Tag: ಎಲೆಕ್ಟ್ರಿಸಿಟಿ

  • ಬಿಲ್‌ ಬಂದ 30 ದಿನದೊಳಗೆ ಶುಲ್ಕ ಪಾವತಿಸದಿದ್ದಲ್ಲಿ, ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತ: ಬೆಸ್ಕಾಂ

    ಬಿಲ್‌ ಬಂದ 30 ದಿನದೊಳಗೆ ಶುಲ್ಕ ಪಾವತಿಸದಿದ್ದಲ್ಲಿ, ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತ: ಬೆಸ್ಕಾಂ

    – ಸೆ.1 ರಿಂದ ಕಟ್ಟುನಿಟ್ಟಾಗಿ ನಿಯಮ ಪಾಲನೆ
    – ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ ವಿದ್ಯುತ್‌ ಕಟ್‌

    ಬೆಂಗಳೂರು: ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ (Electricity) ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು.

    ಸೆ.1 ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ (BESCOM) ಪ್ರಕಟಣೆ ಕೋರಿದೆ. ಇದನ್ನೂ ಓದಿ: ಸಚಿವರ ಜೊತೆ ಕಂಪನಿಯ ನಿಯೋಗದ ಭೇಟಿ; ವಿಜಯಪುರ ಜಿಲ್ಲೆಯಲ್ಲಿ ಕೆನಡಾದ ವಿಟೆರಾದಿಂದ 250 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್

    ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಮಾಪನ ಮಾಡಿದ ಬಳಿಕ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜೊತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.

    ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದ ವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಇದನ್ನೂ ಓದಿ: ನಿವೇಶನ ಲೂಟಿ ಮಾಡುತ್ತಿರುವುದು ನಾನಾ ನೀವಾ? – ಎಂ.ಬಿ.ಪಾಟೀಲರ ಸೈಟ್ ಅಕ್ರಮ ಸದ್ಯದಲ್ಲೇ ಬಯಲು: ಛಲವಾದಿ ನಾರಾಯಣಸ್ವಾಮಿ

    ಗ್ರಾಹಕರಿಗೆ ವಿಶೇಷ ಸೂಚನೆ:
    ಆನ್‌ಲೈನ್ ಮೂಲಕ ವಿದ್ಯುತ್‌ ಬಿಲ್‌ ಪಾವತಿಸಿದ ಸಂದರ್ಭದಲ್ಲಿ ಕೆಲವೊಮ್ಮೆ ಬೆಸ್ಕಾಂ ಸಾಫ್ಟ್‌ವೇರ್‌ನಲ್ಲಿ ವಿವರ ನಮೂದಾಗದೇ ಇದ್ದಾಗ, ಬಾಕಿ ತೋರಿಸುವ ಸಾಧ್ಯತೆ ಇರುತ್ತದೆ. ಇಂಥ ಸಂದರ್ಭದಲ್ಲಿ ವಿದ್ಯುತ್‌ ಕಡಿತಕ್ಕೆ ಮುಂದಾದರೆ, ಸಿಬ್ಬಂದಿಗೆ ಬಿಲ್‌ ರಶೀದಿ ತೋರಿಸುವುದರಿಂದ ವಿದ್ಯುತ್‌ ಕಡಿತ ಮಾಡಲಾಗುವುದಿಲ್ಲ. ಹಾಗಾಗಿ, ನಮ್ಮ ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಕೋರಲಾಗಿದೆ.

  • ಬಾಡಿಗೆದಾರರಿಗೆ ಎಲೆಕ್ಟ್ರಿಸಿಟಿ, ನೀರು ಕಟ್ ಮಾಡಿ ಅಪ್ಪ-ಮಗನಿಂದ ನಿತ್ಯ ಕಿರುಕುಳ

    ಬಾಡಿಗೆದಾರರಿಗೆ ಎಲೆಕ್ಟ್ರಿಸಿಟಿ, ನೀರು ಕಟ್ ಮಾಡಿ ಅಪ್ಪ-ಮಗನಿಂದ ನಿತ್ಯ ಕಿರುಕುಳ

    ಬೆಂಗಳೂರು: ಅಪ್ಪ-ಮಗ ಸೇರಿ ಬಾಡಿಗೆದಾರರಿಗೆ ಎಲೆಕ್ಟ್ರಿಸಿಟಿ, ನೀರು ಕಟ್ ಮಾಡಿ ನಿತ್ಯ ಕಿರುಕುಳ ನೀಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರಿನ ಹೊಸಕೆರೆಹಳ್ಳಿಯ ರವೀಶ್ ಕುಟುಂಬಕ್ಕೆ ದಿನನಿತ್ಯ ಕಾಟ ತಪ್ಪಿದ್ದಿಲ್ಲ. ಬಸವೇಗೌಡರ ಮನೆಯಲ್ಲಿ 10 ಲಕ್ಷ ರೂ. ಭೋಗ್ಯಕ್ಕೆ ರವೀಶ್ ಕುಟುಂಬ ವಾಸವಾಗಿದ್ದಾರೆ. ಈ ಹಿಂದೆ ಮನೆಗೆ ನುಗ್ಗಿ ಹೆಣ್ಮಕ್ಕಳ ಮೇಲೆ ಹಲ್ಲೆ ನಡೆಸಿ ಮನೆ ಸಾಮಾನುಗಳನ್ನು ಮಗ ಮಹೇಶ್ ಹೊರಗೆ ಹಾಕಿದ್ದನು. ಇಂದು ಬಸವೇಗೌಡ ಹೆಲ್ಮೆಟ್ ಹಾಕಿಕೊಂಡು ಬಂದು ನೀರಿನ ಮೋಟರ್ ತೆಗೆದುಕೊಂಡು ಹೋಗಿದ್ದಾನೆ.

    ಬಸವೇಗೌಡರ ಮಗ ಮಹೇಶ ಸೆ.3 ರಂದು 30 ರಿಂದ 40 ಜನರನ್ನು ಮನೆಗೆ ನುಗ್ಗಿಸಿ ಮನೆ ಖಾಲಿ ಮಾಡುವಂತೆ ದಾಂಧಲೆ ಎಬ್ಬಿಸಿದ್ದನು ಹಾಗೂ ರವೀಶ್‍ರ ಗರ್ಭಿಣಿ ಪತ್ನಿ ಲಕ್ಷ್ಮೀ ಹಾಗು ಅಜ್ಜಿ ಲಿಂಗಮ್ಮರಿಗೆ ಥಳಿಸಿ ಮನೆ ಸಾಮಾನುಗಳನ್ನು ಹೊರಗೆ ಹಾಕಿದ್ದನು.

    ನಮ್ಮ ಹಣ ಕೊಡಿ ನಾವು ಖಾಲಿ ಮಾಡುತ್ತೀವಿ ಎಂದರೆ ಹಣ ಕೊಡದೆ ಬಸವೇಗೌಡ ವಂಚಿಸುತ್ತಿದ್ದಾನೆ. ಪಬ್ಲಿಕ್ ಟಿವಿಯಲ್ಲಿ ಈ ಬಗ್ಗೆ ವರದಿಯಾದ ನಂತರ ಮಹೇಶನನ್ನು ಅರೆಸ್ಟ್ ಮಾಡಲಾಗಿತ್ತು. ತಲೆ ಮರೆಸಿಕೊಂಡಿದ್ದ ಬಸವೇಗೌಡ ನಿರೀಕ್ಷಣಾ ಜಾಮೀನು ಪಡೆದು, ಅಂದಿನಿಂದ ಒಂದಿಲ್ಲೊಂದು ಕಾಟ ಕೋಡುತ್ತಿದ್ದಾನೆ ಎನ್ನಲಾಗಿದೆ.

    ವಾರದ ಹಿಂದೆ ನೀರಿನ ಮೋಟರ್ ಫ್ಯೂಸ್ ಕಿತ್ತುಕೊಂಡು ಹೋಗಿದ್ದ. ಆದರೆ ಇಂದು ಬೆಳಗಿನ ಜಾವ ಹೆಲ್ಮೆಟ್ ಹಾಕಿಕೊಂಡು ಬಂದು ನೀರಿನ ಮೋಟರ್ ಕಿತ್ತುಕೊಂಡು ಹೋಗಿದ್ದಾನೆ. ಬಸವೇಗೌಡನ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಬಸವೇಗೌಡ ಎಲೆಕ್ಟ್ರಿಸಿಟಿ ಹಾಗೂ ನೀರು ನೀಡದೆ ಬಾಡಿಗೆದಾರರಿಗೆ ಕಿರುಕುಳ ನೀಡ್ತಿದ್ದಾನೆ. ಈ ಮೂಲಕ ಭೋಗ್ಯಕ್ಕೆ ಕೊಟ್ಟಿರೋ ಹಣ ಹೊಡೆಯೊ ಪ್ಲಾನ್ ಮಾಡಿದ್ದಾನೆ. ಗಿರಿನಗರ ಪೊಲೀಸರು ಎಲ್ಲಾ ಗೊತ್ತಿದ್ದೂ ಕಣ್ಮುಚ್ಚಿ ಕುಳಿತು ಬಸವೇಗೌಡನಿಗೆ ಸಹಕಾರ ನೀಡುತ್ತಿದ್ದಾರೆ. ನಮ್ಮ ಹಣ ವಾಪಸ್ ಕೊಡಿಸಿ ಮನೆ ಖಾಲಿ ಮಾಡುತ್ತೀವಿ ಎಂದು ಹೇಳಿದರೂ ಪೊಲೀಸರು ಕ್ಯಾರೆ ಎನ್ನುತ್ತಿಲ್ಲ.