Tag: ಎನ್ ಜಿಟಿ

  • ಬೆಳ್ಳಂದೂರು ಕೆರೆ ಮಾಲಿನ್ಯ – ರಾಜ್ಯ ಸರ್ಕಾರಕ್ಕೆ 50 ಕೋಟಿ, ಪಾಲಿಕೆಗೆ 25 ಕೋಟಿ ರೂ. ದಂಡ

    ಬೆಳ್ಳಂದೂರು ಕೆರೆ ಮಾಲಿನ್ಯ – ರಾಜ್ಯ ಸರ್ಕಾರಕ್ಕೆ 50 ಕೋಟಿ, ಪಾಲಿಕೆಗೆ 25 ಕೋಟಿ ರೂ. ದಂಡ

    – ಕೆರೆಗಳಿಗಾಗಿ 500 ಕೋಟಿ ಹಣ ಮೀಸಲಿಗೆ ಎನ್‍ಜಿಟಿ ಸೂಚನೆ

    ಬೆಂಗಳೂರು: ಬೆಳ್ಳಂದೂರು ಕೆರೆ ಮಾಲಿನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಹತ್ವದ ತೀರ್ಪು ಪ್ರಕಟಿಸಿದೆ. ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರಕ್ಕೆ 50 ಕೋಟಿ ಬಿಬಿಎಂಪಿಗೆ 25 ಕೋಟಿ ರೂಪಾಯಿ ದಂಡ ವಿಧಿಸಿದೆ.

    ಇಂದು ಅಂತಿಮ ವಿಚಾರಣೆ ನಡೆಸಿದ ನ್ಯಾ. ಆದರ್ಶ ಕುಮಾರ್ ಗೊಯಲ್ ನೇತೃತ್ವದ ಪೀಠ ಈ ಮಹತ್ವದ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ವಿಧಿಸಿದ ದಂಡವನ್ನು ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೀಡಬೇಕು. ಅಲ್ಲದೆ 500 ಕೋಟಿ ಬೆಳ್ಳಂದೂರು, ವರ್ತೂರು ಹಾಗೂ ಅಗರ ಕೆರೆ ಅಭಿವೃದ್ಧಿಗೆ ಮೀಸಲು ನಿಧಿಗೆ ನೀಡಲು ಸೂಚಿಸಿದ್ದು ಆ ಹಣವನ್ನು ಕೆರೆ ಸಂರಕ್ಷಣೆಗೆ ಬಳಸಿಕೊಳ್ಳಲು ಆದೇಶಿಸಿದೆ.

    ಇನ್ಮುಂದೆ ಕೆರೆ ಮತ್ತೆ ಕಲುಷಿತಗೊಂಡರೆ ಅದಕ್ಕೆ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ. ಅಲ್ಲದೆ, ಆ ವಿಷಯವನ್ನು ಅಧಿಕಾರಿಗಳ ಕೆರಿಯರ್ ರೆಕಾರ್ಡ್ ನಲ್ಲಿ ಬರೆಯಲು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಆದೇಶ ನೀಡಿದೆ.

    ಬೆಳ್ಳಂದೂರು ಕೆರೆ ರಕ್ಷಣೆ ಆಗಿಲ್ಲ. ರಾಜ್ಯ ಸರ್ಕಾರ, ಬಿಬಿಎಂಪಿಯಿಂದ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ರಾಜಕಾಲುವೆ ಅತಿಕ್ರಮಣ ತಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಜಲಮಾಲಿನ್ಯ ಮಾಡುವುದು ಅಪರಾಧವಾಗಿದೆ. ಘನತ್ಯಾಜ್ಯ ನಿರ್ವಹಣೆ ಸ್ಥಳೀಯ ಆಡಳಿತದ ಕರ್ತವ್ಯವಾಗಿದೆ. ಇದನ್ನು ಸಂವಿಧಾನದಲ್ಲಿ ಕೂಡ ಹೇಳಲಾಗಿದೆ. ಹೀಗಿದ್ದರೂ ರಾಜ್ಯ ಸರ್ಕಾರ, ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಅಂತ ಅಧಿಕಾರಿಗಳ ಮೇಲೂ ಎನ್ ಜಿಟಿ ಕಿಡಿಕಾರಿದೆ.

    ಜವಾಬ್ದಾರಿ ನಿಭಾಯಿಸದಿದ್ದರೆ ಮುಂದೆ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ. ಬೆಳ್ಳಂದೂರು ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಉನ್ನತ ಸಮಿತಿ ನೀಡಿರುವ ಶಿಫಾರಸ್ಸು ಪಾಲಿಸಬೇಕು. ಕೆರೆ ಒತ್ತುವರಿಯನ್ನು ತೆರವುಗೊಳಿಸಬೇಕು. ಕೆರೆಗಳ ಅಭಿವೃದ್ಧಿ ಸಂಬಂಧ ಎನ್ ಜಿಟಿ ಆದೇಶ ಪಾಲನೆಗಾಗಿ ನಿವೃತ್ತಿ ನ್ಯಾ. ಸಂತೋಷ್ ಹೆಗಡೆ ನೇತೃತ್ವದ ಸಮಿತಿ ರಚನೆ ಮಾಡುವಂತೆ ಸೂಚಿಸಲಾಗಿದೆ. ವೆಬ್ ಸೈಟ್ ರಚಿಸಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಈ ಮೂಲಕ ಜನರು ವೆಬ್ ಸೈಟ್ ನಲ್ಲಿ ದೂರು, ಸಲಹೆ ನೀಡಬಹುದು.

    ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡಿದ್ದ ಎನ್ ಜಿಟಿ ಇಂದು ತೀರ್ಪು ನೀಡಿ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.

    ಉತ್ತಮ ತೀರ್ಪು:
    ತೀರ್ಪು ಕುರಿತು ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಪ್ರತಿಕ್ರಿಯಿಸಿ, ಬೆಳ್ಳಂದೂರು ಕೆರೆ ವಿಚಾರದಲ್ಲಿ ತೀರ್ಪು ಸಿಕ್ಕಿದೆ. 50 ಕೋಟಿ, ಪಾಲಿಕೆಗೆ 25 ಕೋಟಿ ದಂಡ ಹಾಕಿರೋದು ಉತ್ತಮ ತೀರ್ಪು ಎಂದು ಹೇಳಿದರು.

    ಎನ್ ಜಿಟಿ ಈ ರೀತಿ ದಂಡ ಹಾಕಿರೋದು ಇದು ಎರಡನೇ ಬಾರಿ. ಇದು ಇಲ್ಲಿನ ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದ್ದು, ಸಂತೋಷ್ ಹೆಗ್ಡೆ ಅವ್ರ ಸಮಿತಿ ರಚನೆಗೆ ಸೂಚಿಸಿದ್ದು ಖುಷಿಯಾಗಿದೆ. ಕೆರೆಗಳು ಹಾಳಾಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹಾಗೂ ಅವರ ಸೇವಾ ರಿಜಿಸ್ಟರ್ ನಲ್ಲಿ ಉಲ್ಲೇಖೀಸಬೇಕೆಂದು ಸೂಚನೆ ಕೊಟ್ಟಿರೋದು ಒಪ್ಪಬೇಕಿದೆ. ಕೆರೆಗಳ ಅಭಿವೃದ್ದಿ ವಿಚಾರದಲ್ಲಿ ಉಲ್ಲೇಖಿಸಿರೋ ವೆಬ್ ಸೈಟ್ ಆರಂಭಿಸೋದು ಉತ್ತಮವಾಗಿದೆ. ಕೆರೆ ಸಂರಕ್ಷಣಾ ಮೀಸಲು ನಿಧಿ 500 ಕೋಟಿ ಇಡಲು ಸೂಚಿಸಿದೆ. ಈ ತೀರ್ಪು ನೋಡಿದ್ರೆ ರಾಜ್ಯ ಸರ್ಕಾರದ ಮೇಲಿನ ವಿಶ್ವಾಸ ಕಳೆದುಕೊಂಡಿರೋದು ಗೊತ್ತಾಗಿದೆ. ರಾಜ್ಯದಲ್ಲಿ ಹಾಗೂ ಪಾಲಿಕೆಯಲ್ಲಿ ಆಡಳಿತ ಇಲ್ಲ ಅನ್ನೋದು ಗೊತ್ತಾಗುತ್ತೆ. ಕೂಡಲೇ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು. ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಅಂತ ಅವರು ಆಗ್ರಹಿಸಿದರು.

    https://www.youtube.com/watch?v=syYAEeLN9wc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎತ್ತಿನಹೊಳೆ ಯೋಜನೆಯಲ್ಲಿ ರಾಜಕೀಯ ಶುರು – ಇತ್ತ ಚಿತ್ರದುರ್ಗದಲ್ಲಿ ಎತ್ತುಗಳಾದ ರೈತರು

    ಎತ್ತಿನಹೊಳೆ ಯೋಜನೆಯಲ್ಲಿ ರಾಜಕೀಯ ಶುರು – ಇತ್ತ ಚಿತ್ರದುರ್ಗದಲ್ಲಿ ಎತ್ತುಗಳಾದ ರೈತರು

    ಹಾಸನ, ಚಿತ್ರದುರ್ಗ: ಬಹುಚರ್ಚೆಯ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ರಾಷ್ಟ್ರೀಯ ಹಸಿರು ಪೀಠ ಗ್ರೀನ್‍ಸಿಗ್ನಲ್ ನೀಡಿದೆ. ಆದ್ರೆ ಹಾಸನ ಜಿಲ್ಲೆಯಲ್ಲಿ ರಾಜಕೀಯ ಕಚ್ಚಾಟ ಮುಂದುವರಿದಿದೆ.

    ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸೋ ಎತ್ತಿನಹೊಳೆ ಕಾಮಗಾರಿಗೆ ಎನ್‍ಜಿಟಿ ಅಸ್ತು ಎಂದಿದ್ರೂ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪ ಮುಂದುವರಿದಿದೆ. ಕೋಲಾರ- ಚಿಕ್ಕಬಳ್ಳಾಪುರಕ್ಕೆ ನೀರು ಕೊಟ್ಟೇ ಕೊಡ್ತೀವಿ ಅಂತ ಸರ್ಕಾರದವರು ಹೇಳಿ ಹೊರಟಿದ್ದಾರೆ. ಆದ್ರೆ ಈ ವರ್ಷ ಕೊಡ್ತಾರೋ ಮುಂದಿನ ವರ್ಷ ಕೊಡ್ತಾರೋ ಅಥವಾ ಅದರ ಮುಂದಿನ ವರ್ಷ ಕಾಂಗ್ರೆಸ್ ಸರ್ಕಾರ ಬಂದಾಗ ಕೊಡ್ತಾರೋ ಗೊತ್ತಿಲ್ಲ. ಈ ವರ್ಷ ನೀರು ಕೊಡೋದು ಕಷ್ಟ ಅಂತ ಕಾಣತ್ತೆ ಎಂಬುವುದಾಗಿ ಮಾಜಿ ಪ್ರಧಾನಿ ದೇವೇ ಗೌಡ ಹೇಳಿದ್ದಾರೆ.

    ದೇವೇಗೌಡರ ಹೇಳಿಕೆಗೆ ತಿರುಗೇಟು ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಮಂಜು ಎತ್ತಿನಹೊಳೆ ಯೋಜನೆ ವೈಜ್ಞಾನಿಕವಾಗಿಯೇ ಇದೆ. ಮುಂದಿನ ಜನವರಿ ವೇಳೆಗೆ ಮೊದಲ ಹಂತದ ಕಾಮಗಾರಿ ಮುಗಿಸಿ ನೀರನ್ನು ಲಿಫ್ಟ್ ಮಾಡಿ ಬೇಲೂರು ಕಡೆಗೆ ಹರಿಸ್ತೇವೆ ಅಂದ್ರು. ಇದನ್ನು ಮಾಡಲಾಗದವರು ರಾಜಕೀಯಕ್ಕಾಗಿ ಏನೇನೋ ಮಾತಾಡ್ತಿದ್ದಾರೆ ಅಂತ ಕುಟುಕಿದ್ರು.

    ಒಟ್ಟಿನಲ್ಲಿ ಇಲ್ಲಿ ಗಮನಿಸಬೇಕಾದ ಅಂಶ ಅಂದ್ರೆ ಪಶ್ಚಿಮಘಟ್ಟಗಳಲ್ಲಿ ಈ ಬಾರಿ ನಿರೀಕ್ಷಿತ ಮಳೆಯಾಗಿಲ್ಲ. ಜೊತೆಗೆ ಹೇಮಾವತಿ ಜಲಾಶಯ ಕೂಡ ಭರ್ತಿ ಆಗಿಲ್ಲ. ಇನ್ನು ಎತ್ತಿನಹೊಳೆ ಮೂಲಕ ನೀರು ಎಲ್ಲಿಂದ ಹರಿಯಲಿದೆ ಅನ್ನೋದು ಸದ್ಯದ ಪ್ರಶ್ನೆಯಾಗಿದೆ.

    ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಆರೇಳು ವರ್ಷಗಳಿಂದ ಮಳೆಯಿರಲಿಲ್ಲ. ಕೆರೆ-ಕಟ್ಟೆಗಳು ಬರಿದಾಗಿ ಅಂತರ್ಜಲ ಕುಸಿದಿತ್ತು. ಕುಡಿವ ನೀರಿಗೂ ಹಾಹಾಕಾರ ಏರ್ಪಟ್ಟಿತ್ತು. ಇದ್ರಿಂದ ನೊಂದಿದ್ದ ರೈತರು
    ದನಕರು, ಎತ್ತು ಮಾರಾಟ ಮಾಡಿ ಕೃಷಿಯಿಂದ ವಿಮುಖರಾಗಿದ್ರು.

    ಆದ್ರೆ ಈಗ ಪರಿಸ್ಥಿತಿ ಬದಲಾಗಿದೆ. ಉತ್ತಮ ಮಳೆಯಾಗುತ್ತಿದೆ. ಇದು ಮತ್ತೆ ಕೃಷಿ ಚಟುವಟಿಕೆಗೆ ರೈತರನ್ನ ಪ್ರೇರೇಪಿಸಿದೆ. ಎತ್ತುಗಳು ಸಿಗದಿದ್ರೂ ಅನ್ನದಾತ ಉಳುಮೆಗೆ ಮುಂದಾಗಿದ್ದಾನೆ. ಮನೆ ಮಂದಿಯೆಲ್ಲಾ ಸೇರಿ ನೊಗಕ್ಕೆ ಹೆಗಲು ಕೊಟ್ಟು ಉಳುಮೆ ಕಾರ್ಯದಲ್ಲಿ ತೊಡಗಿದ್ದಾರೆ.

    ತಮ್ಮ ಕೈಗಳು ಹೆಪ್ಪುಗಟ್ಟಿದ್ದರೂ ದಿಟ್ಟ ಮನಸ್ಸಿನಿಂದ ಬಿತ್ತನೆ ಕಾರ್ಯದಲ್ಲಿ ತೊಡಗಿರೋ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗೊಲ್ಲರಹಟ್ಟಿ ರೈತರನ್ನ ಕೇಳಿದ್ರೆ, ಹಲವಾರು ವರ್ಷಗಳಿಂದ ಮಳೆಯೇ ಇರಲಿಲ್ಲ. ಈಗ ಕಷ್ಟಪಟ್ಟು ಸಾವಿರಾರು ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿದ್ದೇವೆ ಅಂತ ಹೇಳ್ತಿದ್ದಾರೆ.