Tag: ಎಲೆಕ್ಟ್ರಿಕ್ ವಾಹನ

  • ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ

    ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ

    ನವದೆಹಲಿ: ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಸಂಬಂಧಿಸಿದಂತೆ ಭಾರತದಲ್ಲಿ ಉತ್ತರಪ್ರದೇಶ, ದೆಹಲಿ ಹಾಗೂ ಕರ್ನಾಟಕ ಮೊದಲ ಮೂರು ರಾಜ್ಯಗಳಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಕೇಂದ್ರ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ ಭಾರತದಲ್ಲಿ ಒಟ್ಟು 8,70,141 ಎಲೆಕ್ಟ್ರಿಕ್ ವಾಹನಗಳನ್ನು ನೋಂದಾಯಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದರು.

    ಉತ್ತರ ಪ್ರದೇಶ(255,700) ಅತಿ ಹೆಚ್ಚು ನೋಂದಾಯಿತ ಎಲೆಕ್ಟ್ರಿಕ್ ವಾಹನಗಳನ್ನು ಹೊಂದಿದ್ದು, ನಂತರದ ಸ್ಥಾನವನ್ನು ದೆಹಲಿ (125,347) ಮತ್ತು ಕರ್ನಾಟಕ (72,544) ಪಡೆದುಕೊಂಡಿದೆ. ಇನ್ನುಳಿದಂತೆ ನಾಲ್ಕು ಮತ್ತು ಐದನೇ ಸ್ಥಾನಗಳನ್ನು ಬಿಹಾರ(58,014) ಮತ್ತು ಮಹಾರಾಷ್ಟ್ರ(52,506) ಗಳಿಸಿಕೊಂಡಿದೆ.

    ಈ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾತನಾಡಿ, ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್‌ಟಿಯನ್ನು ಶೇ.12 ರಿಂದ ಶೇ.5ಕ್ಕೆ ಇಳಿಸಲಾಗಿದೆ. ಎಲೆಕ್ಟ್ರಿಕ್ ವಾಹನಗಳ ಚಾರ್ಜರ್‌ಗಳು ಹಾಗೂ ಚಾರ್ಜಿಂಗ್ ಸ್ಟೇಷನ್‌ಗಳ ಮೇಲಿನ ಜಿಎಸ್‌ಟಿಯನ್ನು ಶೇ.18 ರಿಂದ ಶೇ 5ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲ ಬಿಪಿನ್ ಅವರಿಗಿತ್ತು: ಬೊಮ್ಮಾಯಿ

    ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಯನ್ನು ಉತ್ತೇಜಿಸಲು ಕೈಗಾರಿಕೆಗಳ ಸಚಿವಾಲಯವು 2015ರಲ್ಲಿ ಫಾಸ್ಟರ್ ಅಡಾಪ್ಶನ್ ಮತ್ತು ಮ್ಯಾನುಫ್ಯಾಕ್ಚರಿಂಗ್, ಎಲೆಕ್ಟ್ರಿಕ್ ವೆಹಿಕಲ್ಸ್ ಇನ್ ಇಂಡಿಯಾ ಯೋಜನೆಯನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣ – ಇಡಿ ಮುಂದೆ ವಿಚಾರಣೆಗೆ ಹಾಜರಾದ ಜಾಕ್ವೆಲಿನ್

  • ದೆಹಲಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ- ಎಲೆಕ್ಟ್ರಿಕ್‌, ಸಿಎನ್‌ಜಿ ವಾಹನಗಳ ಸಂಚಾರಕ್ಕಷ್ಟೇ ಅನುಮತಿ

    ದೆಹಲಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ- ಎಲೆಕ್ಟ್ರಿಕ್‌, ಸಿಎನ್‌ಜಿ ವಾಹನಗಳ ಸಂಚಾರಕ್ಕಷ್ಟೇ ಅನುಮತಿ

    ನವದೆಹಲಿ: ದೆಹಲಿಯಲ್ಲಿ ದಿನೇ ದಿನೇ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಮಾಲಿನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ನವೆಂಬರ್‌ 27ರಿಂದ ಎಲೆಕ್ಟ್ರಿಕ್‌ ವಾಹನ, ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ)ದಿಂದ ಚಲಾಯಿಸಬಹುದಾದ ವಾಹನಗಳು ಹಾಗೂ ಅಗತ್ಯ ಸೇವೆಗಳ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳು ರಸ್ತೆಗೆ ಇಳಿಯದಂತೆ ಸೂಚನೆ ನೀಡಿದೆ.

    ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಪರಿಸರ ಸಚಿವ ಗೋಪಾಲ್‌ ರಾಯ್‌ ಅವರು, ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಮಾಲಿನ್ಯಕಾರಕ ಅನಿಲ ಹೊರಸೂಸುವ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇಂಧನ ಹೊರಸೂಸುವ ವಾಹನಗಳು ಡಿಸೆಂಬರ್‌ 3ರವರೆಗೆ ರಸ್ತೆಗೆ ಇಳಿಯದಂತೆ ಖಡಕ್‌ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನವೆಂಬರ್ 30ರವರೆಗೆ ಮಳೆ ಬೀಳುವ ಸಂಭವವಿದೆ: ಆರ್.ಅಶೋಕ್

    ಶಾಲಾ-ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ಮಾಲಿನ್ಯ ಪ್ರಮಾಣ ಕಡಿಮೆಯಾದಾಗ ನ.29 ರಿಂದ ತರಗತಿಗಳನ್ನು ಪುನಾರಂಭಿಸಲಾಗುವುದು. ಎಲ್ಲಾ ಸರ್ಕಾರಿ ಕಚೇರಿಗಳು ಮುಂದಿನ ಸೋಮವಾರದಿಂದ ತೆರೆಯಲಿವೆ. ಸರ್ಕಾರಿ ನೌಕರರು ಸಾರ್ವಜನಿಕ ವಾಹನಗಳಲ್ಲಿ ಪ್ರಯಾಣಿಸಬೇಕು. ಅವರಿಗಾಗಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮುರುಡೇಶ್ವರಕ್ಕೆ ಐಸಿಸ್ ಕಣ್ಣು- ದೇವಾಲಯಕ್ಕೆ ವಿಶೇಷ ಪೊಲೀಸ್ ಭದ್ರತೆ ವ್ಯವಸ್ಥೆ

    ವಾಯು ಗುಣಮಟ್ಟ ಕೊಂಚ ಸುಧಾರಿಸಿದ ಕಾರಣ ಈಗಾಗಲೇ ಕಟ್ಟಡ ಕಾಮಗಾರಿ, ನೆಲಸಮ ಚಟುವಟಿಕೆಗಳಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

  • ಮುಂದಿನ 2 ವರ್ಷದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಬೆಲೆ ಪೆಟ್ರೋಲ್‌ ವಾಹನದಷ್ಟೇ ಆಗಲಿದೆ: ಗಡ್ಕರಿ

    ಮುಂದಿನ 2 ವರ್ಷದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಬೆಲೆ ಪೆಟ್ರೋಲ್‌ ವಾಹನದಷ್ಟೇ ಆಗಲಿದೆ: ಗಡ್ಕರಿ

    ನವದೆಹಲಿ: ಮುಂದಿನ ಎರಡು ವರ್ಷದಲ್ಲಿ ಎಲೆಕ್ಟ್ರಿಕ್‌ ವಾಹನಗಳ(ಇವಿ) ಬೆಲೆ ಪೆಟ್ರೋಲ್‌ ವಾಹನದಷ್ಟೇ ಆಗಲಿದೆ ಎಂದು  ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.
    ವೆಬಿನಾರ್‌ನಲ್ಲಿ ಮಾತನಾಡಿದ ಅವರು,  ಈಗಾಗಲೇ ಇವಿಗಳ ಮೇಲೆ ಜಿಎಸ್‌ಟಿ ಕೇವಲ ಶೇ.5ರಷ್ಟಿದ್ದು, ಲಿಥಿಯಂ ಆಯಾನ್ ಬ್ಯಾಟರಿಗಳ ಬೆಲೆಯೂ ಕಡಿಮೆಯಾಗುತ್ತಿದೆ. ಇದಲ್ಲದೆ ಪೆಟ್ರೋಲ್ ಪಂಪ್‌ಗಳು ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಅನುಮತಿಸುವ ನೀತಿಯನ್ನು ಸರ್ಕಾರ ಈಗಾಗಲೇ ರೂಪಿಸಿದೆ. ಎರಡು ವರ್ಷಗಳಲ್ಲಿ ಭಾರತದಾದ್ಯಂತ ಸಾಕಷ್ಟು ಚಾರ್ಜಿಂಗ್ ಪಾಯಿಂಟ್‌ಗಳು ಇರಲಿದೆ ಎಂದು ತಿಳಿಸಿದರು.

    ದೇಶದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಬೇಡಿಕೆ ಹೆಚ್ಚಾಗುತ್ತಿದೆ.  ಪೆಟ್ರೋಲ್ ಆಧಾರಿತ ವಾಹನದಲ್ಲಿ ಪ್ರತಿ ಕಿಲೋಮೀಟರ್‌ಗೆ 10 ರೂ., ಡೀಸೆಲ್‌ ವಾಹನದಲ್ಲಿ 7 ರೂ. ಆದರೆ ಇವಿಗಳಲ್ಲಿ 1 ರೂ. ಆಗುತ್ತದೆ.  2030ರ ವೇಳೆಗೆ ಭಾರತದಲ್ಲಿ  ಖಾಸಗಿ ಕಾರು  30%, ವಾಣಿಜ್ಯ ವಾಹನಗಳಿಗೆ 70%, ಬಸ್‌ಗಳಿಗೆ 40% ಮತ್ತು ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ 80% ಇವಿ ಮಾರಾಟದ ಗುರಿಯನ್ನು ಹೊಂದಿದೆ. ಪ್ರಸ್ತುತ ದೇಶದಲ್ಲಿ ಕೇವಲ 2-3 ಎಲೆಕ್ಟ್ರಿಕ್‌ ಕಾರುಗಳ ಬೆಲೆ 15 ಲಕ್ಷ ರೂ.ಗಿಂತ ಕಡಿಮೆಯಿದೆ. ಸಬ್ಸಿಡಿ ನೀಡುವ ಹಿನ್ನೆಲೆಯಲ್ಲಿ  ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಬೆಲೆ ಈಗಾಗಲೇ ಅಸ್ತಿತ್ವದಲ್ಲಿರುವ ಪೆಟ್ರೋಲ್‌ ವಾಹನಗಳಿಗೆ ಸರಿ ಸಮಾನವಾಗಿದೆ ಎಂದರು.
    ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಎಲೆಕ್ಟ್ರಿಕ್ ಹೈವೇ ವ್ಯವಸ್ಥೆಯನ್ನು ಸ್ಥಾಪಿಸಲು ಸಂಭಾವ್ಯ ಪೈಲಟ್ ಯೋಜನೆಯನ್ನು ಯೋಜಿಸಲಾಗುತ್ತಿದೆ.  ಪ್ರದೇಶದಲ್ಲಿ ಹೇರಳವಾಗಿ ಲಭ್ಯವಿರುವ ಸೌರ ಶಕ್ತಿಯ ಶಕ್ತಿಯನ್ನು ಬಳಸಿಕೊಂಡು ವಿದ್ಯುದ್ದೀಕರಿಸಬಹುದು. ಇದಲ್ಲದೇ ಇಂಧನ ಕೇಂದ್ರಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದರು. ಇದನ್ನೂ ಓದಿ: ಅಪ್ಪುನಂತ ತಮ್ಮನನ್ನು ಪಡೆಯಲು ನಾನು ಪುಣ್ಯ ಮಾಡಿದ್ದೆ: ಶಿವಣ್ಣ ಭಾವುಕ
    ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) 2023 ರ ವೇಳೆಗೆ ದೇಶದ ಪ್ರಮುಖ ಹೆದ್ದಾರಿಗಳಲ್ಲಿ ಕನಿಷ್ಠ 700 ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಯೋಜನೆಯನ್ನು ರೂಪಿಸಿದೆ. ಇವುಗಳು 40-60 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಸರ್ಕಾರವು ಶೀಘ್ರದಲ್ಲೇ ದೇಶದ ಸಂಪೂರ್ಣ ವಿದ್ಯುತ್ ಟ್ರಾಕ್ಟರ್ ಅನ್ನು ಪ್ರಾರಂಭಿಸಲಿದೆ ಎಂದು ಗಡ್ಕರಿ ಹೇಳಿದರು. ಇದನ್ನೂ ಓದಿ: ವರ್ಷಾಂತ್ಯಕ್ಕೆ ಎಲ್ಲ ವಯಸ್ಕರಿಗೂ ಡಬಲ್ ಡೋಸ್ ಅನುಮಾನ
    ಪ್ರಸ್ತುತ, ಭಾರತವು  ವಿಶ್ವದ ನಾಲ್ಕನೇ ಅತಿದೊಡ್ಡ ನವೀಕರಿಸಬಹುದಾದ ಶಕ್ತಿ ಸಾಮರ್ಥ್ಯವನ್ನು ಹೊಂದಿದೆ.  ಕಳೆದ ಎರಡು ವರ್ಷಗಳಲ್ಲಿ ಇ-ಸ್ಕೂಟರ್‌ಗಳು, ಇ-ಕಾರ್ಟ್‌ಗಳು, ಇ-ಆಟೋಗಳು, ಇ-ಬೈಸಿಕಲ್‌ಗಳಂತಹ ಸಣ್ಣ ಬ್ಯಾಟರಿ ಚಾಲಿತ ವಾಹನಗಳಿಗೆ ದೇಶವು ಹೆಚ್ಚಿದ ಬೇಡಿಕೆಯನ್ನು ಕಂಡಿದೆ. ಕೋವಿಡ್ ಪೂರ್ವದ ಅವಧಿಗೆ ಹೋಲಿಸಿದರೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಎಲೆಕ್ಟ್ರಿಕ್ ಕಾರು ಮಾರಾಟವು ಕ್ರಮವಾಗಿ 145% ಮತ್ತು 190% ರಷ್ಟು ಏರಿಕೆ ಕಂಡಿದೆ. ಇವಿಗಳ ಈ ಎರಡು ವಿಭಾಗಗಳಲ್ಲಿ ಭಾರತವು ರಫ್ತು ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದರು.

  • ಗಡ್ಕರಿಗೆ ಸುಪ್ರೀಂ ಬುಲಾವ್- ಆದ್ರೆ ಇದು ಮನವಿಯೇ ಹೊರತು ಸಮನ್ಸ್ ಅಲ್ಲ

    ಗಡ್ಕರಿಗೆ ಸುಪ್ರೀಂ ಬುಲಾವ್- ಆದ್ರೆ ಇದು ಮನವಿಯೇ ಹೊರತು ಸಮನ್ಸ್ ಅಲ್ಲ

    ನವದೆಹಲಿ: ಮಾಲಿನ್ಯ ನಿಯಂತ್ರಣದ ಸಂಬಂಧ ಎಲೆಕ್ಟ್ರಿಕ್ ವಾಹನ ಜಾರಿ ಸಂಬಂಧ ಹೊಸ ವಿಚಾರಗಳನ್ನು ಹಂಚಿಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಸುಪ್ರೀಂ ಕೋರ್ಟ್ ಇಂದು ವಿನಂತಿಸಿದೆ. ಸಚಿವರ ಅಭಿಪ್ರಾಯ ಆಲಿಸಲು ನಾವು ವಿನಂತಿ ಮಾಡುತ್ತಿದ್ದೇವೆ ಹೊರತು ಇದು ವಿಚಾರಣೆಗೆ ಹಾಜರಾಗುವಂತೆ ಮಾಡುವ ಸಮನ್ಸ್ ಅಲ್ಲ ಎಂದು ಕೋರ್ಟ್ ಸ್ಪಷ್ಟನೆ ನೀಡಿದೆ.

    ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಲಿನ್ಯ ನಿಯಂತ್ರಣದ ಕುರಿತು ನವೀನ ವಿಚಾರಗಳಿವೆ. ಸಾರಿಗೆ ಸಚಿವರೇ ಬಂದು ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನದ ಯೋಜನೆಯ ಬಗ್ಗೆ ನಮಗೆ ಮಾಹಿತಿ ನೀಡಬಹುದೇ? ಅಧಿಕಾರಿಗಳಿಗಿಂತ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಯೋಜನೆಯ ಸ್ಪಷ್ಟ ಚಿತ್ರಣ ಇರುವುದರಿಂದ ಸಚಿವರನ್ನು ಕರೆಸಿ ಮಾಹಿತಿ ತಿಳಿದುಕೊಳ್ಳುವುದು ಉತ್ತಮ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಸರ್ಕಾರದ ನೀತಿ ಅನುಷ್ಠಾನಗೊಳಿಸುವ ಅರ್ಜಿಯ ವಿಚಾರಣೆ ಇಂದು ಮುಖ್ಯ ನ್ಯಾ.ಬೊಬ್ಡೆ, ನ್ಯಾ.ಬಿಆರ್ ಗವಿ, ನ್ಯಾ. ಸೂರ್ಯಕಾಂತ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು.

    ವಿಚಾರಣೆ ಸಂದರ್ಭದಲ್ಲಿ ಸಚಿವರು ನ್ಯಾಯಾಲಯಕ್ಕೆ ಬಂದು ನಮಗೆ ಸಹಾಯ ಮಾಡಬೇಕು ಎಂದು ನಾವು ವಿನಂತಿಸುತ್ತಿದ್ದೇವೆ. ಏಕೆಂದರೆ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುವ ಹಂತದಲ್ಲಿದ್ದಾರೆ. ಹೀಗಾಗಿ ಕಲಾಪಕ್ಕೆ ಹಾಜರಾಗಬೇಕು ಎಂದು ನ್ಯಾ.ಬೊಬ್ಡೆ ಕೇಳಿಕೊಂಡರು.

    ಈ ವಿನಂತಿಯನ್ನು ಇದನ್ನು ರಾಜಕೀಯ ರೀತಿಯಲ್ಲಿ ನೋಡುವ ಸಾಧ್ಯತೆಯಿದೆ ಎಂದು ಸರ್ಕಾರಿ ವಕೀಲರು ಕೋರ್ಟ್ ಗಮನಕ್ಕೆ ತಂದಾಗ, ಮುಖ್ಯ ನ್ಯಾಯಮೂರ್ತಿಗಳು, “ನಾವು ಅವರನ್ನು ಕರೆಸಿಕೊಳ್ಳುತ್ತಿದ್ದೇವೆ ಎಂದು ಭಾವಿಸಬೇಡಿ. ಇದು ಒಂದು ವಿನಂತಿಯಾಗಿದೆ. ಅಧಿಕಾರದಲ್ಲಿರುವ ಯಾರಾದರೂ ನಿರ್ಧರಿಸಬೇಕೆಂದು ನಾವು ಬಯಸುತ್ತೇವೆ. ದಯವಿಟ್ಟು ಚರ್ಚೆಗೆ ಬರುವಂತೆ ಅವರಿಗೆ ತಿಳಿಸಿ” ಎಂದು ಸೂಚಿಸಿದರು.

    ನಾವು ಸರ್ಕಾರಕ್ಕೆ ಯಾವುದೇ ಆದೇಶಗಳನ್ನು ನೀಡುತ್ತಿಲ್ಲ. ಬದಲಿಗೆ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಸರ್ಕಾರದ ಯೋಜನೆಗಳನ್ನು ನಾವು ತಿಳಿದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತು.

    ಅರ್ಜಿದಾರರನ್ನು ಪ್ರತಿನಿಧಿಸುತ್ತಿರುವ ವಕೀಲ ಪ್ರಶಾಂತ್ ಭೂಷಣ್, ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳಿಂದ ಶುಲ್ಕ ವಿಧಿಸಬಹುದು. ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಸಹಾಯಧನ ನೀಡಬಹುದು ಎಂದು ಸಲಹೆ ನೀಡಿದರು.

    ಮಾಲಿನ್ಯದ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಈ ವೇಳೆ ಸ್ಪಷ್ಟವಾಗಿ ಹೇಳಿದೆ. ಈ ವಿಷಯ ದೆಹಲಿ ಎನ್‍ಸಿಆರ್‍ಗೆ ಮಾತ್ರವಲ್ಲ, ಇಡೀ ದೇಶಕ್ಕೂ ಮುಖ್ಯವಾಗಿದೆ ಎಂದ ಕೋರ್ಟ್ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.

  • ಭಾರತಕ್ಕೆ ಎಂಜಿಯ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ – ಬೆಲೆ, ಮೈಲೇಜ್ ಎಷ್ಟು?

    ಭಾರತಕ್ಕೆ ಎಂಜಿಯ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ – ಬೆಲೆ, ಮೈಲೇಜ್ ಎಷ್ಟು?

    ನವದೆಹಲಿ: ಪ್ರತಿಷ್ಠಿತ ಎಂಜಿ ಮೋಟಾರ್ಸ್ ತನ್ನ ಕಂಪನಿಯ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಕಾರನ್ನು ಎಂಜಿ ಝಡ್‍ಎಸ್ ಇವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

    ಈಗಾಗಲೇ ಹುಂಡೈ ಕಂಪನಿಯವರು ಕೋನಾ ಹೆಸರಿನ ಎಲೆಕ್ಟ್ರಿಕ್ ವಾಹನವನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಇದಕ್ಕೆ ಸ್ಪರ್ಧೆ ನೀಡುವ ನಿಟ್ಟಿನಲ್ಲಿ ಎಂಜಿ ಮೋಟಾರ್ಸ್ ಅವರು ತಮ್ಮ ಕಂಪನಿಯ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆ ಮಾಡಿದೆ.

    ಈ ಎಂಜಿ ಜಡ್‍ಎಸ್ ಇವಿ ತುಂಬಾ ಸ್ಟೈಲಿಶ್ ಲುಕ್‍ನಲ್ಲಿ ಡಿಸೈನ್ ಮಾಡಿದ್ದು, ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 340 ಕಿ.ಮೀ ಚಲಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಈ ಕಾರಿನಲ್ಲಿ 44.5 ಕಿಲೋವ್ಯಾಟ್ ಲಿಥಿಯಂ ಬ್ಯಾಟರಿಯನ್ನು ಅಳವಡಿಸಿದ್ದು, 50 ಕಿ.ವ್ಯಾ ಡಿಸಿ ಚಾರ್ಜರ್ ನಲ್ಲಿ ಕೇವಲ 40 ನಿಮಿಷಗಳಲ್ಲಿ ಶೇ.80 ರಷ್ಟು ಚಾರ್ಜ್ ಆಗುತ್ತದೆ. ಅಲ್ಲದೇ ಕಾರಿನ ಜೊತೆ ಕಂಪನಿಯವರು 7.4 ಕಿ.ವ್ಯಾ ಡಿಸಿ ಚಾರ್ಜರ್ ಅನ್ನು ನೀಡುತ್ತಿದ್ದು, ಇದನ್ನು ಬಳಸಿ ಚಾರ್ಜ್ ಮಾಡಿದರೆ 7 ಗಂಟೆಯಲ್ಲಿ ಸಂಪೂರ್ಣ ಚಾರ್ಜ್ ಆಗುತ್ತದೆ.

    ಎಂಜಿ ಜಡ್‍ಎಸ್ ಇವಿ ಎಸ್‍ಯುವಿ ಎಲೆಕ್ಟ್ರಿಕ್ ಕಾರನ್ನು ಭಾರತದದ್ಯಾಂತ ಸುಮಾರು 1 ಲಕ್ಷ ಕಿ.ಮೀ ಡ್ರೈವ್ ಮಾಡಿ ಪರೀಕ್ಷೆ ಮಾಡಲಾಗಿದೆ ಎಂದು ಎಂಜಿ ಮೋಟಾರ್ಸ್ ಕಂಪನಿ ತಿಳಿಸಿದೆ. ಈ ಕಾರು ಬ್ಯಾಟರಿ ಪವರ್ ಬಳಸಿಕೊಂಡು ಕೇವಲ ಎಂಟು ಸೆಕೆಂಡ್‍ಗಳಲ್ಲಿ 100 ಕಿ.ಮೀ ಸ್ಪೀಡ್‍ಗೆ ತಲುಪಬಲ್ಲ ಸಾಮರ್ಥ್ಯ ಹೊಂದಿದೆ. ಇದರ ಜೊತೆಗೆ ಎಂಜಿ ಮೋಟಾರ್ಸ್ ಶೋರೂಮ್‍ಗಳು ಭಾರತದಲ್ಲಿ ದೆಹಲಿ, ಹೈದರಾಬಾದ್, ಮುಂಬೈ, ಬೆಂಗಳೂರು ಮತ್ತು ಅಹಮದಾಬಾದ್‍ನಲ್ಲಿ ಇದ್ದು, ಮುಂದಿನ 5 ವರ್ಷಗಳಲ್ಲಿ ಪ್ರಮುಖ ಮೆಟ್ರೋ ನಗರಗಳಲ್ಲಿ ಪ್ರತಿ 5 ಕಿ.ಮೀ ಮತ್ತು ಹೆದ್ದಾರಿಗಳಲ್ಲಿ ಪ್ರತಿ 25 ಕಿ.ಮೀ.ಗೆ 1 ಚಾರ್ಜಿಂಗ್ ಸ್ಟೇಷನ್ ಅನ್ನು ತೆರೆಯಲು ಕಂಪನಿ ಯೋಜನೆ ರೂಪಿಸಿದೆ.

    ಈ ಕಾರು ಈ ಹಿಂದೆ ಎಂಜಿ ಮೋಟಾರ್ಸ್ ಬಿಡುಗಡೆ ಮಾಡಿದ ಎಂಜಿ ಹೆಕ್ಟರ್ ಕಾರಿಗಿಂತ ಸ್ವಲ್ಪ ಚಿಕ್ಕದಾಗಿದ್ದು, ಇತ್ತೀಚಿನ ತಂತ್ರಜ್ಞಾನವನ್ನು ಬಳಸಿಕೊಂಡು ಇಂಟಿರಿಯರ್ ಡಿಸೈನ್ ಮಾಡಲಾಗಿದೆ. ಈ ಕಾರು 4314 ಮಿಮೀ (14 ಅಡಿ) ಉದ್ದ, 1809 ಮಿಮೀ (5 ಅಡಿ) ಅಗಲ ಮತ್ತು 1620 ಮಿಮೀ (5 ಅಡಿ) ಎತ್ತರವನ್ನು ಇದೆ. ಈ ಕಾರು ಹುಂಡೈ ಕಂಪನಿಯ ಕ್ರೆಟಾ ಕಾರಿಗಿಂತ ದೊಡ್ಡಾಗಿದೆ.

    ಈ ಕಾರನ್ನು ಸ್ಪೋರ್ಟ್ ಕಾರ್ ರೀತಿಯಲ್ಲಿ ಡಿಸೈನ್ ಮಾಡಿದ್ದು, ಕಪ್ಪು ಮತ್ತು ಸಿಲ್ವರ್ ಬಣ್ಣದಲ್ಲಿ ಕಾರಿನ ಒಳಭಾಗವನ್ನು ಬಹಳ ಆಕರ್ಷಣೀಯವಾಗಿ ಕಾಣುವಂತೆ ವಿನ್ಯಾಸ ಮಾಡಲಾಗಿದೆ. ಇದರ ಜೊತೆ 8.0 ಇಂಚಿನ ಟಚ್‍ಸ್ಕ್ರೀನ್ ಸಿಸ್ಟಮ್ ನೀಡಲಾಗಿದ್ದು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸಪೋರ್ಟ್ ಮಾಡುತ್ತದೆ. ಮೊಬೈಲ್ ಚಾರ್ಜರ್ ಮತ್ತು ಬ್ಲೂಟೂತ್ ಮತ್ತು ಹಿಂಬದಿಯ ಕ್ಯಾಮೆರಾವನ್ನು ನೀಡಲಾಗಿದೆ.

    ಬೆಲೆ ಎಷ್ಟು?
    ಕಂಪನಿ ಕಾರಿನ ಬೆಲೆಯನ್ನು ನಿಖರವಾಗಿ ತಿಳಿಸಿಲ್ಲ. ಆದರೆ ಮೂಲಗಳ ಪ್ರಕಾರ 20 ಲಕ್ಷ ರೂ. ಇರಬಹುದು ಎಂದು ಅದಾಜಿಸಲಾಗಿದೆ. ಜನವರಿಯಿಂದ ಈ ಕಾರು ಮಾರಾಟವಾಗಲಿದೆ.

  • ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಗಿಫ್ಟ್

    ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಗಿಫ್ಟ್

    ನವದೆಹಲಿ: ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಭಾರತವನ್ನು ಗ್ಲೋಬಲ್ ಹಬ್ ಮಾಡುವತ್ತ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    ಮುಖ್ಯಾಂಶಗಳು:
    – ಕಡಿಮೆ ದರದಲ್ಲಿ ಜನರಿಗೆ ಎಲೆಕ್ಟ್ರಿಕ್ ವಾಹನ ದೊರೆಯುವಂತಾಗಲು ಈಗ ಇರುವ ಶೇ.12 ತೆರಿಗೆ ವ್ಯಾಪ್ತಿಯ ಬದಲು ಶೇ.5ರ ತೆರಿಗೆ ವ್ಯಾಪ್ತಿ ಒಳಗಡೆ ತರಲು ಜಿಎಸ್‍ಟಿ ಕೌನ್ಸಿಲ್ ಬಳಿ ಮನವಿ ಮಾಡಲಾಗಿದೆ.

    – 2023ರ ಮಾರ್ಚ್ 31ರ ಒಳಗಡೆ ಸಾಲ ಮಾಡಿ 1.50 ಲಕ್ಷ ರೂ. ಮೌಲ್ಯದ ವಾಹನದ ಖರೀದಿಸಿದರೆ ಅದಕ್ಕೆ ಯಾವುದೇ ಬಡ್ಡಿ ಇಲ್ಲ.

    – ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ 2018ರಲ್ಲಿ ಫೇಮ್ ಯೋಜನೆಯನ್ನು ಪರಿಚಯಿಸಿರುವ ಕೇಂದ್ರ ಸರ್ಕಾರವು 2019-21ರ ಅವಧಿಗೆ 2ನೇ ಹಂತದ ಯೋಜನೆಯನ್ನು ಘೋಷಣೆ ಮಾಡಿದ್ದು, ಇದಕ್ಕೆ 10 ಸಾವಿರ ಕೋಟಿ ಅನುದಾನ ನೀಡಲಾಗಿದೆ.

    – ಹೆಚ್ಚಿನ ಸುಧಾರಿತ ಬ್ಯಾಟರಿ ಮತ್ತು ನೋಂದಾಯಿತ ಇ-ವಾಹನಗಳಿಗೆ ಯೋಜನೆಯಡಿ ಪ್ರೋತ್ಸಾಹ. ಜನ ಸಾಮಾನ್ಯರಿಗೆ ಕೈಗೆಟುಕುವ ಮತ್ತು ಪರಿಸರ ಸ್ನೇಹಿ ಸಾರ್ವಜನಿಕ ಸಾರಿಗೆ ಆಯ್ಕೆ ಮಾಡಲು ಒತ್ತು.

    – ಆರ್ಥಿಕ ಬೆಳವಣಿಗೆ ಮತ್ತು ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ಕ್ಷೇತ್ರದಲ್ಲಿ ಲಿಥಿಯಂ ಬ್ಯಾಟರಿ, ಸೌರ ವಿದ್ಯುತ್ ಚಾರ್ಜಿಂಗ್ ಉತ್ಪಾದನೆ ಕ್ಷೇತ್ರಗಳಲ್ಲಿ ಹೂಡಿಕೆ ಸಂಬಂಧಿತವಾಗಿ ಆದಾಯ ತೆರಿಗೆ ವಿನಾಯಿತಿಗಳನ್ನು ನೀಡುವುದು.

  • 2025ರ ಒಳಗಡೆ 150 ಸಿಸಿ ಕೆಳಗಿನ ಬೈಕ್‍ಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಿ – ನೀತಿ ಆಯೋಗ ಸೂಚನೆ

    2025ರ ಒಳಗಡೆ 150 ಸಿಸಿ ಕೆಳಗಿನ ಬೈಕ್‍ಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಿ – ನೀತಿ ಆಯೋಗ ಸೂಚನೆ

    ನವದೆಹಲಿ: 2025ರ ವೇಳೆಗೆ ಎಲ್ಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಎಂಜಿನ್ ಆಗಿ ಪರಿವರ್ತಿಸುವ ಕುರಿತು ಎರಡು ವಾರಗಳಲ್ಲಿ ತಮ್ಮ ನಿರ್ಧಾರ ತಿಳಿಸುವಂತೆ ವಾಹನ ತಯಾರಿಕಾ ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಶುಕ್ರವಾರ ನಡೆದ ನೀತಿ ಆಯೋಗದ ‘ಥಿಂಕ್ ಟ್ಯಾಂಕ್’ ಸಭೆಯಲ್ಲಿ ಈ ನಿರ್ಧಾರದ ಕುರಿತು ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರು ಹಾಗೂ ಸ್ಟಾರ್ಟ್ ಅಪ್ ತಯಾರಿಕರೊಂದಿಗೆ ಚರ್ಚಿಸಲಾಗಿದೆ. ಮಾಲಿನ್ಯ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

    ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹಾಗೂ ಸಿಇಓ ಅಮಿತಾಬ್ ಕಾಂತ್ ಅವರ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ‘ಥಿಂಕ್ ಟ್ಯಾಂಕ್’ ಸಭೆಯಲ್ಲಿ ಬಜಾಜ್ ಆಟೋ ಎಂಡಿ ರಾಜೀವ್ ಬಜಾಜ್, ಟಿವಿಎಸ್ ಮೋಟರ್ಸ್ ಕಂ. ಅಧ್ಯಕ್ಷ ವೇಣು ಶ್ರೀನಿವಾಸನ್, ಹೋಂಡಾ ಮೋಟರ್‍ಸೈಕಲ್ ಆಂಡ್ ಸ್ಕೂಟರ್ ಇಂಡಿಯಾದ ಅಧ್ಯಕ್ಷ ಮತ್ತು ಸಿಇಓ ಮಿನೋರು ಕಟೊ ಹಾಗೂ ಪ್ರಧಾನ ನಿರ್ದೇಶಕ ವಿಷ್ಣು ಮಾಥೂರ್ ಹಾಗೂ ಆಟೊಮೋಟಿವ್ ಕಾಂಪೋನೆಂಟ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರಧಾನ ನಿರ್ದೇಶಕ ವಿನೀ ಮೆಹ್ತಾ ಸೇರಿದಂತೆ ಪ್ರಮುಖ ದ್ವಿಚಕ್ರ ವಾಹನ ಉತ್ಪಾದಕ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು.

    ಈ ಕುರಿತು ಸೂಕ್ತ ನೀತಿ ಮತ್ತು ಮಾರ್ಗದರ್ಶನವಿಲ್ಲದೆ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ. ನೀತಿಗಳನ್ನು ಸ್ಪಷ್ಟವಾಗಿಡಲು ಸಾಧ್ಯವಿಲ್ಲ. ಹೆಚ್ಚು ವಾಯು ಮಾಲಿನ್ಯ ಹೊಂದಿದ 15ರ ಪೈಕಿ 14 ನಗರಗಳು ಭಾರತದಲ್ಲಿವೆ. ಸರ್ಕಾರ ಮತ್ತು ಕಂಪನಿಗಳು ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ.

    2023ರ ವೇಳೆಗೆ ತ್ರಿಚಕ್ರ ವಾಹನಗಳನ್ನು ಸಂಪೂರ್ಣವಾಗಿ ಎಲೆಕ್ಟ್ರಿಕ್‍ಗೆ ಪರಿವರ್ತಿಸಬೇಕು, 2025ರ ವೇಳೆಗೆ 150 ಸಿಸಿಗಿಂತ ಕಡಿಮೆ ಎಂಜಿನ್ ಸಾಮಥ್ರ್ಯ ಹೊಂದಿರುವ ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಲು ನೀತಿ ಆಯೋಗ ಯೋಜನೆ ರೂಪಿಸಿದೆ.

    ಸಭೆ ನಂತರ ಅಮಿತಾಬ್ ಕಾಂತ್ ಈ ಕುರಿತು ಟ್ವೀಟ್ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಕ್ರಾಂತಿ ಮಾಡಲು ನೀತಿ ಆಯೋಗದ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಜಾಗತಿಕವಾಗಿ ಎಲೆಕ್ಟ್ರಿಕ್ ವಾಹನಗಳ ಚಾಲಕನಾಗಲು ಭಾರತ ತುದಿಗಾಲಲ್ಲಿ ನಿಂತಿದೆ. ಎಲೆಕ್ಟ್ರಿಕ್ ವಾಹನಗಳು ಚಲನಶೀಲತೆ ಭವಿಷ್ಯ ಎಂದು ಎಲ್ಲರೂ ಒಪ್ಪಿಕೊಂಡಿದ್ದು, ಮೋರ್ಥ್ ಹಾಗೂ ಡಿಎಚ್‍ಐನ ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಸಭೆಯ ನೇತೃತ್ವ ವಹಿಸಿದ್ದರು ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಭಾರತ ಈಗಾಗಲೇ ಎಲೆಕ್ಟ್ರಾನಿಕ್ಸ್ ಕ್ರಾಂತಿ ಮತ್ತು ಸೆಮಿ ಕಂಡಕ್ಟರ್ ಕ್ರಾಂತಿಯನ್ನು ತಪ್ಪಿಸಿಕೊಂಡಿದ್ದು, ವಿದ್ಯುತ್ ವಾಹನಗಳ ಕ್ರಾಂತಿಯನ್ನು ತಪ್ಪಿಸಿಕೊಳ್ಳಬಾರದು. ಈಗಿರುವ ಕಂಪನಿಗಳು ಈ ಕುರಿತು ನಿರ್ಧರಿಸದಿದ್ದರೆ ಇತರೆ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತವೆ. ಈ ಕುರಿತು ಈಗಾಗಲೇ ಚೀನಾದಲ್ಲಿ ನಡೆದಿದೆ. ಆದರೆ, ಇದನ್ನು ಉದ್ಯಮಗಳ ಮೇಲೆ ಹೇರಲು ಸರ್ಕಾರ ಇಚ್ಛಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮೂಲಗಳ ಪ್ರಕಾರ ಸಾಂಪ್ರದಾಯಿಕ ಉತ್ಪಾದಕರಾದ ಬಜಾಜ್ ಆಟೋ, ಹೀರೋ ಮೋಟೊಕಾರ್ಪ್, ಎಚ್‍ಎಂಎಸ್‍ಐ ಹಾಗೂ ಟಿವಿಎಸ್ ಕಂಪನಿಗಳು ಈ ಕುರಿತು ವಿರೋಧ ವ್ಯಕ್ತಪಡಿಸಿದ್ದು, ಕೈನಿಟಿಕ್ ಗ್ರೀನ್ ಎನರ್ಜಿ ಮತ್ತು ಪವರ್ ಸೆಲ್ಯೂಶನ್ಸ್ ಮತ್ತು ಟಾರ್ಕ್ ಮೋಟರ್ಸ್ ಸೇರಿದಂತೆ ಇತರ ಕಂಪನಿಗಳು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿವೆ.

    ವಾಯು ಮಲಿನ್ಯದ ಸಮಸ್ಯೆಯಿಂದಾಗಿ 2023ರೊಳಗೆ ಎಲೆಕ್ಟ್ರಿಕ್ ವಾಹನಗಳಿಗೆ ಪರಿವರ್ತಿಸಲು ಬಯಸುತ್ತೇವೆ ಎಂದು ರೀವೋಲ್ಟ್ ಇಂಟಲಿಕಾರ್ಪ್ ಸ್ಥಾಪಕ ರಾಹುಲ್ ಶರ್ಮಾ ತಿಳಿಸಿದ್ದಾರೆ.

    ಬಜಾಜ್ ಮತ್ತು ಟಿವಿಎಸ್ ಕಂಪನಿಗಳು ಕಳೆದ ತಿಂಗಳು ಈ ಕುರಿತು ಪ್ರತಿಕ್ರಿಯಿಸಿವೆ. ಪ್ರಸ್ತುತ ಪೆಟ್ರೋಲ್, ಗ್ಯಾಸ್ ವಾಹನಗಳನ್ನು ನಿಷೇಧಿಸಿ, 2025ರ ವೇಳೆಗೆ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳನ್ನಾಗಿ ಪರಿವರ್ತಿಸುವುದು ಅವಾಸ್ತವಿಕವಾಗಿದೆ. ಈ ರೀತಿಯ ಕ್ರಮ ಕೈಗೊಳ್ಳಲು ಇದು ಸೂಕ್ತ ಸಮಯವಲ್ಲ. ಇದರಿಂದ ದೇಶದಲ್ಲಿ ವಾಹನ ಉತ್ಪಾದನೆ ಹಳಿ ತಪ್ಪಲಿದೆ ಎಂದು ವಾದಿಸಿವೆ.

    ಸರ್ಕಾರದ ದಿಢೀರ್ ನಿರ್ಧಾರದಿಂದ ಕಂಪನಿಗಳು ಬಿಎಸ್(ಭಾರತ್ ಸ್ಟೇಜ್) 3ಯಿಂದ ಬಿಎಸ್-4ಗೆ ಎಂಜಿನ್‍ಗಳನ್ನು ಅಪ್‍ಗ್ರೇಡ್ ಮಾಡುತ್ತಿವೆ. ಇದೇ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವುದು ಹೇಗೆ ಸಾಧ್ಯ? ದರಿಂದ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಕುರಿತು ಹೆಚ್ಚು ಜಾಗರೂಕತೆ ಮತ್ತು ವಾಸ್ತವಿಕ ಮಾರ್ಗಸೂಚಿಗಳನ್ನು ತಯಾರಿಸಬೇಕಿದೆ ಎಂದು ಹೀರೋ ಮೋಟೊಕಾರ್ಪ್ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದೆ.

    ವಾಹನ ಉದ್ಯಮ ಸಂಸ್ಥೆಗಳಾದ ಎಸ್‍ಐಎಎಂ ಮತ್ತು ಎಸಿಎಂಎಗಳೂ ಸಹ ಈ ಕುರಿತು ಸರ್ಕಾರಕ್ಕೆ ಸಲಹೆ ನೀಡಿದ್ದು, ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸೂಕ್ತ ಮರ್ಗಸೂಚಿಗಳು ಹಾಗೂ ಪ್ರಾಯೋಗಿಕ ಸಮಯಾವಕಾಶ ನೀಡುವಂತೆ ತಿಳಿಸಿವೆ.

    ಉದ್ಯಮ ಸಂಸ್ಥೆ ಸಿಐಐ ಸಹ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಕುರಿತು ಗುರಿ ಮತ್ತು ಸಮಯದ ಗಡುವನ್ನು ಅಂತಿಮಗೊಳಿಸುವ ಮೊದಲು ಸರ್ಕಾರ ಸೂಕ್ತ ಸಮಾಲೋಚನೆ ನಡೆಸಬೇಕು ಎಂದು ತಿಳಿಸಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ವಿಕಲಚೇತನ ಡೆಲಿವರಿ ಬಾಯ್‍ಗೆ ಝೊಮಾಟೊದಿಂದ ಎಲೆಕ್ಟ್ರಿಕ್ ವಾಹನ ಗಿಫ್ಟ್

    ವಿಕಲಚೇತನ ಡೆಲಿವರಿ ಬಾಯ್‍ಗೆ ಝೊಮಾಟೊದಿಂದ ಎಲೆಕ್ಟ್ರಿಕ್ ವಾಹನ ಗಿಫ್ಟ್

    ನವದೆಹಲಿ: ವಿಕಲಚೇತನ ಝೊಮಾಟೊ ಡೆಲಿವರಿ ಮಾಡುವ ಯುವಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ದಿಯಾಗಿದ್ದ. ಮೂರು ಚಕ್ರದ ಸೈಕಲ್‍ನಲ್ಲಿ ಕುಳಿತು ಮನೆ ಮನೆಗೂ ಫುಡ್ ಡೆಲಿವರಿ ಮಾಡುವ ಈತನ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ವಿಡಿಯೋ ವೈರಲ್ ಆದ ಬಳಿಕ ಸಿಬ್ಬಂದಿ ಕೆಲಸಕ್ಕೆ ಮೆಚ್ಚಿದ ಝೊಮಾಟೊ ಕಂಪನಿ ಯುವಕನಿಗೆ ಎಲೆಕ್ಟ್ರಿಕ್ ವಾಹನ ನೀಡಿ ಪ್ರೋತ್ಸಾಹಿಸಿದೆ.

    ಈ ಹಿಂದೆ ಝೊಮಾಟೊ ಡೆಲಿವರಿ ಬಾಯ್ ರಾಮು ಎಲ್ಲೆಡೆ ಫೇಮಸ್ ಆಗಿದ್ದ. ಮೂರು ಚಕ್ರದ ಸೈಕಲಿನಲ್ಲಿ ಕುಳಿತು ಮನೆ ಮನೆಗೂ ಫುಡ್ ಡೆಲಿವರಿ ಮಾಡುವ ಈತನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕಾಯಕವೇ ಕೈಲಾಸ ಅಂದುಕೊಂಡು ದುಡಿಯುತ್ತಿದ್ದ ರಾಮು ಸ್ವಾಭಿಮಾನಕ್ಕೆ ಮೆಚ್ಚಿದ ಝೊಮಾಟೊ ಕಂಪನಿ ಈತನಿಗೆ ಮೂರು ಚಕ್ರದ ಎಲೆಕ್ಟ್ರಿಕ್ ವಾಹನ ನೀಡಿ ಪುರಸ್ಕರಿಸಿದೆ.

    ಈ ಬಗ್ಗೆ ಝೊಮಾಟೊ ಫುಡ್ ಡೆಲಿವರಿ ಕಂಪೆನಿಯ ಸ್ಥಾಪಕ ಹಾಗೂ ಸಿಇಒ ದೀಪಿಂದರ್ ಗೋಯೆಲ್ ತಮ್ಮ ಟ್ವಿಟ್ಟರ್ ರಾಮುವಿನ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ರಾಮು ಎಲೆಕ್ಟ್ರಿಕ್ ವಾಹನವನ್ನು ಚಲಾಯಿಸುವ ವಿಡಿಯೋ ಹಾಗೂ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. `ನಮ್ಮ ಫುಡ್ ಡೆಲಿವರಿ ಪಾಟ್ರ್ನರ್ ರಾಮು ಸಾಹು ನಾವು ಕೊಟ್ಟ ಎಲೆಕ್ಟ್ರಿಕ್ ವಾಹನವನ್ನು ಸಹೃದಯದಿಂದ ಸ್ವೀಕರಿಸಿದ್ದಾರೆ’ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ರಾಮುವಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪ್ರಶಂಸೆಯ ಮಹಾಪೂರ ಹರಿದು ಬಂದಿತ್ತು. ಅಲ್ಲದೇ ಚಿಕ್ಕ ಸಮಸ್ಯೆ ಎದುರಾದರೆ ಕೆಲಸ ಕೈಬಿಡುವ ಜನರಿಗೆ ಈ ಯುವಕನ ಛಲ, ಸ್ವಾಭಿಮಾನ ಮಾದರಿಯಾಗಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

    https://twitter.com/tfortitto/status/1129359381319962624

  • ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

    ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

    ನವದೆಹಲಿ: ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನಗಳನ್ನು ಬಳಸಿ ಚಾಲನೆಯಾಗುವ ವಾಹನಗಳು ಯಾವುದೇ ಪರ್ಮಿಟ್ ಇಲ್ಲದೇ ರಸ್ತೆಗಿಳಿಯಬಹುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ(ಎಸ್‍ಐಎಎಂ) ವಾರ್ಷಿಕ ಅಧಿವೇಶನದಲ್ಲಿ ಮಾತನಾಡಿದ ಅವರು ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನ ಬಳಸಿ ಚಲಿಸುವ ವಾಹನಗಳಿಗೆ ಪ್ರೋತ್ಸಾಹ ನೀಡಲು ಎಲೆಕ್ಟ್ರಿಕಲ್ ವಾಹನ ಸೇರಿದಂತೆ, ಎಥೆನಾಲ್, ಬಯೋ ಡೀಸೆಲ್, ಸಿಎನ್‍ಜಿ ಹಾಗೂ ಬಯೋ ಇಂಧನಗಳ ಮೂಲಕ ಸಾಗುವ ವಾಹನಗಳಿಗೆ ರಸ್ತೆ ರಹದಾರಿಯನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದೇವೆ. ಇಂತಹ ವಾಹನಗಳಿಗೆ ಉಚಿತ ಪರ್ಮಿಟ್ ನೀಡುವ ಮೂಲಕ, ಸುಲಭವಾಗಿ ರಸ್ತೆಗಿಳಿಯುವಂತೆ ಮಾಡಲಾಗಿದೆ ಎಂದರು.

    ಆ್ಯಪ್ ಆಧಾರಿತಾ ಟ್ಯಾಕ್ಸಿ ಸೇವೆಗಳಾದ ಊಬರ್ ಹಾಗೂ ಓಲಾಗಳು ತಮ್ಮ ವಾಹನಗಳನ್ನು ಎಲೆಕ್ಟ್ರಿಕ್ ಮಾದರಿಗಳನ್ನು ಬಳಸುವ ಮೂಲಕ ರಸ್ತೆ ತೆರಿಗೆಗಳ ವಿನಾಯಿತಿ ಹೊಂದಬಹುದಾಗಿದೆ ಎಂದು ಈ ವೇಳೆ ಸಲಹೆ ನೀಡಿದರು. ಇದನ್ನೂ ಓದಿ:  2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

    ವಾಹನ ತಯಾರಿಕಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಮುಂದೆ ಬರುವುದಕ್ಕಾಗಿ ಈ ನಿರ್ಧಾರನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಎಲೆಕ್ಟ್ರಿಕ್ ವಾಹನಗಳಿಗೆ ಮೇಲೆ 12% ಜಿಎಸ್‍ಟಿ ಇದೆ. ಹೀಗಾಗಿ ಮತ್ತೆ ಯಾವುದೇ ಸಬ್ಸಿಡಿ ಅವಶ್ಯಕತೆ ಇರುವುದಿಲ್ಲ ಎಂದು ಯೋಚಿಸಿದ್ದೇನೆ. ಉತ್ತಮ ವಾತಾವರಣವನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ನಮ್ಮ ಇಲಾಖೆಯು ಈ ಬಗ್ಗೆ ವರದಿ ಸಿದ್ದಪಡಿಸಿದ್ದು, ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಓಡಾಟ ಜಾಸ್ತಿಯಾಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!

    ಕೇಂದ್ರ ಸರ್ಕಾರವು 2015ರಲ್ಲಿ ಜಾರಿಗೆ ತಂದ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಯೋಜನೆಗೆ ಈ ನಿರ್ಧಾರವು ಸಹಾಯಕವಾಗುತ್ತದೆ. ವಾಹನಗಳ ಮೇಲಿನ ಪರ್ಮಿಟ್ ತೆಗೆದು ಹಾಕಿರುವುದರಿಂದ ವಾಹನ ತಯಾರಿಕಾ ಸಂಸ್ಥೆಗಳ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಒತ್ತು ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಖ್ಯಾತಿಗೆ ತಿರುಮಲ ಸೇರ್ಪಡೆ

    ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಖ್ಯಾತಿಗೆ ತಿರುಮಲ ಸೇರ್ಪಡೆ

    ವಿಜಯವಾಡ: ತಿರುಮಲ ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಎಂದು ಪರಿಗಣಿತವಾಗಿದೆ.

    ದೇವಸ್ಥಾನದ ಸಿಬ್ಬಂದಿಯ ದೈನಂದಿನ ಓಡಾಟಕ್ಕೆ ಎಲೆಕ್ಟ್ರಿಕ್ ಕಾರ್ ಗಳನ್ನು ಬಳಸಲಾಗುತ್ತದೆ. ರಾಜ್ಯ ಸರ್ಕಾರದ ಯೋಜನೆಯ ಭಾಗವಾಗಿ ರಾಜ್ಯ ನಿರ್ವಹಣೆಯ ಇಂಧನ ದಕ್ಷತಾ ಸೇವಾ ಕಂಪೆನಿ(ಇಇಎಸ್‍ಎಲ್)ಯು 350 ಎಲೆಕ್ಟ್ರಿಕ್ ಕಾರುಗಳನ್ನು ಸರ್ಕಾರಕ್ಕೆ ಸರಬರಾಜು ಮಾಡಿದೆ. ಇದರಲ್ಲಿ 50 ಕಾರುಗಳನ್ನು ತಿರುಪತಿ ದೇವಸ್ಥಾನದ ಸಿಬ್ಬಂದಿ ಬಳಕೆಗೆ ಕೊಡಲಾಗುತ್ತದೆ.

    ಎಲೆಕ್ಟ್ರಿಕ್ ವಾಹನಗಳನ್ನು ತಿಂಗಳ ಆಧಾರದ ಮೇಲೆ ಒಪ್ಪಂದದ ಪ್ರಕಾರ ಇಇಎಸ್‍ಎಲ್ ನಿಂದ ಪಡೆಯಲಾಗುತ್ತದೆ. ಮೊದಲಿಗೆ 50 ವಾಹನಗಳನ್ನು ರಾಜ್ಯಾದ್ಯಂತ ಆಯ್ಕೆ ಮಾಡಲಾದ ಜಾಗಗಳಲ್ಲಿ ಬಳಸಲಾಗುತ್ತದೆ. ಪ್ರತಿ ವಾಹನಕ್ಕೆ ತಿಂಗಳಿಗೆ 20 ಸಾವಿರ ರೂಪಾಯಿಗಳನ್ನು ಮತ್ತು ಚಾಲಕ ಹಾಗೂ ವಾಹನದ ನಿರ್ವಹಣೆಗೆ 20 ಸಾವಿರ ರೂಪಾಯಿಗಳನ್ನು ನಿಗಮವು ಪಾವತಿ ಮಾಡುತ್ತದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಮುಖ್ಯಸ್ಥ ಎಂ ಕಮಲಾಕರ್ ಬಾಬು ತಿಳಿಸಿದ್ದಾರೆ.

    ಬ್ಯಾಟರಿ ಮತ್ತು ಗೇರ್ ಗಳ ಬಗ್ಗೆ ಚಾಲಕರಿಗೆ ತರಬೇತಿಯನ್ನು ನೀಡಲಾಗುತ್ತದೆ. ಪ್ರತಿ ಕಾರಿನ ಬೆಲೆ 11 ಲಕ್ಷ ರೂ. ಆಗಿದ್ದು 6 ವರ್ಷಗಳ ಬಳಿಕ ಕಾರಿನ ಮಾಲೀಕತ್ವವನ್ನು ಸರ್ಕಾರಕ್ಕೆ ವಹಿಸಲಾಗುತ್ತದೆ. ತಿರುಪತಿ ದೇವಸ್ಥಾನ ಅಲ್ಲದೆ ತಿರುಪತಿ ಮುನಿಸಿಪಲ್ ಕಾರ್ಪೊರೇಶನ್, ಗ್ರೇಟರ್ ವಿಶಾಖಪಟ್ಟಣದ ಮುನಿಸಿಪಲ್ ಕಾರ್ಪೊರೇಶನ್ ಹಾಗೂ ಅಮರಾವತಿ ಕಾರ್ಯದರ್ಶಿಗಳ ಕಾರ್ಯಾಲಯದಲ್ಲಿ ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲಾಗುತ್ತದೆ.

    ಪ್ರಯಾಣದ ದರ ಒಂದು ಕಿಮೀ ಗೆ 2 ರೂ ಇರಲಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 120 ಕಿಮೀ ಈ ಕಾರ್ ಚಲಿಸುತ್ತದೆ.