Tag: ಎ.ಆರ್.ಬಾಬು

  • ಶಿಷ್ಯ ಪ್ರೇಮ್ ಮೇಲೆ ಮುನಿಸಿಕೊಂಡಿದ್ದ ಎ.ಆರ್.ಬಾಬು

    ಶಿಷ್ಯ ಪ್ರೇಮ್ ಮೇಲೆ ಮುನಿಸಿಕೊಂಡಿದ್ದ ಎ.ಆರ್.ಬಾಬು

    ಬೆಂಗಳೂರು: ನಿರ್ದೇಶಕ ಎ.ಆರ್.ಬಾಬು ನಿಧನಕ್ಕೆ ಇಡೀ ಚಿತ್ರರಂಗವೇ ಕಣ್ಣೀರು ಇಡುತ್ತಿದೆ. ನಿರ್ದೇಶಕ ಜೋಗಿ ಪ್ರೇಮ್ ಸಹ ಬಾಬು ಅವರ ಗರಡಿಯಲ್ಲಿ ಪಳಗಿದ್ದರು. ಆದ್ರೆ ಕೆಲ ತಿಂಗಳ ಹಿಂದೆ ಬಾಬು ತಮ್ಮ ಶಿಷ್ಯನ ಮೇಲೆ ಮುನಿಸಿಕೊಂಡಿದ್ದರು.

    ದಿ ವಿಲನ್ ಸಿನಿಮಾ ಬಿಡುಗಡೆಗೆ ಮುನ್ನ ಚಿತ್ರದ ಹಾಡಿನ ಸಾಹಿತ್ಯ ಹಲವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವೇಳೆ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಲು ಪ್ರೇಮ್ ಫೇಸ್ ಬುಕ್ ಲೈವ್ ಬಂದಿದ್ದರು. ಕೆಲ ನಿರ್ದೇಶಕರು ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಟಿ ಮಾಲ್‍ನಲ್ಲಿ ವಿಲನ್ ಚಿತ್ರದ ಟೀಸರ್ ಬಿಡುಗಡೆ ಮಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸುವ ಪ್ರೆಕ್ಷಕರಿಗೆ 500 ರೂ. ಟಿಕೆಟ್ ದರವನ್ನು ನಿಗದಿ ಮಾಡಿದ್ದೇವೆ. ಅಲ್ಲಿ ಸಂಗ್ರಹವಾದ ಆ ಹಣವನ್ನು ಹಿರಿಯ ನಿರ್ದೇಶಕರ ಕುಟುಂಬಕ್ಕೆ ಅಲ್ಲೆ ನೀಡಲಾಗುವುದು ಅಂದಿದ್ದರು. ಇದನ್ನೂ ಓದಿ: ನನ್ನ ಆತ್ಮೀಯ ಅಲ್ಲಾಹುವಿನ ಪಾದ ಸೇರಿದ-ಎಆರ್ ಬಾಬು ನಿಧನಕ್ಕೆ ಜಗ್ಗೇಶ್ ಕಂಬನಿ

    ಈ ವೇಳೆ ತಮ್ಮ ಮಾತಿನಲ್ಲಿ ಹಣಕಾಸಿನ ಸಮಸ್ಯೆ ಎದುರಿಸುತ್ತಿರುವ ನಿರ್ದೇಶಕರು ಎ.ಟಿ.ರಘು, ಎ.ಆರ್.ಬಾಬು ಸೇರಿದಂತೆ ಹಲವರು ನಿರ್ಗತಿಕರಾಗಿದ್ದಾರೆ ಎಂದು ಹೇಳಿದ್ದರು. ನಿರ್ದೇಶಕರಿಗೆ ನಿರ್ಗತಿಕರು ಎಂಬ ಪದ ಬಳಸಿದ್ದಕ್ಕೆ ಎ.ಆರ್.ಬಾಬು ಆಕ್ರೋಶ ವ್ಯಕ್ತಪಡಿಸಿದ್ದರು. ಚಂದನವನದ ಹಿರಿಯ ನಿರ್ದೇಶಕರು ಆರ್ಥಿಕ ಸಂಕಷ್ಟದಲ್ಲಿರೋದು ನಿಜ. ಆದ್ರೆ ಪ್ರೇಮ್ ನಿರ್ಗತಿಕರು ಎಂಬ ಪದ ಬಳಸಿರೋದು ತಪ್ಪು. ನಿರ್ಗತಿಕರು ಅಂದ್ರೆ ಯಾರು ಇಲ್ಲದವರರು ಎಂದರ್ಥವಾಗುತ್ತದೆ ಎಂದು ಬಾಬು ಅವರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನ್ನ ಆತ್ಮೀಯ ಅಲ್ಲಾಹುವಿನ ಪಾದ ಸೇರಿದ-ಎಆರ್ ಬಾಬು ನಿಧನಕ್ಕೆ ಜಗ್ಗೇಶ್ ಕಂಬನಿ

    ನನ್ನ ಆತ್ಮೀಯ ಅಲ್ಲಾಹುವಿನ ಪಾದ ಸೇರಿದ-ಎಆರ್ ಬಾಬು ನಿಧನಕ್ಕೆ ಜಗ್ಗೇಶ್ ಕಂಬನಿ

    ಬೆಂಗಳೂರು: ನಿರ್ದೇಶಕ ಎ.ಆರ್.ಬಾಬು ನಿಧನಕ್ಕೆ ನಟ ಜಗ್ಗೇಶ್ ಕಂಬನಿ ಮಿಡಿದು ಟ್ವೀಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಬು ಅವರು ವಿಧಿವಶರಾಗಿದ್ದರು.

    ಜಗ್ಗೇಶ್ ಟ್ವೀಟ್:
    ನನ್ನ ಆತ್ಮೀಯ ಸಹೋದರ ನಿರ್ದೇಶಕ ಎ.ಆರ್.ಬಾಬು ಅಲ್ಲಾಹುವಿನ ಪಾದಸೇರಿದ. ಯಾರದೋ ದುಡ್ಡು, ಕಾಸಿದ್ದವನೆ ಬಾಸ್ ಎರಡು ಚಿತ್ರಗಳಲ್ಲಿ ನನ್ನ ಜೊತೆ ಕೆಲಸ ಮಾಡಿದ್ದ. ಚಂದನವನಕ್ಕೆ ನಿರ್ದೇಶಕ ಪ್ರೇಮ್ ನನ್ನು ಪರಿಚಯಿಸಿದ ಮಹನೀಯ. ನಮ್ಮಿಬ್ಬರ ಗೆಳೆತನ 30 ವರ್ಷದ್ದು, ನೋವಿನಿಂದ ಮಿತ್ರನಿಗೆ ವಿದಾಯ ಹೇಳುತ್ತಿದ್ದೇನೆ. ನಿನ್ನ ಆತ್ಮ ಅಲ್ಲಾಹುವಿನಲ್ಲಿ ಲೀನವಾಗಲಿ ಗೆಳೆಯ I Miss Your Friendship #RIP ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ಹಲೋ ಯಮ, ಖಳನಾಯಕ, ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ, ಕಾಸಿದ್ದವನೇ ಬಾಸು, ಸಪ್ನೋಂಕಿ ರಾಣಿ, ಚಮ್ಕಾಯಿಸಿ ಚಿಂದಿ ಉಡಾಯಿಸಿ, ಕೂಲಿ ರಾಜ, ಮರುಜನ್ಮ ಸಿನಿಮಾಗಳು ಬಾಬು ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದವು. ಚಂದನವನದ ಹಿರಿಯ ನಿರ್ದೇಶಕರಾಗಿದ್ದ ಬಾಬು ಅವರ ಗರಡಿಯಲ್ಲಿ ಜೋಗಿ ಪ್ರೇಮ್ ಪಳಗಿದ್ದರು. ನಿರ್ದೇಶಕನ ಸಾವಿಗೆ ಸ್ಯಾಂಡಲ್‍ವುಡ್ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ನಟ ಮತ್ತು ನಿರ್ದೇಶಕರಾಗಿದ್ದ ಎ.ಆರ್. ಬಾಬು ಚಂದನವನದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಬಾಬು ಅವರಿಗೆ 56 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಬು ಡಯಾಲಿಸಿಸ್ ಗೆ ಒಳಗಾಗುತ್ತಿದ್ದರಂತೆ. ಅನಾರೋಗ್ಯದಿಂದಾಗಿ ತೀವ್ರವಾಗಿ ಬಳಲಿದ್ದ ಬಾಬು ಅವರು ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿರ್ದೇಶಕ ಎ.ಆರ್.ಬಾಬು ಇನ್ನಿಲ್ಲ

    ನಿರ್ದೇಶಕ ಎ.ಆರ್.ಬಾಬು ಇನ್ನಿಲ್ಲ

    ಬೆಂಗಳೂರು: ನಿರ್ದೇಶಕ, ನಟ ಎ.ಆರ್. ಬಾಬು ಇಂದು ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಬು ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

    ನಟ ಮತ್ತು ನಿರ್ದೇಶಕರಾಗಿದ್ದ ಎ.ಆರ್. ಬಾಬು ಚಂದನವನದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಬಾಬು ಅವರಿಗೆ 56 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಬು ಡಯಾಲಿಸಿಸ್ ಗೆ ಒಳಗಾಗುತ್ತಿದ್ದರಂತೆ. ಅನಾರೋಗ್ಯದಿಂದಾಗಿ ತೀವ್ರವಾಗಿ ಬಳಲಿದ್ದ ಬಾಬು ಅವರು ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾರೆ.

    ಹಲೋ ಯಮ, ಖಳನಾಯಕ, ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ, ಕಾಸಿದ್ದವನೇ ಬಾಸು, ಸಪ್ನೋಂಕಿ ರಾಣಿ, ಚಮ್ಕಾಯಿಸಿ ಚಿಂದಿ ಉಡಾಯಿಸಿ, ಕೂಲಿ ರಾಜ, ಮರುಜನ್ಮ ಸಿನಿಮಾಗಳು ಬಾಬು ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದವು. ಚಂದನವನದ ಹಿರಿಯ ನಿರ್ದೇಶಕರಾಗಿದ್ದ ಬಾಬು ಅವರ ಗರಡಿಯಲ್ಲಿ ಜೋಗಿ ಪ್ರೇಮ್ ಪಳಗಿದ್ದರು. ನಿರ್ದೇಶಕನ ಸಾವಿಗೆ ಸ್ಯಾಂಡಲ್‍ವುಡ್ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೇಮ್ ಬಳಸಿದ ಪದಕ್ಕೆ ನಿರ್ದೇಶಕ ಎ.ಆರ್.ಬಾಬು ಅಸಮಾಧಾನ

    ಪ್ರೇಮ್ ಬಳಸಿದ ಪದಕ್ಕೆ ನಿರ್ದೇಶಕ ಎ.ಆರ್.ಬಾಬು ಅಸಮಾಧಾನ

    ಬೆಂಗಳೂರು: ದಿ ವಿಲನ್ ಸಿನಿಮಾ ಸಾರಥಿ ಪ್ರೇಮ್ ವಿರುದ್ಧ ಹಿರಿಯ ನಿರ್ದೇಶಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ದಿ ವಿಲನ್ ಚಿತ್ರದ ಹಾಡೊಂದು ವಿವಾದವಾಗಿದ್ದರಿಂದ ನಿರ್ದೇಶಕ ಪ್ರೇಮ್, ಫೇಸ್‍ಬುಕ್‍ನಲ್ಲಿ ಲೈವ್ ಬಂದು ಸ್ಪಷ್ಟನೆ ನೀಡುವ ವೇಳೆ ಕೆಲ ನಿರ್ದೇಶಕರು ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಟಿ ಮಾಲ್‍ನಲ್ಲಿ ವಿಲನ್ ಚಿತ್ರದ ಟೀಸರ್ ಬಿಡುಗಡೆ ಮಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸುವ ಪ್ರೆಕ್ಷಕರಿಗೆ 500 ರೂ. ಟಿಕೆಟ್ ದರವನ್ನು ನಿಗದಿ ಮಾಡಿದ್ದೇವೆ. ಅಲ್ಲಿ ಸಂಗ್ರಹವಾದ ಆ ಹಣವನ್ನು ಹಿರಿಯ ನಿರ್ದೇಶಕರ ಕುಟುಂಬಕ್ಕೆ ಅಲ್ಲೆ ನೀಡಲಾಗುವುದು ಅಂತಾ ತಿಳಿಸಿದ್ದರು. ಇದನ್ನೂ ಓದಿ: ವಿವಾದಕ್ಕೆ ಗುರಿಯಾಗ್ತಿದೆ `ದಿ ವಿಲನ್’ ಹಾಡು?

    ಈ ವೇಳೆ ತಮ್ಮ ಮಾತಿನಲ್ಲಿ ಹಣಕಾಸಿನ ಸಮಸ್ಯೆ ಎದುರಿಸುತ್ತಿರುವ ನಿರ್ದೇಶಕರು ಎ.ಟಿ.ರಘು, ಎ.ಆರ್.ಬಾಬು ಸೇರಿದಂತೆ ಹಲವರು ನಿರ್ಗತಿಕರಾಗಿದ್ದಾರೆ ಎಂದು ಹೇಳಿದ್ದರು. ನಿರ್ದೇಶಕರಿಗೆ ನಿರ್ಗತಿಕರು ಎಂಬ ಪದ ಬಳಸಿದ್ದಕ್ಕೆ ಎ.ಆರ್.ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಚಂದನವನದ ಹಿರಿಯ ನಿರ್ದೇಶಕರು ಆರ್ಥಿಕ ಸಂಕಷ್ಟದಲ್ಲಿರೋದು ನಿಜ. ಆದ್ರೆ ಪ್ರೇಮ್ ನಿರ್ಗತಿಕರು ಎಂಬ ಪದ ಬಳಸಿರೋದು ತಪ್ಪು. ನಿರ್ಗತಿಕರು ಅಂದ್ರೆ ಯಾರು ಇಲ್ಲದವರರು ಎಂದರ್ಥವಾಗುತ್ತದೆ ಎಂದು ಬಾಬು ಹೇಳಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಬಾಸ್ ಅಂದ್ರೂ ಖುಷಿನೇ, ಯಶ್ ಬಾಸ್ ಅಂದ್ರೂ ಸಂತೋಷನೇ – ಅವರವರ ಮನೆಗೆ ಅವರೇ ಬಾಸ್ ಎಂದ ಸೆಂಚುರಿ ಸ್ಟಾರ್ ಶಿವಣ್ಣ

    https://www.facebook.com/prems.picttures/videos/1803728239684112/