಲ್ಲಿ ಮತಾಂತರ ಜಾತಿಗೂ ಜಾಗ – ಸರ್ಕಾರದ ವಿರುದ್ಧ ಬಿಜೆಪಿ, ಕನಕ ಶ್ರೀ ಕಿಡಿ

    ಇದಕ್ಕೂ ಮುನ್ನ ಈ ತಿಂಗಳ ಆರಂಭದಲ್ಲಿ ಇ20 ಬಿಡುಗಡೆಯನ್ನು ನಿಲ್ಲಿಸಲು ಮತ್ತು ಪಂಪ್‌ಗಳಲ್ಲಿ ಎಥನಾಲ್-ಮುಕ್ತ ಪೆಟ್ರೋಲ್ ಅನ್ನು ಕಡ್ಡಾಯಗೊಳಿಸಲು ಪ್ರಯತ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಸಾಂಪ್ರದಾಯಿಕ ಇಂಧನದೊಂದಿಗೆ ಶೇ. 20ರಷ್ಟು ಎಥೆನಾಲ್ ಅನ್ನು ಬೆರೆಸುವ ಇ20 ಪೆಟ್ರೋಲ್ ಬಗ್ಗೆ  ಟೀಕಿಸಲಾಗುತ್ತಿದೆ. ಆ ಇಂಧನ ಸುರಕ್ಷಿತವಾಗಿದೆ, ನಿಯಂತ್ರಕರು ಮತ್ತು ವಾಹನ ತಯಾರಕರು ಇಬ್ಬರೂ ಅದನ್ನು ಬೆಂಬಲಿಸುತ್ತಾರೆ ಎಂದು ಗಡ್ಕರಿ ಪ್ರತಿಪಾದಿಸಿದ್ದರು. ಇದನ್ನೂ ಓದಿ: ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ – ಇಬ್ಬರು ಸಾವು

    ಎಥನಾಲ್ ಮಿಶ್ರಣವು ತೈಲ ಆಮದುಗಳನ್ನು ಕಡಿಮೆ ಮಾಡುತ್ತದೆ. ನಾವು ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಇದರ ಪರಿಣಾಮವಾಗಿ, ಉತ್ತರ ಪ್ರದೇಶ, ಬಿಹಾರ ಮತ್ತು ದೇಶಾದ್ಯಂತ ಮೆಕ್ಕೆಜೋಳದ ಕೃಷಿ 3 ಪಟ್ಟು ಹೆಚ್ಚಾಗಿದೆ. ಭಾರತದ ಕೃಷಿ ಬೆಳವಣಿಗೆಯ ದರ ಸಾಂಪ್ರದಾಯಿಕವಾಗಿ ಕಡಿಮೆಯಾಗಿದೆ. ಇಂಧನ ಮತ್ತು ವಿದ್ಯುತ್ ವಲಯಕ್ಕೆ ಕೃಷಿಯ ಈ ವೈವಿಧ್ಯೀಕರಣವು ರೈತರಿಗೆ ನೇರವಾಗಿ ಪ್ರಯೋಜನವನ್ನು ನೀಡುತ್ತದೆ ಮತ್ತು ಆರ್ಥಿಕತೆಯನ್ನು ಬಲಪಡಿಸುತ್ತದೆ, ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

  • ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ನವದೆಹಲಿ:ಎಥೆನಾಲ್‌ ಮಿಶ್ರಣದ ಪೆಟ್ರೋಲ್‌ನಿಂದ ವಾಹನಗಳ ಮೈಲೇಜ್‌ ಕುಸಿತವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ (Union Govt) ಸ್ಪಷ್ಟನೆ ನೀಡಿದೆ.

    ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ನಿಂದ (Ethanol Blending Petrol) ಮೈಲೇಜ್‌ (Mileage) ಕುಸಿತವಾಗಿದೆ ಎಂಬ ಆರೋಪಿಸಿದ ಬೆನ್ನಲ್ಲೇ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ದೀರ್ಘವಾದ ಪೋಸ್ಟ್‌ ಪ್ರಕಟಿಸಿ ಗೊಂದಲಗಳಿಗೆ ಸ್ಪಷ್ಟನೆ ನೀಡಿದೆ. ಅಷ್ಟೇ ಅಲ್ಲದೇ ವಾಹನದ ವಿಮೆಗಳು (Vehicle Insurance) ರದ್ದಾಗುವುದಿಲ್ಲ ಎಂದು ಹೇಳಿದೆ.

    ಏನಿದು E20 ಇಂಧನ?
    2003ಕ್ಕೆ ಮೊದಲು ಭಾರತದಲ್ಲಿ (India) ಕಚ್ಚಾ ತೈಲದಿಂದ ಸಂಸ್ಕರಣೆಗೊಂಡ ಪೆಟ್ರೋಲ್‌ ಬಂಕ್‌ಗಳಿಗೆ ಬರುತ್ತಿದ್ದವು. ಆದರೆ ಈಗ ಪೆಟ್ರೋಲ್‌ ಜೊತೆ ಎಥೆನಾಲ್‌ ಮಿಶ್ರಣವಾಗಿರುವ ಇಂಧನ ಬರುತ್ತಿದೆ.

    20% ಎಥೆನಾಲ್‌ ಮತ್ತು 80% ಬಾಕಿ ಪೆಟ್ರೋಲ್‌ ಮಿಶ್ರಿತ ತೈಲವನ್ನು ಇ20 ತೈಲ ಎನ್ನುತ್ತಾರೆ. ಕಬ್ಬು, ಜೋಳ ಅಥವಾ ಹೆಚ್ಚುವರಿ ಧಾನ್ಯದಿಂದ ತಯಾರಿಸಲಾದ ಜೈವಿಕ ಇಂಧನವನ್ನು ಎಥೆನಾಲ್‌ ಎಂದು ಕರೆಯಲಾಗುತ್ತದೆ. 2003ರಲ್ಲಿ ಭಾರತದಲ್ಲಿ ಇ5 ಇಂಧನ ಸಿಗತೊಡಗಿತು. 2022ರ ವೇಳೆಗೆ ದೇಶದಲ್ಲಿ ಇ10 ಇಂಧನ ಮಾರಾಟವಾಗುತ್ತಿತ್ತು. 2023ರಲ್ಲಿ ಕೆಲ ನಗರಗಳಲ್ಲಿ ಪ್ರಾಯೋಗಿಕವಾಗಿ ಇ20 ಇಂಧನ ಮಾರಾಟ ಮಾಡಲಾಗುತ್ತಿತ್ತು. 2025 ರಿಂದ ದೇಶಾದ್ಯಂತ ಇ20 ಇಂಧನ ಮಾರಾಟ ಮಾಡಲಾಗುತ್ತಿದೆ. ಇದನ್ನೂ ಓದಿ: ಬೀದಿ ನಾಯಿಗಳ ಸ್ಥಳಾಂತರ; ಸುಪ್ರೀಂ ಆದೇಶಕ್ಕೆ ರಾಹುಲ್ ಗಾಂಧಿ ಆಕ್ಷೇಪ

    ಸ್ಪಷ್ಟನೆಯಲ್ಲಿ ಏನಿದೆ?
    ಚಾಲನಾ ಅಭ್ಯಾಸಗಳು, ವಾಹನ ನಿರ್ವಹಣೆ, ಟೈರ್ ಒತ್ತಡ ಮತ್ತು ಹವಾನಿಯಂತ್ರಣ ಬಳಕೆಯಂತಹ ಅಂಶಗಳು ವಾಹನದ ಮೈಲೇಜ್‌ ಮೇಲೆ ಪ್ರಭಾವ ಬೀರುತ್ತವೆ.

    2009 ರಿಂದಲೂ ಅನೇಕ ವಾಹನಗಳು E20 ಇಂಧನಕ್ಕೆ ಹೊಂದಾಣಿಕೆಯಾಗುತ್ತಿವೆ. ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌, ಆಟೋಮೊಟಿವ್‌ ರಿಸರ್ಚ್‌ ಆಸೋಸಿಯೇಷನ್‌ ಆಫ್‌ ಇಂಡಿಯಾ, ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರ್ಸ್‌ ನಡೆಸಿದ ಸಂಶೋಧನೆಯಿಂದ E20 ಇಂಧನವು ಉತ್ತಮ ವೇಗವರ್ಧನೆ ಮತ್ತು E10 ಇಂಧನಕ್ಕಿಂತ 30% ರಷ್ಟು ಕಡಿಮೆ ಇಂಗಾಲದ ಹೊರಸೂಸುವಿಕೆಯನ್ನು ನೀಡುತ್ತದೆ ಎಂದು ಕಂಡುಹಿಡಿದಿದೆ.

    E20 ಬಳಸುವುದರಿಂದ ವಾಹನ ವಿಮೆ ರದ್ದಾಗುತ್ತದೆ ಎಂಬ ಹೇಳಿಕೆ ಆಧಾರರಹಿತ ಮತ್ತು ಉದ್ದೇಶಪೂರ್ವಕ ಭಯ ಹುಟ್ಟಿಸುವ ಹೇಳಿಕೆಯಾಗಿದೆ. ಎಥೆನಾಲ್-ಮಿಶ್ರಿತ ಇಂಧನವನ್ನು ಬಳಸುವ ವಾಹನಗಳಿಗೆ ವಿಮಾ ರಕ್ಷಣೆ ಸಿಗಲಿದೆ. ಹಳೆಯ ವಾಹನಗಳಲ್ಲಿ ಅಗತ್ಯವಿರುವ ಯಾವುದೇ ಸಣ್ಣ ಭಾಗಗಳ ಬದಲಾವಣೆಯನ್ನು ಕಂಪನಿಯ ಅಧಿಕೃತ ವರ್ಕ್‌ಶಾಪ್‌ನಲ್ಲಿ ಮಾಡಿಕೊಳ್ಳಬಹುದು.

    ಜೈವಿಕ ಇಂಧನಗಳು ಮತ್ತು ನೈಸರ್ಗಿಕ ಅನಿಲವು ಭಾರತದ ಸೇತುವೆ ಇಂಧನಗಳು. ಕಬ್ಬು ಆಧಾರಿತ ಎಥೆನಾಲ್‌ನಿಂದ ಹಸಿರುಮನೆ ಅನಿಲ ಹೊರಸೂಸುವಿಕೆಯು ಪೆಟ್ರೋಲ್‌ಗಿಂತ 65% ರಷ್ಟು ಕಡಿಮೆ ಮತ್ತು ಮೆಕ್ಕೆಜೋಳ ಆಧಾರಿತ ಎಥೆನಾಲ್‌ನಿಂದ 50% ರಷ್ಟು ಕಡಿಮೆಯಾಗಿದೆ ಎಂದು ನೀತಿ ಆಯೋಗದ ಅಧ್ಯಯನ ಹೇಳಿದೆ.

    ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಮಾಡಿದ್ದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ 1.44 ಲಕ್ಷ ಕೋಟಿಗೂ ರೂ. ಹೆಚ್ಚು ವಿದೇಶಿ ವಿನಿಮಯ ಉಳಿತಾಯವಾಗಿದೆ. ಇಂಗಾಲದ ಡೈಆಕ್ಸೈಡ್ ಅಂದಾಜು 736 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಡಿಮೆಯಾಗಿದ್ದು ದು 30 ಕೋಟಿ ಮರಗಳನ್ನು ನೆಡುವುದಕ್ಕೆ ಸಮಾನವಾಗಿದೆ.

    ಬ್ರೆಜಿಲ್‌ನಲ್ಲಿ ಕೆಲ ವರ್ಷಗಳಿಂದ E27 ಇಂಧನ ಬಳಕೆ ಮಾಡುತ್ತಿದ್ದು ಅಲ್ಲಿ ಯಾವುದೇ ಸಮಸ್ಯೆಯಿಲ್ಲದೇ ಯಶಸ್ವಿಯಾಗಿದೆ. ಟೊಯೋಟಾ, ಹೋಂಡಾ, ಹುಂಡೈ ಮುಂತಾದ ವಾಹನ ತಯಾರಕರು ಅಲ್ಲಿಯೂ ವಾಹನಗಳನ್ನು ಉತ್ಪಾದಿಸುತ್ತಾರೆ ಎಂದು ಸ್ಪಷ್ಟನೆಯಲ್ಲಿ ಹೇಳಿದೆ.

  • ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭ ಸುದ್ದಿ, ಎಥೆನಾಲ್ ನೀತಿ ಜಾರಿಗೆ ನಿರ್ಣಯ: ಮುನೇನಕೊಪ್ಪ

    ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭ ಸುದ್ದಿ, ಎಥೆನಾಲ್ ನೀತಿ ಜಾರಿಗೆ ನಿರ್ಣಯ: ಮುನೇನಕೊಪ್ಪ

    ಬೆಳಗಾವಿ: ರಾಜ್ಯದ ಕಬ್ಬು, ಮೆಕ್ಕೆಜೋಳ, ಭತ್ತ ಬೆಳಗಾರರನ್ನು ಆರ್ಥಿಕವಾಗಿ ಸಬಲ ಮಾಡುವ ನಿಟ್ಟಿನಲ್ಲಿ ಒಂದು ತಿಂಗಳ ಒಳಗಾಗಿ ಎಥನಾಲ್ ನೀತಿ ಜಾರಿಗೆ ನಿರ್ಣಯ ಸರ್ಕಾರ ನಿರ್ಧರಿಸಿದೆ ಎಂದು ಜವಳಿ ಮತ್ತು ಕೈಮಗ್ಗ ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವರೂ ಆದ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.

    ಬೆಳಗಾವಿ ಸುವರ್ಣಸೌಧದಲ್ಲಿ ಇವತ್ತು ಕಬ್ಬು ಬೆಳೆಗಾರರು, ಕಾರ್ಖಾನೆ ವ್ಯವಸ್ಥಾಪಕರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಲಭಿಸಬೇಕು ಎಂಬ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಎಥೆನಾಲ್ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೇಡೌನ್‌ ಮೇಲೆ ಅಧಿಕಾರಿಗಳ ದಾಳಿ

    ಕೇಂದ್ರ ಸರ್ಕಾರ ಎಥೆನಾಲ್ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ. ಪ್ರಸ್ತುತ ಎಥೆನಾಲ್ ಪರ್ಯಾಯ ಹಾಗೂ ಸಹ ಇಂಧನವಾಗಿ ಬಳಕೆಯಾಗುತ್ತದೆ. ಇದರಿಂದ ಇಂಧನ ಸಮಸ್ಯೆ ಉತ್ತರ ದೊರೆಯಲಿದ್ದು. ಹೆಚ್ಚಿನ ಉದ್ಯೋಗ ಸೃಷ್ಠಿಯಾಗಲಿದೆ. ಸರ್ಕಾರಕ್ಕೂ ಆದಾಯ ಬರುವುದು. ಎಥೆನಾಲ್ ಜಾರಿಗೊಳಿಸುವಿಕೆಯಿಂದ ಕಬ್ಬು ಬೆಳೆದ ರೈತರಿಗೆ ಸಮಯಕ್ಕೆ ಸರಿಯಾಗಿ ಹಣ ಲಭಿಸಲಿದೆ, ಸಕ್ಕರೆ ಕಾರ್ಖಾನೆಗಳು ಸಹ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಹಾಯಕ ವಾಗಲಿದೆ ಎಂದು ಮಾಹಿತಿ ಹಂಚಿಕೊಂಡರು.

    ಇತರೆ ರಾಜ್ಯಗಳಾದ ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಎಥೆನಾಲ್ ಉತ್ಪಾದನೆ ಮಾಡುತ್ತಿರುವ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗುವುದು. ಸಮಿತಿ ನೀಡಿದ ವರದಿಯನ್ನು ಪರಿಶೀಲಿಸಿ, ತ್ವರಿತವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳಲಾಗುವುದು. ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಈ ಕುರಿತು ಎರಡು ದಿನಗಳ ಹಿಂದೆ ಸಲಹೆ ನೀಡಿದ್ದರು. ಇದಕ್ಕೆ ಸ್ಪಂದಿಸಿ ಇಂದು ಸಭೆ ನೆಡೆಸಿ ನಿರ್ದೇಶನ ನೀಡಲಾಗಿದೆ ಎಂದರು. ಇದನ್ನೂ ಓದಿ: ಸಕ್ರಿಯ ರಾಜಕಾರಣ ತ್ಯಜಿಸಿದ ಮೆಟ್ರೋಮ್ಯಾನ್ ಇ ಶ್ರೀಧರನ್

    ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಉಮೇಶ್ ಕತ್ತಿ, ಶಿವರಾಮ್ ಹೆಬ್ಬಾರ್, ವಾದಕರಾದ ಪಿ.ರಾಜೀವ್, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ರೈತ ಮುಖಂಡರು, ಕಾರ್ಖಾನೆ ಮಾಲಿಕರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಎಥೆನಾಲ್ ಉತ್ಪಾದನೆಗೆ ಮುಂದಾದ ಕೇಂದ್ರ ಸರ್ಕಾರ

    ಎಥೆನಾಲ್ ಉತ್ಪಾದನೆಗೆ ಮುಂದಾದ ಕೇಂದ್ರ ಸರ್ಕಾರ

    ನವದೆಹಲಿ: ದೇಶದಲ್ಲಿ ಒಂದೆಡೆ ತೈಲಬೆಲೆ ಏರಿಕೆ ಸಾಮಾನ್ಯ ಜನರ ಗಾಯದ ಮೇಲೆ ಬರೆ ಎಳೀತಿದೆ. ಮತ್ತೊಂದೆಡೆ ಎಲೆಕ್ಟ್ರಾನಿಕ್ ವಾಹನಗಳ ದರ ಮಧ್ಯಮ ವರ್ಗಕ್ಕೆ ಕೈಗೆಟುಕುತ್ತಿಲ್ಲ. ಹೀಗಾಗಿ ಎಥೆನಾಲ್ ಉತ್ಪಾದನೆಗೆ ಹೆಚ್ಚು ಮಣೆ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ.

    2025ರ ವೇಳೆಗೆ ಎಥೆನಾಲ್ ಉತ್ಪಾದನೆ ಶೇ.20ರಷ್ಟು ಹೆಚ್ಚಿಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2020-21ನೇ ಸಾಲಿನಲ್ಲಿ ಎಥೆನಾಲ್‍ಗೆ ಹೆಚ್ಚಿನ ಬೆಲೆ ನೀಡಲು ಅನುಮೋದನೆ ನೀಡಿದೆ. ಕಬ್ಬು ಆಧಾರಿತ ನಾನಾ ಕಚ್ಚಾ ಸಾಮಗ್ರಿಗಳಿಂದ ಪಡೆದ ಎಥೆನಾಲ್‍ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಇದನ್ನೂ ಓದಿ: ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ

    ಸದ್ಯ 332 ಕೋಟಿ ಲೀಟರ್ ಎಥೆನಾಲ್‍ನ ಪೆಟ್ರೋಲ್‍ಗೆ ಮಿಕ್ಸ್ ಮಾಡಲಾಗುತ್ತಿದೆ. 2025-26ರ ವೇಳೆಗೆ 1,016 ಕೋಟಿ ಲೀಟರ್‍ಗಳಿಗೆ ಹೆಚ್ಚಿಸಲು ಗುರಿ ಇಟ್ಟುಕೊಂಡಿದೆ. ಎಥೆನಾಲ್ ಬಳಕೆಯಿಂದ ಕಾರ್ಬನ್ ಡೈ ಆಕ್ಸೈಡ್ ಉತ್ಪಾದನೆ ಕಡಿಮೆಯಾಗಲಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೆ ಬರಲಿದೆ. ಎಥೆನಾಲ್ ಉತ್ಪಾದನೆಗೆ ಆಹಾರ ಪದಾರ್ಥಗಳನ್ನು ಬಳಸುವುದರಿಂದ ರೈತರಿಗೂ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.  ಇದನ್ನೂ ಓದಿ: ಐಸಿಸ್ ಉಗ್ರ ಸಂಘಟನೆಗೆ ಹಿಂದುತ್ವ ಹೋಲಿಕೆ – ವಿವಾದಕ್ಕೆ ಸಿಲುಕಿದ ಖುರ್ಷಿದ್ ಪುಸ್ತಕ

    ಈ ನಡುವೆ ಪ್ರತಿ ಲೀಟರ್ ಎಥೆನಾಲ್ ಮೇಲೆ 2.5 ರೂ ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಡಿಸೆಂಬರ್ 1 ರಿಂದ ಈ ಹೊಸ ಬೆಲೆ ಅನ್ವಯವಾಗಲಿದ್ದು, ಈ ಹಿಂದೆ ನವೆಂಬರ್ 10 ರಂದು ಎಥನಾಲ್ ಬೆಲೆಯನ್ನು 80 ಪೈಸೆ ಏರಿಕೆ ಮಾಡಿತ್ತು. ಪ್ರಸ್ತುತ ಎಥನಾಲ್ ಬೆಲೆ 62.65 ರೂ. ಇದ್ದು, 63.45 ರೂ.ಗೆ ಏರಿಕೆ ಕಾಣಲಿದೆ ಎಂದು ಅನುರಾಗ್ ಸಿಂಗ್ ಠಾಕೂರ್ ಸ್ಪಷ್ಟಪಡಿಸಿದ್ದಾರೆ.

  • ಲೀಟರ್ ಪೆಟ್ರೋಲ್ ಬೆಲೆ 55 ರೂ., ಡೀಸೆಲ್ 50 ರೂ. ಆಗುತ್ತೆ: ಗಡ್ಕರಿ

    ಲೀಟರ್ ಪೆಟ್ರೋಲ್ ಬೆಲೆ 55 ರೂ., ಡೀಸೆಲ್ 50 ರೂ. ಆಗುತ್ತೆ: ಗಡ್ಕರಿ

    ನವದೆಹಲಿ: ಎಥೆನಾಲ್ ಘಟಕಗಳು ದೇಶದಲ್ಲಿ ಆರಂಭಗೊಂಡ ನಂತರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 55 ರೂ., ಡೀಸೆಲ್ 50 ರೂ. ಆಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಛತ್ತೀಸ್‍ಗಢದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಒಟ್ಟಾರೆ 5 ಎಥೆನಾಲ್ ಉತ್ಪಾದನಾ ಘಟಕಗಳನ್ನು ಕೇಂದ್ರ ಸರ್ಕಾರ ತೆರೆಯಲಿದ್ದು, ಇವುಗಳು ಕಾರ್ಯಾರಂಭ ಮಾಡಿದ ಬಳಿಕ ದೇಶದಲ್ಲಿ ತೈಲ ಬೆಲೆ ಇಳಿಕೆಯಾಗಲಿದೆ ಎಂದರು. ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

    ನಗರ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳಿಂದ ಘಟಕದಲ್ಲಿ ಇಂಧನವನ್ನು ಉತ್ಪತ್ತಿ ಮಾಡಲಾಗುತ್ತದೆ. ಭತ್ತ ಹಾಗೂ ಗೋಧಿಯ ಹುಲ್ಲು, ಕಬ್ಬು ಇನ್ನಿತರ ಕೃಷಿಯಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಬಳಸಿ ಇಂಧನ ಉತ್ಪತ್ತಿ ಮಾಡಬಹುದಾಗಿದೆ ಎಂದು ಹೇಳಿದರು. ಇದನ್ನೂ ಓದಿ: 1 ರೂ. ಟಿಕೆಟ್‍ಗೆ 17 ಕಿ.ಮೀ ಸಂಚಾರ – ಇದು ದನದ ಸೆಗಣಿಯಿಂದ ಓಡೋ ಬಸ್ ವಿಶೇಷತೆ

    ಎಥೆನಾಲ್, ಮೆಥೆನಾಲ್, ಬಯೋ ಇಂಧನ ಮತ್ತು ಸಿಎನ್‍ಜಿ ಬಳಕೆ ಹೆಚ್ಚಾದಂತೆ ಪೆಟ್ರೋಲ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಇದರಿಂದಾಗಿ ತೈಲ ಬೆಲೆ ಇಳಿಕೆಯಾಗಲಿದೆ. ಛತ್ತೀಸ್‍ಗಢದಲ್ಲಿ ತೆರೆಯಲಾದ ಜತ್ರೋಪಾ ಘಟಕದಿಂದ ಉತ್ಪಾದನೆಯಾದ ಜೈವಿಕ ಇಂಧನವನ್ನು ಬಳಸಿ ಇದೇ ಮೊದಲ ಬಾರಿಗೆ ದೇಶದಲ್ಲಿ ವಿಮಾನವನ್ನು ಹಾರಿಸಲಾಗಿದೆ ಎಂದು ಈ ವೇಳೆ ತಿಳಿಸಿದರು. ಇದನ್ನೂ ಓದಿ:  2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

    ನಾವು 8 ಲಕ್ಷ ಕೋಟಿ ರೂ. ಮೌಲ್ಯದ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಆಮದು ಮಾಡಿಕೊಳ್ಳುತ್ತಿದ್ದು, ತೈಲ ಬೆಲೆ ಮತ್ತಷ್ಟು ಏರಿಕೆಯಾಗುತ್ತಿದೆ. ಇದರಿಂದಾಗಿ ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿದೆ. ರೈತರು, ಆದಿವಾಸಿಗಳ ಸಹಾಯದಿಂದ ಎಥೆನಾಲ್, ಮೆಥೆನಾಲ್, ಬಯೋ- ಇಂಧನವನ್ನು ತಯಾರಿಸಬಹುದು. ಇವುಗಳನ್ನು ವಿಮಾನ ಹಾರಾಟಕ್ಕೂ ಬಳಸಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!

    ಕಳೆದ ಸೋಮವಾರ ಜೈವಿನ ಇಂಧನ ಬಳಸಿದ್ದ ಸ್ಪೈಸ್ ಜೆಟ್ ವಿಮಾನ ಡೆಹ್ರಾಡೂನ್‍ನಿಂದ ಹೊರಟು ದೆಹಲಿಗೆ ಬಂದಿಳಿದಿತ್ತು. ಈ ವಿಮಾನದಲ್ಲಿ ಶೇ. 75 ಜೆಟ್ ಇಂಧನ ಹಾಗೂ ಶೇ. 25 ಜೈವಿಕ ಇಂಧನ ಬಳಸಲಾಗಿತ್ತು. ಸ್ಪೈಸ್ ಜೆಟ್‍ನ ಬೊಂಬಾರ್ಡಿಯರ್ ಕ್ಯೂ400 ವಿಮಾನವನ್ನು ಈ ಪ್ರಯೋಗಕ್ಕೆ ಬಳಸಲಾಗಿತ್ತು. ಪ್ರಸ್ತುತ ಅಮೆರಿಕ ಮತ್ತು ಆಸ್ಟ್ರೇಲಿಯಾದಲ್ಲಿ ವಿಮಾನಗಳು ಜೈವಿಕ ಇಂಧನವನ್ನು ಬಳಸುತ್ತಿವೆ. ಇದನ್ನೂ ಓದಿ: ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಇನ್ನೂ ಬಂದಿಲ್ಲ ಯಾಕೆ? ಸರ್ಕಾರಗಳ ನಿಲುವು ಏನು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv