Tag: ಎ ಮಂಜು

  • ಪ್ರಜ್ವಲ್ ಟಿಕೆಟ್ ಪಕ್ಕಾ ಆದ್ರೆ ಬಿಜೆಪಿಗೆ ಹೋಗೋ ಸುಳಿವು ನೀಡಿದ ಎ.ಮಂಜು?

    ಪ್ರಜ್ವಲ್ ಟಿಕೆಟ್ ಪಕ್ಕಾ ಆದ್ರೆ ಬಿಜೆಪಿಗೆ ಹೋಗೋ ಸುಳಿವು ನೀಡಿದ ಎ.ಮಂಜು?

    – ವ್ಯಾಪ್ತಿ ಮೀರಿ ಸರ್ಕಾರಿ ಕಾರ್ ಬಳಸಿದ್ದಕ್ಕೆ ಭವಾನಿ ರೇವಣ್ಣಗೆ ಮಾಜಿ ಸಚಿವ ಟಾಂಗ್

    ಮಡಿಕೇರಿ: ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರನ್ನು ಸ್ಪರ್ಧೆಗೆ ಇಳಿಸಿದ್ರೆ, ನಾನು ಬಿಜೆಪಿ ಸೇರುತ್ತೇನೆ ಎಂದು ಮಾಜಿ ಸಚಿವ ಎ.ಮಂಜು ಪರೋಕ್ಷವಾಗಿ ಕಾಂಗ್ರೆಸ್ ವರಿಷ್ಠರಿಗೆ ಸಂದೇಶ ರವಾನಿಸಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಮಾತನಾಡಿದ ಮಾಜಿ ಸಚಿವರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹಾಸನ ಕ್ಷೇತ್ರದಿಂದ ನಿಂತರೆ ಬೆಂಬಲಿಸುತ್ತೇನೆ. ಆದರೆ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಅಭ್ಯರ್ಥಿಯಾಗಿಸಿದರೆ ಸಹಕಾರ ನೀಡುವುದಿಲ್ಲ ಎಂದು ಪುನರುಚ್ಛರಿಸಿದ್ದಾರೆ.

    ಸಾಂಪ್ರದಾಯಿಕವಾಗಿ ನಾನು ಎಚ್.ಡಿ.ದೇವೇಗೌಡರ ಕುಟುಂಬದ ರಾಜಕೀಯ ವಿರೋಧಿಯಷ್ಟೇ. ವೈಯಕ್ತಿಕವಾಗಿ ಅವರ ಹಾಗೂ ನನ್ನ ಮಧ್ಯೆ ಯಾವುದೇ ವಿರೋಧವಿಲ್ಲ. ದೇವೇಗೌಡರು ಹಾಸನದಿಂದ ಸ್ಪರ್ಧಿಸಿದರೆ ಮೈತ್ರಿ ಸರ್ಕಾರದ ಸಂಪೂರ್ಣ ಬೆಂಬಲವಿದೆ. ಇದಕ್ಕೆ ನಾನು ಕೂಡ ಬದ್ಧನಾಗಿದ್ದೇನೆ. ಅವರನ್ನು ಬಿಟ್ಟು ಬೇರೆಯ ಅಭ್ಯರ್ಥಿಗಳು ಸ್ಪರ್ಧಿಸಿದರೆ ನಮ್ಮ ಸಹಕಾರವಿಲ್ಲ ಎಂದು ತಿಳಿಸಿದರು.

    ನಾನು ಇಲ್ಲಿವರೆಗೂ ಬಿಜೆಪಿ ಸೇರುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಆದರೆ ರಾಜಕೀಯ ನಿಂತ ನೀರಲ್ಲ. ಮುಂದೆ ಏನಾಗುತ್ತದೆ ಅಂತ ಕಾದು ನೋಡಬೇಕಿದೆ ಎಂದು ಹೇಳುವ ಮೂಲಕ ಮೈತ್ರಿ ಸರ್ಕಾರದ ನಾಯಕರಿಗೆ ಬಿಸಿ ಮುಟ್ಟಿಸಿದರು.

    ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರ ಪತ್ನಿ ಭವಾನಿ ರೇವಣ್ಣ ಅವರು ಸರ್ಕಾರಿ ಕಾರನ್ನ ವ್ಯಾಪ್ತಿ ಮೀರಿ ಬಳಸಿಕೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಅಧಿಕಾರ ತಿಳುವಳಿಕೆ ಹೇಳುವುದರಿಂದ ಬರುವುದಿಲ್ಲ. ಪಾಲಿಸುವುದರಿಂದ ಬರುತ್ತದೆ. ಇದು ಸಿಎಂ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಮುಜುಗರಿಗೆ ತರುವ ವಿಚಾರ ಎಂದು ಕುಟುಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ಶಾಸಕನ ಮನೆಯಲ್ಲಿ ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು!

    ಬಿಜೆಪಿ ಶಾಸಕನ ಮನೆಯಲ್ಲಿ ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು!

    – ಶತ್ರುವಿನ ಶತ್ರು ಎ.ಮಂಜುಗೆ ಮಿತ್ರ?
    – ಇಂತಹ ಘಟನೆ ಎಲ್ಲೂ ಆಗಿಲ್ಲ
    – ಮಾನವೀಯತೆ ದೃಷ್ಟಿಯಿಂದ ಭೇಟಿ

    ಹಾಸನ: ಕಾಂಗ್ರೆಸ್‍ನ ಮಾಜಿ ಸಚಿವ ಎ.ಮಂಜು ಇಂದು ಪ್ರೀತಂಗೌಡರ ಮನೆಗೆ ಭೇಟಿ ನೀಡಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಶಾಸಕರ ಮನೆಗೆ ತೆರಳಿದ ಮಾಜಿ ಸಚಿವರು ಪ್ರೀತಂಗೌಡರ ಪೋಷಕರಿಗೆ ಈ ರೀತಿಯ ಘಟನೆಗಳಿಂದ ಭಯಪಡಬೇಡಿ ಎಂದು ಸಲಹೆ ನೀಡಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಎ.ಮಂಜು, ಇಂತಹ ಘಟನೆಗಳು ಎಲ್ಲೂ ಆಗಿಲ್ಲ. ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ನಾವುಗಳು ಪಾಲುದಾರರಾಗಿದ್ದೇವೆ. ಮಾಜಿ ಪ್ರಧಾನಿಗಳ ತವರಲ್ಲಿ ಈ ಘಟನೆ ಆಗಿರುವುದು ನಿಜವಾಗಲೂ ಮತದಾರನಿಗೆ ಹಾಗೂ ಪ್ರಥಮ ಪ್ರಜೆಗೆ ಮಾಡಿರುವ ಅಪಮಾನ. ಈ ಹಿಂದೆ ಕಾಂಗ್ರೆಸ್ ಮೇಲೆಯೂ ಈ ರೀತಿಯ ಹಲ್ಲೆ ನಡೆದಿತ್ತು. ರಾಜಕಾರಣದಲ್ಲಿ ಶತ್ರವೂ ಇಲ್ಲ, ಮಿತ್ರರೂ ಇಲ್ಲ. ಮಾನವೀಯತೆ ದೃಷ್ಟಿಯಿಂದ ಶಾಸಕರ ಮನೆಗೆ ಭೇಟಿ ನೀಡಿದ್ದೇನೆಯೇ ಹೊರತು ಇದರಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎ.ಮಂಜು, ನಮ್ಮ ಜಿಲ್ಲೆಯಲ್ಲಿ ಈ ರೀತಿಯ ಘಟನೆಗಳು ನಡೆಯುವುದು ಒಳ್ಳೆಯ ಸಂಪ್ರದಾಯ ಅಲ್ಲ. ಓರ್ವ ಚುನಾಯಿತ ಪ್ರತಿನಿಧಿಗೆ ರಕ್ಷಣೆ ಇಲ್ಲದೇ ಹೋದರೆ ಸಾಮಾನ್ಯ ಜನರ ಸ್ಥಿತಿ ಏನು ಆಗಬೇಕು. ಜಿಲ್ಲೆಯ ಮಾಜಿ ಮಂತ್ರಿಯಾದ ನಾನು, ಯಾರು ಘಟನೆಯಲ್ಲಿ ಭಾಗಿಯಾಗಿದ್ದಾರೆ ಅಂತಹವರ ವಿರುದ್ಧ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಸಮ್ಮಿಶ್ರ ಸರ್ಕಾರದಲ್ಲಿ ನಾವು ಭಾಗಿಯಾಗಿದ್ದರಿಂದ ನಮಗೂ ಸಹ ಮುಜುಗರ ಆಗುತ್ತದೆ. ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದ ಆಡಳಿಯ ವೈಖರಿಯ ಬಗ್ಗೆ ಮಾತನಾಡಲು ಇಷ್ಟಪಡಲ್ಲ. ರಾಜಕೀಯದಲ್ಲಿ ಯಾರು ಶತ್ರು ಮತ್ತು ಮಿತ್ರರು ಇಲ್ಲ. ಈ ರೀತಿಯ ಗಲಾಟೆಗಳು ನಡೆದಾಗ ಎಲ್ಲರ ಮನೆಗೆ ಪಕ್ಷಾತೀತವಾಗಿ ಭೇಟಿ ನೀಡಿದ್ರೆ ಮಾತ್ರ ಇಂತಹ ಘಟನೆಗಳು ಮರುಕಳಿಸಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಯಾರು ಏನು ಅಂದುಕೊಳ್ಳುತ್ತಾರೆ ಎಂಬುದರ ಬಗ್ಗೆ ಚಿಂತಿಸಲ್ಲ. ಮಂಜು ಮಂಜುನಾಗಿಯೇ ಇರುತ್ತಾನೆ ಎಂದು ಹೇಳಿದರು.

     

    ಪ್ರತಿ ಬಾರಿಯೂ ದೇವೇಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಎ.ಮಂಜು ಅವರ ನಡೆ ಹಾಸನ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಒಂದು ವೇಳೆ ದೇವೇಗೌಡರ ಬದಲಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದ್ರೆ ನಮ್ಮ ವಿರೋಧವಿದೆ ಎಂದು ಮಂಜು ಅಸಮಾಧಾನ ಹೊರಹಾಕಿದ್ದರು. ವಿಧಾನಸಭಾ ಚುನಾವಣೆಗೂ ಮೊದಲಿನಿಂದಲೂ ದೊಡ್ಡಗೌಡರು ಮತ್ತು ಮಂಜು ನಡುವೆ ಶೀತಲ ಸಮರ ಇದೆ ಎನ್ನುವ ಮಾತು ಈಗಲೂ ಹಾಸನ ಜನರ ಬಾಯಲ್ಲಿದೆ. ಈ ಮಧ್ಯೆ ಇಂದು ಪ್ರೀತಂ ಗೌಡರ ಮನೆಗೆ ಭೇಟಿ ನೀಡಿ ಮಂಜು ಹಾಸನ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.

    ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಬಗ್ಗೆ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿಕೆಯನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದರಿಂದ ಉಡುಪಿ ಮೂಲದ ರಾಹುಲ್ ಕಣಿ ಎಂಬವರ ಹಣೆ ಭಾಗಕ್ಕೆ ಕಲ್ಲು ತಾಗಿತ್ತು. ಕಲ್ಲು ತೂರಾಟದ ಬಳಿಕ ಪರಿಸ್ಥಿತಿ ಉದ್ವಿಘ್ನಗೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಜು ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ: ರೇವಣ್ಣ

    ಮಂಜು ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ: ರೇವಣ್ಣ

    ಬಾಗಲಕೋಟೆ: ಮಾಜಿ ಸಚಿವ ಎ.ಮಂಜು ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

    ದೇವೇಗೌಡರಿಂದ ಮಾತ್ರ ಹಾಸನದಲ್ಲಿ ಗೆಲ್ಲೋಕೆ ಸಾಧ್ಯ, ಪ್ರಜ್ವಲ್‍ಗೆ ಸಾಧ್ಯವಿಲ್ಲ ಎಂಬ ಎ.ಮಂಜು ಹೇಳಿಕೆ ವಿಚಾರವಾಗಿ ಬಾಗಲಕೋಟೆಯಲ್ಲಿ ತಡರಾತ್ರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ಎ.ಮಂಜು ಅಂತವನ ಮಾತಿಗೆಲ್ಲ ನಾನು ಪ್ರತಿಕ್ರಿಯೆ ಕೊಡಲು ಆಗುತ್ತಾ? ನಾನು ಅಂತವ್ರಿಗೆಲ್ಲ ರಿಯಾಕ್ಟ್ ಮಾಡಲು ಆಗುತ್ತಾ? ಅವನಿಗೆ ನಾನು ರಿಯಾಕ್ಟ್ ಮಾಡಲ್ಲ, ಇಗ್ನೋರ್ ಮಾಡ್ತೀನಿ. ಅವನನ್ನು ಇಷ್ಟು ಹೊತ್ತಿನಲ್ಲಿ ನೆನಪು ಯಾಕೆ ಮಾಡ್ತೀರಿ ಎಂದು ರೇವಣ್ಣ ಗರಂ ಆಗಿಯೇ ಉತ್ತರಿಸಿದ್ದಾರೆ.

    ಹಾಸನಕ್ಕೆ ದೇವೇಗೌಡರು ಅಥವಾ ಪ್ರಜ್ವಲ್ ಇಬ್ಬರಲ್ಲಿ ಯಾರು ಸ್ಪರ್ಧಿಸಬೇಕೆಂದು ನೀವೇ ಹೇಳಿ. ಅವರನ್ನೇ ನಿಲ್ಲಿಸೋಣ ಎಂದು ರೇವಣ್ಣ ಹಾಸ್ಯ ಚಟಾಕಿ ಹಾರಿಸಿದರು.

    ಸಿಎಂ ಕುಮಾರಸ್ವಾಮಿ ಈ ಸಲ ಬಜೆಟ್ ಮಂಡಿಸಲ್ಲ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರಿಸಿದ ರೇವಣ್ಣ, ನೂರಕ್ಕೆ ನೂರು ಸಮ್ಮಿಶ್ರ ಸರ್ಕಾರದಿಂದ ಬಜೆಟ್ ಮಂಡನೆ ಮಾಡ್ತೇವೆ. ಕುಮಾರಸ್ವಾಮಿ ಬಜೆಟ್ ಮಂಡನೆ ಕುರಿತು ಯಾವುದೇ ಅನುಮಾನ ಬೇಡ ಎಂದು ಹೇಳಿದರು.

    ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆದ್ಯತೆ ಕೊಡ್ತಾರೆ, ನೀವು ಏನು ಯೋಚನೆ ಮಾಡಬೇಡಿ ಎಂದು ಹೇಳಿದಲ್ಲದೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಅಂತೇನಿಲ್ಲ. ರೈತರ ಸಾಲಮನ್ನಾ ಆಗಿದ್ದು ಉತ್ತರ ಕರ್ನಾಟಕಕ್ಕೆ ಅಧಿಕ. ಅದರಲ್ಲೂ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಅತ್ಯಧಿಕವಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಯಾಕೆ ರೈತರ ಸಾಲಮನ್ನಾ ಮಾಡಿಲ್ಲ. ಯಾಕೆ ಬಿಜೆಪಿ ಅವರು ಒತ್ತಾಯಿಸಿಲ್ಲ ಎಂದು ಗರಂ ಆದರು.

    ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾರಂಭಿಸುವ ವಿಚಾರವಾಗಿ ಮಾತನಾಡಿದ ರೇವಣ್ಣ, ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಓಪನ್ ಮಾಡಲೇಬೇಕು. ಯಾರೋ ರೇವಣ್ಣ, ಕುಮಾರಸ್ವಾಮಿ ಮಕ್ಕಳಷ್ಟೇ ಓದಬೇಕೇನ್ರೀ? ಎಲ್‍ಕೆಜಿಯಿಂದ ಇಂಗ್ಲಿಷ್ ಮಿಡಿಯಂ ಮಾಡಲೇಬೇಕು, ಹೊಟ್ಟೆಗೆ ಹಿಟ್ಟಿಲ್ಲದವರ ಮಕ್ಕಳು ಏನ್ ಮಾಡಬೇಕು. ಕೂಲಿ ಮಾಡುವವರ ಮಕ್ಕಳು ಇಂಗ್ಲಿಷ್ ಓದಬಾರದೇನ್ರೀ? ವಿವಿಧ ಇಲಾಖೆ ಅನುದಾನ ಕಟ್ ಮಾಡಿ ಇಂಗ್ಲಿಷ್ ಶಾಲೆಗೆ ನೀಡಬೇಕು. ಇದರಿಂದ ಹಿಂದೆ ಸರಿಯುವ ಮಾತೇ ಇಲ್ಲ. ಈ ಸಾಹಿತಿಗಳು ತಮ್ಮ ಮಕ್ಕಳನ್ನು ಎಲ್ಲಿ ಓದಿಸ್ತಾರೆ. ಹಾಗಿದ್ರೆ ಇಂಗ್ಲಿಷ್ ಶಾಲೆ ಬಂದ್ ಮಾಡಿಬಿಡಲಿ. ನಾನೇನು, ಕನ್ನಡ ಶಾಲೆ ಬೇಡ ಅಂತಿಲ್ಲ. ಒಂದು ಭಾಷೆ ಕನ್ನಡ ಇರಲಿ. ಸಮಾಜ ಕನ್ನಡದಲ್ಲಿ ಹೇಳಿ, ಗಣಿತ, ವಿಜ್ಞಾನ ಇಂಗ್ಲಿಷ್ ನಲ್ಲಿ ಹೇಳಲಿ. ಆದರೆ ಯಾರು ಏನು ಅಂದ್ರೂ ಈ ವಿಷಯದಲ್ಲಿ ನನ್ನದು ನೋ ಕ್ವಶ್ಚನ್. ಎಲ್‍ಕೆಜಿಯಿಂದ ಇಂಗ್ಲಿಷ್ ಶಾಲೆ ಆರಂಭ ಆಗಲೇಬೇಕು ಎಂದು ಹೇಳಿದರು.

    ಕಳೆದ 10 ವರ್ಷದಿಂದ ಹಾಸನದಲ್ಲಿ ಜನ ಕುಡಿಯುವ ನೀರಿಗೆ ಪರದಾಡುತ್ತಿದ್ದರು. ದೈವಾನುಗ್ರಹದಿಂದ ಈಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನನ್ನ ಕಡೆ ಎಷ್ಟು ಸಾಧ್ಯವೋ ಅಷ್ಟು ಹಾಸನಕ್ಕೆ ಸಹಾಯ ಮಾಡ್ತೀನಿ ಎಂದು ರೇವಣ್ಣ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಂಡ-ಹೆಂಡ್ತಿ ಜಗಳ ಸಾಮಾನ್ಯ, ಆದ್ರೆ ಡಿವೋರ್ಸ್ ಆಗಲ್ಲ: ಮಾಜಿ ಸಚಿವ ಎ.ಮಂಜು

    ಗಂಡ-ಹೆಂಡ್ತಿ ಜಗಳ ಸಾಮಾನ್ಯ, ಆದ್ರೆ ಡಿವೋರ್ಸ್ ಆಗಲ್ಲ: ಮಾಜಿ ಸಚಿವ ಎ.ಮಂಜು

    ಹಾಸನ: ಯಾರಿಗೂ ಯಾವುದು ಅನಿವಾರ್ಯ ಅಲ್ಲ. ಅಭಿವೃದ್ಧಿ ಆಗಬೇಕು ಅಷ್ಟೆ. ಗಂಡ ಹೆಂಡತಿ ನಡುವೆ ನಡೆಯುವ ಜಗಳ ಸಾಮಾನ್ಯ, ಆದ್ರೆ ಅದ್ರಿಂದ ಡಿವೋರ್ಸ್ ಆಗಲ್ಲ ಎಂದು ಮಾಜಿ ಸಚಿವ ಎ ಮಂಜು ಹೇಳಿದ್ದಾರೆ.

    ಕಾಂಗ್ರೆಸ್ ಗಿಂತ ಬಿಜೆಪಿಯ ಮೈತ್ರಿಯೇ ಚೆನ್ನಾಗಿತ್ತು ಎಂಬ ಸಚಿವ ಪುಟ್ಟರಾಜು ಹೇಳಿಕೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಅವರಿಗೆ ಎಲ್ಲರ ಜೊತೆ ಸಂಸಾರ ಮಾಡಿ ಅಭ್ಯಾಸ ಆಗಿದೆ. ಬಿಜೆಪಿ ಜೊತೆಗೂ ಮಾಡಿದ್ದಾರೆ ನಮ್ಮ ಜೊತೆಯೂ ಮಾಡುತ್ತಿದ್ದಾರೆ. ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಳ್ಳುತ್ತಾರೆ ಹೊರತು ಅಭಿವೃದ್ಧಿಗೆ ಅಲ್ಲ. ಪುಟ್ಟರಾಜು ಸಚಿವರಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.

    ನಾನು ಮಾತನಾಡಿದರೆ ತಪ್ಪು. ಅವರು ಮಾತನಾಡಿದರೆ ಸರಿ. ಯಾರಿಗೂ ಯಾವುದು ಅನಿವಾರ್ಯ ಅಲ್ಲ. ಅಭಿವೃದ್ದಿ ಆಗಬೇಕು ಅಷ್ಟೆ. ಗಂಡ-ಹೆಂಡತಿ ನಡುವೆ ನಡೆಯುವ ಜಗಳ ಸಾಮಾನ್ಯವಾಗಿರುತ್ತದೆ. ಆದ್ರೆ ಅದರಿಂದ ಡಿವೋರ್ಸ್ ಆಗಲ್ಲ ಎಂದು ಅವರು ಎರಡು ಪಕ್ಷದ ನಡುವಿನ ಒಳಜಗಳಗಳನ್ನು ಸಮರ್ಥಿಸಿಕೊಂಡರು.

    ಇದೇ ವೇಳೆ ಹಾಸನ ಲೋಕಸಭೆ ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರದ ಕುರಿತು ಮತ್ತೆ ವಿರೋಧ ವ್ಯಕ್ತಪಡಿಸಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಹಾಸನಕ್ಕೆ ಅಭ್ಯರ್ಥಿ ಆಗಬೇಕು ಅನ್ನೋದು ನಮ್ಮ ಆಸೆ. ದೇವೇಗೌಡರಂತಹ ಹಿರಿಯರು ನಮ್ಮ ಮೈತ್ರಿಯಲ್ಲಿ ಇರಬೇಕು. ಸಚಿವ ರೇವಣ್ಣರಿಗೆ ತಿಳುವಳಿಕೆ ಕಡಿಮೆ. ದೇವೇಗೌಡರು ಇರುವಾಗಲೇ ಮಗನೇ ಅಭ್ಯರ್ಥಿ ಅನ್ನೋದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ರು.

    ಪ್ರಜ್ವಲ್ ರೇವಣ್ಣರನ್ನು ಚುನಾವಣೆ ಕಣಕ್ಕಿಳಿಸಿದ್ರೆ ದೇವೇಗೌಡರಿಗೂ ಮತ್ತು ಹಾಸನದ ಜನತೆಗೆ ಅವಮಾನ ಮಾಡಿದಂತಾಗುತ್ತದೆ. ಈ ಬಗ್ಗೆ ಸಮನ್ವಯ ಸಮಿತಿಯಲ್ಲಿ ತೀರ್ಮಾನವಾಗದೆ ನಮ್ಮ ಕ್ಷೇತ್ರ ಅನ್ನೋದು ಸರಿಯಲ್ಲ ಅಂದ್ರು.

    https://www.youtube.com/watch?v=8ldpuc1F85w

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರೇವಣ್ಣ Vs ಮಂಜು – ಇಬ್ಬರ ಪ್ರತಿಷ್ಠೆಯ ಕಣದಲ್ಲಿ ಬೀದಿಗೆ ಬಂದ ಬಡ ಕಾರ್ಮಿಕರು!

    ರೇವಣ್ಣ Vs ಮಂಜು – ಇಬ್ಬರ ಪ್ರತಿಷ್ಠೆಯ ಕಣದಲ್ಲಿ ಬೀದಿಗೆ ಬಂದ ಬಡ ಕಾರ್ಮಿಕರು!

    ಹಾಸನ: ಮಾಜಿ ಪಶುಸಂಗೋಪನಾ ಸಚಿವ ಎ.ಮಂಜು ಹಾಗೂ ಹಾಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರ ರಾಜಕೀಯ ವೈಷಮ್ಯಕ್ಕೆ ಬಡ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆನ್ನುವ ಆರೋಪ ಕೇಳಿಬಂದಿದೆ.

    ಹೌದು, ಜಿಲ್ಲೆಯಲ್ಲಿ ಈ ಹಿಂದೆ ಮಾಜಿ ಪಶುಸಂಗೋಪನಾ ಸಚಿವರಾಗಿದ್ದ ಎ.ಮಂಜುರವರು ನೂರಾರು ಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ಇಲಾಖೆಯಲ್ಲಿ ನೇಮಕ ಮಾಡಿಕೊಟ್ಟಿದ್ದರು. ಆದರೆ ಈಗ ರೇವಣ್ಣನವರು ಜಿಲ್ಲಾ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ, ಕ್ಷುಲ್ಲಕ ವಿಚಾರಕ್ಕೆ ನೂರಕ್ಕು ಹೆಚ್ಚು ಮಂದಿಯನ್ನು ಕೆಲಸದಿಂದ ವಜಾಗೊಳಿಸಿದ್ದಾರಂತೆ.

    ಹಾಸನ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಈ ರೀತಿಯ ಗುತ್ತಿಗೆ ಆಧಾರದ ಮೇಲೆ ಪಶುಸಂಗೋಪನಾ ಇಲಾಖೆಯಲ್ಲಿ ನೌಕರರನ್ನು ನೇಮಿಸಿಕೊಳ್ಳಲಾಗಿತ್ತು. ಇವರೆಲ್ಲ ತಾಲೂಕು ಕೇಂದ್ರಗಳು ಮತ್ತು ಗ್ರಾಮೀಣ ಭಾಗದಲ್ಲಿ ಪಶು ಇಲಾಖೆಯ ವಿವಿಧ ಕೆಲಸಗಳನ್ನು ಮಾಡುತ್ತಿದ್ದರು. ಹಾಸನ ಜಿಲ್ಲೆಯಲ್ಲಿಯೂ ಸಹ ಮಾತಾ ಟೆಕ್ನಾಲಿಜಿಸ್ ಎಂಬ ಏಜನ್ಸಿ ಮೂಲಕ 135 ಮಂದಿಯನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಈಗ ಸರ್ಕಾರ ಬದಲಾಗಿದ್ದರಿಂದ 100ಕ್ಕೂ ಹೆಚ್ಚು ಮಂದಿಯನ್ನು ಕಾರಣ ನೀಡದೆ ಕೆಲಸದಿಂದ ವಜಾ ಗೊಳಿಸಿದ್ದಾರೆ.

    ಈ ಕುರಿತು ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾರ್ಮಿಕರು, ನಾವುಗಳು ಯಾವುದೇ ಪಕ್ಷಗಳಿಗೆ ಸೇರಿದವರಲ್ಲ. ನಮ್ಮ ಹೊಟ್ಟೆಪಾಡಿಗೆ ಗುತ್ತಿಗೆ ಆಧಾರದಲ್ಲಿ ಸೇರಿದ್ದೇವು. ಹಿಂದಿನ ಸಚಿವರ ಅವಧಿಯಲ್ಲಿ ನೇಮಕವಾಗಿರುವ ಕಾರಣಕ್ಕೆ ನಮ್ಮನ್ನು ಕೆಲಸದಿಂದ ವಜಾಮಾಡಿದ್ದಾರೆ. ಈ ಕೆಲಸವನ್ನೆ ನಂಬಿಕೊಂಡಿದ್ದ ನಮಗೆ ಸಂಕಷ್ಟಗಳಲ್ಲಿ ನರಳುವಂತಹ ಪರಿಸ್ಥಿತಿ ಎದುರಾಗಿದೆ. ಕೂಡಲೇ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಾದಿ ಹಿಡಿಯುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಸಚಿವರ ಪರ ಪ್ರಚಾರಕ್ಕೆ ಇಳಿದಿದ್ದ ಶಿಕ್ಷಕ ಅಮಾನತು..!

    ಮಾಜಿ ಸಚಿವರ ಪರ ಪ್ರಚಾರಕ್ಕೆ ಇಳಿದಿದ್ದ ಶಿಕ್ಷಕ ಅಮಾನತು..!

    ಹಾಸನ: ಸಾಮಾಜಿಕ ಜಾಲತಾಣದಲ್ಲಿ ಚುನಾವಣಾ ಪ್ರಚಾರ ಮಾಡಿದ್ದ ಶಿಕ್ಷಕನನ್ನು ಅರಕಲಗೂಡು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    ಬಿದರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಕೆ.ಟಿ.ಮೋಹನ್ ಕುಮಾರ್ ಅಮಾನತಾಗಿರುವ ಶಿಕ್ಷಕ. ಮೋಹನ್ ಚುನಾವಣೆ ಪ್ರಚಾರ ಮಾಡಿರುವ ಕುರಿತು ಬಿಇಒ ಕೆ.ಎನ್.ಶಿವನಂಜೇಗೌಡ ಅವರಿಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಶಿಕ್ಷಕನನ್ನು ಪ್ರಾಥಮಿಕ ತನಿಖೆ ನಡೆಸಿ ಅಮಾನತು ಮಾಡಿದ್ದಾರೆ.

    ಏನಿದು ಪ್ರಕರಣ?:
    ಶಿಕ್ಷಕ ಮೋಹನ್ ಕಳೆದ ವಿಧಾನಸಭಾ ಚುನಾವಣಾ ಸಮಯದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎ.ಮಂಜು ಪರ ಪ್ರಚಾರ ಮಾಡಿದ್ದರು. ವಾಟ್ಸಾಪ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎ.ಮಂಜು ಪರ ಮತಯಾಚನೆ ಮಾಡುತ್ತಿದ್ದ ವಿಡಿಯೋವನ್ನು ಕಳುಹಿಸಿದ್ದರು. ಅಷ್ಟೇ ಅಲ್ಲದೆ ಚುನಾವಣಾ ಸಂದರ್ಭದಲ್ಲಿ ಅರಕಲಗೂಡು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದ ಮೋಹನ್ ಕಾಂಗ್ರೆಸ್‍ಗೆ ಮತ ಹಾಕುವಂತೆ ಶಿಕ್ಷಕರಿಗೆ ಒತ್ತಾಯ ಹೇರಿದ್ದರು ಎನ್ನಲಾಗಿತ್ತು.

    ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಮೋಹನ್ ವಿರುದ್ಧ ಬಿಇಒ ಕೆ.ಎನ್.ಶಿವನಂಜೇಗೌಡ ಅವರು ತನಿಖೆ ಆರಂಭಿಸಿದ್ದರು. ಈ ವೇಳೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಮೋಹನ್ ಪ್ರಚಾರದಲ್ಲಿ ತೊಡಗಿದ್ದು ತಿಳಿದು ಬಂದಿತ್ತು. ಹೀಗಾಗಿ ಸದ್ಯ ಮೋಹನ್ ಗೆ ಅಮಾನತು ಆದೇಶ ಪತ್ರ ಹೊರಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂತ್ರಿ ಪದವಿ ಉಳಿಸಿಕೊಳ್ಳಲು, ಓಲೈಕೆಗಾಗಿ ಹೊಗಳಿಕೆಗೆ- ರೇವಣ್ಣ ಹೊಗಳಿದ್ದ ಜಯಮಾಲಾ ವಿರುದ್ಧ ಮಂಜು ಕಿಡಿ

    ಮಂತ್ರಿ ಪದವಿ ಉಳಿಸಿಕೊಳ್ಳಲು, ಓಲೈಕೆಗಾಗಿ ಹೊಗಳಿಕೆಗೆ- ರೇವಣ್ಣ ಹೊಗಳಿದ್ದ ಜಯಮಾಲಾ ವಿರುದ್ಧ ಮಂಜು ಕಿಡಿ

    ಹಾಸನ: ಸಚಿವ ಹೆಚ್.ಡಿ ರೇವಣ್ಣ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಹೊಗಳಿದ್ದು ಕಾಂಗ್ರೆಸ್ ಪಕ್ಷದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಎ. ಮಂಜು ಕಾಂಗ್ರೆಸ್ ಪರಿಷತ್ ಸದಸ್ಯೆಯಾಗಿರುವ ಜಯಮಾಲಾ ಭಾಷಣ ಕುರಿತು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮಂತ್ರಿ ಪದವಿ ಉಳಿಸಿಕೊಳ್ಳುವುದಕ್ಕಾಗಿ ದೇವೇಗೌಡರನ್ನು ಓಲೈಸಿಕೊಳ್ಳಲು ಈ ಹೇಳಿಕೆ ಕೊಟ್ಟಿದ್ದಾರೆ ಎಂದು ಜಯಮಾಲಾ ವಿರುದ್ಧ ನೇರವಾಗಿ ಆರೋಪ ಮಾಡಿದರು.

    ಇಂದು ಹಾಸನಾಂಬೆ ದರ್ಶನ ಪಡೆದ ನಂತರ ಮಾತನಾಡಿದ ಎ. ಮಂಜು ಸಿನಿಮಾದವರು ಅವರನ್ನು ಹಾಡಿ ಹೊಗಳಿದ್ದಾರೆ. ಅದು ನಟನೆ ಅಷ್ಟೇ. ಅದು ರಿಯಾಲಿಟಿ ಅಲ್ಲ ಎಂದು ವ್ಯಂಗ್ಯವಾಡಿದರು. ಸಚಿವೆ ಜಯಮಾಲಾಗೆ ಅನುಭವದ ಕೊರತೆ ಇದೆ. ಈಗ ಮಂತ್ರಿಯಾಗಿದ್ದಾರೆ. ಅವರು ಭಾಗವಹಿಸಿದ್ದು ಪೂಜ್ಯ ಸ್ವಾಮೀಜಿಗಳಿಗೆ ಶಾಂತಿ ಪ್ರಶಸ್ತಿಯನ್ನು ನೀಡಲು. ಆ ಕಾರ್ಯಕ್ರಮದಲ್ಲಿ ಸ್ವಾಮೀಜಿ ಸಾಧನೆ ಕುರಿತು ಮಾತನಾಡಬೇಕಿತ್ತು. ಈ ಪ್ರಶಸ್ತಿ ಅವರಿಗೆ ನೀಡಲಿಕ್ಕೆ ಕಾರಣವೇನು ಎನ್ನುವುದರ ಕುರಿತು ಮಾತನಾಡಬೇಕಿತ್ತು, ಅವರಿಗೆ ಶುಭ ಕೋರಬೇಕಿತ್ತು. ಆದರೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪನವರನ್ನು ಮಂತ್ರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳ ಹೇಳಿಕೆಯಿಂದ ಹೆದರಿ ಈ ರೀತಿ ಗೌಡರ ಕುಟುಂಬಕ್ಕೆ ಹತ್ತಿರವಾಗಲು ಈ ರೀತಿ ಮಾತನಾಡಿದ್ದಾರೆ ವಿನಃ ಪಕ್ಷದ ಹೇಳಿಕೆ ಅಲ್ಲ ಎಂದರು. ಇದನ್ನೂ ಓದಿ: ಸಚಿವ ರೇವಣ್ಣರನ್ನ ಹೊಗಳಿ, ಸ್ವಪಕ್ಷೀಯರಿಗೆ ಸಚಿವೆ ಜಯಾಮಾಲಾ ಟಾಂಗ್

    ಪಕ್ಷವನ್ನು ಕಡೆಗಣಿಸಿ ತಮ್ಮ ಮಂತ್ರಿ ಪದವಿ ಉಳಿಸಿಕೊಳ್ಳಲು ಮತ್ತು ಯಾರನ್ನೋ ಓಲೈಸಿಕೊಳ್ಳಲು ಈ ಹೇಳಿಕೆ ಕೊಟ್ಟಿದ್ದಾರೆ. ಇದು ಮಹಾ ತಪ್ಪು ಎಂದು ಅಸಮಧಾನ ವ್ಯಕ್ತಪಡಿಸಿದರು. ನನಗೂ ಕೂಡ ಜಯಮಾಲಾ ಹತ್ತಿರದವರೇ ಆದರೆ ಅವರಿಗೆ ಪಕ್ಷದ ಕುರಿತು ಕಾಳಜಿ ಇಲ್ಲವೆನ್ನುವುದು ಇಲ್ಲಿ ಸಾಬೀತಾಗಿದೆ. ಕೆಪಿಸಿಸಿ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡಿ ದೂರು ನೀಡುತ್ತೇನೆ. ಈ ಹಿಂದೆ ಸಚಿವ ಮಹದೇವಪ್ಪನವರ ವಿರುದ್ಧವೂ ಕೆಪಿಸಿಸಿಗೆ ದೂರು ನೀಡಿದ್ದೆ. ಜಯಮಾಲಾ ವಿಚಾರವೂ ಹೇಳುತ್ತೇನೆ ಎಂದು ತಿಳಿಸಿದರು.

    ಈಗ ಜಯಮಾಲಾ ಹೇಳಿರುವುದು ಅವರ ವೈಯುಕ್ತಿಕ ವಿಚಾರ, ಹಾಸನ ಜಿಲ್ಲೆಯಲ್ಲಿ ಮಾಜಿ ಪ್ರಧಾನಿಯನ್ನು ಸೋಲಿಸಿದ್ದಾರೆ. ರೇವಣ್ಣ ಅವರನ್ನು ಸೋಲಿಸಿದ್ದಾರೆ, ನನ್ನನ್ನೂ ಸೋಲಿಸಿದ್ದಾರೆ. ಆದರೆ ಜಯಮಾಲಾ ರವರು ಒಂದೂ ಚುನಾವಣೆಗೆ ನಿಲ್ಲದೇ ಈ ರೀತಿ ಹೇಳಿರುವುದು ಅವರಿಗೆ ಅನುಭವದ ಕೊರತೆ ಇದೆ ಎನ್ನವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

    ಉಪಚುನಾವಣೆಗೆ ನಾನೇನು ಪ್ರತಿಕ್ರಿಯೆ ನೀಡಲ್ಲ. ಮಂಡ್ಯ ಎಲ್ಲಿಯೂ ಪ್ರಚಾರಕ್ಕೆ ಹೋಗಿರಲಿಲ್ಲ ಎಂದು ಹೇಳಿದರು. ಕಾಂಗ್ರೆಸ್‍ನ್ನು ತೆಗೆಯಲು ಯಾರಿಗೂ ಸಾಧ್ಯವಿಲ್ಲ, ನಮ್ಮ ಅಸ್ತಿತ್ವಕ್ಕಾಗಿ ನಮ್ಮ ಕೂಗು ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾನು ದೇವೇಗೌಡ ಕುಟುಂಬದ ರಾಜಕೀಯ ವಿರೋಧಿ- ಎ. ಮಂಜು ಗುಡುಗು

    ನಾನು ದೇವೇಗೌಡ ಕುಟುಂಬದ ರಾಜಕೀಯ ವಿರೋಧಿ- ಎ. ಮಂಜು ಗುಡುಗು

    – ಆ ಕುಟುಂಬಕ್ಕೆ ನನ್ನ ಬೆಂಬಲ ಇರಲ್ಲ

    ಹಾಸನ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ ಬೆನ್ನಲ್ಲೇ ಮಾಜಿ ಸಚಿವ ಎ.ಮಂಜು ಅವರು ಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹನ್ಯಾಳು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಅದನ್ನೆಲ್ಲ ಮಾತನಾಡುತ್ತಿರುವುದು ಸಹಜ. ನಾನು ದೇವೇ ಗೌಡ ಕುಟುಂಬದ ರಾಜಕೀಯ ವಿರೋಧಿ. ಹಿಂದಿನಿಂದಿಲೂ ಗೌಡರ ಕುಟುಂಬವನ್ನು ವಿರೋಧಿಸಿಕೊಂಡು ಬಂದವನು. ಈಗಲೂ ಅದನ್ನೆ ಮುಂದುವರಿಸುತ್ತೆನೆ ಅಂತ ಹೇಳಿದ್ದಾರೆ.


    ನಾನು ನನ್ನ ಕಾರ್ಯಕರ್ತರನ್ನು ಉಳಿಸಬೇಕಿದೆ. ಇದು ನನ್ನ ವೈಯಕ್ತಿಕವಲ್ಲ ಕಾರ್ಯಕರ್ತರ ಕೂಗು. ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿದವನು ನಾನು. ಪ್ರಜ್ವಲ್ ನಿಂತಕೊಂಡರೇ ನನಗೇನು. ಗೌಡರ ಕುಟುಂಬಕ್ಕೆ ಈ ಭಾರಿ ನನ್ನ ಸಪೋರ್ಟ್ ಇರುವುದಿಲ್ಲ ಅಂತ ತಿಳಿಸಿದ್ರು.

    ತಾಲೂಕಿನಲ್ಲಿ ಸುಳ್ಳು ಹೇಳಿ ರಾಜಕೀಯ ಮಾಡುತ್ತಿದ್ದರೆ ಅಂತವರನ್ನು ತಾಲೂಕು ಹಾಗೂ ಜಿಲ್ಲೆಯಿಂದಲೇ ಹೊರಗಡೆ ಕಳುಹಿಸಬೇಕಿದೆ ಅಂತ ಅರಕಲಗೂಡು ಶಾಸಕ ಎಟಿ ರಾಮುಸ್ವಾಮಿಗೆ ಟಾಂಗ್ ನೀಡಿದ್ರು. ಇಷ್ಟು ದಿನ ಗೌಡರನ್ನು ವಿರೋಧ ಮಾಡಿ ಈಗ ಹೇಗೆ ನಮ್ಮ ಕಾರ್ಯಕರ್ತರಿಗೆ ಸಪೋರ್ಟ್ ಮಾಡಿ ಅಂತ ಹೇಳುವುದು ಎಂದು ಪ್ರಶ್ನಸಿದ ಅವರು, ಇದರ ಬಗ್ಗೆ ನಮ್ಮ ಹೈಕಮಾಂಡ್ ಜೊತೆಗೆ ಮಾತನಾಡಿದ್ದೇನೆ ಅಂದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾನು ವಿಷಕಂಠ ಎಂಬ ಸಿಎಂ ಮಾತಿಗೆ ಮಾಜಿ ಸಚಿವ ಎ.ಮಂಜು ತಿರುಗೇಟು

    ನಾನು ವಿಷಕಂಠ ಎಂಬ ಸಿಎಂ ಮಾತಿಗೆ ಮಾಜಿ ಸಚಿವ ಎ.ಮಂಜು ತಿರುಗೇಟು

    ಮೈಸೂರು: ಕಾಂಗ್ರೆಸ್ ಪಕ್ಷ ಎಚ್.ಡಿ ಕುಮಾರಸ್ವಾಮಿ ಅವರಿಗೆ ವಿಷ ನೀಡಿಲ್ಲ. ಅವರಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದೇವೆ. ಎಲ್ಲಾ ರೀತಿಯ ಸ್ವತಂತ್ರವನ್ನೂ ಅವರಿಗೆ ಕೊಟ್ಟಿದ್ದೇವೆ ಅಂತ ಮಾಜಿ ಸಚಿವ ಎ ಮಂಜು ತಿರುಗೇಟು ನೀಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿಯವರಿಗೆ ಬೇಕಾದಂತಹ ಎಲ್ಲಾ ಖಾತೆಗಳನ್ನು ನೀಡಿದ್ದೇವೆ. ಹಣಕಾಸು ಖಾತೆ ಕೂಡ ಅವರ ಬಳಿಯೇ ಇದೆ. ಅದನ್ನ ಅರಿತುಕೊಂಡು ರಾಜ್ಯದ ಪರಿಸ್ಥಿತಿಯನ್ನು ಚೆನ್ನಾಗಿ ಮಾಡುವಂತಹ ಜವಾಬ್ದಾರಿ ಅವರಿದಾಗಿರಬೇಕೇ ಹೊರತು ಕಾಂಗ್ರೆಸ್ ಪಕ್ಷದಲ್ಲ ಅಂತ ಟಾಂಗ್ ನೀಡಿದ್ದಾರೆ.

    ಕುಮಾರಸ್ವಾಮಿಯವರು ಇವತ್ತು ಮಾತಾಡುವ ರೀತಿ ನೋಡಿದ್ರೆ ಬೇಸರವಾಗುತ್ತದೆ. ಕಾಂಗ್ರೆಸ್ ಪಕ್ಷದ ಮುಖಂಡರು ಅಥವಾ ಕಾರ್ಯಕರ್ತರು, ಶಾಸಕರುಗಳು ತಪ್ಪು ಮಾಡಿದ ರೀತಿಯಲ್ಲಿ ಮಾತಾಡ್ತಿರೋದು ಕಾಂಗ್ರೆಸ್ ನ ಮುಖಂಡನಾಗಿರೋ ನನಗೆ ನೋವು ತಂದಿದೆ ಅಂದ್ರು.

    ಇಂದು ಸಿಎಂ ಕುರ್ಚಿ ಪಡೆದುಕೊಂಡ ನಾನು ಅದರಿಂದ ವಿಜೃಂಭಿಸುತ್ತಿಲ್ಲ. ಅದರಿಂದ ಖುಷಿ ಪಡೋಕೆ ಆಗ್ತಾ ಇಲ್ಲ ಅನ್ನೋ ಮಾತನ್ನು ಸಿಎಂ ಅವರು ಪದೇ ಪದೇ ಹೇಳುತ್ತಿದ್ದಾರೆ. ಇದನ್ನು ಅರ್ಥ ಮಾಡಿಕೊಂಡರೆ ಕುಮಾರಸ್ವಾಮಿಯವರಿಗೆ ಕೊಟ್ಟಂತಹ ಅವಕಾಶ ಬೇರೆ ಯಾವ ಮುಖ್ಯಮಂತ್ರಿಗೂ ಸಿಕ್ಕಿಲ್ಲ. ರಾಜ್ಯದ ರೈತರ ಕಣ್ಣೀರು ಒರೆಸುವಂತಹ ಹಾಗೂ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವಂತಹ ಕೆಲಸ ಮುಖ್ಯಮಂತ್ರಿಯ ಜವಾಬ್ದಾರಿಯಾಗಬೇಕೆ ಹೊರತು ಮುಖ್ಯಮಂತ್ರಿ ಕಣ್ಣೀರು ಒರೆಸುವ ಕೆಲಸ ರೈತರ ಅಥವಾ ರಾಜ್ಯದ 6 ಕೋಟಿ ಜನರ ಅಲ್ಲ ಅಂತ ವಿಷಾದ ವ್ಯಕ್ತಪಡಿಸಿದ್ರು.

    ಎಚ್‍ಡಿಡಿ ಪ್ರೋತ್ಸಾಹ ಸರಿ ಅಲ್ಲ:
    ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂಗೆ ಪತ್ರ ಬರೆಯೋದನ್ನೆ ತಪ್ಪು ಎಂಬಂತೆ ಬಿಂಬಿಸುವುದು ಸರಿ ಇಲ್ಲ. ಈ ರೀತಿಯ ವರ್ತನೆಯನ್ನು ನೀವು ಬಿಡಬೇಕು. ಈ ರೀತಿ ವರ್ತಿಸುವುದು ಸರ್ಕಾರ ನಡೆಸುವ ಸರಿಯಾದ ವಿಧಾನ ಅಲ್ಲ. ಕಾಂಗ್ರೆಸ್ ವರ್ಚಿಸಿಗೆ ಧಕ್ಕೆ ತರುವ ರೀತಿ ಸಿಎಂ ವರ್ತಿಸಬಾರದು. ಅಲ್ಲದೇ ಮಗ ಕಣ್ಣೀರು ಹಾಕುವುದನ್ನು ತಂದೆ ದೇವೇಗೌಡರು ಪ್ರೋತ್ಸಾಹಿಸಬಾರದಿತ್ತು. ಅನ್ನಭಾಗ್ಯ ಅಕ್ಕಿ ಕಡಿತ ಮಾಡಿದ್ದನ್ನು ಪ್ರಶ್ನೆ ಮಾಡಿದ್ದರಲ್ಲಿ ತಪ್ಪೇನೂ ಇದೆ ಅಂತ ಇದೇ ವೇಳೆ ಮಾಜಿ ಸಚಿವರು ಸಿಎಂ ಅವರನ್ನು ಪ್ರಶ್ನಿಸಿದ್ದಾರೆ.

  • 10 ವರ್ಷ ಆಯ್ತು, ಗ್ರಾಮದಲ್ಲಿ ಏನೂ ಆಗಿಲ್ಲ- ಪ್ರಚಾರಕ್ಕೆ ಬಂದ ಸಚಿವರನ್ನ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    10 ವರ್ಷ ಆಯ್ತು, ಗ್ರಾಮದಲ್ಲಿ ಏನೂ ಆಗಿಲ್ಲ- ಪ್ರಚಾರಕ್ಕೆ ಬಂದ ಸಚಿವರನ್ನ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಹಾಸನ: 10 ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಮಾಡಿಲ್ಲ. ಆದರೆ ಈಗ ಮತ ಪ್ರಚಾರಕ್ಕೆ ನೀವು ಬಂದಿದ್ದೀರ ಎಂದು ಸಚಿವ ಎ.ಮಂಜು ಅವರಿಗೆ ಗ್ರಾಮಸ್ಥರು ಕ್ಲಾಸ್ ತೆಗೆದುಕೊಂಡ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.

    ಸಚಿವ ಎ.ಮಂಜು ಅರಕಲಗೂಡು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಕೂಡ ಅವರಿಗೆ ಕ್ಷೇತ್ರದ ಟಿಕೆಟ್ ಸಿಕ್ಕಿದ್ದು, ಚುನಾವಣೆ ಪ್ರಚಾರಕ್ಕಾಗಿ ಕಳೆದ ರಾತ್ರಿ ಗ್ರಾಮಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಕೃಷಿ ಜಮೀನು ನೀಡುವಲ್ಲಿ ನಮಗೆ ಕಡೆಗಣಿಸಿದ್ದೀರಿ, ಈಗ ವೋಟು ಕೇಳೋದಕ್ಕೆ ಬಂದಿದ್ದೀರ ಎಂದು ಗ್ರಾಮಸ್ಥರು ತರಾಟೆ ತೆಗೆದುಕೊಂಡರು.

    ಈ ಸಂದರ್ಭದಲ್ಲಿ ಸಮರ್ಥನೆಗೆ ಮುಂದಾದ ಸಚಿವರ ಮಾತನ್ನು ಗ್ರಾಮಸ್ಥರು ಕೇಳಲಿಲ್ಲ, ರಸ್ತೆ ಅಭಿವೃದ್ಧಿ ಮಾಡಿದ್ದೇನೆ ಅದೂ ಇದೂ ಅನ್ನುವುದಕ್ಕೆ ಮುಂದಾದ್ರು. ಆದರೆ ಗ್ರಾಮಸ್ಥರು ಮಾತ್ರ ಅವರ ಮಾತನ್ನು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಸಚಿವರೊಂದಿಗೆ ಇದ್ದ ಬೆಂಬಲಿಗರು ಸಹ ವಾದಿಸಲು ಮುಂದಾದ್ದರು. ಆದರೂ ಸಹ ಪ್ರಯೋಜನ ಆಗಲಿಲ್ಲ. ಗ್ರಾಮಸ್ಥರ ಆಕ್ರೋಶವನ್ನು ಕಂಡು ವಿಧಿಯಿಲ್ಲದೇ ಸಚಿವರು ಅಲ್ಲಿಂದ ವಾಪಸಾದ್ರು.

    ಎ. ಮಂಜು ಅರಕಲಗೂಡು ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2013ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಟಿ.ರಾಮಸ್ವಾಮಿ ವಿರುದ್ಧ ಜಯ ಸಾಧಿಸಿದ್ರು. 2008 ಮತ್ತು 1999ರ ಚುನಾವಣೆಗಳಲ್ಲಿ ಜಯ ಸಾಧಿಸಿದ್ದರು.

    https://www.youtube.com/watch?v=-0eW63YGmCo