Tag: ಎಮ್ಮೆ

  • ಎಮ್ಮೆ ಕೊಡಿಸೋದಾಗಿ KD ನಿರ್ದೇಶಕನಿಗೆ ಲಕ್ಷ ಲಕ್ಷ ವಂಚನೆ – ಪ್ರೇಮ್ ಹೇಳಿದ್ದೇನು..?

    ಎಮ್ಮೆ ಕೊಡಿಸೋದಾಗಿ KD ನಿರ್ದೇಶಕನಿಗೆ ಲಕ್ಷ ಲಕ್ಷ ವಂಚನೆ – ಪ್ರೇಮ್ ಹೇಳಿದ್ದೇನು..?

    ʻಕೆಡಿʼ ಚಿತ್ರದ ನಿರ್ದೇಶಕ, ನಟ ಪ್ರೇಮ್‌ಗೆ (Prem) ಎಮ್ಮೆ ಕೊಡಿಸೋದಾಗಿ ಹೇಳಿ ಗುಜರಾತ್‌ ಮೂಲದ ವ್ಯಕ್ತಿಯೊಬ್ಬ ಲಕ್ಷ ಲಕ್ಷ ಹಣ ವಂಚನೆ ಮಾಡಿದ್ದಾರೆಂದು ತಿಳಿದುಬಂದಿದೆ.

    ಕೆಡಿ ಸಿನಿಮಾ ನಿರ್ದೇಶಕ ಪ್ರೇಮ್ ಹೈನುಗಾರಿಕೆಗಾಗಿ ಗುಜರಾತ್ ಮೂಲದ ಎರಡು ಎಮ್ಮೆಗಳನ್ನ ಖರೀದಿಸಲು ಮುಂಗಡವಾಗಿ 25,000 ಹಣ ನೀಡಿದ್ದರು. ಬಳಿಕ ಗುಜರಾತ್ ಮೂಲದ ವನರಾಜ್ ಭಾಯ್ ಎಮ್ಮೆ ವಿಡಿಯೋ ಹಾಗೂ ಫೋಟೋಗಳನ್ನ ವಾಟ್ಸಪ್ ಮೂಲಕ ಕಳಿಸಿದ್ದರು. ತದನಂತರ 3,75,000 ರೂ.ಗಳನ್ನ ಪ್ರೇಮ್‌ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಿದ್ದರು. ಇದಾದ 1 ವಾರದೊಳಗೆ ಎಮ್ಮೆ ಕಳುಹಿಸುವುದಾಗಿ ಹೇಳಿದ್ದ ವ್ಯಕ್ತಿ ಮತ್ತೆ 50,000 ಹಣ ವರ್ಗಾವಣೆ ಮಾಡುವಂತೆ ಹೇಳಿದ್ದು, ಒಟ್ಟು 4.5ಲಕ್ಷ ಹಣವನ್ನ ನಿರ್ದೇಶಕ ಪ್ರೇಮ್ ವನರಾಜ್ ಎಂಬಾತನಿಗೆ ವರ್ಗಾಯಿಸಿದ್ದರು. ಆದ್ರೆ ಹಣ ಪಡೆದ ಬಳಿಕ ಎಮ್ಮ ಕೊಡಿಸ್ತೀನಿ ಅಂದವನು ನಾಪತ್ತೆಯಾಗಿದ್ದಾನೆ.

    ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ ವನರಾಜ್ ಭಾಯ್ ವಿಳಾಸಕ್ಕೆ ನಿರ್ದೇಶಕ ಪ್ರೇಮ್ ತಮ್ಮ ಹುಡುಗರನ್ನ ಕಳುಹಿಸಿ ಹುಡುಕಾಡಿಸಿದ್ದರು. ಆದ್ರೆ ಹಣ ಪಡೆದ ವನರಾಜ್ ಕೈಗೆ ಸಿಕ್ಕಿಲ್ಲ ಎಂದು ದೂರು ನೀಡಿದ್ದರು. ಹಣ ಪಡೆದ ವನರಾಜ್ ಭಾಯ್ ಎಮ್ಮೆಯನ್ನೂ ನೀಡದೇ ಹಣವನ್ನ ಮರಳಿ ಕೊಡದೇ ವಂಚಿಸಿದ್ದಾರೆಂದು ಆರೋಪ ಮಾಡಲಾಗಿತ್ತು. ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರೇಮ್ ಅವರು ಮ್ಯಾನೇಜರ್ ದಶಾವರ ಚಂದ್ರು ಮುಖಾಂತರ ದೂರು ದಾಖಲಿಸಿದ್ದರು.

    ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಎರಡು ಎಮ್ಮೆಗಳನ್ನ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗ್ತಿದೆ. ಜುಲೈ 22ರಿಂದ ಜುಲೈ 24ರ ಮಧ್ಯೆ ಹಣ ಕಳುಹಿಸಿದ್ದ ನಿರ್ದೇಶಕ ಪ್ರೇಮ್‌ಗೆ ಕಳೆದೊಂದು ವಾರದ ಹಿಂದೆ ಎರಡು ಎಮ್ಮೆಗಳನ್ನ ಕಳುಹಿಸಿಕೊಟ್ಟಿದ್ದಾರೆ ಎಂದು ʻಪಬ್ಲಿಕ್ ಟಿವಿʼಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನು ಮ್ಯಾನೇಜರ್ ದಶಾವರ ಚಂದ್ರು ಕೂಡಾ ಸ್ಪಷ್ಟನೆ ನೀಡಿದ್ದು, ವನರಾಜ್ ಎಂಬುವವರ ಫೋನ್ ಸ್ವಿಚ್ ಆಫ್ ಆಗಿತ್ತು, ತದನಂತರ ಎಮ್ಮೆ ಕಳುಹಿಸಿಕೊಟ್ಟಿದ್ದಾರೆ ಎಂದಿದ್ದಾರೆ. ಇನ್ನು ಪ್ರೇಮ್ ಆಪ್ತ ಮೂಲಗಳ ಮಾಹಿತಿ ಪ್ರಕಾರ ಹಣ ವಾಪಾಸ್ ಕೊಡೋದಾಗಿ ಗುಜರಾತ್ ಮೂಲದ ವನರಾಜ್ ಒಪ್ಪಿಕೊಂಡಿದ್ದಾರೆ ಎನ್ನಲಾಗ್ತಿದೆ.

    ನಿರ್ದೇಶಕ ಪ್ರೇಮ್ ಚಿತ್ರರಂಗದಲ್ಲಿ ಬ್ಯುಸಿ ಶೆಡ್ಯೂಲ್ ನಡುವೆಯೂ ತೋಟಗಾರಿಕೆ, ಹೈನುಗಾರಿಕೆ, ಹಳ್ಳಿಯ ಆಚರಣೆಗಳನ್ನ ಮಾತ್ರ ಸಿನಿಮಾದ ಜೊತೆ ಜೊತೆಗೆ ಮಾಡುತ್ತಾ ಬರುತ್ತಿದ್ದಾರೆ. ಹೀಗಾಗಿ ತಮ್ಮ ತೋಟದ ಮನೆಯಲ್ಲಿ ಹೈನುಗಾರಿಕೆಗಾಗಿ ಗುಜರಾತ್‌ನ ಗಿರ್ ತಳಿಯ ಎರಡು ಎಮ್ಮೆಯನ್ನ ಕೊಂಡುಕೊಳ್ಳಲು ಮುಂದಾಗಿದ್ದಾಗ ವಂಚನೆ ಆರೋಪ ಕೇಳಿ ಬಂದಿತ್ತು. ಸದ್ಯಕ್ಕೆ ಸ್ವತಃ ನಿರ್ದೇಶಕ ಪ್ರೇಮ್ ಹಾಗೂ ಅವರ ಮ್ಯಾನೇಜರ್ ಚಂದ್ರು ಸ್ಪಷ್ಟಪಡಿಸಿದ ಹಾಗೆ ಎಲ್ಲವೂ ಬಗೆಹರಿದಿದೆ ಎಂದಿದ್ದಾರೆ. ಸದ್ಯ ಕೆಡಿ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ನಿರ್ದೇಶಕ ಪ್ರೇಮ್.

  • ಮೇವು ತಿನ್ನುವ ವೇಳೆ ಕಚ್ಚಾ ನಾಡಬಾಂಬ್ ಬ್ಲಾಸ್ಟ್ – ಎಮ್ಮೆ ಸಾವು

    ಮೇವು ತಿನ್ನುವ ವೇಳೆ ಕಚ್ಚಾ ನಾಡಬಾಂಬ್ ಬ್ಲಾಸ್ಟ್ – ಎಮ್ಮೆ ಸಾವು

    ಹಾವೇರಿ: ಎಮ್ಮೆ ಮೇವು ತಿನ್ನುವ ವೇಳೆ ಕಚ್ಚಾ ನಾಡಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಎಮ್ಮೆ (Buffalo) ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆ ಹಾನಗಲ್ (Hanagal) ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದ ಬಳಿ ನಡೆದಿದೆ.

    ಗ್ರಾಮದ ರೈತ ಬಾಷಾಸಾಬ್ ಬಂಕಾಪುರ ಎಂಬ ರೈತನಿಗೆ ಸೇರಿದ ಎಮ್ಮೆ ಮೃತಪಟ್ಟಿದೆ. ಕಾಡು ಹಂದಿ ಬೇಟೆಗಾಗಿ ಬೇಟೆಗಾರರು ಇಟ್ಟಿದ್ದ ಕಚ್ಚಾ ನಾಡಬಾಂಬ್ ಸೇವಿಸಿ ಈ ದುರ್ಘಟನೆ ನಡೆದಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ದನಗಳು ಮೇಯಿಸಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಇದನ್ನೂ ಓದಿ: ಛತ್ತೀಸ್‌ಗಢ| ಇಬ್ಬರು ನಾಗರಿಕರ ಹತ್ಯೆ ಮಾಡಿದ ನಕ್ಸಲರು

    ಕಚ್ಚಾ ನಾಡಬಾಂಬ್ ಇಟ್ಟವರ ಮೇಲೆ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ. ಎಮ್ಮೆ ಕಳೆದುಕೊಂಡ ಬಡ ರೈತನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಗಿದೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಉತ್ತರಾಖಂಡದ ಬಳಿಕ ಗುಜರಾತ್‌ನಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ

  • ಚಿತ್ರದುರ್ಗ| ಲಾರಿ, 2 ಕಾರುಗಳ ನಡುವೆ ಸರಣಿ ಅಪಘಾತ – 4 ಎಮ್ಮೆಗಳು ಸಾವು

    ಚಿತ್ರದುರ್ಗ| ಲಾರಿ, 2 ಕಾರುಗಳ ನಡುವೆ ಸರಣಿ ಅಪಘಾತ – 4 ಎಮ್ಮೆಗಳು ಸಾವು

    ಚಿತ್ರದುರ್ಗ: ಲಾರಿ (Lorry) ಮತ್ತು ಎರಡು ಕಾರುಗಳ (Car) ನಡುವೆ ಸರಣಿ ಅಪಘಾತವುಂಟಾದ ಪರಿಣಾಮ ಎಮ್ಮೆಗಳಿಗೆ (Buffalo) ಲಾರಿ ಡಿಕ್ಕಿಯಾಗಿ 4 ಎಮ್ಮೆಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತವುಂಟಾಗಿದೆ. ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಸಂಭಲ್‌ ಮಸೀದಿ ಸುತ್ತ ಒತ್ತುವರಿ ತೆರವು ವೇಳೆ ಹಳೇ ಹಿಂದೂ ದೇಗುಲ ಪತ್ತೆ

    ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಸಕ್ಕರೆನಾಡು ಮಂಡ್ಯ ಕೇಸರಿಮಯ – ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ

  • 22ರ ಹರೆಯದಲ್ಲಿ ಎಮ್ಮೆ ಕದ್ದವ 80ನೇ ವಯಸ್ಸಿನಲ್ಲಿ ಸಿಕ್ಕಿ ಬಿದ್ದ!

    22ರ ಹರೆಯದಲ್ಲಿ ಎಮ್ಮೆ ಕದ್ದವ 80ನೇ ವಯಸ್ಸಿನಲ್ಲಿ ಸಿಕ್ಕಿ ಬಿದ್ದ!

    ಬೀದರ್: 58 ವರ್ಷಗಳಿಂದ ಪೊಲೀಸರ (Police) ಕೈಗೇ ಸಿಗದೇ ನ್ಯಾಯಾಲಯಕ್ಕೂ (Court) ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎಮ್ಮೆ ಕಳ್ಳನನ್ನು ಬೀದರ್ ಪೊಲೀಸರು (Bidar Police) ಬಂಧಿಸಿದ್ದಾರೆ.

    ಮಹಾರಾಷ್ಟ್ರದ ಮೂಲದ ಕಿಶನ್ ಚಂದರ್ ಹಾಗೂ ಗಣಪತಿ ವಿಠಲ್ ವಾಗ್ಮೋರೆ 1965ರಲ್ಲಿ 2 ಎಮ್ಮೆ, 1 ಕರು ಕದ್ದಿದ್ದರು. ಎಮ್ಮೆ ಮಾಲೀಕ ಮರಳೀಧರಾವ್ ಕುಲಕರ್ಣಿ ಎಂಬುವರು ಭಾಲ್ಕಿಯ ಮಹಕರ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಇದನ್ನೂ ಓದಿ: ಎಂಜಿನಿಯರ್‌ ಮಿದುಳು ನಿಷ್ಕ್ರಿಯ –ಬೆಂಗಳೂರಿನಿಂದ ತಮಿಳುನಾಡಿಗೆ ಜೀವಂತ ಹೃದಯ ರವಾನೆ

     

    ಜಾಮೀನು ಸಿಕ್ಕಿದ ಬಳಿಕ ಇಬ್ಬರು ಕೋರ್ಟ್‌ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದರು. ಸಮನ್ಸ್, ನೋಟಿಸ್, ವಾರೆಂಟ್ ನೀಡಿದ್ದರೂ ಆರೋಪಿಗಳು ಕ್ಯಾರೇ ಅಂದಿರಲಿಲ್ಲ. ಈ ಪೈಕಿ 2006 ರಲ್ಲಿ ಮೊದಲ ಆರೋಪಿ ಕಿಶನ್ ಚಂದರ್ ಮೃತ ಪಟ್ಟಿದ್ದು, ಈ ಪ್ರಕರಣದ ಎರಡನೇ ಆರೋಪಿ ಪತ್ತೆಗಾಗಿ ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ವಿಶೇಷ ತಂಡ ರಚನೆ ಮಾಡಿದ್ದರು.

    ಈಗ ಮಹಾರಾಷ್ಟ್ರದ ಲಾತೂರಿನ ಟಾಕಳಗಾಂವ್ ಗ್ರಾಮದಲ್ಲಿ ಬೀದರ್ ಪೊಲೀಸರು ಎರಡನೇ ಆರೋಪಿ ಗಣಪತಿ ವಿಠಲ್ ವಾಗ್ಮೋರೆಯನ್ನು ಬಂಧಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇವಸ್ಥಾನದ ಹೊರರಸ್ತೆಯಲ್ಲಿ ಎಮ್ಮೆಯ ತಲೆ ಪತ್ತೆ- ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

    ದೇವಸ್ಥಾನದ ಹೊರರಸ್ತೆಯಲ್ಲಿ ಎಮ್ಮೆಯ ತಲೆ ಪತ್ತೆ- ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

    ನವದೆಹಲಿ: ದೇವಸ್ಥಾನದ (Temple) ಹೊರಗಿನ ರಸ್ತೆಯಲ್ಲಿ ಎಮ್ಮೆಯೊಂದರ (Buffalo) ತಲೆ ಕತ್ತರಿಸಿ ಇರಿಸಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಈಶಾನ್ಯ ದೆಹಲಿಯ (Delhi) ವೆಲ್‌ಕಮ್ (Welcome) ಪ್ರದೇಶದಲ್ಲಿ ನಡೆದಿದೆ.

    ಬಂಧಿತ ಆರೋಪಿಗಳನ್ನು ದೆಹಲಿಯ ಬಾಬ್‌ಪುರ ನಿವಾಸಿಗಳಾದ ಅಜೀಂ (27) ಮತ್ತು ಇನ್ನೋರ್ವ 16 ವರ್ಷದ ಬಾಲಕ ಎಂದು ಗುರುತಿಸಲಾಗಿದೆ. ವೆಲ್‌ಕಮ್ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಬದಿಯಲ್ಲಿ ಎಮ್ಮೆಯೊಂದರ ತಲೆ ಕತ್ತರಿಸಿ ಇಡಲಾಗಿದೆ ಎಂಬ ಮಾಹಿತಿಯ ಮೇರೆಗೆ ತನಿಖೆ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ. ಅಲ್ಲದೇ ಪ್ರದೇಶದಲ್ಲಿ ಶಾಂತಿ ಕಾಪಾಡಲು ಪೊಲೀಸರಿಗೆ ಸಹಾಯ ಮಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಯಾವುದೇ ರೀತಿಯ ವದಂತಿಗಳನ್ನು ಹರಡಬೇಡಿ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Maharashtra Bus Accident – ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ

    ಶುಕ್ರವಾರ 5:30ರ ಸುಮಾರಿಗೆ ಪಶ್ಚಿಮ ಗೋರಖ್‌ಪಾರ್ಕ್‌ನ ನಾಲಾ ರಸ್ತೆಯಲ್ಲಿರುವ ದೇವಸ್ಥಾನದ ಹೊರಭಾಗದ ರಸ್ತೆಯಲ್ಲಿ ಕತ್ತರಿಸಿದ ಎಮ್ಮೆಯ ತಲೆಯೊಂದು ಪತ್ತೆಯಾಗಿದೆ ಎಂದು ವೆಲ್‌ಕಮ್ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಜಾಯ್ ಟಿರ್ಕಿ ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಬ್ಲಾಸ್ಟ್ ಕೇಸ್‌ – ರೊಬೊಟ್‌ ಬಳಸಿ‌ ಭಾರತದಲ್ಲಿ ದಾಳಿಗೆ ಮುಂದಾಗಿದ್ದ ಐಸಿಸ್

    ಸ್ಕೂಟರ್‌ನಲ್ಲಿ ಬಂದ ಇಬ್ಬರು ಕತ್ತರಿಸಿದ ಎಮ್ಮೆಯ ತಲೆಯನ್ನು ದೇವಸ್ಥಾನದ ಹೊರಭಾಗದ ರಸ್ತೆಯಲ್ಲಿ ಎಸೆದಿದ್ದು, ಕತ್ತರಿಸಿದ ತಲೆಯನ್ನು ತಕ್ಷಣ ವಶಕ್ಕೆ ಪಡೆದು ಸ್ಥಳದಿಂದ ತೆಗೆಯಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಇದನ್ನೂ ಓದಿ: ಅನ್ಯ ಜಾತಿ ಹುಡ್ಗನನ್ನ ಪ್ರೀತಿಸಿ ಮದ್ವೆಯಾಗಿದ್ದಕ್ಕೆ ಬದುಕಿದ್ದಾಗಲೇ ಮಗಳ ಅಂತ್ಯಸಂಸ್ಕಾರ ಮಾಡಿದ ತಂದೆ

    ಬಂಧಿತ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಕೃತ್ಯಗಳು), 429 (ಪ್ರಾಣಿಗಳನ್ನು ಕೊಲ್ಲುವುದು), 34 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಲ್ಲೇ ಮಹಿಳೆ ಜೊತೆ ಕಂಡಕ್ಟರ್ ಸೆಕ್ಸ್- ವೀಡಿಯೋ ವೈರಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಸ್ತೆಯಲ್ಲಿ ಹಿಂಡು ಹಿಂಡಾಗಿ ಹಸುಗಳು – ಭಾರತದ ಭೇಟಿ ಮರೆಯಲಾಗದ ನೆನಪು ಎಂದ ಇಸ್ರೇಲ್ ಅಧಿಕಾರಿ

    ರಸ್ತೆಯಲ್ಲಿ ಹಿಂಡು ಹಿಂಡಾಗಿ ಹಸುಗಳು – ಭಾರತದ ಭೇಟಿ ಮರೆಯಲಾಗದ ನೆನಪು ಎಂದ ಇಸ್ರೇಲ್ ಅಧಿಕಾರಿ

    ನವದೆಹಲಿ: ಇಸ್ರೇಲ್‍ನ (Israel) ಸರ್ಕಾರಿ ಅಧಿಕಾರಿ ಲಿಯರ್ ಹೈಯತ್ ಅವರು ಭಾರತದ ಭೇಟಿ ಅವಿಸ್ಮರಣೀಯ ಎಂಬ ಶೀರ್ಷಿಕೆಯಡಿ ಹಸುಗಳ (Cows) ಗುಂಪಿನ ಫೋಟೋವನ್ನು ಹಂಚಿಕೊಂಡಿದ್ದ ಫೋಟೋ ವೈರಲ್ ಆಗುತ್ತಿದೆ.

    ಅವಿಸ್ಮರಣೀಯ ಭಾರತದ (India) ಭೇಟಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹೈಯತ್ ಸಾಮಾಜಿಕ ಜಾಲತಾಣದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮೊದಲ ಫೋಟೋದಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಜೊತೆ ಚರ್ಚೆ ನಡೆಸುತ್ತಿರುವುದು ಹಾಗೂ ಎರಡನೇ ಫೋಟೋದಲ್ಲಿ ಇಂಡಿಯಾ ಗೇಟ್ ಬಳಿ ನಿಂತಿರುವುದು ಹಾಗೂ ಮೂರನೇ ಫೋಟೋದಲ್ಲಿ ನೆನಪಿನ ಕಾಣಿಕೆಯನ್ನು ಹಿಡಿದಿರುವ ಫೋಟೋ ಇದೆ. ಇದರ ಜೊತೆಗೆ ಇನ್ನೊಂದು ಫೋಟೋವಿದ್ದು, ಅದರಲ್ಲಿ ಹಸುಗಳ ಗುಂಪೊಂದು ಹೋಗುತ್ತಿದೆ. ಇದೀಗ ಫೋಟೋಕ್ಕೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಭಾರತಕ್ಕೆ ಮರೆಯಲಾಗದ ಹಾಗೂ ಮಹತ್ವದ ಭೇಟಿಯಿಂದ ಹಿಂತಿರುಗಿ. ಶೀಘ್ರದಲ್ಲೇ ಈ ಅದ್ಭುತ ದೇಶಕ್ಕೆ ಭೇಟಿ ನೀಡಲು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ.. ಆದ್ರೆ ಈ ಷರತ್ತು ಅನ್ವಯ – ಹೆಚ್‌ಡಿಕೆ

    ಒಂದು ಚಿತ್ರದಲ್ಲಿ ರಸ್ತೆಯಲ್ಲಿ ಹಿಂಡು ಹಿಂಡಾಗಿ ಹಸುಗಳು ಹೋಗುತ್ತಿದೆ. ಈ ಫೋಟೋವನ್ನು ನೋಡಿದ ನೆಟ್ಟಿಗನೊಬ್ಬ ಕಾಮೆಂಟ್ ಮಾಡಿ, ಪ್ರವಾಸಿಗರು ರಸ್ತೆಯಲ್ಲಿ ಹಸುಗಳು ಹೇಗೆ ಆಕರ್ಷವಾಗಿ ಕಾಣುತ್ತವೆ ಎಂಬುದು ತಮಾಷೆಯಾಗಿದೆ ಎಂದು ವ್ಯಂಗ್ಯವಾಡಿದ್ದಾನೆ. ಇನ್ನೊಬ್ಬ ಈತ ಭಾರತವನ್ನು ಟ್ರೋಲ್ ಮಾಡುತ್ತಿದ್ದಾನಾ ಎಂದು ಪ್ರಶ್ನಿಸಿದ್ದಾನೆ. ಇದನ್ನೂ ಓದಿ: ಹುಟ್ಟಿದ ಕೆಲ ಗಂಟೆಗಳಲ್ಲೇ ಶಿಶುವನ್ನು ಕತ್ತು ಹಿಸುಕಿ ಕೊಂದ ಪಾಪಿಗಳು!

  • ಪ್ಲೀಸ್ ಮುಕ್ತಿ ಕೊಡಿಸಿ ಸರ್- ಎಮ್ಮೆಗಳ ವಿರುದ್ಧ ಅರವಿಂದ ಲಿಂಬಾವಳಿಗೆ ಟೆಕ್ಕಿಗಳಿಂದ ದೂರು!

    ಪ್ಲೀಸ್ ಮುಕ್ತಿ ಕೊಡಿಸಿ ಸರ್- ಎಮ್ಮೆಗಳ ವಿರುದ್ಧ ಅರವಿಂದ ಲಿಂಬಾವಳಿಗೆ ಟೆಕ್ಕಿಗಳಿಂದ ದೂರು!

    ಬೆಂಗಳೂರು: ಸಿಲಿಕಾನ್ ಸಿಟಿಯ ಟೆಕ್ಕಿಗಳಿಗೆ ಹಸು, ಎಮ್ಮೆಗಳದ್ದೇ ದೊಡ್ಡ ಟೆನ್ಶನ್ ಆಗಿದೆ. ಕಚೇರಿಗೆ ಹೋಗಬೇಕು ಅಂತ ಕಾರು, ಬೈಕ್ ಹತ್ತಿದ್ರೆ, ರಸ್ತೆಯಲ್ಲಿ ಅವುಗಳನ್ನ ಓಡಿಸೋದೆ ನಿತ್ಯ ಕಾಯಕವಾಗ್ತಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವ ಹಸು, ಎಮ್ಮೆಗಳನ್ನ ಮುಕ್ತಿ ಕೊಡಿಸಿ ಸರ್ ಅಂತ ಶಾಸಕ ಅರವಿಂದ ಲಿಂಬಾವಳಿ (Aravind Limbavali) ಗೆ ಟೆಕ್ಕಿಗಳು ರಿಕ್ವೆಸ್ಟ್ ಮಾಡ್ತಿದ್ದಾರೆ.

    ಮಹಾದೇವಪುರ ವಿಧಾನಸಭಾ ಕ್ಷೇತ್ರದ ಕಸವನಹಳ್ಳಿ ಮುಖ್ಯರಸ್ತೆಯಲ್ಲಿ ಪ್ರತಿನಿತ್ಯ ಎಮ್ಮೆ (Buffalo), ಹಸುಗಳು ವಾಹನಗಳಿಗೆ ಅಡ್ಡ ಬರುತ್ತಿವೆ. ಇದರಿಂದ ಆಫೀಸ್‍ಗೆ ಹೋಗಲು ನಿತ್ಯ 40 ರಿಂದ 50 ನಿಮಿಷ ಲೇಟಾಗ್ತಿದೆ. ಸರಿಯಾದ ಸಮಯಕ್ಕೆ ಆಫೀಸ್‍ಗೆ ಹೊಗಲು ಆಗ್ತಿಲ್ಲ ಅಂತ ಎಮ್ಮೆ, ಹಸುಗಳ ಮೇಲೆ ಟೆಕ್ಕಿಗಳು ದೂರು ನೀಡಿದ್ದಾರೆ.‌ ಇದನ್ನೂ ಓದಿ: ಹೆಚ್‌ಡಿಕೆ ಮೇಲೆ ಡಿಕೆಗೆ, ರೇವಣ್ಣ ಮೇಲೆ‌ ಸಿದ್ರಾಮಣ್ಣಗೆ ಸಾಫ್ಟ್ ಕಾರ್ನರಾ?

    ಪ್ರತಿದಿನ ಬೆಳಗ್ಗೆ ಆಫೀಸ್‍ (Office) ಗೆ ಹೋಗೋ ಹೊತ್ತಲ್ಲೇ, ಮಾರ್ಚ್ ಫಾಸ್ಟ್ ಮಾಡೋ ರೀತಿಯಲ್ಲಿ ಸರತಿ ಸಾಲಿನಲ್ಲಿ ಎಮ್ಮೆ, ಹಸುಗಳು ಹೋಗ್ತಿರುತ್ತೆ. ಸರ್ಜಾಪುರ ರಸ್ತೆಯಲ್ಲಿ ಹಲವು ಐಟಿ ಕಂಪನಿಗಳಿದ್ದು, ವಿಪ್ರೋ, ರೇನೋ ಬೋ ಮೂಲಕ ಸರ್ಜಾಪುರ ಮುಖ್ಯ ರಸ್ತೆಯ 2 ಕಿಲೋ ಮೀಟರ್ ವರೆಗೂ ಗುಂಪು ಗುಂಪಾಗಿ ಎಮ್ಮೆ, ಹಸುಗಳು ರಸ್ತೆಗಿಳಿಯುತ್ತಿವೆ. ಇವುಗಳಿಗೆ ಎಷ್ಟೇ ಹಾರ್ನ್ ಮಾಡಿದ್ರೂ ಪಕ್ಕಕ್ಕೇ ಸರಿಯೋದೆ ಇಲ್ಲ. ಕಳೆದ ಆರು ತಿಂಗಳಿನಿಂದ ಈ ರಗಳೆ ಇದ್ದು, ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಶಾಸಕ ಅರವಿಂದ ಲಿಂಬಾವಳಿ, ಬಿಬಿಎಂಪಿ ಕಮಿಷನರ್ (BBMP Commissioner), ಪೊಲೀಸರಿಗೆ ಹಾಗೂ ಪಶುಸಂಗೋಪನಾ ಇಲಾಖೆಗೆ ಟ್ಯಾಗ್ ಮಾಡಿ ಎಂಎನ್‍ಸಿ ಟೆಕ್ಕಿಗಳು ಸಾಲು ಸಾಲು ದೂರು ನೀಡಿದ್ದಾರೆ.

    ಟ್ರಾಫಿಕ್ ಪಾಯಿಂಟ್‍ಗಳಲ್ಲಿ ಎಮ್ಮೆ, ಹಸುಗಳಿಂದ ಟ್ರಾಫಿಕ್ ಆದಾಗ ಅಲ್ಲಿರುವ ಟ್ರಾಫಿಕ್ ಪೊಲೀಸರೇ ಅವುಗಳನ್ನ ಓಡಿಸ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಬಿಬಿಎಂಪಿ ಅಧಿಕಾರಿಗಳಿಗೆ, ಶಾಸಕರಿಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಟೆಕ್ಕಿಗಳು ದೂರಿನಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೈಕ್ ಹಿಂದೆ ಎಮ್ಮೆ ಓಡುವ ಸ್ಪರ್ಧೆ – ಗೆದ್ದವರಿಗೆ ನಗದು, ಬಕೆಟ್ ಬಹುಮಾನ

    ಬೈಕ್ ಹಿಂದೆ ಎಮ್ಮೆ ಓಡುವ ಸ್ಪರ್ಧೆ – ಗೆದ್ದವರಿಗೆ ನಗದು, ಬಕೆಟ್ ಬಹುಮಾನ

    ಧಾರವಾಡ: ಮನರಂಜನೆಗಾಗಿ ಟಗರಿನ ಕಾಳಗ, ಚಕ್ಕಡಿ ಓಡಿಸುವ ಸ್ಪರ್ಧೆ, ಹೀಗೆ ಅನೇಕ ಸ್ಪರ್ಧೆಗಳನ್ನು ಅಲ್ಲಲ್ಲಿ ಆಯೋಜನೆ ಮಾಡುವುದು ಹಳ್ಳಿಗಳಲ್ಲಿ ಸಹಜ. ಇದೀಗ ಧಾರವಾಡದಲ್ಲಿ (Dharwada) ವಿಭಿನ್ನವಾದ ಸ್ಪರ್ಧೆಯೊಂದನ್ನು ಆಯೋಜನೆ ಮಾಡಲಾಗಿದೆ.

    ಧಾರವಾಡ ಎಮ್ಮೆ (Buffalo) ಬಹಳ ಫೇಮಸ್. ಧಾರವಾಡ ಗೌಳಿಗಲ್ಲಿಯಲ್ಲಿ ಎಮ್ಮೆ ಸಾಕುವವರು ದೀಪಾವಳಿ ಹಬ್ಬದ ನಂತರ ಎಮ್ಮೆ ಓಟದ (Running Race) ಸ್ಪರ್ಧೆ ಆಯೋಜನೆ ಮಾಡ್ತಾರೆ. ಪ್ರತಿ ವರ್ಷದಂತೆ ಈ ವರ್ಷ ಕೂಡಾ ಅವರು ಧಾರವಾಡ ಹೊರವಲಯದ ಹನುಮಂತನಗರದ ಹತ್ತಿರ ಈ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದರು. ಅನೇಕರು ತಮ್ಮ ಎಮ್ಮೆಗಳ ಸಮೇತ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ಗಮನಸೆಳೆದರು. ಎಮ್ಮೆಗಳ ಮಾಲೀಕರು ಬೈಕ್ ತೆಗೆದುಕೊಂಡು ಮುಂದೆ ಹೋಗಿ ತಮ್ಮ ಎಮ್ಮೆ ಬೆನ್ನಟ್ಟಿಸಿಕೊಂಡು ಬರುವ ಮೂಲಕ ಸ್ಪರ್ಧೆಯ ಕಾವು ಹೆಚ್ಚಿತು. ಇದನ್ನೂ ಓದಿ: ನಮ್ಮ ಇಸ್ಲಾಂ ಧರ್ಮದಲ್ಲಿ ಪ್ರತಿಮೆಗೆ ಅವಕಾಶ ಇಲ್ಲ – ಟಿಪ್ಪು ಪ್ರತಿಮೆ ಸ್ಥಾಪನೆಗೆ ಇಬ್ರಾಹಿಂ ವಿರೋಧ

    ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ 20 ಸಾವಿರ, ದ್ವಿತೀಯ ಸ್ಥಾನ 15 ಸಾವಿರ ಹಾಗೂ ತೃತೀಯ ಸ್ಥಾನ ಪಡೆದವರಿಗೆ 12,500 ರೂಪಾಯಿ ಬಹುಮಾನ ನೀಡಲಾಯಿತು. ಅಲ್ಲದೇ ಸಮಾಧನಾಕರ ಬಹುಮಾನವಾಗಿ ಸ್ಟೀಲ್ ಪಾತ್ರೆ, ಬಕೆಟ್ ಸೇರಿ ಹಲವು ವಸ್ತುಗಳನ್ನು ನೀಡಲಾಯಿತು. ಇದರಲ್ಲಿ ಧಾರವಾಡದ ಎಮ್ಮೆ ಅಷ್ಟೇ ಅಲ್ಲ, ಗದಗ, ಹಾವೇರಿ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಯ ಎಮ್ಮೆ ಕೂಡಾ ಭಾಗವಹಿಸಿದ್ದವು. ಮುಂದೆ ಬೈಕ್ ಹೋಗುತ್ತಿದ್ದರೆ ಎಮ್ಮೆ ಹಿಂಬದಿಯಿಂದ ಓಡುವ ಮೂಲಕ ಕೇವಲ ಒಂದು ನಿಮಿಷದಲ್ಲಿ ನೂರು ಮೀಟರ್ ಓಡಬೇಕಾಯಿತು. ಅದರಲ್ಲಿ ಯಾವ ಎಮ್ಮೆ ಕಡಿಮೆ ಸಮಯದಲ್ಲಿ ಓಡುತ್ತೆ, ಅದಕ್ಕೆ ಬಹುಮಾನ ಕೊಡಲಾಯಿತು. ಇದನ್ನೂ ಓದಿ: ಹೆರಿಗೆಗೆಂದು ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿಯಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ

    Live Tv
    [brid partner=56869869 player=32851 video=960834 autoplay=true]

  • ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

    ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

    ಬೆಳಗಾವಿ: ಜಿಲ್ಲೆಯ ಬೆಳಗಾವಿ (Belgavi) ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy Skin Disease) (ಲಂಪಿ ಸ್ಕಿನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ (ಸೊಳ್ಳೆ, ನೊಣ, ಉಣ್ಣೆ) ಇತ್ಯಾದಿಗಳಿಂದ ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ (Rainy Season) ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ. ಹೀಗಾಗಿ ಜನರು ಎಚ್ಚರಿಕೆ ವಹಿಸಬೇಕು.

    ಚರ್ಮಗಂಟು ರೋಗದ ಲಕ್ಷಣಗಳು
    ಅತಿಯಾದ ಜ್ವರ (105-180ಈ) ಕಣ್ಣುಗಳಿಂದ ನೀರು ಸೋರುವುದು. ನಿಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕಂಟುವುದು. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕೆಲಸದ ಸಾಮರ್ಥ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಸೊಳ್ಳೆ, ಉಣ್ಣೆ, ನೊಣ ಹಾಗೂ ವಿವಿಧ ಕಚ್ಚುವ ಕೀಟಗಳಿಂದ ಕಲುಷಿತಗೊಂಡ ನೀರು (Contaminated water) ಹಾಗೂ ಆಹಾರದಿಂದ ಜಾನುವಾರುಗಳ ನೇರ ಸಂಪರ್ಕದಿಂದ ರೋಗ ಹರಡುವಿಕೆ ಪ್ರಮಾಣ 10-20% ರಷ್ಟು ಹಾಗೂ ರೋಗದ ಸಾವಿನ ಪ್ರಮಾಣ 1-5% ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲಿಂಪಿ ವೈರಸ್‌ಗೆ 5 ಸಾವಿರಕ್ಕೂ ಅಧಿಕ ಹಸುಗಳ ಮಾರಣ ಹೋಮ – ಹೆದರಿ ವಲಸೆ ಹಾದಿ ಹಿಡಿದ ಜನ

    ಚರ್ಮಗಂಟು ರೋಗದ ಚಿಕಿತ್ಸೆ ಹಾಗೂ ತಡೆಗಟ್ಟುವಿಕೆ
    ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಹಾಗೂ ಈ ರೋಗಕ್ಕೆ ಯಾವುದೇ ಲಸಿಕೆ ಲಭ್ಯವಿರುವುದಿಲ್ಲ. ಜಾನುವಾರುಗಳಿಗೆ ರೋಗದ ಲಕ್ಷಣಗಳ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ. ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು. ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಶಿಯಂ ಪರಮಾಂಗನೇಟ್ ದ್ರವಣದಿಂದ ತೊಳೆದು ಐಯೋಡಿನ್ ದ್ರಾವಣ, ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸುವುದು. ರೋಗ ಹರಡುವುದನ್ನು ತಡೆಯಲು ರೋಗಗ್ರಸ್ಥ ಜಾನುವಾರುಗಳನ್ನು ಬೇರ್ಪಡಿಸುವುದು. ರೋಗಗ್ರಸ್ಥ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲಾ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವುದು. ಹಸಿರು ಮೇವು, ಪೌಷ್ಠಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು. ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ 5-6 ಬಾರಿ ಕುಡಿಸಬೇಕು. ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಇದನ್ನೂ ಓದಿ: ಹಸುಗಳನ್ನು ರಕ್ಷಿಸಿ – ಲಂಪಿ ವೈರಸ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಖರ್ ಧವನ್

    ಈ ರೋಗವು ಸೊಳ್ಳೆ, ಉಣ್ಣೆ, ನೊಣ ಹಾಗೂ ಇತರೆ ಕೀಟಗಳಿಂದ ಮುಖ್ಯವಾಗಿ ಹರಡುವುದರಿಂದ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಹಾಗೂ ಫಾರ್ಮಾಲಿನ್(1%)ಫಿನೈಲ್(2%) ಅಥವಾ ಸೋಡಿಯಂ ಹಾಪೀಕ್ಲೊರೈಡ್ (2%) ದಿನಕ್ಕೆ 2 ಬಾರಿ ಸಿಂಪಡಿಸಬೇಕು. ರೋಗಗ್ರಸ್ಥ ಜಾನುವಾರು ಮರಣ ಹೊಂದಿದ್ದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು ಹಾಗೂ ಹೆಚ್ಚಿನ ಮಾಹಿತಿ, ಚಿಕಿತ್ಸೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ (Animal Husbandry Departmentz) ಜಿಲ್ಲಾ ಉಪ ನಿರ್ದೇಶಕ ಡಾ.ರಾಜೀವ ಎನ್, ಕೂಲೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಲಿಂಪಿ ವೈರಸ್ ಕಾಟ: ಹಾಲಿನ ಸಂಗ್ರಹ ಕುಸಿತ – ಸಿಹಿ ತಿಂಡಿಗಳ ಬೆಲೆ ದಿಢೀರ್ ಏರಿಕೆ

    Live Tv
    [brid partner=56869869 player=32851 video=960834 autoplay=true]

  • 20ಕ್ಕೂ ಹೆಚ್ಚು ಎಮ್ಮೆ, ಹಸುಗಳ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳು!

    20ಕ್ಕೂ ಹೆಚ್ಚು ಎಮ್ಮೆ, ಹಸುಗಳ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳು!

    ಆನೇಕಲ್: ಎಮ್ಮೆ ಹಾಗೂ ಹಸುಗಳ ಮೇಲೆ ಆ್ಯಸಿಡ್ ಎರಚಿ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ನೆಟ್ಟುಪಾಳ್ಯಂ ಸಮೀಪದ ರಾಜಕುಮಾರ್ ಎಂಬವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ದುಷ್ಕರ್ಮಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ರಾಜಕುಮಾರ್ ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನವನ್ನು ಸಾಗಿಸುತ್ತಿದ್ದರು. ಆದರೆ ಯಾರೋ ಕಿಡಿಗೇಡಿಗಳು ಮೊನ್ನೆ ರಾತ್ರಿ ಪ್ರಾಣಿಗಳ ಮೇಲೆ ಆ್ಯಸಿಡ್ ಎರಚಿದ್ದು, ಬೆನ್ನು ತಲೆ ಕಾಲು ಹಾಗೂ ದೇಹದ ಹಲವು ಭಾಗಗಳಿಗೆ ಆ್ಯಸಿಡ್ ಬಿದ್ದು ತೀವ್ರ ರಕ್ತಸ್ರಾವವಾಗಿದೆ.

    ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಜಾನುವಾರುಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಈ ಕೃತ್ಯವನ್ನು ಮಾಡಿರುವಂತಹ ಕಿಡಿಗೇಡಿಗಳು ಯಾರು ಎಂಬ ಮಾಹಿತಿ ಇನ್ನು ಸಹ ಲಭ್ಯವಾಗಿಲ್ಲ.

    ಅಮಾನುಷ ಕೃತ್ಯ ಎಸಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಜಾನ್ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    Live Tv
    [brid partner=56869869 player=32851 video=960834 autoplay=true]