Tag: ಎನ್‍ಐಎ

  • ಬೆಂಗ್ಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ – ದೇಶದ 17 ಕಡೆ ಎನ್‌ಐಎ ದಾಳಿ

    ಬೆಂಗ್ಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ – ದೇಶದ 17 ಕಡೆ ಎನ್‌ಐಎ ದಾಳಿ

    ಬೆಂಗಳೂರು/ ನವದೆಹಲಿ: ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಕರ್ನಾಟಕ ಸೇರಿದಂತೆ ದೇಶದ 17 ಕಡೆ ದಾಳಿ ನಡೆಸಿದೆ.

    ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು (CCB Police)  ಐವರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್‌ ಪತ್ತೆಯಾಗಿತ್ತು. ಈ ಪ್ರಕರಣದ ಆರೋಪಿಗಳ ಜೊತೆ ಜೈಲಿನಲ್ಲಿದ್ದ ಉಗ್ರ ಟಿ.ನಾಸೀರ್ (T Naseer) ಸಂಪರ್ಕ ಬೆಳೆಸಿದ್ದ ವಿಚಾರ ತನಿಖೆಯಿಂದ ಬಯಲಾಗಿತ್ತು. ನಂತರ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು.   ಇದನ್ನೂ ಓದಿ: ಸರ್‌, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್‌ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?

    ಈ ವರ್ಷದ ಜನವರಿ 12 ರಂದು ಎನ್‌ಐಎ ಈ ಪ್ರಕರಣದ ಸಂಬಂಧ 8 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿತ್ತು. ಚಾರ್ಜ್‌ಶೀಟ್ ಮಾಡಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ 2013 ರಿಂದ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಉಳಿದ ಇಬ್ಬರು ಆರೋಪಿಗಳಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.

    ಸಹ ಖೈದಿಗಳನ್ನ ಸೆಳೆದು ಉಗ್ರ ಕೃತ್ಯಕ್ಕೆ ಪ್ರೇರೇಪಣೆ ನೀಡಿದ ಹಿನ್ನೆಲೆಯಲ್ಲಿ ಇಂದು ಏಳು ರಾಜ್ಯದಲ್ಲಿ ಎನ್‌ಐಎ ದಾಳಿ ನಡೆಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯ ತೂಬಾ ಲೇಔಟ್ ಮತ್ತು ಸರಾಯಿ ಪಾಳ್ಯದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

    ಚಾರ್ಜ್‌ಶೀಟ್‌ನಲ್ಲಿ ಏನಿದೆ?
    ಆರ್‌ಟಿ ನಗರ ಮನೆಯಲ್ಲಿ ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು.

    ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್‌ಗಳು
    ಬೆಂಗಳೂರು ದಾಳಿಯ ವೇಳೆ ಉಗ್ರರ ಮನೆಯಲ್ಲಿ ಪತ್ತೆಯಾಗಿದ್ದ ಗ್ರೆನೇಡ್‌ಗಳು

    ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ (BDDS) ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್‌ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ (Grenade) ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು. ಇದನ್ನೂ ಓದಿ: ಆಪಲ್‌ ಐಫೋನ್‌ಗೆ ಭರ್ಜರಿ 16,584 ಕೋಟಿ ರೂ. ದಂಡ

    ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ.

    ಜುನೈದ್ ಕೊಡುವ ಮಾರ್ಗದರ್ಶನದಂತೆ ಸಿಲಿಕಾನ್ ಸಿಟಿಯಲ್ಲಿ ಶಂಕಿತರು ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು. ನಗರದಲ್ಲಿ 10ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿಕೊಂಡಿದ್ದರು ವಿಚಾರ ಅಂಶ ಚಾರ್ಜ್‌ಶೀಟ್‌ನಲ್ಲಿದೆ.

  • ಬಾಂಬ್ ಸ್ಫೋಟವಾಗಲು ಎರಡೂ ರಾಷ್ಟ್ರೀಯ ಪಕ್ಷದವರು ಕಾರಣ: ಪ್ರಮೋದ್ ಮುತಾಲಿಕ್

    ಬಾಂಬ್ ಸ್ಫೋಟವಾಗಲು ಎರಡೂ ರಾಷ್ಟ್ರೀಯ ಪಕ್ಷದವರು ಕಾರಣ: ಪ್ರಮೋದ್ ಮುತಾಲಿಕ್

    ಕಾರವಾರ: ಬೆಂಗಳೂರು ಬಾಂಬ್ ಸ್ಪೋಟ ಪೂರ್ವಯೋಜಿತ ಕೃತ್ಯ. ಸತ್ಯಾಸತ್ಯತೆ ಹೊರಬರಬೇಕಾದ್ರೆ NIA ತನಿಖೆಗೆ ವಹಿಸಬೇಕು. ಎರಡೂ ರಾಷ್ಟ್ರೀಯ ಪಕ್ಷಗಳು ಬಾಯಿ ಮುಚ್ಚಿಕೊಂಡು ಕೂರಬೇಕು. ನಿಮ್ಮ ನಿಮ್ಮ ಕಾಲದಲ್ಲಿ ಏನೇನು ಆಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಬಾಂಬ್ ಸ್ಫೋಟ ಆಗಲು ಎರಡೂ ಪಕ್ಷದವರು ಕಾರಣ ಇದ್ದೀರಿ. ನಿಮ್ಮ ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಹೇಳಿಕೆ ಕೊಡಬೇಡಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ‌

    ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸಲಿದೆ. ಬಿಜೆಪಿ ಅವಧಿಯಲ್ಲಿಯೂ ಸ್ಫೋಟ ನಡೆದಿತ್ತು. ಕಾಂಗ್ರೆಸ್ ಅವಧಿಯಲ್ಲೂ ನಡೆದಿದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯದ ಪರಿಣಾಮವೇ ಪದೇ ಪದೇ ಬಾಂಬ್ ಸ್ಫೋಟಕ್ಕೆ ಕಾರಣ. ರಾಜ್ಯ ಸರ್ಕಾರದ ಬದಲು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ರಾಜ್ಯ ಸರ್ಕಾರ ಪೊಲೀಸರ ಕೈ ಕಟ್ಟಿಹಾಕಿದೆ. ಪೊಲೀಸರನ್ನು ಫ್ರೀಯಾಗಿ ತನಿಖೆಗೆ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯಾರ ಅನುಮತಿ ಪಡೆದು ಪರೀಕ್ಷೆ ಮಾಡಿದ್ದಾರೆ- ಖಾಸಗಿ ಎಫ್‌ಎಸ್‌ಎಲ್‌ ವರದಿಗೆ ಪರಮೇಶ್ವರ್‌ ಗರಂ

    ಪಾಕಿಸ್ತಾನ ಪರ ಘೋಷಣೆ ಕೂಗುವವರು ದೇಶದ ಪಾಲಿಗೆ ಕ್ಯಾನ್ಸರ್ ವೈರಸ್ ಇದ್ದಂತೆ. ಮೊದಲು ನಾಸಿರ್ ಹುಸೇನ್ ಮೇಲೆ ಕ್ರಮ ಕೈಗೊಳ್ಳಬೇಕು. ಭಟ್ಕಳಕ್ಕೆ ಪಾಕಿಸ್ತಾನದ ನಂಟಿದೆ ಎಂದು ಜಗನ್ನಾಥ ಶೆಟ್ಟಿ ಆಯೋಗ ವರದಿ ನೀಡಿತ್ತು. ವರದಿಯನ್ನು ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಒಪ್ಪಲಿಲ್ಲ. ಬಿಜೆಪಿ, ಕಾಂಗ್ರೆಸ್ ಗೆ ಹೆಚ್ಚು ವ್ಯತ್ಯಾಸವಿಲ್ಲ ಎಂದರು. ಇದನ್ನೂ ಓದಿ: ರಾಜಕೀಯ ಪ್ರವೇಶಕ್ಕೆ ಮಂಜುನಾಥ್ ಸಮ್ಮತಿ ಸೂಚಿಸುವುದಿಲ್ಲ: ಹೆಚ್‌ಡಿಡಿ ಅಚ್ಚರಿಯ ಹೇಳಿಕೆ

    ಜಾತಿ ಗಣತಿ ವರದಿಗೆ ವಿರೋಧವಿದೆ. ದೇಶದಲ್ಲಿ ಒಟ್ಟಾಗಿ ಸಾಗಬೇಕಿದೆ. ರಾಜಕೀಯ ಪಕ್ಷಗಳು ಸಮುದಾಯಗಳನ್ನು ಒಡೆದು ಆಳಲು ಈ ವರದಿ ಸಿದ್ದಪಡಿಸಿವೆ. ಇದೊಂದು ಅವೈಜ್ಞಾನಿಕ ವರದಿ ಎಂದರು.

    ದೇಶಕ್ಕೆ ಒಳಿತಾಗಬೇಕೆಂದರೆ ರಾಜ್ಯದ ಕೆಲ ಬಿಜೆಪಿ ನಾಯಕರು ಸ್ವಯಂ ನಿವೃತ್ತಿ ತೆಗೆದುಕೊಂಡು ಬೇರೆಯವರಿಗೆ ಮಾದರಿಯಾಗಲಿ. ಆದರೆ ನಿವೃತ್ತಿ ಆಗಬೇಕಾದವರ ಹೆಸರು ಬಹಿರಂಗವಾಗಿ ಹೇಳುವುದಿಲ್ಲ ಎಂದು ಹೇಳಿದರು.

  • ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ – ಎನ್‌ಐಎಗೆ ಕೇಸ್‌ ವರ್ಗಾವಣೆ

    ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ – ಎನ್‌ಐಎಗೆ ಕೇಸ್‌ ವರ್ಗಾವಣೆ

    ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್‌ ಬ್ಲಾಸ್ಟ್‌ ಪ್ರಕರಣ (Bomb Blast Case) ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವರ್ಗಾವಣೆಯಾಗಿದೆ.

    ಸೋಮವಾರ ಮಧ್ಯಾಹ್ನ ಎನ್‌ಐಎ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್‌ ದಾಖಲಿಸಿದ ಎನ್‌ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿಯಿಂದ 15+ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಫೈನಲ್

     

    ದೇಶದ ಒಳಗಡೆ ಯಾವುದೇ ಉಗ್ರ ಚಟುವಟಿಕೆ, ಬಾಂಬ್‌ ಸ್ಫೋಟದ ತನಿಖೆಯನ್ನು ಎನ್‌ಐಎ ವಹಿಸಿಕೊಳ್ಳುತ್ತದೆ. ಈ ಹಿಂದೆ ಬೇರೆ ರಾಜ್ಯದಲ್ಲಿ ಹಲವು ಪ್ರಕರಣಗಳಿಗೆ ಹೊಸ ಪ್ರಕರಣಗಳು ಸಾಮ್ಯತೆ ಮತ್ತು ಆರೋಪಿಗಳು ಭಾಗಿಯಾಗಿರುವುದರಿಂದ ಎನ್‌ಐಎ ಈ ಪ್ರಕರಣಗಳನ್ನು ಬೇಧಿಸುತ್ತದೆ. ಈ ಕಾರಣಕ್ಕೆ ರಾಜ್ಯಗಳು ಉಗ್ರ ಕೃತ್ಯದಂತಹ ಪ್ರಕರಣಗಳು ದಾಖಲಾದಾಗ ಅದನ್ನು ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎನ್‌ಐಎಗೆ ವರ್ಗಾಯಿಸುತ್ತದೆ. ಎಲ್ಲಾ ರಾಜ್ಯಗಳ ಗೃಹ ಇಲಾಖೆ ಎನ್‌ಐಎ ತನಿಖೆಗೆ ಸಹಕಾರ ನೀಡುತ್ತದೆ.

  • ಬೆಂಗ್ಳೂರಿನಲ್ಲಿ RSS ಮುಖಂಡನ ಹತ್ಯೆ; ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ದಕ್ಷಿಣ ಆಫ್ರಿಕಾದಲ್ಲಿ ಅರೆಸ್ಟ್‌

    ಬೆಂಗ್ಳೂರಿನಲ್ಲಿ RSS ಮುಖಂಡನ ಹತ್ಯೆ; ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ದಕ್ಷಿಣ ಆಫ್ರಿಕಾದಲ್ಲಿ ಅರೆಸ್ಟ್‌

    – ಬರೋಬ್ಬರಿ 8 ವರ್ಷಗಳ ಬಳಿಕ ಆರೋಪಿ ಬಂಧನ

    ನವದೆಹಲಿ/ಕೇಪ್‌ಟೌನ್‌: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮೋಸ್ಟ್‌ ವಾಂಟೆಡ್‌ ದರೋಡೆಕೋರರಲ್ಲಿ ಒಬ್ಬನಾದ ಮೊಹಮ್ಮದ್‌ ಗೌಸ್‌ ನಿಯಾಜಿನನ್ನ (Mohammed Gaus Niyazi) ದಕ್ಷಿಣ ಆಫ್ರಿಕಾದಲ್ಲಿ ಯಶಸ್ವಿಯಾಗಿ ಬಂಧಿಸಿದೆ. ಎನ್‌ಐಎ ಏಜೆನ್ಸಿಯು ನಿಯಾಜಿಯ ಪತ್ತೆಗಾಗಿ 5 ಲಕ್ಷ ರೂ.ಗಳ ಬಹುಮಾನ ಘೋಷಣೆ ಮಾಡಿತ್ತು ಎಂದು ಉನ್ನತ ಮೂಲಗಳು ತಿಳಿಸಿವೆ.

    ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ನಾಯಕ ಮೊಹಮ್ಮದ್ ಗೌಸ್ ನಿಯಾಜಿ, 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಎಂಬಾತನನ್ನ ಹತ್ಯೆಗೈದಿದ್ದ. ಘಟನೆ ನಂತರ ದೇಶದಿಂದ ಪಲಾಯನ ಮಾಡಿದ್ದ ನಿಯಾಜಿ, ವಿವಿಧ ದೇಶಗಳಲ್ಲಿ ತಲೆ ಮರೆಸಿಕೊಂಡಿದ್ದ ಎಂದು ಎನ್‌ಎಐ ಮೂಲಗಳು ಹೇಳಿವೆ. ಇದನ್ನೂ ಓದಿ: ರಾಜಕೀಯ ಕರ್ತವ್ಯದಿಂದ ನನ್ನನ್ನು ಮುಕ್ತಗೊಳಿಸಿ – ರಾಜಕೀಯ ನಿವೃತ್ತಿ ಸುಳಿವು ನೀಡಿದ ಗಂಭೀರ್‌

    ರುದ್ರೇಶ್‌ನನ್ನ ಹತ್ಯೆಗೈದಿದ್ದ ನಿಯಾಜಿ ವಿವಿಧ ದೇಶಗಳಲ್ಲಿ ತಲೆ ಮರೆಸಿಕೊಂಡಿದ್ದ. ತನಿಖೆಯ ಮುಂದಾಳತ್ವ ವಹಿಸಿದ್ದ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ (ATS)‌ ನಿಯಾಜಿಯ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಕೊನೆಗೆ ಆತ ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿರುವ ಬಗ್ಗೆ ಸುಳಿವು ಸಿಕ್ಕಿತು. ಕೂಡಲೇ ಈ ಮಾಹಿತಿಯನ್ನು ಕೇಂದ್ರದ ಭದ್ರತಾ ಏಜೆನ್ಸಿಗೆ ರವಾನಿಸಿತು. ನಂತರ ಎನ್‌ಐಎ ದಕ್ಷಿಣ ಆಫ್ರಿಕಾದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: ಪಾಕ್‌ ವಶದಲ್ಲಿದ್ದ ‘ಸಿಂಗಂ’ ವಿಂಗ್‌ ಕಮಾಂಡರ್‌ ತಾಯ್ನಾಡಿಗೆ ವಾಪಸ್‌ – ಭಾರತದ ಗೆಲುವಿಗೆ 5ರ ಸಂಭ್ರಮ

    ಆರೋಪಿ ನಿಯಾಜಿನನ್ನ ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಿದ ನಂತರ ತ್ವರಿತವಾಗಿ ಹಸ್ತಾಂತರ ಪ್ರಕ್ರಿಯೆ ಪ್ರಾರಂಭಿಸಲಾಯಿತು. ಸದ್ಯ ಆರೋಪಿಯನ್ನು ಮುಂಬೈಗೆ ಕರೆತರಲಾಗುತ್ತಿದ್ದು, ಮುಂಬೈನಲ್ಲೇ ವಿಚಾರಣೆ ನಡೆಸಲಾಗುತ್ತದೆ ಎಂದು ಎನ್‌ಐಎ ಅಧಿಕಾರಿ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: CAA ಉಲ್ಲೇಖವಿರೋ ಅಮಿತ್ ಶಾ, ರಾಜನಾಥ್ ಸಿಂಗ್ ಕಾರಿನ ನಂಬರ್ ಪ್ಲೇಟ್ ವೈರಲ್

  • ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು – 6 ಮಂದಿ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

    ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು – 6 ಮಂದಿ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸರಣಿ ಬಾಂಬ್‌ ಸ್ಫೋಟ (Serial Bomb Blast) ಮಾಡಲು ಸಂಚು ರೂಪಿಸಿದ್ದ 6 ಜನ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (NIA) ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.

    ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು (CCB Police) ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್‌ ಪತ್ತೆಯಾಗಿತ್ತು. ನಂತರ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು.

    ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ಉಗ್ರರಿಗೆ ಆಶ್ರಯ ಕೊಟ್ಟಿದ್ದವರಿಗೆ ಶುರುವಾಯ್ತು ಸಂಕಷ್ಟ

    ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್‌ಗಳು
    ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್‌ಗಳು

    ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ (BDDS) ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್‌ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ (Grenade) ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು. ಇದನ್ನೂ ಓದಿ: ದೇಶವನ್ನ ಇನ್ನೆಷ್ಟು ಭಾಗವಾಗಿ ಒಡೆಯುತ್ತೀರಿ: ಡಿ.ಕೆ.ಸುರೇಶ್‌ ಹೇಳಿಕೆಗೆ ಮೋದಿ ಕಿಡಿ

    ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ

    ಜುನೈದ್ ಕೊಡುವ ಮಾರ್ಗದರ್ಶನದಂತೆ ಸಿಲಿಕಾನ್ ಸಿಟಿಯಲ್ಲಿ ಶಂಕಿತರು ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು. ನಗರದಲ್ಲಿ 10ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿಕೊಂಡಿದ್ದರು. ಸಿಸಿಬಿ ಪೊಲೀಸರು ಎರಡು ಮೂರು ದಿನ ತಡ ಮಾಡಿದ್ದರೇ ಬೆಂಗಳೂರಿನ ಕೆಲವು ಕಡೆ ಸ್ಫೋಟಗೊಳಿಸಲು ತಯಾರಿ ಮಾಡಿಕೊಂಡಿದ್ದ ವಿಚಾರ ತನಿಖೆಯಿಂದ ಬಯಲಾಗಿತ್ತು.

  • ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಪ್ರಕರಣ – ಉಗ್ರರಿಗೆ ಆಶ್ರಯ ನೀಡಿದ್ದ ಅಪ್ರಾಪ್ತನ ಬಂಧನ

    ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಪ್ರಕರಣ – ಉಗ್ರರಿಗೆ ಆಶ್ರಯ ನೀಡಿದ್ದ ಅಪ್ರಾಪ್ತನ ಬಂಧನ

    ನವದೆಹಲಿ: ಕಳೆದ ವರ್ಷ ಜನವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಐವರು ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಆಪ್ರಾಪ್ತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.  ಆತನನ್ನು ಜಮ್ಮುವಿನ ಆರ್‌ಎಸ್‌ಪುರದ ಬಾಲಮಂದಿರದಲ್ಲಿ ಇರಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

    ಬಂಧಿತ ಅಪ್ರಾಪ್ತ, ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿದ್ದ ಆರೋಪಿಗಳಾದ ನಿಸಾರ್ ಅಹ್ಮದ್ ಅಲಿಯಾಸ್ ಹಾಜಿ ನಿಸಾರ್ ಮತ್ತು ಮುಷ್ತಾಕ್ ಹುಸೇನ್ ಅಲಿಯಾಸ್ ಚಾಚಾ ಎಂಬ ಇಬ್ಬರ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: 9,999 ವಜ್ರಗಳಿಂದ ರಾಮಮಂದಿರದ ಕಲಾಕೃತಿ ರಚಿಸಿದ ಕಲಾವಿದ!

    ಹಾಜಿ ನಿಸಾರ್ ಮತ್ತು ಚಾಚಾ ಈ ಇಬ್ಬರು ಆರೋಪಿಗಳು ಎರಡು ತಿಂಗಳಿಗೂ ಹೆಚ್ಚಿನ ಕಾಲ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು. ಅಲ್ಲದೇ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ನಿರ್ವಾಹಕರಾದ ಸೈಫುಲ್ಲಾ ಅಲಿಯಾಸ್ ಸಾಜಿದ್ ಜುಟ್ ಮತ್ತು ಅಬು ಕತಾಲ್ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಯೋತ್ಪಾದಕ ದಾಳಿ ನಡೆದ ಬಳಿಕ ಎನ್‍ಐಎ ಅಧಿಕಾರಿಗಳ ತಂಡ ಆರೋಪಿಗಳ ಪತ್ತೆಗೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ, ಪೂಂಚ್ ಮತ್ತು ರಿಯಾಸಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶದಲ್ಲಿ ಹಲವಾರು ತಿಂಗಳುಗಳ ಕಾಲ ಅಲ್ಲಿಯೇ ಬೀಡುಬಿಟ್ಟಿತ್ತು.

    2023ರ ಜ.1 ರಂದು ನಡೆದಿದ್ದ ಈ ಭಯೋತ್ಪಾದಕ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಸ್ಯಾಟಲೈಟ್ ಚಿತ್ರ ಬಿಡುಗಡೆ ಮಾಡಿದ ಇಸ್ರೋ

  • ಇಬ್ಬರು ಅಲ್‌ ಖೈದಾ ಉಗ್ರರಿಗೆ 7 ವರ್ಷ ಜೈಲು ಶಿಕ್ಷೆ

    ಇಬ್ಬರು ಅಲ್‌ ಖೈದಾ ಉಗ್ರರಿಗೆ 7 ವರ್ಷ ಜೈಲು ಶಿಕ್ಷೆ

    ಬೆಂಗಳೂರು: ಇಬ್ಬರು ಅಲ್‌ ಖೈದಾ (Al-Qaeda) ಉಗ್ರರಿಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ (NIA Special Court) 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಅಖ್ತರ್ ಹುಸೇನ್ ಲಷ್ಕರ್ ಮತ್ತು ಅಬ್ದುಲ್ ಅಲೀಂ ಮೊಂಡಲ್‌ಗೆ ಕೋರ್ಟ್‌ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. 2022ರ ಆಗಸ್ಟ್ 30ರಂದು ಪ್ರಕರಣ ದಾಖಲಾಗಿತ್ತು.

    ಇಬ್ಬರು ಉಗ್ರರು ವಿದೇಶದಲ್ಲಿರುವ ಹ್ಯಾಂಡ್ಲರ್‌ಗಳಿಂದ ಆನ್‌ಲೈನ್ ಮೂಲಕ ಮನ ಪರಿವರ್ತನೆಗೊಂಡು ಅಲ್‌ ಖೈದಾಗೆ ಹೊಸ ಯುವಕರನ್ನು ಸೇರ್ಪಡೆಗೊಳಿಸುತ್ತಿದ್ದರು. ಬಳಿಕ ಟೆಲಿಗ್ರಾಂ ಗ್ರೂಪ್‌ಗಳಿಗೆ ಸೇರಿಸಿ ಅಫ್ಘಾನಿಸ್ತಾನಕ್ಕೆ ತೆರಳಲು ಪ್ಲಾನ್ ಮಾಡುತ್ತಿದ್ದರು. ಇದನ್ನೂ ಓದಿ: ಮಂತ್ರಾಲಯದಲ್ಲಿ 2.95 ಕೋಟಿ ರೂ. ಕಾಣಿಕೆ ಸಂಗ್ರಹ

     

    ಅಸ್ಸಾಂ (Assam) ಮೂಲದ ಅಖ್ತರ್ ಹುಸೇನ್‍ನ್ನು ಸಿಸಿಬಿ ಪೊಲೀಸರು ಮೊದಲು ಬಂಧಿಸಿದ್ದರು. ಈತ ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ಕೆಲ ಯುವಕರೊಂದಿಗೆ ವಾಸ್ತವ್ಯ ಹೂಡಿದ್ದ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ.   ಇದನ್ನೂ ಓದಿ: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಲಿರುವ ಗಣ್ಯರಿಗೆ ದೊರೆಯಲಿದೆ ವಿಶೇಷ ಉಡುಗೊರೆ – ಏನಿದು ಸ್ಪೆಷಲ್ ಗಿಫ್ಟ್?

    10ನೇ ತರಗತಿ ಓದಿದ್ದ ಹುಸೇನ್ ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನೆ ನೀಡುತ್ತಿದ್ದ. ಸೋಷಿಯಲ್ ಮೀಡಿಯಾ ಬಳಸಿಕೊಂಡು ಭಾರತದಲ್ಲಿ ಗಲಭೆ ಎಬ್ಬಿಸುವುದು, ಬೆಂಗಳೂರಿನಲ್ಲಿ ಶಾಂತಿ ಹದಗೆಡಿಸುವುದೇ ಇವನ ಕೆಲಸವಾಗಿತ್ತು. ಬೆಂಗಳೂರು ಮತ್ತು ಬೇರೆ ಬೇರೆ ಜಿಲ್ಲೆಯ ಮಾಹಿತಿಯನ್ನು ಬೇರೆ ಸಂಘಟನೆಯ ಜೊತೆ ಹಂಚಿಕೊಳ್ಳುತ್ತಿದ್ದ.

    ಬೆಂಗಳೂರಿನ ಪ್ರಮುಖ ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಶಂಕಿತ ಸಂಚು ರೂಪಿಸುತ್ತಿದ್ದ. ವಿಧಾನಸೌಧದ ಬಳಿ ಇರುವ ಅತಿ ಹೆಚ್ಚು ವಿಐಪಿಗಳ ಬಂದು ಹೋಗುವ ಹೋಟೆಲ್ ಟಾರ್ಗೆಟ್ ಮಾಡಿದ್ದ ಈತ ಹಲವು ಬಾರಿ ಆ ಹೋಟೆಲ್ ಬಳಿ ಬಂದು ಹೋಗಿದ್ದ. ಶಂಕಿತ ಉಗ್ರನ ಚಲನವಲನದ ಬಗ್ಗೆ ಸಿಸಿಟಿವಿ ಹಾಗೂ ಟೆಕ್ನಿಕಲ್ ಸಾಕ್ಷ್ಯವನ್ನು ಪೊಲೀಸರು ಸಂಗ್ರಹಿಸಿದ್ದರು.

    ಅಲ್ ಖೈದಾ ಸಂಘಟನೆ ಜೊತೆ ನಿಕಟ ಸಂಪರ್ಕ ಹೊಂದಿದ್ದ ಈತ ದೊಡ್ಡ ಪ್ಲ್ಯಾನ್ ಮಾಡಿದ್ದ. ಈ ಬಗ್ಗೆ ತೆಲಂಗಾಣ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳು ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಐಬಿ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಈತನನ್ನು  ಸಿಸಿಬಿ ಪೊಲೀಸರು ಬಂಧಿಸಿದ್ದರು. ನಂತರ ಪ್ರಕರಣ ಎನ್‌ಐಎ ಹಸ್ತಾಂತರವಾಗಿತ್ತು.

     

  • NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!

    NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!

    ಬಳ್ಳಾರಿ: ಕಳೆದ 2 ದಿನಗಳ ಹಿಂದೆ ಗಣಿನಾಡು ಬಳ್ಳಾರಿಯಲ್ಲಿ (Ballary) ಎನ್‌ಐಎ (NIA) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಬಂಧನಕ್ಕೊಳಗಾದ ವಿದ್ಯಾರ್ಥಿಯ ಕತೆ ಕೇಳಿದರೆ ಒಂದು ಕ್ಷಣ ಬೆಚ್ಚಿಬೀಳೋದು ಗ್ಯಾರಂಟಿ. ಬಂಧನಕ್ಕೆ ಒಳಗಾದ ಸಮೀರ್ ಕಾಲೇಜು ವಿದ್ಯಾರ್ಥಿಯಾಗಿದ್ದು, ವ್ಯಾಸಂಗ ಮಾಡೋವಾಗಲೇ ಆತನಿಗೆ ಐಎಸ್‌ಐಎಸ್ (ISIS) ಸಂಪರ್ಕ ಇತ್ತು ಎನ್ನುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.

    ಎನ್‌ಐಎ ದಾಳಿಯಲ್ಲಿ ಬಳ್ಳಾರಿ ಮೂಲದ ಇಬ್ಬರನ್ನು ಬಂಧಿಸಿದ್ದು ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕಾಲೇಜಿನಲ್ಲಿ ವ್ಯಾಸಂಗ ಮಾಡೋವಾಗಲೇ ಆ ಯುವಕನಿಗಿರೋ ಸಂಪರ್ಕ ಮಾತ್ರ ಬೆಚ್ಚಿ ಬೀಳುವಂತಿದೆ. ಕೌಲ್ ಬಜಾರ್ ಪ್ರದೇಶ, ಜಾಗೃತಿ ನಗರ ಬ್ರೂಸ್ ಪೇಟೆ ಏರಿಯಾ ಸೇರಿ ಒಟ್ಟು 8 ಕಡೆ ದಾಳಿ ಮಾಡಲಾಗಿತ್ತು.

    ದಾಳಿಯಲ್ಲಿ ಸೈಯದ್ ಸಮೀರ್ ಮತ್ತು ಮೊಹಮ್ಮದ್ ಸುಲೇಮಾನ್ ಬಂಧಿಸಲಾಗಿತ್ತು. ಮೊಹಮ್ಮದ್ ಸುಲೇಮಾನ್ ಉಗ್ರ ಸಂಘಟನೆ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ. ಇದರಲ್ಲಿ ಸೈಯದ್ ಸಮೀರ್ 20ರ ಹರೆಯದ ಬಿಸಿಎ ವಿದ್ಯಾರ್ಥಿ. ಬಳ್ಳಾರಿಯ ಕಾಲೇಜೊಂದರಲ್ಲಿ ಬಿಸಿಎ 3ನೇ ಸೆಮಿಸ್ಟರ್ ಓದುತ್ತಿದ್ದಾನೆ. ಮುಸ್ಲಿಂ ಬಹುಪತ್ನಿತ್ವ ಬಗ್ಗೆ ಮತ್ತು ಮೊಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿದ ಉಪನ್ಯಾಸಕರ ವಿರುದ್ಧ ಸಮೀರ್ ತಿರುಗಿ ಬಿದ್ದಿದ್ದ. ಇದನ್ನೂ ಓದಿ: ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

    ಪ್ರಾಧ್ಯಾಪಕರ ವಿರುದ್ಧ ಕಳೆದ ತಿಂಗಳು ಈತ ದೊಡ್ಡ ಪ್ರತಿಭಟನೆ ಮಾಡಿದ್ದ. ಕಾಲೇಜು ಮುಂದೆ ಅಷ್ಟೇ ಅಲ್ಲದೇ ಎಸ್‌ಪಿ ಕಚೇರಿ ಮುಂದೆ ಹೈಡ್ರಾಮಾ ಮಾಡಿದ್ದ. ನೂರಾರು ಜನರನ್ನು ಸೇರಿಸಿ ಅಂದು ರಾತ್ರಿ ಕೌಲ್ ಬಜಾರ್ ಠಾಣೆ ಮುಂದೆ ಪ್ರತಿಭಟನೆ ಮಾಡಿದ್ದ. ಇವನ ವರ್ತನೆಯಿಂದ ಅಂದು ಪೊಲೀಸರೇ ಒಂದು ಕ್ಷಣ ಹೌಹಾರಿದ್ದರು. ಆದರೆ ಇದೀಗ ಎನ್‌ಐಎ ಅಧಿಕಾರಿಗಳು ಬಂಧಿಸಿರೋದು ಪೊಲೀಸರಿಗೂ ಅಚ್ಚರಿ ಮೂಡಿಸಿದೆ.

    ಬಳ್ಳಾರಿಯ ಜಾಗೃತಿ ನಗರ ನಿವಾಸಿಯಾಗಿರುವ ಸಮೀರ್ ತಂದೆ-ತಾಯಿಯವರು ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಮತ್ತೊಬ್ಬ ಆರೋಪಿ ಮೊಹಮ್ಮದ್ ಸುಲೇಮಾನ್ ನಿಷೇಧಿತ ಸಂಘಟನೆ ಪಿಎಫ್‌ಐನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ. ಈತ ಕೌಲ್ ಬಜಾರ್ ಮುಖ್ಯ ರಸ್ತೆಯಲ್ಲಿ ಬಟ್ಟೆ ಅಂಗಡಿ ವ್ಯಾಪಾರ ಮಾಡುತ್ತಿದ್ದ. ಸುಲೇಮಾನ್ ಸಹಚರನಾಗಿ ಕೆಲಸ ಮಾಡುತ್ತಿದ್ದ ಸಮೀರ್ ವಿಚಾರಣೆಗೆ ಎನ್‌ಐಎ ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಉಪರಾಷ್ಟ್ರಪತಿಗೆ ಅವಮಾನಿಸಿದ್ದನ್ನು ನೋಡಿ ದಿಗ್ಭ್ರಮೆಗೊಂಡಿದ್ದೇನೆ: ಮುರ್ಮು ಬೇಸರ

  • ಬಾಂಬ್ ಸ್ಫೋಟಕ್ಕೆ ಮುಂದಾಗಿದ್ದ ಬಳ್ಳಾರಿ ಐಸಿಸ್‌ ಟೀಂ – ದಾಳಿಯಲ್ಲಿ ಏನು ಸಿಕ್ಕಿದೆ?

    ಬಾಂಬ್ ಸ್ಫೋಟಕ್ಕೆ ಮುಂದಾಗಿದ್ದ ಬಳ್ಳಾರಿ ಐಸಿಸ್‌ ಟೀಂ – ದಾಳಿಯಲ್ಲಿ ಏನು ಸಿಕ್ಕಿದೆ?

    – ಕಾಲೇಜು ವಿದ್ಯಾರ್ಥಿಗಳ ತಲೆಕೆಡಿಸಿ ತಂಡಕ್ಕೆ ಸೇರ್ಪಡೆ

    ನವದೆಹಲಿ/ಬಳ್ಳಾರಿ: ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಗ್ಯಾಂಗ್ ರಾಷ್ಟ್ರೀಯ ತನಿಖಾ ದಳ(NIA) ಬಲೆಗೆ ಬಿದ್ದಿದೆ. ಐಇಡಿ (IED) ಸ್ಫೋಟಿಸಲು ಬೇಕಾಗಿದ್ದ ವಸ್ತುಗಳನ್ನು ಮನೆಯಲ್ಲಿಯೇ ಇಟ್ಟುಕೊಂಡಿದ್ದ ವಿಚಾರ ದಾಳಿ ವೇಳೆ ಬಯಲಾಗಿದೆ.

    ಐಸಿಸ್‌ನಿಂದ ಪ್ರೇರಣೆಗೊಂಡಿದ್ದ ಬಳ್ಳಾರಿ ಯುವಕ ಸುಲೈಮನ್ ಮತ್ತು ಆತನ ಸಹಚರನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಐಸಿಸ್‌ ಮಾಡ್ಯೂಲ್‌ (ISIS Ballari Module) ಹೆಸರಿನಿಂದ ಗುರುತಿಸಿಕೊಂಡಿದ್ದ ಈ ತಂಡ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ ತಮ್ಮ ತಂಡಕ್ಕೆ ಸೇರಿಸಿಕೊಳ್ಳುತ್ತಿದ್ದರು.

    ಕಳೆದ 5 ವರ್ಷದಿಂದ ಪಿಎಫ್‌ಐ (PFI) ಸಂಘಟನೆಯಲ್ಲಿ ಇದ್ದ ಬಳ್ಳಾರಿ ಮೂಲದ ಸುಲೈಮನ್ ಬಳ್ಳಾರಿ ಘಟಕವನ್ನು ಆರಂಭಿಸಿದ್ದ. ಈತನಿಗೆ ಬಳ್ಳಾರಿಯ ಸೈಯ್ಯದ್‌ ಸಮೀರ್‌ ಸಹಕಾರ ನೀಡುತ್ತಿದ್ದ. ಬೆಂಗಳೂರು ಮತ್ತು ಬಳ್ಳಾರಿ, ಉ.ಕರ್ನಾಟಕದಲ್ಲಿ ಬಾಂಬ್ ಸ್ಫೋಟಕ್ಕೆ ಇವರು ಪ್ಲ್ಯಾನ್‌ ಮಾಡುತ್ತಿದ್ದರು.

    ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಜಿಹಾದ್‌ಗೆ ಯಾರು ಗಮನ ಕೊಡುತ್ತಾರೋ ಅವರನ್ನೇ ಬಳಸಿಕೊಳ್ಳುತ್ತಿದ್ದರು. ಪಾಕಿಸ್ತಾನ, ಇರಾನ್, ಇರಾಕ್ ಪ್ರವಾಸದ ಬಳಿಕ ಜಿಹಾದಿಗಳನ್ನಾಗಿ ಮಾಡಲು ಸಂಚು ರೂಪಿಸಿದ್ದರು.  ಇದನ್ನೂ ಓದಿ: ಬೆಂಗಳೂರು ಉಗ್ರರ ಪ್ರಯೋಗಾಲಯ ಆಗದಿರಲಿ: ಸರ್ಕಾರಕ್ಕೆ ಯತ್ನಾಳ್‌ ಎಚ್ಚರಿಕೆ

    ಬಂಧಿತರಿಂದ ಸಲ್ಫರ್‌, ಪೊಟಾಷಿಯಂ ನೈಟ್ರೇಟ್‌, ಗನ್‌ ಪೌಡರ್‌, ಸಕ್ಕರೆ, ಎಥೆನಾಲ್‌, ಹರಿತವಾದ ಆಯುಧಗಳು, ಹಣ, ರಹಸ್ಯ, ಮಾಹಿತಿಯ ದಾಖಲೆಗಳು, ಸ್ಮಾರ್ಟ್‌ಫೋನ್‌, ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

     

    ತನಿಖೆ ಚುರುಕು: ಬೆಂಗಳೂರಲ್ಲಿ ಎನ್‌ಐಎ ದಾಳಿ ವೇಳೆ ಸೋಡಿಯಂ ನೈಟ್ರೇಟ್ ಪತ್ತೆ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. 7 ಕೆಜಿ ಸೋಡಿಯಂ ನೈಟ್ರೇಟ್ ಮನೆಗೆ ತಂದಿದ್ದ ಸಮೀವುಲ್ಲಾಗೆ ಡ್ರಿಲ್ ಹೆಚ್ಚಾಗಿದೆ. ಸೋಡಿಯಂ ನೈಟ್ರೇಟ್ ಡೀಲಿಂಗ್ ಹಿಂದಿರೋ ರಹಸ್ಯವನ್ನು ಎನ್‌ಐಎ ರಿವೀಲ್ ಮಾಡಿದೆ.

    ಹೈದರಾಬಾದ್‌ ಲಿಂಕ್‌ನಿಂದ ಎನ್‌ಐಎ ಬೆಂಗಳೂರು ಬ್ಯಾಡರಹಳ್ಳಿ ಕದ ತಟ್ಟಿತ್ತು. ಬ್ಯಾಡರಹಳ್ಳಿಯ ಬಾಡಿಗೆ ಮನೆಯಲ್ಲಿ ಸಮೀವುಲ್ಲಾ ಸೋಡಿಯಂ ನೈಟ್ರೇಟ್ ತಂದಿಟ್ಟುಕೊಂಡಿದ್ದ. ಸಮೀವುಲ್ಲಾ ಬಳ್ಳಾರಿಯವನಾಗಿದ್ದು ಎಲ್‌ಎಲ್‌ಬಿ ಪದವೀಧರ. ಸದ್ಯ ಸಮೀವುಲ್ಲಾ ರೂಮ್‌ಮೆಟ್‌ಗಳಾದ ಮುನಿರುದ್ದೀನ್, ಮಿಸ್ಬಾ ಹಾಗೂ ಅಲ್ತಾಫ್ ಸಹ ವಿಚಾರಣೆ ನಡೆಸಲಾಗುತ್ತಿದೆ. ಅರೆಸ್ಟ್ ಆದ ಶಂಕಿತರೆಲ್ಲರೂ ಬಳ್ಳಾರಿ ಮೂಲದ ಯುವಕರಾಗಿದ್ದಾರೆ. ಈ ಗ್ಯಾಂಗ್ ಐಇಡಿ ಸ್ಫೋಟ ಮಾಡಲು ತಯಾರಿ ನಡೆಸಿತ್ತಾ ಎಂಬ ಅನುಮಾನ ಬಂದಿದೆ.

     

  • ಬೆಂಗ್ಳೂರಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ಸೀಜ್ – ಎನ್‍ಐಎಯಿಂದ 8 ಮಂದಿ ಅರೆಸ್ಟ್

    ಬೆಂಗ್ಳೂರಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ಸೀಜ್ – ಎನ್‍ಐಎಯಿಂದ 8 ಮಂದಿ ಅರೆಸ್ಟ್

    ಬೆಂಗಳೂರು: ಮನೆಯೊಂದರಲ್ಲಿ ಸಂಗ್ರಹಿಸಿದ್ದ ಸ್ಫೋಟಕ ತಯಾರಿಕೆಯಲ್ಲಿ ಬಳಸುವ ಸೋಡಿಯಂ ನೈಟ್ರೇಟ್‍ನ್ನು (Sodium Nitrate) ಎನ್‍ಐಎ (NIA) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸೋಡಿಯಂ ನೈಟ್ರೇಟ್‍ನ್ನು ಅಡಗಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

    ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕೃತಿ ನಗರದ ಸಂಪತ್ ಎಂಬವರ ಮನೆಯಲ್ಲಿ ಬಾಡಿಗೆಗಿದ್ದ ಶಮಿವುಲ್ಲಾ ಹಾಗೂ ಅಲ್ತಾಫ್, ಮಿಸ್ಬಾ ಹಾಗೂ ಮುನಿರುದ್ದೀನ್ ಸೋಡಿಯಂ ನೈಟ್ರೇಟ್ ಸಂಗ್ರಹಿಸಿದ್ದರು ಎಂದು ತಿಳಿದು ಬಂದಿದೆ. ಶಮಿವುಲ್ಲಾ ಎಲ್‍ಎಲ್‍ಬಿ ಪದವೀಧರನಾಗಿದ್ದು, ಅಲ್ತಾಫ್ ಪೀಣ್ಯದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮುನಿರುದ್ದೀನ್ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದು, ಮಿಸ್ಬಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇವರನ್ನು ಎನ್‍ಐಎ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: 5000 ಅಮೆರಿಕನ್‌ ಡೈಮಂಡ್‌, ಬೆಳ್ಳಿಯಲ್ಲಿ ಅರಳಿದ ʼಅಯೋಧ್ಯೆ ರಾಮಮಂದಿರʼ ನೆಕ್ಲೆಸ್‌

    ಮುಂಜಾನೆಯಿಂದಲೇ ಬಳ್ಳಾರಿಯಲ್ಲಿ ಕಾರ್ಯಾಚರಣೆ ಆರಂಭಿಸಿದ್ದ 9 ಎನ್‍ಐಎ ತಂಡಗಳು ನಿಷೇಧಿತ ಪಿಎಫ್‍ಐನ 7 ಮಂದಿಯ ಮನೆಗಳ ಮೇಲೆ ದಾಳಿ ನಡೆಸಿದೆ. ಬಳ್ಳಾರಿಯ ಮಾಜಿ ಪಿಎಫ್‍ಐ ಪ್ರಧಾನ ಕಾರ್ಯದರ್ಶಿ ಸುಲೇಮಾನ್, ನಿಖಿಲ್ @ ಸೂಫಿಯಾನ್, ಇಜಾಜ್ ಅಹ್ಮದ್, ತಬ್ರೇಜ್ ಮತ್ತು ಮುಜಾಮಿಲ್ ಎಂಬವರ ಮನೆ ಮೇಲೆ ಸಹ ದಾಳಿ ನಡೆಸಿದ್ದು, 8 ಜನರನ್ನು ಬಂಧಿಸಲಾಗಿದೆ.

    ಸುಲೇಮಾನ್ ಅಫ್ಘಾನಿಸ್ತಾನಕ್ಕೆ ಹೋಗಿ ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡಲು ಯೋಜನೆ ರೂಪಿಸಿರುವುದು ತನಿಖೆ ವೇಳೆ ತಿಳಿದು ಬಂದಿದೆ.

    ಇತ್ತೀಚೆಗೆ ಹೈದ್ರಬಾದ್‍ನಲ್ಲಿ ಯುಎಪಿಎ ಹಾಗೂ ಕ್ರಿಮಿನಲ್ ಸಂಚಿನ ಪ್ರಕರಣ ದಾಖಲಿಸಿದ್ದ ಎನ್‍ಐಎ ಅಧಿಕಾರಿಗಳು ಶಂಕಿತರನ್ನು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಪ್ರಕರಣದಲ್ಲಿ ರಾಜ್ಯದ ಲಿಂಕ್ ಇರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ದೇಶಾದ್ಯಂತ ಎನ್‍ಐಎ ಅಧಿಕಾರಿಗಳು 41 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣ – ಶಾಲೆಗೆ ಕೇಂದ್ರ ಸಚಿವ ನಾರಾಯಣಸ್ವಾಮಿ, ಆರ್‌.ಅಶೋಕ್‌ ಭೇಟಿ