Tag: ಎನ್.ಎಚ್.ಕೋನರೆಡ್ಡಿ

  • ಕಳಸಾ-ಬಂಡೂರಿ ಕಾಮಗಾರಿ ಪ್ರಾರಂಭಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕಲು ಸಭೆ ಕರೆಯಿರಿ- ಸಿಎಂಗೆ ಕೋನರೆಡ್ಡಿ ಒತ್ತಾಯ

    ಕಳಸಾ-ಬಂಡೂರಿ ಕಾಮಗಾರಿ ಪ್ರಾರಂಭಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕಲು ಸಭೆ ಕರೆಯಿರಿ- ಸಿಎಂಗೆ ಕೋನರೆಡ್ಡಿ ಒತ್ತಾಯ

    ಬೆಂಗಳೂರು: ಮಹದಾಯಿ (Mahadayi), ಕಳಸಾ-ಬಂಡೂರಿ (Kalasa-Banduri)ಯೋಜನೆ ಕಾಮಗಾರಿ ಪ್ರಾರಂಭ ಮಾಡುವ ಪ್ರಸ್ತಾವನೆಯನ್ನು ಕೇಂದ್ರದ ವನ್ಯಜೀವಿ ಮಂಡಳಿ ತಿರಸ್ಕಾರ ಮಾಡಿರುವ ಹಿನ್ನಲೆಯಲ್ಲಿ ಕೂಡಲೇ ಸರ್ವಪಕ್ಷಗಳ ಸಭೆ ಕರೆಯುವಂತೆ ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಕಾಂಗ್ರೆಸ್ ಶಾಸಕ ಕೋನರೆಡ್ಡಿ (Konareddy) ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ: ರಾಜ್ಯದಲ್ಲಿ 1 ಕೋಟಿ ನೋಂದಣಿ ಗುರಿ

    ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಭೇಟಿ ಬಳಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಬಹುದಿನಗಳ ಕನಸು ಕಳಸಾ-ಬಂಡೂರಿ, ಮಹದಾಯಿ ಯೋಜನೆಗಳು. 20 ವರ್ಷಗಳಿಂದ ಹೋರಾಟ ನಡೆದುಕೊಂಡು ಬಂದಿದ್ದು, ಎಲ್ಲವೂ ಮುಗಿದಿದೆ. ಯೋಜನೆ ಪ್ರಾರಂಭವಾಗುವ ನಿರೀಕ್ಷೆ ರಾಜ್ಯದ ಜನತೆಗೆ ಇತ್ತು. ಮೊನ್ನೆ ಕೇಂದ್ರ ವನ್ಯಜೀವಿ ಮಂಡಳಿಯು ಅನುಮತಿಯನ್ನು ತಿರಸ್ಕರಿಸಿದೆ. ಸಿಎಂ ಕೂಡಲೇ ಸರ್ವಪಕ್ಷಗಳ ಸಭೆ ಮತ್ತು ಆ ಭಾಗದ ಶಾಸಕರನ್ನು ಕರೆದು ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಮನವಿ ಮಾಡಿದ್ದೇನೆ. ಸಿಎಂ ಶೀಘ್ರವೇ ಇದರ ಬಗ್ಗೆ ವಿಚಾರ ಮಾಡಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ ಎಂದರು.

    ಚುನಾವಣೆ ಪೂರ್ವದಲ್ಲಿ ಬಿಜೆಪಿಯವರು ಸಾಕಷ್ಟು ಭಾಷಣ ಮಾಡಿದ್ದರು. ಮಹದಾಯಿ ಯೋಜನೆಯನ್ನು ನಾವು ಮಾಡೇ ಮಾಡುತ್ತೇವೆ ಎಂದಿದ್ದರು. ಇವತ್ತು ಬಿಜೆಪಿಯವರು ತಮ್ಮ ಮಾತನ್ನು ಮರೆತಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರಿಗೆ ನಾನು ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರದಿಂದ ಯೋಜನೆ ಪ್ರಾರಂಭಕ್ಕೆ ಅನುಮತಿ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಎದೆಮೂಳೆ ಮುರಿತ, ವೃಷಣಕ್ಕೆ ಹಾನಿ; 600 ರೂ.ನ ಮೆಗ್ಗಾರ್‌ನಿಂದ ಕರೆಂಟ್ ಶಾಕ್ ಕೊಟ್ಟು ಹಿಂಸೆ

  • ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ನಾಳೆ ಕಾಂಗ್ರೆಸ್‍ಗೆ ಸೇರ್ಪಡೆ

    ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ನಾಳೆ ಕಾಂಗ್ರೆಸ್‍ಗೆ ಸೇರ್ಪಡೆ

    ಧಾರವಾಡ: ಜಿಲ್ಲೆಯ ಮಾಜಿ ಶಾಸಕರೊಬ್ಬರು ಈಗ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಜೆಡಿಎಸ್‍ನ ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ಅವರೇ ನಾಳೆ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ.

    ಕಳೆದ ಹಲವು ದಿನಗಳಿಂದ ಇವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ತಾರೆ ಎಂದು ಮಾಹಿತಿ ಇತ್ತು. ಅಲ್ಲದೇ ಕೋನರೆಡ್ಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ನವಲಗುಂದ ಕ್ಷೇತ್ರದಲ್ಲಿ ಓಡಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದರು. ಈಗ ಅವರೇ ಪಬ್ಲಿಕ್ ಟಿವಿಗೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಖಚಿತ ಮಾಹಿತಿ ನೀಡಿದ್ದಾರೆ.

    ನಾಳೆ ಬೆಳಗಾವಿ ಅಧಿವೇಶನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗಮಿಸುತ್ತಿದ್ದಾರೆ. ಅವರ ಸಮ್ಮುಖದಲ್ಲೇ ಬೆಳಗಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೋನರೆಡ್ಡಿ ಕೈ ಸೇರ್ಪಡೆ ಆಗಲಿದ್ದಾರೆ.

    ಕಳೆದ 30 ವರ್ಷಗಳಿಂದ ಜೆಡಿಎಸ್ ನಲ್ಲಿದ್ದ ಕೋನರೆಡ್ಡಿ, ಕ್ಷೇತ್ರದ ಜನರ ಒತ್ತಾಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೆ ಜೆಡಿಎಸ್ ಪಕ್ಷ, ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವ ಇದೆ ಎಂದು ಕೂಡ ಕೋನರೆಡ್ಡಿ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಓಮಿಕ್ರಾನ್ ಸೋಂಕು ಪತ್ತೆ- ರಾಜ್ಯದಲ್ಲಿ ಸಂಖ್ಯೆ 3ಕ್ಕೇರಿಕೆ

    ಕಳೆದ 2013 ರಲ್ಲಿ ಕೋನರೆಡ್ಡಿ ಒಮ್ಮೆ ಮಾತ್ರ ನವಲಗುಂದ ಕ್ಷೇತ್ರದಿಂದ ಗೆದ್ದು ಬಂದಿದ್ದು, ಈಗ ಕಾಂಗ್ರೆಸ್ ಸೇರಿದ ಮೇಲೆ ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸಲಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಪ್ರಧಾನಿಗೆ ಭಗವದ್ಗೀತೆ ಗಿಫ್ಟ್ ಕೊಟ್ಟ ಐರಾವತ ನಟಿ

  • ಬಿಜೆಪಿ ಸರ್ಕಾರ ಬಂದ್ಮೇಲೆ ಸಮಸ್ಯೆಗಳು ಸೃಷ್ಟಿ: ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ

    ಬಿಜೆಪಿ ಸರ್ಕಾರ ಬಂದ್ಮೇಲೆ ಸಮಸ್ಯೆಗಳು ಸೃಷ್ಟಿ: ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ

    ಹಾವೇರಿ: ಬಿಜೆಪಿ ಸರ್ಕಾರ ಬಂದ್ಮೇಲೆ ಸಮಸ್ಯೆಗಳು ಸೃಷ್ಟಿ ಆಗುತ್ತಿವೆ, ವಿನಃ ಪರಿಹಾರ ಸಿಕ್ಕಿಲ್ಲ. ಕಳೆದ ವರ್ಷ ಅತಿವೃಷ್ಟಿ ಬಂತು, ಕೊರೊನಾ ಬಂತು. ಈಗ ಮತ್ತೆ ಪ್ರವಾಹ, ಅತಿವೃಷ್ಟಿ ಆಗಿದೆ ಎಂದು ಜೆಡಿಎಸ್ ನ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ವರ್ಷದಿಂದ ಸರ್ಕಾರ ಇದೆಯೋ ಇಲ್ಲವೋ ಎಂಬ ಪ್ರಶ್ನೆ ಕಾಡುತ್ತಿದೆ. ನನ್ನನ್ನೂ ಸೇರಿ ಸಾಮಾನ್ಯ ಜನರನ್ನ ಈ ಪ್ರಶ್ನೆ ಕಾಡುತ್ತಿದೆ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಅದರಿಂದ ಏನು ಯಶಸ್ಸು ಕಂಡಿದ್ದಾರೆ. ಕುಮಾರಸ್ವಾಮಿ ಅವರು ಹದಿನಾಲ್ಕು ತಿಂಗಳಲ್ಲಿ ಮಾಡಿದ ಕೆಲಸಗಳು ಮತ್ತು ಈಗಿನ ಸರ್ಕಾರದ ಕೆಲಸಗಳನ್ನ ತಾಳೆ ಮಾಡಿನೋಡಿ ಎಂದು ಟೀಕಿಸಿದರು.

    ಸಿಎಂ ವೈಮಾನಿಕ ಸಮೀಕ್ಷೆ ಮಾಡೋದು ತಪ್ಪಲ್ಲ. ಯಾವ ಪ್ರದೇಶದಲ್ಲಿ ಓಡಾಡಲು ಸಾಧ್ಯವಿಲ್ಲವೋ ಅಂತಹ ಕಡೆಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಬಹುದು. ಪ್ರವಾಹವಿದ್ದಾಗ ವೈಮಾನಿಕ ಸಮೀಕ್ಷೆ ಮಾಡಿದ್ರೆ ಉತ್ತಮ. ಪ್ರವಾಹ ಮುಗಿದ್ಮೇಲೆ ಅದರ ಪ್ರಯೋಜನವಿಲ್ಲ ಎಂದು ಎಂದು ವ್ಯಂಗ್ಯವಾಡಿದರು.

  • ಧಾರವಾಡದಲ್ಲಿ ಏ. 30ರವರೆಗೆ ಕಡಲೆ ಖರೀದಿಗೆ ನೋಂದಣಿ – ಮೇ 12ರವರೆಗೆ ಖರೀದಿ ಪ್ರಕ್ರಿಯೆ

    ಧಾರವಾಡದಲ್ಲಿ ಏ. 30ರವರೆಗೆ ಕಡಲೆ ಖರೀದಿಗೆ ನೋಂದಣಿ – ಮೇ 12ರವರೆಗೆ ಖರೀದಿ ಪ್ರಕ್ರಿಯೆ

    ಧಾರವಾಡ: ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಯೋಜನೆ ಅಡಿ ಜಿಲ್ಲೆಯ 13 ಖರೀದಿ ಕೇಂದ್ರಗಳಲ್ಲಿ ಏಪ್ರಿಲ್ 30ರವರೆಗೆ ರೈತರಿಂದ ನೋಂದಾಯಿಸಿ ಕೊಂಡು, ಮೇ 12ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.

    ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕಡಲೆ ಖರೀದಿ ಕುರಿತು ರೈತ ಮುಖಂಡರು ಹಾಗೂ ಕೃಷಿ ಉತ್ಪನ್ನ ಮಾರಾಟ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಈ ವೇಳೆ ಮಾತನಾಡಿದ ಡಿಸಿ ದೀಪಾ ಚೋಳನ್ ಅವರು, ಹಿಂಗಾರು ಹಂಗಾಮಿನ ಕಡಲೆ ಕಾಳು ಉತ್ಪನ್ನವನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯ ಯೋಜನೆ ಅಡಿ ಖರೀದಿಸಿಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯನ್ನು ಏಜೇನ್ಸಿಯಾಗಿ ಗುರುತಿಸಲಾಗಿದೆ. ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಕಾಳು ಉತ್ಪನ್ನಕ್ಕೆ ಪ್ರತಿ ಕ್ವಿಂಟಲಿಗೆ 4,875 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಹುಬ್ಬಳ್ಳಿ, ಧಾರವಾಡ ಎಪಿಎಂಸಿಯ ಮುಖ್ಯ ಮಾರುಕಟ್ಟೆ ಪ್ರಾಣಾಂಗಗಳು ಸೇರಿದಂತೆ ಜಿಲ್ಲೆಯ ಹುಬ್ಬಳ್ಳಿ, ಉಪ್ಪಿನಬೆಟಗೇರಿ, ನೂಲ್ವಿ, ಹೆಬಸೂರು, ಕುಂದಗೋಳ, ಯಲಿವಾಳ, ಯರಗುಪ್ಪಿ, ಅಣ್ಣಿಗೇರಿ, ನವಲಗುಂದ, ಮೊರಬ ಹಾಗೂ ತಿರ್ಲಾಪುರ ಗ್ರಾಮಗಳಲ್ಲಿ ಆರಂಭಿಸಿರುವ 13 ಸ್ಥಳಗಳಲ್ಲಿ ಖರೀದಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ರೈತರ ನೋಂದಣಿಗೆ ಏಪ್ರಿಲ್ 30ರವರೆಗೆ ಅವಕಾಶವಿದೆ. ಮೇ 12ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾಗುವುದು. ರಾಜ್ಯ ಮತ್ತು ಕೇಂದ್ರ ಉಗ್ರಾಣ ನಿಗಮಗಳಿಗೆ ಈ ಪ್ರಕ್ರಿಯೆಗೆ ಸಹಕಾರ ನೀಡಲು ತಿಳಿಸಲಾಗುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಗೋವಿನಜೋಳ ಖರೀದಿಗೆ ಮಾಜಿ ಶಾಸಕ ಕೊನರಡ್ಡಿ ಆಗ್ರಹ:
    ಕಡಲೆ ಖರೀದಿ ಕೇಂದ್ರ ಬಂದ್ ಮಾಡಬಾರದಿತ್ತು, ರೈತರು ಗೋವಿನಜೋಳ ಮನೆಯಲ್ಲಿಟ್ಟುಕೊಂಡು ಕುಳಿತಿದ್ದಾರೆ. ಮೊನ್ನೆ ಕೃಷಿ ಸಚಿವರು ಗೋವಿನಜೋಳ ಖರೀದಿ ಕೇಂದ್ರ ಆರಂಭಿಸ್ತೇವೆ ಅಂದಿದ್ದರು. ಆದರೆ ಇನ್ನೂ ಆರಂಭವಾಗಿಲ್ಲ ಎಂದು ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ಸರ್ಕಾರ ಎರಡ್ಮೂರು ತಿಂಗಳ ರೇಷನ್ ಮುಂಚಿತ ಕೊಡ್ತೇವಿ ಎಂದಿದೆ. ಆದರೆ ಅಧಿಕಾರಿಗಳು ಬೆರಳಚ್ಚು ಕೇಳುತ್ತಲೇ ಇದ್ದಾರೆ. ಸರ್ಕಾರದ ನಿಯಮ ಸರಿಯಾಗಿ ಜಾರಿಯಾಗಬೇಕು ಎಂದು ಮನವಿ ಮಾಡಿದರು. ಹಾಗೆಯೇ ರೈತರ ಉತ್ಪನ್ನ ತರಲು ತೊಂದರೆ ಕೊಡಬಾರದು. ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡಬಾರದು ಎಂದು ಡಿಸಿಗೆ ಕೇಳಿದ್ದೇವೆ, ಜೊತೆಗೆ ಸಿಎಂ ಪರಿಹಾರ ನಿಧಿಗೆ 50 ಸಾವಿರ ನೀಡಿದ್ದೇವೆ ಎಂದರು.

  • ಜೆಡಿಎಸ್ ಪಕ್ಷಕ್ಕೆ ದೇವೇಗೌಡ ತಂದೆ, ಕುಮಾರಸ್ವಾಮಿ ಸಹೋದರ: ಎನ್.ಎಚ್.ಕೋನರೆಡ್ಡಿ

    ಜೆಡಿಎಸ್ ಪಕ್ಷಕ್ಕೆ ದೇವೇಗೌಡ ತಂದೆ, ಕುಮಾರಸ್ವಾಮಿ ಸಹೋದರ: ಎನ್.ಎಚ್.ಕೋನರೆಡ್ಡಿ

    – 12 ಸೀಟು ಕೊಟ್ಟು ನೋಡ್ಲಿ, ನಾವ್ ಏನೂ ಅನ್ನೊದನ್ನ ತೋರಿಸ್ತೀವಿ
    – ಕಾಂಗ್ರೆಸ್‍ಗೆ ಕೋನರೆಡ್ಡಿ ಸವಾಲು

    ಬಾಗಲಕೋಟೆ: ಜೆಡಿಎಸ್ ಪಕ್ಷಕ್ಕೆ ಎಚ್.ಡಿ.ದೇವೇಗೌಡ ಅವರು ತಂದೆ, ಸಿಎಂ ಕುಮಾರಸ್ವಾಮಿ ಸಹೋದರ ಇದ್ದಂತೆ ಎಂದು ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದ್ದಾರೆ.

    ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಚ್.ಡಿ.ದೇವೇಗೌಡ ಅವರದ್ದು ಕುಟುಂಬ ರಾಜಕಾರಣವಲ್ಲ. ಮಂಡ್ಯದಲ್ಲಿ ನಟಿ ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರವಾಗಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

    ಉತ್ತರ ಕರ್ನಾಟಕಕ್ಕೆ ಸಿಎಂ ಕುಮಾರಸ್ವಾಮಿ ಅವರು ಅನ್ಯಾಯ ಮಾಡುತ್ತಿಲ್ಲ. ರೈತರ ಸಾಲಮನ್ನಾ ಯೋಜನೆಯಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚು ಲಾಭವಾಗುತ್ತಿದೆ. ಈ ಭಾಗದ ಯಾವುದೇ ಅಭಿವೃದ್ಧಿಯನ್ನು ಸಿಎಂ ಕುಮಾರಸ್ವಾಮಿ ಕಡೆಗಣಿಸಿಲ್ಲ. ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನ್ಯಾಯ ಮಾಡುತ್ತಿಲ್ಲ ಎಂದು ಹೇಳಿದರು.

    ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಬೀಗತನ ನಡೆದಿದೆ. ರಾಜ್ಯದಲ್ಲಿ 22 ಸ್ಥಾನ ಗೆಲ್ಲತ್ತೇವೆ ಎಂಬ ಭರವಸೆ ಇದೆ. ಗೆಲ್ಲುವ ಪ್ರತಿಯೊಬ್ಬರು ಪ್ರತಿನಿಧಿಯೇ. ಆದರೆ ಗೆಲ್ಲುವುದಿಲ್ಲವೆಂದು ತಿಳಿದವರು ಚುನಾವಣೆಗೆ ನಿಲ್ಲಬಾರದು. ಜೆಡಿಎಸ್ ಸಾಮರ್ಥ್ಯವಿಲ್ಲದೆ ಸ್ಪರ್ಧಿಸುತ್ತಿಲ್ಲ. ಕಾಂಗ್ರೆಸ್‍ನವರು ರಾಜ್ಯದಲ್ಲಿ ಜೆಡಿಎಸ್‍ಗೆ 12 ಕ್ಷೇತ್ರಗಳನ್ನು ಕೊಟ್ಟು ನೋಡಲಿ, ನಾವು ಏನೂ ಅನ್ನೊದನ್ನ ತೋರಿಸ್ತೀವಿ ಎಂದು ಸವಾಲು ಹಾಕಿದರು.

    ವಿಧಾನ ಪರಿಷತ್ ಮಾಜಿ ಸ್ಪೀಕರ್ ಬಸವರಾಜ ಹೊರಟ್ಟಿ ಅಸಮಾಧಾನ ವಿಚಾರವಾಗಿ ಮಾತನಾಡಿದ ಮಾಜಿ ಶಾಸಕರು, ಹೊರಟ್ಟಿ ಅವರಿಗೆ ಸಚಿವ ಸ್ಥಾನ ಸಿಗಬೇಕೆಂದು ನಾನು ಒತ್ತಾಯಿಸಿದ್ದೇನೆ. ಹೀಗಾಗಿ ಶೀಘ್ರದಲ್ಲಿಯೇ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv