Tag: ಎಸ್.ಕೆ.ಬೆಳ್ಳುಬ್ಬಿ

  • ರಾಮಮಂದಿರ ನಿರ್ಮಾಣಕ್ಕೆ ಈಗಾಗ್ಲೇ ಅಡಿಪಾಯ ಹಾಕಲಾಗಿದೆ: ಬೆಳ್ಳುಬ್ಬಿಗೆ ಪೇಜಾವರ ಶ್ರೀ ಟಾಂಗ್

    ರಾಮಮಂದಿರ ನಿರ್ಮಾಣಕ್ಕೆ ಈಗಾಗ್ಲೇ ಅಡಿಪಾಯ ಹಾಕಲಾಗಿದೆ: ಬೆಳ್ಳುಬ್ಬಿಗೆ ಪೇಜಾವರ ಶ್ರೀ ಟಾಂಗ್

    ಬಾಗಲಕೋಟೆ: ದಲಿತ ವ್ಯಕ್ತಿಯಿಂದ ರಾಮಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿದೆ ಎಂದು ಹೇಳುವ ಮೂಲಕ ಪೇಜಾವರ ಶ್ರೀಗಳು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ರಾಮಮಂದಿರಕ್ಕೆ ಪಾಯ ಹಾಕಲಾಗಿದ್ದು, ಮಂದಿರದ ಕಟ್ಟಡ ಕಾರ್ಯ ಪೂರ್ಣವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಹೊರ ಬರುತ್ತಿದ್ದಂತೆ ಅವುಗಳನ್ನು ತಂದು ಜೋಡಿಸುವುದು ಅಷ್ಟೇ ಬಾಕಿ ಇದೆ ಎಂದು ಹೇಳಿದರು. ಇದನ್ನು ಓದಿ: ರಾಮಮಂದಿರಕ್ಕೆ ಪಾಯ ಹಾಕಿ ಎಂಪಿ ಚುನಾವಣೆ ಎದುರಿಸಿ: ಮೋದಿಗೆ ಬೆಳ್ಳುಬ್ಬಿ ಸವಾಲ್

    ಮಾಜಿ ಸಿಎಂ ಸಿದ್ದರಾಮಯ್ಯ ಅವರೊಬ್ಬರೇ ಅಲ್ಲ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ವರಿಷ್ಠ ದೇವೇಗೌಡ, ಸಿಎಂ ಎಚ್.ಡಿ.ಕುಮಾರಸ್ವಾಮಿ ಎಲ್ಲರೂ ಕೃಷ್ಣ ಮಠಕ್ಕೆ ಬಂದಿದ್ದಾರೆ. ಅವರು ಮಠದ ಭಕ್ತರು ಎಂದು ಪ್ರತಿಕ್ರಿಯೆ ನೀಡಿದರು.

    ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಕೇಳಿರುವೆ. ರಾಜ್ಯದಲ್ಲಿ ತಾರತಮ್ಯ ಸಲ್ಲದು, ಇದನ್ನು ಸರಿ ಮಾಡಬೇಕೇ ಹೊರತು ಪ್ರತ್ಯೇಕ ರಾಜ್ಯಕ್ಕೆ ಮುಂದಾಗಬಾರದು. ಉತ್ತರ ಕರ್ನಾಟಕ ಪ್ರತ್ಯೇಕತೆ ಕೂಗಿಗೆ ಹಾಗೂ ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮಕ್ಕೆ ನನ್ನ ಬೆಂಬಲವಿಲ್ಲ ಎಂದು ಸ್ಪಷ್ಟನೆ ನೀಡಿದರು.

  • ರಾಮಮಂದಿರಕ್ಕೆ ಪಾಯ ಹಾಕಿ ಎಂಪಿ ಚುನಾವಣೆ ಎದುರಿಸಿ: ಮೋದಿಗೆ ಬೆಳ್ಳುಬ್ಬಿ ಸವಾಲ್

    ರಾಮಮಂದಿರಕ್ಕೆ ಪಾಯ ಹಾಕಿ ಎಂಪಿ ಚುನಾವಣೆ ಎದುರಿಸಿ: ಮೋದಿಗೆ ಬೆಳ್ಳುಬ್ಬಿ ಸವಾಲ್

    ಬಾಗಲಕೋಟೆ: ರಾಮಮಂದಿರ ಹೆಸರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಮಾಡುತ್ತಿದ್ದಾರೆ. ನಿಮ್ಮ ಹತ್ತಿರ ದಮ್ ಇದ್ದರೆ ರಾಮಮಂದಿರಕ್ಕೆ ಪಾಯಾ ಹಾಕಿ. ನಂತರ ಲೋಕಸಭಾ ಚುನಾವಣೆ ಎದುರಿಸಿ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರು ಸವಾಲು ಹಾಕಿದ್ದಾರೆ.

    ನಗರದಲ್ಲಿ ನಡೆದ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಪದಗ್ರಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸವಾಲು ಕೇವಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಷ್ಟೇ ಅಲ್ಲ, ರಾಜ್ಯ ಹಾಗೂ ಕೇಂದ್ರ ಬಿಜೆಪಿ ಮುಖಂಡರಿಗೂ ಅನ್ವಯವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿಯವರು ಯುವಕರನ್ನು ಬಲಿ ಕೊಟ್ಟರು, ಬ್ರಾಹ್ಮಣ ಕುಟುಂಬಗಳನ್ನು ಸರ್ವನಾಶ ಮಾಡಿದರು. ಕಳೆದ ವರ್ಷವೇ ಕೃಷಿ ಉತ್ಪನ್ನದ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಬಹುದಿತ್ತು. ಆದರೆ ಮಾಡಲಿಲ್ಲ. ಈಗ ಲೋಕಸಭೆ ಚುನಾವಣೆ ಉದ್ದೇಶದಿಂದ ಈ ನಿರ್ಧಾರಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ದೂರಿದರು.

    ಪ್ರಧಾನಿ ಮೋದಿ ಅವರ ಹೆಸರಿನ ಮೇಲೆ ಕತ್ತೆಗೂ ಟಿಕೆಟ್ ಕೊಟ್ಟರೆ ಆಯ್ಕೆಯಾಗುತ್ತಾರೆಯೇ? ಅನೇಕ ನಾಯಕರಿದ್ದರೂ ಅವರಿಗೆ ಅವಕಾಶ ನೀಡಲಿಲ್ಲ. ಹೀಗಾಗಿ ನಾನು ಬಿಜೆಪಿ ಬಿಟ್ಟು ಬಂದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಟಿಕೆಟ್ ದೊರೆತರೆ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಸಂಜೆಯೊಳಗೆ ಟಿಕೆಟ್ ಕೊಡಿ, ಇಲ್ಲಾಂದ್ರೆ ನನ್ನ ದಾರಿ ನಂಗೆ- ಹೈಕಮಾಂಡ್ ಗೆ ಬೆಳ್ಳುಬ್ಬಿ ಎಚ್ಚರಿಕೆ

    ಸಂಜೆಯೊಳಗೆ ಟಿಕೆಟ್ ಕೊಡಿ, ಇಲ್ಲಾಂದ್ರೆ ನನ್ನ ದಾರಿ ನಂಗೆ- ಹೈಕಮಾಂಡ್ ಗೆ ಬೆಳ್ಳುಬ್ಬಿ ಎಚ್ಚರಿಕೆ

    ಬೆಂಗಳೂರು: ನಾಮಪತ್ರ ಸಲ್ಲಿಕೆಗೆ ಮೂರು ದಿನ ಬಾಕಿಯಿದ್ರೂ, ಟಿಕೆಟ್ ಕೈ ತಪ್ಪಿದ ಸಿಟ್ಟು ಶಮನವಾಗಿಲ್ಲ.

    5 ಕೋಟಿ ರೂಪಾಯಿ ಕೊಟ್ಟು ಟಿಕೆಟ್ ಗಿಟ್ಟಿಸಿಕೊಂಡಿದ್ದೇನೆ ಅಂತ ಅಭ್ಯರ್ಥಿ ಸಂಗರಾಜ ದೇಸಾಯಿಯವರೇ ಕಾರ್ಯಕರ್ತರ ಜೊತೆಗೆ ಹೇಳ್ತಿದ್ದಾರೆ ಅಂತ ಟಿಕೆಟ್ ವಂಚಿತ ಮಾಜಿ ಸಚಿವ ಎಸ್‍ಕೆ ಬೆಳ್ಳುಬ್ಬಿ ಆರೋಪಿಸಿದ್ದಾರೆ. ಅಲ್ಲದೇ ಸಂಜೆಯೊಳಗೆ ನನಗೆ ಬಸವನಬಾಗೇವಾಡಿಯಿಂದ ಟಿಕೆಟ್ ಕೊಡಬೇಕು. ಇಲ್ಲಾಂದ್ರೆ ನನ್ನ ಹಾದಿ ನನಗೆ ಅಂತ ಹೈಕಮಾಂಡ್‍ಗೆ ಎಚ್ಚರಿಸಿದ್ದಾರೆ.

    ಇತ್ತ ಮಸ್ಕಿಯಿಂದ ಟಿಕೆಟ್ ವಂಚಿತ ಯಡಿಯೂರಪ್ಪ ಆಪ್ತ ಮಹಾದೇವಪ್ಪಗೌಡ ಕೈ ಹಿಡಿದಿದ್ದು, ಅಳಿಯ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ಪ್ರಚಾರ ಮಾಡ್ತಾರೆ. ಮಾಜಿ ಸಂಸದ, ಕುರುಬ ಸಮುದಾಯದ ನಾಯಕ ಕೆ ವಿರುಪಾಕ್ಷಪ್ಪ ಟಿಕೆಟ್ ಸಿಗದ ಸಿಟ್ಟಲ್ಲಿ ಬಿಜೆಪಿ ಬಿಟ್ಟಿದ್ದಾರೆ. ರಾಯಣ್ಣ ಬ್ರಿಗೇಡ್ ಅಧ್ಯಕ್ಷರೂ ಆಗಿರೋ ಅವರು ಸಿಂಧನೂರಿಂದ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಕೆಜೆಪಿಗೆ ಹೋಗದ ಸೇಡಿನಿಂದಾಗಿ ನನಗೆ ಟಿಕೆಟ್ ತಪ್ಪಿಸಿದ್ರು- ಬಿಎಸ್‍ವೈ ವಿರುದ್ಧ ಮಾಜಿಸಚಿವ ಬೆಳಮಗಿ ಗರಂ

    ಸಾಗರ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಗುಡ್‍ಬೈ ಹೇಳಿದ್ದ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ತಾರೆ. ಇನ್ನು ಬಿಜೆಪಿಗೆ ಗುಡ್‍ಬೈ ಹೇಳಿರೋ ಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಇಂದೇ ಜೆಡಿಎಸ್‍ಗೆ ಹೋಗ್ತಾರೆ ಅನ್ನೋ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

  • ಟಿಕೆಟ್ ಗಾಗಿ ಬಿಎಸ್‍ವೈ ಕಾಲಿಗೆ ಬಿದ್ದ ಮಾಜಿ ಸಚಿವ ಬೆಳ್ಳುಬ್ಬಿ ಬಂಟ

    ಟಿಕೆಟ್ ಗಾಗಿ ಬಿಎಸ್‍ವೈ ಕಾಲಿಗೆ ಬಿದ್ದ ಮಾಜಿ ಸಚಿವ ಬೆಳ್ಳುಬ್ಬಿ ಬಂಟ

    ಬೆಂಗಳೂರು: ಬಸವನ ಬಾಗೇವಾಡಿ ಕ್ಷೇತ್ರದ ಮಾಜಿ ಸಚಿವ ಎಸ್‍ಕೆ ಬೆಳ್ಳುಬ್ಬಿ ಬೆಂಬಲಿಗರೊಬ್ಬರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ಬಿದ್ದ ಘಟನೆ ನಡೆದಿದೆ.

    ಇಂದು ಬೆಳಗ್ಗೆ ಬಿಎಸ್ ವೈ ಅವರು ವಾಯುವಿಹಾರಕ್ಕೆ ತೆರಳಿದ್ದ ವೇಳೆ ಬೆಳ್ಳುಬ್ಬಿ ಬಂಟ ಬಂದು ಟಿಕೆಟ್‍ಗಾಗಿ ಯಡಿಯೂರಪ್ಪ ಅವರ ಕಾಲು ಹಿಡಿದು ನಮಸ್ಕರಿಸಿದ್ದಾರೆ. ಈ ವೇಳೆ ಬಿಎಸ್ ವೈ ಅವರು, ನನ್ ಕಾಲಿಗೆ ಬೀಳ್ಬೇಡಪ್ಪ, ಟಿಕೆಟ್ ನಾನು ಕೊಡಲ್ಲ, ಹೈಕಮಾಂಡ್ ಕೊಡೋದು ಅಂತ ಹೇಳಿ ಮುಂದೆ ನಡೆದಿದ್ದಾರೆ.

    ಇದೇ ವೇಳೆ ಮಾಜಿ ಸಚಿವರ ಬೆಂಬಲಿಗರು ಬೆಳ್ಳುಬ್ಬಿ ಅವರಿಗೆ ಟಿಕೆಟ್ ಕೊಡುವಂತೆ ಒತ್ತಡ ಹಾಕಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.