Tag: ಎಸಿ

  • ಎಸಿ ಬಳಕೆಗೆ ಹೊಸ ನಿಯಮ – ದೇಶಕ್ಕೆ 18,000 ಕೋಟಿ ಉಳಿತಾಯ

    ಎಸಿ ಬಳಕೆಗೆ ಹೊಸ ನಿಯಮ – ದೇಶಕ್ಕೆ 18,000 ಕೋಟಿ ಉಳಿತಾಯ

    ನವದೆಹಲಿ: ದೇಶದಲ್ಲಿ ಏರ್ ಕಂಡೀಷನ್ (Air-Conditioners) ಯಂತ್ರಗಳಿಗೆ ಹೊಸ ನಿಯಮವನ್ನು ಜಾರಿ ಮಾಡಲು ಕೇಂದ್ರ ಸರ್ಕಾರ (Union Government) ಮುಂದಾಗಿದೆ.

    ಇನ್ನು ಮುಂದೆ ಹೊಸ ಹವಾನಿಯಂತ್ರಣ ಯಂತ್ರಗಳ (AC) ಕನಿಷ್ಠ ತಾಪಮಾನ 16 ಅಥವಾ 18 ಡಿಗ್ರಿಗಳ ಬದಲಿಗೆ 20 ಡಿಗ್ರಿ ಸೆಲ್ಸಿಯಸ್ ಮತ್ತು ಪ್ರಸ್ತುತ ಗರಿಷ್ಠ ಇರುವ 30 ಡಿಗ್ರಿಗಳ ಬದಲಿಗೆ ಗರಿಷ್ಠ 28 ಡಿಗ್ರಿಯೊಂದಿಗೆ ಬರಲಿದೆ.

    ಈ ಆದೇಶ ಜಾರಿಗೆ ಬಂದ ನಂತರ ಮೂರು ವರ್ಷಗಳಲ್ಲಿ 18,000-20,000 ಕೋಟಿ ರೂ. ಉಳಿತಾಯವಾಗಬಹುದು ಎಂದು ಅಂದಾಜಿಸಲಾಗಿದೆ.

    ಪ್ರಸ್ತುತ ಎಸಿ ಕನಿಷ್ಠ ತಾಪಮಾನವು 18°C ​​(ಕೆಲವು ಸಂದರ್ಭಗಳಲ್ಲಿ 16°C) ವರೆಗೆ ಹೋದರೆ ಗರಿಷ್ಠ 30°C ವರೆಗೆ ಏರಿಸಬಹುದಾಗಿದೆ. ಸರ್ಕಾರದ ಈ ಆದೇಶ ಜಾರಿಯಾದರೆ ಎಸಿ ತಾಪಮಾನ 20°C – 28°C ಗೆ ನಿರ್ಬಂಧಿಸುತ್ತದೆ. ಇದರರ್ಥ ಬಳಕೆದಾರರು ತಮ್ಮ ಎಸಿ ತಾಪಮಾನವನ್ನು 20°C ಗಿಂತ ಕಡಿಮೆ ಮತ್ತು 30°C ಗಿಂತ ಹೆಚ್ಚು ಹೊಂದಿಸಲು ಸಾಧ್ಯವಾಗುವುದಿಲ್ಲ. ಇದನ್ನೂ ಓದಿ: ಶೀಘ್ರದಲ್ಲೇ ಜಾರಿಗೆ ಬರಲಿದೆ ಕಿಲೋಮೀಟರ್ ಆಧಾರಿತ ಹೊಸ ಟೋಲ್ ತೆರಿಗೆ ನೀತಿ

    ಕೇಂದ್ರ ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್‌ ಮಾತನಾಡಿ, ಇದೊಂದು ವಿಶಿಷ್ಟ ಪ್ರಯೋಗವಾಗಿದ್ದು, ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಮತ್ತು ವಿದ್ಯುತ್ ಬಿಲ್‌ಗಳಲ್ಲಿನ ಏರಿಕೆಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.

    ಈ ನಿಯಮ ಜಾರಿಯಾದ ನಂತರ ಗೃಹಬಳಕೆಯಿಂದ ಹಿಡಿದು ವಾಣಿಜ್ಯ ಸಂಸ್ಥೆಗಳಾದ ಕಚೇರಿ ಬ್ಲಾಕ್‌ಗಳು, ಮಾಲ್‌, ಹೋಟೆಲ್‌ ಮತ್ತು ಚಲನಚಿತ್ರ ಮಂದಿರಗಳ ಸೇರಿದಂತೆ ವಿವಿಧ ವಲಯಗಳಲ್ಲಿ ಬಳಸುವ ಎಸಿಗಳಿಗೆ ಅನ್ವಯವಾಗುತ್ತದೆ.

    ಈಗಾಗಲೇ ಈ ಪ್ರಯೋಗ ಇಟಲಿ ಮತ್ತು ಜಪಾನ್‌ನಲ್ಲಿ ಜಾರಿಯಾಗಿದೆ. ರೋಮ್ ಸಾರ್ವಜನಿಕ ಕಟ್ಟಡಗಳಿಗೆ ಕನಿಷ್ಠ ತಾಪಮಾನವನ್ನು 23 ಡಿಗ್ರಿ ಸೆಲ್ಸಿಯಸ್‌ಗೆ ನಿಗದಿಪಡಿಸಿದರೆ, ಜಪಾನ್ 27 ಡಿಗ್ರಿ ಸೆಲ್ಸಿಯಸ್‌ ಫಿಕ್ಸ್‌ ಮಾಡಲಾಗಿದೆ.

    ಪ್ರತಿ 1 ಡಿಗ್ರಿ ಸೆಲ್ಸಿಯಸ್ ಹೆಚ್ಚಳವು ವಿದ್ಯುತ್ ಬಳಕೆಯನ್ನು 6% ರಷ್ಟು ಕಡಿಮೆ ಮಾಡುತ್ತದೆ. 6 ಕೋಟಿ ನಗರ ಮನೆಗಳು ಮತ್ತು 12 ಲಕ್ಷ ವಾಣಿಜ್ಯ ಸಂಸ್ಥೆಗಳು ತಮ್ಮ ಎಸಿ ಸೆಟ್ಟಿಂಗ್ ಅನ್ನು 22 ರಿಂದ 24 ಡಿಗ್ರಿ ಸೆಲ್ಸಿಯಸ್ ನಡುವೆ ಇಟ್ಟುಕೊಂಡರೆ ವಾರ್ಷಿಕವಾಗಿ 12-15 ಬಿಲಿಯನ್ ಯೂನಿಟ್ ವಿದ್ಯುತ್ ಉಳಿಸುತ್ತದೆ ಮತ್ತು 4-5 ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳನ್ನು ನಿರ್ಮಿಸುವ ಅಗತ್ಯವನ್ನು ನಿವಾರಿಸುತ್ತದೆ. ಅಷ್ಟೇ ಅಲ್ಲದೇ ಇಂಗಾಲದ ಹೊರಸೂಸುವಿಕೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ.

  • ರಾತ್ರಿಯಿಡೀ ಎಸಿ ಆನ್ ಮಾಡಿ ಮಲಗಿದ ವೈದ್ಯ – ಎರಡು ನವಜಾತ ಶಿಶುಗಳು ಸಾವು

    ರಾತ್ರಿಯಿಡೀ ಎಸಿ ಆನ್ ಮಾಡಿ ಮಲಗಿದ ವೈದ್ಯ – ಎರಡು ನವಜಾತ ಶಿಶುಗಳು ಸಾವು

    ಲಕ್ನೋ: ಖಾಸಗಿ ಕ್ಲಿನಿಕ್‌ನಲ್ಲಿ (Clinic) ವೈದ್ಯ ಹವಾನಿಯಂತ್ರಣವನ್ನು (AC) ರಾತ್ರಿಯಿಡೀ ಆನ್ ಮಾಡಿ ಮಲಗಿದ ಪರಿಣಾಮ ಎರಡು ನವಜಾತ ಶಿಶುಗಳು (Newborn Baby) ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ (Uttar Pradesh) ಶಾಮ್ಲಿ (Shamli) ಜಿಲ್ಲೆಯಲ್ಲಿ ನಡೆದಿದೆ.

    ಕ್ಲಿನಿಕ್‌ನ ಮಾಲೀಕ ಡಾಕ್ಟರ್ (Doctor) ನೀತು, ಚೆನ್ನಾಗಿ ನಿದ್ದೆ ಮಾಡುವ ಸಲುವಾಗಿ ಹವಾನಿಯಂತ್ರಣ (ಎಸಿ) ಆನ್ ಮಾಡಿದ್ದಾನೆ. ತಂಪು ವಾತಾವರಣದಿಂದಾಗಿ ಎರಡು ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಚಿನ್ನದಂಗಡಿ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಆಭರಣ ದರೋಡೆ

    ನವಜಾತ ಶಿಶುಗಳು ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಜನಿಸಿದ್ದು, ಅದೇ ದಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಕ್ಕಳನ್ನು ಚಿಕಿತ್ಸೆಗೆಂದು ಫೋಟೋಥೆರಪಿ ಘಟಕದಲ್ಲಿ ಇರಿಸಲಾಗಿತ್ತು. ಈ ವೇಳೆ ವೈದ್ಯ ಮಲಗಲೆಂದು ಎಸಿ ಆನ್ ಮಾಡಿದ್ದು, ಮರುದಿನ ಬೆಳಗ್ಗೆ ಕುಟುಂಬಸ್ಥರು ಮಕ್ಕಳನ್ನು ನೋಡಲೆಂದು ಹೋದಾಗ ಎರಡೂ ಶಿಶುಗಳು ಶವವಾಗಿ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: 5ನೇ ತರಗತಿ ವಿದ್ಯಾರ್ಥಿನಿಗೆ ಮುಖ್ಯ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ ಆರೋಪ

    ಘಟನೆಗೆ ಸಂಬಂಧಿಸಿದಂತೆ ಮೃತ ಶಿಶುಗಳ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು, ವೈದ್ಯನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ವೈದ್ಯನ ವಿರುದ್ಧ ಐಪಿಸಿ ಸೆಕ್ಷನ್ 304 ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಎಸ್‌ಹೆಚ್‌ಒ ನೇತ್ರಪಾಲ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿಯ ಕುತ್ತಿಗೆಗೆ 30 ಬಾರಿ ಚುಚ್ಚಿ, ಕಬ್ಬಿಣದ ಬಾಣಲೆಯಲ್ಲಿ ಹೊಡೆದು ಕೊಂದ ಪಾಪಿ ಮಗಳು!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಾಯಿ, ಇಬ್ಬರು ಮಕ್ಕಳ ಸಜೀವ ದಹನ ಕೇಸ್ – ಅವಘಡಕ್ಕೆ ಎಸಿ ತಾಂತ್ರಿಕ ದೋಷವೇ ಕಾರಣ

    ತಾಯಿ, ಇಬ್ಬರು ಮಕ್ಕಳ ಸಜೀವ ದಹನ ಕೇಸ್ – ಅವಘಡಕ್ಕೆ ಎಸಿ ತಾಂತ್ರಿಕ ದೋಷವೇ ಕಾರಣ

    ರಾಯಚೂರು: ಇಲ್ಲಿನ ಶಕ್ತಿನಗರದಲ್ಲಿ ನಡೆದಿದ್ದ ಬೆಂಕಿ (Fire) ಅವಘಡದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದ ಘಟನೆ ನಡೆದಿತ್ತು. ಈ ಘಟನೆಗೆ ಎಸಿ (AC) ತಾಂತ್ರಿಕ ದೋಷವೇ ಕಾರಣ ಅಂತಾ ಪೊಲೀಸರು (Police) ಇದೀಗ ತಿಳಿಸಿದ್ದಾರೆ.

    ಇದೇ ಮಾರ್ಚ್ 6 ರಂದು ಶಕ್ತಿನಗರದ ಕೆಪಿಸಿ ಕ್ವಾಟ್ರಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನವಾಗಿದ್ದರು. ಇದನ್ನೂ ಓದಿ: ತಾಯಿ, ಇಬ್ಬರು ಮಕ್ಕಳು ಮನೆಯಲ್ಲೇ ಸಜೀವ ದಹನ – ಎಸಿ ಸ್ಫೋಟ ಶಂಕೆ

    ಮಂಡ್ಯ ಮೂಲದ ರಂಜಿತಾ (33), ಮಕ್ಕಳಾದ ಮೃದಲಾ (13), ತಾರುಣ್ಯ(5) ಘಟನೆಯಲ್ಲಿ ಸಾವಿಗೀಡಾಗಿದ್ದರು. ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದ ಕಾರಣ ತಿಳಿಯದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿರಲಿಲ್ಲ. ಕಾರಣ ತಿಳಿದ ನಂತರ ಮಂಗಳವಾರ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪತ್ನಿಯನ್ನು ಪೀಸ್ ಪೀಸ್ ಮಾಡಿ ನೀರಿನ ಟ್ಯಾಂಕಿನಲ್ಲಿ ತುಂಬಿಸಿಟ್ಟ!

    ಆರ್‌ಟಿಪಿಎಸ್ ನಲ್ಲಿ ಎಇಇ ಆಗಿರುವ ಸಿದ್ದಲಿಂಗಯ್ಯ ಸ್ವಾಮಿ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ದುರ್ಮರಣಕ್ಕೀಡಾಗಿದ್ದರು. ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತರ ಮಾದರಿಗಳ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.

  • ವಿದ್ಯಾರ್ಥಿಗಳಿಗೆ ABCD ಕಲಿಸದ ಶಿಕ್ಷಕಿ – ಸರ್ಕಾರಿ ಶಾಲೆಯ ಪರಿಸ್ಥಿತಿ ಕಂಡು ಎಸಿ ಶಾಕ್

    ವಿದ್ಯಾರ್ಥಿಗಳಿಗೆ ABCD ಕಲಿಸದ ಶಿಕ್ಷಕಿ – ಸರ್ಕಾರಿ ಶಾಲೆಯ ಪರಿಸ್ಥಿತಿ ಕಂಡು ಎಸಿ ಶಾಕ್

    ರಾಯಚೂರು: ತಾಲೂಕಿನ ಲಿಂಗನಖಾನದೊಡ್ಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ (Government School) ದಿಢೀರ್ ಭೇಟಿ ನೀಡಿದ ರಾಯಚೂರು ಉಪವಿಭಾಗದ ಸಹಾಯಕ ಆಯುಕ್ತ (Assistant Commissioner) ರಜನಿಕಾಂತ್ ಚವ್ಹಾಣ್ ಅಲ್ಲಿನ ಪರಿಸ್ಥಿತಿ ಕಂಡು ಶಾಕ್ ಆಗಿದ್ದಾರೆ.

    ಎರಡನೇ ತರಗತಿ ಮಕ್ಕಳಿಗೆ ಇಂಗ್ಲಿಷ್ (English) ವರ್ಣಮಾಲೆ ಪರಿಚಯವೇ ಇಲ್ಲದ್ದನ್ನು ತಿಳಿದು ದಿಢೀರ್ ಭೇಟಿ ವೇಳೆ ಎಸಿ ಗರಂ ಆಗಿದ್ದಾರೆ. ಮಕ್ಕಳಿಗೆ ಎಬಿಸಿಡಿ ಓದಲು ಬರುವುದಿಲ್ಲ ಏನ್ ಕಲಿಸುತ್ತಿದ್ದಿರಿ ಎಂದು ಶಿಕ್ಷಕಿ (Teacher) ಹಾಗೂ ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಮಸ್ಯೆಗಳನ್ನೇ ಹೇಳುತ್ತಿರುವುದನ್ನು ಬಿಟ್ಟು ಮಕ್ಕಳಿಗೆ ಕಲಿಸುವ ಕಡೆಯೂ ಗಮನಹರಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾವನ್ನಪ್ಪುವ ಮೊದಲು ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ತೆರಳಿದ್ದ ಮೇಸ್ತಾ – ಸಿಬಿಐ ವರದಿಯಲ್ಲಿ ಬಯಲು

    ಕೋವಿಡ್ (Covid-19) ಕಾರಣಕ್ಕೆ ಎರಡು ವರ್ಷದಿಂದ ಮಕ್ಕಳು ಓದಿನಲ್ಲಿ ಹಿಂದೆ ಬಿದ್ದಿದ್ದಾರೆ ಅನ್ನೋ ಶಿಕ್ಷಕಿಯ ಸಮಜಾಯಿಷಿಗೆ ಅಧಿಕಾರಿ ಗರಂ ಆದರು. ನಾನೇ ಶಿಕ್ಷಕನಾಗಿ ಬರಲೇ ಎರಡೇ ದಿನದಲ್ಲಿ ಎಬಿಸಿಡಿ ಕಲಿಸುತ್ತೇನೆ. ಒಂದು ವಾರದೊಳಗೆ ಮಕ್ಕಳಿಗೆ ಎಬಿಸಿಡಿ ಕಲಿಸಬೇಕು. ಮಕ್ಕಳು ಪಟಪಟನೆ ಎಬಿಸಿಡಿ ಹೇಳುವುದನ್ನು ವೀಡಿಯೋ ಮಾಡಿ ಕಳುಹಿಸಿ ಎಂದು ತಾಕೀತು ಮಾಡಿದರು. ಶಾಲೆಯ ಶಿಕ್ಷಕರ ಕೊರತೆ ಬಗ್ಗೆ ತಕ್ಷಣವೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರೆಮಾಡಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳುವಂತೆ ಎಸಿ ಸೂಚಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡ್ರೈನೇಜ್ ಬ್ಲಾಕ್ ದಂಧೆ – ಹಣಕ್ಕಾಗಿ ಮಿಡ್‌ನೈಟ್‌ ಆಪರೇಷನ್‌

    Live Tv
    [brid partner=56869869 player=32851 video=960834 autoplay=true]

  • ಸರ್ಕಾರಿ ನೌಕರನಿಗೆ ಕಪಾಳಮೋಕ್ಷ ಮಾಡಿದ ಹಾಸನ ಎಸಿ

    ಸರ್ಕಾರಿ ನೌಕರನಿಗೆ ಕಪಾಳಮೋಕ್ಷ ಮಾಡಿದ ಹಾಸನ ಎಸಿ

    ಹಾಸನ: ಸರ್ಕಾರಿ ನೌಕರನಿಗೆ ಎಸಿ (Assistant Commissioner) ಬಿ.ಎ. ಜಗದೀಶ್ ಕಪಾಳ ಮೋಕ್ಷ ಮಾಡಿ ದರ್ಪ ತೋರಿದ ಘಟನೆ ಹಾಸನಾಂಬೆ ದೇಗುಲದಲ್ಲಿ (Hasanamba Temple) ನಡೆದಿದೆ.

    ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಘಟನೆ ನಡೆದಿದ್ದು, ಜಿಲ್ಲಾ ಪಂಚಾಯತ್ ನೌಕರ ಶಿವೇಗೌಡರಿಗೆ ಹಾಸನದ ಉವಿಭಾಗಧಿಕಾರಿ ಜಗದೀಶ್ ಕಪಾಳಮೋಕ್ಷ ಮಾಡಿದ್ದಾರೆ. ನೂರಾರು ಜನರು ಒಳ ಬರುತ್ತಿದ್ದಾಗ ಅವರ ಜೊತೆಯಲ್ಲಿಯೇ ಜಿಲ್ಲಾ ಪಂಚಾಯಿತಿ ನೌಕರ ಶಿವೇಗೌಡರು ಬಂದಿದ್ದರು. ಆ ವೇಳೆ ಎಸಿ ಜಗದೀಶ್ ಆತನನ್ನು ತಡೆದು, ಯಾಕೋ ಓಡಿ ಬರುತ್ತಿದ್ದಿಯಾ, ನಿನಗೆ ಯಾರು ಒಳಬಿಟ್ಟಿದ್ದು ಎಂದು ಏಕವಚನದಲ್ಲಿ ನಿಂದನೆ ಮಾಡಿ ಕಪಾಳ ಮೋಕ್ಷ ಮಾಡಿದ್ದಾರೆ. ಇದನ್ನೂ ಓದಿ: ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

    ತಾನು ಜಿ.ಪಂ. ನೌಕರ ಎಂದು ಶಿವೇಗೌಡ ಗುರುತಿನ ಚೀಟಿ ತೋರಿಸಿದ್ದಾರೆ. ಆದರೆ ಎಸಿ ಜಗದೀಶ್ ಕೊರಳಲ್ಲಿ ಧರಿಸಿದ್ದ ಕಾರ್ಡ್ ಕಿತ್ತು ಎಸೆದಿದ್ದು, ಶಿವೇಗೌಡ ಕುಟುಂಬದವರ ಮುಂದೆಯೇ ಕಪಾಳಮೋಕ್ಷ ಮಾಡಿದ್ದಾರೆ. ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ ಸಮ್ಮುಖದಲ್ಲೇ ಕಪಾಳಮೋಕ್ಷ ಮಾಡಿದ ಎಸಿ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ತಾಯಿ ಸನ್‍ಸ್ಕ್ರೀನ್ ಕಳಿಸಿದ್ರು, ನಾನು ಬಳಸಲ್ಲ: ರಾಹುಲ್ ಗಾಂಧಿ

    Live Tv
    [brid partner=56869869 player=32851 video=960834 autoplay=true]

  • ದೇಶದ ಮೊದಲ ಎಲೆಕ್ಟ್ರಿಕ್‌ ಡಬ್ಬಲ್ ಡೆಕ್ಕರ್ ಬಸ್‌ ಇಂದಿನಿಂದ ಕಾರ್ಯಾರಂಭ – ಏನಿದರ ವಿಶೇಷತೆ?

    ದೇಶದ ಮೊದಲ ಎಲೆಕ್ಟ್ರಿಕ್‌ ಡಬ್ಬಲ್ ಡೆಕ್ಕರ್ ಬಸ್‌ ಇಂದಿನಿಂದ ಕಾರ್ಯಾರಂಭ – ಏನಿದರ ವಿಶೇಷತೆ?

    ಮುಂಬೈ: ದೇಶದ ಮೊದಲ ಡಬ್ಬಲ್ ಡೆಕ್ಕರ್ ಹವಾನಿಯಂತ್ರಿತ (ಎಸಿ) ಬಸ್ ಸೇರಿದಂತೆ 2 ಎಲೆಕ್ಟ್ರಿಕ್‌ ಬಸ್‌ಗಳು ಮುಂಬೈನಲ್ಲಿ ಇಂದಿನಿಂದ ಕಾರ್ಯಾರಂಭ ಮಾಡಿವೆ.

    ಈ ಬಸ್‌ಗಳು ಉತ್ತಮ ಆಕರ್ಷಣೆಯಾಗಿದ್ದು, ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಸ್‌ಗಳಲ್ಲಿ 1 ಆ್ಯಪ್ (ತಂತ್ರಾಂಶ) ನಿಯಂತ್ರಿತ ಆಗಿದ್ದು, ಮತ್ತೊಂದು ನಿಯಂತ್ರಿತ ಎಲೆಕ್ಟಿಕ್ ಡಬ್ಬಲ್ ಡೆಕ್ಕರ್ ಬಸ್ ಆಗಿದೆ.

    ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಬಸ್‌ಗಳಿಗೆ ಚಾಲನೆ ನೀಡಲಿದ್ದಾರೆ. ಮುಂಬೈ ನಗರ ಸಾರ್ವಜನಿಕ ಸಾರಿಗೆ ನಗರದಾದ್ಯಂತ ಆಪ್ ಆಧಾರಿತ ಬಸ್ ಸೇವೆ ನೀಡಲು ಯೋಜನೆ ರೂಪಿಸಿದೆ.

    ಇತ್ತೀಚೆಗೆ ದೆಹಲಿಯ ಕೇಜ್ರಿವಾಲ್ ನೇತೃತ್ವದ ಸರ್ಕಾರ ಸುಮಾರು 200 ಎಲೆಕ್ಟ್ರಿಕ್‌ ಬಸ್‌ಗಳಿಗೆ ಚಾಲನೆ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

  • ನಾಯಿಗಳಿಗೂ ಏರ್ ಕಂಡೀಷನ್ ಫ್ಲ್ಯಾಟ್ ಒದಗಿಸಿದ್ದ ಪಾರ್ಥ

    ನಾಯಿಗಳಿಗೂ ಏರ್ ಕಂಡೀಷನ್ ಫ್ಲ್ಯಾಟ್ ಒದಗಿಸಿದ್ದ ಪಾರ್ಥ

    ಕೋಲ್ಕತ್ತಾ: ಶಾಲಾ ಸೇವಾ ಆಯೋಗದ(ಎಸ್‍ಎಸ್‍ಸಿ) ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಚಿವ ಪಾರ್ಥ ಚಟರ್ಜಿ ಅವರು ತಮ್ಮ ನಾಯಿಗಳಿಗೂ ಫ್ಲಾಟ್ ಹೊಂದಿದ್ದಾರೆಂದು ವರದಿಯಾಗಿದೆ.

    ಪಾರ್ಥ ಅವರು ಸಾಕಿದ ನಾಯಿಗೂ ಹವಾ ನಿಯಂತ್ರಿತ ಫ್ಲ್ಯಾಟ್ ಒದಗಿಸಿದ್ದರು. ದಕ್ಷಿಣ ಕೋಲ್ಕತ್ತಾದ ನಕ್ತಾಲಾ ಬಳಿ ಪಾರ್ಥ ಅವರು ಐಷಾರಾಮಿ ಫ್ಲ್ಯಾಟ್ ಹೊಂದಿದ್ದು, ಇದನ್ನು ಕೇವಲ ನಾಯಿಗಳಿಗಾಗಿಯೇ ಮೀಸಲಿಟ್ಟಿದ್ದರು. ಅವರು 3 ಸಾಕುನಾಯಿಗಳನ್ನು ಸಾಕುತ್ತಿದ್ದು, ಅವುಗಳನ್ನು ‘ಸಿದ್ಧಿ ಎನ್‍ಕ್ಲೇವ್’ನ 2ನೇ ಮಹಡಿಯಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ 3 ಬಾರಿ ಕರೆ ಮಾಡಿದ ಬಂಧಿತ ಸಚಿವ ಪಾರ್ಥ ಚಟರ್ಜಿ

    ನಾಯಿಗಳನ್ನು ತಂಪಾಗಿಡಲು ಏರ್ ಕಂಡಿಷನರ್ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ ಎಂದು ವರದಿಯಾಗಿದೆ. ಇದಲ್ಲದೆ, ಪಾರ್ಥ ಅವರು ತಮ್ಮ ಸಾಕುಪ್ರಾಣಿಗಳನ್ನು ನೋಡಿಕೊಳ್ಳಲು ಮಹಿಳೆ ಸೇರಿದಂತೆ 2 ಕೇರ್‌ಟೇಕರ್‌ಗಳನ್ನು ಸಹ ನೇಮಿಸಿಕೊಂಡಿದ್ದಾರೆ. ಫ್ಲ್ಯಾಟ್ ನಲ್ಲಿ ಮೊದಲು ನಾಲ್ಕು ನಾಯಿಗಳಿದ್ದವು. ಆದರೆ ಸ್ವಲ್ಪ ವರ್ಷಗಳ ಹಿಂದೆ ಒಂದು ನಾಯಿ ಮೃತ ಪಟ್ಟಿದ್ದು, ಈಗ ಮೂರು ನಾಯಿಗಳಿವೆ.

    ಪಾರ್ಥ ಅವರ ಮನೆ ಮೇಲೆ ನಡೆಸಿದ ದಾಳಿ ವೇಳೆ ಶಿಕ್ಷಕ ನೇಮಕಾತಿ ಪರೀಕ್ಷೆಯ ಪ್ರವೇಶ ನೇಮಕಾತಿ ಪತ್ರ ಮತ್ತು ಆಸ್ತಿ ಪತ್ರಗಳು ಪತ್ತೆಯಾಗಿವೆ. ಗ್ರೂಪ್ ಸಿ ಮತ್ತು 2 ನೇಮಕಾತಿಗೆ ಸಂಬಂಧಿಸಿದ ದಾಖಲಾತಿಗಳು, ಅಭ್ಯರ್ಥಿಗಳ ಪತ್ರ ಸೇರಿ ಹಲವು ದಾಖಲೆಗಳನ್ನು ವಾರ್ಥ ಅವರ ಮನೆಯಲ್ಲೇ ಮಾಡಿಸಿಕೊಳ್ಳಲಾಗಿದೆ ಎಂಬುದು ಪತ್ತೆಯಾಗಿದೆ. ಈ ಹಿನ್ನೆಲೆ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಮನೆಯಲ್ಲಿ ಪತ್ತೆಯಾದ ಹಣ ಪಾರ್ಥ ಚಟರ್ಜಿಯವರದ್ದೇ – ತಪ್ಪೊಪ್ಪಿಕೊಂಡ ಆಪ್ತೆ ಅರ್ಪಿತಾ

    Live Tv
    [brid partner=56869869 player=32851 video=960834 autoplay=true]

  • ಉಷ್ಣಾಂಶ ಏರಿಕೆ – ಏಪ್ರಿಲ್‌ನಲ್ಲಿ ಎಸಿ ಸಾರ್ವಕಾಲಿಕ ಗರಿಷ್ಠ ಮಾರಾಟ

    ಉಷ್ಣಾಂಶ ಏರಿಕೆ – ಏಪ್ರಿಲ್‌ನಲ್ಲಿ ಎಸಿ ಸಾರ್ವಕಾಲಿಕ ಗರಿಷ್ಠ ಮಾರಾಟ

    ನವದೆಹಲಿ: ದೇಶದದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದ್ದಂತೆ ಇತ್ತ ದಾಖಲೆ ಪ್ರಮಾಣದಲ್ಲಿ ಹವಾ ನಿಯಂತ್ರಕ(ಎಸಿ) ಮಾರಾಟವಾಗುತ್ತಿದೆ.

    ಏಪ್ರಿಲ್‌ ತಿಂಗಳಿನಲ್ಲಿ17.5 ಲಕ್ಷ ಏಸಿ ಮಾರಾಟವಾಗಿದೆ. ಇದು ಇವರೆಗಿನ 1 ತಿಂಗಳಿನ ಸಾರ್ವಕಾಲಿಕ ಗರಿಷ್ಠ ಮಾರಾಟವಾಗಿದೆ. ಇದನ್ನೂ ಓದಿ: ಬಿಸಿಲಿನ ತಾಪಕ್ಕೆ 25 ಬಲಿ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ

    ಕಳೆದ ವರ್ಷದ ಏಪ್ರಿಲ್‌ಗೆ ಹೋಲಿಸಿದರೆ ದುಪ್ಪಟ್ಟು ಪ್ರಮಾಣದಲ್ಲಿ ಮಾರಾಟವಾಗಿದೆ. ಈ ವರ್ಷ 90 ಲಕ್ಷ ಘಟಕಗಳು ಮಾರಾಟವಾಗಬಹುದು ಎಂದು ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ತಯಾರಕರ ಸಂಘ ಹೇಳಿದೆ.

    ದೇಶದಲ್ಲಿ ಪ್ರಮುಖವಾಗಿ 15 ಕಂಪನಿಗಳ ಎಸಿಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು ಅದರಲ್ಲೂ ವೋಲ್ಟಾಸ್‌, ಪಾನಾಸೋನಿಕ್‌, ಹಿಟಾಚಿ, ಎಲ್‌ಜಿ, ಹೈಯರ್‌ ಕಂಪನಿಗಳು ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿವೆ.

    2020 ರಲ್ಲಿ ಮೊದಲ ಕೊರೊನಾ ಅಲೆ ಇದ್ದರೆ 2021ರಲ್ಲಿ ಎರಡನೇ ಕೊರೊನಾ ಅಲೆ ಇತ್ತು. ಈ ಕಾರಣಕ್ಕೆ ಎಸಿ ಮಾರಾಟ ಕುಸಿತ ಕಂಡಿತ್ತು.

  • ಎಸಿ ಸ್ಫೋಟ – ಓರ್ವ ಸಾವು, ಐವರಿಗೆ ಗಾಯ

    ಎಸಿ ಸ್ಫೋಟ – ಓರ್ವ ಸಾವು, ಐವರಿಗೆ ಗಾಯ

    ನವದೆಹಲಿ: ಹವಾನಿಯಂತ್ರಣ(ಎಸಿ)ದ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಆಗ್ನೇಯ ದೆಹಲಿಯ ಜಾಮಿಯಾ ನಗರದಲ್ಲಿನ ಉಪಾಹಾರ ಗೃಹವೊಂದರಲ್ಲಿ ನಡೆದಿದೆ.

    ಎರಡು ಅಂತಸ್ತಿನ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಉಪಾಹಾರ ಗೃಹದಲ್ಲಿ ಎಸಿಯನ್ನು ಸರಿಪಡಿಸಲು ನದೀಮ್ ಮತ್ತು ಶಾನ್ ಅವರನ್ನು ಕರೆಸಲಾಗಿತ್ತು. ಈ ವೇಳೆ ಎಸಿ ಸ್ಫೋಟಗೊಂಡಿದ್ದು, ನದೀಮ್ ಅವರ ತಲೆ ಮತ್ತು ಎದೆಯ ಮೇಲೆ ತೀವ್ರವಾಗಿ ಗಾಯವಾಗಿ ರಕ್ತಸ್ರಾವದಿಂದ ಪ್ರಜ್ಞೆ ತಪ್ಪಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ರಷ್ಯಾದಿಂದ ಬಂತು ಎಸ್ 400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ

    ಉಳಿದಂತೆ ಶಾನ್, ಡ್ಯಾನಿಶ್, ಅಜ್ಜು, ಬಿಜಯ್ ಮತ್ತು ಇಕ್ರಾ ಅವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ಗಂಟೆಗಳ ಬಳಿಕ ಇಕ್ರಾ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    POLICE JEEP

    ಘಟನೆ ಕುರಿತಂಯತೆ ಪ್ರಾಥಮಿಕ ತನಿಖೆ ವೇಳೆ ಮೊದಲಿಗೆ ಅಗ್ನಿಶಾಮಕ ದಳ ಇಲಾಖೆ ಉಪಾಹಾರ ಗೃಹದಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ 13 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದರು. ಆದರೆ ನಂತರ ಎಸಿ ಕಂಪ್ರೆಸರ್ ಆಗಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರಿಗೆ ತಿಳಿದುಬಂದಿದೆ. ಇದನ್ನೂ ಓದಿ: ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

  • ACಯ ವಿಷಾನಿಲ ಸೋರಿಕೆ- ಒಂದೇ ಕುಟುಂಬದ ನಾಲ್ವರು ಸಾವು

    ACಯ ವಿಷಾನಿಲ ಸೋರಿಕೆ- ಒಂದೇ ಕುಟುಂಬದ ನಾಲ್ವರು ಸಾವು

    ಬಳ್ಳಾರಿ: ಎಸಿಯ ವಿಷಾನಿಲ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಘನ ಘೋರ ದುರಂತವೊಂದು ನಡೆದುಹೋಗಿದೆ.

    ವೆಂಕಟ್ ಪ್ರಶಾಂತ್ (42), ಪತ್ನಿ ಚಂದ್ರಕಲಾ (38), ಮಕ್ಕಳಾದ ಅದ್ವಿಕ್ (16) ಪ್ರೇರಣಾ (8) ಮೃತರಾಗಿದ್ದಾರೆ. ಎಸಿಯ ವಿಷಾನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ರಾಘವೇಂದ್ರ ಶೆಟ್ಟಿ ಹಾಗೂ ಅವರ ಪತ್ನಿ ರಾಜಶ್ರೀ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬೆಡ್‌ರೂಮ್‌ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣವೇ ಎಚ್ಚೆತ್ತ ರಾಘವೇಂದ್ರ ಶೆಟ್ಟಿ ಬಾಗಿಲು ತೆರೆಯಲು ಹರಸಾಹಸಪಟ್ಟರು. ಅಷ್ಟೊತ್ತಲ್ಲೇ ಮಗ ಹಾಗೂ ಮೊಮ್ಮಕ್ಕಳು ಮಲಗಿದ್ದ ಬೆಡ್ ರೂಂಗೆ ದಟ್ಟ ಹೊಗೆ ಆವರಿಸಿತ್ತು. ಮನೆ ಬಹುತೇಕ ಸುಟ್ಟು ಹೋಗಿದೆ. ಮರಿಯಮ್ಮನಹಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.