Tag: ಎಸ್ ಜಿ ಸಿದ್ದರಾಮಯ್ಯ

  • ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿ ಆಗಲಿ: ಹಂಸಲೇಖ

    ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿ ಆಗಲಿ: ಹಂಸಲೇಖ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ನನ್ನ ದೇಸಿ ಶಾಲೆಗೆ ಸಹಾಯ ಮಾಡಿದ್ದರು. ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿ ಆಗಲಿ. ಧರ್ಮೋಕ್ರಸಿಯನ್ನು ಬದಿಗೆ ಸರಿಸಿ ಡೆಮಾಕ್ರಸಿಯನ್ನು ಉಳಿಸಲಿ ಎಂದು ನಾದಬ್ರಹ್ಮ ಹಂಸಲೇಖ ಅಭಿಪ್ರಾಯಪಟ್ಟಿದ್ದಾರೆ.

    ಎಸ್.ಜಿ.ಸಿದ್ದರಾಮಯ್ಯ ಆತ್ಮ ಕಥನ ‘ಯರೆಬೇವು’ ಪುಸ್ತಕ ಬಿಡುಗಡೆ ಹಾಗೂ ಡಾ.ಎಂ ಎಂ ಕಲಬುರ್ಗಿ ಪ್ರಶಸ್ತಿ ಪ್ರಧಾನ ಸಮಾರಂಭ ಗಾಂಧಿ ಭವನದಲ್ಲಿ ನಡೆಯಿತು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲ ಬಾರಿ ನಾನು ಬರೆದುಕೊಂಡು ಭಾಷಣ ಮಾಡುತ್ತೀದ್ದೇನೆ. ನುಡಿದರೆ ಮುತ್ತಿನ ಹಾರದಂತಿರಬೇಕು ಅಂತ ಮಾತಾಡ್ತೇವೆ ಆದರೆ ಒಳಗಡೆಯಿಂದ ಅದು ಸ್ಪಟಿಕದ ಸಲಾಖೆಯಂತೆ ಇರತ್ತೆ ನಮ್ಮ ಮಾತು. ಬರೆದುಕೊಳ್ಳದೆ ಆಗುವ ಅಪಾಯ ತಡೆಯಲು ಇಲ್ಲಿ ಬರೆದು ಕೊಂಡು ಬಂದು ಮಾತನಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ?: ಕ್ಷಮೆ ಕೇಳಿದ ಹಂಸಲೇಖ

    ಇತ್ತೀಚೆಗೆ ಒಂದು ಸಮಸ್ಯೆ ಆಗಿ ನನಗೆ ಗೊತ್ತಿಲ್ಲದ ಸಮುದಾಯಗಳೆಲ್ಲ ನನ್ನ ಜೊತೆಗೆ ನಿಂತರು. ಹೀಗೆಲ್ಲ ಆಗತ್ತೆ ಅಂತ ನನಗೆ ಗೊತ್ತಿರಲಿಲ್ಲ ಆ ಸಂದರ್ಭದಲ್ಲಿ ನನ್ನ ಬೆಂಬಲಕ್ಕೆ ನಿಂತವರು ಎಸ್.ಜಿ ಸಿದ್ದರಾಮಯ್ಯ, ನಾಗರಾಜ ಮೂರ್ತಿ ಯಾರಿಗೂ ಹೆದರಬೇಡಿ ಅಂತ ಬೆಂಬಲ ನೀಡಿದ್ದಾರೆ. ನಾನು ಭಯ ಪಡುವವನು ಅಲ್ಲ, ಮಾಗಡಿ ರೋಡ್‍ನಲ್ಲಿ ದೊಡ್ಡ ದೊಡ್ಡ ಪೋಲಿ ಆಟಗಳನ್ನು ಆಡಿ ಬಂದವನು ಅದಕ್ಕೊಂದು ಚರಿತ್ರೆಯೇ ಇದೆ. ಈಗ ನನಗೆ ಎಪ್ಪತ್ತು, ತಿನ್ನೋದು ಒಪ್ಪತ್ತು, ಎರಡು ಹೊತ್ತು ಬಸವನ ಹಸಿವು ಪ್ರೋಟೀನ್ ಕೊಡುತ್ತೆ. ದೇಸಿ ಸಮುದಾಯದ ಕರುಳಿನ ಕಥೆಯಾಗಿದೆ ಯರೆಬೇವು ಪುಸ್ತಕ. ನಮ್ಮದೂ ಕೂಡ ಅದೇ ರೀತಿಯ ಕರುಳಿನ ಕಥೆ ಎಂದು ಹಿಂದಿನ ಘಟನೆಯನ್ನು ನೆನಪಿಸಿಕೊಂಡರು.

    ಸ್ವಾಗತ ಭಾಷಣದಲ್ಲಿಯೇ ಹಂಸಲೇಖ ಹೇಳಿಕೆ ವಿವಾದವನ್ನು ಸಮರ್ಥಿಸಿದ ಚಿಂತಕ ಕೆ.ವಿ.ನಾಗರಾಜ್, ಉಡುಪಿ ಮಠದಲ್ಲಿ ಅವರ ತಿಂದ ಎಂಜಲು ಮೇಲೆ ನಾವು ಉರಳು ಸೇವೆ ಮಾಡ್ತಿದ್ವಿ. ಊಟದ ಸ್ವಾತಂತ್ರದ ಬಗ್ಗೆ ಹಂಸಲೇಖ ಧ್ವನಿ ಎತ್ತಿದ್ದಕ್ಕೆ ವೈದಿಕ ಶಾಹಿಗಳು ಅವರ ಮೇಲೆ ಎಗರಿಬಿದ್ದರು. ನೀವು ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ನಾವು ನಿಮ್ಮ ಜೊತೆ ಇದ್ದೇವೆ. ಕವಿ ಮರಳುಸಿದ್ದಪ್ಪಗೆ ಹಲವು ಬಾರಿ ಈ ವೈದಿಕ ಶಾಹಿ, ಬ್ರಾಹ್ಮಣ ಶಾಹಿ ಇಂದ ಬೆದರಿಕೆ ಕರೆ ಬಂದಿತ್ತು. ಸಾಯಿಸ್ತೀವಿ, ಕೊಂದಹಾಕ್ತೀವಿ ಎಂದು ಬೆದರಿಕೆ ಹಾಕ್ತಿದ್ರು ಇದ್ಯಾವುದಕ್ಕೂ ಅವರು ತಲೆ ಕೆಡಿಸಿಕೊಳ್ಳಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಯಾವುದೇ ಧರ್ಮ, ಸಮಾಜ ಜಾತಿಯನ್ನು ನಿಂದಿಸೋ ಉದ್ದೇಶ ನನ್ನದಲ್ಲ ತಪ್ಪಾಗಿದೆ: ಹಂಸಲೇಖ

    ಸಿದ್ದರಾಮಯ್ಯ ಮಾತನಾಡಿ, ಸಮಾಜದಲ್ಲಿ ಶಿಕ್ಷಣದ ಜೊತೆಗೆ ವೈಚಾರಿಕತೆ ಬೆಳೆಯಬೇಕು. ಪ್ರತಿಯೊಂದನ್ನು ಪ್ರಶ್ನೆ ಮತ್ತು ವಿಶ್ಲೇಷಣೆ ಮಾಡಬೇಕು. ಆಗ ಮಾತ್ರ ಜಡ್ಡುಗಟ್ಟಿರುವ ಸಮಾಜದಲ್ಲಿ ಉತ್ತಮ ಪ್ರಜೆಗಳು ಆಗುವುದಕ್ಕೆ ಸಾಧ್ಯವಾಗುತ್ತೆ. ಶಿಕ್ಷಣ 16% ರಿಂದ 78% ಬಂದು ನಿಂತಿದೆ. ಆದ್ರೆ ಅನಿಷ್ಟ ಪದ್ದತಿಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಗಾಂಧಿ ಮತ್ತು ಬಸವಣ್ಣ, ಬುದ್ದನ ತತ್ವ ಪಾಲನೆ ಮಾಡುವಲ್ಲಿ ವಿಫಲವಾಗಿದ್ದೇವೆ. ನೇರವಾಗಿ ನಿಷ್ಠುರವಾಗಿ ಸತ್ಯ ಹೇಳುವುದೇ ಕಷ್ಟವಾಗಿದೆ. ಇಂದು ಅಭಿವ್ಯಕ್ತಿ ಸ್ವಾತಂತ್ರ ಬಹಳ ಕಷ್ಟದಲ್ಲಿದೆ. ವಕ್ರ ಕಣ್ಣಿನಿಂದ ನೋಡುವವರು ಪ್ರಶ್ನೆ ಮಾಡೋರನ್ನು ಭಯೋತ್ಪಾದಕರು ಎಂದು ಬಿಂಬಿಸುತ್ತಾರೆ ಇದನ್ನು ವಿಚಾರವಂತವರು ಖಂಡಿಸಬೇಕು ಎಂದರು.

    ಎಂ.ಎಂ ಕಲ್ಬುರ್ಗಿಯವರು ಏನು ತಪ್ಪು ಮಾಡಿದ್ರು. ಸತ್ಯ ಹೇಳುವ ಪ್ರಯತ್ನ ಮಾಡಿದ್ರು ಕೋಮುವಾದಿ ಭಾವನೆ ಇರೋರು ಕಲ್ಬುರ್ಗಿಯವರನ್ನು ಕೊಂದರು. ಗಾಂಧಿಜೀಯವರನ್ನು ಸಹ ಕೊಂದರು. ಇಂತಹ ಘಟನೆ ಖಂಡಿಸಬೇಕು. ಆ ನಿಟ್ಟಿನಲ್ಲಿ ನಾವು ಯೋಚನೆ ಮಾಡಬೇಕು. ಸತ್ಯ ಹೇಳುವುದಕ್ಕೆ ಹೆದರಿಕೊಳ್ಳುವ ಅಗತ್ಯ ಇಲ್ಲ ಹಂಸಲೇಖ ಏನು ಮಾಹ ಅಪರಾಧ ಮಾಡಿದ್ರಾ. ಒಂದು ಹೇಳಿಕೆ ಕೊಟ್ರು. ಅದಕ್ಕೆ ಎಲ್ಲರೂ ತಿರುಗಿಬಿದ್ರು. ಕ್ರಿಮಿನಲ್ ಕೇಸು ದಾಖಲಿಸಿದರು. ಐಪಿಸಿ ಸೆಕ್ಷನ್ 295 ಹೇಳೋದಕ್ಕೂ ಇವರ ಮಾತಿಗೂ ಸಂಬಂಧವೇ ಇಲ್ಲ ಎಂದು ಸಮರ್ಥಿಸಿಕೊಂಡರು.  ಇದನ್ನೂ ಓದಿ: ಅಂಕಲ್ ಅಂದಿದ್ದೆ ತಪ್ಪಾಯ್ತು – ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ

    ಮತಾಂತರ ವಿರೋಧ ಮಾಡಿದ್ರೆ ಧರ್ಮ ವಿರೋಧಿ ಎಂದು ಹೇಳ್ತಾರೆ. ಹೊಸ ಮತಾಂತರ ನಿಷೇಧ ಕಾಯಿದೆ ಅವಶ್ಯಕತೆ ಇಲ್ಲ. ಸಂವಿಧಾನದಲ್ಲಿ ಈಗಾಗಲೇ ಬಲವಂತದ ಮತಾಂತರಕ್ಕೆ ನಿಷೇಧ ಇದೆ. ಬಲವಂತದ ಮತಾಂತರವನ್ನು ನಾನೂ ವಿರೋಧಿಸುತ್ತೇನೆ. ಹೊಸ ಕಾನೂನು ಅವಶ್ಯಕತೆ ಇಲ್ಲ. ಸದನದಲ್ಲಿ ನಾನು ಇದನ್ನು ಹೇಳಿದ್ದೆ. ಬಲವಂತದ ಮತಾಂತರವನ್ನು ಬಲವಾಗಿ ಖಂಡಿಸುತ್ತೇನೆ. ಆದ್ರೆ ನಾವು ಈಗ ತಂದಿರುವ ಕಾನೂನು ವಿರೋಧ ಮಾಡಿದ್ರೆ ಧರ್ಮ ವಿರೋಧಿ ಎಂದು ಹೇಳುತ್ತಾರೆ ಎಂದು ಸರ್ಕಾರ ತಂದಿರುವ ಹೊಸ ಕಾಯಿದೆಗೆ ಮತ್ತೆ ವಿರೋಧ ವ್ಯಕ್ತಪಡಿಸಿದರು.

  • ಕನ್ನಡವನ್ನು ಬೋಧಿಸದ ಖಾಸಗಿ ಶಾಲೆ ಪರ ನಿಂತ ಶಾಲಿನಿ ರಜನೀಶ್!

    ಕನ್ನಡವನ್ನು ಬೋಧಿಸದ ಖಾಸಗಿ ಶಾಲೆ ಪರ ನಿಂತ ಶಾಲಿನಿ ರಜನೀಶ್!

    – ಆಯುಕ್ತೆ ವಿರುದ್ಧ ಎಸ್‍ಜಿ ಸಿದ್ದರಾಮಯ್ಯ ಗರಂ

    ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಆಯುಕ್ತೆ ಶಾಲಿನಿ ರಜನೀಶ್ ಅವರು, ಕನ್ನಡವನ್ನು ಬೋಧಿಸದ ಖಾಸಗಿ ಶಾಲೆ ಪರ ನಿಂತು ಈಗ ಕನ್ನಡ ಭಾಷೆಗೆ ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

    ಈಗ ಶಾಲಿನಿ ರಜನೀಶ್ ಅವರ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಅಂಗಳಕ್ಕೆ ದೂರು ತಲುಪಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಆಯುಕ್ತೆ ಶಾಲಿನಿ ರಜನೀಶ್ ವಿರುದ್ಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದು, ಇಂತಹ ಅಧಿಕಾರಿ ಯಾಕೆ ಬೇಕು ಅಂತ ಸಿಎಂಗೆ ದೂರು ನೀಡಲು ತಯಾರಾಗಿದ್ದಾರೆ.

    ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಬೇಕು ಅನ್ನುವ ಕಾಯ್ದೆ ಇದೆ. ರಾಜ್ಯದಲ್ಲಿ ಸುಮಾರು ನೂರಕ್ಕೂ ಹೆಚ್ಚು ಖಾಸಗಿ ಶಾಲೆಯಲ್ಲಿ ಕನ್ನಡವೇ ಇಲ್ಲ. ಈ ಶಾಲೆಗಳ ಪಟ್ಟಿ ಸಮೇತ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ನಿರಂತರ ಪತ್ರ ಬರೆಯಲಾಗಿದೆ. ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಶಾಲಿನಿ ರಜನೀಶ್‍ಗೆ ಹತ್ತಕ್ಕೂ ಹೆಚ್ಚು ಪತ್ರ ಬರೆಯಲಾಗಿದೆ. ಆದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ನಿಂತು ಯಾವುದೇ ಕ್ರಮ ವಹಿಸದೇ ಪ್ರಾಧಿಕಾರಕ್ಕೂ ಉತ್ತರ ನೀಡುತ್ತಿಲ್ಲ ಎಂದು ಎಸ್.ಜಿ. ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಈ ಹಿಂದೆ ಶಾಲಿನಿ ವರ್ತನೆ ಬಗ್ಗೆ ಸಚಿವ ಮಹೇಶ್ ಗಮನಕ್ಕೂ ತರಲಾಗಿದೆ. ಆದರೆ ಖಾಸಗಿ ಶಾಲೆಗಳ ಪರ ಲಾಬಿ ಮಾಡಿ ಅಂದು ಸಚಿವರ ಮುಂದೆಯೇ ಇನ್ನೊಬ್ಬ ಅಧಿಕಾರಿ ಶಿಖಾ ಜೊತೆ ಶಾಲಿನಿ ಕ್ಯಾತೆ ತೆಗೆದಿದ್ದರು. ಸರ್ಕಾರಿ ಆದೇಶ ಉಲ್ಲಂಘಿಸುವ ಇಂತಹ ಅಧಿಕಾರಿಗಳು ಯಾಕೆ ಅಂತ ಸಿದ್ದರಾಮಯ್ಯ ಕಿಡಿಕಾರಿದ್ದು, ಈಗ ಸಿಎಂಗೆ ದೂರು ನೀಡಲು ನಿರ್ಧಾರ ಮಾಡಲಾಗಿದೆ ಅಂತ ಎಸ್.ಜಿ. ಸಿದ್ದರಾಮಯ್ಯ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=sLCBgAzB5us

  • ಆರೋಪಗಳನ್ನು ಪ್ರಶ್ನಿಸಬೇಡಿ, ದಾಖಲೆ ಸಹಿತ ತೋರಿಸಿ- ಪತ್ರಕರ್ತರ ವಿರುದ್ಧ ಅಮಿನ್ ಮಟ್ಟು ಕಿಡಿ

    ಆರೋಪಗಳನ್ನು ಪ್ರಶ್ನಿಸಬೇಡಿ, ದಾಖಲೆ ಸಹಿತ ತೋರಿಸಿ- ಪತ್ರಕರ್ತರ ವಿರುದ್ಧ ಅಮಿನ್ ಮಟ್ಟು ಕಿಡಿ

    ತುಮಕೂರು: ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಪ್ರಶ್ನೆ ಮಾಡಿದ ಪತ್ರಕರ್ತರ ವಿರುದ್ಧ ಹಿರಿಯ ಪತ್ರಕರ್ತ, ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ ಸಿದ್ದರಾಮಯ್ಯ ಸಿಡಿಮಿಡಿಗೊಂಡ ಘಟನೆ ನಡೆಯಿತು.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕರಾವಳಿಯಲ್ಲಿನ ಕೋಮುಗಲಭೆ ಹೆಚ್ಚಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣ ಎಂಬ ಆರೋಪ ಇದೆ ಎಂಬ ಪ್ರಶ್ನೆಗೆ ಆಕ್ರೋಶ ಭರಿತರಾದ ಸಿದ್ದಲಿಂಗಯ್ಯ ಹಾಗೂ ದಿನೇಶ್ ಅಮಿನ್ ಮಟ್ಟು, ಆರೋಪಗಳನ್ನು ಪ್ರಶ್ನಿಸಬೇಡಿ, ದಾಖಲೆ ಸಹಿತ ತೋರಿಸಿ ಎಂದು ಪತ್ರಕರ್ತರನ್ನು ಬಾಯಿ ಮುಚ್ಚಿಸಲು ಯತ್ನಿಸಿದರು.

    ಎಸ್ ಜಿ ಸಿದ್ದರಾಮಯ್ಯ ಅವರು ಚಿಕ್ಕನಾಯಕನ ಹಳ್ಳಿ ಕ್ಷೇತ್ರದಲ್ಲಿ ತಮ್ಮ ಸಮುದಾಯದ ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು ಅವರನ್ನು ಬೆಂಬಲಿಸುತ್ತಿರಿ ಎನ್ನುವ ಆರೋಪದ ಪ್ರಶ್ನೆ ಕೇಳಿದಾಗ ಸಿದ್ದರಾಮಯ್ಯ ಕೆಂಡಾಮಂಡಲವಾಗಿ ಯಾವ ಮೂರ್ಖರು ಹಾಗಂತ ಹೇಳಿದ್ದು? ಎಂದು ಏರು ಧ್ವನಿಯಲ್ಲಿ ಮಾತನಾಡಿ ಮಾಧ್ಯಮದವರ ಬಾಯಿ ಮುಚ್ಚಿಸುವ ಯತ್ನಮಾಡಿದರು.

    ಸುದ್ದಿಗೋಷ್ಠಿ ನಡೆಸಲು ಬಂದಿದ್ದ ದಿನೇಶ್ ಅಮಿನ್ ಮಟ್ಟು ಹಾಗೂ ಸಿದ್ದರಾಮಯ್ಯರ ಧೋರಣೆ ಖಂಡಿಸಿ ಪತ್ರಕರ್ತರು ಪ್ರತಿದಾಳಿ ನಡೆಸಿದಾಗ ಸುಮ್ಮನಾಗಿ ಉತ್ತರ ನೀಡತೊಡಗಿದರು.