ಮಹಾರಾಷ್ಟ್ರ, ಗುಜರಾತ್ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಐಸಿಸ್ ಮೂಲಕ ಪ್ರಾಯೋಜಿತ ಪಿತೂರಿಯಲ್ಲಿ ಇಬ್ಬರೂ ತೊಡಗಿದ್ದರು. ತನಿಖೆಯಲ್ಲಿ ಈ ಬಂಧನವು ಪ್ರಮುಖ ಹಂತವೆಂದು ಪರಿಗಣಿಸಲಾಗಿದೆ.
ಎನ್ಐಎ ಪ್ರಕಾರ, ಆರೋಪಿಗಳು ಐಇಡಿಗಳಿಗಾಗಿ ಕಾರ್ಯಾಗಾರಗಳನ್ನು ಆಯೋಜಿಸುವುದು, ಗುಂಡು ಹಾರಿಸುವ ಅಭ್ಯಾಸಕ್ಕಾಗಿ ಸ್ಥಳಗಳನ್ನು ಹುಡುಕುವುದು ಮತ್ತು ಕಾಡುಗಳಲ್ಲಿ ಅಡಗಿಕೊಳ್ಳುವುದು, ಹಾಗೆಯೇ ಸಶಸ್ತ್ರ ದರೋಡೆ ಮತ್ತು ಕಳ್ಳತನದ ಮೂಲಕ ಹಣವನ್ನು ಸಂಗ್ರಹಿಸುವುದು ಮುಂತಾದ ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಪಾಕ್ಗೆ ಡ್ರೋನ್ ಸಪ್ಲೈ ಮಾಡಿದ ಟರ್ಕಿಗೆ ಕಂಟಕ – ಟರ್ಕಿ ಮಾರ್ಬಲ್ಗೆ ಬೆಂಗಳೂರಲ್ಲಿ ಬಹಿಷ್ಕಾರ
ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ‘ದಿಯಾಪರ್ವಾಲಾ’ ಪುಣೆಯ ಕೊಂಡವದಲ್ಲಿರುವ ಮಿತಾನಗರ ನಿವಾಸಿಯಾಗಿದ್ದರೆ, ತಲ್ಹಾ ಲಿಯಾಕತ್ ಖಾನ್ ವನ್ವಾಡಿ (ಪುಣೆ)ಯಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಸ್ವಲ್ಪ ಸಮಯದಿಂದ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ, ಎನ್ಐಎ 3 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.
ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(NIA) ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Parameshwara) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎಗೆ ವಹಿಸಲು ಬಿಜೆಪಿ ನಾಯಕರು (BJP Leaders) ಹೇಳುತ್ತಿರುವುದು ಅವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಎಂಟು ಜನರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ ಅದರ ಅಗತ್ಯ ಇಲ್ಲ ಎಂದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರ ಬಗ್ಗೆ ಮಾತಾಡಿದ ಪರಮೇಶ್ವರ್, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ ನಾವು ಹಾಗೂ ಭೇಟಿ ಕೊಟ್ಟಿಲ್ಲ. ಆದರೆ ಸುಹಾಸ್ ಶೆಟ್ಟಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಪರಮೇಶ್ವರ್ ಭರವಸೆ ನೀಡಿದರು.
ಇದು ಪ್ರತೀಕಾರಕ್ಕೆ ನಡೆದಿದೆಯಾ ಇಲ್ವಾ ಎನ್ನುವುದು ಗೊತ್ತಿಲ್ಲ. ಏನೇ ಕಾರಣ ಇದ್ದರೂ ತನಿಖೆ ನಡೆಸಿದ ಮೇಲೆ ಗೊತ್ತಾಗುತ್ತದೆ. ನಾವು ಊಹೆ ಮಾಡಿ ಇದೇ ಕಾರಣ ಅಂತ ಹೇಳಲು ಬರುವುದಿಲ್ಲ. ತನಿಖೆ ಮುಗಿಯೋವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದರು.
ಮಂಗಳೂರು: ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ನಡೆದಿದೆ. ಮಗನ ಸಾವಿನಿಂದ ಕಂಗೆಟ್ಟಿರುವ ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣದ ತನಿಖೆಯನ್ನು ಎನ್ಐಎಗೆ (NIA) ನೀಡುವಂತೆ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಪ್ರಕರಣ ಭೇದಿಸಿರುವ ಮಂಗಳೂರಿನ ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಳಿಕ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದು
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ನಡೆಸಿದ ಎಲ್ಲಾ ಆರೋಪಿಗಳಿಗೆ ಮರಣದಂಡನೆ ನೀಡಬೇಕೆಂದು ತಾಯಿ ಸುಲೋಚನ ಶೆಟ್ಟಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ನಮಗೆ ನಂಬಿಕೆ ಇಲ್ಲ. ಹೀಗಾಗಿ ಎನ್ಐಎ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಮ್ಮ ಮಗನಿಗೆ ಪೊಲೀಸರು ತೊಂದರೆ ಕೊಟ್ಟಿದ್ದಾರೆ. ಈ ರೀತಿ ಆಗಲು ಬಜ್ಪೆ ಪೊಲೀಸರೇ ಕಾರಣ, ಅವರೂ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ. ಕೆಲ ದಿನಗಳಿಂದ ಪೊಲೀಸರು ಕಿರುಕುಳ ಹೆಚ್ಚಿಸಿದ್ದು, ವಾಹನವನ್ನು ತಪಾಸಣೆ ಮಾಡುತ್ತಿದ್ದರು. ಏನಾದರೂ ನಾವು ಹೇಳಿದಂತೆ ಕೇಳದಿದ್ದರೆ ಕಾಲಿಗೆ ಗುಂಡು ಹಾಕುತ್ತೇವೆ ಎಂದು ಹೆದರಿಸಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸತತ 10ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್ – ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ
ಇನ್ನು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮಾತನಾಡಿ, ಕೆಲವರು ನನ್ನ ಮಗನನ್ನು ರೌಡಿ ಶೀಟರ್ ಎಂದು ಬಿಂಬಿಸುತ್ತಿದ್ದಾರೆ. ಅವನು ರೌಡಿಶೀಟರ್ ಆಗಿದ್ದರೆ ನಮ್ಮ ಮನೆ ಹೀಗೆ ಇರುತ್ತಿತ್ತಾ? ನನ್ನ ಪತ್ನಿಗೆ ಕ್ಯಾನ್ಸರ್ ಚಿಕಿತ್ಸೆ ನೀಡಲು ಪರದಾಡುತ್ತಿದ್ದೇವೆ. ನಮ್ಮ ಹೆಸರಿನಲ್ಲಿ ಸಾಲ ಮಾಡಿ ಅವನ ವ್ಯವಹಾರಕ್ಕೆ ಸಹಾಯ ಮಾಡಿದ್ದೆ. ಮಂಗಳೂರಿನಲ್ಲಿ ಮರಳಿನ ವ್ಯವಹಾರ ಮಾಡುತ್ತಿದ್ದ. ಮನೆಗೆ ಆಧಾರ ಸ್ಥಂಭವಾಗಿದ್ದ ಮಗನನ್ನು ಕಳೆದುಕೊಂಡ ನಮಗೆ ನ್ಯಾಯ ಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗಾಯಕ ಸೋನು ನಿಗಮ್ ಮೇಲೆ ಎಫ್ಐಆರ್
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದಾಗಿ ಅವರ ಮನೆಯ ಆಧಾರ ಸ್ತಂಭವೇ ಕುಸಿದು ಬಿದ್ದಂತಾಗಿದೆ. ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿದ್ದ ಸುಹಾಸ್ ಶೆಟ್ಟಿ ತನ್ನ ಗುಡಿಸಲಿನಂತಿರುವ ಮನೆಯಲ್ಲೇ ತಂದೆ ತಾಯಿಯೊಂದಿಗೆ ಇದ್ದು, ಆದಷ್ಟು ಬೇಗ ಹೊಸ ಮನೆ ಕಟ್ಟಿ ಮದುವೆಯಾಗಬೇಕು ಎಂದುಕೊಂಡಿದ್ದ. ಆದರೆ ವಿಧಿಯಾಟವೇ ಬೇರೆ ಆಗಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬರ್ಬರವಾಗಿ ಹತ್ಯೆ ಆಗಿದ್ದಾನೆ. ಇದನ್ನೂ ಓದಿ: ಶಿವಾನಂದ್ ಪಾಟೀಲ್ ವಿಚಾರ ಹೈಕಮಾಂಡ್ ಗಮನಕ್ಕೆ ತರುತ್ತೇನೆ: ಎಂ.ಬಿ.ಪಾಟೀಲ್
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಮೃತ ಸುಹಾಸ್ ಶೆಟ್ಟಿ ತಾಯಿ ಆಗ್ರಹಿಸಿದ್ದು, ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಭಾರತ-ಪಾಕ್ ಉದ್ವಿಗ್ನತೆ ನಡುವೆ ಪಾಕ್ ರೇಂಜರ್ನನ್ನ ಬಂಧಿಸಿದ ಬಿಎಸ್ಎಫ್
ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ (Suhas Shetty Case) ಅನ್ನು ಎನ್ಐಎಗೆ ವಹಿಸಬೇಕು ಎಂದು ಮಾಜಿ ಸಿಎಂ ಸದಾನಂದ ಗೌಡ (Sadananda Gowda) ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಟೋಟಲ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿ. ಒಂದೆರೆಡು ಕೇಸ್ ಅಲ್ಲ. ಬ್ಯಾಂಕ್ ದರೋಡೆ ಸೇರಿ ಅನೇಕ ಕೇಸ್ ಆಗಿವೆ. ಸರ್ಕಾರ ಕೊಲೆ ಮಾಡೋ ಇಂತಹವರಿಗೆ ಬೆಂಬಲ ಕೊಡುವ ರಾಜನೀತಿ ಮಾಡುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆ ರೀತಿ ನೋಡುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಯುದ್ಧ ಮಾಡಬೇಡಿ ಎನ್ನುತ್ತಾರೆ. ಇವತ್ತು ಹೋಗಿ ಗೃಹ ಸಚಿವರು ಸಭೆ ಮಾಡುತ್ತಿದ್ದಾರೆ. ಕೇವಲ ಮುಸ್ಲಿಂ ಸಂಘಟನೆಗಳನ್ನು ಕರೆದು ಸಭೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರನ್ನು ಕರೆದಿಲ್ಲ. ಇದು ಯಾವ ಸರ್ಕಾರದ ನೀತಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್ ಕಮಿಷನರ್ ಹೇಳಿದ್ದೇನು?
ಸುಹಾಸ್ ಕೇಸ್ನಲ್ಲಿ 8 ಜನರ ಬಂಧನ ಆಗಿದೆ. ಆದರೆ ಅಶ್ರಫ್ ಕೊಲೆ ಕೇಸ್ನಲ್ಲಿ 25 ಜನ ಅರೆಸ್ಟ್ ಮಾಡ್ತಾರೆ. ಆದರೆ ಈ ಕೇಸ್ ನಲ್ಲಿ ಅಲ್ಲೇ 25 ಜನ ಇದ್ದರು,ಬುರ್ಕಾ ಹಾಕಿರೋ ವಿಡಿಯೋ ಇದ್ದರು ಅರೆಸ್ಟ್ ಆಗಿಲ್ಲ. ಈ ಸರ್ಕಾರ ಮೈನಾರಿಟಿ ಪರ ಅಂತ ತೋರಿಸಿಸೋಕೆ ಹೋಗ್ತಿದೆ.ಈ ಸರ್ಕಾರ ಈ ಕೇಸ್ ನಲ್ಲಿ ಏನು ಮಾಡೊಲ್ಲ. ಜನರು ಬೀದಿಗೆ ಇಳಿಯಬೇಕು. ಹೀಗಾಗಿ ಈ ಕೇಸ್ ಎನಐಎಗೆ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ
ಕರಾವಳಿ ಭಾಗದಲ್ಲಿ ಇಂತಹ ಕೇಸ್ ಹೆಚ್ಚು ಆಗುತ್ತಿದೆ. ಹೀಗಾಗಿ ಎನ್ಐಎ (NIA) ಬ್ರ್ಯಾಂಚ್ ಈ ಭಾಗದಲ್ಲಿ ಪ್ರಾರಂಭ ಮಾಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದರು. ಈ ಸರ್ಕಾರ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಕೇವಲ ಸಚಿವರು ಮೈನಾರಿಟಿ ಅವರನ್ನು ಕರೆದು ಸಭೆ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಕರೆದಿಲ್ಲ. ಇಂತಹ ಘಟನೆ ಆದರೆ ಆರ್ಎಸ್ಎಸ್, ಬಿಜೆಪಿ ಬಿಟ್ಟರೆ ಇವರು ಬೇರೆ ಯಾರ ಮೇಲೂ ಹೇಳಲ್ಲ. ಇಂತಹ ರಾಜನೀತಿ ಸಮಾಜಕ್ಕೆ ದೊಡ್ಡ ಮಾರಕ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!
ಕೊಲೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಮಾಡುವ ಪೋಸ್ಟರ್ ಹರಿದಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಹಾಸ್ ಶೆಟ್ಟಿಗೆ ರಕ್ಷಣೆ ಕೊಡಬೇಕಿತ್ತು. ಬೇರೆ ಕೇಸ್ನಲ್ಲಿ ಆರೋಪಿ ಆಗಿದ್ದ. ಸರ್ಕಾರ ಆತನ ಜೀವ ರಕ್ಷಣೆ ಮಾಡಬೇಕಿತ್ತು. ಇದನ್ನ ಮಾಡದೇ ಇರುವುದರಿಂದ ಇದಕ್ಕೆ ಒಂದು ಹಂತದಲ್ಲಿ ಸರ್ಕಾರದ ಲೋಪ ಇದೆ. ಒಲೈಕೆ ರಾಜಕೀಯ ಜಾಸ್ತಿ ಆಗುತ್ತಿದೆ. ಸರ್ಕಾರ ಇದನ್ನ ಬಿಡಬೇಕು. ಸರ್ಕಾರ ಒಂದು ಸಮುದಾಯಕ್ಕೆ ಬೆಂಬಲ ಕೊಡುತ್ತಿದೆ. ಕರಾವಳಿ ಭಾಗದಲ್ಲಿ ಎಲ್ಲಾ ಹಿಂದೂಗಳು ಬೀದಿಗೆ ಇಳಿದರೆ ಏನು ಆಗಬಹುದು. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸರ್ಕಾರ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ರಕ್ಷಣೆ ಕೊಡೋದಲ್ಲ ಬಹುಸಂಖ್ಯಾತರ ರಕ್ಷಣೆಯೂ ಮಾಡಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಲು ಕೇಂದ್ರದಿಂದ ಜಾತಿಗಣತಿ: ಸದಾನಂದಗೌಡ
ಅಲ್ಪಸಂಖ್ಯಾತರಿಂದ ಕಾಂಗ್ರೆಸ್ 15 ಸೀಟು ಗೆದ್ದಿರಬಹುದು. ಉಳಿದ ಸೀಟು ಯಾರಿಂದ ಗೆದ್ದಿರಿ. ಜೆಡಿಎಸ್ ಈಗ ಎನ್ಡಿಎ ಜೊತೆ ಬಂದಿದೆ. ಅವರ ಜೊತೆ ಇದ್ದ ಅಲ್ಪಸಂಖ್ಯಾತರ ಮತಗಳ ಒಲೈಕೆ ಮಾಡೋಣ ಎಂದು ಹೋಗುತ್ತಿದ್ದಾರೆ. ಕ್ರಿಶ್ಚಿಯನ್ನರು ಕರಾವಳಿ ಭಾಗದಲ್ಲಿ ಇದ್ದಾರೆ. ಅವರು ಹೀಗೆ ಮಾಡುತ್ತಾರೆ. ಕಾಂಗ್ರೆಸ್ ಅವರು ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲಾ ದುರ್ಯೋಧನನ ಪಾತ್ರವೇ ಎಂದು ಗುಡುಗಿದರು. ಇದನ್ನೂ ಓದಿ: ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ – ಸದಾನಂದಗೌಡ
– ಪಹಲ್ಗಾಮ್ ಜೊತೆಗೆ ನಾಲ್ಕು ತಾಣಗಳಲ್ಲಿ ದಾಳಿಗೆ ಹೊಂಚು ಹಾಕಿದ್ದ ಭಯೋತ್ಪಾದಕರು
ನವದೆಹಲಿ: ಪಹಲ್ಗಾಮ್ನಲ್ಲಿ ಉಗ್ರರ ದಾಳಿ (Pahalgam Terror Attack) ತನಿಖೆಗಿಳಿದಿರುವ ತನಿಖಾ ಸಂಸ್ಥೆಗಳು ಹಲವಾರು ಅಚ್ಚರಿದಾಯಕ ಅಂಶಗಳನ್ನು ಬಹಿರಂಗಪಡಿಸಿವೆ. ಭಯೋತ್ಪಾದಕರು ಪಹಲ್ಗಾಮ್ ಜೊತೆ ಇನ್ನೂ ಮೂರು ತಾಣಗಳನ್ನು ಟಾರ್ಗೆಟ್ ಮಾಡಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ.
ಏಪ್ರಿಲ್ 22 ರಂದು 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯನ್ನು ನಡೆಸಿದ ಭಯೋತ್ಪಾದಕರು ಘಟನೆಗೆ ಎರಡು ದಿನಗಳ ಮೊದಲೇ ಬೈಸರನ್ ಕಣಿವೆಯಲ್ಲಿ ಇದ್ದರು ಎಂದು ಮೂಲಗಳು ತಿಳಿಸಿವೆ. ಬೈಸರನ್ ವ್ಯಾಲಿಯಲ್ಲಿ ದಾಳಿಗೂ ಮುನ್ನ ಉಗ್ರರು ಪರಿಶೀಲನೆ ನಡೆಸಿದ್ದರು. ದಾಳಿಗೆ ಪಕ್ಕಾ ಪ್ಲ್ಯಾನ್ ಮಾಡಿದ್ದರು ಎಂಬ ವಿಚಾರವನ್ನು ದಾಳಿಗೆ ಸಂಬಂಧಿಸಿದಂತೆ ಬಂಧಿತ ಓವರ್ ಗ್ರೌಂಡ್ ವರ್ಕರ್ (OGW) ಗಳಲ್ಲಿ ಒಬ್ಬನಾದ ಸ್ಥಳೀಯ ವ್ಯಕ್ತಿ ಬಾಯ್ಬಿಟ್ಟಿದ್ದಾನೆ. ಈತ ಉಗ್ರರಿಗೆ ಸಹಾಯ ಮಾಡಿದ್ದ. ಇದನ್ನೂ ಓದಿ: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್
ಆಯ್ಕೆ 4, ಟಾರ್ಗೆಟ್ 1
ಉಗ್ರರು ಪಹಲ್ಗಾಮ್ ಬೈಸರನ್ ವ್ಯಾಲಿ ಜೊತೆಗೆ ಅರು ವ್ಯಾಲಿ, ಸ್ಥಳೀಯ ಅಮ್ಯೂಸ್ ಮೆಂಟ್ ಪಾರ್ಕ್, ಬೇತಾಬ್ ವ್ಯಾಲಿ (ಪುಣೆ ವ್ಯಕ್ತಿಯ ಮಗಳು ರೀಲ್ಸ್ ಮಾಡಿದ್ದ ಜಾಗ)ಯನ್ನೂ ದಾಳಿಗೆ ಗುರಿಯಾಗಿಸಿದ್ದರು. ಆದರೆ, ಕೊನೆಗೆ ಪಹಲ್ಗಾಮ್ನಲ್ಲಿ ದಾಳಿ ನಡೆಸಿದ್ದಾರೆ.
ಸ್ಥಳೀಯ 20 ಮಂದಿಯು ಉಗ್ರರಿಗೆ ಸಹಾಯ ಮಾಡಿದ್ದಾರೆ. ಇವರಲ್ಲಿ ಕೆಲವರನ್ನು ಬಂಧಿಸಿರುವ ಎನ್ಐಎ ಇನ್ನೂ ಕೆಲ ಶಂಕಿತರ ಮೇಲೆ ಕಣ್ಗಾವಲು ಇರಿಸಿದೆ. ದಾಳಿಗೂ ಮುನ್ನ ಈ ಏರಿಯಾದಲ್ಲಿ ಮೂರು ಸ್ಯಾಟಲೈಟ್ ಫೋನ್ಗಳ ಬಳಕೆಯಾಗಿವೆ. ಇದರಲ್ಲಿ 2 ಫೋನ್ಗಳ ಸಿಗ್ನಲ್ ಟ್ರೇಸ್ ಮಾಡುವಲ್ಲಿ ತನಿಖಾ ತಂಡ ಯಶಸ್ವಿಯಾಗಿದೆ.
ನವದೆಹಲಿ: ಪಹಲ್ಗಾಮ್ನಲ್ಲಿ ದಾಳಿ (Pahalgam Terror Attack) ನಡೆಸಿದ ಉಗ್ರರು ಹಿಂದೆಯೇ ಬಂದು ನೆಲೆಸಿದ್ದರು ಎನ್ನುವುದಕ್ಕೆ ಪುಣೆ ಕುಟುಂಬವೊಂದರ (Pune Family) ರೀಲ್ಸ್ನಲ್ಲಿ ಸಾಕ್ಷಿ ಸಿಕ್ಕಿದೆ.
ಪಹಲ್ಗಾಮ್ನಿಂದ ಏಳೂವರೆ ಕಿ.ಮೀ. ದೂರದ ಬೇತಾಬ್ ವ್ಯಾಲಿಯಲ್ಲಿ ಮಧ್ಯಾಹ್ನ 2:30ಕ್ಕೆ ಇಬ್ಬರು ಉಗ್ರರು ನಡೆದಾಡಿಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಪುಣೆ ವ್ಯಕ್ತಿ ಸಲ್ಲಿಸಿರುವ ವಿಡಿಯೋವನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಈಗ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಉಗ್ರರ ದಾಳಿ ಹಿಂದೆ ಪಾಕ್, ಐಎಸ್ಐ ನಂಟು – ಪಾಕ್ ಪ್ಯಾರಾ ಕಮಾಂಡೋ ಆಗಿದ್ದ ಹಾಶೀಮ್ ಮೂಸಾ!
ಪುಣೆಯ ಸಾಮಾಜಿಕ ಕಾರ್ಯಕರ್ತ ಶ್ರೀಜಿತ್ ರಮೇಶನ್ ಅವರು ಮಾತನಾಡಿ, ಏಪ್ರಿಲ್ 18ರಂದು ನಾವು ಪಹಲ್ಗಾಮ್ಗೆ ತೆರಳಿದ್ದೆವು. `ಮಿನಿ ಸ್ವಿಟ್ಜರ್ಲ್ಯಾಂಡ್’ ಬೈಸರನ್ ಬಳಿಕ ಪಹಲ್ಗಾಮ್ನಿಂದ ಏಳೂವರೆ ಕಿ.ಮೀ. ದೂರದ ಬೇತಾಬ್ ವ್ಯಾಲಿಗೆ ಹೋಗಿದ್ದೆವು. ಅಲ್ಲಿ ನನ್ನ 6 ವರ್ಷದ ಮಗಳು ರೀಲ್ಸ್ ಮಾಡುತ್ತಿದ್ದನ್ನು ನಾನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದೆ. ಪ್ರವಾಸ ಮುಗಿಸಿ ವಾಪಸ್ ಮನೆಗೆ ಬಂದಾ ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ತಿಳಿಯಿತು. ನಾಲ್ವರು ಉಗ್ರರ ಫೋಟೋ ಬಿಡುಗಡೆ ಮಾಡಿದ್ದನ್ನು ನೋಡಿದೆವು. ಆ ಫೋಟೋದಲ್ಲಿದ್ದ ಇಬ್ಬರ ಮುಖವನ್ನು ನೋಡಿದಂತೆ ಇದೆ. ನಮ್ಮ ರೀಲ್ಸ್ನಲ್ಲಿ ಹಿಂದುಗಡೆ ನಡೆದುಕೊಂಡು ಹೋಗುತ್ತಿದ್ದ ವಿಡಿಯೋಗೆ ಹೋಲಿಕೆ ಮಾಡಿದಾಗ ಸಾಮ್ಯತೆ ಕಂಡು ಬಂತು. ಹಾಗಾಗಿ ದೆಹಲಿ ಎನ್ಐಎಗೆ ವಿಡಿಯೋ ಕಳುಹಿಸಿಕೊಟ್ಟಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಉಗ್ರರು ಗುಂಡು ಹಾರಿಸುವ ಹೊತ್ತಲ್ಲಿ 3 ಬಾರಿ ‘ಅಲ್ಲಾಹು ಅಕ್ಬರ್’ ಅಂತ ಕೂಗಿದ ಜಿಪ್ಲೈನ್ ಆಪರೇಟರ್
VIDEO | Here’s what a resident of Pune, Srijit Rameshan, said as he captured the terrorists of the Pahalgam attack two days before the attack.
“The attack happened on April 22, but we were in the valley on April 18. We were shooting reels there, and two of the suspects passed… pic.twitter.com/ihMoCXgdp4
ಶ್ರೀನಗರ: ಪಹಲ್ಗಾಮ್ನಲ್ಲಿ (Pahalgam Terrorist Attack) ನಡೆದ ಭಯೋತ್ಪಾದಕ ದಾಳಿಯ ಕುರಿತು ಬೆಚ್ಚಿ ಬೀಳಿಸುವ ಅಂಶವೊಂದು ಎನ್ಐಎ (NIA) ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಏ.22 ರಂದು ಪಹಲ್ಗಾಮ್ನ ಬೈಸರನ್ ವ್ಯಾಲಿಯಲ್ಲಿ ನಡೆದ ಹಿಂದೂಗಳ ನರಮೇಧ, ಅದಕ್ಕೂ ಎರಡು ದಿನಗಳ ಹಿಂದೆಯೇ ನಡೆಯಬೇಕಿತ್ತು. ಏ.20ರಂದು ಭಯೋತ್ಪಾದಕರು ದಾಳಿಯ ಸಂಚು ರೂಪಿಸಿಕೊಂಡು ಸ್ಥಳಕ್ಕೆ ಬಂದಿದ್ದರು. ಆದರೆ ಅಂದು ಹವಾಮಾನದಲ್ಲಿ ತೀವ್ರ ಬದಲಾವಣೆ, ತೀವ್ರವಾದ ಮಳೆ ಮತ್ತು ಮಂಜು ಮುಸುಕಿದಂತಹ ವಾತಾವರಣವಿದ್ದ ಕಾರಣದಿಂದ ಯೋಜನೆಯನ್ನು ಮುಂದೂಡಿದ್ದರು ಎಂಬುದು ಎನ್ಐಎ ತನಿಖೆಯಲ್ಲಿ ಬಯಲಾಗಿದೆ.ಇದನ್ನೂ ಓದಿ: ಐಪಿಎಲ್ಗಾಗಿ ಮಟನ್, ಪಿಜ್ಜಾ ತ್ಯಜಿಸಿದ್ದ ವೈಭವ್ – ಡಯಟ್ ಸೀಕ್ರೆಟ್ ರಿವೀಲ್ ಮಾಡಿದ ಕೋಚ್
ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕರ ಟಾರ್ಗೆಟ್ ಬಹುದೊಡ್ಡದಾಗಿತ್ತು. ದೊಡ್ಡ ಬೇಟೆಗಾಗಿ ಕಾದು ಬಂದಿದ್ದ ಉಗ್ರರಿಗೆ ಅಂದು ಹವಾಮಾನ ಕೈಕೊಟ್ಟಿತ್ತು. ವಾತಾವರಣದಲ್ಲಿ ಹಠಾತ್ ಬದಲಾವಣೆಯಿಂದಾಗಿ ಬೈಸರನ್ ವ್ಯಾಲಿಯಲ್ಲಿ ಜನರ ಸಂಖ್ಯೆ ಕಡಿಮೆಯಾಗಿತ್ತು. ಹೀಗಾಗಿ ಹೆಚ್ಚು ಜನರನ್ನು ಹತ್ಯೆ ಮಾಡುವ ಉದ್ದೇಶದಿಂದಲೇ ದಾಳಿ ಮಾಡುವ ಯೋಜನೆಯನ್ನು ಮುಂದೂಡಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಏ.22ರಂದು ನಡೆದಿದ್ದೇನು?
ಹತ್ಯೆಯಾದ ದಿನ ಉಗ್ರರು ಸುತ್ತಮುತ್ತಲಿನ ಕಾಡು ಬೆಟ್ಟದಂತಿರುವ ಪ್ರದೇಶದಿಂದ ನುಗ್ಗಿ ಬಂದು ಗುಂಡು ಹಾರಿಸಿದ್ದರು ಎಂದು ಅಂದಾಜಿಸಲಾಗಿತ್ತು. ಎನ್ಐಎ ತನಿಖೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ಉಗ್ರರು ಏ.22 ರಂದು ಮಧ್ಯಾಹ್ನ 2:30ಕ್ಕೆ ಫುಡ್ ಸ್ಟಾಲ್ ಹಿಂಭಾಗದಲ್ಲಿ ಪ್ರವಾಸಿಗರಿಗಾಗಿ ಕಾದು ಕುಳಿತಿದ್ದರು. ಜನ ಸಮೂಹ ದೊಡ್ಡಗಾಗಿ ಸೇರುತ್ತಿದ್ದಂತೆ ಎದ್ದು ನಿಂತು ಹೆಸರು, ಧರ್ಮ ಕೇಳಿ ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದರು ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್ – ಉಗ್ರರ ಸಂಭಾವ್ಯ ದಾಳಿಯ ಎಚ್ಚರಿಕೆ ಕೊಟ್ಟ ಗುಪ್ತಚರ
ನವದೆಹಲಿ: ಪಹಲ್ಗಾಮ್ ಬಳಿ ದಾಳಿ (Pahalgam Terror Attack) ನಡೆದ ದಿನ ಅದೇ ಪ್ರದೇಶದಲ್ಲಿ ಮತ್ತು ಅದೇ ಸಮಯದಲ್ಲಿ ಹುವಾವೇ ಉಪಗ್ರಹ ಫೋನೊಂದು (Huawei Satellite Phone) ಸಕ್ರೀಯವಾಗಿದ್ದ ವಿಚಾರ ರಾಷ್ಟ್ರೀಯ ತನಿಖೆ ದಳದ (NIA) ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.
ಹೌದು. ಭಾರತದಲ್ಲಿ ಚೀನಾ ನಿರ್ಮಿತ ಹುವಾವೇ ಕಂಪನಿ ಸಾಧನ ಬಳಕೆಗೆ ನಿರ್ಬಂಧ ಇದೆ. ಹೀಗಿದ್ದರೂ ದಾಳಿ ನಡೆದ ಪ್ರದೇಶದಲ್ಲಿ ಏಕೈಕ ಹುವಾವೇ ಸ್ಯಾಟಲೈಟ್ ಫೋನ್ ಸಕ್ರಿಯವಾಗಿತ್ತು ಎಂಬ ವಿಚಾರ ಎನ್ಐಎ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಹುವಾವೇ ಉಪಗ್ರಹ ಫೋನ್ಗಳನ್ನು ಪಾಕಿಸ್ತಾನ (Pakistan) ಅಥವಾ ವಿದೇಶದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಿರುವ ಸಾಧ್ಯತೆ ಇದೆ. ಈಗ ಈ ಫೋನಿನ ಮೂಲದ ಬಗ್ಗೆ ಎನ್ಐಎ ತನಿಖೆಗೆ ಇಳಿದಿದಿದ್ದು ವಿದೇಶಿ ಸಂಸ್ಥೆಗಳಿಂದ ಸಹಾಯ ಪಡೆಯಲು ಮುಂದಾಗಿದೆ. ಇದನ್ನೂ ಓದಿ: ಪಾಕ್ ಮೇಲೆ ಡಿಜಿಟಲ್ ಸ್ಟ್ರೈಕ್ – ಬಿಬಿಸಿಗೂ ಬಿಸಿ ಮುಟ್ಟಿಸಿದ ಸರ್ಕಾರ
ಹುವಾವೇ ಕಂಪನಿ ಉಪಗ್ರಹ ಸಂವಹನ ವೈಶಿಷ್ಟ್ಯ ಹೊಂದಿರುವ ಹಲವಾರು ಸ್ಮಾರ್ಟ್ಫೋನ್ಗಳನ್ನು ತಯಾರಿಸುತ್ತಿದೆ. ಹುವಾವೇ ಮೇಟ್ 60 ಪ್ರೊ, ಪಿ60 ಸರಣಿ ಮತ್ತು ನೋವಾ 11 ಅಲ್ಟ್ರಾ ಸ್ಯಾಟಲೈಟ್ ಫೋನ್ಗಳಾಗಿವೆ. ಈ ಸಾಧನಗಳನ್ನು ಚೀನಾ ಟೆಲಿಕಾಂ ನಿರ್ವಹಿಸುವ ಚೀನಾದ ಟಿಯಾಂಟಾಂಗ್ -1 ಉಪಗ್ರಹ ನೆಟ್ವರ್ಕ್ಗೆ ಸಂಪರ್ಕಿಸುವಂತೆ ವಿನ್ಯಾಸಗೊಳಿಸಲಾಗಿದೆ.
ಈ ಫೋನ್ಗಳು ಉಪಗ್ರಹ ಆಂಟೆನಾ ಮತ್ತು ವಿಶೇಷ ಚಿಪ್ಗಳನ್ನು ಒಳಗೊಂಡಿರುತ್ತವೆ. ಇದು ಬಾಹ್ಯ ಉಪಕರಣಗಳಿಲ್ಲದೆ ಸಂಪರ್ಕ ಸಾಧಿಸಲು ಅನುವು ಮಾಡಿಕೊಡುತ್ತದೆ. ಸೇವೆಗಳಿಗೆ ಚೀನಾ ಟೆಲಿಕಾಂ ಕಂಪನಿಯ ಸಿಮ್ ಕಾರ್ಡ್ಗಳು ಮತ್ತು ಚಂದಾದಾರಿಕೆ ಯೋಜನೆಗಳು ಬೇಕಾಗುತ್ತವೆ. ತುರ್ತು ಬಳಕೆಗಾಗಿ ವಿನ್ಯಾಸಗೊಳಿಸಲಾದ ಈ ಫೋನ್ಗಳು ಕಡಿಮೆ-ಬ್ಯಾಂಡ್ವಿಡ್ತ್ ಧ್ವನಿ, ಪಠ್ಯ ಸೇವೆ, ಇಂಟರ್ನೆಟ್ ಸೇವೆಗಳನ್ನು ನೀಡುತ್ತವೆ. ಸೆಲ್ಯುಲಾರ್ ವ್ಯಾಪ್ತಿ ಇಲ್ಲದ ಪ್ರದೇಶಗಳಲ್ಲಿಯೂ ಸಹ ಕಾರ್ಯನಿರ್ವಹಿಸುತ್ತವೆ. ಇದನ್ನೂ ಓದಿ: ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಪಾಕ್ ಸೈನಿಕರು!
ಹಿಂದೆ ಉಗ್ರಗಾಮಿಗಳು ತುರಾಯ ಸ್ಯಾಟಲೈಟ್ ಫೋನ್ಗಳನ್ನು ಬಳಸುತ್ತಿದ್ದರು. ಈ ಫೋನ್ಗಳಲ್ಲಿ ಅಂಟೆನಾ ಇರುವ ಕಾರಣ ಸುಲಭವಾಗಿ ಗುರುತಿಸಬಹುದಾಗಿತ್ತು. ಆದರೆ ಹುವಾವೇ ಸ್ಯಾಟಲೈಟ್ ಫೋನ್ಗಳು ಸ್ಮಾರ್ಟ್ಫೋನ್ಗಳಂತೆ ವಿನ್ಯಾಸ ಮಾಡಲಾಗಿರುವ ಕಾರಣ ಅಷ್ಟು ಸುಲಭವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ.
ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಒಬ್ಬಾತ ಫೋನ್ ಕರೆಯಲ್ಲಿ ಸಕ್ರಿಯವಾಗಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು.
ವಿದೇಶಿ ಸ್ಯಾಟಲೈಟ್ ಫೋನ್ಗಳಿಗೆ ನಿರ್ಬಂಧ
2008ರ ಮುಂಬೈ ದಾಳಿ ಸಂದರ್ಭದಲ್ಲಿ ಉಗ್ರರು ಸ್ಯಾಟಲೈಟ್ ಫೋನ್ ಬಳಸಿ ಕೃತ್ಯ ಎಸಗಿದ್ದರು. ಪಾಕಿಸ್ತಾನದ ಹ್ಯಾಂಡ್ಲರ್ಗಳ ಜೊತೆ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕದಲ್ಲಿದ್ದರು. ಈ ಪ್ರಕರಣದ ಬಳಿಕ ಭಾರತದಲ್ಲಿ ಸ್ಯಾಟಲೈಟ್ ಫೋನ್ ಬಳಕೆಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ರಕ್ಷಣಾ ಸಾಮಾಗ್ರಿ ಹೊತ್ತುಕೊಂಡು ಬಂದ ಟರ್ಕಿ ವಿಮಾನ ಪಾಕ್ನಲ್ಲಿ ಲ್ಯಾಂಡ್
ನಿಯಮ ಏನು ಹೇಳುತ್ತದೆ?
ಭಾರತದ ವೈರ್ಲೆಸ್ ಆಕ್ಟ್ನ ಸೆಕ್ಷನ್ 6 ಮತ್ತು ಇಂಡಿಯನ್ ಟೆಲಿಗ್ರಾಫ್ ಆಕ್ಟ್ನ ಸೆಕ್ಷನ್ 20 ರ ಅಡಿಯಲ್ಲಿ ಭಾರತದಲ್ಲಿ ತುರಾಯಾ/ಇರಿಡಿಯಮ್ ಸ್ಯಾಟಲೈಟ್ ಫೋನ್ಗಳ ಬಳಕೆ ಕಾನೂನುಬಾಹಿರವಾಗಿದೆ. ಭಾರತಕ್ಕೆ ಪ್ರಯಾಣಿಸುವ ಎಲ್ಲಾ ವ್ಯಕ್ತಿಗಳಿಗೆ ಥುರಾಯ/ಇರಿಡಿಯಮ್ ಸ್ಯಾಟಲೈಟ್ ಫೋನ್ಗಳ ಬಳಕೆಯನ್ನು ಭಾರತದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಸಲಹೆ ನೀಡಲಾಗುತ್ತದೆ.
ವಿದೇಶಿಗರು ಭಾರತಕ್ಕೆ ತುರಾಯ/ಇರಿಡಿಯಮ್ ಉಪಗ್ರಹ ಫೋನ್ಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪ್ರಯಾಣಿಕರು ಭಾರತಕ್ಕೆ ಸಾಗಿಸುವ ಉಪಗ್ರಹ ಫೋನ್ಗಳನ್ನು ಬಂಧಿಸಲಾಗುತ್ತದೆ/ಜಪ್ತಿ ಮಾಡಲಾಗುತ್ತದೆ. ಭಾರತೀಯ ಟೆಲಿಗ್ರಾಫ್ ಕಾಯಿದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಯಾಣಿಕರಿಗೆ ದಂಡ ವಿಧಿಸಬಹುದು.
ಭಾರತದಲ್ಲೂ ಸೇವೆ ಇದೆ:
ಬಿಎಸ್ಎನ್ಎಲ್ ಕಂಪನಿ ಉಪಗ್ರಹ ಫೋನ್ ಸೇವೆ ನೀಡುತ್ತಿದೆ. ಸೇವೆಯು ಭಾರತದ ಸಂಪೂರ್ಣ ಭೌಗೋಳಿಕ ಪ್ರದೇಶಕ್ಕೆ ನೀಡುತ್ತದೆ. ಅದರಲ್ಲೂ ಭಾರತ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೆಲವು ಪ್ರದೇಶಗಳಲ್ಲಿ ಬಳಕೆಗೆ ನಿರ್ಬಂಧ ಇದೆ. ಅಮೆರಿಕದ ಗ್ಲೋಬ್ಸ್ಟಾರ್ ಕಂಪನಿಯ ಸ್ಯಾಟಲೈಟ್ ಫೋನ್ ಅಮೆರಿಕ ಸೇರಿದಂತೆ 120 ದೇಶಗಳಲ್ಲಿ ಬಳಕೆಗೆ ಅನಮತಿ ಇದೆ
ಹೇಗೆ ಒಂದು ಸಿಮ್ ಖರೀದಿಸುವಾಗ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೋ ಅದೇ ರೀತಿಯ ದಾಖಲೆ ನೀಡಬೇಕು. ಅದರ ಜೊತೆಗೆ ಯಾವ ಕಾರಣಕ್ಕೆ ಈ ಫೋನ್ ಅಗತ್ಯವಿದೆ? ಯಾವ ಅವಧಿಗೆ ಈ ಫೋನ್? ಎಲ್ಲಿ ಬಳಕೆ ಮಾಡಲಾಗುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ ಬಳಿಕ ಗ್ರಾಹಕರ ನೀಡಿದ ಮಾಹಿತಿ ಸರಿ ಇದ್ದಲ್ಲಿ ಸ್ಯಾಟಲೈಟ್ ಫೋನ್ ಸಿಗುತ್ತದೆ.
ಬೆಂಗಳೂರು: ಪೆಹಲ್ಗಾಮ್ನಲ್ಲಿ ಉಗ್ರರ ದಾಳಿಯ (Pahalgam Terrorist Attack) ತನಿಖೆಯನ್ನ ಎನ್ಐಎ (National Investigation Agency) ವಹಿಸಿಕೊಂಡಿದೆ. ಅಧಿಕೃತ ತನಿಖೆಯ ಆದೇಶಕ್ಕೂ ಮೊದಲು ಎನ್ಐಎ ಫೀಲ್ಡ್ಗಡ ಇಳಿದು ತನಿಖೆ ಆರಂಭಿಸಿದೆ. ಕಳೆದ ಶುಕ್ರವಾರ ಮೃತ ಭರತ್ ಭೂಷಣ್ರ (Bharath Bhushan) ಮನೆಗೆ ತೆರಳಿದ್ದ ಎನ್ಐಎ, ಸುಧೀರ್ಘ 8 ಗಂಟೆಗಳ ಕಾಲ ಪತ್ನಿ ಡಾ.ಸುಜಾತಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದೆ.
ನೀವೂ ಕಾಶ್ಮೀರಕ್ಕೆ (Kashimir) ಯಾವಾಗ ಹೋಗಿದ್ರಿ, ಎಷ್ಟೋತ್ತಿಗೆ ತಲುಪಿದ್ರಿ? ಉಗ್ರರು ಬಂದಾಗ ನೀವು ಎಲ್ಲಿ ಇದ್ರಿ, ಭರತ್ ಭೂಷಣ್ ಎಲ್ಲಿದ್ರು? ಉಗ್ರರು ಬಂದಾಗ ಯಾವ ಭಾಷೆ ಮಾತಾಡಿದ್ರು. ಅವರ ಮುಖದ ಮೇಲೆ ಏನಾದ್ರು ಮಾರ್ಕ್ ಇತ್ತಾ. ಅವರ ಮುಖ ಚಹರೆ, ವೇಷ ಭೂಷಣ ಇವೆಲ್ಲದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಪಾಕ್ ಮೇಲೆ ಡಿಜಿಟಲ್ ಸ್ಟ್ರೈಕ್ – ಬಿಬಿಸಿಗೂ ಬಿಸಿ ಮುಟ್ಟಿಸಿದ ಸರ್ಕಾರ
ಅಲ್ಲದೇ ಉಗ್ರರ ಸ್ಕೆಚ್ ತೋರಿಸಿ ಕೂಡ ಮಾಹಿತಿ ಪಡೆದಿರುವ ಎನ್ಐಎ, ಅವರ ಬಳಿಯಿದ್ದ ಗನ್ ನೋಡಿದ್ರಾ? ಅದು ಯಾವ ರೀತಿ ಇತ್ತು. ಅವರು ನಿಮ್ಮ ಬಳಿ ಏನಾದ್ರು ಮಾತಾಡಿದ್ರಾ? ನೀವು ಅವರಿಗೆ ಏನಾದ್ರು ಉತ್ತರ ಕೊಟ್ರಾ ಹೀಗೆ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಎನ್ಐಎ ಭರತ್ ಭೂಷಣ್ ಅವರ ಪತ್ನಿ ಹೇಳಿಕೆಯನ್ನು ದಾಖಲು ಮಾಡಿಕೊಂಡು ಹೋಗಿದೆ.
ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terrorist Attack) ಕುರಿತು ತನಿಖೆ ಶುರು ಮಾಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಪ್ರಮುಖ ಸಾಕ್ಷಿ ಸಿಕ್ಕಿದೆ. ದಾಳಿ ನಡೆಯುವ ವೇಳೆ ಬೈಸರನ್ನಲ್ಲಿ (Baisaran) ಪ್ರವಾಸಿಗರಿಗಾಗಿ ರೀಲ್ಸ್ ಚಿತ್ರೀಕರಿಸುತ್ತಿದ್ದ ಸ್ಥಳೀಯ ವಿಡಿಯೋ ಗ್ರಾಫರ್ ಪ್ರಮುಖ ಸಾಕ್ಷಿದಾರನಾಗಿ ಮುಂದೆ ಬಂದಿದ್ದಾರೆ ಎಂದು ವರದಿಗಳು ತಿಳಿಸಿವೆ.
ಹೌದು. ಕೇಂದ್ರ ಗೃಹಸಚಿವಾಲಯ ನೀಡಿದ ನಿರ್ದೇಶದ ಮೇರೆಗೆ ಏ.22ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಯನ್ನು ಎನ್ಐಎ ವಹಿಸಿಕೊಂಡಿದೆ. ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡದೊಂದಿಗೆ ಘಟನಾ ಸ್ಥಳದಲ್ಲೇ ಬೀಡುಬಿಟ್ಟಿರುವ ಎನ್ಐಎ ಸಾಕ್ಷ್ಯ ಹುಡುಕಾಟವನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಮುಖ ಸಾಕ್ಷಿಯೊಂದು ಎನ್ಐಎಗೆ ಸಿಕ್ಕಿದೆ. ಇದನ್ನೂ ಓದಿ: ಭಾರತದಲ್ಲಿ ಪಟಾಕಿ ಸಿಡಿದರೂ, ಪಾಕಿಸ್ತಾನವನ್ನೇ ದೂಷಿಸುತ್ತಾರೆ: ಶಾಹಿದ್ ಅಫ್ರಿದಿ
ಮರದ ಮೇಲೆ ಕುಳಿತು ಇಡೀ ಕೃತ್ಯ ಸೆರೆ:
ಸದ್ಯ ಲಭ್ಯವಾಗಿರುವ ವಿಡಿಯೋ ಪ್ರಕಾರ, ನಾಲ್ವರು ಉಗ್ರರು ಎರಡು ಗುಂಪುಗಳಾಗಿ ಬೇರ್ಪಟ್ಟಿದ್ದರು. ಇಬ್ಬರು ಹುಲ್ಲುಗಾವಲು ಪ್ರದೇಶದ ಎರಡೂ ಬದಿ ಅವಿತುಕೊಂಡಿದ್ದರೆ, ಮತ್ತಿಬ್ಬರು ಅಲ್ಲೇ ಇದ್ದ ತಿಂಡಿ ಅಂಗಡಿ ಬಳಿ ಅವಿತಿದ್ದರು. ಮಧ್ಯಾಹ್ನ 2.30ರ ಸುಮಾರಿಗೆ, ಅಂಗಡಿಗಳ ಹಿಂದೆ ಅಡಗಿಕೊಂಡಿದ್ದ ಇಬ್ಬರು ಭಯೋತ್ಪಾದಕರು ಹೊರಬಂದರು. ಆಗ ಅಲ್ಲಿ ತಿಂಡಿ ತಿನ್ನುತ್ತಿದ್ದ ಸ್ಥಳೀಯರಲ್ಲದವರನ್ನ ಧರ್ಮದ ಬಗ್ಗೆ ಕೇಳುತ್ತಾ ಬಂದವರು. ಕೆಲವರು ತಪ್ಪಿಸಿಕೊಳ್ಳು ತಾನು ಮುಸ್ಲಿಂ ಎಂದು ಹೇಳಿದಾಗ ಕಲಿಮಾ ಪಠಿಸಲು ಹೇಳಲಾಯಿತು. ಬಳಿಕ ಕಲಿಮಾ ಪಠಿಸಲು ಸಾಧ್ಯವಾಗದವರನ್ನ ಪಾಯಿಂಟ್ ಬ್ಲಾಕ್ನಲ್ಲಿ ಶೂಟ್ ಮಾಡುತ್ತಾ ಬಂದರು. ಗುಂಡು ಹಾರಿಸುತ್ತಿದ್ದಂತೆ ಇಡೀ ಪ್ರದೇಶದಲ್ಲಿ ಭೀತಿ ಉಂಟಾಗಿ ಕೆಲವರು ದಿಕ್ಕಾಪಾಲಾಗಿ ಓಡಿದರು. ಈ ಸಂದರ್ಭದಲ್ಲಿ ಹುಲ್ಲುಗಾವಲಿನ ಜಿಪ್ಲೈನ್ನಲ್ಲಿ ಅವಿತಿದ್ದವರೂ ಗುಂಡು ಹಾರಿಸಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಪ್ರತ್ಯಕ್ಷದರ್ಶಿಗಳ ವಿಚಾರಣೆ
ಸದ್ಯ ಸ್ಥಳದಲ್ಲಿ ಬೀಡುಬಿಟ್ಟಿರುವ ಎನ್ಐಎ ತಂಡ ಘಟನೆಯನ್ನು ಕಣ್ಣಾರೆ ಕಂಡ ಪ್ರತ್ಯಕ್ಷದರ್ಶಿಗಳ ವಿಚಾರಣೆ ನಡೆಸುತ್ತಿದೆ. ಜೊತೆಗೆ ಉಗ್ರರ ಕ್ರಿಯಾಯೋಜನೆಯ ಬಗ್ಗೆ ಸುಳಿವು ಪಡೆಯಲು ಎಂಟ್ರಿ, ಎಕ್ಸಿಟ್ ಸ್ಥಳಗಳನ್ನ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಶಿಫ್ಟ್ ಆಗೋದು ಒಳ್ಳೆದು: ಜಗದೀಶ್ ಶೆಟ್ಟರ್