Tag: ಎಲ್.ಕೆ.ಅಡ್ವಾಣಿ

  • ರಾಮಮಂದಿರ ಉದ್ಘಾಟನೆಗೆ ಎಲ್‌.ಕೆ.ಅಡ್ವಾಣಿ ಬರ್ತಾರೆ: ವಿಹೆಚ್‌ಪಿ ನಾಯಕ

    ರಾಮಮಂದಿರ ಉದ್ಘಾಟನೆಗೆ ಎಲ್‌.ಕೆ.ಅಡ್ವಾಣಿ ಬರ್ತಾರೆ: ವಿಹೆಚ್‌ಪಿ ನಾಯಕ

    ಜ.22 ರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕನಿಗೆ ಆಹ್ವಾನ

    ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ (Ram Temple) ‘ಪ್ರಾಣ ಪ್ರತಿಷ್ಠೆ’ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ (LK Advani) ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಬುಧವಾರ ಹೇಳಿದ್ದಾರೆ.

    ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಕೃಷ್ಣ ಗೋಪಾಲ್ ಮತ್ತು ರಾಮ್ ಲಾಲ್ ಅವರು ಅಲೋಕ್ ಕುಮಾರ್ ಅವರೊಂದಿಗೆ ಎಲ್‌ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿ ಬುಧವಾರ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ಗೆ ಆಹ್ವಾನ

    ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಎಲ್‌ಕೆ ಅಡ್ವಾಣಿ ಭೇಟಿ ನೀಡುವ ಸಂದರ್ಭದಲ್ಲಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.

    ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭಕ್ಕೆ ಎಲ್ಲಾ ಸಂಪ್ರದಾಯಗಳ ಸಂತರಿಗೂ ಆಮಂತ್ರಣಗಳನ್ನು ನೀಡಲಾಗಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ನವರು ಬರೋದು ರಾಮನಿಗೂ ಇಷ್ಟವಿಲ್ಲ: ಸಿ.ಟಿ ರವಿ

    ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ಕಾಂಗ್ರೆಸ್‌ ನಿರಾಕರಿಸಿದೆ. ಕಾಂಗ್ರೆಸ್‌ನ ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಸಮಾರಂಭದ ಆಹ್ವಾನ ತಿರಸ್ಕರಿಸಿದ್ದಾರೆ.

  • ಅಡ್ವಾಣಿ ಭೇಟಿಯಾದ ಪೇಜಾವರಶ್ರೀ- ರಾಮಮಂದಿರ ಹೋರಾಟ ದಿನಗಳ ಮೆಲುಕು

    ಅಡ್ವಾಣಿ ಭೇಟಿಯಾದ ಪೇಜಾವರಶ್ರೀ- ರಾಮಮಂದಿರ ಹೋರಾಟ ದಿನಗಳ ಮೆಲುಕು

    ಉಡುಪಿ/ನವದೆಹಲಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ (Vishwaprasanna Teertha) ಶ್ರೀಪಾದರು ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ (BJP) ಹಿರಿಯ ನಾಯಕ ಎಲ್.ಕೆ ಅಡ್ವಾಣಿ (LK Adwani) ಯವರನ್ನು ಅವರ ನಿವಾಸದಲ್ಲಿ ಸೌಹಾರ್ದ ಭೇಟಿ ಮಾಡಿದರು. ಈ ವೇಳೆ ರಾಮಮಂದಿರ (Ramamandir) ಹೋರಾಟ ಮತ್ತು ಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಬಗ್ಗೆ ಮಾತನಾಡಿದರು.

    ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ಪೇಜಾವರಶ್ರೀ (Pejawara Sri) ತಿಳಿಸಿದರು. ಅಯೋಧ್ಯಾ (Ayodhya) ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯ ರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ. ದೇವರು ನಿರ್ಮಾಣ ಪ್ರಗತಿಯಲ್ಲಿದ್ದು, ಇನ್ನೊಂದು ವರ್ಷದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುವುದಾಗಿ ಹೇಳಿದರು. ಇದನ್ನೂ ಓದಿ: ಸರ್ಕಾರದಿಂದಲೇ ಆ್ಯಪ್ ಮಾಡಿ ಆಟೋ ಸೇವೆಗೆ ಅವಕಾಶ: ಶ್ರೀರಾಮುಲು

    ವಿಶ್ವೇಶತೀರ್ಥ ಶ್ರೀಪಾದರು ತಮಗೆ ನೀಡಿದ ಸ್ಫೂರ್ತಿಯನ್ನು ಎಲ್.ಕೆ. ಅಡ್ವಾಣಿ ಸ್ಮರಿಸಿದರು. ಆ ಕಾಲದ ದಿನಗಳನ್ನು ನೆನೆದರು. ಅಡ್ವಾಣಿಯವರಿಗೆ ಶ್ರೀಕೃಷ್ಣನ ಗಂಧ ಪ್ರಸಾದ, ಶಾಲು ಸ್ಮರಣಿಕೆ ಫಲ ಮಂತ್ರಾಕ್ಷತೆಯಿತ್ತು ಸ್ವಾಮೀಜಿ ಆಶೀರ್ವದಿಸಿದರು. ಅಡ್ವಾಣಿಯವರ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳವರನ್ನು ಬರಮಾಡಿಕೊಂಡು ಸ್ವಾಗತಿಸಿದರು. ಅಡ್ವಾಣಿಯವರಿಗೆ ಅನಾರೋಗ್ಯವಿದ್ದರೂ ಮನೆ ಬಾಗಿಲಿನವರೆಗೆ ಬಂದು ಶ್ರೀಗಳವರನ್ನು ಬೀಳ್ಕೊಟ್ಟರು. ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ

    ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ

    ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ ಹಲವು ನಾಯಕರನ್ನು ಖುಲಾಸೆಗೊಳಿಸಿ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಆದರೆ ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ಅರ್ಜಿ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಆಗಸ್ಟ್ 1ರಂದು ನಡೆಸಲಿದೆ.

    ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ ನಾಯಕರಾದ ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಮತ್ತು ಇತರ ಹಲವು ನಾಯಕರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿತ್ತು. ಇದನ್ನೂ ಓದಿ: ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ

    ಆಗಸ್ಟ್ 1ರಂದು ಮೇಲ್ಮನವಿ ವಿಚಾರಣೆಗೆ ನಿಗದಿಪಡಿಸುವಂತೆ ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಅವರ ನೇತೃತ್ವದ ಏಕಸದಸ್ಯ ಪೀಠವು ಆರಂಭದಲ್ಲಿ ಆದೇಶ ಮಾಡಿತ್ತು. ಆಗಸ್ಟ್ 1ರಂದು ಈ ಮೇಲ್ಮನವಿಯನ್ನು ಮೊದಲ 10 ಪ್ರಕರಣಗಳಲ್ಲಿ ಒಂದಾಗಿ ಪಟ್ಟಿ ಮಾಡಿ ಎಂದು ನ್ಯಾಯಾಲಯ ನಿರ್ದೇಶಿಸಿತ್ತು.

    ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಲು ಪಿತೂರಿ ನಡೆಸಲಾಗಿತ್ತು ಎಂದು ತೋರಿಸಲು ಯಾವುದೇ ದಾಖಲೆಗಳು ಇಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯವು 2020ರಲ್ಲಿ ನೀಡಿದ್ದ ತೀರ್ಪನ್ನು ಅಯೋಧ್ಯೆಯ ನಿವಾಸಿಗಳಾದ ಹಾಜಿ ಮಹಬೂಬ್ ಅಹಮದ್ ಮತ್ತು ಸಯ್ಯದ್ ಅಖ್ಲಾಖ್ ಅಹಮದ್ ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಬ್ರಿ ಮಸೀದಿ ಇತ್ತು, ಮುಂದೆಯೂ ಇರಲಿದೆ: ಭೂಮಿ ಪೂಜೆಗೂ ಮುನ್ನ ಓವೈಸಿ ಟ್ವೀಟ್

    ತಾವು ಐತಿಹಾಸಿಕ ಧಾರ್ಮಿಕ ಸ್ಥಳವಾದ ಬಾಬ್ರಿ ಮಸೀದಿ ಧ್ವಂಸದ ಸಂತ್ರಸ್ತರಾಗಿದ್ದು, ಆ ಘಟನೆಗೆ ಸಾಕ್ಷಿಗಳಾಗಿದ್ದೇವೆ. ಆ ಸಂದರ್ಭದಲ್ಲಿ ನಡೆದ ದೊಂಬಿ ಗಲಭೆಗಳಿಂದ ಆರ್ಥಿಕವಾಗಿ ಸಾಕಷ್ಟು ನಷ್ಟ ಅನುಭವಿಸಿದ್ದೇವೆ ಎಂದು ಅರ್ಜಿದಾರರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

    2021ರಲ್ಲೇ ಪರಿಷ್ಕರಣಾ ಮನವಿ ಸಲ್ಲಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಸಯ್ಯದ್ ಫರ್ಮಾನ್ ಅಲಿ ನಖ್ವಿ ಅವರು ಪೀಠಕ್ಕೆ ತಿಳಿಸಿದರು. ಸಿಆರ್‌ಪಿಸಿ ಸೆಕ್ಷನ್ 372ಗೆ ತಿದ್ದುಪಡಿಯಾಗಿರುವುದರಿಂದ ಅರ್ಜಿಯನ್ನು ಮೇಲ್ಮನವಿಯಾಗಿ ಪರಿಗಣಿಸುವಂತೆ ಕೋರಿದ್ದರು.

    Live Tv
    [brid partner=56869869 player=32851 video=960834 autoplay=true]

  • 2,500 ಕೋಟಿ ಕೊಡಿ ನಿಮ್ಮನ್ನೂ ಸಿಎಂ ಮಾಡ್ತೀವಿ ಅಂದ್ರು: ಬಾಂಬ್ ಸಿಡಿಸಿದ ಯತ್ನಾಳ್

    2,500 ಕೋಟಿ ಕೊಡಿ ನಿಮ್ಮನ್ನೂ ಸಿಎಂ ಮಾಡ್ತೀವಿ ಅಂದ್ರು: ಬಾಂಬ್ ಸಿಡಿಸಿದ ಯತ್ನಾಳ್

    ಬೆಳಗಾವಿ: ದೆಹಲಿಯಿಂದ ಬಂದ ಕೆಲವರು 2500 ಕೋಟಿ ಕೊಡಿ ನಿಮ್ಮನ್ನು ಸಿಎಂ ಮಾಡ್ತೀವಿ ಅಂತಾ ಹೇಳಿದ್ರು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

    ರಾಮದುರ್ಗದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಅವರು, ಕೆಲವರು ನಿಮಗೆ ಟಿಕೆಟ್ ಕೊಡಿಸುತ್ತೇವೆ, ದೆಹಲಿ ಕರೆದುಕೊಂಡು ಹೋಗ್ತೇವೆ. ಸೋನಿಯಾ ಗಾಂಧಿ ಭೇಟಿ ಮಾಡಿಸ್ತೀವಿ, ಜೆ.ಪಿ.ನಡ್ಡಾರನ್ನ ಭೇಟಿ ಮಾಡಿಸ್ತೀವಿ ಅಂತಾ ಹೇಳಿ ಬರ್ತಾರೆ. ಹಾಗೇ ನನ್ನ ಹತ್ತಿರವೂ ದೆಹಲಿಯಿಂದ ಒಂದಿಷ್ಟು ಬಂದಿದ್ದರು ಎಂದಿದ್ದಾರೆ. ಇದನ್ನೂ ಓದಿ; ಮರ್ಯಾದೆಯಿಂದ ವಾಪಸ್ ಹೋಗೋ ಲೇ – ಇನ್ಸ್‌ಪೆಕ್ಟರ್‌ಗೆ ಎಂ.ಪಿ.ಕುಮಾರಸ್ವಾಮಿ ಆವಾಜ್

    YATNAL 1

    ನಿಮ್ಮನ್ನು ಸಿಎಂ ಮಾಡ್ತೀವಿ 2,500 ಕೋಟಿ ರೆಡಿ ಮಾಡ್ಕೋಳಿ ಅಂತಾ ಹೇಳಿದ್ರು. ಆದ್ರೆ ನಾನು, 2500 ಕೋಟಿ ಅಂದ್ರೆ ಏನ್ ಅಂತಾ ತಿಳಿದಿರಿ. ಆ ಹಣ ಹೆಂಗ್ ಇಡೋದು? ಏನು ಕೋಣೆಯಲ್ಲಿ ಇಡೋದಾ ಅಥವಾ ಗೋದಾಮಿನಲ್ಲಿ ಇಡೋದಾ? ಎಂದು ಪ್ರಶ್ನಿಸಿದೆ ಎಂದು ಕಿಡಿಕಾರಿದ್ದಾರೆ.

    ಟಿಕೆಟ್ ಕೊಡ್ತೀನಿ ಅಂತಾ ರಾಜಕಾರಣದಲ್ಲಿ ಎಲ್ಲಾ ಕಡೆ ಮೋಸ ಮಾಡ್ತಾರೆ. ಎಚ್ಚರಿಕೆಯಿಂದ ಇರಬೇಕು. ರಾಜಕಾರಣದಲ್ಲಿ ಯಾರೂ ದೆಹಲಿಗೆ ಹೋಗಿ ಹಾಳಾಗಬೇಡಿ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಪತಿ ಕಣ್ಣೆದುರೇ ಪ್ರಿಯಕರನೊಂದಿಗೆ ಪತ್ನಿ ಸೆಕ್ಸ್ – ಸ್ಕ್ರೂಡ್ರೈವರ್‌ನಿಂದ ಇಬ್ಬರನ್ನು ಇರಿದು ಕೊಂದ

    Yatnal

    ನಾನು ವಾಜಪೇಯಿಯವರ ಕೈಕೆಳಗೆ ಕೆಲಸ ಮಾಡಿದ್ದೇನೆ. ಅಡ್ವಾಣಿ, ರಾಜನಾಥಸಿಂಗ್, ಅರುಣ್ ಜೇಟ್ಲಿ ಅವರು ನನ್ನನ್ನು ಬಸನಗೌಡ ಅಂತಾ ಹೆಸರು ಹೇಳಿ ಕರೀತಿದ್ರು. ಅಂತಹ ವ್ಯಕ್ತಿಗೆ ಎರಡೂಸಾವಿರ ಕೋಟಿ ಸಜ್ಜ ಮಾಡಿ ಇಡಿ ಸಿಎಂ ಮಾಡ್ತೀವಿ ಅಂತಾ ಹೇಳ್ತಾರೆ. ನಡ್ಡಾರ ಮನೆಗೆ ಕರೆದುಕೊಂಡು ಹೋಗ್ತೀವಿ, ಅಮಿತ್ ಶಾ ಮನೆಗೆ ಕರೆದುಕೊಂಡು ಹೋಗ್ತೀವಿ ಅಂತಾರೆ ಎಂದು ದೂರಿದ್ದಾರೆ.

  • ಮೋದಿ ಮುಟ್ಟಿದ್ರೆ, ಗುಜರಾತ್ ಹೋಗುತ್ತೆ – ಅಡ್ವಾಣಿಗೆ ಅಂದು ಠಾಕ್ರೆ ನೀಡಿದ್ದ ಸಲಹೆಯ ಬಗ್ಗೆ ಉದ್ಧವ್‌ ಮಾತು

    ಮೋದಿ ಮುಟ್ಟಿದ್ರೆ, ಗುಜರಾತ್ ಹೋಗುತ್ತೆ – ಅಡ್ವಾಣಿಗೆ ಅಂದು ಠಾಕ್ರೆ ನೀಡಿದ್ದ ಸಲಹೆಯ ಬಗ್ಗೆ ಉದ್ಧವ್‌ ಮಾತು

    ಮುಂಬೈ: ಮೋದಿಯನ್ನು ಗುಜರಾತ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಹಿಂದುತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಲಾಲ್ ಕೃಷ್ಣ ಆಡ್ವಾಣಿ ಅವರಿಗೆ ಬಾಳ್ ಠಾಕ್ರೆ ಅವರು ಸಲಹೆ ನೀಡಿದ್ದರು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

    Uddhav Thackeray

    2002ರಲ್ಲಿ ಗುಜರಾತ್ ನಲ್ಲಿ ನಡೆದ ಗೋದ್ರಾ ಗಲಭೆಯ ವೇಳೆ “ಮೋದಿ ಹಟಾವೋ” ಅಭಿಯಾನ ದೊಡ್ಡ ಮಟ್ಟದಲ್ಲಿ ಚಾಲ್ತಿಯಲ್ಲಿತ್ತು. ಈ ವೇಳೆ ನಮ್ಮ ತಂದೆ ಮತ್ತು ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಬೆಂಬಲಿಸಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ನಾನು ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದೆ, ಶಿವಸೇನೆ ನಾಯಕರು ಯಾರೂ ಇರಲಿಲ್ಲ : ಫಡ್ನವೀಸ್

    ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಗುಜರಾತ್‍ನಲ್ಲಿ 2022ರ ಕೋಮು ಗಲಭೆ ಬಳಿಕ ದಿವಂಗತ ಬಿಜೆಪಿ ಮಠಾಧೀಶ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದರು. ಈ ವೇಳೆ ನಡೆದ ಗೋದ್ರಾ ಗಲಭೆಯ ವೇಳೆ “ಮೋದಿ ಹಟಾವೋ” ಅಭಿಯಾನ ದೊಡ್ಡ ಮಟ್ಟದಲ್ಲಿ ಚಾಲ್ತಿಯಲ್ಲಿತ್ತು. ಮೋದಿಯನ್ನು ಪದಚ್ಯುತಗೊಳಿಸುವ ಬೇಡಿಕೆಯ ಬಗ್ಗೆ ಬಾಳ್ ಠಾಕ್ರೆ ಅವರೊಂದಿಗೆ ಮಾತನಾಡಲು ರಾಷ್ಟ್ರ ಬಿಜೆಪಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ಎಲ್‍ಕೆ ಆಡ್ವಾಣಿ ಅವರು ಮುಂಬೈಗೆ ಭೇಟಿ ನೀಡಿದ್ದರು.

    ರ್‍ಯಾಲಿವೊಂದರಲ್ಲಿ ಪಾಲ್ಗೊಂಡು ನಂತರ ಕುಳಿತುಕೊಂಡು ಮಾತನಾಡುತ್ತಿದ್ದೆವು. ಆಗ ಎಲ್‍ಕೆ ಆಡ್ವಾಣಿ ಅವರು ಬಾಳ್ ಠಾಕ್ರೆ ಅವರೊಂದಿಗೆ ಯಾವುದೋ ವಿಚಾರ ಚರ್ಚಿಸಬೇಕು ಎಂದರು. ನಾನು ಮತ್ತು ಬಿಜೆಪಿ ದಿವಂಗತ ನಾಯಕ ಪ್ರಮೋದ್ ಜಿ ಅಲ್ಲಿಂದ ಎದ್ದು ಹೊರಟೆವು. ಆಗ ಎಲ್‍ಕೆ ಆಡ್ವಾಣಿಯವರು ಮೋದಿಯನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವ ಬೇಡಿಕೆಯ ಬಗ್ಗೆ ಬಾಳ್ ಠಾಕ್ರೆ ಅವರ ಅನಿಸಿಕೆಯನ್ನು ಕೇಳಿದ್ದರು. ಇದನ್ನೂ ಓದಿ: ಬಾಬರಿ ಮಸೀದಿ ಕೆಡವಿದಾಗ ನೀವು ಓಡಿಹೋಗಿದ್ದಿರಿ: ಬಿಜೆಪಿಗೆ ಉದ್ಧವ್‌ ಠಾಕ್ರೆ ತರಾಟೆ

    ಈ ವೇಳೆ ಬಾಳ್ ಠಾಕ್ರೆ ಅವರು ಅಡ್ವಾಣಿ ಅವರಿಗೆ ಮೋದಿಯನ್ನು ಮುಟ್ಟೋಕು ಹೋಗಬೇಡಿ. ಮೋದಿಯನ್ನು ಸಿಎಂ ಸ್ಥಾನದಿಂದ ತೆಗೆದುಹಾಕಿದರೆ, ಬಿಜೆಪಿ ಗುಜರಾತ್‍ನನ್ನು ಕಳೆದುಕೊಳ್ಳುತ್ತದೆ ಮತ್ತು ಅದರಿಂದ ಹಿಂದುತ್ವಕ್ಕೆ ಹಾನಿಯಾಗುತ್ತದೆ ಎಂದು  ತಿಳಿಸಿದ್ದರು ಎಂದಿದ್ದಾರೆ.

  • ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ

    ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ

    ಕೋಲ್ಕತ್ತಾ: 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಿಜವಾದ ಗೇಮ್ ಚೇಂಜರ್ ಆಗಲಿದ್ದಾರೆ ಎಂದು ಸಂಸದ ಶತ್ರುಘ್ನ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈ ತಿಂಗಳ ಆರಂಭದಲ್ಲಿ ನಡೆದ ಉಪಚುನಾವಣೆಯಲ್ಲಿ ಅಸನ್ಸೋಲ್ ಲೋಕಸಭಾ ಕ್ಷೇತ್ರವನ್ನು ಗೆದ್ದ ಶತ್ರುಘ್ನ ಸಿನ್ಹಾ ಮಾಧ್ಯಮದ ಜೊತೆ ಮಾತನಾಡಿ, ನಾನು ಹೃದಯಗಳ ರಾಣಿ ಮಮತಾ ಬ್ಯಾನರ್ಜಿ ಅವರಿಂದ ಪ್ರಭಾವಿತನಾಗಿದ್ದೇನೆ. ಅವರು ಎಲ್ಲರೂ ಗೌರವಿಸಲ್ಪಡುವ ನಾಯಕಿಯಾಗಿದ್ದಾರೆ. 2024ರ ಚುನಾವಣೆಯಲ್ಲಿ ಅವರು ನಿಜವಾದ ಆಟ ಬದಲಾಯಿಸುವವರು ಎಂಬುದನ್ನು ನೋಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದರು. ಇದನ್ನೂ ಓದಿ: ಹನುಮಾನ್ ಚಾಲೀಸಾ ವಿಚಾರದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ಸಂಜಯ್ ರಾವತ್

    ರಾಜಕೀಯದಲ್ಲಿ ತಮ್ಮ ಪ್ರಯಾಣದ ಕುರಿತು ಮಾತನಾಡಿದ ಅವರು, ನನ್ನ ಸಾಮಾಜಿಕ ಜವಾಬ್ದಾರಿಯನ್ನು ಪೂರೈಸಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನಾನು ರಾಜಕೀಯ ನಾಯಕ ಜಯಪ್ರಕಾಶ್ ನಾರಾಯಣರಿಂದ ಪ್ರಭಾವಿತನಾಗಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ನಿರ್ಗತಿಕನಿಗೆ ಸ್ನಾನ ಮಾಡಿಸಿದ ಪೊಲೀಸ್ ಆಫೀಸರ್ – ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

    ಇದಲ್ಲದೆ ಬಿಜೆಪಿಯು ಪ್ರಜಾಪ್ರಭುತ್ವದಿಂದ ನಿರಂಕುಶ ಪ್ರಭುತ್ವವಾಗಿ ಮಾರ್ಪಟ್ಟಿರುವುದರಿಂದ ಬಿಜೆಪಿಯನ್ನು ತೊರೆದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್‍ಗೆ ಸೇರಿದ್ದೇನೆ ಎಂದು ಹೇಳಿದರು.

    ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅವರು, ವಾಜಪೇಯಿ ಮತ್ತು ಎಲ್ ಕೆ ಅಡ್ವಾಣಿಯವರಿದ್ದಾಗ ಬಿಜೆಪಿ ಪ್ರಜಾಸತ್ತಾತ್ಮಕ ಪಕ್ಷವಾಗಿತ್ತು. ಆದರೆ ಪ್ರಧಾನಿ ಮೋದಿ ನಡೆಸುತ್ತಿರುವ ಇಂದಿನ ಬಿಜೆಪಿ ನಿರಂಕುಶ ಪ್ರಭುತ್ವವಾಗಿದೆ ಎಂದು ದೂರಿದರು.

    ಉಪಚುನಾವಣೆಯಲ್ಲಿ ಬಿಜೆಪಿಯ ಅಗ್ನಿಮಿತ್ರ ಪಾಲ್ ಅವರನ್ನು 3 ಲಕ್ಷಕ್ಕೂ ಹೆಚ್ಚು ಮತಗಳಿಂದ ಶತ್ರುಘ್ನ ಸಿನ್ಹಾ ಸೋಲಿಸಿದ್ದರು. ಈ ಹಿಂದೆ ಪಶ್ಚಿಮ ಬಂಗಾಳದ ಅಸನ್ಸೋಲ್‍ನಲ್ಲಿ ಟಿಎಂಸಿ ಹಿಂದೆಂದೂ ಗೆದ್ದಿರಲಿಲ್ಲ.

  • ಅಡ್ವಾಣಿಗೆ ಭಾರತ ರತ್ನ ನೀಡಿ- ಶಂಕರಮೂರ್ತಿಯಿಂದ ಪ್ರಧಾನಿಗೆ ಪತ್ರ

    ಅಡ್ವಾಣಿಗೆ ಭಾರತ ರತ್ನ ನೀಡಿ- ಶಂಕರಮೂರ್ತಿಯಿಂದ ಪ್ರಧಾನಿಗೆ ಪತ್ರ

    ಶಿವಮೊಗ್ಗ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್‍ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

    ಎಲ್.ಕೆ.ಅಡ್ವಾಣಿ ಅವರು 7 ದಶಕಕ್ಕೂ ಹೆಚ್ಚು ಕಾಲದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಡ್ವಾಣಿ ಅವರ ಈ ಎಲ್ಲ ಜನಪರ ಸೇವೆ ಗುರುತಿಸಿ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ನೀಡಬೇಕು. ಇದು ರಾಜ್ಯದ ಸಾವಿರಾರು ಮಂದಿಯ ಅಭಿಲಾಷೆ ಸಹ ಆಗಿದೆ ಎಂದು ಡಿ.ಎಚ್ ಶಂಕರಮೂರ್ತಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

    ಅಡ್ವಾಣಿಯವರು ಆರ್‍ಎಸ್‍ಎಸ್, ಭಾರತೀಯ ಜನಸಂಘ ಹಾಗೂ ಬಿಜೆಪಿ ಮೂಲಕ ತಾಯ್ನಾಡಿಗಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ ಹಾಗೂ ಕೊಡುಗೆ ನೀಡಿದ್ದಾರೆ. ಸಾರ್ವಜನಿಕ ಹಾಗೂ ತಮ್ಮ ವೈಯಕ್ತಿಕ ಬದುಕಿನಲ್ಲಿ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ. ತಮ್ಮ ವಿಶಿಷ್ಠ ಜ್ಞಾನ ಹಾಗೂ ಅನುಭವದ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅಲ್ಲದೆ ಅಡ್ವಾಣಿಯವರದ್ದು ಅಪರೂಪದ ವ್ಯಕ್ತಿತ್ವವಾಗಿದೆ. ಹೀಗಾಗಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಪತ್ರದಲ್ಲಿ ಕೇಳಿಕೊಂಡಿದ್ದಾರೆ.

    ಕಳೆದ ಐದು ದಶಕಗಳಿಂದ ನಾನು ಅವರನ್ನು ಹತ್ತಿರದಿಂದ ನೋಡಿದ್ದೇನೆ, ಲಕ್ಷಾಂತರ ಜನರ ರೀತಿ ನಾನೂ ಸಹ ಅಡ್ವಾಣಿಯರಿಗೆ ಹತ್ತಿರವಾಗಿದ್ದೆ. ಹೀಗಾಗಿ ನಾನು ಅವರನ್ನು ಹತ್ತಿರದಿಂದ ಬಲ್ಲೆ. ಅವರ ಸಾರ್ವಜನಿಕ ಭಾಷಣಗಳನ್ನು ಭಾಷಾಂತರ ಮಾಡುತ್ತಿದ್ದೆ ಎಂದು ಇದೇ ವೇಳೆ ನೆನಪಿಸಿಕೊಂಡಿದ್ದಾರೆ.

    ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ ನೀಡಬೇಕೆಂಬುದು ಪಕ್ಷದ ಸಾವಿರಾರು ಕಾರ್ಯಕರ್ತರು ಹಾಗೂ ಸಾಮಾನ್ಯ ಜನರ ಆಶಯವಾಗಿದೆ. ಅಡ್ವಾಣಿಯವರು ಭಾರತ ರತ್ನಕ್ಕೆ ಯೋಗ್ಯರು, ಸರಿಯಾದ ವ್ಯಕ್ತಿ ಹಾಗೂ ಎಲ್ಲ ಗೌರವಗಳನ್ನು ಹೊಂದುವ ಶ್ರೇಷ್ಠ ಗುಣಗಳನ್ನು ಹೊಂದಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿನ ಪಕ್ಷದ ಸಾವಿರಾರು ಕಾರ್ಯಕರ್ತರ ಪರವಾಗಿ ಅಡ್ವಾಣಿಯವರಿಗೆ ಭಾರತ ನೀಡಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿದ್ದಾರೆ.

    ನಿನ್ನೆಯಷ್ಟೇ ಎಲ್.ಕೆ.ಅಡ್ವಾಣಿಯವರು 93ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅಡ್ವಾಣಿಯವರ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ವೇಳೆ ಅಡ್ವಾಣಿಯವರ ಕಾಲು ಮುಟ್ಟಿ ನಮಸ್ಕರಿಸಿ ಮೋದಿ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಸಹ ಮೋದಿ ಅಡ್ವಾಣಿಯವರಿಗೆ ಶುಭಾಶಯ ತಿಳಿಸಿ ನೀವೇ ನಮಗೆ ಸ್ಫೂರ್ತಿ ಎಂದಿದ್ದಾರೆ.

  • ಇಂದು ಭಾರತ ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳ ದಿನ: ಓವೈಸಿ

    ಇಂದು ಭಾರತ ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳ ದಿನ: ಓವೈಸಿ

    ಹೈದರಾಬಾದ್: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, 32 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಕುರಿತು ಎಐಎಂಐ ಪಕ್ಷದ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ತಮ್ಮ ಪ್ರತಿಕ್ರಿಯೆ ನೀಡಿದ್ದು, ಇವತ್ತು ಭಾರತ ನ್ಯಾಯಾಂಗದಲ್ಲಿ ಕರಾಳ ದಿನ ಎಂದಿದ್ದಾರೆ.

    ಸುಪ್ರೀಂಕೋರ್ಟ್ ಅಲ್ಲಿ ಮಸೀದಿಯನ್ನ ಕೆಡವಲಾಗಿದೆ ಎಂದು ಹೇಳಿದೆ. ಆದ್ರೆ ಇಂದು ಬಂದ ತೀರ್ಪು ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳ ದಿನವಾಗಿ ದಾಖಲೆಯಾಗಲಿದೆ. ಅಲ್ಲಿ ಮೂರ್ತಿ ತಂದಿಟ್ಟಿದ್ಯಾರು? ಬೀಗ ಮುರಿದಿದ್ದು ಹೇಗೆ? ಮಸೀದಿ ಕೆಡವಿದ್ದು ಹೇಗೆ ಎಂದು ಓವೈಸಿ ಪ್ರಶ್ನೆ ಮಾಡಿದ್ದಾರೆ. ಈ ಎಲ್ಲವನ್ನು ಜಾದೂವಿನ ಮೂಲಕ ಮಾಡಲಾಯಿತಾ? ದೇಶದ ಇತಿಹಾಸದಲ್ಲಿ ಸೆಪ್ಟೆಂಬರ್ 30 ಕರಾಳ ದಿನವಾಗಿ ಉಳಿಯಲಿದೆ. ಎಲ್.ಕೆ. ಅಡ್ವಾಣಿಯವರ ರಥಯಾತ್ರೆ ವೇಳೆ ರಕ್ತದ ಹೊಳೆಯೇ ಹರಿದಿತ್ತು. ಎಲ್ಲ ಘಟನೆಗಳು ಪೂರ್ವಯೋಜಿತವಾಗಿದ್ರೂ, ಇಂದು ದಿಢೀರ್ ಎಲ್ಲವೂ ಬದಲಾಗಿದೆ ಎಂದು ಓವೈಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    https://twitter.com/aimim_national/status/1311223042740072448

    ಬಾಬ್ರಿ ಮಸೀದಿ ಕೆಡವಿದಾಗ ಹೊರಗಡೆ ಸಿಹಿ ಹಂಚಿ ಸಂಭ್ರಮಿಸಲಾಗಿತ್ತು. ಉಮಾ ಭಾರತಿಜೀ ‘ಏಕ್ ಧಕ್ಕಾ ಔರ್ ದೋ, ಬಾಬರಿ ಮಸೀದಿ ಗಿರಾದೋ’ ಎಂದು ಘೋಷಣೆ ಕೂಗುತ್ತಿದ್ದರು. ಪ್ರಕರಣದಲ್ಲಿ ಸಂಪೂರ್ಣ ನ್ಯಾಯ ಸಿಕ್ಕಿಲ್ಲ. ಮಂದಿರ ಕಟೋದಕ್ಕೆ ನಿರ್ಬಂಧವಿದೆಯೇ ಹೊರತು ಕಟ್ಟಡ ಬೀಳಿಸೋದಕ್ಕೆ ಅಲ್ಲ ಎಂಬ ಕಲ್ಯಾಣ್ ಸಿಂಗ್ ಹೇಳಿಕೆ ಸಿಬಿಐ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿದೆ. 1992 ಡಿಸೆಂಬರ್ 5ರಂದು ವಿನಯ್ ಕಟಿಯಾರ್ ಅವರ ಮನೆಯಲ್ಲಿ ನಡೆದ ಬೈಟಕ್ ಗೆ ಎಲ್.ಕೆ.ಅಡ್ವಾಣಿ ಸಹ ಹಾಜರಾಗಿದ್ದರು ಎಂದು ಓವೈಸಿ ಆರೋಪಿಸಿದ್ದಾರೆ.

    1992 ಡಿಸೆಂಬರ್ 6ರಂದು ಮಸೀದಿ ಉಳಿಸಿಕೊಳ್ಳಲಿಲ್ಲವಾ ಎಂದು ನೋವು ನಮ್ಮನ್ನು ಕಾಡಿತ್ತು. ಆದ್ರೆ ಇಂದು ಈ ರೀತಿಯ ತೀರ್ಪು ಬಂದಿದೆ. ಈ ಹಿಂದೆ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯನ್ನುತ ನಾಗರಿಕ ಪ್ರಶಸ್ತಿ ನೀಡಿದ್ದಾಗ ಅವರು ಆರೋಪಿ ಸ್ಥಾನದಲ್ಲಿದ್ದರು. ಆ ದಿನವೇ ಈ ಪ್ರಕರಣದ ತೀರ್ಪು ಏನು ಬರಲಿದೆ ಅಂತ ಊಹಿಸಲಾಗಿತ್ತು. ಆರೋಪಿಗಳು ನ್ಯಾಯಾಲಯಯದ ಹೊರಗೆ ನಿಂತು ತಮ್ಮ ತಪ್ಪನ್ನು ಮಾಧ್ಯಮಗಳ ಮುಂದೆ ಒಪ್ಪಿಕೊಳ್ಳುತ್ತಾರೆ. ಆದ್ರೆ ನ್ಯಾಯಾಲಯ ಅವರನ್ನ ಖುಲಾಸೆಗೊಳಿಸುತ್ತದೆ.

    ಈ ಸಮಸ್ಯೆಯಲ್ಲಿ ನ್ಯಾಯ ಸಿಕ್ಕಿಲ್ಲ. ಸುಪ್ರೀಂಕೋರ್ಟ್ ತೀರ್ಪು ಅಂತಿಮವಾಗಿರುತ್ತದೆ. ಸಿಬಿಐ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೋ ಅಥವಾ ಇಲ್ಲ ಎಂಬುವುದು ನನಗೆ ಗೊತ್ತಿಲ್ಲ. ಒಂದು ಅಪೀಲ್ ಮಾಡಿದ್ರೂ ಯಾವಾಗ ಮಾಡುತ್ತೋ ಗೊತ್ತಿಲ್ಲ. ಈ ಸಂಬಂಧ ಸಿಬಿಐ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕು. ಸರಿಯಾಗಿ ಯೋಚಿಸುವ ಪ್ರತಿ ದೇಶವಾಸಿಗೂ ಅರೇ ಏನಿದು ತೀರ್ಪು ಎಂದು ಪ್ರಶ್ನೆ ಮೂಡಿರುತ್ತದೆ ಎಂದರು. ಇದನ್ನೂ ಓದಿ: ಬಿಜೆಪಿ ಭೀಷ್ಮನಿಗೆ ಬಿಗ್‌ ರಿಲೀಫ್‌ – ಅಡ್ವಾಣಿ ಖುಲಾಸೆಯಾಗಿದ್ದು ಹೇಗೆ? ಕೋರ್ಟ್‌ ಹೇಳಿದ್ದು ಏನು?

    ಒಂದು ವೇಳೆ ಸಿಬಿಐ ಮೇಲ್ಮನವಿ ಸಲ್ಲಿಸದಿದ್ರೆ ನಾವು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರ ಜೊತೆ ಮಾತನಾಡಿ ಮೇಲ್ಮನವಿ ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ. ಎಷ್ಟೋ ಮೀಡಿಯಾ, ಪೊಲೀಸ್ ಸಿಬ್ಬಂದಿ ಮತ್ತು ನೂರಾರು ಜನರು ತಮ್ಮ ಜೀವವನ್ನ ಪಣಕ್ಕಿಟ್ಟು ನ್ಯಾಯಾಲಯದ ಮುಂದೆ ಹಾಜರಾಗಿ ಸಾಕ್ಷ್ಯ ನುಡಿದಿದ್ದರು. ಅದಕ್ಕೆಲ್ಲ ಯಾವುದೇ ಬೆಲೆ ಇಲ್ವಾ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ತೀರ್ಪು ಬಹಳ ಸಂತಸ ತಂದಿದೆ – ಅಡ್ವಾಣಿ

  • ನ್ಯಾಯಾಲಯದ ಐತಿಹಾಸಿಕ ತೀರ್ಪು ಸ್ವಾಗತಾರ್ಹ: ಬಸವರಾಜ್ ಬೊಮ್ಮಾಯಿ

    ನ್ಯಾಯಾಲಯದ ಐತಿಹಾಸಿಕ ತೀರ್ಪು ಸ್ವಾಗತಾರ್ಹ: ಬಸವರಾಜ್ ಬೊಮ್ಮಾಯಿ

    ಬೆಂಗಳೂರು: ಇಂದು ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಬಂದ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಟವರು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಬೊಮ್ಮಾಯಿ, ಬಾಬ್ರಿ ಮಸೀದಿ ಪ್ರಕರಣದಲ್ಲಿ ನಮ್ಮ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಶ್ರೀ ಮುರಳಿ ಮನೋಹರ ಜೋಶಿ, ಉಮಾಭಾರತಿ ಹಾಗೂ ಇತರರ ಮೇಲೆ ಇದ್ದ ಪ್ರಕರಣಕ್ಕೆ ಇಂದು ಲಕ್ನೋದ ಸಿಬಿಐ ನ್ಯಾಯಾಲಯವು ತೀರ್ಪು ನೀಡಿರುವುದು ಸ್ವಾಗತಾರ್ಹ ಎಂದಿದ್ದಾರೆ.

    ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದು, 28 ವರ್ಷಗಳ ನಂತರ ಅಡ್ವಾಣಿಯವರು ಅರೋಪ ಮುಕ್ತರಾಗಿದ್ದು ಮತ್ತು ಸುಪ್ರೀಂಕೋರ್ಟ್ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿರುವುದು ಐತಿಹಾಸಿಕ ತೀರ್ಪಾಗಿರುತ್ತದೆ. ಇದು ಭಾರತದ ಜನರ ಭಾವನೆಗಳಿಗೆ ಸ್ಪಂದಿಸಿದಂತಾಗಿದ್ದು, ಭಾರತದ ಎಲ್ಲ ನಾಗರಿಕರು ಈ ತೀರ್ಪನ್ನು ಒಪ್ಪಿಕೊಂಡು ಶಾಂತಿ ಸೌರ್ಹಾದತೆಯನ್ನು ಕಾಪಾಡಿಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

    ಇವರ ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಟ್ವೀಟ್ ಮಾಡಿ, ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವನಿಯೋಜಿತ ಕೃತ್ಯ ಅಲ್ಲವೆಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಬಿಜೆಪಿ ಭೀಷ್ಮ ಶ್ರೀ ಲಾಲ್ ಕೃಷ್ಣ ಅಡ್ವಾಣಿ, ಹಿರಿಯ ನಾಯಕ ಶ್ರೀ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಸತ್ಯಮೇವ ಜಯತೆ ಎಂದು ತಿಳಿಸಿದ್ದಾರೆ.

    1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು. ಈಗ ಈ ಪ್ರಕರಣದಲ್ಲಿದ್ದ ಎಲ್ಲ ಆರೋಪಿಗಳು ಖುಲಾಸೆಯಾಗಿದ್ದಾರೆ.

  • ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿ – ಸಿಬಿಐ ಕೋರ್ಟ್‍ಗೆ ಇಕ್ಬಾಲ್ ಅನ್ಸಾರಿ ಮನವಿ

    ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿ – ಸಿಬಿಐ ಕೋರ್ಟ್‍ಗೆ ಇಕ್ಬಾಲ್ ಅನ್ಸಾರಿ ಮನವಿ

    – ಈಗಾಗಲೇ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ
    – ಇನ್ನು ಮುಂದೆಯಾದರೂ ಹಿಂದೂ, ಮುಸ್ಲಿಮರು ಚೆನ್ನಾಗಿರೋಣ

    ಲಕ್ನೋ: ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲು ಇನ್ನೆರಡು ವಾರ ಬಾಕಿ ಇರುವಾಗಲೇ ಅಯೋಧ್ಯೆ ಭೂಮಿ ವಿವಾದ ಸಂಬಂಧ ದಾವೆ ದಾವೆ ಹೂಡಿದ್ದ ಇಕ್ಬಾಲ್ ಅನ್ಸಾರಿ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸುವಂತೆ ಮನವಿ ಮಾಡಿದ್ದಾರೆ.

    ಸಿಬಿಐ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 30ರಂದು ತೀರ್ಪು ಪ್ರಕಟಿಸಲು ನಿರ್ಧರಿಸಿದೆ. ಆರೋಪಿಗಳ ಪೈಕಿ ಬಿಜೆಪಿಯ ಹಿರಿಯ ನೇತಾರರು ಇದ್ದು, ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಹಾಗೂ ವಿನಯ್ ಕಾಟಿಯಾರ್ ಸೇರಿ ಈ ಪ್ರಕರಣದಲ್ಲಿ 32 ಆರೋಪಿಗಳಾಗಿದ್ದಾರೆ. ತೀರ್ಪು ಪ್ರಕಟಿಸುವ ವೇಳೆ ಎಲ್ಲ ಆರೋಪಿಗಳು ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.

    ಈ ಕುರಿತು ಇಕ್ಬಾಲ್ ಅನ್ಸಾರಿ ಮಾತನಾಡಿ, ಶತಮಾನಗಳ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಪು ಪ್ರಕಟಿಸಿದ್ದು, ದೇವಸ್ಥಾನ ನಿರ್ಮಾಣ ಕಾರ್ಯ ಸಹ ಈಗಾಗಲೇ ಆರಂಭವಾಗಿದೆ ಎಂದು ಅನ್ಸಾರಿ ಹೇಳಿದ್ದಾರೆ.

    ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ ಈಗ ಇರುವವರಿಗೆ ಸಹ ತುಂಬಾ ವಯಸ್ಸಾಗಿದೆ. ಹೀಗಾಗಿ ಈ ಪ್ರಕರಣವನ್ನು ರದ್ದುಗೊಳಿಸುವ ಮೂಲಕ ಅಂತ್ಯ ಹಾಡಬೇಕು. ಅಲ್ಲದೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಯಾವುದೇ ವಿವಾದ ಉಳಿಯುವುದಿಲ್ಲ. ಇನ್ನು ಮುಂದೆ ಹಿಂದೂ, ಮುಸ್ಲಿಮರು ಸೌಹಾರ್ದಯುತರಾಗಿರಬೇಕು. ಪರಸ್ಪರ ಇತರರನ್ನು ಬದುಕಲು ಬಿಡಬೇಕು. ಈ ಮೂಲಕ ಸಾಮಾಜಿಕತೆಯನ್ನು ಬಲಪಡಿಸಬೇಕು ಎಂದು ಹೇಳಿದ್ದಾರೆ.

    ಆರೋಪಿಗಳು?
    28 ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು, ಸೆ.30ರಂದು ಅಂತಿಮ ತೀರ್ಪು ಪ್ರಕಟಿಸುವುದಾಗಿ ಸಿಬಿಐ ವಿಶೇಷ ಕೋರ್ಟ್ ತಿಳಿಸಿದೆ. ತೀರ್ಪು ನೀಡುವ ದಿನ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್ ಸೂಚಿಸಿದ್ದರು. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದಾರೆ. 351 ಸಾಕ್ಷ್ಯ ಹಾಗೂ 600 ದಾಖಲಾತಿ ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ಸಿಬಿಐ ಹಾಜರುಪಡಿಸಿತ್ತು. ಸೆಪ್ಟೆಂಬರ್ 1ರಂದು ವಾದ ಮತ್ತು ಪ್ರತಿವಾದ ಮುಗಿದಿದ್ದು, ವಿಶೇಷ ನ್ಯಾಯಾಧೀಶರು ತೀರ್ಪು ಬರೆಯುತ್ತಿದ್ದಾರೆ ಎಂದು ಸಿಬಿಐ ಪರ ವಕೀಲ ಲಲಿತ್ ಸಿಂಗ್ ತಿಳಿಸಿದ್ದರು.

    2017ರ ಏಪ್ರಿಲ್ 19 ರಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್‍ಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. 2017ರ ಏಪ್ರಿಲ್‍ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು.

    32 ಮಂದಿ ಆರೋಪಿಗಳು ಯಾರು?
    ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್ ಪಾಂಡೆ, ವಿಜಯ್ ಬಹದ್ದೂರ್ ಸಿಂಗ್, ಆರ್‍ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.