Tag: ಎಸ್‌ಆರ್‌ಹೆಚ್‌

  • IPL 2024: ಚಾಂಪಿಯನ್‌ KKRಗೆ 20 ಕೋಟಿ ರೂ., ಆರೆಂಜ್‌, ಪರ್ಪಲ್‌ ಕ್ಯಾಪ್‌‌ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

    IPL 2024: ಚಾಂಪಿಯನ್‌ KKRಗೆ 20 ಕೋಟಿ ರೂ., ಆರೆಂಜ್‌, ಪರ್ಪಲ್‌ ಕ್ಯಾಪ್‌‌ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

    ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡಗಳ ನಡುವಿನ IPL 2024 ರ ಫೈನಲ್ ಪಂದ್ಯವು ಭಾನುವಾರ‌ ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್ ತಂಡವು ಎಸ್‌ಆರ್‌ಹೆಚ್‌ ವಿರುದ್ಧ ಅದ್ಧೂರಿ ಜಯಗಳಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿತು.

    ಇದರೊಂದಿಗೆ ಐಪಿಎಲ್ 2024 ರ ಫೈನಲ್ ಪಂದ್ಯದ ವಿಜೇತ ತಂಡಕ್ಕೆ 20 ಕೋಟಿ ರೂ. ಮತ್ತು ರನ್ನರ್ ಅಪ್ ತಂಡಕ್ಕೆ 13 ಕೋಟಿ ರೂ. ಬಹುಮಾನ ಲಭಿಸಿದೆ. ಇದಲ್ಲದೇ ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್, ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್ ಮುಂತಾದ ಹಲವು ಪ್ರಶಸ್ತಿಗಳನ್ನು ನೀಡಲಾಗಿದ್ದು, ಯಾವ ಆಟಗಾರ ಯಾವ ಪ್ರಶಸ್ತಿ ಪಡೆದಿದ್ದಾರೆ ಎಂಬುದರ ಡೀಟೈಲ್‌ ಇಲ್ಲಿದೆ.

    ಸನ್‌ರೈಸರ್ಸ್ ಹೈದರಾಬಾದ್‌ನ ಸ್ಟಾರ್ ಆಲ್‌ರೌಂಡರ್ ನಿತೀಶ್ ರೆಡ್ಡಿ (Nitish Kumar Reddy) ಉದಯೋನ್ಮುಖ ಆಟಗಾರನಾಗಿ ಆಯ್ಕೆಯಾದರು. ಅವರಿಗೆ 10 ಲಕ್ಷ ರೂ. ಹಾಗೂ ಟ್ರೋಫಿಯನ್ನು ನೀಡಲಾಯಿತು. ಈ ಆವೃತ್ತಿಯಲ್ಲಿ ಅತೀ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಕ್ಕಾಗಿ ಅಭಿಷೇಕ್ ಶರ್ಮಾ (Abhishk Sharma) ಅವರು ಸೂಪರ್ ಸಿಕ್ಸರ್‌ ಆಗಿ ಆಯ್ಕೆಯಾದರು. ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿಯನ್ನು ಡೆಲ್ಲಿ ಕ್ಯಾಪಿಟಲ್ಸ್‌ನ ಜೇಕ್ ಫ್ರೇಸರ್ ಮೆಕ್ಗರ್ಕ್ (Jake Fraser-McGurk) ಗೆದ್ದರು. ಇದಲ್ಲದೆ ಆರೆಂಜ್ ಕ್ಯಾಪ್ ಮತ್ತೊಮ್ಮೆ ವಿರಾಟ್ ಕೊಹ್ಲಿಗೆ (Virat Kohli) ದಕ್ಕಿತು ಮತ್ತು ಹರ್ಷಲ್ ಪಟೇಲ್ (Harshal Patel)  ಪರ್ಪಲ್ ಕ್ಯಾಪ್ ಅನ್ನು ತನ್ನದಾಗಿಸಿಕೊಂಡರು. ಇದನ್ನೂ ಓದಿ: IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

    IPL 2024 ಪ್ರಶಸ್ತಿಗಳ ಸಂಪೂರ್ಣ ಪಟ್ಟಿ
    * ಕೋಲ್ಕತ್ತಾ ನೈಟ್ ರೈಡರ್ಸ್ (ವಿಜೇತರು) – 20 ಕೋಟಿ ರೂ. ಮತ್ತು ಟ್ರೋಫಿ
    * ಸನ್ ರೈಸರ್ಸ್ ಹೈದರಾಬಾದ್ (ರನ್ನರ್ ಅಪ್) – 12.5 ಕೋಟಿ ರೂ. ಮತ್ತು ಟ್ರೋಫಿ
    * ನಿತೀಶ್ ರೆಡ್ಡಿ (ಉದಯೋನ್ಮುಖ ಆಟಗಾರ)- 10 ಲಕ್ಷ ಮತ್ತು ಟ್ರೋಫಿ
    * ಸನ್‌ರೈಸರ್ಸ್ ಹೈದರಾಬಾದ್ ( ಫೇರ್‌ಪ್ಲೇ ಪ್ರಶಸ್ತಿ) – 10 ಲಕ್ಷ ಮತ್ತು ಟ್ರೋಫಿ
    * ಹರ್ಷಲ್ ಪಟೇಲ್ (Dream11 ಗೇಮ್ ಚೇಂಜರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
    * ಅಭಿಷೇಕ್ ಶರ್ಮಾ (ಸೀಸನ್‌ನ ಸೂಪರ್ ಸಿಕ್ಸರ್)- 10 ಲಕ್ಷ ರೂ.
    * ರಮಣದೀಪ್ ಸಿಂಗ್ (ಪರಿಪೂರ್ಣ ಕ್ಯಾಚ್)- 10 ಲಕ್ಷ ರೂ. ಮತ್ತು ಟ್ರೋಫಿ
    * ಜೇಕ್ ಫ್ರೇಸರ್ ಮೆಕ್ಗರ್ಕ್ (ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
    * ವೆಂಕಟೇಶ್ ಅಯ್ಯರ್ (ಕ್ರೆಡ್ ಪವರ್ ಪ್ಲೇಯರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
    * ಹರ್ಷಲ್ ಪಟೇಲ್ (24 ವಿಕೆಟ್)- 10 ಲಕ್ಷ ರೂ. ಮತ್ತು ಪರ್ಪಲ್ ಕ್ಯಾಪ್
    * ವಿರಾಟ್ ಕೊಹ್ಲಿ (741 ರನ್) – 10 ಲಕ್ಷ ರೂ. ಮತ್ತು ಆರೆಂಜ್ ಕ್ಯಾಪ್
    * ಸುನಿಲ್ ನರೈನ್ (ಅತ್ಯಂತ ಮೌಲ್ಯಯುತ ಆಟಗಾರ)- 10 ಲಕ್ಷ ಮತ್ತು ಟ್ರೋಫಿ
    * ಪಿಚ್ ಮತ್ತು ಗ್ರೌಂಡ್ ಅವಾರ್ಡ್ – ರಾಜೀವ್ ಗಾಂಧಿ ಸ್ಟೇಡಿಯಂ ಹೈದರಾಬಾದ್- 50 ಲಕ್ಷ

    ಐಪಿಎಲ್ 2024 ಅಂಕಗಳ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮೂರನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳ ಮೇಲೂ ಹಣದ ಮಳೆ ಸುರಿಯಿತು. ತೃತೀಯ ಸ್ಥಾನ ಪಡೆದ ಸಂಜು ಸ್ಯಾಮ್ಸನ್ ತಂಡ 7 ಕೋಟಿ ರೂ., ನಾಲ್ಕನೇ ಸ್ಥಾನ ಪಡೆದ RCB 6.5 ಕೋಟಿ ರೂ. ಬಹುಮಾನ ಪಡೆಯಿತು. ಎರಡನೆಯದಾಗಿ, ಅತ್ಯುತ್ತಮ ಪಿಚ್ ಮತ್ತು ಗ್ರೌಂಡ್ ಪ್ರಶಸ್ತಿಯನ್ನು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣಕ್ಕೆ ನೀಡಲಾಯಿತು.

  • ಇಂದು ಚೆನ್ನೈನಲ್ಲಿ ರೈಡರ್ಸ್ vs ರೈಸರ್ಸ್ ಫೈನಲ್ ಹಣಾಹಣಿ – ಈ ಸಲ ಕಪ್ ಯಾರಿಗೆ?

    ಇಂದು ಚೆನ್ನೈನಲ್ಲಿ ರೈಡರ್ಸ್ vs ರೈಸರ್ಸ್ ಫೈನಲ್ ಹಣಾಹಣಿ – ಈ ಸಲ ಕಪ್ ಯಾರಿಗೆ?

    ಚೆನ್ನೈ: ಐಪಿಎಲ್ 2024ರ ಫೈನಲ್ ಪಂದ್ಯಕ್ಕೆ ಚೆನ್ನೈನ (Chennai) ಚೆಪಾಕ್ ಮೈದಾನ (Chepauk Stadium) ಸಜ್ಜಾಗಿದ್ದು, ಈ ಬಾರಿ ಕಿರೀಟ ಯಾರ ಮುಡಿಗೇರಲಿದೆ ಎಂಬ ಕುತೂಹಲಕ್ಕೆ ಇಂದು ತೆರೆಬೀಳಲಿದೆ. 17ನೇ ಆವೃತ್ತಿಯ ಪ್ರಶಸ್ತಿ ತಮ್ಮದಾಗಿಸಿಕೊಳ್ಳಲು ಇಂದು ಕೋಲ್ಕತ್ತಾ ನೈಟ್ ರೈಡರ್ಸ್‌ (KKR) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ಮಧ್ಯೆ ರೋಚಕ ಕಾದಾಟ ನಡೆಯಲಿದೆ.

    ಐಪಿಎಲ್ 2024ರ (IPL 2024) ಲೀಗ್ ಹಂತದ ಅಗ್ರ ಎರಡು ತಂಡಗಳಾಗಿರುವ ಕೆಕೆಆರ್ ಮತ್ತು ಎಸ್‌ಆರ್‌ಹೆಚ್, ಮತ್ತೊಮ್ಮೆ ರನ್ ಮಳೆ ಹರಿಸಲು ಸಜ್ಜಾಗಿವೆ. ಆದರೆ, ಚೆನ್ನೈನ ನಿಧಾನ ಗತಿಯ ಪಿಚ್ ಉಭಯ ತಂಡಗಳ ಸ್ಫೋಟಕ ಆಟಕ್ಕೆ ಹೇಗೆ ವರ್ತಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: USAಗೆ ಹಾರಿದ ಟೀಂ ಇಂಡಿಯಾ ಮೊದಲ ಬ್ಯಾಚ್‌ – ವಿಶ್ವಕಪ್‌ ಗೆದ್ದುಬರುವಂತೆ ಕೋಟ್ಯಂತರ ಅಭಿಮಾನಿಗಳ ಹಾರೈಕೆ!

    ಅಹಮದಾಬಾದ್‌ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ತಂಡದ ವಿರುದ್ಧ ಗೆದ್ದ ಕೆಕೆಆರ್, ನೇರವಾಗಿ ಫೈನಲ್ ಪ್ರವೇಶಿಸಿತು. ಇದೇ ವೇಳೆ ಕೆಕೆಆರ್ ವಿರುದ್ಧ ಸೋತ ಸನ್‌ರೈಸರ್ಸ್, ಆ ಬಳಿಕ ಎರಡನೇ ಕ್ವಾಲಿಫೈಯರ್ ಕದನದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್‌ಗಳಿಂದ ಗೆದ್ದು ಮತ್ತೆ ಕೆಕೆಆರ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಶುಕ್ರವಾರವಷ್ಟೇ ಚೆಪಾಕ್ ಮೈದಾನದಲ್ಲಿ ರಾಜಸ್ಥಾನವನ್ನು ಸೋಲಿಸಿದ ಹೈದರಾಬಾದ್‌ಗೆ ಈ ಪಿಚ್ ಹೇಗೆ ವರ್ತಿಸುತ್ತದೆ ಎಂಬುದರ ಅರಿವಾಗಿದೆ. ಎರಡೂ ತಂಡಗಳ ಬ್ಯಾಟಿಂಗ್, ಬೌಲಿಂಗ್ ವಿಭಾಗ ಬಲಿಷ್ಟವಾಗಿದೆ. ಇದನ್ನೂ ಓದಿ: Malaysia Masters: ಜಿದ್ದಾ ಜಿದ್ದಿ ಕಣದಲ್ಲಿ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟ ಸಿಂಧು!

    ಫೈನಲ್ ಪಂದ್ಯಕ್ಕೂ ಮುನ್ನ ಅದ್ಧೂರಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ನಟ-ನಟಿಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ: IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಕೆಕೆಆರ್ ತಂಡ 14 ಪಂದ್ಯಗಳಲ್ಲಿ 9 ಪಂದ್ಯವನ್ನು ಗೆದ್ದು, 3 ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಇನ್ನೂ 2 ಪಂದ್ಯ ಮಳೆಗೆ ಬಲಿಯಾಗಿದೆ. ಒಟ್ಟು 20 ಅಂಕಗಳನ್ನು ಗಳಿಸಿ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಎಸ್‌ಆರ್‌ಹೆಚ್ ತಂಡ 14 ಪಂದ್ಯಗಳಲ್ಲಿ 8 ಪಂದ್ಯ ಗೆದ್ದು, 5 ಪಂದ್ಯದಲ್ಲಿ ಸೋಲುಂಡಿದೆ. ಒಟ್ಟು 17 ಅಂಕಗಳನ್ನು ಗಳಿಸಿರುವ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದೆ. ಇದನ್ನೂ ಓದಿ: Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

  • IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಚೆನ್ನೈ: ಸನ್‌ ರೈಸರ್ಸ್‌ ಹೈದರಾಬಾದ್‌ ಹಾಗೂ ಕೆಕೆಆರ್‌ ನಡುವಿನ ಐಪಿಎಲ್‌ ಫೈನಲ್‌ (IPL Final) ಪಂದ್ಯವು ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಸೂಪರ್‌ ಸಂಡೇ (ಮೇ 26) ನಡೆಯಲಿದೆ. ಅಂದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಆದ್ರೆ ಫೈನಲ್‌ ಪಂದ್ಯಕ್ಕೆ ಇದೀಗ ʻರೆಮಲ್‌ʼ ಚಂಡಮಾರುತದ (Cyclone Remal) ಆತಂಕ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರಿತ್ಯದಿಂದ ತೀವ್ರ ಚಂಡಮಾರುತ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

    ಫೈನಲ್‌ ಪಂದ್ಯವು ಮಳೆಗೆ ಬಲಿಯಾದರೆ ವಿಜೇತರು ಯಾರಾಗ್ತಾರೆ? ನಿಯಮಗಳು ಹೇಗೆ ಅನ್ವಯವಾಗುತ್ತದೆ ಅನ್ನೋ ಬಗ್ಗೆ ತಿಳಿಯುವ ಕುತೂಹಲ ನಿಮಿಗಿದ್ದರೆ ಮುಂದೆ ಓದಿ..

    ಭಾನುವಾರ ಚೆನ್ನೈ ಹವಾಮಾನ ಹೇಗಿರಲಿದೆ?
    ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ತಮಿಳುನಾಡಿನ ಚೆನ್ನೈನಲ್ಲಿ (Chennai weather) ಭಾನುವಾರ ಬಿಸಿಲು ಹಾಗೂ ಮೋಡ ಮುಸುಕಿದ ವಾತಾವರಣ ಇರಲಿದೆ. 20% ಮಳೆ ಸಾಂದ್ರತೆಯಿರಲಿದ್ದು, 56% ತೇವಾಂಶ ಇರಲಿದೆ. ಗಂಟೆಗೆ 23 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: 2024ರ ಐಪಿಎಲ್‌ಗೆ ವಿದಾಯ; ಅಭಿಮಾನಿಗಳೊಂದಿಗೆ ಸಿಹಿ-ಕಹಿ ನೆನಪು ಹಂಚಿಕೊಂಡ ಆರ್‌ಸಿಬಿ!

    ಮಳೆ ಅಡ್ಡಿಯಾದ್ರೆ ಮೀಸಲು ದಿನ ಇದೆಯೇ?
    ಲೀಗ್‌ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನ ಇರಲಿಲ್ಲ. ಫೈನಲ್​ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ಲೂಯಿಸ್‌ (DSL) ನಿಯಮದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ. ಕಳೆದ ವರ್ಷ ಏಕದಿನ ಏಷ್ಯಾಕಪ್‌ (ODI Asia Cup) ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈ ನಿಯಮವನ್ನು ಅನ್ವಯಿಸಲಾಗಿತ್ತು. ಇದನ್ನೂ ಓದಿ: ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ

    ಮೀಸಲು ದಿನಕ್ಕೂ ಮಳೆ ಬಂದರೆ ಕಥೆ ಏನು?
    ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾಗಿ ಮೀಸಲು ದಿನಕ್ಕೂ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವುಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಪಡೆದ ರನ್‌ರೇಟ್‌, ಅಂಕಗಳ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತದೆ. ಒಂದು ವೇಳೆ ಪಾಯಿಂಟ್ಸ್‌ ಪಟ್ಟಿಯಲ್ಲಿ ವಿಜೇತರನ್ನ ನಿರ್ಧರಿಸುವುದಾದರೆ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವೇ ಚಾಂಪಿಯನ್‌ ಆಗಲಿದೆ, ಸನ್‌ ರೈಸರ್ಸ್‌ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಲಿದೆ. ಏಕೆಂದರೆ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ 20 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ 17 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.