Tag: ಎಲ್ವಿಶ್ ಯಾದವ್

  • ಬಿಗ್ ಬಾಸ್‌ ವಿಜೇತ ಎಲ್ವಿಶ್ ಮನೆ ಮೇಲೆ 25 ಸುತ್ತು ಗುಂಡಿನ ದಾಳಿ – ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

    ಬಿಗ್ ಬಾಸ್‌ ವಿಜೇತ ಎಲ್ವಿಶ್ ಮನೆ ಮೇಲೆ 25 ಸುತ್ತು ಗುಂಡಿನ ದಾಳಿ – ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

    ಫೇಮಸ್‌ ಯೂಟ್ಯೂಬರ್ (YouTuber), ಮಾಜಿ ಬಿಗ್ ಬಾಸ್‌ ವಿಜೇತ (Bigg Boss winner) ಹಾಗೂ ನಟನೂ ಆಗಿರುವ ಎಲ್ವಿಶ್ ಯಾದವ್ ಅವ್ರ ಮನೆ ಮೇಲೆ ಇಂದು ಬೆಳಗ್ಗೆ ಭೀಕರ ಗುಂಡಿನ ದಾಳಿ ನಡೆದಿದೆ.

    ಬೆಳಗ್ಗೆ 5:30 ರಿಂದ 6 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಮನೆಯ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು 2 ಡಜನ್‌ಗಿಂತಲೂ ಅಧಿಕ ಸುತ್ತು ಗುಂಡು ಹಾಅರಿಸಿ, ಎಸ್ಕೇಪ್‌ ಆಗಿದ್ದಾರೆ. ಅದೃಷ್ಟವಶಾತ್‌ ಆ ಸಂದರ್ಭದಲ್ಲಿ ಎಲ್ವಿಶ್‌ (Elvish Yadav) ಮನೆಯಲ್ಲಿ ಇರಲಿಲ್ಲವಾದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಫೈರಿಂಗ್‌ (Bullets Fire) ಬಳಿಕ ಇಡೀ ಪ್ರದೇಶದ ಜನರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಬೆಂಗಳೂರು | ಐವರನ್ನು ಬಲಿ ಪಡೆದಿದ್ದ ಅಗ್ನಿ ದುರಂತ ಪ್ರಕರಣ – ಕಟ್ಟಡದ ಮಾಲೀಕ ಅರೆಸ್ಟ್

    ಏನಾಯಿತು?
    ಎಲ್ವಿಶ್ ಯಾದವ್ ತಮ್ಮ ಯೂಟ್ಯೂಬ್ ಮತ್ತು ಸೋಷಿಯಲ್‌ ಮೀಡಿಯಾ ಆಕ್ಟಿವಿಟೀಸ್‌ಗಳಿಂದ ಫೇಮಸ್‌ ಆಗಿದ್ದಾರೆ. ಗುಂಡು ಹಾರಿಸಿದ ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಗುರುಗ್ರಾಮ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಹಳೇ ಅಕ್ರಮ ಸಂಬಂಧಕ್ಕೆ ಶಿಕ್ಷೆ – ಹೆತ್ತ ತಾಯಿಯನ್ನೇ 2 ಬಾರಿ ಅತ್ಯಾಚಾರಗೈದ ಪಾಪಿ ಮಗ

    ಮೊದಲಿಗೆ ಮನೆಯವರ ಸುರಕ್ಷತೆಯನ್ನು ಖಚಿತಪಡಿಸಿಕೊಂಡಿದ್ದಾರೆ. ಬಳಿಕ ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ತಪಾಸಣೆ ನಡೆಸುತ್ತಿದ್ದಾರೆ. 20 ರಿಂದ 25 ಸುತ್ತು ಗುಂಡು ಹಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: Video Viral | ಸ್ವಾತಂತ್ರ‍್ಯ ದಿನಾಚರಣೆಯಂದು ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ; ಕ್ರಮಕ್ಕೆ ಆಗ್ರಹ

  • ಬಿಗ್ ಬಾಸ್ ವಿನ್ನರ್ ವಿರುದ್ಧ ED ಕೇಸ್ ದಾಖಲು

    ಬಿಗ್ ಬಾಸ್ ವಿನ್ನರ್ ವಿರುದ್ಧ ED ಕೇಸ್ ದಾಖಲು

    ಕ್ರಮವಾಗಿ ಹಣ ಸಾಗಾಣಿಕೆ ವಿಚಾರವಾಗಿ ಬಿಗ್ ಬಾಸ್ ಒಟಿಟಿ ವಿನ್ನರ್ ಎಲ್ವಿಶ್ ಯಾದವ್ (Elvish Yadav) ವಿರುದ್ಧ ಜಾರಿ ನಿರ್ದೇಶನಾಲಯವು (ED) ಕೇಸ್ ದಾಖಲಿಸಿದೆ. ಅಕ್ರಮ ಹಣ ವರ್ಗಾವಣೆ ಕುರಿತಂತೆ ಉತ್ತರ ಪ್ರದೇಶದ ಗೌತಮ್ ಬುದ್ಧನಗರ ಜಿಲ್ಲೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ದಾಖಲಾದ ಎಫ್.ಐ.ಆರ್ (FIR) ಮತ್ತು ಜಾರ್ಜ್ ಶೀಟ್ ಗಳ ಆಧಾರದಲ್ಲಿ ಇಡಿ ಪ್ರಕರಣವನ್ನು ದಾಖಲಿಸಿಕೊಂಡಿದೆ.

    ಈ ಹಿಂದೆ ಎಲ್ವಿಶ್ ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು. ಕೋರ್ಟ್‌ಗೆ ಹಾಜರು ಪಡಿಸಿದ್ದರು. ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಆರೋಪದ ಮೇಲೆ ಎಲ್ವಿಶ್ ಯಾದವ್ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಇವರ ಗ್ಯಾಂಗ್‌ನ ಐವರು ಸದಸ್ಯರನ್ನು ನೋಯ್ಡಾದಲ್ಲಿ ಬಂಧಿಸಲಾಗಿತ್ತು. ಸೆಕ್ಟರ್ 51ರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾವಿನ ವಿಷ ಲಭ್ಯವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದರು.

    ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು, ಎಲ್ವಿಶ್ ಯಾದವ್ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಪಾರ್ಟಿಗಳಲ್ಲಿ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಪೊಲೀಸರು ಸಲ್ಲಿಸಿದ್ದ ಜಾರ್ಜ್ ಶೀಟ್ ನಲ್ಲಿ ಅಕ್ರಮ ಹಣದ ಕುರಿತಂತೆ ಉಲ್ಲೇಖವಾಗಿತ್ತು. ಹಾಗಾಗಿ ಈ ಪ್ರಕರಣಕ್ಕೆ ಇಡಿ ಎಂಟ್ರಿ ಕೊಟ್ಟಿದೆ.

  • Elvish Yadav: ‘ಬಿಗ್ ಬಾಸ್ ಹಿಂದಿ ಒಟಿಟಿ 2’ ವಿನ್ನರ್ ಬಂಧನ

    Elvish Yadav: ‘ಬಿಗ್ ಬಾಸ್ ಹಿಂದಿ ಒಟಿಟಿ 2’ ವಿನ್ನರ್ ಬಂಧನ

    ದಾ ವಿವಾದಗಳಿಂದಲೇ ಸುದ್ದಿಯಾಗುವ ಹಿಂದಿ ಬಿಗ್ ಬಾಸ್ ಒಟಿಟಿ 2 ವಿನ್ನರ್ (Bigg Boss Hindi Ott 2) ಎಲ್ವಿಶ್ ಯಾದವ್ (Elvish Yadav) ಇದೀಗ ಅರೆಸ್ಟ್ ಆಗಿದ್ದಾರೆ. ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಎಲ್ವಿಶ್‌ರನ್ನು ಬಂಧಿಸಿದ್ದಾರೆ. ಇಂದು ಕೋರ್ಟ್‌ಗೆ ಎಲ್ವಿಶ್‌ರನ್ನು ಹಾಜರಿಪಡಿಸುವ ಬಗ್ಗೆ ನೋಯ್ಡಾ ಡಿಸಿಪಿ ವಿದ್ಯಾಸಾಗರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಬೆಂಗಳೂರಿನಲ್ಲಿಯೇ ಚೊಚ್ಚಲ ಮಗುವಿಗೆ ಜನ್ಮ ನೀಡಲಿದ್ದಾರೆ ದೀಪಿಕಾ ಪಡುಕೋಣೆ

    ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಆರೋಪದ ಮೇಲೆ ‘ಬಿಗ್ ಬಾಸ್ ಒಟಿಟಿ 2’ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಇವರ ಗ್ಯಾಂಗ್‌ನ ಐವರು ಸದಸ್ಯರನ್ನು ನೋಯ್ಡಾದಲ್ಲಿ ಬಂಧಿಸಲಾಗಿತ್ತು. ಸೆಕ್ಟರ್ 51ರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾವಿನ ವಿಷ ಲಭ್ಯವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಬಂಧಿತರನ್ನು ಆಗ್ನೇಯ ದೆಹಲಿಯ ಬದರ್‌ಪುರದ ಮೊಹರ್‌ಬಂದ್ ಗ್ರಾಮದ ನಿವಾಸಿಗಳಾದ ರಾಹುಲ್ (32), ತೀತುನಾಥ್ (45), ಜೈಕರನ್ (50), ನಾರಾಯಣ್ (50) ಮತ್ತು ರವಿನಾಥ್ (45) ಎಂದು ಗುರುತಿಸಲಾಗಿತ್ತು.

    ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು, ಎಲ್ವಿಶ್ ಯಾದವ್ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಪಾರ್ಟಿಗಳಲ್ಲಿ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.