Tag: ಎಸ್ ಪಿ ರವಿಚೆನ್ನಣ್ಣನವರ್

  • ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್

    ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್

    ಮೈಸೂರು: ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪೊಲೀಸ್ ಅಧಿಕಾರಿಗಳ ಮೇಲೆ ಮಾಡಿರುವ ಆರೋಪವನ್ನು ಎಸ್‍ಪಿ ರವಿ ಚೆನ್ನಣ್ಣನವರ್ ತಿರಸ್ಕರಿಸಿ, ನಾನು ಯಾರ ಆಳು ಅಲ್ಲ. ಕಾನೂನು ಮತ್ತು ಕರ್ತವ್ಯಕ್ಕೆ ಆಳು ಎಂದು ಹೇಳಿಕೆ ನೀಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿರುವ ಎಸ್‍ಪಿ ರವಿ ಚೆನ್ನಣ್ಣನವರ್, ಮಾನ್ಯ ಸಂಸದರ ಬಗ್ಗೆ ಅಪಾರ ಗೌರವವಿದೆ, ಅವರ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಯಾರ ಪರ ಅಥವಾ ವಿರೋಧವಾಗಿ ಕಾರ್ಯನಿರ್ವಹಿಸುತ್ತಿಲ್ಲ. ನಾವು ಸತ್ಯ ಹಾಗೂ ನ್ಯಾಯದ ಪರ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು.

    ಒಂದು ವೇಳೆ ನನ್ನ ವಿರುದ್ಧ ಅಂತಹ ಅನುಮಾನ ಶಂಕೆ ಇದ್ದರೆ ನನ್ನ ಮೇಲೆ ಒಂದು ವ್ಯವಸ್ಥೆ ಇದೆ. ಹಿರಿಯ ಅಧಿಕಾರಿಗಳು, ಜಿಲ್ಲಾಡಳಿತ ವ್ಯವಸ್ಥೆ ಇದ್ದು ಅಲ್ಲಿ ದೂರು ನೀಡಬಹುದು. ನಾನೇ ಅಂತಿಮನಲ್ಲ. ಯಾವ ಘಟನೆಯಲ್ಲಿ ಈ ರೀತಿ ಪಕ್ಷಪಾತವಾಗಿದೆ ಎಂಬುವುದನ್ನು ಸಂಸದರು ಸ್ಪಷ್ಟಪಡಿಸಬೇಕು. ಯಾರಿಗೆ ಅನ್ಯಾಯವಾಗಿದ್ದರೂ ಪರಿಹಾರ ಸಿಗುತ್ತದೆ. ಸಂಸದರ ಆರೋಪಗಳು ಅವರ ನನ್ನ ನಡುವಿನ ಸಣ್ಣ ಸಂವಹನ ಕೊರತೆಯಿಂದ ಉಂಟಾಗಿದೆ. ಈ ಕುರಿತು ಸ್ವತಃ ನಾನೇ ಕರೆಮಾಡಿ ಮಾತನಾಡುತ್ತೇನೆ ಎಂದರು.

    ಇನ್ನೂ ಭಾಷಣ ಮಾಡುವ ಕುರಿತ ಟೀಕೆಗೆ ಉತ್ತರಿಸಿದ ಅವರು, ನಾನು ಭಾಷಣ ಮಾಡುವುದು ಕಾನೂನು, ಕೋರ್ಟ್, ಅಧಿಕಾರಿಗಳು, ಪ್ರಜಾಪ್ರಭುತ್ವ, ಪೊಲೀಸ್ ಪೇದೆ ಕರ್ತವ್ಯಗಳ ಅರಿವು ಯಾರಿಗೆ ಇರುವುದಿಲ್ಲವೋ ಅವರ ತಿಳುವಳಿಕೆ ನೀಡಲು ನಾನು ಮಾತನಾಡುತ್ತೇನೆ. ಇದು ನನ್ನ ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

    ಇದುವರೆಗೂ ಹಿರಿಯ ಅಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದ ಮೂಲಕ ಕಾರ್ಯನಿರ್ವಹಿಸಿದ್ದೇವೆ, ಆದರೆ ಸಂಸದರು ಹೇಳಿರುವ ಒಂದು ಸತ್ಯವನ್ನು ನಾನು ಒಪ್ಪಿಕೊಳ್ಳುತ್ತೇನೆ. ನಾನು ಕಲಿಯುವುದು ಇನ್ನು ಇದೆ. ಅವರಿಂದಲೂ ನಾನು ಸಾಕಷ್ಟು ಕಲಿಯುವುದು ಇದೆ. ನನ್ನ ಪೊಲೀಸ್ ವೃತ್ತಿ ಜೀವನದ ಉದ್ದಕ್ಕೂ ಕಲಿಯುತ್ತೇನೆ. ನಾನು ಪರಿಪೂರ್ಣನಲ್ಲ, ಪೊಲೀಸ್ ಇಲಾಖೆಯಲ್ಲಿ 20 ರಿಂದ 30 ವರ್ಷ ಪೇದೆಯಾಗಿ, ಎಎಸ್‍ಐ ಆಗಿ ಕಾರ್ಯನಿರ್ವಹಿಸಿದ ವ್ಯಕ್ತಿಯಿಂದಲೂ ಕಲಿಯುತ್ತೇನೆ. ಗುಲ್ಬರ್ಗ, ಮೈಸೂರು, ಬೆಳಗಾವಿ, ಶಿವಮೊಗ್ಗ ಪ್ರತಿ ಸ್ಥಳದಲ್ಲಿ ಕೆಲಸ ಮಾಡುವ ವೇಳೆಯೂ ಹಲವರು ಒಳ್ಳೆ ವ್ಯಕ್ತಿಗಳಿಂದ ಉತ್ತಮ ಅಂಶಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದರು. ( ಇದನ್ನೂ ಓದಿ: ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್ )

    ಸಂಸದರನ್ನು ಕೂಡಲೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಕ್ಕೆ, ಪ್ರಕರಣದ ಕುರಿತು ತನಿಖೆ ನಡೆಸಲು ತನಿಖಾಧಿಕಾರಿಗಳಿದ್ದಾರೆ. ಯಾವುದೇ ವ್ಯಕ್ತಿಯನ್ನು ಬಂಧಿಸಿದ ನಂತರ ಆರೋಗ್ಯ ತಪಾಸಣೆ ಸೇರಿದಂತೆ ಹಲವು ಕಾನೂನು ಕ್ರಮಗಳಿರುತ್ತವೆ. ಅವುಗಳನ್ನು ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದರು.

    ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದರು. ಆಳುವವರ ಅಣತಿ ಮೀರುವ ಹಾಗಿಲ್ಲ ಅಲ್ವಾ ಸಾರ್ ಅಂತ ಟ್ವಿಟರ್‍ನಲ್ಲಿ ಎಸ್‍ಪಿ ಗೆ ಪರೋಕ್ಷವಾಗಿ ಪ್ರಶ್ನೆ ಮಾಡಿದ್ದರು. ಅಲ್ಲದೇ ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಅಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿದ ಎಸ್.ಪಿ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪಾ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ. ಭಾಷಣ ನಿಲ್ಲಿಸಿ ಅಂತ ಟ್ವೀಟ್ ಮಾಡಿದ್ದಾರೆ. ನನ್ನ ರಾಜಕೀಯ ಭವಿಷ್ಯಕ್ಕಿಂತ ನನ್ನ ಧರ್ಮ, ಸಂಪ್ರದಾಯ ರಕ್ಷಣೆ ನನಗೆ ಮುಖ್ಯ ಅಂತ ಪ್ರತಾಪ್ ಸಿಂಹ ಹೇಳಿದ್ದರು.  ( ಇದನ್ನೂ ಓದಿ: ನಾನು ಕಾನೂನು ಉಲ್ಲಂಘಿಸಿಲ್ಲ, ಜಿಲ್ಲಾಡಳಿತ, ಪೊಲೀಸರಿಂದಲೇ ತಪ್ಪಾಗಿದೆ: ಪ್ರತಾಪ್ ಸಿಂಹ )

    https://www.youtube.com/watch?v=26wWJftihNg

    https://www.youtube.com/watch?v=yzTzIO0gaXM

  • ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್

    ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್

    ಮೈಸೂರು: ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಆಳುವವರ ಅಣತಿ ಮೀರುವ ಹಾಗಿಲ್ಲ ಅಲ್ವಾ ಸಾರ್ ಅಂತ ಟ್ವಿಟರ್‍ನಲ್ಲಿ ಎಸ್‍ಪಿ ಗೆ ಪರೋಕ್ಷವಾಗಿ ಪ್ರಶ್ನೆ ಮಾಡಿದ್ದಾರೆ. ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಅಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿದ ಎಸ್.ಪಿ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪಾ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ. ಭಾಷಣ ನಿಲ್ಲಿಸಿ ಅಂತ ಟ್ವೀಟ್ ಮಾಡಿದ್ದಾರೆ. ನನ್ನ ರಾಜಕೀಯ ಭವಿಷ್ಯಕ್ಕಿಂತ ನನ್ನ ಧರ್ಮ, ಸಂಪ್ರದಾಯ ರಕ್ಷಣೆ ನನಗೆ ಮುಖ್ಯ ಅಂತ ಪ್ರತಾಪ್ ಸಿಂಹ ಹೇಳಿದ್ದಾರೆ.

    12 ಗಂಟೆ ಬಳಿಕ ರಿಲೀಸ್: ಭಾನುವಾರ ಕಾರಿನಲ್ಲಿ ಬ್ಯಾರಿಕೇಡ್ ಗೆ ಗುದ್ದಿ ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ಉದ್ಧಟತನ ಪ್ರದರ್ಶನ ಮಾಡಿದ್ದಕ್ಕೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಹುಣಸೂರು, ಹೆಚ್.ಡಿ.ಕೋಟೆ, ಕೆ.ಆರ್.ನಗರ, ಮೈಸೂರು, ನರಸೀಪುರ ಸೇರಿದಂತೆ ಮೊದಲಾದ ಕಡೆ ಸುಮಾರು 8 ಗಂಟೆ ಕಾಲ ರೌಂಡ್ ಹೊಡೆಸಿದ ನಂತರ ರಾತ್ರಿ 11 ಗಂಟೆ ಹೊತ್ತಿಗೆ ಟೀ ನರಸೀಪುರ ಪಟ್ಟಣ ಠಾಣೆಗೆ ಕರೆತಂದಿದ್ದರು. ಅಲ್ಲಿ ಪ್ರತಾಪ್ ಸಿಂಹ ಸ್ಟೇಷನ್ ಬೇಲ್ ಪಡೆದು ರಿಲೀಸ್ ಆಗಿದ್ದಾರೆ.

    ನಂತರ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಿಮಗೆ ನಿಮ್ಮ ಅಹಂ ದೊಡ್ಡದಾಗಿತ್ತು. ಆದರೆ ಅದು ನಿಮ್ಮ ಮನಸ್ಥಿತಿಯಲ್ಲಿರುವ ಲೋಪ. ಅದನ್ನು ಅಡ್ಡ ತಂದು ನಮ್ಮ ಮೇಲೆ ಗಧಾಪ್ರಹಾರ ಮಾಡಬೇಡಿ. 2015ರಲ್ಲಿ ನೀವು ಬ್ಯಾನ್ ಮಾಡಿದ 3 ರಸ್ತೆಯಲ್ಲಿ ಸುಸೂತ್ರವಾಗಿ ಹನುಮ ಜಯಂತಿ ನಡೆದಿತ್ತು. ಆದರೆ ಇದೀಗ ಅವಕಾಶವೇ ಕೊಡುತ್ತಿಲ್ಲ. ನಾನೊಬ್ಬ ಸಂಸದನಾಗಿ ಹುಣಸೂರಿಗೆ ಹೋಗಿ ಕಾನೂನು ಉಲ್ಲಂಘನೆ ಮಾಡುತ್ತೀನಿ ಎಂದು ನಿಮಗೆ ಕನಸು ಬಿದ್ದಿತ್ತಾ ಎಂದು ಸರ್ಕಾರವನ್ನ ಪ್ರಶ್ನೆ ಮಾಡಿದ್ರು.