Tag: ಎಸ್ ಟಿ ಸೋಮಶೇಖರ್

  • ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿದ – ಎಸ್.ಟಿ ಸೋಮಶೇಖರ್

    ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿದ – ಎಸ್.ಟಿ ಸೋಮಶೇಖರ್

    ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ಕೆ.ಆರ್.ನಗರದ ವಿಧಾನ ಸಭಾ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕೊರೊನಾ ಸೋಂಕಿತರನ್ನು ಮಾತನಾಡಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

    ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಶೇಖರ್, ಬೆಂಗಳೂರು ಬಿಟ್ಟರೆ ಅತೀ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿರುವುದೇ ಮೈಸೂರು ಜಿಲ್ಲೆಯಲ್ಲಿ. ಹೀಗಾಗಿ ಕೆ.ಆರ್.ನಗರದ ವೈದ್ಯಾಧಿಕಾರಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿ ಹಾಗೂ ಕಡ್ಡಾಯವಾಗಿ ಸ್ವಾಬ್ ಟೆಸ್ಟ್ ಮಾಡಿಸಿ. ಕೆ.ಆರ್.ನಗರಕ್ಕೂ ಅನಿರೀಕ್ಷಿತ ಭೇಟಿ ನೀಡುವೆ. ಹೀಗಾಗಿ ನೀವೂ ಸಹ ಮನೆ ಮನೆ ಸರ್ವೆಮಾಡಿ ಮೇ31 ರೊಳಗಾಗಿ ಮುಗಿಸಬೇಕು. ಆರೋಗ್ಯ ಕೇಂದ್ರದಲ್ಲಿ ಯಾರಿಗೂ ಯಾವ ಸಮಸ್ಯೆಗಳು ಉಂಟಾಗದಂತೆ ನೋಡಿಕೊಂಡಿರುವ ಸಾ.ರಾ.ಮಹೇಶ್ ಅವರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.

    ಕೋವಿಡ್ ಸಂಕಷ್ಟದ ಸಮಯದಲ್ಲಿ ಆಸ್ಪತ್ರೆಗಳಿಗೆ ಸಹಾಯ ಮಾಡಿದವರ ಹೆಸರನ್ನು ಬರೆದುಕೊಳ್ಳಿ ಅಂತಹವರಿಗೆ ಜಿಲ್ಲಾಡಳಿದಿಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಅವರಿಗೆ ಪ್ರಶಸ್ತಿ ಪತ್ರವನ್ನೂ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

     

    ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕಳೆದ ಒಂದು ತಿಂಗಳಲ್ಲಿ ಎರೆಡೆರಡು ಬಾರಿ ಎಲ್ಲಾ ತಾಲ್ಲೂಕು ಆರೋಗ್ಯ ಕೇಂದ್ರಗಳಿಗೆ ಭೇಟಿ ಮಾಡಿ ಸಕ್ರಿಯವಾಗಿ ಇಲ್ಲಿನ ಪರಿಸ್ಥಿತಿಯನ್ನು ಹಾಗೂ ಇಲ್ಲಿನ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ನಗರದಲ್ಲಿ ಹೆಚ್ಚಾಗುತ್ತಿದ್ದ ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ವ್ಯವಸ್ಥಿತವಾದಂತಹ ಪ್ರಯತ್ನದಿಂದಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯು ಹೆಚ್ಚಳವಾಗುತ್ತಿದ್ದು, ಹಲವಾರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶಾಸಕ ಸಾ.ರಾ.ಮಹೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ಮಂಜುಳಾ, ತಾಲ್ಲೂಕು ಆರೋಗ್ಯಾಧಿಕಾರಿ ಮಹೇಂದ್ರಪ್ಪ, ಎ.ಹೇಮಂತ್ ಕುಮಾರ್ ಗೌಡ ಸೇರಿದಂತೆ ಇತರರು ಹಾಜರಿದ್ದರು.

  • ಮನೆ ಮನೆ ಸರ್ವೆಗೆ ಮೇ 31ರ ವರೆಗೆ ಗಡುವು – ಎಸ್.ಟಿ.ಸೋಮಶೇಖರ್

    ಮನೆ ಮನೆ ಸರ್ವೆಗೆ ಮೇ 31ರ ವರೆಗೆ ಗಡುವು – ಎಸ್.ಟಿ.ಸೋಮಶೇಖರ್

    – ಯಾವ ಸಂದರ್ಭದಲ್ಲಾದರೂ ಭೇಟಿ ನೀಡುವೆ 
    – ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ

    ಮೈಸೂರು: ಪಿರಿಯಾಪಟ್ಟಣದ 4 ಹೋಬಳಿಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಆ 4 ಹೋಬಳಿಗಳು ಕೊರೊನಾ ಮುಕ್ತ ಹಳ್ಳಿಗಳಾಗಬೇಕು. ಮೇ 31ರೊಳಗಾಗಿ ಮನೆ ಮನೆ ಸರ್ವೆಯನ್ನು ಮಾಡಿ ಮುಗಿಸಬೇಕು. ಜೂ 1 ರಿಂದ ಯಾವಾಗಲಾದರೂ ಆ ಹೋಬಳಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಲಿರುವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ರವರು ಹೇಳಿದ್ದಾರೆ.

    ಭಾನುವಾರ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರ, ಹುಣಸೂರು ವಿಧಾನ ಸಭಾ ಕ್ಷೇತ್ರದ ಆರೋಗ್ಯ ಕೇಂದ್ರಗಳಿಗೆ ಹಾಗೂ ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬೈಲುಕುಪ್ಪೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಅಲ್ಲಿನ ಜನರಿಂದ ಮತ್ತಷ್ಟು ಜನರಿಗೆ ಹರಡುವ ಸಂಭವವಿರುವುದರಿಂದ ಅದನ್ನು ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಬೈಲುಕುಪ್ಪೆಗೆ ಹೊರಗಡೆಯಿಂದ ಯಾರು ಬರಬಾರದು. ಇಲ್ಲಿಂದ ಹೊರಗಡೆಗೆ ಯಾರು ಹೋಗಬಾರದು. ಅವರಿಗೆ ಎಲ್ಲಾ ವಸ್ತುಗಳು ಅಲ್ಲಿಯೇ ಸಿಗುವಂತೆ ಕಲ್ಪಿಸಿ ಎಂದು ಸೂಚಿಸಿದರು.

    ಮನೆಮನೆ ಸರ್ವೆಯನ್ನು ನಡೆಸಲು ಪಿಡಿಒಗಳಿಗೆ ಒಂದು ಗುರಿಯನ್ನು ನಿಗದಿಪಡಿಸಿ. ಅವರೂ ಸಹ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲಿಸಲಿ. ನಂಜನಗೂಡಿನ ಪಿಡಿಒಗಳಂತೆ ಕಾರ್ಯನಿರ್ವಹಿಸಲಿ ಎಂದರು.

    ವ್ಯಾಕ್ಸಿನೇಷನ್ ಹಾಗೂ ಔಷಧದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. 4 ಹೋಬಳಿಗಲ್ಲಿ ಶೇ.100ರಷ್ಟು ವ್ಯಾಕ್ಸಿನೇಷನ್ ಆಗಿರಬೇಕು. ಸಂಸದ ಪ್ರತಾಪ್ ಸಿಂಹ ಅವರು ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಮೇಲೆ ಔಷಧಿಗಾಗಲಿ, ಆಕ್ಸಿಜನ್ ಸಿಲಿಂಡರ್‌ಗಳಿಗಾಗಲಿ ಯಾವುದಕ್ಕೂ ಕೊರತೆ ಕಂಡು ಬಂದಿಲ್ಲ. ಇದರಿಂದ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

    ಮನೆ ಮನೆ ಸರ್ವೆಯನ್ನು ನಡೆಸಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರನ್ನು ಬಳಸಿಕೊಳ್ಳಿ. ಅವರಿದ್ದರೆ ಸರ್ವೆಯನ್ನು ಆದಷ್ಟು ಬೇಗ ಮುಗಿಸಬಹುದು. ಅವರಿಗಾಗಿ ಫೇಸ್ ಶೀಲ್ಡ್ ಸೇರಿದಂತೆ ಕಿಟ್ ಗಳನ್ನು ಒದಗಿಸಲಾಗುತ್ತದೆ ಎಂದು ನುಡಿದರು.

    ಕೋವಿಡ್ ರೋಗಿಗಳು ಇರುವ ಕೇಂದ್ರಗಳಿಗೆ ತೆರಳಿ ಅಲ್ಲಿನ ಕುಂದು ಕೊರತೆಗಳನ್ನು ಆಲಿಸಿದರು. ಅವರಿಗೆ ಆರೋಗ್ಯದಲ್ಲಾಗಲಿ, ಆಹಾರದಲ್ಲಾಗಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಿ ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು.

    ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಮಹದೇವ್, ಹೆಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯತಿಯ ಮುಖಕಾರ್ಯನಿರ್ವಾಣಾಧಿಕಾರಿ ಎ.ಎಂ.ಯೋಗೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ತಹಶಿಲ್ದಾರ್ ಗಳಾದ ಬಸವರಾಜು ಚಂದ್ರಮೌಳಿ, ತಾಲ್ಲೂಕು ವೈದ್ಯಾಧಿಕಾರಿ ಶರತ್ ಬಾಬು, ಮುಖ್ಯ ವೈದ್ಯಾದಿಕಾರಿ ಡಾ.ಜೆ.ಶ್ರೀನಿವಾಸ್, ಡಾ.ದೇವಿಕ ಸೇರಿದಂತೆ ಇತರರು ಹಾಜರಿದ್ದರು.

  • ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಹೋಗಬೇಕು- ಸಂಸದರ ಹೇಳಿಕೆ ಶೇ 100ರಷ್ಟು ಸರಿ ಇದೆ ಎಸ್.ಟಿ.ಸೋಮಶೇಖರ್

    ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಹೋಗಬೇಕು- ಸಂಸದರ ಹೇಳಿಕೆ ಶೇ 100ರಷ್ಟು ಸರಿ ಇದೆ ಎಸ್.ಟಿ.ಸೋಮಶೇಖರ್

    -ಕೋವಿಡ್ ಸಂತ್ರಸ್ತ ಮಕ್ಕಳಿಗೆ ಸುತ್ತೂರು ಮಠದಲ್ಲಿ ಉಚಿತ ಶಿಕ್ಷಣ, ಆಶ್ರಯ

    ಮೈಸೂರು: ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಭೇಟಿ ಮಾಡುವುದರಿಂದ ಅಲ್ಲಿನ ಸಮಸ್ಯೆ ತಿಳಿಯುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

    ಪೋಸ್ಟ್ ಕೋವಿಡ್ ಸೆಂಟರ್ ಸ್ಥಾಪಿಸುವ ಬಗ್ಗೆ ಸುತ್ತೂರು ಮಠದಲ್ಲಿ ಶ್ರೀಗಳ ಜೊತೆ ಸಭೆ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ.ಸೋಮಶೇಖರ್, ಜಿಲ್ಲಾಧಿಕಾರಿಗಳು, ಡಿ.ಎಚ್.ಒ. ಮುಂತಾದ ಅಧಿಕಾರಿಗಳು ಕೇವಲ ವೀಡಿಯೋ ಕಾನ್ಫರೆನ್ಸ್, ಸಭೆಗಳನ್ನು ಮಾಡಿದರೆ ಸಾಲದು, ಹಳ್ಳಿಗಳಿಗೆ ಹೋಗಬೇಕು ಎಂದು ಸಂಸದ ಪ್ರತಾಪ್ ಸಿಂಹ ಅವರು ಹೇಳಿಕೆ ನೀಡಿರುವ ಬಗ್ಗೆ ಪ್ರತ್ರಕರ್ತರು ಕೇಳಿದಾಗ, ಸಂಸದರು ಹೇಳಿರುವುದು ಶೇ. 100 ರಷ್ಟು ಸರಿ ಇದೆ ಜಿಲ್ಲಾಧಿಕಾರಿಯಾಗಲಿ, ಬೇರೆ ಯಾವ ಅಧಿಕಾರಿಗಳಾಗಲಿ ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿ, ಅಲ್ಲಿನ ಶಾಸಕರ ಜೊತೆ ಮಾತನಾಡಿದಾಗ ಅಲ್ಲಿನ ಸಮಸ್ಯೆ ತಿಳಿಯುತ್ತದೆ ಎಂದರು.

    ಕೋವಿಡ್ ಚಿಕಿತ್ಸೆ ಪಡೆದು ಹೊರಬಂದವರ ಮೇಲೆ ನಿಗಾ ವಹಿಸಲು ಪೋಸ್ಟ್ ಕೋವಿಡ್ ಸೆಂಟರ್ (ಸ್ಟೆಪ್ ಡೌನ್ ಸೆಂಟರ್) ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಸುತ್ತೂರು ಮಠದ ಶಾಲೆಗಳು, ಹಾಸ್ಟೆಲ್, ಸಮುದಾಯ ಭವನಗಳನ್ನು ಬಳಸಿಕೊಳ್ಳಲು ಸುತ್ತೂರು ಶ್ರೀಗಳು ಸಹಕಾರ ನೀಡಿದ್ದಾರೆ ಎಂದರು. ಕೋವಿಡ್ ಚಿಕಿತ್ಸೆ ಪಡೆದು ಹೊರಬಂದವರ ಮೇಲೆ ಇನ್ನೂ ಸ್ವಲ್ಪ ದಿನ ನಿಗಾವಹಿಸಬೇಕಾಗುತ್ತದೆ ಹಾಗೂ ಕೆಲವರ ಮನೆಯಲ್ಲಿ ಮಕ್ಕಳಿರುವುದರಿಂದ ಅವರನ್ನು ಪ್ರತ್ಯೇಕವಾಗಿ ಇರಿಸುವ ಸಲುವಾಗಿ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ತೆರೆಯಬೇಕಾಗುತ್ತದೆ ಎಂದು ಹೇಳಿದರು.

    ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟ ಪೋಷಕರ ಮಕ್ಕಳು ಶಿಕ್ಷಣದಿಂದ ವಚಿಂತವಾಗಬಾರದು ಹಾಗೂ ಅವರಿಗೆ ಅನಾಥಭಾವ ಮೂಡಬಾರದೆಂಬ ದೃಷ್ಟಿಯಿಂದ ಸುತ್ತೂರು ಸ್ವಾಮೀಜಿಯವರು ಅಂತಹ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸವನ್ನು ಉಚಿತವಾಗಿ ಒದಗಿಸುವುದಾಗಿ ಹೇಳಿದ್ದು, ಇದಕ್ಕಾಗಿ ಶ್ರೀಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮೈಸೂರು, ಚಾಮರಾಜನಗರ, ಕೊಳ್ಳೇಗಾಲ ಸೇರಿದಂತೆ ಇತರೆ ಕಡೆ ಇರುವ ಸುತ್ತೂರು ಮಠದ ಶಾಲೆಗಳನ್ನು ಹಾಗೂ ಹಾಸ್ಟೆಲ್ ಗಳನ್ನು ಬಳಸಿಕೊಳ್ಳಲು ಸೂಚಿಸಿದ್ದು, ಮಠದ ವತಿಯಿಂದ ಊಟದ ವ್ಯವಸ್ಥೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಲಿದ್ದಾರೆ ಎಂದರು.

    ಕೋವಿಡ್ ಪಾಸಿಟಿವ್ ಬಂದು ಗುಣವಾದ ನಂತರ ವಿಶ್ರಾಂತಿ ವ್ಯವಸ್ಥೆಗೆ ಜೆ.ಎಸ್.ಎಸ್ ಸಂಸ್ಥೆಯ ಎಲ್ಲಾ ವಿದ್ಯಾರ್ಥಿ ನಿಲಯಗಳು, ಸಮುದಾಯ ಭವನಗಳನ್ನು ಬಳಸಿಕೊಳ್ಳಲು ಸೂಚಿಸಿದ್ದಾರೆ. ಒಟ್ಟು ಆರು ಸಾವಿರ ಜನರಿಗೆ ವ್ಯವಸ್ಥೆ ಮಾಡ ಬಹುದು. ಇದಕ್ಕೆ ಊಟ ವಸತಿ ಎಲ್ಲಾ ವ್ಯವಸ್ಥೆ ಮಠದಿಂದಲೆ ಮಾಡಿಕೊಡುತ್ತಾರೆ. ಕೋವಿಡ್ ನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕಾಗಿಯೂ 6 ಲೋಡ್ ಸೌದೆಗಳನ್ನು ನೀಡಿದ್ದಾರೆ. ಹೀಗೆ ಸ್ವಾಮೀಜಿಯವರು ಸಣ್ಣಪುಟ್ಟ ವಿಷಯಗಳಿಗೂ ಸ್ಪಂದಿಸುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು.

    ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಜಂಗಲ್ ಲಾಡ್ಜಸ್ ಅಧ್ಯಕ್ಷ ಅಪ್ಪಣ್ಣ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಿ.ಬಿ.ನಟೇಶ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಹಾಜರಿದ್ದರು.

  • ಟಿ.ನರಸೀಪುರ ಕ್ಷೇತ್ರದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಎಸ್‍ಟಿಎಸ್ ಪರಿಶೀಲನೆ

    ಟಿ.ನರಸೀಪುರ ಕ್ಷೇತ್ರದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಎಸ್‍ಟಿಎಸ್ ಪರಿಶೀಲನೆ

    – ಔಷಧಿಗಳ ಕೊರತೆಯಾಗದಂತೆ ಎಚ್ಚರವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ

    ಮೈಸೂರು: ಟಿ.ನರಸೀಪುರ ವಿಧಾನ ಸಭಾ ಕ್ಷೇತ್ರದ ಮಲಿಯೂರು, ಬನ್ನೂರು, ಕೂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ವಿಸ್ತರಣೆಯಾಗಿದ್ದು, ಯಾವುದೇ ರೀತಿಯಲ್ಲೂ ಔಷಧಿಗಳು ರೋಗಿಗಳಿಗೆ ಕೊರತೆ ಉಂಟಾಗಬಾರದು. ಮೊದಲ ಡೋಸ್ ವ್ಯಾಕ್ಸಿನೇಷನ್ ಪಡೆದಿರುವವರು ನಿಗದಿತ ಅವಧಿಯಲ್ಲಿ 2ನೇ ಡೋಸ್ ಲಸಿಕೆಯನ್ನು ಪಡೆಯಬೇಕು. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಹರಡುತ್ತಿದ್ದು, ಈಗಿನಿಂದಲೇ ಇದರ ಬಗ್ಗೆ ಹೆಚ್ಚಿನ ಗಮನ ಕೊಡಿ. ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಮಾಡಿಸಿ. ಯಾರಿಗೆ ಆಸ್ಪತ್ರೆಯ ಅಗತ್ಯವಿದೆಯೋ ಅವರನ್ನು ಆಸ್ಪತ್ರೆಗೆ ಸೇರಿಸಿ ಎಂದರು.

    ಜಿಲ್ಲೆಯಲ್ಲಿ ಬೆಳಗ್ಗಿನಿಂದ ಸಂಜೆಯವರೆಗೂ ಕೋವಿಡ್ ಪರೀಕ್ಷೆ ಮಾಡಿಸಿ. ಜಿಲ್ಲೆಗೆ 47ಏಐ ಆಕ್ಸಿಜನ್ ಬರುತ್ತಿದ್ದು, ವ್ಯಾಕ್ಸಿನೇಷನ್ ಹಾಗೂ ಔಷಧಿಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಮಾರ್ಕೆಟ್ ಗಳಲ್ಲಿ ಹಾಗೂ ಬ್ಯಾಂಕ್‍ಗಳಲ್ಲಿ ಜನರು ಕೋವಿಡ್ ನಿಯಮಗಳನ್ನು ಪಾಲಿಸದೆ ಗುಂಪಾಗಿ ಸೇರುತ್ತಿರುವುದರಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಕೋವಿಡ್ ನಿಯಮಗಳನ್ನು ಪಾಲಿಸದೆ ಇರುವವರಿಗೆ ದಂಡ ವಿಧಿಸಬೇಕು ಎಂದು ಸೂಚನೆ ನೀಡಿದರು.

    ಶಾಸಕ ಅಶ್ವಿನ್ ಕುಮಾರ್ ಅವರು ಮಾತನಾಡಿ, ಕೋವಿಡ್ ಸಮಯದಲ್ಲಿ ಮನೆ ಮನೆಗೆ ತೆರಳಿ ಔಷಧಿ ಕಿಟ್ ಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಔಷಧಿಗಳನ್ನು ಕಳುಹಿಸಿಕೊಡುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಟಿ.ನರಸೀಪುರದ ತಹಶೀಲ್ದಾರ್ ನಾಗೇಶ್, ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್, ಡಾ.ವಿಜಯ್ ಕುಮಾರ್, ಡಾ.ರಶ್ಮಿ, ಡಾ.ಯೋಗೀಶ್ ಸೇರಿದಂತೆ ಇತರರು ಹಾಜರಿದ್ದರು.

  • ಸೋಮಶೇಖರ್ ಕಾರ್ಯವೈಖರಿ ಆಶ್ಚರ್ಯ ತಂದಿದೆ – ಮಾನವೀಯ ಕಾರ್ಯಕ್ಕೆ ನಂಜಾವಧೂತ ಶ್ರೀ ಶ್ಲಾಘನೆ

    ಸೋಮಶೇಖರ್ ಕಾರ್ಯವೈಖರಿ ಆಶ್ಚರ್ಯ ತಂದಿದೆ – ಮಾನವೀಯ ಕಾರ್ಯಕ್ಕೆ ನಂಜಾವಧೂತ ಶ್ರೀ ಶ್ಲಾಘನೆ

    ಬೆಂಗಳೂರು: ಯಶವಂತಪುರ ಕ್ಷೇತ್ರದ ಶಾಸಕರು, ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಎಲ್ಲರಿಗೂ ಮಾದರಿಯಾಗುವ ಕಾರ್ಯವನ್ನು ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿ ನನಗೂ ಆಶ್ಚರ್ಯವನ್ನು ತಂದಿದೆ. ಕ್ಷೇತ್ರದ ಜನರಿಗೆ ಈ ರೀತಿಯಾಗಿ ಬೆನ್ನೆಲುಬಾಗಿ ನಿಲ್ಲುವ ಮೂಲಕ ನಿಮಗೆ ನಾವಿದ್ದೇವೆ ಎಂಬ ಅಭಯವನ್ನು ಅವರು ನೀಡುವ ಮುಖಾಂತರ ಆರ್ಥಿಕ ನೆರವು ನೀಡುತ್ತಿರುವುದು ಮಾದರಿ ಹಾಗೂ ಮಾನವೀಯ ಕ್ರಮವಾಗಿದೆ ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಂಜಾವಧೂತ ಮಹಾಸ್ವಾಮೀಜಿ ಹೇಳಿದ್ದಾರೆ.

    ಯಶವಂತಪುರ ವಿಧಾನಸಭಾ ಕ್ಷೇತ್ರ ನಗರ ಮಂಡಲದ ದೊಡ್ಡ ಬಿದರಕಲ್ಲು ವಾರ್ಡ್ 40ರಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್‍ರವರು ಕೋವಿಡ್ 19ರಿಂದ ಮೃತಪಟ್ಟ 34 ಮಂದಿಯ ಕುಟುಂಬದವರಿಗೆ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿಯವರು, ತಮಗೆ ಎಷ್ಟು ಸಮಸ್ಯೆಯಾದರೂ ಜನರ ಪರ ನಿಲ್ಲುತ್ತೇವೆ ಎಂಬ ಮನೋಭಾವ ಎಲ್ಲರಿಗೂ ಇರುವುದಿಲ್ಲ. ಅದನ್ನು ಸಚಿವರಾದ ಸೋಮಶೇಖರ್ ಅವರು ಮಾಡಿ ತೋರಿಸಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

    ಸಾಂಕ್ರಾಮಿಕ ರೋಗದ ಭಯದಿಂದ ಜನ ಭಯಗೊಳ್ಳುತ್ತಿದ್ದಾರೆ, ಆಕ್ಸಿಜನ್ ಅವಶ್ಯಕತೆ ಇಲ್ಲದಿದ್ದರೂ ಬೇಕೆನ್ನುವುದು, ಬೆಡ್ ಬೇಡವಾದರೂ ಬೇಕೆಂದು ಹಠ ಮಾಡಿ ಪಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಆದರೆ, ನಾವು ಒಬ್ಬರು ಧೈರ್ಯದಿಂದ್ದರೆ 300 ಜನಕ್ಕೆ ಸೋಂಕು ಹರಡುವುದನ್ನು ತಪ್ಪಿಸಬಹುದು ಎಂದು ನಂಜಾವಧೂತ ಮಹಾಸ್ವಾಮೀಜಿಯವರು ತಿಳಿಸಿದರು.

    ಭಾರತೀಯ ಆಹಾರ ಪದ್ಧತಿ ಪಾಲಿಸಿ: ಈಗಾಗಲೇ ಕೊಟ್ಟಿರುವ ವರದಿಗಳ ಪ್ರಕಾರ, ನಾವು ಆಸ್ಪತ್ರೆಗಳನ್ನು, ಬೆಡ್ ಗಳನ್ನು ಒದಗಿಸಲು ಎಲ್ಲ ರಾಜ್ಯಗಳಿಗೂ ಕಷ್ಟವಾಗಿದೆ. ಈಗ ಅವುಗಳ ವಿಸ್ತರಣೆ ಮಾಡಲಾಗುತ್ತಿದೆ. ಇದು ಎದುರಿಸಲಾಗದ ರೋಗವಲ್ಲ. ಸಾಮಾಜಿಕ ಅಂತರವನ್ನು ಎಲ್ಲರೂ ಕಾಯ್ದುಕೊಳ್ಳಬೇಕು. ಎಲ್ಲರೂ ಧೈರ್ಯದಿಂದ ಇರಬೇಕು. ಅಮೆರಿಕದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ವೈದ್ಯರಾದ ಎಂ.ಎಸ್.ರೆಡ್ಡಿರವರು ಹೇಳುವ ಪ್ರಕಾರ, ಇಂಥ ಅನೇಕ ವೈರಸ್ ಗಳು ಬಂದು ಹೋಗಿವೆ. ಮಾಸ್ಕ್ ಗಳನ್ನು ಹಾಕುವುದರ ಜೊತೆಗೆ ನಮ್ಮ ಆಹಾರ ಪದ್ಧತಿಯಲ್ಲಿ ಬಳಸಿಕೊಳ್ಳಬೇಕು ಎಂದರು.

    ನಾವು ಭಾರತೀಯರು ನಮ್ಮ ಆಹಾರ ಪದ್ಧತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ದಿನ ನಿತ್ಯ ಮಜ್ಜಿಗೆ ಸೇವನೆ, ಉತ್ತಮ ಆಹಾರವನ್ನು ಸೇವಿಸಬೇಕು. ನಾವು ಮನೋಸ್ಥೈರ್ಯದಿಂದ್ದರೆ ಮಾತ್ರ ಕೊರೊನಾವನ್ನು ಎಲ್ಲರೂ ಜಯಿಸಬಹುದು. ಹಾವು ಕಚ್ಚಿದವರೂ ಬದುಕುತ್ತಾರೆ. ಆದರೆ, ಭಯ ಅವರನ್ನು ಕೊಲ್ಲುತ್ತದೆ ಎಂದು ಸ್ವಾಮೀಜಿಗಳು ಹೇಳಿದರು.

    ಜನ, ಆಪ್ತರನ್ನು ಕಳೆದುಕೊಂಡು ಆತಂಕ: ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್‍ರವರು ಮಾತನಾಡಿ, ಈ ಕೊರೊನಾ ಬಹಳ ಸಂಕಷ್ಟವನ್ನು ತಂದೊಡ್ಡಿದೆ. ಜನರು, ಆಪ್ತರನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ನಾನು ಶಾಸಕನಾಗಿ ಆಯ್ಕೆಯಾಗಲು ಹಗಲಿರುಳು ಶ್ರಮಿಸಿದ ಆಪ್ತರು ಸಹ ಇಂದು ಬಲಿಯಾಗುತ್ತಿರುವುದು ನನಗೆ ಆತಂಕ ಹಾಗೂ ನೋವನ್ನು ತಂದೊಡ್ಡಿದೆ. ಹೀಗಾಗಿ ಎಲ್ಲರನ್ನೂ ಕಾಪಾಡಿಕೊಳ್ಳಬೇಕು, ಧೈರ್ಯ ತುಂಬಬೇಕು ಎಂಬ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇನೆ. ಕೊರೊನಾ ಮೊದಲನೇ ಅಲೆಯೇ ಬೇರೆ, ಎರಡನೇ ಅಲೆಯೇ ಬೇರೆ. ಕರ್ನಾಟಕದ ಎಲ್ಲ ಕಡೆಗೂ ಬಹಳ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ನಮ್ಮ ಇಡೀ ಕ್ಷೇತ್ರ ಹಾಗೂ ಪಾಸಿಟಿವ್ ಬಂದಂತವರ ಮನೆಗಳಿಗೆ ವೈಯಕ್ತಿಕವಾಗಿ ಹಣ ಖರ್ಚು ಮಾಡಿ ಸ್ಯಾನಿಟೈಸ್ ಮಾಡುವ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಸಚಿವ ಸೋಮಶೇಖರ್‍ರವರು ನುಡಿದರು.

    ಟ್ರಯಾಜ್ ಸೆಂಟರ್ ನಲ್ಲಿ ಸೂಕ್ತ ಮಾರ್ಗದರ್ಶನ: ಇಂದು ಕ್ಷೇತ್ರದಲ್ಲಿ ಹೇರೋಹಳ್ಳಿ, ರಾಜರಾಜೇಶ್ವರಿ ನಗರ ಹಾಗೂ ಕೆಂಗೇರಿ ಸೇರಿ ಮೂರು ಟ್ರಯಾಜ್ ಸೆಂಟರ್ ರನ್ನು ತೆರೆದಿದ್ದು, ಜನಸೇವಾ ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ ರನ್ನು ತೆರೆದಿದ್ದೇವೆ. ಇಲ್ಲಿ ವೈದ್ಯರು ಸೋಂಕಿತರಿಗೆ ಸೂಕ್ತ ಮಾರ್ಗದರ್ಶನ ನೀಡುವುದಲ್ಲದೆ, ಧೈರ್ಯ ತುಂಬುವ ಕೆಲಸ ಮಾಡುತ್ತಾರೆ. ಆಕ್ಸಿಜನ್ ಕಾನ್ಸಂಟ್ರೇಟರ್ ಸೇರಿ ಎಲ್ಲ ವ್ಯವಸ್ಥೆಗಳು ಇಲ್ಲಿವೆ. ಇನ್ನೂ ನಾಲ್ಕು ಕಡೆ ಕೋವಿಡ್ ಕೇರ್ ಸೆಂಟರ್ ರನ್ನು ತೆರೆಯಲಿದ್ದೇವೆ. ಪಾಸಿಟಿವ್ ಬಂದ ತಕ್ಷಣ ಈ ಟ್ರಯಾಜ್ ಸೆಂಟರ್‍ಗಳಿಗೆ ಜನ ಹೋದರೆ ಸೂಕ್ತ ಮಾರ್ಗದರ್ಶನ ಸಿಗಲಿದೆ ಎಂದರು.

    ಕ್ಷೇತ್ರದಲ್ಲಿ ಗುಣಮುಖರ ಸಂಖ್ಯೆ ಹೆಚ್ಚಳ: ನನ್ನ ಕ್ಷೇತ್ರದಲ್ಲಿ ಏಳೂವರೆ ಸಾವಿರ ಪಾಸಿಟಿವ್ ಬಂದಿದೆ. ಅದರಲ್ಲೀಗ ಆರೂವರೆ ಸಾವಿರದಷ್ಟು ಮಂದಿ ಗುಣಮುಖರಾಗಿದ್ದಾರೆ. ಯಾರೂ ಹೆದರಬೇಕಾದ ಅಗತ್ಯವಿಲ್ಲ. ಬಿಜಿಎಸ್ ಆಸ್ಪತ್ರೆಯಲ್ಲಿ ಸಹ ಸಾರ್ವಜನಿಕ ಬಳಕೆಗೆ 200 ಬೆಡ್ ಗಳನ್ನು ನೀಡಿದ್ದು, ಮುಖ್ಯಮಂತ್ರಿಗಳು ಮೂರ್ನಾಲ್ಕು ದಿನಗಳ ಹಿಂದೆ ಅದಕ್ಕೆ ಚಾಲನೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳಿಂದ ಶೇ. 50 ಬೆಡ್ ಗಳನ್ನು ಪಡೆಯಲಾಗಿದೆ ಎಂದು ಹೇಳಿದರು.

    1,300 ವಾರಿಯರ್ಸ್ ಗೆ ಸೌಲಭ್ಯ: ಕ್ಷೇತ್ರದಲ್ಲಿ ಜನರಿಗೆ ಸೇವೆ ಸಲ್ಲಿಸಲೆಂದೇ 1300 ವಾರಿಯರ್ಸ್ ಗಳನ್ನು ನೇಮಿಸಿದ್ದು, ಅವರಿಗೆ ಹೆಲ್ತ್ ಕಿಟ್, ಮಾಸ್ಕ್, ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ಮನೆಗೇ ಒದಗಿಸುತ್ತಿದ್ದೇನೆ. ಇನ್ನೆರೆಡು ದಿನದಲ್ಲಿ ವ್ಯಾಕ್ಸಿನೇಶನ್ ಸರಿಹೊಂದಲಿದೆ. ಬೇರೆ ಬೇರೆ ಕಡೆಗಳಿಂದ ಬಂದು ಆನ್ ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡು ಬರುತ್ತಿರುವುದು ಸಮಸ್ಯೆಯಾಗುತ್ತಿದೆ. ಹೀಗಾಗಿ ಆಯಾ ಕ್ಷೇತ್ರದಲ್ಲಿ ಕ್ಷೇತ್ರದವರಿಗೆ ಆದ್ಯತೆ ನೀಡುವ ಕೆಲಸ ಆಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರಾದ ಸಿ.ಟಿ. ರವಿ ಅವರು ಹಾಗೂ ಉಪ ಮುಖ್ಯಮಂತ್ರಿಗಳಾದ ಅಶ್ವತ್ಥ ನಾರಾಯಣ ರವರ ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.

    ಪ್ರತಿಪಕ್ಷದವರಿಗೆ ಸಚಿವರ ತಿರುಗೇಟು: ತಜ್ಞರು ಹೇಳಿರುವ ಪ್ರಕಾರ ನಡೆದುಕೊಳ್ಳಬೇಕು. ಲಾಕ್ ಡೌನ್ ಅನ್ನು ಇನ್ನೂ ಎಂಟು ದಿನಗಳ ಕಾಲ ವಿಸ್ತರಣೆ ಮಾಡಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ. ಕೊರೊನಾ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಕಾಂಗ್ರೆಸ್ ಮೊದಲಿನಿಂದಲೂ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಾ ಬಂದಿದೆ. ಅವರಿಗೆ ವಿರೋಧ ಮಾಡಲು ಏನಾದರೂ ವಿಷಯ ಬೇಕು. ಹೀಗಾಗಿ ಈಗ ಲಸಿಕೆ ಬಗ್ಗೆ ಮಾತನಾಡುತ್ತಾ, ಕೊರತೆ ಆಗಿರೋ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವರಾದ ಸೋಮಶೇಖರ್ ಅವರು ಪ್ರತಿಪಕ್ಷದವರಿಗೆ ತಿರುಗೇಟು ನೀಡಿದರು.

    ಬದುಕು ಕಟ್ಟಿಕೊಳ್ಳಲು ಅವರಿಗೆ ನೆರವಾಗಬೇಕು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರಾದ ಸಿ.ಟಿ. ರವಿ ಅವರು ಮಾತನಾಡಿ, ವಿಜ್ಞಾನ ಎಷ್ಟೇ ಮುಂದುವರೆದಿದ್ದರೂ ವೈರಸ್ ಗಿಂತಲೂ ಮುಂದೆ ಸಾಗಲು ಆಗಲಿಲ್ಲ. ಅಮೆರಿಕದಂತಹ ಮುಂದುವರೆದ ದೇಶಗಳೇ ಇದರಿಂದ ತಪ್ಪಿಸಿ ಕೊಳ್ಳಲು ಆಗಲಿಲ್ಲ. ದೇಶವಿದೇಶಗಳಿಂದ ಸಹಾಯ ಕೋರಿದರೂ, ವೈದ್ಯರು ಹಗಲಿರುಳು ಶ್ರಮಿಸಿದರೂ ಎಲ್ಲರನ್ನೂ ಉಳಿಸಿಕೊಳ್ಳಲು ಆಗಲಿಲ್ಲ. ಉಳಿದವರ ನೆರವಿಗಾದರೂ ನಾವು ಧಾವಿಸಬೇಕಿದೆ. ಇಂದು 9 ಸಾವಿರ ಮೆಟ್ರಿಕ್ ಟನ್ ನಷ್ಟು ಆಕ್ಸಿಜನ್ ಪೂರೈಕೆ ಮಾಡಿದರೂ ಸಹ ಬೇಡಿಕೆ ಮುಟ್ಟಲು ಕಷ್ಟವಾಗುತ್ತಿದೆ. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ವಿದೇಶಗಳಿಂದಲೂ ಸಹ ಸಹಕಾರ ಪಡೆದು ಆಕ್ಸಿಜನ್ ಸಹಿತ, ಔಷಧಗಳನ್ನು ಆಮದು ಮಾಡಿಸಿಕೊಳ್ಳುತ್ತಿದ್ದಾರೆ. ವೈದ್ಯರೂ ಸಹ ಹಗಳಿರುಳು ಶ್ರಮಿಸುತ್ತಿದ್ದಾರೆ. ಹೀಗಾಗಿ ಇದರ ವಿರುದ್ಧ ಸಂಘಟಿತರಾಗಿ ಹೋರಾಡೋಣ ಎಂದು ತಿಳಿಸಿದರು.

    ಜನರ ಜೊತೆ ಇರುವುದು ನಮ್ಮ ಕರ್ತವ್ಯ: ಕೊರೊನಾ ಸಂಕಷ್ಟದ ಕಾಲದಲ್ಲಿ ನಾವು ಮಾನವೀಯ ನೆಲೆಯಲ್ಲಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಚಿವರಾದ ಸೋಮಶೇಖರ್ ಅವರು ಅತ್ಯಂತ ಮಾನವೀಯತೆ ಹಾಗೂ ಔದಾರ್ಯದ ಕಾರ್ಯವನ್ನು ಮಾಡುತ್ತಿದ್ದಾರೆ. ಇದು ಎಲ್ಲರ ಕರ್ತವ್ಯ ವಾಗಬೇಕು ಸಹ. ಬದುಕು ಕಟ್ಟಿಕೊಳ್ಳಲು ಅವರಿಗೆ ನೆರವಾಗಬೇಕಿದೆ. ಎಸ್ ಟಿ ಸೋಮಶೇಖರ್ ಅವರು ಕ್ಷೇತ್ರದ ಜನರ ಜೊತೆ ತಾವಿದ್ದೇವೆ ಎಂದು ಸಹಾಯ ಮಾಡುತ್ತಿದ್ದಾರೆ. ಜನರ ಜೊತೆ ಇರುವುದು ನಮ್ಮ ಕರ್ತವ್ಯ. ಜೊತೆಗೆ ಜನರಿಗೆ ಮಾನಸಿಕ ಧೈರ್ಯವನ್ನು ತುಂಬುವ ಕೆಲಸ ಮಾಡಬೇಕಿದೆ ಎಂದು ಸಿ.ಟಿ. ರವಿರವರು ಹೇಳಿದರು.

  • ಎಸ್.ಟಿ.ಸೋಮಶೇಖರ್ ಕಾರ್ಯ ಶ್ಲಾಘನೀಯ: ನಟ ಉಪೇಂದ್ರ

    ಎಸ್.ಟಿ.ಸೋಮಶೇಖರ್ ಕಾರ್ಯ ಶ್ಲಾಘನೀಯ: ನಟ ಉಪೇಂದ್ರ

    – ಸಚಿವರ ವೈಯಕ್ತಿಕ 1 ಲಕ್ಷ ರೂ. ಆರ್ಥಿಕ ಸಹಾಯಕ್ಕೆ ಮೆಚ್ಚುಗೆ
    – ಎರಡನೇ ಅಲೆ ಬಗ್ಗೆ ಎಚ್ಚರವಹಿಸಿ- ಸೋಮಶೇಖರ್ ಕರೆ

    ಬೆಂಗಳೂರು: ಕೋವಿಡ್-19ನ ಈ ಸಂದರ್ಭದಲ್ಲಿ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಿಗೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಇದು ಎಲ್ಲರಿಗೂ ಮಾದರಿಯಾಗಿದೆ ಎಂದು ಖ್ಯಾತ ನಟ, ನಿರ್ದೇಶಕರಾದ ಉಪೇಂದ್ರ ಅವರು ಹೇಳಿದರು.

    ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೃಪಪಟ್ಟ ಕುಟುಂಬಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವೈಯಕ್ತಿಕವಾಗಿ ಕೊಡಮಾಡುವ ತಲಾ ರೂ.1 ಲಕ್ಷಗಳ ಪರಿಹಾರವನ್ನು ನೀಡಿ ಮಾತನಾಡಿದ ಉಪೇಂದ್ರ ಅವರು, ಸೋಮಶೇಖರ್ ಅವರು ಕೊಟ್ಟಿದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ ಎಂಬ ಮಾತನ್ನು ಸುಳ್ಳು ಮಾಡುತ್ತಿದ್ದಾರೆ. ಅವರು ಯಾವುದನ್ನೂ ಬಚ್ಚಿಡುತ್ತಿಲ್ಲ. ತಮ್ಮಲ್ಲಿರುವುದನ್ನು ಎಲ್ಲರಿಗೂ ಹಂಚುವ ಮೂಲಕ ಎಲ್ಲರಿಗೂ ಮಾದರಿಯಾಗಿ ನಡೆಯುತ್ತಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

    ಇಂದು ಜಗತ್ತಿಗೇ ಕೊರೋನಾ ಮಹಾಮಾರಿ ಬಂದಿದ್ದು, ಮಾನವೀಯತೆಗೆ ಮತ್ತು ಮನುಷ್ಯತ್ವಕ್ಕೆ ನಾವು ಬೆಲೆ ಕೊಡಬೇಕಿದೆ. ಮನುಷ್ಯತ್ವವನ್ನು ಪರೀಕ್ಷೆ ಮಾಡುವ ಸಮಯ ಇದಾಗಿದೆ. ಈ ನಿಟ್ಟಿನಲ್ಲಿ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಬಗ್ಗೆ ಯಾರಿಗೂ ಭಯ ಬೇಡ, ಎಲ್ಲರೂ ವ್ಯಾಕ್ಸಿನೇಶನ್ ಹಾಕಿಸಿಕೊಳ್ಳಬೇಕು. ಇದರಿಂದ ನಿಮಗೆ ಧೈರ್ಯಬರುವುದಲ್ಲದೆ, ರೋಗನಿರೋಧಕ ಶಕ್ತಿ ಹೆಚ್ಚಲಿದೆ. ಶುಚಿಯಾಗಿರುವುದಲ್ಲದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸದಾ ಧನಾತ್ಮಕ ಚಿಂತನೆಯನ್ನು ಮಾಡಬೇಕು. ಯಾರೂ ಸಹ ಎದೆಗುಂದಬಾರದು ಎಂದು ಉಪೇಂದ್ರ ಅವರು ಸಲಹೆ ನೀಡಿದರು.

    ಎರಡನೇ ಅಲೆ ಬಗ್ಗೆ ಎಚ್ಚರವಹಿಸಿ-ಸೋಮಶೇಖರ್ ಕರೆ
    ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಟಿ. ಸೋಮಶೇಖರ್ ಅವರು, ಈ ಬಾರಿ ಕೊರೊನಾ ಎರಡನೇ ಅಲೆ ಬಹಳ ವೇಗವಾಗಿ ಬೆಳೆಯುತ್ತಿದೆ. ಮೊದಲ ಅಲೆಗಿಂತ ಹೆಚ್ಚಾಗಿ ಸಾವು-ನೋವುಗಳಾಗುತ್ತಿದೆ. ಇದಕ್ಕಾಗಿ ನಾವು ಅನೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನಮ್ಮ ಕ್ಷೇತ್ರದಲ್ಲಿ ಇತ್ತೀಚೆಗೆ ಮೂರ್ನಾಲ್ಕು ಕಡೆ ಟ್ರಯಾಜ್ ಸೆಂಟರ್ ಅನ್ನು ತೆರೆದಿದ್ದೇವೆ. ಇಲ್ಲಿಗೆ ಸೋಂಕಿತರು ಭೇಟಿ ನೀಡಿದರೆ, ಅಲ್ಲಿ ವೈದ್ಯರು ಯಾವ ರೀತಿಯ ಚಿಕಿತ್ಸೆಯ ಅವಶ್ಯಕತೆ ಇದೆ ಎಂಬುದನ್ನು ಸೂಚಿಸುತ್ತಾರೆ. ಮನೆಯಲ್ಲಿದ್ದು ಚಿಕಿತ್ಸೆ ಪಡೆಯಬಹುದಾ ? ಆಸ್ಪತ್ರೆಗೆ ದಾಖಲಾಗಬೇಕಾ? ಆಕ್ಸಿಜನ್ ಅಗತ್ಯವಿದೆಯೇ? ಎಂಬಿತ್ಯಾದಿಗಳನ್ನು ಪರೀಕ್ಷಿಸಿ ಮಾಹಿತಿಯನ್ನು ಕೊಡಲಿದ್ದಾರೆ ಎಂದು ತಿಳಿಸಿದರು.

    ಜನಸೇವಾ ಕೇಂದ್ರದಲ್ಲಿ ನಿರ್ಮಲ್ ಜೀ ಅವರು 100 ಬೆಡ್ ವ್ಯವಸ್ಥೆ ಮಾಡಿದ್ದು, ಮಧ್ಯಾಹ್ನದ ಊಟ, ಮೆಡಿಸಿನ್ ಸೇರಿದಂತೆ ಎಲ್ಲ ಸೌಕರ್ಯಗಳನ್ನು ಇಲ್ಲಿ ಮಾಡಲಾಗಿದ್ದು, ಇನ್ನು ಮನೆಯಲ್ಲಿ ಯಾರಾದರೊಬ್ಬರಿಗೆ ಸೋಂಕು ತಗುಲಿದರೆ, ಮನೆಯವರಿಗೆ ಬರಬಾರದು ಎಂಬ ದೃಷ್ಟಿಯಿಂದ ಇಲ್ಲಿಗೆ ಬಂದು ದಾಖಲಾಗಬಹುದು. ಇಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಎಲ್ಲರೂ ಇಲ್ಲಿ ಗುಣಮುಖರಾಗಿ ವಾಪಸ್ ಬರುತ್ತಿದ್ದಾರೆ ಎಂದು ತಿಳಿಸಿದರು.

    ಕೋವಿಡ್ ಯಾರಿಗೇ ಬಂದರೂ ಮುಚ್ಚಿಡಬೇಡಿ. ಧೈರ್ಯವಾಗಿ ಹೇಳಿಕೊಳ್ಳಿ, ಕೋವಿಡ್ ಬಂದು ವಿಕೋಪಕ್ಕೆ ಹೋದರೆ ಯಾರೂ ರಕ್ಷಣೆ ಮಾಡಲಾಗದು. ಹೀಗಾಗಿ ಕೋವಿಡ್ ಕೇರ್ ಸೆಂಟರ್, ಟ್ರಯಾಜ್ ಗಳನ್ನು ಬಳಸಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಿಂದಲೂ ಸರ್ಕಾರಿ ಬೆಡ್ ಗಳನ್ನು ಪಡೆಯುತ್ತಿದ್ದೇವೆ. ಐಸಿಯುಗಳಲ್ಲಿ ವೆಂಟಿಲೇಟರ್ ಗಳು, ಆಕ್ಸಿಜನ್ ಕೊರತೆ ಇತ್ತು. ಆದಿಚುಂಚನಗಿರಿ ಮಹಾಸಂಸ್ಥಾನದ ಸ್ವಾಮೀಜಿ ಅವರ ಬಳಿ ಮನವಿ ಮಾಡಿಕೊಂಡು ಬಿಜಿಎಸ್ ಆಸ್ಪತ್ರೆಯಿಂದ 210 ಬೆಡ್ ಅನ್ನು ಹೆಚ್ಚುವರಿಯಾಗಿ ಪಡೆಯಲಾಗಿದೆ. 43 ವೆಂಟಿಲೇಟರ್ ಬೆಡ್ ಗಳ ಸೌಲಭ್ಯವೂ ಸಿಕ್ಕಿದೆ. ಹೆಚ್ಚುವರಿ ಆಕ್ಸಿಜನ್ ಸಿಲಿಂಡರ್ ಗಳ ಬೇಡಿಕೆಯನ್ನು ಇಡಲಾಗಿದ್ದು, ಅದೂ ಸಹ ಪೂರೈಕೆಯಾಗಲಿದೆ. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದವರಿಗೆ ನಾನು ವೈಯಕ್ತಿಕ ನೆರವು ನೀಡುತ್ತಿದ್ದೇನೆ ಎಂದು ಸಚಿವರು ತಿಳಿಸಿದರು.

    ನಾವೂ ಸಹ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಉಚಿತವಾಗಿ ಕೊಡುತ್ತಿದ್ದೇವೆ. ನಾಗರಿಕರು ಧೈರ್ಯವಾಗಿರಬೇಕು. ಸರ್ಕಾರ ಸಹ ಗ್ರಾಮ ಪಂಚಾಯಿತಿಗಳಿಗೆ 50 ಸಾವಿರ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಇದನ್ನು ಕೋವಿಡ್ ಸಂಬಂಧಪಟ್ಟಂತೆ ಖರ್ಚು ಮಾಡಲು ಬಳಸಬಹುದಾಗಿದೆ. ಜೊತೆಗೆ ಪಂಚಾಯಿತಿ ಅಧ್ಯಕ್ಷರನ್ನೊಳಗೊಂಡ ಟಾಸ್ಕ್ ಫೋರ್ಸ್ ರಚಿಸಲು ಸಹ ಸರ್ಕಾರ ಅನುಮತಿ ನೀಡಿದೆ. ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ಸಹ ಚುರುಕುಗೊಳಿಸಲಾಗುತ್ತಿದೆ. 2 ಡೋಸ್ ಪಡೆದವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅವರಿಗೆ ಮುಂದೆ ಅಷ್ಟಾಗಿ ಪರಿಣಾಮ ಬೀರದು. ನಮ್ಮ ಕ್ಷೇತ್ರದಲ್ಲಿ ಅಗತ್ಯ ಸೌಲಭ್ಯವನ್ನು ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಮೊದಲ ಆದ್ಯತೆ ನೀಡಿ, 2ನೇ ಡೋಸ್ ಗೆ ಪ್ರಾಧಾನ್ಯತೆ ನೀಡುತ್ತಿದ್ದೇವೆ. ಎಲ್ಲರೂ ಲಸಿಕೆ ಪಡೆಯಿರಿ ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಗುರೂಜಿಯವರಾದ ಡಾ. ಚಂದ್ರಶೇಖರನಾಥ ಸ್ವಾಮೀಜಿ ಮತ್ತು ಜನಸೇವಾ ಕೇಂದ್ರದ ಅಧ್ಯಕ್ಷರಾದ ನಿರ್ಮಲ್ ಜೀ ಅವರು ಜೊತೆಗಿದ್ದರು.

    ಮಠಾಧೀಶರಿಂದ ಸಿಕ್ಕಿತ್ತು ಚಾಲನೆ
    ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ||ನಿರ್ಮಲಾನಂದನಾಥ ಸ್ವಾಮೀಜಿರವರು ಹಾಗೂ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸಾಮೀಜಿಗಳು ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಕೋವಿಡ್ 19 ನಿಂದ ಮೃತಪಟ್ಟ 83 ಕುಟುಂಬಗಳಿಗೆ ಸ್ಥಳೀಯ ಶಾಸಕರು ಹಾಗೂ ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್ ರವರು ವೈಯುಕ್ತಿಕವಾಗಿ ನೀಡುತ್ತಿರುವ ತಲಾ ರೂ.1 ಲಕ್ಷಗಳ ಪರಿಹಾರಧನ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಿದ್ದಾರೆ.

    > ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 09 ಹಳ್ಳಿಗಳು ಬರುತ್ತವೆ.
    > ಈಗಾಗಲೇ ಕುಂಬಳಗೋಡು ಗ್ರಾಮ ಪಂಚಾಯತಿಯಲ್ಲಿ ಕೋವಿಡ್ 19 ನಿಂದ ಮೃತಪಟ್ಟ 05 ಕುಟುಂಬಗಳಿಗೆ ತಲಾ ರೂ.1 ಲಕ್ಷಗಳ ಪರಿಹಾರವನ್ನು ನೀಡಲಾಗಿದೆ.
    > ಇಂದು ಕೋವಿಡ್ 19 ನಿಂದ ಮೃತಪಟ್ಟ 08 ಕುಟುಂಬಗಳಿಗೆ ತಲಾ ರೂ.1 ಲಕ್ಷ ಗಳ ವಿತರಣೆ ಮಾಡಲಾಗಿದೆ.
    > ಆಶಾ ಕಾರ್ಯಕರ್ತರಿಗೆ, ವಾಟರ್‍ಮನ್‍ಗಳಿಗೆ ಹಾಗೂ ಕುಂಬಳಗೋಡು ಗ್ರಾಮ ಪಂಚಾಂತಿಯಲ್ಲಿ “ಡಿ”ಗ್ರೂಪ್ ನೌಕರರಿಗೆ ಇಂದು ಫುಡ್ ಕಿಟ್ ವಿತರಣೆ ಮಾಡಲಾಗುತ್ತಿದೆ.
    > ಈಗಾಗಲೇ ಹೋಂ ಐಸೋಲೇಷನ್‍ನಲ್ಲಿರುವ 250 ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಲಾಗಿದೆ.
    > ಹಳ್ಳಿಗಳಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
    > ಸ್ಯಾನಿಟೈಸರ್, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಇವುಗಳ ಬಗ್ಗೆ ಇಲವು ಮೂಡಿಸಲಾಗುತ್ತಿದೆ
    > ಕೊರೊನಾ ಬಗ್ಗೆ ಜನರಲ್ಲಿ ಧೈರ್ಯ ತುಂಬುವ ಮೂಲಕ ನಾವಿದ್ದೇವೆ ಎಂದು ಭರವಸೆ ನೀಡುವುದರ ಜೊತೆ ವೈಯಕ್ತಿಕ ನೆರವು ನೀಡುತ್ತಿದ್ದೇವೆ
    >  ವಯಸ್ಕರು ಮುನ್ನೆಚ್ಚರಿಕೆ ವಹಿಸುವ ಸಂಬಂಧ ಅರಿವು ಮೂಡಿಸಲಾಗುತ್ತಿದೆ
    > ಮಹಿಳೆಯರು, ಯುವಜನರು ಹಾಗೂ ಜನಪ್ರತಿನಿಧಿಗಳು ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಬಗ್ಗೆ ಜನಾಂದೋಲನ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ

  • ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ  ಡಿವಿಎಸ್, ಎಸ್‌ಟಿಎಸ್‌ ಭೇಟಿ

    ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ ಡಿವಿಎಸ್, ಎಸ್‌ಟಿಎಸ್‌ ಭೇಟಿ

    – ಕೋವಿಡ್ ಕೇರ್ ಸೆಂಟರ್ ಗಳ ಮೂಲ ಸೌಕರ್ಯ, ಸ್ಥಿತಿಗತಿ ವಿಕ್ಷಣೆ
    – ಸರ್ಕಾರದಿಂದ ಕೈಗೊಳ್ಳಲಾದ ಕ್ರಮಗಳ ವಿವರಿಸಿದ ಸಚಿವ ಸೋಮಶೇಖರ್
    – ಜನಸೇವಾ ವಿದ್ಯಾಕೇಂದ್ರದ ನೂತನ ಕೇರ್ ಸೆಂಟರ್ಗೆ 16 ಬೆಡ್‍ಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆ ಮಾಡಿಸಿದ ಎಸ್‍ಟಿಎಸ್
    – ಶಾಶ್ವತ ಸೌಕರ್ಯಗಳ ಬಗ್ಗೆ ಚಿಂತನೆ

    ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಕೇರ್ ಸೆಂಟರ್‌ಗಳ   ವ್ಯವಸ್ಥೆಗಳ ಬಗ್ಗೆ ಶನಿವಾರ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಕೇಂದ್ರೀಯ ಆಯುರ್ವೇದ ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ಸಚಿವರುಗಳು, ಅಲ್ಲಿ ನೂತನವಾಗಿ ಪ್ರಾರಂಭಿಸಲು ಉದ್ದೇಶಿಸಿರುವ 100 ಆಕ್ಸಿಜನ್ ಬೆಡ್‍ಗಳ ಪರಿಶೀಲನೆ ನಡೆಸಿದರು. ಜೊತೆಗೆ ಮೂಲ ಸೌಕರ್ಯ ವ್ಯವಸ್ಥೆಗಳನ್ನು ಹೇಗೆ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ಯಾವ ಯಾವ ವ್ಯವಸ್ಥೆಗಳನ್ನು ಮಾಡಲಾಗಿದೆ. ಇನ್ನೂ ಏನೇನು ಬೇಡಿಕೆಗಳು ಇವೆ ಎಂಬೆಲ್ಲ ಮಾಹಿತಿಗಳನ್ನು ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಅವರಿಗೆ ವಿವರಿಸಿದರು.

    ಮೂಲ ಸೌಲಭ್ಯ ಬಗ್ಗೆ ಮಾಹಿತಿ :
    ಜ್ಞಾನಭಾರತಿ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸೋಮಶೇಖರ್ ಅವರು, ಅಲ್ಲಿನ ಮೂಲ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್‍ಗಳ ಪೂರೈಕೆ, ರೋಗಿಗಳಿಗೆ ಲಭ್ಯವಾಗುತ್ತಿರುವ ಚಿಕಿತ್ಸೆ, ಔಷಧಗಳು, ವೈದ್ಯಕೀಯ ಕಿಟ್‍ಗಳು, ನೀರು-ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ಯಾವ ರೀತಿಯಾಗಿ ಕಲ್ಪಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವ ರೀತಿ ಆಸ್ಪತ್ರೆ ಸಜ್ಜಾಗಿದೆ ಎಂಬ ಬಗ್ಗೆ ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಿಗೆ ವಿವರಣೆ ನೀಡಿದರು. ಅಲ್ಲದೆ, ಅಚ್ಚುಕಟ್ಟಿನ ವ್ಯವಸ್ಥೆ ಬಗ್ಗೆ ಈ ವೇಳೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡಿಸಿದ ಎಸ್ ಟಿ ಎಸ್:
    ಜನಸೇವಾ ವಿದ್ಯಾ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭವಾಗಿರುವ 100 ಬೆಡ್‍ಗಳ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸಚಿವರಾದ ಸೋಮಶೇಖರ್ ಅವರು, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ 16 ಬೆಡ್‍ಗಳಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ವ್ಯವಸ್ಥೆಗೆ ಬಿಬಿಎಂಪಿ ಮೂಲಕ ಸಚಿವರಾದ ಸೋಮಶೇಖರ್ ಅವರು ವ್ಯವಸ್ಥೆ ಮಾಡಿದ್ದರ ಬಗ್ಗೆ ವೈದ್ಯಾಧಿಕಾರಿಗಳು ಕೇಂದ್ರ ಸಚಿವರ ಗಮನಕ್ಕೆ ತಂದರು.

    ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಹಾಲಿ ಎಲ್ಲ ಕಡೆಗಳಿಂದ ಸೌಲಭ್ಯಗಳನ್ನು ಒದಗಿಸಿಕೊಂಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ತಾತ್ಕಾಲಿಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ಆಕ್ಸಿಜನ್ ಬೆಡ್ ಗಳು, ಆಕ್ಸಿಜನ್ ಕಾನ್ಸಂಟ್ರೇಟರ್‌ಗಳು, ಮೆಡಿಕಲ್ ಕಿಟ್ ಗಳು ಸೇರಿದಂತೆ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಸಂಬಂಧಪಟ್ಟಂತೆ ಮೂಲಸೌಕರ್ಯವನ್ನು ಶಾಶ್ವತವಾಗಿ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದ್ದೇನೆ. ಈ ಬಗ್ಗೆ ಸರ್ಕಾರದೊಂದಿಗೆ ಮಾತನಾಡಿ ಮುಂಬರುವ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರಾದ ಸೋಮಶೇಖರ್ ಅವರು ತಿಳಿಸಿದರು.

    ಈ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

  • ಎಮೆರ್ಜೆನ್ಸಿ ಇದ್ರೆ ಮಾತ್ರ ಬನ್ನಿ, ಅಲ್ಲಿಂದ ಬಂದು ಇಲ್ಲಿ ರೋಗ ಅಂಟಿಸಬೇಡಿ: ಎಸ್‍ಟಿಎಸ್

    ಎಮೆರ್ಜೆನ್ಸಿ ಇದ್ರೆ ಮಾತ್ರ ಬನ್ನಿ, ಅಲ್ಲಿಂದ ಬಂದು ಇಲ್ಲಿ ರೋಗ ಅಂಟಿಸಬೇಡಿ: ಎಸ್‍ಟಿಎಸ್

    – ಸಚಿವರಿಂದ ವಿವಾದಾತ್ಮಕ ಹೇಳಿಕೆ

    ಮೈಸೂರು: ಅನ್ಯ ಜಿಲ್ಲೆಯ ಸೋಂಕಿತರಿಗೆ ಪ್ರವೇಶವಿಲ್ಲ. ಬೆಂಗಳೂರು ಸೇರಿ, ಬೇರೆ ಜಿಲ್ಲೆಯ ಸೋಂಕಿತರಿಗೆ ಮೈಸೂರಲ್ಲಿ ನೋ ಎಂಟ್ರಿ ಎಂದು ಸೋಮಶೇಖರ್ ಅವರು ವಿವಾದಾತ್ಮಕ ಆದೇಶ ಕೈಗೊಂಡಿದ್ದಾರೆ.

    ಸಚಿವರ ಈ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದ್ದು, ಚಾಮರಾಜನಗರ, ಮಂಡ್ಯ ಜಿಲ್ಲೆಯವರು ಎಲ್ಲಿಗೆ ಹೋಗಬೇಕು? ಸಚಿವ ಸೋಮಶೇಖರ್ ಈ ಆದೇಶ ಸರೀನಾ ಎಂಬ ಪ್ರಶ್ನೆ ಉದ್ಭವಿಸಿದೆ.

    ಎಸ್‍ಟಿಎಸ್ ಹೇಳಿದ್ದೇನು?
    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಯಾರೂ ಬರಬಾರದು ಎಂಬ ನಿರ್ಬಂಧ ಹೇರಿದ್ದೇವೆ. ಸರ್ಕಾರ ಕೂಡ ಮಾಡಿಬಿಟ್ಟಿದೆ. ಮೈಸೂರಿನಲ್ಲಿ ಪ್ರತಿ ದಿನ ಬರುತ್ತಿರುವ ಕೊರೊನಾ ಪ್ರಕರಣಗಳಲ್ಲಿ ಆಕ್ಸಿಜನ್ ಬೆಡ್ ಎಷ್ಟು ಜನ ಕೇಳುತ್ತಿದ್ದಾರೆ. ಆ ಆಧಾರದ ಮೇಲೆ ನಮಗೆ ಆಕ್ಸಿಜನ್ ಕೊಡಿ ಎಂಬುದನ್ನು ಸಿಎಂ ಅವರನ್ನು ಖುದ್ದು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಅಶ್ವಥ್ ನಾರಾಯಣ್ ಅವರ ಬಳಿಯೂ ಮಾತುಕತೆ ನಡೆಸಿದ್ದೇನೆ. ಅವರು ಕೂಡ ಇಡೀ ರಾಜ್ಯಕ್ಕೆ ಆಕ್ಸಿಜನ್ ತರಿಸಿಕೊಡುತ್ತಿದ್ದಾರೆ ಎಂದರು.

    ಅಂತರ್ ಜಿಲ್ಲೆಯಿಂದ ಪ್ರಯಾಣಿಕರು ಮಾತ್ರವಲ್ಲದೇ ಸೋಂಕಿತರು ಕೂಡ ಬರಬಾರದು. ಯಾವುದಾದರೂ ಎಮರ್ಜೆನ್ಸಿ ಇದ್ದರೆ ಮಾತ್ರ ಬರೋಕೆ ಅವಕಾಶ ನೀಡುತ್ತೇವೆ. ಈ ಹಿಂದೆ ಯಾರೂ ಕೂಡ ಮೈಸೂರಿಗೆ ಬರಬಹುದಿತ್ತು. ಅಲ್ಲಿಂದ ಬಂದು ಇಲ್ಲಿ ರೋಗ ಅಂಟಿಸುವುದನ್ನು ತಡೆಯುವ ಉದ್ದೇಶ ಇದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

    ಹೊರ ಜಿಲ್ಲೆಗಳ ಪ್ರಯಾಣಿಕರು ಸೋಂಕಿತರಿಗೂ ಮೈಸೂರಿಗೆ ಪ್ರವೇಶವಿಲ್ಲ. ಕೊನೆ ಕ್ಷಣದಲ್ಲಿ ಸೋಂಕಿತರು ಮೈಸೂರಿಗೆ ಬರುತ್ತಿದ್ದಾರೆ. ಇದರಿಂದ ಹೆಚ್ಚಿನ ಸಾವು ನೋವುಗಳಾಗುತ್ತಿವೆ. ಆದ್ದರಿಂದ ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ನಿರ್ಬಂಧ ಹೇರಲಾಗಿದೆ ಎಂದರು.

    ಮೈಸೂರಿಗೆ ಇನ್ನೂ ಹೆಚ್ಚುವರಿ ಆಕ್ಸಿಜನ್ ಅವಶ್ಯಕತೆ ಇದೆ. ನಮ್ಮ ಕೋಟಾ ಹೆಚ್ಚಿಸಲು ಸರ್ಕಾರವನ್ನು ಕೇಳಿದ್ದೇನೆ. ನಮಗೆ ಆಕ್ಸಿಜನ್ ಕೋಟಾ ಹೆಚ್ಚಾಗಬಹುದು. ನಮ್ಮಲ್ಲಿ ಪಾಸಿಟಿವ್ ಪ್ರಕರಣ ಕೊರೊನಾ ರೋಗಿಗಳ ಸಂಖ್ಯೆ ಆಧರಿಸಿ ಹೆಚ್ಚುವರಿ ಆಕ್ಸಿಜನ್‍ಗೆ ಮನವಿ ಮಾಡಿದ್ದೇನೆ. ಹೊರ ಜಿಲ್ಲೆ ಎಲ್ಲಾ ಸೋಂಕಿತರೂ ಮೈಸೂರಿಗೆ ಬರುವುದು ಬೇಡ. ಅಗತ್ಯ ತುರ್ತು ಅವಶ್ಯಕತೆ ಇದ್ರೆ ಮಾತ್ರ ಮೈಸೂರಿಗೆ ಬನ್ನಿ ಎಂದು ಅವರು ತಿಳಿಸಿದರು.

    ಇದೇ ವೇಳೆ ಮೈಸೂರಿನಲ್ಲಿ ಸೋಂಕಿತರಿಗೆ ಬೆಡ್ ಕೊರತೆ ವಿಚಾರಕ್ಕೆ ಪ್ರತಿಕ್ರಿಯಿಸಿ ಸುತ್ತೂರು ಮಠದ ಸಹಕಾರವನ್ನು ಕೇಳಿದರು.

  • ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ಪರಿಹಾರ- ಎಸ್.ಟಿ.ಸೋಮಶೇಖರ್

    ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ಪರಿಹಾರ- ಎಸ್.ಟಿ.ಸೋಮಶೇಖರ್

    ಬೆಂಗಳೂರು: ಕೋವಿಡ್ 19ರ ಸನ್ನಿವೇಶದಲ್ಲಿ ನನ್ನ ಕ್ಷೇತ್ರದ ಜನತೆಯ ಸೇವಕನಾಗಿ ಅವರ ಅವಶ್ಯಕತೆಗಳನ್ನು ಪೂರೈಸುವುದು ನನ್ನ ಕರ್ತವ್ಯ. ಈ ಹಿನ್ನೆಲೆಯಲ್ಲಿ ನನ್ನ ಕ್ಷೇತ್ರದಲ್ಲಿ ಕೋವಿಡ್‍ನಿಂದ ಮೃತಪಟ್ಟ ಕುಟುಂಬದವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಸಹಾಯಧನವನ್ನು ವೈಯುಕ್ತಿಕವಾಗಿ ನೀಡುವ ವ್ಯವಸ್ಥೆ ಮಾಡಿದ್ದೇನೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಸಹಕಾರ ಸಚಿವರೂ ಆದ ಎಸ್.ಟಿ.ಸೋಮಶೇಖರ್ ಹೇಳಿದರು.

    ಕೋವಿಡ್-19 ರಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ಒಂದು ಲಕ್ಷ ಪರಿಹಾರ ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶ್ರೀ ಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಹಾಗೂ ಪಂಚಾಯಿತಿ ವ್ಯಾಪ್ತಿಯ ಜನರಿಗೆ ವೈಯುಕ್ತಿಕವಾಗಿ ಪರಿಹಾರ ನೀಡುತ್ತಿದ್ದೇನೆ. ಇಂದಿನಿಂದ ನಿತ್ಯ ಒಂದೊಂದು ವಾರ್ಡ್‍ನಲ್ಲಿಯೂ ಸೋಂಕಿನಿಂದ ಮೃತಪಟ್ಟ ಕುಟುಂಬಸ್ಥರಿಗೆ ತಲಾ 1 ಲಕ್ಷ ನಗದು ವಿತರಣೆ ಮಾಡಲಾಗುವುದು. ಇಂದು ಕೆಂಗೇರಿ ವಾರ್ಡ್ 159 ರಲ್ಲಿ 27 ಕುಟುಂಬಗಳಿಗೆ ತಲಾ ಒಂದು ಲಕ್ಷ ನಗದು ಹಣ ವಿತರಣೆ ಮಾಡಿದ್ದೇವೆ. ನಾಳೆಯಿಂದ 17 ಪಂಚಾಯಿತಿ ವ್ಯಾಪ್ತಿ ಹಾಗೂ 5 ವಾರ್ಡ್‍ನ ಜನರಿಗೆ ಧನಸಹಾಯ ಮಾಡಲಾಗುವುದು ಎಂದು ತಿಳಿಸಿದರು.

    ಆಸ್ಪತ್ರೆಗೆ ದಾಖಲಾದವರಿಗೂ 25, 50 ಸಾವಿರ ಸಹಾಯ
    ಕ್ಷೇತ್ರದ ಜನರು ಕೋವಿಡ್ ಪರೀಕ್ಷೆಗೊಳಪಟ್ಟ ಸಂದರ್ಭದಿಂದಲೇ ನಿಗಾ ವಹಿಸಲಾಗುವುದು. ಅವರಿಗೆ ಚಿಕಿತ್ಸೆ ಅವಶ್ಯಕತೆ ಇದ್ದರೆ ಆಸ್ಪತ್ರೆಗೆ ದಾಖಲಿಸುವುದು, ಔಷಧಿ ವ್ಯವಸ್ಥೆ ಮಾಡಿಸುವುದು ಸೇರಿದಂತೆ ನಮ್ಮೆಲ್ಲ ಕಾರ್ಯಕರ್ತರು ಯೋಗಕ್ಷೇಮಗಳನ್ನು ವಿಚಾರಿಸಿಕೊಳ್ಳುತ್ತಾರೆ. ಇದಕ್ಕಾಗಿ ನಮ್ಮ 1 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಇದರಲ್ಲಿ ಪ್ರತಿದಿನ ನಿರತರಾಗಿದ್ದಾರೆ. ಬಿಬಿಎಂಪಿ ಮೂಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರಿಗೆ 25 ಸಾವಿರ ರೂಪಾಯಿ, ಸರ್ಕಾರಿ ಕೋಟಾ ಇಲ್ಲದೆ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತಹ ಕುಟುಂಬಗಳಿಗೆ ತುರ್ತು ಔಷಧಿಗೋಸ್ಕರ 50 ಸಾವಿರ ರೂ. ವೈಯುಕ್ತಿಕವಾಗಿ ನೀಡುತ್ತಿದ್ದೇನೆ. ಇಡೀ ಕ್ಷೇತ್ರದಲ್ಲಿ ಪಾಸಿಟಿವ್ ಬಂದಿರುವ ಸುಮಾರು 5 ಸಾವಿರ ಕುಟುಂಬದವರ ಮನೆಗಳಿಗೆ ಉಚಿತ ಸ್ಯಾನಿಟೈಸ್ ಮಾಡಿಸುತ್ತಿದ್ದೇನೆ. ಈ ಎಲ್ಲ ಮನೆಯವರು ಹೊರಗೆ ಸಂಚರಿಸಬಾರದು ಎಂಬ ನಿಟ್ಟಿನಲ್ಲಿ ದಿನಸಿ ಕಿಟ್, ಔಷಧ ಕಿಟ್ ಗಳನ್ನು ಕೊಡುವ ವ್ಯವಸ್ಥೆಯನ್ನೂ ಮಾಡಿದ್ದೇನೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

    ಆದಿಚುಂಚನಗಿರಿ ಶ್ರೀ ಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಕಳೆದ ಒಂದು ವರ್ಷದಿಂದ ಜಗತ್ತನ್ನೇ ಕಾಡುತ್ತಿರುವ ಕೊರೊನಾ ಮಹಾಮಾರಿ, ಇನ್ನೇನು ಹೋಯಿತು ಎಂಬ ಭಾವ ಹುಟ್ಟಿಸಿ, ಮತ್ತೀಗ ತೀವ್ರ ಸ್ವರೂಪವನ್ನು ತಾಳಿದೆ. ಈ ಬಾರಿಯ ಎರಡನೇ ಕೋವಿಡ್ ಅಲೆ ತುಂಬಾ ಭೀಕರವಾಗಿದೆ. ಇಂಥ ಕಠಿಣ ಸಂದರ್ಭದಲ್ಲಿ ಸಚಿವರಾದ ಸೋಮಶೇಖರ್ ಅವರು ಜನರಿಗೆ ವೈಯಕ್ತಿಕ ಸಹಾಯ ಮಾಡುತ್ತಿದ್ದಾರೆ. ಇದೊಂದು ಉತ್ತಮ ಕಾರ್ಯವಾಗಿದೆ ಎಂದು ತಿಳಿಸಿದರು.

    ಇಂಥ ಕಷ್ಟಕರ ಸನ್ನಿವೇಶದಲ್ಲಿಯೂ ಸಹ ಜನರಿಗೆ ನಾನಿದ್ದೇನೆ, ನಿಮಗೆ ಸಹಾಯ ಮಾಡುತ್ತೇನೆ ಎಂದು ಮುಂದಾಗಿ ಜನರಿಗೆ ಆತ್ಮಸ್ಥೈರ್ಯ ಮೂಡಿಸುವ ಕೆಲಸವನ್ನು ಮಾಡುತ್ತಿರುವ ಸಚಿವ ಸೋಮಶೇಖರ್ ಅವರ ನಡೆ ಎಲ್ಲರಿಗೂ ಮಾದರಿಯಾಗಲಿ. ಜನರಿಗೆ ನಮ್ಮ ಸುತ್ತ ನಮಗೆ ಆಗುವವರು ಇದ್ದಾರೆ ಎಂಬ ಭಾವನೆ ಮೂಡಿದರೆ ಅದೆಷ್ಟೋ ನೆಮ್ಮದಿ ಸಿಗುತ್ತದೆ ಎಂದು ತಿಳಿಸಿದರು.

    ಜನಪರ ಶಾಸಕರು, ಮಂತ್ರಿಗಳೂ ಆಗಿರುವ ಎಸ್.ಟಿ.ಸೋಮಶೇಖರ್ ಅವರು ತಮ್ಮ ಕ್ಷೇತ್ರದಲ್ಲಲ್ಲದೆ, ಮೈಸೂರು ಜಿಲ್ಲೆಯಲ್ಲಿಯೂ ಉಸ್ತುವಾರಿ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಅಲ್ಲದೆ ಯಾವುದೇ ಒಂದು ಕೆಲಸ ಇರಲಿ, ಒಂದು ಫೋನ್ ಕರೆ ಮಾಡಿದರೆ ಸಾಕು ತಕ್ಷಣ ಅವರು ಸ್ಪಂದಿಸುತ್ತಾರೆ. ಇದು ಅವರ ಜನಸೇವೆಯ ಗುಣವಾಗಿದೆ. ಮುಂದೆ ಸಹ ಇನ್ನಷ್ಟು ಉತ್ತಮ ಸಮಾಜಮುಖಿ ಕಾರ್ಯಗಳು ಅವರಿಂದ ಆಗಲಿದೆ ಎಂದು ಹಾರೈಸಿದರು.

    ಎಲ್ಲರೂ ವ್ಯಾಕ್ಸಿನೇಶನ್ ಮಾಡಿಸಿಕೊಳ್ಳಬೇಕು. ವ್ಯಾಕ್ಸಿನೇಶನ್ ಮಾಡಿಸಿಕೊಂಡವರಿಗೆ ಕೊರೊನಾ ಬಾಧಿಸಿದರೂ ಸಾವು-ನೋವಿನ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಆಗಾಗ ಸ್ಯಾನಿಟೈಸರ್ ನಿಂದ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಸ್ವಾಮೀಜಿಗಳು ಕಿವಿಮಾತು ಹೇಳಿದರು.

    ಜನತೆ ಜೊತೆ ಸ್ವತಃ ಸಮಾಲೋಚನೆ
    ವಾರ್ಡ್ ವಾರು ವೈಯುಕ್ತಿಕ ಸಹಾಯ ನೀಡಲು ಚಾಲನೆ ನೀಡಿದ ಸಚಿವ ಸೋಮಶೇಖರ್, ಅಲ್ಲಿನ ನಾಗರಿಕರೊಂದಿಗೆ ಸ್ವತಃ ಸಮಾಲೋಚನೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು. ಯಾವ ಕುಟುಂಬಗಳಿಗೆ ಪಡಿತರ, ಮೆಡಿಕಲ್ ಕಿಟ್ ಗಳು ಸೇರಿದಂತೆ ಸಹಾಯಧನ ಬಂದಿಲ್ಲವೋ ಅಂಥವರ ಬಗ್ಗೆಯೂ ಗಮನಹರಿಸಲಾಗುವುದು. ಜನತೆ ಯಾವುದೇ ಕಾರಣಕ್ಕೂ ಆತಂಕಗೊಳ್ಳುವುದು ಬೇಡ. ಜೊತೆಗೆ ಅಗತ್ಯವಿದ್ದರಷ್ಟೇ ಹೊರಗೆ ಹೋಗಬೇಕು ಎಂದು ತಿಳಿಸಿದರು.

  • ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ: ಸಚಿವ ಸೋಮಶೇಖರ್ ಉಡಾಫೆ ಉತ್ತರ

    ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ: ಸಚಿವ ಸೋಮಶೇಖರ್ ಉಡಾಫೆ ಉತ್ತರ

    ಬೆಂಗಳೂರು. ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಉಡಾಫೆ ಉತ್ತರ ನೀಡಿದ್ದಾರೆ.

    ಆರೋಗ್ಯ ಸಚಿವ ಸುಧಾಕರ್ ಅವರನ್ನ ಭೇಟಿಯಾದ ನಂತರ ಎಸ್.ಟಿ.ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿ, ಎಲ್ಲರಂತೆ ಸರ್ಕಾರವನ್ನು ಸಮರ್ಥಿಸಿಕೊಂಡರು. ಸಂಜೆ ಸಭೆ ಬಳಿಕ ಅಲ್ಲಿ ಚರ್ಚೆ ಮಾಡುತ್ತೇವೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳು ಇರ್ತಾರೆ. ಅವರು ಕೆಲಸ ಮಾಡದೇ ಹೋದ್ರೆ ಸರ್ಕಾರಕ್ಕೆ ಕೆಟ್ಟ ಹೆಸರು. ಅಧಿಕಾರಿಗಳ ನಿರ್ಲಕ್ಷ್ಯ ಇದರಲ್ಲಿದೆ ಎಂದು ಹೇಳಿ ಜಾರಿಕೊಂಡರು.

    ಎರಡು ಗಂಟೆಗೆ ಆಕ್ಸಿಜನ್ ಖಾಲಿ ಆಗುತ್ತೆ ಗೊತ್ತಿದ್ರೆ, 12 ಗಂಟೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಅಧಿಕಾರಿಗಳು ಕೆಲಸ ಮಾಡಿಲ್ಲ ಎಂದು ಹೇಳಿ ಕಾರ್ ಹೋದರು. ಇತ್ತ ಆರೋಗ್ಯ ಸಚಿವ ಕೆ. ಸುಧಾಕರ್, ಕಲಬುರಗಿ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.