Tag: ಎ.ಎಸ್.ಪಾಟೀಲ್ ನಡಹಳ್ಳಿ

  • ಯತ್ನಾಳ್ ಪೇಪರ್ ಹುಲಿ, ಯಡಿಯೂರಪ್ಪ ಕಾಲಿನ ಧೂಳಿಗೂ ಸಮವಲ್ಲ: ಎ.ಎಸ್.ಪಾಟೀಲ್

    ಯತ್ನಾಳ್ ಪೇಪರ್ ಹುಲಿ, ಯಡಿಯೂರಪ್ಪ ಕಾಲಿನ ಧೂಳಿಗೂ ಸಮವಲ್ಲ: ಎ.ಎಸ್.ಪಾಟೀಲ್

    – ಯಡಿಯೂರಪ್ಪಗೆ ದ್ರೋಹ ಮಾಡಿದ್ರೆ ಶಾಪ ತಟ್ಟುತ್ತೆ ಎಂದ ಬಿಜೆಪಿ ಮುಖಂಡ

    ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹುಲಿ ಅಲ್ಲ ಇಲಿ. ಅವರೊಬ್ಬ ಪೇಪರ್ ಹುಲಿ ಎಂದು ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ (A S Patil Nadahalli) ವಾಗ್ದಾಳಿ ನಡೆಸಿದರು.

    ಯತ್ನಾಳ್‌ರಿಂದ ಹೊಸ ಪಕ್ಷ ಸ್ಥಾಪನೆ ಘೋಷಣೆ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಮಾಧ್ಯಮಗಳು ಸೃಷ್ಟಿದ ಹುಲಿ. ಗ್ರೌಂಡ್‌ನಲ್ಲಿ ಅದು ಹುಲಿ ಅಲ್ಲ ಇಲಿ. ಯತ್ನಾಳ್‌ರನ್ನ ಉಚ್ಚಾಟನೆ ಮಾಡಿದಾಗ 2-3 ಸಾವಿರ ಜನ ಸೇರಿ ಪ್ರತಿಭಟನೆ ಮಾಡಿಲ್ಲ. ಇಬ್ಬರು ಮಾತ್ರ ರಾಜೀನಾಮೆ ಕೊಟ್ಟಿದ್ದರು. ಬೀದಿಗೆ ಇಳಿದು ಪ್ರತಿಭಟನೆ ಮಾಡಿಲ್ಲ. ಹಿಂದು ಹುಲಿ ಎಂದು ಹೇಳಿಕೊಳ್ಳುತ್ತಾರೆ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಈಗ ಸ್ವತಃ ಯತ್ನಾಳ್ ಅವರೇ ನಾನು ಹುಲಿನಾ, ಇಲಿನಾ ಅಂತ ನೋಡಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: L2: Empuraan ವಿವಾದ- ನನ್ನ ಮಗನನ್ನ ಬಲಿಪಶುವನ್ನಾಗಿ ಮಾಡಲಾಗಿದೆ: ಪೃಥ್ವಿರಾಜ್ ಸುಕುಮಾರನ್ ತಾಯಿ

    ಸ್ವಂತ ಕ್ಷೇತ್ರದಲ್ಲಿ ಯತ್ನಾಳ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ (BJP) ಲೀಡ್ ಕೊಡೋದಕ್ಕೆ ಆಗಲಿಲ್ಲ. ಇಂತಹವರು ಹೊಸ ಪಕ್ಷ ಕಟ್ಟಿ ಸಾಧನೆ ಮಾಡಲು ಸಾಧ್ಯನಾ? ಹೊಸ ವರ್ಷ ಪ್ರಾರಂಭ ಆಗಿದೆ. ಹೊಸ ಯೋಜನೆ ಬಗ್ಗೆ ಮಾತಾಡೋಣ. ವಿಜಯೇಂದ್ರ ನೇತೃತ್ವದಲ್ಲಿ, ಹಿಂದುತ್ವದ ಆಧಾರದಲ್ಲಿ ಪಕ್ಷ ಕಟ್ಟುವ ಸಂಕಲ್ಪ ಮಾಡಿದ್ದೇವೆ. ಸಂಕಲ್ಪ ಸಾಕಾರ ಮಾಡಲು ವಿಜಯೇಂದ್ರ (Vijayendra) ನೇತೃತ್ವದಲ್ಲಿ ಕೆಲಸ ಮಾಡೋಣ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಗೆ ಬಹುಮತ ಬರಲಿದೆ ಎಂದು ಭವಿಷ್ಯ ನುಡಿದರು.

    ಮಹಾಭಾರತದಲ್ಲಿ ಶಿಶುಪಾಲ (Shishupala) ಬರುತ್ತಾನೆ. ಶಿಶುಪಾಲ, ಶ್ರೀಕೃಷ್ಣನ ಬಗ್ಗೆ ಚುಚ್ಚಿ ಚುಚ್ಚಿ ಮಾತಾಡಿದ. ಅವನ ಅಂತ್ಯ ಹೇಗಾಯ್ತು. ಕಲಿಯುಗದ ಶಿಶುಪಾಲ ಯತ್ನಾಳ್. ಶಿಶುಪಾಲನಿಗೆ ಆದ ಶಿಕ್ಷೆಯನ್ನೇ ಜನರು ಯತ್ನಾಳ್‌ಗೆ ಕೊಡುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೀರತ್‌ ಮಾದರಿ ಪೀಸ್‌ ಪೀಸ್‌ ಮಾಡಿ ಡ್ರಮ್‌ಗೆ ತುಂಬಿಬಿಡ್ತೀನಿ – ಮಚ್ಚು ಹಿಡಿದು ಗಂಡನಿಗೆ ಎಚ್ಚರಿಕೆ ಕೊಟ್ಟ ʻಮಚ್ಚೇಶ್ವರಿʼ!

    2008ರಲ್ಲಿ ಅವರ ವಿರುದ್ಧ ನಾನೇ ಚುನಾವಣೆಗೆ ನಿಂತಿದ್ದೆ. ವಿದ್ಯಾರ್ಥಿ ಪರಿಷತ್, ಸಂಘದ ಪಾಠ ಕಲಿತು ಬಂದವನು ನಾನು. ಯತ್ನಾಳ್‌ನನ್ನು ಬಿಟ್ಟರೆ ಯಾರು ಇಲ್ಲ. ನಾನೇ ಇಲ್ಲಿ ಎಲ್ಲಾ ಅಂತ ಮಾತಾಡ್ತಿದ್ದರು. ಅವತ್ತು ನನ್ನ ವಿರುದ್ಧ ಯತ್ನಾಳ್ ಸೋತಿದ್ದರು ಎಂದರು.

    2023ರ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರದಲ್ಲಿ (Vijayapura) ನಾವು 7 ಜನ ಸೋತಿದ್ದೆವು. ಯತ್ನಾಳ್ ಅವರೊಬ್ಬರು ಗೆದ್ದಿದ್ದರು. ಎಂಪಿ ಚುನಾವಣೆಗೆ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಮಾಡಿದ್ದೆವು. ಯತ್ನಾಳ್ ಆ ಸಭೆಗೆ ಬಂದಿರಲಿಲ್ಲ. ಸೋತವರು ಚುನಾವಣೆ ಗೆಲ್ಲಿಸುತ್ತೇವೆ ಅಂತ ಹೇಳಿದ್ದೆವು ಅದರಂತೆ ಗೆದ್ದೆವು. ವಿಜಯಪುರದಲ್ಲಿ ಲೀಡ್ ಕೊಟ್ಟು, ಹಿಂದೂ ಹುಲಿ ಕ್ಷೇತ್ರದಲ್ಲಿ 10 ಸಾವಿರ ಲೀಡ್ ಕಾಂಗ್ರೆಸ್‌ಗೆ ಹೋಯಿತು. ಯತ್ನಾಳ್ ಹುಲಿನೂ ಅಲ್ಲ, ಇಲಿನೂ ಅಲ್ಲ. ಈಗ ಅದು ಬಿಲ ಸೇರಿಕೊಂಡಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬೆಂಗ್ಳೂರು ಸೇರಿದಂತೆ ದೇಶದ ವಿವಿಧೆಡೆ ವಕ್ಫ್‌ ಬಿಲ್‌ಗೆ ವಿರೋಧ – ಕಪ್ಪು ಪಟ್ಟಿ ಧರಿಸಿ ರಂಜಾನ್‌ ಪ್ರಾರ್ಥನೆ

    ಆದಷ್ಟು ಬೇಗ ವಿಜಯಪುರದಲ್ಲಿ ಸಮಾವೇಶ ಮಾಡಬೇಕು ಎಂದು ನಾವು ವಿಜಯೇಂದ್ರ ಅವರಲ್ಲಿ ಮನವಿ ಮಾಡುತ್ತೇವೆ. ಪಕ್ಷ ಕಟ್ಟುತ್ತೇವೆ, ಸ್ಥಳೀಯ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಯತ್ನಾಳ್ ಅವರ ಬೆದರಿಕೆ ತಂತ್ರ ನಡೆಯೋದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ವಿಜಯ್‌ ಸೇತುಪತಿಗೆ ‘ಅಪ್ಪು’ ಚಿತ್ರದ ನಿರ್ದೇಶಕ ಆ್ಯಕ್ಷನ್ ಕಟ್- ಜೂನ್‌ನಿಂದ ಶೂಟಿಂಗ್‌ ಶುರು

    ಯತ್ನಾಳ್‌ಗೆ ಯಡಿಯೂರಪ್ಪ ಅವರು ರಾಜಕೀಯ ಪುನರ್ ಜನ್ಮ ಕೊಟ್ಟಿದ್ದಾರೆ. ಯತ್ನಾಳ್ ಯಾರ ವಿರುದ್ಧ ಮಾತನಾಡಿಲ್ಲ ಹೇಳಿ. ವಾಜಪೇಯಿ, ಮೋದಿ, ಜೋಶಿ, ಜಗದೀಶ್ ಶೆಟ್ಟರ್ ಎಲ್ಲರ ಬಗ್ಗೆ ಮಾತಾಡಿದ್ದರು. ಯಡಿಯೂರಪ್ಪಗೆ (Yediyurappa) ಈ ಯತ್ನಾಳ್ ಜೀವನ ಪರ್ಯಂತ ಋಣಿಯಾಗಿರಬೇಕು. 2018ರಲ್ಲಿ ಕರೆದು ಟಿಕೆಟ್ ಕೊಟ್ಟು ಗೆಲ್ಲಿಸಿದ್ದರು. ಪುಣ್ಯಾತ್ಮ ಯಡಿಯೂರಪ್ಪ ಅವರಿಗೆ ದ್ರೋಹ ಮಾಡಿದರೆ ಅದರ ಶಾಪ ತಟ್ಟುತ್ತದೆ. ಶಿಶುಪಾಲನಿಗೆ ಆದ ರೀತಿಯೇ ಯತ್ನಾಳ್‌ಗೆ ರಾಜಕೀಯ ವಧೆ ಮಾಡುವ ಕೆಲಸ ಜನರು ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

  • ಕಾರ್ಮಿಕರನ್ನು ಕರೆ ತರಲು ರಸ್ತೆ ಬದಿಯಲ್ಲೇ ಮಲಗಿದ ಶಾಸಕ ನಡಹಳ್ಳಿ

    ಕಾರ್ಮಿಕರನ್ನು ಕರೆ ತರಲು ರಸ್ತೆ ಬದಿಯಲ್ಲೇ ಮಲಗಿದ ಶಾಸಕ ನಡಹಳ್ಳಿ

    ವಿಜಯಪುರ: ಕ್ಷೇತ್ರದ ಕಾರ್ಮಿಕರನ್ನು ಕರೆ ತರುವದಕ್ಕಾಗಿ ಹೋಗಿದ್ದ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಗೋವಾ ಗಡಿಯ ರಸ್ತೆ ಬದಿಯಲ್ಲೇ ಮಲಗಿದ್ದಾರೆ.

    ಕ್ಷೇತ್ರದ ಕಾರ್ಮಿಕರು ಜೀವನೋಪಾಯಕ್ಕಾಗಿ ಗೋವಾಕ್ಕೆ ಹೋಗಿದ್ದರು. ಲಾಕ್‍ಡೌನ್‍ನಿಂದ ಕೆಲಸವೂ ಇಲ್ಲದೇ ಸಂಕಷ್ಟದಲ್ಲಿದ್ದ ಕಾರ್ಮಿಕರನ್ನು ಕರೆ ತರಲು ಶಾಸಕರು ಮುಂದಾಗಿದ್ದರು. ಹಾಗಾಗಿ ಗೋವಾ ಗಡಿದ ಭಾಗದವರೆಗೂ ತೆರಳಿ 10 ಸಾರಿಗೆ ಬಸ್ ಗಳಲ್ಲಿ ಕಾರ್ಮಿಕರನ್ನು ಕರೆ ತರಲು ಹೋಗಿದ್ದರು.

    ರಾತ್ರಿ ಚೋರ್ಲಾ-ಖಾನಾಪುರ ಚೆಕ್ ಬಳಿಯ ರಸ್ತೆ ಬದಿಯೇ ಮಲಗಿದ್ದಾರೆ. 350ಕ್ಕೂ ಅಧಿಕ ಕಾರ್ಮಿಕರನ್ನು 10 ಸಾರಿಗೆ ಬಸ್ ಗಳಲ್ಲಿ ಕರೆತಂದಿದ್ದಾರೆ.

  • ಎಂ.ಬಿ.ಪಾಟೀಲ್ ಹುಚ್ಚಾಸ್ಪತ್ರೆ ಸೇರಿ ಚಿಕಿತ್ಸೆ ಪಡೆದುಕೊಳ್ಳುವುದು ಒಳ್ಳೆಯದು: ಶಾಸಕ ನಡಹಳ್ಳಿ

    ಎಂ.ಬಿ.ಪಾಟೀಲ್ ಹುಚ್ಚಾಸ್ಪತ್ರೆ ಸೇರಿ ಚಿಕಿತ್ಸೆ ಪಡೆದುಕೊಳ್ಳುವುದು ಒಳ್ಳೆಯದು: ಶಾಸಕ ನಡಹಳ್ಳಿ

    ವಿಜಯಪುರ: ನನ್ನನ್ನು ಅರೆಹುಚ್ಚ ಎನ್ನುತ್ತಿರುವ ಗೃಹಸಚಿವ ಎಂ.ಬಿ.ಪಾಟೀಲ್ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕೂಡಲೇ ಅವರು ಹುಚ್ಚಾಸ್ಪತ್ರೆ ಸೇರಿ ಚಿಕಿತ್ಸೆ ಪಡೆದುಕೊಳ್ಳುವುದು ಒಳ್ಳೆಯದು ಎಂದು ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ತಿರುಗೇಟು ನೀಡಿದ್ದಾರೆ.

    ಜಿಲ್ಲೆಯ ಮುದ್ದೇಬಿಹಾಳದಲ್ಲಿ ಮಾತನಾಡಿದ ಶಾಸಕರು, ಎಂ.ಬಿ.ಪಾಟೀಲ್ ಮಾನಸಿಕ ಅಸ್ವಸ್ಥರಾಗಿದ್ದಾರೆ. ಹೀಗಾಗಿ ರಾಜ್ಯದ ಗೃಹಮಂತ್ರಿ ಹುದ್ದೆ ನಿರ್ವಹಿಸುವ ಸಾಮರ್ಥ್ಯ ಕಳೆದುಕೊಂಡಿದ್ದಾರೆ. ಚಿಕಿತ್ಸೆ ಪಡೆಯುವವರೆಗೂ ಅವರು ಗೃಹಸಚಿವರಾಗಿ ಕಾರ್ಯನಿರ್ವಹಿಸಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನು ಓದಿ: ಡಿಕೆಶಿ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಎಂ.ಬಿ.ಪಾಟೀಲ್

    ನನ್ನ ಯೋಗ್ಯತೆ ಏನು ಅಂತ ಜಿಲ್ಲೆಯ ಜನತೆಗೆ ಗೊತ್ತಿದೆ. ಎಂ.ಬಿ.ಪಾಟೀಲ್ ಹೇಳಿಕೆಯೇ ಅವರ ಯೋಗ್ಯತೆ ಏನು ಎನ್ನುವುದನ್ನು ತೋರಿಸಿಕೊಡುತ್ತದೆ. ನಾನು 3 ಬಾರಿ ಸ್ವಸಾಮರ್ಥ್ಯದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನೀವು ಅಪ್ಪ ನೆಟ್ಟ ರಾಜಕೀಯ ಆಲದ ಮರದ ಆಶ್ರಯದಲ್ಲಿ ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೀರಿ. ಸ್ವಂತ ಶಕ್ತಿಯ ಮೇಲೆ ನೀವು ಆಯ್ಕೆಯಾಗಿಲ್ಲ ಎಂದು ದೂರಿದರು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀವು ಗೆದ್ದಿರುವ ರೀತಿಯೇ ಸಂಶಯಾಸ್ಪದ. ಇದಕ್ಕೆ ನಿಮ್ಮ ಎದುರು ಬಬಲೇಶ್ವರ ಮತಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರೇ ಸಾಕ್ಷಿ. ನಿಮ್ಮ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಸಿಕ್ಕಿದ್ದು ಉದಾಹರಣೆ. ನಿಮ್ಮ ಯೋಗ್ಯತೆ ಏನು ಅನ್ನೋದು, ವಿಜಯಪುರ ಜಿಲ್ಲೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಹೇಳಿದರು.

    ವಿಜಯಪುರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸುತ್ತಿದ್ದಾಗ ನಿಮ್ಮ ಹಿಂಬಾಲಕರು ಗಲಾಟೆ ನಡೆಸಿದರು. ಗಲಾಟೆ ಮಾಡಿದವರು ನನ್ನ ಹಿಂಬಾಲಕರು ಅಲ್ಲ ಅಂತ ಹೇಳಲಿಕ್ಕೆ ಆಗಲ್ಲ ಎಂದು ನೀವು ಹೇಳಿಕೆ ನೀಡಿದ್ದೀರಿ. ಹೀಗಾಗಿ ಅವರು ನಿಮ್ಮ ಹಿಂಬಾಲಕರು ಎನ್ನುವುದನ್ನು ಒಪ್ಪಿಕೊಂಡಿದ್ದೀರಿ. ರಾಜ್ಯದ ಗೃಹಸಚಿವರಾಗಿ ಹಿಂಬಾಲಕರನ್ನು ಛೂ ಬಿಟ್ಟು ವಿಪಕ್ಷದ ಶಾಸಕರೊಬ್ಬರ ವಿರುದ್ಧ ಗಲಾಟೆ ನಡೆವುದು ಸರಿಯೇ ಎಂದು ಶಾಸಕರು, ಎಂ.ಬಿ.ಪಾಟೀಲ್ ಅವರಿಗೆ ಪ್ರಶ್ನಿಸಿದ್ದಾರೆ.

  • ಹುಚ್ಚುನಾಯಿಗೂ ಜನ ಮರ್ಯಾದೆ ಕೊಡ್ತಾರೆ, ನಡಹಳ್ಳಿಗೆ ಕೊಡಲ್ಲ: ಕೆಪಿಸಿಸಿ ಕಾರ್ಯದರ್ಶಿ ಟೀಕೆ

    ಹುಚ್ಚುನಾಯಿಗೂ ಜನ ಮರ್ಯಾದೆ ಕೊಡ್ತಾರೆ, ನಡಹಳ್ಳಿಗೆ ಕೊಡಲ್ಲ: ಕೆಪಿಸಿಸಿ ಕಾರ್ಯದರ್ಶಿ ಟೀಕೆ

    ವಿಜಯಪುರ: ಎ.ಎಸ್ ಪಾಟೀಲ್ ನಡಹಳ್ಳಿ ಒಬ್ಬ ಪುಟಗೋಸಿ ಶಾಸಕ, ಮಂಗನಂತೆ ಪಕ್ಷದಿಂದ ಪಕ್ಷಕ್ಕೆ ಹಾರುತ್ತಾರೆ. ಹುಚ್ಚುನಾಯಿಗೂ ಜನ ಮರ್ಯಾದೆ ಕೊಡುತ್ತಾರೆ. ಆದ್ರೆ ನಡಹಳ್ಳಿಗೆ ಕೊಡಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ್ ಬಬಲೇಶ್ವರ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಶಾಸಕ ನಡಹಳ್ಳಿ ವಿರುದ್ಧ ಕಿಡಿಕಾರಿದರು. ಈ ಹಿಂದೆ ನಡಹಳ್ಳಿ ಅವರು ಕಳ್ಳ ಎತ್ತು, ಠಕ್ಕ ಎತ್ತು, ವಸೂಲಿ ಎತ್ತು ಎಂದು ಗೃಹ ಸಚಿವ ಎಂ ಬಿ ಪಾಟೀಲ್, ಆರೋಗ್ಯ ಸಚಿವ ಶೀವಾನಂದ ಪಾಟೀಲ್ ಹಾಗೂ ತೋಟಗಾರಿಕಾ ಸಚಿವ ಎಂ.ಸಿ ಮನಗೂಳಿ ವಿರುದ್ಧ ವ್ಯಂಗ್ಯವಾಡಿದ್ದರು. ಈ ವಿಚಾರಕ್ಕೆ ಆಕ್ರೋಶಗೊಂಡಿರುವ ಕಾಂಗ್ರೆಸ್ ಮುಖಂಡರು ನಡಹಳ್ಳಿ ವಿರುದ್ಧ ವಾಕ್ಸಮರ ಮೊಳಗಿಸಿದ್ದಾರೆ. ಮನೆ ಆವರಣಕ್ಕೆ ಹುಚ್ಚು ನಾಯಿ ಬಂದರೆ ಅದಕ್ಕೂ ಜನರು ಮರ್ಯಾದೆ ಕೊಟ್ಟು ಹಚಾ.. ಹಚಾ.. ಎಂದು ಹೊರಗೆ ಓಡಿಸುತ್ತಾರೆ. ಆದ್ರೆ ದೇವರಹಿಪ್ಪರಗಿ ಜನ ನಡಹಳ್ಳಿಯನ್ನ ಹುಚ್ಚು ನಾಯಿಗಿಂತ ಕಡೆಯಾಗಿ ನಡೆಸಿಕೊಂಡಿದ್ದಾರೆ ಎಂದು ಟೀಕಿಸಿದರು.

    ಎಂ.ಬಿ ಪಾಟೀಲ್ ಕುರಿತು ಮಾತನಾಡುವ ನೈತಿಕತೆ ಶಾಸಕ ನಡಹಳ್ಳಿಗೆ ಇಲ್ಲ. ಹೆಂಡ ಕುಡಿದ ಮಂಗನಂತೆ ನಡಹಳ್ಳಿ ಪಕ್ಷದಿಂದ ಪಕ್ಷಕ್ಕೆ ಹಾರುತ್ತಾರೆ. ಅವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯತೆ ನಮಗಿಲ್ಲ ಎಂದು ಟಾಂಗ್ ನೀಡಿದರು.

  • ದೋಸ್ತಿ ಸರ್ಕಾರದಲ್ಲಿ ಸಚಿವ ಜಮೀರ್ ರನ್ನು ಕಡೆಗಣಿಸುವಂತಿಲ್ಲ: ಜಮೀರ್​ಗೆ ನಡಹಳ್ಳಿ ಟಾಂಗ್

    ದೋಸ್ತಿ ಸರ್ಕಾರದಲ್ಲಿ ಸಚಿವ ಜಮೀರ್ ರನ್ನು ಕಡೆಗಣಿಸುವಂತಿಲ್ಲ: ಜಮೀರ್​ಗೆ ನಡಹಳ್ಳಿ ಟಾಂಗ್

    ವಿಜಯಪುರ: ಆಹಾರ ಹಾಗೂ ನಾಗರೀಕ ಸರಬರಾಜು ಸಚಿವ ಜಮೀರ್ ಅಹ್ಮದ್ ಅವರು ಓರ್ವ ಪವರ್ ಪುಲ್ ರಾಜಕಾರಣಿ. ದೋಸ್ತಿ ಸರ್ಕಾರದಲ್ಲಿ ಜಮೀರ್ ಅವರನ್ನು ಕಡೆಗಣಿಸುವಂತಿಲ್ಲ ಎಂದು ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಟಾಂಗ್ ನೀಡಿದ್ದಾರೆ.

    ವಿಜಯಪುರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಸಚಿವ ಜಮೀರ್ ಅವರಿಗೆ ಹೊಸ ಕಾರು ನೀಡಬೇಕು. ಇಲ್ಲದಿದ್ದರೆ ಸಮ್ಮಿಶ್ರ ಸರ್ಕಾರ ಸಂಕಷ್ಟ ಎದುರಿಸುತ್ತದೆ ಎಂದು ವ್ಯಂಗ್ಯವಾಡಿದ ನಡಹಳ್ಳಿ ಅವರು, ಹಜ್ ಭವನಕ್ಕೆ ಟಿಪ್ಪು ಹೆಸರಿನ ಬದಲು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರನ್ನು ಇಡುವುದು ಉತ್ತಮ ಎಂದು ಸಲಹೆ ನೀಡಿದರು.

    ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದರು. ಆದರೆ ಸರ್ಕಾರ ರಚನೆಯಾಗಿ ಒಂದು ತಿಂಗಳೇ ಕಳೆದಿದೆ, ಯಾವುದೇ ಬೆಳವಣಿಗೆ ಕಂಡುಬಂದಿಲ್ಲ. ಮುಖ್ಯಮಂತ್ರಿಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಸಮಿಶ್ರ ಸರ್ಕಾರ ಆಡಳಿತಕ್ಕೆ ಬಂದರೆ ರೈತರ ಸಾಲಮನ್ನಾ ಮಾಡಲ್ಲ ಎಂದು ಹೇಳಿರಲಿಲ್ಲ. ಇಂತಹ ನೆಪ ಹೇಳಿ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ಅವರು ಪ್ರಯತ್ನಿಸಬಾರದು ಎಂದು ಸಿಎಂ ಎಚ್‍ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

    ಸಮ್ಮಿಶ್ರ ಸರ್ಕಾರ ಸಾಂದರ್ಭಿಕ ಶಿಶು ಎಂದು ಈ ಹಿಂದೆ ಕುಮಾರಸ್ವಾಮಿ ಅವರು ಹೇಳಿದ್ದರು. ಹಾಗಾದರೆ ಸಮಿಶ್ರ ಸರ್ಕಾರಕ್ಕೆ ತಂದೆ-ತಾಯಿ ಎರಡೂ ಕಾಂಗ್ರೆಸ್ ನಾಯಕರಾಗಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮುಚ್ಚಿ ಹಾಕಲು ಕಾಂಗ್ರೆಸ್ಸಿನ ಕೆಲವು ನಾಯಕರು ಜೆಡಿಎಸ್ ಜೊತೆಗೆ ಸೇರಿ ಸಮಿಶ್ರ ಸರ್ಕಾರ ಮಾಡಿಕೊಂಡರು. ಒಂದು ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಿದ್ದರೆ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರ ಬಯಲಾಗುತ್ತಿತ್ತು ಎಂದು ನಡಹಳ್ಳಿ ಹೇಳಿದರು.

  • ತೆನೆಯ ಹೊರೆ ಇಳಿಸಿ ಕಮಲ ಹಿಡಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

    ತೆನೆಯ ಹೊರೆ ಇಳಿಸಿ ಕಮಲ ಹಿಡಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

    -ಅಪ್ಪ-ಮಗ, ಅಣ್ಣ-ತಮ್ಮ ಸ್ಪರ್ಧೆ ಮಾಡ್ಬಹುದು, ಗಂಡ-ಹೆಂಡ್ತಿ ಯಾಕೆ ಸ್ಪರ್ಧಿಸಬಾರದು ಜೆಡಿಎಸ್‍ಗೆ ನಡಹಳ್ಳಿ ಪ್ರಶ್ನೆ

    ಬೆಂಗಳೂರು: ಕಾಂಗ್ರೆಸ್ ನಿಂದ ಉಚ್ಚಾಟಿತರಾಗಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಶಾಸಕ ನಡಹಳ್ಳಿ ಮಂಗಳವಾರ ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ರು. ಇಂದು ಬೆಳಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪರ ನೇತೃತ್ವದಲ್ಲಿ ಎ.ಎಸ್.ಪಾಟೀಲ್ ನಡಹಳ್ಳಿ, ಪತ್ನಿ ಮಹಾದೇವಿ, ಮಧುಗಿರಿ ಕ್ಷೇತ್ರದ ಮಾಜಿ ಶಾಸಕರಾದ ಗಂಗಹನುಮಯ್ಯ, ಪಾವಗಡ ಜಿ.ಪಂ.ಸದಸ್ಯ, ಮಾಜಿ ಸಚಿವ ವೆಂಕಟರಮಣಪ್ಪ ಅವರ ಪುತ್ರ ಕುಮಾರಸ್ವಾಮಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ್ರು.

    ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಶಾಸಕ ನಡಹಳ್ಳಿ, ಅಪ್ಪ-ಮಗ, ಅಣ್ಣ-ತಮ್ಮ ಸ್ಪರ್ಧೆ ಮಾಡ್ಬಹುದು, ಗಂಡ-ಹೆಂಡ್ತಿ ಯಾಕೆ ಸ್ಪರ್ಧಿಸಬಾರದು ಅಂತಾ ಪರೋಕ್ಷವಾಗಿ ಜೆಡಿಎಸ್ ಗೆ ಪ್ರಶ್ನೆ ಮಾಡಿದ್ರು. ನಾನು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದು ನಿಜ, ದೇವರ ಹಿಪ್ಪರಗಿ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರ ಜೊತೆಯಲ್ಲಿ ಪಕ್ಷದ ಬಲವರ್ಧನೆಗೂ ಮುಂದಾಗಿದ್ದೆ. ಆದ್ರೆ ನಾನು ಇದೂವರೆಗೂ ಜೆಡಿಎಸ್ ಸದಸ್ಯತ್ವವನ್ನು ಪಡೆದುಕೊಂಡಿರಲಿಲ್ಲ. ದೇವರ ಹಿಪ್ಪರಗಿ ಕ್ಷೇತ್ರ ನನ್ನ ತಾಯಿ. ಆ ಕ್ಷೇತ್ರ ಕಟ್ಟಿದ್ದು ನಾನು, ಅಲ್ಲಿ ಟಿಕೆಟ್ ಕೇಳುವುದಕ್ಕೆ ನನಗೆ ಹಕ್ಕಿದೆ. ಆದ್ರೆ ಕುಮಾರಸ್ವಾಮಿ ಟಿಕೆಟ್ ಹಂಚಿಕೆಯಲ್ಲಿ ನನ್ನನ್ನು ನಿರ್ಲಕ್ಷ್ಯ ಮಾಡಿದ್ರು. ಆ ಕಾರಣಕ್ಕಾಗಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದೇನೆ ಅಂತಾ ಅಂದ್ರು.

    2008 ಮತ್ತು 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಎ.ಎಸ್.ಪಾಟೀಲ್ ನಡಹಳ್ಳಿ ಎರಡು ಬಾರಿಯ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಎರಡು ಬಾರಿ ಶಾಸಕರಾಗಿದ್ದಾರೆ. 2008ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ಆರ್.ಪಾಟೀಲ್‍ರನ್ನು 30,893 ಮತಗಳ ಅಂತರದಿಂದ ಸೋಲಿಸಿದ್ದರು. 2013ರ ಚುನಾವಣೆಯಲ್ಲಿ ಬಿಜೆಪಿ ಸೋಮನಗೌಡ ಪಾಟೀಲ ಅವರನ್ನು 7,916 ಮತಗಳ ಅಂತರದಿಂದ ಸೋಲಿಸುವ ಮೂಲಕ ವಿಜಯ ಪತಾಕೆಯನ್ನು ಹಾರಿಸಿದ್ರು.

    ಆದ್ರೆ ಈ ಬಾರಿ ಎ.ಎಸ್.ಪಾಟೀಲ್ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇತ್ತ ತವರು ಕ್ಷೇತ್ರದಲ್ಲಿ ಪತ್ನಿ ಮಹಾದೇವಿ ನಡಹಳ್ಳಿ ಅವರನ್ನು ಕಣ್ಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್‍ನ ಭದ್ರತೆ ಕೋಟೆ ಅಂತಾ ಬಿಂಬಿತವಾಗಿರುವ ಮುದ್ದೇಬಿಹಾಳ ಕ್ಷೇತ್ರದಲ್ಲಿ ನಡಹಳ್ಳಿ ಕಮಲದ ರಣಕಹಳೆ ಮೊಳಗಿಸುತ್ತಾರಾ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿರುವ ಕಾಂಗ್ರೆಸ್‍ನ ಅಪ್ಪಾಜಿ ನಾಡಗೌಡ ನಾಲ್ಕು ಬಾರಿ ಶಾಸಕರಾಗಿದ್ದಾರೆ.

  • ಕಾಂಗ್ರೆಸ್‍ನಿಂದ ಉಚ್ಛಾಟಿತರಾಗಿ, ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿದ್ದ ಶಾಸಕ ನಡಹಳ್ಳಿ ಕಮಲ ಹಿಡಿಯಲು ಪ್ಲ್ಯಾನ್!

    ಕಾಂಗ್ರೆಸ್‍ನಿಂದ ಉಚ್ಛಾಟಿತರಾಗಿ, ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿದ್ದ ಶಾಸಕ ನಡಹಳ್ಳಿ ಕಮಲ ಹಿಡಿಯಲು ಪ್ಲ್ಯಾನ್!

    ವಿಜಯಪುರ: ಕಾಂಗ್ರೆಸ್ ಉಚ್ಛಾಟಿತರಾಗಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಜಿಲ್ಲೆಯಾದ್ಯಂತ ಕೇಳಿ ಬರುತ್ತಿವೆ ಶಾಸಕ ನಡಹಳ್ಳಿ ಅವರು ಬಿಜೆಪಿ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಅಂತಾ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ವಿಠ್ಠಲ್ ಕಟಕದೊಂಡ ಹೇಳಿದ್ದಾರೆ.

    ಬಿಜೆಪಿ ಜಿಲ್ಲಾಧ್ಯಕ್ಷ ವಿಠ್ಠಲ್ ಕಟಕದೊಂಡ

    ನೇರವಾಗಿ ನನಗೆ ಹೇಳದಿದ್ದರೂ, ನಮ್ಮ ಪಕ್ಷದ ಹಿರಿಯ ಮುಖಂಡರೊಂದಿಗೆ ನಡಹಳ್ಳಿ ಅವರು ಚರ್ಚಿಸಿರುವ ಮಾಹಿತಿ ನನಗೆ ಬಂದಿದೆ. ಇದೇ ರೀತಿಯಾಗಿ ಇನ್ನೂ ಹಲವು ಕಾಂಗ್ರೆಸ್ ಶಾಸಕರು ಮತ್ತು ಮುಖಂಡರು ಬಿಜೆಪಿ ಸೇರಲಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಗೆ ಭವಿಷ್ಯವಿಲ್ಲ ಎಂದು ಅರಿತು ಬಿಜೆಪಿಗೆ ಸೇರಲು ನಡಹಳ್ಳಿ ಬಯಸಿದ್ದಾರೆಂದು ಅಂತಾ ವಿಠ್ಠಲ್ ಕಟಕದೊಂಡ ತಿಳಿಸಿದ್ದಾರೆ.

    ಬಿಜೆಪಿ ಸೇರ್ಪಡೆಯ ಬಗ್ಗೆ ಯಾವುದೇ ಗುಟ್ಟು ಬಿಟ್ಟು ಕೊಡದ ಶಾಸಕ ನಡಹಳ್ಳಿ ಅವರು ಮುಂದೆ ಏನಾಗುತ್ತೆ ಎಂಬುದನ್ನು ಕಾದು ನೋಡಿ ಅಂತಾ ಹೇಳಿದ್ದಾರೆ. ನಡಹಳ್ಳಿ ಅವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಿಂದ ಚುನಾವಣೆಗೆ ಸ್ಫರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದ್ದು, ಇದೇ ತಿಂಗಳು 23ರಂದು ನಡಹಳ್ಳಿ ಬಿಜೆಪಿ ಸೇರ್ಪಡೆಯ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ತಿಳಿದು ಬಂದಿದೆ.

  • ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಡಲಿ: ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

    ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಡಲಿ: ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

    -ಜಯಮೃತ್ಯುಂಜಯ ಸ್ವಾಮೀಜಿ ಬಹಿರಂಗ ಕ್ಷಮೆಯಾಚಿಸಬೇಕು

    ರಾಯಚೂರು: ಸಚಿವರಾದ ಎಂ.ಬಿ.ಪಾಟೀಲ್, ವಿನಯ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಟ್ಟು ಲಿಂಗಾಯತ ಧರ್ಮ ಸ್ಥಾಪಿಸಲು ಮುಂದಾಗಲಿ ಅಂತ ಕಾಂಗ್ರೆಸ್ ಉಚ್ಚಾಟಿತ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ರಾಯಚೂರಿನಲ್ಲಿ ಹೇಳಿದ್ದಾರೆ.

    ರಾಯಚೂರಿನಿಂದ ಬೆಳಗಾವಿವರೆಗೆ ಜೆಡಿಎಸ್ ವತಿಯಿಂದ ಹೈದ್ರಾಬಾದ್ ಕರ್ನಾಟಕ ಸಮಗ್ರ ಅಭಿವೃದ್ದಿಗಾಗಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಜಾಥ ಹಮ್ಮಿಕೊಂಡಿರುವ ನಡಹಳ್ಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಜಯಮೃತ್ಯುಂಜಯ ಸ್ವಾಮೀಜಿ ವೀರಶೈವರ ಬಗೆಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದು, ಹೇಳಿಕೆಯನ್ನ ಖಂಡಿಸುವುದಾಗಿ ಹೇಳಿದ ನಡಹಳ್ಳಿ, ಸ್ವಾಮೀಜಿಗಳು ಬಹಿರಂಗ ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದ್ದಾರೆ.

    70 ವರ್ಷದ ಆಡಳಿತದಲ್ಲಿ ನೆನಪಾಗದ ಲಿಂಗಾಯತ ಧರ್ಮ ಈಗ ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಗೆ ನೆನಪಾಗಿದೆ. ಚುನಾವಣೆ ಹಿನ್ನೆಲೆ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ತಾಕತ್ತಿದ್ದರೆ ಕ್ಯಾಬಿನೆಟ್‍ನಲ್ಲಿ ನಿರ್ಧಾರ ತೆಗೆದುಕೊಳ್ಳಲಿ ಅಂತ ಸವಾಲೆಸೆದರು. ಇನ್ನೂ ಬೆಳಗಾವಿ ಅಧಿವೇಶನ 30 ದಿನ ಕಾಲ ನಡೆಯಬೇಕು ಟೂರಿಂಗ್ ಟಾಕೀಸ್ ಆಗಬಾರದು. ಈ ಅಧಿವೇಶನದಲ್ಲಿ ಕೇವಲ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಾಗಿ ಚರ್ಚೆ ನಡೆಯಬೇಕು ಅಂತ ಎಸ್.ಪಾಟೀಲ್ ನಡಹಳ್ಳಿ ಆಗ್ರಹಿಸಿದ್ದಾರೆ.