Tag: ಎನ್‍ಐಎ

  • ರಾಮೇಶ್ವರಂ ಕೆಫೆ ಅಲ್ಲ – ಐಟಿ ಕಂಪನಿ ಸ್ಫೋಟಿಸಲು ತಯಾರಿ ನಡೆಸಿದ್ದ ಉಗ್ರರು!

    ರಾಮೇಶ್ವರಂ ಕೆಫೆ ಅಲ್ಲ – ಐಟಿ ಕಂಪನಿ ಸ್ಫೋಟಿಸಲು ತಯಾರಿ ನಡೆಸಿದ್ದ ಉಗ್ರರು!

    –  ದೇಶದ ಆರ್ಥಿಕತೆಗೆ ಪೆಟ್ಟು ಕೊಡಲು ಪ್ಲ್ಯಾನ್‌
    – ಮಹಾದೇವಪುರ ವ್ಯಾಪ್ತಿಯಲ್ಲಿರುವ ಕಂಪನಿ ಸ್ಫೋಟಕ್ಕೆ ಸಂಚು

    ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದಲ್ಲಿ(Rameshwaram Cafe Blast) ಸೆರೆಯಾದ ಆರೋಪಿಗಳ ಟಾರ್ಗೆಟ್‌ ಬೇರೆಯದ್ದೇ ಆಗಿತ್ತು ಎಂಬ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳದ(NIA) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಹೌದು. ಆರೋಪಿಗಳು ರಾಜ್ಯದ ಆರ್ಥಿಕತೆಗೆ (Economy) ಪೆಟ್ಟು ಕೊಡಲು ಟಾರ್ಗೆಟ್ ಮಾಡಿದ್ದರು. ಆದರೆ ಈ ಗುರಿ ಕಷ್ಟವಾಗಿದ್ದ ಕಾರಣ ಕೊನೆಗೆ ರಾಮೇಶ್ವರಂ ಕೆಫೆಯನ್ನು ಆಯ್ಕೆ ಮಾಡಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.  ಇದನ್ನೂ ಓದಿ: ದ್ವಾರಕೀಶ್ ಮತ್ತು ವಿಷ್ಣುವರ್ಧನ್ ಸ್ನೇಹ: ಏಳು ಬೀಳಿನ ಗೆಳೆತನ

    ಕೋಲ್ಕತ್ತಾದಲ್ಲಿ ಸೆರೆಸಿಕ್ಕ ಅಬ್ದುಲ್ ಮತಿನ್ ತಾಹ ಹಾಗೂ ಮುಸಾವಿರ್ ಹುಸೇನ್‌ನ ವಿಚಾರಣೆ ವೇಳೆ ಒಂದೊಂದೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ. ಐಟಿ ಪಾರ್ಕ್‌ಗಳನ್ನು (IT Park) ಟಾರ್ಗೆಟ್‌ ಮಾಡಿದ್ದ ಆರೋಪಿಗಳು ದೊಡ್ಡ ಸಾಫ್ಟ್‌ವೇರ್‌ ಕಂಪನಿಯನ್ನು ಸ್ಫೋಟ ಮಾಡಲು ಆರಂಭದಲ್ಲಿ ಪ್ಲ್ಯಾನ್‌ ಮಾಡಿದ್ದರು. ಇದನ್ನೂ ಓದಿ: ಬೆಂಗಳೂರಿನ ಪ್ರತ್ಯೇಕ ಕಡೆ ಭರ್ಜರಿ ಬೇಟೆ; 5.20 ಲಕ್ಷ ನಗದು, 302 ಕುಕ್ಕರ್‌ ವಶಕ್ಕೆ

    ಅದರಲ್ಲೂ ಮಹದೇವಪುರ ವಲಯದಲ್ಲಿ ಸಾಕಷ್ಟು ಐಟಿ ಕಂಪನಿಗಳಿದ್ದು ಯಾವುದಾದರೂ ಕಂಪನಿಯನ್ನು ಸ್ಫೋಟ ಮಾಡಿದರೆ ವಿದೇಶಿ ಬಂಡವಾಳ ಹೂಡಿಕೆದಾರರು (FDI) ಭಾರತಕ್ಕೆ (India) ಹೂಡಿಕೆ ಮಾಡಲು ಬರುವುದಿಲ್ಲ. ಇದರಿಂದಾಗಿ ದೇಶದ ಆರ್ಥಿಕತೆ ಕುಸಿಯುತ್ತದೆ ಎಂದು ಭಾವಿಸಿ ಐಟಿ ಕಂಪನಿ ಬಳಿ ಬಾಂಬ್‌ ಸ್ಫೋಟಿಸಲು ತಯಾರಿ ನಡೆಸಿದ್ದರು.

    ಐಟಿ ಕಂಪನಿಗಳ ಬಳಿ ಸ್ಫೋಟಕ್ಕೆ ಸಂಚು ರೂಪಿಸಿದಾಗ ಅಲ್ಲಿ ಸಿಸಿಟಿವಿಗಳು ಇದೆ. ಭದ್ರತಾ ಸಿಬ್ಬಂದಿ ಇರುತ್ತಾರೆ. ಪಾರ್ಕ್‌ ಒಳಗಡೆ ಹೋಗಲು ಅಷ್ಟು ಸುಲಭವಾಗಿ ಸಾಧ್ಯವಾಗುವುದಿಲ್ಲ ಎಂಬುದನ್ನು ಅತ ಅವರು ಈ ಪ್ಲ್ಯಾನ್‌ ಕೈ ಬಿಟ್ಟು ಟೆಕ್ಕಿಗಳು ಹೆಚ್ಚು ಸೇರುವ ಜಾಗವನ್ನು ಟಾರ್ಗೆಟ್‌ ಮಾಡಿದ್ದರು. ಅಂತಿಮವಾಗಿ ಇವರು ಬೆಂಗಳೂರಿನ ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್‌  ಬಳಿ ಇರುವ ರಾಮೇಶ್ವರಂ ಕೆಫೆಯನ್ನು ಆಯ್ಕೆ ಮಾಡಿ ಬಾಂಬ್‌ ಸ್ಫೋಟ ಮಾಡಿದ್ದಾರೆ ಎಂಬ ವಿಚಾರ ಎನ್‌ಐಎ ಮೂಲಗಳಿಂದ ತಿಳಿದು ಬಂದಿದೆ.

     

  • ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ ಮತೀನ್‌ ಬಾಂಬ್‌ ಸ್ಫೋಟದ ಸೂತ್ರಧಾರ!

    ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ ಮತೀನ್‌ ಬಾಂಬ್‌ ಸ್ಫೋಟದ ಸೂತ್ರಧಾರ!

    ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ (Rameshwaram Cafe Bomb Blast) ನಡೆದ ಬರೋಬ್ಬರಿ 42 ದಿನಗಳ ಬಳಿಕ ಬಾಂಬರ್ ಮುಸಾವೀರ್ ಹುಸೇನ್ (Mussavir Hussain Shazeb) ಮತ್ತು ಸೂತ್ರಧಾರ ಅಬ್ದುಲ್ ಮತೀನ್ ತಾಹಾನನ್ನು (Abdul Matheen Taha) ರಾಷ್ಟ್ರೀಯ ತನಿಖಾ ದಳ (NIA) ಹೆಡೆಮುರಿ ಕಟ್ಟಿದೆ.

    ಖಚಿತ ಸುಳಿವಿನ ಆಧಾರದ ಮೇಲೆ ಪೂರ್ವ ಮಿಡ್ನಾಪುರದ ಕಾಂತಿ ಪಟ್ಟಣದಲ್ಲಿ ನಸುಕಿನ ಜಾವ ಮನೆಯೊಂದರ ಮೇಲೆ ಎನ್‌ಐಎ ದಾಳಿ ನಡೆಸಿದೆ. ಗಾಢ ನಿದ್ದೆಯಲ್ಲಿದ್ದ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದೆ.

    ಅಸ್ಸಾಂನಲ್ಲಿ ಕೆಲ ದಿನ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇತ್ತೀಚಿಗೆ ಬಂಗಾಳಕ್ಕೆ ಶಿಫ್ಟ್ ಆಗಿದ್ದರು. ಮಾರ್ಚ್ 1ರಂದು ಸ್ಫೋಟ ನಡೆದ ದಿನವೇ ಬೆಂಗಳೂರಿನಿಂದ ಬಳ್ಳಾರಿ ಮಾರ್ಗವಾಗಿ ಬಾಂಬರ್ ಮುಸಾವೀರ್  ಪರಾರಿಯಾಗಿದ್ದ. ಆದರೆ ಮುಸಾವೀರ್ ಸಂಪೂರ್ಣ ಚಲನವಲನ ಹಲವು ಸಿಸಿಟಿವಿಗಳಲ್ಲಿ ಸೆರೆಯಾಗಿತ್ತು. ಮುಸಾವೀರ್ ಧರಿಸಿದ್ದ ಟೋಪಿ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಗುರುತಿಸಿದ್ದರು.

     

    ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದ್ದ ಸೂತ್ರಧಾರ ಮತೀನ್ ವಿಘ್ನೇಶ್ ಹೆಸರಿನಲ್ಲಿ ದೇಶದ ಒಳಗಡೆಯೇ ತಲೆಮರೆಸಿಕೊಂಡಿದ್ದ. ಮುಸಾವಿರ್ ಪದೇ ಪದೇ ಸಿಮ್ ಬದಲಿಸುತ್ತಾ, ಸ್ಥಳ ಬದಲಿಸುತ್ತಾ ತನಿಖೆಯ ಹಾದಿ ತಪ್ಪಿಸಲು ನೋಡಿದ್ದ. ಇಬ್ಬರು ಜೊತೆಗೂಡಿ ನಕಲಿ ದಾಖಲೆ ನೀಡಿ ಕಡಿಮೆ ದರ್ಜೆಯ ಹೋಟೆಲ್‌ನಲ್ಲಿ ತಂಗಿದ್ದರು. ಕೊನೆಗೆ ಕಾಂತಿ ಪಟ್ಟಣದ ಹೊರವಲಯದಲ್ಲಿ ಬಾಡಿಗೆಗೆ ಮನೆ ಪಡೆದಿದ್ದರು.

    ಆರೋಪಿಗಳು ಬೇರೆ ಹೆಸರಲ್ಲಿ ಕೋಲ್ಕತ್ತಾದಲ್ಲಿ ಮಾರ್ಚ್ 13, 14ರಂದು ಹೋಟೆಲ್ ರೂಮ್ ಬುಕ್ ಮಾಡಿದ್ದರು. ಯುಶಾ ಶಾಹನವಾಜ್, ಅನ್ಮೋಲ್ ಕುಲಕರ್ಣಿ ಹೆಸರಲ್ಲಿ ಬುಕ್ ಮಾಡಿದ್ದ ಆರೋಪಿಗಳು ಎರಡು ದಿನ ಹೋಟೆಲ್‌ನಲ್ಲಿ ತಂಗಿದ್ದರು. ಇದನ್ನೂ ಓದಿ : 370 ವಿಧಿಯನ್ನು ರದ್ದುಪಡಿಸಿದ್ದಕ್ಕೆ ಅಂಬೇಡ್ಕರ್ ಆತ್ಮ ನನ್ನನ್ನು ಆಶೀರ್ವದಿಸುತ್ತಿರಬಹುದು: ಮೋದಿ

     

    ಇಂದು ಪೂರ್ವ ಮಿಡ್ನಾಪುರ ಕೋರ್ಟ್ ಮುಂದೆ ಪಾತಕಿಗಳನ್ನು ಹಾಜರುಪಡಿಸಿದ ಬಳಿಕ ಬೆಂಗಳೂರಿಗೆ ಎನ್‌ಐಎ ಕರೆತರಲಿದೆ. ಅಂದ ಹಾಗೇ ಇದೇ ಏ.6 ರಂದು ಪೂರ್ವ ಮಿಡ್ನಾಪುರದಲ್ಲಿ ಎನ್‌ಐಎ ಮಿಡ್‌ನೈಟ್ ಆಪರೇಷನ್‌ಗೆ ಮುಂದಾಗಿತ್ತು. 2 ವರ್ಷದ ಹಿಂದಿನ ಸ್ಪೋಟ ಪ್ರಕರಣದ ಆರೋಪಿಗಳನ್ನು ಬಂಧಿಸಲು ಮುಂದಾದಾಗ ಸ್ಥಳೀಯರು ತಿರುಗಿಬಿದ್ದಿದ್ದರು.

    ವಿವಿಧ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಕರ್ನಾಟಕ, ಪಶ್ಚಿಮ ಬಂಗಾಳ, ತಮಿಳುನಾಡು, ಯುಪಿ, ದೆಹಲಿ, ಎಪಿ ಮತ್ತು ತೆಲಂಗಾಣ ರಾಜ್ಯ ಪೊಲೀಸ್ ಇಲಾಖೆಗಳ ಸಹಕಾರದಿಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ : ಕೇವಲ 2 ವೋಟಿಗಾಗಿ ಕಾಡು ಹಾದಿಯಲ್ಲಿ 107 ಕಿಮೀ ಸಾಗಿದ ಅಧಿಕಾರಿಗಳು

     

    ಯಾರು ಮುಸಾವೀರ್?
    ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಐಸಿಸ್‌ ತೀರ್ಥಹಳ್ಳಿ ಮಾಡ್ಯೂಲ್‌ನ ಪ್ರಮುಖ ವ್ಯಕ್ತಿ. ರಾಮೇಶ್ವರಂ ಕೆಫೆಯಲ್ಲಿ ಇಡ್ಲಿ ತಿಂದು ಬಾಂಬಿಟ್ಟು ಮುಸಾವೀರ್ ಹುಸೇನ್ ಪರಾರಿಯಾಗಿದ್ದ.

    ಯಾರು ಅಬ್ದುಲ್ ಮತೀನ್?
    ಕೆಫೆ ಸ್ಫೋಟ ಕೇಸ್‌ನ ಮಾಸ್ಟರ್‌ಮೈಂಡ್ ಆಗಿರುವ ಈತ ಅಲ್ ಹಿಂದ್ ಸಂಘಟನೆಯ ಪ್ರಮುಖ ಸದಸ್ಯನಾಗಿದ್ದಾನೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿಯಾಗಿದ್ದ ಈತ ಬ್ರಾಡ್‌ಬ್ಯಾಂಡ್ ಕಂಪನಿಯಲ್ಲಿ ಕೆಲಸ ಮಾಡಿದ್ದ ಈತ ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ. ಡಾರ್ಕ್‌ ವೆಬ್‌ ಬಳಕೆಯಲ್ಲಿ ಪರಿಣಿತನಾಗಿರುವ ಈತ 2020 ರಿಂದ ನಾಪತ್ತೆಯಾಗಿದ್ದಾನೆ. ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ ಕಿಂಗ್‌ಪಿನ್ ಆಗಿದ್ದು ಈಗ ಜೈಲಿನಲ್ಲಿ ಇರುವ ಶಾಕೀರ್‌ಗೆ ಬಾಂಬ್‌ ತಯಾರಿಸಲು ತರಬೇತಿ ನೀಡಿದ್ದ.

  • ಕೋಡ್‌ವರ್ಡ್‌ ಸಹಾಯದಿಂದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಗಳು ಅರೆಸ್ಟ್‌!

    ಕೋಡ್‌ವರ್ಡ್‌ ಸಹಾಯದಿಂದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಗಳು ಅರೆಸ್ಟ್‌!

    ಬೆಂಗಳೂರು: ಕೋಡ್‌ವರ್ಡ್‌ (Code Word) ಸಹಾಯದಿಂದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ (Rameshwaram Cafe Bomb Blast) ಆರೋಪಿಗಳ ಬಂಧನ ಮಾಡಲಾಗಿದೆ.

    ಹೌದು.ಬೆಂಗಳೂರಿನಲ್ಲಿ ಕೃತ್ಯ ಎಸಗಿದ್ದ ಮುಸಾವೀರ್ ಹುಸೇನ್ (Mussavir Hussain) ಕೋಲ್ಕತ್ತಾದ ಪೂರ್ವ ಮಿಡ್ನಾಪುರ ದಿಘಾ ಮನೆಯಲ್ಲಿ ಅಡಗಿದ್ದ. ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಮುಸಾವೀರ್ ಹುಸೇನ್ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ್ದ ಅಬ್ದುಲ್ ಮತೀನ್‌ನನ್ನು (Abdul Matin) ಅರೆಸ್ಟ್‌ ಮಾಡಿದ್ದಾರೆ.

    ಮಾಝ್‌ ಮುನೀರ್‌
    ಮಾಝ್‌ ಮುನೀರ್‌

    ಸೆರೆಯಾಗಿದ್ದು ಹೇಗೆ?
    ಶಿವಮೊಗ್ಗ ತುಂಗಾ ನದಿ ತೀರದಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಮಾಝ್‌ ಮುನೀರ್‌ನನ್ನು (Maaz Muneer) ಎನ್‌ಐಎ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಮುನೀರ್ ಸೆಲ್ ಮೇಲೆ ದಾಳಿ ಮಾಡಿದಾಗ ಮೆಮೋರಿ ಕಾರ್ಡ್ ಪತ್ತೆಯಾಗಿತ್ತು. ಈ ಮೆಮೋರಿ ಕಾರ್ಡ್‌ ಪರಿಶೀಲಿಸಿದಾಗ ಹಲವು ಕೋಡ್‌ ವರ್ಡ್‌ ಸಿಕ್ಕಿದ್ದವು. ಈ ಕೋಡ್‌ ವರ್ಡ್‌ ಡಿಕೋಡ್‌ ಮಾಡಿದಾಗ ಆರೋಪಿಗಳ ಮಾಹಿತಿ ಸಿಗತೊಡಗಿತು ಎಂದು ಎನ್‌ಐಎ ಮೂಲಗಳು ತಿಳಿಸಿವೆ.  ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಟ್ವಿಸ್ಟ್‌ – ಈಗಾಗಲೇ A1 ಆರೋಪಿ ಅರೆಸ್ಟ್‌!

    ಈ ಖಚಿತ ಮಾಹಿತಿಯನ್ನು ಆಧಾರಿಸಿ ತನಿಖೆಗೆ ಇಳಿದಾಗ ಆರೋಪಿಗಳು ಪಶ್ಚಿಮ ಬಂಗಾಳದಲ್ಲೇ ತಲೆ ಮರೆಸಿಕೊಂಡಿದ್ದ ವಿಚಾರ ತಿಳಿದು ಬಂದಿತ್ತು. ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ ಎನ್‌ಐಎ ಇಂದು ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಅಚ್ಚರಿಯ ವಿಷಯ ಏನೆಂದರೆ ಮುನೀರ್‌ ಜೈಲಿನಲ್ಲಿ ಕುಳಿತೇ ಕೋಡ್‌ ವರ್ಡ್‌ ಬರೆದಿದ್ದ.

     

    ಮಾಝ್‌ ಮುನೀರ್‌ ಮೊದಲ ಆರೋಪಿ:
    ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ ಮಾಝ್‌ ಮುನೀರ್‌ನನ್ನು ಎನ್‌ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್‌ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ  ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಝ್‌ ಮುನೀರ್‌ ಸೂತ್ರಧಾರನಾಗಿದ್ದು ಆತನನ್ನೇ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದ್ದು, ಈಗ ಬಂಧನ ಆಗಿರುವ ಮುಜಾಮಿಲ್ ಷರೀಫ್ ನಾಲ್ಕನೇ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

    ಮಾಝ್‌ ಮುನೀರ್‌ ಮಂಗಳೂರಿನ ಮುಡಿಪು ಸಮಿಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್‌ ಓದುತ್ತಿದ್ದಾಗ ಬಂಧನ ಮಾಡಲಾಗಿದೆ.

    ಮುಸ್ಸಾವಿರ್ ಹುಸೇನ್‌ ಶಜೀಬ್ ಮೊಹಮ್ಮದ್‌ ಜುನೈದ್ ಸಯ್ಯದ್‌ ಹೆಸರಿನಲ್ಲಿ ಡ್ರೈವಿಂಗ್‌ ಲೈಸೆನ್ಸ್‌ ಹೊಂದಿದ್ದಾನೆ. ಅಬ್ದುಲ್‌ 5.5 ಅಡಿ ಹೊಂದಿದ್ದು ಮುಂದುಗಡೆ ತಲೆ ಬೋಳಾಗಿದ್ದು, ಹೆಚ್ಚಾಗಿ ಕ್ಯಾಪ್‌ ಧರಿಸುತ್ತಾನೆ. 30 ವರ್ಷದ ಈತ ವಿಘ್ನೇಶ್‌‌, ಸುಮಿತ್‌ ಅಥವಾ ಬೇರೆ ಹಿಂದೂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಐಡಿ ದಾಖಲೆಯನ್ನು ಹೊಂದಿದ್ದಾನೆ ಎಂದು ಈ ಹಿಂದೆ ಎನ್‌ಐಎ ತಿಳಿಸಿತ್ತು.

  • ಆ ಜಾತಿ, ಈ ಜಾತಿ ಅಂತ ಅಲ್ಲ. ಜೆರಾಕ್ಸ್‌ ಮಾಡುವಾಗ, ಐಡಿ ನೀಡುವಾಗ ಬಹಳ ಎಚ್ಚರವಾಗಿರಿ: ಸಾಯಿ ಪ್ರಸಾದ್‌

    ಆ ಜಾತಿ, ಈ ಜಾತಿ ಅಂತ ಅಲ್ಲ. ಜೆರಾಕ್ಸ್‌ ಮಾಡುವಾಗ, ಐಡಿ ನೀಡುವಾಗ ಬಹಳ ಎಚ್ಚರವಾಗಿರಿ: ಸಾಯಿ ಪ್ರಸಾದ್‌

    – ಸಾಯಿ ಪ್ರಸಾದ್‌ ಹೆಸರಲ್ಲಿ ನಕಲಿ ಕ್ರಿಪ್ಟೋ ಖಾತೆ
    – ಎನ್‌ಐಎಯಿಂದ ವಿಚಾರಣೆ ಎದುರಿಸಿದ ಬಿಜೆಪಿ ಕಾರ್ಯಕರ್ತ
    – ಮತೀನ್‌ ನನ್ನ ಸ್ನೇಹಿತನಾಗಿದ್ದ, ಯಾವುದೇ ವ್ಯವಹಾರ ಮಾಡಿಲ್ಲ

    ಶಿವಮೊಗ್ಗ: sai_p ಯೂಸರ್‌ ನೇಮ್‌ ಇಟ್ಟುಕೊಂಡು ಮತೀನ್‌ ಕ್ರಿಪ್ಟೊ ಕರೆನ್ಸಿ ವ್ಯವಹಾರ ಮಾಡುತ್ತಿದ್ದ. ಹೀಗಾಗಿ ನನ್ನನ್ನು ಮತ್ತು ತಮ್ಮನನ್ನು ರಾಷ್ಟ್ರೀಯ ತನಿಖಾ ದಳ(NIA) ವಿಚಾರಣೆಗೆ ಕರೆದಿತ್ತು ಎಂದು ತೀರ್ಥಹಳ್ಳಿಯ ಬಿಜೆಪಿ ಸದಸ್ಯ (BJP Member) ಸಾಯಿ ಪ್ರಸಾದ್‌ (Sai Prasad) ಅವರು ಹೇಳಿಕೆ ನೀಡಿದ್ದಾರೆ.

    ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಪೊಲೀಸರು ಬೆಂಗಳೂರಿಗೆ ಕರೆಸಿ ವಿಚಾರಣೆ ನಡೆಸಿ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ಎದ್ದ ಹಲವಾರು ಪ್ರಶ್ನೆಗಳಿಗೆ ಸಾಯಿ ಪ್ರಸಾದ್‌ ಉತ್ತರ ನೀಡಿ ಆ ಜಾತಿ, ಈ ಜಾತಿ ಅಂತ ಅಲ್ಲ. ಜೆರಾಕ್ಸ್‌ ಮಾಡುವಾಗ, ಐಡಿ ನೀಡುವಾಗ ಬಹಳ ಎಚ್ಚರವಾಗಿರಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

     

    ಸಾಯಿ ಪ್ರಸಾದ್‌ ಹೇಳಿದ್ದೇನು?
    ಬೆಂಗಳೂರು ರಾಮೇಶ್ವರ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಮತೀನ್ ತಾಹಾ (Abdul Mateen Taha) sai_p ಯೂಸರ್ ನೇಮ್ ಬಳಸಿ ಕ್ರಿಪ್ಟೋ ವ್ಯವಹಾರ ನಡೆಸಿದ್ದ. ಈ ಕಾರಣಕ್ಕೆ ನನ್ನನ್ನು ಮತ್ತು ತಮ್ಮನನ್ನು ವಿಚಾರಣೆ ನಡೆಸಿದ್ದರು. ಬೆಳಗ್ಗೆ 6 ಗಂಟೆಗೆ ವಿಚಾರಣೆಗೆ ಹೋಗಿದ್ದೆ ಸಂಜೆ 6 ಗಂಟೆಯವರೆಗೂ ನನ್ನನ್ನು ವಿಚಾರಣೆ ನಡೆಸಿದರು.

    ನಾನು ಕ್ರಿಪ್ಟೋ ಕರೆನ್ಸಿ ವ್ಯವಹಾರ ಮಾಡುತ್ತಿದ್ದು, ಎರಡು ಅಧಿಕೃತ ಖಾತೆ ಇದೆ. ಒಂದರಲ್ಲಿ 40 ಸಾವಿರ ರೂ., ಒಂದರಲ್ಲಿ 3 ಸಾವಿರ ರೂ. ಹಾಕಿದ್ದೆ. ಕ್ರಿಪ್ಟೋ ಕರೆನ್ಸಿ ವ್ಯವಹಾರ ಅಕ್ರಮ ಅಲ್ಲ. ಕೆವೈಸಿ ಮಾಡಿಯೇ ಖಾತೆ ತೆರೆಯಲಾಗಿದೆ. ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆಗಳನ್ನು ನೀಡಲಾಗಿದೆ. ನಾನು ಯಾವುದೇ ಅಕ್ರಮ ಹಣ ವರ್ಗಾವಣೆ ಮಾಡಿಲ್ಲ. ನನ್ನ ಬಳಿ ಇದ್ದ ಎಲ್ಲಾ ಮಾಹಿತಿಗಳನ್ನು ತಿಳಿಸಿದ್ದೇನೆ. ಷೇರು ಮಾರುಕಟ್ಟೆಯಂತೆ ಮುಂದೆ ಇದರಲ್ಲಿ ಲಾಭ ಸಿಗಬಹುದು ಎಂಬ ಕಾರಣಕ್ಕೆ ಹೂಡಿಕೆ ಮಾಡಿದ್ದೆ.  ಇದನ್ನೂ ಓದಿ: ವಿಘ್ನೇಶ್‌, ಸುಮೀತ್‌ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್‌ – ರಾಮೇಶ್ವರಂ ಕೆಫೆ ಆರೋಪಿಗಳ ಮಾಹಿತಿ ನೀಡಿದ್ರೆ 10 ಲಕ್ಷ ಬಹುಮಾನ

    ಮತಿನ್ ನಮ್ಮ ಜೊತೆ ಫುಟ್‌ ಬಾಲ್‌ ಆಟ ಆಡಲು ಬರುತ್ತಿದ್ದ. ನಾನು ತುಂಬಾ ವರ್ಷಗಳ ಹಿಂದೆ ಮತಿನ್‌ನನ್ನು ನೋಡಿದ್ದೆ. ಅವನ ಜೊತೆ ಸಂಪರ್ಕ ಇರಲಿಲ್ಲ, ಮಾತುಕತೆ ಇತ್ತು ಅಷ್ಟೇ. ಅವನು ಉಗ್ರ ಅಂತ ನನಗೆ ತಿಳಿದಿರಲಿಲ್ಲ.

    ಬಿಜೆಪಿಯಲ್ಲಿ ನಾನು ಓಡಾಡುತ್ತಿದ್ದ ಕಾರಣ ನನ್ನ ಹೆಸರು ಬಂದಿದೆ. ನಾನೊಬ್ಬ ಸಾಮಾನ್ಯ ಪೇಂಟರ್ ಆಗಿದ್ದು ನಮ್ಮ ಅಪ್ಪ ಅಮ್ಮ ಇದ್ದಾರೆ. ಮೊಬೈಲ್ ಅಂಗಡಿ ಮಾಲೀಕ ಸಬೀಲ್ ನನ್ನ ಸ್ನೇಹಿತನಾಗಿದ್ದ. ಪೇಟಿಂಗ್ ಕೆಲಸ ಮಾಡುತ್ತಿದ್ದ ಕಾರಣ ಏನಾದರೂ ಕೆಲಸ ಇದ್ದರೆ ಕೆಲಸ ಹೇಳುತ್ತಿದ್ದ. ನಮ್ಮ ನಡುವೆ ಯಾವುದೇ ಅಕ್ರಮ ವ್ಯವಹಾರ ನಡೆದಿಲ್ಲ.

    ಯಾರೇ ಆದರೂ ನಿಮ್ಮ ಐಡಿಯನ್ನು ಯಾರಿಗೂ ಕೊಡಬೇಡಿ. ನಿಮ್ಮ ಐಡಿ ಬೇರೆಯವರಿಗೆ ಕೊಟ್ಟರೆ ಸಮಸ್ಯೆ ಎದುರಿಸಬೇಕಾಗುತ್ತದೆ. ಕುವೆಂಪು ಅವರ ಊರು ಅಂದರೆ ಒಳ್ಳೆಯ ಹೆಸರು ಇತ್ತು. ಆದರೆ ಈಗ ಕುವೆಂಪು ಅವರ ಊರಿಗೆ ಕೆಟ್ಟ ಹೆಸರು ಬರುತ್ತಿದೆ. ತೀರ್ಥಹಳ್ಳಿ ಅಂದ್ರೆ ಈಗ ಟೆರರಿಸ್ಟ್ ಊರು ಎನ್ನುವಂತಾಗಿದೆ.

    ಲೋಕಸಭಾ ಚುನಾವಣೆ ಇರುವ ಕಾರಣ ಈಗ ಎಲ್ಲದರಲ್ಲೂ ಥಳಕು ಹಾಕಲಾಗುತ್ತದೆ. ದೇಶಕ್ಕೋಸ್ಕರ ಒಳ್ಳೆಯದು ಮಾಡು ಎಂದು ನಮ್ಮ ಸಂಘಟನೆ ಹೇಳಿಕೊಟ್ಟಿದೆ. ದೇಶಕ್ಕೆ ಕೆಟ್ಟದ್ದು ಮಾಡುವಂತಹ ಅವಶ್ಯಕತೆ ಇಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ. ಭಯೋತ್ಪಾದನೆಗ ನಾನು ಸಹಕಾರ ನೀಡಿಲ್ಲ. ಆ ಜಾತಿ, ಈ ಜಾತಿ ಅಂತ ಅಲ್ಲ. ಝೆರಾಕ್ಸ್‌ ಮಾಡುವಾಗ, ಐಡಿ ನೀಡುವಾಗ ಬಹಳ ಎಚ್ಚರವಾಗಿರಿ.ನಿಮ್ಮ ಮನೆಯ ಮಕ್ಕಳಿಗೂ ಯಾರಾದ್ರೂ ಈ ರೀತಿ ಮಾಡಬಹುದು.

    ಯಾರಿದು ಮತೀನ್‌ ತಾಹಾ?
    ಅಬ್ದುಲ್ ಮತೀನ್ ಪದವೀಧರರಾಗಿದ್ದು, ಮೂಲತಃ ಚಿತ್ರದುರ್ಗದವನಾಗಿದ್ದಾನೆ. ಆದರೆ ತಾಯಿಯೊಂದಿಗಿರಲು ತೀರ್ಥಹಳ್ಳಿಗೆ ತೆರಳಿದ್ದ. ನಂತರ ಉಗ್ರ ಸಂಘಟನೆಯೊಂದಿಗೆ ಕೈಜೋಡಿಸಿದ್ದ. ತೀರ್ಥಹಳ್ಳಿಯಲ್ಲಿದ್ದ ಈತ ಹಲವು ಮುಸ್ಲಿಂ ಯುವಕರ ತಲೆ ಕೆಡಿಸಿ ಉಗ್ರ ಸಂಘಟನೆಗೆ ಸೇರ್ಪಡೆಗೊಳಿಸಿದ್ದು, ರಾಜ್ಯದಲ್ಲಿ ನಡೆದ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ಮತೀನ್ ತಾಹಾ ಇದ್ದಾನೆ ಎಂದು ಶಂಕಿಸಲಾಗಿದೆ.

    ಮತೀನ್‌ 5.5 ಅಡಿ ಹೊಂದಿದ್ದು ಮುಂದುಗಡೆ ತಲೆ ಬೋಳಾಗಿದ್ದು, ಹೆಚ್ಚಾಗಿ ಕ್ಯಾಪ್‌ ಧರಿಸುತ್ತಾನೆ. 30 ವರ್ಷದ ಈತ ವಿಘ್ನೇಶ್‌‌, ಸುಮಿತ್‌ ಅಥವಾ ಬೇರೆ ಹಿಂದೂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಐಡಿ ದಾಖಲೆಯನ್ನು ಹೊಂದಿದ್ದಾನೆ ಎಂದು ಎನ್‌ಐಎ ತಿಳಿಸಿತ್ತು.

    ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇರಿಸಿದ ವ್ಯಕ್ತಿ, ಸ್ಫೋಟ ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಹುಸೇನ್‌ ಶಜೀಬ್ ಮತ್ತು ಅಬ್ದುಲ್ ಮತೀನ್ ನಾಪತ್ತೆಯಾಗಿದ್ದು ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.

  • ಹಿಂದೂಗಳು ಕೊಡುವ ದಾಖಲಾತಿ ಪೋರ್ಜರಿ ಮಾಡಿ ಇನ್ನೊಂದು ಸಿಮ್ ಖರೀದಿ ಮಾಡಿದ್ದಾರೆ: ಬಿವೈ ರಾಘವೇಂದ್ರ

    ಹಿಂದೂಗಳು ಕೊಡುವ ದಾಖಲಾತಿ ಪೋರ್ಜರಿ ಮಾಡಿ ಇನ್ನೊಂದು ಸಿಮ್ ಖರೀದಿ ಮಾಡಿದ್ದಾರೆ: ಬಿವೈ ರಾಘವೇಂದ್ರ

    ಶಿವಮೊಗ್ಗ: ನಮ್ಮ ಹಿಂದೂ ಹುಡುಗರು ಕೊಡುವ ದಾಖಲಾತಿ ಪೋರ್ಜರಿ ಮಾಡಿ ಅವರ ಹೆಸರಿನಲ್ಲಿ ಇನ್ನೊಂದು ಸಿಮ್ (Sim) ಖರೀದಿ ಮಾಡಿದ್ದಾರೆ ಎಂದು ಸಂಸದ ಬಿವೈ ರಾಘವೇಂದ್ರ (BY Raghavendra) ತಿಳಿಸಿದ್ದಾರೆ.

    ಬಿಜೆಪಿ ಸಂಸ್ಥಾಪನಾ ದಿನ ಹಿನ್ನೆಲೆ ಶಿವಮೊಗ್ಗ ನಗರದ ಹಲವು ಬಿಜೆಪಿ ಬೂತ್‌ಗಳಿಗೆ ಭೇಟಿ ನೀಡಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ- ಯದುವೀರ್ ಬಗ್ಗೆ ಯತೀಂದ್ರ ವ್ಯಂಗ್ಯ

    ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣದಲ್ಲಿ ಎನ್‌ಐಎ (NIA) ತೀರ್ಥಹಳ್ಳಿಯ (Thirthahalli) ಬಿಜೆಪಿ ಕಾರ್ಯಕರ್ತನನ್ನು ವಿಚಾರಣೆಗೆ ಒಳಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ತೀರ್ಥಹಳ್ಳಿ ಬಿಜೆಪಿ  (BJP) ಕಾರ್ಯಕರ್ತನನ್ನು ಎನ್‌ಐಎ ತಂಡ ತನಿಖೆ ವಿಚಾರಣೆಗೆ ಕರೆದೊಯ್ದು 24 ಗಂಟೆಯಲ್ಲಿ ವಾಪಸ್ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಕರ್ತ ವಾಪಸ್ ಬಂದ ನಂತರ ಆತಂಕದ ವಿಚಾರ ಗೊತ್ತಾಯಿತು. ಹಿಂದೂ ಹುಡುಗರು ಕೊಡುವ ದಾಖಲಾತಿಯನ್ನು ಪೋರ್ಜರಿ ಮಾಡಿ ಸಿಮ್ ಖರೀದಿಸಿ ಇಂತಹ ದುಷ್ಕೃತ್ಯ ಮಾಡುವ ಮನಸ್ಥಿತಿ ಇರುವ ವ್ಯಕ್ತಿಗಳಿಗೆ ಸಿಮ್ ಕೊಡುತ್ತಿದ್ದರು ಎಂದು ಅವರು ತಿಳಿಸಿದರು. ಇದನ್ನೂ ಓದಿ: ಕರಾವಳಿಯಲ್ಲಿ ನಕ್ಸಲರ ಚಲನವಲನ – ಕಡಬದ ಮನೆಗೆ ಬಂದು ಊಟ ಮಾಡಿದ ಶಂಕಿತರು

    ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಹ ಕುವೆಂಪು ಅವರ ಜನ್ಮ ಸ್ಥಳದಲ್ಲಿ ಇಂತಹ ಘಟನೆ ನಡೆಯುತ್ತಿರೋದು ಆತಂಕದ ವಿಚಾರ. ಕೇಂದ್ರ ಸರ್ಕಾರದಿಂದ ಗಟ್ಟಿಯಾದ ನಿಲುವು ತನಿಖೆ ಆಗುತ್ತಿದೆ. ಈ ಆತಂಕದಿಂದ ಮುಕ್ತ ಆಗಬೇಕು ಎಂದರೆ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಎಂದರು. ಇದನ್ನೂ ಓದಿ: ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಈಶ್ವರಪ್ಪರಿಂದ ಕೋರ್ಟ್‍ಗೆ ಕೆವಿಯಟ್ ಸಲ್ಲಿಕೆ

    ಇಂದು ಬಿಜೆಪಿಯ ಸಂಸ್ಥಾಪನಾ ದಿನ. ಎಲ್ಲಾ ಬೂತ್‌ನಲ್ಲೂ ಸಂಸ್ಥಾಪನಾ ದಿನ ಆಚರಣೆ ಮಾಡುತ್ತಿದ್ದೇವೆ. 1,700ಕ್ಕಿಂತ ಹೆಚ್ಚಿನ ಬೂತ್‌ಗಳಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಬೂತ್‌ನಲ್ಲೇ ಇರಬೇಕು. ಕಾರ್ಯಕ್ರಮ ಮಾಡಬೇಕು. ನಾನು ಸಹ 8-10 ಬೂತ್‌ಗಳಿಗೆ ಪ್ರವಾಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸೇತುವೆ ಮೇಲೆ ಉಕ್ಕಿ ಹರಿಯುತ್ತಿರುವ ಘಟಪ್ರಭಾ – ಮೂರು ದಿನ ಸಂಚಾರ ನಿಷೇಧ

    ಈಶ್ವರಪ್ಪ (KS Eshwarappa) ಕೆವಿಯೆಟ್ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೋದಿ ಬೇಕು. ಮೋದಿಗಿಂತ ಇನ್ನೊಂದು ಹಿಂದುತ್ವದ ಮುಖ ಬೇರೊಂದಿಲ್ಲ. ಮೋದಿ ಪಕ್ಷದ ಅಧಿಕೃತ ಅಭ್ಯರ್ಥಿ ನಾನಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೋದಿ ಪೋಟೋ ಹಾಕಿಕೊಂಡು ಅವರೊಂದು ಪ್ರಯತ್ನ ಮಾಡುತ್ತಿದ್ದಾರೆ. ಜನ ಪ್ರಜ್ಞಾವಂತರಿದ್ದಾರೆ. ಇದರಲ್ಲಿ ಸ್ವಾರ್ಥ ಇದೆಯಾ? ನಿಜವಾದ ಹಿಂದುತ್ವಕ್ಕಾಗಿ ಬಿಜೆಪಿ ಪಕ್ಷ. ಹಿಂದುತ್ವ ಕಟ್ಟಿ ಬೆಳೆಸುವ ಕಾರ್ಯ ನಡೆದಿದೆ. ಮನಸ್ಸಿಗೆ ನೋವಾಗಿ ಸ್ವಂತಕೋಸ್ಕರ ಹಿಂದುತ್ವ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ತಕ್ಕ ಉತ್ತರ ಜನ ಕೊಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಟ್ವಿಸ್ಟ್‌ – ಈಗಾಗಲೇ A1 ಆರೋಪಿ ಅರೆಸ್ಟ್‌!

  • ರಾಮೇಶ್ವರಂ ಕೆಫೆ ಸ್ಫೋಟ – ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿಯನ್ನಾಗಿ ಪರಿಗಣಿಸಿದ ಎನ್‌ಐಎ

    ರಾಮೇಶ್ವರಂ ಕೆಫೆ ಸ್ಫೋಟ – ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿಯನ್ನಾಗಿ ಪರಿಗಣಿಸಿದ ಎನ್‌ಐಎ

    ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast Case) ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA)  ವಿಚಾರಣೆ ನಡೆಸಿದೆ.

    ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ ಅವರನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿ ಕಳುಹಿಸಿದ್ದಾರೆ. ಇದನ್ನೂ ಓದಿ: RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್: ಪೊಲೀಸ್ ಆಯುಕ್ತರಿಗೆ ದೂರು

     

    ಸಾಕ್ಷಿಯನ್ನಾಗಿ ಪರಿಗಣನೆ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ  ಸಾಯಿ ಪ್ರಸಾದ್‌  ಅವರನ್ನು ಎನ್‌ಐಎ ಸಾಕ್ಷಿಯನ್ನಾಗಿ ಪರಿಗಣಿಸಿದೆ.

    ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮುಜಾಮಿಲ್‌ಗೆ ಸಾಯಿ ಪ್ರಸಾದ್‌ ಮೊಬೈಲ್‌ ಮಾರಾಟ ಮಾಡಿದ್ದರು. ಮುಜಾಮಿಲ್ ಷರೀಫ್ ಪ್ರಕರಣದ ಮತ್ತೊಬ್ಬ ಆರೋಪಿ ಮುಸಾವೀರ್‌ಗೆ ಮೊಬೈಲ್ ಸಿಮ್ ಕೊಟ್ಟಿದ್ದ. ಮುಸಾವೀರ್ ಬಳಸಿದ್ದು ಇದೇ ಮೊಬೈಲ್ ಎಂಬ ಅನುಮಾನದ ಮೇಲೆ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಮಾರಾಟ ಮಾಡುತ್ತಿದ್ದ ಸಾಯಿ ಪ್ರಸಾದ್‌ ಅವರನ್ನು ವಿಚಾರಣೆ ನಡೆಸಿದೆ.

    ಮುಜಾಮಿಲ್‌ ಮೊಬೈಲ್‌ ಖರೀದಿ ಮಾಡಿದ ಹಿನ್ನೆಲೆಯಲ್ಲಿ ಎನ್‌ಐಎ ಸಾಯಿ ಪ್ರಸಾದ್‌ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸಿ ಕೆಲವೊಂದು ಮಾಹಿತಿಯನ್ನು ಪಡೆದು ಕಳುಹಿಸಿದೆ ಎಂಬ ವಿಚಾರ ಈಗ ತಿಳಿದುಬಂದಿದೆ.

  • ವಿಘ್ನೇಶ್‌, ಸುಮೀತ್‌ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್‌ – ರಾಮೇಶ್ವರಂ ಕೆಫೆ ಆರೋಪಿಗಳ ಮಾಹಿತಿ ನೀಡಿದ್ರೆ 10 ಲಕ್ಷ ಬಹುಮಾನ

    ವಿಘ್ನೇಶ್‌, ಸುಮೀತ್‌ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್‌ – ರಾಮೇಶ್ವರಂ ಕೆಫೆ ಆರೋಪಿಗಳ ಮಾಹಿತಿ ನೀಡಿದ್ರೆ 10 ಲಕ್ಷ ಬಹುಮಾನ

    ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ (Rameshwaram Cafe Bomb Blast) ಆರೋಪಿಗಳ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (NIA)ಬಿಡುಗಡೆ ಮಾಡಿ ಮಾಹಿತಿ ನೀಡಿದ ವ್ಯಕ್ತಿಗಳಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

    ಬಾಂಬ್‌ ಇರಿಸಿದ ವ್ಯಕ್ತಿ ಸ್ಫೋಟ ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಹುಸೇನ್‌ ಶಜೀಬ್ (Mussavir Hussain Shazib) ಮೂರು ಫೋಟೋ ಬಿಡುಗಡೆ ಮಾಡಿದೆ. 30 ವರ್ಷ ವಯಸ್ಸಿನ ಈತ ಜಿಮ್‌ ಬಾಡಿ ಹೊಂದಿದ್ದು ಅಂದಾಜು 6.2 ಅಡಿ ಹೊಂದಿದ್ದಾನೆ. ಮೊಹಮ್ಮದ್‌ ಜುನೈದ್ ಸಯ್ಯದ್‌ ಹೆಸರಿನಲ್ಲಿ ಡ್ರೈವಿಂಗ್‌ ಲೈಸೆನ್ಸ್‌ ಹೊಂದಿದ್ದಾನೆ ಎಂದು ತಿಳಿಸಿದೆ.  ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ದಾಳಿಯ ಸಂಚುಕೋರ ಅರೆಸ್ಟ್‌

    ಮತ್ತೊಬ್ಬ ಸಂಚುಕೋರ ಅಬ್ದುಲ್‌ ಮತೀನ್‌ ಅಹ್ಮದ್‌ (Abdul Matheen Ahmed) 5.5 ಅಡಿ ಹೊಂದಿದ್ದು ಮುಂದುಗಡೆ ತಲೆ ಬೋಳಾಗಿದ್ದು, ಹೆಚ್ಚಾಗಿ ಕ್ಯಾಪ್‌ ಧರಿಸುತ್ತಾನೆ. 30 ವರ್ಷದ ಈತ ವಿಘ್ನೇಶ್‌‌, ಸುಮಿತ್‌ ಅಥವಾ ಬೇರೆ ಹಿಂದೂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಐಡಿ ದಾಖಲೆಯನ್ನು ಹೊಂದಿದ್ದಾನೆ.

    ಇವರಿಬ್ಬರು ಪುರುಷರ/ ಹುಡುಗರ ಹಾಸ್ಟೆಲ್‌, ಪಿಜಿಯಲ್ಲಿ ನೆಲೆಸುತ್ತಾರೆ. ಕಡಿಮೆ ಬಜೆಟ್‌ ಹೋಟೆಲ್‌, ಲಾಡ್ಜ್‌ನಲ್ಲಿ ತಂಗುತ್ತಾರೆ ಎಂದು ತಿಳಿಸಿದೆ. ಇವರಿಬ್ಬರ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಗಳ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.

     

  • ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ – ರಾಮೇಶ್ವರಂ ಕೆಫೆ ಸ್ಫೋಟ, ಓರ್ವ ಅರೆಸ್ಟ್‌

    ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ – ರಾಮೇಶ್ವರಂ ಕೆಫೆ ಸ್ಫೋಟ, ಓರ್ವ ಅರೆಸ್ಟ್‌

    ಬೆಂಗಳೂರು: ಮಲೆನಾಡಿನ ಶಿವಮೊಗ್ಗ ಆಯ್ತು, ಈಗ ಕಾಫಿನಾಡಿನಲ್ಲೂ ಉಗ್ರರ ಜಾಲ ಇರುವುದು ಪತ್ತೆಯಾಗಿದ್ದು ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಚಿಕ್ಕಮಗಳೂರು (Chikkamgaluru) ಕಳಸದಲ್ಲಿ (Kalasa) ಆರೋಪಿಯೊಬ್ಬನನ್ನು ಬಂಧಿಸಿದೆ.

    ಮುಝಮ್ಮಿಲ್ ಶರೀಫ್‌(30) ಬಂಧಿತ ಆರೋಪಿ. ಬುಧವಾರ ಮುಝಮ್ಮಿಲ್ ಶರೀಫ್‌ (Muzammil Shareef) ಮನೆ ಮೇಲೆ ಎನ್‌ಐಎ ದಾಳಿ ನಡೆಸಿ ವಶಕ್ಕೆ ಪಡೆದಿತ್ತು. ಇಂದು ಬೆಂಗಳೂರಿಗೆ ಕರೆ ತಂದು ವಿಚಾರಣೆ ನಡೆಸಿದ ಬಳಿಕ ಆತನನ್ನು ಬಂಧಿಸಲಾಗಿದೆ.

    ಬಾಂಬ್‌ ಸ್ಫೋಟ ನಡೆದ ದಿನ ಆತ ಬೆಂಗಳೂರಿನಲ್ಲೇ ಇದ್ದು ಸ್ಫೋಟದ ಸಂಚುಕೋರ ಮುಸ್ಸಾವಿರ್ ಶಜೀಬ್ ಹುಸೇನ್‌ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾನೆ ಎಂಬ ಆರೋಪ ಬಂದಿದೆ.

    ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ಭೇದಿಸಿದ ನಂತರ ದಾಳಿಯ ಸಂಚುಕೋರ ಮುಝಮ್ಮಿಲ್ ಶರೀಫ್‌ನನ್ನು ಬಂಧಿಸಿದೆ. ಇದನ್ನೂ ಓದಿ: 70 ಲಕ್ಷದ ಆಸ್ತಿ ಘೋಷಿಸಿದ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

    ಆರಂಭದಲ್ಲಿ ಸ್ಫೋಟ ನಡೆಸಿದ ಪ್ರಮುಖ ಸಂಚುಕೋರ ಮುಸ್ಸಾವಿರ್ ಶಜೀಬ್ ಹುಸೇನ್‌ ಮತ್ತು ಅಬ್ದುಲ್ ಮಥೀನ್‌ನನ್ನು ತನಿಖೆಯಿಂದ ಪತ್ತೆ ಹಚ್ಚಲಾಗಿತ್ತು. ಎನ್‌ಐಎಗೆ ಬೇಕಾಗಿರುವ ಈ ಆರೋಪಿಗಳು ಈಗ ಪರಾರಿಯಾಗಿದ್ದಾರೆ.

    ಈ ಮೂವರು ಆರೋಪಿಗಳ ಮನೆಗಳು ಹಾಗೂ ಇತರ ಶಂಕಿತರ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.  ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

    ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯುವ ಪ್ರಯತ್ನಗಳು ನಡೆಯುತ್ತಿದೆ ಎಂದು ಎನ್‌ಐಎ ತನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

    ಭಟ್ಕಳದಲ್ಲೂ ವಿಚಾರಣೆ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಇಕ್ಬಾಲ್ ಭಟ್ಕಳನ ಪುತ್ರ ಅಬ್ದುಲ್ ರಾಬಿದ್‍ಗೆ ರಾಷ್ಟ್ರೀಯ ತನಿಖಾ ದಳ ನೋಟಿಸ್‌ ಜಾರಿ ಮಾಡಿ ವಿಚಾರಣೆಗೆ ಬರುವಂತೆ ಸೂಚಿಸಿದೆ.

    ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿ ಬಸ್ ಮೂಲಕ ಭಟ್ಕಳಕ್ಕೆ ಬಂದಿದ್ದ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎನ್‌ಐಎ ತಂಡ ತನಿಖೆ ಚುರುಕುಗೊಳಿಸಿದೆ.

  • ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್ – ಬೆಂಗ್ಳೂರು, ಶಿವಮೊಗ್ಗ, ಹುಬ್ಬಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ

    ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್ – ಬೆಂಗ್ಳೂರು, ಶಿವಮೊಗ್ಗ, ಹುಬ್ಬಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ

    ಬೆಂಗಳೂರು/ಶಿವಮೊಗ್ಗ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

    ಬೆಂಗಳೂರು, ಶಿವಮೊಗ್ಗ (Shivamogga), ಹುಬ್ಬಳಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದಲ್ಲಿ ಕಡೆ ದಾಳಿ ನಡೆದಿದೆ. ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ದಾಳಿ ನಡೆಸಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೋದಿ ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ತಂಗಡಗಿ ವಿರುದ್ಧ ಎಫ್‌ಐಆರ್‌ 

    ಇನ್ನೂ ಶಿವಮೊಗ್ಗದ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿಯಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳ ತಂಡವು ಹಳೆ ಆರೋಪಿ ಅಬ್ದುಲ್ ಮತೀನ್, ಬಾಂಬರ್ ಮುಸಾವೀರ್ ಹುಸೇನ್, ಬಾಂಬರ್‌ಗೆ ಸಹಾಯ ಮಾಡಿದ ಸಾರ್ಧಾರ್ ನವೀದ್, ಈ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬಾಂಬರ್ ಮುಸಾವೀರ್ ಹುಸೇನ್ ಚೆನ್ನೈನಿಂದ ಬಂದಾಗ, ಮತೀನ್‌, ನವೀದ್‌ ಸಹಾಯ ಮಾಡಿದ್ದರು ಎಂದು ಹೇಳಲಾಗಿದೆ. ಸದ್ಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಮಾಹಿತಿ ಕಲೆಹಾಕುತ್ತಿದ್ದಾರೆ.

    ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರ ಯಾರು ಅನ್ನೋದನ್ನು ಇತ್ತೀಚೆಗಷ್ಟೇ ಎನ್‌ಐಎ ಪತ್ತೆ ಮಾಡಿತು. ಈ ಮೂಲಕ 2019ರಿಂದ ಎನ್‍ಐಎ ಅಧಿಕಾರಿಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಉಗ್ರ ಅನ್ನೋ ಮಾಹಿತಿಯನ್ನೂ ಬಹಿರಂಗಪಡಿಸಿತ್ತು. ಇದನ್ನೂ ಓದಿ: ವಾಷಿಂಗ್‌ ಮಷಿನ್‌ನಲ್ಲಿತ್ತು 2.54 ಕೋಟಿ ಹಣ – ಪರಿಶೀಲನೆ ವೇಳೆ ಇ.ಡಿ ಶಾಕ್‌!

    ಟೋಪಿ ಮೂಲ ಪತ್ತೆ:
    ಶಂಕಿತ ಧರಿಸಿದ್ದ ಟೊಪಿಯ ಮೂಲವನ್ನು ಕೂಡ ಎನ್‍ಐಎ ಪತ್ತೆ ಹಚ್ಚಿದೆ. ಶಂಕಿತ ಧರಿಸಿದ್ದ ಟೋಪಿಯನ್ನು ತಮಿಳುನಾಡಿನ ಮಾಲ್ ಒಂದರಲ್ಲಿ ಖರೀದಿಸಿದ್ದಾನೆ. ಖರೀದಿ ವೇಳೆ ಮುಖ ಚಹರೆ ಸಮೇತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಈಗಾಗಲೇ ಪತ್ತೆಯಾದ ಕ್ಯಾಪ್‍ನಲ್ಲಿ ಶಂಕಿತನ ಕೂದಲು ಕೂಡ ಸಿಕ್ಕಿದೆ. ಕೂದಲು ಆಧರಿಸಿ ಡಿಎನ್‍ಎ ಟೆಸ್ಟ್ ಸಹ ಒಳಪಡಿಸಿದೆ. ಒಟ್ಟಿನಲ್ಲಿ ಎನ್‍ಐಎ ತನಿಖೆ ವೇಳೆ ಇಬ್ಬರು ಶಿವಮೊಗ್ಗದವರೆಂಬ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲೂ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಬಾಂಬರ್ `ಉಗ್ರ’ ಹೆಜ್ಜೆ:
    ಈ ಉಗ್ರ 2019ರಿಂದ ಬೇಕಾಗಿದ್ದಾನೆ. 2023ರ ಮಾರ್ಚ್-ಜುಲೈ ಮಹಾರಾಷ್ಟ್ರದಲ್ಲಿದ್ದ, ಜುಲೈ-ಡಿಸೆಂಬರ್ ವರೆಗೆ ಕರ್ನಾಟಕದಲ್ಲಿದ್ದ, 2024ರ ಜನವರಿಯಲ್ಲಿ ಕೇರಳದಲ್ಲಿದ್ದ, ಫೆಬ್ರವರಿಯಲ್ಲಿ ತಮಿಳುನಾಡಿನಲ್ಲಿದ್ದ, ಮಾರ್ಚ್ ನಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಬಂದಿದ್ದ ಎಂಬ ಮಾಹಿತಿ ಸಿಕ್ಕಿದೆ.

  • ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ಎನ್‍ಐಎಗೆ ಸಿಕ್ಕಿತು ಚೆನ್ನೈ ಲಿಂಕ್

    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ಎನ್‍ಐಎಗೆ ಸಿಕ್ಕಿತು ಚೆನ್ನೈ ಲಿಂಕ್

    – ಶಂಕಿತ ಧರಿಸಿದ್ದ ಟೋಪಿ ಮೂಲ ಪತ್ತೆ

    ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಬ್ಲಾಸ್ಟ್ ಮಾಡಿ ಹತ್ತಿರ ಒಂದು ತಿಂಗಳಾಗುತ್ತಾ ಇದೆ. ಆದರೆ ಬಾಂಬರ್ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬ್ ಇಟ್ಟವನು ಯಾರು ಅನ್ನೋದನ್ನ ಇದೀಗ ಎನ್‍ಐಎ ಪತ್ತೆ ಮಾಡಿದೆ.

    ಹೌದು, ಈಗಾಗಲೇ 2019ರಿಂದ ಎನ್‍ಐಎ ಅಧಿಕಾರಿಗಳಿಗೆ ಮೋಸ್ಟ್ ವಾಂಟೆಡ್ ಉಗ್ರ ಅನ್ನೋದು ಕ್ಲಿಯರ್ ಆಗಿದೆ. ಹಾಗಾದ್ರೆ ಆ ಮೋಸ್ಟ್ ವಾಂಟೆಡ್ ಉಗ್ರ ಎಲ್ಲಿದ್ದ ಅನ್ನೋ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ.

    ರಾಮೇಶ್ವರಂ ಕೆಫೆ ಬಾಂಬರ್ ಜಾಡು ಹಿಡಿದ ಎನ್‍ಐಎಗೆ (NIA) ಚೆನ್ನೈ ಲಿಂಕ್ ಸಿಕ್ಕಿದೆ. ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಸ್ಫೋಟಕ್ಕೂ ಮುನ್ನ ಶಂಕಿತ 2 ತಿಂಗಳು ತಮಿಳುನಾಡಿನಲ್ಲಿ ಉಳಿದಿದ್ದ. ಈ ವೇಳೆ ಶಂಕಿತನ ಜೊತೆಗೆ ಮತ್ತೋರ್ವ ವ್ಯಕ್ತಿ ಕೂಡ ಇದ್ದ. ಹೀಗೆ ಸ್ಫೋಟಕ್ಕೂ ಮುನ್ನ ಓಡಾಡಿದ್ದ ಶಂಕಿತನ ಜಾಡನ್ನು ಎನ್‍ಐಎ ಕಲೆ ಹಾಕಿದೆ. ಈ ವೇಳೆ ಶಂಕಿತ ತಮಿಳುನಾಡಿನಿಂದ ಬಂದಿರುವುದು ಪತ್ತೆಯಾಗಿದೆ.

    ಟೋಪಿ ಮೂಲ ಪತ್ತೆ: ಶಂಕಿತ ಧರಿಸಿದ್ದ ಟೊಪಿಯ ಮೂಲವನ್ನು ಕೂಡ ಎನ್‍ಐಎ ಪತ್ತೆ ಹಚ್ಚಿದೆ. ಶಂಕಿತ ಧರಿಸಿದ್ದ ಟೋಪಿಯನ್ನು ತಮಿಳುನಾಡಿನ ಮಾಲ್ ಒಂದರಲ್ಲಿ ಖರೀದಿಸಿದ್ದಾನೆ. ಖರೀದಿ ವೇಳೆ ಮುಖ ಚಹರೆ ಸಮೇತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಈಗಾಗಲೇ ಪತ್ತೆಯಾದ ಕ್ಯಾಪ್‍ನಲ್ಲಿ ಶಂಕಿತನ ಕೂದಲು ಕೂಡ ಸಿಕ್ಕಿದೆ. ಕೂದಲು ಆಧರಿಸಿ ಡಿಎನ್‍ಎ ಟೆಸ್ಟ್ ಸಹ ಒಳಪಡಿಸಿದೆ. ಒಟ್ಟಿನಲ್ಲಿ ಎನ್‍ಐಎ ತನಿಖೆ ವೇಳೆ ಇಬ್ಬರು ಶಿವಮೊಗ್ಗದವರೆಂಬ ಮಾಹಿತಿ ಸಿಕ್ಕಿದೆ.

    ಬಾಂಬರ್ `ಉಗ್ರ’ ಹೆಜ್ಜೆ: ಈ ಉಗ್ರ 2019ರಿಂದ ಬೇಕಾಗಿದ್ದಾನೆ. 2023ರ ಮಾರ್ಚ್-ಜುಲೈ ಮಹಾರಾಷ್ಟ್ರದಲ್ಲಿದ್ದ, ಜುಲೈ-ಡಿಸೆಂಬರ್ ವರೆಗೆ ಕರ್ನಾಟಕದಲ್ಲಿದ್ದ, 2024ರ ಜನವರಿಯಲ್ಲಿ ಕೇರಳದಲ್ಲಿದ್ದ, ಫೆಬ್ರವರಿಯಲ್ಲಿ ತಮಿಳುನಾಡಿನಲ್ಲಿದ್ದ, ಮಾರ್ಚ್ ನಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಬಂದಿದ್ದ ಎಂಬ ಮಾಹಿತಿ ಸಿಕ್ಕಿದೆ.