Tag: ಎಸ್ಕಾರ್ಟ್‌

  • ಹತ್ಯೆ ಸಂಚು ಆರೋಪ ಬೆನ್ನಲ್ಲೇ ಖಾಕಿ ಅಲರ್ಟ್- ಸಿದ್ದರಾಮಯ್ಯಗೆ SPಯಿಂದ ಫುಲ್ ಎಸ್ಕಾರ್ಟ್

    ಹತ್ಯೆ ಸಂಚು ಆರೋಪ ಬೆನ್ನಲ್ಲೇ ಖಾಕಿ ಅಲರ್ಟ್- ಸಿದ್ದರಾಮಯ್ಯಗೆ SPಯಿಂದ ಫುಲ್ ಎಸ್ಕಾರ್ಟ್

    ಬೆಂಗಳೂರು/ಹಾಸನ: ಸಾವರ್ಕರ್ ವಿರೋಧಿ ಹೇಳಿಕೆ ನೀಡುತ್ತಿರುವ ಕಾರಣ ಮಾಜಿ ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಫುಲ್ ಅಲರ್ಟ್ ಆಗಿದೆ.

    ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ ನಂತರವೂ ಮೂಡಿಗೆರೆಯಲ್ಲಿ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕೋ ಪ್ರಯತ್ನ ನಡೆದಿತ್ತು. ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ, ಹಲವರನ್ನು ವಶಕ್ಕೆ ಪಡೆದಿದ್ರು. ಮೂಡಿಗೆರೆಯಿಂದ ಹಾಸನ ಮಾರ್ಗವಾಗಿ ಬೆಂಗಳೂರು ಕಡೆ ಹೊರಟ ಸಿದ್ದರಾಮಯ್ಯಗೆ ಖುದ್ದು ಹಾಸನ ಎಸ್‍ಪಿ ಎಸ್ಕಾರ್ಟ್ ನೀಡಿದ್ರು.

    ಹಾಸನ ಗಡಿ ದಾಟುವವರೆಗೂ ಸಿದ್ದರಾಮಯ್ಯ ವಾಹನದ ಹಿಂದೆ ಮುಂದೆಯೇ ಇದ್ರು. ಮಾರ್ಗದುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯಗೆ ಜೈಕಾರ ಹಾಕಿದ್ದು ಕಂಡುಬಂತು. ಹಾಸನದ ಹೊರವಲಯದಲ್ಲಿ ಊಟಕ್ಕೆ ತೆರಳಿದ ಸಂದರ್ಭದಲ್ಲೂ ಅಭಿಮಾನಿಗಳು ಸಿದ್ದರಾಮಯ್ಯಗೆ ಜೈ ಅಂದ್ರು. ಇದನ್ನೂ ಓದಿ: ಧರ್ಮ ಒಡೆಯುವುದು ನನ್ನ ಉದ್ದೇಶವಲ್ಲ, ಕೆಲವರು ನನ್ನನ್ನ ದಾರಿ ತಪ್ಪಿಸಿದ್ರು: ಸಿದ್ದರಾಮಯ್ಯ

    ಈ ಮಧ್ಯೆ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ತಮ್ಮ ವಿರುದ್ಧದ ಪ್ರತಿಭಟನೆಗಳೆಲ್ಲಾ ಸರ್ಕಾರಿ ಪ್ರಾಯೋಜಿತ ಎಂಬ ಮಾತನ್ನು ಮೂರನೇ ಬಾರಿಗೆ ಪುನರುಚ್ಚರಿಸಿದ್ರು. ದಾವಣಗೆರೆ ಸಮಾವೇಶದ ಬಳಿಕ ಬಿಜೆಪಿಗೆ ಸೋಲಿನ ಭಯ ಆವರಿಸಿದೆ. ಅದಕ್ಕಾಗಿಯೇ ಅವರು ಹತಾಶರಾಗಿ ಹೀಗೆಲ್ಲಾ ಮಾಡಿಸ್ತಾ ಇದ್ದಾರೆ ಎಂದು ದೂರಿದ್ರು. ಕಪ್ಪು ಬಾವುಟ ತೋಸೋದು. ಧೀರರ ವೀರರ ಲಕ್ಷಣನಾ ಎಂದು ಪ್ರಶ್ನಿಸಿದ್ರು.

    ಕೊಡಗು, ಚಿಕ್ಕಮಗಳೂರು ಮಳೆ ಹಾನಿ ಸಂತ್ರಸ್ತರಿಗೆ ಸರ್ಕಾರದಿಂದ ಚಿಕ್ಕಾಸು ಕೂಡ ನೆರವು ದೊರೆತಿಲ್ಲ. ಮಂತ್ರಿಗಳು ಪರಿಹಾರ ಕೊಟ್ಟಿದ್ದೀವಿ ಅಂತಾರೆ. ಆದ್ರೆ ಯಾರಿಗೂ ತಲುಪಿಲ್ಲ. ರೈತರ ಪಾಡೇನು ಆಗಬೇಕು ಎಂದು ಪ್ರಶ್ನೆ ಮಾಡಿದ್ರು. ಅಸಲಿಗೆ ರಾಜ್ಯದಲ್ಲಿ ಸರ್ಕಾರ ಇಲ್ಲ.. ಗುಪ್ತ ಚರ ಇಲಾಖೆ ಇಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಮಹಾತ್ಮ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ? : ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹೇಮಲತಾಗೆ ಪೊಲೀಸ್ ಎಸ್ಕಾರ್ಟ್

    ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹೇಮಲತಾಗೆ ಪೊಲೀಸ್ ಎಸ್ಕಾರ್ಟ್

    ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಬಿಜೆಪಿ ಅಭ್ಯರ್ಥಿ ಹೇಮಲತಾಗೆ ವಿಧಾನಸೌಧದವರೆಗೂ ಇನ್ನೋವಾ ಕಾರಿನಲ್ಲಿ ಬರಲು ಎಸ್ಕಾರ್ಟ್ ವಾಹನ ಸವಲತ್ತು ಕಲ್ಪಿಸಿದ್ದು, ಇದೀಗ ಭಾರೀ ಟೀಕೆಗೆ ಕಾರಣವಾಗಿದೆ.

    ಬಿಜೆಪಿ ನಾಯಕರೇ ಜಕ್ಕೂರು ಏರ್‌ಫೋರ್ಸ್‌ನಿಂದ ಎಸ್ಕಾರ್ಟ್ ಕೊಟ್ಟು ಇನ್ನೋವಾ ಕಾರಿನಲ್ಲಿ ವಿಧಾನಸೌಧಕ್ಕೆ ಕರೆಸಿದ್ದಾರೆ. ಸೈರನ್ ಹೊಡೆದುಕೊಂಡು ವೇಗವಾಗಿ ವಿಧಾನಸೌಧಕ್ಕೆ ಬಂದು ಹೇಮಲತಾ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಎಸ್ಕಾರ್ಟ್ ಸೌಲಭ್ಯ ಕಲ್ಪಿಸಿದ ಬಿಜೆಪಿ ನಾಯಕರು ನಾಮಪತ್ರ ಸಲ್ಲಿಕೆಗೆ ವಿಳಂಬವಾಗುತ್ತಿತ್ತು. ಹಾಗಾಗಿ ಎಸ್ಕಾರ್ಟ್ ನೀಡಲಾಯಿತು ಎಂದು ಕಾರಣ ನೀಡಿದ್ದಾರೆ. ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆ- ಕೊಪ್ಪಳದ ಬಿಜೆಪಿ ನಾಯಕಿಗೆ ಬಂಪರ್‌

    ಈ ಹಿಂದೆ ಹಾಲಿ ಸಚಿವೆ ಶಶಿಕಲಾ ಜೊಲ್ಲೆ ಅವರ ಪ್ರಮಾಣ ವಚನಕ್ಕೆ ಸಿಗ್ನಲ್ ಫ್ರೀ ಸೌಕರ್ಯ ಕಲ್ಪಿಸಿಕೊಟ್ಟಿದ್ದ ಬಿಜೆಪಿ, ಇದೀಗ ಎಂಎಲ್‌ಸಿ ಚುನಾವಣೆ ನಾಮಪತ್ರ ಸಲ್ಲಿಸೋದಕ್ಕೇ ಹೇಮಲತಾಗೆ ಎಸ್ಕಾರ್ಟ್ ವ್ಯವಸ್ಥೆ ಮಾಡಿಕೊಟ್ಟಿದೆ ಎಷ್ಟು ಸರಿ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ಪರಿಷತ್‌ ಪಟ್ಟಿ ಪ್ರಕಟ – ಲಕ್ಷ್ಮಣ ಸವದಿಗೆ ಟಿಕೆಟ್

    ಎಸ್ಕಾರ್ಟ್ ಒದಗಿಸಲು ಗೃಹ ಸಚಿವರೇ ಪೊಲೀಸರಿಗೆ ಸೂಚಿಸಿದ್ರಾ? ಯಾರ ಆದೇಶ ಪಾಲನೆ ಮಾಡಿದ್ರು ಪೊಲೀಸರು? ಶಿಸ್ತಿನ ಪಕ್ಷ ಬಿಜೆಪಿಯದ್ದು ಅಧಿಕಾರ ದುರ್ಬಳಕೆ ಅಲ್ಲವಾ ಎಂಬ ಪ್ರಶ್ನೆಗಳನ್ನು ಜನರು ಪ್ರಶ್ನಿಸುತ್ತಿದ್ದಾರೆ.