Tag: ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ

  • ಅಂತರ್ಜಾತಿ ವಿವಾಹ- ಸಾಮಾಜಿಕ ಬಹಿಷ್ಕಾರ ಪ್ರಕರಣ: 12 ಜನರ ಬಂಧನ

    ಅಂತರ್ಜಾತಿ ವಿವಾಹ- ಸಾಮಾಜಿಕ ಬಹಿಷ್ಕಾರ ಪ್ರಕರಣ: 12 ಜನರ ಬಂಧನ

    ಚಾಮರಾಜನಗರ: ಅಂತರ್ಜಾತಿ ವಿವಾಹವಾದ (Inter Caste Marriage) ಜೋಡಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ (Social exclusion) ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ (Kollegala) ಕುಣಗಳ್ಳಿಯ (Kunagalli) 12 ಮಂದಿಯನ್ನು ಬಂಧಿಸಲಾಗಿದೆ.

    ಗೋವಿಂದರಾಜು ಎಂಬ ಯುವಕ ದಲಿತ ಯುವತಿಯನ್ನು ಮದುವೆಯಾಗಿದ್ದ. ಇದನ್ನು ವಿರೋಧಿಸಿ ಉಪ್ಪಾರ (Uppara) ಸಮುದಾಯದ ಮುಖಂಡರು ಗೋವಿಂದರಾಜು ಕುಟುಂಬಕ್ಕೆ 6 ಲಕ್ಷ ರೂ. ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಇದನ್ನೂ ಓದಿ: ಬಿಸಿ ಟೀ ತಂದುಕೊಡದ್ದಕ್ಕೆ ಗದರಿದ ಅತ್ತೆ- ರಾಡ್‍ನಿಂದ ಹೊಡೆದು ಕೊಲೆಗೈದ ಸೊಸೆ

    KILLING CRIME

    ಘಟನೆಗೆ ಸಂಬಂಧಿಸಿದಂತೆ ಅಗರ-ಮಾಂಬಳ್ಳಿ (Agara-Mamballi) ಪೊಲೀಸ್ ಠಾಣೆಯಲ್ಲಿ 15 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 1860ರ ಅಡಿ ಪ್ರಕರಣ ದಾಖಲಾಗಿತ್ತು. ಮಹಿಳೆ ಸೇರಿದಂತೆ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ.

    ನೊಂದ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ 1 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇದನ್ನೂ ಓದಿ: ಸುಳ್ಳು ವಯಸ್ಸಿನ ದಾಖಲೆ ಆರೋಪ ಶಾಸಕ ಕೆ.ಜಿ ಬೋಪಯ್ಯ ವಿರುದ್ಧ ದೂರು

  • ವಸತಿ ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಪ್ರಾಂಶುಪಾಲರು ಸೇರಿ ಐವರು ಅರೆಸ್ಟ್

    ವಸತಿ ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಪ್ರಾಂಶುಪಾಲರು ಸೇರಿ ಐವರು ಅರೆಸ್ಟ್

    ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಯ (Residential School) ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ (Sexual Abuse) ನಡೆಸಿರುವ ಆರೋಪದಡಿ ಐವರನ್ನು ಬಂಧಿಸಲಾಗಿದೆ.

    ಇದೇ ಮಾರ್ಚ್ 7ರಂದು ಘಟನೆ ನಡೆದಿದ್ದು, ಮರುದಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಮೋದಿ ರೋಡ್ ಶೋ – ಭಾನುವಾರ ಏನೇನು ಕಾರ್ಯಕ್ರಮ?

    ಮಾ.7 ರಂದು ಸದರಿ ಹಾಸ್ಟೆಲ್‌ನಲ್ಲಿ ಸೌಲಭ್ಯ ಇಲ್ಲ ಎಂದು ಮಕ್ಕಳು ದಿಢೀರ್ ಪ್ರತಿಭಟನೆಗಿಳಿದಿದ್ದರು. ಈ ವೇಳೆ ಕೆಲವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಸಂಬಂಧ ಪ್ರಾಂಶುಪಾಲರಿಗೆ, ಶಿಕ್ಷಕರಿಗೆ ದೂರು ನೀಡಿದರೂ ಪ್ರಯೋಜನ ಆಗಿಲ್ಲ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದರು. ಇದನ್ನೂ ಓದಿ: ಹೋಳಿ ಹಬ್ಬಕ್ಕೆ ಕೋಳಿ ಸಾರು ಮಾಡಲ್ಲ ಅಂದಿದ್ದಕ್ಕೆ ಹೆಂಡತಿ ಕೈಮುರಿದ ಪತಿರಾಯ

    ಇದಾದ ಬಳಿಕ ವಿವಿಧ ಇಲಾಖೆಗಳನ್ನೊಳಗೊಂಡ ಅಧಿಕಾರಿಗಳ ತಂಡ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ವೇಳೆ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದಾಗ 10ನೇ ತರಗತಿಯ ಮೂವರು, 7ನೇ ತರಗತಿಯ ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

    crime 1

    ಹಾಸ್ಟೆಲ್ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವವರ ನಿರ್ಲಕ್ಷ್ಯವೂ ಇದಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ದೂರಿನ ಮೇರೆಗೆ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು, ಒಬ್ಬ ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿ ಸೇರಿ ಐವರನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಳಿಕ ಬಂಧಿತ ಆರೋಪಿಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಐವರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ (SC ST Act) ಹಾಗೂ ಪೋಕ್ಸೋ ಕಾಯ್ದೆ (POCSO Act) ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

  • SC-ST ಕಾಯ್ದೆಯಡಿ ಅಮಾಯಕರು ಸುಳ್ಳು ಪ್ರಕರಣಗಳಿಗೆ ಬಲಿಯಾಗ್ತಿದ್ದಾರೆ : ಕೇರಳ ಹೈಕೋರ್ಟ್

    SC-ST ಕಾಯ್ದೆಯಡಿ ಅಮಾಯಕರು ಸುಳ್ಳು ಪ್ರಕರಣಗಳಿಗೆ ಬಲಿಯಾಗ್ತಿದ್ದಾರೆ : ಕೇರಳ ಹೈಕೋರ್ಟ್

    ತಿರುನಂತರಪುರಂ: ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ (SC-ST (POA) Act) ಅಡಿಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಪರಿಗಣಿಸುವಾಗ ಎಚ್ಚರಿಕೆಯಿಂದ ವಿಶ್ಲೇಷಣೆ ಮಾಡಬೇಕು ಎಂದು ಕೇರಳ ಹೈಕೋರ್ಟ್ (Kerala High Court) ಸೂಚಿಸಿದೆ.

    ಅನೇಕ ಅಮಾಯಕರು ಸುಳ್ಳು ಪ್ರಕರಣಗಳಿಗೆ ಬಲಿಯಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಆದ್ದರಿಂದ ಎಸ್ಸಿ-ಎಸ್ಟಿ ಕಾಯ್ದೆ ಅಡಿಯ ಪ್ರಕರಣಗಳು ಬಂದಾಗ ನ್ಯಾಯಾಲಯಗಳು (Court) ಹೆಚ್ಚಿನ ವಿವರಗಳಿಗೆ ಗಮನ ಕೊಡಬೇಕು ಎಂದು ನ್ಯಾಯಮೂರ್ತಿ ಎ. ಬದ್ರುದ್ದೀನ್ ಅವರಿದ್ದ ಏಕಸದಸ್ಯ ಪೀಠ ಹೇಳಿದೆ. ಇದನ್ನೂ ಓದಿ: ಝಿಕಾ ಆತಂಕ – ಕಾಂಡೋಮ್ ಜಾಗೃತಿ ಬಳಿಕ ಗರ್ಭಿಣಿಯರ ಮೇಲೆ ತೀವ್ರ ನಿಗಾ

    ಎಸ್ಸಿ-ಎಸ್ಟಿ ಕಾಯ್ದೆ (ದೌರ್ಜನ್ಯ ತಡೆ) ಅಡಿಯಲ್ಲಿ ಅನೇಕ ಮುಗ್ಧರು ಸುಳ್ಳು ಪ್ರಕರಣಗಳಿಗೆ ಬಲಿಯಾಗುತ್ತಿರುವುದು ಆಘಾತಕಾರಿ ಘಟನೆ. ಆದ್ದರಿಂದ ನ್ಯಾಯಾಲಯಗಳು ಪ್ರಕರಣಗಳನ್ನು ಮೂಲದಿಂದ ವಿಶ್ಲೇಷಣೆ ಮಾಡುವ ಅಗತ್ಯವಿದೆ. ಪ್ರಕರಣದ ಹುಟ್ಟು, ಅಪರಾಧದ ನೋಂದಣಿಯಾಗುವುದಕ್ಕೂ ಮುಂಚಿನ ಪೂರ್ವಕಥೆಗಳು, ದೂರುದಾರ ಮತ್ತು ಆರೋಪಿ (Accused) ನಡುವಿನ ದ್ವೇಷದ ಅಸ್ತಿತ್ವ ಈ ಎಲ್ಲ ಅಂಶಗಳನ್ನು ಉಲ್ಲೇಖಿಸಬೇಕು. ಜೊತೆಗೆ ಜಾಮೀನು ಅರ್ಜಿ ಪರಿಗಣಿಸುವಾಗ ಹಿಂದಿನ ವಿವಾದಗಳು, ಪ್ರಕರಣಗಳು ಹಾಗೂ ದೂರುಗಳನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

    ವಿಶೇಷ ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ಸಮಯದಲ್ಲಿ ಕೋರ್ಟ್ ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ತನ್ನ ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ

    court order law

    ಏನಿದು ಪ್ರಕರಣ?
    ಬ್ಯಾಂಕ್‌ಗೆ ಹೋದಾಗ ಅಲ್ಲಿದ್ದ ಮಹಿಳಾ ಉದ್ಯೋಗಿ ತನ್ನನ್ನು ಜಾತಿ ಹೆಸರಿನಿಂದ ನಿಂದಿಸಿದ್ದಾಳೆ ಎಂದು ಆರೋಪಿಸಿ ಎಸ್ಸಿ-ಎಸ್ಟಿ ಕಾಯ್ದೆ (ದೌರ್ಜನ್ಯ ತಡೆ) ಅಡಿ ಕೇಸ್ ವ್ಯಕ್ತಿಯೊಬ್ಬರು ಪ್ರಕರಣ ದಾಖಲಿಸಿದ್ದರು. ಆದರೆ ದೂರುದಾರ ವ್ಯಕ್ತಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗಿರಲಿಲ್ಲ. ಮಹಿಳೆಯೊಂದಿಗೆ ಕೆಲಸ ಮಾಡುತ್ತಿದ್ದವರಲ್ಲಿ ಒಬ್ಬರಾಗಿದ್ದರು. ಪದೇ-ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದರಿಂದ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದರು. ಈ ಲೈಂಗಿಕ ಕಿರುಕುಳದ ದೂರನ್ನು ಹಿಂತೆಗೆದುಕೊಳ್ಳುವಂತೆ ಬೆದರಿಸಲು ಮಾಡಿದ ಪ್ರಯತ್ನಗಳಲ್ಲಿ ಇದೂ ಒಂದಾಗಿದೆ ಎಂದು ಮಹಿಳಾ ಪರ ವಕೀಲರು ವಾದಿಸಿದ್ದರು.

    Live Tv
    [brid partner=56869869 player=32851 video=960834 autoplay=true]