Tag: ಎಫೆಕ್ಟ್

  • ಲಾಲ್ ಸಿಂಗ್ ಚಡ್ಡಾ ಎಫೆಕ್ಟ್ : ಆಮೀರ್ ಖಾನ್ ಸಿನಿಮಾಗಳಿಂದ ದೂರ ಸರಿಯುತ್ತಿರುವ ನಿರ್ಮಾಪಕರು

    ಲಾಲ್ ಸಿಂಗ್ ಚಡ್ಡಾ ಎಫೆಕ್ಟ್ : ಆಮೀರ್ ಖಾನ್ ಸಿನಿಮಾಗಳಿಂದ ದೂರ ಸರಿಯುತ್ತಿರುವ ನಿರ್ಮಾಪಕರು

    ಬಾಲಿವುಡ್ ಸಿನಿಮಾ ರಂಗದಲ್ಲಿ ಬಾಯ್ಕಾಟ್ ವಿಚಾರ ಬಿಟೌನ್ ಸ್ಟಾರ್ ನಟರನ್ನು ನಿದ್ದೆಗೆಡಿಸುತ್ತಿದೆ. ಅಮಿತಾಭ್ ಬಚ್ಚನ್ ಅಂತಹ ದಿಗ್ಗಜ ನಟರೇ ಈ ವಿಚಾರದಲ್ಲಿ ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆ. ಮೊನ್ನೆಯಷ್ಟೇ ಇಂತಹ ವಿಷಯಗಳಲ್ಲಿ ಏನು ಮಾತಾಡಬೇಕು ಎಂದು ತಿಳಿಯುತ್ತಿಲ್ಲ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಷ್ಟರ ಮಟ್ಟಿಗೆ ಬಾಯ್ಕಾಟ್ ಬಾಲಿವುಡ್ ಮಂದಿಯನ್ನು ಕಾಡುತ್ತಿದೆ.

    ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ, ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್, ತಾಪ್ಸಿ ಪನ್ನು ನಟನೆಯ ಸಿನಿಮಾ, ಇದೀಗ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಚಿತ್ರಕ್ಕೂ ಬಾಯ್ಕಾಟ್ ಭೂತ ಕಾಡಿದೆ. ಅದರಲ್ಲೂ ಹೆಚ್ಚು ತೊಂದರೆ ಮಾಡಿದ್ದ ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾಗೆ ಎನ್ನುವುದು ಬಾಲಿವುಡ್ ಲೆಕ್ಕಾಚಾರ. ಬಾಕ್ಸ್ ಆಫೀಸಿನಲ್ಲಿ ಸೋಲು ಮಾತ್ರವಲ್ಲ, ಅವರ ಮುಂದಿನ ಚಿತ್ರಗಳಿಗೆ ತೊಂದರೆ ಎದುರಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಈಗೀಗ ಚೈತ್ರಾ ಹಳ್ಳಿಕೇರಿ ಮುಖವಾಡ ಕಳಚ್ತಾ ಇದ್ದಾರೆ : ಸ್ಪೂರ್ತಿ ಗೌಡ

    ಆಮೀರ್ ಖಾನ್ ಅವರು ಈಗಾಗಲೇ ನಾಲ್ಕು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಈ ಬಾಯ್ಕಾಟ್ ಗೆ ಭಯಪಟ್ಟುಕೊಂಡಿರುವ ನಿರ್ಮಾಪಕರು ಒಬ್ಬೊಬ್ಬರೇ ಒಪ್ಪಿಕೊಂಡ ಸಿನಿಮಾಗಳಿಂದ ದೂರ ಸರಿಯುತ್ತಿದ್ದಾರೆ ಎನ್ನುವ ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಂದುಕೊಂಡಂತೆ ಆಗಿದ್ದರೆ, ಈಗಾಗಲೇ ಆಮೀರ್ ಹೊಸ ಸಿನಿಮಾ ಘೋಷಣೆ ಆಗಬೇಕಿತ್ತು. ಆದರೆ, ಬಾಯ್ಕಾಟ್ ನಿಂದಾಗಿ ಮುಂದೂಡಲಾಗಿದೆ ಎನ್ನುವು ನಯಾ ಸಮಾಚಾರ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಎಫೆಕ್ಟ್ – ಮುಂಗಡವಾಗಿ 4 ತಿಂಗ್ಳ ಸಂಬಳ ನೀಡಿದ ಸರ್ಕಾರ

    ಕೊರೊನಾ ಎಫೆಕ್ಟ್ – ಮುಂಗಡವಾಗಿ 4 ತಿಂಗ್ಳ ಸಂಬಳ ನೀಡಿದ ಸರ್ಕಾರ

    ಭುವನೇಶ್ವರ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಸಂಬಳವನ್ನು ಮುಂಗಡವಾಗಿ ಪಾವತಿಸಲಾಗುವುದು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ.

    ಕೊರೊನಾ ವಿರುದ್ಧದ ಹೋರಾಟದಲ್ಲಿ ವೈದ್ಯರು, ನರ್ಸ್, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಎಲ್ಲ ಸರ್ಕಾರಿ ವೈದ್ಯಕೀಯ ವೃತ್ತಿಪರರು ಭಾಗಿಯಾಗಿದ್ದಾರೆ. ಅವರಿಗೆ ಎಪ್ರಿಲ್, ಮೇ, ಜೂನ್, ಜುಲೈ ಸೇರಿ ಒಟ್ಟು ನಾಲ್ಕು ತಿಂಗಳ ಸಂಬಳವನ್ನು ಮುಂಗಡವಾಗಿ ಪಾವತಿಸಲಾಗುವುದು ಎಂದು ಪಟ್ನಾಯಕ್ ತಿಳಿಸಿದ್ದಾರೆ.

    ದೇಶದಲ್ಲಿ 584 ಕೊರೊನಾ ಸೋಂಕು ಪತ್ತೆಯಾಗಿದ್ದು, ಒಡಿಸಾದಲ್ಲಿ ಇದುವರೆಗೂ ಇಬ್ಬರಲ್ಲಿ ಸೋಂಕು ಕಂಡು ಬಂದಿದೆ. ಕೊರೊನಾ ವಿರುದ್ಧ ಹೋರಾಟದಲ್ಲಿರುವ ವೈದ್ಯರು, ವೃತ್ತಿಪರ ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದರು. ವೈದ್ಯರು, ಪೊಲೀಸರ ಕಾರ್ಯಕ್ಕೆ ಅಡ್ಡಿಪಡಿಸುವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

    ಇದಲ್ಲದೇ ತಮ್ಮ ಮೂರು ತಿಂಗಳ ಸಂಬಳವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದು, ಶಾಸಕರಿಗೂ ನೆರವಾಗುವಂತೆ ಮನವಿ ಮಾಡುತ್ತೇನೆ ಎಂದರು. ಜೊತೆಗೆ ಕೊರೊನಾ ಸಂಕಷ್ಟಕ್ಕೆ ರಾಜ್ಯದ ಜನರು ನೆರವಾಗಬೇಕಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಪಟ್ನಾಯಕ್ ಮನವಿ ಮಾಡಿದ್ದಾರೆ.