Tag: ಎಮ್ಮೆ

  • ಯಾದಗಿರಿಯಲ್ಲಿ ಎರಡು ಮುಖದ ಕರುವಿಗೆ ಜನ್ಮ ನೀಡಿದ ಎಮ್ಮೆ

    ಯಾದಗಿರಿಯಲ್ಲಿ ಎರಡು ಮುಖದ ಕರುವಿಗೆ ಜನ್ಮ ನೀಡಿದ ಎಮ್ಮೆ

    ಯಾದಗಿರಿ: ಎಮ್ಮೆಯೊಂದು ಎರಡು ಮುಖದ ಕರುವಿಗೆ ಜನ್ಮ ನೀಡಿ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದ ಘಟನೆ ಯಾದಗಿರಿಯ ಕನಕನಗರ ಬಡಾವಣೆಯಲ್ಲಿ ನಡೆದಿದೆ.

    ದೇವಪ್ಪ ಎಂಬುವರಿಗೆ ಸೇರಿದ ಎಮ್ಮೆ ಇದಾಗಿದೆ. ಇಂದು ಮಧ್ಯಾಹ್ನ ಎಮ್ಮೆ ಈ ವಿಚಿತ್ರ ಕರುಗಳಿಗೆ ಜನ್ಮ ನೀಡಿದೆ. ಎಮ್ಮೆ ಕರುವಿಗೆ ಎರಡು ಮುಖ ಇರುವುದರಿಂದ ಉಸಿರಾಟ ತೊಂದರೆ ಉಂಟಾಗಿದ್ದು, ಜನ್ಮತಾಳಿದ 2 ಗಂಟೆಯಲ್ಲಿ ಸಾವನ್ನಪ್ಪಿದೆ. ಆದರೆ, ಕರುವಿಗೆ ಎರಡು ಮುಖ ಇದ್ದಿದ್ದನ್ನು ಕಂಡು ಸ್ಥಳೀಯರು ಆಶ್ಚರ್ಯಗೊಂಡಿದ್ದಾರೆ.

    ಮೊನ್ನೆಯಷ್ಟೇ ಧಾರವಾಡ ಹೊರವಲಯದ ಆಂಜನೇಯ ನಗರದ ಬಳಿಯ ಫಾರಂನಲ್ಲಿನ ಕೋಳಿಗೆ ಮೂರು ಕಾಲು ಬೆಳೆದ ಸುದ್ದಿ ಬೆಳಕಿಗೆ ಬಂದಿತ್ತು. ಎರಡು ಕಾಲುಗಳ ಜೊತೆ ಇನ್ನೊಂದು ಕಾಲು ಬೆನ್ನಿನ ಕೆಳ ಭಾಗದಲ್ಲಿ ಬೆಳೆದಿತ್ತು. 15 ದಿನ ಈ ಮರಿಗೆ ಓಡಾಡಲು ತೊಂದರೆ ಆಗಿರಲಿಲ್ಲ. ಆದರೆ ಪ್ರತ್ಯೇಕ ಕಾಲು ಕ್ರಮೇಣ ಬೆಳೆದಿದ್ದರಿಂದ ಈಗ ಕೊಂಚ ತೊಂದರೆಯಾಗುತ್ತಿದೆ.

    ಈ ಕೋಳಿಮರಿಯನ್ನು ಇಲ್ಮುದ್ದಿನ್ ಮೊರಬ ಕುಟುಂಬ ಸಾಕುತ್ತಿದ್ದು, ಮಾರಾಟ ಮಾಡದೇ ತಮ್ಮ ಬಳಿಯೇ ಇಟ್ಟುಕೊಂಡು ಆರೈಕೆ ಮಾಡುತ್ತಿದ್ದಾರೆ. ಈ ಕೋಳಿ ಮರಿಗೆ ಮೂರು ಕಾಲು ಇರುವುದನ್ನು ಕೇಳಿದ ಜನರು ಕೂಡಾ ಅತ್ಯಂತ ಕುತೂಹಲದಿಂದ ಇದನ್ನು ನೋಡಲು ಬರುತ್ತಿದ್ದಾರೆ. ಜೊತೆಗೆ ಇದರ ಫೋಟೋ ಕ್ಲಿಕ್ಕಿಸಿ ಖುಷಿಪಟ್ಟಿದ್ದಾರೆ.

  • ಪ್ರವಾಹದಲ್ಲಿ ಸಿಲುಕಿ ಮೃತಪಟ್ಟ ಎಮ್ಮೆ – ಕಣ್ಣೀರಿಟ್ಟ ಅಜ್ಜ

    ಪ್ರವಾಹದಲ್ಲಿ ಸಿಲುಕಿ ಮೃತಪಟ್ಟ ಎಮ್ಮೆ – ಕಣ್ಣೀರಿಟ್ಟ ಅಜ್ಜ

    ಬಾಗಲಕೋಟೆ: ಮಲಪ್ರಭೆಯ ಅಬ್ಬರಕ್ಕೆ ಬಾಗಲಕೋಟೆ ಜಿಲ್ಲೆಯ ಜನರ ಬದುಕು ಕೊಚ್ಚಿ ಹೋಗಿದೆ. ಅದೆಷ್ಟೋ ಜಾನುವಾರುಗಳು ಸತ್ತು ಬಿದ್ದಿವೆ. ಆದರೆ ಬಾದಾಮಿ ತಾಲೂಕಿನ ಕೇಡಾ ಗ್ರಾಮದ ನಿವಾಸಿಯ ವೃದ್ಧನ ಬದುಕೇ ಭೀಕರ ಪ್ರವಾಹಕ್ಕೆ ಕೊಚ್ಚಿ ಹೋಗಿದೆ.

    75ರ ವೃದ್ಧ ಹನುಮಂತಪ್ಪ ತಮ್ಮ ಎಮ್ಮೆ ಸಾವಿಗೆ ಕಣ್ಣೀರಿಟ್ಟಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ಎಮ್ಮೆ ಪ್ರವಾಹದ ರಭಸಕ್ಕೆ ಸಿಲುಕಿ ಸತ್ತಿದೆ. ಬದುಕು ಕಟ್ಟಿಕೊಟ್ಟ ಮೃತಪಟ್ಟ ಎಮ್ಮೆಯನ್ನು ಹೊಳೆಯಿಂದ ತಂದು, ಹೂಳಲು ಎತ್ತಿನಗಾಡಿಯಲ್ಲಿ ಸಾಗಿಸುವ ದೃಶ್ಯ ಮನಕಲುಕುವಂತಿದೆ.

    25 ವರ್ಷಗಳಿಂದ ಜೀವನಕ್ಕೆ ಹೆಗಲಾಗಿದ್ದ ಎಮ್ಮೆಯನ್ನು ಹೂಳಲು ರಸ್ತೆಯುದ್ದಕ್ಕೂ ಎತ್ತಿನಗಾಡಿಯಲ್ಲಿ ತಳ್ಳಿಕೊಂಡು ಹೋಗುತ್ತಿರುವ ದೃಶ್ಯ ಕರುಳು ಹಿಂಡುವಂತಿದೆ. ದಾರಿಯುದ್ದಕ್ಕೂ ಜೀವನ ಮಾಡಲು ಬೆನ್ನೆಲುಬಾಗಿದ್ದ ಎಮ್ಮೆಯನ್ನು ನೆನೆದು ಪಬ್ಲಿಕ್ ಟಿವಿ ಜೊತೆ ವೃದ್ಧ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

    ಈ ಎಮ್ಮೆಯಿಂದ ಮಕ್ಕಳು, ಮೊಮ್ಮಕ್ಕಳನ್ನು ಸಾಕಿದ್ದೆ. ಈಗ ಇದು ಪ್ರವಾಹದ ಸುಳಿಗೆ ಸಿಕ್ಕಿ ಹೋಗಿದೆ. ನನ್ನ ಬದುಕು ಈಗ ಬೀದಿ ಪಾಲಾಯಿತು. ಈಗ ನಾವು ಬದುಕಿವುದಕ್ಕಿಂತ ಸಾಯುವುದೇ ಮೇಲು ಎಂದು ಹನುಮಂತಪ್ಪ ನೋವನ್ನು ತೊಡಿಕೊಂಡಿದ್ದಾರೆ.

  • ನೀರು ಕುಡಿಯಲೆಂದು ಇಳಿದ ಎಮ್ಮೆಯ ಕಾಲನ್ನೇ ಕಿತ್ತ ಮೊಸಳೆ!

    ನೀರು ಕುಡಿಯಲೆಂದು ಇಳಿದ ಎಮ್ಮೆಯ ಕಾಲನ್ನೇ ಕಿತ್ತ ಮೊಸಳೆ!

    ರಾಯಚೂರು: ಕೃಷ್ಣಾ ನದಿಯಲ್ಲಿ ನೀರು ಕುಡಿಯಲು ಇಳಿದ ಎಮ್ಮೆಯ ಮೇಲೆ ಮೊಸಳೆ ದಾಳಿ ಮಾಡಿ ಒಂದು ಕಾಲನ್ನೇ ಕಿತ್ತುಕೊಂಡಿರುವ ಹೃದಯವಿದ್ರಾವಕ ಘಟನೆ ರಾಯಚೂರಿನ ದೇವಸುಗೂರು ಬಳಿ ನಡೆದಿದೆ.

    ದೇವಸುಗೂರು ಗ್ರಾಮದ ಶೀನಪ್ಪ ಎಂಬವರ ಎಮ್ಮೆ, ಮೊಸಳೆ ದಾಳಿಯಿಂದ ಕಾಲು ಕಳೆದುಕೊಂಡಿದೆ. ಆರ್ ಟಿಪಿಎಸ್‍ಗಾಗಿ ಸಂಗ್ರಹಿಸಿರುವ ನೀರನ್ನು ದೇವಸುಗೂರು ಗ್ರಾಮಕ್ಕೆ ಕುಡಿಯಲು ಬಿಡಲಾಗುತ್ತದೆ. ಆ ನೀರಿನಲ್ಲಿ ಸೇರಿಕೊಂಡಿರುವ ಬೃಹದಾಕಾರದ ಮೊಸಳೆ ಎಮ್ಮೆಯ ಮೇಲೆ ದಾಳಿ ಮಾಡಿದೆ.

    ಎಮ್ಮೆ ಮೇಲೆ ಮೊಸಳೆ ದಾಳಿ ಮಾಡುತ್ತಿರುವ ದೃಶ್ಯವನ್ನು ದನಗಾಯಿಗಳು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಎಮ್ಮೆಯ ನರಳಾಟ ಮನಕಲಕುವಂತಿದೆ. ಕೃಷ್ಣಾ ನದಿಯಲ್ಲಿ ಸಾಕಷ್ಟು ಮೊಸಳೆಗಳು ಮೊದಲಿನಿಂದಲೂ ಇದ್ದರೂ, ಬೇಸಿಗೆ ಸಮಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಪ್ರಾಣಿಗಳ ಮೇಲೆ ದಾಳಿ ಮಾಡುತ್ತವೆ.

    ಪ್ರಾಣ ಉಳಿಸಿಕೊಳ್ಳಲು ಎಮ್ಮೆ ನದಿ ದಡಕ್ಕೆ ಓಡಿ ಬಂದು ಉಳಿದ ಎಮ್ಮೆಗಳ ಜೊತೆ ಸೇರಿಕೊಳ್ಳುವ ದೃಶ್ಯ ಹೃದಯ ಹಿಂಡುವಂತಿದೆ. ಘಟನೆ ಬಳಿಕ ದನಗಾಯಿಗಳು ನದಿ ಹತ್ತಿರ ಜಾನುವಾರುಗಳನ್ನ ಕರೆದೊಯ್ಯಲು ಹೆದರುತ್ತಿದ್ದಾರೆ.

  • ಲಂಚ ಕೇಳಿದ ತಹಶೀಲ್ದಾರ್ ವಾಹನಕ್ಕೆ ಎಮ್ಮೆ ಕಟ್ಟಿದ ರೈತ!

    ಲಂಚ ಕೇಳಿದ ತಹಶೀಲ್ದಾರ್ ವಾಹನಕ್ಕೆ ಎಮ್ಮೆ ಕಟ್ಟಿದ ರೈತ!

    ಭೋಪಾಲ್: ಅಧಿಕಾರಿ ಕೇಳಿದಷ್ಟು ಲಂಚ ನೀಡಲು ಹಣವಿಲ್ಲದೇ ಮಧ್ಯಪ್ರದೇಶದ ರೈತರೊಬ್ಬರು ತಮ್ಮ ಬಳಿ ಇದ್ದ ಎಮ್ಮೆಯನ್ನೇ ಆದಾಯ ಇಲಾಖೆ ಅಧಿಕಾರಿ ವಾಹನಕ್ಕೆ ಕಟ್ಟಿ ಕೆಲಸ ಮಾಡಿಕೊಡುವಂತೆ ವಿಚಿತ್ರವಾಗಿ ಬೇಡಿಕೆಯಿಟ್ಟು ಸುದ್ದಿಯಾಗಿದ್ದಾರೆ.

    ಟಿಕಮ್‍ಗಢ ಜಿಲ್ಲೆಯ ಖರ್ಗಾಪುರ ಪ್ರದೇಶದಲ್ಲಿರುವ ಆದಾಯ ಇಲಾಖೆ ಕಚೇರಿ ಬಳಿ ಈ ಘಟನೆ ನಡೆದಿದೆ. ದೇವಪುರ ಗ್ರಾಮದ ನಿವಾಸಿಯಾದ ಲಕ್ಷ್ಮೀ ಯಾದವ್(50) ಲಂಚದ ಬದಲಾಗಿ ಎಮ್ಮೆಯನ್ನೇ ತಹಶೀಲ್ದಾರ್ ಅವರ ವಾಹನಕ್ಕೆ ಕಟ್ಟಿದ್ದಾರೆ.

    ರೈತ ತಾನು ಖರೀದಿಸಿದ್ದ ಸ್ವಲ್ಪ ಜಮೀನನ್ನು ತನ್ನ ಸೊಸೆಯರ ಹೆಸರಿಗೆ ಮಾಡಿಸಲು ಆದಾಯ ಇಲಾಖೆ ಕಚೇರಿಗೆ ಹೋಗಿದ್ದರು. ಆಗ ಜಮೀನು ವರ್ಗಾವಣೆ ಮಾಡಿಕೊಡಲು ತಹಶೀಲ್ದಾರ್ 1ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಆದರಿಂದ ಹೇಗೋ ಕಷ್ಟ ಪಟ್ಟು 50 ಸಾವಿರ ರೂಪಾಯಿಯನ್ನು ರೈತ ನೀಡಿದ್ದರು. ಆದರೆ ಪೂರ್ತಿ ಹಣವನ್ನು ನೀಡುವ ವರೆಗೂ ಕೆಲಸ ಮಾಡಿಕೊಡುವುದಿಲ್ಲ ಎಂದು ಅಧಿಕಾರಿ ಪಟ್ಟುಹಿಡಿದಿದ್ದಾರೆ.

    ಬಾಕಿ ಹಣವನ್ನು ಹೊಂದಿಸಲು ಆಗದೇ ಶನಿವಾರದಂದು ರೈತ ತನ್ನ ಬಳಿ ಇದ್ದ ಒಂದು ಎಮ್ಮೆಯನ್ನು ತಹಶೀಲ್ದಾರ್ ಅವರ ಸರ್ಕಾರಿ ವಾಹನಕ್ಕೆ ಕಟ್ಟಿಹಾಕಿದ್ದಾರೆ. ಬಳಿಕ ನನ್ನ ಬಳಿ ನಿಮ್ಮ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ಈ ಎಮ್ಮೆಯನ್ನು ಇಟ್ಟುಕೊಂಡು ಜಮೀನು ವರ್ಗಾವಣೆ ಮಾಡಿಕೊಡಿ ಎಂದು ತನ್ನ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ.

    ಈ ಬಗ್ಗೆ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಸೌರವ್ ಕುಮಾರ ಸುಮನ್ ಅವರು ಈ ವಿಚಾರದ ಬಗ್ಗೆ ಎಲ್ಲಾ ಮಹಿತಿ ಪಡೆದು, ಸಮಸ್ಯೆಯನ್ನು ಬಗೆಹರಿಸುವಂತೆ ಬಾಲದೇವಗಡದ ಉಪವಿಭಾಗ ಅಧಿಕಾರಿಗೆ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಮ್ಮೆಯನ್ನು ತಪ್ಪಿಸಲು ಹೋಗಿ ಸೇತುವೆಯಿಂದ ಬಸ್ ಪಲ್ಟಿ – 12 ಮಂದಿ ಸಾವು

    ಎಮ್ಮೆಯನ್ನು ತಪ್ಪಿಸಲು ಹೋಗಿ ಸೇತುವೆಯಿಂದ ಬಸ್ ಪಲ್ಟಿ – 12 ಮಂದಿ ಸಾವು

    ಭುವನೇಶ್ವರ: ರಸ್ತೆಗೆ ಅಡ್ಡ ಬಂದ ಎಮ್ಮೆಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಸ್ ಪಲ್ಟಿಯಾಗಿರುವ ಘಟನೆ ಒಡಿಶಾ ರಾಜ್ಯದ ಜಗತ್‍ಪುರದ ಮಹಾನದಿ ಸೇತುವೆ ಬಳಿ ಮಂಗಳವಾರ ನಡೆದಿದೆ.

    ಅಪಘಾತಕ್ಕಿಡಾದ ಬಸ್ಸಿನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಮಹಾನದಿ ಸೇತುವೆ ಮೇಲೆ ಬಸ್ ಚಲಿಸುತ್ತಿದ್ದ ವೇಳೆ ರಸ್ತೆಗೆ ಎಮ್ಮೆಯೊಂದು ಅಡ್ಡ ಬಂದಿದೆ. ಎಮ್ಮೆಯನ್ನು ತಪ್ಪಿಸಲು ಹೋಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಪಲ್ಟಿಯಾಗಿ ಕೆಳಕ್ಕುರುಳಿದೆ. ಬಸ್ ಪಲ್ಟಿಯಾದ ಪರಿಣಾಮ ಸುಮಾರು 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ ಗಾಯಗೊಂಡವರಿಗೆ ಉಚಿತ ಚಿಕಿತ್ಸೆಯನ್ನು ನೀಡುಲಾಗುತ್ತದೆ. ಈ ಅವಘಡದಿಂದ ಬಹಳ ಬೇಸರವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

    ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡದವರು ಆಗಮಿಸಿದ್ದು, ಜಿಲ್ಲಾಡಳಿತ ಅಧಿಕಾರಿಗಳು ಸೇರಿ ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ರಕ್ಷಣಾ ಕಾರ್ಯಚರಣೆಯು ಮುಂದುವರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಎಮ್ಮೆ ಓಡಿಸೋ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಘರ್ಷಣೆ, ಕಲ್ಲು ತೂರಾಟ: ಓರ್ವ ಗಂಭೀರ ಗಾಯ

    ಎಮ್ಮೆ ಓಡಿಸೋ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಘರ್ಷಣೆ, ಕಲ್ಲು ತೂರಾಟ: ಓರ್ವ ಗಂಭೀರ ಗಾಯ

    ಬೆಳಗಾವಿ: ಎಮ್ಮೆ ಓಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ವಾಗ್ದಾಳಿ ನಡೆದು, ಬಳಿಕ ಕಲ್ಲು ತೂರಾಟ ನಡೆದ ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಸರ್ದಾರ್ ಮೈದಾನದಲ್ಲಿ ನಡೆದಿದೆ.

    ದೀಪಾವಳಿ ಬಲಿಪಾಡ್ಯಮಿ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಪ್ರತಿ ವರ್ಷವೂ ಎಮ್ಮೆಗಳನ್ನು ಅಲಂಕಾರ ಮಾಡಿ, ಅವುಗಳನ್ನು ಓಡಿಸಲಾಗುತ್ತದೆ. ಹೀಗಾಗಿ ಸರ್ದಾರ್ ಮೈದಾನದಲ್ಲಿ ಇಂದು ಎಮ್ಮೆ ಓಡಿಸಲಾಗುತ್ತಿತ್ತು. ಇದನ್ನು ನೋಡಲು ಬೆಳಗಾವಿ ನಗರ ಹಾಗೂ ತಾಲೂಕಿನ ವಿವಿಧ ಹಳ್ಳಿಗಳಿಂದ ಸಾವಿರಾರು ಜನರು ಬಂದಿದ್ದರು.

    ಎಮ್ಮೆಗಳಿಗೆ ಮದ್ಯ ಕುಡಿಸಿ, ತಾವೂ ಕುಡಿದು ಯುವಕರು ಎಮ್ಮೆಗಳನ್ನು ಓಡಿಸುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಕಲ್ಲು ತೂರಾಡಿಕೊಂಡಿದ್ದಾರೆ.

    ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಲಘು ಲಾಠಿ ಚಾರ್ಚ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಹೋಗಿ 8ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

    ಕಲ್ಲು ತಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 22 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೇಂದ್ರದ ಜೊತೆ ರಾಜ್ಯ ಸರ್ಕಾರಕ್ಕೂ ಎಚ್ಚರಿಕೆ ಕೊಟ್ಟ ವಾಟಾಳ್ ನಾಗರಾಜ್

    ಕೇಂದ್ರದ ಜೊತೆ ರಾಜ್ಯ ಸರ್ಕಾರಕ್ಕೂ ಎಚ್ಚರಿಕೆ ಕೊಟ್ಟ ವಾಟಾಳ್ ನಾಗರಾಜ್

    ಬೆಂಗಳೂರು: ಭಾರತ್ ಬಂದ್ ಕೇಂದ್ರ ಸರ್ಕಾರಕ್ಕೆ ಮಾತ್ರವಲ್ಲದೇ ರಾಜ್ಯ ಸರ್ಕಾರಕ್ಕೂ ಅನ್ವಯಿಸುತ್ತದೆ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

    ತೈಲ ಬೆಲೆ ಏರಿಕೆ ವಿರೋಧಿಸಿ ಹಮ್ಮಿಕೊಂಡಿರುವ ಭಾರತ್ ಬಂದ್ ವೇಳೆ ಎಮ್ಮೆ ಮೇಲೆ ಬಂದು ವಿನೂತನವಾಗಿ ವಾಟಾಳ್ ನಾಗರಾಜ್ ಪ್ರತಿಭಟಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಭಾರತ್ ಬಂದ್ ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ ಸೀಮಿತವಲ್ಲ, ಇದು ರಾಜ್ಯ ಸರ್ಕಾರಕ್ಕೂ ಅನ್ವಯಿಸುತ್ತದೆ. ಮೊದಲು ಪೆಟ್ರೋಲ್, ಡೀಸೆಲ್ ದರಗಳ ಮೇಲಿನ ಸೆಸ್ ದರವನ್ನು ಕಡಿಮೆ ಮಾಡಬೇಕು. ಒಂದು ವೇಳೆ ರಾಜ್ಯದಲ್ಲಿ ಬಸ್ ದರ ಏರಿಕೆ ಮಾಡಿದ್ದೇ ಆದರೆ, ನಿಮ್ಮ ವಿರುದ್ಧವು ಪ್ರತಿಭಟಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ತೈಲ ದರ ಹಾಗೂ ಅಡುಗೆ ಅನಿಲಗಳ ದರಗಳನ್ನು ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಬಂದ್ ಮಾಡಲು ನಿರ್ಧಾರ ಮಾಡಿದ್ದೆವು. ಆದರೆ ಅಷ್ಟೋತ್ತಿಗೆ ಕಾಂಗ್ರೆಸ್ ಭಾರತ್ ಬಂದ್‍ಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ 2 ಸಾವಿರ ಕನ್ನಡಪರ ಸಂಘಟನೆಗಳು ಕಾಂಗ್ರೆಸ್ ಕರೆ ನೀಡಿದ್ದ ಬಂದ್‍ಗೆ ಬೆಂಬಲ ನೀಡಿವೆ ಎಂದು ಹೇಳಿದರು.

    ಇಂದು ಎಮ್ಮೆ ಸವಾರಿ ಮಾಡುವ ಮೂಲಕ ಕೇಂದ್ರ ಸರ್ಕಾರ ತೈಲ ಏರಿಕೆ ನೀತಿಯನ್ನು ವಿರೋಧಿಸಿದ್ದೇವೆ. ಕೇಂದ್ರ ಪೆಟ್ರೋಲ್, ಡಿಸೇಲ್ ಹಾಗೂ ಅನಿಲ ದರಗಳಿಗೆ ವೈಜ್ಞಾನಿಕ ರೀತಿಯ ಬೆಲೆ ನಿಗದಿಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಕುಸಿದು ಬಿದ್ದಿದೆ. ಅವರದ್ದು ಪೈಸಾ ಸರ್ಕಾರ, ಇದೇ ರೀತಿ ಮುಂದುವರಿದರೆ ದೇಶದಲ್ಲಿ ದಂಗೆ ಏಳುತ್ತದೆ ಎಂದು ಎಚ್ಚರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಮ್ಮೆಯ ಹುಚ್ಚಾಟಕ್ಕೆ ಓರ್ವ ಸಾವು, ನಾಲ್ವರು ಗಂಭೀರ!

    ಎಮ್ಮೆಯ ಹುಚ್ಚಾಟಕ್ಕೆ ಓರ್ವ ಸಾವು, ನಾಲ್ವರು ಗಂಭೀರ!

    ಹಾಸನ: ಸಾಕು ಎಮ್ಮೆಯೊಂದು ಹುಚ್ಚಾಟ ನಡೆಸಿದ್ದರ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಚೆನ್ನಾಪುರದಲ್ಲಿ ನಡೆದಿದೆ.

    ಚೆನ್ನಾಪುರ ಗ್ರಾಮದ ರುದ್ರೇಗೌಡ (57) ಎಮ್ಮೆ ದಾಳಿಗೆ ಒಳಗಾಗಿ ಮೃತಪಟ್ಟ ವ್ಯಕ್ತಿ. ಮಂಗಳವಾರ ಗ್ರಾಮದಲ್ಲಿ ಸಾಕು ಎಮ್ಮೆಯೊಂದು ಹುಚ್ಚಾಟ ನಡೆಸಿ ತಿವಿದು ಹಲವು ಜನರಿಗೆ ಗಾಯಗೊಳಿಸಿದೆ. ಈ ವೇಳೆ ಎಮ್ಮೆ ದಾಳಿಗೆ ತೀವ್ರವಾಗಿ ತುತ್ತಾದ ರುದ್ರೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

    ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪಶುಸಂಗೋಪನ ಇಲಾಖೆಯ ಸಿಬ್ಬಂದಿ ಎಮ್ಮೆಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಎಮ್ಮೆ ದಾಳಿಗೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಮೃತ ವ್ಯಕ್ತಿಯ ಕುಟುಂಬ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

  • ಕಲಬುರಗಿಯಲ್ಲಿ ಬಿಳಿ ಎಮ್ಮೆ ಜನನ- ಗ್ರಾಮಸ್ಥರ ಅಚ್ಚರಿ

    ಕಲಬುರಗಿಯಲ್ಲಿ ಬಿಳಿ ಎಮ್ಮೆ ಜನನ- ಗ್ರಾಮಸ್ಥರ ಅಚ್ಚರಿ

    ಕಲಬುರಗಿ: ಎಮ್ಮೆಗಳು ಸಾಮಾನ್ಯವಾಗಿ ಕಪ್ಪು ಬಣ್ಣ ಹೊಂದಿರುತ್ತವೆ. ಆದರೆ ಕಲಬುರಗಿಯ ಅಫಜಲಪುರ ತಾಲೂಕಿನ ಸಿರಸಗಿ ಗ್ರಾಮದಲ್ಲಿ ಬಿಳಿ ಎಮ್ಮೆಯೊಂದು ಜನಿಸಿದೆ.

     

    ಎಮ್ಮೆಯ ಮಾಲೀಕರಾದ ಅಣ್ಣಾರಾವ್ ಪಾಟೀಲ್ ಸೇರಿದಂತೆ ಗ್ರಾಮಸ್ಥರು ಬಿಳಿ ಎಮ್ಮೆ ಜನಿಸಿದ್ದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಿಳಿ ಎಮ್ಮೆ ನೋಡಲು ಇದೀಗ ಸುತ್ತಮುತ್ತಲಿನ ಗ್ರಾಮದ ಜನ ಅಣ್ಣಾರಾವ್ ಪಾಟೀಲ್ ಅವರ ಮನೆಯತ್ತ ಬರುತ್ತಿದ್ದಾರೆ.

    ಎರಡು ದಿನಗಳ ಹಿಂದೆ ಅಣ್ಣಾರಾವ್ ಅವರ ಎಮ್ಮೆ ಬಿಳಿ ಎಮ್ಮೆಗೆ ಜನ್ಮ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.

  • ಬಿಜೆಪಿ ಶಾಸಕರ ಎಮ್ಮೆಗಳಿಗಾಗಿ ಪೊಲೀಸರ ಶೋಧ

    ಬಿಜೆಪಿ ಶಾಸಕರ ಎಮ್ಮೆಗಳಿಗಾಗಿ ಪೊಲೀಸರ ಶೋಧ

    ಲಕ್ನೋ: ಕೇಳೋಕೆ ವಿಚಿತ್ರವಾದ್ರೂ ಇದು ಸತ್ಯ. ಕಳೆದ ವಾರ ಕಿಡಿಗೇಡಿಗಳು ಇಲ್ಲಿನ ಬಿಜೆಪಿ ಶಾಸಕರೊಬ್ಬರ ತೋಟದ ಮನೆಯಿಂದ ಕಳ್ಳತನ ಮಾಡಿರೋ ಎಮ್ಮೆಗಳಿಗಾಗಿ ಉತ್ತರಪ್ರದೇಶದ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಬಿಜೆಪಿ ಶಾಸಕ ಸುರೇಶ್ ರಾಹಿ ಅವರ ತೋಟದ ಮನೆಯಿಂದ ಒಂದು ಎಮ್ಮೆ ಹಾಗೂ ಅದರ ಆಕಳು ಕಾಣೆಯಾಗಿದೆ. ರಾಹಿ ಅವರು ಈ ಬಗ್ಗೆ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಮ್ಮೆಗಳ ಪತ್ತೆಗಾಗಿ ತಂಡವನ್ನ ರಚಿಸಲಾಗಿದೆ. ಶಾಸಕರ ಪ್ರಕಾರ ಎರಡೂ ಎಮ್ಮೆಗಳು 1 ಲಕ್ಷ ರೂ. ಮೌಲ್ಯದ್ದಾಗಿದ್ದು, ಹೀಗಾಗಿ ದೂರು ದಾಖಲಿಸಿದ್ದಾಗಿ ಹೇಳಿದ್ದಾರೆ.

    2014ರಲ್ಲೂ ಕೂಡ ಸಮಾಜವಾದಿ ಪಕ್ಷದ ಮುಖಂಡ ಅಜಾಮ್ ಖಾನ್ ತಮ್ಮ ಎಮ್ಮೆಗಳು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾಗ ಪೊಳಿಸರು ಹುಡಕಾಟ ನಡೆಸಿದ್ದರು. ಈ ವೇಳೆ ವಿರೋಧ ಪಕ್ಷದವರಿಂದ ಪೊಲೀಸರು ಟೀಕೆ ಎದುರಿಸುವಂತಾಗಿತ್ತು.

    ಇದನ್ನೂ ಓದಿ: ನಾಪತ್ತೆಯಾಗಿದ್ದ ಎಮ್ಮೆಗಳು ಫೇಸ್‍ಬುಕ್‍ನಿಂದ ಪತ್ತೆಯಾದ್ವು!