Tag: ಎನ್ ಆರ್ ಪುರ

  • ಎನ್.ಆರ್‌ಪುರ | ಸ್ಮಶಾನವಿಲ್ಲದೇ ಭದ್ರಾ ನದಿಯ ನಡುಗಡ್ಡೆಯಲ್ಲಿ ಶವಸಂಸ್ಕಾರ – 20 ವರ್ಷಗಳಿಂದ ಸಮಸ್ಯೆಗೆ ಸಿಗದ ಮುಕ್ತಿ 

    ಎನ್.ಆರ್‌ಪುರ | ಸ್ಮಶಾನವಿಲ್ಲದೇ ಭದ್ರಾ ನದಿಯ ನಡುಗಡ್ಡೆಯಲ್ಲಿ ಶವಸಂಸ್ಕಾರ – 20 ವರ್ಷಗಳಿಂದ ಸಮಸ್ಯೆಗೆ ಸಿಗದ ಮುಕ್ತಿ 

    ಚಿಕ್ಕಮಗಳೂರು: ಎನ್.ಆರ್.ಪುರ (NRPura) ತಾಲೂಕಿನ ಮೆಣಸೂರು ರಾವೂರು ಕ್ಯಾಂಪಿನ ಜನ, ಸ್ಮಶಾನವಿಲ್ಲದೇ ಮೃತದೇಹವನ್ನು ತೆಪ್ಪದಲ್ಲಿ ಕೊಂಡೊಯ್ದು ಭದ್ರಾ ಹಿನ್ನೀರಿನ (Bhadra River) ನಡುಗಡ್ಡೆಯಲ್ಲಿ ಶವಸಂಸ್ಕಾರ ನಡೆಸಿದ್ದಾರೆ.

    ರಾವೂರು ಕ್ಯಾಂಪಿನಲ್ಲಿ ಶಿಳ್ಳೆಕ್ಯಾತ ಜನಾಂಗಕ್ಕೆ ಸೇರಿದ 150ಕ್ಕೂ ಹೆಚ್ಚು ಕುಟುಂಬಗಳಿವೆ. ಇಲ್ಲಿ 600ಕ್ಕೂ ಹೆಚ್ಚು ಜನರಿದ್ದಾರೆ. ರಾವೂರಿನ ವ್ಯಕ್ತಿಯೊಬ್ಬರು ಭಾನುವಾರ ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲದೆ ಭದ್ರಾ ಹಿನ್ನೀರಿನ ಮಧ್ಯೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ಸುಮಾರು 1 ಕಿ.ಮೀ. ನದಿ ಮಧ್ಯೆ ತೆಪ್ಪದಲ್ಲಿ ಕೊಂಡೊಯ್ದು ನದಿ ಮಧ್ಯೆಯ ನಡುಗಡ್ಡೆಯಲ್ಲಿ ಶವಸಂಸ್ಕಾರ ಮಾಡಲಾಗಿದೆ. ಇದನ್ನೂ ಓದಿ: ಕುಡಿದ ಮತ್ತಲ್ಲಿ ಅಪ್ಪನನ್ನೇ ಕೊಂದ – ಸದ್ದಿಲ್ಲದೆ ಶವ ಸಂಸ್ಕಾರಕ್ಕೆ ಸ್ಕೆಚ್ ಹಾಕಿ ಲಾಕ್ ಆದ ಮಗ

    ಮೃತದೇಹ ಹೂಳಲು ಗುಂಡಿ ತೆಗೆದಾಗಲೂ ಇಲ್ಲಿ ನೀರು ಬರುತ್ತದೆ. ಆಗ ಗುಂಡಿಯಲ್ಲಿರೋ ನೀರನ್ನ ತೆಗೆದು ಕೆಳಗಡೆ ಸೊಪ್ಪು ಹಾಕಿ ಅಂತ್ಯ ಸಂಸ್ಕಾರ ಮಾಡುತ್ತಾರೆ. ಕೆಲವೊಮ್ಮೆ ಹಿಂದೆ ಮೃತದೇಹ ಅಂತ್ಯಸಂಸ್ಕಾರ ಮಾಡಿದ ಜಾಗದಲ್ಲೇ ಗುಂಡಿ ತೆಗೆದಿರುವಂತಹಾ ಉದಾಹರಣೆಯೂ ಇದೆ. ಮಳೆಗಾಲದಲ್ಲಿ ಭದ್ರಾ ಹಿನ್ನೀರು ಮನೆ ಹಿಂದೆಯೇ ಬರುತ್ತೆ. ಬೇಸಿಗೆಯಲ್ಲಿ ನೀರು ಇರೋದಿಲ್ಲ ಆಗ ಭದ್ರಾ ಹಿನ್ನೀರಿನ ಮಧ್ಯೆಯೇ ಅಂತ್ಯ ಸಂಸ್ಕಾರ ಮಾಡುತ್ತಾರೆ. ಮಳೆಗಾಲದಲ್ಲಿ ಭದ್ರಾ ಹಿನ್ನೀರು ಮನೆಯವರೆಗೂ ಬರುತ್ತದೆ. ಆಗ ತೆಪ್ಪ ಬಳಸಿ ನಡುಗಡ್ಡೆಗೆ ತೆರಳಿ ಅಂತ್ಯಸಂಸ್ಕಾರ ಮಾಡುತ್ತಾರೆ. ರಾವೂರು ಕ್ಯಾಂಪಿನ ಈ ಸ್ಥಿತಿಗೆ ಎರಡು ದಶಕಗಳ ಇತಿಹಾಸವಿದೆ.

    ಸ್ಮಶಾನಕ್ಕಾಗಿ 20 ವರ್ಷಗಳಿಂದ ತಾಲೂಕು ಆಡಳಿತ, ಶಾಸಕರು, ಗ್ರಾಮ ಪಂಚಾಯಿತಿಗೆ ಮನವಿ ಮಾಡುತ್ತಿದ್ದಾರೆ. ಆದರೆ, ಈವರೆಗೂ ಯಾರೂ ಕೂಡ ಇವರ ಮನವಿಗೆ ಸ್ಪಂದಿಸಿಲ್ಲ. ಇದನ್ನೂ ಓದಿ: ಚಿಕ್ಕಮಗಳೂರು | ಮಾಜಿ ಸಚಿವರ ಮನೆಯಲ್ಲಿ 7 ಲಕ್ಷ ನಗದು, ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

  • ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಟ್ಟ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

    ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಟ್ಟ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

    ಚಿಕ್ಕಮಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ (Shilpa Shetty) ಅವರು ಎನ್.ಆರ್.ಪುರ ತಾಲೂಕಿನ ರಂಭಾಪುರಿ ಮಠಕ್ಕೆ (Rambhapuri Mutt) ರೋಬೋಟಿಕ್ ಆನೆಯನ್ನ (Robotic Elephant) ಕೊಡುಗೆಯಾಗಿ ನೀಡಿದ್ದಾರೆ.

    ಜೀವಂತ ಆನೆಯನ್ನೂ ನಾಚಿಸುವಂತೆ ರೋಬೋಟಿಕ್ ಆನೆ ಇದೆ. ಈ ರೋಬೋಟಿಕ್ ಆನೆಯನ್ನು ರಂಭಾಪುರಿ ಶ್ರೀಗಳಾದ ವೀರ ಸೋಮೇಶ್ವರ ಜಗದ್ಗುರುಗಳು ಉದ್ಘಾಟಿಸಿ ಮಠಕ್ಕೆ ಸ್ವಾಗತಿಸಿಕೊಂಡಿದ್ದಾರೆ. ಈ ರೋಬೋಟಿಕ್ ಆನೆ ಸದಾ ಮಠದ ಆವರಣದಲ್ಲೇ ಇದ್ದು, ಭಕ್ತರನ್ನ ಆಶೀರ್ವದಿಸಲಿದೆ. ಮಠದ ಆವರಣದಲ್ಲಿ ಇದಕ್ಕಾಗಿ ಕಟ್ಟಡ ನಿರ್ಮಿಸಲಾಗಿದೆ.

    ಸದಾ ಕಣ್ಣು ಬಿಟ್ಟು, ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನು ಅಲುಗಾಡಿಸುತ್ತಿರುತ್ತದೆ. ಇದರಿಂದಾಗಿ ಆನೆಯನ್ನು ನೋಡಿದರೆ ನಿಜವಾದ ಆನೆ ಕೂಡ ಒಂದು ಕ್ಷಣ ವಿಚಲಿತಗೊಳ್ಳವಂತೆ ಇದೆ.

    ರೋಬೋಟಿಕ್ ಆನೆಯನ್ನು ತಂದಿದ್ದ ಸಿಬ್ಬಂದಿ, ಶಿಲ್ಪಾ ಶೆಟ್ಟಿಯವರು ಮಠಕ್ಕೆ ನಿಜವಾದ ಆನೆಯನ್ನೇ ಕೊಡುಗೆಯಾಗಿ ಕೊಡುವವರಿದ್ದರು. ಆದರೆ, ಕಾನೂನಿನ ತೊಡಕಾಗಬಹುದು ಎಂದು ಕಾಡಿನ ಆನೆಯನ್ನು ಹೋಲುವ ರೋಬೋಟಿಕ್ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ರಂಭಾಪುರಿ ಶ್ರೀಗಳು ಈ ರೋಬೋಟಿಕ್ ಆನೆಯನ್ನ ಉದ್ಘಾಟಿಸಿದ ಕೂಡಲೇ ಮಠಕ್ಕೆ ಬಂದಿದ್ದ ನೂರಾರು ಭಕ್ತರು ಆನೆಯ ಆಶೀರ್ವಾದ ಪಡೆದು, ಫೋಟೊ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ರಂಭಾಪುರಿ, ಉಜ್ಜಯಿನಿ, ಕೇದಾರ, ಶ್ರೀಶೈಲ ಹಾಗೂ ಕಾಶಿ ಪಂಚಪೀಠಗಳಲ್ಲಿ ಬಾಳೆಹೊನ್ನೂರಿನ ಭದ್ರಾ ನದಿ ತಟದಲ್ಲಿರುವ ರಂಭಾಪುರಿ ಮಠ ಮೊದಲನೇಯದ್ದಾಗಿದೆ.

  • ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ತುಂಬು ಗರ್ಭಿಣಿ ಸಾವು

    ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ತುಂಬು ಗರ್ಭಿಣಿ ಸಾವು

    ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ತುಂಬು ಗರ್ಭಿಣಿ ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.

    ಬಾಳೆಹೊನ್ನೂರು ನಿವಾಸಿ ಶ್ವೇತಾ(27) ಮೃತ ದುರ್ದೈವಿ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ವೈದ್ಯ ಎಲ್ಡೋಸ್ ನಿರ್ಲಕ್ಷ್ಯದಿಂದ ಗರ್ಭಿಣಿ ಶ್ವೇತಾ ಮತ್ತು ಆಕೆಯ ಹೊಟ್ಟೆಯಲ್ಲಿದ್ದ ಹಸುಗೂಸು ಅಸುನೀಗಿದೆ. ಇದನ್ನೂ ಓದಿ: 8 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ- ಅಧಿಕಾರಿ ವಿರುದ್ಧ ಪ್ರಕರಣ ದಾಖಲು

    ಎಲ್ಡೋಸ್ ಈ ಹಿಂದೆ ಎನ್.ಆರ್.ಪುರ, ಶೃಂಗೇರಿಯಲ್ಲಿ ಅಮಾನತ್ತಾಗಿದ್ದು, ಪೋಷಕರು ಗರ್ಭಿಣಿಯನ್ನ ಚಿಕ್ಕಮಗಳೂರಿಗೆ ಕರೆದುಕೊಂಡು ಹೋಗಲು ಮುಂದಾಗಿದ್ದರು. ಆದರೆ ಎಲ್ಡೋಸ್ ಅವರು ನಾನೇ ಹೆರಿಗೆ ಮಾಡಿಸುತ್ತೇನೆಂದು ಮುಂದಾಗಿದ್ದಾರೆ. ಆದರೆ ಶ್ವೇತಾ ಮತ್ತು ಮಗು ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

    ಈ ಪರಿಣಾಮ ವೈದ್ಯರ ವಿರುದ್ಧ ಆಸ್ಪತ್ರೆ ಮುಂಭಾಗ ಸ್ಥಳಿಯರು ಪ್ರತಿಭಟನೆ ಮಾಡುತ್ತಿದ್ದು, ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಲಾಗುತ್ತಿದೆ. ಈ ವೇಳೆ ಪ್ರತಿಭಟನೆಯನ್ನು ನಿಲ್ಲಿಸಲು ಬಂದ ಪೊಲೀಸರ ಜೊತೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದ್ದಾರೆ.

  • 15 ಅಡಿ ಕಂದಕಕ್ಕೆ ಬಿದ್ದ ಕಾರ್ – ಮಕ್ಕಳು ಸೇರಿ ಹತ್ತು ಜನ ಪಾರು

    15 ಅಡಿ ಕಂದಕಕ್ಕೆ ಬಿದ್ದ ಕಾರ್ – ಮಕ್ಕಳು ಸೇರಿ ಹತ್ತು ಜನ ಪಾರು

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸುಮಾರು 15 ಅಡಿ ಆಳದ ಕಂದಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ವಾಟುಕುಡಿಗೆ ಎಂಬ ಗ್ರಾಮದಲ್ಲಿ ನಡೆದಿದೆ.

    ಕಾರಿನಲ್ಲಿ ಐವರು ಮಕ್ಕಳು ಸೇರಿದಂತೆ ಒಟ್ಟು ಹತ್ತು ಜನ ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್ ಯಾರಿಗೂ ದೊಡ್ಡ ಮಟ್ಟದ ಅನಾಹುತವಾಗಿಲ್ಲ. ಆನೇಕಲ್ ನಿಂದ ಹೊರನಾಡಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬಾಳೆಹೊನ್ನೂರು ಸಮೀಪದ ವಾಟುಕುಡಿಗೆ ಗ್ರಾಮದ ಸೇತುವೆಗೆ ಡಿಕ್ಕಿ ಹೊಡೆದು ಕಾರು ಸುಮಾರು 15 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಇದನ್ನೂ ಓದಿ: ದಿವ್ಯಾ ಉರುಡುಗ ಅರವಿಂದ್ ಫುಲ್ ಕಿಲ ಕಿಲ

    ಕಾರು ಕೆಳಕ್ಕೆ ಬೀಳುವಾಗ ಕಾರಿನ ಮುಂಭಾಗ ತಲೆಕೆಳಗಾಗಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು, ಉಳಿದ ಯಾರಿಗೂ ಯಾವುದೇ ಗಾಯವಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರಿನಲ್ಲಿ ಒಟ್ಟು 10 ಜನ ಪ್ರಯಾಣ ಮಾಡುತ್ತಿದ್ದರು. ಐವರು ಮಕ್ಕಳು, ಮೂರು ಮಹಿಳೆಯರು ಹಾಗೂ ಇಬ್ಬರು ಪುರುಷರು ಇದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಒಲಿಂಪಿಕ್ಸ್ ಡೋಪಿಂಗ್ ಪರೀಕ್ಷೆ- 18 ಅಥ್ಲೀಟ್ಸ್ ಅನರ್ಹ

  • ಆಟೋದಲ್ಲಿ ಗೋಮಾಂಸ ಸಾಗಾಟ – ಇಬ್ಬರ ಬಂಧನ

    ಆಟೋದಲ್ಲಿ ಗೋಮಾಂಸ ಸಾಗಾಟ – ಇಬ್ಬರ ಬಂಧನ

    ಚಿಕ್ಕಮಗಳೂರು: ಹಸುವನ್ನ ಕೊಂದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಆಟೋ ಸಮೇತ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.

    ಬಾಳೆಹೊನ್ನೂರು ಸಮೀಪದ ದೇವದಾನ ಗ್ರಾಮದಿಂದ ವಿಜಯಗಿರಿ ಎಸ್ಟೇಟ್ ಹೋಗುವ ಮಾರ್ಗ ಮಧ್ಯೆ ಹಸುವನ್ನ ಕೊಂದು ಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದರು. ದೇವದಾನ ಸಮೀಪದ ಕಡ್ಲೆಮಕ್ಕಿ ಗ್ರಾಮದ ಇಬ್ರಾಹಿಂ ಹಾಗೂ ಷರೀಫ್ ಎಂಬುವರು ಅಕ್ರಮವಾಗಿ ಹಸುವನ್ನ ಕೊಂಡು ಕಾಡಿನಲ್ಲಿ ಮಾಂಸ ಮಾಡಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದರು. ಮಾಂಸವನ್ನ ಲಗೇಜ್ ಆಟೋದಲ್ಲಿ ತಂದು ಮಾರ್ಗ ಮಧ್ಯೆ ಸಿಗುವ ಹಳ್ಳಿಗಳಲ್ಲಿ ಮಾರಾಟಕ್ಕೆ ಮುಂದಾಗಿದ್ದರ. ವಿಷಯ ತಿಳಿದ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಸ್ಥಳಕ್ಕೆ ಬಂದ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ ಆಟೋ ಹಾಗೂ ಗೋಮಾಂಸವನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಮಲೆನಾಡು ಭಾಗದಲ್ಲಿ ಗೋಕಳ್ಳತನ ಯಥೇಚ್ಛವಾಗಿದ್ದು, ಮೇಯಲು ಹೋದ ರಾಸುಗಳು ಮನೆಗೆ ಬಂದಾಗಲೇ ಬಂದವು ಎಂದು ಗ್ಯಾರಂಟಿ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆನಾಡು ಭಾಗದಲ್ಲಿ ಗೋಕಳ್ಳತನ ಕೂಡ ಹೆಚ್ಚಾಗಿದ್ದು ರೈತರು ರಾಸುಗಳನ್ನ ಸಾಕುವುದಕ್ಕಿಂತ ಅವುಗಳನ್ನ ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ. ಬಂಧಿತರಿಬ್ಬರ ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಾಫಿನಾಡಲ್ಲಿ ರಸ್ತೆ ಮಧ್ಯೆ ಬ್ಯಾಟ್ ಬೀಸಿದ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

    ಕಾಫಿನಾಡಲ್ಲಿ ರಸ್ತೆ ಮಧ್ಯೆ ಬ್ಯಾಟ್ ಬೀಸಿದ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

    ಚಿಕ್ಕಮಗಳೂರು: ಭಾರತೀಯ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ರಸ್ತೆ ಮಧ್ಯೆಯೇ ಕ್ರಿಕೆಟ್ ಆಡಿದ್ದಾರೆ. ಮೂಲತಃ ಜಿಲ್ಲೆಯ ಕಡೂರು ತಾಲೂಕಿನವರಾದ ವೇದಾ ಕೃಷ್ಣಮೂರ್ತಿ ಖಾಸಗಿ ಕಾರ್ಯಕ್ರಮದ ನಿಮಿತ್ತ ಎನ್.ಆರ್.ಪುರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರನ್ನ ಕಂಡ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟರು.

    ಇದೇ ವೇಳೆ ಎನ್.ಆರ್.ಪುರದ ಲೆದರ್ ಬಾಲ್ ಕ್ರಿಕೆಟ್ ಕ್ಲಬ್ ವೇದಾ ಕೃಷ್ಣಮೂರ್ತಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸನ್ಮಾನದ ಬಳಿಕ ಅಭಿಮಾನಿಗಳು ಬ್ಯಾಟ್ ತಂದು ವೇದಾ ಕೈಗಿಟ್ಟು ಕ್ರಿಕೆಟ್ ಆಡುವಂತೆ ಕೇಳಿಕೊಂಡರು. ಅಭಿಮಾನಿಗಳು ಎಸೆದ ಬಾಲ್‍ಗೆ ವೇದಾ ಎನ್.ಆರ್.ಪುರ ನಗರದ ವಾಟರ್ ಟ್ಯಾಂಕ್ ಸರ್ಕಲ್‍ನಲ್ಲಿ ರಸ್ತೆ ಮಧ್ಯೆಯೇ ಬ್ಯಾಟ್ ಬೀಸಿ ಖುಷಿ ಪಟ್ಟರು.

    ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಜಿಲ್ಲೆಯ ಹೆಮ್ಮೆ-ಕೀರ್ತಿಯ ತಾರೆ ಜೊತೆ ಕೆಲ ಕಾಲ ಸಂಭ್ರಮಿಸಿದ ಕ್ಷಣಗಳನ್ನ ಕ್ರಿಕೆಟ್ ಪ್ರೇಮಿಗಳು ಖುಷಿಪಟ್ಟರು. ಅವಕಾಶಕ್ಕಾಗಿ ನಾವು ಕಾಯಬಾರದು. ಅವಕಾಶವನ್ನು ನಾವೇ ಹುಡುಕುವ ಪ್ರಯತ್ನ ಮಾಡಬೇಕು ಎಂದ ವೇದಾ, ಕ್ರಿಕೆಟ್‍ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ. ನಮ್ಮನ್ನ ನಾವು ಮೊದಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರಿಕೆಟ್‍ನಲ್ಲಿ ಸಾಧನೆ ಮಾಡುವ ಕನಸು ಕಂಡಿದ್ದ ನನಗೆ ಅವಕಾಶ ಸಿಕ್ಕಿದೆ. ಎಲ್ಲಾ ಮಹಿಳೆಯರೂ ಕೂಡ ಎಲ್ಲಾ ಕ್ಷೇತ್ರದಲ್ಲೂ ಕೂಡ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದ ವೇದಾ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

  • ಕೈ-ಕಮಲ-ದಳ ಸಾಥ್: ಕಾಫಿನಾಡಿನ ಎನ್.ಆರ್.ಪುರ ಬಂದ್

    ಕೈ-ಕಮಲ-ದಳ ಸಾಥ್: ಕಾಫಿನಾಡಿನ ಎನ್.ಆರ್.ಪುರ ಬಂದ್

    ಚಿಕ್ಕಮಗಳೂರು: ಶತಮಾನಗಳ ಬದುಕೇ ಬೀದಿಗೆ ಬೀಳುತ್ತೆ ಅಂದಾಗ ಹೋರಾಟ ಅನಿವಾರ್ಯ. ಅಂತಹ ಹೋರಾಟಕ್ಕೆ ಜಿಲ್ಲೆಯ ಎನ್.ಆರ್.ಪುರ ತಾಲೂಕು ಮುಂದಾಗಿದೆ.

    ಬದುಕಿಗಿಂತ ರಾಜಕೀಯ-ರಾಜಕಾರಣ ದೊಡ್ಡದ್ದಲ್ಲ. ಹಾಗಾಗಿ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮರಣ ಶಾಸನವಾಗಿರೋ ಭದ್ರಾ ಹುಲಿ ಯೋಜನೆಯ ಬಫರ್ ಜ್ಹೋನ್, ಪರಿಸರ ಸೂಕ್ಷ್ಮ ವಲಯದ ವಿರುದ್ಧ ಎನ್.ಆರ್.ಪುರ ತಾಲೂಕಿನ ಜನ ಪಕ್ಷಾತೀತವಾಗಿ ಹೋರಾಟಕ್ಕಿಳಿದಿದ್ದಾರೆ. ಇಂದು ಬೆಳಗ್ಗೆ ಏಳು ಗಂಟೆಯಿಂದ ಇಡೀ ದಿನ ಎನ್.ಆರ್.ಪುರ ತಾಲೂಕು ಸಂಪೂರ್ಣ ಸ್ತಬ್ಧಗೊಂಡಿದೆ.

    ಮೈಸೂರಿನ ಅರಸರಾದ ನರಸಿಂಹರಾಜ ಒಡೆಯರ್ ಈ ಊರಿಗೆ ಬಂದಿದ್ದ ನೆನಪಿನಾರ್ಥ ಈ ಊರಿಗೆ ನರಸಿಂಹರಾಜಪುರ ಎಂದೇ ಹೆಸರು ಬಂದಿದೆ. ಸಾವಿರಾರು ವರ್ಷಗಳ ಇತಿಹಾಸವಿರೋ ತಾಲೂಕಿನಲ್ಲಿ ಶೇಕಡ 80ಕ್ಕಿಂತ ಹೆಚ್ಚು ಜನ ಕೃಷಿ, ಕೃಷಿಯಾಧಾರಿತ ಕಸುಬನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಬದುಕಿನ ಜೊತೆ ಕಾಫಿ-ಮೆಣಸು, ಅಡಿಕೆ-ತೆಂಗು-ಬಾಳೆ ಸೇರಿದಂತೆ ಪರಿಸರವನ್ನೂ ಹಚ್ಚಹಸಿರಾಗಿಟ್ಟಿದ್ದಾರೆ. ಆದರೆ ಈಗ ಭದ್ರಾ ಹುಲಿ ಯೋಜನೆಯ ಬಫರ್ ಜ್ಹೋನ್ ಹಾಗೂ ಸೂಕ್ಷ್ಮ ಪರಿಸರ ವಲಯದಿಂದ ತಾಲೂಕು ಬಹುತೇಕ ಭಾಗವೇ ಇಲ್ಲದಂತಾಗುತ್ತೆ. ಹಾಗಾಗಿ ಬದುಕಿನ ಉಳಿವಿಗಾಗಿ ಜನ ಎನ್.ಆರ್.ಪುರ ಬಂದ್‍ಗೆ ಕೆರೆ ನೀಡಿದ್ದಾರೆ. ಮಲೆನಾಡು ರೈತರ ಹಿತ ರಕ್ಷಣಾ ಸಮಿತಿ, ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಮತ್ತು ಸೂಕ್ಷ್ಮ ಪರಿಸರ ವಲಯದ ವಿರುದ್ಧ ಬಂದ್ ಹಾಗೂ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

    ಪಕ್ಷಾತೀತವಾಗಿ ತಾಲೂಕಿನ ಎಲ್ಲಾ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಮಲೆನಾಡಿನ ಜನರ ಬದುಕಿನ ಮೇಲೆ ಬರೆ ಎಳೆಯಲು ಹೊರಟಿರುವ ಜನವಿರೋಧಿ ಅರಣ್ಯ ಯೋಜನೆಗಳ ವಿರುದ್ಧ ಮಲೆನಾಡಿಗರು ಹೋರಾಟಕ್ಕೆ ಮುಂದಾಗಿದ್ದಾರೆ. ಈಗಾಗಲೇ ಭದ್ರಾ ವನ್ಯಜೀವಿ ಅಭಯಾರಣ್ಯ, ಭದ್ರಾ ಜಲಾಶಯದ ಹೆಸರಿನಲ್ಲಿ ತಾಲೂಕಿನ ಬಹಳಷ್ಟು ಭಾಗವನ್ನ ಕಳೆದುಕೊಂಡಿರೋ ಮಲೆನಾಡಿಗರಿಗೆ ಭವಿಷ್ಯದಲ್ಲಿ ತಾಲೂಕಿನ ಉಳಿವಿನ ಬಗ್ಗೆಯೂ ಆತಂಕ ಹುಟ್ಟಿದೆ.

    ಭದ್ರಾ ಹುಲಿ ಯೋಜನೆಯ ಬಫರ್ ಜ್ಹೋನ್ ಹಾಗೂ ಪರಿಸರ ಸೂಕ್ಷ್ಮ ವಲಯ ಹೆಸರಿನಲ್ಲಿ ತಾಲೂಕಿನ ಹತ್ತಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಹಾಗಾಗಿ ಬದುಕೇ ಇತಿಹಾಸದ ಪುಟ ಸೇರುವ ಮುನ್ನ ವ್ಯವಸ್ಥೆ ಹಾಗೂ ಕಾಯ್ದೆ ವಿರುದ್ಧ ಪಕ್ಷಾತೀತವಾಗಿ ಹೋರಾಟಕ್ಕೆ ಮುಂದಾಗಿದ್ದಾರೆ. ಆದ್ದರಿಂದ ಜನ ಜನವಿರೋಧಿ ಹಾಗೂ ರೈತ ವಿರೋಧಿ ಯೋಜನೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬದುಕಿಗಿಂತ ದೊಡ್ಡದ್ದು ಯಾವುದೂ ಇಲ್ಲವೆಂದು ಇಂದು ತಾಲೂಕಿನ ಎಲ್ಲಾ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಎನ್.ಆರ್.ಪುರ ತಾಲೂಕು ಬಂದ್‍ಗೆ ಮುಂದಾಗಿದ್ದಾರೆ.

  • ಜ್ಯೋತಿಷ್ಯಕ್ಕೆ ಹೆದರಿ ಅರ್ಧ ದಿನದಲ್ಲಿಯೇ ಚಿಕ್ಕಮಗಳೂರಿನ ಊರು ಖಾಲಿ ಖಾಲಿ!

    ಜ್ಯೋತಿಷ್ಯಕ್ಕೆ ಹೆದರಿ ಅರ್ಧ ದಿನದಲ್ಲಿಯೇ ಚಿಕ್ಕಮಗಳೂರಿನ ಊರು ಖಾಲಿ ಖಾಲಿ!

    ಚಿಕ್ಕಮಗಳೂರು: ಜ್ಯೋತಿಷ್ಯಕ್ಕೆ ಹೆದರಿ 15 ವರ್ಷಗಳಿಂದ ವಾಸವಿದ್ದ ಊರನ್ನು ಬಿಟ್ಟು ಬೇರೊಂದು ಕಡೆಗೆ ನೆಲೆ ಅರಸಿ ಹೊರಟು ಹೋದ ಘಟನೆ ಜಿಲ್ಲೆಯ ಎನ್.ಆರ್.ಪುರದ ಬಾಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

    ಶಿಗುವಾನಿ ಗ್ರಾಮಸ್ಥರೇ ಮೂಢನಂಬಿಕೆಗೆ ಒಳಗಾದವರು. ಈ ಗ್ರಾಮದಲ್ಲಿ 50ಕ್ಕೂ ಹೆಚ್ಚು ಹಾವುಗೊಲ್ಲರು, ಹಕ್ಕಿಪಿಕ್ಕಿ ಕುಟುಂಬಗಳು ವಾಸವಾಗಿದ್ದವು. ಆದರೆ ಕಳೆದ 8 ದಿನಗಳಿಂದ 25 ಪುರುಷರು, ನಾಲ್ವರು ಮಹಿಳೆಯರು ಮೃತಪಟ್ಟಿದ್ದರು.

    ನಿರಂತರ ಸಾವಿನ ಸಂಗತಿಗೆ ಹೆದರಿದ ಗ್ರಾಮಸ್ಥರು ಜ್ಯೋತಿಷಿಗಳ ಬಳಿ ಸಮಸ್ಯೆಗೆ ಪರಿಹಾರ ಕೇಳಿದ್ದರು. ಆಗ ಅವರು ಅಲ್ಲಿ ನಾಗ ದೋಷವಿದೆ, ನಾಗಪ್ಪನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ತಿಳಿಸಿದ್ದರಂತೆ. ಅದರಂತೆ ನಾಗ ದೋಷ ನಿವಾರಣೆಗೆ ಪೂಜೆ ಮಾಡಿ, ನಾಗ ಪ್ರತಿಷ್ಠಾಪನೆ ಮಾಡಲಾಗಿತ್ತು. ಇದಾದ ನಂತರವೂ ಕೆಲವರು ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಮತ್ತಷ್ಟು ಭಯಕ್ಕೆ ಕಾರಣವಾಯಿತು.

    ಕೊನೆಯ ಪರಿಹಾರ ಎಂದರೇ ನೀವು ಗ್ರಾಮ ಬಿಟ್ಟು ಹೋಗುವುದೇ ಒಳಿತು ಎಂದು ಜ್ಯೋತಿಷಿ ಹೇಳಿದ್ದರಂತೆ. ಹೀಗಾಗಿ 50ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದ ಗ್ರಾಮವು ಗುರುವಾರ ಸಂಜೆಯೊಳಗಾಗಿ ಖಾಲಿ ಖಾಲಿ ಆಗಿದೆ. ಗ್ರಾಮಸ್ಥರು ತಮ್ಮ ಬಟ್ಟೆ, ಪಾತ್ರೆ ಸೇರಿದಂತೆ ಬೆಲೆಪಾಳುವ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಿದ್ದು, ಉಳಿದಂತೆ ಗುಡಿಸಲು, ಸಾಕು ನಾಯಿ, ಕೋಳಿ ಎಲ್ಲವನ್ನೂ ಅಲ್ಲಿಯೇ ಬಿಟ್ಟು ಹೋಗಿದ್ದಾರೆ.

    ಹಾವು ಹಿಡಿಯುವುದು, ಹಕ್ಕಿಪುಕ್ಕ ಸೇರಿಸಿ ಮಾರುವುದು ಶಿಗುವಾನಿ ಗ್ರಾಮಸ್ಥರ ಮೂಲ ವೃತ್ತಿಯಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಗಾರೆ ಕೆಲಸ, ಕಾಫಿ ತೋಟ, ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ನಿರಂತರ ಸಾವಿನ ಸಂಗತಿಯಿಂದ ಬೆಚ್ಚಿಬಿದ್ದು ಗ್ರಾಮವನ್ನು ಬಿಟ್ಟು ಹೋಗುವ ನಿರ್ಧಾರ ಕೈಗೊಂಡಿದ್ದರು. ಸದ್ಯ ಅವರು ಕುದುರೆಮುಖ, ಕುದ್ರೆಗುಂಡಿ ಮಾರ್ಗವಾಗಿ ತೀರ್ಥಹಳ್ಳಿ ತಲುಪಿದ್ದಾರೆ ಎನ್ನಲಾಗುತ್ತಿದೆ.

  • 12 ವರ್ಷದ ಬಳಿಕ ಮೈದುಂಬಿ ಹರೀತಿದೆ ಬೃಹತ್ ಚೆಕ್ ಡ್ಯಾಂ

    12 ವರ್ಷದ ಬಳಿಕ ಮೈದುಂಬಿ ಹರೀತಿದೆ ಬೃಹತ್ ಚೆಕ್ ಡ್ಯಾಂ

    ಚಿಕ್ಕಮಗಳೂರು: ಕಳೆದ 12 ವರ್ಷಗಳಿಂದ ತುಂಬದ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬೃಹತ್ ಚೆಕ್ ಡ್ಯಾಂ ಈ ವರ್ಷ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ.

    ನೋಡೋಕೆ ಮಿನಿ ಡ್ಯಾಂನಂತಿರೋ ಈ ಬೃಹತ್ ಚೆಕ್ ಡ್ಯಾಂ ತುಂಬಿರೋದ್ರಿಂದ ಕುಡಿಯೋ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಥಳಿಯರಲ್ಲಿ ಸಂತಸ ಮೂಡಿದೆ. ಇದೊಂದೆ ಅಲ್ಲ, ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರೋ ಭಾರೀ ಮಳೆಗೆ ಜಿಲ್ಲೆಯ ಎಲ್ಲಾ ನದಿಗಳು, ಹಳ್ಳ-ಕೊಳ್ಳಗಳು, ಚೆಕ್ ಡ್ಯಾಂಗಳು, ಕೆರೆಕಟ್ಟೆಗಳು ಮೈದುಂಬಿ ಹರಿಯುತ್ತಿದ್ರೆ, ನದಿಗಳು ತಿಂಗಳಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

    ಎನ್.ಆರ್.ಪುರ ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು, ಭದ್ರಾ ಡ್ಯಾಂಗೂ ಕೂಡ ಅಪಾರ ಪ್ರಮಾಣದ ನೀರು ಹರಿದು ಹೋಗ್ತಿದೆ.